Summer Travel Tips : ಬೇಸಿಗೆ ಪ್ರವಾಸಕ್ಕೆ ಸಿದ್ಧರಾಗುತ್ತಿದ್ದೀರಾ? ಲಗೇಜ್‌ನಲ್ಲಿ ಇವುಗಳೂ ಇರಲಿ - Vistara News

ಪ್ರವಾಸ

Summer Travel Tips : ಬೇಸಿಗೆ ಪ್ರವಾಸಕ್ಕೆ ಸಿದ್ಧರಾಗುತ್ತಿದ್ದೀರಾ? ಲಗೇಜ್‌ನಲ್ಲಿ ಇವುಗಳೂ ಇರಲಿ

summer tour: ಒಂದೆಡೆ ಬೇಸಿಗೆಯ ತೀವ್ರ ಬಿಸಿಲು ಮತ್ತೊಂದೆಡೆ ಮಕ್ಕಳಿಗೆ ರಾಜಾ ದಿನಗಳು. ಈ ಸಂದರ್ಭದಲ್ಲಿ ಎಲ್ಲಾದರೂ ಪ್ರವಾಸ ಹೋಗಿ ಬರಬೇಕು ಎನ್ನುವ ಯೋಚನೆ. ಈ ನಡುವೆ ದೇಹಾರೋಗ್ಯದ ಕಡೆಗೂ ಗಮನವಿರಲೇ ಬೇಕು. ಹೀಗಾಗಿ ಬೇಸಿಗೆಯಲ್ಲಿ ಪ್ರವಾಸ ಹೋಗುವಾಗ ಲಗೇಜ್ ಬ್ಯಾಗ್ ನಲ್ಲಿ ಒಂದಷ್ಟು ಪ್ರಮುಖ ವಸ್ತುಗಳು ಇರಲೇಬೇಕು. ಅವು ಯಾವುದು ಗೊತ್ತೇ?

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈಗಾಗಲೇ ಶಾಲಾ ಮಕ್ಕಳಿಗೆ (school childrens) ಬೇಸಿಗೆ ರಜೆ (summer holiday) ಪ್ರಾರಂಭವಾಗಿದೆ. ಹೀಗಾಗಿ ದೇಶದ ವಿವಿಧ ಭಾಗಗಳಿಗೆ ಪ್ರವಾಸ ಹೊರಡಬೇಕು ಎನ್ನುವ ಯೋಚನೆ ಎಲ್ಲರ ಮನಸಲ್ಲೂ ಸಿದ್ಧಗೊಳ್ಳುತ್ತಿದೆ. ಈ ನಡುವೆ ಉರಿ ಬಿಸಿಲಿನ ನಡುವೆ ಹೇಗಪ್ಪಾ ದೇಶ ಸುತ್ತುವುದು ಎನ್ನುವ ಚಿಂತೆಯೂ ಕಾಡುತ್ತಿದೆ.

ಬಿಸಿಲಿನ ಪ್ರಖರತೆ ಹೆಚ್ಚಾಗಿರುವುದರಿಂದ ರಸ್ತೆ ಸಂಚಾರವಂತೂ ತುಂಬಾ ಕಷ್ಟ ಎನ್ನುವ ಪರಿಸ್ಥಿತಿ ಇರುವಾಗ ಹೆಚ್ಚಿನ ಜನರು ಬೆಟ್ಟ ಗುಡ್ಡ, ನದಿ, ಜಲಪಾತಗಳಿರುವ ತಣ್ಣನೆಯ ಪ್ರದೇಶಗಳಲ್ಲಿ ಸುತ್ತಾಡಲು ಬಯಸುತ್ತಾರೆ. ಹೀಗಾಗಿ ಬೇಸಿಗೆಯಲ್ಲಿ ಪ್ರವಾಸಿ ಕೇಂದ್ರಗಳಲ್ಲಿ ಜನದಟ್ಟಣೆ ಕಡಿಮೆಯಾಗಿರುತ್ತದೆ. ಆದ್ದರಿಂದ ಕೆಲವರು ದೂರದೂರದ ಪ್ರವಾಸಕ್ಕೆ ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಾರೆ. ಬೇಸಿಗೆಯಲ್ಲಿ ದೇಶದ ವಿವಿಧ ಭಾಗಗಳಿಗೆ ಪ್ರವಾಸ ಹೊರಡುವ ಯೋಜನೆ ಮಾಡುತ್ತಿದ್ದರೆ ಕೆಲವೊಂದು ಅಗತ್ಯ ವಸ್ತುಗಳನ್ನು ಕೊಂಡೊಯ್ಯುವುದನ್ನು ಮರೆಯದಿರಿ.

1. ನೀರಿನ ಬಾಟಲಿಗಳು

ದೇಶದ ವಿವಿಧ ಭಾಗಗಳಲ್ಲಿ ನೀರಿನ ರುಚಿ ಬೇರೆಬೇರೆಯಾಗಿರುತ್ತದೆ. ಕೆಲವು ಪ್ರದೇಶಗಳ ನೀರು ಸುರಕ್ಷಿತ ಎಂದು ನಂಬಲು ಸಾಧ್ಯವಿಲ್ಲ. ಪ್ರವಾಸದ ವೇಳೆ ಕುಡಿಯುವ ನೀರಿನ ವಿಚಾರದಲ್ಲಿ ಜಾಗರೂಕರಾಗಿರುವುದು ಹೆಚ್ಚು ಅಗತ್ಯ. ಇಲ್ಲವಾದರೆ ಪ್ರವಾಸದ ಮಧ್ಯೆಯೇ ಆರೋಗ್ಯ ಹದಗೆಡಬಹುದು. ಹೀಗಾಗಿ ನೀರಿನ ಬಾಟಲಿ ಜೊತೆಯಲ್ಲಿದ್ದರೆ ಸಿಕ್ಕಿದಾಗ ಸ್ವಚ್ಛವಾದ ಕುಡಿಯುವ ನೀರನ್ನು ಬಾಟಲಿಯಲ್ಲಿ ತುಂಬಿಸಿಕೊಳ್ಳಬಹುದು.

2. ಗ್ಲೂಕೋಸ್ ಪಾನೀಯ

ದೂರ ಪ್ರವಾಸ ಹೊರಡುವಾಗ ನೀರಿನ ಜೊತೆಗೆ ಸಾಕಷ್ಟು ಪ್ರಮಾಣದ ಗ್ಲೂಕೋಸ್ ಪಾನೀಯ ಜೊತೆಯಲ್ಲಿ ಇರಲಿ. ಇದು ದೇಹವನ್ನು ನಿರ್ಜಲೀಕರಣಗೊಳಿಸುವುದನ್ನು ತಡೆಯುತ್ತದೆ. ಆಗಾಗ ಗ್ಲೂಕೋಸ್ ಪಾನೀಯ ಸೇವಿಸುವುದರಿಂದ ಪ್ರವಾಸದ ಮಧ್ಯೆ ಹೆಚ್ಚು ಸುಸ್ತು ಕಾಡುವುದಿಲ್ಲ ಪ್ರವಾಸವನ್ನು ಪೂರ್ತಿಯಾಗಿ ಸಂತೋಷದಿಂದ ಪೂರ್ಣಗೊಳಿಸಬಹುದು.

ಇದನ್ನು ಓದಿ: Travel Time: ಸಮುದ್ರದಲ್ಲೇ ಜೀವನ; ಹೊಸ ಬಗೆಯ ಅಲೆಮಾರಿ ಪ್ರವಾಸಿ ದಂಪತಿ ಇವರು!

3. ಎನರ್ಜಿ ಬಾರ್

Energy Bar

ಬೇಸಿಗೆಯಲ್ಲಿ ದೇಹದಲ್ಲಿ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಇಲ್ಲವಾದರೆ ಆರೋಗ್ಯ ಸಮಸ್ಯೆ ಕಾಡಬಹುದು. ಬೇಸಿಗೆಯಲ್ಲಿ ಹೆಚ್ಚು ಊಟ ಮಾಡಲು ಆಗುವುದಿಲ್ಲ. ಹೀಗಾಗಿ ಸದಾ ಎನರ್ಜಿ ಬಾರ್‌ಗಳು ಜೊತೆ ಇದ್ದರೆ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಅದು ಒದಗಿಸುತ್ತದೆ. ಆದರೆ ಎನರ್ಜಿ ಬಾರ್ ಖರೀದಿ ಮಾಡುವಾಗ ಉತ್ತಮ ಗುಣಮಟ್ಟಕ್ಕೆ ಆದ್ಯತೆ ನೀಡಿ.

4. ಒದ್ದೆ ಟಿಶ್ಯು

ಬೆವರು ಒರೆಸಲು, ಕೈಗಳನ್ನು ಸ್ವಚ್ಛಗೊಳಿಸಲು ಒದ್ದೆ ಟಿಶ್ಯು ಜೊತೆಗಿರುಸುವುದು ಉತ್ತಮ. ಇದರಿಂದ ಮುಖ ಹೆಚ್ಚು ಸ್ವಚ್ಛವಾಗಿರುತ್ತದೆ. ಬೆವರು, ಎಣ್ಣೆಯಿಂದ ಉಂಟಾಗುವ ಅಲರ್ಜಿ ತೊಂದರೆಗಳು ಕಾಡುವುದಿಲ್ಲ. ಇದು ನಿಮಗೆ ಹೆಚ್ಚು ಉಲ್ಲಾಸದ ಅನುಭವ ಕೊಡುತ್ತದೆ.

5. ಸನ್‌ಗ್ಲಾಸ್‌

Girls Sunglass

ಬೇಸಿಗೆಯಲ್ಲಿ ಪ್ರವಾಸ ಹೊರಡುವಾಗ ಸನ್ ಗ್ಲಾಸ್ ಜೊತೆಗೆ ಇರಲಿ. ಇದು ಹೆಚ್ಚು ಬಿಸಿಲಿನಲ್ಲಿ ಕಣ್ಣಿಗೆ ತಂಪನ್ನು ಕೊಡುತ್ತದೆ. ಬಿಳಿ ಅಮೃತಶಿಲೆಯನ್ನು ಹಾಕಿರುವ, ಬೆಳಕನ್ನು ಪ್ರತಿಫಲಿಸುವ ಪ್ರವಾಸಿ ಕೇಂದ್ರಗಳಲ್ಲಿ ಇದು ಹೆಚ್ಚು ಉಪಯುಕ್ತವಾಗುತ್ತದೆ.

6. ಹತ್ತಿ ಬಟ್ಟೆ

ಆದಷ್ಟು ಬೇಸಿಗೆಯಲ್ಲಿ ಪ್ರವಾಸ ಹೋಗುವಾಗ ಹತ್ತಿ ಅಥವಾ ಲಿನಿನ್ ಬಟ್ಟೆಯನ್ನೇ ಧರಿಸಿ. ಇತರೆ ಬಟ್ಟೆಗಳು ಚರ್ಮದ ತೊಂದರೆ ಉಂಟುಮಾಡಬಹುದು. ಕಾಟನ್ ಶರ್ಟ್‌, ಪ್ಯಾಂಟ್‌ಗಳು ಬೇಸಿಗೆ ಪ್ರವಾಸಕ್ಕೆ ಅತ್ಯುತ್ತಮ ಆಯ್ಕೆ.

ಇದನ್ನು ಓದಿ: Summer Travel Tips: ಬೇಸಿಗೆ ರಜೆಯಲ್ಲಿ ವಿದೇಶ ಪ್ರವಾಸ ಮಾಡಬೇಕೇ? ಇಲ್ಲಿವೆ ನೋಡಿ ಪರ್ಫೆಕ್ಟ್‌ ತಾಣಗಳು!

7. ಸನ್‌ಸ್ಕ್ರೀನ್ ಲೋಷನ್

ಪ್ರವಾಸ ಹೋಗುವಾಗ ಚರ್ಮದ ಆರೋಗ್ಯದ ಕಡೆ ಹೆಚ್ಚು ಗಮನ ಕೊಡಲು ಸಾಧ್ಯವಿಲ್ಲ. ಹೀಗಾಗಿ ಸೂರ್ಯನ ಬಿಸಿಲು ಚರ್ಮವನ್ನು ಕಳೆಗುಂದಿಸಬಹುದು. ಇದಕ್ಕಾಗಿ ಬಿಸಿಲಿಗೆ ಮೈಯೊಡ್ಡುವಾಗ ಸನ್‌ಸ್ಕ್ರೀನ್ ಲೋಷನ್ ಗಳನ್ನು ಬಳಸಿ. ಇದರ ಡಬ್ಬ ನಿಮ್ಮ ಕೈ ಬ್ಯಾಗ್ ನಲ್ಲೇ ಇರಲಿ.

8. ಸ್ಯಾನಿಟೈಸರ್

ಪದೇಪದೇ ಕೈಗಳನ್ನು ಸಾಬೂನ್ ಬಳಸುವುದು ಆರೋಗ್ಯಕರವಲ್ಲ. ಅಲ್ಲದೇ ಎಲ್ಲ ಕಡೆ ಕೈ ತೊಳೆಯಲು ನೀರು ಲಭ್ಯವಿರುತ್ತದೆ ಎಂದು ಹೇಳುವುದು ಸಾಧ್ಯವಿಲ್ಲ. ಹೀಗಾಗಿ ಪ್ರವಾಸದಲ್ಲಿ ಕೈಗಳನ್ನು ಸ್ವಚ್ಛವಾಗಿಡಲು ಹ್ಯಾಂಡ್ ಸ್ಯಾನಿಟೈಜರ್ ವೊಂದು ನಿಮ್ಮ ಬ್ಯಾಗ್ ನಲ್ಲಿ ಇರಲಿ.

9. ಸೊಳ್ಳೆ ನಿವಾರಕ ಕ್ರೀಮ್

ಪ್ರವಾಸದ ವೇಳೆ ಸೊಳ್ಳೆಗಳು ಕಿರಿಕಿರಿ ಉಂಟು ಮಾಡಬಹುದು. ಮಾರಕ ಸೋಂಕಿಗೂ ಕಾರಣವಾಗಬಹುದು. ಹೀಗಾಗಿ ಸೊಳ್ಳೆ ನಿವಾರಕ ಕ್ರೀಮ್‌ ಗಳು ಸದಾ ಜೊತೆ ಇರಲಿ.

ಬೇಸಿಗೆಯಲ್ಲಿ ಪ್ರವಾಸ ಮಾಡುವಾಗ ಹೆಚ್ಚು ಸಂತೋಷವಾಗಿರಲು ಅರೋಗ್ಯ ಕಾಪಾಡಿಕೊಳ್ಳುವುದು ಬಹುಮುಖ್ಯ. ಹೀಗಾಗಿ ಈ ಎಲ್ಲ ಪ್ರವಾಸ ಹೊರಡುವಾಗ ಈ ಎಲ್ಲ ಅಂಶಗಳು ನೆನಪಿನಲ್ಲಿರಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Kanyakumari Tour: ತುಂಬಾ ದುಬಾರಿ ಏನಿಲ್ಲ, ನೀವೂ ಮಾಡಬಹುದು ಕನ್ಯಾಕುಮಾರಿ ಪ್ರವಾಸ

ಪ್ರವಾಸದ ಯೋಜನೆ ಕೆಲವೊಮ್ಮೆ ಜೇಬಿಗೆ ಕತ್ತರಿ ಹಾಕುತ್ತದೆ ಎನ್ನುವ ಭಯವಿರುತ್ತದೆ. ಆದರೆ ಕನ್ಯಾಕುಮಾರಿಗೆ ಪ್ರವಾಸ (Kanyakumari Tour) ಹೊರಡುವ ಯೋಜನೆ ಮಾಡಿದರೆ ಇಲ್ಲಿ ಜೇಬಿಗೆ ಭಾರವಾಗದ ಹಲವು ತಾಣಗಳಿವೆ. ಆದರೆ ಸ್ವಲ್ಪ ಬುದ್ದಿವಂತಿಕೆ ತೋರಬೇಕು ಅಷ್ಟೇ. ಕನ್ಯಾಕುಮಾರಿಯ ಪ್ರಮುಖ ಸ್ಥಳಗಳ ಪರಿಚಯ ಇಲ್ಲಿದೆ.

VISTARANEWS.COM


on

By

Kanyakumari Tour
Koo

ನೈಸರ್ಗಿಕ ಸೌಂದರ್ಯಕ್ಕೆ ಹೆಸರುವಾಸಿಯಾಗಿರುವ ಕನ್ಯಾಕುಮಾರಿಗೆ ಪ್ರವಾಸ (Kanyakumari Tour) ಹೊರಡುವ ಯೋಚನೆಯಲ್ಲಿದ್ದರೆ ಇಲ್ಲಿನ ಕೆಲವೊಂದು ಸಂಗತಿಗಳನ್ನು ಮಿಸ್ ಮಾಡಿಕೊಳ್ಳದಿರಿ. ಅತ್ಯದ್ಭುತ ನೈಸರ್ಗಿಕ ಸೌಂದರ್ಯ ಮತ್ತು ಆಧ್ಯಾತ್ಮಿಕ ಮಹತ್ವ ಎರಡಕ್ಕೂ ಹೆಸರುವಾಸಿಯಾಗಿರುವ ಕನ್ಯಾಕುಮಾರಿಗೆ ಜೀವನದಲ್ಲೊಮ್ಮೆಯಾದರೂ ಭೇಟಿ ನೀಡಲೇಬೇಕು.


ಕನ್ಯಾಕುಮಾರಿ ನಗರವು ಐಷಾರಾಮಿ ಹಾಟ್‌ಸ್ಪಾಟ್ ಎಂಬ ಖ್ಯಾತಿಯನ್ನು ಪಡೆದಿದ್ದರೂ ಇಲ್ಲಿ ನಿಮ್ಮ ಬಜೆಟ್ ಮೀರದ ಹಾಗೆ ಪ್ರವಾಸ ಮಾಡಲು ಹಲವು ಆಯ್ಕೆಗಳನ್ನೂ ನೀಡುತ್ತದೆ. ಕೆಲವು ಯೋಜನೆ ಮತ್ತು ಸ್ಥಳೀಯರ ಸಲಹೆ ಪಡೆದರೆ ಬಜೆಟ್ ಮೀರದ ಹಾಗೆ ಪ್ರವಾಸವನ್ನೂ ಪೂರ್ಣಗೊಳಿಸಬಹುದು. ಜೀವನದಲ್ಲಿ ಅತ್ಯಂತ ಸುಂದರ ಅನುಭವವನ್ನು ತಮ್ಮದಾಗಿಸಿಕೊಳ್ಳಬಹುದು.

ಸೂರ್ಯೋದಯ – ಸೂರ್ಯಾಸ್ತ

ಕನ್ಯಾಕುಮಾರಿಗೆ ಭೇಟಿ ನೀಡುವ ಅವಕಾಶ ಸಿಕ್ಕಾಗ ಇಲ್ಲಿನ ಸೂರ್ಯೋದಯ, ಸೂರ್ಯಾಸ್ತವನ್ನು ವೀಕ್ಷಿಸುವ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಅರಬ್ಬಿ ಸಮುದ್ರ (Arabian Sea), ಬಂಗಾಳ ಕೊಲ್ಲಿ (Bay of Bengal) ಮತ್ತು ಹಿಂದೂ ಮಹಾಸಾಗರದ (Indian Ocean) ಭೇಟಿಯ ಸ್ಥಳದಲ್ಲಿ ಅತ್ಯಂತ ಸುಂದರವಾದ ಸೂರ್ಯೋದಯ ಮತ್ತು ಸೂರ್ಯಾಸ್ತವನ್ನು ಕಣ್ತುಂಬಿ ಕೊಳ್ಳಬಹದು. ಇದಕ್ಕಾಗಿ ಯಾವುದೇ ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ; ತೀರದ ಪಕ್ಕದಲ್ಲಿ ಕುಳಿತುಕೊಂಡು ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿ ಕೊಳ್ಳಬಹುದು.

ಐಕಾನಿಕ್ ಹೆಗ್ಗುರುತು

ಕನ್ಯಾಕುಮಾರಿಯು ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸವನ್ನು ಪ್ರದರ್ಶಿಸುವ ಅನೇಕ ಪ್ರಸಿದ್ಧ ತಾಣಗಳನ್ನು ಹೊಂದಿದೆ. ಹೆಚ್ಚಿನ ಸ್ಥಳಗಳು ಕಡಿಮೆ ಪ್ರವೇಶ ಶುಲ್ಕವನ್ನು ಹೊಂದಿವೆ ಅಥವಾ ಉಚಿತ ಪ್ರವೇಶವನ್ನು ನೀಡುತ್ತವೆ.
ಹಿಂದೂ ಸಂತ ಸ್ವಾಮಿ ವಿವೇಕಾನಂದರ ಗೌರವಾರ್ಥವಾಗಿ ನಿರ್ಮಿಸಲಾದ ವಿವೇಕಾನಂದ ರಾಕ್ ಮೆಮೋರಿಯಲ್‌ ಗೆ ಹೋಗಲು ದೋಣಿಯಲ್ಲಿ ತೆರಳಬೇಕು. ಈಲ್ಲಿ ಅದ್ಭುತವಾದ ನೋಟಗಳಲ್ಲದೆ, ಧ್ಯಾನ ಮಂದಿರಕ್ಕೂ ಭೇಟಿ ನೀಡಬಹುದು.

ಪ್ರಾಚೀನ ತಮಿಳು ಕವಿ ತಿರುವಳ್ಳುವರ್ ಅವರನ್ನು ಗೌರವಿಸುವ ತಿರುವಳ್ಳುವರ್ ಪ್ರತಿಮೆ ಕನ್ಯಾಕುಮಾರಿ ಕರಾವಳಿಯ ಹೊರವಲಯದಲ್ಲಿದೆ. ಈ ಬೃಹತ್ ರಚನೆಯು ನಿಮ್ಮ ಬಜೆಟ್ ಅನ್ನು ಮೀರಿಸುವುದಿಲ್ಲ. ಅಲ್ಲದೇ ಅತ್ಯಂತ ಸುಂದರ ದೃಶ್ಯಾವಳಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ನೀಡುತ್ತದೆ.


ಪ್ರಕೃತಿಯ ನಡುವೆ ಸುಂದರ ಸಮಯ

ಕನ್ಯಾಕುಮಾರಿಯಲ್ಲಿ ಸುಂದರವಾದ ಪ್ರಕೃತಿಕ ತಾಣಗಳಿಗೆ ಕೊರತೆಯಿಲ್ಲ, ಆದ್ದರಿಂದ ಪ್ರಕೃತಿ ಪ್ರಿಯರು ಇಲ್ಲಿ ಉತ್ತಮ ಸಮಯವನ್ನು ಕಳೆಯಬಹುದು. ಈ ಪ್ರದೇಶವು ಸುಂದರವಾದ ಕಡಲತೀರಗಳಿಂದ ಹಿಡಿದು ಸೊಂಪಾದ ಭೂದೃಶ್ಯಗಳವರೆಗೆ ಎಲ್ಲವನ್ನೂ ನೀಡುತ್ತದೆ.

ಕನ್ಯಾಕುಮಾರಿ ಬೀಚ್ ನಲ್ಲಿ ಸೂರ್ಯನ ಸ್ನಾನ ಅಥವಾ ಸಮುದ್ರದಲ್ಲಿ ಈಜಲು ಕೆಲವು ಗಂಟೆಗಳ ಕಾಲ ಕಳೆಯಬಹುದು. ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವರ್ ಪ್ರತಿಮೆಯನ್ನು ನೋಡುತ್ತಾ ಧ್ಯಾನ ಮಗ್ನರಾಗಿ ಕುಳಿತುಕೊಳ್ಳಬಹುದು. ಕನ್ಯಾಕುಮಾರಿಯಿಂದ ಸುಮಾರು 13 ಕಿಲೋಮೀಟರ್ ದೂರದಲ್ಲಿರುವ ಸುಚಿಂದ್ರಂ ದೇವಸ್ಥಾನದ ಕೊಳ ಪ್ರಶಾಂತ ವಾತಾವರಣದ ಮಧ್ಯ ಇದೆ. ಪುರಾತನ ದೇವಾಲಯಗಳಿಂದ ಆವೃತವಾಗಿದೆ. ಇದು ಸುಮ್ಮನೆ ನಡಿಗೆ, ಧ್ಯಾನಕ್ಕಾಗಿ ಸೂಕ್ತ ಅವಕಾಶವನ್ನು ಕಲ್ಪಿಸುತ್ತದೆ.

ವೈಭವದ ಸಾಂಸ್ಕೃತಿಕ ಪರಂಪರೆ

ಕನ್ಯಾಕುಮಾರಿ ನಗರವು ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯ ಒಳನೋಟವನ್ನು ನೀಡುತ್ತದೆ. ಕನ್ಯಾಕುಮಾರಿ ಅಮ್ಮನ್ ದೇವಸ್ಥಾನಕ್ಕೆ ದೇಶದ ವಿವಿಧ ಭಾಗಗಳಿಂದ ಯಾತ್ರಿಕರನ್ನು ಆಹ್ವಾನಿಸುತ್ತದೆ. ದೇವಾಲಯದ ಎತ್ತರದ ಗೋಪುರ, ಸಂಕೀರ್ಣವಾದ ಕೆತ್ತಿದ ಕಂಬಗಳು ಈ ಪ್ರದೇಶದಲ್ಲಿ ಅನುಸರಿಸುವ ಸಂಪ್ರದಾಯಗಳು, ಆಚರಣೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತದೆ.


ಇದನ್ನೂ ಓದಿ: Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

ಸ್ಥಳೀಯ ಖಾದ್ಯ ರುಚಿ

ಬಜೆಟ್ ಸ್ನೇಹಿ ಕರಕುಶಲ ವಸ್ತುಗಳು, ಸಾಂಪ್ರದಾಯಿಕ ಕಲಾಕೃತಿಗಳನ್ನು ಇಲ್ಲಿ ಖರೀದಿ ಮಾಡಬಹುದು, ಜೊತೆಗೆ ಸ್ಥಳೀಯ ತಿನಿಸುಗಳು, ಸಮುದ್ರಾಹಾರ ತಿಂಡಿಗಳು, ಬಾಳೆಹಣ್ಣು ಚಿಪ್ಸ್, ತೆಂಗಿನಕಾಯಿ ಸಿಹಿತಿಂಡಿಗಳು ಕೈಗೆಟಕುವ ದರದಲ್ಲಿ ಲಭ್ಯವಾಗುತ್ತದೆ.

Continue Reading

ಪ್ರವಾಸ

Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ. ಈ ಎಂಟು ಅದ್ಭುತ ಹಳ್ಳಿಗಳ ಪರಿಚಯ ಇಲ್ಲಿದೆ.

VISTARANEWS.COM


on

Summer Tour
Koo

ಪ್ರವಾಸಗಳನ್ನು ಇಷ್ಟಪಡುವ ಮಂದಿಯಲ್ಲಿ ಎರಡು ಬಗೆಯ ಮಂದಿಯಿರುತ್ತಾರೆ. ಒಂದು ಬಗೆಯವರಿಗೆ ಪ್ರವಾಸವನ್ನು ಎಂಜಾಯ್‌ ಮಾಡಿ, ತಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷವಾಗಿ ಕಾಲ ಕಳೆದು, ಐಷಾರಾಮಿ ಹೊಟೇಲುಗಳಲ್ಲಿ ಇದ್ದು, ರಿಲ್ಯಾಕ್ಸ್‌ ಆಗಿ ಸಮಯ ಕಳೆದುಕೊಂಡು ಮಜಾ ಮಾಡಿಕೊಂಡು ಬರುವವರಾದರೆ, ಇನ್ನೊಂದು ವರ್ಗ, ಜನಜಂಗುಳಿಯಿಂದ ದೂರವಿದ್ದು, ಶಾಂತವಾದ ನದೀತೀರದಲ್ಲೋ, ಬೆಟ್ಟದ ತಪ್ಪಲಲ್ಲೋ, ಪರ್ವತದ ಮೇಲಿನ ಒಂದು ಹಳ್ಳಿಯಲ್ಲೋ, ಒಂದಿಷ್ಟು ಸಮಾನ ಮನಸ್ಕರೊಂದಿಗೆ ಚಾರಣ ಮಾಡಿಯೋ ಸಮಯ ಕಳೆಯಲು ಇಷ್ಟ ಪಡುವ ಮಂದಿ. ಈ ಎರಡನೇ ವರ್ಗದ ಪ್ರವಾಸ ಪ್ರಿಯರಿಗೆ ಶಾಂತವಾಗಿ ಸಮಯ ಕಳೆಯಲು ಭಾರತದಲ್ಲಿ ಬೇಕಾದಷ್ಟು ಸ್ಥಳಗಳಿವೆ. ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ.

Sikkim

ಝುಲುಕ್, ಸಿಕ್ಕಿಂ

ಪೂರ್ವ ಸಿಕ್ಕಿಂನ ಝುಲುಕ್‌ ಎಂಬ ಹಳ್ಳಿ ಭಾರತದ ಅತ್ಯಂತ ಪುರಾತನವಾದ ಸಿಲ್ಕ್‌ ರೂಟ್‌ ಹಾದಿಯಲ್ಲಿ ಸಿಗುವ ಹಳ್ಳಿಗಳಲ್ಲಿ ಒಂದು. ಮೇ ತಿಂಗಳಲ್ಲಿ ಆಗಸವೂ ತಿಳಿಯಾಗಿದ್ದು, ಹಿತವಾದ ಚಳಿಯೂ ಆವರಿಸಿರುವ, ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸಮಯ. ಸಾಲು ಸಾಲು ಹಿಮಬೆಟ್ಟಗಳಿಂದ ಆವೃತವಾದ ಹಿಮಾಲಯದ ಮನಮೋಹಕ ದೃಶ್ಯಗಳನ್ನು ಈ ಹಳ್ಳಿಯಲ್ಲಿದ್ದುಕೊಂಡು ಆಸ್ವಾದಿಸುತ್ತಾ ಸಮಯ ಕಳೆಯಬಹುದು.

Chitkool, Himachal Pradesh

ಚಿತ್ಕೂಲ್‌, ಹಿಮಾಚಲ ಪ್ರದೇಶ

ಭಾರತ ಚೀನಾ ಗಡಿಯಲ್ಲಿರುವ ಜನರ ವಸತಿಯಿರುವ ಕೊನೆಯ ಹಳ್ಳಿ ಚಿತ್ಕೂಲ್‌. ಕಿನೌರ್‌ ಜಿಲ್ಲೆಯ ಅತ್ಯಂತ ಸುಂದರವಾದ ಹಿಮಾಲಯದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾದ ಜಾಗವಿದು. ಹಿಮಾಚಲ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು, ಅಲ್ಲಿನ ಜನಜೀವನ, ಆಹಾರ ಇತ್ಯಾದಿಗಳೆಲ್ಲವುಗಳ ಪರಿಚಯ ಮಾಡಿಕೊಂಡು, ಅದ್ಭುತ ದೃಶ್ಯಗಳನ್ನೂ ಕಂಡು ಆನಂದಿಸಬಹುದು.

Naggar, Himachal Pradesh

ನಗ್ಗರ್‌, ಹಿಮಾಚಲ ಪ್ರದೇಶ

ಹಳೆಯ ದೇವಸ್ಥಾನಗಳು, ಅರಮನೆಗಳು, ಕಟ್ಟಡಗಳು ಇತ್ಯಾದಿಗಳಿರುವ ನಗ್ಗರ್‌ ಎಂಬ ಹಳ್ಳಿ ಮನಾಲಿಯಂತಹ ಕಿಕ್ಕಿರಿದು ತುಂಬಿರುವ ಪ್ರವಾಸಿಗಳಿಂದ ಮುಕ್ತವಾಗಿದೆ. ಜೊತೆಗೆ ಇಲ್ಲಿಂದ ಕಾಣುವ ಹಿಮಾಲಯದ ಪರ್ವತಶ್ರೇಣಿಗಳ ಸುಂದರ ದೃಶ್ಯ ನೆಮ್ಮದಿಯನ್ನು ಅರಸಿ ಬರುವ ಮಂದಿಗೆ ಹೇಳಿ ಮಾಡಿಸಿದ್ದು.

Pelling, Sikkim

ಪೆಲ್ಲಿಂಗ್‌, ಸಿಕ್ಕಿಂ

ಕಾಂಚನಜುಂಗಾದ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪೆಲ್ಲಿಂಗ್‌ ಎಂಬ ಸಿಕ್ಕಿಂನ ಪುಟ್ಟ ಊರು ಒಳ್ಳೆಯ ತಾಣ. ಶಾಂತಿಯುತವಾದ ಜಾಗವನ್ನರಸಿ ಬರುವ ಮಂದಿಗೆ ಪೆಲ್ಲಿಂಗ್‌ ಬಹಳ ಇಷ್ಟವಾಗಬಹುದು.

Malana, Himachal Pradesh

ಮಲಾನಾ, ಹಿಮಾಚಲ ಪ್ರದೇಶ

ಮಲಾನಾ ಎಂಬ ಪುಟ್ಟ ಹಳ್ಳಿ ಹಿಮಾಚಲ ಪ್ರದೇಶದ ಕಸೋಲ್‌ ಸಮೀಪದಲ್ಲಿರುವ ಹಳ್ಳಿ. ಇದು ತನ್ನ ವಿಶಿಷ್ಟ ಸಂಸೃತಿ ಹಾಗೂ ಆಚರಣೆಯ ವಿಶೇಷತೆಗಳನ್ನು ಹೊಂದಿರುವ ಸುಂದರ ತಾಣ. ಪಾರ್ವತಿ ಕಣಿವೆಯ ಮನಮೋಹಕ ಹಿಮಾಲಯದ ಸೌಂದರ್ಯವನ್ನು ಇದು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

Zero, Arunachal Pradesh

ಝೀರೋ, ಅರುಣಾಚಲ ಪ್ರದೇಶ

ಅತ್ಯದ್ಭುತ ಪ್ರಕೃತಿ ಸೌಂದರ್ಯ, ಭತ್ತದ ಗದ್ದೆಗಳು, ಹಳೆಯ ಮರದ ಮನೆಗಳು ಇತ್ಯಾದಿಗಳಿಂದ ಮನಮೋಹಕವಾಗಿ ಕಾಣುವ ಝೀರೋ ಎಂಬ ಅರುಣಾಚಲ ಪ್ರದೇಶದ ಹಳ್ಳಿ ಪರಿಸರ ಪ್ರಿಯರು ಖಂಡಿತ ಇಷ್ಟಪಡಬಹುದಾದ ಹಾಗಿದೆ.

Mawlynnong, Meghalaya

ಮಾವ್ಲಿನಾಂಗ್‌, ಮೇಘಾಲಯ

ಪೂರ್ವ ಖಾಸಿ ಬೆಟ್ಟ ಪ್ರದೇಶಗಳಲ್ಲಿರುವ ಮೇಘಾಲಯದ ಈ ಪುಟ್ಟ ಹಳ್ಳಿಯ ಅಪರೂಪದ ಸಂಸ್ಕೃತಿ, ಶಿಸ್ತುಬದ್ಧ ಜೀವನ, ಸ್ವಚ್ಛತೆ ಎಲ್ಲವನ್ನೂ ನೋಡಲೇಬೇಕು. ನಗರದ ಮಂದಿ ಖಂಡಿತವಾಗಿಯೂ ಈ ಹಳ್ಳಿಯ ಜನರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಬೇರಿನಿಂದ ಮಾಡಲ್ಪಟ್ಟ ಸೇತುವೆಗಳು ಇಲ್ಲಿನ ವಿಶೇಷತೆ.

ಇದನ್ನೂ ಓದಿ: Summer Travel Fashion Tips: ಬೇಸಿಗೆ ಪ್ರವಾಸದ ವೇಳೆ ಯುವತಿಯರು ಗಮನಿಸಲೇಬೇಕಾದ 5 ಸಂಗತಿಗಳು

Continue Reading

ಪ್ರವಾಸ

Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

Porbandar Tour: ರಾಷ್ಟ್ರಪಿತ ಮಹಾತ್ಮಗಾಂಧಿಯವರ ಜನ್ಮಸ್ಥಳವಾಗಿರುವ ಪೋರ್ ಬಂದರ್ ಇತಿಹಾಸದ ಹಿನ್ನಲೆಯಿರುವ ಸ್ಥಳವಾಗಿದೆ. ಇದು ಗುಜರಾತ್ ರಾಜ್ಯದಲ್ಲಿದೆ. ರಜಾ ದಿನಗಳಲ್ಲಿ ಗುಜರಾತ್ ಗೆ ಪ್ರಯಾಣ ಮಾಡಬೇಕು ಎಂದು ಬಯಸುವವರು ಒಮ್ಮೆ ಪೋರ್ ಬಂದರಿಗೆ ಭೇಟಿ ನೀಡಿ. ಪೋರ್ ಬಂದರ್ ನ ಪ್ರಮುಖ ಸ್ಥಳಗಳ ಪರಿಚಯ ಇಲ್ಲಿದೆ.

VISTARANEWS.COM


on

Porbandar Tour
Koo

ಗುಜರಾತ್: ಕರಾವಳಿ ನಗರವಾದ ಪೋರ್ ಬಂದರ್ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಜನ್ಮಸ್ಥಳವಾಗಿದೆ. ಇತಿಹಾಸದ ಹಿನ್ನೆಲೆಯಿರುವ ಈ ಸ್ಥಳ ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತದೆ. ಇದು ಗುಜರಾತ್ ರಾಜ್ಯದಲ್ಲಿದೆ. ರಜಾ ದಿನಗಳಲ್ಲಿ ಗುಜರಾತ್ ಗೆ ಪ್ರಯಾಣ ಮಾಡಬೇಕು ಎಂದು ಬಯಸುವವರು ಒಮ್ಮೆ ಪೋರ್ ಬಂದರಿಗೆ (Porbandar Tour) ಭೇಟಿ ನೀಡಿ. ಇಲ್ಲಿನ ಅದ್ಭುತ ಸ್ಥಳಗಳನ್ನು ಆನಂದಿಸಿ.

Porbandar Tour

ಕೀರ್ತಿ ಮಂದಿರ

ಇದು ರಾಷ್ಟ್ರಪಿತ ಮಹಾತ್ಮಗಾಂಧಿಯವರ ನೆನಪಿಗಾಗಿ ನಿರ್ಮಿಸಿದ ಸ್ಮಾರಕವಾಗಿದೆ. ಇದು ಪೋರ್ ಬಂದರಿನಲ್ಲಿದೆ. ಇದು ಪೋರ್ ಬಂದರಿನ ಮೊದಲ ಹೆಗ್ಗುರುತಾಗಿದೆ. ಗಾಂಧೀಜಿಯವರ ಸೋದರಳಿಯನಿಂದ ನಿರ್ಮಿಸಲ್ಪಟ್ಟ ಈ ಸ್ಮಾರಕದಲ್ಲಿ ಗಾಂಧಿಯವರ ಅಸಾಧಾರಣ ಜೀವನವನ್ನು ವಿವರಿಸುವ ವಸ್ತು ಸಂಗ್ರಹಾಲಯ, ದೇವಾಲಯ, ಉದ್ಯಾನಗಳನ್ನು ಹೊಂದಿದೆ.

Porbandar Tour

ಪೋರ್ ಬಂದರ್ ಬೀಚ್

ವಿಶ್ರಾಂತಿ ಪಡೆಯಲು ಬಯಸುವವವರು ಈ ಸ್ಥಳಕ್ಕೆ ಭೇಟಿ ನೀಡಬಹುದು. ಇಲ್ಲಿ ಚಿನ್ನದಂತೆ ಹೊಳೆಯುವ ಮರಳುಗಳು, ಸೌಮ್ಯವಾದ ಅಲೆಗಳು ಮತ್ತು ಕಣ್ಮನ ಸೆಳೆಯುವ ಸೂರ್ಯೋದಯವನ್ನು ಇಲ್ಲಿ ಆನಂದಿಸಬಹುದು. ಇಲ್ಲಿ ನಡೆದಾಡುವ ಮೂಲಕ ತಾಜಾ ಗಾಳಿಯನ್ನು ಉಸಿರಾಡಬಹುದು. ಹಾಗೇ ಇಲ್ಲಿ ಮೀನುಗಾರರು, ಒಂಟೆಗಳು ಸುತ್ತಾಡುತ್ತಿರುತ್ತದೆ. ಡೌನ್ ಚೌಪಟ್ಟಿರಸ್ತೆಯ ಮಾದರಿ ಖಾದ್ಯಗಳಾದ ಮೆಥಿ ಗೋಟಾ ಬಜ್ಜಿಗಳನ್ನು ಬಣ್ಣ ಬಣ್ಣದ ಬಲ್ಪ್ ಗಳಿಂದ ಅಲಂಕರಿಸಿದ ಸ್ಟಾಲ್ ಗಳಲ್ಲಿ ಮಾರಾಟ ಮಾಡಲಾಗುತ್ತದೆ.

Porbandar Tour

ಸುದಾಮ ಮಂದಿರ

ಪೋರ್ ಬಂದರಿನ ಸಿಟಿ ಸೆಂಟರ್ ನಲ್ಲಿ ಕಂಡುಬರುವ ಈ ಪುರಾತನ ದೇವಾಲಯದಲ್ಲಿ ಹಿಂದೂ ದೇವರಾದ ಕೃಷ್ಣನ ಜೊತೆ ಆತನ ಬಾಲ್ಯದ ಸ್ನೇಹಿತ ಸುದಾಮನನ್ನು ಪೂಜಿಸಲಾಗುತ್ತದೆ. ಹಾಗೇ ಇಲ್ಲಿ ಕೃಷ್ಣ ಆತನ ಪತ್ನಿ ರುಕ್ಮಿಣಿ , ಸ್ನೇಹಿತ ಸುದಾಮ ಮತ್ತು ಸಹೋದರ ಬಲರಾಮನನ್ನು ಗೌರವಿಸಲಾಗುತ್ತದೆ. ಗುರುಕುಲದಲ್ಲಿ ಕೃಷ್ಣ –ಸುದಾಮರು ಒಟ್ಟಿಗೆ ಕಳೆದ ಸಮಯವನ್ನು ಚಿತ್ರಿಸುವ ಭಿತ್ತಿ ಚಿತ್ರಗಳನ್ನು ಗೋಡೆಗಳ ಮೇಲೆ ಬರೆಯಲಾಗಿದೆ.

Porbandar Tour

ಪೋರ್ ಬಂದರ್ ಚೌಪಟ್ಟಿ

ರೋಮಾಂಚಕವಾದ ಚೌಪಟ್ಟಿ ಬೀಚ್ ನಲ್ಲಿ ವಾಯು ವಿಹಾರ ಮಾಡುವಾಗ ಸ್ಥಳೀಯ ಖಾದ್ಯಗಳ ರುಚಿ ಮತ್ತು ಹಬ್ಬದ ಸಂಭ್ರಮವನ್ನು ನೀವು ಆನಂದಿಸದೆ ಇರಲಾಗುವುದಿಲ್ಲ. ದೀಪಗಳಿಂದ ಅಲಂಕಾರಗೊಂಡ ಮಳಿಗೆಗಳಲ್ಲಿ ಧೋಕ್ಲಾಗಳು, ಖಾಂಡ್ವಿಗಳು ಮತ್ತು ಹುರಿದ ಮಸಾಲೆಯುಕ್ತ ತಿಂಡಿಗಳಂತಹ ಪ್ರಮುಖ ವಸ್ತುಗಳನ್ನು ಮಾರಾಟ ಮಾಡಲಾಗುತ್ತದೆ. ಚೌಪಟ್ಟಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತದೆ. ವಿಶೇಷವಾಗಿ ಇಲ್ಲಿ ಗಾಳಿಪಟವನ್ನು ಹಾರಿಸುವ ಉತ್ಸವ ನಡೆಯುತ್ತದೆ.

ತಾರಾ ಮಂದಿರ ತಾರಾಲಯ

1972ರಲ್ಲಿ ಪ್ರಧಾನಿ ಇಂದಿರಾ ಗಾಂಧಿಯವರು ಈ ತಾರಾಲಯವನ್ನು ಉದ್ಘಾಟಿಸಿದರು. ಇಲ್ಲಿ ಖಗೋಳಶಾಸ್ತ್ರ, ಪ್ರದರ್ಶನದ ಬಗ್ಗೆ ಉತ್ತಮ ಮಾಹಿತಿಯನ್ನು ನೀಡಲಾಗುತ್ತದೆ. ಇಲ್ಲಿ ಗ್ರಹಣದಿಂದ ನಕ್ಷತ್ರ ಪುಂಜಗಳವರೆಗೆ ಕಾಸ್ಮಿಕ್ ವಿದ್ಯಮಾನಗಳನ್ನು ವಿವರಿಸುವ ಪ್ರದರ್ಶನಗಳನ್ನು ಡಿಜಿಟಲ್ ಆಗಿ ಪ್ರದರ್ಶಿಸಲು ಸುಧಾರಿತ ತಂತ್ರಜ್ಞಾನವನ್ನು ಬಳಸಲಾಗುತ್ತದೆ.

Porbandar Tour

ಭಾರತ್ ಮಂದಿರ

19ನೇ ಶತಮಾನದ ಈ ದೇವಾಲಯವು ಭಾರತವನ್ನು ಗೌರವಿಸುತ್ತದೆ. ಪುರಾಣಗಳಲ್ಲಿ ಭಗವಾನ್ ರಾಮನ ಸದ್ಗುಣಗಳನ್ನು ಕಂಡು ಹಿಂದೂಗಳು ರಾಮನನ್ನು ಆದರ್ಶವಾಗಿ ಕಾಣುತ್ತಾರೆ. ಹಾಗಾಗಿ ಈ ದೇವಾಲಯದಲ್ಲಿ ರಾಮಾಯಣದ ದೃಶ್ಯಗಳನ್ನು ಕೆತ್ತಲಾಗಿದೆ. ಇಲ್ಲಿ ಸ್ವರ್ಣ ಲೇಪಿತ ಗುಮ್ಮಟಗಳು, ಲ್ಯಾಟಿಸ್ಡ್ ಗೋಡೆಗಳು ಮತ್ತು ಸ್ತಂಭದ ಮಂಟಪ ಸಭಾಂಗಣಗಳು ದೂರ ದೂರದಿಂದ ಭಕ್ತರನ್ನು ಆಕರ್ಷಿಸುತ್ತದೆ.

Porbandar Tour

ನೆಹರು ತಾರಾಲಯ

ಖಗೋಳಶಾಸ್ತ್ರದ ಬಗ್ಗೆ ಮನೋರಂಜನೆಯನ್ನು ನೀಡುವಂತಹ ಪೋರ್ ಬಂದರ್ ನ ಈ ತಾರಾಲಯ ನಕ್ಷತ್ರಾಕಾರದಲ್ಲಿದೆ. ಇಲ್ಲಿ ಭೂಮಿಯ ಆಚೆಗಿನ ರಹಸ್ಯಗಳನ್ನು ಅನ್ವೇಷಿಸುವ ಹೈಟೆಕ್ ಪ್ರದರ್ಶನಗಳನ್ನು ನೀಡುತ್ತದೆ. ಆಧುನಿಕ ಗ್ಯಾಜೆಟ್ರಿಯೊಂದಿಗೆ ಸುಸಜ್ಜಿತವಾದ 40 ಅಡಿಗಳ ಅರ್ಧಗೋಳದ ಥಿಯೇಟರ್ ಒಳಗೆ ಡಿಜಿಟೈಸ್ಡ್ ಆಕಾಶದಲ್ಲಿ ಶೂಟಿಂಗ್ ಸ್ಟಾರ್ ಗಳು ಪ್ರಜ್ವಲಿಸುತ್ತಿರುವುದನ್ನು ಇಲ್ಲಿ ನೋಡಬಹುದು.

Porbandar Tour

ಪೋರ್ ಬಂದರ್ ಪಕ್ಷಿಧಾಮ

ಅಪರೂಪದ ಜಲವಾಸಿಗಳನ್ನೊಳಗೊಂಡ ಈ ಅಭಯಾರಣ್ಯಕ್ಕೆ ಪ್ರಕೃತಿ ಪ್ರೇಮಿಗಳು ಭೇಟಿ ನೀಡಬಹುದು. ಪೋರ್ ಬಂದರ್ ನಿಂದ ಕೇವಲ 2ಕಿಮೀ ದೂರದಲ್ಲಿರುವ ಇದು ಮ್ಯಾಂಗ್ರೋವ್ ಗಳನ್ನು ರಕ್ಷಣೆ ನೀಡುತ್ತದೆ ಮತ್ತು ವರ್ಷದಲ್ಲಿ ಸುಮಾರು 200 ಪಕ್ಷಿ ಪ್ರಭೇದಗಳಿಗೆ ಆಶ್ರಯ ನೀಡುತ್ತದೆ. ಇಲ್ಲಿ ಸುಂದರವಾದ ಭೂದೃಶ್ಯಗಳು ಮತ್ತು ತಾಜಾ ಗಾಳಿಯು ನಿಮಗೆ ಹೆಚ್ಚು ಸಂತೋಷವನ್ನು ನೀಡುತ್ತದೆ.

Continue Reading

ಕರ್ನಾಟಕ

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

VISTARANEWS.COM


on

Wonderla Bengaluru
Koo

ಬೆಂಗಳೂರು: ಈ ಬೇಸಿಗೆಯ ಮಜವನ್ನು ಇನ್ನಷ್ಟು ಹೆಚ್ಚಿಸಲು ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ಲಾ (Wonderla Bengaluru) ಬೆಂಗಳೂರು ಪಾರ್ಕ್‌ನಲ್ಲಿ ‘ಸಮ್ಮರ್‌ಲಾ ಫಿಯೆಸ್ಟಾ’ (Summer Fiesta 2024) ನಡೆಸುತ್ತಿದ್ದು, ಮೇ 31 ರವರೆಗೂ ಇರಲಿದೆ. ಸಮ್ಮರ್‌ಲಾ ಫಿಯೆಸ್ಟಾದಲ್ಲಿ ಸಾಕಷ್ಟು ಆಫರ್‌ಗಳು ನಿಮ್ಮನ್ನು ಕೈ ಬೀಸಿ ಕರೆಯುತ್ತಿದ್ದು, ಅನೇಕ ಮೋಜಿನ ರೈಡ್‌, ವಾಟರ್‌ ಗೇಮ್‌ಗಳು, ಫುಡ್‌-ಫೆಸ್ಟಿವಲ್‌, ಡಿಜೆ ಮ್ಯೂಸಿಕ್‌ ಸೇರಿದಂತೆ ಅನೇಕ ವಿಶೇಷತೆಗಳು ಈ ಸಮ್ಮರ್‌ಲಾದಲ್ಲಿ ಇರಲಿವೆ. ಇದಲ್ಲದೆ, ಡೊಳ್ಳು ಕುಣಿತ, ಚಿಂಗಾರಿ ಮೇಳಗಳಂತಹ ವಿಶೇಷ ಸಾಂಸ್ಕೃತಿಕ ಪ್ರದರ್ಶನ ಹಾಗೂ ಮೆರವಣಿಗೆ ಇರಲಿವೆ. ವಾರಾಂತ್ಯದಲ್ಲಿ ನಿಮ್ಮನ್ನು ಇನ್ನಷ್ಟು ಉತ್ಸಾಹಿಗಳನ್ನಾಗಿ ಮಾಡಲು ಡಿಜೆ ಮ್ಯೂಸಿಕ್‌ ಸಹ ಆಯೋಜಿಸಲಾಗುತ್ತಿದೆ.

ಇನ್ನು ಭಾನುವಾರದಂದು ವಂಡರ್‌ಲಾ ರೆಸಾರ್ಟ್‌ನಲ್ಲಿ ಬೇಸಿಗೆಯ ಬ್ರಂಚ್‌ ಸಹ ಇರಲಿದೆ. ಈ ಎಲ್ಲಾ ಮನರಂಜನೆಗಳ ಮೇಲೂ ಸಾಕಷ್ಟು ರಿಯಾಯಿತಿ ಹಾಗೂ ಆಫರ್‌ಗಳು ಇದ್ದು, ಆಸಕ್ತರು ಭಾಗಿಯಾಗಿ ಈ ಬೇಸಿಗೆ ರಜೆಯನ್ನು ಇನ್ನಷ್ಟು ಸಂತಸದಿಂದ ಕಳೆಯಬಹುದು. ಈ ಎಲ್ಲಾ ಇತರ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳಿಲ್ಲಿ ಲಭ್ಯವಿರಲಿದೆ. ಪಾರ್ಕ್‌ನಲ್ಲಿ ಈಗ ಲಭ್ಯವಿರುವ ಹೊಸ ವಿಶೇಷ ಪಾನೀಯ ಕೌಂಟರ್‌ಗಳೊಂದಿಗೆ ಈ ಬೇಸಿಗೆಯ ಶಾಖವನ್ನು ತಣಿಸಲು ತಾಜಾ ಹಣ್ಣಿನ ಜ್ಯೂಸ್‌ಗಳು, ಋತುವಿನ ಅತ್ಯುತ್ತಮ ಆಮ್ರಾಸ್‌, ತಂಪಾದ ಮಜ್ಜಿಗೆ ಮತ್ತು ಬೇಸಿಗೆಯ ಪಾನೀಯಗಳು ಲಭ್ಯವಿರಲಿದೆ.

ಇದನ್ನೂ ಓದಿ | E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

ಆಫರ್‌ಗಳ ವಿವರ ಇಲ್ಲಿದೆ

  • ವಂಡರ್‌ಲಾಗೆ ಭೇಟಿ ನೀಡಲು ಬಯಸುವವರಿಗೆ Early Bird ಹೆಸರಿನಲ್ಲಿ ಶೇ. 10ರಷ್ಟು ರಿಯಾಯಿತಿ ಸಿಗಲಿದೆ. ಈ ಕೊಡುಗೆ(Offer) ಪಡೆಯಲು ಮೂರು ದಿನಗಳ ಮುಂಚಿತವಾಗಿ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಬುಕ್‌ ಮಾಡಿಕೊಳ್ಳಬೇಕು.
  • ಜನ್ಮದಿನದ ಆಫರ್‌, ವಿಶೇಷವಾಗಿ ಮೇ ತಿಂಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವವರಿಗೆ 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಉಚಿತವಾಗಿ ಸಿಗಲಿದೆ.
  • ಇನ್ನು, ವಿದ್ಯಾರ್ಥಿಗಳಿಗಾಗಿ ಹಾಲ್ ಟಿಕೆಟ್ ಆಫರ್ ಸಹ ಚಾಲ್ತಿಯಲ್ಲಿದೆ. 2023-2024ರ ಶೈಕ್ಷಣಿಕ ವರ್ಷದ 10ನೇ, 11ನೇ ಮತ್ತು 12ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಮೂಲ ಪರೀಕ್ಷೆಯ ಹಾಲ್ ಟಿಕೆಟ್‌ಗಳನ್ನು ಪ್ರಸ್ತುತಪಡಿಸಿ ಪಾರ್ಕ್ ಪ್ರವೇಶ ಟಿಕೆಟ್‌ಗಳ ಮೇಲೆ ಶೇ. 35ರಷ್ಟು ರಿಯಾಯಿತಿಯನ್ನು ಪಡೆಯಬಹುದು.
  • ವಂಡರ್‌ಲಾ ಕಾಲೇಜು ವಿದ್ಯಾರ್ಥಿಗಳಿಗೆ (16-24 ವರ್ಷ ವಯಸ್ಸಿನವರು) ತಮ್ಮ ಕಾಲೇಜು ಐಡಿ ಕಾರ್ಡ್‌ಗಳನ್ನು ಪ್ರಸ್ತುತಪಡಿಸಿದರೆ ಶೇ. 25ರಷ್ಟು ರಿಯಾಯಿತಿ ಪಡೆಯಲಿದ್ದಾರೆ, ಜೊತೆಗೆ, ವಿದ್ಯಾರ್ಥಿಗಳು ಆಹಾರ ಆಯ್ಕೆಗಳನ್ನು ಒಳಗೊಂಡಿರುವ ಕಾಂಬೊ ಪ್ಯಾಕೇಜ್‌ಗಳನ್ನು ಸಹ ಪಡೆಯಬಹುದು. ಆರಂಭಿಕ ಅರ್ಲಿ ಬರ್ಡ್‌ ಕೊಡುಗೆಯನ್ನು ಹೊರತುಪಡಿಸಿ, ಎಲ್ಲಾ ಇತರ ಕೊಡುಗೆಗಳು ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳಿಗೆ ಮಾನ್ಯವಾಗಿರುತ್ತವೆ. ಅತಿಥಿಗಳು ತಮ್ಮ ವಂಡರ್ಲಾ ಸಮ್ಮರ್ಲಾ ಫಿಯೆಸ್ಟಾ ಭಾಗವಾಗಿ ಮೇ 31 ರವರೆಗೆ ಪ್ರತಿ ಶನಿವಾರ ನಡೆಯುವ ವಂಡರ್ಲಾ ವಿಶೇಷ ಪೂಲ್ ಪಾರ್ಟಿಗಳೊಂದಿಗೆ ಭಾಗವಹಿಸಬಹುದು.

ಈ ಕುರಿತು ಮಾತನಾಡಿದ ವಂಡರ್‌ಲಾ ಹಾಲಿಡೇಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ. ಚಿಟ್ಟಿಲಪ್ಪಿಳ್ಳಿ, ಬೇಸಿಗೆ ರಜೆಯನ್ನು ಇನ್ನಷ್ಟು ಉತ್ಸಾಹ ಭರಿತವನ್ನಾಗಿದಲು ವಂಡರ್‌ಲಾ “ಸಮ್ಮರ್ಲಾ ಫಿಯೆಸ್ಟಾ’ ಆಯೋಜಿಸಿದೆ. ಈ ಸಮ್ಮರ್ಲಾದಲ್ಲಿ ಇಡೀ ಕುಟುಂಬಗಳು, ಕಾಲೇಜು ಸ್ನೇಹಿತರು, ಮಕ್ಕಳು ಎಲ್ಲರೂ ತಮ್ಮ ಪ್ರೀತಿಪಾತ್ರರೊಂದಿಗೆ ಆಗಮಿಸಿ, ಆನಂದಿಸಬಹುದು.

ಸಮ್ಮರ್‌ಲಾ ಭಾಗವಾಗಿ ಫುಡ್‌ಫೆಸ್ಟಿವಲ್‌, ಸಾಂಸ್ಕೃತಿಕ ಮೆರವಣಿಗೆ, ಡಿಜೆ ಮ್ಯೂಸಿಕ್‌ ಸೇರಿದಂತೆ ಇನ್ನೂ ಅನೇಕ ಮನರಂಜನೆಗಳು ಇರಲಿವೆ. ಈ ಎಲ್ಲಾ ಮನರಂಜನೆಯೊಂದಿಗೆ ನಿಮ್ಮ ಸವಿನೆನಪನ್ನು ಅಚ್ಚಳಿಯದಂತೆ ಮಾಡುವುದೇ ನಮ್ಮ ವಂಡರ್‌ಲಾದ ಪ್ರಮುಖ ಉದ್ದೇಶ ಎಂದು ಹೇಳಿದರು.

ವಂಡರ್‌ಲಾ ಆನ್‌ಲೈನ್ ಪೋರ್ಟಲ್ ಮೂಲಕ ಅಥವಾ ನೇರವಾಗಿ ಪಾರ್ಕ್ ಕೌಂಟರ್‌ಗಳಲ್ಲಿ ಟಿಕೆಟ್‌ಗಳನ್ನು ಮುಂಗಡವಾಗಿ ಬುಕ್ ಮಾಡುವ ಮೂಲಕ ಸಮ್ಮರ್ಲಾವನ್ನು ಆನಂದಿಸಿ.

ಇದನ್ನೂ ಓದಿ | Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

ಹೆಚ್ಚಿನ ಮಾಹಿತಿ ಮತ್ತು ಬುಕಿಂಗ್‌ಗಳಿಗಾಗಿ, www.wonderla.com ಗೆ ಭೇಟಿ ನೀಡಿ ಅಥವಾ +91 80372 30333, +91 80350 73966 ಅನ್ನು ಸಂಪರ್ಕಿಸಿ.

Continue Reading
Advertisement
Prajwal Revanna Case Who leaked the pen drive Devaraje Gowda gives evidence to SIT
ಕ್ರೈಂ1 min ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ICSE Results 202
ಶಿಕ್ಷಣ3 mins ago

CISCE Results 2024: ಸಿಐಎಸ್‌ಸಿಇಯ 10 & 12ನೇ ತರಗತಿಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

MS Dhoni
ಕ್ರಿಕೆಟ್5 mins ago

MS Dhoni: ಧೋನಿಯ ಕ್ಲೀನ್​ ಬೌಲ್ಡ್​ ಕಂಡು ಬೇಸರಗೊಂಡ ಅಭಿಮಾನಿಗಳು; ವಿಡಿಯೊ ವೈರಲ್​

Viral News
ವೈರಲ್ ನ್ಯೂಸ್21 mins ago

Viral News: ಅವಳಿ-ತ್ರಿವಳಿ ಅಲ್ಲ.. ಏಕಕಾಲದಲ್ಲಿ ಐದು ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ

Kanyakumari Tour
ಪ್ರವಾಸ21 mins ago

Kanyakumari Tour: ತುಂಬಾ ದುಬಾರಿ ಏನಿಲ್ಲ, ನೀವೂ ಮಾಡಬಹುದು ಕನ್ಯಾಕುಮಾರಿ ಪ್ರವಾಸ

Cauvery Theatre bengaluru another single screen close
ಸಿನಿಮಾ32 mins ago

Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

Bomb Threat
ದೇಶ36 mins ago

Bomb Threat: ದೆಹಲಿ ಬಳಿಕ ಇದೀಗ ಅಹಮದಾಬಾದ್​ನ ಶಾಲೆಗಳಿಗೂ ಬಾಂಬ್​ ಬೆದರಿಕೆ

Lok Sabha Elections-2024
Lok Sabha Election 202443 mins ago

Lok Sabha Election 2024: ಘಟಾನುಘಟಿಗಳ ಸ್ಪರ್ಧೆ; ಮೇ 7ರ ಮೂರನೇ ಹಂತದ ಪೈಪೋಟಿಯ ಚಿತ್ರಣ ಇಲ್ಲಿದೆ

ICC Women’s T20 World Cup 2024
ಕ್ರೀಡೆ44 mins ago

ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಶ್ರೀಲಂಕಾ

Road Accident
ಕ್ರೈಂ45 mins ago

Road Accident : ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಮಂದಿಗೆ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ17 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ19 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ19 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌