Monsoon Driving: ಮಳೆಗಾಲದಲ್ಲಿ ಕಾರು ಪ್ರಯಾಣಕ್ಕೆ ಹೊರಡುವಾಗ ಈ ಟಿಪ್ಸ್‌ ಗಮನದಲ್ಲಿರಲಿ - Vistara News

Latest

Monsoon Driving: ಮಳೆಗಾಲದಲ್ಲಿ ಕಾರು ಪ್ರಯಾಣಕ್ಕೆ ಹೊರಡುವಾಗ ಈ ಟಿಪ್ಸ್‌ ಗಮನದಲ್ಲಿರಲಿ

ಮಳೆಗಾಲದ ಡ್ರೈವಿಂಗ್‌ ಆಕರ್ಷಕ; ಆದರೆ ಅಷ್ಟೇ ರಿಸ್ಕ್‌ ಹೊಂದಿರುವ ಸಂಗತಿ ಕೂಡ. ಹೀಗಾಗಿ ಮಳೆಯಲ್ಲಿ ಡ್ರೈವ್‌ ಮಾಡುತ್ತಾ ಹೊರಟುಬಿಡುವ ಮುನ್ನ ಕೆಳಗಿನ ಟಿಪ್ಸ್‌ (Monsoon Driving) ನೆನಪಿನಲ್ಲಿರಲಿ.

VISTARANEWS.COM


on

monsoon driving
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
monsoon focus

ಭಾರತದಲ್ಲಿ ಮಾನ್ಸೂನ್‌ ಬರಲಿ ಎಂದು ಲಕ್ಷಾಂತರ ಜನ ಎದುರು ನೋಡುತ್ತಾರೆ. ಕೃಷಿ ಚಟುವಟಿಕೆಗೆ ಮಾತ್ರವಲ್ಲ. ಮಳೆಯಲ್ಲಿ ಪ್ರವಾಸ ಹೋಗುವುದು ಕೂಡ ಒಂದು ಆನಂದದ ಅನುಭವ. ಮಳೆಯಲ್ಲಿ ಪ್ರಕೃತಿಯ ಇನ್ನೊಂದು ಮುಖ ತೆರೆದುಕೊಳ್ಳುತ್ತದೆ. ಅದರಲ್ಲೂ ಹಿಲ್‌ ಸ್ಟೇಶನ್‌ಗಳಿಗೆ ಹೋಗುವ ಪ್ರವಾಸಿಗರ ಸಂಖ್ಯೆ ಹೆಚ್ಚು. ಡ್ರೈವ್‌ ಮಾಡಲು ಬಯಸುವವರಿಗೆ ಮಳೆಗಾಲ ಒಂದು ರೀತಿಯಲ್ಲಿ ರೊಮ್ಯಾಂಟಿಕ್. ಮಳೆಗಾಲದ ಡ್ರೈವಿಂಗ್‌ ಆಕರ್ಷಕ; ಆದರೆ ಅಷ್ಟೇ ರಿಸ್ಕ್‌ ಹೊಂದಿರುವ ಸಂಗತಿ ಕೂಡ. ರಸ್ತೆ ಜಾರುತ್ತದೆ; ಹೊಂಡಗಳು ನೀರು ತುಂಬಿ ಕಾಣುವುದಿಲ್ಲ. ಮಳೆ ಬರುವಾಗ ಕಾರಿನ ಗಾಜು ಮುಚ್ಚಿಹೋಗಿ ದಾರಿ ಸರಿಯಾಗಿ ಕಾಣದೆ ಹೋಗಬಹುದು. ಹೀಗಾಗಿ ಕಾರು ಚಾಲನೆ ರಿಸ್ಕೀ ಮತ್ತು ಥ್ರಿಲ್ಲಿಂಗ್.‌ ಹೀಗಾಗಿ ಮಳೆಯಲ್ಲಿ ಡ್ರೈವ್‌ ಮಾಡುತ್ತಾ ಹೊರಟುಬಿಡುವ ಮುನ್ನ ಕೆಳಗಿನ ಟಿಪ್ಸ್‌ (Monsoon Driving) ನೆನಪಿನಲ್ಲಿರಲಿ.

ಹವಾಮಾನ ಮುನ್ಸೂಚನೆ ಗಮನಿಸಿ

ಭಾರತದಲ್ಲಿ ಮಾನ್ಸೂನ್ ಸಂಪೂರ್ಣವಾಗಿ ಅನಿರೀಕ್ಷಿತ. ಒಂದು ಗಂಟೆ ಬಿಸಿಲಿದ್ದರೆ ಮತ್ತೊಂದು ನಿಮಿಷದಲ್ಲಿ ಮಳೆ ಸುರಿಯಬಹುದು. ಹೀಗಾಗಿ ನೀವು ಭೇಟಿ ನೀಡಲು ಯೋಜಿಸಿರುವ ಸ್ಥಳದ ಹವಾಮಾನದ ಮುನ್ಸೂಚನೆಯನ್ನು ಗಮನಿಸಿ. ಹವಾಮಾನ ಅಪ್ಲಿಕೇಶನ್‌ ಇನ್‌ಸ್ಟಾಲ್‌ ಮಾಡಿಕೊಳ್ಳಿ. ನಿರಂತರವಾಗಿ ಅದನ್ನು ಗಮನಿಸುತ್ತಿರಿ. ಇತ್ತೀಚೆಗೆ ಬಹಳಷ್ಟು ಗಿರಿಧಾಮಗಳಲ್ಲಿ ಭೂಕುಸಿತಗಳು ಸಂಭವಿಸುತ್ತಿವೆ. ಅದನ್ನೂ ಗಮನದಲ್ಲಿಟ್ಟುಕೊಳ್ಳಿ.

ವಾಹನ ಕೂಲಂಕಷವಾಗಿ ಪರಿಶೀಲಿಸಿ

ಅಂಕುಡೊಂಕಾದ ಘಾಟಿಗಳು, ಕತ್ತಲಿನ ಸುರಂಗಗಳು, ಒದ್ದೆಯಾದ ಮತ್ತು ಕೆಸರು ತುಂಬಿದ ರಸ್ತೆಗಳು ಮಳೆಗಾಲದಲ್ಲಿ ನಿಮಗೆ ಎದುರಾಗುತ್ತವೆ. ಇಂಥ ಸಂದರ್ಭದಲ್ಲಿ ನಿಮ್ಮ ವಾಹನ ಪೂರ್ತಿ ಫಿಟ್‌ ಆಗಿರಬೇಕು. ಮಳೆಗಾಲದಲ್ಲಿ ಇಳಿಜಾರು ರಸ್ತಗಳಲ್ಲಿ ವಾಹನ ಓಡಿಸುವುದು ದುಃಸ್ವಪ್ನವೇ ಸರಿ. ನಿಮ್ಮ ಪ್ರಯಾಣ ಪ್ರಾರಂಭಿಸುವ ಮೊದಲು ಪೂರ್ತಿ ಸರ್ವಿಸ್‌ ಮಾಡಿಸಿ. ವಾಹನ ಟೈರ್‌ಗಳು, ವಿಂಡ್‌ಶೀಲ್ಡ್ ವೈಪರ್‌ಗಳು, ಹೆಡ್‌ಲೈಟ್‌ಗಳು, ಬ್ರೇಕ್‌ಗಳು ಉತ್ತಮ ಸ್ಥಿತಿಯಲ್ಲಿವೆ ಎಂದು ಖಚಿತಪಡಿಸಿಕೊಳ್ಳಿ. ಬಿಡಿ ಟೈರ್ ಒಯ್ಯಲು ಮರೆಯಬೇಡಿ.

ನಿಧಾನ ಮತ್ತು ಸ್ಥಿರವಾದ ಡ್ರೈವಿಂಗ್‌

ʼಸ್ಲೋ ಮತ್ತು ಸ್ಟೆಡಿʼ ಎಂಬುದು ಪ್ರಸಿದ್ಧವಾದ ಮಾತು. ನಿಧಾನವಾದ ಮತ್ತು ಸ್ಥಿರವಾದ ಓಟ ಗೆಲ್ಲುತ್ತದೆ. ಮಳೆಯ ಸಂದರ್ಭದಲ್ಲಿ ವಾಹನ ಚಾಲನೆಗೂ ಇದು ಅನ್ವಯ. ವಿಶೇಷವಾಗಿ ಘಾಟಿ ರಸ್ತೆಗಳ ಏರುವಿಕೆ ಮತ್ತು ಇಳಿಯುವಿಕೆ. ಮುಂದಿನ ವಾಹನದಿಂದ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಿ. ವಿಶೇಷವಾಗಿ ಅಪಘಾತಗಳು ಸಂಭವಿಸುವ ಭೂಪ್ರದೇಶದ ಮೂಲಕ ಪ್ರಯಾಣಿಸುತ್ತಿದ್ದಾಗ.

ಪ್ರವಾಸದ ಪ್ಲಾನಿಂಗ್‌

ನಿಮ್ಮ ಸಂಪೂರ್ಣ ಪ್ರವಾಸವನ್ನು ಮುಂಚಿತವಾಗಿಯೇ ಮ್ಯಾಪ್‌ ಮುಂದಿಟ್ಟುಕೊಂಡು ಪ್ಲಾನ್‌ ಮಾಡಿಕೊಳ್ಳಿ. ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗಲು ಬೇಕಾದ ಸಮಯ, ವಿರಾಮದ ಅವಧಿ, ಇವುಗಳನ್ನು ಲೆಕ್ಕ ಹಾಕಿ. ಪ್ಲಾನ್‌ ಮಾಡಿದ ಸಮಯಕ್ಕೆ ಸರಿಯಾಗಿ ಎಲ್ಲವೂ ನಡೆಯುವಂತೆ ನೋಡಿಕೊಳ್ಳಿ. ಮಳೆಗಾಲದಲ್ಲಿ ರಾತ್ರಿ ವೇಳೆ ವಾಹನ ಚಲಾಯಿಸುವುದನ್ನು ಆ ಮೂಲಕ ತಪ್ಪಿಸಿ.

ಆಫ್-ರೋಡಿಂಗ್ ತಪ್ಪಿಸಿ

ಡ್ರೈವಿಂಗ್‌ ಸಾಹಸಿಗಳಿಗೆ ಚಾಲನೆ ಮಾಡುವಾಗ ಉಂಟಾಗುವ ಅಡ್ರಿನಾಲಿನ್‌ ರಷ್‌ ತುಂಬಾ ಪ್ರಿಯ. ನಿಯಮಗಳನ್ನು ಉಲ್ಲಂಘಿಸುವುದು, ವೇಗವಾಗಿ ಚಲಾಯಿಸುವುದೇ ಇಂಥವರಿಗೆ ಪ್ರಿಯ. ಆದರೆ ಮಳೆಗಾಲದಲ್ಲಿ ಇದು ಅಪಾಯಕಾರಿ. ಯಾಕೆಂದರೆ ಭಾರತದ ರಸ್ತೆಗಳು ಮಳೆಗಾಲದಲ್ಲಿ ಕುಖ್ಯಾತ. ಅನಿವಾರ್ಯ ಅಲ್ಲದಿದ್ದರೆ ಆಫ್‌ ರೋಡ್‌ ಪ್ರಯಾಣ ತಪ್ಪಿಸಿ. ಯಾಕೆಂದರೆ ವಾಹನದ ಟೈರ್‌ಗಳು ಕೆಸರಿನಲ್ಲಿ ಸಿಕ್ಕಿಹಾಕಿಕೊಳ್ಳಬಹುದು.

ಟೈರ್‌ಗಳು ಸೂಕ್ತ ಸ್ಥಿತಿಯಲ್ಲಿರಲಿ

ತೇವವಿರುವ ರಸ್ತೆ ಮೇಲೆ ಓಡಿಸುವಾಗ ಟೈರ್‌ಗಳು ಸುಸ್ಥಿತಿಯಲ್ಲಿರಬೇಕು. ಇದರ ಟ್ರೆಡ್‌ಗಳು ನೀರನ್ನು ಚದುರಿಸುವ ಚಾನಲ್‌ಗಳಾಗಿ ಕಾರ್ಯನಿರ್ವಹಿಸುತ್ತವೆ. ನಿಖರವಾದ ಟ್ರೆಡ್‌ಗಳನ್ನು ಹೊಂದಿದ ಟೈರ್‌ಗಳು ಅಗತ್ಯ. ಫ್ಲ್ಯಾಟ್‌ ಆದ ಟೈರ್‌ಗಳು ನೀರಿನ ಮೇಲೆ ಚಲಾಯಿಸಿದಾಗ ಜಾರುತ್ತವೆ. ಚಕ್ರದ ಹೊರಮೈಯ ಟ್ರೆಡ್‌ಗಳ ಆಳವು ಕನಿಷ್ಠ 2 ಮಿಮೀ ಇರಬೇಕು. ಸವೆದ ಟೈರ್‌ಗಳು ಪಂಕ್ಚರ್‌ ಆಗಬಹುದು. ಕೆಲವು ಸಂದರ್ಭಗಳಲ್ಲಿ ಸಿಡಿಯಬಹುದು. ಹೀಗಾಗಿ ಚಕ್ರಗಳ ಆಳ ಸವೆಯುವ ಮುನ್ನ ಬದಲಾಯಿಸಿಕೊಳ್ಳಿ.

ಬ್ರೇಕ್‌ಗಳು ಸುಸ್ಥಿತಿಯಲ್ಲಿರಲಿ

ಎಲ್ಲಾ ಪರಿಸ್ಥಿತಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸುವ ಬ್ರೇಕ್‌ಗಳನ್ನು ಹೊಂದಿರುವುದು ಮುಖ್ಯ. ಮಳೆಗಾಲದಲ್ಲಿ ರಸ್ತೆ ಜಾರುವುದರಿಂದ, ಮುಂದಿನ ವಾಹನದಿಂದ ಸ್ವಲ್ಪ ಹೆಚ್ಚಿನ ಅಂತರವನ್ನೇ ಕಾಪಾಡಿಕೊಳ್ಳಬೇಕು. ಆದ್ದರಿಂದ ನಿಮ್ಮ ಬ್ರೇಕ್‌ಗಳು ಟಿಪ್‌ಟಾಪ್ ಆಗಿರಬೇಕು. ಭಾರೀ ಮಳೆಯ ಸಮಯದಲ್ಲಿ ಅಥವಾ ಕೆಸರು ರಸ್ತೆಯಲ್ಲಿ ಚಾಲನೆ ಮಾಡಿದ ನಂತರ ಬ್ರೇಕ್‌ಗಳನ್ನು ಲಘುವಾಗಿ ಟ್ಯಾಪ್ ಮಾಡುವ ಮೂಲಕ ಒಣಗಿಸಿಕೊಳ್ಳಿ. ಇತ್ತೀಚಿನ ಹೊಸ ಕಾರುಗಳು ಆರ್ದ್ರ ನೆಲದಲ್ಲಿ ಬ್ರೇಕಿಂಗ್ ಅನ್ನು ಹೆಚ್ಚು ಸುರಕ್ಷಿತಗೊಳಿಸಿವೆ.

ವೈಪರ್‌ಗಳು ಸ್ವಚ್ಛವಾಗಿರಲಿ

ಮಾನ್ಸೂನ್‌ನಲ್ಲಿ ಚಾಲನೆ ಮಾಡುವಾಗ ನಿಮ್ಮ ಎದುರಿನ ಗಾಜನ್ನು ಸ್ವಚ್ಛವಾಗಿಡುವ ವೈಪರ್‌ಗಳು ತುಂಬಾ ಅಗತ್ಯ. ಗೆರೆಗಳಿಲ್ಲದ ವಿಂಡ್‌ಶೀಲ್ಡ್ ಮುಂದಿರಬೇಕು. ಗೆರೆಗಳಿದ್ದರೆ ಅದು ದೃಷ್ಟಿಗೆ ಅಡ್ಡಿಯಾಗಬಹುದು. ವೈಪರ್ ಬ್ಲೇಡ್‌ಗಳು ಸ್ವಚ್ಛವಾಗಿ ಒರೆಸುತ್ತಿವೆ ಎಂದು ಖಚಿತಪಡಿಸಿಕೊಳ್ಳಿ. ಇತರ ಕಾರುಗಳ ಚಕ್ರಗಳಿಂದ ಸಿಡಿದ ಕೆಸರು ಇತ್ಯಾದಿ ಸ್ವಚ್ಛಗೊಳಿಸಲು ವೈಪರ್ ವಾಷರ್ ದ್ರವ ತುಂಬಿಸಿಕೊಳ್ಳಿ.

ಅಗತ್ಯವಿದ್ದಾಗ ಲೈಟ್‌ ಬಳಸಿ

ಮಳೆ ಸುರಿಯುತ್ತಿರುವಾಗ, ರಸ್ತೆ ಸರಿಯಾಗಿ ಕಾಣದಾಗ ಚಾಲನೆ ಮಾಡುವುದು ಅನಿವಾರ್ಯವಾದರೆ ನಿಮ್ಮ ಕಾರಿನ ಹೆಡ್‌ಲೈಟ್‌ ಆನ್‌ ಇಟ್ಟುಕೊಳ್ಳಿ. ಮಳೆಗಾಲದಲ್ಲಿ ಹೆಚ್ಚಾಗಿ ಪ್ರಯಾಣಿಸುವವರಾದರೆ ಫಾಗ್‌ ಲೈಟ್‌ ಹಾಕಿಸಿಕೊಳ್ಳಿ. ಎಮರ್ಜೆನ್ಸಿ ಲೈಟ್‌ ಅಥವಾ ಬ್ಲಿಂಕರ್‌ ಬಳಸುವುದನ್ನು ತಪ್ಪಿಸಿ- ಯಾಕೆಂದರೆ ಇವು ಇರುವುದು ಅಪಾಯಕಾರಿ ಸನ್ನಿವೇಶದಲ್ಲಿ ಬಳಸಲು ಮಾತ್ರ.

ಅಂತರ ಮತ್ತು ವೇಗ ನಿಯಂತ್ರಣದಲ್ಲಿಡಿ

ಒದ್ದೆಯಾದ ರಸ್ತೆಯ ಮೇಲ್ಮೈಗಳಲ್ಲಿ ಬ್ರೇಕಿಂಗ್ ಅಂತರ ಹೆಚ್ಚಿರುತ್ತದೆ. ಹೀಗಾಗಿ ಮುಂಭಾಗದಲ್ಲಿರುವ ವಾಹನದಿಂದ ನಿಮ್ಮ ಅಂತರವನ್ನು ಕಾಯ್ದುಕೊಳ್ಳುವುದು ಅಪಘಾತವನ್ನು ತಪ್ಪಿಸಲು ಸಹಾಯ ಮಾಡುತ್ತದೆ. ಮಳೆಯ ಸಮಯದಲ್ಲಿ ನಿಮ್ಮ ವೇಗವನ್ನು ನಿಯಂತ್ರಿಸಿ. ಇದು ನಿಮಗೆ ಬ್ರೇಕ್ ಹಾಕಲು ಸಾಕಷ್ಟು ಸ್ಥಳಾವಕಾಶವನ್ನು ನೀಡುತ್ತದೆ.

ಇದನ್ನೂ ಓದಿ: Monsoon Health Tips : ಮಳೆಗಾಲದಲ್ಲಿ ವೈರಲ್‌ ಸೋಂಕು ತಡೆಯುವುದು ಹೇಗೆ?

ಎಸ್ಕೇಪ್‌ ಸಲಕರಣೆ

ತುಂಬಾ ಕೆಟ್ಟ ಸನ್ನಿವೇಶ ಒದಗಿತು ಎಂದಿಟ್ಟುಕೊಳ್ಳಿ. ಉದಾಹರಣೆಗೆ ಕಾರಿನ ಡೋರ್‌ ಜಾಮ್‌ ಆಗಿದ್ದರೆ? ಹೊಸ ಕಾರುಗಳಲ್ಲಿ ಹಿಂಬದಿ ಚಿಮ್ಮುವ ಸೀಟುಗಳಿವೆ. ಆದರೆ ಹಳೆಯ ಕಾರುಗಳಲ್ಲಿ ಅವು ಇಲ್ಲ. ಇನ್ನೊಂದು ಆಯ್ಕೆ ಅಂದರೆ ಕಿಟಕಿ ಒಡೆಯುವುದು. ಕಾರಿನಲ್ಲೊಂದು ಸುತ್ತಿಗೆ ಇದ್ದರೆ ಚೆನ್ನ. ಅಥವಾ ಹೆಡ್‌ರೆಸ್ಟ್‌ನ ಲೋಹದ ಸ್ಲೈಡರ್‌ ಅಥವಾ ಪಾದಗಳನ್ನು ಇದಕ್ಕೆ ಬಳಸಿ. ಸೀಟ್‌ಬೆಲ್ಟ್ ಕಟ್‌ ಮಾಡಲು ಕತ್ತರಿ, ಟಾರ್ಚ್, ಅಗ್ನಿಶಾಮಕ ಕೂಡ ಇದ್ದರೆ ಒಳ್ಳೆಯದು.

ರಸ್ತೆಯಲ್ಲಿ ನಿಂತ ನೀರು

ರಸ್ತೆಯಲ್ಲಿ ನಿಂತ ನೀರು ಎಷ್ಟು ಆಳವಾಗಿದೆ ಎಂದು ತಿಳಿಯದೆ ಅದರ ಮೇಲೆ ಚಲಾಯಿಸುವುದು ಅಪಾಯಕಾರಿ. ಇತರ ಕಾರುಗಳು ಚಲಿಸುತ್ತಿರುವುದನ್ನು ಗಮನಿಸಿದರೆ ತಿಳಿಯಬಹುದು. ಇಂಥ ಕಡೆ ಮೊದಲ ಗೇರ್‌ನಲ್ಲಿ ಚಲಾಯಿಸಿ. ಎಕ್ಸಾಸ್ಟ್‌ಗೆ ನೀರು ಪ್ರವೇಶಿಸಿ ಎಂಜಿನ್‌ ಹಾಳಾಗುವುದನ್ನು ತಡೆಯಲು ಆರ್‌ಪಿಎಮ್‌ ಏರಿಸಿ. ನೀರು ಎಕ್ಸಾಸ್ಟ್‌ಗೆ ಹೋಗಿದೆ ಅನಿಸಿದರೆ ಕಾರನ್ನು ಸ್ಟಾರ್ಟ್‌ ಮಾಡಲು ಯತ್ನಿಸಬೇಡಿ. ನೀರಿನಿಂದ ಆಚೆ ಬಂದ ಬಳಿಕ ಬ್ರೇಕ್‌ಗಳನ್ನು ಮೆತ್ತಗೆ ತುಳಿದು ಡ್ರೈ ಮಾಡಿಕೊಳ್ಳಿ.

ಎಮರ್ಜೆನ್ಸಿ ಕಿಟ್ ಒಯ್ಯಿರಿ

ಮಾನ್ಸೂನ್ ಪ್ರಯಾಣದ ವೇಳೆ ಎಮರ್ಜೆನ್ಸಿ ಕಿಟ್‌ ನಿಮ್ಮ ಬಳಿ ಇರಲಿ. ನಿಮ್ಮ ದೇಹಾರೋಗ್ಯದ ಹಾಗೇ ವಾಹನದ ಆರೋಗ್ಯದ ಕಿಟ್‌ ಕೂಡ ಬಳಿಯಿರಲಿ. ಸ್ಪೇರ್‌ ಟೈರ್‌, ಜ್ಯಾಕ್‌ ಮುಂತಾದ ಟೈರ್‌ ಬದಲಿಸುವ ಸಲಕರಣೆಗಳು ಅಗತ್ಯವಾಗಿ ಇರಲಿ. ವಿಮೆ ಮುಂತಾದ ಅಗತ್ಯ ವಾಹನ ದಾಖಲಾತಿಗಳು ಜತೆಗಿರಲಿ.

ಇದನ್ನೂ ಓದಿ: Monsoon Season : ಏನು ನಿನ್ನ ಹನಿಗಳ ಲೀಲೆ… ಭಾರತದಲ್ಲಿ ಮುಂಗಾರು ಸೃಷ್ಟಿ ಹೇಗೆ? ಮಳೆ ವ್ಯಾಪಿಸುವುದು ಯಾವ ರೀತಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಮಹಿಳಾ ಮೀಸಲಾತಿಗೆ ಬೆಂಬಲ; ಡಿಲಿಮಿಟೇಷನ್‌ ಗೆ ವಿರೋಧ:ಸಿಎಂ ಸಿದ್ದರಾಮಯ್ಯ ಸಷ್ಟನೆ

VISTARANEWS.COM


on

ಚಾಮರಾಜನಗರ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ಚಾಮರಾಜನಗರದ ಜೆಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇಂದು ಗುಂಡ್ಲುಪೇಟೆಯಲ್ಲಿ 475 ಕೋಟಿ ರೂ.ಗಳ ವೆಚ್ಚದಲ್ಲಿ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯೂ ಸೇರಿದಂತೆ ಒಟ್ಟು 523 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಂಜುಂಡಪ್ಪ ವರದಿಯ ಪ್ರಕಾರ ಗುಂಡ್ಲುಪೇಟೆಯನ್ನು ಅತಿ ಹಿಂದುಳಿದ ತಾಲ್ಲೂಕುಂದು ಗುರುತಿಸಲಾಗಿದ್ದು, ಈ ತಾಲ್ಲೂಕಿಗೆ ವಿಶೇಷ ಆದ್ಯತೆಯನ್ನು ನೀಡಲಾಗಿದೆ. ಈ ಕಾರ್ಯಗಳಿಗೆ ಸ್ಥಳೀಯ ಶಾಸಕರಾದ ಶ್ರೀ ಗಣೇಶ್ ಪ್ರಸಾದ್ ಅವರ ಒತ್ತಾಸೆಯಿಂದ ಇದು ಸಾಧ್ಯವಾಗಿದೆ.


ವಿರೋಧಪಕ್ಷಗಳ ಅಪಪ್ರಚಾರ:
ನಮ್ಮ ಸರ್ಕಾರದ ಮೂರು ವರ್ಷಗಳ ಅಧಿಕಾರದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ. ಆದಾಗ್ಯೂ ವಿರೋಧಪಕ್ಷಗಳು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದೆ. ಆದರೆ ಜನರು ಇದರ ಸತ್ಯಾಸತ್ಯತೆಯನ್ನು ಅರಿಯಬೇಕು ಎಂದರು.


ಮಹಿಳಾ ಮೀಸಲಾತಿ ಅತ್ಯಗತ್ಯ:
ಪ್ರಸ್ತುತ, ಮಹಿಳಾ ಮೀಸಲಾತಿ ಬಿಲ್ ಅನ್ನು ಕಾಂಗ್ರೆಸ್ ವಿರೋಧಿಸಿತು ಎಂದು ಬಿಜೆಪಿ ಸುಳ್ಳುಪ್ರಚಾರ ಮಾಡುತ್ತಿದೆ. ಆದರೆ ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಹಿಂದೆ ಸಂವಿಧಾನದ ಕಲಂ 73,74 ತಿದ್ದುಪಡಿಯನ್ನು ಬಿಜೆಪಿಯವರು ವಿರೋಧಿಸಿದ್ದರು. ಪ್ರಧಾನಿ ಮೋದಿಯವರು ಮಹಿಳಾ ಮೀಸಲಾತಿಯನ್ನು ವಿರೋಧಿಸಿದವರನ್ನು ಮಹಿಳೆಯರು ಕ್ಷಮಿಸುವುದಿಲ್ಲ ಎಂದಿದ್ದಾರೆ. ಆದರೆ 2023 ರಲ್ಲಿಯೇ ಮಹಿಳಾ ಮೀಸಲಾತಿ ಕಾಯ್ದೆ ತರಲಾಗಿದ್ದು, ಈ ಕಾಯ್ದೆಗೆ ಕಾಂಗ್ರೆಸ್ ವಿರೋಧಿಸದೇ ಸ್ವಾಗತಿಸಿದ್ದೆವು. ಆದರೆ ಸಹಮತಿ ಸೂಚಿಸಲಾಗಿದ್ದ ಮಹಿಳಾ ಮೀಸಲಾತಿಯನ್ನು 2028ರವರೆಗೆ ಜಾರಿಗೆ ತರಲು ಸಾಧ್ಯವಿಲ್ಲವೆಂದು ಬಿಜೆಪಿಯವರೇ ಹೇಳಿದರು. ಕಾಂಗ್ರೆಸ್ ಪಕ್ಷ ಎಂದಿಗೂ ಮಹಿಳಾ ಮೀಸಲಾತಿಯನ್ನು ಬೆಂಬಲಿಸುತ್ತದೆ. ಜನಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರಿದ್ದು, ಅವರಿಗೆ ನ್ಯಾಯಯುತವಾದ ಮೀಸಲಾತಿ ದೊರೆಯಬೇಕಿರುವುದು ಅತ್ಯಗತ್ಯ ಎಂದರು.


ಡಿಲಿಮಿಟೇಷನ್ ಕಾಯ್ದೆಗೆ ಕಾಂಗ್ರೆಸ್ ವಿರೋಧ:
ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯತಿಗಳು, ನಗರಸಭೆ , ನಗರಪಾಲಿಕೆಗಳಲ್ಲಿ ಶೇ.50 ರಷ್ಟು ಮಹಿಳೆಯರಿದ್ದು, ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ. ಪ್ರಸ್ತುತ, ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಕಾಯ್ದೆಯ ಜೊತೆಗೆ ಡೀಲಿಮಿಟೇಷನ್ ಕಾಯ್ದೆ ತರಲು ಪ್ರಯತ್ನಿಸಿದ್ದರಿಂದ ವಿರೋಧವನ್ನು ವ್ಯಕ್ತಪಡಿಸಲಾಗಿದೆ. ಕಾಂಗ್ರೆಸ್ ಡಿಲಿಮಿಟೇಷನ್ ಕಾಯ್ದೆ ಯನ್ನು ವಿರೋಧಿಸಿದೆಯೇ ಹೊರತು ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಸಾಗುತ್ತಿದೆ:


ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ವಿರೋಧಿಸಿದರು. ಆದರೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಹಲವು ರಾಜ್ಯಗಳಲ್ಲಿ ಅನುಸರಿಸುತ್ತಿದ್ದಾರೆ. ಗ್ಯಾರಂಟಿಗಳನ್ನು ಜಾರಿಗೊಳಿಸಿದರೆ, ಕರ್ನಾಟಕ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿಯವರು ಟೀಕಿಸಿದ್ದರು. ಆದರೂ, ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಯನ್ನು ಸಾಧಿಸುತ್ತಿರುವುದಕ್ಕೆ , ಇಂದು ಗುಂಡ್ಲುಪೇಟೆಯಲ್ಲಿ ನಡೆದಿರುವ ಈ ಕಾರ್ಯಕ್ರಮವೇ ಸಾಕ್ಷಿ. ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುತ್ತದೆ ಎಂದರು.
ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಒಟ್ಟು 1 ಲಕ್ಷ 60 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಎಸ್.ಸಿ.ಎಸ್. ಪಿ / ಟಿ ಎಸ್ ಪಿ ಯೋಜನೆಯಡಿ 1 ಲಕ್ಷ 10 ಸಾವಿರ ಕೋಟಿ ಮಾತ್ರ ವೆಚ್ಚ ಮಾಡಿದೆ ಎಂದರು.


ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯಲ್ಲಿ ನಂಬಿಕೆ:
ಸಮಾಜದಲ್ಲಿ ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು, ಹಿಂದುಳಿದವರು ಹಾಗೂ ಎಲ್ಲಾ ಧರ್ಮ , ಜಾತಿಗಳ ಬಡವರ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಎಂದಿಗೂ ಬಡವರ, ಅಲ್ಪಸಂಖ್ಯಾತರ, ದಲಿತರ ಪಕ್ಷ. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ ಎಂದರು.
ಬಿಜೆಪಿ ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಅವರು ಎಂದಿಗೂ ಬಡವರ ಪರವಾಗಿಲ್ಲ ಹಾಗೂ ಸಂವಿಧಾನ ವಿರೋಧಿಗಳು ಎಂದರು.


ಶಾಸಕ ಗಣೇಶ್ ಪ್ರಸಾದ್ ಅವರಿಗೆ ಕೆಲಸ ಮಾಡುವ ಉತ್ಸಾಹವಿದ್ದು, ಅದಕ್ಕೆ ಸರ್ಕಾರ ಸಹಕಾರ ನೀಡಲಿದೆ ಎಂದರು. ಗುಂಡ್ಲುಪೇಟೆಯಲ್ಲಿ ಸಂಚಾರ ಪೊಲೀಸ್ ಠಾಣೆಯನ್ನು ಸ್ಥಾಪಿಸಲು ಈ ಬಾರಿ ಆಯವ್ಯಯದಲ್ಲಿ ಘೋಷಣೆ ಮಾಡಲಾಗಿದೆ. ಕನಕ ಭವನಕ್ಕೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

Continue Reading

Latest

ಕುಮಾರಸ್ವಾಮಿಗೆ ಬೆಂಗಳೂರಿನ ಬಗ್ಗೆ ಅರಿವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

VISTARANEWS.COM


on

ಬೆಂಗಳೂರು: ಜೆಡಿಎಸ್‌ ಧುರೀಣ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೆಂಗಳೂರಿನ ಬಗ್ಗೆ ಅರಿವು ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಬೆಂಗಳೂರಿನ ಬಗ್ಗೆ ಜಿಬಿಎ ಬಗ್ಗೆ ಮಾಹಿತಿ ಇಲ್ಲ ಎಂದಾದರೆ, ಸಮಿತಿಯಲ್ಲಿದ್ದ ಅವರ ಪಕ್ಷದ ಶಾಸಕರಿಂದ ಕೇಳಿ ತಿಳಿದುಕೊಳ್ಳಲಿ ಎಂದರು. ಬಿಜೆಪಿ, ಜೆಡಿಎಸ್‌‍ ಸೇರಿದಂತೆ ಎಲ್ಲಾ ಪಕ್ಷಗಳ ಶಾಸಕರು ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು. ಎಲ್ಲರ ಅಭಿಪ್ರಾಯ ಪಡೆದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ವಿರೋಧ ಪಕ್ಷಗಳ ಅಭಿಪ್ರಾಯಗಳು ಏನೇ ಇರಬಹುದು. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕರನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕೆಂಬ ಸಣ್ಣ ಅನುಭವ ತಮಗಿದೆ. ಸಭೆಯಲ್ಲಿ ಎಷ್ಟು ಗಂಟೆ ಯಾವ ರೀತಿ ಚರ್ಚೆ ನಡೆಸಲಾಗಿದೆ ಎಂದು ಶಾಸಕರನ್ನು ಕೇಳಿ ಕುಮಾರಸ್ವಾಮಿ ತಿಳಿದುಕೊಳ್ಳಲಿ ಎಂದರು. ಜಿಬಿಎಗೆ ಚುನಾವಣೆ ನಡೆಸಲು ಈಗಾಗಲೇ ನಾವು ಸಿದ್ಧರಿದ್ದೇವೆ. ನ್ಯಾಯಾಲಯ ಸೂಕ್ತ ನಿರ್ದೇಶನ ನೀಡಬೇಕು. ಸರ್ಕಾರ ಅದರಂತೆ ತೀರ್ಮಾನ ತೆಗೆದುಕೊಳ್ಳಬೇಕು. ಜಿಬಿಎ ವತಿಯಿಂದ ಎಲ್ಲಾ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಕೇಂದ್ರದಿಂದ ಅನುದಾನ ಬರುತ್ತಿಲ್ಲ ಎಂದು ಜಿಬಿಎ ಮುಖ್ಯ ಆಯುಕ್ತರು ಪತ್ರ ಬರೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಆ ರೀತಿ ಪತ್ರ ಬರೆದಿದ್ದರೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು. ಯಾವುದೇ ಹಗೆ ಇಲ್ಲ: ಅಲ್ಪಸಂಖ್ಯಾತರ ವಿಚಾರವಾಗಿ ಕಾಂಗ್ರೆಸ್‌‍ನಲ್ಲಿ ಯಾರೂ ಹಗೆ ಸಾಧಿಸುತ್ತಿಲ್ಲ. ಪಕ್ಷದ ಶಿಸ್ತಿನಲ್ಲಿ ನೀಡುವ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು. ಹೈಕಮಾಂಡ್‌ ನಿರ್ದೇಶನ ಪ್ರಕಾರ ಕೆಪಿಸಿಸಿ ಕ್ರಮ ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು. ಕುಡಿಯುವ ನೀರಿನ ಸಮಸ್ಯೆಗೆ ಮುಂಜಾಗ್ರತೆ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಇರುವ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

Continue Reading

Latest

ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ

VISTARANEWS.COM


on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅರನ್ನು ‘ಭಯೋತ್ಪಾದಕ’ ಎಂದು ಟೀಕಿಸಿರುವ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹಿರಿಯ ಬಿಜೆಪಿ ಮಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಎಕ್ಸ್‌ ನಲ್ಲಿ ಅವರು ವಿವರವಾದ ಹೇಳಿಕೆ ನೀಡಿದ್ದು, ಇಂತಹ ಹೇಳಿಕೆ ನಿಮ್ಮ ಅಹಂಕಾರವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ ಹೇಳಿಕೆಗೆ ಕೂಡಲೇ ಕ್ಷಮೆಯಾಚಿಸಬೇಕು ಎಂದೂ ಆಗ್ರಹಪಡಿಸಿದ್ದಾರೆ.


ತೀರಾಕೀಳು ಮಟ್ಟದಲ್ಲಿ ನೀವು ನೀಡಿರುವ ಹೇಳಿಕೆ ನಿಮ್ಮ ದುರಹಂಕಾರದ ಪರಮಾವಧಿ ಮಾತ್ರವಲ್ಲ, ಅದು ನಿಮ್ಮ ಕೊಳಕು, ವಿಷಕಾರಿ ಮನಸ್ಥಿತಿಯನ್ನು ಅನಾವರಣಗೊಳಿಸಿದೆ. ಖರ್ಗೆಯವರೇ, ಪ್ರಧಾನಿ ಮೋದಿ ರವರ ನಾಯಕತ್ವದ ಮೇಲೆ ಅಚಲ ವಿಶ್ವಾಸವಿಟ್ಟು ಭಾರತದ ಜನತೆ ಸತತ ಮೂರನೇ ಬಾರಿಗೆ ಅವರನ್ನು ಪ್ರಧಾನಿ ಪೀಠದಲ್ಲಿ ಕೂರಿಸಿದ್ದಾರೆ. ಅವರನ್ನು ಟೀಕಿಸುವ ಭರದಲ್ಲಿ ಹೀಗೆ ಅವಮಾನಿಸುವುದು ಎಂದರೆ ಮೋದಿ ರವರನ್ನು ಬೆಂಬಲಿಸಿದ ಕೋಟ್ಯಂತರ ಭಾರತೀಯರನ್ನು ಅಪಮಾನಿಸಿದಂತೆ! ಕಾಂಗ್ರೆಸ್ ನಾಯಕರಿಗೆ ಇಂತಹ ದುರ್ವರ್ತನೆ ಅಭ್ಯಾಸವಾಗಿಬಿಟ್ಟಿದೆ. ಚುನಾವಣೆ ಬಂದಾಗಲೆಲ್ಲ ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದು, ಜನರು ನಿಮಗೆ ಪಾಠ ಕಳಿಸುತ್ತಲೇ ಬಂದಿದ್ದಾರೆ. ಆದರೂ ತಿದ್ದಿಕೊಳ್ಳದ ನಿಮ್ಮ ವರ್ತನೆ ನಿಮ್ಮ ಅಹಂಕಾರಕ್ಕೆ ಕನ್ನಡಿ ಹಿಡಿದಿದೆ.


ಖರ್ಗೆಯವರೇ, ಭಾರತದ ಪ್ರಧಾನಿ @narendramodi ರವರು ಅಪ್ರತಿಮ ಜಾಗತಿಕ ನಾಯಕ ಎಂದು ವಿಶ್ವದ ಹಲವಾರು ದೇಶಗಳ ನೇತಾರರು ಕೊಂಡಾಡುತ್ತಿದ್ದಾರೆ. ವಿಶ್ವದ 26ಕ್ಕೂ ಅಧಿಕ ರಾಷ್ಟ್ರಗಳು ತಮ್ಮ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಮೋದಿ ಅವರನಾಯಕತ್ವವನ್ನು ಗೌರವಿಸಿವೆ. ಇಡೀ ಜಗತ್ತೇ ಭಾರತದತ್ತ ಹೆಮ್ಮೆಯಿಂದ ನೋಡುತ್ತಿರುವಾಗ, ಕೇವಲ ನಿಮ್ಮ ರಾಜಕೀಯ ವೈಷಮ್ಯಕ್ಕಾಗಿ ದೇಶದ ಪ್ರಧಾನಮಂತ್ರಿಗಳ ಬಗ್ಗೆ ಇಷ್ಟು ಕೀಳುಮಟ್ಟದ ಶಬ್ದಗಳನ್ನು ಬಳಸುವುದು, ನಿಮ್ಮ ಕೀಳು ಮನಸ್ಥಿತಿಯನ್ನು ಮತ್ತು ನಿಮ್ಮ ರಾಜಕೀಯ ಹತಾಶೆಯನ್ನು ಸಾಬೀತುಪಡಿಸಿದೆ. ಅಧಿಕಾರದ ಹಪಾಹಪಿಯಲ್ಲಿ, ಒಂದು ಮನೆತನವನ್ನು ಸಂತೋಷಪಡಿಸುವ ಭರದಲ್ಲಿ ನಿಮ್ಮ ಘನತೆಯನ್ನು ಕಳೆದುಕೊಂಡಿದ್ದೀರಿ. ಹಿರಿಯರಾದ ನಿಮ್ಮಿಂದ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನಾಡಿನ ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಇಂತಹ ಕೀಳು ಮಟ್ಟದ ಅಸಂಬದ್ಧ ಹೇಳಿಕೆಗೆ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

Continue Reading

Latest

ಇಡಿ ದಾಳಿ: ನಳಪಾಡ್‌ ಫಸ್ಟ್‌ ರಿಯಾಕ್ಷನ್‌ ಏನಿತ್ತು? ಅವರು ಕೊಟ್ಟ ಸ್ಪಷ್ಟನೆ ಏನು?

VISTARANEWS.COM


on

ಬೆಂಗಳೂರು: ನನ್ನ ಮೇಲೆ ನಡೆದ ಇಡಿ ದಾಳಿಗೂ ನನ್ನ ತಂದೆ, ಶಾಸಕ ಬಿಡಿಎ ಅಧ್ಯಕ್ಷರೂ ಆದ ಎನ್.ಎ. ಹ್ಯಾರಿಸ್‌ ಅವರಿಗೂ ಯಾವುದೇ ಸಂಬಂಧವಿಲ್ಲ. ನನ್ನ ಹಾಗೂ ನನ್ನ ತಮ್ಮನ ಮನೆಗಳ ಮೇಲೆ ದಾಳಿ ನಡೆದಿದೆ ಎಂದು ಯುವ ಕಾಂಗ್ರೆಸ್‌ ಮುಖಂಡ ನಳಪಾಡ್‌ ಸ್ಪಷ್ಟಪಡಿಸಿದ್ದಾರೆ. ಶ್ರೀಕಿ ಜತೆ ಬಿಟ್‌ ಕಾಯಿನ್‌ ಅವ್ಯವಹಾರ ನಡೆಸಿರುವುದಕ್ಕೆ ಸಂಬಂಧಪಟ್ಟಂತೆ ನಿನ್ನೆ ನಳಪಾಡ್‌ ಅವರ ಮೇಲೆ ಜಾರಿ ನಿರ್ಧೇಶನಾಲಯ ದಾಳಿ ನಡೆಸಿತ್ತು. ಇಂದು ಪ್ರತಿಕ್ರಿಯೆ ನೀಡಿದ ಅವರು, ಶ್ರೀಕಿ ನನಗೆ ಪರಿಚಯ ಇಲ್ಲ ಎಂದು ಹೇಳುವುದಿಲ್ಲ. ಶ್ರೀಕಿ ಜತೆಯಲ್ಲಿ ಕುಳಿತು ಊಟ ಮಾಡಿರಬಹುದು ಅಷ್ಟೇ. ನನ್ನ ತಂದೆ ಹ್ಯಾರಿಸ್‌ ಅವರಿಗೆ ಸಚಿವ ಹುದ್ದೆ ತಪ್ಪಿಸಲು ವಿಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ ಎಂದು ಹೇಳಿದ್ದಾರೆ.

Continue Reading
Advertisement
Latest11 hours ago

ಮಹಿಳಾ ಮೀಸಲಾತಿಗೆ ಬೆಂಬಲ; ಡಿಲಿಮಿಟೇಷನ್‌ ಗೆ ವಿರೋಧ:ಸಿಎಂ ಸಿದ್ದರಾಮಯ್ಯ ಸಷ್ಟನೆ

Latest11 hours ago

ಕುಮಾರಸ್ವಾಮಿಗೆ ಬೆಂಗಳೂರಿನ ಬಗ್ಗೆ ಅರಿವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

Latest11 hours ago

ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ

Latest11 hours ago

ಇಡಿ ದಾಳಿ: ನಳಪಾಡ್‌ ಫಸ್ಟ್‌ ರಿಯಾಕ್ಷನ್‌ ಏನಿತ್ತು? ಅವರು ಕೊಟ್ಟ ಸ್ಪಷ್ಟನೆ ಏನು?

Latest11 hours ago

ದಲಿತರಿಗೆ ಒಳ ಮೀಸಲಾತಿ: ಏ.24ರಂದು ವಿಶೇಷ ಸಂಪುಟ ಸಭೆ

Latest11 hours ago

“ಗ್ರೇಟರ್ ಇಸ್ರೇಲ್” ಸಾಕಾರಕ್ಕೆ ನೆತನ್ಯಾಹು ಬಿಗ್‌ ಪ್ಲಾನ್:‌ ಮಧ್ಯ ಪ್ರಾಚ್ಯದಲ್ಲಿ ಶಾಂತಿಗಿಲ್ಲ ನೆಲೆ

Latest12 hours ago

ಜೆಡಿಎಸ್‌ ಗೆ ಮರಳುತ್ತೀರಾ?; ಸಚಿವ ಜಮೀರ್‌ ಅಹಮದ್‌ ಕೊಟ್ಟ ಉತ್ತರ ಏನು?

Latest12 hours ago

ಬೇಸಿಗೆಯಲ್ಲೂ ಸಣ್ಣ ನೀರಾವರಿ ಕೆರೆಗಳಲ್ಲಿ ಸಮೃದ್ದ ನೀರು ಸಂಗ್ರಹ: ಸಚಿವ ಎನ್‌ ಎಸ್‌ ಭೋಸರಾಜು

Latest12 hours ago

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

Latest13 hours ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ ಆಕ್ರೋಶ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌