WhatsApp: ವಾಟ್ಸಾಪ್‌ ಖಾತೆಗೆ ನಿಮ್ಮ ಇ ಮೇಲ್ ಅಡ್ರೆಸ್ ಲಿಂಕ್ ಮಾಡಬಹುದು! ಆದರೆ…? - Vistara News

ಗ್ಯಾಜೆಟ್ಸ್

WhatsApp: ವಾಟ್ಸಾಪ್‌ ಖಾತೆಗೆ ನಿಮ್ಮ ಇ ಮೇಲ್ ಅಡ್ರೆಸ್ ಲಿಂಕ್ ಮಾಡಬಹುದು! ಆದರೆ…?

WhatsApp: ಜನಪ್ರಿಯ ಮೆಸೇಜಿಂಗ್ ಆ್ಯಪ್ ವಾಟ್ಸಾಪ್, ಐಒಎಸ್ ಬಳಕೆದಾರರಿಗೆ ಹೊಸ ಫೀಚರ್ ಪರಿಚಯಿಸುತ್ತಿದೆ.

VISTARANEWS.COM


on

WhatsApp new feature lets you search users by their username Says Report
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ (WhatsApp) ತನ್ನ ಬಳಕೆದಾರರಿಗೆ ಮತ್ತೊಂದು ಫೀಚರ್ (New Feature) ಅಪ್‌ಡೇಟ್ ಮಾಡುತ್ತಿದೆ. ಐಒಎಸ್‌ ಸಾಧನಗಳಲ್ಲಿ (iOS Devices) ಬಳಕೆದಾರರು ತಮ್ಮ ಇ ಮೇಲ್ ವಿಳಾಸವನ್ನು (e-mail) ವಾಟ್ಸಾಪ್‌ ಖಾತೆಗೆ ಲಿಂಕ್ ಮಾಡಲು ಅನುಮತಿಸುವ ಅವಕಾಶವನ್ನು ಕಲ್ಪಿಸಲಾಗುತ್ತಿದೆ. ಮೆಸೇಜಿಂಗ್ ಅಪ್ಲಿಕೇಶನ್ ಪ್ರಸ್ತುತ ಬಳಕೆದಾರರು ತಮ್ಮ ನೋಂದಾಯಿತ ಫೋನ್ ಸಂಖ್ಯೆಯನ್ನು ಬಳಸಿಕೊಂಡು, ತಮ್ಮ ಖಾತೆಗೆ ಲಾಗ್ ಇನ್ ಮಾಡಲು ಅನುಮತಿಸುತ್ತದೆ. ಇಮೇಲ್ ವಿಳಾಸವನ್ನು ಸೇರಿಸುವುದರಿಂದ ವಾಟ್ಸಾಪ್‌ಗೆ ಪ್ರವೇಶದ ಹೆಚ್ಚುವರಿ ಮಾರ್ಗವನ್ನು ಸೃಷ್ಟಿಸಿದಂತಾಗಲಿದೆ. ವಿಶೇಷ ಎಂದರೆ, ಇಮೇಲ್ ವಿಳಾಸಗಳು ಕಾಂಟಾಕ್ಟ್ಸ್‌ನಲ್ಲಿ ಗೋಚರಿಸುವುದಿಲ್ಲ. ಲಾಗ್‌ಇನ್ ಮಾಡಲು ಎಸ್ಸೆಮ್ಮೆಸ್ ಪಡೆದುಕೊಳ್ಳು ಸಾಧ್ಯವಾಗದೇ ಇದ್ದಾಗ ಈ ಫೀಚರ್ ಬಳಕೆದಾರರಿಗೆ ಹೆಚ್ಚು ಉಪಯುಕ್ತ ಕೂಡ ಆಗಲಿದೆ. ಆದರೆ, ಈ ಫೀಚರ್ ಸದ್ಯಕ್ಕೆ ಐಒಎಸ್ ಬಳಕೆದಾರರಿಗೆ ಮಾತ್ರವೇ ದೊರೆಯಲಿದ್ದು, ಆಂಡ್ರಾಯ್ಡ್ ಬಳಕೆದಾರರಿಗೆ (Android Users) ಯಾವಾಗ ದೊರೆಯಲಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.

WABetaInfo ಪ್ರಕಾರ, ಐಒಎಸ್‌ 2.23.24.70 ಅಪ್‌ಡೇಟ್‌ನಲ್ಲಿ ಈ ಹೊಸ ಫೀಚರ್‌ ಕಂಡು ಬಂದಿದೆ. ಈ ಅಪ್‌ಡೇಟ್ ಬಳಕೆದಾರರಿಗೆ ವಾಟ್ಸಾಪ್‌ ಖಾತೆಗೆ ತಮ್ಮ ಇಮೇಲ್ ವಿಳಾಸವನ್ನು ಸೇರಿಸಲು ಬಗ್ಗೆ ಕೇಳುತ್ತಿದೆ. ಅಪ್ಲಿಕೇಶನ್‌ನಲ್ಲಿರುವ ಸಂದೇಶವು “ನಿಮ್ಮ ಖಾತೆಯನ್ನು ಪ್ರವೇಶಿಸಲು ಇಮೇಲ್ ಸಹಾಯ ಮಾಡುತ್ತದೆ. ಇದು ಇತರರಿಗೆ ಗೋಚರಿಸುವುದಿಲ್ಲ” ಎಂದು ಹೇಳುತ್ತದೆ. ಒಮ್ಮೆ ನೀವು ನಿಮ್ಮ ಇಮೇಲ್ ವಿಳಾಸವನ್ನು ನಮೂದಿಸಿದರೆ, ದೃಢೀಕರಣಕ್ಕಾಗಿ ಕಳುಹಿಸಲಾದ ಪರಿಶೀಲನಾ ಕೋಡ್ ಅನ್ನು ನೀವು ನಮೂದಿಸಬೇಕಾಗುತ್ತದೆ.

ನಿಮ್ಮ ವಾಟ್ಸಾಪ್ ಖಾತೆಗೆ ಇ ಮೇಲ್ ವಿಳಾಸ ಸೇರಿಸಲು ನಿಮ್ಮ ವಾಟ್ಸಾಪ್‌ ಅಪ್‌ಡೇಟ್‌ ಆಗಿರಬೇಕು. ಒಂದೊಮ್ಮೆ ಆಗಿಲ್ಲ ಎಂದಾದರೆ, ನಿಮ್ಮ ಐಫೋನ್‌ನಲ್ಲಿರುವ ಆ್ಯಪ್‌ ಸ್ಟೋರ್‌ ಮೂಲಕ ವಾಟ್ಸಾಪ್ ಅಪ್‌ಡೇಟ್ ಮಾಡಿಕೊಳ್ಳಬೇಕು. ಇಷ್ಟಾದ ಮೇಲೆ, ವಾಟ್ಸಾಪ್‌ ಸೆಟ್ಟಿಂಗ್ಸ್‌ಗೆ ಹೋಗಿ ಅಲ್ಲಿ ಅಕೌಂಟ್ ಮೇಲೆ ಟ್ಯಾಪ್ ಮಾಡಿ ಮತ್ತು ಇಮೇಲ್ ವಿಳಾಸದ ಜಾಗದಲ್ಲಿ ನಿಮ್ಮ ಇ ಮೇಲ್ ವಿಳಾಸವನ್ನು ನಮೂದಿಸಿ.

ನಿಮ್ಮ ಖಾತೆಗೆ ಇಮೇಲ್ ವಿಳಾಸವನ್ನು ಲಿಂಕ್ ಮಾಡಿದ ನಂತರ, ನೀವು ನೆಟ್‌ವರ್ಕ್ ಸಮಸ್ಯೆಗಳು ಅಥವಾ ಇತರ ತಾಂತ್ರಿಕ ತೊಂದರೆಗಳಿಂದ ಎಸ್ಸೆಮ್ಮೆಸ್‌ ಕೋಡ್‌ಗಳನ್ನು ಸ್ವೀಕರಿಸಲು ಸಾಧ್ಯವಾಗದಿದ್ದರೆ ನಿಮ್ಮ ಇಮೇಲ್ ವಿಳಾಸದ ಮೂಲಕ ಪರಿಶೀಲನೆ ಕೋಡ್‌ಗಳನ್ನು ಸ್ವೀಕರಿಸಲು ನಿಮಗೆ ಸಾಧ್ಯವಾಗುತ್ತದೆ. ಆದಾಗ್ಯೂ, ವಾಟ್ಸಾಪ್ ನಿಮ್ಮ ಫೋನ್ ಸಂಖ್ಯೆಯನ್ನು ಅಪ್ಲಿಕೇಶನ್‌ನಲ್ಲಿ ನಿಮ್ಮ ಪ್ರಾಥಮಿಕ ಗುರುತಿಸುವಿಕೆಯಾಗಿ ಬಳಸುವುದನ್ನು ಮುಂದುವರಿಸುತ್ತದೆ ಮತ್ತು ಇಮೇಲ್ ವಿಳಾಸವು ಸೇವೆಗೆ ದೃಢೀಕರಣ ಕೋಡ್‌ಗಳನ್ನು ಕಳುಹಿಸಲು ಖಾಸಗಿ ಮಾರ್ಗವಾಗಿ ಉಳಿಯುತ್ತದೆ ಎಂದು ಹೇಳಲಾಗುತ್ತಿದೆ.

ಸದ್ಯಕ್ಕೆ ಐಒಎಸ್‌ ಬಳಕೆದಾರರಿಗ ಮಾತ್ರವೇ ಲಭ್ಯವಾಗಲಿರುವ ಈ ಫೀಚರ್, ಸ್ಥಿರ ಚಾನೆಲ್‌ನಲ್ಲಿ ಆಂಡ್ರಾಯ್ಡ್ ಬಳಕೆದಾರರಿಗೆ ಯಾವಾಗ ದೊರೆಯಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ, ಆಂಡ್ರಾಯ್ಡ್‌ ಬೀಟಾ ಪರೀಕ್ಷಕರಿಗೆ ಸದ್ಯಕ್ಕೆ ಇದು ದೊರೆಯುತ್ತಿದೆ ಎಂಬುದು ಖಚತಿವಾಗಿದೆ. ಜಾಹೀರಾತಿಗಾಗಿ ಇಮೇಲ್ ಲಿಂಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆಂಡ್ರಾಯ್ಡ್‌ನಲ್ಲಿನ ಬಳಕೆದಾರರಿಗೆ ಇಮೇಲ್ ವಿಳಾಸವನ್ನು ಲಿಂಕ್ ಮಾಡುವ ವೈಶಿಷ್ಟ್ಯವನ್ನು ಮೆಟಾ-ಮಾಲೀಕತ್ವದ ಸಂದೇಶ ಸೇವೆಯು ಹೊರತರಲಿದೆ ಎಂದು ಬಳಕೆದಾರರು ನಿರೀಕ್ಷಿಸಬಹುದು.

ಈ ಸುದ್ದಿಯನ್ನೂ ಓದಿ: WhatsApp: ವಾಟ್ಸಾಪ್ ಚಾಟ್‌ ಲಾಕ್‌ ಮಾಡಲು ಸೀಕ್ರೆಟ್ ಕೋಡ್! ಇದು ಹೊಸ ಫೀಚರ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

WhatsApp colour: ವಾಟ್ಸ್ಆ್ಯಪ್​ನ ಬಣ್ಣ ಬದಲಾಗಿದ್ದು ಯಾಕೆ? ಏನಿದರ ಗುಟ್ಟು?

WhatsApp colour: ನಿರಂತರ ಅಪ್ಡೇಟ್ ಆಗುತ್ತಿರುವ ವಾಟ್ಸ್ ಆಪ್ ನಲ್ಲಿ ಈಗ ಬಣ್ಣ ಬದಲಾವಣೆ ಆಗಿದ್ದು, ಹೆಚ್ಚಿನವರು ಇದನ್ನು ಗಮನಿಸಿ ಇಲ್ಲದೇ ಇದ್ದರೂ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಯಾಕೆ ಈ ಬಣ್ಣ ಬದಲಾಯಿಸಲಾಗಿದೆ ಗೊತ್ತೇ?

VISTARANEWS.COM


on

By

WhatsApp color
Koo

ಜಗತ್ತಿನಾದ್ಯಂತ (world) ಎರಡು ಬಿಲಿಯನ್ ಗಿಂತಲೂ ಹೆಚ್ಚು ಮಂದಿ ಬಳಸುತ್ತಿರುವ ವಾಟ್ಸ್ ಆಪ್ (whatsApp) ತನ್ನ ವೈಶಿಷ್ಟ್ಯದಿಂದಾಗಿ ನಿರಂತರ ಎಲ್ಲರ ಗಮನ ಸೆಳೆಯುತ್ತದೆ. ಎಲ್ಲರೂ ಬಹು ಸುಲಭವಾಗಿ ಬಳಸಬಹುದಾದ ಈ ಪುಟ್ಟ ಆ್ಯಪ್ ಈಗ ನವೀಕರಣಗೊಂಡಿದ್ದು ಬಣ್ಣದ ಬದಲಾವಣೆಯಿಂದ (WhatsApp colour) ಬಳಕೆದಾರರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

ವಾಟ್ಸ್ ಆಪ್ ಈಗ ಒಂದು ಸೂಕ್ಷ್ಮ ಬದಲಾವಣೆಗೆ ಒಳಗಾಗಿದ್ದು ಅದು ಅದರ ಹಸಿರು ಬಣ್ಣ (green colour). ಸಂದೇಶ ಕಳುಹಿಸುವಿಕೆಯ ಅಪ್ಲಿಕೇಶನ್‌ ವಾಟ್ಸ್ ಆ್ಯಪ್​ ನ ಭಾಗಗಳು ಈಗ ಲೋಗೋದಂತೆಯೇ ಹಸಿರು ಬಣ್ಣಕ್ಕೆ ತಿರುಗಿದೆ. ಆದರೆ ಇದು ಹೆಚ್ಚಿನವರ ಗಮನಕ್ಕೆ ಬರಲಿಲ್ಲವಾದರೂ ಕೆಲವರು ಮಾತ್ರ ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಪ್ರಾರಂಭಿಸಿದ್ದಾರೆ.

ಕೆಲವು ಬಳಕೆದಾರರು ಈ ಬದಲಾವಣೆ ತುಂಬಾ ಚೆನ್ನಾಗಿಲ್ಲ ಎಂದು ಹೇಳಿದ್ದು, ಮೆಟಾ (meta) ಮಾಲೀಕತ್ವದ ಈ ಅಪ್ಲಿಕೇಶನ್ ಈ ರೀತಿ ಮಾಡಲು ಏಕೆ ನಿರ್ಧರಿಸಿದೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

ಭಾರತೀಯ ಬಳಕೆದಾರರಿಗೂ ಈ ಹೊಸ ಅಪ್ಡೇಟ್ ಲಭ್ಯವಾಗಿದ್ದು, ಒಂದು ವೇಳೆ ವಾಟ್ಸ್ ಆಪ್ ಈ ಸಣ್ಣ ಬದಲಾವಣೆ ಕಂಡು ಬಂದರೆ ಈ ಬಗ್ಗೆ ಆಶ್ಚರ್ಯ ಪಡಬೇಕಿಲ್ಲ.


ವಾಟ್ಸಾಪ್ ಏಕೆ ಹಸಿರಾಗಿದೆ?

ವಾಟ್ಸ್ ಆ್ಯಪ್​​ನ ಮಾಲೀಕರಾಗಿರುವ ಮೆಟಾ ಈ ಬದಲಾವಣೆಗಳ ಮೂಲಕ ಬಳಕೆದಾರರಿಗೆ ಆಧುನಿಕ, ಹೊಸ ಅನುಭವ ನೀಡುವ ಗುರಿಯನ್ನು ಹೊಂದಿದೆ ಮತ್ತು ಅದನ್ನು ಹೆಚ್ಚು ಸುಲಭವಾಗಿ ಮತ್ತು ಬಳಸಲು ಸರಳವಾಗುವಂತೆ ಮಾಡಲಾಗುತ್ತದೆ ಎಂದು ಹೇಳಿದೆ.

ಬದಲಾವಣೆಗಳೇನು?

ವಾಟ್ಸ್ ಆ್ಯಪ್ ನವೀಕರಣದ ಬಳಿಕ iOS ಮತ್ತು Android ಬಳಕೆದಾರರಿಗೆ ಇದು ಲಭ್ಯವಾಗುತ್ತಿದೆ. Android ಬಳಕೆದಾರರು ಹಿಂದಿನ ಹಸಿರು ಬಣ್ಣದಲ್ಲಿ ಬದಲಾವಣೆಯನ್ನು ಗಮನಿಸಬಹುದು.

ವಾಟ್ಸ್​​ಆ್ಯಪ್​ನಲ್ಲಿ ಹಸಿರು ಬಣ್ಣವನ್ನು ಮಾತ್ರವಲ್ಲ ಸ್ಟೇಟಸ್ ಬಾರ್‌ನಿಂದ ಚಾಟ್-ಲಿಸ್ಟ್ ವಿಂಡೋದವರೆಗೆ ಎಲ್ಲವೂ ವಿನ್ಯಾಸ ಬದಲಾವಣೆಯಾಗಿದೆ. ಅಪ್ಲಿಕೇಶನ್‌ನಲ್ಲಿ ಹಂಚಿಕೊಳ್ಳಲಾದ ಲಿಂಕ್‌ಗಳು ಕೂಡ ಹಸಿರು ಬಣ್ಣದಲ್ಲಿ ಗೋಚರಿಸುತ್ತವೆ.

ಆಂಡ್ರಾಯ್ಡ್ ಬಳಕೆದಾರರು ಡಾರ್ಕ್ ಮೋಡ್‌ ನಲ್ಲಿ ಸೂಕ್ಷ್ಮ ಹೊಂದಾಣಿಕೆಗಳನ್ನು ಕಾಣಬಹುದು. ಡಾರ್ಕ್ ಮೋಡ್ ನಲ್ಲಿ ಅದು ಇನ್ನಷ್ಟು ಗಾಢವಾಗುತ್ತದೆ ಮತ್ತು ಲೈಟ್ ಮೋಡ್ ನಲ್ಲಿ ಹೆಚ್ಚುವರಿ ಸ್ಥಳಾವಕಾಶದೊಂದಿಗೆ ಸುಧಾರಿತ ಓದುವಿಕೆಗೆ ಪ್ರಾಶಸ್ತ್ಯ ನೀಡುತ್ತದೆ.

ಬಳಕೆದಾರರ ಅನುಭವ ಸುಧಾರಣೆಗೆ ಕ್ರಮ

ವಾಟ್ಸ್ ಆ್ಯಪ್ ನಲ್ಲಿ ಬಣ್ಣ ಬದಲಾವಣೆಯೊಂದಿಗೆ ಬಳಕೆದಾರರ ಅನುಭವವನ್ನು ಸುಧಾರಿಸುವ ಉದ್ದೇಶದಿಂದ ಹಲವು ನವೀಕರಣಗಳನ್ನು ಮಾಡಿದೆ.

ವಾಟ್ಸ್ ಆ್ಯಪ್ ತನ್ನ ಸಂದೇಶ ಸೂಚಕಗಳಲ್ಲಿ ಕೆಲವು ಪದಗಳನ್ನು ದೊಡ್ಡಕ್ಷರ ಮಾಡಲು ಇತ್ತೀಚೆಗೆ ಪರಿಶೀಲನೆಗೆ ಒಳಗಾಯಿತು. ಕೆಲವು ಬಳಕೆದಾರರು “ಆನ್‌ಲೈನ್” ಮತ್ತು “ಟೈಪಿಂಗ್” ನ ಮೊದಲ ಅಕ್ಷರಗಳನ್ನು ಕ್ರಮವಾಗಿ “ಆನ್‌ಲೈನ್” ಮತ್ತು “ಟೈಪಿಂಗ್” ಎಂದು ದೊಡ್ಡಕ್ಷರದಲ್ಲಿ ಬದಲಾವಣೆಯನ್ನು ಗಮನಿಸಿದ್ದಾರೆ. ಆಂಡ್ರಾಯ್ಡ್ ಮತ್ತು ಐಒಎಸ್ ಎರಡರಲ್ಲೂ ಗಮನಿಸಲಾದ ಬದಲಾವಣೆಯು ಆನ್‌ಲೈನ್‌ನಲ್ಲಿ ಮಹತ್ವದ ಚರ್ಚೆಗಳನ್ನು ಹುಟ್ಟುಹಾಕಿದೆ.

Continue Reading

ತಂತ್ರಜ್ಞಾನ

English Speaking Practice: ಸರಳ, ಸುಲಭವಾಗಿ ಇಂಗ್ಲಿಷ್ ಮಾತನಾಡಬೇಕೇ?; ಗೂಗಲ್​​ನಲ್ಲಿದೆ ‘ಸ್ಪೀಕಿಂಗ್ ಪ್ರಾಕ್ಟೀಸ್’

English Speaking Practice: ಇಂಗ್ಲಿಷ್ ಮಾತನಾಡುವ ಕೌಶಲವನ್ನು ವೃದ್ಧಿಸಿಕೊಳ್ಳಬೇಕೇ. ಇದಕ್ಕಾಗಿ ಇನ್ನು ಹೆಚ್ಚಿನ ಕಡೆ ಅಲೆದಾಡಬೇಕಿಲ್ಲ. ನಾವು ನಿತ್ಯ ಏನಾದರೊಂದು ವಿಷಯದ ಬಗ್ಗೆ ಹುಡುಕಾಡುವ ಗೂಗಲ್ ನಲ್ಲೇ ಇದು ಲಭ್ಯವಾಗಲಿದೆ.

VISTARANEWS.COM


on

By

English Speaking Practice
Koo

ಸ್ಮಾರ್ಟ್ ಫೋನ್ (smart phone) ಬಳಕೆದಾರರ ಇಂಗ್ಲಿಷ್ ಮಾತನಾಡುವ ಕೌಶಲ್ಯವನ್ನು (English Speaking Practice) ಸುಧಾರಿಸಲು ಗೂಗಲ್ (google) ಹೊಸ ವೈಶಿಷ್ಠ್ಯವೊಂದನ್ನು ಪರಿಚಯಿಸಿದೆ. ‘ಸ್ಪೀಕಿಂಗ್ ಪ್ರಾಕ್ಟೀಸ್’ ಎಂದು ಕರೆಯಲ್ಪಡುವ ಈ ಹೊಸ ವೈಶಿಷ್ಟ್ಯವು ಪ್ರಸ್ತುತ ಅರ್ಜೆಂಟೀನಾ (Argentina), ಕೊಲಂಬಿಯಾ (Colombia), ಭಾರತ (India), ಇಂಡೋನೇಷ್ಯಾ (Indonesia), ಮೆಕ್ಸಿಕೋ (Mexico) ಮತ್ತು ವೆನೆಜುವೆಲಾದಲ್ಲಿ (Venezuela) ಗೂಗಲ್ ಹುಡುಕಾಟದಲ್ಲಿ ಲಭ್ಯವಾಗುತ್ತಿದೆ.

ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಸಹಾಯದಿಂದ ಹೊಸ ವೈಶಿಷ್ಟ್ಯವು ಸಂವಹನ ಭಾಷಾ ಕಲಿಕೆಯನ್ನು ಪ್ರಾಕ್ಟೀಸ್ ಮಾಡಲು ಬಳಕೆದಾರರಿಗೆ ಅವಕಾಶ ಕಲ್ಪಿಸುತ್ತದೆ. ದಿನನಿತ್ಯ ಬಳಸಬಹುದಾದ ಹೊಸ ಪದಗಳನ್ನು ಕಲಿಯಲು ಇದು ಸಹಾಯ ಮಾಡುತ್ತದೆ ಎಂದು ಟೆಕ್ ದೈತ್ಯ ಗೂಗಲ್ ಹೇಳಿದೆ.

ಟೆಕ್ಕ್ರಂಚ್ ಪ್ರಕಾರ, ಸ್ಪೀಕಿಂಗ್ ಪ್ರಾಕ್ಟೀಸ್ ಅನ್ನು ಟ್ವಿಟರ್​​ ನಲ್ಲಿ ಹಿಂದೆ ಪರಿಚಯಿಸಲಾಗಿತ್ತು. ಈ ಹೊಸ ವೈಶಿಷ್ಟ್ಯವು ಬಳಕೆದಾರರಿಗೆ ಪ್ರಶ್ನೆ ಕೇಳುವ ಮೂಲಕ ಕಾರ್ಯನಿರ್ವಹಿಸುತ್ತದೆ. ಅದರ ಅನಂತರ ಬಳಕೆದಾರರು ಪೂರ್ವನಿರ್ಧರಿತ ಪದಗಳ ಗುಂಪಿನಿಂದ ಉತ್ತರಿಸಲು ಪ್ರೇರೇಪಿಸುತ್ತಾರೆ.

ಇದನ್ನೂ ಓದಿ: WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

ಬಳಕೆದಾರರು ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳಲ್ಲಿ ಒಂದಾದ ವೈಶಿಷ್ಟ್ಯವು ಎಐ ಚಾಟ್‌ಬಾಟ್ ಅನ್ನು ಹೊಂದಿರುತ್ತದೆ. ಅದು ಬಳಕೆದಾರರು ಏನು ಮಾಡಬೇಕು ಎಂದು ತಿಳಿಸುತ್ತದೆ. ಬಳಕೆದಾರರು ಅನಂತರ ‘ದಣಿದ’, ‘ಹೃದಯ’ ಮತ್ತು ‘ವ್ಯಾಯಾಮ’ ದಂತಹ ಪದಗಳನ್ನು ಒಳಗೊಂಡಿರುವ ಒಂದು ಪದದ ಪ್ರತಿಕ್ರಿಯೆಗಳೊಂದಿಗೆ ಉತ್ತರಿಸ ಬೇಕು.


ಜನರು ತಮ್ಮ ಸ್ಮಾರ್ಟ್ ಫೋನ್‌ಗಳಲ್ಲಿ ಇಂಗ್ಲಿಷ್ ಸಂವಹನವನ್ನು ವೃದ್ಧಿಸಿಕೊಳ್ಳಲು ಗೂಗಲ್ ತನ್ನ ಎಐ ಆಲಿಸುವ ಕೌಶಲ್ಯಗಳನ್ನು 2023ರ ಅಕ್ಟೋಬರ್ ನಲ್ಲಿ ಹೊರತಂದಿದೆ. ಮೊದಲು ಮಾತನಾಡುವ ವಾಕ್ಯಗಳ ಕುರಿತು ಮಾತ್ರ ಪ್ರತಿಕ್ರಿಯೆಯನ್ನು ಒದಗಿಸುತಿತ್ತು. ಈಗ, ಬಳಕೆದಾರರು ತಾವು ಕಲಿಯುತ್ತಿರುವ ಭಾಷೆಯಲ್ಲಿ ನಡೆಯುತ್ತಿರುವ ಸಂಭಾಷಣೆಗಳನ್ನು ಅಭ್ಯಾಸ ಮಾಡಬಹುದು.


ಇಂಗ್ಲಿಷ್ ಟ್ಯೂಟರಿಂಗ್

ಇದಲ್ಲದೇ ಗೂಗಲ್ ಕಳೆದ ವರ್ಷ ಹೊಸ ಡ್ಯುಯೊಲಿಂಗೋ ನಂತಹ ಇಂಗ್ಲಿಷ್ ಟ್ಯೂಟರಿಂಗ್ ವೈಶಿಷ್ಟ್ಯವನ್ನು ಪರಿಚಯಿಸಿತ್ತು. ಅದು ಜನರು ತಮ್ಮ ಇಂಗ್ಲಿಷ್ ಮಾತನಾಡುವ ಕೌಶಲ್ಯಗಳನ್ನು ಅಭ್ಯಾಸ ಮಾಡಲು ಮತ್ತು ಸುಧಾರಿಸಲು ಸಹಾಯ ಮಾಡಿತು. ಮಾತನಾಡುವ ಅಭ್ಯಾಸ ಕಾರ್ಯವು ಇದನ್ನು ಒಳಗೊಂದು ನಿರ್ಮಿಸಲಾಗಿದೆ.

ಹೇಗೆ ಅಭ್ಯಾಸ ಮಾಡುವುದು?

ಹೊಸ ಮಾತನಾಡುವ ಅಭ್ಯಾಸ ವೈಶಿಷ್ಟ್ಯವನ್ನು ಬಳಸಲು ಸ್ಮಾರ್ಟ್ ಫೋನ್ ಅಥವಾ ಲ್ಯಾಪ್ ಟಾಪ್ ನಲ್ಲಿ ಗೂಗಲ್ ಅಪ್ಲಿಕೇಶನ್ ತೆರೆಯಿರಿ ಮತ್ತು ಮೇಲಿನ ಎಡ ಮೂಲೆಯಲ್ಲಿರುವ ಲ್ಯಾಬ್ಸ್ ಐಕಾನ್ ಮೇಲೆ ಟ್ಯಾಪ್ ಮಾಡಿ. ಇಲ್ಲಿ, ನಿಮ್ಮ ಖಾತೆಯಲ್ಲಿ ಲಭ್ಯವಿರುವ ಹೊಸ ವೈಶಿಷ್ಟ್ಯವನ್ನು ನೋಡಬಹುದು.

ಎರಡು ಅತ್ಯಂತ ಜನಪ್ರಿಯ ಭಾಷಾ-ಕಲಿಕೆಯ ಅಪ್ಲಿಕೇಶನ್‌ಗಳಾದ ಡ್ಯುಯೊಲಿಂಗೋ ಮತ್ತು ಬಾಬೆಲ್‌ಗಳಂತಹವುಗಳನ್ನು ಗ್ರಾಹಕರಿಗೆ ಪರಿಚಯಿಸಲು ಗೂಗಲ್ ಬಯಸುತ್ತಿರುವಂತೆ ತೋರುತ್ತಿದೆ. ಈಗಿನಂತೆ ಗೂಗಲ್ ಈ ಪ್ರಾಯೋಗಿಕ ವೈಶಿಷ್ಟ್ಯವನ್ನು ಹೆಚ್ಚಿನ ಪ್ರದೇಶಗಳಿಗೆ ತರಲು ಯೋಜಿಸುತ್ತಿದೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.

Continue Reading

ಗ್ಯಾಜೆಟ್ಸ್

Mobile Data Saving: ಮೊಬೈಲ್ ಡೇಟಾ ಉಳಿಸಲು ಇಲ್ಲಿದೆ ಕೆಲವು ಸರಳ ಉಪಾಯಗಳು!

Mobile data saving: ಡೇಟಾ ಮೊಬೈಲ್ ಗೆ ಜೀವ ತುಂಬುತ್ತದೆ. ನಮ್ಮ ಕೆಲವೊಂದು ಅಭ್ಯಾಸ, ನಿರ್ಲಕ್ಷ್ಯದಿಂದಾಗಿ ನಮಗೆ ಅರಿವಿಲ್ಲದಂತೆ ಹೆಚ್ಚಿನ ಡೇಟಾ ನಷ್ಟಕ್ಕೆ ಕಾರಣವಾಗಬಹುದು. ಡೇಟಾ ನಷ್ಟವನ್ನು ಕಡಿಮೆ ಮಾಡಲು, ಡೇಟಾ ಬಳಕೆಯನ್ನು ಗರಿಷ್ಠಗೊಳಿಸಲು ಸಹಾಯ ಮಾಡಲು ಕೆಲವು ಸಲಹೆಗಳು ಇಲ್ಲಿವೆ.

VISTARANEWS.COM


on

By

Mobile data
Koo

ಆಂಡ್ರಾಯ್ಡ್ (Android) ಸ್ಮಾರ್ಟ್ ಫೋನ್‌ಗಳು (smart phones) ಈಗ ಎಲ್ಲರ ಬದುಕಿನ ಅವಿಭಾಜ್ಯ ಅಂಗವಾಗಿದೆ. ಒಂದು ಕ್ಷಣ ಕೈಕೊಟ್ಟರೂ, ಎಲ್ಲಾದರೂ ಕಳೆದು ಹೋದರೂ ಓಡುತ್ತಿದ್ದ ಬದುಕು ಒಂದು ಕ್ಷಣ ನಿಂತಂತಾಗುತ್ತದೆ. ಇಂತಹ ಮೊಬೈಲ್‌ ಬಗ್ಗೆ ಕೆಲವೊಂದು ವಿಷಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು. ಅವುಗಳಲ್ಲಿ ಮೊಬೈಲ್ ಡೇಟಾ (mobile data saving) ಕೂಡ ಒಂದಾಗಿದೆ.

ಮೊಬೈಲ್ ನಲ್ಲಿ ಡೇಟಾ ಎನ್ನುವುದು ಅದರ ಉಸಿರಿದ್ದಂತೆ. ನಿರಂತರ ಸಂಪರ್ಕದಲ್ಲಿರಲು, ಮಾಹಿತಿಯನ್ನು ಪ್ರವೇಶಿಸಲು ಮತ್ತು ಪ್ರಯಾಣದಲ್ಲಿರುವಾಗ ಮಲ್ಟಿಮೀಡಿಯಾ (Multimedia) ವಿಷಯವನ್ನು ಆನಂದಿಸಲು ಇದು ನಮಗೆ ಅವಕಾಶ ಮಾಡಿಕೊಡುತ್ತದೆ. ಆದರೆ ಮೊಬೈಲ್ ಡೇಟಾದ ಮೇಲೆ ಹೆಚ್ಚಿನ ಅವಲಂಬನೆ ಸೀಮಿತ ಡೇಟಾ (Limited data) ಯೋಜನೆಗಳನ್ನು ಹೊಂದಿರುವವರಿಗೆ ದುಬಾರಿಯಾಗಬಹುದು. ಇದಕ್ಕಾಗಿಯೇ ಮೊಬೈಲ್ ಡೇಟಾವನ್ನು ಹೇಗೆ ಉಳಿಸುವುದು ಎನ್ನುವುದನ್ನು ತಿಳಿದುಕೊಂಡಿರಬೇಕು.

ಮೊಬೈಲ್ ಡೇಟಾವನ್ನು ಕಡಿಮೆ ಬಳಕೆ ಮಾಡುವುದು ಹೇಗೆ ಎಂಬುದನ್ನು ಕಲಿಯುವುದು ಬಹಳ ಮುಖ್ಯ. ಇದಕ್ಕಾಗಿ ಮೊಬೈಲ್ ಡೇಟಾ ಬಳಕೆಯ ಅಭ್ಯಾಸದಲ್ಲಿ ಕೆಲವು ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಿಕೊಂಡರೆ ಅನಗತ್ಯವಾಗಿ ಡೇಟಾ ನಷ್ಟವಾಗುವುದನ್ನು ತಡೆಯಬಹುದು.

ಇದನ್ನು ಓದಿ: Kishan Bagaria: ಒಂದೇ ಒಂದು ಆ್ಯಪ್​ ಅಭಿವೃದ್ಧಿ ಮಾಡಿ ರಾತ್ರೋರಾತ್ರಿ ಕೋಟ್ಯಾಧೀಶ್ವರನಾದ ಅಸ್ಸಾಂ ಯುವಕ!


1. ಬಳಕೆಯ ಮೇಲ್ವಿಚಾರಣೆ ಮಾಡಿ

ಸಾಮಾನ್ಯವಾಗಿ ಡೇಟಾ ಬಳಕೆಯನ್ನು ಕಡಿಮೆ ಮಾಡುವ ಮೊದಲ ಹಂತವೆಂದರೆ ಬಳಕೆಯನ್ನು ಟ್ರ್ಯಾಕ್ ಮಾಡುವುದು. ಹೆಚ್ಚಿನ ಮೊಬೈಲ್ ಸಾಧನಗಳು ಡೇಟಾ ಬಳಕೆಯ ಮಾನಿಟರ್ ಮಾಡುತ್ತದೆ. ಅದು ನಿಮ್ಮ ಡೇಟಾ ಬಳಕೆಯ ಮೇಲೆ ಕಣ್ಣಿಡಲು ಅನುವು ಮಾಡಿಕೊಡುತ್ತದೆ. ನಿರ್ದಿಷ್ಟ ಮಿತಿಯನ್ನು ತಲುಪಿದಾಗ ಎಚ್ಚರಿಕೆಗಳನ್ನು ನೀಡುತ್ತದೆ.


2. ವೈ-ಫೈ ಬಳಸಿ

ಮೊಬೈಲ್ ಡೇಟಾ ಬಳಕೆಯನ್ನು ಕಡಿಮೆ ಮಾಡಲು ವೈ-ಫೈ ಉತ್ತಮ ಮಾರ್ಗವಾಗಿದೆ. ದೊಡ್ಡ ಫೈಲ್‌ಗಳನ್ನು ಡೌನ್‌ಲೋಡ್ ಮಾಡಲು ಅಥವಾ ವೀಡಿಯೊಗಳನ್ನು ಸ್ಟ್ರೀಮ್ ಮಾಡಲು ಮನೆ, ಕಚೇರಿ, ಕಾಫಿ ಶಾಪ್‌ಗಳಲ್ಲಿ ಇರುವ ವೈ ಫೈಗಳನ್ನು ಬಳಸಿ. ಇದು ಮೊಬೈಲ್ ಡೇಟಾವನ್ನು ಹೆಚ್ಚಾಗಿ ಬಳಸುವುದನ್ನು ತಪ್ಪಿಸಲು ಸಹಾಯ ಮಾಡುತ್ತದೆ.

3. ಅಪ್ಲಿಕೇಶನ್‌ ನಿಯಂತ್ರಿಸಿ

ಮೊಬೈಲ್ ಡೇಟಾವನ್ನು ಉಳಿಸಲು ಸಹಾಯ ಮಾಡಲು ಕೆಲವು ಅಪ್ಲಿಕೇಶನ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಕೆಲವೊಂದು ಅಪ್ಲಿಕೇಶನ್‌ಗಳು ಡೇಟಾವನ್ನು ಕುಗ್ಗಿಸಿದರೆ, ಇನ್ನು ಕೆಲವು ಅಪ್ಲಿಕೇಶನ್ ಗಳು ಬಳಸುವ ಡೇಟಾದ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ಕ್ರೋಮ್ ಡೇಟಾ ಸೇವರ್, ಒಪೇರಾ ಮ್ಯಾಕ್ಸ್ ಮತ್ತು ಒನಾವೊ ಎಕ್ಸ್‌ಟೆಂಡ್ ಕೂಡ ಸೇರಿವೆ.


4. ಅಪ್ಡೇಟ್ ನಿಷ್ಕ್ರಿಯಗೊಳಿಸಿ

ಹೆಚ್ಚಿನ ಮೊಬೈಲ್ ಸಾಧನಗಳಲ್ಲಿ ಇರುವ ಅಪ್ಲಿಕೇಶನ್‌ಗಳು ನಿರಂತರ ಅಪ್ಡೇಟ್ ಆಗುತ್ತಿರುತ್ತದೆ. ಇದನ್ನು ಸ್ವಯಂಚಾಲಿತವಾಗಿ ಮಾಡುವುದನ್ನು ನಿಷ್ಕ್ರಿಯಗೊಳಿಸಿದರೆ ಬಹಳಷ್ಟು ಡೇಟಾವನ್ನು ಉಳಿಸಬಹುದು. ವೈಫೈ ಸಂಪರ್ಕವಿದ್ದಾಗ ಮಾತ್ರ ಅಪ್ಲಿಕೇಶನ್‌ ಗಳನ್ನು ಅಪ್ಡೇಟ್ ಮಾಡಿಕೊಳ್ಳಿ.


5. ಸ್ವಯಂ-ಪ್ಲೇ ನಿಷ್ಕ್ರಿಯಗೊಳಿಸಿ

ಹೆಚ್ಚಿನ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳು ಸ್ವಯಂ-ಪ್ಲೇ (self play) ವಿಡಿಯೋ ವೈಶಿಷ್ಟ್ಯವನ್ನು ಹೊಂದಿರುತ್ತದೆ. ಅದು ಹೆಚ್ಚಿನ ಡೇಟಾವನ್ನು ತಿನ್ನುತ್ತದೆ. ಇದನ್ನು ತಡೆಯಲು ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳಲ್ಲಿ ಸ್ವಯಂ-ಪ್ಲೇ ವಿಡಿಯೋ ವೈಶಿಷ್ಟ್ಯವನ್ನು ನಿಷ್ಕ್ರಿಯಗೊಳಿಸಿ.

6. ಆಫ್‌ಲೈನ್ ಆಯ್ಕೆ ಮಾಡಿ

ಆಫ್‌ಲೈನ್‌ನಲ್ಲಿ ವಿಡಿಯೊ ನೋಡುವುದು ಮತ್ತು ಡಾಟಾ ಸಂಗ್ರಹ ಇರುವಾಗ ಡೌನ್‌ಲೋಡ್ ಮಾಡುವುದು ಡೇಟಾ ಬಳಕೆಯನ್ನು ಕಡಿಮೆ ಮಾಡುವ ಅತ್ಯುತ್ತಮ ಮಾರ್ಗವಾಗಿದೆ. ವೈ-ಫೈಗೆ ಸಂಪರ್ಕಗೊಂಡಿರುವಾಗ ನಿಮ್ಮ ಮೆಚ್ಚಿನ ಹಾಡು, ಚಲನಚಿತ್ರ ಮತ್ತು ಟಿವಿ ಕಾರ್ಯಕ್ರಮಗಳನ್ನು ಡೌನ್‌ಲೋಡ್ ಮಾಡಬಹುದು ಮತ್ತು ಮೊಬೈಲ್ ಡೇಟಾವನ್ನು ಬಳಸದೆಯೇ ಅವುಗಳನ್ನು ಅನಂತರ ವೀಕ್ಷಿಸಬಹುದು.

7. Lite ಆವೃತ್ತಿಗಳನ್ನು ಬಳಸಿ

ಅಪ್ಲಿಕೇಶನ್‌ಗಳ ಲೈಟ್ ಆವೃತ್ತಿಗಳು ಕಡಿಮೆ ಡೇಟಾವನ್ನು ಬಳಸುತ್ತವೆ. ಅವುಗಳು ಕಡಿಮೆ ಡೇಟಾವನ್ನು ಬಳಸುವಂತೆ ವಿನ್ಯಾಸಗೊಳಿಸಲಾಗಿದೆ. ಉದಾಹರಣೆಗೆ Facebook Lite, Messenger Lite ಮತ್ತು YouTube Go ಮೊದಲಾದವುಗಳು ಮೊಬೈಲ್ ಡೇಟಾವನ್ನು ಕಡಿಮೆ ಬಳಸುತ್ತದೆ.

8. ಹಿನ್ನೆಲೆ ಡೇಟಾ ಬಳಕೆ ನಿರ್ಬಂಧಿಸಿ

ಕೆಲವು ಅಪ್ಲಿಕೇಶನ್‌ಗಳು ಬಳಸದಿದ್ದರೂ ಹಿನ್ನೆಲೆಯಲ್ಲಿ ಡೇಟಾವನ್ನು ಬಳಸುತ್ತವೆ. ಇದನ್ನು ತಡೆಗಟ್ಟಲು ನಿರಂತರ ಸಂಪರ್ಕದ ಅಗತ್ಯವಿಲ್ಲದ ಅಪ್ಲಿಕೇಶನ್‌ಗಳಿಗೆ ಹಿನ್ನೆಲೆ ಡೇಟಾ ಬಳಕೆಯನ್ನು ನಿರ್ಬಂಧಿಸಿ. ಇದು ಡೇಟಾವನ್ನು ಉಳಿಸಲು ಮತ್ತು ಮೊಬೈಲ್ ಬ್ಯಾಟರಿ ಅವಧಿಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ.

Continue Reading

ತಂತ್ರಜ್ಞಾನ

Kishan Bagaria: ಒಂದೇ ಒಂದು ಆ್ಯಪ್​ ಅಭಿವೃದ್ಧಿ ಮಾಡಿ ರಾತ್ರೋರಾತ್ರಿ ಕೋಟ್ಯಾಧೀಶ್ವರನಾದ ಅಸ್ಸಾಂ ಯುವಕ!

Kishan Bagaria: ಮೆಸೇಜಿಂಗ್ ಅಪ್ಲಿಕೇಶನ್ ವೊಂದನ್ನು ಸಿದ್ದ ಪಡಿಸಿದ ಅಸ್ಸಾಂನ ಹಳ್ಳಿಯೊಂದರ 26 ವರ್ಷದ ಯುವಕನಿಗೆ ಅದು ಹೆಸರು ಮತ್ತು ಹಣ ಎರಡನ್ನು ತಂದುಕೊಡುತ್ತದೆ ಎಂಬ ಕನಸು ಕೂಡ ಇರರಲಿಲ್ಲ. ಆದರೆ ಅವನು ಸಿದ್ದಪಡಿಸಿದ ಒಂದು ಆಪ್ ಅವನನ್ನು ರಾತ್ರೋರಾತ್ರಿ ಕೋಟ್ಯಾಧೀಶ್ವರನ್ನಾಗಿ ಮಾಡಿದೆ.

VISTARANEWS.COM


on

By

Kishan Bagaria
Koo

ಮೆಸೇಜಿಂಗ್ ಅಪ್ಲಿಕೇಶನ್ (Messaging App) ಅಭಿವೃದ್ಧಿ ಮಾಡಿದ ಅಸ್ಸಾಂನ (assam) ಹಳ್ಳಿಯೊಂದರ 26 ವರ್ಷದ ಯುವಕ ಈಗ ವಿಶ್ವ ಖ್ಯಾತಿಗಳಿಸಿದ್ದಾನೆ. ಇವನು ತಯಾರಿಸಿದ ಮೆಸೇಜಿಂಗ್ ಅಪ್ಲಿಕೇಶನ್ ಅನ್ನು ಯುಎಸ್ ನ (US) ಟೆಕ್ ದೈತ್ಯ ( tech giant) ಕಂಪೆನಿಯೊಂದು ಬರೋಬ್ಬರಿ 400 ಕೋಟಿ ರುಪಾಯಿಗಿಂತಲೂ ಹೆಚ್ಚು ಮೌಲ್ಯಕ್ಕೆ ಖರೀದಿ ಮಾಡಿದೆ. ಅಸ್ಸಾಂನ ದಿಬ್ರುಗಢದ (Dibrugarh) ಕಿಶನ್ ಬಗಾರಿಯಾ (Kishan Bagaria) ತಾನು ಸೃಷ್ಟಿ ಮಾಡಿದ ಅಪ್ಲಿಕೇಶನ್ ನಿಂದಾಗಿ ತನಗೆ ಜಾಗತಿಕ ಮನ್ನಣೆಯೊಂದಿಗೆ ಖ್ಯಾತಿ ಮತ್ತು ಹಣ ಎರಡು ಸಿಗುತ್ತದೆ ಎಂದು ಊಹೆಯನ್ನೂ ಮಾಡಿರಲಿಲ್ಲ.

ಕಿಶನ್ ಬಗಾರಿಯಾ ಸಿದ್ದಪಡಿಸಿದ Texts.com ಎಂಬ ಹೆಸರಿನ ಸಿಂಗಲ್​ ಪ್ಲಾಟ್‌ಫಾರ್ಮ್ ಮೆಸೇಜಿಂಗ್ ಅಪ್ಲಿಕೇಶನ್ ಅನ್ನು ಯುಎಸ್ ನ ಟೆಕ್ ದೈತ್ಯ (US tech giant) ಆಟೋಮ್ಯಾಟಿಕ್ (Automattic) 50 ಮಿಲಿಯನ್‌ ಡಾಲರ್ ಗೆ ಖರೀದಿ ಮಾಡಿದೆ. ಈ ಕಂಪೆನಿಯು ಮ್ಯಾಟ್ ಮುಲ್ಲೆಂಗ್ ಅವರ ಒಡೆತನದಲ್ಲಿದೆ. ಇವರು WordPress.com ಮತ್ತು Tumblr ನ ಮಾಲೀಕರಾಗಿದ್ದಾರೆ.

ಇದನ್ನೂ ಓದಿ: WhatsApp Update: ವಾಟ್ಸ್ ಆಪ್ ನಲ್ಲಿ ಮತ್ತೊಂದು ಹೊಸ ಫೀಚರ್! ಫೋಟೊ, ವಿಡಿಯೊ ಶೇರಿಂಗ್ ಇನ್ನೂ ಸುಲಭ

Kishan Bagaria


ಯಾರು ಈ ಕಿಶನ್ ?

ಉದ್ಯಮಿ ಮಹೇಂದ್ರ ಬಗಾರಿಯಾ ಮತ್ತು ನಮೀತಾ ದಂಪತಿಯ ಮಗನಾಗಿರುವ ಕಿಶನ್ ದಿಬ್ರುಗಢದ ಥಾನಾ ಚರಿಯಾಲಿ ನಿವಾಸಿ.ಕಂಪೆನಿಯು Texts.com ಖರೀದಿ ಮಾಡಿದ ಬಳಿಕ ಅವರು ರಾತ್ರೋರಾತ್ರಿ ಕೋಟ್ಯಾಧೀಶ್ವರನಾಗಿದ್ದಾರೆ. ಅವರ ಆಪ್ ಸುಮಾರು 416 ಕೋಟಿ ರೂಪಾಯಿ ಗೆ ಮಾರಾಟವಾಗಿದೆ. ಮಾತ್ರವಲ್ಲ ಕಿಶನ್ ನ ಆಪ್ ಅನ್ನು ಖರೀದಿ ಮಾಡಿರುವ ಆಟೋಮ್ಯಾಟಿಕ್ ಕಂಪೆನಿ Texts.com ನ ಕಾರ್ಯಚಟುವಟಿಕೆಗಳ ಉಸ್ತುವಾರಿಯನ್ನು ಅವರು ವಹಿಸಿಕೊಂಡಿದ್ದಾರೆ.

ಹೇಗಿತ್ತು ಪಯಣ ?

ಕಿಶನ್ ಕಂಪ್ಯೂಟರ್ ಮತ್ತು ಇಂಟರ್ನೆಟ್ ಸಂಪರ್ಕವನ್ನು ಹೊರತುಪಡಿಸಿ ಬೇರೆ ಯಾವುದೇ ತಂತ್ರಜ್ಞಾನ ಅವರ ಬಳಿ ಇರಲಿಲ್ಲ. ವಿಂಡೋಸ್ ಅಪ್ಲಿಕೇಶನ್‌ ನಲ್ಲಿ ಅವರು ತಮ್ಮ ಪ್ರಯೋಗಗಳನ್ನು ಮಾಡುತ್ತಿದ್ದರು. ಇವರ ಸಾಧನೆಯ ಹಾದಿ ಉದಯೋನ್ಮುಖ ಅಪ್ಲಿಕೇಶನ್ ಡೆವಲಪರ್‌ಗಳಿಗೆ ದಾರಿದೀಪವಾಗಿದೆ.

ಇತರ ಆಪ್ ಗಳಿಗಿಂತ ಹೇಗೆ ಭಿನ್ನ ?

Texts.com ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳಾದ Instagram, Twitter, Messenger, WhatsApp ಗಳಂತೆ ಕಾರ್ಯ ನಿರ್ವಹಿಸಲಿದ್ದು, ಇದನ್ನೂ ಅದೇ ವೇದಿಕೆಯಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.
Texts.com ಸಂದೇಶ ಕಳುಹಿಸುವುದರಲ್ಲಿ ಕ್ರಾಂತಿ ಎಂದೇ ಹೇಳಬಹದು.

ಇತ್ತೀಚೆಗೆ ಸ್ಮಾರ್ಟ್‌ಫೋನ್‌ಗಳು ಹಲವಾರು ಮೆಸೇಜಿಂಗ್ ಅಪ್ಲಿಕೇಶನ್‌ ಗಳನ್ನು ಹೊಂದಿದೆ. ಸಾಮಾನ್ಯವಾಗಿ ಸಂದೇಶ ಕಳುಹಿಸುವ ಆಪ್ ಗಳು ವಿವಿಧ ಪ್ಲಾಟ್‌ಫಾರ್ಮ್‌ಗಳಿಂದ ಸಂದೇಶಗಳನ್ನು ಒಂದು ಅರ್ಥಗರ್ಭಿತ ಇಂಟರ್ಫೇಸ್‌ಗೆ ಮನಬಂದಂತೆ ಸಂಯೋಜಿಸುತ್ತದೆ. ಆದರೆ ಇದು ಕೇವಲ ಅಪ್ಲಿಕೇಶನ್ ಆಗಿಲ್ಲ. ವಿವೇಚನಾಯುಕ್ತ ಸಂದೇಶ ವೀಕ್ಷಣೆ ಮತ್ತು ಆರಂಭದಿಂದ ಅಂತ್ಯದ ವರೆಗೆ ಗೂಢಲಿಪೀಕರಣದಂತಹ ವೈಶಿಷ್ಟ್ಯಗಳನ್ನು ಒದಗಿಸುತ್ತದೆ. ಡಿಜಿಟಲ್ ಸಂವಹನದಲ್ಲಿ ಗೌಪ್ಯತೆ ಮತ್ತು ಸರಳತೆಯನ್ನು ಖಾತ್ರಿಪಡಿಸುತ್ತದೆ. ಎಲ್ಲ ಸಂದೇಶಗಳು ಒಂದೇ ವೇದಿಕೆಯಡಿ ಲಭ್ಯವಾಗುವಂತೆ ಮಾಡುತ್ತದೆ.

Kishan Bagaria


ಭವಿಷ್ಯ ಹೇಗಿದೆ ?

ಆಟೋಮ್ಯಾಟಿಕ್‌ನ ಬೆಂಬಲದೊಂದಿಗೆ, ಕಿಶನ್ ಅವರ Texts.com ಜಾಗತಿಕ ಸಂವಹನ ಸೇವೆಗಳೊಂದಿಗೆ ಲಭ್ಯವಾಗುತ್ತಿದೆ. ಡಿಜಿಟಲ್ ಸಂವಹನವನ್ನು ಸುಲಭವಾಗಿ ಮತ್ತು ಸುರಕ್ಷಿತವಾಗಿಸಲು ಅವರು ನಿರಂತರ ಬದ್ಧತೆಯನ್ನು ಒತ್ತಿಹೇಳುತ್ತಿರುವುದರಿಂದ ಮುಂದಿನ ದಿನಗಳಲ್ಲಿ Texts.com ಮತ್ತಷ್ಟು ವಿಕಸನಗೊಳ್ಳುವುದು. ಇದರಲ್ಲಿ ಇನ್ನಷ್ಟು ಅದ್ಭುತ ವೈಶಿಷ್ಟ್ಯಗಳನ್ನು ಪರಿಚಯಿಸುವ ಭರವಸೆಯನ್ನು ಅವರು ನೀಡುತ್ತಾರೆ.

ಕಿಶನ್ ಬಗ್ಗೆ ಈಗ ಜಾಗತಿಕವಾಗಿ ಸಾಕಷ್ಟು ನಿರೀಕ್ಷೆಗಳು ಮೂಡಿದೆ. ಅವರು ಮುಂದೆ ಏನನ್ನು ಆವಿಷ್ಕರಿಸುತ್ತಾರೆ ಎಂದು ಎದುರು ನೋಡುತ್ತಿರುವುದಾಗಿ ಟೆಕ್ ದೈತ್ಯ ಕಂಪೆನಿಗಳು ಹೇಳಿವೆ. ಅವರ ಕಥೆ ಈಗ ಡಿಜಿಟಲ್ ವಿಕಾಸದ ಸಾಹಸಗಾಥೆಯಲ್ಲಿ ಸೇರಿಕೊಂಡಿದೆ.

Continue Reading
Advertisement
Car Accident
ಬೆಂಗಳೂರು3 mins ago

Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

CET
ಕರ್ನಾಟಕ12 mins ago

CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

YAJAMANA PREMIER LEAGUE SEASON-3 (2)
ಕ್ರೀಡೆ33 mins ago

YAJAMANA PREMIER LEAGUE SEASON-3: ಈ ಬಾರಿ ಟಿ10 ಮಾದರಿಯಲ್ಲಿ ನಡೆಯಲಿದೆ ಯಜಮಾನ ಪ್ರೀಮಿಯರ್ ಲೀಗ್​

Lok Sabha Election 2024
Lok Sabha Election 202446 mins ago

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Virat Kohli
ಕ್ರಿಕೆಟ್56 mins ago

Virat Kohli: ಟೀಕೆಗಳಿಗೆ ಬಹಿರಂಗವಾಗಿಯೇ ತಿರುಗೇಟು ನೀಡಿದ ಕಿಂಗ್​ ಕೊಹ್ಲಿ​

Jatra Rathotsava Two killed and one serious after being hit by wheel of a chariot at Indi Kamarimath
ಕರ್ನಾಟಕ1 hour ago

Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

Karnataka Weather
ಕರ್ನಾಟಕ1 hour ago

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Amrita Pandey
ಸಿನಿಮಾ1 hour ago

Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

PM Narendra Modi
ಕರ್ನಾಟಕ2 hours ago

PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Narendra Modi
Lok Sabha Election 20242 hours ago

Narendra Modi: ನಿಮ್ಮ ಸೇವೆಗೆಂದೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ, ಈ ಜೀವ ದೇಶಕ್ಕಾಗಿ ಎಂದ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20244 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20247 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20249 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20249 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ12 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌