Mission RHUMI: ದೇಶದ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್‌ ರಾಕೆಟ್‌ನ ಯಶಸ್ವಿ ಉಡಾವಣೆ - Vistara News

ತಂತ್ರಜ್ಞಾನ

Mission RHUMI: ದೇಶದ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್‌ ರಾಕೆಟ್‌ನ ಯಶಸ್ವಿ ಉಡಾವಣೆ

Mission RHUMI: ರೂಮಿ 1 ಹೆಸರಿನ ದೇಶದ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್​​​ ಅನ್ನು ಇಂದು (ಆಗಸ್ಟ್ 24) ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ತಮಿಳುನಾಡು ಮೂಲದ ಸ್ಟಾರ್ಟ್-ಅಪ್ ಕಂಪನಿ ಸ್ಪೇಸ್ ಝೋನ್ ಇಂಡಿಯಾವು ಮಾರ್ಟಿನ್‌ ಗ್ರೂಪ್‌ ಜತೆ ಸೇರಿ ಅಭಿವೃದ್ಧಿಪಡಿಸಿದ ಈ ರಾಕೆಟ್​​ನ್ನು ಚೆನ್ನೈಯ ತಿರುವಿದಂಧೈನಲ್ಲಿರುವ ಟಿಟಿಡಿಸಿ (TTDC) ಮೈದಾನದಿಂದ ಉಡಾವಣೆ ಮಾಡಲಾಯಿತು.

VISTARANEWS.COM


on

Mission RHUMI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ನೆಟ್ಟಿದೆ. ರೂಮಿ 1 (RHUMI 1) ಹೆಸರಿನ ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್​​​ (Reusable hybrid rocket) ಅನ್ನು ಇಂದು (ಆಗಸ್ಟ್ 24) ಯಶಸ್ವಿಯಾಗಿ ಉಡಾವಣೆ ಮಾಡಿದೆ. ತಮಿಳುನಾಡು ಮೂಲದ ಸ್ಟಾರ್ಟ್-ಅಪ್ ಕಂಪನಿ ಸ್ಪೇಸ್ ಝೋನ್ ಇಂಡಿಯಾವು ಮಾರ್ಟಿನ್‌ ಗ್ರೂಪ್‌ ಜತೆ ಸೇರಿ ಅಭಿವೃದ್ಧಿಪಡಿಸಿದ ಈ ರಾಕೆಟ್​​ನ್ನು ಚೆನ್ನೈಯ ತಿರುವಿದಂಧೈನಲ್ಲಿರುವ ಟಿಟಿಡಿಸಿ (TTDC) ಮೈದಾನದಿಂದ ಉಡಾವಣೆ ಮಾಡಲಾಯಿತು (Mission RHUMI).

ಈ ರಾಕೆಟ್ 3 ಕ್ಯೂಬ್ ಉಪಗ್ರಹಗಳು ಮತ್ತು 50 ಪಿಐಸಿಒ (PICO) ಉಪಗ್ರಹಗಳನ್ನು ಉಪಕಕ್ಷೆಯ ಪಥಕ್ಕೆ ಕೊಂಡೊಯ್ಯಲಿದೆ. ರಾಕೆಟ್ ಅನ್ನು ಮೊಬೈಲ್ ಲಾಂಚರ್ ಬಳಸಿ ಸಬ್ ಆರ್ಬಿಟಲ್ ಪಥಕ್ಕೆ ಉಡಾಯಿಸಲಾಯಿತು. ಈ ಉಪಗ್ರಹಗಳು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸಂಶೋಧನಾ ಉದ್ದೇಶಗಳಿಗಾಗಿ ಡೇಟಾವನ್ನು ಸಂಗ್ರಹಿಸಲಿವೆ.

ಇಸ್ರೋ ಉಪಗ್ರಹ ಕೇಂದ್ರದ (ISAC) ಮಾಜಿ ನಿರ್ದೇಶಕ ಡಾ.ಮೈಲ್‌ಸ್ವಾಮಿ ಅಣ್ಣಾದೊರೈ ಅವರ ಮಾರ್ಗದರ್ಶನದಲ್ಲಿ ಸ್ಪೇಸ್ ಝೋನ್ ಇಂಡಿಯಾ ಸಂಸ್ಥಾಪಕ ಆನಂದ್ ಮೆಗಾಲಿಂಗಂ ಅವರು ಆರ್‌ಎಚ್‌ಯುಎಂಐ ಮಿಷನ್ ಅನ್ನು ಮುನ್ನಡೆಸುತ್ತಿದ್ದಾರೆ. ದಕ್ಷತೆಯನ್ನು ಸುಧಾರಿಸಲು ಮತ್ತು ಕಾರ್ಯಾಚರಣೆಯ ವೆಚ್ಚವನ್ನು ಕಡಿಮೆ ಮಾಡಲು ಆರ್‌ಎಚ್‌ಯುಎಂಐ -1 (ರೂಮಿ 1) ರಾಕೆಟ್ ದ್ರವ ಮತ್ತು ಘನ ಇಂಧನ ಪ್ರೊಪೆಲ್ಲಂಟ್ ವ್ಯವಸ್ಥೆಗಳ ಅನುಕೂಲಗಳನ್ನು ಸಂಯೋಜಿಸುತ್ತದೆ.

3.5 ಮೀಟರ್‌ ಉದ್ದ 80 ಕೆಜಿ ತೂಕದ ಈ ರಾಕೆಟ್‌ನ ಶೇ. 70ರಷ್ಟನ್ನು ಮರುಬಳಕೆ ಮಾಡಬಹುದು. ರಾಕೆಟ್‌ನ ಮುಖ್ಯಭಾಗ, ಉಪಗ್ರಹಗಳನ್ನು ಹೊಂದಿರುವ ಭಾಗ ಯಶಸ್ವಿ ಉಡ್ಡಯನದ ಬಳಿಕ ಮರಳಿ ಭೂಮಿ ವಾತಾವರಣ ಪ್ರವೇಶಿಸಿ ಸಮುದ್ರದಲ್ಲಿ ಬೀಳಲಿದೆ. ಅಲ್ಲಿಂದ ಈ ಭಾಗಗಳನ್ನು ಸಂಗ್ರಹಿಸಿ, ಇನ್ನೊಂದು ಉಡ್ಡಯನಕ್ಕೆ ಬಳಸಬಹುದು. ಇದು ಭವಿಷ್ಯದ ಉಡ್ಡಯನ ವೆಚ್ಚವನ್ನು ಭಾರೀ ಪ್ರಮಾಣದಲ್ಲಿ ಕಡಿಮೆ ಮಾಡುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಈ ರೂಮಿ 1 ರಾಕೆಟ್‌ 35 ಕಿ.ಮೀ ಎತ್ತರದ ಕಕ್ಷೆವರೆಗೆ ಹಾರಬಲ್ಲದು.

ಇದನ್ನೂ ಓದಿ: Aditya L1 Launch: ರಾಕೆಟ್‌ನಿಂದ ಬೇರ್ಪಟ್ಟ ಆದಿತ್ಯ ಎಲ್‌ 1 ಮಿಷನ್;‌ ಇಸ್ರೋಗೆ ಶಹಬ್ಬಾಶ್‌ ಎಂದ ಮೋದಿ

ಚೆನ್ನೈ ಮೂಲದ ಸ್ಪೇಸ್‌ ಝೋನ್‌ ಇಂಡಿಯಾ ಏರೋ-ಟೆಕ್ನಾಲಜಿ ಕಂಪನಿಯಾಗಿದ್ದು, ಬಾಹ್ಯಾಕಾಶ ಉದ್ಯಮದಲ್ಲಿ ಕಡಿಮೆ ವೆಚ್ಚದ, ದೀರ್ಘಾವಧಿಯ ಪರಿಹಾರವನ್ನು ಒದಗಿಸುವ ಗುರಿಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಗ್ಯಾಜೆಟ್ಸ್

Old Phone Sale: ನಿಮ್ಮ ಹಳೆಯ ಫೋನ್ ಮಾರಾಟ ಮಾಡುವ ಮೊದಲು ಈ ವಿಷಯ ತಿಳಿದಿರಲಿ!

ಬಹಳಷ್ಟು ಬಾರಿ ಜನರು ತಮ್ಮ ಫೋನ್ ಅನ್ನು ಅಪರಿಚಿತರಿಗೆ ಮಾರಾಟ ಮಾಡುವ ಮೊದಲು ಅಗತ್ಯ ಅಥವಾ ಮೂಲಭೂತ ಹಂತಗಳನ್ನು ನಿರ್ವಹಿಸುವುದಿಲ್ಲ. ಇದರಿಂದ ಮುಂದೆ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಹಳೆಯ ಫೋನ್ ಮಾರಾಟ (Old Phone Sale) ಮಾಡುವ ಮೊದಲು ನಿರ್ವಹಿಸಬೇಕಾದ ಕೆಲವು ಕ್ರಮಗಳನ್ನು ತಿಳಿದುಕೊಳ್ಳಿ.

VISTARANEWS.COM


on

By

Old Phone Sale
Koo

ಹಳೆಯ ಫೋನ್ (Old Phone) ಮಾರಾಟ (Old Phone Sale) ಮಾಡುವ ಅಥವಾ ಎಕ್ಸ್ ಚೇಂಚ್ (Old Phone exchange) ಮಾಡುವ ಆಲೋಚನೆಯಲ್ಲಿ ಇದ್ದೀರಾ ? ಹಾಗಿದ್ದರೆ ಅದಕ್ಕೂ ಮೊದಲು ಗಮನಿಸಬೇಕಾದ ಹಲವು ಸಂಗತಿಗಳಿವೆ. ಇಲ್ಲವಾದರೆ ನಿಮ್ಮ ಅಮೂಲ್ಯ ದಾಖಲೆಗಳು ಇನ್ನೊಬ್ಬರ ಕೈಸೇರುವ, ದುರ್ಬಳಕೆಯಾಗುವ ಸಾಧ್ಯತೆ ಇದೆ.

ಹಳೆಯ ಮೊಬೈಲ್ ಮಾರಾಟ ಮಾಡುವ ಮೊದಲು ಡೇಟಾವನ್ನು ಬ್ಯಾಕಪ್ ಮಾಡಬೇಕು, ಅನಂತರ ಫ್ಯಾಕ್ಟರಿ ರೀಸೆಟ್ ಮಾಡಿ ಮೊಬೈಲ್ ನಲ್ಲಿರುವ ಎಲ್ಲ ಡೇಟಾಗಳನ್ನು ಅಳಿಸಿ ಹಾಕಬೇಕು. ಎಲ್ಲಾ ಖಾತೆಗಳಿಂದ ಫೋನ್ ಅನ್ನು ಲಾಗೌಟ್ ಮಾಡಿ ಫೋನ್ ಅನ್ನು ಸಂಪೂರ್ಣವಾಗಿ ರಿಸೆಟ್ ಮಾಡಿಯೇ ಕೊಡಬೇಕು. ಜೊತೆಗೆ ಕೆಲವು ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ಪೊಲೀಸರು.

ಬಹಳಷ್ಟು ಬಾರಿ ಜನರು ತಮ್ಮ ಫೋನ್ ಅನ್ನು ಅಪರಿಚಿತರಿಗೆ ಮಾರಾಟ ಮಾಡುವ ಮೊದಲು ಅಗತ್ಯ ಅಥವಾ ಮೂಲಭೂತ ಹಂತಗಳನ್ನು ನಿರ್ವಹಿಸುವುದಿಲ್ಲ. ಇದರಿಂದ ಮುಂದೆ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ.

ಏನು ಮಾಡಬೇಕು?

ಹಳೆಯ ಫೋನ್ ಮಾರಾಟ ಮಾಡುವ ಮುನ್ನ ಈ ಕೆಳಗಿನ ಅಂಶಗಳು ಗಮನದಲ್ಲಿ ಇರಿಸಿ.

Old Phone Sale
Old Phone Sale


ಡೇಟಾ ಬ್ಯಾಕಪ್

ಮೊಬೈಲ್ ನಲ್ಲಿರುವ ಡೇಟಾವನ್ನು ಮುಖ್ಯವಾಗಿ ಫೋಟೋ, ವಿಡಿಯೋ, ಡಾಕ್ಯುಮೆಂಟ್‌ಗಳನ್ನು ಗೂಗಲ್ ಖಾತೆಗೆ ಅಥವಾ ಐ ಕ್ಲೌಡ್ ಗೆ ಬ್ಯಾಕಪ್ ಮಾಡಿ. ಫೋನ್‌ನಿಂದ ಎಲ್ಲಾ ಫೈಲ್‌ಗಳನ್ನು ತೆಗೆದುಹಾಕಿ. ಇದನ್ನು ಕ್ಲೌಡ್‌ನಲ್ಲಿ ಸಂಗ್ರಹಿಸುವ ಬದಲು ಕಂಪ್ಯೂಟರ್‌ ನಲ್ಲೂ ಸಂಗ್ರಹಿಸಿ ಇಡಬಹುದು. ಸೆಟ್ಟಿಂಗ್‌ ಗೆ ಹೋಗುವ ಮೂಲಕ ನಿಮ್ಮ ಎಲ್ಲಾ ಡೇಟಾವನ್ನು ಬ್ಯಾಕಪ್ ಮಾಡಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ.

ಸೈನ್ ಔಟ್

ಜನರು ಸಾಮಾನ್ಯವಾಗಿ ನಿರ್ಲಕ್ಷಿಸುವ ಅಥವಾ ಮರೆತುಬಿಡುವ ಅತ್ಯಂತ ನಿರ್ಣಾಯಕ ಹಂತ ಇದಾಗಿದೆ. ಭವಿಷ್ಯದಲ್ಲಿ ಯಾವುದೇ ವಂಚನೆಯನ್ನು ತಪ್ಪಿಸುವ ಸಲುವಾಗಿ ಪೇಟಿಎಂ, ಗೂಗಲ್ ಪೇ, ಭೀಮ್, ಬ್ಯಾಂಕ್ ಅಪ್ಲಿಕೇಶನ್‌ಗಳು ಇತ್ಯಾದಿ ಎಲ್ಲಾ ಪಾವತಿ ಅಪ್ಲಿಕೇಶನ್‌ಗಳಿಂದ ಸೈನ್ ಔಟ್ ಮಾಡಿ. ನಿಮ್ಮ ವಿವರಗಳನ್ನು ಈ ಖಾತೆಗಳಿಗೆ ಲಾಗ್ ಇನ್ ಆಗಿರಿಸುವುದು ಕಳ್ಳತನ ಮತ್ತು ಇತರ ಗಂಭೀರ ಭದ್ರತಾ ಉಲ್ಲಂಘನೆಗಳಿಗೆ ಕಾರಣವಾಗಬಹುದು. ಅನಗತ್ಯ ಭದ್ರತಾ ಹಗರಣವನ್ನು ತಪ್ಪಿಸಲು ಗೂಗಲ್, ಫೇಸ್ ಬುಕ್, ಇನ್ ಸ್ಟಾ ಗ್ರಾಮ್ ಇತ್ಯಾದಿ ಸೇರಿದಂತೆ ಎಲ್ಲಾ ಸಾಮಾಜಿಕ ಮಾಧ್ಯಮ ಖಾತೆಗಳಿಂದ ಸೈನ್ ಔಟ್ ಮಾಡಲು ಮರೆಯದಿರಿ.

ಜೋಡಣೆಯನ್ನು ತೆಗೆದು ಹಾಕಿ

ಸ್ಮಾರ್ಟ್ ವಾಚ್‌, ಬ್ಲೂಟೂತ್, ಇಯರ್‌ಫೋನ್‌, ಫಿಟ್‌ನೆಸ್ ಬ್ಯಾಂಡ್‌ ಅಥವಾ ಏರ್‌ಪಾಡ್‌ಗಳಂತಹ ಸಾಧನಗಳನ್ನು ಅನ್‌ಪೇರ್ ಮಾಡಿ. ಅಲ್ಲದೇ ಫೋನ್‌ನಲ್ಲಿ ಏನೂ ಉಳಿಯದಂತೆ ಎಲ್ಲಾ ಜೋಡಿಸಲಾದ ಸಾಧನಗಳಿಂದ ಡೇಟಾವನ್ನು ತೆಗೆದುಹಾಕಿ.

ಫ್ಯಾಕ್ಟರಿ ರೀಸೆಟ್

ಸಾಧನವನ್ನು ಅದರ ಫ್ಯಾಕ್ಟರಿ ಸ್ಥಿತಿಗೆ ಹೊಂದಿಸಲು ಪೂರ್ಣ ಫ್ಯಾಕ್ಟರಿ ಮರುಹೊಂದಿಕೆಯನ್ನು ನಿರ್ವಹಿಸಿ. ಇದು ಸಾಧನದಿಂದ ಎಲ್ಲವನ್ನೂ ಅಳಿಸುತ್ತದೆ ಮತ್ತು ನಿಮ್ಮ ಫೋನ್ ಅನ್ನು ಹೊಚ್ಚ ಹೊಸ ಸ್ಥಿತಿಯಲ್ಲಿ ಇರಿಸುತ್ತದೆ. ಫೋನ್‌ನಿಂದ ಎಲ್ಲಾ ಡೇಟಾ ಮತ್ತು ಸೆಟ್ಟಿಂಗ್‌ಗಳನ್ನು ಅಳಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಫ್ಯಾಕ್ಟರಿ ಮರುಹೊಂದಿಕೆಯನ್ನು ಎರಡು ಬಾರಿ ಮಾಡಬಹುದು.


ಸಿಮ್ ಕಾರ್ಡ್ ತೆಗೆದುಹಾಕಿ

ಫೋನ್‌ನಿಂದ ಸಿಮ್ ಮತ್ತು ಎಸ್ ಡಿ ಕಾರ್ಡ್ ಅನ್ನು ತೆಗೆಯಲು ಮರೆಯಬೇಡಿ. ಕೆಲವು ಸಾಧನ, ಸಂಪರ್ಕ ಮತ್ತು ಕರೆ ಲಾಗ್‌ಗಳನ್ನು ಸಿಮ್ ಕಾರ್ಡ್‌ಗಳಲ್ಲಿ ಸಂಗ್ರಹಿಸಲಾಗುತ್ತದೆ. ಆದ್ದರಿಂದ ಇವುಗಳು ಪ್ರಮುಖ ಹಾರ್ಡ್‌ವೇರ್ ತುಣುಕುಗಳಾಗಿವೆ. ಖರೀದಿದಾರರಿಗೆ ಮೊಬೈಲ್ ಹಸ್ತಾಂತರಿಸುವ ಮೊದಲು ಇದರಲ್ಲಿರುವ ಪಠ್ಯ ಸಂದೇಶ, ಕರೆ ಲಾಗ್‌ ಅನ್ನು ಬ್ಯಾಕಪ್ ನಲ್ಲಿ ಇಡಿ. ಇದಕ್ಕಾಗಿ ಗೂಗಲ್ ಡ್ರೈವ್ ಅಥವಾ ಡ್ರಾಪ್‌ಬಾಕ್ಸ್‌ ಬಳಸಿ. ಹೊಸ ಫೋನ್ ಬಂದಾಗ ಇದನ್ನು ಶೇರ್ ಇಟ್ ಅಪ್ಲಿಕೇಶನ್ ಮೂಲಕ ವರ್ಗಾಯಿಸಿಕೊಳ್ಳಬಹುದು.

ಇದನ್ನೂ ಓದಿ: TRAI New Rules: ನಿಮಗೆ ಗೊತ್ತಿರಲಿ; ಸೆ.1ರಿಂದ ಈ ಸಿಮ್ ಕಾರ್ಡ್‌ಗಳು ಕಪ್ಪು ಪಟ್ಟಿಗೆ!

ಬಿಲ್ ಪಡೆಯಿರಿ

ಫೋನ್ ಅನ್ನು ಮಾರಾಟ ಮಾಡಲು ನಿರ್ಧರಿಸಿದರೆ ಬಿಲ್ ಅನ್ನು ಪಡೆಯಲು ಮರೆಯದಿರಿ. ಇದು ಯಾವುದೇ ವಂಚನೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ ಮತ್ತು ಯಾವುದೇ ದುಷ್ಕೃತ್ಯವನ್ನು ನಿರ್ವಹಿಸಲು ಫೋನ್ ಅನ್ನು ಬಳಸಿದರೆ ನಿಮ್ಮನ್ನು ರಕ್ಷಿಸುತ್ತದೆ.

Continue Reading

ಆಟೋಮೊಬೈಲ್

Skoda Kylaq: ಸ್ಕೋಡಾ ಕಾರಿಗೆ ಸಂಸ್ಕೃತ ಹೆಸರು ಸೂಚಿಸಿ ಕಾರು ಗೆದ್ದ ಕುರಾನ್‌ ಶಿಕ್ಷಕ!

Skoda Kylaq: ಇಂಗ್ಲಿಷ್ ವರ್ಣಮಾಲೆಯಲ್ಲಿ Kಯಿಂದ ಪ್ರಾರಂಭವಾಗುವ ಮತ್ತು Q ನೊಂದಿಗೆ ಕೊನೆಗೊಳ್ಳುವ ಹೆಸರನ್ನು ಸೂಚಿಸಲು ಕಂಪನಿ ಕೇಳಿತ್ತು. ಐದು ಹೆಸರು ಸೂಚಿಸುವ ಆಯ್ಕೆಯನ್ನು ನೀಡಿತ್ತು. ಕಾಸರಗೋಡು ಮೂಲದ ಮೊಹಮ್ಮದ್ ಜಿಯಾದ್ ಎಂಬವರು ಎಸ್‌ಯುವಿಗೆ ʼಕೈಲಾಕ್’ ಎಂಬ ಹೆಸರನ್ನು ಸೂಚಿಸಿ ಗೆದ್ದರು.

VISTARANEWS.COM


on

skoda Kylaq
Koo

ಹೊಸದಿಲ್ಲಿ: ಸ್ಕೋಡಾ ಕಂಪನಿಯ (Skoda Company) ಹೊಸ ಕಾರಿಗೆ ಸಂಸ್ಕೃತದ (Sanskrit) ಹೆಸರೊಂದನ್ನು ಕಾಸರಗೋಡಿನ ಕುರಾನ್‌ ಶಿಕ್ಷಕರೊಬ್ಬರು (Quran teacher) ಸೂಚಿಸಿದ್ದು, ಅದನ್ನು ಕಂಪನಿ (Skoda Kylaq) ಆಯ್ಕೆ ಮಾಡಿದೆ. ಜೊತೆಗೆ, ಈ ಹೆಸರನ್ನು ಸೂಚಿಸಿದ ಶಿಕ್ಷಕರಿಗೆ ಒಂದು ಹೊಸ ಕಾರನ್ನೂ ಕೊಡುಗೆಯಾಗಿ ನೀಡಿದೆ.

ʼನೇಮ್ ಯುವರ್ ಸ್ಕೋಡಾ’ ಅಭಿಯಾನದ ಮೂಲಕ ಹೊಸ ಕಾರಿಗೆ ಹೆಸರು ನೀಡಲು ಕಂಪನಿ ಪ್ರಕಟಣೆ ನೀಡಿತ್ತು. ದೇಶಾದ್ಯಂತ ಸಾಕಷ್ಟು ಕಾರು ಪ್ರಿಯರು ಹೆಸರನ್ನು ಸೂಚಿಸಿ ಅಭಿಯಾನದಲ್ಲಿ ಭಾಗವಹಿಸಿದ್ದರು. ಕರ್ನಾಟಕ- ಕೇರಳ ಗಡಿಭಾಗದ ಕಾಸರಗೋಡಿನ ವ್ಯಕ್ತಿಯೊಬ್ಬರು ಸ್ಕೋಡಾ ಎಸ್‌ಯುವಿ (Skoda SUV) ಹೆಸರನ್ನು ಸೂಚಿಸುವ ಮೂಲಕ ಬಹುಮಾನವನ್ನು ಗೆದ್ದಿದ್ದಾರೆ.

ಸ್ಕೋಡಾ ಈ ವರ್ಷದ ಫೆಬ್ರವರಿಯಲ್ಲಿ ʼನೇಮ್ ಯುವರ್ ಸ್ಕೋಡಾ’ ಅಭಿಯಾನವನ್ನು ಪ್ರಾರಂಭಿಸಿತು. ಇಂಗ್ಲಿಷ್ ವರ್ಣಮಾಲೆಯಲ್ಲಿ Kಯಿಂದ ಪ್ರಾರಂಭವಾಗುವ ಮತ್ತು Q ನೊಂದಿಗೆ ಕೊನೆಗೊಳ್ಳುವ ಹೆಸರನ್ನು ಸೂಚಿಸಲು ಕಂಪನಿ ಕೇಳಿತ್ತು. ಐದು ಹೆಸರು ಸೂಚಿಸುವ ಆಯ್ಕೆಯನ್ನು ನೀಡಿತ್ತು. ಕಾಸರಗೋಡು ಮೂಲದ ಮೊಹಮ್ಮದ್ ಜಿಯಾದ್ ಎಂಬವರು ಎಸ್‌ಯುವಿಗೆ ʼಕೈಲಾಕ್’ ಎಂಬ ಹೆಸರನ್ನು ಸೂಚಿಸಿ ಗೆದ್ದರು.

24 ವರ್ಷ ವಯಸ್ಸಿನ ಜಿಯಾದ್ ಅವರು ಕಾಸರಗೋಡಿನ ನಜಾತ್ ಕುರಾನ್ ಅಕಾಡೆಮಿಯಲ್ಲಿ ಶಿಕ್ಷಕರಾಗಿದ್ದಾರೆ. ಹೆಸರನ್ನು ಸೂಚಿಸಿದ ನಂತರ, ಸ್ಪರ್ಧೆಯ ಅಪ್‌ಡೇಟ್‌ಗಳಿಗಾಗಿ ಸ್ಕೋಡಾದ Instagram ಖಾತೆಯನ್ನು ಜಿಯಾದ್ ಫಾಲೋ ಮಾಡಿದ್ದರು. ವಿವಿಧ ಹಂತಗಳಲ್ಲಿ ಸುಮಾರು ಎರಡು ಲಕ್ಷ ಹೆಸರುಗಳು ಬಂದಿದ್ದವಂತೆ. ಮೊದಲ 100 ಜನರ ಶಾರ್ಟ್‌ಲಿಸ್ಟ್‌ನಲ್ಲಿ ಜಿಯಾದ್ ಹೆಸರು ಬಂತು. ಆದರೆ ಬಹುಮಾನ ಬಂದಿರುವುದನ್ನು ನಂಬಲೇ ಸಾಧ್ಯವಿಲ್ಲ ಎಂಬುದು ಜಿಯಾದ್‌ ಅವರ ಅಚ್ಚರಿ.

ಫೆಬ್ರವರಿಯಲ್ಲಿ ನಾಮಕರಣ ಸ್ಪರ್ಧೆ ಆರಂಭವಾದಾಗಲೇ ಜಿಯಾದ್ ಹೊಸ ವಾಹನದ ಹೆಸರನ್ನು ಸೂಚಿಸಿದ್ದರು. ವಾಟ್ಸಾಪ್ ಗ್ರೂಪ್ ಮೂಲಕ ಬಂದ ಲಿಂಕ್ ಮೂಲಕ ಸಿಯಾದ್ ಈ ಸ್ಪರ್ಧೆಯ ಬಗ್ಗೆ ತಿಳಿದುಕೊಂಡಿದ್ದಾರೆ. ನಂತರ, ಹೆಸರನ್ನು ಸೂಚಿಸಿದ್ದರು. 10 ಜನರ ಶಾರ್ಟ್‌ಲಿಸ್ಟ್‌ನಲ್ಲಿ ಅವರ ಹೆಸರು ಕಾಣಿಸಿಕೊಂಡಾಗ ಅವರು ತುಂಬಾ ಸಂತೋಷಪಟ್ಟರು. ಆದರೆ ಅವರು ವಿಜೇತರು ಎಂದು ತಿಳಿದಾಗ ಅವರು ಆಘಾತಕ್ಕೇ ಒಳಗಾದರಂತೆ.

ಕಾರು ತಯಾರಕ ಕಂಪನಿ ಸ್ಕೋಡಾ ಪ್ರಕಾರ, ಕೈಲಾಕ್ ಎಂಬುದು ಸಂಸ್ಕೃತ ಪದ ಹಾಗೂ ʼಸ್ಫಟಿಕʼ ಎಂಬುದು ಅದರ ಅರ್ಥ. ಸ್ಕೋಡಾ ಕಂಪನಿಯು ಕ್ವಿಕ್, ಕಾಸ್ಮಿಕ್, ಕ್ಲಿಕ್ ಮತ್ತು ಕಯಾಕ್ ಹೆಸರುಗಳನ್ನು ಹೊಂದಿತ್ತು. ಅವುಗಳನ್ನು ಬದಲಿಸಿ ಹೊಸ ಮಾದರಿಗೆ ಕೈಲಾಕ್ ಎಂದು ಹೆಸರನ್ನು ನೀಡಿದೆ.

ಸ್ಕೋಡಾ ಭಾರತದಲ್ಲಿ ವಿಶೇಷ ಅಭಿಮಾನಿಗಳನ್ನು ಹೊಂದಿರುವ ಜನಪ್ರಿಯ ಕಾರು ತಯಾರಕ ಕಂಪನಿ. ಈ ಸ್ಕೋಡಾ ಕಂಪನಿಯು ಕುಶಾಕ್ ಮತ್ತು ಸ್ಲಾವಿಯಾ ಕಾರುಗಳನ್ನು ಭರ್ಜರಿಯಾಗಿ ಮಾರಾಟ ಮಾಡುತ್ತಿದೆ. ಸ್ಕೋಡಾ ಆಟೋ ಭಾರತದಲ್ಲಿ ತನ್ನ ಮುಂಬರುವ ಹೊಸ ಎಸ್‍ಯುವಿಯ ಹೆಸರನ್ನು ಆಗಸ್ಟ್ 21ರಂದು ಘೋಷಿಸಿತು. ಸ್ಕೋಡಾ ಕೈಲಾಕ್ (Skoda Kylaq) ಭಾರತದಲ್ಲಿ ಹೆಚ್ಚು ಜನಪ್ರಿಯವಾಗಿರುವ ಸಬ್ 4 ಮೀಟರ್ ಎಸ್‌ಯುವಿ ವಿಭಾಗವನ್ನು ಬದಲಾಯಿಸಲಿದೆ. ಕೈಲಾಕ್ ಜನಪ್ರಿಯ ಮಾದರಿಗಳಾದ ಟಾಟಾ ನೆಕ್ಸಾನ್, ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೋನೆಟ್, ರೆನಾಲ್ಟ್ ಕೈಗರ್ ಮತ್ತು ನಿಸ್ಸಾನ್ ಮ್ಯಾಗ್ನೈಟ್‌ಗಳೊಂದಿಗೆ ಸ್ಪರ್ಧಿಸಲಿದೆ.

ಸ್ಕೋಡಾದ ಇಂಡಿಯಾ 2.0 ಕಾರ್ಯಕ್ರಮದ ಭಾಗವಾಗಿರುವ ಮೂರನೇ ಕಾರು ಇದಾಗಿದೆ. ಹೊಸ ವಾಹನವನ್ನು ಅದೇ MQB-M00 ಪ್ಲಾಟ್‌ಫಾರ್ಮ್‌ನಲ್ಲಿ ನಿರ್ಮಿಸಲಾಗಿದೆ, ಅದು ಸ್ಕೋಡಾ ಕುಶಾಕ್ ಮತ್ತು ಸ್ಲಾವಿಯಾಕ್ಕೆ ಆಧಾರವಾಗಿದೆ. ಸ್ಕೋಡಾದ ಹೊಸ ಸಬ್-4 ಮೀಟರ್ ಎಸ್‌ಯುವಿಯು ಕುಶಾಕ್ ಮತ್ತು ಸ್ಲಾವಿಯಾದೊಂದಿಗೆ ಬಳಸಿದ ಅದೇ 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನಿಂದ ನಿಯಂತ್ರಿಸಲ್ಪಡುತ್ತದೆ. ಈ ಎಂಜಿನ್ 115 bhp ಪವರ್ ಮತ್ತು 178 Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಜೋಡಿಸಲಾಗುತ್ತದೆ. ಈ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಗಾಗಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ಶೇಕಡಾ 30 ರಷ್ಟು ಹೆಚ್ಚಿಸುವುದಾಗಿ ಕಂಪಬಿ ಹೇಳಿದೆ. ಸ್ಕೋಡಾ ಒಂದು ವರ್ಷದಲ್ಲಿ ಬ್ರೆಝಾ, ನೆಕ್ಸಾನ್ ಪ್ರತಿಸ್ಪರ್ಧಿಯ ಒಂದು ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡುವ ಗುರಿ ಹೊಂದಿದೆ.

ಇದನ್ನೂ ಓದಿ: Auto Launches: ಸ್ಕೋಡಾ ಕುಶಾಕ್‌, ಬಿಎಂಡಬ್ಲ್ಯು ಆರ್ 1300 ಸೇರಿ ಇನ್ನೂ ಹಲವು ಹೊಸ ವಾಹನ ಮಾರುಕಟ್ಟೆಗೆ!

Continue Reading

ವಿಜ್ಞಾನ

Fetus In Baby: ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ!

ಅಸಹಜವಾಗಿ ಮಗುವಿನ ಹೊಟ್ಟೆ ಬೆಳವಣಿಗೆಯಾಗುತ್ತಿರುವುದನ್ನು ಗಮನಿಸಿದ ತಾಯಿ ಹಿಮಾಲಯನ್ ಆಸ್ಪತ್ರೆ ಜಾಲಿಗ್ರಾಂಟ್‌ನ ಹಿರಿಯ ಮಕ್ಕಳ ಶಸ್ತ್ರಚಿಕಿತ್ಸಕ ಡಾ. ಸಂತೋಷ್ ಸಿಂಗ್ ಅವರನ್ನು ಸಂಪರ್ಕಿಸಿದಾಗ ಮಗುವಿನ ಹೊಟ್ಟೆಯೊಳಗೆ ಮಾನವ ಭ್ರೂಣವು (Fetus In Baby) ಬೆಳವಣಿಗೆಯಾಗುತ್ತಿರುವುದನ್ನು ಎಕ್ಸ್ ರೇ ಬಹಿರಂಗಪಡಿಸಿತು. ಬಳಿಕ ಶಸ್ತ್ರಚಿಕಿತ್ಸೆ ನಡೆಸಿ ಭಾಗಶಃ ಬೆಳವಣಿಗೆಯಾಗಿದ್ದ ಭ್ರೂಣವನ್ನು ಹೊರತೆಗೆಯಲಾಗಿದೆ.

VISTARANEWS.COM


on

By

Fetus In Baby
Koo

ಡೆಹ್ರಾಡೂನ್: ಏಳು ತಿಂಗಳ ಮಗುವಿನ (7 month baby) ಹೊಟ್ಟೆಯಲ್ಲಿ ಮಾನವನ ಭ್ರೂಣ (Fetus In Baby) ಪತ್ತೆಯಾಗಿರುವ ಅಪರೂಪದ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ (Uttarakhand Dehradun) ನಡೆದಿದೆ. ಹಿಮಾಲಯನ್ ಆಸ್ಪತ್ರೆ (Himalayan Hospital) ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿ ಮಗುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.

ಏಳು ತಿಂಗಳ ಮಗುವಿನ ಹೊಟ್ಟೆ ಬೆಳೆಯುತ್ತಿರುವುದನ್ನು ತಾಯಿ ಗಮನಿಸಿದ್ದು, ಪ್ರಾರಂಭದಲ್ಲಿ ನಿರ್ಲಕ್ಷಿಸಿದ್ದಳು. ಆದರೆ ಹೊಟ್ಟೆಯ ಬೆಳವಣಿಗೆ ಹೆಚ್ಚಾಗುತ್ತಾ ಹೋದಂತೆ ಹಲವು ವೈದ್ಯರನ್ನು ಸಂಪರ್ಕಿಸಿದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ.

ಬಳಿಕ ಅವರು ಹಿಮಾಲಯನ್ ಆಸ್ಪತ್ರೆ ಜಾಲಿಗ್ರಾಂಟ್‌ನ ಹಿರಿಯ ಮಕ್ಕಳ ಶಸ್ತ್ರಚಿಕಿತ್ಸಕ ಡಾ. ಸಂತೋಷ್ ಸಿಂಗ್ ಅವರನ್ನು ಸಂಪರ್ಕಿಸಿದರು. ಮಗುವಿನ ಆರಂಭಿಕ ಪರೀಕ್ಷೆಯಲ್ಲಿ ಡಾ. ಸಿಂಗ್ ಹೊಟ್ಟೆಯಲ್ಲಿ ಅಸಹಜ ದ್ರವ್ಯರಾಶಿಯನ್ನು ಶಂಕಿಸಿದ್ದರು. ಆದರೆ ಮಗುವಿನ ಹೊಟ್ಟೆಯೊಳಗೆ ಮಾನವ ಭ್ರೂಣವು ಬೆಳವಣಿಗೆಯಾಗುತ್ತಿರುವುದನ್ನು ಎಕ್ಸ್ ರೇ ಬಹಿರಂಗಪಡಿಸಿತು.

ಈ ಸ್ಥಿತಿಯನ್ನು ವೈದ್ಯಕೀಯವಾಗಿ “ಫೆಟಸ್-ಇನ್-ಫೀಟು” ಎಂದು ಹೇಳಿರುವ ಡಾ. ಸಂತೋಷ್ ಸಿಂಗ್, ಮಗುವಿನ ಪೋಷಕರಿಗೆ ಈ ಕುರಿತು ಸಂಪೂರ್ಣ ಮಾಹಿತಿ ನೀಡಿ ಶಸ್ತ್ರಚಿಕಿತ್ಸೆ ನಡೆಸಬೇಕಿರುವುದಾಗಿ ತಿಳಿಸಿದರು.

ಕಳೆದ ವಾರ ಮಗುವಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಭಾಗಶಃ ಅಭಿವೃದ್ಧಿ ಹೊಂದಿದ್ದ ಮಾನವ ಭ್ರೂಣವನ್ನು ಮಗುವಿನ ಹೊಟ್ಟೆಯಿಂದ ಹೊರತೆಗೆಯಲಾಗಿದೆ. ಶಸ್ತ್ರಚಿಕಿತ್ಸೆಯ ನಾಲ್ಕು ದಿನಗಳ ಅನಂತರ ಮಗು ಚೇತರಿಸಿಕೊಂಡಿದ್ದು, ಮಗುವನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಡಾ. ಸಂತೋಷ್ ಸಿಂಗ್ ತಿಳಿಸಿದ್ದಾರೆ.


ಫೀಟಸ್-ಇನ್-ಫೀಟು ಎಂದರೇನು?

ಹಿಮಾಲಯನ್ ಆಸ್ಪತ್ರೆ ಜಾಲಿಗ್ರಾಂಟ್‌ನ ಮಕ್ಕಳ ಶಸ್ತ್ರಚಿಕಿತ್ಸಕ ಡಾ. ಸಂತೋಷ್ ಸಿಂಗ್ ಅವರು “ಫಿಟಸ್-ಇನ್-ಫೀಟು” ಬಗ್ಗೆ ವಿವರಿಸಿದ್ದು, ಇದೊಂದು ಅತ್ಯಂತ ಅಪರೂಪದ ವಿದ್ಯಮಾನವಾಗಿದೆ. ಅಜ್ಞಾತ ಕಾರಣಗಳಿಂದ ಒಂದು ಭ್ರೂಣವು ಇನ್ನೊಂದರೊಳಗೆ ಪರಾವಲಂಬಿಯಂತೆ ಬೆಳವಣಿಗೆಯಾಗಲು ಪ್ರಾರಂಭಿಸುತ್ತದೆ. ಈ ಸ್ಥಿತಿಯನ್ನು ತಾಯಿಯ ಗರ್ಭಾವಸ್ಥೆಯಲ್ಲಿ ಅಲ್ಟ್ರಾಸೌಂಡ್ ಮೂಲಕ ಕಂಡುಹಿಡಿಯಬಹುದು. ಆದರೂ ಹೆಚ್ಚಿನ ಸಂದರ್ಭಗಳಲ್ಲಿ ಇದು ಜನನದ ನಂತರ ಪತ್ತೆಯಾಗುತ್ತದೆ.

ಇದನ್ನೂ ಓದಿ: Viral Video: ಆಟಿಕೆ ಎಂದು ತಿಳಿದು ಹಾವನ್ನೇ ಕಚ್ಚಿದ ಮಗು! ಕಚ್ಚಿಸಿಕೊಂಡ ಹಾವು ಸಾವು!

5 ಲಕ್ಷದಲ್ಲಿ ಒಂದು ಪ್ರಕರಣ

ಡಾ. ಸಂತೋಷ್ ಕುಮಾರ್ ಅವರ ಪ್ರಕಾರ ಇದು 5 ಲಕ್ಷಕ್ಕಿಂತಲೂ ಹೆಚ್ಚು ಗರ್ಭಧಾರಣೆಗಳಲ್ಲಿ ಒಂದರಲ್ಲಿ ಉಂಟಾಗಬಹುದು. ವಿಶಿಷ್ಟವಾಗಿ, ಮಗುವಿನ ಹೊಟ್ಟೆಯು ಒಂದರಿಂದ ಎರಡು ವರ್ಷಗಳ ನಡುವೆ ಅಸಹಜವಾಗಿ ಹಿಗ್ಗಿದಾಗ ಈ ಪ್ರಕರಣಗಳನ್ನು ಗಮನಿಸಬಹುದು. ಈ ಸ್ಥಿತಿಯು ಸಾಮಾನ್ಯವಾಗಿ ಮಗುವಿನ ಜೀವಕ್ಕೆ ತೊಂದರೆಯನ್ನು ಉಂಟು ಮಾಡುವುದಿಲ್ಲವಾದರೂ ಇದು ಇತರ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ಸ್ಥಿತಿಯ ಏಕೈಕ ಚಿಕಿತ್ಸೆಯು ಶಸ್ತ್ರಚಿಕಿತ್ಸೆಯಾಗಿದೆ. ಇದನ್ನು ಸಾಧ್ಯವಾದಷ್ಟು ಬೇಗ ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

Continue Reading

ಬೆಂಗಳೂರು

Child Online Protection Award : ಸ್ಟೋಗೋ ಉತ್ಸವ, ಚೈಲ್ಡ್ ಆನ್‌ಲೈನ್ ಪ್ರೊಟೆಕ್ಷನ್ ಪ್ರಶಸ್ತಿ 2024 ಘೋಷಣೆ

Child Online Protection Award :ಸ್ಟೋಗೋ ಫೆಸ್ಟ್ 2024 ಎನ್ನುವುದು ಅಂತಾರಾಷ್ಟ್ರೀಯ ಸ್ಟೀಮ್ ಸ್ಪರ್ಧೆಯಾಗಿದ್ದು, ಗ್ರೇಡ್ 4ರಿಂದ 12ನೇ ಗ್ರೇಡ್ ವರೆಗಿನ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದಾಗಿದೆ. “ಮಕ್ಕಳ ಡಿಜಿಟಲ್ ಯೋಗಕ್ಷೇಮಕ್ಕಾಗಿ ಎಐ ಮತ್ತು ರೊಬೋಟಿಕ್ಸ್ ಬಳಕೆ” ಎಂಬ ಥೀಮ್‌ನಡಿ ಈ ಸ್ಪರ್ಧೆ ನಡೆಯಲಿದೆ. ವಿಶೇಷವೆಂದರೆ, ಪ್ರಾದೇಶಿಕ ಸ್ಟೋಗೋ ಫೆಸ್ಟ್ ವಿಜೇತರು 2025ರ ಫೆಬ್ರವರಿ 06ರಂದು ಯುಎಇಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಸ್ಟೋಗೋ ಫೆಸ್ಟ್ (ಗ್ರೇಡ್ 4ರಿಂದ ಗ್ರೇಡ್ 12)ನಲ್ಲಿ ಮಿಂಚಲಿದ್ದಾರೆ. ಇಲ್ಲಿ ಈ ಸ್ಟೋಗೋ ಉತ್ಸವ-2024ರ ಗ್ರ್ಯಾಂಡ್ ಫಿನಾಲೆ ನಡೆಯಲಿದೆ.

VISTARANEWS.COM


on

Child Online Protection Award
Koo

ಬೆಂಗಳೂರು: ಎಚ್‌ಕೆ ಕನ್ಸಲ್ಟೆನ್ಸಿ ಸಂಸ್ಥೆ ಹಾಗೂ ಟಾಕ್ಯೋನ್ ಸಿಸ್ಟಂ ಸೊಲ್ಯೂಷನ್ಸ್ ಪ್ರೈವೇಟ್ ಲಿ. ಸಂಸ್ಥೆಗಳು ಪ್ರಸಿದ್ಧ ಆರ್ ಆರ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಸಹಭಾಗಿತ್ವದಲ್ಲಿ ಸ್ಟೋಗೋ ಫೆಸ್ಟ್(STOGO FEST) 2024 ಮತ್ತು ಚೈಲ್ಡ್ ಆನ್‌ಲೈನ್ ಪ್ರೊಟೆಕ್ಷನ್ ಪ್ರಶಸ್ತಿ(COP) 2024 ಅನ್ನು ಘೋಷಿಸುತ್ತಿದೆ (Child Online Protection Award:). ಆರ್ ಆರ್ ಸಮೂಹ ಸಂಸ್ಥೆಯ ಕ್ಯಾಂಪಸ್‌ನಲ್ಲಿ 2024ರ ಡಿಸೆಂಬರ್ 9 ಮತ್ತು 10ರಂದು ಕರ್ನಾಟಕದ ಪ್ರಾದೇಶಿಕ ಮಟ್ಟದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಸ್ಟೋಗೋ ಫೆಸ್ಟ್ 2024 ಎನ್ನುವುದು ಅಂತಾರಾಷ್ಟ್ರೀಯ ಸ್ಟೀಮ್ ಸ್ಪರ್ಧೆಯಾಗಿದ್ದು, ಗ್ರೇಡ್ 4ರಿಂದ 12ನೇ ಗ್ರೇಡ್ ವರೆಗಿನ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದಾಗಿದೆ. “ಮಕ್ಕಳ ಡಿಜಿಟಲ್ ಯೋಗಕ್ಷೇಮಕ್ಕಾಗಿ ಎಐ ಮತ್ತು ರೊಬೋಟಿಕ್ಸ್ ಬಳಕೆ” ಎಂಬ ಥೀಮ್‌ನಡಿ ಈ ಸ್ಪರ್ಧೆ ನಡೆಯಲಿದೆ. ವಿಶೇಷವೆಂದರೆ, ಪ್ರಾದೇಶಿಕ ಸ್ಟೋಗೋ ಫೆಸ್ಟ್ ವಿಜೇತರು 2025ರ ಫೆಬ್ರವರಿ 06ರಂದು ಯುಎಇಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಸ್ಟೋಗೋ ಫೆಸ್ಟ್ (ಗ್ರೇಡ್ 4ರಿಂದ ಗ್ರೇಡ್ 12)ನಲ್ಲಿ ಮಿಂಚಲಿದ್ದಾರೆ. ಇಲ್ಲಿ ಈ ಸ್ಟೋಗೋ ಉತ್ಸವ-2024ರ ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಯುಎಇ ಸಹಿಷ್ಣು ಮತ್ತು ಸಹಬಾಳ್ವೆ ಸಚಿವರಾದ ಗೌರವಾನ್ವಿತ ಶೇಖ್ ನಹ್ಯಾನ್ ಬಿನ್ ಮುಬಾರಕ್ ಅಲ್ ನಹ್ಯಾನ್ ಅವರ ಬೆಂಬಲದೊಂದಿಗೆ ಈ ಕಾರ್ಯಕ್ರಮ ಜರುಗಲಿದೆ.

ಕಳೆದ ವರ್ಷ, ಪದ್ಮ ಪ್ರಶಸ್ತಿ ಪುರಸ್ಕೃತ ಜಿ.ಮಾಧವನ್ ನಾಯರ್ (ಇಸ್ರೋ ಮಾಜಿ ಮುಖ್ಯಸ್ಥ) ಹಾಗೂ ಇಸ್ರೋದ ಮಾಜಿ ವಿಜ್ಞಾನಿಗಳ ಪ್ರೋತ್ಸಾಹದೊಂದಿಗೆ ಸಾರಾಭಾಯಿ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಆಂಡ್ ಟೆಕ್ನಾಲಜಿಯಲ್ಲಿ ಪ್ರಾದೇಶಿಕ ಸ್ಟೋಗೋ ಉತ್ಸವವು ನಡೆದಿತ್ತು.

ಚೈಲ್ಡ್ ಆನ್‌ಲೈನ್ ಪ್ರೊಟೆಕ್ಷನ್ ಪ್ರಶಸ್ತಿ 2024:

ಮಕ್ಕಳ ಆನ್ ಲೈನ್ ಸುರಕ್ಷತೆಯೆಂಬ ಸಂಕೀರ್ಣ ಸವಾಲಿಗೆ ಪರಿಹಾರ ಕಂಡುಕೊಳ್ಳುವ ಮತ್ತು ಈ ನಿಟ್ಟಿನಲ್ಲಿ ಸಕ್ರಿಯ ಉಪಕ್ರಮಗಳನ್ನು ಸಾಧಿಸಿರುವ ಶಾಲೆಗಳನ್ನು ಚೈಲ್ಡ್ ಆನ್‌ಲೈನ್ ಪ್ರೊಟೆಕ್ಷನ್ ಪ್ರಶಸ್ತಿಯ ಮೂಲಕ ಗೌರವಿಸಲಾಗುತ್ತದೆ. ಇಲ್ಲಿ ಪದಗಳಿಗಿಂತ, ಶಾಲೆಗಳು ಮಾಡಿರುವ ಸಾಧನೆಗಳಿಗೆ ಮನ್ನಣೆ ನೀಡಲಾಗುತ್ತದೆ.
ಅಂತರ್ಜಾಲ ಮತ್ತು ಡಿಜಿಟಲ್ ಸಾಧನಗಳನ್ನು ಜವಾಬ್ದಾರಿಯುತವಾಗಿ ಮತ್ತು ಪರಿಣಾಮಕಾರಿಯಾಗಿ ಬಳಸಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯವನ್ನು ಹೊಂದುವಂತೆ ಮಕ್ಕಳನ್ನು ಸಜ್ಜುಗೊಳಿಸುವ ಉದ್ದೇಶದಿಂದಲೇ ವಿಶೇಷವಾಗಿ ಈ ಉಪಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ತಮ್ಮ ಜತೆಗಾರರ ಡಿಜಿಟಲ್ ಯೋಗಕ್ಷೇಮವನ್ನು ವರ್ಧಿಸುವಂಥ ಪರಿಹಾರಗಳನ್ನು ಅಭಿವೃದ್ಧಿಪಡಿಸುವಲ್ಲಿ ಮಕ್ಕಳು ಸಕ್ರಿಯವಾಗಿ ಕೊಡುಗೆ ನೀಡುವುದು, ಅದರಲ್ಲಿ ಪಾಲ್ಗೊಳ್ಳುವಂತೆ ಮಾಡುವುದು, ಜಾಗೃತಿ ಹಾಗೂ ಅನುಭವವನ್ನು ಗಳಿಸುವಂತೆ ಮಾಡುವುದು ಕೂಡ ಸಿಒಪಿ ಪ್ರಶಸ್ತಿಯ ಮೂಲ ಉದ್ದೇಶವಾಗಿದೆ.

ಇದನ್ನೂ ಓದಿ: Yuvraj Singh : ಶೀಘ್ರದಲ್ಲೇ ತೆರೆಗೆ ಬರಲಿದೆ ಯುವರಾಜ್ ಸಿಂಗ್‌ ಬಯೋಪಿಕ್‌

ಆರ್ ಆರ್ ಸಮೂಹ ಸಂಸ್ಥೆಯ ಕ್ಯಾಂಪಸ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸ್ಟೋಗೋ ಫೆಸ್ಟ್ ಸ್ಥಾಪಕರಾದ ಶ್ರೀ ಜಯೇಶ್ ಸೆಬಾಸ್ಟಿಯನ್, ಸ್ಟೋಗೋ ಫೆಸ್ಟ್ ನ ಜಾಗತಿಕ ಯೋಜನಾ ಪ್ರವರ್ತಕರಾದ ಲಿಂಡಾ ಆರ್., ಸ್ಟೋಗೋ ಫೆಸ್ಟ್ ನ ಕರ್ನಾಟಕದ ಸಮನ್ವಯಕಾರರಾದ ಶ್ರೀ ಎಸ್.ಕೆ.ಶಫೀ ಮತ್ತಿತರರು ಉಪಸ್ಥಿತರಿರಲಿದ್ದಾರೆ.
ಇನ್ನೇಕೆ ತಡ, ಬೆಂಗಳೂರಿನ ಆರ್ ಆರ್ ಗ್ರೂಪ್ ಆಫ್ ಇನ್ ಸ್ಟಿಟ್ಯೂಷನ್ಸ್ ನಲ್ಲಿ ಇದೇ ಡಿ.9 ಮತ್ತು 10ರಂದು ನಡೆಯಲಿರುವ ಉತ್ಸವದಲ್ಲಿ ಭಾಗಿಯಾಗಿ. ನಾವೀನ್ಯತೆಯ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳಿ.

Continue Reading
Advertisement
Actor darshan
ಸ್ಯಾಂಡಲ್ ವುಡ್58 seconds ago

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Western Ghats
ಕರ್ನಾಟಕ26 mins ago

Western Ghats: ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

Israel vs Hezbollah War
ವಿದೇಶ44 mins ago

Israel vs Hezbollah War: ಹೆಜ್ಬುಲ್ಲಾ ಉಗ್ರರ ಅಟ್ಟಹಾಸ; ಲೆಬನಾನ್‌ ಮೇಲೆ ರಾಕೆಟ್​ ದಾಳಿ ಆರಂಭಿಸಿದ ಇಸ್ರೇಲ್​; ಭಯಾನಕ ವಿಡಿಯೊ ಇಲ್ಲಿದೆ

Dhanya Ramkumar-Vicky Varun starrer Kaalapathar to release on September 13
ಸಿನಿಮಾ1 hour ago

Dhanya Ramkumar: ತೆರೆಗೆ ಸಿದ್ಧವಾಯ್ತು ಕಾಲಾಪತ್ಥರ್‌; ಸೆ.13ಕ್ಕೆ ಧನ್ಯಾ ರಾಮ್‌ಕುಮಾರ್- ವಿಕ್ಕಿ ವರುಣ್‌ ನಟನೆ ಮೋಡಿ

Karkala Shocker
ಕರ್ನಾಟಕ1 hour ago

Karkala Shocker: ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿದ ಅಲ್ತಾಫ್‌ಗೆ ಕಠಿಣ ಶಿಕ್ಷೆಯಾಗಲಿ ಎಂದ ಮುಸ್ಲಿಂ ಒಕ್ಕೂಟ

Pavel Durov Arrest
ವಿದೇಶ1 hour ago

Pavel Durov Arrest: ಟೆಲಿಗ್ರಾಂ ಸಿಇಒ ಪಾವೆಲ್‌‌ ಫ್ರಾನ್ಸ್‌‌ನಲ್ಲಿ ಬಂಧನ; ಕಾರಣ ಏನು?

CBI Raid
ದೇಶ2 hours ago

CBI Raid: ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸದ ಮೇಲೆ ಸಿಬಿಐ ದಾಳಿ

Israel strike
ವಿದೇಶ2 hours ago

Israel strike: ರಾಕೆಟ್ ದಾಳಿ; ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Rohit Sharma
ಕ್ರೀಡೆ2 hours ago

Rohit Sharma: ಪಾರ್ಕ್​ನಲ್ಲಿ ಅಭ್ಯಾಸ ನಡೆಸಿದ ರೋಹಿತ್​; ವಿಡಿಯೊ ವೈರಲ್​

Chain snatching Case
ಕ್ರೈಂ3 hours ago

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿದ; ಚೈನ್ ಸ್ನಾಚಿಂಗ್‌ಗೆ ಇಳಿದು ಸಿಕ್ಕಿಬಿದ್ದ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ21 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌