SBI Debit Card: ಎಸ್‌ಬಿಐ ಕಾರ್ಡ್‌ ಕಳೆದುಕೊಂಡಿದ್ದೀರಾ? ಕಾರ್ಡ್ ಬ್ಲಾಕ್ ಮಾಡಲು ಹೀಗೆ ಮಾಡಿ… - Vistara News

ತಂತ್ರಜ್ಞಾನ

SBI Debit Card: ಎಸ್‌ಬಿಐ ಕಾರ್ಡ್‌ ಕಳೆದುಕೊಂಡಿದ್ದೀರಾ? ಕಾರ್ಡ್ ಬ್ಲಾಕ್ ಮಾಡಲು ಹೀಗೆ ಮಾಡಿ…

SBI Debit Card: ಎಸ್‌ಬಿಐ ಡೆಬಿಟ್ ಕಾರ್ಡ್ ಅತ್ಯಂತ ಉಪಯುಕ್ತ ಸಾಧನವಾಗಿದೆ. ಈ ಕಾರ್ಡ್‌ ಕಳೆದು ಹೋದರೆ, ನೀವು ಮಾಡಬೇಕಾದ ಮೊದಲ ಕೆಲಸ, ಅದನ್ನು ಬ್ಲಾಕ್ ಮಾಡುವುದು ಎಂಬುದು ತಿಳಿಯಿರಿ.

VISTARANEWS.COM


on

How to block SBI Debit card? Fallow these steps
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಡೆಬಿಟ್ ಕಾರ್ಡ್(Debit Card). ಇದು ಆಧುನಿಕ ಜಗತ್ತಿನ ಅಚ್ಚರಿ. ನಿಮ್ಮ ಖಾತೆಯೊಂದಿಗೆ ಕನೆಕ್ಟ್ ಆಗಿರುವ ಈ ಕಾರ್ಡ್ ಮೂಲಕ ಹಣವನ್ನು ವಿತ್‌ಡ್ರಾ ಮಾಡಿಕೊಳ್ಳಬಹುದು. ಡೆಬಿಟ್ ಕಾರ್ಡ್‌ಗಳು ಪಾವತಿ ಕಾರ್ಡ್‌ಗಳಾಗಿ (Payments) ಕಾರ್ಯನಿರ್ವಹಿಸುತ್ತವೆ, ವ್ಯಕ್ತಿಗಳು ತಮ್ಮ ಬ್ಯಾಂಕ್ ಖಾತೆಗಳಿಂದ ನೇರವಾಗಿ ಖರೀದಿಗಳನ್ನು ಮಾಡಲು ಮತ್ತು ಹಣವನ್ನು ಹಿಂಪಡೆಯಲು ಅನುವು ಮಾಡಿಕೊಡುತ್ತದೆ. ಆ ಕಾರ್ಡ್‌ಗಳ ದುರ್ಬಳಕೆಯನ್ನು ತಪ್ಪಿಸಲು ಪಿಐಎನ್ ಆಧಾರಿತ ದೃಢೀಕರಣ (PIN-based authentication) ವ್ಯವಸ್ಥೆ ಇರುತ್ತದೆ. ಆದರೆ, ಕೆಲವೊಮ್ಮೆ ನಾವು ಈ ಕಾರ್ಡ್ ಕಳೆದುಕೊಳ್ಳಬಹುದು. ಎಲ್ಲೋ ಇಟ್ಟು ಮರೆಯಬಹುದು. ಅಂಥ ಸಂದರ್ಭದಲ್ಲಿ ಕಾರ್ಡ್‌ ದುರ್ಬಳಕೆಯನ್ನು ತಪ್ಪಿಸಲು ಹಲವು ಮಾರ್ಗಗಳಿವೆ. ಕಾರ್ಡ್ ನಿಷ್ಕ್ರಿಯಗೊಳಿಸಲು ತಕ್ಷಣವೇ ಬ್ಯಾಂಕ್‌ಗೆ ಸೂಚಿಸಬೇಕಾಗುತ್ತದೆ. ಬ್ಯಾಂಕಿನ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸುವ ಮೂಲಕ ಈ ಕೆಲಸವನ್ನು ಮಾಡಬಹುದು. ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾರ್ಡ್ (SBI Debit Card) ಅನ್ನು ಕಳೆದುಕೊಂಡಿದ್ದರೆ, ನೆಟ್ ಬ್ಯಾಂಕಿಂಗ್ ಅಥವಾ ಎಸ್ಸೆಮ್ಮೆಸ್ ಸೇವೆಯನ್ನು ನಿಷ್ಕ್ರಿಯಗೊಳಿಸುವಿಕೆಯನ್ನು (SBI Card Deactivation) ಪ್ರಾರಂಭಿಸಲು ಮತ್ತು ಕಾರ್ಡ್ ಅನ್ನು ನಿರ್ಬಂಧಿಸಲು ಬಳಸಿಕೊಳ್ಳಬಹುದು.

ಎಸ್‌ಬಿಐ ಕಾರ್ಡ್ ನಿಷ್ಕ್ರಿಯಗೊಳಿಸಲು ಇರುವ ಅತ್ಯಂತ ಸುಲಭದ ಮಾರ್ಗ ಎಂದರೆ, ಎಸ್‌ಬಿಐನ 1800 11 2211 ಅಥವಾ 1800 425 3800 ಟೋಲ್ ಫ್ರೀ ನಂಬರ್‌ಗೆ ಕರೆ ಮಾಡಿ ಕಾರ್ಡ್ ಬ್ಲಾಕ್ ಮಾಡಿಸಬಹುದು. ಇದಲ್ಲದೇ ಇನ್ನು ಕೆಲವು ಮಾರ್ಗಗಳ ಮೂಲಕ ಕಾರ್ಡ್ ಬ್ಲಾಕ್ ಮಾಡಿಸಬಹುದು. ತಿಳಿದುಕೊಳ್ಳೋಣ ಬನ್ನಿ.

ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ…..

ಎಸ್‌ಬಿಐ ಅಧಿಕೃತ onlinesbi.com ವೆಬ್‌ಸೈಟ್‌ಗೆ ಭೇಟಿ ನೀಡಿ. ಮುಖಪುಟದಲ್ಲಿರುವ ಇ-ಸರ್ವೀಸ್ ಸೆಕ್ಷನ್‌ಗೆ ಹೋಗಿ, ಎಟಿಎಂ ಕಾರ್ಡ್ ಸರ್ವಿಸ್ ಆಯ್ಕೆ ಮೇಲೆ ಕ್ಲಿಕ್ ಮಾಡಿ. ಬಳಿಕ ಬ್ಲಾಕ್ ಎಟಿಎಂ ಕಾರ್ಡ್ ಆಪ್ಷನ್ ಆಯ್ಕೆ ಮಾಡಿಕೊಳ್ಳಿ. ನೀವು ನಿರ್ಬಂಧಿಸಲು ಬಯಸುವ ಎಟಿಎಂ ಕಮ್ ಡೆಬಿಟ್ ಕಾರ್ಡ್‌ಗೆ ಲಿಂಕ್ ಮಾಡಲಾದ ಖಾತೆಯನ್ನು ಆಯ್ಕೆಮಾಡಿ.

ಆಗ ನಿರ್ಬಂಧಿಸಲಾದ ಮತ್ತು ಸಕ್ರಿಯವಾಗಿರುವ ಎಲ್ಲಾ ಕಾರ್ಡ್‌ಗಳ ಪಟ್ಟಿಯನ್ನು ನೀವು ನೋಡಲು ಸಾಧ್ಯವಾಗುತ್ತದೆ. ಪಟ್ಟಿಯು ಡೆಬಿಟ್ ಕಾರ್ಡ್‌ನ ಮೊದಲ ಮತ್ತು ಕೊನೆಯ ನಾಲ್ಕು ಅಂಕಿಗಳನ್ನು ತೋರಿಸುತ್ತದೆ. ನೀವು ಬ್ಲಾಕ್ ಮಾಡಬೇಕೆನ್ನುವ ಕಾರ್ಡ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಮತ್ತು ಅದಕ್ಕೆ ಕಾರಣವನ್ನು ನಮೂದಿಸಿ, ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಅಧಿಕೃತ ಒಪ್ಪಿಗೆಯನ್ನು ನೀಡುವ ಮೊದಲು ಅಗತ್ಯವಿರುವ ಎಲ್ಲ ಮಾಹಿತಿಯನ್ನು ದೃಢಿಕರಿಸಿಕೊಳ್ಳಬೇಕಾಗುತ್ತದೆ.

ಬಳಿಕ ರಿಕ್ವೆಸ್ಟ್ ಮೋಡ್ ಆಯ್ಕೆ ಮಾಡಿಕೊಳ್ಳಬೇಕು ಮತ್ತು ಒಟಿಪಿ ನಂಬರ್‌ ಅಥವಾ ಪ್ರೊಫೈಲ್ ಪಾಸ್ವರ್ಡ್ ಬಳಸಿಕೊಳ್ಳಬೇಕು. ಈ ಎರಡರಲ್ಲಿ ಯಾವುದಾದರೂ ಒಂದನ್ನು ಬಳಸಿಕೊಂಡು, ಕನ್ಫರ್ಮ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಆಗ ಎಸ್‌ಬಿಐ ಕಾರ್ಡ್ ಬ್ಲಾಕ್ ಆದರೆ ಖಾತೆದಾರರಿಗೆ ಟಿಕೆಟ್ ನಂಬರ್ ಅನ್ನು ಎಸ್ಸೆಮ್ಮೆಸ್ ಮೂಲಕ ದೊರೆಯುತ್ತದೆ.

ಎಸ್ಸೆಮ್ಮೆಸ್ ಮೂಲಕ ಎಸ್‌ಬಿಐ ಡೆಬಿಟ್ ಕಾರ್ಡ್ ಬ್ಲಾಕ್ ಮಾಡುವುದು……..

ಎಸ್ಸೆಮ್ಮೆಸ್‌ ರೈಟಿಂಗ್ ಸ್ಪೇಸ್ ತೆರೆಯಿರಿ. BLOCK XXXX(XXXX ಜಾಗದಲ್ಲಿ ನಿಮ್ಮ ಡೆಬಿಟ್ ಕಾರ್ಡ್‌ನ ಕೊನೆಯ ನಾಲ್ಕು ಡಿಜಿಟ್) ನಮೂದಿಸಬೇಕಾಗುತ್ತದೆ ಮತ್ತು ಆ ಸಂದೇಶವನ್ನು 567676 ನಂಬರ್‌ಗೆ ಕಳುಹಿಸಿ.

ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ಬಳಸಿ ಮಾತ್ರ ಈ ಸೇವೆಯನ್ನು ಪಡೆಯಬಹುದು. ಬ್ಯಾಂಕ್ ಎಸ್ಸೆಮ್ಮೆಸ್ ಸ್ವೀಕರಿಸಿದ ನಂತರ, ನೀವು ದೃಢೀಕರಣವನ್ನು ಸ್ವೀಕರಿಸುತ್ತೀರಿ. ಎಸ್ಸೆಮ್ಮೆಸ್ ಅಧಿಸೂಚನೆಯು ನಿಮ್ಮ ಟಿಕೆಟ್ ಸಂಖ್ಯೆ, ನಿರ್ಬಂಧಿಸುವ ಸಮಯ ಮತ್ತು ನಿರ್ಬಂಧಿಸುವ ದಿನಾಂಕವನ್ನು ನಮೂದಿಸುತ್ತದೆ.

ಎಲ್ಲಕ್ಕಿಂತ ಹೆಚ್ಚು ಉಪಯುಕ್ತ ಸಲಹೆ ಎಂದರೆ, ನಿಮ್ಮ ಎಸ್‌ಬಿಐ ಡೆಬಿಟ್ ಕಾರ್ಡ್ ಅಥವಾ ಇನ್ನಾವುದೇ ಬ್ಯಾಂಕಿನ ಡೆಬಿಟ್ ಕಾರ್ಡ್ ಕಳೆದುಕೊಳ್ಳದಂತೆ ನೋಡಿಕೊಳ್ಳುವುದು. ಅಲ್ಲದೇ, ಪಿನ್‌ ನಂಬರ್ ಯಾರೊಂದಿಗೂ ಹಂಚಿಕೊಳ್ಳಬಾರದು. ಇದರಿಂದ ನಿಮ್ಮ ಖಾತೆ ಸುರಕ್ಷಿತವಾಗಿರುತ್ತದೆ.

ಈ ಸುದ್ದಿಯನ್ನೂ ಓದಿ: Cyber Crime: 700 ಕೋಟಿ ರೂ. ಸೈಬರ್ ವಂಚನೆ ಜಾಲ ಭೇದಿಸಿದ ಹೈದ್ರಾಬಾದ್ ಪೊಲೀಸ್, ಉಗ್ರರಿಗೆ ದುಡ್ಡು ರವಾನೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

Deep Fakes Report: ಲೋಕಸಭಾ ಚುನಾವಣೆ, ಇಂಡಿಯನ್ ಪ್ರೀಮಿಯರ್ ಲೀಗ್ ನಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವವರು ಹೆಚ್ಚಾಗಿ ಡೀಪ್‌ಫೇಕ್‌ಗಳಿಗೆ ಒಳಗಾಗಿದ್ದಾರೆ. ಇದರ ನೈಜ್ಯ ಅಂಕಿ ಅಂಶಗಳು ಮತ್ತಷ್ಟು ಹೆಚ್ಚಿರಬಹುದು ಎಂದು ಕಂಪ್ಯೂಟರ್ ಭದ್ರತಾ ಕಂಪೆನಿ ಮ್ಯಾಕ್‌ಅಫೀ ತಿಳಿಸಿದೆ.

VISTARANEWS.COM


on

By

deepfake
Koo

ನವದೆಹಲಿ: ಭಾರತೀಯರಲ್ಲಿ (indian’s) ಶೇ. 75ರಷ್ಟು ಮಂದಿ ಡೀಪ್‌ಫೇಕ್‌ (Deep Fakes) ಪಿಡುಗಿಗೆ ಒಳಗಾಗಿದ್ದು, ಶೇಕಡಾ 22ರಷ್ಟು ಮಂದಿಗೆ ಮಾತ್ರ ಇದು ಗಮನಕ್ಕೆ ಬಂದಿದೆ. ತಮ್ಮ ಡೀಪ್ ಫೇಕ್ ಮಾಡಿರುವ ವಿಡಿಯೋ, ಚಿತ್ರ ಅಥವಾ ರೆಕಾರ್ಡಿಂಗ್ ಅನ್ನು ಕೆಲವರು ಮಾತ್ರ ನೋಡಿ ಅದರ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ಕಂಪ್ಯೂಟರ್ ಭದ್ರತಾ ಕಂಪನಿ (Computer security company) ಮ್ಯಾಕ್‌ಅಫೀಯ (McAfee) ಸಂಶೋಧನೆಗಳು ತಿಳಿಸಿದೆ.

ಲೋಕಸಭಾ ಚುನಾವಣೆ (lok sabha election), ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಂತಹ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವವರು ಹೆಚ್ಚಾಗಿ ಡೀಪ್‌ಫೇಕ್‌ಗಳಿಗೆ ಒಳಗಾಗಿದ್ದಾರೆ. ಇವರ ನೈಜ್ಯ ಪ್ರಮಾಣ ಮತ್ತಷ್ಟು ಹೆಚ್ಚಾಗಿರಬಹುದು. ಅನೇಕ ಭಾರತೀಯರಿಗೆ ನಿಜ ಮತ್ತು ನಕಲಿ ಏನೆಂದು ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನಗಳ ಬಗ್ಗೆ ಹೆಚ್ಚಿನವರಿಗೆ ಅರಿವಿಲ್ಲ. ಹೀಗಾಗಿ ಈ ರೀತಿ ಆಗಿದೆ ಎನ್ನಲಾಗಿದೆ.

ಶೇ. 22ರಷ್ಟು ಮಾತ್ರ ಬಹಿರಂಗ

ಕೃತಕ ಬುದ್ಧಿಮತ್ತೆಯ ಪ್ರಭಾವ ಮತ್ತು ಗ್ರಾಹಕರ ದೈನಂದಿನ ಜೀವನದಲ್ಲಿ ಡೀಪ್‌ಫೇಕ್‌ಗಳ ಹೆಚ್ಚಳವನ್ನು ಕಂಡುಹಿಡಿಯಲು 2024 ರ ಆರಂಭದಲ್ಲಿ ಸಂಶೋಧನೆಯನ್ನು ನಡೆಸಲಾಯಿತು. ಈ ಸಮೀಕ್ಷೆಯ ಸಮಯದಲ್ಲಿ, ಸುಮಾರು 1ರಲ್ಲಿ 4 ಭಾರತೀಯರು ಅಂದರೆ ಸರಿಸುಮಾರು ಶೇ. 22ರಷ್ಟು ಮಂದಿ ಇತ್ತೀಚೆಗೆ ನಕಲಿ ಎಂದು ಕಂಡುಹಿಡಿದ ವಿಡಿಯೋಗಳನ್ನು ನೋಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?


ವರ್ಷದಿಂದ ಹೆಚ್ಚಾಗಿದೆ ಕಾಳಜಿ

ಒಂದು ವರ್ಷದಲ್ಲಿ 10ರಲ್ಲಿ 8 ಮಂದಿ, ಅಂದರೆ ಸರಿ ಸುಮಾರು ಶೇ. 80ರಷ್ಟು ಮಂದಿ ಇದ್ದಕ್ಕಿಂತ ಡೀಪ್‌ಫೇಕ್‌ಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

ಅರ್ಧಕ್ಕಿಂತ ಹೆಚ್ಚು ಜನರಲ್ಲಿ ಶೇ. 64ರಷ್ಟು ಮಂದಿಗೆ ಕೃತಕ ಬುದ್ಧಿಮತ್ತೆಯ ಆನ್‌ಲೈನ್ ಸ್ಕ್ಯಾಮ್‌ಗಳನ್ನು ಗುರುತಿಸಲು ಕಷ್ಟಕರವಾಗಿದೆ ಎಂದು ಹೇಳುತ್ತಾರೆ. ಆದರೆ ಸುಮಾರು ಶೇ. 30ರಷ್ಟು ಮಂದಿ ಕೃತಕ ಬುದ್ಧಿಮತ್ತೆಯೊಂದಿಗೆ ರಚಿಸಲಾದ ಧ್ವನಿ ಮೇಲ್ ಅಥವಾ ಧ್ವನಿ ಟಿಪ್ಪಣಿಯನ್ನು ಹಂಚಿಕೊಂಡರೆ ಮಾತ್ರ ನಕಲಿ ಎಂದು ಗುರುತಿಸಬಹುದು ಎಂದು ಹೇಳಿದ್ದಾರೆ.


ಶೇ. 75ರಷ್ಟು ಮಂದಿಗೆ ಗೊತ್ತಾಗಿದೆ

ಮ್ಯಾಕ್‌ಅಫೀಯ ಪ್ರಕಾರ ಕಳೆದ 12 ತಿಂಗಳುಗಳಲ್ಲಿ ಶೇ. 75ರಷ್ಟು ಮಂದಿ ತಾವು ಡೀಪ್‌ಫೇಕ್ ವಿಷಯವನ್ನು ನೋಡಿದ್ದೇವೆ ಎಂದು ಹೇಳುತ್ತಾರೆ. ಶೇ. 38ರಷ್ಟು ಮಂದಿ ಡೀಪ್‌ಫೇಕ್ ಹಗರಣವನ್ನು ಎದುರಿಸಿದ್ದಾರೆ.

ಶೇ. 57ರಷ್ಟು ಸೆಲೆಬ್ರಿಟಿಗಳು

ಡೀಪ್‌ಫೇಕ್ ವಂಚನೆಗೆ ಒಳಗಾದವರಲ್ಲಿ 57 ಪ್ರತಿಶತದಷ್ಟು ಸೆಲೆಬ್ರಿಟಿಗಳಾಗಿದ್ದಾರೆ. ವಿಡಿಯೋ ಚಿತ್ರ ಅಥವಾ ಆಡಿಯೋವನ್ನು ನೋಡಿ ಅದು ನಿಜವೆಂದು ಭಾವಿಸಿ ಶೇ. 31 ರಷ್ಟು ಮಂದಿ ಹಣವನ್ನು ಕಳೆದುಕೊಂಡಿದ್ದಾರೆ. ಶೇ. 40ರಷ್ಟು ಮಂದಿ ಜನರು ತಮ್ಮ ಧ್ವನಿಯನ್ನು ಕಾಪಿ ಮಾಡಲಾಗಿದೆ. ವೈಯಕ್ತಿಕ ಮಾಹಿತಿ ಅಥವಾ ಹಣದ ಲೆಕ್ಕವನ್ನು ಬಹಿರಂಗಪಡಿಸಲು ತಮಗೆ ತಿಳಿದಿರುವ ಯಾರನ್ನಾದರೂ ದಾರಿತಪ್ಪಿಸಲು ಬಳಸುತ್ತಾರೆ ಎಂದು ಕಂಡುಹಿಡಿಯಲಾಗಿದೆ. ಶೇ. 39ರಷ್ಟು ಜನರು ಕರೆ, ಧ್ವನಿಮೇಲ್ ಅಥವಾ ಧ್ವನಿ ಟಿಪ್ಪಣಿಯನ್ನು ಸ್ವೀಕರಿಸಿದ್ದಾರೆಂದು ವರದಿ ಮಾಡಿದ್ದಾರೆ.

ಡೀಪ್‌ಫೇಕ್‌ ಅಪಾಯ

ಡೀಪ್‌ಫೇಕ್‌ ನಿಂದಾಗುವ ಅಪಾಯಗಳ ಬಗ್ಗೆ ಕೇಳಿದಾಗ ಶೇ. 55ರಷ್ಟು ಮಂದಿ ಸೈಬರ್‌ ವಂಚನೆಗೆ ಒಳಗಾಗುತ್ತಾರೆ ಎಂದು ಹೇಳಿದರು. ಶೇ. 52ರಷ್ಟು ಮಂದಿ ನಕಲಿ ಅಶ್ಲೀಲ ವಿಷಯವನ್ನು ರಚಿಸುತ್ತಿರುವುದಾಗಿ ಹೇಳಿದರು. ಶೇ. 37 ರಷ್ಟು ಮಂದಿ ಮಾಧ್ಯಮದ ಮೇಲಿನ ಸಾರ್ವಜನಿಕ ನಂಬಿಕೆಯನ್ನು ದುರ್ಬಲಗೊಳಿಸಿರುವುದಾಗಿ ತಿಳಿಸಿದ್ದಾರೆ. ಶೇ.31ರಷ್ಟು ಮಂದಿ ಚುನಾವಣೆಯ ಮೇಲೆ ಪ್ರಭಾವ ಬೀರುವುದಾಗಿ ಹೇಳಿದ್ದು, ಶೇ.27ರಷ್ಟು ಮಂದಿ ಐತಿಹಾಸಿಕ ಸತ್ಯಗಳನ್ನು ತಿರುಚುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ದೇಶ

WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

Whatsapp: ಎನ್‌ಕ್ರಿಪ್ಶನ್‌ ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತ ತೊರೆಯುತ್ತೇವೆ ಎಂಬುದಾಗಿ ದೆಹಲಿ ಹೈಕೋರ್ಟ್‌ಗೆ ವಾಟ್ಸ್‌ಆ್ಯಪ್‌ ಪರ ವಕೀಲರು ತಿಳಿಸಿದ್ದಾರೆ. ಜನರು ತಾವು ಕಳುಹಿಸುವ ಮೆಸೇಜ್‌ಗೆ ಸುರಕ್ಷತೆ ಇದೆ, ಬೇರೆ ಯಾರೂ ಓದುವುದಿಲ್ಲ ಎಂಬ ಕಾರಣಕ್ಕಾಗಿ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಅದಕ್ಕೆ ಧಕ್ಕೆಯಾದರೆ ಭಾರತದಲ್ಲಿ ಇರಲ್ಲ ಎಂದು ವಾಟ್ಸ್‌ಆ್ಯಪ್‌ ತಿಳಿಸಿದೆ.

VISTARANEWS.COM


on

Whatsapp
Koo

ನವದೆಹಲಿ: ಭಾರತದಲ್ಲಿ ಕೋಟ್ಯಂತರ ಜನ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಟೆಲಿಗ್ರಾಮ್ ಸೇರಿ ಹಲವು ಮೆಸೇಜಿಂಗ್‌ ಆ್ಯಪ್‌ಗಳು ಇದ್ದರೂ ವಾಟ್ಸ್‌ಆ್ಯಪ್‌‌ (WhatsApp) ಹೆಚ್ಚು ಜನಪ್ರಿಯವಾಗಿದೆ. ಮೆಸೇಜ್‌, ಫೋಟೊ, ವಿಡಿಯೊಗಳನ್ನು ಕಳುಹಿಸುವ ಜತೆಗೆ ವಾಟ್ಸ್‌ಆ್ಯಪ್‌ ಸ್ಟೇಟಸ್‌ ಕೂಡ ಜನರ ಮನಸೆಳೆದಿದೆ. ಆದರೆ, ಇಷ್ಟೊಂದು ಖ್ಯಾತಿ, ಜನಪ್ರಿಯತೆ ಗಳಿಸಿರುವ ವಾಟ್ಸ್‌ಆ್ಯಪ್‌, “ನಾವು ಭಾರತದಿಂದ ಹೊರಹೋಗುತ್ತೇವೆ” ಎಂದು ದೆಹಲಿ ಹೈಕೋರ್ಟ್‌ಗೆ (Delhi High Court) ತಿಳಿಸಿದೆ. ಇದು, ಕೇಂದ್ರ ಸರ್ಕಾರ ಹಾಗೂ ವಾಟ್ಸ್‌ಆ್ಯಪ್‌ ನಡುವಿನ ಬಿಕ್ಕಟ್ಟಿನಿಂದಾಗಿ ನೀಡಿದ ಎಚ್ಚರಿಕೆಯಾಗಿದೆ.

“ಮೆಟಾ ಒಡೆತನದ ವಾಟ್ಸ್‌ಆ್ಯಪ್‌ನ ಎನ್‌ಕ್ರಿಪ್ಶನ್‌ (ಎಂಡ್-ಟು-ಎಂಡ್‌ ಎನ್‌ಕ್ರಿಪ್ಶನ್‌- ಯಾವುದೇ ವ್ಯಕ್ತಿ ಇನ್ನೊಬ್ಬನಿಗೆ ಕಳುಹಿಸುವ ಮೆಸೇಜ್‌ಅನ್ನು ಬೇರೆಯವರು ನೋಡಲು ಆಗದಿರುವ ಸುರಕ್ಷತಾ ವ್ಯವಸ್ಥೆ) ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತದಿಂದಲೇ ಹೊರಹೋಗುತ್ತೇವೆ. ಜನರು ತಾವು ಕಳುಹಿಸಿದ ಮೆಸೇಜ್‌ಅನ್ನು ಬೇರೆಯವರು ಓದುವುದಿಲ್ಲ, ಖಾಸಗಿತನಕ್ಕೆ ಧಕ್ಕೆಯಾಗುವುದಿಲ್ಲ ಎಂಬ ಕಾರಣಕ್ಕಾಗಿಯೇ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಹಾಗಾಗಿ, ಎನ್‌ಕ್ರಿಪ್ಶನ್‌ಗೆ ಧಕ್ಕೆಯಾದರೆ ನಾವು ಭಾರತದಲ್ಲಿ ಮುಂದುವರಿಯುವುದಿಲ್ಲ” ಎಂಬುದಾಗಿ ವಾಟ್ಸ್‌ಆ್ಯಪ್‌ ಪರ ವಕೀಲರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಸಾಧಿಸುವ, ಅದರಲ್ಲೂ ವಾಟ್ಸ್‌ಆ್ಯಪ್‌ ಚಾಟ್‌ಗಳ ಮೇಲೆ ನಿಗಾ ಇರಿಸುವ ಕುರಿತು ಕೇಂದ್ರ ಸರ್ಕಾರ 2021ರಲ್ಲಿ ಜಾರಿಗೆ ತಂದ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ವಾಟ್ಸ್‌ಆ್ಯಪ್‌ ದೆಹಲಿ ಹೈಕೋರ್ಟ್‌ ಮೊರೆ ಹೋಗಿದೆ. ಅರ್ಜಿಯ ವಿಚಾರಣೆ ವೇಳೆ ವಾಟ್ಸ್‌ಆ್ಯಪ್‌ ಪರ ವಕೀಲ ತೇಜಸ್‌ ಕಾರಿಯಾ ವಾದ ಮಂಡಿಸಿದರು.

“ಸಾಮಾಜಿಕ ಜಾಲತಾಣವಾಗಿ ನಾವು ಹೇಳುತ್ತಿದ್ದೇವೆ. ಎನ್‌ಕ್ರಿಪ್ಶನ್‌ ಬೇಡ ಎಂದು ಹೇಳಿದರೆ, ಭಾರತದಲ್ಲಿ ವಾಟ್ಸ್‌ಆ್ಯಪ್‌ ಇರುವುದಿಲ್ಲ. ನಾವು ಒಂದು ಪ್ರಕ್ರಿಯೆಯನ್ನು ಪಾಲಿಸಬೇಕಾಗುತ್ತದೆ. ಯಾವ ಸಂದೇಶವನ್ನು ಬಹಿರಂಗಪಡಿಸಬೇಕು ಎಂದು ಹೇಳುತ್ತಾರೋ ಗೊತ್ತಾಗುವುದಿಲ್ಲ. ಇದಕ್ಕಾಗಿ ನಾವು ವರ್ಷಗಳವರೆಗೆ ಕೋಟ್ಯಂತರ ಮೆಸೇಜ್‌ಗಳನ್ನು ಸ್ಟೋರ್‌ ಮಾಡಿ ಇಡಬೇಕಾಗುತ್ತದೆ” ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ಹಾಗೂ ನ್ಯಾ.ಮನ್‌ಮೀತ್‌ ಪ್ರೀತಂ ಸಿಂಗ್‌ ಅರೋರಾ ಅವರಿದ್ದ ನ್ಯಾಯಪೀಠಕ್ಕೆ ತೇಜಸ್‌ ಕಾರಿಯಾ ತಿಳಿಸಿದರು.

ಮಾಹಿತಿ ತಂತ್ರಜ್ಞಾನ ನಿಯಮಗಳನ್ನು (2021) ಕೇಂದ್ರ ಸರ್ಕಾರವು 2021ರ ಫೆಬ್ರವರಿ 25ರಂದು ಜಾರಿಗೆ ತಂದಿದೆ. ಎಕ್ಸ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಹಾಗೂ ವಾಟ್ಸ್‌ಆ್ಯಪ್‌ನಂತಹ ಸಾಮಾಜಿಕ ಜಾಲತಾಣಗಳು ಹೊಸ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶಿಸಲಾಗಿದೆ. ಇದೇ ಕಾರಣಕ್ಕಾಗಿ, ಸಾಮಾಜಿಕ ಜಾಲತಾಣಗಳು ಪ್ರತಿ ತಿಂಗಳು, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಖಾತೆಗಳನ್ನು ರದ್ದುಗೊಳಿಸುತ್ತಿದೆ.

ಇದನ್ನೂ ಓದಿ: WhatsApp Update: ವಾಟ್ಸ್ ಆಪ್ ನಲ್ಲಿ ಮತ್ತೊಂದು ಹೊಸ ಫೀಚರ್! ಫೋಟೊ, ವಿಡಿಯೊ ಶೇರಿಂಗ್ ಇನ್ನೂ ಸುಲಭ

Continue Reading

ಆಟೋಮೊಬೈಲ್

Xiaomi EV: ತಿಂಗಳಲ್ಲಿ 75 ಸಾವಿರ ಆರ್ಡರ್ ಸ್ವೀಕರಿಸಿದ ಕ್ಸಿಯೋಮಿ ಎಸ್‌ಯು 7 ಎಲೆಕ್ಟ್ರಿಕ್‌ ಕಾರು; ಟೆಸ್ಲಾಗಿಂತ ಅಗ್ಗ!

Xiaomi EV: ಟೆಕ್ ದೈತ್ಯ ಕಂಪೆನಿ ಚೀನಾದ ಕ್ಸಿಯೋಮಿ (Xiaomi) ಆಟೋ ಉದ್ಯಮವನ್ನು ಪ್ರವೇಶಿಸಿದ್ದು, ಕೇವಲ ಒಂದು ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಆರ್ಡರ್ ಸ್ವೀಕರಿಸಿದೆ. ಕ್ಸಿಯೋಮಿ ಇವಿ ಎಸ್ ಯು7 ವರ್ಷದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಾಹನ ಮಾರಾಟ ಗುರಿಯನ್ನು ಹೊಂದಿದೆ.

VISTARANEWS.COM


on

By

Xiaomi EV
Koo

ಸ್ಮಾರ್ಟ್‌ಫೋನ್ (smart phone) ತಯಾರಿಕ ಟೆಕ್ ದೈತ್ಯ ಕಂಪನಿ ಚೀನಾದ (china) ಕ್ಸಿಯೋಮಿ (Xiaomi) ಇದೀಗ ಆಟೋ (auto) ಉದ್ಯಮವನ್ನು ಪ್ರವೇಶಿಸಲು ಸಜ್ಜಾಗಿದ್ದು, ಕ್ಸಿಯೋಮಿ ಈ ತಿಂಗಳಲ್ಲಿ ತನ್ನ ಹೊಸ ಎಸ್ ಯು 7 (Xiaomi EV) ಎಲೆಕ್ಟ್ರಿಕ್ ಸೆಡಾನ್‌ಗಾಗಿ 75,723 ಆರ್ಡರ್‌ಗಳನ್ನು ಪಡೆದುಕೊಂಡಿದೆ ಮತ್ತು ಜೂನ್ ವೇಳೆಗೆ 10,000 ಯೂನಿಟ್‌ಗಳನ್ನು ತಲುಪಿಸಲು ಯೋಜನೆ ರೂಪಿಸಿದೆ ಎಂದು ಕ್ಸಿಯೋಮಿ ಸಂಸ್ಥಾಪಕ ಲೀ ಜುನ್ ತಿಳಿಸಿದ್ದಾರೆ.

ಬೀಜಿಂಗ್ (Beijing) ಆಟೋ ಶೋನ ಮೊದಲ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿತರಣೆ ಗುರಿಯು ಎಲೆಕ್ಟ್ರಿಕ್ ವೆಹಿಕಲ್ (EV) ಸ್ಟಾರ್ಟ್‌ಅಪ್‌ಗಾಗಿ ಹೊಸ ದಾಖಲೆಯನ್ನು ಸ್ಥಾಪಿಸುತ್ತದೆ ಎಂದು ಹೇಳಿದರು.

ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಆರ್ಡರ್ ಸ್ವೀಕರಿಸಲು ಪ್ರಾರಂಭಿಸಲಾಗಿದ್ದು, ಮರುಪಾವತಿಸಲಾಗದ ಠೇವಣಿಗಳೊಂದಿಗೆ 75,೦೦೦ಕ್ಕೂ ಹೆಚ್ಚು SU7 ನ ಆರ್ಡರ್‌ಗಳನ್ನು ಸ್ವೀಕರಿಸಲಾಗಿದೆ. ಕೇವಲ ಒಂದು ತಿಂಗಳಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಆರ್ಡರ್ ಸಿಕ್ಕಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?


ವರ್ಷದಲ್ಲಿ 1 ಲಕ್ಷ ಮಾರಾಟ ಗುರಿ

ಕ್ಸಿಯೋಮಿ ಈ ವರ್ಷ ಎಸ್ ಯು7ಗಾಗಿ 1,00,000ಕ್ಕೂ ಹೆಚ್ಚು ವಿತರಣೆ ಗುರಿಯನ್ನು ಹೊಂದಿದೆ. ಮುಂದಿನ ಮೂರು ವರ್ಷಗಳವರೆಗೆ ಚೀನೀ ಮಾರುಕಟ್ಟೆಯ ಮೇಲೆ ಸ್ಥಿರವಾದ ಬೇಡಿಕೆಯನ್ನು ಉಳಿಸಿಕೊಳ್ಳಲು ಕಂಪನಿ ಉದ್ದೇಶಿಸಿದೆ ಎಂದು ಲೀ ತಿಳಿಸಿದರು.

ಮೇ ಅಂತ್ಯಕ್ಕೆ ಪ್ರೊ ಮಾದರಿ ಪರಿಚಯ

ಬೇಡಿಕೆಯನ್ನು ಪೂರೈಸಲು ಕ್ಸಿಯಾವೋಮಿ SU7ನ ಪ್ರಮಾಣಿತ ಮತ್ತು ಮ್ಯಾಕ್ಸ್ ಆವೃತ್ತಿಗಳ ವಿತರಣೆಯನ್ನು ನಿಗದಿತ ಸಮಯಕ್ಕಿಂತ ಹನ್ನೆರಡು ದಿನಗಳ ಮುಂಚಿತವಾಗಿ ಪೂರ್ಣಗೊಳಿಸಿದೆ. ಮೇ ಅಂತ್ಯದ ವೇಳೆಗೆ ಪ್ರೊ ಮಾದರಿಗಳನ್ನು ಪರಿಚಯಿಸಲು ಕಂಪೆನಿಯು ಯೋಜನೆ ಹಾಕಿಕೊಂಡಿದೆ.

ಬೆಲೆ ಕಡಿತ, ಸಬ್ಸಿಡಿ ಘೋಷಣೆ

ಟೆಸ್ಲಾದ ಮಾಡೆಲ್ 3 ಗೆ ಪೈಪೋಟಿ ನೀಡುವ SU7ನ ಚೀನಾದ ಬೃಹತ್ ವಾಹನ ಮಾರುಕಟ್ಟೆಯಲ್ಲಿ EV ಬೆಲೆಗೆ ಪೈಪೋಟಿ ನೀಡಲಿದೆ. Xiaomi ಮಾರುಕಟ್ಟೆ ಪ್ರವೇಶಕ್ಕೆ ಮುಂಚಿತವಾಗಿಯೇ ವಾಹನ ತಯಾರಕರು ಬೆಲೆ ಕಡಿತ ಮತ್ತು ಸಬ್ಸಿಡಿಗಳನ್ನು ಘೋಷಿಸಿದ್ದಾರೆ.


Xiaomiಯ ತಯಾರಿಕೆಯಲ್ಲಿ 6,000 ಆಟೋ ತಂಡವು ಕಾರ್ಯ ನಿರ್ವಹಿಸುತ್ತಿದ್ದು, ಇದು ಸಾಕಾಗುವುದಿಲ್ಲ. ಕಂಪೆನಿಯ ಶೀಘ್ರದಲ್ಲೇ ಹೊಸ ಪ್ರತಿಭೆಗಳನ್ನು ತನ್ನೊಂದಿಗೆ ಸೇರಿಸಿಕೊಳ್ಳಲಿದೆ. ಆಟೋಮೋಟಿವ್ ಕ್ಷೇತ್ರದಲ್ಲಿ ಆಸಕ್ತರಿರುವವರು ಕಂಪೆನಿ ಸೇರಲು ಈ ಸಂದರ್ಭದಲ್ಲಿ ಜಾಗತಿಕ ಪ್ರತಿಭೆಗಳಿಗೆ ಕರೆ ನೀಡಿದರು.

ಟೆಸ್ಲಾಗಿಂತ ಅಗ್ಗ

ಎಸ್ ಯು7 ಅನ್ನು ಸ್ಪೀಡ್ ಅಲ್ಟ್ರಾ 7 ಎಂದೂ ಕರೆಯುತ್ತಾರೆ. ಇದು ಸ್ಪರ್ಧಾತ್ಮಕ ಚೈನೀಸ್ ಇವಿ ಮಾರುಕಟ್ಟೆಯನ್ನು 30,000 ಡಾಲರ್ ಗಿಂತ ಕಡಿಮೆ ಬೆಲೆಯ ಮೂಲ ಮಾದರಿಯೊಂದಿಗೆ ಪ್ರವೇಶಿಸಲಿದೆ. ಇದು ಚೀನಾದಲ್ಲಿ ಟೆಸ್ಲಾ ಮಾದರಿ 3ಕ್ಕಿಂತ ಅಗ್ಗವಾಗಿ ಕೈಗೆಟುಕುವ ದರದಲ್ಲಿ ಲಭ್ಯವಾಗಲಿದೆ.


5,000 ಉತ್ಪಾದನೆ

Xiaomi ಈಗಾಗಲೇ 5,000 SU7 ವಾಹನಗಳನ್ನು ಉತ್ಪಾದಿಸಿದೆ. ಇದನ್ನು “ಸ್ಥಾಪಕರ ಆವೃತ್ತಿ” ಎಂದು ಕರೆಯಲಾಗುತ್ತದೆ. ವಿಶೇಷ ಆವೃತ್ತಿ, EV ಯ ಸೀಮಿತ ಉತ್ಪಾದನಾ ಆವೃತ್ತಿಯು ಆರಂಭಿಕ ಖರೀದಿದಾರರಿಗೆ ಹೆಚ್ಚುವರಿ ಬಿಡಿಭಾಗಗಳೊಂದಿಗೆ ಬರಲಿದೆ.

SU7 ವಾಹನಗಳ ಆರಂಭಿಕ ಬ್ಯಾಚ್‌ನ ವಿತರಣೆಗಳು ಶೀಘ್ರದಲ್ಲೇ 28 ಚೀನೀ ನಗರಗಳಲ್ಲಿ ಪ್ರಾರಂಭವಾಗಲಿದೆ ಎಂದು ಲೀ ಜುನ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದರು.

Xiaomi SU7 ಆಟೋ ವ್ಯವಹಾರದಲ್ಲಿ 10 ಶತಕೋಟಿ ಡಾಲರ್ ಹೂಡಿಕೆ ಮಾಡಲಾಗಿದೆ. ಪ್ರಾರಂಭದಲ್ಲಿ ಕಂಪೆನಿ ಸಲ್ಪ ನಷ್ಟ ಅನುಭವಿಸಬೇಕಾಗುತ್ತದೆ. ಎಂದು ಕೆಲವು ವಿಶ್ಲೇಷಕರು ಹೇಳಿದ್ದಾರೆ. Xiaomi ಗಮನಾರ್ಹ ಪ್ರಮಾಣದ ಹಣವನ್ನು ಕಳೆದುಕೊಳ್ಳುತ್ತಾರೆ. ಯೋಜಿತ ಮಾರಾಟದ ಪರಿಮಾಣದ ಆಧಾರದ ಮೇಲೆ 4.1 ಶತಕೋಟಿ ಯುವಾನ್ ಅಥವಾ ಸುಮಾರು 566.82 ಮಿಲಿಯನ್ ಡಾಲರ್ ನಷ್ಟವಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

Continue Reading

ದೇಶ

Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

Samsung: ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ್ಯ ಹೆಚ್ಚಿಸಲು ವಿನ್ಯಾಸ ಮಾಡಲಾದ ರಾಷ್ಟ್ರೀಯ ಕೌಶಲ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಷನ್ ಕ್ಯಾಂಪಸ್ ನ ಎರಡನೇ ಆವೃತ್ತಿಯನ್ನು ಸ್ಯಾಮ್‌ಸಂಗ್ ಇಂಡಿಯಾ ಪ್ರಾರಂಭಿಸಿದೆ.

VISTARANEWS.COM


on

Samsung India launched the 2nd edition of Samsung Innovation Campus
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆದ ಸ್ಯಾಮ್‌ಸಂಗ್ (Samsung) ಎಐ, ಐಒಟಿ, ಬಿಗ್ ಡೇಟಾ, ಮತ್ತು ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ ಮುಂತಾದ ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ ಹೆಚ್ಚಿಸಲು ವಿನ್ಯಾಸ ಮಾಡಲಾದ ತನ್ನ ರಾಷ್ಟ್ರೀಯ ಕೌಶಲ್ಯ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಎರಡನೇ ಆವೃತ್ತಿಯನ್ನು ಪ್ರಾರಂಭಿಸಿದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ಕಾರ್ಯಕ್ರಮವು 18-25 ವರ್ಷ ವಯಸ್ಸಿನ ಯುವಜನತೆಗೆ ಭವಿಷ್ಯದ ತಂತ್ರಜ್ಞಾನಗಳ ಕೌಶಲ ಒದಗಿಸುವ ಮತ್ತು ಆ ಮೂಲಕ ಅವರಿಗೆ ಉದ್ಯೋಗಾವಕಾಶ ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಯುವಜನತೆಗೆ ಸರಿಯಾದ ಅವಕಾಶಗಳನ್ನು ಸೃಷ್ಟಿ ಮಾಡಲು ರೂಪಿಸಲಾಗಿರುವ ಭಾರತ ಸರ್ಕಾರದ ಸ್ಕಿಲ್ ಇಂಡಿಯಾ ಮತ್ತು ಡಿಜಿಟಲ್ ಇಂಡಿಯಾದಂತಹ ಉಪಕ್ರಮಗಳನ್ನು ಬೆಂಬಲಿಸಲು ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Sachin Tendulkar Birthday: ಎಐ ತಂತ್ರಜ್ಞಾನದ ಮೂಲಕ ತೆಂಡೂಲ್ಕರ್​ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಐಸಿಸಿ

ಭಾರತದಾದ್ಯಂತ ಇರುವ 3,500 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ತಿಳುವಳಿಕೆ ಒಪ್ಪಂದಕ್ಕೆ ಈ ವಾರದ ಆರಂಭದಲ್ಲಿ ಸ್ಯಾಮ್‌ಸಂಗ್ ಮತ್ತು ಎಲೆಕ್ಟ್ರಾನಿಕ್ಸ್ ಸೆಕ್ಟರ್ ಸ್ಕಿಲ್ಸ್ ಕೌನ್ಸಿಲ್ ಆಫ್ ಇಂಡಿಯಾ (ಇಎಸ್‌ಎಸ್‌ಸಿಐ) ನಡುವೆ ಸಹಿ ಮಾಡಲಾಗಿದೆ.

ಈ ವರ್ಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ ಒದಗಿಸುವುದರ ಜತೆಗೆ ಇನ್ನೂ ಹೆಚ್ಚಿನ ಆಸಕ್ತಿಕರ ಅಂಶಗಳು ಸೇರ್ಪಡೆಗೊಂಡಿವೆ. ಪ್ರತಿ ಕ್ಷೇತ್ರದಲ್ಲಿ ರಾಷ್ಟ್ರೀಯ ಟಾಪರ್‌ ಸ್ಥಾನ ಪಡೆಯುವವರು ದೆಹಲಿ/ಎನ್‌ಸಿಆರ್‌ನಲ್ಲಿರುವ ಸ್ಯಾಮ್‌ಸಂಗ್ ಘಟಕಗಳಿಗೆ ಭೇಟಿ ನೀಡುವ ಅವಕಾಶ ಪಡೆಯುತ್ತಾರೆ. ಜತೆಗೆ ರೂ. 1 ಲಕ್ಷದ ನಗದು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಈ ಘಟಕಗಳಿಗೆ ಭೇಟಿ ನೀಡುವ ವಿದ್ಯಾರ್ಥಿಗಳು ಸ್ಯಾಮ್‌ಸಂಗ್‌ನ ನಾಯಕತ್ವದ ತಂಡಗಳೊಂದಿಗೆ ಸಂವಹನ ನಡೆಸುವ ಮತ್ತು ಅವರಿಂದ ಮಾರ್ಗದರ್ಶನ ಪಡೆಯುವ ಅವಕಾಶ ಹೊಂದಲಿದ್ದಾರೆ. ರಾಷ್ಟ್ರ ಮಟ್ಟದ ಕೋರ್ಸ್ ಟಾಪರ್‌ಗಳು ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್ ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್‌ವಾಚ್‌ಗಳಂತಹ ಅತ್ಯಾಕರ್ಷಕ ಸ್ಯಾಮ್‌ಸಂಗ್ ಉತ್ಪನ್ನಗಳನ್ನು ಸಹ ಪಡೆಯಲಿದ್ದಾರೆ.

ಈ ಕುರಿತು ಮಾತನಾಡಿದ ಸ್ಯಾಮ್‌ಸಂಗ್ ನೈಋತ್ಯ ಏಷ್ಯಾದ ಅಧ್ಯಕ್ಷ ಮತ್ತು ಸಿಇಓ ಜೆಬಿ ಪಾರ್ಕ್, ಸ್ಯಾಮ್‌ಸಂಗ್ ಭಾರತದಲ್ಲಿ ಕಳೆದ 28 ವರ್ಷಗಳಿಂದ ತನ್ನ ಅಸ್ತಿತ್ವ ಹೊಂದಿದ್ದು, ಈ ಎಲ್ಲಾ ವರ್ಷಗಳಲ್ಲಿ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಿದೆ. ನಮ್ಮ ದೃಷ್ಟಿಕೋನವು ಯುವಜನರಿಗೆ ಕೌಶಲ್ಯ ಒದಗಿಸುವ ಮತ್ತು ಅವರಿಗೆ ವೃತ್ತಿಪರ ಬೆಳವಣಿಗೆಯ ಅವಕಾಶಗಳನ್ನು ಒದಗಿಸಿ ಅವರನ್ನು ಸಬಲೀಕರಣಗೊಳಿಸುವ ಭಾರತ ಸರ್ಕಾರದ ಉದ್ದೇಶಗಳೊಂದಿಗೆ ಸರಿಯಾಗಿ ಹೊಂದಿಕೆಯಾಗುತ್ತದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಮೂಲಕ, ನಾವು ಯುವಜನತೆಯ ಕೌಶಲ್ಯವನ್ನು ವೃದ್ಧಿಸುವ ಕೌಶಲ್ಯ ಆಧಾರಿತ ಕಲಿಕೆಯ ವೇದಿಕೆಯನ್ನು ನಿರ್ಮಿಸುತ್ತಿದ್ದೇವೆ. ಅದರಿಂದ ಯುವಕರು ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ ಮತ್ತು ಅರ್ಥಪೂರ್ಣ ಬದಲಾವಣೆ ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 2nd PUC Exam: ಏ.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಪ್ರವೇಶ ಪತ್ರ ಬಿಡುಗಡೆ

ಇಎಸ್‌ಎಸ್‌ಸಿಐ ಸಂಸ್ಥೆಯು ಕೌಶಲಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಉದ್ಯಮ ಸಂಘಗಳಿಂದ ಉತ್ತೇಜಿಸಲ್ಪಟ್ಟ ರಾಷ್ಟ್ರೀಯ ಮಟ್ಟದ ಕೌಶಲ ಒದಗಿಸುವ ಸಂಸ್ಥೆಯಾಗಿದೆ ಮತ್ತು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ಅಡಿಯಲ್ಲಿ ಸೆಕ್ಟರ್ ಸ್ಕಿಲ್ ಕೌನ್ಸಿಲ್ (ವಲಯ ಕೌಶಲ್ಯ ಮಂಡಳಿ) ಆಗಿ ಕಾರ್ಯನಿರ್ವಹಿಸುತ್ತದೆ. ಇದು ತನ್ನ ರಾಷ್ಟ್ರವ್ಯಾಪಿ ಇರುವ ಅನುಮೋದಿತ ತರಬೇತಿ ಮತ್ತು ಶಿಕ್ಷಣ ಪಾಲುದಾರರ ನೆಟ್‌ವರ್ಕ್ ಮೂಲಕ ಸ್ಥಳೀಯ ಮಟ್ಟದಲ್ಲಿ ತರಬೇತಿಯನ್ನು ನೀಡುತ್ತದೆ. ಇಎಸ್‌ಎಸ್‌ಸಿಐ ಸಂಸ್ಥೆಯು ಭಾರತದ ಸಣ್ಣ ಪಟ್ಟಣಗಳಲ್ಲಿ ಎಲ್ಲೆಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನ ಶಿಕ್ಷಣದ ಲಭ್ಯತೆ ಇಲ್ಲವೋ ಅಲ್ಲೆಲ್ಲಾ ಯುವಜನತೆಗೆ ಕೋರ್ಸ್‌ಗಳನ್ನು ಒದಗಿಸುವ ಅವಕಾಶಗಳನ್ನು ಕೂಡ ಎದುರು ನೋಡುತ್ತದೆ.

ಈ ಕುರಿತು ಇಎಸ್‌ಎಸ್‌ಸಿಐ ಚೀಫ್ ಆಫರೇಟಿಂಗ್ ಆಫೀಸರ್ (Officiating CEO) ಡಾ. ಅಭಿಲಾಷಾ ಗೌರ್ ಮಾತನಾಡಿ, ದೇಶದಲ್ಲಿ ಕೌಶಲ ಒದಗಿಸುವ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಸಿಎಸ್‌ಆರ್‌ ಉಪಕ್ರಮಕ್ಕಾಗಿ ಸ್ಯಾಮ್‌ಸಂಗ್ ಜತೆಗೆ ಪಾಲುದಾರಿಕೆ ಹೊಂದಲು ಇಎಸ್‌ಎಸ್‌ಸಿಐ ಸಂತೋಷ ಪಡುತ್ತದೆ. ನಮ್ಮ ಉದ್ದೇಶಕ್ಕೆ ಅನುಗುಣವಾಗಿ ರಾಷ್ಟ್ರದ ಯುವಜನರಿಗೆ ಅದರಲ್ಲೂ ವಿಶೇಷವಾಗಿ ಕಡಿಮೆ ಸವಲತ್ತು ಹೊಂದಿರುವ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನದ ಕ್ಷೇತ್ರಗಳಲ್ಲಿ ಕೌಶಲ ಮತ್ತು ಅಗತ್ಯ ಜ್ಞಾನವನ್ನು ಒದಗಿಸಲು ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ ಅನ್ನು ವಿನ್ಯಾಸಗೊಳಿಸಲಾಗಿದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ ಒದಗಿಸುತ್ತದೆ ಮತ್ತು ಅವರನ್ನು ಉದ್ಯೋಗಕ್ಕೆ ಸಿದ್ಧಗೊಳಿಸುತ್ತದೆ ಎಂಬ ಭರವಸೆ ನಮಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ದಾಖಲಾದ ಯುವಜನತೆ ತರಗತಿ ಮೂಲಕ ಮತ್ತು ಆನ್‌ಲೈನ್ ತರಬೇತಿ ಪಡೆಯುತ್ತಾರೆ ಹಾಗೂ ಎಐ, ಐಒಟಿ, ಬಿಗ್ ಡೇಟಾ ಮತ್ತು ಕೋಡಿಂಗ್ ಆಂಡ್ ಪ್ರೋಗ್ರಾಮಿಂಗ್‌ನಲ್ಲಿ ತಮ್ಮ ಆಯ್ದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್ ಅನ್ನು ಪೂರ್ಣಗೊಳಿಸುತ್ತಾರೆ.

ಅವರ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ಸಾಫ್ಟ್ ಸ್ಕಿಲ್ಸ್ ತರಬೇತಿಯನ್ನೂ ನೀಡಲಾಗುವುದು. ಭಾಗವಹಿಸುವವರು ಭಾರತದಾದ್ಯಂತ ಇರುವ ಇಎಸ್‌ಎಸ್‌ಸಿಐಯ ತರಬೇತಿದಾರರು ಮತ್ತು ಶಿಕ್ಷಣ ಪಾಲುದಾರರ ಮೂಲಕ ಸಿದ್ಧಗೊಳಿಸಲಾಗುತ್ತದೆ. ಈ ಕಾರ್ಯಕ್ರಮವು ಆಫ್‌ಲೈನ್ ಮತ್ತು ಆನ್‌ಲೈನ್ ಕಲಿಕೆ, ಹ್ಯಾಕಥಾನ್‌ಗಳು ಮತ್ತು ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್‌ಗಳು ಮತ್ತು ಸ್ಯಾಮ್‌ಸಂಗ್ ಉದ್ಯೋಗಿಗಳು ಒದಗಿಸುವ ಪರಿಣಿತ ಮಾರ್ಗದರ್ಶನವನ್ನು ಒಳಗೊಂಡಿರುತ್ತದೆ.

ಈ ಕಾರ್ಯಕ್ರಮವು ನಾಲ್ಕು ರಾಜ್ಯಗಳಲ್ಲಿ ಎಂಟು ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಯುತ್ತದೆ. ದೇಶದ ಉತ್ತರ ಭಾಗದಲ್ಲಿ, ದೆಹಲಿ ಎನ್‌ಸಿಆರ್‌ನಲ್ಲಿರುವ ಎರಡು ಕೇಂದ್ರಗಳ ಜತೆಗೆ ಲಕ್ನೋ ಮತ್ತು ಗೋರಖ್‌ಪುರದಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ದಕ್ಷಿಣ ಭಾರತದಲ್ಲಿ, ತಮಿಳುನಾಡಿನ ಚೆನ್ನೈ ಮತ್ತು ಶ್ರೀಪೆರಂಬದೂರಿನಲ್ಲಿ 2 ಕೇಂದ್ರಗಳು ಮತ್ತು ಕರ್ನಾಟಕದ ಬೆಂಗಳೂರಿನಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ಗೆ ಉಸೇನ್‌ ಬೋಲ್ಟ್ ಬ್ರ್ಯಾಂಡ್‌ ಅಂಬಾಸಿಡರ್

ಕಾರ್ಯಕ್ರಮವು ಏಪ್ರಿಲ್ 2024 ರಲ್ಲಿ ಪ್ರಾರಂಭವಾಗಲಿದೆ ಮತ್ತು ವಿಶೇಷವಾಗಿ ವಿನ್ಯಾಸಗೊಳಿಸಲಾದ ಆರು ತಿಂಗಳ ಕೋರ್ಸ್ ಅಕ್ಟೋಬರ್ 2024ರಲ್ಲಿ ಕೊನೆಗೊಳ್ಳುತ್ತದೆ. ನವೆಂಬರ್ 2024ರಲ್ಲಿ ಕೋರ್ಸ್ ಟಾಪರ್‌ಗಳ ಹೆಸರನ್ನು ಘೋಷಿಸಲಾಗುತ್ತದೆ ಎಂದು ತಿಳಿಸಿದೆ.

Continue Reading
Advertisement
Job News
ಉದ್ಯೋಗ8 mins ago

Job News: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಎಚ್‌ಸಿಎಲ್‌ ಟೆಕ್‌ನಿಂದ 15 ಸಾವಿರಕ್ಕೂ ಹೆಚ್ಚು ಫ್ರೆಶರ್‌ಗಳ ನೇಮಕ

Lok Sabha
ಕರ್ನಾಟಕ15 mins ago

ಮೊದಲ ಹಂತದ ಮತದಾನ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿ ಅಲರ್ಟ್;‌ ‘ಉತ್ತರ’ದತ್ತ ಚಿತ್ತ, 13 ಸಚಿವರಿಗೆ ಟಾಸ್ಕ್!

assault case in anekla
ಬೆಂಗಳೂರು ಗ್ರಾಮಾಂತರ44 mins ago

Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

shilpa shetty visits shibaruru sri kodamanittaya
ಸಿನಿಮಾ45 mins ago

Shilpa Shetty: ಪೂಜಾ ಕಾರ್ಯಕ್ಕೆ ಕುಟುಂಬ ಸಮೇತರಾಗಿ ಮಂಗಳೂರಿಗೆ ಬಂದ ಶಿಲ್ಪಾ ಶೆಟ್ಟಿ

mamata banerjee helicopter
ಪ್ರಮುಖ ಸುದ್ದಿ49 mins ago

Mamata Banerjee: ಹೆಲಿಕಾಪ್ಟರ್‌ ಏರುವಾಗ ಬಿದ್ದ ಮಮತಾ ಬ್ಯಾನರ್ಜಿ, ಗಾಯ

ದೇಶ1 hour ago

Self harming: ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ಆತ್ಮಹತ್ಯೆ

mobile blast woman death
ಕ್ರೈಂ2 hours ago

Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

Randeep Surjewala
ಕರ್ನಾಟಕ2 hours ago

Randeep Surjewala: ಕನ್ನಡಿಗರ ತೆರಿಗೆ ಹಣದಲ್ಲಿ ಸುರ್ಜೇವಾಲಾ ಟ್ರಿಪ್;‌ ಕೆರಳಿ ಕೆಂಡವಾದ ಬಿಜೆಪಿ!

Murder case in dharwad
ಕ್ರೈಂ2 hours ago

Murder case: ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

miss universe Buenos Aires
ವಿದೇಶ2 hours ago

Miss Universe Buenos Aires: ಈಕೆ ಬ್ಯೂನಸ್‌ ಐರಿಸ್‌ ವಿಶ್ವ ಸುಂದರಿ; ಇವಳ ವಯಸ್ಸು ನೀವೇ ಊಹಿಸಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ4 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ11 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌