Desert travel | ಭಾರತದಲ್ಲಿದ್ದೂ ಚಳಿಗಾಲದಲ್ಲಿ ಮರಳುಗಾಡು ನೋಡದಿದ್ದರೆ ಹೇಗೆ?! - Vistara News

ಪ್ರಮುಖ ಸುದ್ದಿ

Desert travel | ಭಾರತದಲ್ಲಿದ್ದೂ ಚಳಿಗಾಲದಲ್ಲಿ ಮರಳುಗಾಡು ನೋಡದಿದ್ದರೆ ಹೇಗೆ?!

ಒಂದಿಷ್ಟು ರಜೆಯನ್ನು ಒಟ್ಟು ಹಾಕಿದರೆ, ಚಳಿಗಾಲದಲ್ಲೇ ಹೋಗಬೇಕಾದ ಜಾಗಗಳು ಅನೇಕ. ನೀವು ಪ್ರವಾಸೀ ಪ್ರಿಯರಾಗಿದ್ದರೆ ಕನಿಷ್ಟ ಮರಳುಗಾಡಿನ ಅನುಭವವನ್ನಾದರೂ ನಿಮ್ಮದಾಗಿಸಿಕೊಳ್ಳಬೇಕು.

VISTARANEWS.COM


on

tourism places
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಳಿಗಾಲ ಬಂತೆಂದರೆ ಸಾಕು, ಇರುವ ರಜೆಯಲ್ಲಿ ಬೆಚ್ಚಗೆ ಹೊದ್ದು ಮನೆಯಲ್ಲಿ ಮಲಗುವ ಅನಿಸಿದರೆ ತಪ್ಪಲ್ಲ. ಚಳಿಗಾಲದ ಆಲಸ್ಯದಿಂದ ಹೊರಬರಲು ನಿಜವಾದ ಮನೋ ಇಚ್ಛೆ ಬೇಕಾಗುತ್ತದೆ. ಇಂಥದ್ದೊಂದು ಆತ್ಮಬಲದಿಂದ ನೀವು ಬೆಚ್ಚನೆಯ ಬ್ಲ್ಯಾಂಕೆಟ್‌ ಒಳಗಿಂದ ಹೊರಗಿಣುಕಿದರೆ ಭಾರತದಲ್ಲಿ ಅದ್ಭುತವೆನಿಸುವ ಜಾಗಗಳು ಬೇಕಾದಷ್ಟಿವೆ. ಒಂದಿಷ್ಟು ರಜೆಯನ್ನು ಒಟ್ಟು ಹಾಕಿದರೆ, ಚಳಿಗಾಲದಲ್ಲೇ ಹೋಗಬೇಕಾದ ಜಾಗಗಳು ಅನೇಕ. ನೀವು ಪ್ರವಾಸೀ ಪ್ರಿಯರಾಗಿದ್ದರೆ ಕನಿಷ್ಟ ಮರಳುಗಾಡಿನ ಅನುಭವವನ್ನಾದರೂ ನಿಮ್ಮದಾಗಿಸಿಕೊಳ್ಳಬೇಕು.

ಹೌದು, ರಾಜಸ್ಥಾನ ಎಂಬ ರಾಜ್ಯವೇ ಹಾಗೆ. ಕಲರ್ಫುಲ್.‌ ಇಲ್ಲಿನ ಅತ್ಯಪೂರ್ವ ಕುಶಲಕಲೆ, ವಾಸ್ತುಶಿಲ್ಪದ ಬೆರಗೇ ಒಂದೆಡೆಯಾದರೆ, ಭೂಪ್ರದೇಶದ ಸೊಬಗೇ ಮತ್ತೊಂದು ಬಗೆಯಲ್ಲಿ ಸುಂದರ. ʻಅಯ್ಯೋ, ಅದೊಂದು ಮರುಭೂಮಿ, ಬೆಂಗಾಡು, ಇಲ್ಲಿ ಜನವಸತಿ ಕಡಿಮೆ, ನೀರಿಗೆ ಬರ, ಬಿಸಿಲೋ ಬಿಸಿಲು, ಯಾರಿಗೆ ಬೇಕು ಇಲ್ಲಿಂದ ಅಲ್ಲಿ ಹೋಗಿ ಸಾಯುವ ಪರಿಸ್ಥಿತಿʼ ಎಂದು ಯೋಚಿಸುತ್ತಾ ಮೂಗು ಮುರಿದರೆ ನಿಮ್ಮಷ್ಟು ಅದೃಷ್ಟ ಹೀನರು ಇನ್ನೊಬ್ಬರಿಲ್ಲ. ಯಾಕೆಂದರೆ, ಹೋಗಿ ನೋಡಿದರಷ್ಟೇ ಅದು ನಿಮ್ಮ ತಪ್ಪು ತಿಳುವಳಿಕೆ ಎಂದು ಅರಿವಾಗುತ್ತದೆ. ಅದಕ್ಕಾಗಿಯೇ ಚಳಿಗಾಲದಲ್ಲಿ ರಾಜಸ್ಥಾನಕ್ಕೆ ಭೇಟಿ ಕೊಡಬೇಕು. ಹೆಚ್ಚು ಬಿಸಿಲೂ ಇಲ್ಲದ, ಸುಖಾಸುಮ್ಮನೆ ರಾಜಸ್ಥಾನದ ಎಲ್ಲ ಜಾಗಗಳಲ್ಲಿ ಮನಸೋ ಇಚ್ಛೆ ತಿರುಗಾಡಬಹುದಾದ ಕಾಲವಿದು.

jaisalmer

೧. ಜೈಸಲ್ಮೇರ್‌ನ ಮರುಳುಗಾಡಿನಲ್ಲೊಂದು ರಾತ್ರಿ: ಮರುಳುಗಾಡಿನಲ್ಲಿ ರಾತ್ರಿ ಕಳೆಯುವ ಬಗ್ಗೆ ಎಂದಾದರೂ ಯೋಚಿಸಿದ್ದೀರಾ? ಅದಕ್ಕೆ ನೀವು ಬೇರೆ ದೇಶಕ್ಕೆ ಹೋಗುವ ಬಗ್ಗೆ ಚಿಂತಿಸಬೇಕಾಗಿಲ್ಲ. ನಮ್ಮ ದೇಶದ ಥಾರ್‌ ಮರುಳುಗಾಡಿನ ಥರಗುಟ್ಟುವ ರಾತ್ರಿಯ ಅನುಭವ ಹೊಂದದಿದ್ದರೆ ನಮ್ಮ ಭಾರತದಲ್ಲಿದ್ದೂ ವೇಸ್ಟ್‌. ಈ ಅನುಭವವನ್ನು ಚೆನ್ನಾಗಿ ಹೊಂದಬೇಕೆಂದರೆ ರಾಜಸ್ಥಾನದ ಜೈಸಲ್ಮೇರಿಗೆ ನೀವು ಚಳಿಗಾಲದಲ್ಲಿ ಹೋಗಬೇಕು. ಹಗಲಿನ ಬಿಸಿಲಿನ ಜೊತೆಗೆ ಮೈಗೆ ಅಡರುವ ಚಳಿಗಾಳಿಯ ಸುಖವನ್ನು ಅನುಭವಿಸುತ್ತಾ, ಸಂಜೆಯ ಹೊತ್ತು ಟೆಂಟ್‌ ಸೇರಿಕೊಂಡರೆ, ರಾತ್ರಿ ದಪ್ಪನೆಯ ಸ್ವೆಟರ್‌ ತೊಟ್ಟು, ಚಳಿ ಕಾಯಿಸುತ್ತಾ, ಕಣ್ಣು ಹಾಯಿಸಿದಷ್ಟೂ ದೂರ ಕಾಣುವ ಹೊಂಬಣ್ಣದ ಮರಳ ರಾಶಿಯನ್ನು ನೋಡುತ್ತಾ, ಆಕಾಶದಲ್ಲಿ ಹೊಳೆವ ನಕ್ಷತ್ರಗಳನ್ನು ಕಣ್ತುಂಬಿಕೊಳ್ಳುತ್ತಾ, ಒಂಟೆಗಳ ಮೇಲೆ ಸವಾರಿ ಮಾಡುತ್ತಾ, ಸಾಹಸೀ ಪ್ರವೃತ್ತಿಯಿದ್ದರೆ ಧೂಳೆಬ್ಬಿಸುವ ಜೀಪ್‌ ಸಫಾರಿ ಮಾಡುತ್ತಾ ಚಳಿಗಾಲದ ಮರಳುಗಾಡಿನ ಅನುಭವವನ್ನು ಜೀವನದ ಅತ್ಯಪೂರ್ವ ಅನುಭವಗಳಲ್ಲಿ ಒಂದಾಗಿಸಬಹುದು! ಅದಕ್ಕಾಗಿ ಜೈಸಲ್ಮೇರ್‌ ಬೆಸ್ಟ್‌. ಇದಲ್ಲದೆ, ಇಲ್ಲಿ ಪ್ರವಾಸಿಗರಿಂದ ಗಿಜಿಗುಡುತ್ತಿದೆ ಅನಿಸಿದರೆ, ಒಂದಿಷ್ಟು ಹುಡುಕಾಡಿ ಹತ್ತಿರದ ಹೆಚ್ಚು ಪ್ರವಾಸಿಗರಿಲ್ಲದ ಜಾಗಗಳನ್ನು ಹುಡುಕಬಹುದು. ಕುಡಿಯಂತಹ ಜಾಗಗಳು ನಿಮಗೆ ಇಂಥ ಎಲ್ಲ ಅನುಭವಗಳನ್ನು ನೀಡಬಹುದು.

pushkar

೨. ಪುಷ್ಕರ್ ಎಂಬ ಒಂಟೆಯೂರು:‌ ಈ ಹೆಸರು ಕೇಳಿದ ತಕ್ಷಣ ನೆನಪಾಗುವುದು ಪ್ರತಿವರ್ಷ ಇಲ್ಲಿ ನಡೆಯುವ ಒಂಟೆ ಮೇಳ. ಛಾಯಾಗ್ರಾಹಕರುಗಳಿಗೆ, ಪ್ರವಾಸಿಪ್ರಿಯರಿಗೆ ಇಲ್ಲಿ ನಡೆಯುವ ಈ ಉತ್ಸವವನ್ನು ನೋಡುವುದೇ ಬಕೆಟ್‌ ಲಿಸ್ಟಿನ ಮುಖ್ಯ ಉದ್ದೇಶವಾದರೂ ಇಲ್ಲಿ ನೋಡಲು ಕೆಲವು ಜಾಗಗಳಿವೆ. ಇಲ್ಲಿನ ಬ್ರಹ್ಮ ದೇವಸ್ಥಾನ, ಸರೋವರ ಕೂಡಾ ನೋಡಬಹುದಾದ ಜಾಗಗಳ ಪಟ್ಟಿಗೇ ಸೇರುತ್ತದೆ. ಹಿಂದೂ ಹಾಗೂ ಸಿಖ್ಖರಿಗೂ ಇದು ಪವಿತ್ರ ಜಾಗಗಳು. ಇಲ್ಲಿಂದ ಸುಮಾರು ೧೦ ಕಿಮೀ ದೂರದಲ್ಲಿ ಪ್ರಸಿದ್ಧ ಅಜ್ಮೇರ್‌ ದರ್ಗಾ ಕೂಡಾ ಇದೆ. ಹಾಗಾಗಿ ಬಹುತೇಕ ಎಲ್ಲ ಧರ್ಮದವರನ್ನೂ ತನ್ನೆಡೆಗೆ ಸೆಳೆಯುವ ತಾಕತ್ತು ಪುಷ್ಕರ್‌ಗಿದೆ. ಪಿಂಕ್‌ ಸಿಟಿ ಜೈಪುರದಿಂದ ಸುಮಾರು ೧೫೦ ಕಿಮೀ ದೂರದಲ್ಲಿರುವ ಇದು ಜೈಪುರ ಪ್ರವಾಸ ಮಾಡಬಯಸುವವರ ಪಟ್ಟಿಯಲ್ಲಿ ಒಂದು ದಿನದ ಭೇಟಿಗೆ ಇರಿಸಿಕೊಳ್ಳಬಹುದಾದ ಜಾಗ ಇದು.

೩. ಅತ್ಯದ್ಭುತ ವಾಸ್ತುಶಿಲ್ಪ: ಹೆಚ್ಚು ತ್ರಾಸವಿಲ್ಲದೆ ಅಲೆದಾಡಿಕೊಂಡು ಅದ್ಭುತ ವಾಸ್ತುಶಿಲ್ಪಗಳಿರುವ ಜೈನ ಮಂದಿರಗಳನ್ನೂ, ಹಳೆಯ ಹವೇಲಿಗಳನ್ನು ನೋಡಬೇಕೆಂದರೆ ಬಿಕಾನೇರ್‌, ಉದಯಪುರ, ಜೋಧಪುರಕ್ಕೆ ಹೋಗಬೇಕು. ನೀಲಿನಗರಿಯ ಸೌಂದರ್ಯ ಸವಿಯಬೇಕಿದ್ದರೆ ಜೋಧಪುರದ ಎತ್ತರದ ಕಟ್ಟಡದ ಮೇಲೆ ಹತ್ತಿ ನಿಂತು ನೋಡಬೇಕು. ಪಿಂಕ್‌ ಸಿಟಿಯ ಜೊಬಗು ಜೈಪುರದ ಹವಾಮಹಲಿನ ಮೇಲೆ ಹತ್ತಿ ನಿಂತರೆ ವೇದ್ಯವಾಗುತ್ತದೆ. ಚೀನಾದ ಗೋಡೆಯೇನು ಮಹಾ, ನಮ್ಮ ದೇಶದಲ್ಲೇ ಇದನ್ನೂ ಮೀರಿಸುವಂಥದ್ದೊಂದು ಇದೆ ಎಂದಾದರೆ ಅದು ರಾಜಸ್ಥಾನದ ಕುಂಬಲ್‌ಘಡ್‌ ಕೋಟೆ. ತನ್ನದೇ ವಿಶೇಷ ಬಗೆಯ ವಾಸ್ತುಶಿಲ್ಪ, ಕುಸುರಿ ಕಲೆ, ವಸ್ತ್ರವೈವಿಧ್ಯ, ಸಂಸ್ಕೃತಿ, ಭಾಷೆಯಿಂದ ಗಮನ ಸೆಳೆವ ರಾಜಸ್ಥಾನದ ಈ ಎಲ್ಲ ಪ್ರಮುಖ ಊರುಗಳನ್ನು ನಿಮ್ಮ ಪ್ರವಾಸದ ಪಟ್ಟಿಯಿಂದ ಬಿಟ್ಟರೆ ಅದರಷ್ಟು ದೊಡ್ಡ ನಷ್ಟ ಇನ್ನೊಂದಿಲ್ಲ.

bikaner

ಇದನ್ನೂ ಓದಿ | Travel Story | ಈ ಅಜ್ಜಿ ಮೊಮ್ಮಗ ಏಳು ವರ್ಷಗಳಲ್ಲಿ ತಿರುಗಾಡಿದ್ದು 50 ಸಾವಿರ ಮೈಲಿ!

೪. ತರಹೇವಾರಿ ತಿಂಡಿತಿನಿಸುಗಳು: ನೀವು ತಿಂಡಿ ಪೋತರಾ? ಬಗೆಬಗೆಯ ತಿಂಡಿಗಳನ್ನು ಸವಿಯುವುದರಲ್ಲಿ ಸ್ವರ್ಗ ಸುಖ ಅನಿಸುತ್ತದೋ? ಹಾಗಾದರೆ, ರಾಜಸ್ಥಾನದ ಈ ಕೆಲವು ಜಾಗಗಳಿಗೆ ಭೇಟಿ ಕೊಡಲೇ ಬೇಕು. ಬಿಕಾನೇರಿನಲ್ಲಿ ಯಥೇಚ್ಛವಾಗಿ ತಯಾರಾಗಿ ಭಾರತದಾದ್ಯಂತ ಮನೆಮಾತಾಗಿರುವ ಭುಜಿಯಾ ಸೇವ್‌ ಕೂಡಾ ಇಲ್ಲೇ ಬೀದಿ ಬದಿಯಲ್ಲಿ ಬೇರೆ ಬೇರೆ ಕುಟುಂಬಗಳ ಪ್ರಮುಖ ಉದ್ಯಮವಾಗಿ ಕಣ್ಣಿಗೆ ಬೀಳುತ್ತದೆ. ಅಲ್ಲೇ ಬಿಸಿಬಿಸಿ ಕೈಲಿ ಹಿಡಿದು ಸವಿಯಬಹುದು. ಇನ್ನು, ಇಲ್ಲಿನ ಮಂದಿಯ ಬೆಳಗಿನಪ್ರಮುಖ ಆಹಾರಗಳಾದ ಕಚೋಡಿಯ ವಿವಿಧ ಬಗೆಗಳನ್ನೂ ರಸ್ತೆಯದಿಯ ಪುಟ್ಟ ಪುಟ್ಟ ಅಂಗಡಿಗಳಲ್ಲಿ ಸಿಗುತ್ತದೆ. ಬೆಳಗಿನ ಏಳು ಗಂಟೆಗೇ ರಸ್ತೆಬದಿಯ ತಳ್ಳು ಗಾಡಿಯಲ್ಲಿ ಸಿಗುವ ಹತ್ತು ರುಪಾಯಿಯ ಪೋಹಾ ನಿಮ್ಮ ಹೃದಯ ಗೆಲ್ಲುತ್ತದೆ. ಎಲ್ಲ ಹೊತ್ತಲ್ಲೂ ಸಿಗುವ ಬಿಸಿಬಿಸಿ ಗರಮಾಗರಂ ಮಸಾಲೆಭರಿತ ಮಟ್ಕಾ ಚಾಯ್‌ ಅಂತೂ ಸವಿಸವಿದು ಕುಡಿಯಬಹುದು. ನೀವು ಸಿಹಿ ಪ್ರಿಯರಾದರಂತೂ ಮುಗಿಯಿತು. ಬೆಳ್ಳಂಬೆಳಗ್ಗೆ ಎದ್ದ ಕೂಡಲೇ ತಟ್ಟೆಯಲ್ಲಿ ಬಿಸಿಬಿಸಿ ಜಿಲೇಬಿಯಿಂದ ಹಿಡಿದು ಘೇವರ್‌ವರೆಗೂ ಎಲ್ಲವನ್ನೂ ಎಲ್ಲಾ ಹೊತ್ತು ಮನಬಂದಷ್ಟು ಸವಿಯಬಹುದು. ಇಔಕ್ಕೆ ಇಂಥದ್ದೇ ಊರು ಎಂದಿಲ್ಲ. ರಾಜಸ್ಥಾನದಲ್ಲಿ ಎಲ್ಲೇ ಕಾಲಿಟ್ಟರೂ ಆಹಾರಪ್ರಿಯರ ಮನತಣಿಸಬಹುದಾದಷ್ಟು ಖಾದ್ಯಗಳು ಸಿಕ್ಕೇ ಸಿಗುತ್ತವೆ. ಇವುಗಳೆಲ್ಲವನ್ನೂ ಚಳಿಗಾಲದಲ್ಲಿ ಹೊಟ್ಟೆಗೆ ಹಾಕುವ ಸುಖ ಒಂದು ಹಿಡಿ ಹೆಚ್ಚು. 

ಇದನ್ನೂ ಓದಿ | Bicycle travel | ಕರ್ನಾಟಕದಿಂದ ಕಾಶ್ಮೀರಕ್ಕೆ ಇಬ್ಬರು ಕನ್ನಡಿಗರ 3,500 ಕಿಮೀ ಸೈಕಲ್‌ ಯಾತ್ರೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Liquor Price Karnataka: ನೊರೆ ನೊರೆ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ

Liquor Price Karnataka: ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದ್ದವು. ಇದೀಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ಬೆಲೆ ಹೆಚ್ಚಿಸಲಾಗಿದೆ.

VISTARANEWS.COM


on

Liquor Price Karnataka
Koo

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆ (Beer Price) ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ (Liquor Price Karnataka) ಏರಿಕೆಯಾಗುತ್ತಿದ್ದು, ನೊರೆ ಉಕ್ಕಿಸುವ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆಯಾಗಲಿದೆ. ದರ ಕೇಳಿಯೇ ಮದ್ಯಪ್ರಿಯರ ಕಿಕ್‌ ಇಳಿಯವಂತಾಗಿದೆ.

ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದ್ದವು. ಇದೀಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ಬೆಲೆ ಹೆಚ್ಚಿಸಲಾಗಿದೆ. ಬಿಯರ್ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ. ಇತರ ದುಬಾರಿ ಹಾಟ್‌ ಮದ್ಯಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಮದ್ಯಪ್ರಿಯರು ಬಿಯರ್‌ಗೆ ತೃಪ್ತಿಪಟ್ಟುಕೊಳ್ಳೋಣ ಎಂದು ಭಾವಿಸಿದರೆ ಈಗ ಅದೂ ಸಾಧ್ಯವಿಲ್ಲದಾಗಿದೆ.

ಕಾಂಗ್ರೆಸ್ ಸರ್ಕಾರ ಬಂದಮೇಲೆ ಬಿಯರ್ ದರ ಸುಮಾರು 60 ರೂಪಾಯಿಯಷ್ಟು ಏರಿಕೆಯಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ಸರಕಾರ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಅದರಿಂದ ದರ ಏರಿಕೆಯಾಗಿತ್ತು. ಆ ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್‌ ಮೇಲೆ ಕನಿಷ್ಠ 10 ರೂ.ವರೆಗೆ ಏರಿಕೆ ಮಾಡಿದ್ದವು.

ನಂತರ ಮತ್ತೆ ಸರ್ಕಾರದಿಂದ ಬಿಯರ್ ಮೇಲಿನ ಸುಂಕ‌ ಹೆಚ್ಚಳ ಮಾಡಿದ್ದ ಕಾರಣ ಕಳೆದ ಫೆಬ್ರವರಿಯಲ್ಲಿ ಬಿಯರ್ ದರ ಏರಿದೆ. ಇದೀಗ ಮತ್ತೆ ಬಿಯರ್ ದರ ಏರಿಕೆಗೆ ಕಂಪನಿಗಳು ತೀರ್ಮಾನಿಸಿವೆ. ಹೀಗಾಗಿ 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು 60 ರೂ. ವರೆಗೆ ಹೆಚ್ಚಳವಾದಂತಾಗಿದೆ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಖಜಾನೆ ತುಂಬಿಸಿಕೊಳ್ಳಲು ಅಬಕಾರಿ ಸುಂಕವನ್ನು ಅನಿಯಮಿತವಾಗಿ ಹೆಚ್ಚಿಸುವ ದಾರಿಯನ್ನು ಸರಕಾರ ಹಿಡಿದಿದೆ ಎಂದು ಲಿಕ್ಕರ್‌ಪ್ರಿಯರು ಆರೋಪಿಸಿದ್ದಾರೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ರಾಜಕೀಯ

Parliament Session: ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜು; Live ಇಲ್ಲಿ ವೀಕ್ಷಿಸಿ

Parliament Session: ಸಂಸತ್‌ನಲ್ಲಿ ಈ ಬಾರಿ ಪ್ರತಿಪಕ್ಷಗಳ ಬಲ ಹೆಚ್ಚಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿವೆ. ಸಂಸತ್‌ನ ಬಜೆಟ್‌ ಅಧಿವೇಶನ ಕಾವೇರಿದ ಚರ್ಚೆಗೆ ಸಾಕ್ಷಿಯಾಗುತ್ತಿದ್ದು ಇಂದು ಕೂಡ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೋಲಾಹಲ ನಡೆಯುವ ನಿರೀಕ್ಷೆ ಇದೆ. ಜುಲೈ 23ರಂದು ಮಂಡಿಸಲಾದ 2024-25ರ ಕೇಂದ್ರ ಬಜೆಟ್ ಮತ್ತು ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ಪ್ರಕರಣ ಉಭಯ ಸದನಗಳಲ್ಲಿ ಇಂದು ಕೂಡ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ. ಹೀಗಾಗಿ ಕುತೂಹಲ ಕೆರಳಿಸಿರುವ ಅಧಿವೇಶನವನ್ನು ಲೈವ್‌ ಆಗಿ ಇಲ್ಲಿ ವೀಕ್ಷಿಸಿ.

VISTARANEWS.COM


on

Parliament Session
Koo

ನವದೆಹಲಿ: ಸಂಸತ್‌ನ ಬಜೆಟ್‌ ಅಧಿವೇಶನ (Parliament Session) ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಭಾರಿ ಚರ್ಚೆಗೆ ಸಾಕ್ಷಿಯಾಗುತ್ತಿದೆ. ಇಂದು ಕೂಡ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೋಲಾಹಲ ನಡೆಯುವ ನಿರೀಕ್ಷೆ ಇದೆ. ಜುಲೈ 23ರಂದು ಮಂಡಿಸಲಾದ 2024-25ರ ಕೇಂದ್ರ ಬಜೆಟ್ ಮತ್ತು ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ಪ್ರಕರಣ ಉಭಯ ಸದನಗಳಲ್ಲಿ ಇಂದು ಕೂಡ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ.

ಬೆಳಿಗ್ಗೆ 11 ಗಂಟೆಗೆ ಸಂಸತ್ತಿನ ಕಲಾಪಗಳು ಪುನರಾರಂಭಗೊಳ್ಳಲಿದ್ದು, ಉಭಯ ಸದನಗಳು 2024-25ರ ಬಜೆಟ್ ಮೇಲಿನ ಚರ್ಚೆಗಳನ್ನು ಮುಂದುವರಿಸಲಿವೆ. ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳನ್ನು ನಿರ್ಬಂಧಿಸುವ ಆದೇಶವನ್ನು ತೆಗೆದುಹಾಕುವಂತೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಸೋಮವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇದಕ್ಕೆ ಉತ್ತರಿಸಿದ್ದ ಸ್ಪೀಕರ್‌ ಅವರು ಸಂಸತ್ತಿನ ಕಾರ್ಯವಿಧಾನದ ನಿಯಮಗಳ ಬಗ್ಗೆ ರಾಹುಲ್‌ ಗಾಂಧಿಗೆ ನೆನಪಿಸಿದ್ದರು. ಅಂತಹ ವಿಷಯಗಳನ್ನು ಸದನದಲ್ಲಿ ಚರ್ಚಿಸುವ ಬದಲು ಖಾಸಗಿಯಾಗಿ ಚರ್ಚಿಸಬೇಕೆಂದು ಸಲಹೆ ನೀಡಿದ್ದರು. ಬಳಿಕ ರಾಹುಲ್ ಗಾಂಧಿ ಅವರು ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒ’ಬ್ರಿಯಾನ್, ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಮತ್ತು ಶಿವಸೇನೆ-ಯುಬಿಟಿ ಸಂಸದೆ ಪ್ರಿಯಾಂಕಾ ಚತುರ್ವೇದಿ ಮತ್ತಿತತ ಪ್ರತಿಪಕ್ಷದ ನಾಯಕರೊಂದಿಗೆ ಮಾಧ್ಯಮ ಸಿಬ್ಬಂದಿಯನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

ನಂತರ ಓಂ ಬಿರ್ಲಾ ಅವರು ಪತ್ರಕರ್ತರ ಗುಂಪನ್ನು ಭೇಟಿಯಾಗಿ, ಅವರ ಕುಂದುಕೊರತೆಗಳನ್ನು ಪರಿಹರಿಸಲಾಗುವುದು ಮತ್ತು ಅವರ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಉತ್ತಮ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದರು.

ಲೋಕಸಭೆಯಲ್ಲಿ ಅಬ್ಬರಿಸಿದ ರಾಹುಲ್‌ ಗಾಂಧಿ

ಇನ್ನು ಸೋಮವಾರ ಬಜೆಟ್‌ ಮೇಲಿನ ಚರ್ಚೆ ವೇಳೆ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದರಲ್ಲೂ, ಮಹಾಭಾರತದ ಚಕ್ರವ್ಯೂಹವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ ಅವರು ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ಬಾಣ ಪ್ರಯೋಗಿಸಿದ್ದರು. “ಮಹಾಭಾರತದ ಚಕ್ರವ್ಯೂಹದಂತೆ  ಈಗಲೂ ಒಂದು ಚಕ್ರವ್ಯೂಹ ರಚಿಸಲಾಗಿದೆ. ದೇಶದ ಜನರು ಆ ಚಕ್ರವ್ಯೂಹಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿ 6 ಮಂದಿಯು ಈ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಹೇಳಿದ್ದರು.

“ಚಕ್ರವ್ಯೂಹದಲ್ಲಿ ತುಂಬ ಜನ ಇರುತ್ತಾರೆ. ಆದರೆ, ಚಕ್ರವ್ಯೂಹದ ಮಧ್ಯದಲ್ಲಿ 6 ಜನ ಇರುತ್ತಾರೆ ಹಾಗೂ ಅವರು ಇಡೀ ಚಕ್ರವ್ಯೂಹವನ್ನು ನಿಯಂತ್ರಿಸುತ್ತಾರೆ. ಆಧುನಿಕ ಕಾಲದ ಚಕ್ರವ್ಯೂಹವನ್ನು ಕೂಡ ಆರು ಜನ ನಿಯಂತ್ರಿಸುತ್ತಿದ್ದಾರೆ. ನರೇಂದ್ರ ಮೋದಿ, ಅಮಿತ್‌ ಶಾ, ಮೋಹನ್‌ ಭಾಗವತ್‌, ಅಜಿತ್‌ ದೋವಲ್‌, ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿಯೇ ಈಗ ಕಮಲದ ಆಕಾರದ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು.

ಅಗ್ನಿಪಥ್‌ ಯೋಜನೆಗೆ ವಿರೋಧ

ಇದರ ಜತೆಗೆ ರಾಹುಲ್‌ ಗಾಂಧಿ ಅಗ್ನಿಪಥ್‌ ಯೋಜನೆ ಬಗ್ಗೆಯೂ ಪ್ರಸ್ತಾವಿಸಿ ವಿರೋಧ ವ್ಯಕ್ತಪಡಿಸಿದ್ದರು. ʼʼಸೇನೆಯ ಸೈನಿಕರನ್ನು ಅಗ್ನಿವೀರ್ ಹೆಸರಿನ ಚಕ್ರವ್ಯೂಹದಲ್ಲಿ ಸಿಲುಕಿಸಲಾಯ್ತು. ಈ ಬಜೆಟ್‌ನಲ್ಲಿ ಅಗ್ನಿವೀರರ ಪಿಂಚಣಿಗಾಗಿ ಒಂದು ರೂಪಾಯಿಯನ್ನು ತೆಗೆದಿರಿಸಿಲ್ಲ. ನಿಮ್ಮನ್ನು ದೇಶಭಕ್ತರೆಂದು ಕರೆದುಕೊಳ್ಳುವ ನೀವು ಅಗ್ನಿವೀರರ ಪಿಂಚಣಿಗಾಗಿ ಅನುದಾನ ಘೋಷಣೆ ಮಾಡಿಲ್ಲ. ನಿಮ್ಮ ಚಕ್ರವ್ಯೂಹದಿಂದ ಹೊರಬರಲು ರೈತರು ಎಂಎಸ್‌ಪಿ ಲೀಗಲ್ ಗ್ಯಾರಂಟಿಯನ್ನು ಕೇಳಿದ್ದರು. ಆದ್ರೆ ನೀವು ರೈತರ ಜತೆ ಮಾತನಾಡಲು ಸಿದ್ಧವಿಲ್ಲʼʼ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: Rahul Gandhi: ರಾಹುಲ್‌ ಮಾತಿಗೆ ಹಣೆ ಚಚ್ಚಿಕೊಂಡು, ಮುಖ ಮುಚ್ಚಿಕೊಂಡ ಸಚಿವೆ ನಿರ್ಮಲಾ: ಭಾರೀ ವೈರಲಾಗ್ತಿದೆ ಈ ವಿಡಿಯೋ

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಅವರು, ʼʼಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅಗ್ನಿಪಥ್ ಯೋಜನೆಯ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆʼʼ ಎಂದು ಹೇಳಿದ್ದರು. ಜತೆಗೆ ಯೋಜನೆ ಬಗ್ಗೆ ಚರ್ಚೆಗೆ ಸಿದ್ದ ಎಂದು ಸವಾಲು ಸ್ವೀಕರಿಸಿದ್ದರು. ಹೀಗಾಗಿ ಇಂದು ಕೂಡ ಸದನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

Continue Reading

ದೇಶ

Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

Jio Games: ದೇಶದ ಮುಂಚೂಣಿ ಗೇಮಿಂಗ್‌ ಫ್ಲಾಟ್‌ಫಾರಂ ಆಗಿರುವ ʼಜಿಯೋಗೇಮ್ಸ್ʼ, ಜಿಯೋಗೇಮ್ಸ್‌ ಆಪ್‌ ಮತ್ತು ಜಿಯೋ ಸೆಟ್‌ಆಫ್‌ ಬಾಕ್ಸ್‌ನಲ್ಲಿ ಗೂಗಲ್‌ ಗೇಮ್‌ಸ್ನ್ಯಾಕ್ಸ್‌ ಅನ್ನು ಸಂಯೋಜಿಸುವ ಮೂಲಕ ತನ್ನ ಗೇಮಿಂಗ್‌ ಪೋರ್ಟ್‌ಫೋಲಿಯೊವನ್ನು ವಿಸ್ತರಿಸಿಕೊಂಡಿದೆ. ಇದರಿಂದಾಗಿ ಜಿಯೋಗೇಮ್ಸ್ ಬಳಕೆದಾರರು‌ Daily Sudoku, Om Nom Run, and Traffic Tom ಸೇರಿದಂತೆ ಜನಪ್ರಿಯವಾದ 8 ಗೇಮ್‌ಗಳನ್ನು ಆಡಬಹುದಾಗಿದೆ.

VISTARANEWS.COM


on

Koo

ನವದೆಹಲಿ: ದೇಶದ ಮುಂಚೂಣಿ ಗೇಮಿಂಗ್‌ ಫ್ಲಾಟ್‌ಫಾರಂ ಆಗಿರುವ ʼಜಿಯೋಗೇಮ್ಸ್ʼ, ಜಿಯೋಗೇಮ್ಸ್‌ ಆಪ್‌ ಮತ್ತು ಜಿಯೋ ಸೆಟ್‌ಆಫ್‌ ಬಾಕ್ಸ್‌ನಲ್ಲಿ ಗೂಗಲ್‌ ಗೇಮ್‌ಸ್ನ್ಯಾಕ್ಸ್‌ ಅನ್ನು ಸಂಯೋಜಿಸುವ ಮೂಲಕ ತನ್ನ ಗೇಮಿಂಗ್‌ ಪೋರ್ಟ್‌ಫೋಲಿಯೊವನ್ನು (Jio Games) ವಿಸ್ತರಿಸಿಕೊಂಡಿದೆ. ಇದರಿಂದಾಗಿ ಜಿಯೋಗೇಮ್ಸ್ ಬಳಕೆದಾರರು‌ Daily Sudoku, Om Nom Run and Traffic Tom ಸೇರಿದಂತೆ ಜನಪ್ರಿಯವಾದ 8 ಗೇಮ್‌ಗಳನ್ನು ಆಡಬಹುದಾಗಿದೆ.

Om Nom Run

ʼಗೇಮ್‌ಸ್ನ್ಯಾಕ್ಸ್‌ʼನ ಎಲ್ಲ ಗೇಮ್‌ಗಳೂ ಜಿಯೋಗೇಮ್ಸ್‌ ಬಳಕೆದಾರರಿಗೆ ಉಚಿತವಾಗಿರಲಿವೆ. ಆಂಡ್ರಾಯ್ಡ್‌ ಫೋನ್‌ ಬಳಕೆದಾರರು ಜಿಯೋಗೇಮ್ಸ್‌ ಆಪ್‌ನ ಹೋಮ್‌ಪೇಜ್‌ನಲ್ಲಿ ಈ ಗೇಮ್‌ಗಳನ್ನು ಸುಲಭವಾಗಿ ಪಡೆಯಬಹುದು. ಜಿಯೋಗೇಮ್ಸ್‌ನ ಮಿನಿ ಆಪ್‌ಗಳಾದ ಮೈಜಿಯೋ ಮತ್ತು ಜಿಯೋಟಿವಿಯಲ್ಲಿಯೂ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್‌ಗಳು ಲಭ್ಯವಿವೆ.

Traffic Tom
Traffic Tom

ಗೂಗಲ್‌ನ ʼಗೇಮ್‌ಸ್ನ್ಯಾಕ್ಸ್‌ ಗೇಮ್‌ʼ ಗಳು ಕಡಿಮೆ ಗಾತ್ರದ್ದಾಗಿರುವ ಜತೆಗೆ ಬೇಗನೆ ತೆರೆದುಕೊಳ್ಳುತ್ತವೆ. ಕಡಿಮೆ ಮೆಮೊರಿ ಇರುವ ಸಾಧನಗಳಲ್ಲಿ, ವಿವಿಧ ನೆಟ್‌ವರ್ಕ್‌ ಸ್ಥಿತಿಯಲ್ಲಿಯೂ HTML5 ನ ಈ ಗೇಮ್‌ಗಳನ್ನು ಆಡಬಹುದಾಗಿದೆ.

ಇದನ್ನೂ ಓದಿ: Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

ಭಾರತದಲ್ಲಿ ಲಕ್ಷಗಟ್ಟಲೆ ಬಳಕೆದಾರರ ಗೇಮಿಂಗ್‌ ಅನುಭವವನ್ನು ಸುಧಾರಿಸುವುದು ಈ ಸಹಭಾಗಿತ್ವದ ಉದ್ದೇಶವಾಗಿದೆ ಎಂದು ಕಂಪನಿಯು ತಿಳಿಸಿದೆ. ಇದರಿಂದಾಗಿ ಸಾಮಾನ್ಯವಾದ ಗೇಮ್‌ಗಳನ್ನು ಗ್ರಾಹಕರು ಸುಲಭವಾಗಿ ಆಡಬಹುದು ಎಂದು ತಿಳಿಸಿದೆ.

Continue Reading

ಪ್ರಮುಖ ಸುದ್ದಿ

Uttara Kannada Landslide: ನೀರಿನಡಿ ಇನ್ನೂ 9 ದೇಹಗಳಿವೆ ಎಂದ ಸ್ವಾಮೀಜಿ! ಬರಲಿದೆ ಕೇರಳದಿಂದ ಬಾರ್ಜ್‌ ಮೌಂಟೆಡ್‌ ಹಿಟಾಚಿ

Uttara Kannada Landslide: ಶಿರೂರು ಗುಡ್ಡ ಕುಸಿದಲ್ಲಿ ನಾಪತ್ತೆಯಾದವರಿಗಾಗಿ ಇಂದೂ ಶೋಧ ಮುಂದುವರಿದಿದ್ದು, ಕಾರ್ಯಾಚರಣೆ 15ನೇ ದಿನಕ್ಕೆ ಕಾಲಿಟ್ಟಿದೆ. ಬೋಟ್‌ಗಳ ಮೂಲಕ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಬ್ರಿಡ್ಜ್ ಮೌಂಟೆಡ್ ಡ್ರೆಜ್ಜಿಂಗ್ ಮೂಲಕ ಕಾರ್ಯಾಚರಣೆ ವಿಚಾರದಲ್ಲಿ ತ್ರಿಶೂರ್‌ನ ತಾಂತ್ರಿಕ ತಜ್ಞರಿಂದ ಜಿಲ್ಲಾಡಳಿತ ಲಿಖಿತ ವರದಿ ಕೋರಿದೆ.

VISTARANEWS.COM


on

Koo

ಕಾರವಾರ: ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡಕುಸಿತ (Uattara Kannada Landslide, Ankola Landslide) ಸ್ಥಳಕ್ಕೆ ಉಡುಪಿಯ ದ್ವಾರಕಾಮಯಿ ಮಠದ ಸಾಯಿ ಈಶ್ವರ ಗುರೂಜಿ ಭೇಟಿ ನೀಡಿದ್ದು, ಸ್ಥಳದ ಪರಿಶೀಲನೆ ನಡೆಸಿದ ಬಳಿಕ ʼನೀರಿನಡಿಯಲ್ಲಿ ಇನ್ನೂ 9 ದೇಹಗಳಿರಬಹುದುʼ ಎಂದಿದ್ದಾರೆ.

ಈ ನಡುವೆ, ಗುಡ್ಡ ಕುಸಿತ ಜಾಗದಲ್ಲಿ ಕಾರ್ಯಾಚರಣೆ 15ನೇ ದಿನವೂ ಮುಂದುವರಿದಿದೆ. ಲಾರಿ ಮುಳುಗಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಕೇರಳದಿಂದ ಬಾರ್ಜ್ ಮೌಂಟೆಡ್ ಹಿಟಾಚಿ (Barge Mounted Hitachi) ತರಿಸಲು ಚಿಂತಿಸಲಾಗಿದೆ.

ದ್ವಾರಕಾಮಯಿ ಮಠದ ಸಾಯಿ ಈಶ್ವರ ಗುರೂಜಿ ನಿನ್ನೆ ಸ್ಥಳಕ್ಕೆ ಆಗಮಿಸಿ, ತಮ್ಮ ಪೆಂಡುಲಮ್ ಮೂಲಕ ಮತ್ತು ಎಲೆಕ್ಟ್ರಾನಿಕ್ ಸ್ಕ್ಯಾನಿಂಗ್ ಮೂಲಕ ಪರಿಶೀಲಿಸಿದರು. ಈ ಗುಡ್ಡಕುಸಿತದಲ್ಲಿ 17 ದೇಹಗಳು ಕಾಣಬರುತ್ತಿವೆ. ಸದ್ಯ 8 ಮೃತದೇಹಗಳು ಪತ್ತೆಯಾಗಿದೆ, ಇನ್ನೂ 9 ದೇಹಗಳಿವೆ ಎಂದು ಸ್ವಾಮೀಜಿ ಹೇಳಿದ್ದಾರೆ. ಕೇರಳದ ಟ್ರಕ್ ಗಂಗಾವಳಿ ನದಿಯ 24 ಅಡಿ ಆಳದಲ್ಲಿದೆ. ಟ್ರಕ್ ಇರೋ ಜಾಗದ ಬಳಿ ಒಂದು ದೇಹ ಇದೆ. ಉಳಿದವರ ದೇಹಗಳು ಗಂಗಾವಳಿ ನದಿಯಲ್ಲಿ ಹೋಗಿದೆ ಎಂದಿದ್ದಾರೆ.

ಕೇರಳದಿಂದ ಬಾರ್ಜ್‌

ಶಿರೂರು ಗುಡ್ಡ ಕುಸಿದಲ್ಲಿ ನಾಪತ್ತೆಯಾದವರಿಗಾಗಿ ಇಂದೂ ಶೋಧ ಮುಂದುವರಿದಿದ್ದು, ಕಾರ್ಯಾಚರಣೆ 15ನೇ ದಿನಕ್ಕೆ ಕಾಲಿಟ್ಟಿದೆ. ಬೋಟ್‌ಗಳ ಮೂಲಕ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಬ್ರಿಡ್ಜ್ ಮೌಂಟೆಡ್ ಡ್ರೆಜ್ಜಿಂಗ್ ಮೂಲಕ ಕಾರ್ಯಾಚರಣೆ ವಿಚಾರದಲ್ಲಿ ತ್ರಿಶೂರ್‌ನ ತಾಂತ್ರಿಕ ತಜ್ಞರಿಂದ ಜಿಲ್ಲಾಡಳಿತ ಲಿಖಿತ ವರದಿ ಕೋರಿದೆ. ವರದಿ ಆಧರಿಸಿ ನೌಕಾಪಡೆ, ಕೋಸ್ಟ್‌ಗಾರ್ಡ್, NDRF, SDRF, ಅಗ್ನಿಶಾಮಕ ದಳ ವತಿಯಿಂದ ಕಾರ್ಯಾಚರಣೆ ನಡೆಸಲು ಚಿಂತಿಸಲಾಗಿದೆ.

ಬಾರ್ಜ್ ಮೌಂಟೆಡ್ ಹಿಟಾಚಿ ತರಿಸಲು ಶಾಸಕ ಸತೀಶ್ ಸೈಲ್ ಚಿಂತಿಸಿದ್ದಾರೆ. ಇದು ನದಿಯಲ್ಲೇ ನಿಂತು ಆಳದಲ್ಲಿನ ಮಣ್ಣು, ಕಲ್ಲು ತೆಗೆಯುತ್ತದೆ. ಕೇರಳದ ಕೃಷಿ ಇಲಾಖೆಯ ಬಳಿ ಬಾರ್ಜ್ ಮೌಂಟೆಡ್ ಬೂಮ್ ಕ್ರಾಲಿಂಗ್ ಎಕ್ಸಕ್ಯಾವೇಟರ್ ಇದ್ದು, ಈ ಬಗ್ಗೆ ಕೇರಳ ಸರ್ಕಾರದೊಂದಿಗೆ ಸೈಲ್‌ ಮಾತುಕತೆ ನಡೆಸಿದ್ದಾರೆ. ಬಾರ್ಜ್ ಮೌಂಟೆಡ್ ಹಿಟಾಚಿಯ ಆಪರೇಟರ್, ಎಂಜಿನಿಯರ್‌ರಿಂದ ಇಂದು ಸ್ಥಳ ಪರಿಶೀಲನೆ‌ ಸಾಧ್ಯತೆ ಇದೆ.

ನೀರಿನ ಪ್ರವಾಹ ಅಡ್ಡಿ

ಜುಲೈ 16 ರಂದು ಶಿರೂರು ಬಳಿ ನಡೆದ ಗುಡ್ಡಕುಸಿತ ದುರಂತದಲ್ಲಿ 11 ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ 8 ಮಂದಿ ಶವವಾಗಿ ಸಿಕ್ಕಿದ್ದರು. ನಾಪತ್ತೆಯಾಗಿದ್ದ ಜಗನ್ನಾಥ ನಾಯ್ಕ, ಲೋಕೇಶ, ಅರ್ಜುನ್‌‌ ಸೇರಿ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಹಲವರು ಮಣ್ಣಿನಡಿ ಸಿಲುಕಿದ್ದರು, ಇನ್ನೂ ಕೆಲವರು ಗಂಗಾವಳಿ ನದಿಗೆ ಬಿದ್ದ ಹಿನ್ನೆಲೆಯಲ್ಲಿ ನದಿಯಲ್ಲೂ ಹುಡುಕಾಟ ನಡೆಸಲಾಗುತ್ತಿದೆ. ನೀರಿನ ವೇಗ ಹೆಚ್ಚಿರುವುದು ಹಾಗೂ ನದಿಯಲ್ಲಿರುವ ಮಣ್ಣು, ಕಲ್ಲು ಬಂಡೆ ಹಾಗೂ ಮರದ ದಿಮ್ಮಿಗಳಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಅಲ್ಲದೇ ಕಾರ್ಯಾಚರಣೆಯಲ್ಲಿ ಲಾರಿಯನ್ನು ಮೇಲಕ್ಕೆ ಎತ್ತಲೂ ಸಾಧ್ಯವಾಗಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಒಂದು ಕಡೆ ಮಣ್ಣಿನಡಿ ಲಾರಿ ಇದೆ ಎಂದಿದ್ದರು, ಒಂದು ವಾರದಲ್ಲಿ ಕಾರ್ಯಾಚರಣೆ ನಡೆಸಿ ಮಣ್ಣು ತೆಗೆದೆವು. ಈಗ ನೀರಿನಲ್ಲಿ ಇದೆ ಎಂದಾಗ ನದಿಯಲ್ಲಿ ಕಾರ್ಯಾಚರಣೆ ಮಾಡಿದ್ದೇವೆ. ಎಲ್ಲಾ ಪ್ರಯತ್ನ ಮಾಡಿದರೂ ಮೂವರ ಮೃತ ದೇಹ ಸಿಗದಿರುವುದು ಬೇಸರ ತಂದಿದೆ. ದೇಹ ಸಿಗದೇ ಇದ್ದವರಿಗೂ ಅವರ ಅವಲಂಬಿತರ ಬಳಿ ಅಗ್ರಿಮೆಂಟ್ ಮಾಡಿಕೊಂಡು ಪರಿಹಾರ ನೀಡುತ್ತೇವೆ. ಮೃತರ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾದರೆ ಅವರ ಜೊತೆ ನಾವು ಇರುತ್ತೇವೆ. ಕಾರ್ಯಾಚರಣೆ ಸ್ಥಗಿತ ಆಗಿಲ್ಲ, ಆದರೆ ಮಾಡಲು ಸಾಧ್ಯವಾಗುತ್ತಿಲ್ಲ. ನೀರಿನ ಪ್ರಮಾಣ ಕಡಿಮೆಯಾದ ನಂತರ ಕಾರ್ಯಾಚರಣೆ ಮಾಡುತ್ತೇವೆ. ಮುಳುಗಿರುವ ಟ್ರಕ್ ಮೇಲಕ್ಕೆ ಎತ್ತುವ ಪ್ರಯತ್ನ ಮಾಡುತ್ತೇವೆ. ಗುಡ್ಡ ಕುಸಿತದ ಬಗ್ಗೆ ಮಾಹಿತಿ ಪಡೆದು ಸಂಚಾರಕ್ಕೆ ಅನುವು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

Continue Reading
Advertisement
Liquor Price Karnataka
ಪ್ರಮುಖ ಸುದ್ದಿ7 mins ago

Liquor Price Karnataka: ನೊರೆ ನೊರೆ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ

Parliament Session
ರಾಜಕೀಯ11 mins ago

Parliament Session: ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜು; Live ಇಲ್ಲಿ ವೀಕ್ಷಿಸಿ

Kerala Landslide
ದೇಶ18 mins ago

Kerala Landslide: ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

ದೇಶ21 mins ago

Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

Rebel star Prabhas starrer The Rajasaab short glimpse released
ದೇಶ34 mins ago

The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

IPL 2025
ಕ್ರೀಡೆ46 mins ago

IPL 2025: ಆರ್​ಸಿಬಿ ಇನ್​ಸ್ಟಾಗ್ರಾಮ್​ ಖಾತೆ ಅನ್​ಫಾಲೋ ಮಾಡಿದ ಮ್ಯಾಕ್ಸ್​ವೆಲ್; ಕಾರಣವೇನು?

ಪ್ರಮುಖ ಸುದ್ದಿ48 mins ago

Uttara Kannada Landslide: ನೀರಿನಡಿ ಇನ್ನೂ 9 ದೇಹಗಳಿವೆ ಎಂದ ಸ್ವಾಮೀಜಿ! ಬರಲಿದೆ ಕೇರಳದಿಂದ ಬಾರ್ಜ್‌ ಮೌಂಟೆಡ್‌ ಹಿಟಾಚಿ

Mahila Samman Savings Certificate
ಮನಿ-ಗೈಡ್50 mins ago

Mahila Samman Savings Certificate: ಮಹಿಳಾ ಸಮ್ಮಾನ್‌‌ನಲ್ಲಿ ಹೂಡಿಕೆಯಿಂದ ಏನು ಲಾಭ?

Kerala Landslide
ದೇಶ59 mins ago

Kerala Landslide: ಕೇರಳದಲ್ಲಿ ವರುಣನ ರೌದ್ರ ನರ್ತನ ಶುರು; ಭಾರೀ ಭೂಕುಸಿತಕ್ಕೆ ಐವರು ಬಲಿ

Yogi Adithyanath
ದೇಶ1 hour ago

Yogi Adityanath: ಲವ್‌ ಜಿಹಾದ್‌ ಮಟ್ಟ ಹಾಕಲು ಯೋಗಿ ಆದಿತ್ಯನಾಥ್‌ ಪಣ; ಅಪರಾಧ ಸಾಬೀತಾದರೆ ಜೀವಾವಧಿ ಶಿಕ್ಷೆಯ ಪ್ರಸ್ತಾವ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ16 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ17 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ20 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ3 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌