New Toll System: ಫಾಸ್ಟ್‌ ಟ್ಯಾಗ್‌ಗೂ ಉಪಗ್ರಹ ಆಧರಿತ ಟೋಲ್‌ ಸಂಗ್ರಹಕ್ಕೂ ಏನು ವ್ಯತ್ಯಾಸ? ಏನು ಪ್ರಯೋಜನ? - Vistara News

ತಂತ್ರಜ್ಞಾನ

New Toll System: ಫಾಸ್ಟ್‌ ಟ್ಯಾಗ್‌ಗೂ ಉಪಗ್ರಹ ಆಧರಿತ ಟೋಲ್‌ ಸಂಗ್ರಹಕ್ಕೂ ಏನು ವ್ಯತ್ಯಾಸ? ಏನು ಪ್ರಯೋಜನ?

New Toll System: ವಿಶ್ವದಲ್ಲೇ ಮೊದಲ ಬಾರಿಗೆ ಉಪಗ್ರಹ ಆಧರಿತ ಟೋಲ್ ಸಂಗ್ರಹ (Toll Collection) ವ್ಯವಸ್ಥೆಯನ್ನು ಭಾರತದಲ್ಲಿ ಪರಿಚಯಿಸಲಾಗುತ್ತಿದೆ. ಇದಕ್ಕಾಗಿ ಜಿ ಎನ್ ಎಸ್ ಎಸ್ ಮತ್ತು ಜಿಪಿಎಸ್ ತಂತ್ರಜ್ಞಾನ ಬಳಸಿಕೊಳ್ಳಲಾಗುವುದು. ಈ ಹೊಸ ವ್ಯವಸ್ಥೆಯ ಅಡಿಯಲ್ಲಿ ವಾಹನಗಳಿಗೆ ಪ್ರಯಾಣಿಸುವ ದೂರವನ್ನು ಆಧರಿಸಿ ಶುಲ್ಕವನ್ನು ವಿಧಿಸಲಾಗುತ್ತದೆ. ಜಿಎನ್‌ಎಸ್‌ಎಸ್ ಆಧಾರಿತ ಇಟಿಸಿ ವ್ಯವಸ್ಥೆಯು ಹೆಚ್ಚು ವ್ಯಾಪಕವಾದಂತೆ ಟೋಲ್ ಪ್ಲಾಜಾಗಳಲ್ಲಿನ ಎಲ್ಲಾ ಲೇನ್‌ಗಳನ್ನು ಅಂತಿಮವಾಗಿ ಜಿಎನ್‌ಎಸ್‌ಎಸ್ ಲೇನ್‌ಗಳನ್ನಾಗಿ ಪರಿವರ್ತಿಸಲಾಗುತ್ತದೆ. ಇದು ಭಾರತೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಣೆಯ ದಕ್ಷತೆ ಮತ್ತು ಅನುಕೂಲತೆಯನ್ನು ಹೆಚ್ಚಿಸಲಿದೆ. ಈ ಹೊಸ ತಂತ್ರಜ್ಞಾನ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

New Toll System
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶ್ವದಲ್ಲೇ ಮೊದಲ ಬಾರಿಗೆ ಉಪಗ್ರಹ ಆಧಾರಿತ ಟೋಲ್ ಸಂಗ್ರಹ (satellite based toll collection) ವ್ಯವಸ್ಥೆಯನ್ನು ಪರಿಚಯಿಸಲು (New Toll System) ಭಾರತ ಮುಂದಾಗಿದೆ. ಇದಕ್ಕಾಗಿ ಜಿಎನ್‌ಎಸ್ಎಸ್ ಮತ್ತು ಜಿಪಿಎಸ್ (GNSS And GPS) ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತಿದ್ದು, ಶೀಘ್ರದಲ್ಲೇ ಟೋಲ್ ಸಂಗ್ರಹ (Toll Collection) ಪ್ರಕ್ರಿಯೆಯಲ್ಲಿ ಪರಿವರ್ತಿಸಲಾಗುವುದು. ಹೊಸ ವ್ಯವಸ್ಥೆಯ ಅಡಿಯಲ್ಲಿ ವಾಹನಗಳಿಗೆ ಪ್ರಯಾಣಿಸುವ ದೂರವನ್ನು ಆಧರಿಸಿ ಶುಲ್ಕವನ್ನು ವಿಧಿಸಲಾಗುತ್ತದೆ. ಈ ವ್ಯವಸ್ಥೆ ಪ್ರಯಾಣಿಕರ ಸಮಯ ಉಳಿಸಲಿದೆ ಎನ್ನುವುದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ (Union Transport Minister Nitin Gadkari) ಅವರ ಅಭಿಪ್ರಾಯ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ಮತ್ತು ಅಡೆತಡೆ-ಮುಕ್ತ ಟೋಲಿಂಗ್ ಅನುಭವವನ್ನು ಒದಗಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (NHAI) ಮತ್ತು ಇಂಡಿಯನ್ ಹೈವೇಸ್ ಮ್ಯಾನೇಜ್‌ಮೆಂಟ್ ಕಂಪನಿ ಲಿಮಿಟೆಡ್ (IHMCL) ಭಾರತದಲ್ಲಿ ಜಿಎನ್‌ಎಸ್‌ಎಸ್ ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಕಲೆಕ್ಷನ್ (ETC) ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಮತ್ತು ಕಾರ್ಯಗತಗೊಳಿಸಲು ಅರ್ಹತೆ, ಅನುಭವದ ಆಧಾರದ ಮೇಲೆ ಗ್ಲೋಬಲ್ ಎಕ್ಸ್ಪ್ರೆಷನ್ ಆಫ್ ಇಂಟ್ರೆಸ್ಟ್ (EOI) ಕಂಪನಿಯನ್ನು ಆಹ್ವಾನಿಸಿದೆ.

ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರದ ಯೋಜನೆಯು ಅಸ್ತಿತ್ವದಲ್ಲಿರುವ ಫಾಸ್ಟ್ ಟ್ಯಾಗ್ ವ್ಯವಸ್ಥೆಯೊಳಗೆ ಜಿಎನ್‌ಎಸ್‌ಎಸ್ ಆಧಾರಿತ ಇಟಿಸಿ ವ್ಯವಸ್ಥೆಯನ್ನು ಸಂಯೋಜಿಸಲಿದೆ. ಆರ್‌ಎಫ್ಐಡಿ ಆಧಾರಿತ ಇಟಿಸಿ ಮತ್ತು ಜಿಎನ್‌ಎಸ್‌ಎಸ್ ಆಧಾರಿತ ಇಟಿಸಿ ಎರಡೂ ಏಕಕಾಲದಲ್ಲಿ ಕಾರ್ಯನಿರ್ವಹಿಸುವ ಹೈಬ್ರಿಡ್ ಮಾದರಿಯನ್ನು ಬಳಸಲಾಗುತ್ತದೆ. ಟೋಲ್ ಪ್ಲಾಜಾಗಳಲ್ಲಿ ಮೀಸಲಾದ ಜಿಎನ್ಎಸ್‌ಎಸ್‌ ಲೇನ್‌ಗಳು ಲಭ್ಯವಿದ್ದು, ಜಿಎನ್‌ಎಸ್‌ಎಸ್ ಆಧಾರಿತ ಇಟಿಸಿ ಹೊಂದಿದ ವಾಹನಗಳು ಮುಕ್ತವಾಗಿ ಹಾದುಹೋಗಲು ಅನುವು ಮಾಡಿಕೊಡುತ್ತದೆ.

ಜಿಎನ್‌ಎಸ್‌ಎಸ್ ಆಧಾರಿತ ಇಟಿಸಿ ವ್ಯವಸ್ಥೆಯು ಹೆಚ್ಚು ವ್ಯಾಪಕವಾದಂತೆ ಟೋಲ್ ಪ್ಲಾಜಾಗಳಲ್ಲಿನ ಎಲ್ಲಾ ಲೇನ್‌ಗಳನ್ನು ಅಂತಿಮವಾಗಿ ಜಿಎನ್‌ಎಸ್‌ಎಸ್ ಲೇನ್‌ಗಳನ್ನಾಗಿ ಪರಿವರ್ತಿಸಲಾಗುತ್ತದೆ. ಇದು ಭಾರತೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಣೆಯ ದಕ್ಷತೆ ಮತ್ತು ಅನುಕೂಲತೆಯನ್ನು ಹೆಚ್ಚಿಸಲಿದೆ.

Toll Collection
Toll Collection


ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ಎಂದರೇನು?

ಈವರೆಗೆ ಟೋಲ್ ಪ್ಲಾಜಾಗಳಲ್ಲಿ ಟೋಲ್ ಪಾವತಿಗಳನ್ನು ಸಾಂಪ್ರದಾಯಿಕವಾಗಿ ಮಾಡಲಾಗುತ್ತಿದೆ. ಇದಕ್ಕಾಗಿ ಮಾನವ ಸಂಪನ್ಮೂಲ ಅಗತ್ಯವಿದೆ. ಫಾಸ್ಟ್‌ಟ್ಯಾಗ್‌ ವ್ಯವಸ್ಥೆ ಇದ್ದಾಗಲೂ ಟ್ರಾಫಿಕ್ ಜಾಮ್‌ ಸಮಸ್ಯೆ ಇದೆ. ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು ಉಪಗ್ರಹ ಮತ್ತು ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಬಳಸುತ್ತದೆ. ಪ್ರಯಾಣಿಸಿದ ದೂರವನ್ನು ಅಳೆಯಲು ಮತ್ತು ಅದಕ್ಕೆ ಅನುಗುಣವಾಗಿ ಟೋಲ್ ಶುಲ್ಕಗಳನ್ನು ವಿಧಿಸಲಾಗುತ್ತದೆ. ಇದು ಟೋಲ್ ಪ್ಲಾಜಾಗಳ ಅಗತ್ಯವನ್ನು ಕಡಿಮೆ ಮಾಡುತ್ತದೆ ಮತ್ತು ಪ್ರಯಾಣಿಕರ ಸಮಯವನ್ನು ಉಳಿಸುತ್ತದೆ.

ಫಾಸ್ಟ್‌ಟ್ಯಾಗ್‌ಗಿಂತ ಇದು ಹೇಗೆ ಭಿನ್ನ?

ಫಾಸ್ಟ್‌ಟ್ಯಾಗ್‌ಗಿಂತ ಭಿನ್ನವಾಗಿ ಉಪಗ್ರಹ ಆಧಾರಿತ ಜಿಪಿಎಸ್ ಟೋಲ್ ಸಂಗ್ರಹ ವ್ಯವಸ್ಥೆಯು ಗ್ಲೋಬಲ್ ನ್ಯಾವಿಗೇಶನ್ ಸ್ಯಾಟಲೈಟ್ ಸಿಸ್ಟಮ್‌ನಲ್ಲಿ (GNSS) ಕಾರ್ಯ ನಿರ್ವಹಿಸುತ್ತದೆ. ಇದು ನಿಖರವಾಗಿ ಸ್ಥಳದ ಟ್ರ್ಯಾಕಿಂಗ್ ಒದಗಿಸುತ್ತದೆ. ಈ ವ್ಯವಸ್ಥೆಯು ನಿಖರವಾದ ದೂರ ಆಧಾರಿತ ಟೋಲ್ ಲೆಕ್ಕಾಚಾರಗಳಿಗಾಗಿ ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (GPS) ಮತ್ತು ಭಾರತದ GPS Aided GEO ಆಗ್ಮೆಂಟೆಡ್ ನ್ಯಾವಿಗೇಷನ್ (GAGAN)ನಂತಹ ತಂತ್ರಜ್ಞಾನಗಳನ್ನು ಬಳಸುತ್ತದೆ.

ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ ಹೇಗೆ ಕೆಲಸ ಮಾಡುತ್ತದೆ?

ಆನ್-ಬೋರ್ಡ್ ಯೂನಿಟ್ (OBU) ಅಥವಾ ಟ್ರ್ಯಾಕಿಂಗ್ ಸಾಧನವನ್ನು ಹೊಂದಿರುವ ವಾಹನಗಳಿಗೆ ಹೆದ್ದಾರಿಗಳಲ್ಲಿ ಪ್ರಯಾಣಿಸುವ ದೂರವನ್ನು ಆಧರಿಸಿ ಶುಲ್ಕ ವಿಧಿಸಲಾಗುತ್ತದೆ. ಡಿಜಿಟಲ್ ಇಮೇಜ್ ಪ್ರೊಸೆಸಿಂಗ್ ದಾಖಲೆಗಳು ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ನಿರ್ದೇಶಾಂಕಗಳನ್ನು ಹೊಂದಿದ್ದು, ಟೋಲ್ ದರಗಳನ್ನು ನಿರ್ಧರಿಸಲು ಸಾಫ್ಟ್‌ವೇರ್ ಅನ್ನು ಬಳಸಲಾಗುತ್ತದೆ. ಸಿಸಿಟಿವಿ ಕೆಮೆರಾಗಳನ್ನು ಹೊಂದಿರುವ ಸಾಧನಗಳು ವಾಹನಗಳು ಹಾದು ಹೋಗುವುದನ್ನು ದಾಖಲಿಸುತ್ತದೆ. ತಡೆರಹಿತ ಕಾರ್ಯಾಚರಣೆಯನ್ನು ಇದು ಖಾತ್ರಿಪಡಿಸುತ್ತದೆ.

ಕಾರುಗಳು ಆನ್‌ಬೋರ್ಡ್ ಯುನಿಟ್ ಅನ್ನು ಹೊಂದಿದ್ದು, ಟೋಲ್ ಸಂಗ್ರಹಕ್ಕಾಗಿ ಟ್ರ್ಯಾಕಿಂಗ್ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ. ಆನ್ ಬೋರ್ಡ್ ಯುನಿಟ್ ಹೆದ್ದಾರಿಗಳು ಮತ್ತು ಟೋಲ್ ರಸ್ತೆಗಳಲ್ಲಿ ಕಾರಿನ ನಿರ್ದೇಶಾಂಕಗಳನ್ನು ಟ್ರ್ಯಾಕ್ ಮಾಡುತ್ತದೆ. ದೂರವನ್ನು ಲೆಕ್ಕಾಚಾರ ಮಾಡಲು ಉಪಗ್ರಹಗಳೊಂದಿಗೆ ಮಾಹಿತಿ ಹಂಚಿಕೊಳ್ಳುತ್ತದೆ.

ದೂರದ ಲೆಕ್ಕಾಚಾರದಲ್ಲಿ ನಿಖರತೆಗಾಗಿ ಸಿಸ್ಟಮ್ ಜಿಪಿಎಸ್ ಮತ್ತು ಜಿ ಎನ್ ಎಸ್ ಎಸ್ ಅನ್ನು ಬಳಸುತ್ತದೆ. ಇನ್ನು ಹೆದ್ದಾರಿಗಳಲ್ಲಿನ ಕೆಮೆರಾಗಳು ಕಾರಿನ ಚಲನೆಗಳನ್ನು ತೆಗೆದ ಚಿತ್ರಗಳೊಂದಿಗೆ ಹೋಲಿಸುವ ಮೂಲಕ ಸರಿಯಾದ ದೂರ ಮಾಪನವನ್ನು ಖಚಿತಪಡಿಸುತ್ತವೆ. ಆರಂಭದಲ್ಲಿ ಪ್ರಮುಖ ಹೆದ್ದಾರಿಗಳು ಮತ್ತು ಎಕ್ಸ್ ಪ್ರೆಸ್ ವೇಗಳಲ್ಲಿ ಈ ವ್ಯವಸ್ಥೆ ಜಾರಿಯಾಗಲಿದೆ.

Toll Collection
Toll Collection


ಆನ್‌ ಬೋರ್ಡ್ ಯುನಿಟ್ ಎಲ್ಲಿ ಸಿಗುತ್ತದೆ?

ಆನ್ ಬೋರ್ಡ್ ಯುನಿಟ್‌ಗಳು ಫಾಸ್ಟ್‌ಟ್ಯಾಗ್‌ಗಳಂತೆಯೇ ಸರ್ಕಾರಿ ವೆಬ್‌ಸೈಟ್‌ಗಳ ಮೂಲಕ ಲಭ್ಯವಿರುತ್ತವೆ. ಇದನ್ನು ಬಾಹ್ಯವಾಗಿ ಅಂಟಿಸಬೇಕು. ಕಾರು ತಯಾರಕರೇ ಮುಂಧೆ ಇನ್‌ ಬಿಲ್ಟ್‌ ಆಗಿ ಆನ್ ಬೋರ್ಡ್ ಯುನಿಟ್‌ಗಳೊಂದಿಗೆ ಕಾರುಗಳನ್ನು ಮಾರಾಟ ಮಾಡಲು ಪ್ರಾರಂಭಿಸಬಹುದು.

ಆನ್ ಬೋರ್ಡ್ ಯುನಿಟ್ ಒಮ್ಮೆ ಹಾಕಿದ ಬಳಿಕ ಪ್ರಯಾಣಿಸಿದ ದೂರದ ಆಧಾರದ ಮೇಲೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಯಿಂದ ಟೋಲ್ ಮೊತ್ತವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸಲಾಗುತ್ತದೆ.

ಪಾವತಿ ಪ್ರಕ್ರಿಯೆ ಮತ್ತು ಪ್ರಾಯೋಗಿಕ ಅನುಷ್ಠಾನ ಹೇಗೆ?

ಆನ್ ಬೋರ್ಡ್ ಯುನಿಟ್‌ಗೆ ಲಿಂಕ್ ಮಾಡಲಾದ ಡಿಜಿಟಲ್ ವ್ಯಾಲೆಟ್‌ನಿಂದ ಪಾವತಿಗಳನ್ನು ಕಡಿತಗೊಳಿಸಲಾಗುತ್ತದೆ. ಟೋಲ್ ಪಾವತಿಯನ್ನು ಇದು ಸುಗಮಗೊಳಿಸುತ್ತದೆ. ರಾಷ್ಟ್ರೀಯ ಹೆದ್ದಾರಿಗಳ ಆಯ್ದ ವಿಭಾಗಗಳಲ್ಲಿನ ಪ್ರಾಯೋಗಿಕ ಯೋಜನೆಗಳು ಜಿ ಎನ್ ಎಸ್ ಎಸ್ ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ (ಇಟಿಸಿ) ವ್ಯವಸ್ಥೆಯ ಪರಿಣಾಮವನ್ನು ಆರಂಭದಲ್ಲಿ ಪರೀಕ್ಷಿಸುತ್ತವೆ. ಇದನ್ನು ಆರಂಭದಲ್ಲಿ ಫಾಸ್ಟ್ ಟ್ಯಾಗ್ ಜೊತೆಗೆನೇ ಚಾಲನೆಯಲ್ಲಿ ಇರಲಿದೆ.

ಟೋಲ್ ಆದಾಯದ ಮೇಲೆ ಏನು ಪರಿಣಾಮ?

ಪ್ರಸ್ತುತ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಟೋಲ್‌ನಿಂದ ಸುಮಾರು 40,000 ಕೋಟಿ ರೂ. ಗಳಿಸುತ್ತಿದೆ. ಭಾರತವು ಈ ಸುಧಾರಿತ ಟೋಲ್ ಸಂಗ್ರಹ ವ್ಯವಸ್ಥೆಗೆ ಪರಿವರ್ತನೆಯಾಗುತ್ತಿದ್ದಂತೆ ಮುಂದಿನ 2- 3 ವರ್ಷಗಳಲ್ಲಿ ಈ ಮೊತ್ತವು 1,40,000 ಕೋಟಿ ರೂ.ಗೆ ಹೆಚ್ಚಾಗುವ ನಿರೀಕ್ಷೆಯಿದೆ.

ಇದು ಭಾರತದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದೆ?

ಭಾರತದಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಕಾರ್ಯಗತಗೊಳಿಸುವುದು ರಸ್ತೆ ಜಾಲದ ವಿಶಾಲವಾದ ಪ್ರಮಾಣ ಮತ್ತು ವೈವಿಧ್ಯಮಯ ವಾಹನಗಳ ಕಾರಣದಿಂದಾಗಿ ಸವಾಲಿನ ಕೆಲಸವಾಗಿದೆ. ಆದರೆ ಡಿಜಿಟಲ್ ವಹಿವಾಟುಗಳು ಮತ್ತು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಪ್ರಾವೀಣ್ಯತೆಯನ್ನು ಸಾಧಿಸಿದೆ. ಹಾಗಾಗಿ ಈ ಹೊಸ ವ್ಯವಸ್ಥೆಗೆ ವಾಹನ ಸವಾರರು ಬೇಗ ಹೊಂದಿಕೊಳ್ಳಲಿದ್ದಾರೆ ಎಂಬ ಅಭಿಪ್ರಾಯವಿದೆ.

Toll Collection
Toll Collection


ಇದನ್ನೂ ಓದಿ: Signal-Free Corridor: ಬೆಂಗಳೂರಿನಲ್ಲಿ 17 ಸಿಗ್ನಲ್ ಮುಕ್ತ ಕಾರಿಡಾರ್‌; ಯಾವ ಮಾರ್ಗಗಳಲ್ಲಿ ನೋಡಿ

ಹೊಸ ವ್ಯವಸ್ಥೆಗೆ ಬದಲಿಸಲು ಗಮನಾರ್ಹ ಮೂಲಸೌಕರ್ಯದ ಅಗತ್ಯವಿರುತ್ತದೆ. ಫಾಸ್ಟ್ಯಾಗ್‌ಗಳ ಸುತ್ತ ಕೇಂದ್ರೀಕೃತವಾಗಿರುವ ಪ್ರಸ್ತುತ ಮೂಲಸೌಕರ್ಯವನ್ನು ಆಮೂಲಾಗ್ರವಾಗಿ ಬದಲಿಸಬೇಕಾಗುತ್ತದೆ. ಹಾಗಾಗಿ ಟೋಲ್ ದರ ಹೆಚ್ಚುವ ಸಾಧ್ಯತೆಯೂ ಇದೆ. ಈ ಸವಾಲುಗಳ ಹೊರತಾಗಿಯೂ ಭಾರತದಲ್ಲಿ ಟೋಲ್ ಸಂಗ್ರಹ ರಪ್ರಕ್ರಿಯೆಗಳನ್ನು ಸುವ್ಯವಸ್ಥಿತಗೊಳಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

ಯೋಜನೆ ಅನುಷ್ಠಾನ ಮಾಡೋರು ಯಾರು?

ಇಂಡಿಯನ್ ಹೈವೇಸ್ ಮ್ಯಾನೇಜ್ಮೆಂಟ್ ಕಂಪನಿ ಲಿಮಿಟೆಡ್ (IHMCL) ಜಿ ಎನ್ ಎಸ್ ಎಸ್ ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಕಲೆಕ್ಷನ್ ಸಿಸ್ಟಮ್ ಅನ್ನು ಅಭಿವೃದ್ಧಿಪಡಿಸಲು ಮತ್ತು ಕಾರ್ಯಗತಗೊಳಿಸಲು ಅರ್ಹ ಗ್ಲೋಬಲ್ ಎಕ್ಸ್ಪ್ರೆಷನ್ ಆಫ್ ಇಂಟ್ರೆಸ್ಟ್ (EOI) ಕಂಪನಿಯನ್ನು ಆಹ್ವಾನಿಸಿದೆ. ಶೀಘ್ರದಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರುವ ಗುರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೊಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Geyser Blast: ಬಾಂಬ್‌‌ನಂತೆ ಬ್ಲಾಸ್ಟ್ ಆಗಬಹುದು ಗೀಸರ್! ಮಳೆಗಾಲದಲ್ಲಿ ಈ ಮುನ್ನೆಚ್ಚರಿಕೆ ಇರಲಿ

ಕೆಲವೊಮ್ಮೆ ಗೀಸರ್ ಬಾಂಬ್‌ನಂತೆ (Geyser Blast) ಸ್ಫೋಟಿಸಿದ ಘಟನೆ ನಡೆದಿದ್ದಿದೆ. ಹೀಗಾಗಿ ಮಳೆಗಾಲದಲ್ಲಿ ಗೀಸರ್ ಕುರಿತು ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ನಾವು ಮಾಡುವ ಒಂದು ಸಣ್ಣ ತಪ್ಪು ಗೀಸರ್ ಸ್ಫೋಟಕ್ಕೆ ಕಾರಣವಾಗಬಹುದು. ಗೀಸರ್ ಹಾನಿಗೊಳಗಾಗಲು ಅಥವಾ ಸ್ಫೋಟಗೊಳ್ಳಲು ಕಾರಣಗಳು ಮತ್ತು ನಾವು ಮಾಡಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Geyser Blast
Koo

ಮಳೆ ಬಂದಾಗ (rainy season) ವಿದ್ಯುತ್ ಶಾರ್ಟ್ ಸರ್ಕ್ಯೂಟ್ (electric short circuit ) ಅಪಾಯ ಹೆಚ್ಚಾಗಿರುತ್ತದೆ. ಹೀಗಾಗಿ ಮನೆಯಲ್ಲಿರುವ ಪ್ರತಿಯೊಂದು ಎಲೆಕ್ಟ್ರಾನಿಕ್ ವಸ್ತುಗಳು ಅದರಲ್ಲೂ ಮುಖ್ಯವಾಗಿ ಎಸಿ, ಗೀಸರ್ ಗಳ ಬಗ್ಗೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕು. ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಗೀಸರ್ ಸ್ಫೋಟ (Geyser Blast) ಉಂಟಾಗುವ ಘಟನೆಗಳು ನಡೆಯುತ್ತಿದ್ದು, ಮುನ್ನೆಚ್ಚರಿಕೆ ವಹಿಸದೆ ಇದ್ದರೆ ಜೀವಕ್ಕೆ ಅಪಾಯ ಉಂಟಾಗಬಹುದು.

ಕರ್ನಾಟಕ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಋತುವಿನಲ್ಲಿ ತೊಟ್ಟಿಯಲ್ಲಿ ಸಂಗ್ರಹಿಸಿಟ್ಟ ನೀರು ತುಂಬಾ ತಂಪಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಅನೇಕ ಜನರು ಮಳೆಗಾಲದಲ್ಲಿ ಗೀಸರ್ ಆನ್ ಮಾಡಲು ಯೋಚಿಸುತ್ತಾರೆ. ಆದರೆ ಮಳೆಯ ಕಾರಣದಿಂದ ಗೀಸರ್ ಅನ್ನು ಆನ್ ಮಾಡುವುದು ತುಂಬಾ ಅಪಾಯಕಾರಿ.

ಗೀಸರ್ ಬಾಂಬ್‌ನಂತೆ ಸ್ಫೋಟಗೊಳ್ಳುತ್ತದೆ. ಹೀಗಾಗಿ ಮಳೆಗಾಲದಲ್ಲಿ ಕೆಲವೊಂದು ತಪ್ಪುಗಳನ್ನು ಮಾಡಬಾರದು. ನಾವು ಮಾಡುವ ಒಂದು ಸಣ್ಣ ತಪ್ಪು ಗೀಸರ್ ಸ್ಫೋಟಕ್ಕೆ ಕಾರಣವಾಗಬಹುದು. ಗೀಸರ್ ಹಾನಿಗೊಳಗಾಗಲು ಅಥವಾ ಸ್ಫೋಟಗೊಳ್ಳಲು ಕಾರಣಗಳು ಇಲ್ಲಿವೆ.

Geyser Blast
Geyser Blast


ಶಾರ್ಟ್ ಸರ್ಕ್ಯೂಟ್ ಅಪಾಯ

ಮಳೆಗಾಲದಲ್ಲಿ ವಾತಾವರಣದಲ್ಲಿ ತೇವಾಂಶವು ಹೆಚ್ಚಾಗಿರುತ್ತದೆ. ಇದು ಶಾರ್ಟ್ ಸರ್ಕ್ಯೂಟ್ ಅಪಾಯವನ್ನು ಹೆಚ್ಚಿಸುತ್ತದೆ. ವೈರಿಂಗ್ ಅಥವಾ ಗೀಸರ್ ಸಂಪರ್ಕದಲ್ಲಿ ಯಾವುದೇ ದೋಷವಿದ್ದರೆ, ಆರ್ದ್ರತೆಯಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಬಹುದು ಮತ್ತು ಬೆಂಕಿಯ ಅಪಾಯವೂ ಇದೆ.

ತುಕ್ಕಿನಿಂದ ಸಮಸ್ಯೆ

ಮಳೆಗಾಲದಲ್ಲಿ ತೇವಾಂಶದಿಂದಾಗಿ ಗೀಸರ್‌ನ ಲೋಹದ ಭಾಗಗಳು ತುಕ್ಕು ಹಿಡಿಯಬಹುದು. ಇದು ಗೀಸರ್‌ನ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ ಮತ್ತು ಅದರ ಕಾರ್ಯ ಸಾಮರ್ಥ್ಯದ ಮೇಲೂ ಪರಿಣಾಮ ಬೀರುತ್ತದೆ.

ವಿದ್ಯುತ್ ಬಳಕೆ

ಸಾಮಾನ್ಯವಾಗಿ ಮಳೆಗಾಲದಲ್ಲಿ ತಾಪಮಾನ ಕಡಿಮೆ ಇರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಗೀಸರ್ ನಿಂದ ಬಿಸಿ ನೀರು ಉತ್ಪಾದಿಸಲು ಹೆಚ್ಚಿನ ವಿದ್ಯುತ್ ಅಗತ್ಯವಿರುತ್ತದೆ. ವಿದ್ಯುತ್ ಪೂರೈಕೆಯಲ್ಲಿ ಉಂಟಾಗುವ ವ್ಯತ್ಯಾಸಗಳು ಗೀಸರ್ ಸ್ಫೋಟಕ್ಕೆ ಕಾರಣವಾಗುತ್ತದೆ.

ನೀರಿನ ಗುಣಮಟ್ಟ

ಮಳೆನೀರು ಸಾಮಾನ್ಯವಾಗಿ ಕಲ್ಮಶಗಳನ್ನು ಹೊಂದಿರುತ್ತದೆ. ಇದು ಗೀಸರ್ ಒಳಗೆ ಸಂಗ್ರಹಗೊಳ್ಳುತ್ತದೆ ಮತ್ತು ಅದರ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ.

Geyser Blast
Geyser Blast


ಎಚ್ಚರಿಕೆ ವಹಿಸುವುದು ಹೇಗೆ?

ಗೀಸರ್‌ನ ವೈರಿಂಗ್ ಸರಿಯಾಗಿ ಮಾಡಲಾಗಿದೆಯೇ ಮತ್ತು ಅದರಲ್ಲಿ ಯಾವುದೇ ದೋಷವಿಲ್ಲ ಎಂದು ಖಚಿತಪಡಿಸಿಕೊಳ್ಳಿ.

ಇದನ್ನೂ ಓದಿ: Samsung Galaxy: ಸ್ಯಾಮ್‌ಸಂಗ್‌ನಿಂದ ಗ್ಯಾಲಕ್ಸಿ ವಾಚ್7, ಗ್ಯಾಲಕ್ಸಿ ವಾಚ್ ಅಲ್ಟ್ರಾ, ಬಡ್ಸ್ 3 ಸರಣಿ ಬಿಡುಗಡೆ

ಗೀಸರ್ ಅನ್ನು ನಿಯಮಿತವಾಗಿ ಸ್ವಚ್ಛಗೊಳಿಸುತ್ತಿರಿ. ಇದರಿಂದ ಅದು ತುಕ್ಕು ಹಿಡಿಯುವುದಿಲ್ಲ ಮತ್ತು ಅದು ಉತ್ತಮವಾಗಿ ಕಾರ್ಯವನ್ನು ನಿರ್ವಹಿಸುತ್ತದೆ.

ತುಕ್ಕು ಮತ್ತು ತೇವಾಂಶಕ್ಕೆ ಹೆಚ್ಚು ನಿರೋಧಕವಾಗಿರುವ ಉತ್ತಮ ಗುಣಮಟ್ಟದ ಗೀಸರ್ ಅನ್ನು ಖರೀದಿಸಿ.
ಗೀಸರ್ ಅನ್ನು ಓವರ್‌ಲೋಡ್ ಮಾಡಬೇಡಿ. ಏಕೆಂದರೆ ಇದು ಗೀಸರ್ ಅನ್ನು ಹಾನಿಗೊಳಿಸಬಹುದು.

Continue Reading

ಆಟೋಮೊಬೈಲ್

4 ಲಕ್ಷ ಬೈಕ್‌, ಸ್ಕೂಟರ್‌ ಹಿಂಪಡೆಯಲು ಮುಂದಾದ ಸುಜುಕಿ ಇಂಡಿಯಾ; ಈ ಪಟ್ಟಿಯಲ್ಲಿ ನಿಮ್ಮ ವಾಹನವೂ ಇದ್ಯಾ? ಹೀಗೆ ಚೆಕ್‌ ಮಾಡಿ

Suzuki India: ದೇಶದ ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿ ಸುಜುಕಿ ಇಂಡಿಯಾ ಗ್ರಾಹಕರು ಈ ಸುದ್ದಿ ಓದಲೇಬೇಕು. ಕಂಪನಿ ಸುಮಾರು 4 ಲಕ್ಷಕ್ಕೂ ಹೆಚ್ಚು ಬೈಕ್‌ ಮತ್ತು ಸ್ಕೂಟರ್‌ಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಮುಂದಾಗಿದೆ. ಇಗ್ನಿಷನ್ ಕಾಯಿಲ್‌ಗೆ ಸಂಪರ್ಕ ಹೊಂದಿರುವ ಹೈ-ಟೆನ್ಶನ್ ಕಾರ್ಡ್‌ನಲ್ಲಿ ದೋಷ ಪತ್ತೆಯಾದ ಹಿನ್ನಲೆಯಲ್ಲಿ ಒಟ್ಟು 3,88,411 ದ್ವಿಚಕ್ರ ವಾಹನಗಳನ್ನು ತಪಾಸಣೆ ಮಾಡಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ವಾಹನವೂ ಇದ್ಯಾ ಎನ್ನುವುದನ್ನು ಪರಿಶೀಲಿಸಲು ಇಲ್ಲಿದೆ ಸುಲಭ ವಿಧಾನ.

VISTARANEWS.COM


on

Suzuki India
Koo

ನವದೆಹಲಿ: ದೇಶದ ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿ ಸುಜುಕಿ ಇಂಡಿಯಾ (Suzuki India) ಸುಮಾರು 4 ಲಕ್ಷಕ್ಕೂ ಹೆಚ್ಚು ಬೈಕ್‌ ಮತ್ತು ಸ್ಕೂಟರ್‌ಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಮುಂದಾಗಿದೆ. ಇಗ್ನಿಷನ್ ಕಾಯಿಲ್‌ಗೆ ಸಂಪರ್ಕ ಹೊಂದಿರುವ ಹೈ-ಟೆನ್ಶನ್ ಕಾರ್ಡ್‌ನಲ್ಲಿ ದೋಷ ಪತ್ತೆಯಾದ ಹಿನ್ನಲೆಯಲ್ಲಿ ಒಟ್ಟು 3,88,411 ದ್ವಿಚಕ್ರ ವಾಹನಗಳನ್ನು ತಪಾಸಣೆ ಮಾಡಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಂಪನಿ ತಿಳಿಸಿದೆ.

2022ರ ಏಪ್ರಿಲ್ 30 ಮತ್ತು 2022ರ ಡಿಸೆಂಬರ್ 3ರ ನಡುವೆ ತಯಾರಿಸಲಾದ, ಬಹು ಬೇಡಿಕೆಯ ಆಕ್ಸೆಸ್ 125, ಅವೆನಿಸ್ 125 ಮತ್ತು ಬರ್ಗ್‌ಮ್ಯಾನ್ ಸ್ಟ್ರೀಟ್ 125 (Access 125, Avenis 125, and Burgman Street 125) ಅನ್ನು ಹಿಂಪಡೆಯಲು ಕಂಪನಿ ಮುಂದಾಗಿದೆ ಎಂದು ವರದಿ ತಿಳಿಸಿದೆ. ಇನ್ನು ಬೈಕ್‌ಗಳ ಪೈಕಿ ಟೆಕ್-ಲೋಡೆಡ್ ವಿ-ಸ್ಟ್ರೋಮ್ 800 ಡಿಇ (V-Strom 800 DE) ಮಾಡೆಲ್‌ನಲ್ಲಿ ಕೂಡ ಇದೇ ಸಮಸ್ಯೆ ಕಂಡು ಬಂದಿದೆ. ಜತೆಗೆ ಹಿಂದಿನ ಟೈರ್‌ ವಿಚಾರದಲ್ಲಿ ಸಮಸ್ಯೆ ಇರುವ ಬಗ್ಗೆಯೂ ಕಂಪನಿ ಗಮನಿಸಿದೆ. ಬ್ರ್ಯಾಂಡ್ ಹಂಚಿಕೊಂಡ ವಿವರಗಳ ಪ್ರಕಾರ, ಟೈರ್ ಟ್ರೆಡ್‌ನ ಕೆಲವು ಭಾಗವು ಬೇರ್ಪಟ್ಟು ಅದರಲ್ಲಿ ಬಿರುಕುಗಳನ್ನು ಉಂಟು ಮಾಡಬಹುದು ಈ ಕಾರಣಕ್ಕೆ ವಿ-ಸ್ಟ್ರೋಮ್ 800 ಡಿಇ ಅನ್ನೂ ಪರಿಶೀಲನೆಗೆ ಒಳಪಡಿಸಲಾಗುತ್ತದೆ.

ಹೀಗೆ ಪರಿಶೀಲಿಸಿ

ಒಂದುವೇಳೆ ನೀವು ಖರೀದಿಸಿದ ವಾಹನ ಕಂಪನಿ ಹಿಂಪಡೆಯಲಿರುವ ಲಿಸ್ಟ್‌ನಲ್ಲಿದ್ದು ಅದನ್ನು ಹೇಗೆ ಕಂಡುಕೊಳ್ಳುವುದು ಎನ್ನುವ ಚಿಂತೆಯಲ್ಲಿದ್ದೀರಾ? ಪರಿಶೀಲಿಸಲು ಇಲ್ಲಿದೆ ಸುಲಭ ವಿಧಾನ. ನೀವು ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ವಾಹನದ ವಿಐಎನ್‌ (VIN) ನಮೂದಿಸಿ ನಿಮ್ಮ ವಾಹನದಲ್ಲಿಯೂ ಬದಲಾವಣೆಯ ಅವಶ್ಯಕತೆ ಇದೆಯೇ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಬಹುದಾಗಿದೆ.

ನಿಮ್ಮ ವಾಹನವನ್ನು ಚೆಕ್‌ ಮಾಡಲು ಇಲ್ಲಿ ಕ್ಲಿಕ್‌ ಮಾಡಿ (https://www.suzukimotorcycle.co.in/service-campaign)

ಅಪಾರ ಬೇಡಿಕೆ

ಸುಜುಕಿ ಇಂಡಿಯಾ ಸದ್ಯ ಸ್ಕೂಟರ್ ಮತ್ತು ಬೈಕ್ ವಿಭಾಗಗಳಲ್ಲಿ ಭಾರತದ ಗ್ರಾಹಕರ ಮನಸ್ಸು ಗೆದ್ದಿದೆ. ವ್ಯಾಪಕ ಶ್ರೇಣಿಯ ಉತ್ಪನ್ನಗಳನ್ನು ಹೊಂದಿದ್ದು ಪ್ರತಿಸ್ಪರ್ಧಿಗಳಿಗೆ ಸವಾಲೊಡ್ಡಿದೆ. ಈ ಪಟ್ಟಿಯಲ್ಲಿ ಸುಜುಕಿ ಆಕ್ಸೆಸ್ 125, ಸುಜುಕಿ ಬರ್ಗ್‌ಮ್ಯಾನ್ ಸ್ಟ್ರೀಟ್ ಮತ್ತು ಸುಜುಕಿ ಬರ್ಗ್‌ಮ್ಯಾನ್ ಸ್ಟ್ರೀಟ್ 125, ಸುಜುಕಿ ಕಟಾನಾ, ಸುಜುಕಿ ಜಿಕ್ಸರ್ ಎಸ್ಎಫ್, ಸುಜುಕಿ ಜಿಕ್ಸರ್ 250, ಸುಜುಕಿ ವಿ-ಸ್ಟ್ರೋಮ್ ಎಸ್ಎಕ್ಸ್, ಸುಜುಕಿ ಜಿಎಸ್ಎಕ್ಸ್-ಆರ್ 1000 ಆರ್‌ಗೆ ಅಪಾರ ಬೇಡಿಕೆ ಇದೆ.

ಕಂಪನಿ ಹೇಳಿದ್ದೇನು?

ಎಂಜಿನ್ ಸ್ಥಗಿತ, ಸ್ಟಾರ್ಟ್ ಮಾಡುವಾಗ ಕಂಡುಬರುವ ತೊಂದರೆ, ದೋಷಪೂರಿತ ಸ್ಪೀಡೋಮೀಟರ್‌ಗಳ ಬಗ್ಗೆ ಗ್ರಹಾಕರು ದೂರು ಸಲ್ಲಿಸಿರುವ ಹಿನ್ನಲೆಯಲ್ಲಿ ವಾಹನಗಳನ್ನು ಹಿಂಪಡೆಯಲಾಗುತ್ತಿದೆ. ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕೃತ ಸುಜುಕಿ ಸೇವಾ ಕೇಂದ್ರಗಳಲ್ಲಿ ತಮ್ಮ ವಾಹನಗಳನ್ನು ದುರಸ್ತಿ ಪಡಿಸಬೇಕು ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ: Royal Enfield Guerrilla 450 : ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಖರೀದಿ ಮಾಡಲು ಐದು ಕಾರಣ ಇಲ್ಲಿದೆ

Continue Reading

ಗ್ಯಾಜೆಟ್ಸ್

Apple iPhones: ಆ್ಯಪಲ್‌ ಬ್ರ್ಯಾಂಡ್‌ ಪ್ರಿಯರಿಗೆ ಗುಡ್‌ನ್ಯೂಸ್;‌ ಐಫೋನ್‌ಗಳ ಬೆಲೆಯಲ್ಲಿ ಗಣನೀಯ ಇಳಿಕೆ

ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024 ರಲ್ಲಿ ಮೊಬೈಲ್ ಫೋನ್‌ಗಳ ಮೂಲ ಕಸ್ಟಮ್ಸ್ ಸುಂಕವನ್ನು ಶೇ.20 ರಿಂದ 15ರಷ್ಟು ಇಳಿಕೆ ಮಾಡಿರುವುದಾಗಿ ಘೋಷಣೆ ಮಾಡಿದ ಬಳಿಕ ಆ್ಯಪಲ್‌ (Apple iPhones) ಈ ಬಾರಿ ಪ್ರೊ ಮಾಡೆಲ್‌ಗಳ ಬೆಲೆಗಳನ್ನು ಕಡಿಮೆ ಮಾಡಿದೆ.

VISTARANEWS.COM


on

By

Apple iPhones
Koo

ನವದೆಹಲಿ: ಆ್ಯಪಲ್‌ ತನ್ನ ಎಲ್ಲ ಮಾದರಿಗಳ ಐಫೋನ್‌ಗಳ (Apple iPhones) ಬೆಲೆಗಳನ್ನು ಶೇ. 3- 4ರಷ್ಟು ಕಡಿತಗೊಳಿಸಿದೆ. ಇದರಿಂದ ಗ್ರಾಹಕರು ಪ್ರೊ ಅಥವಾ ಪ್ರೊ ಮ್ಯಾಕ್ಸ್ ಮಾದರಿ ಮೇಲೆ 5,100 ರಿಂದ 6,000 ರೂ. ವರೆಗೆ (Apple cut prices) ಉಳಿಸಬಹುದಾಗಿದೆ. ಐಫೋನ್ 13, 14 ಮತ್ತು 15 ಸೇರಿದಂತೆ ಇನ್ನು ಕೆಲವು ಮಾದರಿಯ ಐಫೋನ್‌ಗಳು ಮೇಲೆ 300 ರೂ. ಮತ್ತು ಐಫೋನ್ ಎಸ್‌ಇ 2,300 ರೂ. ಕಡಿತ ಮಾಡಲಾಗಿದೆ ಎಂದು ಕಂಪೆನಿ ತಿಳಿಸಿದೆ.

ಇದೇ ಮೊದಲ ಬಾರಿಗೆ ಆ್ಯಪಲ್‌ ತನ್ನ ಪ್ರೊ ಮಾದರಿಗಳಿಗೆ (Pro models) ಬೆಲೆಗಳನ್ನು ಕಡಿಮೆ ಮಾಡಿದೆ. ಹೊಸ ಪ್ರೊ ಮಾದರಿಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ ಅನಂತರ ಕಂಪೆನಿಯು ಹಳೆಯ ಪ್ರೊ ಮಾದರಿಗಳನ್ನು ನಿಲ್ಲಿಸುತ್ತದೆ. ಹಳೆಯ ಪ್ರೊ ಮಾಡೆಲ್‌ಗಳ ದಾಸ್ತಾನುಗಳನ್ನು ಮಾತ್ರ ವಿತರಕರು ಮತ್ತು ಮರುಮಾರಾಟಗಾರರ ಮೂಲಕ ರಿಯಾಯಿತಿ ದರದಲ್ಲಿ ತೆರವು ಮಾಡಲಾಗುತ್ತದೆ. ಹೀಗಾಗಿ ಪ್ರೊ ಮಾದರಿಗಳ ಗರಿಷ್ಠ ಚಿಲ್ಲರೆ ಮಾರಾಟದ ಬೆಲೆಯನ್ನು (MRP) ಇಲ್ಲಿ ಕಡಿಮೆ ಮಾಡಲಾಗಿಲ್ಲ.

ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024 ರಲ್ಲಿ ಮೊಬೈಲ್ ಫೋನ್‌ಗಳ ಮೂಲ ಕಸ್ಟಮ್ಸ್ ಸುಂಕವನ್ನು ಶೇ.20 ರಿಂದ 15ರಷ್ಟು ಇಳಿಕೆ ಮಾಡಿರುವುದಾಗಿ ಘೋಷಣೆ ಮಾಡಿದ ಬಳಿಕ ಆ್ಯಪಲ್‌ ಈ ಬಾರಿ ಪ್ರೊ ಮಾಡೆಲ್‌ಗಳ ಬೆಲೆಗಳನ್ನು ಕಡಿಮೆ ಮಾಡಿದೆ. ಮೊಬೈಲ್ ಫೋನ್‌ಗಳ ಹೊರತಾಗಿ ಮೊಬೈಲ್ ಫೋನ್ ಚಾರ್ಜರ್‌ಗಳಿಗೆ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ ಜೋಡಣೆ ಕಸ್ಟಮ್ಸ್ ಸುಂಕವನ್ನು ಕಡಿತಗೊಳಿಸಲಾಗಿದೆ.

Apple iPhones
Apple iPhones


ಪ್ರಸ್ತುತ, ಭಾರತದಲ್ಲಿ ಮಾರಾಟವಾಗುವ ಆಮದು ಮಾಡಿದ ಸ್ಮಾರ್ಟ್‌ಫೋನ್‌ಗಳು ಶೇ. 18ರಷ್ಟು ಜಿಎಸ್‌ಟಿ ಮತ್ತು ಶೇ. 22ರಷ್ಟು ಕಸ್ಟಮ್ಸ್ ಸುಂಕವನ್ನು ಪಾವತಿಸಬೇಕಾಗುತ್ತದೆ. ಇದರಲ್ಲಿ ಹೆಚ್ಚುವರಿ ಶುಲ್ಕ, ಮೂಲ ಕಸ್ಟಮ್ಸ್ ಸುಂಕ ಕಳೆದು ಶೇ. 10ರಷ್ಟುಉಳಿಯುತ್ತದೆ. ಬಜೆಟ್ ಕಡಿತದ ಅನಂತರ ಒಟ್ಟು ಕಸ್ಟಮ್ಸ್ ಸುಂಕವು ಶೇ. 16.5ರಷ್ಟಾಗಿರುತ್ತದೆ. ಇದರಲ್ಲಿ ಶೇ. 15% ಮೂಲ ಮತ್ತು ಶೇ. 1.5 ಹೆಚ್ಚುವರಿ ಶುಲ್ಕ ಸೇರಿದೆ. ಭಾರತದಲ್ಲಿ ತಯಾರಿಸಿದ ಫೋನ್‌ಗಳಿಗೆ ಕೇವಲ ಶೇ. 18ರಷ್ಟು ಜಿಎಸ್ ಟಿ ವಿಧಿಸಲಾಗುತ್ತದೆ.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಪ್ರಸ್ತುತ ಭಾರತದಲ್ಲಿ ಮಾರಾಟವಾಗುವ ಶೇ.99ರಷ್ಟು ಆ್ಯಪಲ್‌ನ ಮೊಬೈಲ್ ಫೋನ್‌ಗಳನ್ನು ಸ್ಥಳೀಯವಾಗಿ ತಯಾರಿಸಲಾಗುತ್ತದೆ. ಆದರೆ ಆಯ್ದ ಉನ್ನತ ಮಟ್ಟದ ಮಾದರಿಗಳನ್ನು ಮಾತ್ರ ಆಮದು ಮಾಡಿಕೊಳ್ಳಲಾಗುತ್ತದೆ.

Continue Reading

ವಾಣಿಜ್ಯ

Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

Jio Air Fiber: ಜಿಯೋದಿಂದ ಏರ್ ಫೈಬರ್ ಹೊಸ ಗ್ರಾಹಕರಿಗೆ “ಫ್ರೀಡಂ ಆಫರ್” ಶೇಕಡಾ 30ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ. ಅಂದ ಹಾಗೆ ಜಿಯೋಫೈಬರ್ ಅಥವಾ ಏರ್ ಫೈಬರ್ ಎಂಬುದು ದೇಶದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಮತ್ತು ಅತಿ ದೊಡ್ಡದಾದ ಗೃಹ ಬ್ರಾಡ್ ಬ್ಯಾಂಡ್ ಹಾಗೂ ಮನರಂಜನಾ ಸೇವೆಯನ್ನು ಒದಗಿಸುತ್ತಿರುವ ಸಂಸ್ಥೆಯಾಗಿದೆ. ಏನು ಈ ಕೊಡುಗೆ ಎಂಬ ವಿವರ ಇಲ್ಲಿದೆ.

VISTARANEWS.COM


on

Jio announced 30 Percent discount on Freedom Offer for Air Fiber new customers
Koo

ಮುಂಬೈ: ಜಿಯೋದಿಂದ ಏರ್ ಫೈಬರ್ ಹೊಸ ಗ್ರಾಹಕರಿಗೆ “ಫ್ರೀಡಂ ಆಫರ್” ಶೇಕಡಾ 30ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ. ಅಂದ ಹಾಗೆ ಜಿಯೋ ಫೈಬರ್ ಅಥವಾ ಏರ್ ಫೈಬರ್ ಎಂಬುದು ದೇಶದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಮತ್ತು ಅತಿ ದೊಡ್ಡದಾದ ಗೃಹ ಬ್ರಾಡ್ ಬ್ಯಾಂಡ್ ಹಾಗೂ ಮನರಂಜನಾ ಸೇವೆಯನ್ನು ಒದಗಿಸುತ್ತಿರುವ (Jio Air Fiber) ಸಂಸ್ಥೆಯಾಗಿದೆ.

1.2 ಕೋಟಿ ಮನೆಗಳೊಂದಿಗೆ ಜಿಯೋಫೈಬರ್ ಅಥವಾ ಏರ್ ಫೈಬರ್ ಎಂಬುದು ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. ಭಾರತೀಯರ ಮನೆಗಳನ್ನು ಇನ್ನಷ್ಟು ವೇಗವಾಗಿ ಡಿಜಿಟೈಸ್ ಮಾಡುವ ಉದ್ದೇಶದಿಂದ ಮತ್ತು ಭಾರತವನ್ನು ಡಿಜಿಟಲ್ ಸಮುದಾಯವಾಗಿ ಮಾರ್ಪಡಿಸುವ ಉದ್ದೇಶದಿಂದ ಜಿಯೋದಿಂದ ಈ ಭರವಸೆಯ ಕೊಡುಗೆಯನ್ನು ಘೋಷಣೆ ಮಾಡಲಾಗಿದೆ. ಇದರಿಂದಾಗಿ ಇನ್ನಷ್ಟು ಮನೆಗಳಲ್ಲಿ ಈ ಸಂಪರ್ಕ ಪಡೆಯುವುದಕ್ಕೆ ಉತ್ತೇಜನ ದೊರೆಯುತ್ತದೆ. ಈಗಾಗಲೇ ಕೈಗೆಟುಕುವ ಬೆಲೆಯಲ್ಲಿ ಇರುವ ಜಿಯೋಏರ್ ಫೈಬರ್ ಪ್ಲಾನ್‌ಗಳ ಜತೆಗೆ ಶೇಕಡಾ 30ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಎಂದು ಕಂಪನಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Paris Olympics India schedule: ಒಲಿಂಪಿಕ್ಸ್​ನಲ್ಲಿ ನಾಳೆ ಭಾರತ ಯಾವೆಲ್ಲ ವಿಭಾಗದಲ್ಲಿ ಸ್ಪರ್ಧಿಸಲಿದೆ?; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಈ ಫ್ರೀಡಂ ಆಫರ್ ಜತೆಗೆ ಹೊಸ ಜಿಯೋಏರ್ ಫೈಬರ್ ಬಳಕೆದಾರರು ಶೇ 30ರಷ್ಟು ರಿಯಾಯಿತಿಯನ್ನು ಹೊಸ ಸಂಪರ್ಕವನ್ನು 1000 ರೂಪಾಯಿಯ ಇನ್‌ಸ್ಟಲೇಷನ್ ಶುಲ್ಕದ ಮನ್ನಾದ ಮೂಲಕ ಪಡೆಯುತ್ತಾರೆ. ಇದು ಸೀಮಿತ ಅವಧಿಯ ಕೊಡುಗೆ ಆಗಿದ್ದು, ಜುಲೈ 26ರಿಂದ ಆಗಸ್ಟ್ 15ನೇ ತಾರೀಕಿನ ಮಧ್ಯೆ ಇರುತ್ತದೆ.

ಜಿಯೋಏರ್ ಫೈಬರ್ ಸಂಪರ್ಕ ಪಡೆಯುವುದು ಹೇಗೆ?

ಇನ್ನು ಜಿಯೋಏರ್ ಫೈಬರ್ ಸಂಪರ್ಕ ಪಡೆಯುವುದು ಹೇಗೆ ಎಂಬ ಪ್ರಶ್ನೆ ಇದೆಯಾ? ಅದು ಬಹಳ ಸರಳ. Jio.com ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ನಿಮಗಿರುವ ಆಸಕ್ತಿಯನ್ನು ತಿಳಿಸಿ ಅಥವಾ 60008-60008 ಈ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿ. ಜಿಯೋದಿಂದ ಸ್ಥಿರ ನಿಸ್ತಂತು (ವೈರ್ಲೆಸ್) ಕೊಡುಗೆ ಏರ್ ಫೈಬರ್ ಅನ್ನು ಕಳೆದ ವರ್ಷ ಗಣೇಶ ಚತುರ್ಥಿಗೆ ಪರಿಚಯಿಸಲಾಯಿತು.

ಜಿಯೋದಿಂದ 5ಜಿ ಸ್ಟ್ಯಾಂಡ್ ಅಲೋನ್ ಸಂಪರ್ಕ ಸೇವೆಗಳನ್ನು ನಿಯೋಜಿಸಲಾಗಿದೆ. 5ಜಿ ಸ್ಥಿರ ನಿಸ್ತಂತು ಸಂಪರ್ಕವನ್ನು ಒದಗಿಸುವುದಕ್ಕೆ ಮೀಸಲಿಟ್ಟ ನೆಟ್‌ವರ್ಕ್ ಬಳಕೆ ಮಾಡುತ್ತಿದೆ. ನೆಟ್‌ವರ್ಕ್ ಇಕ್ಕಟ್ಟಾಗುವುದನ್ನು ನಿರ್ವಹಿಸುವುದಕ್ಕೆ ಇದರಿಂದ ಸಹಾಯ ಆಗುತ್ತದೆ. ಆದರೂ ಏರ್‌ಫೈಬರ್‌ನ ಸರಾಸರಿ ಬಳಕೆದಾರರು ಒಂದು ತಿಂಗಳಿಗೆ 400 ಜಿಬಿ ಡೇಟಾ ಬಳಸುತ್ತಾರೆ.

ಏನಿದು ಜಿಯೋ ಏರ್ ಫೈಬರ್?

ಯಾವುದೇ ತಂತಿ ಇಲ್ಲದೆ ಫೈಬರ್ ರೀತಿ ವೇಗವನ್ನು ಗಾಳಿಯ ಮೂಲಕವೇ ಒದಗಿಸುತ್ತದೆ ಏರ್ ಫೈಬರ್. ಬಳಕೆದಾರರು ಪ್ಲಗ್ ಹಾಕಿ, ಆನ್ ಮಾಡಿದರೆ ಆಯಿತು. ಇಷ್ಟು ಮಾಡಿದಲ್ಲಿ ತಮ್ಮ ಮನೆಯಲ್ಲಿ ವೈಯಕ್ತಿಕವಾಗಿ ಹಾಟ್‌ಸ್ಪಾಟ್ ಅನ್ನು ತಮ್ಮ ಮನೆಯಲ್ಲಿ ಇರಿಸಿಕೊಂಡಂತಾಗುತ್ತದೆ.

ಇದನ್ನೂ ಓದಿ: Rain in Karnataka: ಬೆಳಗಾವಿಯಲ್ಲಿ ನಗರದೊಳಗೆ ಬಂದ ನದಿಗಳು, ಮನೆ ಖಾಲಿ ಮಾಡಿದ ಜನ

ಜಿಯೋಫೈಬರ್ ಸ್ಥಿರ ನಿಸ್ತಂತು ಸಂಪರ್ಕ ಪರಿಹಾರವಾಗಿದ್ದು, ಇದರಿಂದ ಯಾವುದೇ ಅಡೆತಡೆಯಿಲ್ಲದೆ 1 ಜಿಬಿಪಿಎಸ್ ತನಕದ ಹೈ- ಸ್ಪೀಡ್ ಸಂಪರ್ಕ ಮನೆ ಮತ್ತು ಕಚೇರಿಗಳಿಗೆ ದೊರೆಯುತ್ತದೆ. ಏಕಕಾಲಕ್ಕೆ ಹಲವು ಸಾಧನಗಳನ್ನು ಬಳಸಬಹುದು. ಸ್ಮಾರ್ಟ್‌ ಫೋನ್, ಪರ್ಸನಲ್ ಕಂಪ್ಯೂಟರ್‌ಗಳು, ಟ್ಯಾಬ್ಲೆಟ್, ಸ್ಮಾರ್ಟ್ ಟಿವಿಗಳು, ಮತ್ತು ಇದರ ಜತೆಗೆ ಸೆಟ್ ಟಾಪ್ ಬಾಕ್ಸ್‌ಗಳನ್ನು ಸಹ ಏಕಕಾಲಕ್ಕೆ ಸಂಪರ್ಕ ಕೊಡಬಹುದು, ಅದು ಕೂಡ ಇಂಟರ್‌ನೆಟ್ ವೇಗದಲ್ಲಿ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲದಂತೆ ಸಾಧ್ಯವಾಗುತ್ತದೆ.

Continue Reading
Advertisement
Fraud Case
Latest4 mins ago

Fraud Case: 20ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಚಿನ್ನಾಭರಣ ಎಗರಿಸಿದ್ದ ವಂಚಕ ಪೊಲೀಸ್‌ ಬಲೆಗೆ ಬಿದ್ದಿದ್ದು ಹೇಗೆ?

Paris Olympics 2024
ಕ್ರೀಡೆ37 mins ago

Paris Olympics 2024 : ಭಾರತಕ್ಕೆ ಶೂಟಿಂಗ್​ನಲ್ಲಿ ಕಂಚಿನ ಪದಕ ಜಸ್ಟ್​ ಮಿಸ್​!

Rajendra Nagara tragedy
ದೇಶ1 hour ago

Rajendra Nagar Tragedy: ನೆಲಮಾಳಿಗೆ ಗೇಟ್‌ಗೆ SUV ಕಾರು ಡಿಕ್ಕಿ ಹೊಡೆದಿದ್ದ ಚಾಲಕ ಅರೆಸ್ಟ್‌- ವಿಡಿಯೋ ವೈರಲ್‌

Mosquito Repellents
ಆರೋಗ್ಯ1 hour ago

Natural Mosquito Repellents: ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ನೈಸರ್ಗಿಕ ಉಪಾಯಗಳು!

DK Shivakumar
ಕರ್ನಾಟಕ1 hour ago

DK Shivakumar: ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ; ಮಳೆ ಬರಲ್ಲ ಎಂದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದ ಡಿಕೆಶಿ

ICW 2024
ಫ್ಯಾಷನ್2 hours ago

ICW 2024: ರ‍್ಯಾಂಪ್‌ ಮೇಲೆ ಮಾಡೆಲ್‌ಗಳು ಧರಿಸಿರುವುದು ಗೌನಾ ಅಥವಾ ಪಂಜರ?!

Aditya Birla Group
ಚಿನ್ನದ ದರ2 hours ago

Aditya Birla Group: ಟಾಟಾ, ಅಂಬಾನಿಯೊಂದಿಗೆ ಸ್ಪರ್ಧೆ: ಆಭರಣ ವ್ಯಾಪಾರಕ್ಕೆ ಬಿರ್ಲಾ ಎಂಟ್ರಿ!

ಪ್ರಮುಖ ಸುದ್ದಿ2 hours ago

Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

karnataka Rain
ಮಳೆ2 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

New Toll System
ತಂತ್ರಜ್ಞಾನ2 hours ago

New Toll System: ಫಾಸ್ಟ್‌ ಟ್ಯಾಗ್‌ಗೂ ಉಪಗ್ರಹ ಆಧರಿತ ಟೋಲ್‌ ಸಂಗ್ರಹಕ್ಕೂ ಏನು ವ್ಯತ್ಯಾಸ? ಏನು ಪ್ರಯೋಜನ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ1 day ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌