National Technology Day ಪೋಖ್ರಾನ್‌ ಅಣು ಪರೀಕ್ಷೆ ಯಶಸ್ವಿಯಾಗಿ ನಡೆದ ಹೆಮ್ಮೆಯ ದಿನ - Vistara News

ತಂತ್ರಜ್ಞಾನ

National Technology Day ಪೋಖ್ರಾನ್‌ ಅಣು ಪರೀಕ್ಷೆ ಯಶಸ್ವಿಯಾಗಿ ನಡೆದ ಹೆಮ್ಮೆಯ ದಿನ

ಪೋಖ್ರಾನ್‌ ಪರಮಾಣು ಪರೀಕ್ಷೆ ಮೂಲಕ ಭಾರತ ಪರಮಾಣು ಶಕ್ತ ರಾಷ್ಟ್ರವಾಗಿ ಹೊರಹೊಮ್ಮಿದ ಹೆಮ್ಮೆಯ ದಿನವಾದ 1998ರ ಮೇ 11 ಅಂದಿನಿಂದಲೇ ರಾಷ್ಟ್ರೀಯ ತಂತ್ರಜ್ಞಾನ ದಿನ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಅದ್ವಿತೀಯ ಸಾಧನೆಯ ಮಹತ್ವದ ಮೈಲುಗಲ್ಲು ಎಂದು ಗುರುತಿಸಲ್ಪಟ್ಟಿರುವುದು 1998ರ ಮೇ 11ರಂದು ನಡೆದ ಪೋಖ್ರಾನ್‌-2 ಪರಮಾಣು ಸ್ಫೋಟ. ಇದು ಜಗತ್ತಿನ ಬಲಿಷ್ಠ ರಾಷ್ಟ್ರಗಳ ಮುಂದೆ ತಲೆ ಎತ್ತಿ ನಿಲ್ಲುವಂತೆ ಮಾಡಿದ ಮತ್ತು ಭವಿಷ್ಯದಲ್ಲಿ ಭಾರತ ಸೂಪರ್‌ ಪವರ್‌ ರಾಷ್ಟ್ರವಾಗಿ ಎದ್ದು ನಿಲ್ಲಲಿದೆ ಎಂಬ ಭರವಸೆ ಮೂಡಿಸಿದ ದಿನ.

ಆ ದಿನವನ್ನು ರಾಷ್ಟ್ರೀಯ ತಂತ್ರಜ್ಞಾನ ದಿನ-National Technology Day ಎಂದು ಹೆಮ್ಮೆಯಿಂದ ಆಚರಿಸಲಾಗುತ್ತಿದೆ. ಪೋಖ್ರಾನ್‌ ಅಣು ಸ್ಫೋಟ ನಡೆದಾಗ ಪ್ರಧಾನ ಮಂತ್ರಿಗಳಾಗಿದ್ದ ಅಟಲ್‌ ಬಿಹಾರಿ ವಾಜಪೇಯಿ ಅವರು ಅಧಿಕೃತವಾಗಿ ಈ ದಿನವನ್ನು ರಾಷ್ಟ್ರೀಯ ತಂತ್ರಜ್ಞಾನ ದಿನವಾಗಿ ಘೋಷಿಸಿದ್ದರು.

1974ರ ಮೇ 18ರಂದು ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಕಾಲದಲ್ಲಿ ಪೋಖ್ರಾನ್‌ನಲ್ಲಿ ಮೊದಲ ಪರಮಾಣು ಪರೀಕ್ಷೆ ನಡೆದಿತ್ತು. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೂ ಒಂದು ದೊಡ್ಡ ಹೆಜ್ಜೆ. ಭಾರತ ತಂತ್ರಜ್ಞಾನ ಕ್ಷೇತ್ರದಲ್ಲಿ ನಿರಂತರ ಪ್ರಗತಿಯನ್ನು ಕಾಣುತ್ತಿರುವ ಹೊತ್ತಿನಲ್ಲಿ ಇದಕ್ಕೆಲ್ಲ ಕಾರಣರಾದ ವಿಜ್ಞಾನಿಗಳು, ಎಂಜಿನಿಯರ್‌ಗಳು, ತಂತ್ರಜ್ಞರನ್ನು ನೆನಪಿಸಿಕೊಂಡು ಭಾರತದ ಪ್ರಗತಿಗೆ ಹೆಮ್ಮೆ ಪಡುವ ದಿನ ಮೇ 11.

ಪೋಖ್ರಾನ್‌ನಲ್ಲಿ ಅಂದು ಏನಾಗಿತ್ತು?
ಅದು ಪರಮಾಣು ಪರೀಕ್ಷೆಗೆ ಜಗತ್ತಿನ ಬಲಿಷ್ಠ ರಾಷ್ಟ್ರಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದ ದಿನಗಳು. ಕೆಲವೇ ರಾಷ್ಟ್ರಗಳು ಅಣ್ವಸ್ತ್ರ ಹಿಡಿದು ಬೆದರಿಸುತ್ತಿದ್ದ ಕಾಲ. ಇಂಥ ಹೊತ್ತಿನಲ್ಲಿ ಭಾರತ ತಾನೂ ಪರಮಾಣು ಪರೀಕ್ಷೆ ನಡೆಸಬೇಕೆಂದು ನಿರ್ಧರಿಸಿತು. ಆದರೆ, ಈ ಪ್ಲ್ಯಾನ್‌ ಬಹಿರಂಗಗೊಂಡರೆ ತೀವ್ರ ವಿರೋಧ ವ್ಯಕ್ತವಾಗಬಹುದು ಎಂಬ ಕಾರಣಕ್ಕೆ ಇದನ್ನು ಅತ್ಯಂತ ಗೌಪ್ಯವಾಗಿ ನಡೆಸಲು ನಿರ್ಧರಿಸಲಾಯಿತು. ಅದಕ್ಕಾಗಿ ನಿಗದಿಯಾಗಿದ್ದು 1974ರಲ್ಲಿ ಪರಮಾಣು ಪರೀಕ್ಷೆ ನಡೆದಿದ್ದ ರಾಜಸ್ಥಾನದ ಅದೇ ಪೋಖ್ರಾನ್‌ನ್ನು. ನೇತೃತ್ವ ವಹಿಸಿದವರು ಮುಂದೆ ಭಾರತದ ರಾಷ್ಟ್ರಪತಿಗಳಾಗಿ ಅಧಿಕಾರ ನಿರ್ವಹಿಸಿದ ಜಗತ್ತು ಕಂಡ ಶ್ರೇಷ್ಠ ವಿಜ್ಞಾನಿಗಳಲ್ಲಿ ಒಬ್ಬರಾದ ʻಮಿಸೈಲ್‌ ಮ್ಯಾನ್‌ʼ ಡಾ. ಎಪಿಜೆ ಅಬ್ದುಲ್‌ ಕಲಾಂ.

ಈ ಕಾರ್ಯಾಚರಣೆ ಎಷ್ಟೊಂದು ನಿಗೂಢವಾಗಿ ನಡೆಯಿತು ಎಂದರೆ ಆವತ್ತು ಬೆಳಗ್ಗೆ ಪರೀಕ್ಷೆ ನಡೆಯುವವರೆಗೆ ಜಾಗತಿಕ ಪರಮಾಣು ಶಕ್ತ ರಾಷ್ಟ್ರಗಳಿಗೆ ಅದರ ಸಣ್ಣ ಸುಳಿವೇ ಇರಲಿಲ್ಲ. ಹೆಚ್ಚೇನು ತಂಡದಲ್ಲಿದ್ದ ಕೆಲವು ಸಿಬ್ಬಂದಿಗಳಿಗೂ ನಿಜಕ್ಕೂ ಇಲ್ಲಿ ನಡೆಯುತ್ತಿರುವುದೇನು ಎನ್ನುವುದರ ಅರಿವು ಇರಲಿಲ್ಲ. ಆವತ್ತು ಒಂದರ ಬೆನ್ನಿಗೆ ಒಂದರಂತೆ ಐದು ಪರೀಕ್ಷೆಗಳು ನಡೆದು ಅಟಲ್‌ ಬಿಹಾರಿ ವಾಜಪೇಯಿ ಅವರು ಭಾರತವನ್ನು ಪರಮಾಣು ಶಕ್ತ ರಾಷ್ಟ್ರವಾಗಿ ಘೋಷಿಸಿದರು.

2022ರ ಥೀಮ್‌ ಏನು?
ಸಹನೀಯ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಸಂಯೋಜಿತ ಪರಿಕ್ರಮ- ಇದು 2022ರ ರಾಷ್ಟ್ರೀಯ ತಂತ್ರಜ್ಞಾನ ದಿನದ ಧ್ಯೇಯ ವಾಕ್ಯ. ಅಂದರೆ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ದೇಶದ ಅಭಿವೃದ್ಧಿಗೆ ಅದ್ಭುತವಾಗಿ ಬಳಸಿಕೊಳ್ಳುವಂತೆಯೇ ಅದು ಸಹನೀಯವಾಗಿ ನೋಡಿಕೊಳ್ಳುವ ಜವಾಬ್ದಾರಿಯನ್ನೂ ಈ ಧ್ಯೇಯವಾಕ್ಯ ನೆನಪಿಸುತ್ತದೆ.

ಪ್ರಧಾನಿ ಮೋದಿ ಅಭಿನಂದನೆ
ʻʻಇವತ್ತು ರಾಷ್ಟ್ರೀಯ ತಂತ್ರಜ್ಞಾನ ದಿನ. 1998ರ ಪೋಖ್ರಾನ್‌ ಪರಮಾಣು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ ನಮ್ಮ ಶಕ್ತಿಶಾಲಿ, ಬುದ್ಧಿವಂತ ವಿಜ್ಞಾನಿಗಳು ಮತ್ತು ಅವರ ಪ್ರಯತ್ನಗಳಿಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತಿದ್ದೇವೆ. ಅತ್ಯದ್ಭುತ ರಾಜಕೀಯ ಧೈರ್ಯ ಮತ್ತು ಮುತ್ಸದ್ದಿತನ ತೋರಿದ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಅಸಾಮಾನ್ಯ ನಾಯಕತ್ವವನ್ನು ನಾವು ಇಂದು ಹೆಮ್ಮೆಯಿಂದ ನೆನೆಯುತ್ತೇವೆ,ʼʼ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ತಂತ್ರಜ್ಞಾನದಲ್ಲಿ ಭಾರತದ ಸ್ಥಾನಮಾನ
-ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಮುನ್ನುಗ್ಗುತ್ತಿದೆ. ಆದರೂ ಸಾಗಬೇಕಾದ ಹಾದಿ ಬಹಳಷ್ಟು ಇದೆ. ಚಂದ್ರಯಾನ, ಉಪಗ್ರಹಗಳ ಉಡಾವಣೆ ವಿಷಯದಲ್ಲಿ ಭಾರತ ಜಗತ್ತಿನ ಐದು ಅತ್ಯುನ್ನತ ರಾಷ್ಟ್ರಗಳಲ್ಲಿ ಒಂದಾಗಿದೆ.
– ತಂತ್ರಜ್ಞಾನ ಹೂಡಿಕೆ ತಾಣವಾಗಿ ಭಾರತ ಬೆಳೆಯುತ್ತಿದ್ದು, ಒಟ್ಟಾರೆ ಹೂಡಿಕೆಯಲ್ಲಿ ಜಗತ್ತಿನಲ್ಲೇ ಮೂರನೇ ಸ್ಥಾನದಲ್ಲಿದೆ.
– ಜಾಗತಿಕ ಅನ್ವೇಷಣಾ ಸೂಚ್ಯಂಕದಲ್ಲಿ ಭಾರತದ ಈಗಿನ ರಾಂಕಿಂಗ್‌ 48ನೆಯದು.
– ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನ ಕ್ಷೇತ್ರದಲ್ಲಿನಲ್ಲಿ ಹೊಸ ಅನ್ವೇಷಣೆಗಳನ್ನು ನಡೆಸುತ್ತಿರುವ ಅಗ್ರ ದೇಶಗಳ ಪೈಕಿ ಭಾರತ 15ನೇ ಸ್ಥಾನದಲ್ಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

Meta: ಮೆಟಾ ಸಂಸ್ಥೆಯಿಂದ ಮಂಗಳವಾರ ಬೆಂಗಳೂರು ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’(ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮ ಜರುಗಿತು. ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು.

VISTARANEWS.COM


on

Talking Digital Safety for Teens programme by Meta in Bengaluru
Koo

ಬೆಂಗಳೂರು: ಯುವಜನರ ಯೋಗಕ್ಷೇಮದ ಕುರಿತು ಮೆಟಾ (Meta) ಸಂಸ್ಥೆಯಿಂದ ಮಂಗಳವಾರ ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’ (ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು. ಮೆಟಾದ ಪ್ಲಾಟ್ ಫಾರ್ಮ್‌ಗಳನ್ನು ಒಳಗೊಂಡಂತೆ ಹದಿಹರೆಯದ ಮಕ್ಕಳ ಸ್ಮಾರ್ಟ್‌ಫೋನ್‌ ಮತ್ತು ಸಾಧನಗಳ ಬಳಕೆಯನ್ನು ಆತ್ಮವಿಶ್ವಾಸದಿಂದ ನಿರ್ವಹಣೆ ಮಾಡಲು ಸಾಧ್ಯವಾಗುವಂತೆ ಪೋಷಕರನ್ನು ಸಜ್ಜುಗೊಳಿಸುವ ಅನೇಕ ವಿಧಾನಗಳನ್ನು ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

ಕಾರ್ಯಕ್ರಮದಲ್ಲಿ ಹದಿಹರೆಯದ ಮಕ್ಕಳ ಸಾಮಾಜಿಕ ಮಾಧ್ಯಮಗಳ ಬಳಕೆ ಮತ್ತು ಇತರ ಆನ್‌ಲೈನ್ ಟ್ರೆಂಡ್‌ಗಳ ಬಳಕೆ ಕುರಿತು ಪೋಷಕರು ಮತ್ತು ಶಿಕ್ಷಕರ ಒಳನೋಟಗಳನ್ನು ಈ ವೇಳೆ ಸಂಗ್ರಹಿಸಲಾಯಿತು. ಡಿಜಿಟಲ್ ಸುರಕ್ಷತಾ ಉಪಕ್ರಮಗಳ ಕುರಿತು ಹೆಚ್ಚು ತಿಳಿದುಕೊಳ್ಳಲು ಮತ್ತು ಅವರ ಹದಿಹರೆಯದ ಮಕ್ಕಳ ಸಾಮಾಜಿಕ ಜಾಲತಾಣಗಳ ಪ್ರಯಾಣದ ಅನುಭವಗಳ ಕುರಿತು ಚರ್ಚಿಸಲು ನಗರದ ಆಯ್ದ 10-15 ಶಾಲೆಗಳ ಆಯ್ದ ಶಿಕ್ಷಕರು ಮತ್ತು ಪೋಷಕರು ಪಾಲ್ಗೊಂಡಿದ್ದರು.

ಈ ವೇಳೆ ಇನ್‌ಸ್ಟಾಗ್ರಾಮ್‌ನ ಭಾರತದ ಸಾರ್ವಜನಿಕ ನೀತಿಯ ನಿರ್ದೇಶಕಿ ನತಾಶಾ ಜೋಗ್ ಮಾತನಾಡಿ, ನಮ್ಮ ಯುವ ಬಳಕೆದಾರರು ಆನ್‌ಲೈನ್‌ನಲ್ಲಿ ಅರ್ಥಪೂರ್ಣವಾಗಿ ಸಮಯವನ್ನು ಕಳೆಯುವುದರ ಜತೆಗೆ ವಿಶೇಷವಾಗಿ ಅವರು ಇಷ್ಟಪಡುವ ಎಲ್ಲಾ ಕೆಲಸಗಳನ್ನು ಮಾಡುತ್ತಲೇ ಸುರಕ್ಷಿತವಾಗಿರುವ ಅಗತ್ಯವನ್ನು ನಾವು ಗಮನಿಸಿದ್ದೇವೆ.

ಭಾರತದಾದ್ಯಂತ ಈ ಚರ್ಚಾ ಸರಣಿಯ ಮೂಲಕ ನಾವು ಶಿಕ್ಷಕರೊಂದಿಗೆ ಸಂವಹನ ನಡೆಸುತ್ತಲೇ, ಕುಟುಂಬದ ಆನ್‌ಲೈನ್ ಅಭ್ಯಾಸಗಳನ್ನು ನಿರ್ವಹಿಸಲು ಪೋಷಕರನ್ನು ಸಜ್ಜುಗೊಳಿಸುವ ದಾರಿಗಳನ್ನು ಹುಡುಕುತ್ತಿದ್ದೇವೆ. ಆ ಮೂಲಕ ಅವರ ಪಾಲಿಗೆ ಉತ್ತಮ ಎನಿಸುವ ರಕ್ಷಣಾ ವಿಧಾನ ಒದಗಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಬಳಕೆದಾರರ ಸುರಕ್ಷತಾ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಮೆಟಾ ಕಳೆದ ವರ್ಷ ‘ಡಿಜಿಟಲ್ ಸುರಕ್ಷಾ ಶೃಂಗಸಭೆ’ ಅನ್ನು ನಡೆಸಿತ್ತು. ಆ ಮೂಲಕ ಯುವಜನತೆ ಮತ್ತು ಮಹಿಳೆಯರಿಗೆ ಸುರಕ್ಷಿತ ಮತ್ತು ಸಮತೋಲಿತ ಆನ್‌ಲೈನ್ ಅನುಭವವನ್ನು ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಇದರ ಜತೆಗೆ ಮೆಟಾ, ಆನ್‌ಲೈನ್ ಸುರಕ್ಷತೆ ಮತ್ತು ಡಿಜಿಟಲ್ ಪೌರತ್ವ ಕುರಿತು ಮಾಹಿತಿ, ಜ್ಞಾನ ಮತ್ತು ಶಿಕ್ಷಣದ ಬಗ್ಗೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಸಬಲೀಕರಣಗೊಳಿಸಲು ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ (ಐಟಿಬಿಟಿ) ಇಲಾಖೆಯೊಂದಿಗೆ ಎರಡು ವರ್ಷಗಳ ಪಾಲುದಾರಿಕೆಯನ್ನು ಪ್ರಕಟಿಸಿದೆ.

ಕಳೆದ ಮೂರು ವರ್ಷಗಳಲ್ಲಿ, ಆನ್‌ಲೈನ್ ಸುರಕ್ಷತೆಯನ್ನು ಉತ್ತೇಜಿಸಲು ಮೆಟಾ 50ಕ್ಕೂ ಹೆಚ್ಚು ಸುರಕ್ಷತಾ ಪರಿಕರಗಳು ಮತ್ತು ಫೀಚರ್‌ಗಳನ್ನು ಬಿಡುಗಡೆ ಮಾಡಿದೆ. ಹದಿಹರೆಯದವರ ಸುರಕ್ಷತೆಗಾಗಿ ‘ನೈಟ್ ನಡ್ಜಸ್’ ಎಂಬ ಫೀಚರನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಇದು ತಡರಾತ್ರಿಯಲ್ಲಿ ಇನ್ ಸ್ಟಾಗ್ರಾಮ್ ಆಪ್ ಬಳಸುವಾಗ ಆ ಆಪ್ ಅನ್ನು ಷಟ್‌ಡೌನ್ ಮಾಡಲು ಬಳಕೆದಾರರಿಗೆ ಸೂಚಿಸುತ್ತದೆ. ಜತೆಗೆ ‘ಕ್ವೈಟ್ ಮೋಡ್’ ಫೀಚರ್ ಕೂಡ ಇದ್ದು, ಇದು ಹದಿಹರೆಯದ ಬಳಕೆದಾರರಿಗೆ ತಾವು ಆಪ್‌ನಲ್ಲಿ ಕಳೆಯುವ ಸಮಯದ ಮೇಲೆ ಮತ್ತು ಅವರು ಏನು ನೋಡುತ್ತಾರೆ ಎಂಬುದರ ಮೇಲೆ ಹೆಚ್ಚಿನ ನಿಯಂತ್ರಣವನ್ನು ಹೊಂದಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

ಇದಲ್ಲದೆ, ಇನ್ಸ್ಟಾಗ್ರಾಮ್‌ನ ಪೇರೆಂಟಲ್ ಸೂಪರ್ ವಿಷನ್ ಫೀಚರ್ (ಪೋಷಕರ ಮೇಲ್ವಿಚಾರಣಾ ವೈಶಿಷ್ಟ್ಯ) ಮೂಲಕ ಪೋಷಕರು ತಮ್ಮ ಮಕ್ಕಳು ಫಾಲೋ ಮಾಡುವ ಖಾತೆಗಳು, ಅವರ ಮಕ್ಕಳನ್ನು ಫಾಲೋ ಮಾಡುವ ಖಾತೆಗಳನ್ನು ವೀಕ್ಷಿಸಬಹುದು ಮತ್ತು ಅವರ ಆನ್‌ಲೈನ್ ಬಳಕೆಯಲ್ಲಿ ತಮ್ಮನ್ನೂ ಹೆಚ್ಚು ತೊಡಗಿಸಿಕೊಳ್ಳಬಹುದು. ಮೆಟಾದ ‘ಫ್ಯಾಮಿಲಿ ಸೆಂಟರ್’ ಫೀಚರ್ ಪ್ಲಾಟ್‌ಫಾರ್ಮ್‌ಗಳನ್ನು ಸುರಕ್ಷಿತವಾಗಿ ಬಳಸುವುದು ಹೇಗೆ ಎಂಬ ಮಾಹಿತಿಯನ್ನು ಹುಡುಕಲು ಪೋಷಕರು ಮತ್ತು ಹದಿಹರೆಯದವರಿಗೆ ಸಹ ಮಾಹಿತಿ ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

2024 Bajaj Pulsar F250 : ಬೆಲೆ ಏರಿಕೆ ಮಾಡದೇ ಹೊಸ ಪಲ್ಸರ್​ 250 ರಸ್ತೆಗಿಳಿಸಲಿದೆ ಬಜಾಜ್​​

2024 Bajaj Pulsar F250: ಹಲವಾರು ಅಪ್​ಡೇಟ್​ಗಳೊಂದಿಗೆ ಎಫ್​250 ಪಲ್ಸರ್​ ರಸ್ತೆಗೆ ಇಳಿದಿದೆ. ಸ್ಟ್ರೀಟ್ ನೇಕೆಡ್ ಎನ್​ 250ಯಷ್ಟು ಅಪ್​ಡೇಟ್ ಪಡೆದಿಲ್ಲವಾದರೂ ಪಲ್ಸರ್ ಎಫ್ 250 ಬೈಕಿನಲ್ಲಿ ಗಮನಾರ್ಹ ಬದಲಾವಣೆ ಮಾಡಲಾಗಿದೆ. ಎಲ್ಲಾ ಪಲ್ಸರ್ ಗಳಲ್ಲಿ ಕಂಡುಬರುವ ಹೊಸ ಸಂಪೂರ್ಣ ಡಿಜಿಟಲ್ ಇನ್​ಸ್ಟ್ರುಮೆಂಟ್​ ಕ್ಲಸ್ಟರ್ ದೊಡ್ಡ ಬದಲಾವಣೆಯಾಗಿದೆ.

VISTARANEWS.COM


on

2024 Bajaj Pulsar F250
Koo

ಬೆಂಗಳೂರು: ಭಾರತದ ಜನಪ್ರಿಯ ಹಾಗೂ ಜನಸ್ನೇಹಿ ಕಂಪನಿಯಾಗಿರುವ ಬಜಾಜ್ ಆಟೋ ತನ್ನ ಸಂಪೂರ್ಣ ಪಲ್ಸರ್ ವೇರಿಯೆಂಟ್​ಗಳನ್ನು ಅಪ್​ಗ್ರೇಡ್​ ಮಾಡುವ ಪ್ರಕ್ರಿಯೆಯಲ್ಲಿದೆ. ಈ ತಿಂಗಳ ಆರಂಭದಲ್ಲಿ ಕಂಪನಿಯು ತನ್ನ ಅತಿದೊಡ್ಡ ಪಲ್ಸರ್ ಬೈಕ್​​ ಎನ್ ಎಸ್ 400 ಝಡ್ ಅನ್ನು ಬಿಡುಗಡೆ ಮಾಡಿತ್ತು. ಇದರ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.1.85 ಲಕ್ಷಗಳಾಗಿತ್ತು. ಅದಕ್ಕಿಂತ ಹಿಂದಿನ ತಿಂಗಳು ಅಪ್​ಡೇಟೆಡ್​​ ಪಲ್ಸರ್ ಎನ್ 250 ಬೈಕ್ ಅನಾವರಣ ಮಾಡಿತ್ತು. ಇದೀಗ ಅದರ ಜತೆಗಾರ ಎಫ್​ 250 ಬೈಕ್​ (2024 Bajaj Pulsar F250) ಅನ್ನು ಬಜಾಜ್ ಕಂಪನಿಗೆ ಮಾರುಕಟ್ಟೆಗೆ ಇಳಿಸಿದೆ.

ಈ ಮೂಲಕ ಬಜಾಜ್​​ ಕಂಪನಿಯು ಪಲ್ಸರ್​ ಬೈಕ್​ಗಳಿಗೆ ಬೇಡಿಕೆ ಕಡಿಮೆಯಾಗುತ್ತಿದೆ ಎಂಬ ವ್ಯಾಖ್ಯಾನ ಸುಳ್ಳು ಎಂದು ಹೇಳಿದೆ. ಪಲ್ಸರ್​ನ ನಾನಾ ವೇರಿಯೆಂಟ್​ಗಳ ಉತ್ಪಾದನೆಯು ಸೀಮಿತ ರೂಪದಲ್ಲಿ ಮುಂದುವರಿಯುತ್ತದೆ ಎಂದು ಬಜಾಜ್ ಹೇಳಿಕೊಂಡಿದೆ. ಅಂತೆಯೇ ಹಲವಾರು ಅಪ್​ಡೇಟ್​ಗಳೊಂದಿಗೆ ಎಫ್​250 ಪಲ್ಸರ್​ ರಸ್ತೆಗೆ ಇಳಿದಿದೆ. ಸ್ಟ್ರೀಟ್ ನೇಕೆಡ್ ಎನ್​ 250ಯಷ್ಟು ಅಪ್​ಡೇಟ್ ಪಡೆದಿಲ್ಲವಾದರೂ ಪಲ್ಸರ್ ಎಫ್ 250 ಬೈಕಿನಲ್ಲಿ ಗಮನಾರ್ಹ ಬದಲಾವಣೆ ಮಾಡಲಾಗಿದೆ. ಎಲ್ಲಾ ಪಲ್ಸರ್ ಗಳಲ್ಲಿ ಕಂಡುಬರುವ ಹೊಸ ಸಂಪೂರ್ಣ ಡಿಜಿಟಲ್ ಇನ್​ಸ್ಟ್ರುಮೆಂಟ್​ ಕ್ಲಸ್ಟರ್ ದೊಡ್ಡ ಬದಲಾವಣೆಯಾಗಿದೆ.

ಈ ಯೂನಿಟ್​​ ಫೋನ್​ ಕಾಲ್​​ ಮತ್ತು ಟೆಕ್ಟ್​​ ಅಲರ್ಟ್​ಗಳಿಗಾಗಿ ಬ್ಲೂಟೂತ್ ಸಂಪರ್ಕ ಮತ್ತು ಬಜಾಜ್ ರೈಡ್ ಕನೆಕ್ಟ್ ಅಪ್ಲಿಕೇಶನ್ ಮೂಲಕ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ನೊಂದಿಗೆ ಬರುತ್ತದೆ. ಕನ್ಸೋಲ್ ಮೆನುವಿನ ಮೂಲಕ ಟಾಗಲ್ ಮಾಡಲು ಇದು ಪರಿಷ್ಕೃತ ಸ್ವಿಚ್ ಗೇರ್ ಅನ್ನೂ ನೀಡಲಾಗಿದೆ. ಇದು ರೇನ್, ರೋಡ್ ಮತ್ತು ಸ್ಪೋರ್ಟ್ ಎಂಬ ಮೂರು ಎಬಿಎಸ್ ಮೋಡ್ ಗಳನ್ನು ಪಡೆದುಕೊಂಡಿದೆ.

ಹಾರ್ಡ್​ವೇರ್ ಬದಲಾವಣೆ ಏನು?

ಪಲ್ಸರ್ ಎಫ್ 250 ಬೈಕ್ ಮುಂಭಾಗ ಮತ್ತು ಹಿಂಭಾಗದಲ್ಲಿ ಹೊಸ ಪೆಟಲ್ ಡಿಸ್ಕ್ ಬ್ರೇಕ್ ಗಳ ರೂಪದಲ್ಲಿ ಕೆಲವು ಹಾರ್ಡ್ ವೇರ್ ಬದಲಾವಣೆಗಳನ್ನು ಮಾಡಲಾಗಿದೆ. ಆದರೂ ಡಿಸ್ಕ್ ಗಳ ಗಾತ್ರಗಳು ಕ್ರಮವಾಗಿ 300 ಎಂಎಂ ಮತ್ತು 230 ಎಂಎಂ ನಷ್ಟೇ ಇದೆ. ಎನ್ 250 ನಂತೆಯೇ, ನವೀಕರಿಸಿದ ಪಲ್ಸರ್ ಎಫ್ 250 110-ಸೆಕ್ಷನ್ ಮುಂಭಾಗ ಮತ್ತು 140-ಸೆಕ್ಷನ್ ಹಿಂಭಾಗದ ಟೈರ್ ಸೆಟಪ್ ಅನ್ನು ಪಡೆದಿದೆ. ಹಿಂದಿನ ಮಾದರಿಯ 110-ಸೆಕ್ಷನ್ ಮುಂಭಾಗ ಮತ್ತು 130-ಸೆಕ್ಷನ್ ಹಿಂಭಾಗದ ಸೆಟಪ್ ಹೊಂದಿತ್ತು. ಇಲ್ಲಿ ಸಣ್ಣ ಬದಲಾವಣೆಯಾಗಿದೆ.

2024ರ ಬಜಾಜ್ ಪಲ್ಸರ್ ಎಫ್250 ಬೈಕ್​ನಲ್ಲಿ ಏನಿಲ್ಲ?

ಮೂಲ ವಿನ್ಯಾಸವು ಅದರ ಹಿಂದಿನ ಬೈಕ್​ನಂತೆಯೇ ಉಳಿದಿದೆ, ಅರೆ-ಫೇರ್ಡ್ ಸ್ಟೈಲಿಂಗ್, ಆಕ್ರಮಣಕಾರಿ ವಿ-ಆಕಾರದ ಎಲ್ಇಡಿ ಹೆಡ್ ಲ್ಯಾಂಪ್ ಕ್ಲಸ್ಟರ್, ಸ್ಪ್ಲಿಟ್-ಸೀಟ್ ಗಳು, ಸ್ಟೂಬಿ ಟ್ವಿನ್-ಬ್ಯಾರೆಲ್ ಎಕ್ಸಾಸ್ಟ್ ಮಫ್ಲರ್ ಮತ್ತು ಕ್ಲಿಪ್-ಆನ್ ಹ್ಯಾಂಡಲ್ ಬಾರ್ ನೀಡಲಾಘಿದೆ ಬಜಾಜ್ ಪಲ್ಸರ್ ಎಫ್ 250 ಬೈಕಿನೊಂದಿಗೆ ಕೆಂಪು ಮತ್ತು ಕಪ್ಪು ಎಂಬ ಎರಡು ಬಣ್ಣಗಳ ಆಯ್ಕೆಗಳನ್ನು ನೀಡುವ ನಿರಿಕ್ಷೆಯಿದೆ.

ಪಲ್ಸರ್ ಎನ್ 250 ರೀತಿ , ಎಫ್ 250 ಚಿನ್ನದ ಬಣ್ಣದ ತಲೆಕೆಳಗಾಗಿರುವ ಮುಂಭಾಗದ ಫೋರ್ಕ್ ಗಳನ್ನು ಪಡೆದಿಲ್ಲ. ಹಿಂಭಾಗದ ಸಸ್ಪೆಂಷನ್ ಮೊನೊ-ಶಾಕ್ ಆಗಿದೆ ಎರಡೂ ತುದಿಗಳಲ್ಲಿ 17-ಇಂಚಿನ ವ್ಹೀಲ್ ಸೆಟಪ್ ಮತ್ತು ಅದರ ವಿನ್ಯಾಸವು ಒಂದೇ ಆಗಿದೆ. ನವೀಕರಿಸಿದ ಪಲ್ಸರ್ ಎನ್ 250 ನಲ್ಲಿ ಕಂಡುಬರುವಂತೆ ಇದು ‘250’ ಬಾಡಿ ಗ್ರಾಫಿಕ್ಸ್ ಹೊಂದಿಲ್ಲ.

ಇದನ್ನೂ ಓದಿ: Used Car Sale : ನಿಮ್ಮ ಕಾರನ್ನು ಜಾಸ್ತಿ ಬೆಲೆಗೆ ಮಾರಬೇಕೇ? ಈ ಕೆಲವು ತಂತ್ರಗಳನ್ನು ಅನುಸರಿಸಿ

ಎಂಜಿನ್ ಪವರ್​ ಏನು?

ಪಲ್ಸರ್ ಎಫ್250 ಬೈಕ್ 249.07 ಸಿಸಿ ಆಯಿಲ್ ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದಿಂದ 8,750 ಆರ್ ಪಿಎಂನಲ್ಲಿ 24.1 ಬಿಹೆಚ್ ಪಿ ಪವರ್ ಮತ್ತು 6,500 ಆರ್ ಪಿಎಂನಲ್ಲಿ 21.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5 ಸ್ಪೀಡ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

2024 ಬಜಾಜ್ ಪಲ್ಸರ್ ಎಫ್250 ಬೆಲೆ ಎಷ್ಟು?

ನವೀಕರಿಸಿದ ಪಲ್ಸರ್ ಎಫ್ 250 ಬಿಡುಗಡೆಯನ್ನು ಬಜಾಜ್ ಅಧಿಕೃತವಾಗಿ ಘೋಷಿಸಿಲ್ಲ. ಹೀಗಾಗಿ ಬೆಲೆ ಬಗ್ಗೆ ಮಾಹಿತಿ ಇಲ್ಲ. ಬಜಾಜ್ ವೆಬ್ಸೈಟ್ನಲ್ಲಿ ಅಧಿಕೃತ ಬೆಲೆಯನ್ನು ಇನ್ನೂ ಉಲ್ಲೇಖಿಸಲಾಗಿಲ್ಲ. ಆದರೆ, ಬಜಾಜ್​ ಕಂಪನಿಯ ಮೂಲಗಳ ಪ್ರಕಾರ ರೂ.1.51 ಲಕ್ಷ (ಎಕ್ಸ್ ಶೋರೂಂ) ರೂಪಾಯಿಗೆ ಸಿಗುತ್ತದೆ. ಹೀಗಾಗಿ ಬೆಲೆಯಲ್ಲಿ ಹಿಂದಿನ ಆವೃತ್ತಿಗಿಂತ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ.

Continue Reading

ಪ್ರಮುಖ ಸುದ್ದಿ

Used Car Sale : ನಿಮ್ಮ ಕಾರನ್ನು ಜಾಸ್ತಿ ಬೆಲೆಗೆ ಮಾರಬೇಕೇ? ಈ ಕೆಲವು ತಂತ್ರಗಳನ್ನು ಅನುಸರಿಸಿ

Used Car Sale : ಕಾರು ಡೀಲರ್​ಗಳು ಅಥವಾ ಬ್ರೋಕರ್​ಗಳು ಬೇಡ ಎಂದು ಅಂದು ತಕ್ಷಣ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಯಾಕೆಂದರೆ ಕಾರಿಗೆ ಹೆಚ್ಚು ಬೆಲೆ ಸಿಗುತ್ತದೆ ಹಾಗೂ ಹೆಚ್ಚು ಲಾಭ ನಿಮ್ಮದಾಗುತ್ತದೆ. ಹೀಗಾಗಿ ಮಾರುವ ಮೊದಲು ಕೆಲವೊಂದು ಯೋಜನೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ.

VISTARANEWS.COM


on

Used Car Sale
Koo

ಬೆಂಗಳೂರು: ಕಷ್ಟಕಾಲಕ್ಕೊ ಅಥವಾ ಹೊಸ ಕಾರನ್ನು ತೆಗೆದುಕೊಳ್ಳುವುದಕ್ಕೊ ಹಳೆ ಕಾರನ್ನು (Used Car Sale) ಮಾರಬೇಕಾಗುತ್ತದೆ. ಮೊದಲ ನೋಟಕ್ಕೆ ಅದು ಸುಲಭ ಎನಿಸಬಹುದು. ‘ಮಾರಿದ್ರೆ ಆಯ್ತು’ ಎಂದು ಹೇಳಬಹುದು. ಆದರೆ ಅದು ಅಷ್ಟೊಂದು ಸುಲಭವಲ್ಲ. ನೀವು ಮಾರಲು ನಿರ್ಧರಿಸಿದ ತಕ್ಷಣ ಅಂದುಕೊಳ್ಳುವಷ್ಟು ಬೆಲೆಯು ಸಿಗುವುದೇ ಇಲ್ಲ. ಕಾರು ಕೊಡಲು ಮುಂದಾದಾಗ ಕಡಿಮೆ ಬೆಲೆಗೆ ಕೇಳುವವರೇ ಹೆಚ್ಚು. ಹೀಗಾಗಿ ಸಾಕಷ್ಟು ಲಾಸ್ ಆಗಬಹುದು. ಅದೂ ಅಲ್ಲದಿದ್ದರೆ ಸೆಕೆಂಡ್ ಹ್ಯಾಂಡ್ ಕಾರು ಡೀಲರ್​ಗಳ ಬಳಿಗೆ ಹೋಗಬೇಕು. ಅವರು ಕೂಡ ತಮ್ಮ ಲಾಭಾಂಶವನನ್ನು ಇಟ್ಟುಕೊಂಡೇ ಖರೀದಿ ಮಾಡುತ್ತದೆ. ಆ ರೀತಿ ಆಗಬಾರದು ಎಂದಾರೆ ಸ್ವಲ್ಪ ಯೋಚನೆ ಮಾಡಿಕೊಂಡು ಕಾರನ್ನು ಮಾರಲು ಮುಂದಾಗಬೇಕು. ಅದಕ್ಕೆ ಬೇಕಾಗಿರುವ ಕೆಲವೊಂದು ತಂತ್ರಗಳನ್ನು ಇಲ್ಲಿ ನೀಡಲಾಗಿದೆ.

ಏನು ಮಾಡಬೇಕು

ಕಾರು ಡೀಲರ್​ಗಳು ಅಥವಾ ಬ್ರೋಕರ್​ಗಳು ಬೇಡ ಎಂದು ಅಂದು ತಕ್ಷಣ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಯಾಕೆಂದರೆ ಕಾರಿಗೆ ಹೆಚ್ಚು ಬೆಲೆ ಸಿಗುತ್ತದೆ ಹಾಗೂ ಹೆಚ್ಚು ಲಾಭ ನಿಮ್ಮದಾಗುತ್ತದೆ. ಹೀಗಾಗಿ ಮಾರುವ ಮೊದಲು ಕೆಲವೊಂದು ಸಿದ್ಧತೆಗಳನ್ನು ಮಾಡಬೇಕಾಗುತ್ತದೆ. ಮೊದಲಾಗಿ ಮಾನಸಿಕವಾಗಿ ಸಂಪೂರ್ಣವಾಗಿ ಸಿದ್ಧಗೊಳ್ಳಬೇಕು. ಇಂತಿಷ್ಟು ಬೆಲೆ ಸಿಕ್ಕರೆ ಮಾರುವುದು ಖಚಿತ. ಇಲ್ಲವಾದರೆ ಇಲ್ಲ. ಇಂಥವರಿಗಷ್ಟೇ ಮಾರುವೆ. ಒಂದು ಬಾರಿಗೆ ಹಣ ಕೊಟ್ಟರಷ್ಟೇ ಮಾರುವೆ ಎಂಬೆಲ್ಲ ಯೋಜನೆಗಳನ್ನು ಹಾಕಿಕೊಂಡಿಬೇಕು.

ಪ್ರಸ್ತುತ ಮಾರುಕಟ್ಟೆ ಬೆಲೆಯನ್ನು ಅರಿತುಕೊಳ್ಳಬೇಕು.

ಇಂಟರ್ನೆಟ್ ನಿಮಗೆ ಲಭ್ಯವಿದ್ದರೆ ನಿಮ್ಮಲ್ಲಿರುವ ಕಾರಿನ ಪ್ರಸ್ತುತ ಅನ್​​ರೋಡ್​ ಪ್ರೈಸ್​ ತಿಳಿದುಕೊಳ್ಳಬೇಕು. ಹೀಗಾಗಿ ಕೆಲವೊಂದು ವರ್ಷಗಳು ಹಳೆಯದಾಗಿರುವ ನಿಮ್ಮ ಕಾರಿಗೆ ಎಷ್ಟು ಬೆಲೆ ಪಡೆಯಬಹುದು ಎಂದು ಅಂದಾಜಿಸಿ. ಕಾರಿನ ಬೆಲೆಯ ಅಂದಾಜು ಮಾಡಲು ಯೂಸ್ಡ್​ ಕಾರು ಮಾರಾಟ ವೆಬ್​ಸೈಟ್​ ಹೋಗಿ ಎಲ್ಲ ಮಾಹಿತಿ ನಮೂದಿಸಿ. ಖರೀದಿ ಮಾಡಿದ ವರ್ಷ, ಓಡಿರುವ ಕಿಲೋಮೀಟರ್​ಗಳು, ಯಾವ ವೇರಿಯೆಂಟ್​ ಎಂಬುದನ್ನೆಲ್ಲ ಹಾಕಿ. ಅಲ್ಲಿ ಕಾಣುವ ಬೆಲೆಗಿಂತ ಸ್ವಲ್ಪ ಜಾಸ್ತಿ ಹೇಳಿ. ಕನಿಷ್ಠ ಬೆಲೆಯ ಮೇಲೆ ಬಫರ್ ದರ ಇಟ್ಟುಕೊಳ್ಳಿ. ಆದರೆ ನೆನಪಿಡಿ, ಜಾಸ್ತಿ ಹೇಳಬೇಡಿ. ಖರೀದಿದಾರನ ಬಳಿಯೂ ಇಂಟರ್ನೆಟ್​ ಇರುತ್ತದೆ. ಚೌಕಾಸಿಯಲ್ಲೇ ಟೈಮ್​ ವೇಸ್ಟ್​ ಮಾಡಬೇಕಾಗುತ್ತದೆ. ಬಳಿಕ ಕಾರಿನ ಮಾಹಿತಿಯೊಂದಿಗೆ ಸೆಕೆಂಡ್​ ಹ್ಯಾಂಡ್​ ಕಾರು ಮಾರಾಟದ ವೆಬ್​ಸೈಟ್​, ಸೋಶಿಯಲ್ ಮೀಡಿಯಾಗಳಲ್ಲಿ ಅಪ್​ಲೋಡ್ ಮಾಡಿ. ಕಾರಿನ ಎಲ್ಲ ಮಾಹಿತಿ ಕೊಟ್ಟು ಹ್ಯಾಕರ್​ಗಳ ಮೋಸಗಾರರ ಕೈಗೆ ಸಿಕ್ಕಿ ಹಾಕಿಕೊಳ್ಳಬೇಡಿ. ಅಗತ್ಯ ಮಾಹಿತಿ ಮಾತ್ರ ಕೊಡಿ. ಹೆಚ್ಚು ಪ್ರತಿಕ್ರಿಯೆಗಳನ್ನು ಬಯಸದಿದ್ದರೆ ಅಥವಾ ಸಿಂಗಲ್​ ಡಿಲ್​ ಎಂದಾದರೆ “ಅತ್ಯುತ್ತಮ ಕೊಡುಗೆ”, “ಅಂತಿಮ ಬೆಲೆ”, “ಮಾತುಕತೆ ಇಲ್ಲ ” ಎಂಬುದನ್ನು ಸ್ಪಷ್ಟಪಡಿಸಿ.

ಎಲ್ಲ ದಾಖಲೆಗಳೂ ಜತೆಗಿರಲಿ

ನಿಮ್ಮ ಕಾರಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಒಟ್ಟಿಗೆ ಇಟ್ಟುಕೊಳ್ಳಿ. “ಎಲ್ಲವೂ” ಎಂದರೆ ಎಲ್ಲವೂ ಇರಬೇಕು. ಮೆಂಟೇನೆನ್ಸ್ ಬಿಲ್, ಸರ್ವಿಸ್​ ದಾಖಲೆಗಳು, ಟೈರ್ ಗಳು, ಬ್ಯಾಟರಿಗಳಿಗೆ ವಾರಂಟಿ ರಸೀದಿಗಳನ್ನು ಜತೆಗೆ ಇಟ್ಟುಕೊಳ್ಳಿ. ಈ ರೀತಿ ಉತ್ತಮವಾಗಿ ನಿರ್ವಹಿಸಲ್ಪಟ್ಟ ದಾಖಲೆಗಳಿಂದಾಗಿ ಹೆಚ್ಚು ಬೆಲೆ ಸಿಗುತ್ತದೆ. ಅಂದರೆ ನಿಮ್ಮ ಕಾರಿನ ಬಗ್ಗೆ ನೀವು ಕಾಳಜಿ ವಹಿಸುತ್ತೀರಿ ಎಂದು ಅರ್ಥ.

ಆನ್​ಲೈನ್​ ಜಾಹೀರಾತು

ನಿಮಗೆ ಅತ್ಯುತ್ತಮ ಡೀಲ್ ಬೇಕಾದರೆ ಆನ್ ಲೈನ್ ಜಾಹೀರಾತು ನೀಡಿ. ಎಷ್ಟು ವೆಬ್​ಸೈಟ್​ಗಳನ್ನು ಎಷ್ಟು ಜನ ನೀಡುತ್ತಾರೆ ಎಂಬ ಮಾಹಿತಿ ಪಡೆಯಿತು. ಅವರಲ್ಲಿ ಕಾರಿನ ಬಗ್ಗೆ ಆಸಕ್ತಿ ಹೊಂದಿರುವವರು ಎಷ್ಟೆಂದು ತಿಳಿದುಕೊಳ್ಳಿ. ಅದರ ಪ್ರಕಾರ ಜಾಹೀರಾತು ನೀಡಿ. ನಿಮ್ಮ ಕಾರು ಮಾರಾಟವಾಗುವವರೆಗೂ ವೆಬ್​ಸೈಟ್​ನಲ್ಲಿ ಅಗತ್ಯ ಮಾಹಿತಿ ಇರಲಿ,

ಕೆಲವು ಸಲಹೆಗಳು ಇಲ್ಲಿವೆ

ಉತ್ತಮ ಫೋಟೋಗಳನ್ನು ಅಪ್ ಲೋಡ್ ಮಾಡಿ. ಚಿತ್ರಗಳನ್ನು ಕ್ಲಿಕ್ ಮಾಡಲು ನಿಮ್ಮ ಮೊಬೈಲ್ ಕ್ಯಾಮೆರಾವನ್ನು ನೀವು ಬಳಸಬಹುದು. ನಿಮ್ಮ ಕಾರಿನ ಫೋಟೊವನ್ನು ಹಗಲು ಹೊತ್ತಿನಲ್ಲಿಯೇ ತೆಗೆಯಿರಿ. ಆದ್ಯತೆಯ ಮೇರೆಗೆ ಮುಂಜಾನೆ ಅಥವಾ ಸಂಜೆ ಫೋಟೋ ತೆಗೆಯುವುದು ಒಳ್ಳೆಯದು.

ಇದನ್ನೂ ಓದಿ: Powerful Bikes : 2.5 ಲಕ್ಷ ರೂ.ಗಿಂತಲೂ ಕಡಿಮೆ ಬೆಲೆಗೆ ಸಿಗ್ತವೆ ಈ 5 ಪವರ್​ಫುಲ್ ಬೈಕ್​ಗಳು

ನಿಮ್ಮ ಕಾರಿನ ಬಗ್ಗೆ ಸಾಧ್ಯವಾದಷ್ಟು ವಿವರಗಳನ್ನು ನೀಡಿ. ಇದು ಸೂಕ್ತ ಖರೀದಿದಾರರನ್ನು ಆಕರ್ಷಿಸುತ್ತದೆ ಮತ್ತು ವೇಗವಾಗಿ ಮಾರಾಟ ಮಾಡಲು ಸಹಾಯ ಮಾಡುತ್ತದೆ.

ಅಲಾಯ್ ಚಕ್ರಗಳು, ಲೆದರ್ ಅಪ್ಹೋಲ್ಸ್ಟರಿ, ಸಿಡಿ-ಚೇಂಜರ್, ಮ್ಯೂಸಿಕ್ ಸಿಸ್ಟಮ್, ಹೊಸ ಟೈರ್​ಗಳು, ಲಭ್ಯವಿರುವ ಸರ್ವಿಸ್​ಗಳು, ವಾರಂಟಿಗಳು ಮುಂತಾದ ಹೆಚ್ಚುವರಿ ಮಾಹಿತಿಯನ್ನು ನಿರ್ದಿಷ್ಟಪಡಿಸಿ.

ವಿಚಾರಣೆಗಳನ್ನು ಸೂಕ್ತ ಕಾಲಕ್ಕೆ ಸ್ವೀಕರಿಸಿ

ಒಮ್ಮೆ ನೀವು ನಿಮ್ಮ ಜಾಹೀರಾತು ಹಾಕಿದ ನಂತರ ನೀವು ಅದರಲ್ಲಿ ನಮೂದಿಸಿದ ಎಲ್ಲ ದಾಖಲೆಯೊಂದಿಗೆ ಸಿದ್ಧರಾಗಿರಿ. ನೀವು ಉಲ್ಲೇಖಿಸಿದ ಎಲ್ಲಾ ಅಂಕಿಅಂಶಗಳು ನೆನಪಿಲ್ಲದಿದ್ದರೆ ಅವುಗಳನ್ನು ಒಂದು ಕಾಗದದ ತುಣುಕಿನ ಮೇಲೆ ಬರೆದಿದೆ. ಖರೀದಿದಾರರು ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ, ಆದ್ದರಿಂದ ಪ್ರತಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಮತ್ತು ಬಹಿರಂಗವಾಗಿ ಉತ್ತರಿಸಲು ಪ್ರಯತ್ನಿಸಿ.

ಅನಗತ್ಯ ಅಪಾಯಿಂಟ್​ಮೆಂಟ್ ಕೊಡಬೇಡಿ. ನಿಮ್ಮ ಸಮಯವನ್ನು ಉಳಿಸಬೇಕಾದರೆ ಫೋನ್ ಮೂಲಕ ಖರೀದಿದಾರರಿಗೆ ಆರಂಭಿಕ ಸ್ಕ್ರೀನಿಂಗ್ ಮಾಡಿ. ನಂತರ ಅಪಾಯಿಂಟ್​ಮೆಂಟ್​ ನಿಗದಿ ಮಾಡಿ. ಖರೀದಿದಾರರನ್ನು ನಿರ್ದಿಷ್ಟ ಸಮಯಕ್ಕೆ ಭೇಟಿಯನ್ನು ಮಾಡಿ. ಇದು ನಿಮ್ಮ ಸಮಯವನ್ನು ವ್ಯರ್ಥ ಮಾಡುವುದಿಲ್ಲ. ನಿಮ್ಮ ಮನೆಗೆ ಬರುವುದು ಬೇಡ ಎಂದಾರೆ ಹೊರಗಡೆ ಅಪಾಯಿಂಟ್​ಮೆಂಟ್ ಫಿಕ್ಸ್​ ಮಾಡಿ.

ಟೆಸ್ಟ್ ಡ್ರೈವ್​ಗೆ ನೇರ ಕೊಡಬೇಡಿ

ಆಸಕ್ತ ಖರೀದಿದಾರರಿಗೆ ನಿಮ್ಮ ಕಾರನ್ನು ತೋರಿಸಿ. ನೀವು ಜತೆಗೆ ಇಲ್ಲದೆ ನಿಮ್ಮ ಕಾರನ್ನು ಟೆಸ್ಟ್ ಡ್ರೈವ್ ಗೆ ತೆಗೆದುಕೊಳ್ಳಲು ಬಿಡಬೇಡಿ. ಖರೀದಿದಾರರ ಚಾಲನಾ ಪರವಾನಗಿ ಪರಿಶೀಲಿಸಿ. ಆತನಿಗೆ ಚಾಲನೆ ಮಾಡಲು ಬಿಡಿ, ಆದರೆ ನೀವು ನ್ಯಾವಿಗೇಟ್ ಮಾಡುತ್ತಿರಬೇಕು. ಖರೀದಿದಾರನು ನೀವು ಕಾರನ್ನು ಕಾಯ್ದಿರಿಸಲು ಬಯಸಿದರೆ ಅಡ್ವಾನ್ಸ್​ ಡೆಪಾಸಿಟ್​ ಕೇಳಿ. ಆತನ ಅಡ್ವಾನ್ಸ್​ ಮುಕ್ತಾಯಗೊಳ್ಳುವ ಸಮಯ ನಿರ್ದಿಷ್ಟಪಡಿಸಿ. ಬೆಲೆಯ ಬಗ್ಗೆ ಮಾತುಕತೆ ನಡೆಸಿ. ಹೆಚ್ಚು ಚೌಕಾಸಿಗೆ ಅವಕಾಶ ನೀಡಬೇಡಿ.

ಮಾರಾಟ ಪ್ರಕ್ರಿಯೆಗಳು

ನೀವು ನಿಮ್ಮ ವಾಹನವನ್ನು ಮಾರಾಟ ಮಾಡಬೇಕಾದರೆ ಕೆಲವು ಕಾಗದಪತ್ರಗಳನ್ನು ಮಾಡಬೇಕಾಗುತ್ತದೆ. ಪಾವತಿಯನ್ನು ನಗದು ಅಥವಾ ಡಿಮ್ಯಾಂಡ್ ಡ್ರಾಫ್ಟ್ ರೂಪದಲ್ಲಿ ಸ್ವೀಕರಿಸಿ. ಚೆಕ್ ಪಾವತಿಯ ಸಂದರ್ಭದಲ್ಲಿ, ಚೆಕ್ ಕ್ಲಿಯರ್ ಆಗುವ ತನಕ ದಾಖಲೆಗಳನ್ನು ವರ್ಗಾಯಿಸಬಾರದು. ಖರೀದಿದಾರ ಸಾಲವನ್ನು ವ್ಯವಸ್ಥೆ ಮಾಡುತ್ತಿದ್ದರೆ, ಫೈನಾನ್ಸ್ ಕಂಪನಿಯ ಡಿಎಸ್ಎ ಸಹಾಯ ಪಡೆಯಿರು. ಅವರು ಎಲ್ಲಾ ಕಾಗದಪತ್ರಗಳ ಮೂಲಕ ನಿಮಗೆ ಮಾರ್ಗದರ್ಶನ ನೀಡುತ್ತಾರೆ. ಅದರಿಂದ ಕಾಗದ ಪತ್ರಗಳ ವರ್ಗಾವಣೆಗೆ ಅನುಕೂಲವಾಗುತ್ತದೆ.

Continue Reading

ಅಂಕಣ

ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

ಸೈಬರ್‌ ಸೇಫ್ಟಿ ಅಂಕಣ: ಮೊಬೈಲನ್ನು ಸರಿಯಾದ ರೀತಿಯಲ್ಲಿ ಬಳಸದಿದ್ದರೆ ಸೈಬರ್ ಜಗತ್ತಿನಲ್ಲಿ ಮಾಲ್‌ವೇರ್, ಫಿಶರ್ ಗಳು, ಅಶ್ಲೀಲ ವೆಬ್‌ಸೈಟ್‌ಗಳು, ಡೇಟಾ ಕಳ್ಳತನ, ಗುರುತಿನ ಕಳ್ಳತನ ಅಥವಾ ಹ್ಯಾಕಿಂಗ್ ಪ್ರಯತ್ನಗಳು, ಮೋಸದ ಯೋಜನೆಗಳು ಮತ್ತಿತರ ವಂಚನೆಗಳಿಗೀಡಾಗುವ ಸಾಧ್ಯತೆಗಳಿವೆ. ಸರಿಯಾದ ಮಾಹಿತಿ ತಿಳಿದುಕೊಂಡು ನಮ್ಮ ದೈನಂದಿನ ಅವಶ್ಯಕತೆಗೆ ಪೂರಕವಾಗಿ, ಜಾಗರೂಕರಾಗಿ ಮೊಬೈಲ್ ಬಳಸುವುದರಿಂದ ಸೈಬರ್ ಅಪರಾಧಗಳಿಗೆ ಬಲಿಯಾಗೋದು ತಪ್ಪುತ್ತದೆ.

VISTARANEWS.COM


on

ಸೈಬರ್‌ ಸೇಫ್ಟಿ cyber safety rules
Koo
cyber-safty-logo

ಸೈಬರ್‌ ಸೇಫ್ಟಿ ಅಂಕಣ: ಇತ್ತೀಚಿನ ವರದಿಯ ಪ್ರಕಾರ ಭಾರತದಲ್ಲಿ ಒಟ್ಟು 1.12 ಬಿಲಿಯನ್‌ ಮೊಬೈಲ್‌ ಸಂಪರ್ಕಗಳು (mobile connections) ಸಕ್ರಿಯವಾಗಿವೆಯಂತೆ. ಅದರಲ್ಲಿ ಶೇಕಡ 68.4ರಷ್ಟು ಅಂದರೆ 974.69 ಮಿಲಿಯನ್‌ ಸ್ಮಾರ್ಟ್‌ ಫೋನ್‌ (Smartphone) ಬಳಕೆದಾರರು. ಇಷ್ಟೆಲ್ಲಾ ಜನರು ದಿನ ನಿತ್ಯ ತಮ್ಮ ಬಹುತೇಕ ಸಮಯವನ್ನು ಇದರೊಂದಿಗೆ ಕಳೆಯುತ್ತಾರೆ. ಡಿಜಿಟೈಸೇಶನ್‌ (digitisation) ಆದ ಮೇಲಂತೂ ಎಲ್ಲಿ ಹೊಗುವುದಾದರೂ ಮೊಬೈಲ್‌ ಕೈಯಲ್ಲಿರಲೇ ಬೇಕು. ಜೇಬಿನಲ್ಲಿ ಪರ್ಸ್ ಇರುತ್ತೋ ಇಲ್ವೊ, ಮೊಬೈಲ್‌ ಅಂತೂ ಬೇಕೇ ಬೇಕು. ದೂರವಾಣಿಯ ಬದಲಿಗೆ ಸಂಪರ್ಕ ಸಾಧನವಾಗಿ ಬಂದ ಮೊಬೈಲ್‌ ಇಂದು ನಮ್ಮ ಜೀವನದಿಂದ ಬಹಳಷ್ಟು ವಸ್ತುಗಳನ್ನು ನುಂಗಿ ನಮ್ಮ ಕೈಯಲ್ಲಿ ಬೇರೂರಿದೆ. ಸೆಲ್ಯುಲಾರ್ ಫೋನ್ ಅಥವಾ ಸೆಲ್‌ ಫೋನ್‌ ಎಂದು ಮಾರುಕಟ್ಟೆಗೆ ಬಂದು ತನ್ನ ಬಳಕೆದಾರರನ್ನೇ ತನ್ನ ಸೆಲ್‌ನಲ್ಲಿ ಬಂಧಿಸಿದೆ.

ಸ್ಮಾರ್ಟ್ ಫೋನ್‌ಗಳನ್ನೇನೋ ಬಳಸುತ್ತಿದ್ದೇವೆ. ಆದರೆ ನಾವೆಷ್ಟು ಸ್ಮಾರ್ಟ್‌ ಆಗಿದ್ದೇವೆ?

ಇಂದು ಇಂಟರ್ನೆಟ್ (ಅಂತರ್ಜಾಲ), ಕಂಪ್ಯೂಟರ್ (ಗಣಕ ಯಂತ್ರ), ಸ್ಮಾರ್ಟ್ ಫೋನ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಈ ಸ್ಮಾರ್ಟ್ ಸಾಧನಗಳಲ್ಲಿ ನಾವು ಪ್ರತಿದಿನ ಎಷ್ಟು ಸಮಯವನ್ನು ಕಳೆಯುತ್ತೇವೆ ಎಂದು ಯೋಚಿಸಿದ್ದೀರಾ? ಅಂಗೈಯಲ್ಲೇ ಅಂತರ್ಜಾಲ, ಅರಿವಿದೆಯೇ ಅಪಾಯ?

ನಾವು ಇಂಟರ್ನೆಟ್ ಸಂವಹನ ಮಾಧ್ಯಮಗಳಾದ Google, ಇಮೇಲ್‌ಗಳು, ವಾಟ್ಸಪ್ (WhatsApp), ಫೇಸ್ಬುಕ್ (Facebook), ಇನ್ಸಟಗ್ರಾಮ್ (Instagram), ಯೂ ಟ್ಯೂಬ್ (YouTube), ಟ್ವಿಟ್ಟರ್ (Twitter) ಇತ್ಯಾದಿಗಳನ್ನು ನಮ್ಮ ದೈನಂದಿನ ಚಟುವಟಿಕೆಗಳ ಭಾಗವಾಗಿ ಮಾಡಿದ್ದೇವೆ. ಇದೆಲ್ಲವೂ ನಮಗೆ ಸ್ಮಾರ್ಟ್‌ಫೋನಿನಲ್ಲೇ ಲಭ್ಯ. ಜೊತೆಗೆ ವಿಧ ವಿಧವಾದ ಆಟಗಳು, ಆಕರ್ಷಿಸುವ ವಿಡಿಯೋಗಳು ನಮ್ಮ ಗಮನವನ್ನು ಯಾವಾಗಲೂ ತಮ್ಮತ್ತ ಸೆಳೆಯುತ್ತಿರುತ್ತದೆ. ಆನ್ಲೈನ್ ತರಗತಿಗಳಿಗೆ, ಮತ್ತು ಶೈಕ್ಷಣಿಕ ವಿಚಾರಗಳಿಗೆ, ಕಲಿಕೆಗೆ ಕೊಂಡ ಮೊಬೈಲ್ ದುರ್ಬಳಕೆ ಆಗಬಹುದು. ಈ ಸಂದರ್ಭದಲ್ಲಿ, ಸೈಬರ್ ಜಗತ್ತಿನ ಬಗ್ಗೆ, ಮತ್ತು ಅಲ್ಲಿ ಸುರಕ್ಷಿತವಾಗಿರಲು ಹೇಗಿರಬೇಕು ಅಥವಾ ಏನು ಮಾಡಬಾರದು ಎಂದು ತಿಳಿದಿರುವುದಿಲ್ಲ. ಜೊತೆಗೆ, ನಮ್ಮಲ್ಲಿ ಹೆಚ್ಚಿನವರಿಗೆ ಸೈಬರ್ ಸುರಕ್ಷತೆ ಮತ್ತು ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಭದ್ರತಾ ಅಗತ್ಯಗಳ ಬಗ್ಗೆ ತಿಳಿದಿಲ್ಲ.

ಇಂಟರ್ನೆಟ್ ಒಂದು ಜಾಗತಿಕ ನೆಟ್ವರ್ಕ್. ಜಗದೆಲ್ಲಾ ಮಾಹಿತಿಗಳ ಆಗರ. ನಿಮ್ಮ ಮೆಸೇಜ್, ನೀವು ಓದುವ ವಿಷಯಗಳು, ವಾಟ್ಸಪ್, ಫೇಸ್ಬುಕ್, ಗೂಗಲ್ ಮುಂತಾದ ಆಪ್ಗಳು ಕೆಲಸಮಾಡಲು ಇಂಟರ್ನೆಟ್ ಸೌಲಭ್ಯ ಅತ್ಯವಶ್ಯಕ. ಇಂಟರ್ನೆಟ್‌ ಮುಖಾಂತರ ಹಂಚಿಕೊಳ್ಳಲಾದ ಯಾವುದೇ ಮಾಹಿತಿ ಅಥವಾ ವೈಯಕ್ತಿಕ ವಿವರಗಳು ಆನ್‌ಲೈನ್‌ನಲ್ಲಿ ಶಾಶ್ವತವಾಗಿ ಉಳಿಯುತ್ತವೆ ಎಂದು ನಿಮಗೆ ತಿಳಿದಿದೆಯೇ? ಏಕೆಂದರೆ ಆನ್ಲೈನ್ ಗೆ ಅಪ್ ಲೋಡ್ ಆದ ಮಾಹಿತಿಯನ್ನು ಸಂಪೂರ್ಣವಾಗಿ ಅಳಿಸುವುದು ತುಂಬಾ ಕಷ್ಟ. ಮತ್ತು ನೀವು ನೋಡಿದ ಪ್ರತಿಯೊಂದು ವೆಬ್ ಸೈಟ್, ವಿಡಿಯೋ, ನೋಡಿದ ಯಾವುದೇ ತರಹದ ಮಾಹಿತಿ ನಿಮ್ಮ ಆನ್ಲೈನ್ ವರ್ತನೆಯನ್ನು ಯಾರಿಗಾದರೂ ತಿಳಿಸುತ್ತದೆ. ಇದನ್ನು ‘ಡಿಜಿಟಲ್ ಫುಟ್ ಪ್ರಿಂಟ್’ ಎನ್ನುತ್ತಾರೆ. ಈ ಫುಟ್ ಪ್ರಿಂಟನ್ನು ಅಳಿಸುವುದು ಅಸಾಧ್ಯ. ಅದು ನಿಮ್ಮ ಬಗ್ಗೆ ನಿಮ್ಮ ಸ್ನೇಹಿತರು, ಸಂಬಂಧಿಗಳ ಬಗ್ಗೆ, ನಿಮ್ಮ ಇಷ್ಟ ಮತ್ತು ಆಧ್ಯತೆಗಳ ಬಗ್ಗೆ ತಿಳಿಯುವ ಆಸಕ್ತರಿಗೆ ಸುಲಭವಾಗಿ ತಿಳಿಸುತ್ತದೆ.

ಮೊಬೈಲನ್ನು ಸರಿಯಾದ ರೀತಿಯಲ್ಲಿ ಬಳಸದಿದ್ದರೆ ಸೈಬರ್ ಜಗತ್ತಿನಲ್ಲಿ ಮಾಲ್‌ವೇರ್, ಫಿಶರ್ ಗಳು, ಅಶ್ಲೀಲ ವೆಬ್‌ಸೈಟ್‌ಗಳು, ಡೇಟಾ ಕಳ್ಳತನ, ಗುರುತಿನ ಕಳ್ಳತನ ಅಥವಾ ಹ್ಯಾಕಿಂಗ್ ಪ್ರಯತ್ನಗಳು, ಮೋಸದ ಯೋಜನೆಗಳು ಮತ್ತಿತರ ವಂಚನೆಗಳಿಗೀಡಾಗುವ ಸಾಧ್ಯತೆಗಳಿವೆ. ಸರಿಯಾದ ಮಾಹಿತಿ ತಿಳಿದುಕೊಂಡು ನಮ್ಮ ದೈನಂದಿನ ಅವಶ್ಯಕತೆಗೆ ಪೂರಕವಾಗಿ, ಜಾಗರೂಕರಾಗಿ ಮೊಬೈಲ್ ಬಳಸುವುದರಿಂದ ಸೈಬರ್ ಅಪರಾಧಗಳಿಗೆ ಬಲಿಯಾಗೋದು ತಪ್ಪುತ್ತದೆ.

ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ಅನುಸರಿಸಿ ಜಾಗರೂಕತೆಯಿಂದಿದ್ದರೆ ನೀವು ಸೈಬರ್ ವಂಚನೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಬಹುದು.

ಸುರಕ್ಷಿತವಾಗಿ ಮೊಬೈಲ್ ಬಳಸಲು ಹನ್ನೆರಡು ಸೂತ್ರಗಳು:

1) ಪಿನ್‌ಗಳು ಮತ್ತು ಪಾಸ್‌ವರ್ಡ್‌ಗಳನ್ನು ಅಳವಡಿಸಿಕೊಳ್ಳಿ. ನಿಮ್ಮ ಫೋನ್‌ಗೆ ಅನಧಿಕೃತ ಪ್ರವೇಶವನ್ನು ತಡೆಯಲು, ನಿಮ್ಮ ಫೋನ್ ಕಳೆದುಹೋದರೆ ಅಥವಾ ಕಳುವಾದಾಗ ರಕ್ಷಣೆಯ ಮೊದಲ ಸಾಲಿನಂತೆ (first line of defence) ನಿಮ್ಮ ಫೋನ್‌ನ ಮುಖಪುಟದಲ್ಲಿ ಪಾಸ್‌ವರ್ಡ್ ಅಥವಾ ವೈಯಕ್ತಿಕ ಗುರುತಿನ ಸಂಖ್ಯೆಯನ್ನು (ಪಿನ್) ಹೊಂದಿಸಿ. ನಿಮ್ಮ ಪ್ರತಿಯೊಂದು ಪ್ರಮುಖ ಲಾಗ್-ಇನ್‌ಗಳಿಗೆ (ಇಮೇಲ್, ಬ್ಯಾಂಕಿಂಗ್, ವೈಯಕ್ತಿಕ ಸೈಟ್‌ಗಳು, ಇತ್ಯಾದಿ) ಬೇರೆ ಪಾಸ್‌ವರ್ಡ್ ಬಳಸಿ. ನಿಮ್ಮ ಫೋನ್ ನಿಷ್ಕ್ರಿಯವಾಗಿರುವಾಗ ಐದು ನಿಮಿಷ ಅಥವಾ ಅದಕ್ಕಿಂತ ಕಡಿಮೆ ಸಮಯದ ನಂತರ ಸ್ವಯಂಚಾಲಿತವಾಗಿ ಲಾಕ್ ಆಗುವಂತೆ ನಿಮ್ಮ ಫೋನಿನಲ್ಲಿ ಸಂಯೋಜಿಸಿಕೊಳ್ಳಿ.

2) ನಿಮ್ಮ ಡೇಟಾವನ್ನು ಬ್ಯಾಕಪ್ ಮಾಡಿ ಮತ್ತು ಸುರಕ್ಷಿತಗೊಳಿಸಿ. ನಿಮ್ಮ ಫೋನ್‌ನಲ್ಲಿ ಸಂಗ್ರಹವಾಗಿರುವ ಎಲ್ಲಾ ಡೇಟಾವನ್ನು ನೀವು ಬ್ಯಾಕಪ್ ಮಾಡಬೇಕು – ಉದಾಹರಣೆಗೆ ನಿಮ್ಮ ಸಂಪರ್ಕಗಳು, ಡಾಕ್ಯುಮೆಂಟ್‌ಗಳು ಮತ್ತು ಫೋಟೋಗಳು. ಈ ಫೈಲ್‌ಗಳನ್ನು ನಿಮ್ಮ ಕಂಪ್ಯೂಟರ್‌ನಲ್ಲಿ, ಅಥವಾ ಕ್ಲೌಡ್‌ನಲ್ಲಿ ಸಂಗ್ರಹಿಸಬಹುದು. ನಿಮ್ಮ ಫೋನ್ ಕಳೆದುಹೋದರೆ, ಕದ್ದಿದ್ದರೆ ಅಥವಾ ಅಳಿಸಿದರೆ ಅದನ್ನು ಅನುಕೂಲಕರವಾಗಿ ಮರುಸ್ಥಾಪಿಸಲು ಇದು ಸಹಾಯಮಾಡುತ್ತದೆ.

3) ವಿಶ್ವಾಸಾರ್ಹ ಮೂಲಗಳಿಂದ ಮಾತ್ರ ಅಪ್ಲಿಕೇಶನ್‌ಗಳನ್ನು ಸ್ಥಾಪಿಸಿ. ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವ ಮೊದಲು, ಅಪ್ಲಿಕೇಶನ್ ಕಾನೂನುಬದ್ಧವಾಗಿದೆ ಎಂದು ಖಚಿತಪಡಿಸಿಕೊಡು ಅಳವಡಿಸಿಕೊಳ್ಳಿ. ಅಪ್ಲಿಕೇಶನ್‌ನ ನ್ಯಾಯಸಮ್ಮತತೆಯನ್ನು ಪರಿಶೀಲಿಸಲು ಅದರ ಬಗ್ಗೆ ಇರುವ ವಿಮರ್ಶೆಗಳನ್ನು ನೋಡಿ, ಅಪ್ಲಿಕೇಶನ್ ಸ್ಟೋರ್‌ನ ಕಾನೂನುಬದ್ಧತೆಯನ್ನು ದೃಢೀಕರಿಸಿಕೊಳ್ಳಿ, ಮತ್ತು ಅಪ್ಲಿಕೇಶನ್ ಪ್ರಾಯೋಜಕರ ಅಧಿಕೃತ ವೆಬ್‌ಸೈಟ್ ಅನ್ನು ನೋಡಿ. ವಿಶ್ವಾಸಾರ್ಹವಲ್ಲದ ಮೂಲಗಳಿಂದ ಅಳವಡಿಸುವ ಅನೇಕ ಅಪ್ಲಿಕೇಶನ್‌ಗಳು ಮಾಲ್‌ವೇರ್ ಅನ್ನು ಒಳಗೊಂಡಿರುತ್ತವೆ. ಅದು ಒಮ್ಮೆ ನಿಮ್ಮ ಫೋನಿನಲ್ಲಿ ಸ್ಥಾಪಿತವಾದರೆ ಮಾಹಿತಿಯನ್ನು ಕದಿಯಬಹುದು, ವೈರಸ್‌ಗಳನ್ನು ಸಕ್ರಿಯಗೊಳಿಸಬಹುದು ಮತ್ತು ನಿಮ್ಮ ಫೋನ್‌ನಲ್ಲಿರುವ ವಿಷಯಗಳಿಗೆ ಹಾನಿಯನ್ನು ಉಂಟುಮಾಡಬಹುದು.

cyber safety

4) ಅಪ್ಲಿಕೇಶನ್ ಅನುಮತಿಗಳನ್ನು ಸ್ವೀಕರಿಸುವ ಮೊದಲು ಅವುಗಳನ್ನು ಅರ್ಥಮಾಡಿಕೊಳ್ಳಿ. ನಿಮ್ಮ ಫೋನ್‌ನಲ್ಲಿನ ವೈಯಕ್ತಿಕ ಮಾಹಿತಿಗೆ ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ನೀಡುವ ಬಗ್ಗೆ ಅಥವಾ ನಿಮ್ಮ ಫೋನ್‌ನಲ್ಲಿ ಕಾರ್ಯಗಳನ್ನು ನಿರ್ವಹಿಸಲು ಅಪ್ಲಿಕೇಶನ್‌ಗೆ ಪ್ರವೇಶವನ್ನು ಅನುಮತಿಸುವ ಬಗ್ಗೆ ನೀವು ಜಾಗರೂಕರಾಗಿರಬೇಕು. ಸ್ಥಾಪಿಸುವ ಮೊದಲು ಪ್ರತಿ ಅಪ್ಲಿಕೇಶನ್‌ನ ಗೌಪ್ಯತೆ ಸೆಟ್ಟಿಂಗ್‌ಗಳನ್ನು ಸಹ ಪರಿಶೀಲಿಸುವುದನ್ನು ಖಚಿತಪಡಿಸಿಕೊಳ್ಳಿ.

5) ಉಪಯೋಗಿಸದ ಆಪ್ ಗಳನ್ನು ತೆಗೆದು ಹಾಕಿ. ನಿಮ್ಮ ಮೊಬೈಲ್‌ನಲ್ಲಿ ನೀವು ನಿತ್ಯ ಬಳಸುವ ಎಷ್ಟು ಆ್ಯಪ್‌ಗಳಿವೆ? ಅವುಗಳು ಉಪಯೋಗ ಆಗದಿದ್ದರೂ ನಿಮ್ಮ ಫೋನಿನಿಂದ ಮಾಹಿತಿಯನ್ನು ಹೊರಗೆ ಕಳಿಸಬಹುದಲ್ಲವೇ? ಅನಗತ್ಯ ಆ್ಯಪ್‌ಗಳನ್ನು ‘ಅನ್‌ಇನ್ಸ್‌ಟಾಲ್‌’ ಮಾಡಿ. ನಿಮ್ಮ ಫೋನಿನ ಸೆಟ್ಟಿಂಗ್ಸ್‌ನಲ್ಲಿ ಅಪ್ಲಿಕೇಶನ್ಸ್ ವಿಭಾಗದಲ್ಲಿ ಅಳವಡಿಕೆಯಾಗಿರುವ ಎಲ್ಲಾ ಆ್ಯಪ್‌ಗಳನ್ನು ನೋಡಬಹುದು. ಅಲ್ಲಿಂದಲೇ ಅಸ್ಥಾಪಿಸಿ.

6) ನಿಮ್ಮ ಮೊಬೈಲ್ ನ ಆಪರೇಟಿಂಗ್ ಸಿಸ್ಟಮ್ ಅನ್ನು ಕಾಲಕಾಲಕ್ಕೆ ಅಪ್ಡೇಟ್ ಮಾಡಿಕೊಳ್ಳಿ. ಜೊತೆಗೆ ನಿಮ್ಮ ಮೊಬೈಲ್ ಸುರಕ್ಷತೆಗೆ ಸರಿಯಾದ ಆಂಟಿವೈರಸ್ ಸಾಫ್ಟ್ ವೇರ್ ಬಳಸಿರಿ.

7) ನೀವು ನಿಮ್ಮನ್ನು ಸುರಕ್ಷಿತವಾಗಿರಿಸಿಕೊಳ್ಳುವಂತೆಯೇ ನಿಮ್ಮ ಆನ್‌ಲೈನ್ ಉಪಸ್ಥಿತಿಯನ್ನು ಸುರಕ್ಷಿತಗೊಳಿಸಿ: ನಿಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ನೀವು ಸರಿಯಾದ ಸೆಟ್ಟಿಂಗ್‌ಗಳನ್ನು ಆಯ್ಕೆ ಮಾಡದಿದ್ದರೆ, ಪೋಸ್ಟ್ ಮಾಡಿದ ಫೋಟೋಗಳು ಮತ್ತು ವೀಡಿಯೊಗಳನ್ನು ನಿಮಗೆ ತಿಳಿಯದೆ ಇತರರು ವೀಕ್ಷಿಸಬಹುದು, ಡೌನ್‌ಲೋಡ್ ಮಾಡಬಹುದು ಮತ್ತು ಬಳಸಬಹುದು.

8) ವೀಡಿಯೊ ಚಾಟ್ ಮತ್ತು ವೀಡಿಯೊ ಕರೆಗಳಲ್ಲಿ ನಿಮ್ಮ ಗೋಚರಿಸುವಿಕೆಯ ಬಗ್ಗೆ ಗಮನವಿರಲಿ: ಸಾಮಾಜಿಕ ಮಾಧ್ಯಮ ಸೈಟ್‌ಗಳಲ್ಲಿನ ನಿಮ್ಮ ವೀಡಿಯೊ ಚಾಟ್‌ಗಳನ್ನು ಇನ್ನೊಂದು ಬದಿಯಲ್ಲಿರುವ ವ್ಯಕ್ತಿ ರೆಕಾರ್ಡ್ ಮಾಡಬಹುದು. ಅಪರಿಚಿತರಿಂದ ಚಾಟ್ ವಿನಂತಿಗಳನ್ನು ಸ್ವೀಕರಿಸುವಾಗ ಜಾಗರೂಕರಾಗಿರಿ.

9) ಸೂಕ್ಷ್ಮ ವೈಯಕ್ತಿಕ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ತೆಗೆಯಲು ಸ್ಮಾರ್ಟ್‌ಫೋನ್ ಬಳಸಬೇಡಿ: ಹೆಚ್ಚಿನ ಸ್ಮಾರ್ಟ್‌ಫೋನ್‌ಗಳು ಇಂಟರ್ನೆಟ್ ಮತ್ತು ಕ್ಲೌಡ್ ಸ್ಟೋರೇಜ್‌ಗೆ ಸಂಪರ್ಕ ಹೊಂದಿರುತ್ತದೆ. ಕ್ಲೌಡ್‌ನೊಂದಿಗೆ ಸಂಪರ್ಕಗೊಂಡಿರುವ ಸ್ಮಾರ್ಟ್‌ಫೋನ್ ಬಳಸಿ ಚಿತ್ರ ಅಥವಾ ವೀಡಿಯೊವನ್ನು ಕ್ಲಿಕ್ ಮಾಡಿದ್ದರೆ/ರೆಕಾರ್ಡ್ ಮಾಡಿದ್ದರೆ, ಅದು ಸ್ವಯಂಚಾಲಿತವಾಗಿ ಕ್ಲೌಡ್‌ನಲ್ಲಿ ಸೇವ್ ಆಗಬಹುದು. ಬಳಕೆದಾರರು ತಮ್ಮ ಫೋನ್‌ನಿಂದ ತಮ್ಮ ಫೋಟೋಗಳು ಅಥವಾ ವೀಡಿಯೊಗಳನ್ನು ಅಳಿಸಿದರೂ ಸಹ, ಅದೇ ಫೋಟೋ ಅಥವಾ ವೀಡಿಯೊವನ್ನು ಕ್ಲೌಡ್ ಖಾತೆಯಿಂದ ಅಥವಾ ಅದೇ ಖಾತೆಯನ್ನು ಬಳಸಿಕೊಂಡು ಕ್ಲೌಡ್‌ಗೆ ಸಂಪರ್ಕಗೊಂಡಿರುವ ಯಾವುದೇ ಇತರ ಸಾಧನ/ಪಿಸಿಯಿಂದ ಮರುಪಡೆಯಬಹುದು.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ?

10) ಸೈಬರ್ ಹಿಂಬಾಲಿಸುವಿಕೆಯಿಂದ (stalking) ನಿಮ್ಮನ್ನು ರಕ್ಷಿಸಿಕೊಳ್ಳಿ: ನಿಮ್ಮಿಂದ ನಿರಾಸಕ್ತಿಯ ಸ್ಪಷ್ಟ ಸೂಚನೆಯ ಹೊರತಾಗಿಯೂ ಸೈಬರ್ ಹಿಂಬಾಲಕರು ನಿಮ್ಮ ಮೇಲೆ ಪದೇ ಪದೇ ಆಸಕ್ತಿಯನ್ನು ತೋರಿಸುತ್ತಾರೆ. ಅವರು ಹಿಂಬಾಲಿಸಲು ಇಂಟರ್ನೆಟ್, ಇಮೇಲ್, ಸಾಮಾಜಿಕ ಮಾಧ್ಯಮ ಅಥವಾ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಂವಹನವನ್ನು ಬಳಸುತ್ತಾರೆ. ಸಾಮಾಜಿಕ ಮಾಧ್ಯಮ ಸೈಟ್‌ಗಳು, ಮೊಬೈಲ್ ಸಾಧನಗಳು ಇತ್ಯಾದಿಗಳಿಗೆ ಸ್ಥಳ ಸೇವೆಗಳನ್ನು(location) ನಿಷ್ಕ್ರಿಯಗೊಳಿಸಿ. ನಿಮ್ಮ ವೈಯಕ್ತಿಕ ಮಾಹಿತಿಯಾದ ಫೋನ್ ಸಂಖ್ಯೆ, ಇಮೇಲ್ ವಿಳಾಸ, ಛಾಯಾಚಿತ್ರಗಳನ್ನು ಅಪರಿಚಿತ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳುವುದನ್ನು ತಡೆಯಿರಿ. ನೀವು ಸೈಬರ್ ಹಿಂಬಾಲಿಕೆಗೆ ಸಿಕ್ಕಿದ್ದೀರಿ ಎಂದು ನೀವು ಭಾವಿಸಿದರೆ, ನಿಮ್ಮ ಸಂಬಂಧಿಕರು ಮತ್ತು ಸ್ನೇಹಿತರ ಸಹಾಯ ಪಡೆಯಿರಿ.

11) ನಕಲಿ ಸಾಮಾಜಿಕ ಮಾಧ್ಯಮ ಖಾತೆಗಳ ಬಗ್ಗೆ ಎಚ್ಚರದಿಂದಿರಿ- ಎಲ್ಲಾ ಖಾತೆಗಳು ನಿಜವಲ್ಲ ಮತ್ತು ಖಾತೆಗಳಲ್ಲಿ ಒದಗಿಸಲಾದ ಎಲ್ಲಾ ಮಾಹಿತಿಯು ನಿಜವಲ್ಲ. ಅಪರಿಚಿತರಿಂದ ಸ್ನೇಹಿತರ ವಿನಂತಿಗಳನ್ನು ಸ್ವೀಕರಿಸುವಾಗ ಜಾಗರೂಕರಾಗಿರಿ.

12) ಸೇವೆ/ದುರಸ್ತಿ/ಮಾರಾಟ ಅಥವಾ ರಿಚಾರ್ಜ್ ಗೆ ನಿಮ್ಮ ಮೊಬೈಲ್ ಸಾಧನಗಳನ್ನು ನೀಡುವಾಗ ಜಾಗರೂಕರಾಗಿರಿ.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ?

Continue Reading
Advertisement
Lok Sabha Election 2024
ದೇಶ2 mins ago

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

rajamarga column mangalore flight crash 1
ಅಂಕಣ4 mins ago

ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

food poisoning savadatthi
ಬೆಳಗಾವಿ26 mins ago

Food Poisoning: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ, ಐವರು ಗಂಭೀರ

nanna desha nanna dani column ambedkar jinnah
ಅಂಕಣ43 mins ago

ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

Health Tips Kannada
ಆರೋಗ್ಯ1 hour ago

Health Tips Kannada: ಸನ್‌ಸ್ಕ್ರೀನ್‌ ಕುರಿತು ನಿಮಗೆಷ್ಟು ಗೊತ್ತು?

Karnataka Weather Forecast
ಮಳೆ1 hour ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Sweat Problem
ಆರೋಗ್ಯ2 hours ago

Sweat Problem: ದುರ್ಗಂಧದ ಬೆವರಿನ ಸಮಸ್ಯೆಗೆ ಇಲ್ಲಿವೆ ನೈಸರ್ಗಿಕ ಪರಿಹಾರಗಳು!

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ

Mobile
ದೇಶ8 hours ago

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

Rameshwaram Cafe Blast
ಕರ್ನಾಟಕ8 hours ago

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ14 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು19 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು20 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌