Monsoon Driving: ಮಳೆಗಾಲದಲ್ಲಿ ಕಾರು ಪ್ರಯಾಣಕ್ಕೆ ಹೊರಡುವಾಗ ಈ ಟಿಪ್ಸ್‌ ಗಮನದಲ್ಲಿರಲಿ - Vistara News

Latest

Monsoon Driving: ಮಳೆಗಾಲದಲ್ಲಿ ಕಾರು ಪ್ರಯಾಣಕ್ಕೆ ಹೊರಡುವಾಗ ಈ ಟಿಪ್ಸ್‌ ಗಮನದಲ್ಲಿರಲಿ

ಮಳೆಗಾಲದ ಡ್ರೈವಿಂಗ್‌ ಆಕರ್ಷಕ; ಆದರೆ ಅಷ್ಟೇ ರಿಸ್ಕ್‌ ಹೊಂದಿರುವ ಸಂಗತಿ ಕೂಡ. ಹೀಗಾಗಿ ಮಳೆಯಲ್ಲಿ ಡ್ರೈವ್‌ ಮಾಡುತ್ತಾ ಹೊರಟುಬಿಡುವ ಮುನ್ನ ಕೆಳಗಿನ ಟಿಪ್ಸ್‌ (Monsoon Driving) ನೆನಪಿನಲ್ಲಿರಲಿ.

VISTARANEWS.COM


on

monsoon driving
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
monsoon focus

ಭಾರತದಲ್ಲಿ ಮಾನ್ಸೂನ್‌ ಬರಲಿ ಎಂದು ಲಕ್ಷಾಂತರ ಜನ ಎದುರು ನೋಡುತ್ತಾರೆ. ಕೃಷಿ ಚಟುವಟಿಕೆಗೆ ಮಾತ್ರವಲ್ಲ. ಮಳೆಯಲ್ಲಿ ಪ್ರವಾಸ ಹೋಗುವುದು ಕೂಡ ಒಂದು ಆನಂದದ ಅನುಭವ. ಮಳೆಯಲ್ಲಿ ಪ್ರಕೃತಿಯ ಇನ್ನೊಂದು ಮುಖ ತೆರೆದುಕೊಳ್ಳುತ್ತದೆ. ಅದರಲ್ಲೂ ಹಿಲ್‌ ಸ್ಟೇಶನ್‌ಗಳಿಗೆ ಹೋಗುವ ಪ್ರವಾಸಿಗರ ಸಂಖ್ಯೆ ಹೆಚ್ಚು. ಡ್ರೈವ್‌ ಮಾಡಲು ಬಯಸುವವರಿಗೆ ಮಳೆಗಾಲ ಒಂದು ರೀತಿಯಲ್ಲಿ ರೊಮ್ಯಾಂಟಿಕ್. ಮಳೆಗಾಲದ ಡ್ರೈವಿಂಗ್‌ ಆಕರ್ಷಕ; ಆದರೆ ಅಷ್ಟೇ ರಿಸ್ಕ್‌ ಹೊಂದಿರುವ ಸಂಗತಿ ಕೂಡ. ರಸ್ತೆ ಜಾರುತ್ತದೆ; ಹೊಂಡಗಳು ನೀರು ತುಂಬಿ ಕಾಣುವುದಿಲ್ಲ. ಮಳೆ ಬರುವಾಗ ಕಾರಿನ ಗಾಜು ಮುಚ್ಚಿಹೋಗಿ ದಾರಿ ಸರಿಯಾಗಿ ಕಾಣದೆ ಹೋಗಬಹುದು. ಹೀಗಾಗಿ ಕಾರು ಚಾಲನೆ ರಿಸ್ಕೀ ಮತ್ತು ಥ್ರಿಲ್ಲಿಂಗ್.‌ ಹೀಗಾಗಿ ಮಳೆಯಲ್ಲಿ ಡ್ರೈವ್‌ ಮಾಡುತ್ತಾ ಹೊರಟುಬಿಡುವ ಮುನ್ನ ಕೆಳಗಿನ ಟಿಪ್ಸ್‌ (Monsoon Driving) ನೆನಪಿನಲ್ಲಿರಲಿ.

ಹವಾಮಾನ ಮುನ್ಸೂಚನೆ ಗಮನಿಸಿ

ಭಾರತದಲ್ಲಿ ಮಾನ್ಸೂನ್ ಸಂಪೂರ್ಣವಾಗಿ ಅನಿರೀಕ್ಷಿತ. ಒಂದು ಗಂಟೆ ಬಿಸಿಲಿದ್ದರೆ ಮತ್ತೊಂದು ನಿಮಿಷದಲ್ಲಿ ಮಳೆ ಸುರಿಯಬಹುದು. ಹೀಗಾಗಿ ನೀವು ಭೇಟಿ ನೀಡಲು ಯೋಜಿಸಿರುವ ಸ್ಥಳದ ಹವಾಮಾನದ ಮುನ್ಸೂಚನೆಯನ್ನು ಗಮನಿಸಿ. ಹವಾಮಾನ ಅಪ್ಲಿಕೇಶನ್‌ ಇನ್‌ಸ್ಟಾಲ್‌ ಮಾಡಿಕೊಳ್ಳಿ. ನಿರಂತರವಾಗಿ ಅದನ್ನು ಗಮನಿಸುತ್ತಿರಿ. ಇತ್ತೀಚೆಗೆ ಬಹಳಷ್ಟು ಗಿರಿಧಾಮಗಳಲ್ಲಿ ಭೂಕುಸಿತಗಳು ಸಂಭವಿಸುತ್ತಿವೆ. ಅದನ್ನೂ ಗಮನದಲ್ಲಿಟ್ಟುಕೊಳ್ಳಿ.

ವಾಹನ ಕೂಲಂಕಷವಾಗಿ ಪರಿಶೀಲಿಸಿ

ಅಂಕುಡೊಂಕಾದ ಘಾಟಿಗಳು, ಕತ್ತಲಿನ ಸುರಂಗಗಳು, ಒದ್ದೆಯಾದ ಮತ್ತು ಕೆಸರು ತುಂಬಿದ ರಸ್ತೆಗಳು ಮಳೆಗಾಲದಲ್ಲಿ ನಿಮಗೆ ಎದುರಾಗುತ್ತವೆ. ಇಂಥ ಸಂದರ್ಭದಲ್ಲಿ ನಿಮ್ಮ ವಾಹನ ಪೂರ್ತಿ ಫಿಟ್‌ ಆಗಿರಬೇಕು. ಮಳೆಗಾಲದಲ್ಲಿ ಇಳಿಜಾರು ರಸ್ತಗಳಲ್ಲಿ ವಾಹನ ಓಡಿಸುವುದು ದುಃಸ್ವಪ್ನವೇ ಸರಿ. ನಿಮ್ಮ ಪ್ರಯಾಣ ಪ್ರಾರಂಭಿಸುವ ಮೊದಲು ಪೂರ್ತಿ ಸರ್ವಿಸ್‌ ಮಾಡಿಸಿ. ವಾಹನ ಟೈರ್‌ಗಳು, ವಿಂಡ್‌ಶೀಲ್ಡ್ ವೈಪರ್‌ಗಳು, ಹೆಡ್‌ಲೈಟ್‌ಗಳು, ಬ್ರೇಕ್‌ಗಳು ಉತ್ತಮ ಸ್ಥಿತಿಯಲ್ಲಿವೆ ಎಂದು ಖಚಿತಪಡಿಸಿಕೊಳ್ಳಿ. ಬಿಡಿ ಟೈರ್ ಒಯ್ಯಲು ಮರೆಯಬೇಡಿ.

ನಿಧಾನ ಮತ್ತು ಸ್ಥಿರವಾದ ಡ್ರೈವಿಂಗ್‌

ʼಸ್ಲೋ ಮತ್ತು ಸ್ಟೆಡಿʼ ಎಂಬುದು ಪ್ರಸಿದ್ಧವಾದ ಮಾತು. ನಿಧಾನವಾದ ಮತ್ತು ಸ್ಥಿರವಾದ ಓಟ ಗೆಲ್ಲುತ್ತದೆ. ಮಳೆಯ ಸಂದರ್ಭದಲ್ಲಿ ವಾಹನ ಚಾಲನೆಗೂ ಇದು ಅನ್ವಯ. ವಿಶೇಷವಾಗಿ ಘಾಟಿ ರಸ್ತೆಗಳ ಏರುವಿಕೆ ಮತ್ತು ಇಳಿಯುವಿಕೆ. ಮುಂದಿನ ವಾಹನದಿಂದ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಿ. ವಿಶೇಷವಾಗಿ ಅಪಘಾತಗಳು ಸಂಭವಿಸುವ ಭೂಪ್ರದೇಶದ ಮೂಲಕ ಪ್ರಯಾಣಿಸುತ್ತಿದ್ದಾಗ.

ಪ್ರವಾಸದ ಪ್ಲಾನಿಂಗ್‌

ನಿಮ್ಮ ಸಂಪೂರ್ಣ ಪ್ರವಾಸವನ್ನು ಮುಂಚಿತವಾಗಿಯೇ ಮ್ಯಾಪ್‌ ಮುಂದಿಟ್ಟುಕೊಂಡು ಪ್ಲಾನ್‌ ಮಾಡಿಕೊಳ್ಳಿ. ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗಲು ಬೇಕಾದ ಸಮಯ, ವಿರಾಮದ ಅವಧಿ, ಇವುಗಳನ್ನು ಲೆಕ್ಕ ಹಾಕಿ. ಪ್ಲಾನ್‌ ಮಾಡಿದ ಸಮಯಕ್ಕೆ ಸರಿಯಾಗಿ ಎಲ್ಲವೂ ನಡೆಯುವಂತೆ ನೋಡಿಕೊಳ್ಳಿ. ಮಳೆಗಾಲದಲ್ಲಿ ರಾತ್ರಿ ವೇಳೆ ವಾಹನ ಚಲಾಯಿಸುವುದನ್ನು ಆ ಮೂಲಕ ತಪ್ಪಿಸಿ.

ಆಫ್-ರೋಡಿಂಗ್ ತಪ್ಪಿಸಿ

ಡ್ರೈವಿಂಗ್‌ ಸಾಹಸಿಗಳಿಗೆ ಚಾಲನೆ ಮಾಡುವಾಗ ಉಂಟಾಗುವ ಅಡ್ರಿನಾಲಿನ್‌ ರಷ್‌ ತುಂಬಾ ಪ್ರಿಯ. ನಿಯಮಗಳನ್ನು ಉಲ್ಲಂಘಿಸುವುದು, ವೇಗವಾಗಿ ಚಲಾಯಿಸುವುದೇ ಇಂಥವರಿಗೆ ಪ್ರಿಯ. ಆದರೆ ಮಳೆಗಾಲದಲ್ಲಿ ಇದು ಅಪಾಯಕಾರಿ. ಯಾಕೆಂದರೆ ಭಾರತದ ರಸ್ತೆಗಳು ಮಳೆಗಾಲದಲ್ಲಿ ಕುಖ್ಯಾತ. ಅನಿವಾರ್ಯ ಅಲ್ಲದಿದ್ದರೆ ಆಫ್‌ ರೋಡ್‌ ಪ್ರಯಾಣ ತಪ್ಪಿಸಿ. ಯಾಕೆಂದರೆ ವಾಹನದ ಟೈರ್‌ಗಳು ಕೆಸರಿನಲ್ಲಿ ಸಿಕ್ಕಿಹಾಕಿಕೊಳ್ಳಬಹುದು.

ಟೈರ್‌ಗಳು ಸೂಕ್ತ ಸ್ಥಿತಿಯಲ್ಲಿರಲಿ

ತೇವವಿರುವ ರಸ್ತೆ ಮೇಲೆ ಓಡಿಸುವಾಗ ಟೈರ್‌ಗಳು ಸುಸ್ಥಿತಿಯಲ್ಲಿರಬೇಕು. ಇದರ ಟ್ರೆಡ್‌ಗಳು ನೀರನ್ನು ಚದುರಿಸುವ ಚಾನಲ್‌ಗಳಾಗಿ ಕಾರ್ಯನಿರ್ವಹಿಸುತ್ತವೆ. ನಿಖರವಾದ ಟ್ರೆಡ್‌ಗಳನ್ನು ಹೊಂದಿದ ಟೈರ್‌ಗಳು ಅಗತ್ಯ. ಫ್ಲ್ಯಾಟ್‌ ಆದ ಟೈರ್‌ಗಳು ನೀರಿನ ಮೇಲೆ ಚಲಾಯಿಸಿದಾಗ ಜಾರುತ್ತವೆ. ಚಕ್ರದ ಹೊರಮೈಯ ಟ್ರೆಡ್‌ಗಳ ಆಳವು ಕನಿಷ್ಠ 2 ಮಿಮೀ ಇರಬೇಕು. ಸವೆದ ಟೈರ್‌ಗಳು ಪಂಕ್ಚರ್‌ ಆಗಬಹುದು. ಕೆಲವು ಸಂದರ್ಭಗಳಲ್ಲಿ ಸಿಡಿಯಬಹುದು. ಹೀಗಾಗಿ ಚಕ್ರಗಳ ಆಳ ಸವೆಯುವ ಮುನ್ನ ಬದಲಾಯಿಸಿಕೊಳ್ಳಿ.

ಬ್ರೇಕ್‌ಗಳು ಸುಸ್ಥಿತಿಯಲ್ಲಿರಲಿ

ಎಲ್ಲಾ ಪರಿಸ್ಥಿತಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸುವ ಬ್ರೇಕ್‌ಗಳನ್ನು ಹೊಂದಿರುವುದು ಮುಖ್ಯ. ಮಳೆಗಾಲದಲ್ಲಿ ರಸ್ತೆ ಜಾರುವುದರಿಂದ, ಮುಂದಿನ ವಾಹನದಿಂದ ಸ್ವಲ್ಪ ಹೆಚ್ಚಿನ ಅಂತರವನ್ನೇ ಕಾಪಾಡಿಕೊಳ್ಳಬೇಕು. ಆದ್ದರಿಂದ ನಿಮ್ಮ ಬ್ರೇಕ್‌ಗಳು ಟಿಪ್‌ಟಾಪ್ ಆಗಿರಬೇಕು. ಭಾರೀ ಮಳೆಯ ಸಮಯದಲ್ಲಿ ಅಥವಾ ಕೆಸರು ರಸ್ತೆಯಲ್ಲಿ ಚಾಲನೆ ಮಾಡಿದ ನಂತರ ಬ್ರೇಕ್‌ಗಳನ್ನು ಲಘುವಾಗಿ ಟ್ಯಾಪ್ ಮಾಡುವ ಮೂಲಕ ಒಣಗಿಸಿಕೊಳ್ಳಿ. ಇತ್ತೀಚಿನ ಹೊಸ ಕಾರುಗಳು ಆರ್ದ್ರ ನೆಲದಲ್ಲಿ ಬ್ರೇಕಿಂಗ್ ಅನ್ನು ಹೆಚ್ಚು ಸುರಕ್ಷಿತಗೊಳಿಸಿವೆ.

ವೈಪರ್‌ಗಳು ಸ್ವಚ್ಛವಾಗಿರಲಿ

ಮಾನ್ಸೂನ್‌ನಲ್ಲಿ ಚಾಲನೆ ಮಾಡುವಾಗ ನಿಮ್ಮ ಎದುರಿನ ಗಾಜನ್ನು ಸ್ವಚ್ಛವಾಗಿಡುವ ವೈಪರ್‌ಗಳು ತುಂಬಾ ಅಗತ್ಯ. ಗೆರೆಗಳಿಲ್ಲದ ವಿಂಡ್‌ಶೀಲ್ಡ್ ಮುಂದಿರಬೇಕು. ಗೆರೆಗಳಿದ್ದರೆ ಅದು ದೃಷ್ಟಿಗೆ ಅಡ್ಡಿಯಾಗಬಹುದು. ವೈಪರ್ ಬ್ಲೇಡ್‌ಗಳು ಸ್ವಚ್ಛವಾಗಿ ಒರೆಸುತ್ತಿವೆ ಎಂದು ಖಚಿತಪಡಿಸಿಕೊಳ್ಳಿ. ಇತರ ಕಾರುಗಳ ಚಕ್ರಗಳಿಂದ ಸಿಡಿದ ಕೆಸರು ಇತ್ಯಾದಿ ಸ್ವಚ್ಛಗೊಳಿಸಲು ವೈಪರ್ ವಾಷರ್ ದ್ರವ ತುಂಬಿಸಿಕೊಳ್ಳಿ.

ಅಗತ್ಯವಿದ್ದಾಗ ಲೈಟ್‌ ಬಳಸಿ

ಮಳೆ ಸುರಿಯುತ್ತಿರುವಾಗ, ರಸ್ತೆ ಸರಿಯಾಗಿ ಕಾಣದಾಗ ಚಾಲನೆ ಮಾಡುವುದು ಅನಿವಾರ್ಯವಾದರೆ ನಿಮ್ಮ ಕಾರಿನ ಹೆಡ್‌ಲೈಟ್‌ ಆನ್‌ ಇಟ್ಟುಕೊಳ್ಳಿ. ಮಳೆಗಾಲದಲ್ಲಿ ಹೆಚ್ಚಾಗಿ ಪ್ರಯಾಣಿಸುವವರಾದರೆ ಫಾಗ್‌ ಲೈಟ್‌ ಹಾಕಿಸಿಕೊಳ್ಳಿ. ಎಮರ್ಜೆನ್ಸಿ ಲೈಟ್‌ ಅಥವಾ ಬ್ಲಿಂಕರ್‌ ಬಳಸುವುದನ್ನು ತಪ್ಪಿಸಿ- ಯಾಕೆಂದರೆ ಇವು ಇರುವುದು ಅಪಾಯಕಾರಿ ಸನ್ನಿವೇಶದಲ್ಲಿ ಬಳಸಲು ಮಾತ್ರ.

ಅಂತರ ಮತ್ತು ವೇಗ ನಿಯಂತ್ರಣದಲ್ಲಿಡಿ

ಒದ್ದೆಯಾದ ರಸ್ತೆಯ ಮೇಲ್ಮೈಗಳಲ್ಲಿ ಬ್ರೇಕಿಂಗ್ ಅಂತರ ಹೆಚ್ಚಿರುತ್ತದೆ. ಹೀಗಾಗಿ ಮುಂಭಾಗದಲ್ಲಿರುವ ವಾಹನದಿಂದ ನಿಮ್ಮ ಅಂತರವನ್ನು ಕಾಯ್ದುಕೊಳ್ಳುವುದು ಅಪಘಾತವನ್ನು ತಪ್ಪಿಸಲು ಸಹಾಯ ಮಾಡುತ್ತದೆ. ಮಳೆಯ ಸಮಯದಲ್ಲಿ ನಿಮ್ಮ ವೇಗವನ್ನು ನಿಯಂತ್ರಿಸಿ. ಇದು ನಿಮಗೆ ಬ್ರೇಕ್ ಹಾಕಲು ಸಾಕಷ್ಟು ಸ್ಥಳಾವಕಾಶವನ್ನು ನೀಡುತ್ತದೆ.

ಇದನ್ನೂ ಓದಿ: Monsoon Health Tips : ಮಳೆಗಾಲದಲ್ಲಿ ವೈರಲ್‌ ಸೋಂಕು ತಡೆಯುವುದು ಹೇಗೆ?

ಎಸ್ಕೇಪ್‌ ಸಲಕರಣೆ

ತುಂಬಾ ಕೆಟ್ಟ ಸನ್ನಿವೇಶ ಒದಗಿತು ಎಂದಿಟ್ಟುಕೊಳ್ಳಿ. ಉದಾಹರಣೆಗೆ ಕಾರಿನ ಡೋರ್‌ ಜಾಮ್‌ ಆಗಿದ್ದರೆ? ಹೊಸ ಕಾರುಗಳಲ್ಲಿ ಹಿಂಬದಿ ಚಿಮ್ಮುವ ಸೀಟುಗಳಿವೆ. ಆದರೆ ಹಳೆಯ ಕಾರುಗಳಲ್ಲಿ ಅವು ಇಲ್ಲ. ಇನ್ನೊಂದು ಆಯ್ಕೆ ಅಂದರೆ ಕಿಟಕಿ ಒಡೆಯುವುದು. ಕಾರಿನಲ್ಲೊಂದು ಸುತ್ತಿಗೆ ಇದ್ದರೆ ಚೆನ್ನ. ಅಥವಾ ಹೆಡ್‌ರೆಸ್ಟ್‌ನ ಲೋಹದ ಸ್ಲೈಡರ್‌ ಅಥವಾ ಪಾದಗಳನ್ನು ಇದಕ್ಕೆ ಬಳಸಿ. ಸೀಟ್‌ಬೆಲ್ಟ್ ಕಟ್‌ ಮಾಡಲು ಕತ್ತರಿ, ಟಾರ್ಚ್, ಅಗ್ನಿಶಾಮಕ ಕೂಡ ಇದ್ದರೆ ಒಳ್ಳೆಯದು.

ರಸ್ತೆಯಲ್ಲಿ ನಿಂತ ನೀರು

ರಸ್ತೆಯಲ್ಲಿ ನಿಂತ ನೀರು ಎಷ್ಟು ಆಳವಾಗಿದೆ ಎಂದು ತಿಳಿಯದೆ ಅದರ ಮೇಲೆ ಚಲಾಯಿಸುವುದು ಅಪಾಯಕಾರಿ. ಇತರ ಕಾರುಗಳು ಚಲಿಸುತ್ತಿರುವುದನ್ನು ಗಮನಿಸಿದರೆ ತಿಳಿಯಬಹುದು. ಇಂಥ ಕಡೆ ಮೊದಲ ಗೇರ್‌ನಲ್ಲಿ ಚಲಾಯಿಸಿ. ಎಕ್ಸಾಸ್ಟ್‌ಗೆ ನೀರು ಪ್ರವೇಶಿಸಿ ಎಂಜಿನ್‌ ಹಾಳಾಗುವುದನ್ನು ತಡೆಯಲು ಆರ್‌ಪಿಎಮ್‌ ಏರಿಸಿ. ನೀರು ಎಕ್ಸಾಸ್ಟ್‌ಗೆ ಹೋಗಿದೆ ಅನಿಸಿದರೆ ಕಾರನ್ನು ಸ್ಟಾರ್ಟ್‌ ಮಾಡಲು ಯತ್ನಿಸಬೇಡಿ. ನೀರಿನಿಂದ ಆಚೆ ಬಂದ ಬಳಿಕ ಬ್ರೇಕ್‌ಗಳನ್ನು ಮೆತ್ತಗೆ ತುಳಿದು ಡ್ರೈ ಮಾಡಿಕೊಳ್ಳಿ.

ಎಮರ್ಜೆನ್ಸಿ ಕಿಟ್ ಒಯ್ಯಿರಿ

ಮಾನ್ಸೂನ್ ಪ್ರಯಾಣದ ವೇಳೆ ಎಮರ್ಜೆನ್ಸಿ ಕಿಟ್‌ ನಿಮ್ಮ ಬಳಿ ಇರಲಿ. ನಿಮ್ಮ ದೇಹಾರೋಗ್ಯದ ಹಾಗೇ ವಾಹನದ ಆರೋಗ್ಯದ ಕಿಟ್‌ ಕೂಡ ಬಳಿಯಿರಲಿ. ಸ್ಪೇರ್‌ ಟೈರ್‌, ಜ್ಯಾಕ್‌ ಮುಂತಾದ ಟೈರ್‌ ಬದಲಿಸುವ ಸಲಕರಣೆಗಳು ಅಗತ್ಯವಾಗಿ ಇರಲಿ. ವಿಮೆ ಮುಂತಾದ ಅಗತ್ಯ ವಾಹನ ದಾಖಲಾತಿಗಳು ಜತೆಗಿರಲಿ.

ಇದನ್ನೂ ಓದಿ: Monsoon Season : ಏನು ನಿನ್ನ ಹನಿಗಳ ಲೀಲೆ… ಭಾರತದಲ್ಲಿ ಮುಂಗಾರು ಸೃಷ್ಟಿ ಹೇಗೆ? ಮಳೆ ವ್ಯಾಪಿಸುವುದು ಯಾವ ರೀತಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Pro Kabaddi Final: ಚೊಚ್ಚಲ ಟ್ರೋಫಿ ಗೆದ್ದ ಪುಣೇರಿ ಪಲ್ಟಾನ್‌

10ನೇ ಆವೃತ್ತಿ ಪ್ರೊ ಕಬಡ್ಡಿಯ ಫೈನಲ್(Pro Kabaddi Final)​ ಪಂದ್ಯದಲ್ಲಿ ಪುಣೇರಿ ಪಲ್ಟಾನ್‌ ಗೆದ್ದು ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದೆ.

VISTARANEWS.COM


on

Puneri Paltan vs Haryana Steelers
Koo

ಹೈದರಾಬಾದ್​: ಹಾವು-ಏಣಿ ಆಟದಂತೆ ಅತ್ಯಂತ ಜಿದ್ದಾಜಿದ್ದಿನಿಂದ ಸಾಗಿದ 10ನೇ ಆವೃತ್ತಿ ಪ್ರೊ ಕಬಡ್ಡಿಯ ಫೈನಲ್(Pro Kabaddi Final)​ ಪಂದ್ಯದಲ್ಲಿ ಪುಣೇರಿ ಪಲ್ಟಾನ್‌(Puneri Paltan) 28-25 ಅಂಕಗಳ ಅಂತರದಿಂದ ಹರಿಯಾಣ ಸ್ಟೀಲರ್ಸ್‌(Haryana Steelers) ತಂಡವನ್ನು ಮಣಿಸಿ ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದೆ. ಪ್ರಶಸ್ತಿ ಮೊತ್ತವಾಗಿ 3 ಕೋಟಿ ರೂ. ನಗದು ಪುರಸ್ಕಾರ ಬಾಚಿಕೊಂಡಿದೆ. ರನ್ನರ್ ಅಪ್​ ಹರಿಯಾಣ ತಂಡಕ್ಕೆ 1.8 ಕೋಟಿ ರೂ. ಬಹುಮಾನ ಲಭಿಸಿತು.

ಹೈದರಾಬಾದ್‌ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಉಭಯ ತಂಡಗಳ ಈ ಫೈನಲ್​ ಫೈಟ್​ ಆರಂಭದಿಂದ ಹಿಡಿದು ಕೊನೆಯ ತನಕವೂ ರೋಚಕತೆ ಮತ್ತು ಕುತೂಹಲಕ್ಕೆ ಸಾಕ್ಷಿಯಾಯಿತು. ಇತ್ತಂಡಗಳ ಆಟಗಾರರು ಕೂಡ ಅಂಕ ಗಳಿಕೆಗಾಗಿ ತೀವ್ರ ಪೈಪೋಟಿ ನಡೆಸಿದರು. ಇವರ ಜತೆಗೆ ಕೋಚ್​ಗಳು ಕೂಡ ಅಗ್ರೆಸಿವ್​ ಆಗಿ ಕಂಡುಬಂದರು.

ಟರ್ನಿಂಗ್​ ಪಾಯಿಂಟ್​


ಮೊದಲಾರ್ಧದ 20 ನಿಮಿಷದ ಆಟದಲ್ಲಿ ಕೊನೆಯ 1.28 ನಿಮಿಷದವರೆಗೂ ಪುಣೆ ತಂಡ ಹಿನ್ನಡೆಯಲ್ಲಿತ್ತು. ಆದರೆ, ಈ ವೇಳೆ ಡು ಆರ್​ ಡೈ ರೇಟ್​ನಲ್ಲಿ ಪಂಕಜ್​ ಮೋಹಿತೆ ಅವರು ಪಾದರಸದಂತಹ ರೇಡಿಂಗ್​ ದಾಳಿ ನಡೆಸಿ ಒಂದೇ ಬಾರಿಗೆ 5 ಅಂಕ ಕಲೆಹಾಕಿ ಪಂದ್ಯದ ಗತಿಯನ್ನೇ ಬದಲಿಸಿದರು. ಇದು ಪಂದ್ಯ ಟರ್ನಿಂಗ್​ ಪಾಯಿಂಟ್​ ಕೂಡ ಆಯಿತು. ಅವರ ಈ ರೇಡಿಂಗ್​ ಸಾಹಸದಿಂದ ಪುಣೆ ಭರ್ಜರಿ ಲೀಡ್​ ಪಡೆಯಿತು. ಮೊದಲಾರ್ಧ ಮುಕ್ತಾಯಕ್ಕೆ 13-10 ಅಂಕದ ಮುನ್ನಡೆ ಸಾಧಿಸಿತು. ಇದೇ ಮುನ್ನಡೆಯನ್ನು ಪಂದ್ಯದಕ್ಕೂ ಕಾಯ್ದುಕೊಂಡು ಪ್ರಶಸ್ತಿ ಎತ್ತಿಹಿಡಿಯಿತು.

ಕನ್ನಡಿಗ ಕೋಚ್‌ ಬಿ.ಸಿ. ರಮೇಶ್‌ ಮಾರ್ಗದರ್ಶನ


ಕನ್ನಡಿಗ ಕೋಚ್‌ ಬಿ.ಸಿ. ರಮೇಶ್‌ ಮಾರ್ಗದರ್ಶನದಲ್ಲಿ ಪುಣೇರಿ ತಂಡ ಈ ಆವೃತ್ತಿಯ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡಿ ಆಡಿದ 22 ಪಂದ್ಯಗಳಲ್ಲಿ 17 ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿತ್ತು. ತನ್ನ ಖ್ಯಾತಿಗೆ ತಕ್ಕಂತೆ ಫೈನಲ್​ನಲ್ಲಿಯೂ ಇದೇ ಪ್ರದರ್ಶನ ತೋರುವ ಮೂಲಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಕಳೆದ ಬಾರಿಯೂ ಪುಣೇರಿ ತಂಡ ಫೈನಲ್​ ಆಡಿತ್ತು. ಆದರೆ ಅಲ್ಲಿ ಜೈಪುರ ವಿರುದ್ಧ ಸೋತು ರನ್ನರ್​ ಅಪ್​ ಸ್ಥಾನ ಪಡೆದಿತ್ತು. ಈ ಬಾರಿ ಪ್ರಶಸ್ತಿಗೆಲ್ಲುವಲ್ಲಿ ಯಶಸ್ಸು ಕಂಡಿತು.

ಖ್ಯಾತ ಡಿಫೆಂಡರ್‌​ ಮೊಹಮ್ಮದ್ರೇಜಾ ಚಿಯಾನೆಹ್ ಅವರು ಮೊದಲಾರ್ಧದ ಆಟದಲ್ಲಿ ವಿಫಲಗೊಂಡರೂ ಕೂಡ ದ್ವಿತೀಯಾರ್ಧದಲ್ಲಿ ಶ್ರೇಷ್ಠ ಆಟ ಪ್ರದರ್ಶಿಸಿ ತಂಡಕ್ಕೆ ನೆರವಾದರು. ಮೋಹಿತ್​ ಗೋಯತ್​ ಅವರು ಪ್ರೊ ಕಬಡ್ಡಿ ಆವೃತ್ತಿಯಲ್ಲಿ 400 ರೇಡಿಂಗ್​ ಅಂಕಗಳನ್ನು ಪೂರ್ತಿಗೊಳಿಸಿದ ದಾಖಲೆಯನ್ನು ಕೂಡ ಈ ಪಂದ್ಯದಲ್ಲಿ ಬರೆದರು.

ಹರ್ಯಾಣ ಪರ ರೇಡರ್​ ಶಿವಂ ತಕ್ಕ ಮಟ್ಟಿನ ಆಟ ಪ್ರದರ್ಶಿಸಿದರು. ಅವರು 6 ಅಂಕ ಗಳಿಸಿದರು. ನಾಯಕ ವಿನಯ್​ ಕೇವಲ 3 ಅಂಕಕ್ಕೆ ಸೀಮಿತರಾದರು. ಅವರ ವೈಫಲ್ಯ ತಂಡಕ್ಕೆ ಭಾರೀ ಹಿನ್ನಡೆ ಉಂಟುಮಾಡಿತು. ಪುಣೇರಿ ಪರ ನಾಯಕ ಅಸ್ಲಾಂ ಇನಾಮ್ದಾರ್‌ 4, ಪಂಕಜ್​ ಮೋಹಿತೆ 9 ಅಂಕ ಗಳಿಸಿ ಗೆಲುವಿನ ಹೀರೊ ಎನಿಸಿದರು.

Continue Reading

ಬೆಂಗಳೂರು

Self Harming : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು 1 ವರ್ಷದ ಪುಟ್ಟ ಮಗುವಿನ ತಾಯಿ ಆತ್ಮಹತ್ಯೆ

Self Harming : ಬೆಂಗಳೂರಿನಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಫ್ಟ್‌ ವೇರ್‌ ಎಂಜಿನಿಯರ್‌ ಎಂಬ ಕಾರಣಕ್ಕೆ ಖುಷಿಯಿಂದ ಮದುವೆಯಾದ ಆಕೆಗೆ ಈಗ ಅವನ ಅಕ್ರಮ ಸಂಬಂಧವೇ ಮುಳುವಾಗಿದೆ. ಒಂದು ವರ್ಷದ ಪುಟ್ಟ ಮಗು ಅಮ್ಮನಿಲ್ಲದೆ ಅನಾಥವಾಗಿದೆ.

VISTARANEWS.COM


on

Self Harming in Bangalore
ಆತ್ಮಹತ್ಯೆ ಮಾಡಿಕೊಂಡ ಕಾವ್ಯ ತನ್ನ ಗಂಡ ಪ್ರವೀಣ್‌ ಮತ್ತು ಮಗುವಿನ ಜತೆ
Koo

ಬೆಂಗಳೂರು: ಅವನು ಒಬ್ಬ ಸಾಫ್ಟ್‌ ವೇರ್‌ ಎಂಜಿನಿಯರ್‌ (Software Engineer). ಒಳ್ಳೆಯ ಕೆಲಸದಲ್ಲಿದ್ದಾನೆ ಎಂಬ ಕಾರಣಕ್ಕೆ ಐವತ್ತು ಲಕ್ಷ ರೂ. ಖರ್ಚು ಮಾಡಿ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ದುಡ್ಡಿನ ಜತೆ ಅರ್ಧ ಕೆಜಿ ಚಿನ್ನ ಕೂಡಾ ಕೊಟ್ಟಿದ್ದರು. ಆದರೆ, ಆ ಮನುಷ್ಯ ಮದುವೆಯಾದ ಕೂಡಲೇ ಕೆಲಸ ಬಿಟ್ಟಿದ್ದ. ಹಾಗೇ ಇದ್ದಿದ್ದರೆ ಪರವಾಗಿರಲಿಲ್ಲ. ಬೇರೆ ಹೆಣ್ಣಿನ ಸಹವಾಸಕ್ಕೆ ಬಿದ್ದಿದ್ದ. ಕೇಳಿದರೆ ತಂಗಿ ಅಂತಿದ್ದ! ಇಂಥ ದುಷ್ಟ ಗಂಡನ ಅಕ್ರಮ ಸಂಬಂಧದಿಂದ (Illicit relationship) ಬೇಸತ್ತು ಆ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ (Self Harming), ಕೇವಲ ಒಂದು ವರ್ಷದ ಪುಟ್ಟ ಕಂದಮ್ಮನನ್ನು ಬಿಟ್ಟು ಹೋಗಿದ್ದಾಳೆ.

ಇದು ಬೆಂಗಳೂರಿನ ರಾಜಗೋಪಾಲ ನಗರದ ಮೋಹನ್‌ ಥಿಯೇಟರ್‌ ಬಳಿಯ ಮನೆಯೊಂದರಲ್ಲಿ ನಡೆದಿರುವ ಘಟನೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯ ಹೆಸರು ಕಾವ್ಯ. ವಯಸ್ಸು ಇನ್ನೂ ಕೇವಲ 22. ಎರಡು ವರ್ಷದ ಹಿಂದಷ್ಟೇ ಸಂಸಾರ ಜೀವನಕ್ಕೆ ಕಾಲಿಟ್ಟ ಆಕೆ ಬಿಟ್ಟು ಹೋಗಿರುವ ಪುಟ್ಟ ಮಗುವಿನ ಮೊದಲ ಹುಟ್ಟುಹಬ್ಬವನ್ನು ಕೆಲವು ದಿನದ ಹಿಂದಷ್ಟೇ ಆಚರಿಸಲಾಗಿತ್ತು.

ಕುಣಿಗಲ್‌ ನಿವಾಸಿಯಾಗಿರುವ ಕಾವ್ಯ ಪ್ರವೀಣ್ ಎಂಬಾತನನ್ನು ಮದ್ವೆಯಾಗಿದ್ದಳು. ಆದರೆ ಸಂಸಾರ ನೆಟ್ಟಗಿರಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ, ಈಗ ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಆಕೆಯ ಮನೆಯವರು ಆರೋಪ ಮಾಡುತ್ತಿದ್ದಾರೆ.

ಪ್ರವೀಣ್ ಎಂಜಿನಿಯರ್‌ ಎಂಬ ಕಾರಣಕ್ಕೆ ಕಾವ್ಯಳನ್ನು ಆಕೆಯ ಮನೆಯವರು ಖುಷಿಯಿಂದ ಮದುವೆ ಮಾಡಿಕೊಟ್ಟಿದ್ದರಂತೆ. ಆದರೆ ಆತ ಮಾತ್ರ ಮದುವೆ ಆದ ಸ್ವಲ್ಪ ದಿನದಲ್ಲಿ ಕೆಲಸ ಬಿಟ್ಟಿದ್ದನಂತೆ. ಎಲ್ಲಿಯೂ ಕೆಲಸಕ್ಕೆ ಹೋಗದೆ ಕಾವ್ಯಾಳ ಪೋಷಕರು ಕೊಟ್ಟ ಹಣದಲ್ಲಿ ಜೀವನ ಶುರು ಮಾಡಿದ್ದ.

ಕಾವ್ಯಾಳ ಮನೆಯವರು ಎಷ್ಟೇ ಬುದ್ಧಿ ಹೇಳಿದರೂ ಮೊಂಡು ಬಿದ್ದಿದ್ದ ಪ್ರವೀಣ್. ಪೋಷಕರಿಗೆ ಅಸಲಿ ಸತ್ಯ ಗೊತ್ತಾಗಿದ್ದೇ ಆಗ. ತಮ್ಮ ಮಗಳನ್ನ ಪ್ರೀತಿಸುವ ಹುಡುಗನನ್ನ ಹುಡುಕೋದನ್ನ ಬಿಟ್ಟು ಪೋಷಕರೂ ಕೂಡ ಆತನ ಸಿರಿವಂತಿಕೆ ಸ್ಟೇಟಸ್ ಹುಡುಕಿದ್ದರು.

Self Harming in Bangalore1

ಇದನ್ನು ಓದಿ: Love Case : ಪ್ರೀತ್ಸೆ ಪ್ರೀತ್ಸೆ ಎಂದು ಅಪ್ರಾಪ್ತೆಯ ಕೊಂದೇ ಬಿಟ್ಟ ಪಾಗಲ್‌ ಪ್ರೇಮಿ

ಇಷ್ಟರ ನಡುವೆ ಪ್ರವೀಣನಿಗೆ ಬೇರೆ ಹುಡುಗೀಯ ಜೊತೆ ಅಕ್ರಮ ಸಂಬಂಧ ಇತ್ತು ಎಂಬ ವಿಷಯವೂ ಗೊತ್ತಾಗಿತ್ತು. ಅದನ್ನು ಪ್ರಶ್ನಿಸಿದಾಗ ಆಕೆ ನನ್ನ ತಂಗಿ ನಮ್ಮಿಬ್ಬರ ನಡುವೆ ಏನಿಲ್ಲ ಎಂದೇ ಹೇಳುತ್ತಿದ್ದ. ಆದರೆ, ಆಕೆಯ ಸಂಬಂಧವನ್ನು ಮುಂದುವರಿಸಿದ್ದ. ಭಾನುವಾರ ಕೂಡಾ ಇದೇ ವಿಚಾರಕ್ಕೆ ಪತಿ, ಪತ್ನಿ ನಡುವೆ ಜಗಳ ನಡೆದಿದೆ ಎಂದು ಹೇಳಲಾಗಿದೆ. ಇದರಿಂದ ನೊಂದು, ಜಗಳ ತಾರಕ್ಕೇರಿ ಕಾವ್ಯ ನೇಣು ಬಿಗಿದುಕೊಂಡಿರುವ ಸಾಧ್ಯತೆ ಇದೆ. ಆದರೆ, ಪ್ರವೀಣನ ಮನೆಯವರೇ ಕೊಂದು ನೇಣಿಗೆ ಹಾಕಿದ್ದಾರೆಂದು ಕುಟುಂಬಸ್ಥರ ಆರೋಪ. ಪ್ರವೀಣ ಕಾವ್ಯಳಿಗೆ ಕೊಟ್ಟ ಚಿನ್ನಾಭರಣಗಳನ್ನು ಕೂಡಾ ಆ ಯುವತಿಗೆ ಕೊಟ್ಟಿದ್ದಾನೆ ಎಂದು ಕೂಡಾ ಆರೋಪಿಸಿದ್ದಾರೆ. ಸದ್ಯ ಈ ಸಂಬಂಧ ರಾಜಗೋಪಾಲ ನಗರ ಪೊಲೀಸರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Continue Reading

Latest

Diamond League: ಸೆಂಟಿಮೀಟರ್ ಅಂತರದಲ್ಲಿ ನೀರಜ್​ ಕೈತಪ್ಪಿದ ಚಿನ್ನ; ಲಾಂಗ್​ ಜಂಪ್​ನಲ್ಲಿ ಶ್ರೀಶಂಕರ್​ಗೆ 5ನೇ ಸ್ಥಾನ

ಜ್ಯೂರಿಚ್‌ನಲ್ಲಿ ನಡೆದ ಮೂರನೇ ಚರಣರದ ಡೈಮಂಡ್​ ಲೀಗ್​ನಲ್ಲಿ ನೀರಜ್​ ಅವರು 85.71 ದೂರ ಜಾವೆಲಿನ್​ ಎಸೆದು ಕೇವಲ 15 ಸೆಂಟಿಮೀಟರ್​ ಅಂತರದಿಂದ ಚಿನ್ನದ ಪದಕ ಗೆಲ್ಲುವ ಅವಕಾಶವನ್ನು ಕಳೆದುಕೊಂಡರು

VISTARANEWS.COM


on

neeraj chopra and Sreeshankar
Koo

ಜ್ಯೂರಿಚ್‌: ಭಾನುವಾರ ಬುಡಾಪೆಸ್ಟ್​ನಲ್ಲಿ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಭಾರತದ ಜಾವೆಲಿನ್‌ ತಾರೆ ನೀರಜ್‌ ಚೋಪ್ರಾ(Neeraj Chopra) ನಾಲ್ಕು ದಿನಗಳ ಅಂತರದಲ್ಲಿ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. ಜ್ಯೂರಿಚ್‌ನಲ್ಲಿ ನಡೆದ ಮೂರನೇ ಚರಣರದ ಡೈಮಂಡ್​ ಲೀಗ್​ನಲ್ಲಿ ನೀರಜ್​ ಅವರು 85.71 ದೂರ ಜಾವೆಲಿನ್​ ಎಸೆದು ಕೇವಲ 15 ಸೆಂಟಿಮೀಟರ್​ ಅಂತರದಿಂದ ಚಿನ್ನದ ಪದಕ ಗೆಲ್ಲುವ ಅವಕಾಶವನ್ನು ಕಳೆದುಕೊಂಡರು. ಆದರೆ ಮತ್ತೊಮ್ಮೆ ಭಾರತದ ಕೀರ್ತಿ ಪತಾಕೆಯನ್ನು ಜಾಗತಿಕ ಕ್ರೀಡಾ ಕ್ಷೇತ್ರದಲ್ಲಿ ಎತ್ತಿ ಹಿಡಿದರು. ಭಾರತರ ಮತ್ತೊಂದು ಭರವಸೆಯಾಗಿದ್ದ ಲಾಂಗ್​ ಜಂಪ್​ ಸ್ಪರ್ಧೆಯಲ್ಲಿ ಮುರಳಿ ಶ್ರೀಶಂಕರ್‌ ಅವರು ಪದಕ ಗೆಲ್ಲುವಲ್ಲಿ ವಿಫಲರಾದರು. ಅವರು 7.99 ಮೀ. ಜಿಗಿದು 5ನೇ ಸ್ಥಾನಕ್ಕೆ ತೃಪ್ತಿಪಟ್ಟರು. ಗ್ರ್ಯಾಂಡ್‌ ಫಿನಾಲೆ ಅಮೆರಿಕದ ಯೂಜಿನ್‌ನಲ್ಲಿ ಸೆಪ್ಟೆಂಬರ್​ 16, 17ರಂದು ನಡೆಯಲಿದೆ.

ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ 85.86 ದೂರ ಎಸೆದು ಚಿನ್ನ ಗೆದ್ದರು. ನೀರಜ್​ 85.71 ದೂರ ಎಸೆದು ಬೆಳ್ಳಿ ಗೆದ್ದರೆ, ಜರ್ಮನಿಯ ಜೂಲಿಯನ್‌ ವೆಬ್ಬರ್‌ 85.04 ಕಂಚು ಗೆದ್ದರು. ​ಮೊದಲ ಪ್ರಯತ್ನದಲ್ಲಿ 80.79 ಮೀ. ಎಸೆದ ನೀರಜ್​ ದ್ವಿತೀಯ ಎಸೆತದಲ್ಲಿ ಫೌಲ್​ ಆದರು. ನಾಲ್ಕನೇ ಎಸೆದಲ್ಲಿ ಮತ್ತೆ ಹಿಡಿತ ಸಾಧಿಸಿದರೂ ಅಂತಿಮ ಎಸೆದಲ್ಲಿ ಎಡವಿ ಚಿನ್ನದ ಪದಕದಿಂದ ವಂಚಿತಾದರು.

ದೋಹ- ಲಾಸನ್ನೆ ಚರಣದಲ್ಲಿ ಚಿನ್ನ

ನೀರಜ್‌ ಚೋಪ್ರಾ ಇದೇ ಮೇ 5ರಂದು ದೋಹಾದಲ್ಲಿ ನಡೆದಿದ್ದ ಡೈಮಂಡ್‌ ಲೀಗ್‌ನಲ್ಲಿ(Diamond League) ಚಿನ್ನದ ಪದಕ ಗೆದ್ದಿದ್ದರು. ಈ ಕೂಟದಲ್ಲಿ ಅವರು ತಮ್ಮ 4ನೇ ಅತ್ಯುತ್ತಮ ದೂರದ(88.67 ಮೀ.) ಸಾಧನೆಯೊಂದಿಗೆ ಗುರುತಿಸಿಕೊಂಡಿದ್ದರು. ಬಳಿಕ ಸ್ನಾಯು ಸೆಳೆತಕ್ಕೆ ಸಿಲುಕಿದ ಕಾರಣ ಒಂದು ತಿಂಗಳ ವಿಶ್ರಾಂತಿ ಪಡೆದು ಲಾಸನ್ನೆ ಚರಣರದ ಡೈಮಂಡ್​ ಲೀಗ್​ನಲ್ಲಿ(Lausanne Diamond League) ಕಣಕ್ಕಿಳಿದಿದ್ದರು. ಇಲ್ಲಿ 87.66 ಮೀಟರ್‌ ದೂರಕ್ಕೆ ಜಾವೆಲಿನ್ ಎಸೆದು ಚಿನ್ನದ ಪದಕ್ಕೆ ಕೊರಳೊಡ್ಡಿ ಸತತ ಚಿನ್ನ ಗೆದ್ದ ಸಾಧನೆ ಮಾಡಿದ್ದರು. ಇಲ್ಲಿಯೂ ಚಿನ್ನ ಗೆದ್ದಿದ್ದರೆ ಹ್ಯಾಟ್ರಿಕ್​ ಚಿನ್ನ ಗೆದ್ದ ಸಾಧನೆ ಮಾಡುತ್ತಿದ್ದರು.

ಇದನ್ನೂ ಓದಿ Neeraj Chopra: ಪ್ಯಾರಿಸ್​ನಲ್ಲಿಯೂ ನೀರಜ್​ ಚೋಪ್ರಾಗೆ ಚಿನ್ನ ಒಲಿಯಲಿದೆ; ಶಿರಸಿಯ ಕಾಶಿನಾಥ್ ನಾಯ್ಕ್ ವಿಶ್ವಾಸ

5ನೇ ಸ್ಥಾನಕ್ಕೆ ತೃಪ್ತಿಪಟ್ಟ ಮುರಳಿ ಶ್ರೀಶಂಕರ್‌

ಭಾರತರ ಮತ್ತೊಂದು ಭರವಸೆಯಾಗಿದ್ದ ಲಾಂಗ್​ ಜಂಪ್​ ಸ್ಪರ್ಧೆಯಲ್ಲಿ ಮುರಳಿ ಶ್ರೀಶಂಕರ್‌ ಅವರು ಪದಕ ಗೆಲ್ಲುವಲ್ಲಿ ವಿಫಲರಾದರು. 7.99 ಮೀ. ಜಿಗಿದು 5ನೇ ಸ್ಥಾನ ಪಡೆದರು. ಲಾಸನ್ನೆ ಚರಣದಲ್ಲಿಯೂ 7.88 ಮೀಟರ್‌ ಜಿಗಿತದೊಂದಿಗೆ ಐದನೇ ಸ್ಥಾನ ಪಡೆದಿದ್ದರು. ಈ ಬಾರಿ ತಮ್ಮ ಜಿಗಿತವನ್ನು ಕೊಂಚ ಉತ್ತಮಗೊಳಿಸಿದರು. ಗ್ರೀಸ್‌ನ ಮಿಲ್ಟಿಯಾಡಿಸ್ ಟೆಂಟೊಗ್ಲೋ 8.07 ಮೀ. ಜಿಗಿದು ಚಿನ್ನ ಗೆದ್ದರು.

ಕಳೆದ ಪ್ಯಾರಿಸ್‌ ಡೈಮಂಡ್‌ ಲೀಗ್‌ ಲಾಂಗ್‌ಜಂಪ್‌ನಲ್ಲಿ 8.09 ಮೀ. ದೂರದ ಸಾಧನೆಯೊಂದಿಗೆ ತೃತೀಯ ಸ್ಥಾನಿಯಾಗಿದ್ದ ಮುರಳಿ ಶ್ರೀಶಂಕರ್‌ ಇಲ್ಲಿ ಪದಕ ಗೆಲ್ಲುವಲ್ಲಿ ಎಡವಿದರು. ಇದಕ್ಕೂ ಮುನ್ನ ನಡೆದಿದ್ದ ನ್ಯಾಶನಲ್‌ ಇಂಟರ್‌ ಸ್ಟೇಟ್‌ ಆ್ಯತ್ಲೆಟಿಕ್ಸ್‌ನಲ್ಲಿ ಅತ್ಯುತ್ತಮ ವೈಯಕ್ತಿಕ ಸಾಧನೆಯನ್ನು ದಾಖಲಿಸಿ(8.42 ಮೀ.) ಮಿಂಚಿದ್ದರು.

ವಿಶ್ವ ಆ್ಯತ್ಲೆಟಿಕ್ಸ್‌ನಲ್ಲಿ ಚಿನ್ನದ ಹೊಳಪು

ಭಾನುವಾರ ರಾತ್ರಿ ನಡೆದಿದ್ದ ಫೈನಲ್‌ನಲ್ಲಿ ನೀರಜ್‌ ಚೋಪ್ರಾ 88.17 ಮೀ. ದೂರಕ್ಕೆ ಜಾವೆಲಿನ್‌ ಎಸೆದು ಚಿನ್ನದ ಪದಕ ಗೆದ್ದಿದ್ದರು. ಈ ಮೂಲಕ ವಿಶ್ವ ಆ್ಯತ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟಿದ್ದರು. ಒಲಿಂಪಿಕ್ಸ್, ಕಾಮನ್ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ ಹಾಗೂ ವಿಶ್ವ ಚಾಂಪಿಯನ್​ಶಿಪ್​ನಲ್ಲಿಯೂ ಚಿನ್ನ ಗೆದ್ದ ಭಾರತದ ಮೊದಲ ಅಥ್ಲೀಟ್​ ಎಂಬ ಹಿರಿಮೆಗೆ ಪಾತ್ರರಾಗಿದ್ದರು. ಕಳೆದ ವರ್ಷ ಇದೇ ಕೂಟದಲ್ಲಿ ಬೆಳ್ಳಿ ಪದಕ ಜಯಿಸಿದ್ದರು.

Continue Reading

Latest

ST Somashekhar : ಜನಸ್ಪಂದನ ಕಾರ್ಯಕ್ರಮಕ್ಕೆ ಡಿಕೆಶಿಗೆ ಆಹ್ವಾನ; ಸೋಮಶೇಖರ್‌ ಕಾಂಗ್ರೆಸ್‌ ಸೇರ್ಪಡೆ ಫಿಕ್ಸಾ?

ST Somashekhar : ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್‌ ಅವರು ಶನಿವಾರ ಬೆಳಗ್ಗೆ ಮೋದಿ ಕಾರ್ಯಕ್ರಮದ ಕಡೆಗೆ ತಲೆ ಹಾಕಿಲ್ಲ. ಆದರೆ, ಸಂಜೆ ಡಿಕೆಶಿ ಜತೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ!

VISTARANEWS.COM


on

ST Somashekhar
Koo

ಬೆಂಗಳೂರು: ಯಶವಂತಪುರದ ಬಿಜೆಪಿ ಶಾಸಕರಾಗಿರುವ ಎಸ್‌ಟಿ ಸೋಮಶೇಖರ್‌ (ST Somashekhar) ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರ್ಪಡೆಯ (Operation Hasta) ಸುದ್ದಿ ನಿಜವಾಗುವ ಕಾಲ ಸನ್ನಿಹಿತವಾದಂತೆ ಕಾಣುತ್ತಿದೆ. ಹಂತ ಹಂತವಾಗಿ ಬಿಜೆಪಿಯಿಂದ ದೂರವಾಗುತ್ತಾ, ಕಾಂಗ್ರೆಸ್‌ಗೆ ಹತ್ತಿರವಾಗುತ್ತಿರುವ ಅವರ ನಡೆಯಲ್ಲಿ ಶನಿವಾರ ಒಂದು ನಿರ್ಣಾಯಕ ದಿನವಾಗುವ ಸಾಧ್ಯತೆ ಇದೆ.

ಜನಸ್ಪಂದನ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್‌ಗೆ ಆಹ್ವಾನ

ಬಿಜೆಪಿ ಪಕ್ಷದ ಎಲ್ಲ ಕಾರ್ಯಕ್ರಮಗಳಿಂದ ದೂರವಾಗಿ ನಿಂತಿರುವ ಎಸ್‌ಟಿ ಸೋಮಶೇಖರ್‌ ಅವರು ಶನಿವಾರ ಸಂಜೆ ತಮ್ಮ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದಾರೆ. ಇದರಲ್ಲಿ ಅವರು ವೇದಿಕೆ ಹಂಚಿಕೊಳ್ಳುತ್ತಿರುವುದು ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರ ಜತೆ.

ಚೇಂಜ್‌ ಮೇಕರ್ಸ್‌ ಆಫ್‌ ಕನಕಪುರ ನಿವಾಸಿ ಸಂಘ ಎಂಬ ಸಂಸ್ಥೆ, ಶೋಭಾ ಫಾರೆಸ್ಟ್‌ ವ್ಯೂ ನಿವಾಸಿ ಸಂಘ (ಎಸ್‌ಫ್‌ವಿ) ಜತೆ ಸೇರಿಕೊಂಡು ಯಶವಂತಪುರ ವಿಧಾನಸಭಾ ಕ್ಷೇತ್ರದ ಹೆಮ್ಮಿಗೆ ಪುರ ವಾರ್ಡ್‌ ಸಂಖ್ಯೆ 198ರ ನಿವಾಸಿಗಳ ಜತೆ ʻಜನಸ್ಪಂದನʼ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರ ಅಧ್ಯಕ್ಷತೆಯನ್ನು ವಹಿಸುವವರು ಶಾಸಕ ಎಸ್‌.ಟಿ. ಸೋಮಶೇಖರ್‌. ಸಂಜೆ ನಾಲ್ಕು ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ST Somashekhar

ಎಸ್‌ಟಿ ಸೋಮಶೇಖರ್‌ ಅವರು ಇತ್ತೀಚೆಗೆ ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಆಯೋಜಿಸಿದ್ದ ಬೆಂಗಳೂರು ಶಾಸಕರ ಸಭೆಯಲ್ಲಿ ಅವರು ಗೈರು ಹಾಜರಾಗಿದ್ದರು. ಮಾತ್ರವಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಾಗಲೂ ಸೋಮಶೇಖರ್‌ ಮಾತ್ರ ತಿರುಗಿ ನೋಡಿಲ್ಲ!

ಬಿ.ಎಸ್‌. ಯಡಿಯೂರಪ್ಪ ಅವರು ಸೋಮಶೇಖರ್‌ ಅವರ ಜತೆ ಮಾತನಾಡುವ ಹೊಣೆಯನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವಹಿಸಿದ್ದರು. ಆದರೆ, ಬೊಮ್ಮಾಯಿ ಅವರು ಮಾತನಾಡಿಲ್ಲ. ಸಿ.ಟಿ. ರವಿ, ಆರ್‌. ಅಶೋಕ್‌ ಅವರು ಕರೆಸಿಕೊಂಡು ಮಾತನಾಡಿದರೂ ಸೋಮಶೇಖರ್‌ ಅವರು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ ಹೊರತು ಸಾಂತ್ವನ ಸಿಕ್ಕಿಲ್ಲ ಎನ್ನಲಾಗಿದೆ.

ಇದರ ನಡುವೆ ಸೋಮಶೇಖರ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಮತ್ತು ಅವರ ಕ್ಷೇತ್ರಕ್ಕೆ ದೊಡ್ಡ ಮೊತ್ತದ ಅನುದಾನವನ್ನು ಪಡೆದುಕೊಂಡು ಬಂದಿದ್ದರು. ಇದೆಲ್ಲವೂ ಸೋಮಶೇಖರ್‌ ಅವರು ಕಾಂಗ್ರೆಸ್‌ಗೆ ಹೋಗುವ ಸಂದೇಶ ಎಂಬಂತೆ ವಿಶ್ಲೇಷಿಸಲಾಗುತ್ತಿದೆ.

ಇದೀಗ ತಮ್ಮ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್‌ ಅವರಿಗೆ ಸಂಬಂಧಿಸಿದ ಸಂಘಟನೆಗಳು ಆಯೋಜಿಸಿರುವ ಜನಸ್ಪಂದನ ಕಾರ್ಯಕರ್ಮದಲ್ಲಿ ಎಸ್‌ಟಿ ಸೋಮಶೇಖರ್‌ ಭಾಗವಹಿಸುತ್ತಿರುವುದು ಭಾರಿ ಸದ್ದು ಮಾಡಿದೆ.

ಇದನ್ನೂ ಓದಿ: Operation Hasta : ಮೋದಿ ಬಂದ್ರೂ ಬರಲಿಲ್ಲ ಸೋಮಶೇಖರ್‌, ಸಿಎಂ ಭೇಟಿಯಾದ್ರು ಶಿವರಾಂ ಹೆಬ್ಬಾರ್‌! ಏನಾಗ್ತಿದೆ?

ಸಿದ್ದರಾಮಯ್ಯ ಭೇಟಿ ಮಾಡಿದ ಶಿವರಾಮ್‌ ಹೆಬ್ಬಾರ್‌

ಈ ನಡುವೆ, ಆಪರೇಷನ್‌ ಹಸ್ತದ ಸುಳಿಗೆ ಸಿಲುಕಿದ್ದಾರೆ ಎಂದು ಹೇಳಲಾದ ಇನ್ನೊಬ್ಬ ಶಾಸಕ ಶಿವರಾಮ ಹೆಬ್ಬಾರ್‌ ಅವರು ಕೂಡಾ ಶನಿವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅವರು ಬರ ಘೋಷಣೆ ಮತ್ತು ಪರಿಹಾರದ ಬೇಡಿಕೆಯನ್ನು ಇಟ್ಟುಕೊಂಡು ಹೋಗಿದ್ದಾರಾದರೂ, ನಿಜವಾದ ಉದ್ದೇಶ ಅದಲ್ಲ ಎನ್ನಲಾಗುತ್ತಿದೆ.

Continue Reading
Advertisement
Sania Mirza
ಕ್ರೀಡೆ6 mins ago

Sania Mirza: ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಸಾನಿಯಾ ಮಿರ್ಜಾ?; ಈ ಪಕ್ಷದಿಂದ ಆಫರ್​

Savadatti Yallamma
ಕರ್ನಾಟಕ8 mins ago

ಬರದ ಮಧ್ಯೆಯೂ ಭರ್ಜರಿ ಕಾಣಿಕೆ; ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 11 ಕೋಟಿ ರೂ. ಸಂಗ್ರಹ!

Heart Attack
ಬೆಂಗಳೂರು21 mins ago

Heart Attack : ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

Ranbir Kapoor Raha Kapoor
ಬಾಲಿವುಡ್29 mins ago

Ranbir Kapoor: ಅತ್ಯಂತ ಕಿರಿಯ ಮತ್ತು ಶ್ರೀಮಂತ ಸ್ಟಾರ್‌ ಕಿಡ್‌ ಆಗಲಿದ್ದಾರಂತೆ ರಣಬೀರ್- ಆಲಿಯಾ ಮಗಳು!

Cows
ಕರ್ನಾಟಕ60 mins ago

ಹಾಸನದಲ್ಲಿ ಅಕ್ರಮ ಗೋಮಾಂಸ ಜಾಲ; 60 ಗೋವುಗಳನ್ನು ಕೊಂದ ರಾಕ್ಷಸರು!

R Ashwin
ಕ್ರೀಡೆ1 hour ago

IPL 2024: ಐಪಿಎಲ್‌ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಆರ್‌.ಅಶ್ವಿ‌ನ್‌!

Bangalore water crisis IT companies
ಬೆಂಗಳೂರು1 hour ago

Bangalore Water Crisis: “ನೀರು ಕೊಡ್ತೀವಿ, ಪ್ಲೀಸ್‌ ಹೋಗ್ಬೇಡಿ…” ಐಟಿ ಸಂಸ್ಥೆಗಳಿಗೆ ರಾಜ್ಯ ಮನವಿ; ಗಾಳ ಹಾಕಿದ ಕೇರಳ

Chikkaballapur
ಕರ್ನಾಟಕ2 hours ago

ಚಿಕ್ಕಬಳ್ಳಾಪುರದಲ್ಲಿ ಅತ್ತೆಯನ್ನು ಎಳೆದೊಯ್ದು ತಿಪ್ಪೆಗೆ ಎಸೆದ ಕ್ರೂರ ಸೊಸೆ; ವೃದ್ಧೆಯ ತಪ್ಪೇನು?

Actor Suriya announces film
ಕಾಲಿವುಡ್2 hours ago

Actor Suriya: ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕಾಲಿವುಡ್‌ ನಟ ಸೂರ್ಯ: ಅಚ್ಚರಿಯಾಗಿದೆ ಪೋಸ್ಟರ್‌!

Yuva Rajkumar Yuva cutout
ಸಿನಿಮಾ2 hours ago

Yuva Rajkumar: ʻಯುವʼನ ಆರ್ಭಟ ಶುರು: ಸಿನಿಮಾ ನೋಡಿ ಬೆಳ್ಳುಳ್ಳಿ ಕಬಾಬ್‌ ಚಂದ್ರು ಏನಂದ್ರು?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202421 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202423 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌