Research News: ಬರಲಿವೆ ಇನ್ನು ಮಳೆಯಿಂದ ವಿದ್ಯುತ್‌ ಉತ್ಪಾದಿಸುವ ಫಲಕಗಳು! - Vistara News

ತಂತ್ರಜ್ಞಾನ

Research News: ಬರಲಿವೆ ಇನ್ನು ಮಳೆಯಿಂದ ವಿದ್ಯುತ್‌ ಉತ್ಪಾದಿಸುವ ಫಲಕಗಳು!

ಪ್ರತಿ ಚದರ ಮೀಟರ್‌ಗೆ 200 ವ್ಯಾಟ್‌ಗಳ ವಿದ್ಯುತ್‌ ಉತ್ಪಾದಿಸುವ, ಸೌರ ಫಲಕದಂತಿರುವ ಸಾಧನವನ್ನು ಚೀನಾದ
ಸಂಶೋಧಕರು (Reasearch news) ಅಭಿವೃದ್ಧಿಪಡಿಸಿದ್ದಾರೆ.

VISTARANEWS.COM


on

rain electricity panels
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಸೌರಶಕ್ತಿಯಿಂದ ವಿದ್ಯುತ್‌ ಉತ್ಪಾದಿಸುವ ಸೋಲಾರ್‌ ಪ್ಯಾನೆಲ್‌ಗಳಂತೆ (Solar panel), ಮಳೆಹನಿಗಳನ್ನು ಸಂಗ್ರಹಿಸುವ ಮೂಲಕ ಶಕ್ತಿಯನ್ನು ಉತ್ಪಾದಿಸುವ (Electricity by Rain) ಸಾಧನವನ್ನು ಚೀನಾದ ಸಂಶೋಧಕರು (research news) ಅಭಿವೃದ್ಧಿಪಡಿಸಿದ್ದಾರೆ. ಈ ಸಂಶೋಧನೆ ಸಾಮಾನ್ಯ ಬಳಕೆಗೆ ಬಂದರೆ ಸದ್ಯದಲ್ಲೇ ನಾವು ಸೌರ ಫಲಕಗಳ ಜೊತೆಗೆ, ನಮ್ಮ ಮನೆಗಳ ಛಾವಣಿಗಳ ಮೇಲೆ ವಿದ್ಯುತ್‌ ಉತ್ಪಾದಿಸುವ ಮಳೆ ಫಲಕಗಳನ್ನು ಸಂಯೋಜಿಸಬಹುದು.

ಫೋಟೊವೋಲ್ಟಾಯಿಕ್ ಪ್ಯಾನೆಲ್‌ಗಳ ಬಗ್ಗೆ ನಮಗೆ ತಿಳಿದೇ ಇದೆ. ಇದು ವಿಶೇಷವಾಗಿ ಬಿಸಿಲು ಅಧಿಕವಾಗಿರುವ ಸ್ಥಳಗಳಲ್ಲಿ ಬಹಳ ಜನಪ್ರಿಯವಾಗಿದೆ. ಆದರೆ ಸೂರ್ಯನ ಬೆಳಕಿನ ಕಿರಣಗಳಿಗಿಂತ ಹೆಚ್ಚಾಗಿ ಮಳೆಹನಿಗಳು ಹೊಡೆಯುವ ಸಾಧ್ಯತೆಯಿರುವ ದೇಶದಲ್ಲಿ ನೀವು ವಾಸಿಸುತ್ತಿದ್ದರೆ, ವಿದ್ಯುತ್ ಉತ್ಪಾದನೆ ಹೇಗೆ ಸಾಧ್ಯ? ಚೀನಾದ ವಿಜ್ಞಾನಿಗಳ ತಂಡ ಈ ಪ್ರಶ್ನೆಗೆ ಉತ್ತರಿಸಲು ಯತ್ನಿಸಿದೆ.

ಇದರ ಮೂಲತತ್ವ ಸೌರ ಅಥವಾ ದ್ಯುತಿವಿದ್ಯುಜ್ಜನಕ ಫಲಕಗಳಂತೆಯೇ ಇರುತ್ತದೆ. ಇಲ್ಲಿ ಶಕ್ತಿಯ ಮೂಲ ಸೂರ್ಯನ ಬೆಳಕಲ್ಲ, ಬದಲು ಮಳೆನೀರು ವಿದ್ಯುತ್ ಆಗಿ ಪರಿವರ್ತನೆಯಾಗುತ್ತದೆ. “ಮಳೆಹನಿಗಳು ಚಲನಶಕ್ತಿ ಮತ್ತು ಸ್ಥಾಯೀವಿದ್ಯುತ್ತಿನ ಶಕ್ತಿ ಎರಡನ್ನೂ ಒಳಗೊಂಡಂತೆ ಹೇರಳವಾಗಿ ನವೀಕರಿಸಬಹುದಾದ ಶಕ್ತಿಯನ್ನು ಒಳಗೊಂಡಿರುತ್ತವೆ. ಅದನ್ನು ಪರಿಣಾಮಕಾರಿಯಾಗಿ ಹೇಗೆ ಬಳಸಿಕೊಳ್ಳಬಹುದು ಎಂಬುದು ಸಂಶೋಧನಾ ವಿಷಯ” ಎಂದು ಅಧ್ಯಯನದ ತಂಡ ಸೂಚಿಸಿದೆ.

ನೀರನ್ನು ಶಕ್ತಿಯ ಮೂಲವಾಗಿ ಪರಿವರ್ತಿಸುವ ತಂತ್ರ ಹೊಸದಲ್ಲ. ಜಲವಿದ್ಯುತ್‌ ಉತ್ಪಾದನೆಯಲ್ಲಿ ಇದನ್ನು ಕಾಣಬಹುದು. ಆದರೆ ಸಣ್ಣ ಪ್ರಮಾಣದಲ್ಲಿ ಬೀಳುವ ಮಳೆಹನಿಗಳನ್ನು ಇದಕ್ಕಾಗಿ ಬಳಸುವುದು ಹೇಗೆ? ಚೀನಾದ ತ್ಸಿಂಗ್ವಾ ವಿಶ್ವವಿದ್ಯಾಲಯದ ಸಂಶೋಧಕರು ಇದನ್ನು ಕಂಡುಹಿಡಿಯಲು, ಸುಧಾರಿಸಲು ಪ್ರಯತ್ನಿಸಿದ್ದಾರೆ. ಪ್ರತಿ ಚದರ ಮೀಟರ್‌ಗೆ 200 ವ್ಯಾಟ್‌ಗಳ ವಿದ್ಯುತ್‌ ಉತ್ಪಾದಿಸುವ, ಸೌರ ಫಲಕದಂತಿರುವ ಸಾಧನವನ್ನು ಅವರು ಅಭಿವೃದ್ಧಿಪಡಿಸಿದ್ದಾರೆ. “ಸಮಾನಾಂತರವಾಗಿ ಅನೇಕ ಸೌರ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸಂಪರ್ಕಿಸುವ ಸೌರ ಫಲಕಗಳ ವಿನ್ಯಾಸದಂತೆಯೇ ಮಳೆಹನಿ ಶಕ್ತಿ ಕೊಯ್ಲು ಮಾಡುವ ಸರಳ ಮತ್ತು ಪರಿಣಾಮಕಾರಿ ವಿಧಾನವನ್ನು ಈ ಅಧ್ಯಯನದಲ್ಲಿ ಪ್ರಸ್ತಾಪಿಸಲಾಗಿದೆ” ಎಂದು ಸಂಶೋಧಕರು ವಿವರಿಸಿದ್ದಾರೆ.

ಇಲ್ಲಿ ವಿವರಿಸಿದ ವಿಧಾನವು ಜಲವಿದ್ಯುತ್ ತತ್ವವನ್ನು ಆಧರಿಸಿದೆ; ಆದರೆ ಇದನ್ನು ದೊಡ್ಡ ಪ್ರಮಾಣದಲ್ಲಿ ಅನ್ವಯಿಸಿದೆ. ಹಲವಾರು ವಿಧದ ಜನರೇಟರ್‌ಗಳು ಹಾಗೂ ಪ್ಯಾನೆಲ್‌ಗಳ ಮೂಲಕ ಮಳೆಹನಿಯ ಶಕ್ತಿಯನ್ನು ಪರೀಕ್ಷಿಸಿದ ನಂತರ ಸಂಶೋಧಕರು ಅಂತಿಮವಾಗಿ ಗರಿಷ್ಠ ಉತ್ಪಾದನೆಯ ಜನರೇಟರ್‌ಗಳನ್ನು ಆವಿಷ್ಕರಿಸಿದ್ದಾರೆ. ಇದರ ಗರಿಷ್ಠ ವಿದ್ಯುತ್ ಉತ್ಪಾದನೆ ಸಾಂಪ್ರದಾಯಿಕ ಮಳೆಹನಿಯ ಶಕ್ತಿಗಿಂತ ಸುಮಾರು ಐದು ಪಟ್ಟು ಹೆಚ್ಚು ಎಂದು ಚೀನಾದ ಶೆನ್‌ಜೆನ್‌ನಲ್ಲಿರುವ ಸಿಂಗುವಾ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಮತ್ತು ಕೃತಿಯ ಸಹ-ಲೇಖಕ ಝೋಂಗ್ ಲಿ ಹೇಳಿದ್ದಾರೆ.

ಈ ಫಲಕಗಳನ್ನು ಈಗಷ್ಟೇ ಅಭಿವೃದ್ಧಿಪಡಿಸಲಾಗಿದೆ. ಮಾರುಕಟ್ಟೆಗೆ ಇವು ಇನ್ನೂ ಬಂದಿಲ್ಲ. ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಈ ಆವಿಷ್ಕಾರ ಹೆಚ್ಚು ಉಪಯೋಗಕ್ಕೆ ಬರಬಹುದು ಎಂದು ಊಹಿಸಲಾಗಿದೆ.

ಇದನ್ನೂ ಓದಿ: Viral News: ನೀರಿನಂತೆಯೇ ಇರುವ ಮಂಜುಗಡ್ಡೆಯನ್ನು ತಯಾರಿಸಿದ ವಿಜ್ಞಾನಿಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Elon Musk: ದೇಶದಲ್ಲಿ 1.8 ಲಕ್ಷ ಎಕ್ಸ್‌ ಖಾತೆಗಳು ಬಂದ್‌; ಕಾರಣವೇನು?

Elon Musk: ಮಕ್ಕಳ ಲೈಂಗಿಕ ಶೋಷಣೆ ಮತ್ತು ಒಮ್ಮತವಿಲ್ಲದ ನಗ್ನತೆಯನ್ನು ಉತ್ತೇಜಿಸಿದ್ದಕ್ಕಾಗಿ ಭಾರತದ 1,84,241 ಎಕ್ಸ್‌ ಖಾತೆಗಳನ್ನು ನಿಷೇಧಿಸಲಾಗಿದೆ. ಜತೆಗೆ ದೇಶದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಲಾಗುತ್ತದೆ ಎನ್ನುವ ಕಾರಣಕ್ಕೆ 1,303 ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಕಳೆದ ಬಾರಿ ಇದೇ ಕಾರಣಕ್ಕೆ ದೇಶದಲ್ಲಿ 2,12,627 ಎಕ್ಸ್ ಖಾತೆಗಳನ್ನು ನಿಷೇಧಿಸಲಾಗಿತ್ತು.

VISTARANEWS.COM


on

Elon Musk
Koo

ನವದೆಹಲಿ: ಉದ್ಯಮಿ ಎಲಾನ್‌ ಮಸ್ಕ್‌ (Elon Musk) ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್‌ (Social media X) ಈ ವರ್ಷದ ಮಾರ್ಚ್ 26ರಿಂದ ಏಪ್ರಿಲ್ 25ರ ನಡುವೆ ಭಾರತದಲ್ಲಿ 1,84,241 ಖಾತೆಗಳನ್ನು ನಿಷೇಧಿಸಿದೆ. ಮಕ್ಕಳ ಲೈಂಗಿಕ ಶೋಷಣೆ ಮತ್ತು ಒಮ್ಮತವಿಲ್ಲದ ನಗ್ನತೆಯನ್ನು ಉತ್ತೇಜಿಸಿದ್ದಕ್ಕಾಗಿ ಹೆಚ್ಚಿನ ಖಾತೆಗಳನ್ನು ಬ್ಯಾನ್‌ ಮಾಡಲಾಗಿದೆ. ಜತೆಗೆ ದೇಶದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಲಾಗುತ್ತದೆ ಎನ್ನುವ ಕಾರಣಕ್ಕೆ 1,303 ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೈಕ್ರೋ ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ ಹೊಸ ಐಟಿ ನಿಯಮ 2021ರ ಪ್ರಕಾರ ತನ್ನ ಮಾಸಿಕ ವರದಿ ಬಿಡುಗಡೆ ಮಾಡಿದೆ. ಅದರಲ್ಲಿ ಈ ಅಂಕಿ-ಅಂಶ ಬಹಿರಂಗಗೊಂಡಿದೆ. ಅದರಂತೆ ಈ ವೇಳೆ ಭಾರತೀಯ ಬಳಕೆದಾರರಿಂದ ಸುಮಾರು 18,562 ದೂರುಗಳ ಬಂದಿತ್ತು ಎಂದು ಸಂಸ್ಥೆ ಹೇಳಿದೆ.

ನಿಷೇಧಿತ ಖಾತೆಗಳು

ಭಾರತದಲ್ಲಿ ದಾಖಲಾದ ದೂರುಗಳ ಪೈಕಿ ನಿರ್ಬಂಧಗಳ ಉಲ್ಲಂಘನೆ (7,555), ದ್ವೇಷಪೂರಿತ ನಡವಳಿಕೆ (3,353), ಸೂಕ್ಷ್ಮ ವಯಸ್ಕ ವಿಷಯ (3,335) ಮತ್ತು ನಿಂದನೆ/ಕಿರುಕುಳ (2,402) ಹೆಚ್ಚಿನ ಸಂಖ್ಯೆಯಲ್ಲಿವೆ. ಇದಕ್ಕೂ ಹಿಂದಿನ ಬಾರಿ ಅಂದರೆ ಫೆಬ್ರವರಿ 26 ಮತ್ತು ಮಾರ್ಚ್ 25ರ ನಡುವೆ ದೇಶದಲ್ಲಿ 2,12,627 ಎಕ್ಸ್ ಖಾತೆಗಳನ್ನು ನಿಷೇಧಿಸಲಾಗಿತ್ತು. ಈ ಪೈಕಿ ಭಯೋತ್ಪಾದನೆಯನ್ನು ಉತ್ತೇಜಿಸಿದ್ದಕ್ಕಾಗಿ 1,235 ಖಾತೆಗಳನ್ನು ತೆಗೆದು ಹಾಕಲಾಗಿತ್ತು.

ಎಕ್ಸ್‌ಮೇಲ್‌ ಮೂಲಕ ಜಿಮೇಲ್‌ಗೆ ಪೈಪೋಟಿ

ಚಾಟ್‌ಜಿಪಿಟಿಗೆ (ChatGPT) ಪ್ರತಿಯಾಗಿ ತನ್ನದೇ ಆದ ಎಐ ಆವೃತ್ತಿಯನ್ನು ಬಿಡುಗಡೆ ಮಾಡಿದ ನಂತರ ಉದ್ಯಮಿ ಎಲಾನ್ ಮಸ್ಕ್ (Elon Musk) ಅವರು ಎಕ್ಸ್‌ಮೇಲ್ (Xmail) ಸೇವೆ ಆರಂಭಿಸುವುದನ್ನು ಖಚಿತಪಡಿಸಿದ್ದಾರೆ. ಎಕ್ಸ್‌ಮೇಲ್, ಗೂಗಲ್‌ನ (Google) ಜನಪ್ರಿಯ ಜಿಮೇಲ್‌ಗೆ (Gmail) ಪೈಪೋಟಿ ನೀಡಲಿದೆ. ಈ ಮಧ್ಯೆ, ಗೂಗಲ್‌ ತನ್ನ ಜಿಮೇಲ್ ಸೇವೆಯನ್ನು ಸ್ಥಗಿತಗೊಳಿಸಲಿದೆ ಎಂಬ ವದಂತಿ ಕೆಲ ಕಾಲ ಆತಂಕಕ್ಕೆ ಕಾರಣವಾಯಿತು. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಗೂಗಲ್, ಜಿಮೇಲ್ ಸ್ಥಗಿತವಾಗುತ್ತಿಲ್ಲ. ಈ ಹಿಂದೆ ಎಚ್‌ಟಿಎಂಎಲ್ ಆಗಿದ್ದ ಡಿಫಾಲ್ಟ್ ಜಿಮೇಲ್ ಇಂಟರ್‌ಫೇಸ್‌ ಅನ್ನು ಮತ್ತಷ್ಟು ವರ್ಣರಂಜಿತಗೊಳಿಸಲಿದೆ. ಈ ಬದಲಾವಣೆ ಜನವರಿ 24ರಿಂದಲೇ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಎಕ್ಸ್‌ನಲ್ಲಿನ ಸಂಭಾಷಣೆಯೊಂದರಲ್ಲಿ ಮಸ್ಕ್ ಅವರು ‘ಎಕ್ಸ್‌ಮೇಲ್’ ಎಂದು ಕರೆಯಲ್ಪಡುವ ಉತ್ಪನ್ನವು ‘ಬರುತ್ತಿದೆ’ ಎಂದು ಹೇಳಿದ್ದಾರೆ. ಗೂಗಲ್‌ ಜಿಮೇಲ್ ಸ್ಥಗಿತವಾಗಲಿದೆ ಎಂಬ ನಕಲಿ ದಾಖಲೆಯು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವಾಗಲೇ ಎಕ್ಸ್‌ಮೇಲ್ ಆರಂಭದ ಕುರಿತು ಮಸ್ಕ್ ಹೇಳಿಕೆಯು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಇಷ್ಟಾಗಿಯೂ ಎಕ್ಸ್‌ಮೇಲ್ ಆರಂಭದ ಕುರಿತು ಹೆಚ್ಚೇನೂ ಅವರು ಮಾಹಿತಿಯನ್ನು ನೀಡಿಲ್ಲ. ಈ ಸೇವೆ ಯಾವಾಗ ಆರಂಭವಾಗಲಿದೆ ಎಂಬ ಬಗ್ಗೆ ಯಾವುದೇ ವಿವರವನ್ನು ನೀಡಿಲ್ಲ. ಎಕ್ಸ್‌ನ ಸೆಕ್ಯುರಿಟಿ ಇಂಜಿನಿಯರಿಂಗ್ ತಂಡದ ಹಿರಿಯ ಸದಸ್ಯರಾದ ನಾಥನ್ ಮೆಕ್‌ಗ್ರಾಡಿ ಅವರು ಎಕ್ಸ್‌ಮೇಲ್ ಲಾಂಚ್ ದಿನಾಂಕದ ಬಗ್ಗೆ ಪ್ರಶ್ನಿಸಿದ ನಂತರ ಈ ದೃಢೀಕರಣವು ಬಂದಿದೆ. ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಮಸ್ಕ್, ಎಕ್ಸ್ ಮೇಲ್ ಶೀಘ್ರವೇ ಚಾಲ್ತಿಗೆ ಬರಲಿದೆ ಎಂದು ದೃಢಿಕರಿಸಿದರು.

ಇದನ್ನೂ ಓದಿ: OpenAI ChatGPT: ಚಾಟ್‌ಜಿಪಿಟಿ VS ಇಲಾನ್ ಮಸ್ಕ್‌ನ ಗ್ರೋಕ್‌: ಏನು ವ್ಯತ್ಯಾಸ?

Continue Reading

ಅಂಕಣ

ಸೈಬರ್‌ ಸೇಫ್ಟಿ ಅಂಕಣ: ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ?

ಸೈಬರ್‌ ಸೇಫ್ಟಿ ಅಂಕಣ: ಸಾಮಾಜಿಕ ಮಾಧ್ಯಮದೊಂದಿಗೆ ಆರೋಗ್ಯಕರ ಸಮತೋಲನವನ್ನು ಸಾಧಿಸುವುದು ಮುಖ್ಯ. ಸಂಪರ್ಕಿಸಲು, ಹಂಚಿಕೊಳ್ಳಲು ಮತ್ತು ಮಾಹಿತಿ ಪಡೆಯಲು ಸಾಮಾಜಿಕ ಮಾಧ್ಯವನ್ನು ಬಳಸಿ. ಆದರೆ ನಿಮ್ಮ ಜೀವನದಲ್ಲಿ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ನಿಮ್ಮ ಫೋನ್ ಬಳಕೆಯ ಬಗ್ಗೆ ಗಮನಹರಿಸುವ ಮೂಲಕ ಮತ್ತು ಆರೋಗ್ಯಕರ ಅಭ್ಯಾಸಗಳ ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳಿ.

VISTARANEWS.COM


on

esim cyber safety column
Koo

ಭಾಗ-2

cyber safety logo

ಸೈಬರ್‌ ಸೇಫ್ಟಿ ಅಂಕಣ: ಸಾಮಾಜಿಕ ಮಾಧ್ಯಮದ ವ್ಯಸನದ (Social media addiction) ಬಗ್ಗೆ ಸ್ನೇಹಿತ ನೀರಜ್‌ ಕುಮಾರ್‌ ಅವರ ವೀಡಿಯೊಗಳನ್ನು ಆಧರಿಸಿ ಬರೆದ ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ? ಲೇಖನದ ಮುಂದುವರಿದ ಭಾಗ ಈ ವಾರ. ಕಾರಣಾಂತರದಿಂದ ಎರಡು ವಾರಗಳ ಬ್ರೇಕ್‌ ಕೊಡಬೇಕಾಯಿತು.

ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯೇ ಎಂದು ಸ್ವಪರೀಕ್ಷೆ ಮಾಡಿಕೊಳ್ಳಲು ನೀರಜ್‌ 5C ಫ್ರೇಮ್‌ವರ್ಕ್‌ ಬಗ್ಗೆ ತಮ್ಮ ವೀಡಿಯೊದಲ್ಲಿ ವಿವರಿಸಿದ್ದಾರೆ. ಕಡುಬಯಕೆ (Craving), ನಿಯಂತ್ರಣ (Control), ನಿಭಾಯಿಸುವಿಕೆ (Coping), ಒತ್ತಾಯ (Compulsioin) ಮತ್ತು ಪರಿಣಾಮ (Consequence) ಎಂಬ ಈ ಐದು C ಗಳು ನಿಮ್ಮಲ್ಲಿ ಎಷ್ಟು ಪ್ರಮಾಣದಲ್ಲಿದೆ ಎಂದು ಸೊನ್ನೆಯಿಂದ ಹತ್ತರವರೆಗಿನ ಮಾಪನದಲ್ಲಿ ಅಂಕ ಕೊಟ್ಟುಕೊಳ್ಳಬಹುದು. ಅದರ ಒಟ್ಟು ಮೊತ್ತ ಶೇಕಡ 60ಕ್ಕಿಂತ ಹೆಚ್ಚು ಅಂದರೆ ಮೂವತ್ತು ಅಥವಾ ಜಾಸ್ತಿ ಇದ್ದರೆ ನಿಮ್ಮ ವ್ಯಸನ ಗಂಭೀರಮಟ್ಟದಲ್ಲಿದೆ ಎನ್ನುತ್ತಾರೆ. ಇದರಿಂದ ಹೊರಬರಲು ಮಾನಸಿಕ ತಜ್ಞರೊಂದಿಗೆ ಸಮಾಲೋಚನೆ ಮಾಡುವುದು ಒಳ್ಳೆಯದು.

ಈಗ ಈ ವ್ಯಸನದಿಂದ ಹೊರಬರುವುದು ಹೇಗೆ ನೋಡೋಣ.

ಸಾಮಾಜಿಕ ಮಾಧ್ಯಮ ವ್ಯಸನವನ್ನು ನಿವಾರಿಸುವ ಮೊದಲ ಹೆಜ್ಜೆ ನಿಮಗೆ ಸಮಸ್ಯೆ ಇದೆ ಎಂದು ಒಪ್ಪಿಕೊಳ್ಳುವುದು. 5C ಫ್ರೇಮ್‌ವರ್ಕ್‌ನಲ್ಲಿ ನಿಮ್ಮ ಸ್ಕೋರ್‌ಗಳನ್ನು ಪರಿಶೀಲನೆ ಮಾಡಿ, ಯಾವ ಅಂಶದಲ್ಲಿ ನಿಮ್ಮ ಸ್ಕೋರ್ ಜಾಸ್ತಿ ಇದೆ ಎನ್ನುವುದನ್ನು ಕಂಡುಕೊಳ್ಳಿ. ಅವುಗಳನ್ನು ಕಡಿಮೆ ಮಾಡುವ ಸಲಹೆಗಳನ್ನು ಅನುಸರಿಸಿ. ಜೊತೆಗೆ ನಿಯಮಿತವಾಗಿ ಮರುಮೌಲ್ಯಮಾಪನ ಮಾಡಿಕೊಂಡು, ಆರೋಗ್ಯಕರ ಸಾಮಾಜಿಕ ಮಾಧ್ಯಮ ಅಭ್ಯಾಸಗಳ ಕಡೆಗೆ ನಿಮ್ಮ ಪ್ರಗತಿಯನ್ನು ನೀವು ಟ್ರ್ಯಾಕ್ ಮಾಡಿ. ನಿಮ್ಮ ಫೋನ್ ಬಳಕೆಯ ಬಗ್ಗೆ ಮಿತಿಗಳನ್ನು ರೂಪಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನೀರಜ್ ಕುಮಾರ್ ಒತ್ತಿಹೇಳುತ್ತಾರೆ.

ಸಾಮಾಜಿಕ ಮಾಧ್ಯಮವು ಸಂಪರ್ಕ ಮತ್ತು ಮಾಹಿತಿಗಾಗಿ ಬಳಸುವ ಅಮೂಲ್ಯವಾದ ಸಾಧನವಾಗಿದೆ. ಆದರೆ ಜೀವನದಲ್ಲಿ ಆರೋಗ್ಯಕರ ಸಮತೋಲನವನ್ನು ಕಾಪಾಡಿಕೊಳ್ಳಲು ಇದು ನಿರ್ಣಾಯಕವಾಗಿದೆ. ವ್ಯಸನದ ಚಿಹ್ನೆಗಳನ್ನು ಗುರುತಿಸುವ ಮೂಲಕ ಮತ್ತು ಮಿತಿಮೀರಿದ ಬಳಕೆಯನ್ನು ನಿಗ್ರಹಿಸಲು ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ, ನಾವು ನಮ್ಮ ಸಮಯ ಮತ್ತು ಗಮನದ ನಿಯಂತ್ರಣವನ್ನು ಪುನಃ ಪಡೆದುಕೊಳ್ಳಬಹುದು. ಸಾಮಾಜಿಕ ಮಾಧ್ಯಮವು ನಮ್ಮ ಜೀವನವನ್ನು ವರ್ಧಿಸುವಂತೆ ಅಳವಡಿಸಿಕೊಳ್ಳಬಹುದು.

ಕೆಲವು ಉಪಯುಕ್ತ ಸಲಹೆಗಳು: ‌

ಸಮಯದ ಮಿತಿಗಳನ್ನು ಹೊಂದಿಸಿ: ದಿನಕ್ಕೆ ನಿರ್ದಿಷ್ಟ ಸಮಯವನ್ನು ಸಾಮಾಜಿಕ ಮಾಧ್ಯಮಕ್ಕೆ ಮೀಸಲಿಡಿ ಮತ್ತು ಅದಕ್ಕೆ ಬದ್ಧರಾಗಿರಿ.
ಅಧಿಸೂಚನೆಗಳನ್ನು ಆಫ್ ಮಾಡಿ: ಕಂಪಲ್ಸಿವ್ ಫೋನ್ ಬಳಕೆಗೆ ನಿರಂತರ ಅಧಿಸೂಚನೆಗಳು ಪ್ರಮುಖ ಪ್ರಚೋದಕವಾಗಬಹುದು. ಹೆಚ್ಚಿನ ಅಪ್ಲಿಕೇಶನ್‌ಗಳಿಂದ ಅವುಗಳನ್ನು ಆಫ್ ಮಾಡುವುದು ಒಳ್ಳೆಯದು.
ಫೋನ್-ಮುಕ್ತ ವಲಯಗಳನ್ನು ರಚಿಸಿ: ನಿಮ್ಮ ಮನೆಯಲ್ಲಿ ನಿಮ್ಮ ಮಲಗುವ ಕೋಣೆಯಲ್ಲಿ ಅಥವಾ ಊಟ ಮಾಡುವಾಗ ಫೋನ್ ಬಳಕೆಯನ್ನು ನಿರ್ಭಂದಿಸಿ.
ಪರ್ಯಾಯ ಚಟುವಟಿಕೆಗಳನ್ನು ಹುಡುಕಿ: ಸಮಯ ವ್ಯರ್ಥವಾಗುವ ಅನುಪಯೋಗಿ ಸ್ಕ್ರೋಲಿಂಗ್ ಅನ್ನು ನೀವು ಆನಂದಿಸುವ ಚಟುವಟಿಕೆಗಳೊಂದಿಗೆ ಬದಲಾಯಿಸಿ. ಉದಾಹರಣೆಗೆ ಓದುವುದು, ಹೊರಾಂಗಣದಲ್ಲಿ ಸಮಯ ಕಳೆಯುವುದು ಅಥವಾ ಸ್ನೇಹಿತರು ಮತ್ತು ಕುಟುಂಬದೊಂದಿಗೆ ವೈಯಕ್ತಿಕವಾಗಿ ಬೆರೆಯುವುದು. ಸಂಗೀತ, ಸಾಹಿತ್ಯ, ಚಿತ್ರಕಲೆ ಅಲ್ಲದೆ ಅಂಚೆಚೀಟಿ ಸಂಗ್ರಹಣೆ, ನಾಣ್ಯಗಳ ಸಂಗ್ರಹಣೆ ಮುಂತಾದ ಹವ್ಯಾಸಗಳೂ ನಿಮ್ಮನ್ನು ಮೊಬೈಲ್‌ ಗೀಳಿನಿಂದ ವಿಮುಖಗೊಳಿಸುತ್ತವೆ.

World Social Media Day

ಸಾಮಾಜಿಕ ಮಾಧ್ಯಮ ಡಿಟಾಕ್ಸ್: ನಿಮ್ಮ ಮನಸ್ಸಿನ ರೀಬೂಟ್

ಸಾಮಾಜಿಕ ಮಾಧ್ಯಮ ನಿರ್ವಿಶೀಕರಣವನ್ನು (ಡಿಟಾಕ್ಸಿನೇಷನ್) ಪರಿಗಣಿಸಿ! ನಿರ್ದಿಷ್ಟ ಅವಧಿಗೆ ಸಾಮಾಜಿಕ ಮಾಧ್ಯಮದಿಂದ ವಿರಾಮ ತೆಗೆದುಕೊಳ್ಳಿ, ನಿಮ್ಮ ಮೊಬೈಲ್‌ನ್ನು ಕೇವಲ ಸಂಪರ್ಕಕ್ಕೆ ಮಾತ್ರ ಬಳಸಿ. ಯಾವುದೇ ಸೋಷಿಯಲ್‌ ಆ್ಯಪ್‌ಗಳಿಂದ ದೂರ ಇರಿ. ಅದು ಒಂದು ದಿನ, ವಾರಾಂತ್ಯ ಅಥವಾ ಒಂದು ವಾರವೂ ಆಗಿರಲಿ. ನೈಜ-ಜಗತ್ತಿನ ಸಂಪರ್ಕ ಮತ್ತು ನೀವು ನಿರ್ಲಕ್ಷಿಸಿರುವ ಚಟುವಟಿಕೆಗಳ ಸಂತೋಷಗಳನ್ನು ಮರುಶೋಧಿಸಲು ಇದು ನಿಮಗೆ ಸಹಾಯ ಮಾಡುತ್ತದೆ. ನಿರಂತರ ಸಾಮಾಜಿಕ ಮಾಧ್ಯಮ ಪುಲ್ ಇಲ್ಲದೆ ನೀವು ಎಷ್ಟು ಹೆಚ್ಚು ಉತ್ಪಾದಕ ಮತ್ತು ಪ್ರಸ್ತುತವನ್ನು ಅನುಭವಿಸುತ್ತೀರಿ ಎಂದು ನಿಮಗೇ ಆಶ್ಚರ್ಯವಾಗಬಹುದು.

ನೆನಪಿಡಿ, ನೀವು ಒಬ್ಬಂಟಿಯಲ್ಲ

ಸಾಮಾಜಿಕ ಮಾಧ್ಯಮ ವ್ಯಸನವು ಬೆಳೆಯುತ್ತಿರುವ ಸಮಸ್ಯೆಯಾಗಿದೆ. ಇದರಲ್ಲಿ ನೀವು ಮಾತ್ರ ಸಿಲುಕಿದವರಲ್ಲ. ಸಾಮಾಜಿಕ ಮಾಧ್ಯಮದೊಂದಿಗೆ ಆರೋಗ್ಯಕರ ಸಮತೋಲನವನ್ನು ಕಾಪಾಡಿಕೊಳ್ಳಲು ಅನೇಕ ಜನರು ಹೆಣಗಾಡುತ್ತಿದ್ದಾರೆ. ನಿಮ್ಮ ಫೋನ್ ಬಳಕೆಯ ಬಗ್ಗೆ ಗಮನಹರಿಸುವ ಮೂಲಕ, 5C ಫ್ರೇಮ್‌ವರ್ಕ್ ಅನ್ನು ಬಳಸಿಕೊಳ್ಳುವ ಮೂಲಕ ಮತ್ತು ಈ ಸಲಹೆಗಳನ್ನು ಕಾರ್ಯಗತಗೊಳಿಸುವುದರ ಮೂಲಕ, ನಿಮ್ಮ ಸಾಮಾಜಿಕ ಮಾಧ್ಯಮ ಅಭ್ಯಾಸಗಳನ್ನು ನೀವು ನಿಯಂತ್ರಿಸಬಹುದು ಮತ್ತು ಅದು ನಿಮ್ಮ ಜೀವನದಲ್ಲಿ ಧನಾತ್ಮಕ ಶಕ್ತಿಯಾಗಬಲ್ಲದು.

ಸಾಮಾಜಿಕ ಮಾಧ್ಯಮ ಮತ್ತು ಮಾನಸಿಕ ಆರೋಗ್ಯ: ಕಾಳಜಿಗೆ ಕಾರಣ

ಸಾಮಾಜಿಕ ಮಾಧ್ಯಮಗಳು ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಅತಿಯಾದ ಸಾಮಾಜಿಕ ಮಾಧ್ಯಮ ಬಳಕೆಯಿಂದ ಹೆಚ್ಚಿದ ಆತಂಕ, ಖಿನ್ನತೆ ಮತ್ತು ಅಸಮರ್ಪಕತೆಯ ಭಾವನೆಗಳ ನಡುವಿನ ಪರಸ್ಪರ ಸಂಬಂಧವನ್ನು ಅಧ್ಯಯನಗಳು ತೋರಿಸಿವೆ. ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಾಗಿ ಕಾಣುವ ಜೀವನದ ಕ್ಯುರೇಟೆಡ್ ಮತ್ತು ಅವಾಸ್ತವಿಕ ಚಿತ್ರಣಗಳು ನಿಮ್ಮಲ್ಲಿ ಹೋಲಿಕೆ ಮತ್ತು ಅಸಮರ್ಪಕತೆಯ ಭಾವನೆಗಳಿಗೆ ಕಾರಣವಾಗಬಹುದು. ಸಾಮಾಜಿಕ ಮಾಧ್ಯಮ ಫೀಡ್‌ಗಳು, ಸಾಮಾನ್ಯವಾಗಿ ಎಚ್ಚರಿಕೆಯಿಂದ ರಚಿಸಲಾದ ಹೈಲೈಟ್ ರೀಲ್‌ಗಳು, ವಾಸ್ತವದ ಪ್ರಾತಿನಿಧ್ಯವಲ್ಲ ಎಂಬುದನ್ನು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯ.

ನೈಜ ಸಂಪರ್ಕಗಳ ಮೇಲೆ ಕೇಂದ್ರೀಕರಿಸಿ ಮತ್ತು ನೀವು ಪ್ರೀತಿಸುವ ಜೀವನವನ್ನು ನಿರ್ಮಿಸಿ

ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಂಪರ್ಕದಲ್ಲಿರಲು ಸಾಮಾಜಿಕ ಮಾಧ್ಯಮವು ಉತ್ತಮ ಸಾಧನವಾಗಿದೆ, ಆದರೆ ಇದು ನೈಜ-ಪ್ರಪಂಚದ ಸಂವಹನವನ್ನು ಬದಲಿಸಬಾರದು. ಮುಖಾಮುಖಿ ಸಂವಹನಗಳಿಗೆ ಆದ್ಯತೆ ನೀಡಲು ಮತ್ತು ನಿಮ್ಮ ಜೀವನದಲ್ಲಿ ಅರ್ಥಪೂರ್ಣ ಸಂಬಂಧಗಳನ್ನು ಬೆಳೆಸಲು ಪ್ರಯತ್ನವನ್ನು ಮಾಡಿ.

ಅಂತಿಮವಾಗಿ, ಸಾಮಾಜಿಕ ಮಾಧ್ಯಮದೊಂದಿಗೆ ಆರೋಗ್ಯಕರ ಸಮತೋಲನವನ್ನು ಸಾಧಿಸುವುದು ಮುಖ್ಯ. ಸಂಪರ್ಕಿಸಲು, ಹಂಚಿಕೊಳ್ಳಲು ಮತ್ತು ಮಾಹಿತಿ ಪಡೆಯಲು ಸಾಮಾಜಿಕ ಮಾಧ್ಯವನ್ನು ಬಳಸಿ. ಆದರೆ ನಿಮ್ಮ ಜೀವನದಲ್ಲಿ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ನಿಮ್ಮ ಫೋನ್ ಬಳಕೆಯ ಬಗ್ಗೆ ಗಮನಹರಿಸುವ ಮೂಲಕ ಮತ್ತು ಆರೋಗ್ಯಕರ ಅಭ್ಯಾಸಗಳ ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ, ನಿಮ್ಮ ಸಮಯ ಮತ್ತು ಗಮನದ ನಿಯಂತ್ರಣವನ್ನು ನೀವು ಮರುಪಡೆಯಬಹುದು. ಸಾಮಾಜಿಕ ಮಾಧ್ಯಮವು ನಿಮ್ಮ ಜೀವನವನ್ನು (ಸಮಯವನ್ನು) ಕಡಿಮೆಗೊಳಿಸುವುದಕ್ಕಿಂತ ಹೆಚ್ಚಿಸುತ್ತದೆ ಎಂದು ಖಚಿತಪಡಿಸಿಕೊಳ್ಳಬಹುದು. ಆದ್ದರಿಂದ, ನಿಮ್ಮ ಫೋನ್ ಅನ್ನು ಕೆಳಗೆ ಇರಿಸಿ, ಪರದೆಯಿಂದ ಮೇಲಕ್ಕೆ ನೋಡಿ ಮತ್ತು ಅಲ್ಲಿಗೆ ಹೋಗಿ ಮತ್ತು ನಿಮ್ಮ ಜೀವನವನ್ನು ಜೀವಿಸಿ.
ಮೋಬೈಲ್‌ ಸ್ಕ್ರೋಲಿಂಗ್‌ ನಿಲ್ಲಿಸಿ, ಜೀವನದಲ್ಲಿ ಸ್ಟ್ರೋಲಿಂಗ್ ಮಾಡಿ. Stop scrolling, Start Strolling.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಮುದ್ರಾ ಯೋಜನೆಯ ಹೆಸರಲ್ಲಿ ರಾಷ್ಟ್ರವ್ಯಾಪಿ ಸೈಬರ್ ವಂಚನೆ

Continue Reading

ದೇಶ

Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

Artificial Intelligence:ಹನುಮಾನ್ AI ಇನ್ನೂ ಡೆವಲಪಿಂಗ್‌ ಹಂತದಲ್ಲಿದ್ದು, ಇದರ ಹೊಸ ಆವೃತಿ ಶೀಘ್ರದಲ್ಲೇ ಬರಲಿದೆ. ಪ್ಲಾಟ್‌ಫಾರ್ಮ್ ತನ್ನ ಮೊದಲ ವರ್ಷದಲ್ಲಿ 200 ಮಿಲಿಯನ್ ಬಳಕೆದಾರರನ್ನು ತಲುಪುವ ಗುರಿಯನ್ನು ಹೊಂದಿದೆ. SML ಇಂಡಿಯಾ ಇದಕ್ಕಾಗಿ HP, NASSCOM ಮತ್ತು Yotta ನೊಂದಿಗೆ ಪಾಲುದಾರಿಕೆ ಹೊಂದಿದೆ.

VISTARANEWS.COM


on

Artificial Intelligence
Koo

ನವದೆಹಲಿ: ಭಾರತದಲ್ಲಿ ಇದೇ ಮೊದಲ ಬಾರಿಗೆ ಸುಮಾರು 98 ವಿವಿಧ ಭಾಷೆಗಳಲ್ಲಿ ಬಹುಭಾಷೆಯ ಎಐ ತಂತ್ರಜ್ಞಾನ(Artificial Intelligence) ಹನುಮಾನ್‌(Hanuman) ಅನ್ನು ಅನಾವರಣಗೊಳಿಸಿದೆ. 3AI ಹೋಲ್ಡಿಂಗ್‌ ಲಿಮಿಟೆಡ್‌(3AI Holding limited) ಮತ್ತು ಎಸ್‌ಎಂಎಲ್‌ ಭಾರತ ಜೊತೆಗೂಡಿಗೊಂಡು ಅನಾವರಣ ಮಾಡಿರುವ ಈ ಹನುಮಾನ್‌ AI ತಂತ್ರಜ್ಞಾನ 12 ಭಾರತೀಯ ಭಾಷೆಗಳಲ್ಲೂ ಲಭ್ಯವಿದೆ. ಈ ಹೊಸ ತಂತ್ರಜ್ಞಾನ ಎಲ್ಲಾ ಬಳಕೆದಾರರಿಗೆ ಲಭ್ಯವಿದ್ದು, ಮೊಬೈಲ್‌ ಫೋನ್‌ ಮೂಲಕ ನೀವು ನೋಂದಣಿ ಪಡೆಯಬಹುದಾಗಿದೆ. ಟೆಕ್ಸ್ಟ್‌ ಪ್ರತಿಕ್ರಿಯೆಗಳನ್ನು ಸೃಷ್ಟಿಸುವಷ್ಟಕ್ಕೆ ಮಾತ್ರ ಈ ತಂತ್ರಜ್ಞಾನ ಸದ್ಯಕ್ಕೆ ಸೀಮಿತವಾಗಿದೆ.

ಹನುಮಾನ್ AI ಇನ್ನೂ ಡೆವಲಪಿಂಗ್‌ ಹಂತದಲ್ಲಿದ್ದು, ಇದರ ಹೊಸ ಆವೃತಿ ಶೀಘ್ರದಲ್ಲೇ ಬರಲಿದೆ. ಪ್ಲಾಟ್‌ಫಾರ್ಮ್ ತನ್ನ ಮೊದಲ ವರ್ಷದಲ್ಲಿ 200 ಮಿಲಿಯನ್ ಬಳಕೆದಾರರನ್ನು ತಲುಪುವ ಗುರಿಯನ್ನು ಹೊಂದಿದೆ. SML ಇಂಡಿಯಾ ಇದಕ್ಕಾಗಿ HP, NASSCOM ಮತ್ತು Yotta ನೊಂದಿಗೆ ಪಾಲುದಾರಿಕೆ ಹೊಂದಿದೆ. ಯೊಟ್ಟಾ ಸಂಸ್ಥೆ GPU ಕ್ಲೌಡ್ ಮೂಲಸೌಕರ್ಯವನ್ನು ಒದಗಿಸುತ್ತದೆ, NASSCOM ಜೊತೆಗಿನ ಪಾಲುದಾರಿಕೆಯು AI ಸ್ಟಾರ್ಟ್‌ಅಪ್‌ಗಳನ್ನು ಬೆಂಬಲಿಸುವ ಮತ್ತು 3000 ಕಾಲೇಜುಗಳೊಂದಿಗೆ ತೊಡಗಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಇಂಗ್ಲಿಷ್ ಮತ್ತು ತೆಲುಗು ನಡುವೆ ತಡೆರಹಿತ ಅನುವಾದಕ್ಕಾಗಿ ಕಂಪನಿಯು ತೆಲಂಗಾಣ ಸರ್ಕಾರ ಮತ್ತು ಆಡಳಿತ ಸುಧಾರಣೆಗಳು ಮತ್ತು ಸಾರ್ವಜನಿಕ ಕುಂದುಕೊರತೆಗಳ ಇಲಾಖೆ (DARPG) ಯೊಂದಿಗೆ ಸಹ ಸಹಯೋಗ ಮಾಡಿಕೊಂಡಿದೆ.

ಇದನ್ನೂ ಓದಿ:K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

ಈ ತಂತ್ರಜ್ಞಾನ ಪ್ರಸ್ತುತ 12 ಭಾರತೀಯ ಭಾಷೆಗಳಲ್ಲಿ ಮತ್ತು ಹಲವಾರು ಜಾಗತಿಕ ಭಾಷೆಗಳಲ್ಲಿ ಲಭ್ಯವಿದೆ. 3AI ಹೋಲ್ಡಿಂಗ್‌ನ ತಂತ್ರಜ್ಞಾನದಿಂದ ನಡೆಸಲ್ಪಡುವ ಪ್ಲಾಟ್‌ಫಾರ್ಮ್ ಸ್ಪಷ್ಟ, ಹೊಂದಾಣಿಕೆಯ ಒಳನೋಟಗಳನ್ನು ನೀಡುತ್ತದೆ ಮತ್ತು ಸಂಕೀರ್ಣ ಡೇಟಾವನ್ನು ಕೃತಕ ಬುದ್ದಿಮತ್ತೆ(AI) ಆಗಿ ಪರಿವರ್ತಿಸುತ್ತದೆ. ಆರೋಗ್ಯ, ಆಡಳಿತ, ಹಣಕಾಸು ಸೇವೆಗಳು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಹನುಮಾನ್ AI ಪೂರೈಸುವ ಗುರಿಯನ್ನು ಹೊಂದಿದೆ. 3AI ಹೋಲ್ಡಿಂಗ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಅರ್ಜುನ್ ಪ್ರಸಾದ್ ಪ್ರತಿಕ್ರಿಯಿಸಿದ್ದು, AI ಅನ್ನು ಪ್ರತಿಯೊಬ್ಬ ಭಾರತೀಯನಿಗೂ ಪರಿಚಯಿಸುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.

ಕೃತಕ ಬುದ್ಧಿಮತ್ತೆ ಎಂದರೇನು?

ಸಾಮಾನ್ಯವಾಗಿ ಬುದ್ಧಿಮತ್ತೆಯನ್ನು ಮಾನವನ ಮಿದುಳಿನ ಸಾಮರ್ಥ್ಯ ಮತ್ತು ಅದರ ಕಾರ್ಯಾಚರಣೆಗಳಿಗೆ ಸಂಬಂಧಿಸಿ ವ್ಯಾಖ್ಯಾನಿಸಲಾಗಿದೆ. ಮೂಲಭೂತವಾಗಿ ಬುದ್ಧಿಮತ್ತೆಯನ್ನು ವ್ಯಕ್ತಿಯ ಅಥೆìçಸಿಕೊಳ್ಳುವ ಸಾಮರ್ಥಯವೆಂದೂ ಪರಿಗಣಿಸಲಾಗಿದೆ. ಬುದ್ಧಿಮತ್ತೆಯಲ್ಲಿ ಹಲವು ವಿಧಗಳಿವೆ. ವ್ಯಕ್ತಿಯಿಂದ ವ್ಯಕ್ತಿಗೆ ಅದು ಭಿನ್ನವಾಗಿದೆ. ಮಾನವ ಮಿದುಳಿನ ಬುದ್ಧಿಮತ್ತೆಯನ್ನು “ಸಾಮಾನ್ಯ ಬುದ್ಧಿಮತ್ತೆ’ (General intelligence) ಎನ್ನಲಾಗಿದೆ. ಇದು ದೇವರು ಮಾನವನಿಗೆ ನೀಡಿದ ವರವೂ ಹೌದು. ಕೃತಕ ಬುದ್ಧಿಮತ್ತೆಯ ಗುಣಲಕ್ಷಣ, ಸ್ವಭಾವ ಮತ್ತು ಕಾರ್ಯಚರಣೆಗಳು ಸಂಪೂರ್ಣವಾಗಿ ಭಿನ್ನವಾಗಿರುವುದು ಮಾತ್ರವಲ್ಲದೆ ಅದನ್ನು ಅರಗಿಸಿಕೊಳ್ಳಲು ಹರಸಾಹಸ ಪಡಬೇಕು. ತೀರಾ ಸರಳವಾಗಿ ಕೃತಕ ಬುದ್ಧಿಮತ್ತೆಯನ್ನು ಯಂತ್ರ ಕಲಿಕೆಗೆ (Machine Learning) ತತ್ಸಮಾನಗೊಳಿಸಲಾಗಿದೆ. ಕೃತಕ ಮಿದುಳಿನಿಂದ ನಿರ್ಮಿಸಿದ ಮಾನವ ಯಂತ್ರಗಳು ಮಾನವನ ಹಾಗೆ ಚಿಂತಿಸಿ, ಮಾನವ ರೀತಿಯ ಕಾರ್ಯ ಚಟುವಟಿಕೆಗಳನ್ನು ನಡೆಸುವುದನ್ನು ನೋಡಿದಾಗ ನಿಬ್ಬೆರಗಾಗುತ್ತೇವೆ.

Continue Reading

ತಂತ್ರಜ್ಞಾನ

Reliance Jio: ಜಿಯೋಫೈಬರ್, ಏರ್ ಫೈಬರ್ ಗ್ರಾಹಕರಿಗೆ ಆಫರ್‌; 15 ಒಟಿಟಿ ಅಪ್ಲಿಕೇಷನ್‌ ಜತೆಗೆ 888 ರೂ. ಪೋಸ್ಟ್ ಪೇಯ್ಡ್ ಪ್ಲಾನ್

Reliance Jio: ರಿಲಯನ್ಸ್ ಜಿಯೋದಿಂದ ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದ್ದು, ಒಟಿಟಿ ಪ್ಲಾಟ್ ಫಾರ್ಮ್‌ಗಳನ್ನು ಅತಿ ಹೆಚ್ಚು ಬಳಕೆ ಮಾಡುವವರಿಗೆ, ಇಷ್ಟ ಪಡುವವರಿಗೆ ಇದು ಹೇಳಿ ಮಾಡಿಸಿದ ಯೋಜನೆಯಾಗಿದೆ. ಈ ಪ್ಲಾನ್‌ಗೆ ತಿಂಗಳಿಗೆ 888 ರೂ. ಆಗಲಿದ್ದು, ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ಲಭ್ಯವಿದೆ. ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ. ಇದರ ಅಡಿಯಲ್ಲಿ ಗ್ರಾಹಕರು 15 ಪ್ರೀಮಿಯಂ ಒಟಿಟಿ ಅಪ್ಲಿಕೇಷನ್‌ಗಳನ್ನು ಪಡೆಯಲಿದ್ದು, ಅನಿಯಮಿತ ಡೇಟಾ ಸಹ ದೊರೆಯುತ್ತಿದೆ.

VISTARANEWS.COM


on

888 rupees postpaid plan with 15 OTT applications for JioFiber AirFiber customers
Koo

ನವದೆಹಲಿ: ಜಿಯೋಫೈಬರ್ (Jio Fiber) ಹಾಗೂ ಜಿಯೋ ಏರ್ ಫೈಬರ್ (Jio Air Fiber) ಗ್ರಾಹಕರಿಗಾಗಿ ರಿಲಯನ್ಸ್ ಜಿಯೋದಿಂದ (Reliance Jio) ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದ್ದು, ಒಟಿಟಿ ಪ್ಲಾಟ್ ಫಾರ್ಮ್‌ಗಳನ್ನು ಅತಿ ಹೆಚ್ಚು ಬಳಕೆ ಮಾಡುವವರಿಗೆ, ಇಷ್ಟ ಪಡುವವರಿಗೆ ಇದು ಹೇಳಿ ಮಾಡಿಸಿದ ಯೋಜನೆಯಾಗಿದೆ. ಈ ಪ್ಲಾನ್‌ಗೆ ತಿಂಗಳಿಗೆ 888 ರೂಪಾಯಿ ಆಗಲಿದೆ.

ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ. ಇದರ ಅಡಿಯಲ್ಲಿ ಗ್ರಾಹಕರು 15 ಪ್ರೀಮಿಯಂ ಒಟಿಟಿ ಅಪ್ಲಿಕೇಷನ್‌ಗಳನ್ನು ಪಡೆಯಲಿದ್ದು, ಅನಿಯಮಿತ (Unlimited) ಡೇಟಾ ಸಹ ದೊರೆಯುತ್ತಿದೆ. ಇದರಿಂದಾಗಿ ಗ್ರಾಹಕರು ತಮ್ಮ ಅಚ್ಚುಮೆಚ್ಚಿನ ಅಪ್ಲಿಕೇಷನ್‌ಗಳಲ್ಲಿ ಯಾವಾಗ ಮತ್ತು ಎಲ್ಲಿ ಬೇಕಾದರೂ ಕಾರ್ಯಕ್ರಮಗಳ ವೀಕ್ಷಣೆ ಮಾಡಬಹುದಾಗಿದೆ.

ಇದನ್ನೂ ಓದಿ: Dr C N Manjunath: ಮತ್ತೆ ವೈದ್ಯ ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌

ಈ ಹೊಸ ಯೋಜನೆಯ ಅಡಿಯಲ್ಲಿ ಗ್ರಾಹಕರು 30 ಎಂಬಿಪಿಎಸ್ (Mbps) ವೇಗವನ್ನು ಪಡೆಯಲಿದ್ದು, ಇದರ ಜತೆಗೆ ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್, ಜಿಯೋಸಿನಿಮಾ ಪ್ರೀಮಿಯಂ ರೀತಿಯ ಹದಿನೈದಕ್ಕೂ ಹೆಚ್ಚು ಪ್ರಮುಖ ಒಟಿಟಿ ಅಪ್ಲಿಕೇಷನ್‌ಗಳು ದೊರೆಯುತ್ತವೆ. ಈ ಅಪ್ಲಿಕೇಷನ್‌ನ ಸಬ್‌ಸ್ಕ್ರಿಪ್ಷನ್ ದೊರೆಯುವುದು ಯೋಜನೆಯ ಜತೆಗೆ ಮಾತ್ರ. ಈ ಯೋಜನೆಯನ್ನು ಹೊಸ ಚಂದಾದಾರಷ್ಟೇ ಅಲ್ಲ, 10 ಅಥವಾ 30 ಎಂಬಿಪಿಎಸ್ ಯೋಜನೆಯನ್ನು ಈಗಾಗಲೇ ಬಳಸುತ್ತಿರುವ ಜಿಯೋದ ಈಗಿನ ಬಳಕೆದಾರರು ಸಹ ಪಡೆಯಬಹುದಾಗಿದೆ.

ಇನ್ನು ಈ 888 ರೂಪಾಯಿಯ ಪೋಸ್ಟ್‌ಪೇಯ್ಡ್ ಯೋಜನೆಯು ಪ್ರತಿಯೊಬ್ಬರಿಗೂ ದೊರೆಯಲಿದ್ದು, ಸದ್ಯಕ್ಕೆ ಪ್ರಿಪೇಯ್ಡ್ ಯೋಜನೆ ಹೊಂದಿರುವ ಗ್ರಾಹಕರು ಈ ಹೊಸ ಪೋಸ್ಟ್ ಪೇಯ್ಡ್ ಯೋಜನೆಗೆ ಅಪ್‌ಗ್ರೇಡ್ ಮಾಡಬಹುದು.

ಇದನ್ನೂ ಓದಿ: T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

ಇನ್ನೊಂದು ವಿಶೇಷತೆಯೆಂದರೆ ಇತ್ತೀಚೆಗೆ ಘೋಷಣೆಯಾದ ಜಿಯೋ ಐಪಿಎಲ್ ಧನ್ ಧನಾ ಧನ್ ಆಫರ್ ಕೂಡ ಈ ಯೋಜನೆಗೆ ಅನ್ವಯಿಸುತ್ತದೆ. ಜಿಯೋಫೈಬರ್ ಅಥವಾ ಏರ್ ಫೈಬರ್‌ನ ಅರ್ಹ ಗ್ರಾಹಕರು ತಮ್ಮ ಜಿಯೋ ಹೋಮ್ ಬ್ರಾಡ್ ಬ್ಯಾಂಡ್ ಸಂಪರ್ಕದಲ್ಲಿ 50 ದಿನ ರಿಯಾಯಿತಿ ಕ್ರೆಡಿಟ್ ವೋಚರ್ ಸಹ ಪಡೆಯಬಹುದು. ಈ ಪ್ಲಾನ್ ಮೇ 31, 2024ರ ವರೆಗೆ ಲಭ್ಯವಿರುತ್ತದೆ, ಜಿಯೋ ಡಿಡಿಡಿ (Jio Dhan Dhana Dhan) ಕೊಡುಗೆಯನ್ನು ವಿಶೇಷವಾಗಿ ಟಿ20 ಋತುವಿಗಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading
Advertisement
karnataka politics eknath shinde
ಪ್ರಮುಖ ಸುದ್ದಿ4 mins ago

Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾ ಸಿಎಂ ಏಕನಾಥ್‌ ಶಿಂಧೆ ಹೇಳಿದ್ದೇನು?

Vijayapura news Drowned in water
ವಿಜಯಪುರ6 mins ago

Vijayapura News: ನಾಪತ್ತೆಯಾಗಿದ್ದ ಮೂವರು ಮಕ್ಕಳು ಚರಂಡಿ ಶುದ್ಧೀಕರಣ ಕೇಂದ್ರಕ್ಕೆ ಬಿದ್ದು ಸಾವು

Road Accident between Bolero and bike Couple dies on the spot
ಕಲಬುರಗಿ14 mins ago

Road Accident: ಬುಲೇರೋ – ಬೈಕ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಆಳಂದದ ದಂಪತಿ ಸಾವು

Arvind Kejriwal
ದೇಶ24 mins ago

Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ರಿಲೀಫ್‌; ಸಿಎಂ ಸ್ಥಾನ ವಜಾಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ

Assault case Cubbon park
ಬೆಂಗಳೂರು31 mins ago

Cubbon park: ಕಬ್ಬನ್‌ ಪಾರ್ಕ್‌ನಲ್ಲಿ ಯುವಕನನ್ನು ಅಟ್ಟಾಡಿಸಿ ಚಪ್ಪಲಿಯಿಂದ ಹೊಡೆದ ಮಹಿಳೆಯರು!

A Manju and Naveen Gowda
ಕ್ರೈಂ43 mins ago

Prajwal Revanna Case: ಪೆನ್‌ ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ಮೇಲೆ ಶಾಸಕ ಮಂಜು ದೂರು

Viral Video
ದೇಶ57 mins ago

Viral Video: ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

POK Explainer in Kannada
ರಾಜಕೀಯ57 mins ago

POK Explainer in Kannada: ಪಾಕ್ ಆಕ್ರಮಿತ ಕಾಶ್ಮೀರ ಕುರಿತ 15 ಕುತೂಹಲಕಾರಿ ಸಂಗತಿಗಳು

Vijay Surya changes his name on mothers day
ಕಿರುತೆರೆ1 hour ago

Vijay Surya: ತಾಯಂದಿರ ದಿನ ತನ್ನ ಹೆಸರನ್ನೇ ಬದಲಿಸಿಕೊಂಡ ʻಅಗ್ನಿಸಾಕ್ಷಿ’ ನಟ! ಹೊಸ ಹೆಸರೇನು?

gold rate today 34
ಚಿನ್ನದ ದರ1 hour ago

Gold Rate Today: ಬಂಗಾರದ ಬೆಲೆಯಲ್ಲಿ ಇಳಿಕೆ; ರಾಜ್ಯ ಮಾರುಕಟ್ಟೆಯಲ್ಲಿ ಚಿನ್ನ- ಬೆಳ್ಳಿ ದರಗಳು ಹೀಗಿವೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ8 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ9 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ20 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ20 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ21 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌