WhatsApp New Feature: ಐಫೋನ್ ಬಳಕೆದಾರರಿಗೆ ವಾಟ್ಸಾಪ್ ಗ್ರೂಪ್ ನಿರ್ವಹಣೆ ಇನ್ನು ಸುಲಭ! Vistara News
Connect with us

ಗ್ಯಾಜೆಟ್ಸ್

WhatsApp New Feature: ಐಫೋನ್ ಬಳಕೆದಾರರಿಗೆ ವಾಟ್ಸಾಪ್ ಗ್ರೂಪ್ ನಿರ್ವಹಣೆ ಇನ್ನು ಸುಲಭ!

ಐಫೋನ್ ಬಳಕೆದಾರರಿಗೆ ಹೊಸ ವೈಶಿಷ್ಟ್ಯವನ್ನು (WhatsApp New Feature) ವಾಟ್ಸಾಪ್ ಪರಿಚಯಿಸುತ್ತಿದೆ. ಗ್ರೂಪ್ ಅಡ್ಮಿನ್‌ಗಳಿಗೆ ಈ ಹೊಸ ಫೀಚರ್ ಹೆಚ್ಚು ಉಪಯೋಗಕಾರಿಯಾಗಿದೆ.

VISTARANEWS.COM


on

WhatsApp New Feature group management is now easier for iPhone users
Koo

ಬೆಂಗಳೂರು: ಐಫೋನ್ ಬಳಕೆದಾರರಿಗೆ ವಾಟ್ಸಾಪ್ ಹೊಸ ಫೀಚರ್‌ಗಳನ್ನು (WhatsApp New Feature) ಲಾಂಚ್ ಮಾಡಲಿದೆ. ಗ್ರೂಪ್‌ ಅಡ್ಮಿನ್‌ಗಳಿಗೆ ಹೊಸ ಶಾರ್ಟ್‌ಕಟ್‌ಗಳನ್ನು ಪರಿಚಯಿಸುತ್ತಿದೆ. ಈ ಹೊಸ ಫೀಚರ್ಸ್‌ಗೆ ಸಂಬಂಧಿಸಿದಂತೆ ಲೆಟೆಸ್ಟ್ 23.1.75 ನವೀಕರಣವನ್ನು ವಾಟ್ಸಾಪ್ ಆ್ಯಪಲ್ ಆ್ಯಪ್ ಸ್ಟೋರ್‌ಗೆ ಸಬ್‌ಮಿಟ್ ಮಾಡಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ವರದಿ ಮಾಡಿರುವ WaBetaInfo, ಕೆಲವು ನಿಶ್ಚಿತ ಭಾಗಿದಾರರಿಗೆ ಸಂಬಂಧಿಸಿದ ಕಾರ್ಯಗಳನ್ನು ತ್ವರಿತವಾಗಿ ನೆರವೇರಿಸಲು ಸಾಧ್ಯವಾಗುವಂತೆ ಮಾಡಲು ಈ ಶಾರ್ಟ್‌ಕಟ್‌ಗಳನ್ನು ವಾಟ್ಸಾಪ್ ಐಫೋನ್ ಬಳಕೆದಾರರಿಗೆ ಒದಗಿಸುತ್ತಿದೆ. ವಾಟ್ಸಾಪ್‌ ಗ್ರೂಪ್‌ ಚಾಟ್‌ನಲ್ಲಿ 1024 ಜನರು ಭಾಗವಹಿಸಬಹುದು. ಹಾಗಾಗಿ, ಗ್ರೂಪ್ ಅಡ್ಮಿನ್‌ಗಳು ಪ್ರತಿಯೊಬ್ಬ ಭಾಗವಹಿಸುವವರೊಂದಿಗೆ ಸಂವಹನ ಮಾಡುವುದು ಕಷ್ಟಕರವಾಗಿರುತ್ತದೆ. ಹೊಸ ಶಾರ್ಟ್‌ಕಟ್ ವೈಶಿಷ್ಟ್ಯವು ಅಡ್ಮಿನ್‌ಗಳ ಕಾರ್ಯವನ್ನು ಸರಳಗೊಳಿಸುತ್ತದೆ ಮತ್ತು ಸಂವಹನವನ್ನು ಸುಲಭಗೊಳಿಸುತ್ತದೆ.

ಒರಿಜಿನಲ್ ಸೈಜಿನಲ್ಲಿ ಇಮೇಜ್ ಕಳುಹಿಸಿ

ವಾಟ್ಸಾಪ್ ಮತ್ತೊಂದು ಹೊಸ ಫೀಚರ್ (New Feature) ಲಾಂಚ್ ಮಾಡಲಿದೆ. ಒರಿಜಿನಲ್ ಸೈಜಿನಲ್ಲಿ ಅಥವಾ ಹೈ ಕ್ವಾಲಿಟಿ ಚಿತ್ರಗಳನ್ನು ಕಳುಹಿಸಲು ಸಾಧ್ಯವಾಗುವ ಫೀಚರ್ ಅನ್ನು ವಾಟ್ಸಾಪ್ ಶೀಘ್ರವೇ ಬಿಡುಗಡೆ ಮಾಡಲಿದೆ. ಈ ಹೊಸ ಫೀಚರ್‌ನಿಂದ ಬಳಕೆದಾರರಿಗೆ ಸಾಕಷ್ಟು ಅನುಕೂಲವಾಗಲಿದೆ.

WaBetaInfo ವರದಿಯ ಪ್ರಕಾರ, ಬೀಟಾ ಟೆಸ್ಟಿಂಗ್ ಆವೃತ್ತಿ 2.23.2.11 ನವೀಕರಣವನ್ನು ಪ್ರಾರಂಭಿಸಿದೆ. ಇದು ವಾಟ್ಸಾಪ್‌ನಲ್ಲಿ ಯಾರಿಗಾದರೂ ಫೋಟೋಗಳನ್ನು ಅವುಗಳ ಮೂಲ ಗುಣಮಟ್ಟದಲ್ಲಿ ಕಳುಹಿಸಲು ಹೊಸ ಮಾರ್ಗವನ್ನು ತರುತ್ತದೆ. ಎಲ್ಲಾ ಬಳಕೆದಾರರಿಗೆ ಭವಿಷ್ಯದ ನವೀಕರಣದಲ್ಲಿ ಹೊಸ ವೈಶಿಷ್ಟ್ಯವನ್ನು ಬಿಡುಗಡೆ ಮಾಡಲಾಗುವುದು ಮತ್ತು ಸದ್ಯಕ್ಕೆ, ಬಳಕೆದಾರರು ಪರಿಹಾರಗಳನ್ನು ಬಳಸುವುದನ್ನು ಮುಂದುವರಿಸಬೇಕಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: WhatsApp New Feature | ಆ್ಯಕ್ಸಿಡೆಂಟಲ್ ಡಿಲೀಟ್ ಹೊಸ ಫೀಚರ್ ಪರಿಚಯಿಸಿದ ವಾಟ್ಸ್ಆ್ಯಪ್!

ವರದಿಗಳ ಪ್ರಕಾರ, ವಾಟ್ಸಾಪ್, ಇಮೇಜ್ ಪ್ರಿವ್ಯೂ(image preview) ಹೊಸ ಸೆಕ್ಷನ್ ಅನ್ನು ಆರಂಭಿಸಲಿದೆ. ಈ ಆಪ್ಷನ್ ಬಳಸಿಕೊಂಡು ಬಳಕೆದಾರರು ಫೋಟೋವನ್ನು ಕಳುಹಿಸವಾಗ, ಯಾವ ಕ್ವಾಲಿಟಿಯಲ್ಲಿ ಫೋಟೋವನ್ನು ಕಳುಹಿಸಬೇಕು ಎಂಬುದನ್ನು ನಿರ್ಧರಿಸಲು ಸುಲಭವಾಗಲಿದೆ. ಫೋಟೋಗಳನ್ನು ಕಳುಹಿಸುವಾಗ ಅವುಗಳ ಕ್ವಾಲಿಟಿಯ ಮೇಲೆ ಹೆಚ್ಚು ನಿಯಂತ್ರಣ ಸಾಧಿಸಲು ಈ ಹೊಸ ಫೀಚರ್ ಬಳಕೆದಾರರಿಗೆ ಅವಕಾಶವನ್ನು ಕಲ್ಪಿಸಲಿದೆ. ಓರಿಜಿನಲ್ ಸೈಜಿನಲ್ಲಿ ಫೋಟೋ ಕಳುಹಿಸುವ ಈ ಹೊಸ ಫೀಚರ್ ಇನ್ನೂ ಅಭಿವೃದ್ಧಿಯ ಹಂತದಲ್ಲಿದೆ.

ಗ್ಯಾಜೆಟ್ಸ್

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

ಭಾರತೀಯ ಮಾರುಕಟ್ಟೆಗೆ ಮತ್ತೊಂದು ಹೊಸ ಲ್ಯಾಪ್‌ಟಾಪ್ ಲಾಂಚ್ ಆಗಿದೆ. ಸಾಕಷ್ಟು ಹೊಸ ಫೀಚರ್ಸ್‌ಗಳೊಂದಿಗೆ HP Pavilion Aero 13 ಲ್ಯಾಪ್‌ಟ್ಯಾಪ್ ಗಮನ ಸೆಳೆಯುತ್ತಿದೆ.

VISTARANEWS.COM


on

Edited by

HP Pavilion Aero 13 Laptop Launched and Check details
Koo

ಬೆಂಗಳೂರು: ಎಚ್‌ಪಿ ಕಂಪನಿಯು ಭಾರತದಲ್ಲಿ ತನ್ನ ಹೊಸ ಪೆವಿಲಿಯನ್ ಏರೋ 13 (HP Pavilion Aero 13) ಲ್ಯಾಪ್‌ಟ್ಯಾಪ್‌ಗಳನ್ನು ಮಂಗಳಾರ ಬಿಡುಗಡೆ ಮಾಡಿದೆ. ಶಕ್ತಿಯುತ ಕಾರ್ಯಕ್ಷಮತೆಗಾಗಿ AMD Ryzen™ 7 ಪ್ರೊಸೆಸರ್ ಮತ್ತು Radeon™ ಗ್ರಾಫಿಕ್ಸ್‌ ಒಳಗೊಂಡಿದೆ. GenZ ಮತ್ತು ಈ ಸಹಸ್ರಮಾನದ ಆಧುನಿಕ ಗ್ರಾಹಕರಿಗಾಗಿ ಈ ಸಾಧನವನ್ನು ನಿರ್ಮಿಸಲಾಗಿದೆ. ಯಾವುದೇ ಸಮಯ ಅಥವಾ ಸ್ಥಳದಲ್ಲಿ ಉತ್ಪಾದಕವಾಗಿ ಕೆಲಸ ಮಾಡಲು ಮತ್ತು ಕಲಿಯಲು ಅನುವು ಮಾಡಿಕೊಡುತ್ತದೆ.

ಆಧುನಿಕ ಜಗತ್ತಿನಲ್ಲಿ, ಬಹುಮುಖವಾದ ಹಲವು ಕಾರ್ಯಗಳನ್ನು ಮಾಡಬಲ್ಲ, ಕೆಲಸ ಮತ್ತು ಕಲಿಕೆ ಎರಡನ್ನೂ ನಿಭಾಯಿಸಬಲ್ಲ ಸಾಧನಗಳನ್ನು ಗ್ರಾಹಕರು ಅರಸುತ್ತಿರುತ್ತಾರೆ. ಹೈಬ್ರಿಡ್ ಕಾರ್ಯಶೈಲಿಗೆ ಸರಿಹೊಂದುವಂತೆ ಈ ಸಾಧನಗಳು ಹಗುರವಾಗಿರಬೇಕು ಮತ್ತು ಯುವ ಪೀಳಿಗೆಯ ಆದ್ಯತೆಗಳನ್ನು ಪೂರೈಸುವಂತೆ ಆಕರ್ಷಕವಾಗಿರಬೇಕು. ಹೊಚ್ಚ-ಹೊಸ HP ಪೆವಿಲಿಯನ್ ಏರೋ 13 ಲ್ಯಾಪ್‌ಟಾಪ್ Wi-Fi6 ಜತೆಗೆ ವೇಗದ ಮತ್ತು ವಿಶ್ವಾಸಾರ್ಹ ಸಂಪರ್ಕವನ್ನು ಹೊಂದಿದೆ. 10.5 ಗಂಟೆಗಳವರೆಗೆ ಬ್ಯಾಟರಿ ಬಾಳಿಕೆ ಇದ್ದು, ಯಾವುದೇ ಸ್ಥಳದಿಂದ ಕೆಲಸ, ಬ್ರೌಸಿಂಗ್ ಮತ್ತು ಸ್ಟ್ರೀಮಿಂಗ್ ಮಾಡಲು ಸೂಕ್ತವಾಗಿದೆ.

400 ನಿಟ್ಸ್ ಪ್ರಕಾಶಮಾನವಾದ ಮತ್ತು 16:10 ಆಕಾರ ಅನುಪಾತದಗ ಸ್ಕ್ರೀನ್ ಬಳಕೆದಾರರಿಗೆ ತಲ್ಲೀನಗೊಳಿಸುವ ವೀಕ್ಷಣೆಯ ಅನುಭವವನ್ನು ನೀಡುತ್ತದೆ. HP ಪೆವಿಲಿಯನ್ ಏರೋ 13 ಕೇವಲ 970 ಗ್ರಾಂ ಭಾರವಿದ್ದು, GenZ ಗಳು ಮತ್ತು ಈ ಸಹಸ್ರಮಾನದ ಯುವಜನರಿಗೆ ಪೋರ್ಟಬಿಲಿಟಿಯನ್ನು ಸಕ್ರಿಯಗೊಳಿಸುತ್ತದೆ. ಇದು ಅವರ ಶೈಲಿ ಮತ್ತು ಜೀವನಶೈಲಿಗೆ ಹೊಂದಿಕೊಳ್ಳಲು ಮೂರು ವಿಶಿಷ್ಟ ಬಣ್ಣಗಳಲ್ಲಿದೆ – ಪೇಲ್ ರೋಸ್ ಗೋಲ್ಡ್, ವಾರ್ಮ್ ಗೋಲ್ಡ್ ಮತ್ತು ನ್ಯಾಚುರಲ್ ಸಿಲ್ವರ್.

HP ಇಂಡಿಯಾ ಪರ್ಸನಲ್ ಸಿಸ್ಟಮ್ಸ್ ಹಿರಿಯ ನಿರ್ದೇಶಕ ವಿಕ್ರಮ್ ಬೇಡಿ ಮಾತನಾಡಿ, “ಪಿಸಿಗಳು ಹೈಬ್ರಿಡ್ ಪರಿಸರದಲ್ಲಿ ಜನರ ಜೀವನದ ಪ್ರಮುಖ ಅಂಶಗಳಾಗುತ್ತಿವೆ. ಆಧುನಿಕ ಜಗತ್ತಿನಲ್ಲಿ ಬಹುಮುಖ ಮತ್ತು ಶಕ್ತಿಯುತ ಕಂಪ್ಯೂಟಿಂಗ್ ಪರಿಹಾರಗಳಿಗಾಗಿ ವೃದ್ಧಿಸುತ್ತಿರುವ ಬೇಡಿಕೆಯನ್ನು ಪೂರೈಸಲು HP ವಿನ್ಯಾಸಗೊಳಿಸಿದ ಹೊಸ ಪೆವಿಲಿಯನ್ ಏರೋ 13 ಲ್ಯಾಪ್‌ಟಾಪ್ ಪರಿಚಯಿಸಲು ನಾವು ಹೆಮ್ಮೆಪಡುತ್ತೇವೆ. ಇದು ಅಸಾಧಾರಣ ಕಾರ್ಯಕ್ಷಮತೆ ಮತ್ತು ಚಲನಶೀಲತೆಯನ್ನು ನೀಡುತ್ತದೆ, ಬಳಕೆದಾರರು ಪ್ರಯಾಣಿಸುತ್ತಿರುವಾಗಲೂ ಉತ್ಪಾದಕವಾಗಿರಲು ಮತ್ತು ಮನೋರಂಜನೆಯನ್ನು ಪಡೆಯಲು ಅನುವು ಮಾಡಿಕೊಡುತ್ತದೆ. HP ಪೆವಿಲಿಯನ್ ಏರೋ 13 ಆಕರ್ಷಕವಾದ ಪ್ರೀಮಿಯಂ ಲ್ಯಾಪ್‌ಟಾಪ್ ಆಗಿದೆ. ಕೆಲಸ ಮತ್ತು ಗೇಮಿಂಗ್ – ಎರಡೂ ವಿಷಯಗಳಲ್ಲಿ ಬಳಕೆದಾರರಿಗೆ ಅಸಾಧಾರಣವಾಗಿ ಆಪ್ತವಾಗುತ್ತದೆ.

ಹೈಬ್ರಿಡ್ ಪರಿಸರಕ್ಕೆ ಅನುಗುಣವಾಗಿ ಉನ್ನತ ದರ್ಜೆಯ ಕಾರ್ಯಕ್ಷಮತೆಯನ್ನು ನೀಡುವಂತೆ ಹಗುರವಾದ ಆದರೆ ಶಕ್ತಿಶಾಲಿಯಾದ HP ಪೆವಿಲಿಯನ್ ಏರೋ 13 ರೂಪಿಸಲಾಗದೆ. ಕೆಲಸ ಮಾಡಲು ಅಥವಾ ಸ್ನೇಹಿತರ ಜತೆಗೆ ಸ್ಪಷ್ಟವಾದ ವೀಡಿಯೋ ಕರೆಗಳನ್ನು ಮಾಡಲು ಮತ್ತು ಅನಗತ್ಯವಾದ ಹಿನ್ನೆಲೆಯ ಗದ್ದಲವನ್ನು ನಿವಾರಿಸುವ ಸೌಕರ್ಯವನ್ನು ಹೊಂದಿದೆ. 100% sRGB ಸಹಿತವಾದ ವಿಶಾಲವಾದ ಕಲರ್‌ ಪ್ಯಾಲೆಟ್ ವೆಬ್‌ನಲ್ಲಿ ಸರ್ಫ್ ಮಾಡುವಾಗ ಮತ್ತು ವೀಡಿಯೋಗಳನ್ನು ಸ್ಟ್ರೀಮ್ ಮಾಡುವಾಗ ಹೆಚ್ಚು ರೋಮಾಂಚಕ ಚಿತ್ರಗಳ ವೀಕ್ಷಣೆಗೆ ಅವಕಾಶ ಮಾಡಿಕೊಡುತ್ತದೆ. ಫ್ಲಿಕರ್-ರಹಿತವಾದ ಪರದೆಯು ದಿನವಿಡೀ ಕೆಲಸ ಮಾಡಲು ಮತ್ತು ರಾತ್ರಿಯಿಡೀ ಆಟವಾಡಲು ಸೌಕರ್ಯ ನೀಡುವುದು HP ಪೆವಿಲಿಯನ್ ಏರೋ ವಿಶೇಷತೆಯಾಗಿದೆ. ಹೆಚ್ಚುವರಿಯಾಗಿ, 2.5k ರೆಸಲ್ಯೂಶನ್ ಸ್ಕ್ರೀನ್ ಮೇಲೆ ತೀಕ್ಷ್ಣವಾದ ಚಿತ್ರಗಳು ಮತ್ತು ಪಠ್ಯಗಳನ್ನು ಮೂಡಿಸುತ್ತದೆ. ಇದನ್ನು 4-ಬದಿಗಳ ಕಿರಿದಾದ ಅಂಚಿನ ಸ್ಕ್ರೀನ್ ವೀಕ್ಷಣೆಗೆ ಇರುವ ಎಲ್ಲ ಅಡ್ಡಿಗಳನ್ನೂ ನಿವಾರಿಸುತ್ತದೆ.

ಸುಸ್ಥಿರತೆ ಮತ್ತು ಪರಿಸರ ರಕ್ಷಣೆಗೆ HP ಯ ಬದ್ಧತೆಗೆ ಅನುಗುಣವಾಗಿ HP ಪೆವಿಲಿಯನ್ ಏರೋ 13 ವಿನ್ಯಾಸಗೊಳಿಸಲಾಗಿದೆ. ಗ್ರಾಹಕರು ಬಳಸಿದ ಮರುಬಳಕೆಯ ಮತ್ತು ಸಾಗರದಿಂದ ಸಂಗ್ರಹಿಸಿದ ಪ್ಲಾಸ್ಟಿಕ್‌ನಿಂದ ನಿರ್ಮಿಸಲಾಗಿದೆ. VOC ಹೊರಸೂಸುವಿಕೆ ತಗ್ಗಿಸಲು ನೀರು-ಆಧಾರಿತ ಬಣ್ಣವನ್ನು ಬಳಸಲಾಗಿದೆ.

HP ಪೆವಿಲಿಯನ್ ಏರೋ 13 ವಿಶೇಷತೆಗಳೇನು?

ಡಿಸ್‌ಪ್ಲೇ ಹೇಗಿದೆ?

• 16:10 ಆಕಾರ ಅನುಪಾತದೊಂದಿಗೆ HP ಯ ಪ್ರಥಮ ಪೆವಿಲಿಯನ್ ಲ್ಯಾಪ್‌ಟಾಪ್
• ತಡೆರಹಿತ ಬ್ರೌಸಿಂಗ್ ಅನುಭವಕ್ಕಾಗಿ 400 ನಿಟ್‌ಗಳಷ್ಟು ಪ್ರಕಾಶಮಾನ ಡಿಸ್‌ಪ್ಲೇ
• ಫ್ಲಿಕರ್-ರಹಿತ ಪರದೆ
• ವೀಕ್ಷಣೆಯ ಅಡ್ಡಿಗಳನ್ನು ನಿವಾರಿಸಲು 4-ಬದಿ ಕಿರಿದಾದ ಅಂಚಿನ ಡಿಸ್‌ಪ್ಲೇ
• ತೀಕ್ಷ್ಣವಾದ ಚಿತ್ರಗಳು ಮತ್ತು ಪಠ್ಯಕ್ಕಾಗಿ 2.5k ರೆಸಲ್ಯೂಶನ್
• ಬಿಸಿಲಿನಲ್ಲೂ ಬ್ರೌಸಿಂಗ್ ಮಾಡುವುದಕ್ಕಾಗಿ 400 ನಿಟ್ಸ್ ಪ್ರಕಾಶ
• 100% sRGB ಯೊಂದಿಗೆ ವಿಶಾಲ ಕಲರ್ ಪ್ಯಾಲೆಟ್

ಕಾರ್ಯಕ್ಷಮತೆ

• ಸುಗಮ ಕಾರ್ಯಕ್ಷಮತೆಗಾಗಿ AMD Ryzen™ 7000 ಸರಣಿಯ ಪ್ರೊಸೆಸರ್, Radeon™ ಗ್ರಾಫಿಕ್ಸ್
• Wi-Fi 6 ಜೊತೆಗೆ ವಿಶ್ವಾಸಾರ್ಹ ಮತ್ತು ವೇಗದ ಸಂಪರ್ಕ
• ತಡೆರಹಿತ ಕಲಿಕೆ ಮತ್ತು ಕೆಲಸಕ್ಕಾಗಿ 10.5 ಗಂಟೆಗಳ ಬ್ಯಾಟರಿ ಬಾಳಿಕೆ
• ಉತ್ತಮ ವೀಡಿಯೊ ಕರೆಗಳಿಗಾಗಿ AI ನಾಯ್ಸ್ ರಿಮೂವಲ್ ಸೌಕರ್ಯ
• ಕಾರ್ಯಗಳ ಬೇಡಿಕೆಯನ್ನು ನಿರ್ವಹಿಸಲು DDR5 RAM

ವಿನ್ಯಾಸ

• ಕೇವಲ 970 ಗ್ರಾಂ ಭಾರವಿದ್ದು, ಪೋರ್ಟಬಿಲಿಟಿಯನ್ನು ಖಚಿತಪಡಿಸುತ್ತದೆ.
• ಮೂರು ಬಣ್ಣಗಳಲ್ಲಿ ಲಭ್ಯವಿದೆ – ರೋಸ್ ಪೇಲ್ ಗೋಲ್ಡ್, ವಾರ್ಮ್ ಗೋಲ್ಡ್ ಮತ್ತು ನ್ಯಾಚುರಲ್ ಸಿಲ್ವರ್

ಬೆಲೆ ಮತ್ತು ಲಭ್ಯತೆ

• HP Pavilion Aero 13 (Ryzen 5 ಸಹಿತ) 72,999 ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ
• HP Pavilion Aero 13 (Ryzen 7 ಸಹಿತ) 1TB SSD 82,999 ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ.

Continue Reading

ಗ್ಯಾಜೆಟ್ಸ್

Honor 70 Lite 5G ಸ್ಮಾರ್ಟ್‌ಫೋನ್ ಲಾಂಚ್, ಹೊಸ ಫೀಚರ್ಸ್‌ಗಳೇನು?

ಚೀನಾ ಮೂಲದ ಹಾನರ್ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಹಾನರ್ 70 ಲೈಟ್ 5ಜಿ ಫೋನ್(Honor 70 Lite 5G), ಬ್ಯಾಟರಿ, ಕ್ಯಾಮೆರಾ ಹಾಗೂ ಇತರ ಫೀಚರ್ಸ್‌ಗಳಿಂದಾಗಿ ಗಮನ ಸೆಳೆಯುತ್ತಿದೆ.

VISTARANEWS.COM


on

Edited by

Honor 70 Lite 5G launched and check details
Koo

ನವದೆಹಲಿ: ಇತ್ತೀಚೆಗಷ್ಟೇ ಸ್ಪೇನ್‌ನ ಬಾರ್ಸಿಲೋನಾದಲ್ಲಿ ನಡೆದ ಮೊಬೈಲ್ ವರ್ಲ್ಡ್ ಕಾಂಗ್ರೆಸ್‌ನಲ್ಲಿ ಹಾನರ್ ಕಂಪನಿಯು ಮ್ಯಾಜಿಕ್ 5 ಸಿರೀಸ್‌ನಲ್ಲಿ ಮ್ಯಾಜಿಕ್ 5 ಮತ್ತು ಮ್ಯಾಜಿಕ್ 5 ಪ್ರೋ ಸ್ಮಾರ್ಟ್‌ಫೋನ್ ಲಾಂಚ್ ಮಾಡಿತ್ತು. ಇವುಗಳ ಜತೆಗೆ ಕಂಪನಿಯ ಮೊದಲ ಫೋಲ್ಡೇಬಲ್ ಸ್ಮಾರ್ಟ್‌ಫೋನ್ ಹಾನರ್ ಮ್ಯಾಜಿಕ್ ವಿಎಸ್ ಕೂಡ ಲಾಂಚ್ ಆಗಿತ್ತು. ಈಗ ಕಂಪನಿಯು ಜಾಗತಿಕ ಮಾರುಕಟ್ಟೆಗೆ ಹಾನರ್ 70 ಲೈಟ್ 5ಜಿ (Honor 70 Lite 5G) ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ.

ಈ ಹಾನರ್ 70 ಲೈಟ್ 5ಜಿ ಸ್ಮಾರ್ಟ್‌ಫೋನ್ ಒಂದೇ ವೆರಿಯಂಟ್‌ನಲ್ಲಿ ಮಾರಾಟಕ್ಕೆ ಲಭ್ಯವಿದೆ. 4 ಜಿಬಿ RAM ಹಾಗೂ 128 ಜಿಬಿ ಸ್ಟೋರೇಜ್‌ ವೆರಿಯಂಟ್ ಫೋನ್ ಬೆಲೆ 199 ಪೌಂಡ್ ಎಂದು ಹೇಳಲಾಗುತ್ತಿದೆ. ಅಂದರೆ, ಭಾರತೀಯ ರೂಪಾಯಿ ಲೆಕ್ಕಾಚಾರದಲ್ಲಿ ಅದು ಅಂದಾಜು 20 ಸಾವಿರ ರೂ. ಆಗಬಹುದು. ಭಾರತೀಯ ಮಾರುಕಟ್ಟೆಗೆ ಯಾವಾಗ ಈ ಫೋನ್ ಲಾಂಚ್ ಆಗಲಿದೆ ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ.

ಟೈಟಾನಿಯಂ ಸಿಲ್ವರ್, ಓಷನ್ ಬ್ಲೂ, ಮಿಡ್ನೈಟ್ ಬ್ಲಾಕ್ ಎಂಬ ಮೂರು ಬಣ್ಣಗಳ ಆಯ್ಕೆಯಲ್ಲಿ ಈ ಸ್ಮಾರ್ಟ್‌ಫೋನ್ ಗ್ರಾಹಕರಿಗೆ ಸಿಗಲಿದೆ. ಆದರೆ, ಈ ಮೂರು ಬಣ್ಣಗಳ ಫೋನ್ ಎಲ್ಲ ಮಾರುಕಟ್ಟೆಗಳಲ್ಲಿ ಸಿಗುತ್ತದೆ ಎಂಬುದಕ್ಕೆ ಗ್ಯಾರಂಟಿ ಇಲ್ಲ. ಈ ಬಗ್ಗೆ ವೆಬ್‌ಸೈಟ್‌ನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

Honor 70 Lite 5G ವಿಶೇಷತೆಗಳೇನು?

Honor 70 Lite 5G ಸ್ಮಾರ್ಟ್‌ಫೋನ್ ಡುಯಲ್ ಸಿಮ್‌ಗೆ ಸಪೋರ್ಟ್ ಮಾಡುತ್ತದೆ. ಮ್ಯಾಜಿಕ್ ಯುಐ ಜತೆ ಆಂಡ್ರಾಯ್ಡ್ 12 ಸಂಯೋಜಿಸಲಾಗಿದೆ. 6.5 ಇಂಚ್ ಎಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇ ಇದ್ದು, Adreno 619 GPU ಜತೆ Snapdragon 480+ ಪ್ರೊಸೆಸರ್ ನೀಡಲಾಗಿದೆ. 4 ಜಿಬಿ RAM ಇದೆ.

ಕ್ಯಾಮೆರಾ ಹೇಗಿದೆ?

Honor 70 Lite 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್‌ ಅಪ್ ಇದೆ. ಮೂರು ಕ್ಯಾಮೆರಾಗಳನ್ನು ಚೌಕಾಕಾರದ ಡಿಸೈನ್‌ನಲ್ಲಿ ಸೆಟ್ ಅಪ್ ಮಾಡಲಾಗಿದೆ. ಮೂರು ಕ್ಯಾಮೆರಾಗಳ ಪೈಕಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಕ್ಯಾಮೆರಾವಾಗಿದೆ. ಉಳಿದೆರಡು ಕ್ಯಾಮೆರಾಗಳು 2 ಮೆಗಾ ಪಿಕ್ಸೆಲ್ ಕ್ಯಾಮೆರಾಗಳಾಗಿವೆ. ಫೋನ್ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಕ್ಯಾಮಾರವನ್ನು ಸೆಲ್ಫಿಗಾಗಿ ನೀಡಲಾಗಿದೆ. ಚಾಟ್ ಮತ್ತು ವಿಡಿಯೋ ಕರೆಗಳಿಗಾಗಿ ಬಳಸಿಕೊಳ್ಳಬಹುದು.

ಇದನ್ನೂ ಓದಿ: ಸ್ಮಾರ್ಟ್‌ಫೋನ್ ಕಳೆದು ಹೋಗಿದೆಯೇ? IMEI Number ಮೂಲಕ ಟ್ರ್ಯಾಕ್ ಅಥವಾ ಬ್ಲಾಕ್ ಮಾಡಬಹುದು!

5000mAh ಬ್ಯಾಟರಿ ಇದ್ದು, 122.5 ವ್ಯಾಟ್‌ ಫಾಸ್ಟ್ ಚಾರ್ಜಿಂಗ್‌ಗೆ ಸಪೋರ್ಟ್ ಮಾಡುತ್ತದೆ. ಫೇಸ್ ಅನ್‌ಲಾಕ್ ಇದ್ದು, ಫೋನ್ ಬದಿಯಲ್ಲಿ ಫಿಂಗರ್ ಪ್ರಿಂಟ್ ಸೆನ್ಸರ್ ಇದೆ. 128 ಜಿಬಿ ಇಂಟರ್ನಲ್ ಸ್ಟೋರೇಜ್ ಇದೆ. ಕನೆಕ್ಟಿವಿಟಿ ಬಗ್ಗೆ ಹೇಳುವುದಾದರೆ, 5G, Wi-Fi 802.11ac, ಬ್ಲೂಟೂತ್ 5.1, GPS, USB ಟೈಪ್-C ಪೋರ್ಟ್, NFC, OTG ಮತ್ತು 3.5mm ಆಡಿಯೋ ಜ್ಯಾಕ್ ಸೌಲಭ್ಯಗಳಿವೆ.

Continue Reading

ಗ್ಯಾಜೆಟ್ಸ್

WhatsApp: ಡಿಜಿಲಾಕರ್‌ನಲ್ಲಿರುವ ಆಧಾರ್, ಪಾನ್, ಡಿಎಲ್ ವಾಟ್ಸಾಪ್ ಮೂಲಕ ಡೌನ್ಲೋಡ್ ಮಾಡುವುದು ಹೇಗೆ?

WhatsApp: ಡಿಜಿಲಾಕರ್ ಆ್ಯಪ್ (DigiLocker) ಭಾರತ ಸರ್ಕಾರ ನಾಗರಿಕರಿಗೆ ಒದಗಿಸಿರುವ ಅಧಿಕೃತ ಡಿಜಿಟಲ್ ವೇದಿಕೆಯಾಗಿದೆ. ಈ ಆ್ಯಪ್‌ನಲ್ಲಿ ಸ್ಟೋರ್‌ ಮಾಡಲಾಗಿರುವ ಡಾಕ್ಯುಮೆಂಟ್ಸ್‌ ಬಳಕೆದಾರರು ವಾಟ್ಸಾಪ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ಅದು ಹೇಗೆ ಎಂದು ತಿಳಿದುಕೊಳ್ಳೋಣ ಬನ್ನಿ.

VISTARANEWS.COM


on

Edited by

How to download Aadhaar PAN Driving license card through WhatsApp
Koo

ಬೆಂಗಳೂರು, ಕರ್ನಾಟಕ: ಡಿಜಿಲಾಕರ್ (DigiLocker) ಬಗ್ಗೆ ಎಲ್ಲರಿಗೂ ಗೊತ್ತೇ ಇರುತ್ತದೆ. ಸ್ಮಾರ್ಟ್‌ಫೋನ್ ಬಳಕೆದಾರರ ಈ ಡಿಜಿಲಾಕರ್ ಆ್ಯಪ್ ಬಳಸುತ್ತಿರುತ್ತಾರೆ. ಡ್ರೈವಿಂಗ್ ಲೆಸೆನ್ಸ್, ಪಾನ್ ಕಾರ್ಡ್, ಆಧಾರ್ ಸೇರಿದಂತೆ ಎಲ್ಲವನ್ನೂ ಡಿಜಿಟಲ್ ಆಗಿ ಸ್ಟೋರ್ ಮಾಡಲು ಇದು ಅವಕಾಶ ಕಲ್ಪಿಸುತ್ತದೆ. ಡಿಜಿಲಾಕರ್ ಕೇಂದ್ರ ಸರ್ಕಾರದ ಪ್ರಾಯೋಜಿತ ಸೇವೆಯಾದ್ದರಿಂದ ಅದಕ್ಕೆ ಅಧಿಕೃತ ಮಾನ್ಯತೆ ಇದೆ. ಈ ಸಂಗತಿಗಳು ಬಹುತೇಕರಿಗೆ ಗೊತ್ತೇ ಇರುತ್ತದೆ. ಆದರೆ ಗೊತ್ತಿಲ್ಲದಿರುವ ಸಂಗತಿಯನ್ನು ನಿಮಗೆ ಹೇಳುತ್ತೇವೆ ಬನ್ನಿ…(WhatsApp)

ಡಿಜಿಲಾಕರ್ ತನ್ನ ಡಿಜಿಟಲ್ ಇಂಡಿಯಾ ಉಪಕ್ರಮದ ಅಡಿಯಲ್ಲಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಒದಗಿಸಿದ ಭಾರತೀಯ ಡಿಜಿಟೈಸೇಶನ್ ಆನ್‌ಲೈನ್ ಸೇವೆಯಾಗಿದೆ. ಹಾಗಾಗಿ, ಡಿಜಿಲಾಕರ್ ಆ್ಯಪ್ ಬಳಕೆ ಡಿಜಿಟಲ್ ಅಧಿಕೃತೆಯನ್ನು ಸಾರುತ್ತದೆ. ಡಿಜಿಲಾಕರ್‌ನಲ್ಲಿರುವ ನಿಮ್ಮ ಡಾಕ್ಯುಮೆಂಟ್‌ಗಳನ್ನು ವಾಟ್ಸಾಪ್ ಮೂಲಕ ಪಡೆದುಕೊಳ್ಳಬಹುದು!

ಯೆಸ್… ಡಿಜಿಲಾಕರ್ ಆ್ಯಪ್‌ ಅಕ್ಸೆಸ್ ಮಾಡದೇ, ವಾಟ್ಸಾಪ್ ಮೂಲಕವೇ ಡಾಕ್ಯುಮೆಂಟ್ ಪಡೆದುಕೊಂಡು ಟೈಮ್ ಉಳಿತಾಯ ಮಾಡಬಹುದು ಮತ್ತು ಇದು ತುಂಬ ಈಜೀ ಕೂಡ. ಹಾಗಿದ್ದರೆ, ವಾಟ್ಸಾಪ್ ಮೂಲಕ ಡಿಜಿಲಾಕರ್‌ನಿಂದ ಡಾಕ್ಯುಮೆಂಟ್‌ ಪಡೆದುಕೊಳ್ಳಬಹುದು ನೋಡೋಣ ಬನ್ನಿ. ಆದರೆ, ಅದಕ್ಕಿಂತ ಮೊದಲು ಡಿಜಿಲಾಕರ್ ಅಂದ್ರೆ ಏನು ತಿಳಿದುಕೊಳ್ಳೋಣ.

ಏನಿದು ಡಿಜಿಲಾಕರ್?

ಭಾರತ ಸರ್ಕಾರವು ಡಿಜಿಟಲ್ ಇಂಡಿಯಾ ಯೋಜನೆಯಡಿ ಒದಗಿಸಿದ ಒಂದು ಡಿಜಿಟಲ್ ಸೇವೆಯಾಗಿದೆ. ಈ ಸೇವೆಯನ್ನು ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಇನ್ಫಾರ್ಮೇಷನ್ ಆ್ಯಂಡ್ ಟೆಕ್ನಾಲಜಿ ಸಚಿವಾಲಯವು ನಿರ್ವಹಣೆ ಮಾಡುತ್ತದೆ. ಇನ್ನೂ ಸರಳವಾಗಿ ಹೇಳಬೇಕೆಂದರೆ, ನಾಗರಿಕರ ಅಗತ್ಯ ದಾಖಲೆಗಳ ಡಿಜಿಟಲ್ ಸಂಗ್ರಹಕ್ಕೆ ಸರ್ಕಾರವೇ ಅಧಿಕೃತವಾಗಿ ಒದಗಿಸಿದ ಡಿಜಿಟಲ್ ವೇದಿಕೆಯೇ ಡಿಜಿಲಾಕರ್.

ವಾಟ್ಸಾಪ್ ಮೂಲಕ ಡಾಕ್ಯುಮೆಂಟ್ಸ್ ಪಡೆದುಕೊಳ್ಳುವುದು ಹೀಗೆ…

ಮೊದಲಿಗೆ 9013151515 ನಂಬರ್ ಅನ್ನು ನಿಮ್ಮ ಮೊಬೈಲ್ ಮೈಗೌ ಹೆಲ್ಪ್ ಡೆಸ್ಕ್(MyGov Helpdesk) ಎಂದು ಸೇವ್ ಮಾಡಿಕೊಳ್ಳಿ. ಕೆಲವೊಮ್ಮೆ ನಿಮಗೆ ಗೊತ್ತಿಲ್ಲದೇ ಈ ನಂಬರ್, ನಿಮ್ಮ ಫೋನಿನಲ್ಲಿ ವಾಟ್ಸಾಪ್ ಅಲರ್ಟ್ ಎಂಬ ಹೆಸರಿನಲ್ಲಿ ಸೇವ್ ಆಗಿರುವ ಸಾಧ್ಯತೆಯೂ ಇರುತ್ತದೆ. ಗಮನಿಸಿ.

ನಂಬರ್ ಸೇವ್ ಮಾಡಿದ ಬಳಿಕ, ವಾಟ್ಸಾಪ್ ತೆರೆಯರಿ ಮತ್ತು ಸರ್ಚ್‌ನಲ್ಲಿ ಮೈಗೌ ಹೆಲ್ಪ್ ಡೆಸ್ಕ್ ಎಂದು ಸರ್ಚ್ ಮಾಡಿ. ಆಗ ಚಾಟ್‌ನಲ್ಲಿ ಡಿಜಿಲಾಕರ್ ಎಂದು ಟೈಪ್ ಮಾಡಿ. ತಕ್ಷಣವೇ ನಿಮಗೆ ನಮಸ್ತೆ ಅಥವಾ ಹಾಯ್ ಎಂಬ ಮೆಸೇಜ್ ಬರುತ್ತದೆ. ಆಗ, ಲಭ್ಯವಿರುವ ಆಯ್ಕೆಗಳು ಕಾಣಿಸುತ್ತವೆ. ನೀವು ಡಿಜಿಲಾಕರ್ ಖಾತೆಯನ್ನು ಹೊಂದಿದ್ದಿರಾ ಅಂತಾ ಕೇಳುತ್ತದೆ. ಆ ಪ್ರಶ್ನೆಗೆ ಯೆಸ್ ಎನ್ನುವ ಆಯ್ಕೆಯನ್ನು ಸೆಲೆಕ್ಟ್ ಮಾಡಿ. ಇದಕ್ಕೂ ಮೊದಲು ನೀವು ಮೈಗೌ(MyGov)ನಲ್ಲಿ ನೋಂದಣಿಯಾಗಿದ್ದಿರಾ ಎಂದು ಕೇಳುತ್ತದೆ. ಒಂದೊಮ್ಮೆ ಇಲ್ಲ ಎಂದಾದರೆ, ಚಾಟ್‌ನಲ್ಲಿ ಕೇಳುವ ಅಂದರೆ, ನಿಮ್ಮ ಹೆಸರು, ನಿಮ್ಮ ರಾಜ್ಯ ಇತ್ಯಾದಿ ಮಾಹಿತಿಯನ್ನು ಕೇಳುತ್ತದೆ. ಅದಕ್ಕೆ ಆನ್ಸರ್ ಮಾಡಿ. ಬಳಿಕ ಒಟಿಪಿ ಬರುತ್ತದೆ. ಅದನ್ನು ಚಾಟ್ ಬಾಕ್ಸ್‌ನಲ್ಲಿ ಮೆನ್ಷನ್ ಮಾಡಿದ್ರೆ ಅಲ್ಲಿಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

ಬಳಿಕ, ವಾಟ್ಸಾಪ್‌ ಚಾಟ್‌ನಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಲು ಕೇಳುತ್ತದೆ. ಆಗ ನಿಮ್ಮ 12 ಸಂಖ್ಯೆಯುಳ್ಳ ಆಧಾರ್ ನಂಬರ್ ನಮೂದಿಸಿ. ಬಳಿಕ ನೋಂದಾಯಿತ ನಿಮ್ಮ ಮೊಬೈಲ್‌ಗೆ ಒಟಿಪಿ ಬರುತ್ತದೆ. ಆಧಾರ್‌ನೊಂದಿಗೆ ಲಿಂಕ್ ಆಗಿರುವ ನಿಮ್ಮ ಎಲ್ಲ ಡಾಕ್ಯುಮೆಂಟ್ ಪಡೆಯಲು ಈ ಒಟಿಪಿಯನ್ನು ನಮೂದಿಸಬೇಕಾಗುತ್ತದೆ.

ಅಂತಿಮವಾಗಿ ನಿಮಗೆ ಬೇಕಾಗಿರುವ ಡಾಕ್ಯುಮೆಂಟ್ ಮೇಲೆ ಕ್ಲಿಕ್ ಮಾಡಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಿ. ವಾಟ್ಸಾಪ್ ಮೂಲಕ ಡಿಜಿಲಾಕರ್ ಡಾಕ್ಯುಮೆಂಟ್ ಪಡೆದುಕೊಳ್ಳುವುದರಿಂದ ನಿಮ್ಮ ಸಮಯ ಉಳಿತಾಯವಾಗುತ್ತದೆ. ಅಲ್ಲದೇ ಅತ್ಯಂತ ಸರಳವಾಗಿ ದಾಖಲೆಪತ್ರಗಳನ್ನು ಪಡೆದುಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ.

Continue Reading

ಕರ್ನಾಟಕ

ಈಗ ಕಾರವಾರ, ಹಾವೇರಿ, ರಾಣೆಬೆನ್ನೂರು ನಗರಗಳಲ್ಲಿ Jio True 5G ಸೇವೆ ಲಭ್ಯ

ಕರ್ನಾಟಕದ ಹಾವೇರಿ(haveri), ರಾಣೆಬೆನ್ನೂರು (Ranebennur) ಮತ್ತು ಕಾರವಾರಗಳಲ್ಲಿ(karwar) ರಿಲಯನ್ಸ್ ತನ್ನ ಜಿಯೋ 5ಜಿ ಸೇವೆಯನ್ನು ಆರಂಭಿಸಿದೆ. ಇದರೊಂದಿಗೆ ದೇಶಾದ್ಯಂತ ಒಟ್ಟು 365 ನಗರಗಳಲ್ಲಿ ಈಗ ಜಿಯೋ ಟ್ರೂ 5ಜಿ ಸೇವೆ ದೊರೆಯುತ್ತಿದೆ(Jio True 5G).

VISTARANEWS.COM


on

Edited by

Jio True 5G launched at karwar haveri and Ranebennur
Koo

ಬೆಂಗಳೂರು, ಕರ್ನಾಟಕ: ರಿಲಯನ್ಸ್ ಜಿಯೋ ಈಗ ಕಾರವಾರ(karwar), ರಾಣೆಬೆನ್ನೂರು(Ranebennur), ಹಾವೇರಿಯಲ್ಲಿ (haveri) ಜಿಯೋ ಟ್ರೂ 5ಜಿ ಸೇವೆ ಮಾರ್ಚ್ 15ರಿಂದ ಆರಂಭಿಸಿದೆ(Jio True 5G). ಕರ್ನಾಟಕದ ಈ 3 ನಗರ ಸೇರಿದಂತೆ ದೇಶದ ಹತ್ತು ರಾಜ್ಯಗಳ, ಒಟ್ಟು 34 ಹೊಸ ನಗರಗಳಲ್ಲಿ ತನ್ನ ಟ್ರೂ 5G ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ರಿಲಯನ್ಸ್ ಜಿಯೋದಿಂದ ಟ್ರೂ 5ಜಿ ಸೇವೆಗಳನ್ನು ಆರಂಭಿಸಿದ ಇತರ ನಗರಗಳು ಹೀಗಿವೆ ಆಂಧ್ರಪ್ರದೇಶದ ಅಮಲಾಪುರಂ, ಧರ್ಮಾವರಂ, ಕವಲಿ, ತನುಕು, ತುನಿ, ವಿನುಕೊಂಡ, ಹರಿಯಾಣದ ಭಿವಾನಿ, ಜಿಂದ್, ಕೈತಾಲ್, ರೇವಾರಿ, ರೇವಾರಿ, ಹಿಮಾಚಲ ಪ್ರದೇಶದ ಧರ್ಮಶಾಲಾ, ಕಾಂಗ್ರಾ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ, ಕಥುವಾ, ಕತ್ರಾ, ಸೋಪೋರ್, ಕೇರಳದ ಅಟ್ಟಿಂಗಲ್, ಮೇಘಾಲಯದ ತುರಾ, ಒಡಿಶಾದ ಭವಾನಿಪಟ್ನಾ, ಜತಾನಿ, ಖೋರ್ಧಾ, ಸುಂದರ್‌ಗಢ, ತಮಿಳುನಾಡಿನ ಅಂಬೂರ್, ಚಿದಂಬರಂ , ನಾಮಕ್ಕಲ್, ಪುದುಕೋಟ್ಟೈ, ರಾಮನಾಥಪುರಂ, ಶಿವಕಾಶಿ, ತಿರುಚೆಂಗೋಡ್, ವಿಲುಪ್ಪುರಂ ಹಾಗೂ ತೆಲಂಗಾಣದ ಸೂರ್ಯಪೇಟ್ ನಲ್ಲಿ ಲಭ್ಯ ಇದೆ. ಇದರೊಂದಿಗೆ ದೇಶದ 365 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆಗಳು ಲಭ್ಯ ಆಗಲಿವೆ.

ಅಂದಹಾಗೆ, ಈ ಮೇಲ್ಕಂಡ ನಗರಗಳ ಪೈಕಿ ಬಹುತೇಕ ನಗರಗಳಲ್ಲಿ ಟ್ರೂ 5ಜಿ ಸೇವೆಗಳನ್ನು ಆರಂಭಿಸಿದ ಮೊದಲ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋ ಆಗಿದೆ. ಟೆಲಿಕಾಂ ಆಪರೇಟರ್ ಜಿಯೋ ಭಾರತದ ಡಿಜಿಟಲ್ ರೂಪಾಂತರದ ಕಡೆಗೆ ಕೆಲಸ ಮಾಡುತ್ತಿದೆ. ಇಂದಿನಿಂದ ಹೆಚ್ಚಿನ ವೇಗದ, ಲೋ- ಲೇಟೇನ್ಸಿ, ಅದ್ವಿತೀಯ ಟ್ರೂ 5ಜಿ ಸೇವೆಗಳ ತಾಂತ್ರಿಕ ಪ್ರಯೋಜನಗಳನ್ನು ಈ ನಗರಗಳ ಜನರು ಮತ್ತು ವ್ಯವಹಾರಗಳಿಗೆ ಲಭ್ಯವಾಗುವಂತೆ ಮಾಡಲಾಗುತ್ತದೆ. ಪ್ರವಾಸೋದ್ಯಮ, ಉತ್ಪಾದನೆ, ಎಸ್ ಎಂಇಗಳು, ಆಡಳಿತ, ಶಿಕ್ಷಣ, ಆರೋಗ್ಯ, ಕೃಷಿ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್ ಮತ್ತು ಐಟಿ ಈ ಕ್ಷೇತ್ರಗಳಲ್ಲಿ ಹೊಸ ಬೆಳವಣಿಗೆಯ ಅವಕಾಶಗಳನ್ನು ತೆರೆಯುತ್ತದೆ.

ಈ ಆರಂಭದ ಬಗ್ಗೆ ಪ್ರತಿಕ್ರಿಯಿಸಿದ ಜಿಯೋ ವಕ್ತಾರರು, “ಈ 34 ನಗರಗಳಲ್ಲಿ ಜಿಯೋ ಟ್ರೂ 5ಜಿ ಅನ್ನು ಆರಂಭಿಸಲು ನಾವು ಹೆಮ್ಮೆಪಡುತ್ತೇವೆ. ಜಿಯೋ ಟ್ರೂ 5ಜಿ ತಂತ್ರಜ್ಞಾನದ ಪ್ರಯೋಜನಗಳನ್ನು ಆನಂದಿಸಲು ಪ್ರಾರಂಭಿಸುವ ಈ ನಗರಗಳಲ್ಲಿನ ಲಕ್ಷಾಂತರ ಜಿಯೋ ಬಳಕೆದಾರರಿಗೆ ಇದು ಗೌರವವಾಗಿದೆ. ಪ್ರತಿ ಭಾರತೀಯನಿಗೂ ಟ್ರೂ-5ಜಿ ಅನ್ನು ತಲುಪಿಸಲು ಜಿಯೋ ಇಂಜಿನಿಯರ್‌ಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಇದರಿಂದಾಗಿ ಈ ತಂತ್ರಜ್ಞಾನದ ಪರಿವರ್ತನಾ ಶಕ್ತಿ ಮತ್ತು ಅಮೋಘ ಪ್ರಯೋಜನಗಳನ್ನು ದೇಶದ ಪ್ರತಿ ನಾಗರಿಕರು ಅನುಭವಿಸಬಹುದು.

ಇದನ್ನೂ ಓದಿ: ರಾಮನಗರ, ಭದ್ರಾವತಿ, ದೊಡ್ಡಬಳ್ಳಾಪುರ, ಚಿಂತಾಮಣಿ ನಗರಗಳಲ್ಲಿ Jio True 5G ಶುರು

“2023ರ ಡಿಸೆಂಬರ್ ವೇಳೆಗೆ ಜಿಯೋ ಟ್ರೂ 5ಜಿ ದೇಶದ ಪ್ರತಿ ಪಟ್ಟಣವನ್ನು ತಲುಪಲಿದೆ. ಭಾರತವನ್ನು ಡಿಜಿಟಲ್ ಸೊಸೈಟಿಯನ್ನಾಗಿ ಪರಿವರ್ತಿಸುವ ಜಿಯೋ ಬದ್ಧತೆಗೆ ಇದು ಸಾಕ್ಷಿಯಾಗಿದೆ. ತಮ್ಮ ಪ್ರದೇಶಗಳನ್ನು ಡಿಜಿಟಲೈಸ್ ಮಾಡುವುದಕ್ಕೆ ಬೆಂಬಲ ನೀಡಿದ ರಾಜ್ಯ ಸರ್ಕಾರಗಳು ಮತ್ತು ಆಡಳಿತಗಾರರಿಗೆ ನಾವು ಕೃತಜ್ಞರಾಗಿರುತ್ತೇವೆ,” ಎಂದಿದ್ದಾರೆ.

Continue Reading
Advertisement
Man killed in attack with deadly weapons near Kaveripatnam
ಕರ್ನಾಟಕ3 mins ago

Murder Case: ಕಾವೇರಿಪಟ್ಟಣಂ ಬಳಿ ಹಾಡಹಗಲೇ ತಲ್ವಾರ್‌ನಿಂದ ಕೊಚ್ಚಿ ಯುವಕನ ಕೊಲೆ

smartphone
ವಾಣಿಜ್ಯ10 mins ago

Smartphone Export : ಭಾರತದಿಂದ 2 ತಿಂಗಳಲ್ಲಿ ದಾಖಲೆಯ 16,500 ಕೋಟಿ ರೂ. ಮೌಲ್ಯದ ಸ್ಮಾರ್ಟ್‌ಫೋನ್‌ ರಫ್ತು

vistara-top-10-news-siddaramaiah-constituency-confusion-continues-to-congress-first-list-on-wednesday-and-more-news
ಕರ್ನಾಟಕ15 mins ago

ವಿಸ್ತಾರ TOP 10 NEWS: ಸಿದ್ದರಾಮಯ್ಯ ಕ್ಷೇತ್ರ ಗೊಂದಲದಿಂದ, ಕೇಂದ್ರ ಸರ್ಕಾರಕ್ಕೆ 155 ಲಕ್ಷ ಕೋಟಿ ರೂ. ಸಾಲದವರೆಗಿನ ಪ್ರಮುಖ ಸುದ್ದಿಗಳಿವು

Jio True 5G service launched in 41 cities including KGF's robertsonpet
ಕರ್ನಾಟಕ23 mins ago

ಕೆಜಿಎಫ್‌ನ ರಾಬರ್ಟಸನ್ ಪೇಟೆ ಸೇರಿ 41 ನಗರಗಳಲ್ಲಿ Jio True 5G ಸೇವೆ ಶುರು

Had Kohli not appealed, he would not have applied for the post of head coach
ಕ್ರಿಕೆಟ್37 mins ago

Team India : ಕೊಹ್ಲಿ ಮನವಿ ಮಾಡದೇ ಹೋಗಿದ್ದರೆ ಹೆಡ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ​

Man Dips Leafy Vegetables In Chemical Solution, Here is a video
ದೇಶ45 mins ago

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

ಸಿನಿಮಾ50 mins ago

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

inflation
ವಾಣಿಜ್ಯ52 mins ago

Retail inflation : ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಆರ್‌ಬಿಐ ಕಳವಳ

Delhi team won the toss against UP and chose fielding
ಕ್ರಿಕೆಟ್54 mins ago

WPL 2023 : ಯುಪಿ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ತಂಡದಿಂದ ಫೀಲ್ಡಿಂಗ್ ಆಯ್ಕೆ

savadatti accident
ಕರ್ನಾಟಕ58 mins ago

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ3 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ7 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ8 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!