Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು! - Vistara News

ಪ್ರವಾಸ

Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು!

Summer Tour: ಬೇಸಿಗೆ ರಜೆಯನ್ನು ಬೆಟ್ಟಗುಡ್ಡಗಳ ನಡುವೆ ಪ್ರಶಾಂತವಾದ ಸ್ಥಳದಲ್ಲಿ ಕಳೆಯುವ ಆಸೆ ಇದೆಯೇ ಹಾಗಿದ್ದರೆ ಇಲ್ಲಿ ಹೇಳಿರುವ ಐದು ಪ್ರದೇಶಗಳಿಗೆ ಪ್ರವಾಸ ಹೊರಡುವ ಪ್ಲಾನ್ ಈಗಲೇ ಮಾಡಿಕೊಳ್ಳಿ.

VISTARANEWS.COM


on

Summer Tour
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದಲ್ಲಿ (india) ಹಲವಾರು ಸುಂದರ, ಮನೋಹರ ತಾಣಗಳಿರುವಂತೆ ರುದ್ರರಮಣೀಯ ಸ್ಥಳಗಳೂ ಇವೆ. ಬೇಸಿಗೆಯ ರಜೆಯನ್ನು (Summer Tour) ಬೆಟ್ಟ ಗುಡ್ಡಗಳ ನಡುವೆ ಕಳೆಯಬೇಕು, ನಗರದ ಜಂಜಾಟದಿಂದ ದೂರವಾಗಿ ಮನಸ್ಸಿಗೆ ಶಾಂತಿ ಸೀಗುವ ಸ್ಥಳದಲ್ಲಿ ಕೆಲಕಾಲ ಇದ್ದು ಬರಬೇಕು ಎನ್ನುವ ಯೋಚನೆ ಇದ್ದರೆ ಭಾರತದ ಈ ಐದು ಗಿರಿಧಾಮಗಳಿಗೊಮ್ಮೆಯಾದರೂ (Hill Stations) ಭೇಟಿ ನೀಡಬಹುದು.

ಭಾರತದಲ್ಲಿ ಅನೇಕ ಪ್ರವಾಸಿ ತಾಣಗಳಿವೆ. ಅದರಲ್ಲಿ ಕೆಲವು ಜೀವನದಲ್ಲಿ ರೋಮಾಂಚಕಾರಿ ಅನುಭವವನ್ನು ನೀಡುತ್ತದೆ. ನಾವು ರಜೆಯ ಬಗ್ಗೆ ಯೋಚಿಸಿದಾಗ ನಮಗೆ ಬೇಕಾಗಿರುವುದು ಜನಸಂದಣಿಯಿಲ್ಲದ ಸ್ಥಳ, ರುಚಿಕರವಾದ ಆಹಾರ, ಸಮ್ಮೋಹನಗೊಳಿಸುವ ನೋಟಗಳು ಮತ್ತು ಶಾಂತ ವಾತಾವರಣ.

29 ರಾಜ್ಯಗಳು ಮತ್ತು 7 ಕೇಂದ್ರಾಡಳಿತ ಪ್ರದೇಶಗಳಿರುವ ಭಾರತದಲ್ಲಿ ಸುಂದರವಾದ ವಿಹಾರ ತಾಣಗಳು ಹಲವಾರು ಇವೆ. ಅವುಗಳಲ್ಲಿ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಭೇಟಿ ನೀಡಲೇಬೇಕಾದ ಐದು ಗಿರಿಧಾಮಗಳು ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Haridwara Travel: ಹರಿದ್ವಾರಕ್ಕೆ ಭೇಟಿ ನೀಡಿದಾಗ ಈ ಸ‍್ಥಳಗಳನ್ನು ಮಿಸ್ ಮಾಡದೇ ನೋಡಿ!


ಮಾವ್ಲಿನ್ನಾಂಗ್ (Mawlynnong)

‘ಏಷ್ಯಾದ ಸ್ವಚ್ಛ ಗ್ರಾಮ’ ಎಂದು ಕರೆಯಲ್ಪಡುವ ಮೇಘಾಲಯದ ಮಾವ್ಲಿನ್ನಾಂಗ್ ಪರಿಸರ ಸ್ನೇಹಿ ಜೀವನ ಹೊಂದಿದೆ. ನಿತ್ಯಹರಿದ್ವರ್ಣ ಪರಿಸರ, ಧುಮ್ಮಿಕ್ಕುವ ತೊರೆಗಳು, ಹಣ್ಣಿನ ತೋಟಗಳು ಮತ್ತು ತೂಗಾಡುವ ತಾಳೆ ಮರಗಳು ಮೇಘಾಲಯದ ಹೃದಯಭಾಗದಲ್ಲಿ ರಜೆಯ ಸುಂದರ ಅನುಭವವನ್ನು ನೀಡುತ್ತವೆ. ನೋಹ್ವೆಟ್ ಲಿವಿಂಗ್ ರೂಟ್ ಬ್ರಿಡ್ಜ್ ಕೂಡ ಈ ಸ್ಥಳದಲ್ಲಿದೆ. ಇಲ್ಲಿನ ತ್ಯಾಜ್ಯವನ್ನು ಬಿದಿರಿನ ಡಸ್ಟ್‌ಬಿನ್‌ಗಳಲ್ಲಿ ಸಂಗ್ರಹಿಸಿ ಅನಂತರ ಗೊಬ್ಬರವಾಗಿ ಬಳಸುವುದರಿಂದ ಮಾವ್ಲಿನ್ನಾಂಗ್ ಸ್ವಚ್ಛತೆಗೆ ಹೆಸರುವಾಸಿಯಾಗಿದೆ.

ನೊಹ್ವೆಟ್‌ನ ಲಿವಿಂಗ್ ರೂಟ್ ಬ್ರಿಡ್ಜ್ ಇಲ್ಲಿಯ ಪ್ರಮುಖ ಆಕರ್ಷಣೆ ಮಾತ್ರವಲ್ಲ ಮಾವ್ಲಿನ್ನಾಂಗ್‌ನಲ್ಲಿರುವ ಎಪಿಫ್ಯಾನಿ ಚರ್ಚ್ ಒಂದು ಶತಮಾನಕ್ಕೂ ಹೆಚ್ಚು ಹಳೆಯದಾಗಿದೆ. ಈ ಸೊಂಪಾದ ಮತ್ತು ಹಸಿರು ಉಷ್ಣವಲಯದ ಸ್ವರ್ಗದ ಮಧ್ಯದಲ್ಲಿ ಐರೋಪ್ಯ ವಾಸ್ತುಶಿಲ್ಪದ ಒಂದು ಸುಂದರ ಭಾಗವಾಗಿದೆ. ಚರ್ಚ್‌ಗೆ ಹತ್ತಿರವಿರುವ ಮರದ ಮನೆಗಳನ್ನು ಏರಿ ದೂರದವರೆಗೂ ಬಯಲು ಪ್ರದೇಶಗಳನ್ನು ಕಾಣಬಹುದು.


ಹಳೇಬೀಡು (Halebidu)

ಹಳೇಬೀಡು ಕರ್ನಾಟಕದ ಹಾಸನ ಜಿಲ್ಲೆಯಲ್ಲಿದೆ. ರಮಣೀಯ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಇದು ಹಾಸನದ ಒಂದು ಸಣ್ಣ ಪಟ್ಟಣವಾಗಿದ್ದು, ಹೊಯ್ಸಳ ಸಾಮ್ರಾಜ್ಯದ ರಾಜರಾಜಧಾನಿಯಾಗಿತ್ತು. ಈ ಸ್ಥಳವು ತನ್ನ ಭವ್ಯವಾದ ದೇವಾಲಯಗಳಿಗೆ ಹೆಸರುವಾಸಿಯಾಗಿರುವುದರಿಂದ ಪ್ರತಿವರ್ಷ ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುತ್ತದೆ.

ಬೇಲೂರಿನಿಂದ ಕೇವಲ 17 ಕಿ.ಮೀ. ದೂರದಲ್ಲಿರುವ ಹೊಯ್ಸಳರ ಪ್ರಾಚೀನ ರಾಜಧಾನಿ ಹಳೇಬೀಡು. ಕ್ರಿ.ಶ 1121 ರಲ್ಲಿ ನಿರ್ಮಿಸಲಾದ ಹೊಯ್ಸಳೇಶ್ವರ ಮತ್ತು ಕೇದಾರೇಶ್ವರದ ಸುಂದರವಾದ ಹೊಯ್ಸಳ ದೇವಾಲಯಗಳಿಗೆ ಇದು ಹೆಸರುವಾಸಿಯಾಗಿದೆ. ಲೋಹದಂತಹ ಹೊಳಪು ಹೊಂದಿರುವ ಸೂಕ್ಷ್ಮ ಮತ್ತು ಸಂಕೀರ್ಣವಾದ ಕೆತ್ತನೆಗಳು ಪ್ರವಾಸಿಗರನ್ನು ಮಂತ್ರಮುಗ್ಧರಾಗುವಂತೆ ಮಾಡುತ್ತದೆ.


ಕುದುರೆಮುಖ (Kudremukh)

ಕರ್ನಾಟಕದ ಕುದುರೆಮುಖ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಒಂದು ಪರ್ವತ ಶ್ರೇಣಿ. ಇದು ಮಲಬಾರ್ ಟ್ರೋಗನ್, ಮಲಬಾರ್ ಶಿಳ್ಳೆ ಥ್ರಷ್ ಮತ್ತು ಸಾಮ್ರಾಜ್ಯಶಾಹಿ ಪಾರಿವಾಳದಂತಹ ವಿವಿಧ ಪಕ್ಷಿಗಳಿಗೆ ನೆಲೆಯಾಗಿದೆ. ಉಷ್ಣವಲಯದ ಜೈವಿಕ ಶ್ರೀಮಂತಿಕೆಯಿಂದಾಗಿ ಈ ಸ್ಥಳವನ್ನು ವಿಶ್ವದ 34 ಜೈವಿಕ ಹಾಟ್‌ಸ್ಪಾಟ್‌ಗಳಲ್ಲಿ ಒಂದೆಂದು ಘೋಷಿಸಲಾಗಿದೆ.

ಪರ್ವತದ ಬದಿಯು ಕುದುರೆಯ ಮುಖದ ಆಕಾರವನ್ನು ಹೋಲುವುದರಿಂದ ಇಲ್ಲಿಗೆ ಕುದುರೆಮುಖ ಎಂದು ಹೆಸರಾಗಿದೆ. ಈ ಶಿಖರವು ಸಂಸೆಗೆ ಹತ್ತಿರವಾಗಿರುವುದರಿಂದ ಐತಿಹಾಸಿಕ ಪುಟಗಳಲ್ಲಿ ‘ಸಂಸೆಪರ್ವತ’ ಎಂದೂ ಕರೆಯಲಾಗಿದೆ.


ಖಜ್ಜಿಯಾರ್ (Khajjiar)

ಖಜ್ಜಿಯಾರ್ ಹಿಮಾಚಲ ಪ್ರದೇಶದಲ್ಲಿ ಒಂದು ಗುಪ್ತ ರತ್ನವಾಗಿದೆ. ಇದು ಚಂಬಾ ಕಣಿವೆಯಲ್ಲಿರುವ ದೇವದಾರು-ಹೊದಿಕೆಯ ತಟ್ಟೆ-ಆಕಾರದ ಹಿಮಾಲಯನ್ ಪಟ್ಟಣವಾಗಿದೆ. ಸುಂದರ ಪರಿಸರಗಳು, ದಟ್ಟಣೆಯ ಹಸಿರು ಮತ್ತು ಸಾಹಸಗಳಿಗಾಗಿ ಜನಪ್ರಿಯ ಸ್ಥಳ ಇದಾಗಿದೆ.

ಖಜ್ಜಿಯಾರ್ ಅನ್ನು ಭಾರತದ ಮಿನಿ ಸ್ವಿಟ್ಜರ್ಲೆಂಡ್ ಎಂದು ಕರೆಯಲಾಗುತ್ತದೆ. ದಟ್ಟವಾದ ಪೈನ್ ಕಾಡುಗಳು, ಸೊಂಪಾದ ಹುಲ್ಲುಗಾವಲುಗಳು ಮತ್ತು ಹಿಮದಿಂದ ಆವೃತವಾದ ಪರ್ವತಗಳಿಂದ ಆವೃತವಾಗಿರುವ ಖಜ್ಜಿಯಾರ್ ಪ್ರತಿಯೊಬ್ಬ ಪ್ರವಾಸಿಗನು ಇಷ್ಟಪಡುವಂತಿದೆ.


ತವಾಂಗ್ (Tawang)

ತವಾಂಗ್ ಅರುಣಾಚಲ ಪ್ರದೇಶದ ಪಶ್ಚಿಮ ಭಾಗದಲ್ಲಿದ್ದು ಟಿಬೆಟ್‌ನ ಲಾಸಾದ ಹೊರಗೆ ವಿಶ್ವದ ಅತಿದೊಡ್ಡ ಬೌದ್ಧ ಮಠ ಎಂದು ಕರೆಯಲಾಗುತ್ತದೆ. 10,000 ಅಡಿ ಎತ್ತರದಲ್ಲಿರುವ ತವಾಂಗ್ 400 ವರ್ಷಗಳಷ್ಟು ಹಳೆಯದಾದ ಬೌದ್ಧ ಮಠಕ್ಕೆ ವಿಶ್ವ ಪ್ರಸಿದ್ಧವಾಗಿದೆ. ಐದನೇ ದಲೈ ಲಾಮಾ ಅವರ ಸಮಕಾಲೀನರಾದ ಸನ್ಯಾಸಿ ಮೇರಾ ಲಾಮಾ ಅವರು ಇಲ್ಲಿ ಮಠವನ್ನು ಸ್ಥಾಪಿಸಿದರು. ಆರನೇ ದಲೈ ಲಾಮಾ ಇಲ್ಲಿ ಜನಿಸಿದ್ದರು. ಪಟ್ಟಣದ ಹೃದಯಭಾಗದಿಂದ ಸುಮಾರು 2 ಕಿ.ಮೀ. ದೂರದಲ್ಲಿ ಇದು ನೆಲೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ. ಈ ಎಂಟು ಅದ್ಭುತ ಹಳ್ಳಿಗಳ ಪರಿಚಯ ಇಲ್ಲಿದೆ.

VISTARANEWS.COM


on

Summer Tour
Koo

ಪ್ರವಾಸಗಳನ್ನು ಇಷ್ಟಪಡುವ ಮಂದಿಯಲ್ಲಿ ಎರಡು ಬಗೆಯ ಮಂದಿಯಿರುತ್ತಾರೆ. ಒಂದು ಬಗೆಯವರಿಗೆ ಪ್ರವಾಸವನ್ನು ಎಂಜಾಯ್‌ ಮಾಡಿ, ತಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷವಾಗಿ ಕಾಲ ಕಳೆದು, ಐಷಾರಾಮಿ ಹೊಟೇಲುಗಳಲ್ಲಿ ಇದ್ದು, ರಿಲ್ಯಾಕ್ಸ್‌ ಆಗಿ ಸಮಯ ಕಳೆದುಕೊಂಡು ಮಜಾ ಮಾಡಿಕೊಂಡು ಬರುವವರಾದರೆ, ಇನ್ನೊಂದು ವರ್ಗ, ಜನಜಂಗುಳಿಯಿಂದ ದೂರವಿದ್ದು, ಶಾಂತವಾದ ನದೀತೀರದಲ್ಲೋ, ಬೆಟ್ಟದ ತಪ್ಪಲಲ್ಲೋ, ಪರ್ವತದ ಮೇಲಿನ ಒಂದು ಹಳ್ಳಿಯಲ್ಲೋ, ಒಂದಿಷ್ಟು ಸಮಾನ ಮನಸ್ಕರೊಂದಿಗೆ ಚಾರಣ ಮಾಡಿಯೋ ಸಮಯ ಕಳೆಯಲು ಇಷ್ಟ ಪಡುವ ಮಂದಿ. ಈ ಎರಡನೇ ವರ್ಗದ ಪ್ರವಾಸ ಪ್ರಿಯರಿಗೆ ಶಾಂತವಾಗಿ ಸಮಯ ಕಳೆಯಲು ಭಾರತದಲ್ಲಿ ಬೇಕಾದಷ್ಟು ಸ್ಥಳಗಳಿವೆ. ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ.

Sikkim

ಝುಲುಕ್, ಸಿಕ್ಕಿಂ

ಪೂರ್ವ ಸಿಕ್ಕಿಂನ ಝುಲುಕ್‌ ಎಂಬ ಹಳ್ಳಿ ಭಾರತದ ಅತ್ಯಂತ ಪುರಾತನವಾದ ಸಿಲ್ಕ್‌ ರೂಟ್‌ ಹಾದಿಯಲ್ಲಿ ಸಿಗುವ ಹಳ್ಳಿಗಳಲ್ಲಿ ಒಂದು. ಮೇ ತಿಂಗಳಲ್ಲಿ ಆಗಸವೂ ತಿಳಿಯಾಗಿದ್ದು, ಹಿತವಾದ ಚಳಿಯೂ ಆವರಿಸಿರುವ, ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸಮಯ. ಸಾಲು ಸಾಲು ಹಿಮಬೆಟ್ಟಗಳಿಂದ ಆವೃತವಾದ ಹಿಮಾಲಯದ ಮನಮೋಹಕ ದೃಶ್ಯಗಳನ್ನು ಈ ಹಳ್ಳಿಯಲ್ಲಿದ್ದುಕೊಂಡು ಆಸ್ವಾದಿಸುತ್ತಾ ಸಮಯ ಕಳೆಯಬಹುದು.

Chitkool, Himachal Pradesh

ಚಿತ್ಕೂಲ್‌, ಹಿಮಾಚಲ ಪ್ರದೇಶ

ಭಾರತ ಚೀನಾ ಗಡಿಯಲ್ಲಿರುವ ಜನರ ವಸತಿಯಿರುವ ಕೊನೆಯ ಹಳ್ಳಿ ಚಿತ್ಕೂಲ್‌. ಕಿನೌರ್‌ ಜಿಲ್ಲೆಯ ಅತ್ಯಂತ ಸುಂದರವಾದ ಹಿಮಾಲಯದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾದ ಜಾಗವಿದು. ಹಿಮಾಚಲ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು, ಅಲ್ಲಿನ ಜನಜೀವನ, ಆಹಾರ ಇತ್ಯಾದಿಗಳೆಲ್ಲವುಗಳ ಪರಿಚಯ ಮಾಡಿಕೊಂಡು, ಅದ್ಭುತ ದೃಶ್ಯಗಳನ್ನೂ ಕಂಡು ಆನಂದಿಸಬಹುದು.

Naggar, Himachal Pradesh

ನಗ್ಗರ್‌, ಹಿಮಾಚಲ ಪ್ರದೇಶ

ಹಳೆಯ ದೇವಸ್ಥಾನಗಳು, ಅರಮನೆಗಳು, ಕಟ್ಟಡಗಳು ಇತ್ಯಾದಿಗಳಿರುವ ನಗ್ಗರ್‌ ಎಂಬ ಹಳ್ಳಿ ಮನಾಲಿಯಂತಹ ಕಿಕ್ಕಿರಿದು ತುಂಬಿರುವ ಪ್ರವಾಸಿಗಳಿಂದ ಮುಕ್ತವಾಗಿದೆ. ಜೊತೆಗೆ ಇಲ್ಲಿಂದ ಕಾಣುವ ಹಿಮಾಲಯದ ಪರ್ವತಶ್ರೇಣಿಗಳ ಸುಂದರ ದೃಶ್ಯ ನೆಮ್ಮದಿಯನ್ನು ಅರಸಿ ಬರುವ ಮಂದಿಗೆ ಹೇಳಿ ಮಾಡಿಸಿದ್ದು.

Pelling, Sikkim

ಪೆಲ್ಲಿಂಗ್‌, ಸಿಕ್ಕಿಂ

ಕಾಂಚನಜುಂಗಾದ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪೆಲ್ಲಿಂಗ್‌ ಎಂಬ ಸಿಕ್ಕಿಂನ ಪುಟ್ಟ ಊರು ಒಳ್ಳೆಯ ತಾಣ. ಶಾಂತಿಯುತವಾದ ಜಾಗವನ್ನರಸಿ ಬರುವ ಮಂದಿಗೆ ಪೆಲ್ಲಿಂಗ್‌ ಬಹಳ ಇಷ್ಟವಾಗಬಹುದು.

Malana, Himachal Pradesh

ಮಲಾನಾ, ಹಿಮಾಚಲ ಪ್ರದೇಶ

ಮಲಾನಾ ಎಂಬ ಪುಟ್ಟ ಹಳ್ಳಿ ಹಿಮಾಚಲ ಪ್ರದೇಶದ ಕಸೋಲ್‌ ಸಮೀಪದಲ್ಲಿರುವ ಹಳ್ಳಿ. ಇದು ತನ್ನ ವಿಶಿಷ್ಟ ಸಂಸೃತಿ ಹಾಗೂ ಆಚರಣೆಯ ವಿಶೇಷತೆಗಳನ್ನು ಹೊಂದಿರುವ ಸುಂದರ ತಾಣ. ಪಾರ್ವತಿ ಕಣಿವೆಯ ಮನಮೋಹಕ ಹಿಮಾಲಯದ ಸೌಂದರ್ಯವನ್ನು ಇದು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

Zero, Arunachal Pradesh

ಝೀರೋ, ಅರುಣಾಚಲ ಪ್ರದೇಶ

ಅತ್ಯದ್ಭುತ ಪ್ರಕೃತಿ ಸೌಂದರ್ಯ, ಭತ್ತದ ಗದ್ದೆಗಳು, ಹಳೆಯ ಮರದ ಮನೆಗಳು ಇತ್ಯಾದಿಗಳಿಂದ ಮನಮೋಹಕವಾಗಿ ಕಾಣುವ ಝೀರೋ ಎಂಬ ಅರುಣಾಚಲ ಪ್ರದೇಶದ ಹಳ್ಳಿ ಪರಿಸರ ಪ್ರಿಯರು ಖಂಡಿತ ಇಷ್ಟಪಡಬಹುದಾದ ಹಾಗಿದೆ.

Mawlynnong, Meghalaya

ಮಾವ್ಲಿನಾಂಗ್‌, ಮೇಘಾಲಯ

ಪೂರ್ವ ಖಾಸಿ ಬೆಟ್ಟ ಪ್ರದೇಶಗಳಲ್ಲಿರುವ ಮೇಘಾಲಯದ ಈ ಪುಟ್ಟ ಹಳ್ಳಿಯ ಅಪರೂಪದ ಸಂಸ್ಕೃತಿ, ಶಿಸ್ತುಬದ್ಧ ಜೀವನ, ಸ್ವಚ್ಛತೆ ಎಲ್ಲವನ್ನೂ ನೋಡಲೇಬೇಕು. ನಗರದ ಮಂದಿ ಖಂಡಿತವಾಗಿಯೂ ಈ ಹಳ್ಳಿಯ ಜನರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಬೇರಿನಿಂದ ಮಾಡಲ್ಪಟ್ಟ ಸೇತುವೆಗಳು ಇಲ್ಲಿನ ವಿಶೇಷತೆ.

ಇದನ್ನೂ ಓದಿ: Summer Travel Fashion Tips: ಬೇಸಿಗೆ ಪ್ರವಾಸದ ವೇಳೆ ಯುವತಿಯರು ಗಮನಿಸಲೇಬೇಕಾದ 5 ಸಂಗತಿಗಳು

Continue Reading

ಪ್ರವಾಸ

Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

Porbandar Tour: ರಾಷ್ಟ್ರಪಿತ ಮಹಾತ್ಮಗಾಂಧಿಯವರ ಜನ್ಮಸ್ಥಳವಾಗಿರುವ ಪೋರ್ ಬಂದರ್ ಇತಿಹಾಸದ ಹಿನ್ನಲೆಯಿರುವ ಸ್ಥಳವಾಗಿದೆ. ಇದು ಗುಜರಾತ್ ರಾಜ್ಯದಲ್ಲಿದೆ. ರಜಾ ದಿನಗಳಲ್ಲಿ ಗುಜರಾತ್ ಗೆ ಪ್ರಯಾಣ ಮಾಡಬೇಕು ಎಂದು ಬಯಸುವವರು ಒಮ್ಮೆ ಪೋರ್ ಬಂದರಿಗೆ ಭೇಟಿ ನೀಡಿ. ಪೋರ್ ಬಂದರ್ ನ ಪ್ರಮುಖ ಸ್ಥಳಗಳ ಪರಿಚಯ ಇಲ್ಲಿದೆ.

VISTARANEWS.COM


on

Porbandar Tour
Koo

ಗುಜರಾತ್: ಕರಾವಳಿ ನಗರವಾದ ಪೋರ್ ಬಂದರ್ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಜನ್ಮಸ್ಥಳವಾಗಿದೆ. ಇತಿಹಾಸದ ಹಿನ್ನೆಲೆಯಿರುವ ಈ ಸ್ಥಳ ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತದೆ. ಇದು ಗುಜರಾತ್ ರಾಜ್ಯದಲ್ಲಿದೆ. ರಜಾ ದಿನಗಳಲ್ಲಿ ಗುಜರಾತ್ ಗೆ ಪ್ರಯಾಣ ಮಾಡಬೇಕು ಎಂದು ಬಯಸುವವರು ಒಮ್ಮೆ ಪೋರ್ ಬಂದರಿಗೆ (Porbandar Tour) ಭೇಟಿ ನೀಡಿ. ಇಲ್ಲಿನ ಅದ್ಭುತ ಸ್ಥಳಗಳನ್ನು ಆನಂದಿಸಿ.

Porbandar Tour

ಕೀರ್ತಿ ಮಂದಿರ

ಇದು ರಾಷ್ಟ್ರಪಿತ ಮಹಾತ್ಮಗಾಂಧಿಯವರ ನೆನಪಿಗಾಗಿ ನಿರ್ಮಿಸಿದ ಸ್ಮಾರಕವಾಗಿದೆ. ಇದು ಪೋರ್ ಬಂದರಿನಲ್ಲಿದೆ. ಇದು ಪೋರ್ ಬಂದರಿನ ಮೊದಲ ಹೆಗ್ಗುರುತಾಗಿದೆ. ಗಾಂಧೀಜಿಯವರ ಸೋದರಳಿಯನಿಂದ ನಿರ್ಮಿಸಲ್ಪಟ್ಟ ಈ ಸ್ಮಾರಕದಲ್ಲಿ ಗಾಂಧಿಯವರ ಅಸಾಧಾರಣ ಜೀವನವನ್ನು ವಿವರಿಸುವ ವಸ್ತು ಸಂಗ್ರಹಾಲಯ, ದೇವಾಲಯ, ಉದ್ಯಾನಗಳನ್ನು ಹೊಂದಿದೆ.

Porbandar Tour

ಪೋರ್ ಬಂದರ್ ಬೀಚ್

ವಿಶ್ರಾಂತಿ ಪಡೆಯಲು ಬಯಸುವವವರು ಈ ಸ್ಥಳಕ್ಕೆ ಭೇಟಿ ನೀಡಬಹುದು. ಇಲ್ಲಿ ಚಿನ್ನದಂತೆ ಹೊಳೆಯುವ ಮರಳುಗಳು, ಸೌಮ್ಯವಾದ ಅಲೆಗಳು ಮತ್ತು ಕಣ್ಮನ ಸೆಳೆಯುವ ಸೂರ್ಯೋದಯವನ್ನು ಇಲ್ಲಿ ಆನಂದಿಸಬಹುದು. ಇಲ್ಲಿ ನಡೆದಾಡುವ ಮೂಲಕ ತಾಜಾ ಗಾಳಿಯನ್ನು ಉಸಿರಾಡಬಹುದು. ಹಾಗೇ ಇಲ್ಲಿ ಮೀನುಗಾರರು, ಒಂಟೆಗಳು ಸುತ್ತಾಡುತ್ತಿರುತ್ತದೆ. ಡೌನ್ ಚೌಪಟ್ಟಿರಸ್ತೆಯ ಮಾದರಿ ಖಾದ್ಯಗಳಾದ ಮೆಥಿ ಗೋಟಾ ಬಜ್ಜಿಗಳನ್ನು ಬಣ್ಣ ಬಣ್ಣದ ಬಲ್ಪ್ ಗಳಿಂದ ಅಲಂಕರಿಸಿದ ಸ್ಟಾಲ್ ಗಳಲ್ಲಿ ಮಾರಾಟ ಮಾಡಲಾಗುತ್ತದೆ.

Porbandar Tour

ಸುದಾಮ ಮಂದಿರ

ಪೋರ್ ಬಂದರಿನ ಸಿಟಿ ಸೆಂಟರ್ ನಲ್ಲಿ ಕಂಡುಬರುವ ಈ ಪುರಾತನ ದೇವಾಲಯದಲ್ಲಿ ಹಿಂದೂ ದೇವರಾದ ಕೃಷ್ಣನ ಜೊತೆ ಆತನ ಬಾಲ್ಯದ ಸ್ನೇಹಿತ ಸುದಾಮನನ್ನು ಪೂಜಿಸಲಾಗುತ್ತದೆ. ಹಾಗೇ ಇಲ್ಲಿ ಕೃಷ್ಣ ಆತನ ಪತ್ನಿ ರುಕ್ಮಿಣಿ , ಸ್ನೇಹಿತ ಸುದಾಮ ಮತ್ತು ಸಹೋದರ ಬಲರಾಮನನ್ನು ಗೌರವಿಸಲಾಗುತ್ತದೆ. ಗುರುಕುಲದಲ್ಲಿ ಕೃಷ್ಣ –ಸುದಾಮರು ಒಟ್ಟಿಗೆ ಕಳೆದ ಸಮಯವನ್ನು ಚಿತ್ರಿಸುವ ಭಿತ್ತಿ ಚಿತ್ರಗಳನ್ನು ಗೋಡೆಗಳ ಮೇಲೆ ಬರೆಯಲಾಗಿದೆ.

Porbandar Tour

ಪೋರ್ ಬಂದರ್ ಚೌಪಟ್ಟಿ

ರೋಮಾಂಚಕವಾದ ಚೌಪಟ್ಟಿ ಬೀಚ್ ನಲ್ಲಿ ವಾಯು ವಿಹಾರ ಮಾಡುವಾಗ ಸ್ಥಳೀಯ ಖಾದ್ಯಗಳ ರುಚಿ ಮತ್ತು ಹಬ್ಬದ ಸಂಭ್ರಮವನ್ನು ನೀವು ಆನಂದಿಸದೆ ಇರಲಾಗುವುದಿಲ್ಲ. ದೀಪಗಳಿಂದ ಅಲಂಕಾರಗೊಂಡ ಮಳಿಗೆಗಳಲ್ಲಿ ಧೋಕ್ಲಾಗಳು, ಖಾಂಡ್ವಿಗಳು ಮತ್ತು ಹುರಿದ ಮಸಾಲೆಯುಕ್ತ ತಿಂಡಿಗಳಂತಹ ಪ್ರಮುಖ ವಸ್ತುಗಳನ್ನು ಮಾರಾಟ ಮಾಡಲಾಗುತ್ತದೆ. ಚೌಪಟ್ಟಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತದೆ. ವಿಶೇಷವಾಗಿ ಇಲ್ಲಿ ಗಾಳಿಪಟವನ್ನು ಹಾರಿಸುವ ಉತ್ಸವ ನಡೆಯುತ್ತದೆ.

ತಾರಾ ಮಂದಿರ ತಾರಾಲಯ

1972ರಲ್ಲಿ ಪ್ರಧಾನಿ ಇಂದಿರಾ ಗಾಂಧಿಯವರು ಈ ತಾರಾಲಯವನ್ನು ಉದ್ಘಾಟಿಸಿದರು. ಇಲ್ಲಿ ಖಗೋಳಶಾಸ್ತ್ರ, ಪ್ರದರ್ಶನದ ಬಗ್ಗೆ ಉತ್ತಮ ಮಾಹಿತಿಯನ್ನು ನೀಡಲಾಗುತ್ತದೆ. ಇಲ್ಲಿ ಗ್ರಹಣದಿಂದ ನಕ್ಷತ್ರ ಪುಂಜಗಳವರೆಗೆ ಕಾಸ್ಮಿಕ್ ವಿದ್ಯಮಾನಗಳನ್ನು ವಿವರಿಸುವ ಪ್ರದರ್ಶನಗಳನ್ನು ಡಿಜಿಟಲ್ ಆಗಿ ಪ್ರದರ್ಶಿಸಲು ಸುಧಾರಿತ ತಂತ್ರಜ್ಞಾನವನ್ನು ಬಳಸಲಾಗುತ್ತದೆ.

Porbandar Tour

ಭಾರತ್ ಮಂದಿರ

19ನೇ ಶತಮಾನದ ಈ ದೇವಾಲಯವು ಭಾರತವನ್ನು ಗೌರವಿಸುತ್ತದೆ. ಪುರಾಣಗಳಲ್ಲಿ ಭಗವಾನ್ ರಾಮನ ಸದ್ಗುಣಗಳನ್ನು ಕಂಡು ಹಿಂದೂಗಳು ರಾಮನನ್ನು ಆದರ್ಶವಾಗಿ ಕಾಣುತ್ತಾರೆ. ಹಾಗಾಗಿ ಈ ದೇವಾಲಯದಲ್ಲಿ ರಾಮಾಯಣದ ದೃಶ್ಯಗಳನ್ನು ಕೆತ್ತಲಾಗಿದೆ. ಇಲ್ಲಿ ಸ್ವರ್ಣ ಲೇಪಿತ ಗುಮ್ಮಟಗಳು, ಲ್ಯಾಟಿಸ್ಡ್ ಗೋಡೆಗಳು ಮತ್ತು ಸ್ತಂಭದ ಮಂಟಪ ಸಭಾಂಗಣಗಳು ದೂರ ದೂರದಿಂದ ಭಕ್ತರನ್ನು ಆಕರ್ಷಿಸುತ್ತದೆ.

Porbandar Tour

ನೆಹರು ತಾರಾಲಯ

ಖಗೋಳಶಾಸ್ತ್ರದ ಬಗ್ಗೆ ಮನೋರಂಜನೆಯನ್ನು ನೀಡುವಂತಹ ಪೋರ್ ಬಂದರ್ ನ ಈ ತಾರಾಲಯ ನಕ್ಷತ್ರಾಕಾರದಲ್ಲಿದೆ. ಇಲ್ಲಿ ಭೂಮಿಯ ಆಚೆಗಿನ ರಹಸ್ಯಗಳನ್ನು ಅನ್ವೇಷಿಸುವ ಹೈಟೆಕ್ ಪ್ರದರ್ಶನಗಳನ್ನು ನೀಡುತ್ತದೆ. ಆಧುನಿಕ ಗ್ಯಾಜೆಟ್ರಿಯೊಂದಿಗೆ ಸುಸಜ್ಜಿತವಾದ 40 ಅಡಿಗಳ ಅರ್ಧಗೋಳದ ಥಿಯೇಟರ್ ಒಳಗೆ ಡಿಜಿಟೈಸ್ಡ್ ಆಕಾಶದಲ್ಲಿ ಶೂಟಿಂಗ್ ಸ್ಟಾರ್ ಗಳು ಪ್ರಜ್ವಲಿಸುತ್ತಿರುವುದನ್ನು ಇಲ್ಲಿ ನೋಡಬಹುದು.

Porbandar Tour

ಪೋರ್ ಬಂದರ್ ಪಕ್ಷಿಧಾಮ

ಅಪರೂಪದ ಜಲವಾಸಿಗಳನ್ನೊಳಗೊಂಡ ಈ ಅಭಯಾರಣ್ಯಕ್ಕೆ ಪ್ರಕೃತಿ ಪ್ರೇಮಿಗಳು ಭೇಟಿ ನೀಡಬಹುದು. ಪೋರ್ ಬಂದರ್ ನಿಂದ ಕೇವಲ 2ಕಿಮೀ ದೂರದಲ್ಲಿರುವ ಇದು ಮ್ಯಾಂಗ್ರೋವ್ ಗಳನ್ನು ರಕ್ಷಣೆ ನೀಡುತ್ತದೆ ಮತ್ತು ವರ್ಷದಲ್ಲಿ ಸುಮಾರು 200 ಪಕ್ಷಿ ಪ್ರಭೇದಗಳಿಗೆ ಆಶ್ರಯ ನೀಡುತ್ತದೆ. ಇಲ್ಲಿ ಸುಂದರವಾದ ಭೂದೃಶ್ಯಗಳು ಮತ್ತು ತಾಜಾ ಗಾಳಿಯು ನಿಮಗೆ ಹೆಚ್ಚು ಸಂತೋಷವನ್ನು ನೀಡುತ್ತದೆ.

Continue Reading

ಕರ್ನಾಟಕ

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

VISTARANEWS.COM


on

Wonderla Bengaluru
Koo

ಬೆಂಗಳೂರು: ಈ ಬೇಸಿಗೆಯ ಮಜವನ್ನು ಇನ್ನಷ್ಟು ಹೆಚ್ಚಿಸಲು ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ಲಾ (Wonderla Bengaluru) ಬೆಂಗಳೂರು ಪಾರ್ಕ್‌ನಲ್ಲಿ ‘ಸಮ್ಮರ್‌ಲಾ ಫಿಯೆಸ್ಟಾ’ (Summer Fiesta 2024) ನಡೆಸುತ್ತಿದ್ದು, ಮೇ 31 ರವರೆಗೂ ಇರಲಿದೆ. ಸಮ್ಮರ್‌ಲಾ ಫಿಯೆಸ್ಟಾದಲ್ಲಿ ಸಾಕಷ್ಟು ಆಫರ್‌ಗಳು ನಿಮ್ಮನ್ನು ಕೈ ಬೀಸಿ ಕರೆಯುತ್ತಿದ್ದು, ಅನೇಕ ಮೋಜಿನ ರೈಡ್‌, ವಾಟರ್‌ ಗೇಮ್‌ಗಳು, ಫುಡ್‌-ಫೆಸ್ಟಿವಲ್‌, ಡಿಜೆ ಮ್ಯೂಸಿಕ್‌ ಸೇರಿದಂತೆ ಅನೇಕ ವಿಶೇಷತೆಗಳು ಈ ಸಮ್ಮರ್‌ಲಾದಲ್ಲಿ ಇರಲಿವೆ. ಇದಲ್ಲದೆ, ಡೊಳ್ಳು ಕುಣಿತ, ಚಿಂಗಾರಿ ಮೇಳಗಳಂತಹ ವಿಶೇಷ ಸಾಂಸ್ಕೃತಿಕ ಪ್ರದರ್ಶನ ಹಾಗೂ ಮೆರವಣಿಗೆ ಇರಲಿವೆ. ವಾರಾಂತ್ಯದಲ್ಲಿ ನಿಮ್ಮನ್ನು ಇನ್ನಷ್ಟು ಉತ್ಸಾಹಿಗಳನ್ನಾಗಿ ಮಾಡಲು ಡಿಜೆ ಮ್ಯೂಸಿಕ್‌ ಸಹ ಆಯೋಜಿಸಲಾಗುತ್ತಿದೆ.

ಇನ್ನು ಭಾನುವಾರದಂದು ವಂಡರ್‌ಲಾ ರೆಸಾರ್ಟ್‌ನಲ್ಲಿ ಬೇಸಿಗೆಯ ಬ್ರಂಚ್‌ ಸಹ ಇರಲಿದೆ. ಈ ಎಲ್ಲಾ ಮನರಂಜನೆಗಳ ಮೇಲೂ ಸಾಕಷ್ಟು ರಿಯಾಯಿತಿ ಹಾಗೂ ಆಫರ್‌ಗಳು ಇದ್ದು, ಆಸಕ್ತರು ಭಾಗಿಯಾಗಿ ಈ ಬೇಸಿಗೆ ರಜೆಯನ್ನು ಇನ್ನಷ್ಟು ಸಂತಸದಿಂದ ಕಳೆಯಬಹುದು. ಈ ಎಲ್ಲಾ ಇತರ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳಿಲ್ಲಿ ಲಭ್ಯವಿರಲಿದೆ. ಪಾರ್ಕ್‌ನಲ್ಲಿ ಈಗ ಲಭ್ಯವಿರುವ ಹೊಸ ವಿಶೇಷ ಪಾನೀಯ ಕೌಂಟರ್‌ಗಳೊಂದಿಗೆ ಈ ಬೇಸಿಗೆಯ ಶಾಖವನ್ನು ತಣಿಸಲು ತಾಜಾ ಹಣ್ಣಿನ ಜ್ಯೂಸ್‌ಗಳು, ಋತುವಿನ ಅತ್ಯುತ್ತಮ ಆಮ್ರಾಸ್‌, ತಂಪಾದ ಮಜ್ಜಿಗೆ ಮತ್ತು ಬೇಸಿಗೆಯ ಪಾನೀಯಗಳು ಲಭ್ಯವಿರಲಿದೆ.

ಇದನ್ನೂ ಓದಿ | E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

ಆಫರ್‌ಗಳ ವಿವರ ಇಲ್ಲಿದೆ

  • ವಂಡರ್‌ಲಾಗೆ ಭೇಟಿ ನೀಡಲು ಬಯಸುವವರಿಗೆ Early Bird ಹೆಸರಿನಲ್ಲಿ ಶೇ. 10ರಷ್ಟು ರಿಯಾಯಿತಿ ಸಿಗಲಿದೆ. ಈ ಕೊಡುಗೆ(Offer) ಪಡೆಯಲು ಮೂರು ದಿನಗಳ ಮುಂಚಿತವಾಗಿ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬುಕ್‌ ಮಾಡಿಕೊಳ್ಳಬೇಕು.
  • ಜನ್ಮದಿನದ ಆಫರ್‌, ವಿಶೇಷವಾಗಿ ಮೇ ತಿಂಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವವರಿಗೆ 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಉಚಿತವಾಗಿ ಸಿಗಲಿದೆ.
  • ಇನ್ನು, ವಿದ್ಯಾರ್ಥಿಗಳಿಗಾಗಿ ಹಾಲ್ ಟಿಕೆಟ್ ಆಫರ್ ಸಹ ಚಾಲ್ತಿಯಲ್ಲಿದೆ. 2023-2024ರ ಶೈಕ್ಷಣಿಕ ವರ್ಷದ 10ನೇ, 11ನೇ ಮತ್ತು 12ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಮೂಲ ಪರೀಕ್ಷೆಯ ಹಾಲ್ ಟಿಕೆಟ್‌ಗಳನ್ನು ಪ್ರಸ್ತುತಪಡಿಸಿ ಪಾರ್ಕ್ ಪ್ರವೇಶ ಟಿಕೆಟ್‌ಗಳ ಮೇಲೆ ಶೇ. 35ರಷ್ಟು ರಿಯಾಯಿತಿಯನ್ನು ಪಡೆಯಬಹುದು.
  • ವಂಡರ್‌ಲಾ ಕಾಲೇಜು ವಿದ್ಯಾರ್ಥಿಗಳಿಗೆ (16-24 ವರ್ಷ ವಯಸ್ಸಿನವರು) ತಮ್ಮ ಕಾಲೇಜು ಐಡಿ ಕಾರ್ಡ್‌ಗಳನ್ನು ಪ್ರಸ್ತುತಪಡಿಸಿದರೆ ಶೇ. 25ರಷ್ಟು ರಿಯಾಯಿತಿ ಪಡೆಯಲಿದ್ದಾರೆ, ಜೊತೆಗೆ, ವಿದ್ಯಾರ್ಥಿಗಳು ಆಹಾರ ಆಯ್ಕೆಗಳನ್ನು ಒಳಗೊಂಡಿರುವ ಕಾಂಬೊ ಪ್ಯಾಕೇಜ್‌ಗಳನ್ನು ಸಹ ಪಡೆಯಬಹುದು. ಆರಂಭಿಕ ಅರ್ಲಿ ಬರ್ಡ್‌ ಕೊಡುಗೆಯನ್ನು ಹೊರತುಪಡಿಸಿ, ಎಲ್ಲಾ ಇತರ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳಿಗೆ ಮಾನ್ಯವಾಗಿರುತ್ತವೆ. ಅತಿಥಿಗಳು ತಮ್ಮ ವಂಡರ್ಲಾ ಸಮ್ಮರ್ಲಾ ಫಿಯೆಸ್ಟಾ ಭಾಗವಾಗಿ ಮೇ 31 ರವರೆಗೆ ಪ್ರತಿ ಶನಿವಾರ ನಡೆಯುವ ವಂಡರ್ಲಾ ವಿಶೇಷ ಪೂಲ್ ಪಾರ್ಟಿಗಳೊಂದಿಗೆ ಭಾಗವಹಿಸಬಹುದು.

ಈ ಕುರಿತು ಮಾತನಾಡಿದ ವಂಡರ್‌ಲಾ ಹಾಲಿಡೇಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ. ಚಿಟ್ಟಿಲಪ್ಪಿಳ್ಳಿ, ಬೇಸಿಗೆ ರಜೆಯನ್ನು ಇನ್ನಷ್ಟು ಉತ್ಸಾಹ ಭರಿತವನ್ನಾಗಿದಲು ವಂಡರ್‌ಲಾ “ಸಮ್ಮರ್ಲಾ ಫಿಯೆಸ್ಟಾ’ ಆಯೋಜಿಸಿದೆ. ಈ ಸಮ್ಮರ್ಲಾದಲ್ಲಿ ಇಡೀ ಕುಟುಂಬಗಳು, ಕಾಲೇಜು ಸ್ನೇಹಿತರು, ಮಕ್ಕಳು ಎಲ್ಲರೂ ತಮ್ಮ ಪ್ರೀತಿಪಾತ್ರರೊಂದಿಗೆ ಆಗಮಿಸಿ, ಆನಂದಿಸಬಹುದು.

ಸಮ್ಮರ್‌ಲಾ ಭಾಗವಾಗಿ ಫುಡ್‌ಫೆಸ್ಟಿವಲ್‌, ಸಾಂಸ್ಕೃತಿಕ ಮೆರವಣಿಗೆ, ಡಿಜೆ ಮ್ಯೂಸಿಕ್‌ ಸೇರಿದಂತೆ ಇನ್ನೂ ಅನೇಕ ಮನರಂಜನೆಗಳು ಇರಲಿವೆ. ಈ ಎಲ್ಲಾ ಮನರಂಜನೆಯೊಂದಿಗೆ ನಿಮ್ಮ ಸವಿನೆನಪನ್ನು ಅಚ್ಚಳಿಯದಂತೆ ಮಾಡುವುದೇ ನಮ್ಮ ವಂಡರ್‌ಲಾದ ಪ್ರಮುಖ ಉದ್ದೇಶ ಎಂದು ಹೇಳಿದರು.

ವಂಡರ್‌ಲಾ ಆನ್‌ಲೈನ್ ಪೋರ್ಟಲ್ ಮೂಲಕ ಅಥವಾ ನೇರವಾಗಿ ಪಾರ್ಕ್ ಕೌಂಟರ್‌ಗಳಲ್ಲಿ ಟಿಕೆಟ್‌ಗಳನ್ನು ಮುಂಗಡವಾಗಿ ಬುಕ್ ಮಾಡುವ ಮೂಲಕ ಸಮ್ಮರ್ಲಾವನ್ನು ಆನಂದಿಸಿ.

ಇದನ್ನೂ ಓದಿ | Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

ಹೆಚ್ಚಿನ ಮಾಹಿತಿ ಮತ್ತು ಬುಕಿಂಗ್‌ಗಳಿಗಾಗಿ, www.wonderla.com ಗೆ ಭೇಟಿ ನೀಡಿ ಅಥವಾ +91 80372 30333, +91 80350 73966 ಅನ್ನು ಸಂಪರ್ಕಿಸಿ.

Continue Reading

ಪ್ರವಾಸ

Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

Summer Tour: ಕಾಶ್ಮೀರಕ್ಕೆ ಭೇಟಿ ನೀಡಲು ಈಗ ಸೂಕ್ತ ಸಮಯ. ಹಿಮದಿಂದ ಆವೃತವಾದ ಸುಂದರ ಭೂದೃಶ್ಯಗಳನ್ನು ಈಗ ಇಲ್ಲಿ ಕಣ್ತುಂಬಿಕೊಳ್ಳಬಹುದು. ಇದಕ್ಕಾಗಿ ಐಆರ್ ಟಿಸಿ ಯು ‘ಕಾಶ್ಮೀರ್ ಹೆವೆನ್ ಆನ್ ಅರ್ಥ್ ಎಕ್ಸ್ ಮುಂಬೈ’ ಪ್ಯಾಕೇಜ್ ಘೋಷಿಸಿದೆ. ಆಸಕ್ತರು ಇದರ ಪ್ರಯೋಜನವನ್ನು ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Summer Tour
Koo

ಧರೆಯ ಮೇಲಿನ ಸ್ವರ್ಗ ಎಂದೇ ಕರೆಯಲ್ಪಡುವ ಕಾಶ್ಮೀರಕ್ಕೆ (kashmir) ಪ್ರವಾಸ (tour) ಹೊರಡಲು ಈಗ ಸೂಕ್ತ ಸಮಯ. ಬೇಸಿಗೆಯ ಬಿಸಿಲಿನಿಂದ (Summer Tour) ಕಂಗೆಟ್ಟ ಜನರು ತಂಪಾದ ಪ್ರದೇಶದಲ್ಲಿ ಹೋಗಿ ಕೆಲ ಕಾಲ ಇದ್ದು ಬರಬೇಕು ಎಂದು ಬಯಸಿದರೆ ಐಆರ್ ಟಿಸಿ (IRTC) ವತಿಯಿಂದ ಟೂರ್ ಪ್ಯಾಕೇಜ್ ಘೋಷಣೆಯಾಗಿದೆ. ಆಸಕ್ತರು ಬ್ಯಾಗ್ ಪ್ಯಾಕ್ ,ಮಾಡಿ ಹೊರಡಲು ಸಿದ್ಧತೆ ನಡೆಸಬಹುದು.

ಇತ್ತೀಚೆಗೆ ಕಾಶ್ಮೀರದಲ್ಲಿ ಸಂಭವಿಸಿದ ಹಿಮಪಾತವು ಕಣಿವೆ ಪ್ರದೇಶಕ್ಕೆ ಸಂಪೂರ್ಣವಾಗಿ ಬಿಳಿ ಬಣ್ಣ ಎರಕ ಹೊಯ್ದಂತೆ ಮಾಡಿದೆ. ಇದು ಪ್ರವಾಸೋದ್ಯಮ ಕ್ಷೇತ್ರದ ಉತ್ಸಾಹವನ್ನು ಪುನರುಜ್ಜೀವನಗೊಳಿಸಿದೆ. ಈಗಾಗಲೇ ಅನೇಕ ಪ್ರವಾಸಿಗರು ಕಾಶ್ಮೀರಕ್ಕೆ ಹೊರಡುವ ಯೋಜನೆ ಹಾಕಿಕೊಳ್ಳುತ್ತಿದ್ದಾರೆ. ಮೋಡಿ ಮಾಡುವ ಭೂದೃಶ್ಯಗಳನ್ನು ಕಣ್ತುಂಬಿ ಕೊಳ್ಳಲು ಪ್ರವಾಸಿಗರ ಆಗಮನಕ್ಕೆ ಕಾಶ್ಮೀರವೂ ಕಾಯುವಂತಿದೆ.

ಪ್ರವಾಸಿಗರ ಉತ್ಸಾಹವನ್ನು ಹೆಚ್ಚಿಸಲು ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC)ವು ‘ಕಾಶ್ಮೀರ್ ಹೆವೆನ್ ಆನ್ ಅರ್ಥ್ ಎಕ್ಸ್ ಮುಂಬೈ’ ಎಂಬ ಹೊಸ ಪ್ರವಾಸ ಪ್ಯಾಕೇಜ್ ಅನ್ನು ಹೊರತಂದಿದೆ.


ಇದನ್ನೂ ಓದಿ: Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

ಈ ಪ್ಯಾಕೇಜ್ ಕಾಶ್ಮೀರದ ರಮಣೀಯ ಸೌಂದರ್ಯವನ್ನು ಅನ್ವೇಷಿಸಲು ಬಯಸುವವರಿಗೆ ಹೇಳಿ ಮಾಡಲ್ಪಟ್ಟಿದೆ. ಐದು ರಾತ್ರಿ ಮತ್ತು ಆರು- ದಿನಗಳ ಸಮಗ್ರ ಪ್ಯಾಕೇಜ್ ನಲ್ಲಿ ಶ್ರೀನಗರ, ದೂದ್ ಪೆಟ್ರಿ, ಗುಲ್ಮಾರ್ಗ್, ಪಹಲ್ಗಾಮ್ ಮೊದಲಾದ ಪ್ರಸಿದ್ಧ ಸ್ಥಳಗಳನ್ನು ಒಳಗೊಂಡಿದೆ. ಈ ಪ್ಯಾಕೇಜ್ ನಲ್ಲಿ ವಿಮಾನ ಟಿಕೆಟ್‌ಗಳು, ಹೊಟೇಲ್ ವಸತಿ, ಊಟ ಮತ್ತು ಪ್ರಯಾಣ ವಿಮೆಯನ್ನು ಒಳಗೊಂಡಿದೆ. ಪ್ರಯಾಣಿಕರ ಸಂಖ್ಯೆ ಮತ್ತು ಅವರೊಂದಿಗೆ ಬರುವ ಮಕ್ಕಳ ವಯಸ್ಸನ್ನು ಪರಿಗಣಿಸಿ ವಿಭಿನ್ನ ಪ್ರಯಾಣದ ಅನುಭವಕ್ಕೆ ಸರಿಹೊಂದಿಸಲು ಬೆಲೆಗಳನ್ನು ನಿಗದಿಪಡಿಸಲಾಗಿದೆ.


ಪ್ರವಾಸದ ದಿನ

ಮೇ ತಿಂಗಳಲ್ಲಿ 11, 15, 18, 25 ಜೂನ್ ತಿಂಗಳಲ್ಲಿ 1, 9, 15, 23, 26ರಂದು ಪ್ರವಾಸ ಹೊರಡುವ ಯೋಜನೆ ರೂಪಿಸಿಕೊಳ್ಳಬಹುದು. ಹೊಟೇಲ್ ವಾಸ್ತವ್ಯ ನಾಲ್ಕು ರಾತ್ರಿ ಶ್ರೀನಗರದಲ್ಲಿ ಮತ್ತು ಒಂದು ರಾತ್ರಿ ಪಹಲ್ಗಾಮ್ ನಲ್ಲಿ.

ದರ ಇಂತಿದೆ

ಒಬ್ಬರಿಗೆ 63,400 ರೂ., ಇಬ್ಬರಿಗೆ ಪ್ಯಾಕೇಜ್ ನಡಿಯಲ್ಲಿ ತಲಾ 54,100, ಮೂವರಿಗೆ ತಲಾ 50,700, 5 ರಿಂದ 11 ವರ್ಷದ ಒಳಗಿನ ಪ್ರತಿ ಮಕ್ಕಳಿಗೆ 48,400 ರೂ. ನಿಗದಿಪಡಿಸಲಾಗಿದೆ.

ಪ್ರವಾಸಿ ತಾಣಗಳು

ಟೂರ್ ಪ್ಯಾಕೇಜ್ ನಲ್ಲಿ ಶ್ರೀನಗರ, ದೂದ್ ಪೆಟ್ರಿ, ಗುಲ್ಮಾರ್ಗ್, ಪಹಲ್ಗಾಮ್ ಸುಪ್ರಸಿದ್ದ ತಾಣಗಳಿಗೆ ಭೇಟಿ ನೀಡಲಾಗುತ್ತದೆ. ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಳಿಕ ಪಹಲ್ಗಾಮ್ , ಬೇತಾಬ್ ವಾಲಿ, ಅರು ವಾಲಿ ಮತ್ತು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮೊದಲ ದಿನ ಭೇಟಿ ನೀಡಲಾಗುತ್ತದೆ. ಎರಡನೇ ದಿನ ದಾಲ್ ಸರೋವರದ ದಡದಲ್ಲಿರುವ ಹಾಜ್ರತ್ ಬಾಲ್ ಶ್ರೀನಿ ಗೆ ಭೇಟಿ ನೀಡಲಾಗುತ್ತದೆ. ಮೂರನೇ ದಿನ ಅವಂತೀಪುರ್, ಮೊಘಲ್ ಗಾರ್ಡನ್, ಶಂಕರಾಚಾರ್ಯ ಟೆಂಪಲ್, ಶಿಖರ ರೈಡ್ ಅನ್ನು ಒಳಗೊಂಡಿರುತ್ತದೆ. ನಾಲ್ಕನೇ ದಿನ ದೂದ್ ಪೆಟ್ರಿಯಲ್ಲಿ , ಐದನೇ ದಿನ ಗುಲ್ಮಾರ್ಗ್ ನಲ್ಲಿ ಕಳೆಯಲಾಗುತ್ತದೆ. ಆರನೇ ದಿನ ವಿಮಾನದಲ್ಲಿ ಮುಂಬಯಿ ತಲುಪುವುದರೊಂದಿಗೆ ಪ್ರವಾಸ ಕೊನೆಗೊಳ್ಳುತ್ತದೆ.

Continue Reading
Advertisement
Ramanagara News
ಕರ್ನಾಟಕ4 hours ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ4 hours ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ4 hours ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ4 hours ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ4 hours ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ4 hours ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ5 hours ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ5 hours ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ5 hours ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest5 hours ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ8 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ10 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ10 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ23 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌