Twitter Outage: ಟ್ವಿಟರ್​​​ನಲ್ಲಿ ತಾಂತ್ರಿಕ ದೋಷ, ಟ್ವೀಟ್​ ಮಾಡಲಾಗದೆ ಬಳಕೆದಾರರ ಪರದಾಟ; ಕಂಪನಿ ಹೇಳಿದ್ದೇನು? - Vistara News

ತಂತ್ರಜ್ಞಾನ

Twitter Outage: ಟ್ವಿಟರ್​​​ನಲ್ಲಿ ತಾಂತ್ರಿಕ ದೋಷ, ಟ್ವೀಟ್​ ಮಾಡಲಾಗದೆ ಬಳಕೆದಾರರ ಪರದಾಟ; ಕಂಪನಿ ಹೇಳಿದ್ದೇನು?

ಬುಧವಾರ ಹಲವು ಬಳಕೆದಾರರು ಟ್ವೀಟ್ ಮಾಡಲು ಯತ್ನಿಸಿದಾಗ ನೀವು ಟ್ವೀಟ್​ ಮಾಡಲು ನಿಮ್ಮ ದೈನಂದಿನ ಮಿತಿಯನ್ನು ಮೀರಿದ್ದರಿಂದ, ಮತ್ತೆ ಟ್ವೀಟ್​ ಮಾಡಲು ಸಾಧ್ಯವಿಲ್ಲ ಎಂದು ಸಂದೇಶ ಬಂತು. ಆಮೇಲೆ ಸಮಸ್ಯೆ ಶುರುವಾಯಿತು ಎಂದು ಹೇಳಲಾಗಿದೆ.

VISTARANEWS.COM


on

Twitter outrage allover world many users unable to tweet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಸಾಮಾಜಿಕ ಜಾಲತಾಣ ಟ್ವಿಟರ್​​ನಲ್ಲಿ ಬುಧವಾರ ಸಂಜೆಯಿಂದಲೂ ತಾಂತ್ರಿಕ ದೋಷ ಉಂಟಾಗಿದ್ದು (Twitter Outage), ಇಂದು ಮುಂಜಾನೆಯೂ ಸಮಸ್ಯೆ ಮುಂದುವರಿದಿದೆ. ಟ್ವೀಟ್ ಮಾಡಲು, ಬೇರೊಬ್ಬರ ಟ್ವಿಟರ್​ ಅಕೌಂಟ್​​ನ್ನು ಫಾಲೋ ಮಾಡಲು ಸಾಧ್ಯವಾಗುತ್ತಿಲ್ಲ, ಡೈರೆಕ್ಟ್​ ಮೆಸೇಜ್​​ ಕಳಿಸಲು ಆಗುತ್ತಿಲ್ಲ. ಒಟ್ಟಾರೆ ಟ್ವಿಟರ್​​ನಲ್ಲಿರುವ ಹಲವು ಫೀಚರ್​​​ಗಳು ಕೆಲಸ ಮಾಡುತ್ತಿಲ್ಲ ಎಂದು ಭಾರತ ಮತ್ತು ಇತರ ದೇಶಗಳ ಹಲವು ಬಳಕೆದಾರರು ದೂರುತ್ತಿದ್ದಾರೆ. ಈ ಮಧ್ಯೆ ಟ್ವಿಟರ್​ ಕಂಪನಿ ಟ್ವೀಟ್​ ಮಾಡಿದ್ದು, ‘ಹಲವು ಬಳಕೆದಾರರಿಗೆ ಟ್ವಿಟರ್​ ಸಮಸ್ಯೆ ಆಗಿರಬಹುದು. ನೀವು ನಿರೀಕ್ಷಿಸಿದಂತೆ ಟ್ವಿಟರ್​ ಕೆಲಸ ಮಾಡದೆ ಇರಬಹುದು. ಸಮಸ್ಯೆ ಆಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದೆ.

ಬುಧವಾರ ಹಲವು ಬಳಕೆದಾರರು ಟ್ವೀಟ್ ಮಾಡಲು ಯತ್ನಿಸಿದಾಗ ಅವರಿಗೊಂದು ಮೆಸೇಜ್​ ಬಂತು ‘ನೀವು ಟ್ವೀಟ್​ ಮಾಡಲು ನಿಮ್ಮ ದೈನಂದಿನ ಮಿತಿಯನ್ನು ಮೀರಿದ್ದರಿಂದ, ಮತ್ತೆ ಟ್ವೀಟ್​ ಮಾಡಲು ಸಾಧ್ಯವಿಲ್ಲ’ ಎಂಬುದು ಆ ಸಂದೇಶ ಆಗಿತ್ತು. ಅದಾದ ಬಳಿಕ ಟ್ವಿಟರ್​​ನಲ್ಲಿ ಉಳಿದ ಆಯ್ಕೆಗಳೂ ಕೂಡ ಕೆಲಸ ಮಾಡಲಿಲ್ಲ ಎಂದು ಹಲವರು ಹೇಳಿದ್ದಾರೆ. ಯುಎಸ್​​ನಲ್ಲಿ 9 ಸಾವಿರ ಬಳಕೆದಾರರಿಗೆ ಟ್ವಿಟರ್​ ಕೈಕೊಟ್ಟಿತ್ತು ಎಂದು Downdetector.com ವರದಿ ಮಾಡಿದೆ. ಬುಧವಾರ ಸಂಜೆ 5 ಗಂಟೆ ಹೊತ್ತಿಗೆ 9000 ಜನರಿಗೆ ಟ್ವಿಟರ್​ ಸಮಸ್ಯೆಯಾಯಿತು, ಆ ಸಂಖ್ಯೆ ಸಂಜೆ 6 ಗಂಟೆ ಹೊತ್ತಿಗೆ ಸುಮಾರು 2500ಕ್ಕೆ ಇಳಿಯಿತು ಎಂದೂ ವೆಬ್​ಸೈಟ್​ನಲ್ಲಿ ಉಲ್ಲೇಖವಾಗಿದೆ. ಭಾರತದಲ್ಲೂ ಕೂಡ ಸಾವಿರಾರು ಟ್ವಿಟರ್​ ಬಳಕೆದಾರರು ಸಮಸ್ಯೆ ಎದುರಿಸಿದ್ದಾಗಿ ವರದಿಯಾಗಿದೆ.

ಇದನ್ನೂ ಓದಿ: RCB Twitter Account: ಹ್ಯಾಕ್​ ಆಗಿದ್ದ ಆರ್​ಸಿಬಿ ಟ್ವಿಟರ್​ ಖಾತೆ ರಿಸ್ಟೋರ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜ್ಞಾನ

Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

ಇಲಿಗಳ ರಕ್ತದಲ್ಲಿ ವಯಸ್ಸನ್ನು ನಿಯಂತ್ರಿಸುವ ಅಂಶವನ್ನು ಚೀನಾದ ವಿಜ್ಞಾನಿಗಳು (Chinese Scientists) ಪತ್ತೆ ಮಾಡಿದ್ದು, ಇದು ಮಾನವನ ವಯಸ್ಸನ್ನು ಸುಮಾರು 120-130 ವರ್ಷಗಳವರೆಗೆ ವಿಸ್ತರಿಸಬಹುದು ಎಂದು ಹೇಳಿದ್ದಾರೆ. ಈ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Chinese Scientists
Koo

ಚೀನಾದ ವಿಜ್ಞಾನಿಗಳು (Chinese Scientists) ಇಲಿಗಳ (mouse) ರಕ್ತದಲ್ಲಿ ವಯಸ್ಸನ್ನು ನಿಯಂತ್ರಿಸುವ (anti-ageing) ಅಂಶವನ್ನು ಪತ್ತೆ ಮಾಡಿರುವುದಾಗಿ ಹೇಳಿದ್ದು, ಅವರ ಸಂಶೋಧನೆಯ ಪ್ರಕಾರ ಇಲಿಯು 1,266 ದಿನಗಳವರೆಗೆ ಜೀವಿಸುತ್ತದೆ. ಇಲಿಗಳಲ್ಲಿರುವ ವಯಸ್ಸನ್ನು ನಿಯಂತ್ರಿಸುವ ಗುಣವನ್ನು ಮಾನವನ ದೇಹಕ್ಕೆ ಸೇರಿಸಿದರೆ ಮಾನವನ ವಯಸ್ಸನ್ನು ಸುಮಾರು 120-130 ವರ್ಷಗಳವರೆಗೆ ವಿಸ್ತರಿಸಬಹುದು ಎನ್ನುತ್ತಾರೆ ಅವರು.

ನೇಚರ್ ಏಜಿಂಗ್ ಜರ್ನಲ್‌ನಲ್ಲಿ ಪ್ರಕಟವಾದ ಪೀರ್-ರಿವ್ಯೂಡ್ ಅಧ್ಯಯನದ ಪ್ರಕಾರ, 840 ದಿನಗಳ ಸರಾಸರಿ ಜೀವಿತಾವಧಿ ಹೊಂದಿರುವ 20 ತಿಂಗಳ ವಯಸ್ಸಿನ ಗಂಡು ಇಲಿಗಳು ವಯಸ್ಸನ್ನು ನಿಯಂತ್ರಿಸುವ ರಕ್ತದ ಅಂಶದ ಸಾಪ್ತಾಹಿಕ ಚುಚ್ಚುಮದ್ದನ್ನು ಸ್ವೀಕರಿಸಿದವು. 1,031 ದಿನಗಳ ಸರಾಸರಿ ಶೇ. 22.7ರಷ್ಟು ಏರಿಕೆಯಾಗಿದೆ ಎಂದು ಸಂಶೋಧಕರು ವರದಿ ಮಾಡಿದ್ದಾರೆ.

ಅಧ್ಯಯನದ ಸಹ-ಮುಖ್ಯಸ್ಥ ಜಾಂಗ್ ಚೆನ್ಯು ಪ್ರಕಾರ, ಚುಚ್ಚುಮದ್ದುಗಳು ಹಳೆಯ ಇಲಿಗಳಲ್ಲಿ ವಯಸ್ಸಿಗೆ ಸಂಬಂಧಿಸಿದ ಕ್ರಿಯಾತ್ಮಕ ಕ್ಷೀಣಿಸುವಿಕೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತವೆ ಎಂದು ತಿಳಿಸಿದ್ದಾರೆ.

ಚಿಕಿತ್ಸೆ ಅಭಿವೃದ್ಧಿಗೆ ಸಹಾಯಕ

ಈ ಚಿಕಿತ್ಸೆಯನ್ನು ಎಂದಾದರೂ ಪ್ರಾರಂಭಿಸಿದರೆ ಅದನ್ನು ಔಷಧಗಳ ಮೂಲಕ ನೀಡಲಾಗುತ್ತದೆ ಮತ್ತು ನೇರ ಪ್ಲಾಸ್ಮಾ ವಿನಿಮಯದ ಮೂಲಕ ಅಲ್ಲ ಎಂದವರು ಸ್ಪಷ್ಟಪಡಿಸಿದರು. ಇದು ಸುಲಭವಾದ ಉದ್ದೇಶಿತ ಚಿಕಿತ್ಸೆಗಳ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದರು.

ಚೀನೀ ತಂಡದ ಪ್ರಕಾರ, ಈ ಅಧ್ಯಯನವು ಏಳು ವರ್ಷಗಳ ಕಾಲ ನಡೆದಿದೆ. ನೂರಾರು ಇಲಿಗಳಿಂದ ಡೇಟಾವನ್ನು ಸಂಗ್ರಹಿಸಲಾಗಿದೆ. ಸಂಶೋಧಕರ ಪ್ರಕಾರ, ಎಲ್ಲಾ ಜೀವಕೋಶದ ಪ್ರಕಾರಗಳಿಂದ ಸಕ್ರಿಯವಾಗಿ ಬಿಡುಗಡೆಯಾಗುವ ಮತ್ತು ರಕ್ತ ಸೇರಿದಂತೆ ಅನೇಕ ದೈಹಿಕ ದ್ರವಗಳಲ್ಲಿ ಕಂಡುಬರುವ ಸಣ್ಣ ಬಾಹ್ಯಕೋಶೀಯ ಕೋಶಕಗಳು ( (sEV), ವಯಸ್ಸಾದ ಇಲಿಗಳಲ್ಲಿನ ವಯಸ್ಸಿಗೆ ಸಂಬಂಧಿಸಿದ ಕ್ಷೀಣಗೊಳ್ಳುವ ಬದಲಾವಣೆಗಳನ್ನು ಸರಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಸಣ್ಣ ಬಾಹ್ಯಕೋಶೀಯ ಕೋಶಕಗಳು ಜೀವಕೋಶಗಳಾದ್ಯಂತ ನ್ಯೂಕ್ಲಿಯಿಕ್ ಆಮ್ಲಗಳು ಮತ್ತು ಪ್ರೋಟೀನ್‌ಗಳನ್ನು ಸಾಗಿಸುತ್ತವೆ. ಇದು ಮಾಹಿತಿ ಪ್ರಸರಣವನ್ನು ಸಕ್ರಿಯಗೊಳ್ಳುತ್ತದೆ. ಈ ಪ್ರಕ್ರಿಯೆಯನ್ನು ಗುರುತಿಸುವ ಮತ್ತು ಬಳಸುವ ಮೂಲಕ ಪ್ರಾಣಿಗಳ ಮೇಲಿನ ಹಿಂದಿನ ಅಧ್ಯಯನಗಳಿಗಿಂತ ಹೆಚ್ಚಿನ ಬದುಕುಳಿಯುವ ಅವಧಿಗಳನ್ನು ವೀಕ್ಷಿಸಲು ಸಾಧ್ಯವಾಯಿತು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ಆಯುಷ್ಯದಲ್ಲಿ ಶೇ. 22.7ರಷ್ಟು ಹೆಚ್ಚಳ

ಆಯುಷ್ಯದಲ್ಲಿ ಶೇ. 22.7ರಷ್ಟು ಹೆಚ್ಚಳವಾದರೆ ವಿಶ್ವ ದಾಖಲೆಯಾಗುವುದು ಎಂದು ಹೇಳಿರುವ ಚೆನ್, ಸಂಶೋಧನೆಯು ಕೇವಲ ಪ್ರಾರಂಭವಾಗಿದೆ. ಆವಿಷ್ಕಾರಗಳನ್ನು ಪ್ರಾಯೋಗಿಕವಾಗಿ ಮೌಲ್ಯಮಾಪನ ಮಾಡುವ ಮೊದಲು ಮತ್ತು ಔಷಧವಾಗಿ ಅಭಿವೃದ್ಧಿಪಡಿಸುವ ಮೊದಲು ಇನ್ನೂ ಅನೇಕ ವೈಜ್ಞಾನಿಕ ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ. ಯಾವುದೇ ನಿರೀಕ್ಷಿತ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸುವ ಮೊದಲು ಮಾನವರಿಗೆ ಹೆಚ್ಚು ಹೋಲುವ ದೊಡ್ಡ ಸಸ್ತನಿಗಳಲ್ಲಿ ಪ್ರಯೋಗಗಳನ್ನು ನಡೆಸಬೇಕು ಎಂದು ಹೇಳಿದರು

Continue Reading

ತಂತ್ರಜ್ಞಾನ

Self-Healing Roads: ರಸ್ತೆಗಳಲ್ಲಿ ಹೊಂಡಗಳೇ ಇರಲ್ಲ! ಬರಲಿವೆ ಸೆಲ್ಫ್‌ ಹೀಲಿಂಗ್‌ ರೋಡ್‌ಗಳು!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಸ್ತೆಗಳನ್ನು ಸರಿಪಡಿಸಲು ಮತ್ತು ಗುಂಡಿಮುಚ್ಚಲು ಗಳಿಂದ ರಸ್ತೆಗೆ ಮುಕ್ತಿ ಕೊಡಲು ಹೊಸ ತಂತ್ರಜ್ಞಾನವನ್ನು (Self-Healing Roads) ಅಳವಡಿಸಿಕೊಳ್ಳುವ ಕೆಲಸವನ್ನು ಪ್ರಾರಂಭಿಸಿದೆ. ಇದು ಯಶಸ್ವಿಯಾದರೆ ಭಾರತದ ರಸ್ತೆ ಪ್ರಯಾಣದಲ್ಲಿ ಕ್ರಾಂತಿ ಉಂಟಾಗಲಿದೆ.

VISTARANEWS.COM


on

By

Self-Healing Roads
Koo

ಭಾರತದಲ್ಲಿ (india) ಕೆಲವು ರಸ್ತೆ (road) ಪ್ರವಾಸ ಸಾಮಾನ್ಯವಾಗಿ ಪ್ರಯಾಸಕರ ಎಂಬುದು ಎಲ್ಲರ ಅಭಿಪ್ರಾಯ. ಇದಕ್ಕೆ ಮುಖ್ಯ ಕಾರಣ ರಸ್ತೆಯಲ್ಲಿರುವ ಹೊಂಡ ಗುಂಡಿಗಳು, ಉಬ್ಬು ತಗ್ಗುಗಳು. ಭಾರತದ ರಸ್ತೆಗಳಲ್ಲಿ ಎದುರಾಗುವ ಸಮಸ್ಯೆಗಳ ಕುರಿತು ನಿತ್ಯವೂ ಸಾಮಾಜಿಕ ಜಾಲತಾಣದಲ್ಲಿ, (social media) ಸುದ್ದಿ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಲೇ ಇರುತ್ತದೆ. ಅಲ್ಲದೇ ಅವುಗಳ ಕುರಿತು ಸಾವಿರಾರು ಜೋಕ್‌ಗಳು ಹರಿದಾಡುತ್ತಿರುತ್ತದೆ. ಆದರೆ ಇದಕ್ಕೆ ಈಗ ಪರಿಹಾರ (SSelf-Healing Roads) ಸಿಕ್ಕಿದೆ.


ಈವರೆಗೆ ರಸ್ತೆಯ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಈ ನಿಟ್ಟಿನಲ್ಲಿ ಒಂದು ಭರವಸೆ ಹುಟ್ಟಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಸ್ತೆಗಳನ್ನು ಸರಿಪಡಿಸಲು ಮತ್ತು ಗುಂಡಿಮುಚ್ಚಲು ಗಳಿಂದ ರಸ್ತೆಗೆ ಮುಕ್ತಿ ಕೊಡಲು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಕೆಲಸವನ್ನು ಪ್ರಾರಂಭಿಸಿದೆ. ಇದು ಯಶಸ್ವಿಯಾದರೆ ಭಾರತದ ರಸ್ತೆ ಪ್ರಯಾಣದಲ್ಲಿ ಕ್ರಾಂತಿ ಉಂಟಾಗಲಿದೆ.

ರಸ್ತೆಗಳ ಸ್ವಯಂ ರಕ್ಷಣೆ

ದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ರಸ್ತೆ ಜಾಲದ ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶದಲ್ಲಿ ನಿರಂತರವಾದ ಗುಂಡಿಗಳ ಸಮಸ್ಯೆಯನ್ನು ಪರಿಹರಿಸಲು ಸ್ವಯಂ-ಗುಣಪಡಿಸುವ ಡಾಂಬರು ಅಳವಡಿಸಿಕೊಳ್ಳಲು ಮುಂದಾಗಿದೆ.

ಯಾವ ರೀತಿ?

ರಸ್ತೆಗಳ ಬಾಳಿಕೆಯನ್ನು ಸುಧಾರಿಸಲು ಮತ್ತು ಗುಂಡಿಗಳ ಸಮಸ್ಯೆಯನ್ನು ಪರಿಹರಿಸಲು ಅತ್ಯಧುನಿಕ ತಂತ್ರಜ್ಞಾನ ವಿಧಾನಗಳನ್ನು ಪರಿಗಣಿಸುತ್ತಿದ್ದೇವೆ ಎಂಬುದಾಗಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ವೆಚ್ಚ ಪ್ರಯೋಜನ ವಿಶ್ಲೇಷಣೆ ನಡೆಸಿದ ಬಳಿಕವೇ ಈ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುವುದು. ಇದು ರಸ್ತೆಗಳ ಬಾಳಿಕೆ ಅವಧಿಯನ್ನು ಹೆಚ್ಚಿಸುತ್ತದೆ ಮತ್ತು ರಸ್ತೆ ನಿರ್ವಹಣೆಯ ಅಗತ್ಯವನ್ನು ಪ್ರಾಯೋಗಿಕವಾಗಿ ನಿವಾರಿಸುತ್ತದೆ. ಸಂಚಾರ ಅಡಚಣೆಯನ್ನು ಕಡಿಮೆ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಹೇಗೆ?

ರಸ್ತೆಗಳ ಗುಂಡಿ ನಿರ್ವಹಣೆಗೆ ಹಾಕುವ ಸ್ವಯಂ ರಕ್ಷಣೆ ಕಾರ್ಯವನ್ನು ಆಸ್ಫಾಲ್ಟ್ ಮಾಡುತ್ತದೆ. ಇದು ಡಾಂಬರು ರಸ್ತೆಯನ್ನು ರೂಪಿಸುವ ಪ್ರಮುಖ ಸಂಯುಕ್ತಗಳಲ್ಲಿ ಒಂದಾಗಿದೆ. ಇದು ನೈಸರ್ಗಿಕವಾಗಿ ಕಾರ್ಯ ನಿರ್ವಹಿಸುತ್ತದೆ. ಇದನ್ನು ಸ್ಮಾರ್ಟ್ ಆಸ್ಫಾಲ್ಟ್ ಎಂದೂ ಕರೆಯಲಾಗುತ್ತದೆ ಮತ್ತು ಇದು ರಸ್ತೆ ದುರಸ್ತಿ ಜಗತ್ತಿನಲ್ಲಿ ಹೆಚ್ಚು ಖ್ಯಾತಿ ಪಡೆಯುತ್ತಿದೆ.

ಯಾವ ರೀತಿ?

ಸ್ಮಾರ್ಟ್ ಆಸ್ಫಾಲ್ಟ್ ಉಕ್ಕಿನ ಫೈಬರ್ ಗಳು ಮತ್ತು ಎಪಾಕ್ಸಿ ಕ್ಯಾಪ್ಸುಲ್ ಗಳಿಂದ ತುಂಬಿದೆ. ಇದು ಸಣ್ಣ ಬಿರುಕುಗಳನ್ನು ಸರಿಪಡಿಸುತ್ತದೆ ಮತ್ತು ನೀರಿನ ಒಳನುಸುಳುವಿಕೆಯನ್ನು ತಡೆಯುತ್ತದೆ. ಇಂಡಕ್ಷನ್ ಯಂತ್ರವನ್ನು ಬಳಸಿಕೊಂಡು ರಸ್ತೆಯಲ್ಲಿ ಅಳವಡಿಸುವ ಉಕ್ಕಿಗೆ ಶಾಖವನ್ನು ಸೆಳೆಯುವಂತೆ ಮಾಡಿ ಇದನ್ನು ಮಾಡಲಾಗುತ್ತದೆ. ಇದರಿಂದ ಆಸ್ಫಾಲ್ಟ್ ನೊಂದಿಗೆ ಮಾರ್ಟರ್ ಕರಗಲು ಮತ್ತು ಸ್ವತಃ ದುರಸ್ತಿ ಮಾಡಲು ಪ್ರಾರಂಭಿಸುತ್ತದೆ.

ಯಾರು ಕಂಡು ಹಿಡಿದಿರುವುದು?

ಈ ತಂತ್ರಜ್ಞಾನವನ್ನು ನೆದರ್‌ಲ್ಯಾಂಡ್‌ನ ಡೆಲ್ಫ್ಟ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ ಸಿವಿಲ್ ಎಂಜಿನಿಯರಿಂಗ್ ಪ್ರಾಧ್ಯಾಪಕ ಎರಿಕ್ ಶ್ಲಾಂಗೆನ್ ಅಭಿವೃದ್ಧಿಪಡಿಸಿದ್ದಾರೆ. ಈಗಾಗಲೇ ನೆದರ್ಲ್ಯಾಂಡ್ ನ ಸಂಶೋಧಕರು ಕೆಲವು ಸ್ವಯಂ ರಕ್ಷಣೆ ಹೊಂದಿರುವ ರಸ್ತೆಗಳನ್ನು ನಿರ್ಮಿಸಿದ್ದಾರೆ. ಇದು ಬಾಹ್ಯ ಸಹಾಯವಿಲ್ಲದೆ ಬಿರುಕುಗಳನ್ನು ಮುಚ್ಚುವ ಸಾಮರ್ಥ್ಯವನ್ನು ಹೊಂದಿದೆ. ಈ ರಸ್ತೆಗಳನ್ನು ತಯಾರಿಸುವುದು ಹೆಚ್ಚು ದುಬಾರಿಯಾಗಿದ್ದರೂ ನಿರ್ವಹಣಾ ವೆಚ್ಚವನ್ನು ತೆಗೆದುಹಾಕುವುದರಿಂದ ದೀರ್ಘಾವಧಿಯಲ್ಲಿ ಅಗ್ಗವಾಗುತ್ತದೆ ಎನ್ನುತ್ತಾರೆ ಸಂಶೋಧಕರು.

ಈ ತಂತ್ರಜ್ಞಾನ ಬಳಕೆಯಿಂದ ರಸ್ತೆಗಳು ಸುಮಾರು 80 ವರ್ಷಗಳವರೆಗೆ ದೀರ್ಘಕಾಲ ಬಾಳಿಕೆ ಬರುವಂತೆ ಮಾಡುತ್ತದೆ. ಇದು ರಸ್ತೆಗಳನ್ನು ಸುಧಾರಿಸುವುದರ ಜೊತೆಗೆ ಇತರ ಪ್ರಯೋಜನಗಳನ್ನು ಹೊಂದಿದೆ ಎಂದು ಶ್ಲಾಂಗೆನ್ ಹೇಳುತ್ತಾರೆ. ಈ ರಸ್ತೆಗಳಲ್ಲಿ ಆಸ್ಫಾಲ್ಟ್‌ನಲ್ಲಿ ಸ್ಟೀಲ್ ಫೈಬರ್‌ಗಳನ್ನು ಹಾಕುವುದರಿಂದ ರಸ್ತೆಯಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಲು ಬಳಸಬಹುದು. ಮುಂದೆ ಇದು ಟ್ರಾಫಿಕ್ ದೀಪಗಳನ್ನು ಉರಿಸಲು ಪ್ರಯೋಗಗಳನ್ನು ಮಾಡಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.


ಭಾರತದ ರಸ್ತೆ ಸಮಸ್ಯೆಗೆ ಪರಿಹಾರ

ಹೊಂಡ ಗುಂಡಿಗಳೊಂದಿಗೆ ತುಂಬಿರುವ ಭಾರತದಲ್ಲಿ ಇದನ್ನು ಅಳವಡಿಸಿದರೆ ಸಾಕಷ್ಟು ಲಾಭವಿದೆ. ದೇಶದಾದ್ಯಂತ ಹುಂಡ ಗುಂಡಿಗಳಿಂದ ಕೂಡಿದ ರಸ್ತೆಗಳು ಹಲವಾರು ರಸ್ತೆ ಅಪಘಾತಗಳಿಗೆ ಕಾರಣವಾಗಿವೆ. 2022 ರಲ್ಲಿ ಸರ್ಕಾರಿ ಅಂಕಿಅಂಶಗಳು ರಸ್ತೆಗುಂಡಿಗಳಿಂದಾಗಿ 4,446 ಅಪಘಾತಗಳು ಸಂಭವಿಸಿವೆ, ಇದು 1,856 ಜನರ ಸಾವಿಗೆ ಕಾರಣವಾಯಿತು ಮತ್ತು 3,734 ಜನರಿಗೆ ಗಾಯಗಳಾಗಿವೆ.

2021ರಲ್ಲಿ ಗುಂಡಿಗಳಿಂದಾಗಿ 3,625 ಅಪಘಾತಗಳು ಸಂಭವಿಸಿ, 1,483 ಜನರು ಸಾವನ್ನಪ್ಪಿದರು ಮತ್ತು 3,103 ಜನರು ಗಾಯಗೊಂಡಿದ್ದರು.

ಇದನ್ನೂ ಓದಿ:Vande Bharat Metro: ಮೊದಲ ವಂದೇ ಭಾರತ್‌ ಮೆಟ್ರೋ ಸಂಚಾರಕ್ಕೆ ಸಿದ್ಧ; ಇಲ್ಲಿದೆ ವಿಡಿಯೊ

ನೆದರ್‌ಲ್ಯಾಂಡ್‌ನಲ್ಲಿ ಯಶಸ್ವಿ

ನೆದರ್‌ಲ್ಯಾಂಡ್ಸ್‌ನ 12 ರಸ್ತೆಗಳಿಗೆ ಸ್ವಯಂ ರಕ್ಷಕ ಆಸ್ಫಾಲ್ಟ್ ಅನ್ನು ಅಳವಡಿಸಿ ಪರೀಕ್ಷಿಸಲಾಗಿದೆ. ಇವುಗಳಲ್ಲಿ ಒಂದು ಕಾರ್ಯನಿರ್ವಹಿಸುತ್ತಿದ್ದು, 2010 ರಿಂದ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಈ ತಂತ್ರಜ್ಞಾನವನ್ನು ಯುನೈಟೆಡ್ ಕಿಂಗ್‌ಡಮ್ ಪರಿಶೀಲನೆ ನಡೆಸುತ್ತಿದೆ. ಭಾರತದಲ್ಲಿ ಇದನ್ನು ಅಳವಡಿಸಿಕೊಂಡರೆ ವಿಶ್ವದಲ್ಲೇ ನಾವು ರಸ್ತೆ ಸ್ವಯಂ ರಕ್ಷಣಾ ತಂತ್ರಜ್ಞಾನ ಅಳವಡಿಸಿಕೊಂಡವರಲ್ಲಿ ಎರಡನೇಯವರಾಗುತ್ತೇವೆ.

Continue Reading

ತಂತ್ರಜ್ಞಾನ

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Bomber Drone: ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

VISTARANEWS.COM


on

bomber drone
Koo

ಬೆಂಗಳೂರು: ಭಾರತದ ಮೊತ್ತ ಮೊದಲ ಸ್ವದೇಶಿ ತಂತ್ರಜ್ಞಾನದ ಬಾಂಬರ್‌ ಡ್ರೋನ್‌ (Indigenous Bomber Drone) ಬೆಂಗಳೂರಿನಲ್ಲಿ ಅನಾವರಣಗೊಂಡಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಅನಾವರಣಗೊಂಡಿರುವ ಈ ಬಾಂಬರ್‌ ಡ್ರೋನ್‌ ಅನ್ನು ʼಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಟೆಕ್ನಾಲಜೀಸ್ʼ ಸಂಸ್ಥೆ ನಿರ್ಮಾಣ ಮಾಡಿದೆ. ಇದಕ್ಕೆ FWD-200B UAV ಎಂದು ಹೆಸರಿಡಲಾಗಿದೆ.

ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

FWD-200B UAV ಎಂದು ತಾಮತ್ರಿಕವಾಗಿ ಕರೆಯಲಾಗುವ ಈ ಡ್ರೋನ್ ವಿಮಾನವನ್ನು ಇಂದು ಎಲೆಕ್ಟ್ರಾನಿಕ ಸಿಟಿಯಲ್ಲಿ ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಸಂಸ್ಥೆ ಅನಾವರಣ ಮಾಡಿದೆ. ರಕ್ಷಣಾ ಕ್ಷೇತ್ರದಲ್ಲಿ ವಿದೇಶಗಳ ಮೇಲಿನ ಅವಲಂಬನೆಗೆ ಬ್ರೇಕ್ ಹಾಕಲು ಸ್ವದೇಶಿ ಡ್ರೋನ್ ವಿಮಾನ‌ ತಯಾರಿಸಲಾಗಿದೆ. ಇದರೊಂದಿಗೆ ಸುಧಾರಿತ ಮಾನವರಹಿತ ಯುದ್ಧ ಡ್ರೋನ್ ಹೊಂದಿದ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಲಿದೆ. ಇದರ ಆರಂಬಿಕ ಟೆಸ್ಟ್‌ಗಳು ಆಗಿದ್ದು, ಅಡ್ವಾನ್ಸ್‌ಡ್‌ ಪರೀಕ್ಷೆಗಳು ಇನ್ನೆರಡು ತಿಂಗಳಲ್ಲಿ ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಇದರ ಉದ್ಘಾಟನೆ ಮಾಡಿಸುವ ಚಿಂತನೆಯನ್ನು ಸುಹಾಸ್ ಹಂಚಿಕೊಂಡಿದ್ದಾರೆ.

bomber drone flying vedge ceo suhas

ಭಾರತದಲ್ಲಿ ಸದ್ಯ ದಾಳಿ ಡ್ರೋನ್‌ಗಳು ಲಭ್ಯವಿಲ್ಲ. ಇರಾನ್‌ ಹಾಗೂ ರಷ್ಯಾಗಳು ಇದನ್ನು ಈಗಾಗಲೇ ಬಳಸುತ್ತಿವೆ. ಇಸ್ರೇಲ್‌ ಮೇಲೆ ದಾಳಿ ಮಾಡಲು ಕೂಡ ಪ್ಯಾಲೆಸ್ತೀನಿನ ಬಂಡುಕೋರರು ಸಣ್ಣ ಗಾತ್ರದ ಇಂಥದೇ ಡ್ರೋನ್‌ಗಳನ್ನು ಬಳಸಿದ್ದರು. ಈ ಬಗೆಯ ಡ್ರೋನ್‌ಗಳು ಆಧುನಿಕ ಯುದ್ಧದ ವೈಖರಿಯನ್ನೇ ಬದಲಿಸಲಿವೆ. ಕ್ಷಿಪಣಿಗಳು ದುಬಾರಿಯಾಗಿದ್ದು, ಅದಕ್ಕಿಂತ ಡ್ರೋನ್‌ಗಳು ಅಗ್ಗವಾಗಿವೆ. FWD-200B UAV ಸುಮಾರು 200 ಕಿಲೋದಷ್ಟು ಪೇಲೋಡ್‌ ಅನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.

ಭಾರತ ಈಗ ಅಮೆರಿಕದ ಪ್ರಿಡೇಟರ್ ಡ್ರೋನ್‌ಗಳನ್ನು (Predator Drone) ತರಿಸುತ್ತಿದೆ. ಆದರೆ ಇದು 250 ಕೋಟಿಗಳಷ್ಟು ದುಬಾರಿಯಾಗಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ದೇಶೀಯವಾಗಿ ತಯಾರಾದ FWD-200B ಭಾರತದಲ್ಲಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಕೇವಲ 25ಯಿಂದ 50 ಕೋಟಿ ವೆಚ್ಚದಲ್ಲಿ ತಯಾರಾಗಲಿದೆ. ಭಾರತವನ್ನು ಜಾಗತಿಕ ಡ್ರೋನ್ ಉತ್ಪಾದನೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿಸುವ ಗುರಿ ತಮ್ಮದು. ಇನ್ನು ಎರಡು ತಿಂಗಳಲ್ಲಿ ಇದು ಭಾರತದ ಮಿಲಿಟರಿಯನ್ನು ಸೇರುವ ಆಶಯ ಇದೆ. ಈ ಮೂಲಕ ನಮ್ಮ ರಾಷ್ಟ್ರದ ವಾಯು ರಕ್ಷಣಾ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಸಂಸ್ಥೆ ಮುಂದಾಗಿದೆ ಎಂದು ಸುಹಾಸ್‌ ತಿಳಿಸಿದ್ದಾರೆ.

ಇದನ್ನೂ ಓದಿ: Tejas Aircraft: ಸ್ವದೇಶಿ ʼತೇಜಸ್ʼ ವಿಮಾನದಲ್ಲಿ ಮೋದಿ ಹಾರಾಟ: ಪಾಕಿಸ್ತಾನ, ಚೀನಾಗೆ ನಡುಕ!

Continue Reading

ತಂತ್ರಜ್ಞಾನ

ಸ್ಯಾಮ್‌ಸಂಗ್‌ನ ‘ಫ್ಯಾಬ್ ಗ್ರಾಬ್ ಫೆಸ್ಟ್’: ಸ್ಮಾರ್ಟ್‌ಫೋನ್‌, ಟಿವಿ, ಲ್ಯಾಪ್‌ಟಾಪ್‌, ಡಿಜಿಟಲ್ ಉಪಕರಣಗಳ ಮೇಲೆ ಅದ್ಭುತ ಆಫರ್

Samsung: ಸ್ಯಾಮ್‌ಸಂಗ್ ತನ್ನ ಅತಿದೊಡ್ಡ ಬೇಸಿಗೆ ಮಾರಾಟ ಮೇಳವಾದ ‘ಫ್ಯಾಬ್ ಗ್ರಾಬ್ ಫೆಸ್ಟ್’ (Fab Grab Fest) ಅನ್ನು ಘೋಷಿಸಿದೆ. ಈ ಫೆಸ್ಟ್ ಮೂಲಕ ಕಂಪನಿಯು Samsung.com, ಸ್ಯಾಮ್‌ಸಂಗ್ ಶಾಪ್ ಆ್ಯಪ್ ಹಾಗೂ ಸ್ಯಾಮ್‌ಸಂಗ್ ಎಕ್ಸ್‌ಕ್ಲೂಸಿವ್ ಮಳಿಗೆಗಳಲ್ಲಿ ವ್ಯಾಪಕ ಶ್ರೇಣಿಯ ಉತ್ಪನ್ನಗಳ ಮೇಲೆ ಅದ್ಭುತ ಆಫರ್‌ಗಳು ಮತ್ತು ಅತ್ಯಾಕರ್ಷಕ ಕ್ಯಾಶ್‌ಬ್ಯಾಕ್‌ಗಳನ್ನು ನೀಡುತ್ತದೆ.

VISTARANEWS.COM


on

Samsung
Koo

ಬೆಂಗಳೂರು: ಭಾರತದ ಅತಿ ದೊಡ್ಡ ಗ್ರಾಹಕ ಸ್ನೇಹಿ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ (Samsung) ತನ್ನ ಅತಿದೊಡ್ಡ ಬೇಸಿಗೆ ಮಾರಾಟ ಮೇಳವಾದ ‘ಫ್ಯಾಬ್ ಗ್ರಾಬ್ ಫೆಸ್ಟ್’ (Fab Grab Fest) ಅನ್ನು ಘೋಷಿಸಿದೆ. ಈ ಫೆಸ್ಟ್ ಮೂಲಕ ಕಂಪನಿಯು Samsung.com, ಸ್ಯಾಮ್‌ಸಂಗ್ ಶಾಪ್ ಆ್ಯಪ್ ಹಾಗೂ ಸ್ಯಾಮ್‌ಸಂಗ್ ಎಕ್ಸ್‌ಕ್ಲೂಸಿವ್ ಮಳಿಗೆಗಳಲ್ಲಿ ವ್ಯಾಪಕ ಶ್ರೇಣಿಯ ಉತ್ಪನ್ನಗಳ ಮೇಲೆ ಅದ್ಭುತ ಆಫರ್‌ಗಳು ಮತ್ತು ಅತ್ಯಾಕರ್ಷಕ ಕ್ಯಾಶ್‌ಬ್ಯಾಕ್‌ಗಳನ್ನು ನೀಡುತ್ತದೆ.

‘ಫ್ಯಾಬ್ ಗ್ರಾಬ್ ಫೆಸ್ಟ್’ ಸಮಯದಲ್ಲಿ, ಗ್ರಾಹಕರು ಗ್ಯಾಲಕ್ಸಿ ಎಸ್ ಸರಣಿ, ಗ್ಯಾಲಕ್ಸಿ ಝಡ್ ಸರಣಿ ಮತ್ತು ಗ್ಯಾಲಕ್ಸಿ ಎ ಸರಣಿಯ ಸ್ಮಾರ್ಟ್‌ಫೋನ್‌ಗಳ ಆಯ್ದ ಮಾದರಿಗಳ ಮೇಲೆ 64%ವರೆಗೆ ರಿಯಾಯಿತಿ ಪಡೆಯಬಹುದು. ಗ್ಯಾಲಕ್ಸಿ ಟ್ಯಾಬ್ಲೆಟ್‌ಗಳ ಆಯ್ಕೆ ಮಾಡೆಲ್‌ಗಳು, ಆಕ್ಸೆಸರೀಸ್ ಮತ್ತು ವೇರೇಬಲ್ಸ್ ಉತ್ಪನ್ನಗಳ ಮೇಲೆ 77%ರಷ್ಟು ರಿಯಾಯಿತಿ ಲಭ್ಯ. ಗ್ಯಾಲಕ್ಸಿ ಬುಕ್4 ಸರಣಿಯ ಲ್ಯಾಪ್‌ಟಾಪ್‌ಗಳ ಆಯ್ದ ಮಾದರಿಗಳ ಖರೀದಿಯ ಮೇಲೆ ಗ್ರಾಹಕರು 24%ವರೆಗೆ ರಿಯಾಯಿತಿಗಳನ್ನು ಪಡೆಯಬಹುದು.

ಪ್ರಮುಖ ನಿಯೋ-ಕ್ಯೂಎಲ್‌ಇಡಿ 8ಕೆ, ನಿಯೋ ಕ್ಯೂಎಲ್‌ಇಡಿ, ಒಎಲ್‌ಇಡಿ, ದಿ ಫ್ರೇಮ್ ಟಿವಿಗಳು ಮತ್ತು ಕ್ರಿಸ್ಟಲ್ ಯುಹೆಚ್‌ಡಿ ಸರಣಿಯಂತಹ ಸ್ಯಾಮ್‌ಸಂಗ್ ಟಿವಿಗಳ ಆಯ್ಕೆ ಮಾಡೆಲ್‌ಗಳು 43%ರಷ್ಟು ರಿಯಾಯಿತಿಯಲ್ಲಿ ಲಭ್ಯವಿರುತ್ತವೆ. ನಿಯೋ ಕ್ಯೂಎಲ್ಇಡಿ 8ಕೆ, ನಿಯೋ ಕ್ಯೂಎಲ್ಇಡಿ ಮತ್ತು ಓಎಲ್ಇಡಿ ಟಿವಿಗಳ ಆಯ್ದ ಮಾಡೆಲ್‌ಗಳ ಖರೀದಿಯ ಮೇಲೆ ಗ್ರಾಹಕರು 20,000 ರೂ.ವರೆಗೆ ಬ್ಯಾಂಕ್ ಕ್ಯಾಶ್‌ಬ್ಯಾಕ್ ಪಡೆಯಬಹುದು. ಇದೆಲ್ಲದರ ಜತೆಗೆ ಗ್ರಾಹಕರು ಎಲ್ಲ ಟಿವಿಗಳ ಖರೀದಿಯಲ್ಲಿ 5,000 ರೂ.ವರೆಗೆ ಎಕ್ಸ್‌ಚೇಂಜ್‌ ಬೋನಸ್‌ನಂತೆ ಪ್ರಯೋಜನಗಳನ್ನು ಪಡೆಯಬಹುದು.

‘ಫ್ಯಾಬ್ ಗ್ರಾಬ್ ಫೆಸ್ಟ್’ 2024ರಲ್ಲಿ ರೆಫ್ರಿಜರೇಟರ್‌ಗಳು, ವಾಷಿಂಗ್ ಮೆಷಿನ್‌ಗಳು, ಮೈಕ್ರೋವೇವ್‌ಗಳು, ಮಾನಿಟರ್‌ಗಳು ಮತ್ತು ಏರ್ ಕಂಡಿಷನರ್‌ಗಳಂತಹ ಡಿಜಿಟಲ್ ಉಪಕರಣಗಳನ್ನು ಕಡಿಮೆ ಬೆಲೆ ಮತ್ತು ಹೆಚ್ಚು ರಿಯಾಯಿತಿಯಲ್ಲಿ ಪಡೆಯಬಹುದು.

ನಮ್ಮ ‘ಹೆಚ್ಚು ಖರೀದಿಸಿ ಹೆಚ್ಚು ಉಳಿಸಿ’ ವೇದಿಕೆಯನ್ನು ಬಳಸಿಕೊಂಡು ಗ್ರಾಹಕರು Samsung.com ಅಥವಾ ಸ್ಯಾಮ್ ಸಂಗ್ ಶಾಪ್ ಆ್ಯಪ್ ಮೂಲಕ ಎರಡು ಅಥವಾ ಹೆಚ್ಚಿನ ಉತ್ಪನ್ನಗಳ ಖರೀದಿಸಿದರೆ ಹೆಚ್ಚುವರಿ 5% ಉಳಿತಾಯ ಮಾಡಬಹುದಾಗಿದೆ. ‘ಹೆಚ್ಚು ಖರೀದಿಸಿ ಹೆಚ್ಚು ಉಳಿಸಿ’ ಪ್ಲಾಟ್‌ಫಾರ್ಮ್ ಗ್ರಾಹಕರಿಗೆ ಸ್ಯಾಮ್‌ಸಂಗ್ ಉತ್ಪನ್ನಗಳ ಮೇಲೆ ಹೆಚ್ಚು ಆಫರ್ ಗಳನ್ನು ಪಡೆಯುವ ಅವಕಾಶ ಒದಗಿಸುತ್ತದೆ.

ಖುಷಿಯ ವಿಚಾರ ಇನ್ನೂ ಇದೆ. ಈ ವೇಳೆಯಲ್ಲಿ ಗ್ರಾಹಕರು ಸೈಡ್-ಬೈ-ಸೈಡ್ ರೆಫ್ರಿಜರೇಟರ್‌ಗಳು, ಚಂದದ ಫ್ರೆಂಚ್-ಡೋರ್ ರೆಫ್ರಿಜರೇಟರ್‌ಗಳು ಮತ್ತು ಫ್ರಾಸ್ಟ್ ಫ್ರೀ ರೆಫ್ರಿಜರೇಟರ್‌ಗಳಂತಹ ವ್ಯಾಪಕ ಶ್ರೇಣಿಯ ಪ್ರೀಮಿಯಂ ಉಪಕರಣಗಳ ಮೇಲೆ 48%ವರೆಗೆ ರಿಯಾಯಿತಿ ಪಡೆಯಬಹುದು. ಬೀಸ್ಪೋಕ್ ಎಐ ಪ್ಯಾಕೇಜ್‌ನ ಮೂರು ಅಥವಾ ಅದಕ್ಕಿಂತ ಹೆಚ್ಚಿನ ಆಯ್ದ ಉತ್ಪನ್ನಗಳನ್ನು ಖರೀದಿಸುವ ಮೂಲಕ ಗ್ರಾಹಕರು ತಮ್ಮ ಅಡುಗೆ ಮನೆಯನ್ನು ಅದ್ಭುತವಾಗಿ ರೂಪಾಂತರಿಸಬಹುದು ಮತ್ತು ಅದಕ್ಕಾಗಿ ಹೆಚ್ಚುವರಿ 10% ರಿಯಾಯಿತಿಯನ್ನು ಪಡೆಯಬಹುದು.

ವಾಷಿಂಗ್ ಮೆಷಿನ್‌ಗಳ ಆಯ್ದ ಮಾದರಿಗಳು 50%ವರೆಗಿನ ರಿಯಾಯಿತಿಯಲ್ಲಿ ಲಭ್ಯ. ಸಂಪೂರ್ಣ ಅಟೋಮ್ಯಾಟಿಕ್ ಫ್ರಂಟ್ ಲೋಡಿಂಗ್ ಮತ್ತು ಸಂಪೂರ್ಣ ಅಟೋಮ್ಯಾಟಿಕ್ ಟಾಪ್ ಲೋಡಿಂಗ್ ಯಂತ್ರಗಳ ಡಿಜಿಟಲ್ ಇನ್ವರ್ಟರ್ ಮೋಟಾರ್‌ಗೆ 20-ವರ್ಷದ ವಾರಂಟಿ ಲಭ್ಯವಿರುತ್ತದೆ. ಈ ಉತ್ಪನ್ನಗಳ ಸುಲಭ ಖರೀದಿಗೆ ಕೈಗೆಟುಕುವ ಇಎಂಐ ಆಯ್ಕೆ ಕೂಡ ಲಭ್ಯವಿದ್ದು, ಸಂಪೂರ್ಣ ಅಟೋಮ್ಯಾಟಿಕ್ ಫ್ರಂಟ್ ಲೋಡಿಂಗ್‌ ವಾಷಿಂಗ್ ಮೆಷಿನ್ ಕೇವಲ 1,490 ರೂ., ಸಂಪೂರ್ಣ ಅಟೋಮ್ಯಾಟಿಕ್ ಟಾಪ್ ಲೋಡಿಂಗ್‌ 990 ರೂ. ಮತ್ತು ಸೆಮಿ- ಅಟೋಮ್ಯಾಟಿಕ್ ವಾಷಿಂಗ್ ಮೆಷಿನ್‌ 756 ರೂ. ಇಎಂಐಗೆ ಲಭ್ಯ.

ಈ ಕುರಿತು ಮಾತನಾಡಿರುವ ಸ್ಯಾಮ್‌ಸಂಗ್ ಇಂಡಿಯಾದ ಡಿ2ಸಿ ಬಿಸಿನೆಸ್‌ನ ಉಪಾಧ್ಯಕ್ಷ ಸುಮಿತ್ ವಾಲಿಯಾ, “Samsung.com ಮತ್ತು ಸ್ಯಾಮ್ ಸಂಗ್ ಮಳಿಗೆಗಳಲ್ಲಿ ಬಹು ನಿರೀಕ್ಷಿತ ಬೇಸಿಗೆ ಮಾರಾಟ ಮೇಳ ಆರಂಭಿಸಿದ್ದೇವೆ. ಫ್ಯಾಬ್ ಗ್ರಾಬ್ ಫೆಸ್ಟ್ ಮೂಲಕ ನಾವು ನಮ್ಮ ಗ್ರಾಹಕರಿಗೆ ಉತ್ತಮ ಆಫರ್‌ಗಳು ಮತ್ತು ರಿಯಾಯಿತಿಗಳನ್ನು ನೀಡುತ್ತಿದ್ದೇವೆ. ಈ ಫ್ಯಾಬ್ ಗ್ರಾಬ್ ಫೆಸ್ಟ್‌ನಲ್ಲಿ ಹೆಚ್ಚು ಖರೀದಿಸಿ ಹೆಚ್ಚು ಉಳಿಸಿ ಎಂಬ ಯೋಜನೆ ಅಳವಡಿಕೆಯ ಮೂಲಕ ಸ್ಯಾಮ್‌ಸಂಗ್ ಶ್ರೇಣಿಗಳ ಹೆಚ್ಚು ಉತ್ಪನ್ನಗಳನ್ನು ಖರೀದಿಸುವ ನಮ್ಮ ಗ್ರಾಹಕರಿಗೆ ಹೆಚ್ಚುವರಿ 5% ರಿಯಾಯಿತಿಯನ್ನೂ ನೀಡಲಿದ್ದೇವೆ. ಗ್ರಾಹಕರ ಸಂತಸವನ್ನು ಹೆಚ್ಚಿಸುವ ಜತೆಗೆ, ಆಯ್ದ ಮಾಡೆಲ್‌ಗಳನ್ನು ನಾವು ಅದೇ ದಿನ ಡೆಲಿವರಿ ನೀಡಲಿದ್ದೇವೆ” ಎಂದು ಹೇಳಿದರು.

ಮಾನಿಟರ್‌ಗಳ ಆಯ್ದ ಮಾದರಿಗಳು 61%ವರೆಗಿನ ರಿಯಾಯಿತಿಯಲ್ಲಿ ಲಭ್ಯ. ಗ್ರಾಹಕರು ಸ್ಮಾರ್ಟ್ ಮತ್ತು ಗೇಮಿಂಗ್ ಮಾನಿಟರ್‌ಗಳ ಆಯ್ದ ಮಾದರಿಗಳ ಖರೀದಿಯ ಮೇಲೆ ಉಚಿತ ವಾಲ್ ಮೌಂಟ್ ಅನ್ನು ಕೂಡ ಪಡೆಯಬಹುದು. ಸ್ಯಾಮ್ ಸಂಗ್ ತನ್ನ ಎಲ್ಲ ಮಾನಿಟರ್‌ಗಳ ಮೇಲೆ 3 ವರ್ಷಗಳ ವಾರಂಟಿ ಮತ್ತು 20% ಬ್ಯಾಂಕ್ ಕ್ಯಾಶ್‌ಬ್ಯಾಕ್ (10,000 ರೂ.ವರೆಗೆ) ನೀಡುತ್ತದೆ.

ಕನ್ವರ್ಟಿಬಲ್ ಮತ್ತು ವಿಂಡ್ ಫ್ರೀTM ಏಸಿಗಳ ಆಯ್ದ ಮಾದರಿಗಳು 47%ವರೆಗಿನ ರಿಯಾಯಿತಿಯಲ್ಲಿ ಲಭ್ಯವಿರುತ್ತದೆ. ಎರಡು ಅಥವಾ ಹೆಚ್ಚು ವಿಂಡ್ ಫ್ರೀTM ಏಸಿ ಮಾದರಿಗಳನ್ನು ಖರೀದಿಸುವಾಗ ಗ್ರಾಹಕರು ಹೆಚ್ಚುವರಿ 10% ರಿಯಾಯಿತಿಯನ್ನು ಪಡೆಯಬಹುದು. ವಿಶೇಷವೆಂದರೆ, ಪಿಸಿಬಿ ವಿಭಾಗದಲ್ಲಿ ಈ ಮಾದರಿಗಳು ವಿಸ್ತೃತ ವಾರಂಟಿಯೊಂದಿಗೆ ಬರುತ್ತವೆ. 1-ವರ್ಷದ ಸ್ಟಾಂಡರ್ಡ್ ವಾರಂಟಿ ಜೊತೆಗೆ ಹೆಚ್ಚುವರಿ 4-ವರ್ಷದ ವಿಸ್ತೃತ ವಾರಂಟಿಯನ್ನು ಗ್ರಾಹಕರು ಪಡೆಯಬಹುದು.

ಅತ್ಯಾಕರ್ಷಕ ಬ್ಯಾಂಕ್ ಕೊಡುಗೆಗಳು ಕೂಡ ಲಭ್ಯವಿದೆ. ಗ್ರಾಹಕರು ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಇತರ ಪ್ರಮುಖ ಸಂಸ್ಥೆಗಳ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿದರೆ ಗರಿಷ್ಠ 25,000 ರೂ.ವರೆಗಿನ ಕ್ಯಾಶ್‌ಬ್ಯಾಕ್‌ ಪಡೆಯಬಹುದು ಮತ್ತು ಆ ಮೂಲಕ 22.5%ವರೆಗೆ ಉಳಿತಾಯವನ್ನು ಅನುಭವಿಸಬಹುದು.

ಟ್ಯಾಬ್ಲೆಟ್‌ಗಳು, ಆಕ್ಸೆಸರೀಸ್ ಮತ್ತು ವೇರೇಬಲ್ಸ್(ಧರಿಸಬಹುದಾದ ಉತ್ಪನ್ನಗಳು)ಗಳ ಆಯ್ದ ಮಾದರಿಗಳ ಮೇಲೆ 77%ವರೆಗೆ ರಿಯಾಯಿತಿ
ಗ್ಯಾಲಕ್ಸಿ ಎಸ್ ಸರಣಿ, ಝಡ್ ಸರಣಿ ಮತ್ತು ಎ ಸರಣಿಯ ಸ್ಮಾರ್ಟ್‌ಫೋನ್‌ಗಳ ಆಯ್ದ ಮಾದರಿಗಳ ಮೇಲೆ 64%ವರೆಗೆ ರಿಯಾಯಿತಿ
ಆಯ್ದ ರೆಫ್ರಿಜರೇಟರ್‌ಗಳು ಸೇರಿದಂತೆ ಡಿಜಿಟಲ್ ಉಪಕರಣಗಳ ಮೇಲೆ 48% ವರೆಗೆ ರಿಯಾಯಿತಿ ಮತ್ತು ಆಯ್ದ ಕನ್ವರ್ಟಿಬಲ್ ಮತ್ತು ವಿಂಡ್‌ಫ್ರೀTM ಏಸಿಗಳ ಮೇಲೆ 47%ವರೆಗೆ ರಿಯಾಯಿತಿ
ನಿಯೋ ಕ್ಯೂಎಲ್ಇಡಿ 8ಕೆ, ನಿಯೋ ಕ್ಯೂಎಲ್ಇಡಿ, ಕ್ಯೂಎಲ್ಇಡಿ, ಓಎಲ್ಇಡಿ ಮತ್ತು 4ಕೆ ಯುಎಚ್‌ಡಿ ಟಿವಿಗಳ ಆಯ್ದ ಮಾದರಿಗಳ ಮೇಲೆ 43%ವರೆಗೆ ರಿಯಾಯಿತಿ

ಇದನ್ನೂ ಓದಿ: Samsung AI TV: ಏಪ್ರಿಲ್ 17ರಂದು ಸ್ಯಾಮ್‌ಸಂಗ್‌ನ ಎಐ ಟಿವಿಗಳ ಹೊಸ ಶ್ರೇಣಿ ಬಿಡುಗಡೆ

Continue Reading
Advertisement
Press Freedom
Latest5 seconds ago

Press Freedom: ಚೀನಾ ಸೇರಿದಂತೆ ಈ ದೇಶಗಳು ಪತ್ರಕರ್ತರಿಗೆ ಸುರಕ್ಷಿತವಲ್ಲ

Rape victim kidnapping in Prajwal Revanna Case What are the options before HD Revanna
ಕ್ರೈಂ30 seconds ago

Prajwal Revanna Case: ‌ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

Anand Mahindra
ಪ್ರಮುಖ ಸುದ್ದಿ9 mins ago

Anand Mahindra: ತಂದೆ ಸಾವಿನ ಬಳಿಕ ಕಷ್ಟದಲ್ಲಿದ್ದ ಬಾಲಕನ ಶಿಕ್ಷಣಕ್ಕೆ ಆನಂದ್‌ ಮಹೀಂದ್ರಾ ನೆರವು!

Asha Sobhana
ಕ್ರೀಡೆ19 mins ago

Asha Sobhana : ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಆರ್​ಸಿಬಿ ಆಟಗಾರ್ತಿ

Lok Sabha Election-2024
ಕರ್ನಾಟಕ45 mins ago

ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 hour ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

IPL 2024
ಕ್ರೀಡೆ1 hour ago

IPL 2024 : ಪೃಥ್ವಿ ಶಾ ಗರ್ಲ್​​ ಫ್ರೆಂಡ್​​​ ನಿಧಿಯನ್ನು ತಬ್ಬಿ ಅಭಿನಂದಿಸಿದ ಶಾರುಖ್​ ಖಾನ್​​

CM Siddaramaiah
ಪ್ರಮುಖ ಸುದ್ದಿ2 hours ago

CM Siddaramaiah: ಚುನಾವಣೆಯಲ್ಲಿ ʼಕೈʼ ಬಲಪಡಿಸಿ; ನಾಡಿನ ಮಹಿಳೆಯರಿಗೆ ಸಿಎಂ ಬಹಿರಂಗ ಪತ್ರ

Arvind Kejriwal
ದೇಶ2 hours ago

Arvind Kejriwal: ಖಲಿಸ್ತಾನಿ ಉಗ್ರರಿಂದ ದೇಣಿಗೆ; ಕೇಜ್ರಿವಾಲ್‌ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು!

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 hour ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌