Best Places to visit in September in India : ಸೆಪ್ಟೆಂಬರ್‌ನಲ್ಲಿ ಪ್ರವಾಸಕ್ಕೆ ಸೂಕ್ತವಾದ ರಮಣೀಯ ಸ್ಥಳಗಳಿವು - Vistara News

ಪ್ರವಾಸ

Best Places to visit in September in India : ಸೆಪ್ಟೆಂಬರ್‌ನಲ್ಲಿ ಪ್ರವಾಸಕ್ಕೆ ಸೂಕ್ತವಾದ ರಮಣೀಯ ಸ್ಥಳಗಳಿವು

ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ ಪ್ರವಾಸ ಮಾಡಲು ಸೂಕ್ತವಾದ ಸ್ಥಳಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಪ್ರವಾಸಕ್ಕೆ ಪ್ಲ್ಯಾನ್‌ ಮಾಡಿ.

VISTARANEWS.COM


on

best place to visit in september
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೆಪ್ಟೆಂಬರ್‌ ಎಂದರೆ ಮಳೆಗಾಲ ಕೊಂಚ ಕಡಿಮೆಯಾಗಿ ಚಳಿಗಾಲದತ್ತ ಕಾಲಿಡುವ ಕಾಲ. ಆ ಸಮಯದಲ್ಲಿ (Best Places to visit in September in India) ಪ್ರವಾಸ ಮಾಡುವುದು ಹಲವರಿಗೆ ಇಷ್ಟವಾಗುತ್ತದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಯಾವ ಊರಿಗೆ ಪ್ರವಾಸ ಹೋಗೋಣ ಎನ್ನುವ ಯೋಚನೆಯನ್ನು ನೀವು ಮಾಡುತ್ತಿರಬಹುದು. ಅದಕ್ಕೆಂದೇ ನಾವಿಲ್ಲಿ ನಿಮಗಾಗಿ ಮಾಹಿತಿಗಳನ್ನು ಸಂಗ್ರಹಿಸಿದ್ದೇವೆ. ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ ಪ್ರವಾಸ ಮಾಡಲು ಸೂಕ್ತವಾದ ಸ್ಥಳಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಕಾಲಿಂಪಾಂಗ್‌


ಪಶ್ಚಿಮ ಬಂಗಾಳದಲ್ಲಿ ಕಾಲಿಂಪಾಂಗ್‌ ಹೆಸರಿನ ಸ್ಥಳವಿದೆ. ಇದು ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆಯಲ್ಲಿ ಶ್ರೀಮಂತವಾದ ಹಿಮಾಲಯನ್‌ ಪಟ್ಟಣವಾಗಿದೆ. 18ನೇ ಶತಮಾನದ ಆರಂಭದಲ್ಲಿ ಭೂತಾನ್‌ ರಾಜರು ಈ ಜಾಗವನ್ನು ಸ್ವಾಧೀನಪಡಿಸಿಕೊಳ್ಳುವವರೆಗೂ ಇದು ಸಿಕ್ಕಿಂ ರಾಜನ ಆಸ್ತಿಯ ಭಾಗವಾಗಿತ್ತು. 1865 ರಲ್ಲಿ, ಆಂಗ್ಲೋ-ಭೂತಾನ್ ಯುದ್ಧದ ನಂತರ, ಕಾಲಿಂಪಾಂಗ್ ಅನ್ನು ಡಾರ್ಜಿಲಿಂಗ್‌ಗೆ ಸೇರಿಸಲಾಯಿತು. ಡಾರ್ಜಿಲಿಂಗ್‌ನಲ್ಲಿ ಚಹಾ ತೋಟಗಳು ಹೆಚ್ಚಾಗತೊಡಗಿದಂತೆ ಕಾಲಿಂಪಾಂಗ್‌ ಕೂಡ ಕಾರ್ಮಿಕರ ನೆಲೆಯಾಗತೊಡಗಿತು. ಇಲ್ಲಿ ಡಿಯೊಲೊ ಹಿಲ್‌, ಕಾಲಿಂಪಾಂಗ್‌ ವಿಜ್ಞಾನ ಕೇಂದ್ರ, ಪೈನ್‌ ವ್ಯೂವ್‌ ನರ್ಸರಿ, ಡಾ.ಗ್ರಹಂ ಮನೆ, ದುರ್ಪಿನ್‌ ದಾರಾ ಹಿಲ್‌, ಮಂಗಲ್‌ ಧಾಮ್‌ ದೇವಸ್ಥಾನವಿದ್ದು, ಈ ಎಲ್ಲ ಸ್ಥಳಗಳಿಗೆ ನೀವು ಭೇಟಿ ನೀಡಬಹುದು.

ದೂವರ್ಸ್‌


ದೂವರ್ಸ್‌ ಪಶ್ಚಿಮ ಬಂಗಾಳದ ಅದ್ಭುತ ನಗರಗಳಲ್ಲಿ ಒಂದು. ಈ ನಗರದಲ್ಲಿ ನಿಮಗೆ ಅತ್ಯದ್ಭುತವಾದ ನಿಸರ್ಗ ಸೌಂದರ್ಯವನ್ನು ಹೊಂದಿರುವಂತಹ ಸಣ್ಣ ಸಣ್ಣ ಗ್ರಾಮಗಳು ಸಿಗುತ್ತವೆ. ಇಲ್ಲಿ ಚಹಾ ತೋಟಗಳು, ವನ್ಯಜೀವಿ ಅಭಯಾರಣ್ಯಗಳು, ರಾಷ್ಟ್ರೀಯ ಉದ್ಯಾನಗಳು ಹಾಗೆಯೇ ಮನಸೂರೆಗೊಳಿಸುವ ಹಿಮಾಲಯದ ಪರ್ವತಗಳ ಬ್ಯಾಕ್‌ಗ್ರೌಂಡ್‌ ಅನ್ನೂ ನೀವಿಲ್ಲಿ ಕಾಣಬಹುದು. ನಿಸರ್ಗ ಪ್ರೇಮಿಗಳಿಗೆ ಈ ಸ್ಥಳ ಅತಿ ಇಷ್ಟವಾಗುವ ಸ್ಥಳವಾಗಿದೆ. ಇಲ್ಲಿ ನೀವು ಏಲಕ್ಕಿ ಪ್ಲಾಂಟೇಶನ್‌ಗಳನ್ನೂ ಕಾಣಬಹುದು. ಛಪ್ರಮರಿ ವನ್ಯಜೀವಿ ಅಭಯಾರಣ್ಯ, ಗೊರುಮರ ರಾಷ್ಟ್ರೀಯ ಉದ್ಯಾನವನ, ಛಿಲಪಾತ ಅರಣ್ಯಕ್ಕೆ ಭೇಟಿ ನೀಡಲು ಮರೆಯದಿರಿ.

ದಮನ್‌ ಮತ್ತು ದಿಯು


ನೀವು ಕಡಲ ಕಿನಾರೆಯನ್ನು ಇಷ್ಟಪಡುವಂತವರಾದರೆ ದಮನ್‌ ಮತ್ತು ದಿಯು ಕಡೆ ಪ್ರವಾಸವನ್ನು ಪ್ಲ್ಯಾನ್‌ ಮಾಡಿಕೊಳ್ಳಿ. ಪೋರ್ಚುಗೀಸರ ಶ್ರೀಮಂತ ಇತಿಹಾಸವಿರುವ ದ್ವೀಪಗಳಿವು. ಗುಜರಾತ್‌ನ ಸೌರಾಷ್ಟ್ರ ಬಂದರಿಗೆ ಹತ್ತಿರದಲ್ಲೇ ಈ ದ್ವೀಪಗಳಿವೆ. ಇಲ್ಲಿ ಪೋರ್ಚುಗೀಸ್‌ ಸಂಸ್ಕೃತಿಯ ಜತೆ ಗುಜರಾತಿ ಸಂಸ್ಕೃತಿ ಮಿಶ್ರವಾಗಿರುವುದನ್ನು ನೀವು ಕಾಣಬಹುದು. ಸೆಪ್ಟೆಂಬರ್‌ ಸಮಯದಲ್ಲಂತೂ ಇಲ್ಲಿನ ಹವಾಮಾನ ಎಲ್ಲರಿಗೂ ಇಷ್ಟವಾಗುತ್ತದೆ. ಇಲ್ಲಿ ನೀವು ಗೋಮ್ತಿಮಾತಾ ಬೀಚ್‌ಗೆ ಹೋಗಬಹುದು ಹಾಗೆಯೇ ನಾಯ್ಡಾ ಗುಹೆ, ಸೀಶೆಲ್ಸ್‌ ಮ್ಯೂಸಿಯಂ ಅನ್ನು ಎಕ್ಸ್‌ಪ್ಲೋರ್‌ ಮಾಡಬಹುದು. ಇಲ್ಲಿಂದ ನೀವು ಸೇಂಟ್‌ ಪೌಲ್‌ ಚರ್ಚ್‌, ನಾಗೋವ ಬೀಚ್‌, ದಿಯು ಕೋಟೆ ಸೇರಿ ಅನೇಕ ತಾಣಗಳಿಗೆ ಭೇಟಿ ನೀಡಬಹುದು.

ತರ್ಕಾಲಿ


ಮಹಾರಾಷ್ಟ್ರದ ಇನ್ನೊಂದು ಪ್ರಸಿದ್ಧ ಪ್ರವಾಸಿ ತಾಣವೆಂದರೆ ಅದು ತರ್ಕಾಲಿ. ಇಲ್ಲಿ ಬೆಟ್ಟ ಗುಡ್ಡಗಳು, ಸ್ವಚ್ಛವಾದ ಬೀಚ್‌ಗಳು, ಧುಮ್ಮಿಕ್ಕಿ ಹರಿಯುವ ಜಲಪಾತವನ್ನು ಕಾಣಬಹುದು. ಮಳೆಗಾಲ ಮುಗಿಯುವ ಸಮಯದಲ್ಲಂತೂ ತರ್ಕಾಲಿ ಸಂಪೂರ್ಣವಾಗಿ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುತ್ತದೆ. ಇಲ್ಲಿ ಹಲವಾರು ವಾಟರ್‌ ಗೇಮ್ಸ್‌ಗಳನ್ನೂ ಆಡುವುದಕ್ಕೆ ಅವಕಾಶವಿದೆ. ಇಲ್ಲಿಂದ ನೀವು ಸಿಂಧುದುರ್ಗ ಕೋಟೆ, ಕರ್ಲಿ ಹಿನ್ನೀರು, ಡಿಯೋಗರ್‌, ಸುನಾಮಿ ದ್ವೀಪಕ್ಕೆ ಭೇಟಿ ನೀಡಬಹುದು.

ಜಿರೊ


ಅರುಣಾಚಲ ಪ್ರದೇಶದಲ್ಲಿ ಸಿಗುವ ಸುಂದರವಾದ ಪ್ರವಾಸಿ ತಾಣಗಳಲ್ಲಿ ಒಂದು ಜಿರೊ. ಇದು ಈಶಾನ್ಯದಲ್ಲಿನ ಅತ್ಯಂತ ಹಳೆಯ ನಗರ ಎಂದೂ ಕರೆಸಿಕೊಳ್ಳುತ್ತದೆ. ಏಕಾಂತವಾಗಿ ಮನಸ್ಸಿಗೆ ನೆಮ್ಮದಿ ತಂದುಕೊಳ್ಳಬೇಕು ಎಂದುಕೊಳ್ಳುವವರು ಇಲ್ಲಿಗೆ ಪ್ರಯಾಣ ಮಾಡಬಹುದು. ಇಲ್ಲಿನ ಹಚ್ಚ ಹಸಿರಿನ ಕಾಡು, ತಂಗಾಳಿ ಇಲ್ಲಿನ ಆದಿವಾಸಿ ಜನರ ಜೀವನ ಎಲ್ಲವೂ ನಿಮಗೆ ಹಿತವೆನಿಸುತ್ತವೆ. ಇಲ್ಲಿ ಟ್ಯಾಲಿ ವ್ಯಾಲಿ ವನ್ಯಜೀವಿ ಅಭಯಾರಣ್ಯವಿದ್ದು, ಅಲ್ಲಿ ನೀವು ಚಿರತೆಗಳನ್ನು ಕಾಣಬಹುದು. ಇಲ್ಲಿ ನೀವು ಕಿಲೆ ಪಖೋ, ಟ್ರೈನ್‌ ಫಿಶ್‌ ಫಾರ್ಮ್‌, ಮೇಘನಾ ಕೇವ್‌ ಟೆಂಪಲ್‌, ಆರ್ಚಿಡ್‌ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಲು ಮರೆಯದಿರಿ.

ಅಮೃತಸರ


ಗೋಲ್ಡನ್‌ ಟೆಂಪಲ್‌ಗೆ ಪ್ರಸಿದ್ಧವಾಗಿರುವ ಅಮೃತಸರ ಕೂಡ ಸೆಪ್ಟೆಂಬರ್‌ ತಿಂಗಳಲ್ಲಿ ಪ್ರವಾಸಕ್ಕೆ ಸೂಕ್ತವಾದ ಸ್ಥಳವಾಗಿದೆ. ಸಂಸ್ಕೃತಿ, ಧಾರ್ಮಿಕತೆ, ಆಹಾರ, ಸಂಪ್ರದಾಯ ಎಲ್ಲ ವಿಚಾರದಲ್ಲೂ ಈ ನಗರ ವಿಶೇಷವಾಗಿದೆ. ಇಲ್ಲಿಗೆ ದೇಶದ ಪ್ರವಾಸಿಗರಷ್ಟೇ ಅಲ್ಲದೆ ವಿದೇಶಿ ಪ್ರವಾಸಿಗರೂ ಬರುತ್ತಿರುತ್ತಾರೆ. ಇಲ್ಲಿಗೆ ಹೋದ ಮೇಲೆ ನೀವು ಇತಿಹಾಸ ಪ್ರಸಿದ್ಧ ಜಲಿಯನ್‌ವಾಲಾ ಬಾಗ್‌, ಶ್ರೀ ಹರ್ಮಿಂದರ್‌ ಸಾಹಿಬ್‌, ದುರ್ಗಿಯಾನಾ ದೇವಸ್ಥಾನ, ಪಾರ್ಟಿಶನ್‌ ಮ್ಯೂಸಿಯಂ, ಮಂದಿರ್‌ ಮಾತಾ ಲಾಲ್‌ ದೇವಿ, ಗೋಬಿಂದ್‌ಗರ್‌ ಕೋಟೆಯನ್ನು ನೋಡಲೇಬೇಕು.

ಶ್ರೀನಗರ


ಭೂಮಿಯ ಮೇಲಿನ ಸ್ವರ್ಗವನ್ನು ನೋಡಬೇಕೆಂದರೆ ನೀವು ಶ್ರೀನಗರಕ್ಕೆ ಹೋಗಬೇಕು. ಸೆಪ್ಟೆಂಬರ್‌ನಲ್ಲಿ ಮಳೆಗಾಲವೂ ಮುಗಿದಿರುತ್ತದಾದ್ದರಿಂದ ಶ್ರೀನಗರ ಒಂದು ರೀತಿಯಲ್ಲಿ ಮಂಜಿನ ನಗರದಂತೆ ಕಾಣಿಸಿಕೊಳ್ಳುತ್ತದೆ. ದೇಶದ ಎರಡನೇ ಅತಿ ದೊಡ್ಡ ಸರೋವರ ಎನ್ನುವ ಖ್ಯಾತಿಯ ದಾಲ್‌ ಸರೋವರವನ್ನು ನೀವಿಲ್ಲಿ ಕಾಣಬಹುದು. ಅದೊಂದೇ ಅಲ್ಲದೆ ಹಲವಾರು ಸರೋವರಗಳು, ಹಿಮಾವೃತ ಪರ್ವತಗಳನ್ನು ನೀವಿಲ್ಲಿ ಕಾಣಬಹುದು. ಶಂಕರಾಚಾರ್ಯ ಬೆಟ್ಟ, ನಿಶತ್‌ ಗಾರ್ಡನ್‌, ಸೊನಾಮರ್ಗ್‌, ಇಂದಿರಾ ಗಾಂಧಿ ತುಲಿಪ್‌ ಗಾರ್ಡನ್‌, ಛಸ್ಮೆ ಶಾಹಿ, ನಿಗೀನ್‌ ಸರೋವರ ಸೇರಿ ಇನ್ನೂ ಅನೇಕ ಪ್ರವಾಸಿ ತಾಣಗಳು ಈ ನಗರದಲ್ಲಿವೆ.

ನೀಮ್‌ರಾನ್‌


ರಾಜಸ್ಥಾನದಲ್ಲಿ ಸೆಪ್ಟೆಂಬರ್‌ನಲ್ಲಿ ಭೇಟಿ ನೀಡಬೇಕಾದ ಸ್ಥಳವೆಂದರೆ ಅವರು ನೀಮ್‌ರಾನ್‌. ರಾಜಸ್ಥಾನದ ಅದ್ಧೂರಿತನವನ್ನು ಇಲ್ಲಿಯೂ ಕಾಣಬಹುದು. ಇಲ್ಲಿನ ನೀಮ್‌ರಾನ್‌ ಕೋಟೆಯಲ್ಲಿ ನೀವು ಆ ಅದ್ಧೂರಿತನವನ್ನು ಗಮನಿಸಬಹುದು. ಅದರಲ್ಲೂ ಮಳೆಗಾಲ ಮುಗಿದ ಮೇಲೆ ಸುರಿಯುವ ಸಣ್ಣ ಜರಿಮಳೆಯೇನಾದರೂ ಸುರಿಯುತ್ತಿದ್ದರೆ ಈ ಸ್ಥಳ ನೋಡುವುದಕ್ಕೆ ಅದ್ಭುತವಾಗಿ ಕಾಣುತ್ತದೆ. ಇಲ್ಲಿ ಅಲ್ಲಲ್ಲಿ ಸ್ಥಳೀಯ ಸಂಗೀತ ಕಲಾವಿದರು, ಜಾನಪದ ಕಲಾವಿದರು ಸಂಗೀತ ಕಚೇರಿಗಳನ್ನೂ ನಡೆಸುತ್ತಿರುತ್ತಾರಾದ್ದರಿಂದ ಸಂಗೀತ ಪ್ರಿಯರಿಗೆ ಇಷ್ಟವಾಗುತ್ತದೆ. ಇಲ್ಲಿ ನೀವು ಸರಿಸ್ಕಾ ರಾಷ್ಟ್ರೀಯ ಉದ್ಯಾನವನ, ಸಿಲಿಸೇರ್‌ ಸರೋವರ, ವಿನಯ್ ವಿಲಾಸ್‌ ಮಹಲ್‌, ಬಾಲ ಕಿಲಾ ಮತ್ತು ಪುರಾತನ ವೃಂದಾವನ ಅರಮನೆಯನ್ನು ನೋಡಬಹುದು.

ಗೋವಾ


ಕರ್ನಾಟಕದಲ್ಲಿರುವ ಎಲ್ಲರಿಗೂ ತಿಳಿದಿರುವ ಪ್ರಸಿದ್ಧ ಪ್ರವಾಸಿ ತಾಣ ಗೋವಾ. ಇಲ್ಲಿ ಹಲವಾರು ಬೀಚ್‌ಗಳಿದ್ದು, ಕಡಲ ಕಿನಾರೆಯಲ್ಲಿ ಮಿಂದೆದ್ದು ಎಂಜಾಯ್‌ ಮಾಡಲು ಬಯಸುವವರಿಗೆ ಇದು ಹೇಳಿ ಮಾಡಿಸಿದ ಸ್ಥಳ ಎನ್ನಬಹುದು. ಈ ಮಳೆಗಾಲದ ಸಮಯದಲ್ಲಿ ಬೀಚ್‌ನಲ್ಲಿ ಆಟವಾಡುವುದಕ್ಕೆ ಬಿಡುವುದಿಲ್ಲವಾದ್ದರಿಂದ ನೀವು ಸೆಪ್ಟೆಂಬರ್‌ನಲ್ಲಿ ಗೋವಾ ಟ್ರಿಪ್‌ ಪ್ಲಾನ್‌ ಮಾಡಿಕೊಳ್ಳಬಹುದು. ಇಲ್ಲಿ ನೀವು ಅಗುಂದ ಕೋಟೆ, ಚಪೋರಾ ಕೋಟೆ, ಬಾಮ್‌ ಜೀಸಸ್‌ ಬಸಿಲಿಕ, ಸಲೀಂ ಅಲಿ ಪಕ್ಷಿಗಳ ಅಭಯಾರಣ್ಯ, ಬಾಗಾ ಬೀಚ್‌, ಅಂಜುನಾ ಬೀಚ್‌ ಸೇರಿ ಅನೇಕ ಸ್ಥಳಗಳಿಗೆ ಭೇಟಿ ನೀಡಬಹುದು.

ನೈನಿತಾಲ್‌


ಉತ್ತರಾಖಂಡದ ಕಡೆ ಪ್ರವಾಸ ಹೋಗುವುದಾದರೆ ನೈನಿತಾಲ್‌ಗೆ ಹೋಗುವುದಕ್ಕೆ ಪ್ಲ್ಯಾನ್‌ ಮಾಡಿಕೊಳ್ಳಿ. ಇದು ಆ ರಾಜ್ಯದ ಉತ್ತಮ ಬೆಟ್ಟಗಳ ನಗರಿ. ಇಲ್ಲಿ ಸುಂದರವಾದರ ಸರೋವರಗಳು, ಹಳೆಯ ಕಾಟೇಜ್‌ಗಳು ನಿಮ್ಮನ್ನು ಸೆಳೆಯುತ್ತವೆ. ಅದರಲ್ಲೂ ಸೆಪ್ಟೆಂಬರ್‌ ಸಮಯದಲ್ಲಿನ ಹವಾಮಾನಕ್ಕೆ ಈ ಸ್ಥಳ ಹೇಳಿ ಮಾಡಿಸಿದ್ದು ಎನ್ನಬಹುದು. ಇಲ್ಲಿಂದ ನೀವು ನೈನಿ ಸರೋವರ, ನೈನಿತಾಲ್‌ ಮೃಗಾಲಯ, ನೈನಾ ದೇವಿ ದೇವಸ್ಥಾನ, ಏರಿಯಲ್‌ ರೋಪ್‌ವೇ, ದಿ ಮಾಲ್‌ ರೋಡ್‌, ಎಕೋ ಕೇವ್‌ ಗಾರ್ಡನ್ಸ್‌ ಮತ್ತು ರಾಜ್‌ ಭವನಕ್ಕೆ ಭೇಟಿ ನೀಡಬಹುದು.

ಅಂಡಮಾನ್‌


ಕಡಲ ದಡಗಳಲ್ಲಿ ಕುಳಿತು ಮನಸ್ಸಿಗೆ ನೆಮ್ಮದಿ ತಂದುಕೊಳ್ಳಬೇಕೆನ್ನುವ ಮನಸ್ಸಿದ್ದರೆ ಅಂಡಮಾನ್‌ನತ್ತ ಪ್ರಯಾಣ ಬೆಳೆಸಿ. ಇದು ಒಂದು ರೀತಿಯಲ್ಲಿ ಮನಮೋಹಕವಾದ ದ್ವೀಪವಾಗಿದೆ. ಇಲ್ಲಿ ನೀವು ಸೂರ್ಯೋದಯ, ಸೂರ್ಯಾಸ್ತಮಾನದ ವಿಹಂಗಮ ನೋಟವನ್ನು ಕಣ್ತುಂಬಿಸಿಕೊಳ್ಳುವುದಷ್ಟೇ ಅಲ್ಲದೆ ಹಲವಾರು ರೀತಿಯ ವಾಟರ್‌ ಗೇಮ್ಸ್‌ಗಳನ್ನು ಆಡಬಹುದು. ಇಲ್ಲಿ ನೀವು ಹ್ಯಾವ್ಲಾಕ್ ದ್ವೀಪ, ನೀಲ್ ದ್ವೀಪ, ರಾಸ್ ದ್ವೀಪ, ನಾರ್ತ್ ಬೇ ಐಲ್ಯಾಂಡ್, ಬಾರಾತಂಗ್ ದ್ವೀಪ, ಮೌಂಟ್ ಹ್ಯಾರಿಯೆಟ್ ರಾಷ್ಟ್ರೀಯ ಉದ್ಯಾನವನ, ಚಿಧಿಯಾ ಟಪ್ಪು, ಧನಿನಲ್ಲ ಮ್ಯಾಂಗ್ರೋವ್ ನೇಚರ್ ವಾಕ್ ವೇ, ಪಂಚವಟಿ ಜಲಪಾತಗಳು, ಕತ್ಬರ್ಟ್ ಬೇ ವನ್ಯಜೀವಿ ಅಭಯಾರಣ್ಯ, ಎಲೆಫೆಂಟ್ ಬೀಚ್‌ಗೆ ಭೇಟಿ ನೀಡಬಹುದು. ಸ್ಕೂಬಾ ಡೈವಿಂಗ್‌ನಂತಹ ಆಟವನ್ನು ನೀವಲ್ಲಿ ಆಡಬಹುದು.

ಊಟಿ


ಪ್ರಕೃತಿ ಪ್ರೇಮಿಗಳಿಗೆ ಇಷ್ಟವಾಗುವ ತಾಣ ಊಟಿ. ಕರ್ನಾಟಕದ ನೆರೆ ರಾಜ್ಯ ತಮಿಳುನಾಡಿನಲ್ಲಿರುವ ಇಲ್ಲಿ ಅನೇಕ ಬೆಟ್ಟ ಗುಡ್ಡಗಳಿದ್ದು, ಈ ಸಮಯದಲ್ಲಿ ಎಲ್ಲವೂ ಹಚ್ಚ ಹಸಿರಿನಿಂದ ಕೂಡಿರುತ್ತವೆ. ಅದಲ್ಲದೆ ಇಲ್ಲಿನ ಸರೋವರದಲ್ಲಿ ದೋಣಿ ವಿಹಾರವನ್ನೂ ಮಾಡಬಹುದು. ಇಲ್ಲಿನ ಟೀ ಮ್ಯೂಸಿಯಂಗೆ ಭೇಟಿ ನೀಡುವುದನ್ನು ಮರೆಯಬೇಡಿ. ಇಲ್ಲಿರುವ ದೊಡ್ಡಬೆಟ್ಟದಲ್ಲಿ ಸ್ಕೇಲಿಂಗ್‌ ಮಾಡಬಹುದು. ಪೈಕಾರಾ ಜಲಪಾತದಲ್ಲಿ ನೀರಿನಲ್ಲಿ ಆಟವಾಡಬಹುದು. ಪೈನ್‌ ಕಾಡಿನಲ್ಲಿ ಕುಳಿತು ಸ್ಥಳೀಯ ಖಾದ್ಯಗಳನ್ನು ತಿನ್ನಬಹುದಾಗಿದೆ. ಇಲ್ಲಿ ನೀವು ಊಟಿ ಸರೋವರ್‌, ಬೊಟಾನಿಕಲ್‌ ಗಾರ್ಡನ್ಸ್‌, ದೊಡ್ಡಬೆಟ್ಟ ಶಿಖರ, ರೋಸ್‌ ಗಾರ್ಡನ್‌, ಪೈಕರ ಸರೋವರ ಮತ್ತು ಜಲಪಾತ, ಸರ್ಕಾರಿ ವಸ್ತುಸಂಗ್ರಹಾಲಯವನ್ನು ನೋಡಬಹುದು.

ಕೂರ್ಗ್‌(ಕೊಡಗು)


ಕರ್ನಾಟಕದಲ್ಲಿ ನೀವು ಸೆಪ್ಟೆಂಬರ್‌ ತಿಂಗಳಲ್ಲಿ ಭೇಟಿ ನೀಡಬಹುದಾದ ಅದ್ಭುತ ಸ್ಥಳಗಳಲ್ಲಿ ಒಂದೆಂದರೆ ಅದು ಕೊಡಗು. ಹಸಿರೇ ತುಂಬಿರುವ ಈ ಪುಟ್ಟ ಪಟ್ಟಣದಲ್ಲಿ ನೀವು ನಿಸರ್ಗ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬಹುದು. ಪುಟ್ಟ ಪುಟ್ಟ ಬೆಟ್ಟಗಳು, ಅದನ್ನು ಆವರಿಸಿಕೊಂಡಿರುವ ಮಂಜು ಎಲ್ಲವೂ ನಿಮ್ಮನ್ನು ಆಕರ್ಷಿಸುತ್ತದೆ. ಇಲ್ಲಿ ಅತ್ಯದ್ಭುತ ರೆಸಾರ್ಟ್‌ಗಳೂ ಇದ್ದು, ನೀವು ಒಂದೆರೆಡು ದಿನಗಳ ಮಟ್ಟಿಗೆ ಆರಾಮವಾಗಿ ಇಲ್ಲಿದ್ದು ಬರಬಹುದು. ಇಲ್ಲಿ ಆನೆ ಸವಾರಿ, ರಿವರ್‌ ರಾಫ್ಟಿಂಗ್‌, ಟ್ರೆಕ್ಕಿಂಗ್‌, ಕ್ಯಾಂಪಿಂಗ್‌, ಬೋಟಿಂಗ್‌, ಜೀಪ್‌ ಸಫಾರಿಯನ್ನು ನೀವು ಮಾಡಬಹುದು. ಕೊಡಗಿಗೆ ಭೇಟಿ ಕೊಟ್ಟಾಗ ಅಬ್ಬೆ ಫಾಲ್ಸ್‌, ತಡಿಯಂಡಮೋಲ್ ಶಿಖರ, ಮಲ್ಲಳ್ಳಿ ಜಲಪಾತ, ಪುಷ್ಪಗಿರಿ ವನ್ಯಜೀವಿ ಅಭಯಾರಣ್ಯ, ಕುಮಾರ ಪರ್ವತ ಬೆಟ್ಟ, ರಾಜಾ ಸೀಟ್, ಬ್ರಹ್ಮಗಿರಿ ಬೆಟ್ಟ, ಕಾಫಿ ತೋಟ, ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಭೇಟಿ ಕೊಡಲು ಮರೆಯದಿರಿ.

ಕೇರಳ


ದೇವರ ನಾಡು ಎಂದೇ ಕರೆಸಿಕೊಳ್ಳುವ ಕೇರಳಕ್ಕೆ ಈ ಸಮಯದಲ್ಲಿ ನೀವು ಭೇಟಿ ನೀಡಬೇಕು. ಇಲ್ಲಿ ಹಲವಾರು ಪ್ರವಾಸಿ ತಾಣಗಳಿವೆ. ಮಳೆಗಾಲದ ಸಮಯದಲ್ಲಿ ಪೂರ್ತಿ ರಾಜ್ಯವೇ ಹಚ್ಚ ಹಸಿರಿನಿಂದ ಕಂಗೊಳಿಸುತ್ತದೆ. ಇಲ್ಲಿ ಬೋಟಿಂಗ್‌ ಮಾಡಬಹುದು. ಹಾಗೆಯೇ ಆಯುರ್ವೇದ ಸ್ಪಾಗಳು ಕೂಡ ಇರುವುದರಿಂದ ದೇಹಕ್ಕೆ ಸ್ವಲ್ಪ ವಿಶ್ರಾಂತಿಯನ್ನೂ ನೀಡಬಹುದು. ಇಲ್ಲಿನ ಆಹಾರ ಪದ್ಧತಿ ಕೂಡ ನಿಮಗೆ ಇಷ್ಟವಾಗುತ್ತದೆ. ಬ್ಯಾಕ್‌ವಾಟರ್‌ ಕ್ರೂಸ್‌, ಹೌಸ್‌ಬೋಟ್‌ ಸ್ಟೇಗೆ ಕೇರಳ ಪ್ರಸಿದ್ಧ.

ಮನಾಲಿ


ಪ್ರೇಮಿಗಳ ಪ್ರೀತಿಯ ಮನಾಲಿ ಕೂಡ ಸೆಪ್ಟೆಂಬರ್‌ನಲ್ಲಿ ಭೇಟಿ ನೀಡಲು ಸೂಕ್ತ ಸ್ಥಳವಾಗಿದೆ. ಹಾಗೆಯೇ ಏಕಾಂಗಿ ಆಗಿ ಟ್ರಿಪ್‌ ಹೋಗುವವರಿಗೂ ಇದು ಇಷ್ಟವಾಗುವ ಸ್ಥಳ. ಇಲ್ಲಿನ ಹಿಮಾವೃತ ಪರ್ವತಗಳು, ಅವುಗಳ ಮಧ್ಯೆ ಬಳುಕುತ್ತ ಹರಿಯುವ ನದಿಗಳು, ವಿಶೇಷ ಸಂಸ್ಕೃತಿಯನ್ನು ಹೊಂದಿರುವ ದೇಗುಲಗಳು ಎಲ್ಲವೂ ನಿಮಗೆ ಮನಸ್ಸಿಗೆ ಹಿತವೆನಿಸುತ್ತವೆ. ಇಲ್ಲಿ ನೀವು ಹಡಿಂಬ ದೇವಿ ದೇವಸ್ಥಾನ, ದಿ ಮನಾಲಿ ಗೊಂಪಾ, ಹಮ್ಪ್ತಾ ಪಾಸ್‌, ಜೋಗಿಣಿ ಜಲಪಾತ, ಸೊಲಂಗ್‌ ವ್ಯಾಲಿ, ಭ್ರಿಗು ಸರೋವರ ಹಾಗೆಯೇ ಇನ್ನೂ ಅನೇಕ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದು.

ರಿಷಿಕೇಶ


ಅಧ್ಯಾತ್ಮದತ್ತ ಹೆಚ್ಚು ಒಲವಿರುವವರು ರಿಷಿಕೇಶದತ್ತ ಪ್ರಯಾಣ ಬೆಳೆಸಿ. ಭಾರತದ ಪವಿತ್ರ ಸ್ಥಳಗಳಲ್ಲಿ ಇದೂ ಒಂದು. ಇಲ್ಲಿ ದೈವ ಭಕ್ತಿ ಮೆರೆಯುವುದಷ್ಟೇ ಅಲ್ಲದೆ ರಿಫರ್‌ ರ್ಯಾಫ್ಟಿಂಗ್‌, ಹೈಕಿಂಗ್‌ ಮತ್ತು ಟ್ರೆಕ್ಕಿಂಗ್‌ ಅನ್ನೂ ಮಾಡಬಹುದು. ಬಂಗೀ ಜಂಪಿಂಗ್‌ ಮಾಡುವ ಧೈರ್ಯವಿರುವವರಿಗೆ ಇಲ್ಲಿ ಅದಕ್ಕೂ ಅವಕಾಶವಿದೆ. ಅದಲ್ಲದೆ ಗಂಗಾ ನದಿ ತಟದಲ್ಲಿ ನಡೆಯುವ ಗಂಗಾ ಆರತಿಯನ್ನು ನೋಡಲು ಮರೆಯದಿರಿ. ಹಾಗೆಯೇ ಇಲ್ಲಿನ ಆಯುರ್ವೇದಿಕ್‌ ಸ್ಪಾಗಳಲ್ಲಿ ಮಸಾಜ್‌ ಮಾಡಿಸಿಕೊಳ್ಳುವುದನ್ನೂ ಮಿಸ್‌ ಮಾಡಿಕೊಳ್ಳಬೇಡಿ. ಇಲ್ಲಿ ಸಮೀಪದಲ್ಲಿ ನೀವು ಲಕ್ಷ್ಮಣ ಝುಲಾ, ರಾಮ್‌ ಝುಲಾ, ತೇರಾ ಮಂಜಿಲ್‌ ಮಂದಿರ, ತ್ರಿವೇಣಿ ಘಾಟ್‌, ಶ್ರೀ ಭಾರತ್‌ ಮಂದಿರ, ಶಿವಪುರಿ ತಾಣಗಳಿವೆ.

ಲಡಾಖ್‌


ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಲೇ ಲಡಾಕ್‌ನ್ನು ಭೇಟಿ ನೀಡುವುದಕ್ಕೆ ಇದು ಸೂಕ್ತ ಸಮಯ. ಟಿಬೆಟಿಯನ್‌ ಬೌದ್ಧ ಮಠಗಳಿಂದ ತುಂಬಿರುವ ಲಡಾಕ್‌ನಲ್ಲಿ ಪಾಂಗಾಂಗ್‌ ಸರೋವರ, ಪರ್ವತ ಶ್ರೇಣಿ ಎಲ್ಲವೂ ನಿಮ್ಮನ್ನು ಸೆಳೆಯುತ್ತದೆ. ಅದರ ಜತೆಗೆ ನುಬ್ರಾ ಕಣಿವೆಗ ಕೂಡ ಲೇ ಲಡಾಕ್‌ ಸನಿಹದಲ್ಲೇ ಇದ್ದು, ಅದಕ್ಕೂ ಕೂಡ ನೀವು ಭೇಟಿ ನೀಡಬಹುದು. ಟ್ರೆಕ್ಕಿಂಗ್‌, ಮೌಂಟೇನ್‌ ಬೈಕಿಂಗ್‌, ಜೀಪ್‌ ಸಫಾರಿ, ಮೋಟಾರ್‌ ಸೈಕಲ್‌ ರೋಡ್‌ ಟ್ರಿಪ್‌ ಸೇರಿ ಇನ್ನಷ್ಟು ರೀತಿಯ ಸಾಹಸಮಯ ಕೆಲಸಗಳನ್ನು ನೀವಿಲ್ಲಿ ಮಾಡಬಹುದು. ಈ ಸ್ಥಳಕ್ಕೆ ಭೇಟಿ ನೀಡಲು ಸೂಕ್ತ ಸಮಯವೆಂದರೆ ಅದು ಜೂನ್‌ನಿಂದ ಸೆಪ್ಟೆಂಬರ್‌.

ಕೊಡೈಕೆನಾಲ್‌


ತಮಿಳುನಾಡಿನ ಪ್ರಸಿದ್ಧ ಕೊಡೈಕೆನಾಲ್‌ ಭಾರತದಲ್ಲಿ ಅತ್ಯಂತ ಪ್ರಸಿದ್ಧ ಹನಿಮೂನ್‌ ತಾಣಗಳಲ್ಲಿ ಒಂದಾಗಿದೆ. ಲೇಕ್‌ಸೈಡ್‌ ರೆಸಾರ್ಟ್‌ಗಳಿಂದಲೇ ತುಂಬಿಕೊಂಡಿರುವ ಈ ಪಟ್ಟಣದಲ್ಲಿ ನೀವು ಮಂಜು ತುಂಬಿದ ಬೆಟ್ಟಗಳನ್ನು, ಜಲಪಾತಗಳನ್ನು ಕಾಣಬಹುದು. ಪಳನಿ ಬೆಟ್ಟಗಳ ಇಳಿಜಾರಿನಲ್ಲಿರುವ ಈ ಪಟ್ಟಣ ಸಮುದ್ರ ಮಟ್ಟದಿಂದ 7200 ಅಡಿ ಎತ್ತರದಲ್ಲಿದೆ. ಇಲ್ಲಿ ನೀವು ಬೆಟ್ಟಗಳನ್ನು ಹತ್ತುವುದರೊಂದಿಗೆ ಸೈಕ್ಲಿಂಗ್‌, ಹೈಕಿಂಗ್‌, ಟ್ರೆಕ್ಕಿಂಗ್‌ ಮಾಡಬಹುದಾಗಿದೆ. ಇಲ್ಲಿಂದ ನೀವು ಮನ್ನವನೂರ್‌ ಹೊಳೆ, ಬೆರಿಜಮ್‌ ಹೊಳೆ, ಪೈನ್‌ ಫಾರೆಸ್ಟ್‌, ಡಾಲ್ಫಿನ್ಸ್‌ ನೋಸ್‌, ಪಿಲ್ಲರ್‌ ರಾಕ್ಸ್‌, ಬ್ರ್ಯಾಂಟ್‌ ಪಾರ್ಕ್‌, ಗ್ರೀನ್‌ ವ್ಯಾಲಿ ವ್ಯೂ, ಚೆಟ್ಟಿಯಾರ್‌ ಪಾರ್ಕ್‌ಗೆ ಭೇಟಿ ನೀಡಬಹುದು.

ಉದಯ್‌ಪುರ


ರಾಜಸ್ಥಾನ ದೇಶದಲ್ಲೇ ಅತ್ಯಂತ ಕಡಿಮೆ ಮಳೆ ಕಾಣುವ ರಾಜ್ಯಗಳಲ್ಲಿ ಒಂದು. ಮಳೆಗಾಲದ ಸಮಯದಲ್ಲಿ ಇಲ್ಲಿಗೆ ಭೇಟಿ ನೀಡುವುದು ಸೂಕ್ತ. ಸರೋವರಗಳ ನಗರವಾರ ಉದಯಪುರದ ರೊಮ್ಯಾಂಟಿಕ್‌ ನಗರ ಎಂದು ಕರೆಸಿಕೊಂಡಿದೆ. ಸಮುದ್ರ ಮಟ್ಟದಿಂದ 3100 ಅಡಿ ಎತ್ತರದಲ್ಲಿರುವ ಸಜ್ಜನ್‌ಗಢ ಅರಮನೆಯನ್ನು ನೀವಿಲ್ಲಿ ಕಾಣಬಹುದು. ಈ ಅರಮನೆಯನ್ನು ಮಾನ್ಸೂನ್‌ ಪ್ಯಾಲೇಸ್‌ ಎಂದೂ ಕರೆಯಲಾಗುತ್ತದೆ. ಅಲ್ಲಿಂದ ನಗರ ಮತ್ತು ಸರೋವರಗಳ ವಿಹಂಗಮ ನೋಟವನ್ನೂ ಕಾಣಬಹುದು. ಇಲ್ಲೊ ಬೋಟಿಂಗ್‌, ಕೇಬಲ್‌ ಕಾರ್‌ ರೋಪ್‌ವೇ ಕೂಡ ಇವೆ. ಇಲ್ಲಿ ನೀವು ಕರಕುಶಲ ವಸ್ತುಗಳನ್ನು ಶಾಪಿಂಗ್‌ ಮಾಡಬಹುದು.

ಲೊನಾವಾಲಾ


ವಾಣಿಜ್ಯ ನಗರಿ ಮುಂಬೈನಲ್ಲಿರುವವರಿಗೆ ಸಮೀಪದ ಪ್ರಸಿದ್ಧ ಪ್ರವಾಸಿ ತಾಣವೆಂದರೆ ಅದು ಲೋನಾವಾಲಾ. ಜಲಪಾತಗಳು, ಸರೋವರಗಳು ಮತ್ತು ಬೆಟ್ಟಗಳಿರುವ ಸ್ಥಳವಿದು. ಇಲ್ಲಿ ನೀವು ಕ್ಯಾಂಪಿಂಗ್‌, ಟ್ರೆಕ್ಕಿಂಗ್‌ ಜತೆ ಹಲವು ಸಾಹಸ ಕ್ರೀಡೆಗಳನ್ನು ಆಡಬಹುದಾಗಿದೆ. ಭಾಜಾ ಗುಹೆಗಳು, ಬುಶಿ ಅಣೆಕಟ್ಟು, ಕಾರ್ಲಾ ಗುಹೆಗಳು, ರಾಜ್ಮಾಚಿ ಕೋಟೆ, ರೈವುಡ್ ಸರೋವರ ಇತ್ಯಾದಿಗಳು ಲೋನಾವಾಲಾದ ಜನಪ್ರಿಯ ಪ್ರವಾಸಿ ಆಕರ್ಷಣೆಗಳಾಗಿವೆ. ಇಲ್ಲಿನ ಅಮ್ಯೂಸ್‌ಮೆಂಟ್‌ ಪಾರ್ಕ್‌ ಮತ್ತು ವ್ಯಾಕ್ಸ್‌ ಮ್ಯೂಸಿಯಂ ಅನ್ನು ನೀವು ವೀಕ್ಷಿಸಲೇಬೇಕು. ವರ್ಷ ಪೂರ್ತಿ ಈ ಸ್ಥಳಕ್ಕೆ ನೀವು ಭೇಟಿ ನೀಡಬಹುದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

ಊಟಿಗೆ ಯಾವ ಸಮಯದಲ್ಲಿ ಬೇಕಾದರೂ ಭೇಟಿ ನೀಡಬಹುದು. ಇಲ್ಲಿ ಪ್ರತಿಯೊಂದು ತಿಂಗಳೂ ಏನಾದರೂ ಒಂದು ವಿಶೇಷ ಇದ್ದೇ ಇರುತ್ತದೆ. ಹೀಗಾಗಿ ನಿಮ್ಮ ಆಸಕ್ತಿಗೆ ಅನುಗುಣವಾಗಿ ಊಟಿಗೆ ಪ್ರವಾಸ (Ooty Tour) ಹೊರಡುವ ಯೋಜನೆ ಮಾಡಬಹುದು. ಊಟಿಯ ಅದ್ಭುತಗಳ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

By

Ooty Tour
Koo

ಬೇಸಿಗೆಯ ಬಿಸಿಲಿನ ಕಣ್ತಪ್ಪಿಸಿ ಪ್ರಕೃತಿಯ ಮಡಿಲಲ್ಲಿ ಕಾಲ ಕಳೆಯಬೇಕು ಎನ್ನುವ ಆಸೆ ಮನದಲ್ಲಿ ಮೂಡಿದಾಗ ಕೂಡಲೇ ನೆನಪುಗುವುದು ದಕ್ಷಿಣ ಭಾರತದ (southern India) ಸುಪ್ರಸಿದ್ಧ ಪ್ರವಾಸಿ ತಾಣ ಊಟಿ (Ooty Tour). ದಕ್ಷಿಣ ಭಾರತದ ನೀಲಗಿರಿ ಬೆಟ್ಟಗಳಲ್ಲಿ ( Nilgiri Hills) ನೆಲೆಯಾಗಿರುವ ಸುಂದರವಾದ ಗಿರಿಧಾಮ ಪ್ರದೇಶವಾಗಿರುವ ಊಟಿಯಲ್ಲಿ ಕಣ್ತುಂಬಿಕೊಳ್ಳಲು ಸಾಕಷ್ಟು ಪ್ರದೇಶಗಳಿವೆ. ಪ್ರಶಾಂತವಾದ ಭೂದೃಶ್ಯಗಳು, ಆಹ್ಲಾದಕರ ಹವಾಮಾನ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಇದು ಹೊಂದಿದೆ.

ಪ್ರವಾಸ ಪ್ರಿಯರಿಗಾಗಿ ಊಟಿ ಏನನ್ನಾದರೂ ನೀಡುತ್ತದೆ. ಅದು ಪ್ರಕೃತಿಯ ಪ್ರೀತಿ, ಸಾಹಸದ ಪ್ರಜ್ಞೆ ಅಥವಾ ಶಾಂತಿ ಮತ್ತು ಶಾಂತತೆಯ ಹಂಬಲವನ್ನು ತಣಿಸುತ್ತದೆ. ಪ್ರತಿ ಋತುವಿಗೂ ತನ್ನದೇ ಆದ ವಿಶೇಷತೆಯನ್ನು ಒದಗಿಸುತ್ತದೆ. ವರ್ಷವಿಡೀ ಬೇಸಿಗೆಯು ಬಹುವರ್ಣದ ಹೂವುಗಳನ್ನು ತರುತ್ತದೆ. ಮಳೆಗಾಲ ಬಂದೊಡನೆ ಎಲ್ಲವನ್ನೂ ಮಂಜಿನಿಂದ ಆವರಿಸುವಂತೆ ಮಾಡುತ್ತದೆ. ಶರತ್ಕಾಲದಲ್ಲಿ ಉಲ್ಲಾಸಕರವಾದ ಗಾಳಿ ಮತ್ತು ಚಳಿಗಾಲದ ತಂಪು ಅಪ್ಪುಗೆಯನ್ನು ಮರೆಯಲಾಗದು.

ಗಿರಿಧಾಮಗಳ ರಾಣಿ ಎಂದೂ ಕರೆಯಲಾಗುವ ಊಟಿಗೆ ವರ್ಷಪೂರ್ತಿ ಭೇಟಿ ಮಾಡಬಹುದು. ಪ್ರತಿ ಋತುವಿನಲ್ಲಿ ಇದು ತನ್ನದೇ ಆದ ವೈಭವವನ್ನು ತೊಂಬಿಕೊಂಡು ತನುಮನಕ್ಕೆ ಸಂತೋಷವನ್ನು ಉಣಬಡಿಸುತ್ತದೆ. ನಿಖರವಾಗಿ ಯಾವಾಗ ಹೋಗಬೇಕೆಂದು ತಿಳಿಯುವುದು ಖಂಡಿತವಾಗಿಯೂ ನಮ್ಮ ಪ್ರಯಾಣದ ಅನುಭವವನ್ನು ಸುಧಾರಿಸುತ್ತದೆ. ಊಟಿಯಲ್ಲಿ ಪ್ರತಿ ಸೀಸನ್ ಏನು ವಿಶೇಷ ಎಂಬ ಮಾಹಿತಿ ಇಲ್ಲಿದೆ.


ಬೇಸಿಗೆಯ ವೈಭವ; ಮಾರ್ಚ್‌ನಿಂದ ಜೂನ್

ಊಟಿಗೆ ಪ್ರವಾಸ ಹೋಗಲು ಅತ್ಯಂತ ಜನಪ್ರಿಯ ಸಮಯವೆಂದರೆ ಬೇಸಿಗೆಯ ತಿಂಗಳು. ಮಾರ್ಚ್‌ನಿಂದ ಜೂನ್‌ವರೆಗೆ ಹಗಲಿನ ತಾಪಮಾನವು ಇಲ್ಲಿ 15 ಡಿಗ್ರಿ ಸೆಲ್ಸಿಯಸ್ ನಿಂದ 25 ಡಿಗ್ರಿ ಸೆಲ್ಸಿಯಸ್‌ವರೆಗೆ ಇರುತ್ತದೆ. ಇದು ಬಿಸಿಯಾದ ಬಯಲು ಪ್ರದೇಶಗಳಿಗೆ ಹೋಲಿಸಿದರೆ ಇದು ತುಂಬಾ ಆರಾಮದಾಯಕವಾಗಿದೆ. ಈ ಅವಧಿಯಲ್ಲಿ ಹವಾಮಾನವು ತಂಪಾಗಿರುತ್ತದೆ. ಇದು ಹಸಿರು ಕಣಿವೆಗಳು, ಹೂಬಿಡುವ ಹೂವುಗಳು ಮತ್ತು ಬೀಳುವ ಕ್ಯಾಸ್ಕೇಡ್‌ಗಳನ್ನು ಅನ್ವೇಷಿಸಲು ಸೂಕ್ತವಾಗಿದೆ. ಪ್ರತೀ ವರ್ಷ ಮೇ ತಿಂಗಳಲ್ಲಿ, ಬೊಟಾನಿಕಲ್ ಗಾರ್ಡನ್ಸ್‌ನಲ್ಲಿ ಅದ್ಭುತವಾದ ಪುಷ್ಪ ಪ್ರದರ್ಶನವನ್ನು ನಡೆಸಲಾಗುತ್ತದೆ.


ಮಾನ್ಸೂನ್‌ ಮ್ಯಾಜಿಕ್ -ಜುಲೈನಿಂದ ಸೆಪ್ಟೆಂಬರ್

ಒಮ್ಮೆ ಮಳೆ ಬಂದರೆ ಮತ್ತೆ ಎಲ್ಲವೂ ಹಸಿರು ಬಣ್ಣಕ್ಕೆ ತಿರುಗುತ್ತದೆ. ಆದರೆ ಈ ಬಾರಿ ಹೆಚ್ಚು ತೀವ್ರವಾಗಿ ಇಡೀ ಪ್ರದೇಶವು ಸೊಂಪಾದ ಸಸ್ಯಗಳಿಂದ ಆವೃತವಾಗಿದೆ. ಎಷ್ಟರಮಟ್ಟಿಗೆ ಎಂದರೆ ಕೆಲವೊಮ್ಮೆ ಇಡೀ ಪಟ್ಟಣವು ದಟ್ಟವಾದ ಎಲೆಗಳ ಅಡಿಯಲ್ಲಿ ಕಣ್ಮರೆಯಾಗುತ್ತದೆ. ಈ ತಿಂಗಳುಗಳಲ್ಲಿ ಜುಲೈನಿಂದ ಸೆಪ್ಟೆಂಬರ್ ವರೆಗೆ, ಊಟಿಯ ಮೇಲೆ ಮಧ್ಯಮ ಅಥವಾ ಭಾರೀ ಮಳೆ ಬೀಳುತ್ತದೆ. ಇದು ಸುತ್ತಲಿನ ಎಲ್ಲವನ್ನೂ ರಿಫ್ರೆಶ್ ಮಾಡಿದಂತೆ ಭಾಸವಾಗುತ್ತದೆ. ಬೇಸಿಗೆಯ ಶಾಖದ ಅನಂತರ ಮತ್ತೊಮ್ಮೆ ಜೀವಂತ ತಳೆದಂತೆ ಕಾಣುತ್ತದೆ. ಮಳೆಯ ಕಾರಣದಿಂದ ಹೊರಾಂಗಣ ಚಟುವಟಿಕೆಗಳು ಸೀಮಿತವಾಗಿರಬಹುದು. ಆದರೆ ಮಂಜಿನಿಂದ ಆವೃತವಾದ ಪರ್ವತಗಳ ಮೂಲಕ ಹರಿಯುವ ತೊರೆಗಳ ಸೌಂದರ್ಯ ಇಮ್ಮಡಿಯಾಗುತ್ತದೆ.


ಶರತ್ಕಾಲದ ಅದ್ಭುತ- ಅಕ್ಟೋಬರ್‌ನಿಂದ ನವೆಂಬರ್

ಮಳೆಗಾಲ ಅವಧಿ ಮುಗಿದ ಅನಂತರ, ಶರತ್ಕಾಲದಲ್ಲಿ ಆಕಾಶವು ಮತ್ತೆ ನೀಲಿ ಬಣ್ಣಕ್ಕೆ ತಿರುಗುತ್ತದೆ. ಚಳಿಗಾಲ ಪ್ರಾರಂಭವಾಗುವವರೆಗೆ ಪ್ರಶಾಂತ ಪರಿಸರ ಮನಸ್ಸಿಗೆ ಹಿತ ನೀಡುತ್ತದೆ. ಈ ಸಮಯದಲ್ಲಿ ತಾಪಮಾನವು 10 ಡಿಗ್ರಿಯಿಂದ 20 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ. ಹೀಗಾಗಿ ಇದು ಚಟುವಟಿಕೆಗಳಿಗೆ ಸೂಕ್ತವಾಗಿರುತ್ತದೆ. ಟ್ರೆಕ್ಕಿಂಗ್, ಬೋಟಿಂಗ್, ದೃಶ್ಯವೀಕ್ಷಣೆ ನಡೆಸಲು ಸೂಕ್ತ ಸಮಯವಾಗಿರುತ್ತದೆ. ಹವಾಮಾನವು ಸಾಕಷ್ಟು ಸ್ನೇಹಪರವಾಗಿರುತ್ತದೆ. ಛಾಯಾಗ್ರಹಣಕ್ಕೆ ಇದು ಸೂಕ್ತ ಸಮಯ. ಈ ಸಂದರ್ಭದಲ್ಲಿ ಊಟಿ ಮಾರಿಯಮ್ಮನ್ ದೇವಾಲಯದ ಉತ್ಸವವನ್ನು ಕಣ್ತುಂಬಿಕೊಳ್ಳಲು ಮರೆಯಬೇಡಿ.


ಚಳಿಗಾಲದ ವಂಡರ್ ಲ್ಯಾಂಡ್ (ಡಿಸೆಂಬರ್‌ನಿಂದ ಫೆಬ್ರವರಿ)

ಚಳಿಗಾಲದಲ್ಲಿ ರಾತ್ರಿಯ ಸಮಯದಲ್ಲಿ ತಾಪಮಾನವು ತೀವ್ರವಾಗಿ ಇಳಿಯುತ್ತದೆ. ಸುಮಾರು 5 ಡಿಗ್ರಿ ಸೆಲ್ಸಿಯಸ್ ಗಿಂತಲೂ ಕೆಳಗೆ ಇಳಿಯುತ್ತದೆ. ಮುಂಜಾನೆಯು ಸಾಮಾನ್ಯವಾಗಿ ಮಂಜಿನಿಂದ ಕೂಡಿರುತ್ತದೆ. ಆದರೆ ಇಡೀ ದಿನ ತಂಪಾಗಿರುತ್ತದೆ.

ಇದನ್ನೂ ಓದಿ: Kochi Tour: ವಾರಾಂತ್ಯದ ಪ್ರವಾಸಕ್ಕೆ ಕೊಚ್ಚಿ ಸೂಕ್ತ ತಾಣ; ಏನೇನಿವೆ ಆಕರ್ಷಣೆ?

ಸಾಕಷ್ಟು ಬಿಸಿಲು ಸಿಗುತ್ತದೆ. ಆದರೂ ಪ್ರದೇಶದ ಸುತ್ತಲಿನ ದಟ್ಟವಾದ ಕಾಡುಗಳಿಂದಾಗಿ ಸೂರ್ಯನ ಬೆಳಕು ಅಷ್ಟೇನೂ ನೆಲದ ಮಟ್ಟವನ್ನು ತಲುಪುವುದಿಲ್ಲ, ಆದ್ದರಿಂದ ಚಹಾ ತೋಟಗಳ ಸುತ್ತಲೂ ಮಾಂತ್ರಿಕ ಸ್ಪರ್ಶ ನೀಡಿದಂತೆ ಭಾಸವಾಗುತ್ತದೆ. ಸಾಹಸಿಗಳು ನೀಲಗಿರಿಯ ಅತೀ ಎತ್ತರದ ಪ್ರದೇಶವಾದ ದೊಡ್ಡಬೆಟ್ಟ ಶಿಖರದಲ್ಲಿ ಚಾರಣಕ್ಕೆ ಹೋಗಬಹುದು ಅಥವಾ ವಿವಿಧ ಜಾತಿಯ ಪ್ರಾಣಿಗಳು, ಪಕ್ಷಿಗಳು, ಸರೀಸೃಪಗಳು, ಕೀಟಗಳನ್ನು ಮುದುಮಲೈ ವನ್ಯಜೀವಿ ಅಭಯಾರಣ್ಯದಲ್ಲಿ ಅನ್ವೇಷಿಸಬಹುದು. ಜನವರಿಯಲ್ಲಿ ಇಲ್ಲಿ ವಾರ್ಷಿಕ ಚಹಾ ಪ್ರವಾಸೋದ್ಯಮ ಉತ್ಸವ ನಡೆಯುತ್ತದೆ. ಇಲ್ಲಿ ಸಾಂಸ್ಕೃತಿಕ ಪ್ರದರ್ಶನಗಳನ್ನು ಆನಂದಿಸಬಹುದು, ವಿವಿಧ ಮಾದರಿಯ ಚಹಾಗಳನ್ನು ಸವಿಯಬಹುದು.

Continue Reading

ಪ್ರವಾಸ

Kochi Tour: ವಾರಾಂತ್ಯದ ಪ್ರವಾಸಕ್ಕೆ ಕೊಚ್ಚಿ ಸೂಕ್ತ ತಾಣ; ಏನೇನಿವೆ ಆಕರ್ಷಣೆ?

ವಾರಾಂತ್ಯದ ವಿಹಾರಕ್ಕೆ ಕೊಚ್ಚಿಯಲ್ಲಿ (Kochi Tour) ಯಾವುದೇ ಕೊರತೆ ಇಲ್ಲ. ಮುನ್ನಾರ್‌ನ ಮಂಜಿನ ಬೆಟ್ಟಗಳಿಂದ ಹಿಡಿದು ಅಲೆಪ್ಪಿ ಮತ್ತು ಚೆರೈ ಬೀಚ್‌ನ ಶಾಂತ ಹಿನ್ನೀರು ಮತ್ತು ಮರಳಿನ ತೀರಗಳವರೆಗೆ ಅನೇಕ ರೋಮಾಂಚಕಾರಿ ಸ್ಥಳಗಳು ಇಲ್ಲಿದೆ. ಈ ಪ್ರವಾಸಿ ಸ್ಥಳಗಳ ಪರಿಚಯ ಇಲ್ಲಿದೆ.

VISTARANEWS.COM


on

By

Kochi Tour
Koo

ಸಮುದ್ರ ತೀರಗಳಿಂದ ಸುತ್ತುವರಿದಿರುವ ಕೇರಳದ (kerala) ಹೃದಯ ಭಾಗವಾದ ಕೊಚ್ಚಿಯು ಅತ್ಯಂತ ಆಕರ್ಷಕ ಪ್ರವಾಸಿ (Kochi Tour) ತಾಣಗಳಿಂದ ದೂರದ ಊರಿನ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಸಾಂಸ್ಕೃತಿಕ ಶ್ರೀಮಂತಿಕೆಯಿಂದ ಹೆಸರುವಾಸಿಯಾಗಿರುವ ಕೊಚ್ಚಿ ಗೇಟ್ ವೇ ಆಗಿರುವ ಹಿನ್ನೀರು (backwaters) ಪ್ರದೇಶಗಳಿಂದ, ಗಿರಿಧಾಮಗಳಿಂದ (hill stations) ನೈಸರ್ಗಿಕ ಸೌಂದರ್ಯವನ್ನು ಮಡಿಲಲ್ಲಿ ತುಂಬಿಕೊಂಡು ನಿಂತಂತಿದೆ.

ಕಣ್ಣಿಗೆ ಸೌಂದರ್ಯ, ಮನಸ್ಸಿಗೆ ಶಾಂತಿ ನೀಡುವ ಪ್ರಶಾಂತವಾದ ಮರಳಿನ ಬಿಳಿ ಕಡಲತೀರಗಳು ಮನೆಯಿಂದ ದೂರವಿದ್ದು, ಕೊಂಚ ರಿಲ್ಯಾಕ್ಸ್ ಮಾಡಿಕೊಳ್ಳಬೇಕು ಎನ್ನುವವರಿಗೆ ಸೂಕ್ತ ತಾಣ ಕೊಚ್ಚಿ. ಇಲ್ಲಿನ ಸುತ್ತಮುತ್ತ ಕೆಲವು ಅತ್ಯುತ್ತಮ ಪ್ರವಾಸಿ ತಾಣಗಳಿವೆ. ವಾರಾಂತ್ಯದ ರಜೆಯನ್ನು ಇಲ್ಲಿ ಕಳೆಯಬಹುದು.


ಮುನ್ನಾರ್ (Munnar)

ಚಹಾ ತೋಟಗಳು, ಮಂಜಿನ ಕಣಿವೆಗಳು ಮತ್ತು ಶಾಂತ ವಾತಾವರಣಕ್ಕೆ ಹೆಸರುವಾಸಿಯಾದ ಮುನ್ನಾರ್ ಸುಂದರವಾದ ಗಿರಿಧಾಮವಾಗಿದ್ದು, ಕೊಚ್ಚಿಯ ಸಮೀಪದಲ್ಲಿದೆ. ಮುನ್ನಾರ್‌ಗೆ ಹೋಗುವ ದಾರಿಯಲ್ಲಿ ದಟ್ಟ ಕಾಡುಗಳು ಮತ್ತು ಹಸಿರು ಪರ್ವತಗಳ ರುದ್ರರಮಣೀಯ ದೃಶ್ಯಗಳನ್ನು ನೀಡುತ್ತದೆ. ಮುನ್ನಾರ್ ತಲುಪಿದ ಅನಂತರ ಟ್ರೆಕ್ಕಿಂಗ್, ಪಕ್ಷಿ ವೀಕ್ಷಣೆಗೆ ಹೋಗಬಹುದು ಅಥವಾ ಶಾಂತಿಯುತ ಪರಿಸರದಲ್ಲಿ ವಿಶ್ರಾಂತಿ ಪಡೆಯಬಹುದು. ಇಲ್ಲಿನ ಟೀ ಮ್ಯೂಸಿಯಂಗೆ ಭೇಟಿ ನೀಡಿದರೆ ಚಹಾ ತಯಾರಿಕೆಯಲ್ಲಿ ಒಳಗೊಂಡಿರುವ ಸಾಂಸ್ಕೃತಿಕ ಅಭ್ಯಾಸಗಳ ಬಗ್ಗೆ ತಿಳಿದುಕೊಳ್ಳಬಹುದು.


ಅಲೆಪ್ಪಿ (Alleppey)

‘ಪೂರ್ವದ ವೆನಿಸ್ ಎಂದು ಕರೆಯಲ್ಪಡುವ ಅಲೆಪ್ಪಿ ಹಿನ್ನೀರು, ಪ್ರಶಾಂತವಾದ ಹೌಸ್‌ಬೋಟ್ ವಿಹಾರ ಮತ್ತು ಎಲ್ಲಿ ನೋಡಿದರೂ ಹಸಿರಿನಿಂದ ತುಂಬಿದ ಭತ್ತದ ಗದ್ದೆಗಳ ವ್ಯಾಪಕ ಜಾಲದಿಂದ ಆವರಿಸಲ್ಪಟ್ಟಿದೆ. ಈ ನಿಶ್ಯಬ್ದ ತಾಣವು ಕೊಚ್ಚಿನ್‌ನಿಂದ ಸ್ವಲ್ಪ ದೂರದಲ್ಲಿದೆ. ಪ್ರವಾಸಿಗರು ಹಿನ್ನೀರಿನಲ್ಲಿ ಹೌಸ್‌ಬೋಟ್ ಸವಾರಿಗಳನ್ನು ನಡೆಸಬಹುದು. ಇಲ್ಲಿ ತಂಗುವ ಸಮಯದಲ್ಲಿ ಸುತ್ತಲಿನ ಸುಂದರವಾದ ಭೂದೃಶ್ಯಗಳನ್ನು ವೀಕ್ಷಿಸಬಹುದು. ರಾತ್ರಿಯಲ್ಲಿ ಆಕಾಶದಲ್ಲಿ ನಕ್ಷತ್ರಗಳನ್ನು ನೋಡುತ್ತಾ ದೋಣಿ ವಿಹಾರ ನಡೆಸುವುದು ಅಲೆಪಿಯ ಮ್ಯಾಜಿಕ್ ಅನುಭವವನ್ನು ಕೊಡುತ್ತದೆ.


ಫೋರ್ಟ್ ಕೊಚ್ಚಿ (Fort Kochi)

ವಾರಾಂತ್ಯದ ವಿಹಾರಕ್ಕೆ ಫೋರ್ಟ್ ಕೊಚ್ಚಿಯು ಒಂದು ಸುಂದರ ತಾಣ. ಹಳೆಯ ವಸಾಹತುಶಾಹಿ ಕಟ್ಟಡಗಳಿಂದ ಕೂಡಿದ್ದು, ಕಿರಿದಾದ ಕಲ್ಲುಮಣ್ಣುಗಳಿಂದ ತುಂಬಿದ ಬೀದಿಗಳಲ್ಲಿ ನಡೆದುಕೊಂಡು ಹೋಗುವಾಗ ಈ ಸ್ಥಳದ ಹಿಂದಿನ ವೈಭವದ ದಿನಗಳ ಬಗ್ಗೆ ಚಿತ್ರ ಬರೆದಂತ ಭಾಸವಾಗುವುದು. ಇಲ್ಲಿ ಚೈನೀಸ್ ಫಿಶಿಂಗ್ ನೆಟ್ಸ್, ಸೇಂಟ್ ಫ್ರಾನ್ಸಿಸ್ ಚರ್ಚ್ ಮತ್ತು ಮತ್ತಂಚೇರಿ ಅರಮನೆಗೆ ಭೇಟಿ ನೀಡಿ ರಜಾ ದಿನವನ್ನು ಕಳೆಯಬಹುದು. ಈ ನಗರದ ಪರಂಪರೆಯ ಬಗ್ಗೆ ತಿಳಿದುಕೊಳ್ಳಲು ಕಥಕ್ಕಳಿ ಪ್ರದರ್ಶನವನ್ನು ಮಿಸ್ ಮಾಡದೇ ನೋಡಿ. ಕೇರಳದ ಶಾಸ್ತ್ರೀಯ ನೃತ್ಯ ಪ್ರಕಾರವು ಅದರ ರೋಮಾಂಚಕ ಸಾಂಸ್ಕೃತಿಕ ಸಂಪ್ರದಾಯಗಳನ್ನು ಬಹಿರಂಗಪಡಿಸುತ್ತದೆ.


ವಾಗಮೋನ್ (Vagamon)

ಕೇರಳದ ಪಶ್ಚಿಮ ಘಟ್ಟಗಳ ಮಡಿಕೆಗಳೊಳಗೆ ಅಡಗಿರುವ ವಾಗಮೋನ್ ಶಾಂತವಾದ, ಸಣ್ಣ ಗಿರಿಧಾಮವಾಗಿದೆ. ಪ್ರವಾಸಿಗರಿಗೆ ರೋಲಿಂಗ್ ಬೆಟ್ಟಗಳು, ಹಸಿರು ಹುಲ್ಲುಗಾವಲುಗಳು ಮತ್ತು ಪೈನ್ ಮರಗಳ ತೋಪುಗಳು ಜಲಪಾತಗಳ ನಡುವೆ ವಿಶ್ರಾಂತಿ ಪಡೆಯಲು ಅತ್ಯುತ್ತಮ ಅವಕಾಶವನ್ನು ನೀಡುತ್ತದೆ. ನಿಸರ್ಗವನ್ನು ಪ್ರೀತಿಸುವವರಿಗೆ ಮತ್ತು ಪೈನ್ ಫಾರೆಸ್ಟ್ ಅಥವಾ ಕುರಿಸುಮಲ ಆಶ್ರಮದಂತಹ ಹಲವಾರು ಗುಪ್ತ ರತ್ನಗಳಿಂದ ಕೂಡಿದ ವಿಸ್ಮಯಕಾರಿಯಾಗಿ ಸುಂದರವಾದ ಭೂದೃಶ್ಯದ ಮೂಲಕ ಟ್ರೆಕ್ಕಿಂಗ್‌ನಂತಹ ಸಾಹಸ ಚಟುವಟಿಕೆಗಳನ್ನು ಇಲ್ಲಿ ನಡೆಸಬಹುದು. ಪ್ಯಾರಾಗ್ಲೈಡಿಂಗ್ ಮತ್ತು ರಾತ್ರಿಯ ಕ್ಯಾಂಪಿಂಗ್ ಗೆ ಸೂಕ್ತ ತಾಣ ಗಳು ಇಲ್ಲಿದೆ.

ಇದನ್ನೂ ಓದಿ: Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?


ಚೆರೈ ಬೀಚ್ (Cherai Beach)

ಕೊಚ್ಚಿ ಬಳಿ ಪರಿಪೂರ್ಣ ವಿಶ್ರಾಂತಿ ಅನುಭವಕ್ಕಾಗಿ, ಬೀಚ್ ವಿಹಾರಕ್ಕಾಗಿ ಪಟ್ಟಣದಿಂದ ಸ್ವಲ್ಪ ದೂರದಲ್ಲಿರುವ ಚೆರೈ ಬೀಚ್‌ಗೆ ಭೇಟಿ ನೀಡಬಹುದು. ಇದು ಕರಾವಳಿಯ ಉದ್ದಕ್ಕೂ ತೂಗಾಡುತ್ತಿರುವ ತೆಂಗಿನ ಮರಗಳು, ಪ್ರಾಚೀನ ಮರಳು, ಚಿನ್ನದ ಬಣ್ಣದಲ್ಲಿ ಕಂಗೊಳಿಸುವ ಸೂರ್ಯ ಮತ್ತು ನೀಲಿ ಅರೇಬಿಯನ್ ಸಮುದ್ರದಿಂದ ಸುತ್ತುವರೆದಿದೆ. ಸೂರ್ಯನನ್ನು ನೋಡುತ್ತಾ ತೀರದಲ್ಲಿ ಸುತ್ತಾಡಲು ಪರಿಪೂರ್ಣ ವಾತಾವರಣವನ್ನು ಸೃಷ್ಟಿಸುತ್ತದೆ. ಇಲ್ಲಿ ತಾಜಾ ಸಮುದ್ರಾಹಾರ ಸತ್ಕಾರವನ್ನು ಪಡೆಯಬಹುದು

Continue Reading

ಧಾರ್ಮಿಕ

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

ಶ್ರೀ ಶಂಕರರು (Shankara Jayanti 2024) ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡಿದ್ದರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತಿದ್ದರು. ಸಂನ್ಯಾಸಕ್ಕೆ ತಾಯಿಯ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಆಗ ತಾಯಿ ಒಪ್ಪಲೇಬೇಕಾಯಿತು.

VISTARANEWS.COM


on

Shankara Jayanti 2024
Koo

ಶಂಕರಾಚಾರ್ಯರು (Shankara Jayanti 2024) ಜೀವಿಸಿದ್ದು ಕೇವಲ 32 ವರ್ಷ. ಆದರೆ ಅವರು ಸಾಧಿಸಿದ್ದು ಅಪಾರ. ಹಿಂದೂ ಧರ್ಮದ ಏಳಿಗೆಗೆ ಅವರ ಕೊಡುಗೆ ಅಮೂಲ್ಯ. ಶಂಕರರ ಬದುಕಿನ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ.

Adi Shankaracharya Jayanti
  1. ಶ್ರೀ ಶಂಕರರು ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡುಬಿಟ್ಟರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತರು. ಸಾಮಾನ್ಯರಿಗೆ ಒಂದು ವೇದವನ್ನು ಅರ್ಥ ಮಾಡಿಕೊಳ್ಳಲೇ ಹತ್ತಾರು ವರ್ಷಗಳು ಬೇಕು.
  2. ಶಂಕರಾಚಾರ್ಯರು ಜನಿಸಿದ್ದು ಕೇರಳ ಕಾಲಟಿ ಎಂಬ ಪುಟ್ಟ ಗ್ರಾಮದಲ್ಲಿ. ತಂದೆಯನ್ನು ಕಳೆದುಕೊಂಡರು. ತಾಯಿ ಅವರನ್ನು ಬೆಳೆಸಿದರು. ಅವರು ಸಂನ್ಯಾಸ ಸ್ವೀಕರಿಸಲು ಒಂದು ಪುಟ್ಟ ಪವಾಡವನ್ನೇ ಮಾಡಬೇಕಾಯಿತು. ಸಂನ್ಯಾಸಕ್ಕೆ ತಾಯಿ ಆರ್ಯಾಂಬೆಯವರ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಮಗ ಬದುಕುತ್ತಾನಲ್ಲ ಎಂಬ ಭರವಸೆಯೊಂದಿಗೆ ತಾಯಿ ಒಪ್ಪಿದರು.
  3. ಹದಿನಾರು ವರ್ಷ ಪ್ರಾಯ ಆಗುವುದರೊಳಗಾಗಿ ಅವರು ಉಪನಿಷತ್, ಬ್ರಹ್ಮಸೂತ್ರ, ಭಗವದ್ಗೀತೆಗಳಿಗೆ ಭಾಷ್ಯವನ್ನು ರಚಿಸಿದರು. ಆದಿಶಂಕರರು ಭಗವದ್-ಗೀತೆ, ಉಪನಿಷತ್ ಹಾಗು ಬ್ರಹ್ಮಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು.
  4. ಭಾರತದಾದ್ಯಂತ ‘ದಿಗ್ವಿಜಯ ಯಾತ್ರೆʼ ಕೈಗೊಂಡರು. ವೇದವಿರೋಧಿಗಳನ್ನು ವಾಗ್ವಾದಕ್ಕೆ ಕರೆದರು. ಏಕಾಂಗಿಯಾಗಿ ಚರ್ಚೆ, ವಿಚಾರಮಂಡನೆ, ವಾದಗಳ‌ ಮೂಲಕ ಬ್ರಹ್ಮವಾದಕ್ಕೆ ಎಳೆತಂದರು. ದೇಶದುದ್ದಗಲಕ್ಕೂ ಸಂಚರಿಸಿ, ಅಲ್ಲಿಯ ವಿದ್ವಾಂಸರನ್ನು, ಜನರನ್ನು, ರಾಜರನ್ನು ವೈದಿಕತೆಗೆ ತಂದರು.
  5. ಆರು ಮತಗಳನ್ನು ಖಂಡಿಸಿ ತಮ್ಮ ಮತವನ್ನು ಸ್ಥಾಪಿಸಿದ ಪರಿಣಾಮ ಅವರನ್ನು ‘ಷಣ್ಮತ ಖಂಡನಾಚಾರ್ಯ’ ಮತ್ತು ಷಣ್ಮತ ಪ್ರತಿಷ್ಠಾಪನಾಚಾರ್ಯ’ ಎಂದು ಕರೆಯಲಾಯಿತು. ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು.
  6. ಧರ್ಮವನ್ನು ಉಳಿಸಿ ಬೆಳೆಸುವ ಉದ್ದೇಶಕ್ಕಾಗಿ ಮಠಗಳ ಪರಿಕಲ್ಪನೆಯನ್ನು ತಂದರು. ಮಠ ಮತ್ತು ಯತಿಗಳು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು ಎಂಬ ಆಶಯ ಅವರದಾಗಿತ್ತು. ದೇಶದ ಉದ್ದಗಲಗಳಲ್ಲಿ ಮಠಗಳನ್ನು ಸ್ಥಾಪಿಸಿದರು. ಅವುಗಳಲ್ಲಿ ಮುಖ್ಯವಾದದ್ದು ಶೃಂಗೇರಿಯ ಮಠ. ಇತರವು ಪೂರ್ವದಲ್ಲಿ ಪುರಿ, ಪಶ್ಚಿಮದಲ್ಲಿ ದ್ವಾರಕಾ, ಉತ್ತರದಲ್ಲಿ ಬದರೀನಾಥ, ಕಂಚಿಯ ಕಾಮಕೋಟಿಗಳಲ್ಲಿವೆ.
  7. ಸೂರ್ಯ- ಗಣಪತಿ- ಅಂಬಿಕಾ- ಶಿವ- ವಿಷ್ಣುಗಳನ್ನು ಪೂಜಿಸುವ ಪಂಚಾಯತನ ಪೂಜೆಯನ್ನು ತಂದರು. ಈ ದೇವತೆಗಳನ್ನು ಭಾರತದ ಐದು ಕಡೆಗಳಲ್ಲಿ ಸಿಗುವ ಸ್ಫಟಿಕ, ಶೋಣಾಭದ್ರ, ಸ್ವರ್ಣಮುಖಿ, ಬಾಣಲಿಂಗ, ಸಾಲಿಗ್ರಾಮ ಎಂಬ ಕಲ್ಲಿನ ಮೂಲಕ ಪೂಜಿಸಲಾಗುತ್ತದೆ.
  8. ಮೂವತ್ತೆರಡು ವರ್ಷಗಳಲ್ಲಿ ಹಲವು ಮನುಷ್ಯರು ಸೇರಿ ಹಲವು ಜನ್ಮಗಳಲ್ಲಿ ಮಾಡುವಷ್ಟು ಕೆಲಸವನ್ನು ಮಾಡಿ ಮುಗಿಸಿದರು. ಭಾಷ್ಯಗಳನ್ನು ಹೊರತುಪಡಿಸಿ ನೂರಾರು ಸ್ತೋತ್ರ – ಸಾಹಿತ್ಯಗಳನ್ನು ರಚಿಸಿದರು.
  9. ಮೂರು ಸೂತ್ರಗಳಲ್ಲಿ ಶ್ರೀ ಶಂಕರರ ಉಪದೇಶವನ್ನು ಸೂತ್ರೀಕರಿಸಬಹುದು- “ಅಹಂ ಬ್ರಹ್ಮಾಸ್ಮಿ” (ನನ್ನೊಳಿರುವ ಆತ್ಮವೇ ಪರಂಬ್ರಹ್ಮ), “ತತ್ ತ್ವಮ್ ಅಸಿ” (ನೀನು ಅದೇ ಆತ್ಮದಿಂದ ಆಗಿರುವೆ) ಮತ್ತು ಜೀವಶ್ಶಿವೋಹಂʼ (ಜೀವನೇ ಶಿವ) ಎಂಬುದು ಅದ್ವೈತ ತತ್ವದ ಮೂಲ ಮಂತ್ರಗಳು. ಇದಲ್ಲದೇ ಪರಮಾತ್ಮ ಮಾತ್ರ ಸತ್ಯ; ಈ ಜಗತ್ತಿನಲ್ಲಿ ಮಿಕ್ಕೆಲ್ಲವೂ ಮಿಥ್ಯ ಹಾಗೂ “ಸರ್ವಂ ಬ್ರಹ್ಮಮಯಂ ಜಗತ್” (ಈ ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದಲೇ ಆವರಿಸಲ್ಪಟ್ಟಿದೆ) ಎಂಬುದಾಗಿ ಜಗತ್ತಿಗೆ ಸಾರಿದರು.
Continue Reading

ಪ್ರವಾಸ

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

ನಿರ್ದಿಷ್ಟ ಯೋಜನೆ ಮತ್ತು ಸ್ಥಳೀಯ ವಿಚಾರಗಳನ್ನು ತಿಳಿದುಕೊಳ್ಳುವ ಮೂಲಕ ಕಡಿಮೆ ಬಜೆಟ್‌ನಲ್ಲಿ ಸಂಪೂರ್ಣ ದ್ವಾರಕವನ್ನು ಸುತ್ತಾಡಲು (Dwarka Tour) ಸಾಧ್ಯವಿದೆ. ಪುರಾತನ ದೇವಾಲಯ, ಸುಂದರವಾದ ಕಡಲತೀರಗಳೊಂದಿಗೆ ಅತ್ಯಾಕರ್ಷಕ ತಾಣದಲ್ಲಿ ಸುಂದರವಾದ ಪ್ರವಾಸ ಅನುಭವವನ್ನು ನಮ್ಮದಾಗಿಸಬಹುದು.

VISTARANEWS.COM


on

By

Dwarka Tour
Koo

ದ್ವಾರಕಾ ಹೆಸರು ಕೇಳಿದಾಕ್ಷಣವೇ ಮನಸ್ಸು ಪ್ರಫುಲ್ಲವಾಗುತ್ತದೆ. ಹಿಂದೂಗಳಿಗೆ ಅಯೋಧ್ಯೆ (ayodhya) ರಾಮ ಮಂದಿರದಷ್ಟೇ (ram mandir) ಪವಿತ್ರವಾದ ಮತ್ತೊಂದು ಕ್ಷೇತ್ರ ದ್ವಾರಕಾ (Dwarka Tour). ಭಾರತದ ಪಶ್ಚಿಮ ಕರಾವಳಿಯ ಗುಜರಾತ್ (gujarat) ರಾಜ್ಯದಲ್ಲಿರುವ ದ್ವಾರಕಾ ಆಳವಾದ ಆಧ್ಯಾತ್ಮಿಕ, ಐತಿಹಾಸಿಕ ಮತ್ತು ನೈಸರ್ಗಿಕ ಸೌಂದರ್ಯಗಳನ್ನು ಹೊಂದಿರುವ ಪಟ್ಟಣವಾಗಿದೆ. ಬಜೆಟ್ ಸ್ನೇಹಿ (Budget Friendly) ಪ್ರವಾಸ ಮಾಡುವ ಯೋಚನೆ ಇದ್ದರೆ ದ್ವಾರಕವನ್ನು ಅನ್ವೇಷಿಸಬಹುದು.

ದ್ವಾರಕಾದ ಪ್ರಾಚೀನ ದೇವಾಲಯಗಳು, ಸುಂದರ ಕಡಲತೀರಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುತ್ತದೆ. ಇದು ದೂರದೂರುಗಳಿಂದ ಪ್ರವಾಸಿಗರನ್ನು ಹಾಗೂ ಯಾತ್ರಿಕರನ್ನು ತನ್ನತ್ತ ಚುಂಬಕದಂತೆ ಸೆಳೆಯುತ್ತದೆ. ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕೃಷ್ಣನ ನಗರಿಯಲ್ಲಿ ಪ್ರವಾಸಿಗರು ಬಜೆಟ್ ಸ್ನೇಹಿಯಾಗಿ ಸುತ್ತಾಡ ಬಹುದಾದ ಹಲವಾರು ಪ್ರದೇಶಗಳಿವೆ.


ಪ್ರಾಚೀನ ದೇವಾಲಯಗಳು

ದ್ವಾರಕಾವು ಚಾರ್ ಧಾಮ್ ತೀರ್ಥಯಾತ್ರಾ ಸ್ಥಳಗಳಲ್ಲಿ ಮತ್ತು ಶ್ರೀಕೃಷ್ಣನ ಪ್ರಾಚೀನ ಸಾಮ್ರಾಜ್ಯದಲ್ಲಿ ಸ್ಥಾನ ಪಡೆದಿರುವುದರಿಂದ ಅದು ಆಧ್ಯಾತ್ಮಿಕ ನೆಲೆಯಾಗಿದೆ. ಬಜೆಟ್ ಸ್ನೇಹಿ ಪ್ರಯಾಣ ಮಾಡಲು ಶ್ರೀಕೃಷ್ಣ ಸಮರ್ಪಿತ ದ್ವಾರಕಾಧೀಶ ದೇವಾಲಯ ಅಥವಾ ನಾಗೇಶ್ವರ ಜ್ಯೋತಿರ್ಲಿಂಗ ದೇವಾಲಯದಂತಹ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಬಹುದು. ಇದು ಹನ್ನೆರಡು ಪವಿತ್ರ ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದ್ದು, ಭಕ್ತರು ಮತ್ತು ಸಂದರ್ಶಕರಿಗೆ ಉಚಿತ ಪ್ರವೇಶವನ್ನು ಕಲ್ಪಿಸುತ್ತದೆ. ಯಾವುದೇ ವೆಚ್ಚವಿಲ್ಲದೆ ಇಲ್ಲಿ ದೈವಿಕ ವಾತಾವರಣವನ್ನು ಅನುಭವಿಸಬಹುದು. ಇದಲ್ಲದೇ ಪವಿತ್ರ ಸ್ಥಳಗಳಾದ ರುಕ್ಮಿಣಿ ದೇವಿ ದೇವಸ್ಥಾನ, ಗೋಮತಿ ಘಾಟ್ ಮತ್ತು ಹಿಂದೂ ಪುರಾಣಗಳಲ್ಲಿ ಗಮನಾರ್ಹವಾದ ಬೆಟ್ ದ್ವಾರಕಾ ದ್ವೀಪಕ್ಕೆ ಭೇಟಿ ನೀಡಬಹುದು. ಇದು ಎಲ್ಲರಿಗೂ ಮುಕ್ತವಾಗಿದೆ.


ರಮಣೀಯ ಕಡಲತೀರಗಳು

ದ್ವಾರಕಾವು ಪ್ರಾಚೀನ ಕಡಲತೀರಗಳು ಮತ್ತು ಕರಾವಳಿ ಪ್ರದೇಶಗಳನ್ನು ಹೊಂದಿದೆ. ವಿವಿಧ ಮನರಂಜನಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು, ವಿಶ್ರಾಂತಿ ಪಡೆಯಲು ಜೊತೆಗೆ ಅರೇಬಿಯನ್ ಸಮುದ್ರದ ಸ್ಪಷ್ಟ ನೋಟವನ್ನು ಕಾಣಲು, ವಿಹಂಗಮ ಸೂರ್ಯಾಸ್ತ, ಒಂಟೆ ಸವಾರಿ, ಬೀಚ್ ಪಿಕ್ನಿಕ್‌ಗಳನ್ನು ಇಲ್ಲಿ ಆನಂದಿಸಬಹುದು. ಇದರೊಂದಿಗೆ ಬೀಟ್ ದ್ವಾರಕಾ ಬೀಚ್, ಗೋಪಿ ತಲವ್ ಮತ್ತು ಓಖಾ-ಮಧಿ ಬೀಚ್ ನಲ್ಲಿ ಶಾಂತಿಯುತ ಪರಿಸರದಲ್ಲಿ ಈಜು, ಸೂರ್ಯನ ಸ್ನಾನ ಮತ್ತು ಪಕ್ಷಿ ವೀಕ್ಷಣೆಯನ್ನು ನಡೆಸಬಹುದು.

ಸ್ಥಳೀಯ ಸಂಸ್ಕೃತಿ

ವರ್ಷದುದ್ದಕ್ಕೂ ದ್ವಾರಕಾದಲ್ಲಿ ವಿವಿಧ ಸಾಂಸ್ಕೃತಿಕ ಹಬ್ಬಗಳು ಮತ್ತು ಕಾರ್ಯಕ್ರಮಗಳು ನಡೆಯುತ್ತವೆ. ಇದು ಪ್ರಯಾಣಿಕರಿಗೆ ಸ್ಥಳೀಯ ಸಂಪ್ರದಾಯಗಳು ಮತ್ತು ಪದ್ಧತಿಗಳ ಒಳನೋಟವನ್ನು ತೋರಿಸುತ್ತದೆ. ಪಟ್ಟಣದಲ್ಲಿ ವರ್ಣರಂಜಿತ ಮೆರವಣಿಗೆ, ಸಾಂಸ್ಕೃತಿಕ ಪ್ರದರ್ಶನ ಮತ್ತು ಧಾರ್ಮಿಕ ಆಚರಣೆಗಳನ್ನು ಆನಂದಿಸಬಹುದು. ಜನ್ಮಾಷ್ಟಮಿ, ದೀಪಾವಳಿ ಮತ್ತು ಹೋಳಿ ಹಬ್ಬಗಳು ಇಲ್ಲಿ ಅತ್ಯಂತ ವೈಭವದಿಂದ ನಡೆಯುತ್ತದೆ. ಅಲ್ಲದೆ, ಗರ್ಬಾ ಮತ್ತು ದಾಂಡಿಯಾ ರಾಸ್ ನೃತ್ಯಗಳು, ಸಾಂಪ್ರದಾಯಿಕ ಸಂಗೀತ ಕಛೇರಿಗಳು ಮತ್ತು ಪಟ್ಟಣದ ವಿವಿಧ ಸ್ಥಳಗಳಲ್ಲಿ ನಡೆಯುವ ಜಾನಪದ ಕಲಾ ಪ್ರದರ್ಶನಗಳನ್ನು ವೀಕ್ಷಿಸಲು ತಪ್ಪಿಸಿಕೊಳ್ಳಬೇಡಿ. ಇದು ದ್ವಾರಕೆಯ ಸಂಸ್ಕೃತಿಯ ರೋಮಾಂಚಕ ಅನುಭವವನ್ನು ಕೊಡುತ್ತದೆ.


ಗುಜರಾತಿ ಖಾದ್ಯ

ದ್ವಾರಕಾ ಪ್ರವಾಸವು ಅಲ್ಲಿನ ಗುಜರಾತಿ ಖಾದ್ಯಗಳನ್ನು ಸವಿಯದೇ ಪೂರ್ಣಗೊಳ್ಳುವುದಿಲ್ಲ. ಸ್ಥಳೀಯ ತಿನಿಸುಗಳು ಅಥವಾ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಅಲ್ಲಿ ಧೋಕ್ಲಾ, ಖಾಂಡ್ವಿ ಅಥವಾ ಥೇಪ್ಲಾ ಮೊದಲಾದ ಭಕ್ಷ್ಯಗಳನ್ನು ಸವಿಯಬಹುದು. ಇದರೊಂದಿಗೆ ಪಟ್ಟಣದಲ್ಲಿ ಖಿಚು, ಫಫ್ಡಾ, ಜಲೇಬಿ-ಫಫ್ಡಾ ಸೇರಿದಂತೆ ಕೆಲವು ಪ್ರಸಿದ್ಧ ಭಕ್ಷ್ಯಗಳು ಕೈಗೆಟುಕುವ ದರದಲ್ಲಿ ಲಭ್ಯವಾಗುತ್ತದೆ.

ಇದನ್ನೂ ಓದಿ: Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಕೈಗೆಟುಕುವ ದರದಲ್ಲಿ ವಸತಿ

ದ್ವಾರಕಾದಲ್ಲಿ ಬಜೆಟ್‌ಗೆ ಅನುಗುಣವಾದ ಅತಿಥಿ ಗೃಹಗಳು, ವಸತಿಗೃಹಗಳು ಮತ್ತು ಹೊಟೇಲ್ ಗಳು ಲಭ್ಯವಿದೆ. ಸಮಂಜಸವಾದ ದರದಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸ್ವಚ್ಛ ಕೊಠಡಿಗಳನ್ನು ಒದಗಿಸುವ ಬಜೆಟ್ ಸ್ನೇಹಿ ಹೊಟೇಲ್‌ಗಳಲ್ಲಿ ಉಳಿಯಬಹುದು.

ಇದರೊಂದಿಗೆ ದ್ವಾರಕಾದಲ್ಲಿನ ಹಲವಾರು ಅತಿಥಿಗೃಹಗಳು ಮತ್ತು ಬಜೆಟ್ ಸ್ನೇಹಿ ಹೊಟೇಲ್ ಗಳು ರಿಯಾಯಿತಿ ದರದಲ್ಲಿ ಹತ್ತಿರದ ಆಕರ್ಷಣೆಗಳಿಗೆ ವಸತಿ, ಊಟ ಮತ್ತು ಸಾರಿಗೆಯನ್ನು ಒಳಗೊಂಡಿರುವ ಪ್ಯಾಕೇಜ್ ಡೀಲ್‌ಗಳನ್ನು ಒದಗಿಸುತ್ತದೆ. ಹೆಚ್ಚು ಖರ್ಚು ಮಾಡದೇ ಇದರ ಪ್ರಯೋಜನವನ್ನು ಪಡೆಯಬಹುದು.

Continue Reading
Advertisement
woman murder case
ಕ್ರೈಂ2 mins ago

Murder Case: ಹುಬ್ಬಳ್ಳಿಯಲ್ಲಿ ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಕೊಲೆ

Rashmika Mandanna Reacts To India Decade of Growth Amid Lok Sabha Polls
ಟಾಲಿವುಡ್21 mins ago

Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

Job Alert
ಉದ್ಯೋಗ31 mins ago

Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

viral video garbage bengaluru roads
ವೈರಲ್ ನ್ಯೂಸ್1 hour ago

Viral video: ʼಅಸಹ್ಯಕರ!ʼ ಬೆಂಗಳೂರಿನ ರಸ್ತೆಗಳ ಕಸದ ವಿಡಿಯೋ ಪೋಸ್ಟ್‌ ಮಾಡಿದ ಕಿರಣ್ ಮಜುಂದಾರ್ ಶಾ

Stone pelting
ದೇಶ1 hour ago

Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

Crowd Funding
ದೇಶ1 hour ago

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

copper mine lift collapse
ಪ್ರಮುಖ ಸುದ್ದಿ2 hours ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Health Tips in Kannada
ಆರೋಗ್ಯ2 hours ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Mango Juice Benefits
ಆರೋಗ್ಯ3 hours ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ14 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202416 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202420 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ20 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು21 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌