Best Places to visit in August in India : ಆಗಸ್ಟ್‌ನಲ್ಲಿ ನೀವು ಪ್ರವಾಸ ಮಾಡಬಹುದಾದ ಸ್ಥಳಗಳಿವು… - Vistara News

ಪ್ರವಾಸ

Best Places to visit in August in India : ಆಗಸ್ಟ್‌ನಲ್ಲಿ ನೀವು ಪ್ರವಾಸ ಮಾಡಬಹುದಾದ ಸ್ಥಳಗಳಿವು…

ಆಗಸ್ಟ್‌ ತಿಂಗಳಲ್ಲಿ (Best Places to visit in August in India) ಪ್ರವಾಸ ಹೋಗುವುದಕ್ಕೆ ನೀವು ಯೋಜನೆ ಹಾಕಿಕೊಳ್ಳುತ್ತಿರಬಹುದು. ಆ ತಿಂಗಳಲ್ಲಿ ಯಾವ ಯಾವ ಸ್ಥಳಗಳಿಗೆ ಹೋಗುವುದು ಉತ್ತಮ ಎನ್ನುವುದರ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

tourist places to visit in august
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈಗ ಎಲ್ಲರಿಗೂ ಪ್ರವಾಸದ ಮೂಡ್‌. ನಿಮಗೂ ಕೂಡ ಎಲ್ಲಾದರೂ ಪ್ರವಾಸಕ್ಕೆ ಹೋಗಬೇಕು ಎನಿಸುತ್ತಿರಬಹುದು. ಮುಂದಿನ ತಿಂಗಳು, ಅಂದರೆ ಆಗಸ್ಟ್‌ನಲ್ಲಿ ಪ್ರವಾಸ ಮಾಡೋಣ ಎನ್ನುವ ಯೋಚನೆಯಲ್ಲಿ ನೀವಿರಬಹುದು. ಅದಕ್ಕಾಗಿಯೇ ನಾವಿಲ್ಲಿ ನಿಮಗಾಗಿ ವಿಶೇಷ ಮಾಹಿತಿಗಳೊಂದಿಗೆ ಬಂದಿದ್ದೇವೆ. ಆಗಸ್ಟ್‌ನಲ್ಲಿ ಪ್ರವಾಸ (Best Places to visit in August in India) ಮಾಡಬಹುದಾದ ಸ್ಥಳಗಳ ಬಗ್ಗೆ ಇಲ್ಲಿದೆ ಮಾಹಿತಿ.

ಲೋನಾವಾಲಾ

lonavala


ವಾಣಿಜ್ಯ ನಗರಿ ಮುಂಬೈನಲ್ಲಿರುವವರಿಗೆ ಸಮೀಪದ ಪ್ರಸಿದ್ಧ ಪ್ರವಾಸಿ ತಾಣವೆಂದರೆ ಅದು ಲೋನಾವಾಲಾ. ಜಲಪಾತಗಳು, ಸರೋವರಗಳು ಮತ್ತು ಬೆಟ್ಟಗಳಿರುವ ಸ್ಥಳವಿದು. ಇಲ್ಲಿ ನೀವು ಕ್ಯಾಂಪಿಂಗ್‌, ಟ್ರೆಕ್ಕಿಂಗ್‌ ಜತೆ ಹಲವು ಸಾಹಸ ಕ್ರೀಡೆಗಳನ್ನು ಆಡಬಹುದಾಗಿದೆ. ಭಾಜಾ ಗುಹೆಗಳು, ಬುಶಿ ಅಣೆಕಟ್ಟು, ಕಾರ್ಲಾ ಗುಹೆಗಳು, ರಾಜ್ಮಾಚಿ ಕೋಟೆ, ರೈವುಡ್ ಸರೋವರ ಇತ್ಯಾದಿಗಳು ಲೋನಾವಾಲಾದ ಜನಪ್ರಿಯ ಪ್ರವಾಸಿ ಆಕರ್ಷಣೆಗಳಾಗಿವೆ. ಇಲ್ಲಿನ ಅಮ್ಯೂಸ್‌ಮೆಂಟ್‌ ಪಾರ್ಕ್‌ ಮತ್ತು ವ್ಯಾಕ್ಸ್‌ ಮ್ಯೂಸಿಯಂ ಅನ್ನು ನೀವು ವೀಕ್ಷಿಸಲೇಬೇಕು. ವರ್ಷ ಪೂರ್ತಿ ಈ ಸ್ಥಳಕ್ಕೆ ನೀವು ಭೇಟಿ ನೀಡಬಹುದಾಗಿದೆ.

ವಯ್ನಾಡು

Wayanad


ಕೇರಳದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದು ವಯ್ನಾಡು. ಬೆಟ್ಟ ಗುಡ್ಡಗಳಿಂದ ಆವರಿಸಿಕೊಂಡಿರುವ ಈ ತಾಣ ಮಳೆಗಾಲದ ಸಮಯದಲ್ಲಂತೂ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುತ್ತದೆ. ಇಲ್ಲಿ ಟೀ, ಕಾಫಿ, ರಬ್ಬರ್‌ ಮತ್ತು ಹಲವು ಮಸಾಲೆ ಪದಾರ್ಥಗಳನ್ನು ಬೆಳೆಯುವ ತೋಟಗಳನ್ನು ನೀವು ಕಾಣಬಹುದು. ವಯ್ನಾಡಿನಲ್ಲಿ ಲೆಕ್ಕಕ್ಕೆ ಸಿಗದಷ್ಟು ವ್ಯೂವ್‌ ಪಾಯಿಂಟ್‌ಗಳಿದ್ದು, ಎಲ್ಲ ಸ್ಥಳಗಳಿಂದ ನೀವು ನಿಸರ್ಗ ದೇವತೆಯ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬಹುದು. ವಯ್ನಾಡಿಗೆ ಹೋದಾಗ ಅಲ್ಲಿನ ವನ್ಯಜೀವಿ ಅಭಯಾರಣ್ಯ, ಪೂಕೊಡೆ ಸರೋವರ, ಎಡಕ್ಕಲ್‌ ಗುಹೆ, ನೀಲಿಮಾಲಾ ವ್ಯೂವ್‌ ಪಾಯಿಂಟ್‌, ಮೀನ್ಮುಟ್ಟಿ ಜಲಪಾತ, ಬಾಣಾಸುರ ಸಾಗರ ಆಣೆಕಟ್ಟು, ಛೇಂಬ್ರಾ ಪೀಕ್‌ಗಳನ್ನು ನೋಡಲು ಮರೆಯದಿರಿ.

ಪಂಚಗನಿ

Panchgani

ಮಹಾರಾಷ್ಟ್ರದ ಪ್ರವಾಸಿ ತಾಣಗಳಲ್ಲಿ ಒಂದು ಪಂಚಗನಿ. ಪಂಚಗನಿ ಮಹಾಬಲೇಶ್ವರ ದೇಗುಲದ ಸಮೀಪದಲ್ಲಿರುವ ಜನಪ್ರಿಯ ಗಿರಿಧಾಮವಿದು. ಇಲ್ಲಿಂದ ಸೂರ್ಯೋದಯ ಮತ್ತು ಸೂರ್ಯಾಸ್ತವನ್ನು ನೋಡಬಹುದಾಗಿದೆ. ಭಾರೀ ಮಳೆ ಬೀಳುವ ಪ್ರದೇಶವಾಗಿರುವ ಈ ಸ್ಥಳ ಮಂಜಿನಿಂದ ಮುಚ್ಚಿಕೊಂಡಿರುತ್ತದೆ. ಆ ರೀತಿಯ ವಾತಾವರಣವನ್ನು ಇಷ್ಟಪಡುವವರು ಈ ಸ್ಥಳಕ್ಕೆ ಭೇಟಿ ನೀಡಬಹುದು. ಟ್ರೆಕ್ಕಿಂಗ್‌, ಪ್ಯಾರಾಗ್ಲೈಡಿಂಗ್, ಸ್ಟ್ರಾಬೆರಿ ಶಾಪಿಂಗ್ ಸೇರಿ ಅನೇಕ ಕೆಲಸಗಳನ್ನು ನೀವಿಲ್ಲಿ ಮಾಡಬಹುದು.

ಕನ್ಯಾಕುಮಾರಿ

Kanyakumari


ಭಾರತದ ದಕ್ಷಿಣ ದಿಕ್ಕಿನ ತುದಿಯಲ್ಲಿರುವ ನಗರ ಕನ್ಯಾಕುಮಾರಿ. ಇದು ಭಾರತದಲ್ಲಿ ಹೆಚ್ಚು ಪ್ರವಾಸಿಗರು ಹೋಗುವ ತಾಣವೂ ಹೌದು. ಅರೇಬಿಯನ್‌ ಸಮುದ್ರ, ಬಂಗಾಳ ಕೊಲ್ಲಿ ಮತ್ತು ಹಿಂದೂ ಮಹಾಸಾಗರ ಸಂಗಮವಾಗಿರುವ ಈ ಸ್ಥಳ ಮಳೆಗಾಲದಲ್ಲಿ ಇನ್ನಷ್ಟು ಚೆನ್ನಾಗಿ ಕಾಣಿಸಿಕೊಳ್ಳುತ್ತದೆ. ಈ ಸ್ಥಳದಲ್ಲಿ ಹಲವು ದೇವಸ್ಥಾನಗಳೂ ಇವೆ. ಕನ್ಯಾಕುಮಾರಿಯಲ್ಲಿ ವಿವೇಕಾನಂದ ಕಲ್ಲಿನ ಸ್ಮಾರಕ, ಥಿರುವಲ್ಲೂರು ಪ್ರತಿಮೆ, ಥಿರ್ಪಾರಪ್ಪು ಜಲಪಾತ, ಕುಮಾರಿ ಅಮ್ಮನ್‌ ದೇವಸ್ಥಾನ, ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ವಟ್ಟಕೋಟೈ ಕೋಟೆ ಮತ್ತು ಥನುಮಲಯನ್‌ ದೇವಸ್ಥಾನವಿದ್ದು, ಈ ಸ್ಥಳಗಳನ್ನು ನೀವು ಮರೆಯದೆ ಭೇಟಿ ಕೊಡಿ. ಮಳೆ ಹೆಚ್ಚಿರುವ ಕಾರಣ ಅಲೆಗಳ ಸೆಳೆತವೂ ಹೆಚ್ಚಿದ್ದು, ಕಡಲ ಕಿನಾರೆಯಲ್ಲಿ ಆದಷ್ಟು ಜಾಗೃತರಾಗಿರಿ.

ಕುಮಾರಕಮ್‌

Kumarakom

ಕೇರಳದ ವೆಂಬನಾಡ್‌ ಹೊಳೆ ದಡದಲ್ಲಿ ನಿಮಗೆ ಕುಮಾರಕಮ್‌ ಹೆಸರಿನ ಗ್ರಾಮ ಸಿಗುತ್ತದೆ. ಪ್ರಕೃತಿ ಮಾತೆಯೇ ಇಲ್ಲಿ ನೆಲೆಸಿರುವಂತೆ ನಿಮಗೆ ಕಂಡುಬರುತ್ತದೆ. ಈ ಹಳ್ಳಿಯಲ್ಲಿ ನಿಮಗೆ ವಿಶೇಷವಾಗಿ ಬೋಟ್‌ ಹೌಸ್‌ಗಳು ಸಿಗುತ್ತವೆ. ಅದರಲ್ಲೂ ಈ ಸಮಯದಲ್ಲಿ ಕುಮಾರಕಮ್‌ಗೆ ಪ್ರವಾಸ ಹೋಗುವವರ ಸಂಖ್ಯೆ ಕಡಿಮೆಯಿರುತ್ತದೆಯಾದ್ದರಿಂದ ಹೋಟೆಲ್‌ಗಳು ಬೆಲೆಯೂ ಕಡಿಮೆಯಿರುತ್ತದೆ. ಅದಲ್ಲದೆ ಬೋಟ್‌ ಹೌಸ್‌ ಕೂಡ ನಿಮಗೆ ಸುಲಭವಾಗಿ ಲಭ್ಯವಾಗುತ್ತದೆ. ಕುಮಾರಕಮ್‌ನಲ್ಲಿ ಪಕ್ಷಿಗಳ ಅಭಯಾರಣ್ಯವಿದೆ. ಹಾಗೆಯೇ ಅರುವಿಕ್ಕುಜಿ ಜಲಪಾತ, ಬೇ ಐಲ್ಯಾಂಡ್‌ ಡ್ರಿಫ್ಟ್‌ವುಡ್‌ ಮ್ಯೂಸಿಯಂ, ಕುಮಾರಕಂ ಕ್ರಾಫ್ಟ್‌ ಮ್ಯೂಸಿಯಂ ಎಲ್ಲವೂ ಸಮೀಪದಲ್ಲೇ ಇವೆ. ಇಲ್ಲಿ ಕೆಲವು ಆಯುರ್ವೇದಿಕ್‌ ಸ್ಪಾ ಕೂಡ ಇದ್ದು, ನೀವು ಆಯುರ್ವೇದಿಕ್‌ ಚಿಕಿತ್ಸೆಯನ್ನೂ ಪಡೆಯಬಹುದಾಗಿದೆ.

ಮೌಂಟ್‌ ಅಬು

Mount Abu

ರಾಜಸ್ಥಾನದ ಏಕೈಕ ಗಿರಿಧಾಮವೆಂದರೆ ಅದು ಮೌಂಟ್‌ ಅಬು. ಈ ಗಿರಿಧಾಮದಲ್ಲಿ ವೈವಿಧ್ಯಮಯ ಸಸ್ಯಗಳನ್ನು ಕಾಣಬಹುದು. ಶ್ರೀಮಂತ ಇತಿಹಾಸವನ್ನು ಹೊಂದಿರುವ ಈ ಸ್ಥಳದಲ್ಲಿ ನೀವು ಅತ್ಯಂತ ಅದ್ಭುತವಾದ ವಾಸ್ತುಶಿಲ್ಪವನ್ನು ನೋಡಬಹುದು. ಪ್ರಾಚೀನ ಕಟ್ಟಡಗಳಿರುವ ಈ ಸ್ಥಳದಲ್ಲಿ ಸಾಹಸಮಯ ಕ್ರೀಡೆಗಳಿಗೂ ಅವಕಾಶವಿದೆ. ಬೋಟಿಂಗ್, ಹೈಕಿಂಗ್‌, ಟ್ರೆಕ್ಕಿಂಗ್‌, ರಾಕ್‌ ಕ್ಲೈಂಬಿಂಗ್‌, ಕ್ಯಾಂಪಿಂಗ್‌ ಅನ್ನು ನೀವಿಲ್ಲಿ ಮಾಡಬಹುದು. ಹಾಗೆಯೇ ವಿಶೇಷ ರೀತಿಯ ವಸ್ತುಗಳ ಶಾಪಿಂಗ್‌ ಅನ್ನೂ ಮಾಡಬಹುದಾಗಿದೆ.

ಖಜುರಾಹೊ

khajuraho

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಖಜರಾಹೊ ದೇವಸ್ಥಾನದ ಸಂಕೀರ್ಣವಿದೆ. ಇದು ಯುನೆಸ್ಕೋ ಪಟ್ಟಿ ಮಾಡಿರುವ ದೇಗುಲಗಳ ಪಟ್ಟಿಯಲ್ಲೂ ಸೇರಿಕೊಂಡಿದೆ. ಆಧ್ಯಾತ್ಮದತ್ತ ಹೆಚ್ಚಿನ ಒಲವಿರುವವರಿಗೆ ಇದು ಹೇಳಿ ಮಾಡಿಸಿದ ಸ್ಥಳ ಎನ್ನಬಹುದು. ಅದರಲ್ಲೂ ಈ ಮಳೆಗಾಲದ ಸಮಯದಲ್ಲಿ ಇಲ್ಲಿಗೆ ಕಡಿಮೆ ಪ್ರಮಾಣದಲ್ಲಿ ಪ್ರವಾಸಿಗರು ಹೋಗುತ್ತಾರಾದ್ದರಿಂದ ನೀವು ಅರಾಮವಾಗಿ ದೇಗುಲವನ್ನು ಸುತ್ತಬಹುದು. ಇದು ಹಿಂದೂ ಮತ್ತು ಜೈನ ದೇಗುಲಗಳಿರುವ ಸಂಕೀರ್ಣವಾಗಿದೆ. ಈ ಸಂಕೀರ್ಣಕ್ಕೆ ಸಮೀಪದಲ್ಲಿ ರೆನೇಹ್‌ ಜಲಪಾತ, ಆದಿವಾಸಿ ಮತ್ತು ಜನಪದ ಕಲೆಗಳ ವಸ್ತು ಸಂಗ್ರಹಾಲಯ, ಗಂಗಾವ್‌ ಅಣೆಕಟ್ಟು, ಬೇನಿ ಸಾಗರ ಆಣೆಕಟ್ಟು, ಮಸ್ತಾನಿ ಮೆಹಲ್‌ ಇವೆ. ಈ ಎಲ್ಲ ಸ್ಥಳಗಳಿಗೆ ನೀವು ಭೇಟಿ ನೀಡಬಹುದು.

ಮುನ್ನಾರ್‌

Munnar


ದಕ್ಷಿಣ ಭಾರತದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದು ಮುನ್ನಾರ್‌. ಕೇರಳದಲ್ಲಿರುವ ಈ ತಾಣ ಇದರ ವಿಶೇಷ ವಾತಾವರಣಕ್ಕೆ, ಟೀ ಎಸ್ಟೇಟ್‌ಗಳಿಗೆ ಹೆಸರುವಾಸಿ. ಗುಡ್ಡಗಾಡುಗಳಲ್ಲಿ ಹಚ್ಚ ಹಸುರಾಗಿ ಬೆಳೆದು ನಿಂತ ಟೀ ಎಸ್ಟೇಟ್‌ಗಳನ್ನು ನೀವಿಲ್ಲಿ ಕಣ್ತುಂಬಿಸಿಕೊಳ್ಳಬಹುದು. ಇಲ್ಲಿ ಮಳೆ ಕೂಡ ಹೆಚ್ಚಾಗಿಯೇ ಸುರಿಯುವುದರಿಂದ ಮಳೆಗಾಲವನ್ನು ಇಷ್ಟಪಡುವವರಿಗೆ ಈ ಸ್ಥಳ ಇಷ್ಟವಾಗುತ್ತದೆ. ಇಲ್ಲಿಗೆ ಭೇಟಿ ನೀಡಿದಾಗ ಹತ್ತಿರದಲ್ಲೇ ಇರುವ ಅತುಕ್ಕಡ ಜಲಪಾತ, ಎರವಿಕುಲಂ ರಾಷ್ಟ್ರೀಯ ಉದ್ಯಾನವನ, ಕುಂಡಲ ಅಣೆಕಟ್ಟು, ಚಿನ್ನಾರ್‌ ವನ್ಯಜೀವಿ ಅಭಯಾರಣ್ಯ, ಚಿನ್ನಕನನಾಲ್‌ ಜಲಪಾತ, ಮತ್ತುಪೆಟ್ಟಿ ಆಣೆಕಟ್ಟು ಮತ್ತು ಅನಮುಡಿ ಬೆಟ್ಟಕ್ಕೆ ಭೇಟಿ ಕೊಡುವುದನ್ನು ಮರೆಯದಿರಿ.

ಜೋಧ್‌ಪುರ

Jodhpur

ರಾಜಸ್ಥಾನದ ಕಡೆ ಪ್ರವಾಸ ಹೋಗಬೇಕು ಎಂದುಕೊಳ್ಳುತ್ತಿದ್ದರೆ ಜೋಧ್‌ಪುರ ಒಳ್ಳೆಯ ಆಯ್ಕೆ ಎನ್ನಬಹುದು. ರಾಯಲ್‌ ಆಗಿರುವ ಈ ನಗರದಲ್ಲಿ ಅರಮನೆಯೊಂದಿದೆ. ಹಾಗೆಯೇ ಐತಿಹಾಸಿಕ ಕೋಟೆ, ಅನೇಕ ದೇವಸ್ಥಾನಗಳಿವೆ. ಇಲ್ಲಿನ ಶಾಪಿಂಗ್‌ ಮಾರ್ಕೆಟ್‌ನಲ್ಲಿ ರಾಜಸ್ಥಾನಿ ಶೈಲಿಯ ಕಲಾಕೃತಿಗಳನ್ನು, ಆಭರಣಗಳನ್ನು ಖರೀದಿಸಬಹುದು. ಈ ನಗರದಲ್ಲಿ ಉಮೈದ್‌ ಭವಾನ್‌ ಅರಮನೆ, ಮೆಹ್ರಾನ್‌ಗರ್‌ ಕೋಟೆ ಮತ್ತು ವಸ್ತು ಸಂಗ್ರಹಾಲಯ, ಜಸ್ವಂತ್‌ ಥಡ, ಮಂಡೋರ್‌ ಗಾರ್ಡನ್ಸ್‌, ಚಾಮುಂಡಿ ಮಾತಾ ದೇವಸ್ಥಾನ, ಬಲ್ಸಮಂದ್‌ ಹೊಳೆ ಮತ್ತು ಕೈಲಾನ ಹೊಳೆಗಳಿವೆ. ಈ ಎಲ್ಲ ಸ್ಥಳಗಳಿಗೆ ನೀವು ಪ್ರವಾಸ ಮಾಡಬಹುದು.

ಧರ್ಮಶಾಲಾ

Dharamshala

ಹಿಮಾಚಲ ಪ್ರದೇಶದಲ್ಲಿ ಶಿಮ್ಲಾದಂತೆಯೇ ಪ್ರಸಿದ್ಧವಾಗಿರುವ ಇನ್ನೊಂದು ತಾಣ ಧರ್ಮಶಾಲಾ. ಸಮುದ್ರ ಮಟ್ಟದಿಂದ ಹೆಚ್ಚು ಎತ್ತರದಲ್ಲಿರುವ ಈ ಸ್ಥಳದಲ್ಲಿ ಮಳೆಯೂ ಹೆಚ್ಚಾಗಿಯೇ ಸುರಿಯುತ್ತದೆ. ಇಲ್ಲಿ ಟಿಬೆಟಿಯನ್‌ ಮಠವಿದೆ. ಇಲ್ಲಿ ನೀವು ಟಿಬೆಟಿಯನ್‌ ಸಂಸ್ಕೃತಿಯನ್ನು ಕಾಣಬಹುದು ಹಾಗೆಯೇ ಅವರ ಇತಿಹಾಸ ಬಗ್ಗೆಯೂ ತಿಳಿದುಕೊಳ್ಳಬಹುದು. ಕಂಗ್ರಾ ಕಲಾ ವಸ್ತು ಸಂಗ್ರಹಾಲಯಕ್ಕೆ ಹೋದರಂತೂ ಟಿಬೆಟಿಯನ್‌ ಬಗ್ಗೆ ನಿಮಗೆ ಸಾಕಷ್ಟು ಮಾಹಿತಿ ಸಿಗುತ್ತದೆ. ಇಲ್ಲಿಂದ ನೀವು ನಮ್ಗ್ಯಾಲ್ ಮಠ, ಭಾಗ್ಸುನಾಗ್ ದೇವಸ್ಥಾನ, ತ್ಸುಗ್ಲಾಗ್‌ಖಾಂಗ್ ಕಾಂಪ್ಲೆಕ್ಸ್, ಗ್ಯುಟೊ ಮಠ, ಕಂಗ್ರಾ ಕೋಟೆ, ಮಸ್ರೂರ್ ರಾಕ್ ಕಟ್ ದೇವಸೃಥಾನ ಮತ್ತು ಲೈಬ್ರರಿ ಆಫ್ ಟಿಬೆಟಿಯನ್ ವರ್ಕ್ಸ್ ಮತ್ತು ಆರ್ಕೈವ್ಸ್‌ಗೆ ಭೇಟಿ ನೀಡಬಹುದು. ಭಾಗ್ಸುನಾಗ್‌ನಲ್ಲಿ ಜಲಪಾತವೂ ಇದ್ದು, ಅದನ್ನು ನೋಡಲು ಮರೆಯದಿರಿ.

ಆಗುಂಬೆ

Agumbe


ದಕ್ಷಿಣ ಭಾರತದ ಚಿರಾಪುಂಜಿ ಎಂದು ಕರೆಸಿಕೊಳ್ಳುವುದು ಶಿವಮೊಗ್ಗ ಜಿಲ್ಲೆಯಲ್ಲಿರುವ ಆಗುಂಬೆ. ಚಿಕ್ಕ ಹಳ್ಳಿಯಾಗಿರುವ ಇಲ್ಲಿ ಅತ್ಯಧಿಕ ಮಳೆ ಸುರಿಯುತ್ತದೆ. ಭಾರತದಲ್ಲಿ ಅತಿ ಹೆಚ್ಚು ಮಳೆಯಾಗುವ ಎರಡನೇ ಪ್ರದೇಶ ಇದಾಗಿದೆ. ಇಲ್ಲಿನಿಂದ ಸೂರ್ಯಾಸ್ತವನ್ನು ನೋಡುವುದು ಒಂದು ಅದ್ಭುತವನ್ನು ನೋಡಿದಂತೆಯೇ ಸರಿ. ಮಳೆಗಾಲಯದಲ್ಲಿ ಈ ಪ್ರದೇಶ ಪೂರ್ತಿಯಾಗಿ ಹಸಿರಿನಿಂದ ಕಂಗೊಳಿಸುತ್ತಿರುತ್ತದೆ. ಎಲ್ಲೆಡೆ ಬೆಟ್ಟಗಳಿಂದ ಕೆಳಗೆ ಹರಿಯುವ ನೀರು ಚಿಕ್ಕ ಚಿಕ್ಕ ಜಲಪಾತಗಳಂತೆಯೇ ಕಾಣಿಸಿಕೊಳ್ಳುತ್ತವೆ.

ಚಿರಾಪುಂಜಿ

Cherrapunji


ಜೀವನದಲ್ಲಿ ಒಮ್ಮೆಯಾದರೂ ನೋಡಲೇಬೇಕಾದ ಸ್ಥಳ ಮೇಘಾಲಯದ ಚಿರಾಪುಂಜಿ. ಪ್ರಾಚೀನ ಕಾಲದಿಂದಲೂ ಪ್ರಸಿದ್ಧವಾಗಿರುವ ಇದು ಅತ್ಯಂತ ಸ್ವಚ್ಛ ಸ್ಥಳವೂ ಹೌದು. ಹಚ್ಚ ಹಸಿರು, ಅಲ್ಲಲ್ಲಿ ಕಾಣುವ ಜಲಪಾತಗಳನ್ನು ನೋಡುವುದೇ ಚಂದ. ಮಳೆಗಾಲದಲ್ಲಿ ಈ ಚಿರಾಪುಂಜಿಯ ಸೌಂದರ್ಯ ಇಮ್ಮಡಿಯಾಗಿರುತ್ತದೆ. ಇಲ್ಲಿ ಟ್ರೆಕ್ಕಿಂಗ್‌ ಮಾಡುವುದಕ್ಕೂ ಅವಕಾಶವಿರುತ್ತದೆ. ಚಿರಾಪುಂಜಿಯಲ್ಲಿ ನೀವು ನೊಹ್ಕಾಲಿಕೈ ಜಲಪಾತ, ಡಬಲ್ ಡೆಕ್ಕರ್ ಲಿವಿಂಗ್ ರೂಟ್ ಬ್ರಿಡ್ಜ್, ಮೌಸಿನ್ರಾಮ್ ಗ್ರಾಮ, ಸೆವೆನ್ ಸಿಸ್ಟರ್ಸ್ ಫಾಲ್ಸ್, ಮಾವ್ಸ್ಮೈ ಗುಹೆ, ದಿ ಇಕೋ ಪಾರ್ಕ್, ಮೌಕ್‌ಡಾಕ್ ಡಿಂಪೆಪ್ ವ್ಯಾಲಿ, ಥಾಂಗ್ ಖರಂಗ್ ಪಾರ್ಕ್, ಖಾಸಿ ಮೊನೊಲಿತ್ಸ್, ಮೌಸಿನ್ರಾಮ್ ಮೀಸಲು ಅರಣ್ಯಕ್ಕೆ ಭೇಟಿ ನೀಡಬಹುದು.

ಕೊಡಗು

kodagu


ಕರ್ನಾಟಕದಲ್ಲಿ ನೀವು ಆಗಸ್ಟ್ ತಿಂಗಳಲ್ಲಿ ಭೇಟಿ ನೀಡಬಹುದಾದ ಅದ್ಭುತ ಸ್ಥಳಗಳಲ್ಲಿ ಒಂದೆಂದರೆ ಅದು ಕೊಡಗು. ಹಸಿರೇ ತುಂಬಿರುವ ಈ ಪುಟ್ಟ ಪಟ್ಟಣದಲ್ಲಿ ನೀವು ನಿಸರ್ಗ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬಹುದು. ಪುಟ್ಟ ಪುಟ್ಟ ಬೆಟ್ಟಗಳು, ಅದನ್ನು ಆವರಿಸಿಕೊಂಡಿರುವ ಮಂಜು ಎಲ್ಲವೂ ನಿಮ್ಮನ್ನು ಆಕರ್ಷಿಸುತ್ತದೆ. ಇಲ್ಲಿ ಅತ್ಯದ್ಭುತ ರೆಸಾರ್ಟ್‌ಗಳೂ ಇದ್ದು, ನೀವು ಒಂದೆರೆಡು ದಿನಗಳ ಮಟ್ಟಿಗೆ ಅರಾಮಾವಾಗಿ ಇಲ್ಲಿದ್ದುಬರಬಹುದು. ಇಲ್ಲಿ ಆನೆ ಸವಾರಿ, ರಿವರ್‌ ರಾಫ್ಟಿಂಗ್‌, ಟ್ರೆಕ್ಕಿಂಗ್‌, ಕ್ಯಾಂಪಿಂಗ್‌, ಬೋಟಿಂಗ್‌, ಜೀಪ್‌ ಸಫಾರಿಯನ್ನು ನೀವು ಮಾಡಬಹುದು. ಕೊಡಗಿಗೆ ಭೇಟಿ ಕೊಟ್ಟಾಗ ಅಬ್ಬೆ ಫಾಲ್ಸ್‌, ತಡಿಯಂಡಮೋಲ್ ಶಿಖರ, ಮಲ್ಲಳ್ಳಿ ಜಲಪಾತ, ಪುಷ್ಪಗಿರಿ ವನ್ಯಜೀವಿ ಅಭಯಾರಣ್ಯ, ಕುಮಾರ ಪರ್ವತ ಬೆಟ್ಟ, ರಾಜಾ ಸೀಟ್, ಬ್ರಹ್ಮಗಿರಿ ಬೆಟ್ಟ, ಕಾಫಿ ತೋಟ, ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಭೇಟಿ ಕೊಡಲು ಮರೆಯದಿರಿ.

ಅಂಡಮಾನ್‌

Andaman and Nicobar Islands


ಕಡಲ ದಡಗಳಲ್ಲಿ ಕುಳಿತು ಮನಸ್ಸಿಗೆ ನೆಮ್ಮದಿ ತಂದುಕೊಳ್ಳಬೇಕೆನ್ನುವ ಮನಸ್ಸಿದ್ದರೆ ಅಂಡಮಾನ್‌ನತ್ತ ಪ್ರಯಾಣ ಬೆಳೆಸಿ. ಇದು ಒಂದು ರೀತಿಯಲ್ಲಿ ಮನಮೋಹಕವಾದ ದ್ವೀಪವಾಗಿದೆ. ಇಲ್ಲಿ ನೀವು ಸೂರ್ಯೋದಯ, ಸೂರ್ಯಾಸ್ತಮಾನದ ವಿಹಂಗಮ ನೋಟವನ್ನು ಕಣ್ತುಂಬಿಸಿಕೊಳ್ಳುವುದಷ್ಟೇ ಅಲ್ಲದೆ ಹಲವಾರು ರೀತಿಯ ವಾಟರ್‌ ಗೇಮ್ಸ್‌ಗಳನ್ನು ಆಡಬಹುದು. ಇಲ್ಲಿ ನೀವು ಹ್ಯಾವ್ಲಾಕ್ ದ್ವೀಪ, ನೀಲ್ ದ್ವೀಪ, ರಾಸ್ ದ್ವೀಪ, ನಾರ್ತ್ ಬೇ ಐಲ್ಯಾಂಡ್, ಬಾರಾತಂಗ್ ದ್ವೀಪ, ಮೌಂಟ್ ಹ್ಯಾರಿಯೆಟ್ ರಾಷ್ಟ್ರೀಯ ಉದ್ಯಾನವನ, ಚಿಧಿಯಾ ಟಪ್ಪು, ಧನಿನಲ್ಲ ಮ್ಯಾಂಗ್ರೋವ್ ನೇಚರ್ ವಾಕ್ ವೇ, ಪಂಚವಟಿ ಜಲಪಾತಗಳು, ಕತ್ಬರ್ಟ್ ಬೇ ವನ್ಯಜೀವಿ ಅಭಯಾರಣ್ಯ, ಎಲೆಫೆಂಟ್ ಬೀಚ್‌ಗೆ ಭೇಟಿ ನೀಡಬಹುದು. ಸ್ಕೂಬಾ ಡೈವಿಂಗ್‌ನಂತಹ ಆಟವನ್ನು ನೀವಲ್ಲಿ ಆಡಬಹುದು.

ಕೊಡೈಕೆನಾಲ್‌

Kodaikanal


ತಮಿಳುನಾಡಿನ ಪ್ರಸಿದ್ಧ ಕೊಡೈಕೆನಾಲ್‌ ಭಾರತದಲ್ಲಿ ಅತ್ಯಂತ ಪ್ರಸಿದ್ಧ ಹನಿಮೂನ್‌ ತಾಣಗಳಲ್ಲಿ ಒಂದಾಗಿದೆ. ಲೇಕ್‌ಸೈಡ್‌ ರೆಸಾರ್ಟ್‌ಗಳಿಂದಲೇ ತುಂಬಿಕೊಂಡಿರುವ ಈ ಪಟ್ಟಣದಲ್ಲಿ ನೀವು ಮಂಜು ತುಂಬಿದ ಬೆಟ್ಟಗಳನ್ನು, ಜಲಪಾತಗಳನ್ನು ಕಾಣಬಹುದು. ಪಳನಿ ಬೆಟ್ಟಗಳ ಇಳಿಜಾರಿನಲ್ಲಿರುವ ಈ ಪಟ್ಟಣ ಸಮುದ್ರ ಮಟ್ಟದಿಂದ 7200 ಅಡಿ ಎತ್ತರದಲ್ಲಿದೆ. ಇಲ್ಲಿ ನೀವು ಬೆಟ್ಟಗಳನ್ನು ಹತ್ತುವುದರೊಂದಿಗೆ ಸೈಕ್ಲಿಂಗ್‌, ಹೈಕಿಂಗ್‌, ಟ್ರೆಕ್ಕಿಂಗ್‌ ಮಾಡಬಹುದಾಗಿದೆ. ಇಲ್ಲಿಂದ ನೀವು ಮನ್ನವನೂರ್‌ ಹೊಳೆ, ಬೆರಿಜಮ್‌ ಹೊಳೆ, ಪೈನ್‌ ಫಾರೆಸ್ಟ್‌, ಡಾಲ್ಫಿನ್ಸ್‌ ನೋಸ್‌, ಪಿಲ್ಲರ್‌ ರಾಕ್ಸ್‌, ಬ್ರ್ಯಾಂಟ್‌ ಪಾರ್ಕ್‌, ಗ್ರೀನ್‌ ವ್ಯಾಲಿ ವ್ಯೂ, ಚೆಟ್ಟಿಯಾರ್‌ ಪಾರ್ಕ್‌ಗೆ ಭೇಟಿ ನೀಡಬಹುದು.

ಮಾವ್ಲಿನ್ನಾಂಗ್

Mawlynnong
Village in Meghalaya


ಮಾವ್ಲಿನ್ನಾಂಗ್ ಏಷ್ಯಾದ ಅತ್ಯಂತ ಸ್ವಚ್ಛ ಗ್ರಾಮವಾಗಿದೆ. ಇದನ್ನು ದೇವರ ಸ್ವಂತ ಉದ್ಯಾನ ಎಂದೂ ಕರೆಯಲಾಗುತ್ತದೆ. ಒಂದು ಸಮುದಾಯ ಒಟ್ಟಾಗಿ ಕೆಲಸ ಮಾಡಿದರೆ ಊರನ್ನು ಹೇಗೆ ಇಟ್ಟುಕೊಳ್ಳಬಹುದು ಎನ್ನುವುದಕ್ಕೆ ಈ ಊರು ಸಾಕ್ಷಿ. ಅತ್ಯದ್ಭುತವಾದ ಮನೆಗಳು, ಹಚ್ಚ ಹಸಿರಿನಿ ನಡುವೆ ಧುಮ್ಮಿಕ್ಕುವ ಜಲಪಾತಗಳು, ವಿಸ್ಮಯವೆನಿಸುವಂತಹ ಬೇರು ಸೇತುವೆಗಳನ್ನು ನೀವಿಲ್ಲಿ ಕಾಣಬಹುದು. ಮಳೆಗಾಲದ ಸಮಯದಲ್ಲಿ ಇದು ಸ್ವರ್ಗದಂತೆಯೇ ಕಾಣುತ್ತದೆ. ಇಲ್ಲಿ ನೀವು ನೋಡಬೇಕಾದ ಸ್ಥಳಗಳೆಂದರೆ ಮಾವ್ಲಿನ್ನಾಂಗ್ ಜಲಪಾತ, ಜಿಂಗ್‌ಮಹಮ್ ಲಿವಿಂಗ್ ರೂಟ್ ಬ್ರಿಡ್ಜ್, ಉಮ್‌ಗೋಟ್ ನದಿ, ಬೋಫಿಲ್ ಜಲಪಾತ, ಮಾವ್ಲಿನ್‌ನಾಂಗ್ ಸೇಕ್ರೆಡ್ ಫಾರೆಸ್ಟ್, ನೊಹ್ವೆಟ್ ವ್ಯೂವ್‌ ಪಾಯಿಂಟ್.

ವಾರಾಣಸಿ

Varanasi


ಧಾರ್ಮಿಕ ಪ್ರಿಯರಿಗೆ ಇಷ್ಟವಾಗುವ ಸ್ಥಳ ವಾರಾಣಸಿ. ಗಂಗಾ ನದಿಯ ದಡದಲ್ಲಿರುವ ಈ ಐತಿಹಾಸಿಕ ನಗರವು ಭಾರತದ ಅತ್ಯಂತ ಪವಿತ್ರ ನಗರವೆಂದು ಕರೆಸಿಕೊಳ್ಳುತ್ತದೆ. ಇಲ್ಲಿನ ಘಾಟ್‌ಗಳಲ್ಲಿ ಸಂಜೆ ಹೊತ್ತಿನಲ್ಲಿ ನಡೆಸಲಾಗುವ ಗಂಗಾ ಆರತಿಯನ್ನು ಯಾವುದೇ ಕಾರಣಕ್ಕೂ ಮಿಸ್‌ ಮಾಡಿಕೊಳ್ಳಬೇಡಿ. ಎಲ್ಲರೂ ನಿಸರ್ಗ ದೇವತೆಯನ್ನು ಹುಡುಕಿಕೊಂಡು ಹೋಗುತ್ತಿರುತ್ತಾದ್ದರಿಂದ ವಾರಾಣಸಿಯಲ್ಲಿ ಈ ಸಮಯದಲ್ಲಿ ಹೆಚ್ಚು ಪ್ರವಾಸಿಗರು ಇರುವುದಿಲ್ಲ. ಹಾಗಾಗಿ ನೀವು ಅರಾಮವಾಗಿ ಇಲ್ಲಿಗೆ ಭೇಟಿ ನೀಡಬಹುದು. ಇಲ್ಲಿ ನೀವು ದಶಾಶ್ವಮೇಧ ಘಾಟ್, ಅಸ್ಸಿ ಘಾಟ್, ಮಣಿಕರ್ಣಿಕಾ ಘಾಟ್, ಧಮೇಕ್ ಸ್ತೂಪ, ಶ್ರೀ ಕಾಶಿ ವಿಶ್ವನಾಥ ದೇವಾಲಯ, ಶ್ರೀ ದುರ್ಗಾ ದೇವಾಲಯ, ರಾಮನಗರ ಕೋಟೆ, ಬ್ರಿಜ್ರಾಮ ಅರಮನೆಗೆ ಭೇಟಿ ನೀಡಬಹುದು.

ಊಟಿ

Ooty


ಪ್ರಕೃತಿ ಪ್ರೇಮಿಗಳಿಗೆ ಇಷ್ಟವಾಗುವ ತಾಣ ಊಟಿ. ಕರ್ನಾಟಕದ ನೆರೆ ರಾಜ್ಯ ತಮಿಳುನಾಡಿನಲ್ಲಿರುವ ಇಲ್ಲಿ ಅನೇಕ ಬೆಟ್ಟ ಗುಡ್ಡಗಳಿದ್ದು, ಈ ಸಮಯದಲ್ಲಿ ಎಲ್ಲವೂ ಹಚ್ಚ ಹಸಿರಿನಿಂದ ಕೂಡಿರುತ್ತವೆ. ಅದಲ್ಲದೆ ಇಲ್ಲಿನ ಸರೋವರದಲ್ಲಿ ದೋಣಿ ವಿಹಾರವನ್ನೂ ಮಾಡಬಹುದು. ಇಲ್ಲಿನ ಟೀ ಮ್ಯೂಸಿಯಂಗೆ ಭೇಟಿ ನೀಡುವುದನ್ನು ಮರೆಯಬೇಡಿ. ಇಲ್ಲಿರುವ ದೊಡ್ಡಬೆಟ್ಟದಲ್ಲಿ ಸ್ಕೇಲಿಂಗ್‌ ಮಾಡಬಹುದು. ಪೈಕಾರಾ ಜಲಪಾತದಲ್ಲಿ ನೀರಿನಲ್ಲಿ ಆಟವಾಡಬಹುದು. ಪೈನ್‌ ಕಾಡಿನಲ್ಲಿ ಕುಳಿತು ಸ್ಥಳೀಯ ಖಾದ್ಯಗಳನ್ನು ತಿನ್ನಬಹುದಾಗಿದೆ. ಇಲ್ಲಿ ನೀವು ಊಟಿ ಸರೋವರ್‌, ಬೊಟಾನಿಕಲ್‌ ಗಾರ್ಡನ್ಸ್‌, ದೊಡ್ಡಬೆಟ್ಟ ಶಿಖರ, ರೋಸ್‌ ಗಾರ್ಡನ್‌, ಪೈಕರ ಸರೋವರ ಮತ್ತು ಜಲಪಾತ, ಸರ್ಕಾರಿ ವಸ್ತುಸಂಗ್ರಹಾಲಯವನ್ನು ನೋಡಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

ಊಟಿಗೆ ಯಾವ ಸಮಯದಲ್ಲಿ ಬೇಕಾದರೂ ಭೇಟಿ ನೀಡಬಹುದು. ಇಲ್ಲಿ ಪ್ರತಿಯೊಂದು ತಿಂಗಳೂ ಏನಾದರೂ ಒಂದು ವಿಶೇಷ ಇದ್ದೇ ಇರುತ್ತದೆ. ಹೀಗಾಗಿ ನಿಮ್ಮ ಆಸಕ್ತಿಗೆ ಅನುಗುಣವಾಗಿ ಊಟಿಗೆ ಪ್ರವಾಸ (Ooty Tour) ಹೊರಡುವ ಯೋಜನೆ ಮಾಡಬಹುದು. ಊಟಿಯ ಅದ್ಭುತಗಳ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

By

Ooty Tour
Koo

ಬೇಸಿಗೆಯ ಬಿಸಿಲಿನ ಕಣ್ತಪ್ಪಿಸಿ ಪ್ರಕೃತಿಯ ಮಡಿಲಲ್ಲಿ ಕಾಲ ಕಳೆಯಬೇಕು ಎನ್ನುವ ಆಸೆ ಮನದಲ್ಲಿ ಮೂಡಿದಾಗ ಕೂಡಲೇ ನೆನಪುಗುವುದು ದಕ್ಷಿಣ ಭಾರತದ (southern India) ಸುಪ್ರಸಿದ್ಧ ಪ್ರವಾಸಿ ತಾಣ ಊಟಿ (Ooty Tour). ದಕ್ಷಿಣ ಭಾರತದ ನೀಲಗಿರಿ ಬೆಟ್ಟಗಳಲ್ಲಿ ( Nilgiri Hills) ನೆಲೆಯಾಗಿರುವ ಸುಂದರವಾದ ಗಿರಿಧಾಮ ಪ್ರದೇಶವಾಗಿರುವ ಊಟಿಯಲ್ಲಿ ಕಣ್ತುಂಬಿಕೊಳ್ಳಲು ಸಾಕಷ್ಟು ಪ್ರದೇಶಗಳಿವೆ. ಪ್ರಶಾಂತವಾದ ಭೂದೃಶ್ಯಗಳು, ಆಹ್ಲಾದಕರ ಹವಾಮಾನ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಇದು ಹೊಂದಿದೆ.

ಪ್ರವಾಸ ಪ್ರಿಯರಿಗಾಗಿ ಊಟಿ ಏನನ್ನಾದರೂ ನೀಡುತ್ತದೆ. ಅದು ಪ್ರಕೃತಿಯ ಪ್ರೀತಿ, ಸಾಹಸದ ಪ್ರಜ್ಞೆ ಅಥವಾ ಶಾಂತಿ ಮತ್ತು ಶಾಂತತೆಯ ಹಂಬಲವನ್ನು ತಣಿಸುತ್ತದೆ. ಪ್ರತಿ ಋತುವಿಗೂ ತನ್ನದೇ ಆದ ವಿಶೇಷತೆಯನ್ನು ಒದಗಿಸುತ್ತದೆ. ವರ್ಷವಿಡೀ ಬೇಸಿಗೆಯು ಬಹುವರ್ಣದ ಹೂವುಗಳನ್ನು ತರುತ್ತದೆ. ಮಳೆಗಾಲ ಬಂದೊಡನೆ ಎಲ್ಲವನ್ನೂ ಮಂಜಿನಿಂದ ಆವರಿಸುವಂತೆ ಮಾಡುತ್ತದೆ. ಶರತ್ಕಾಲದಲ್ಲಿ ಉಲ್ಲಾಸಕರವಾದ ಗಾಳಿ ಮತ್ತು ಚಳಿಗಾಲದ ತಂಪು ಅಪ್ಪುಗೆಯನ್ನು ಮರೆಯಲಾಗದು.

ಗಿರಿಧಾಮಗಳ ರಾಣಿ ಎಂದೂ ಕರೆಯಲಾಗುವ ಊಟಿಗೆ ವರ್ಷಪೂರ್ತಿ ಭೇಟಿ ಮಾಡಬಹುದು. ಪ್ರತಿ ಋತುವಿನಲ್ಲಿ ಇದು ತನ್ನದೇ ಆದ ವೈಭವವನ್ನು ತೊಂಬಿಕೊಂಡು ತನುಮನಕ್ಕೆ ಸಂತೋಷವನ್ನು ಉಣಬಡಿಸುತ್ತದೆ. ನಿಖರವಾಗಿ ಯಾವಾಗ ಹೋಗಬೇಕೆಂದು ತಿಳಿಯುವುದು ಖಂಡಿತವಾಗಿಯೂ ನಮ್ಮ ಪ್ರಯಾಣದ ಅನುಭವವನ್ನು ಸುಧಾರಿಸುತ್ತದೆ. ಊಟಿಯಲ್ಲಿ ಪ್ರತಿ ಸೀಸನ್ ಏನು ವಿಶೇಷ ಎಂಬ ಮಾಹಿತಿ ಇಲ್ಲಿದೆ.


ಬೇಸಿಗೆಯ ವೈಭವ; ಮಾರ್ಚ್‌ನಿಂದ ಜೂನ್

ಊಟಿಗೆ ಪ್ರವಾಸ ಹೋಗಲು ಅತ್ಯಂತ ಜನಪ್ರಿಯ ಸಮಯವೆಂದರೆ ಬೇಸಿಗೆಯ ತಿಂಗಳು. ಮಾರ್ಚ್‌ನಿಂದ ಜೂನ್‌ವರೆಗೆ ಹಗಲಿನ ತಾಪಮಾನವು ಇಲ್ಲಿ 15 ಡಿಗ್ರಿ ಸೆಲ್ಸಿಯಸ್ ನಿಂದ 25 ಡಿಗ್ರಿ ಸೆಲ್ಸಿಯಸ್‌ವರೆಗೆ ಇರುತ್ತದೆ. ಇದು ಬಿಸಿಯಾದ ಬಯಲು ಪ್ರದೇಶಗಳಿಗೆ ಹೋಲಿಸಿದರೆ ಇದು ತುಂಬಾ ಆರಾಮದಾಯಕವಾಗಿದೆ. ಈ ಅವಧಿಯಲ್ಲಿ ಹವಾಮಾನವು ತಂಪಾಗಿರುತ್ತದೆ. ಇದು ಹಸಿರು ಕಣಿವೆಗಳು, ಹೂಬಿಡುವ ಹೂವುಗಳು ಮತ್ತು ಬೀಳುವ ಕ್ಯಾಸ್ಕೇಡ್‌ಗಳನ್ನು ಅನ್ವೇಷಿಸಲು ಸೂಕ್ತವಾಗಿದೆ. ಪ್ರತೀ ವರ್ಷ ಮೇ ತಿಂಗಳಲ್ಲಿ, ಬೊಟಾನಿಕಲ್ ಗಾರ್ಡನ್ಸ್‌ನಲ್ಲಿ ಅದ್ಭುತವಾದ ಪುಷ್ಪ ಪ್ರದರ್ಶನವನ್ನು ನಡೆಸಲಾಗುತ್ತದೆ.


ಮಾನ್ಸೂನ್‌ ಮ್ಯಾಜಿಕ್ -ಜುಲೈನಿಂದ ಸೆಪ್ಟೆಂಬರ್

ಒಮ್ಮೆ ಮಳೆ ಬಂದರೆ ಮತ್ತೆ ಎಲ್ಲವೂ ಹಸಿರು ಬಣ್ಣಕ್ಕೆ ತಿರುಗುತ್ತದೆ. ಆದರೆ ಈ ಬಾರಿ ಹೆಚ್ಚು ತೀವ್ರವಾಗಿ ಇಡೀ ಪ್ರದೇಶವು ಸೊಂಪಾದ ಸಸ್ಯಗಳಿಂದ ಆವೃತವಾಗಿದೆ. ಎಷ್ಟರಮಟ್ಟಿಗೆ ಎಂದರೆ ಕೆಲವೊಮ್ಮೆ ಇಡೀ ಪಟ್ಟಣವು ದಟ್ಟವಾದ ಎಲೆಗಳ ಅಡಿಯಲ್ಲಿ ಕಣ್ಮರೆಯಾಗುತ್ತದೆ. ಈ ತಿಂಗಳುಗಳಲ್ಲಿ ಜುಲೈನಿಂದ ಸೆಪ್ಟೆಂಬರ್ ವರೆಗೆ, ಊಟಿಯ ಮೇಲೆ ಮಧ್ಯಮ ಅಥವಾ ಭಾರೀ ಮಳೆ ಬೀಳುತ್ತದೆ. ಇದು ಸುತ್ತಲಿನ ಎಲ್ಲವನ್ನೂ ರಿಫ್ರೆಶ್ ಮಾಡಿದಂತೆ ಭಾಸವಾಗುತ್ತದೆ. ಬೇಸಿಗೆಯ ಶಾಖದ ಅನಂತರ ಮತ್ತೊಮ್ಮೆ ಜೀವಂತ ತಳೆದಂತೆ ಕಾಣುತ್ತದೆ. ಮಳೆಯ ಕಾರಣದಿಂದ ಹೊರಾಂಗಣ ಚಟುವಟಿಕೆಗಳು ಸೀಮಿತವಾಗಿರಬಹುದು. ಆದರೆ ಮಂಜಿನಿಂದ ಆವೃತವಾದ ಪರ್ವತಗಳ ಮೂಲಕ ಹರಿಯುವ ತೊರೆಗಳ ಸೌಂದರ್ಯ ಇಮ್ಮಡಿಯಾಗುತ್ತದೆ.


ಶರತ್ಕಾಲದ ಅದ್ಭುತ- ಅಕ್ಟೋಬರ್‌ನಿಂದ ನವೆಂಬರ್

ಮಳೆಗಾಲ ಅವಧಿ ಮುಗಿದ ಅನಂತರ, ಶರತ್ಕಾಲದಲ್ಲಿ ಆಕಾಶವು ಮತ್ತೆ ನೀಲಿ ಬಣ್ಣಕ್ಕೆ ತಿರುಗುತ್ತದೆ. ಚಳಿಗಾಲ ಪ್ರಾರಂಭವಾಗುವವರೆಗೆ ಪ್ರಶಾಂತ ಪರಿಸರ ಮನಸ್ಸಿಗೆ ಹಿತ ನೀಡುತ್ತದೆ. ಈ ಸಮಯದಲ್ಲಿ ತಾಪಮಾನವು 10 ಡಿಗ್ರಿಯಿಂದ 20 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ. ಹೀಗಾಗಿ ಇದು ಚಟುವಟಿಕೆಗಳಿಗೆ ಸೂಕ್ತವಾಗಿರುತ್ತದೆ. ಟ್ರೆಕ್ಕಿಂಗ್, ಬೋಟಿಂಗ್, ದೃಶ್ಯವೀಕ್ಷಣೆ ನಡೆಸಲು ಸೂಕ್ತ ಸಮಯವಾಗಿರುತ್ತದೆ. ಹವಾಮಾನವು ಸಾಕಷ್ಟು ಸ್ನೇಹಪರವಾಗಿರುತ್ತದೆ. ಛಾಯಾಗ್ರಹಣಕ್ಕೆ ಇದು ಸೂಕ್ತ ಸಮಯ. ಈ ಸಂದರ್ಭದಲ್ಲಿ ಊಟಿ ಮಾರಿಯಮ್ಮನ್ ದೇವಾಲಯದ ಉತ್ಸವವನ್ನು ಕಣ್ತುಂಬಿಕೊಳ್ಳಲು ಮರೆಯಬೇಡಿ.


ಚಳಿಗಾಲದ ವಂಡರ್ ಲ್ಯಾಂಡ್ (ಡಿಸೆಂಬರ್‌ನಿಂದ ಫೆಬ್ರವರಿ)

ಚಳಿಗಾಲದಲ್ಲಿ ರಾತ್ರಿಯ ಸಮಯದಲ್ಲಿ ತಾಪಮಾನವು ತೀವ್ರವಾಗಿ ಇಳಿಯುತ್ತದೆ. ಸುಮಾರು 5 ಡಿಗ್ರಿ ಸೆಲ್ಸಿಯಸ್ ಗಿಂತಲೂ ಕೆಳಗೆ ಇಳಿಯುತ್ತದೆ. ಮುಂಜಾನೆಯು ಸಾಮಾನ್ಯವಾಗಿ ಮಂಜಿನಿಂದ ಕೂಡಿರುತ್ತದೆ. ಆದರೆ ಇಡೀ ದಿನ ತಂಪಾಗಿರುತ್ತದೆ.

ಇದನ್ನೂ ಓದಿ: Kochi Tour: ವಾರಾಂತ್ಯದ ಪ್ರವಾಸಕ್ಕೆ ಕೊಚ್ಚಿ ಸೂಕ್ತ ತಾಣ; ಏನೇನಿವೆ ಆಕರ್ಷಣೆ?

ಸಾಕಷ್ಟು ಬಿಸಿಲು ಸಿಗುತ್ತದೆ. ಆದರೂ ಪ್ರದೇಶದ ಸುತ್ತಲಿನ ದಟ್ಟವಾದ ಕಾಡುಗಳಿಂದಾಗಿ ಸೂರ್ಯನ ಬೆಳಕು ಅಷ್ಟೇನೂ ನೆಲದ ಮಟ್ಟವನ್ನು ತಲುಪುವುದಿಲ್ಲ, ಆದ್ದರಿಂದ ಚಹಾ ತೋಟಗಳ ಸುತ್ತಲೂ ಮಾಂತ್ರಿಕ ಸ್ಪರ್ಶ ನೀಡಿದಂತೆ ಭಾಸವಾಗುತ್ತದೆ. ಸಾಹಸಿಗಳು ನೀಲಗಿರಿಯ ಅತೀ ಎತ್ತರದ ಪ್ರದೇಶವಾದ ದೊಡ್ಡಬೆಟ್ಟ ಶಿಖರದಲ್ಲಿ ಚಾರಣಕ್ಕೆ ಹೋಗಬಹುದು ಅಥವಾ ವಿವಿಧ ಜಾತಿಯ ಪ್ರಾಣಿಗಳು, ಪಕ್ಷಿಗಳು, ಸರೀಸೃಪಗಳು, ಕೀಟಗಳನ್ನು ಮುದುಮಲೈ ವನ್ಯಜೀವಿ ಅಭಯಾರಣ್ಯದಲ್ಲಿ ಅನ್ವೇಷಿಸಬಹುದು. ಜನವರಿಯಲ್ಲಿ ಇಲ್ಲಿ ವಾರ್ಷಿಕ ಚಹಾ ಪ್ರವಾಸೋದ್ಯಮ ಉತ್ಸವ ನಡೆಯುತ್ತದೆ. ಇಲ್ಲಿ ಸಾಂಸ್ಕೃತಿಕ ಪ್ರದರ್ಶನಗಳನ್ನು ಆನಂದಿಸಬಹುದು, ವಿವಿಧ ಮಾದರಿಯ ಚಹಾಗಳನ್ನು ಸವಿಯಬಹುದು.

Continue Reading

ಪ್ರವಾಸ

Kochi Tour: ವಾರಾಂತ್ಯದ ಪ್ರವಾಸಕ್ಕೆ ಕೊಚ್ಚಿ ಸೂಕ್ತ ತಾಣ; ಏನೇನಿವೆ ಆಕರ್ಷಣೆ?

ವಾರಾಂತ್ಯದ ವಿಹಾರಕ್ಕೆ ಕೊಚ್ಚಿಯಲ್ಲಿ (Kochi Tour) ಯಾವುದೇ ಕೊರತೆ ಇಲ್ಲ. ಮುನ್ನಾರ್‌ನ ಮಂಜಿನ ಬೆಟ್ಟಗಳಿಂದ ಹಿಡಿದು ಅಲೆಪ್ಪಿ ಮತ್ತು ಚೆರೈ ಬೀಚ್‌ನ ಶಾಂತ ಹಿನ್ನೀರು ಮತ್ತು ಮರಳಿನ ತೀರಗಳವರೆಗೆ ಅನೇಕ ರೋಮಾಂಚಕಾರಿ ಸ್ಥಳಗಳು ಇಲ್ಲಿದೆ. ಈ ಪ್ರವಾಸಿ ಸ್ಥಳಗಳ ಪರಿಚಯ ಇಲ್ಲಿದೆ.

VISTARANEWS.COM


on

By

Kochi Tour
Koo

ಸಮುದ್ರ ತೀರಗಳಿಂದ ಸುತ್ತುವರಿದಿರುವ ಕೇರಳದ (kerala) ಹೃದಯ ಭಾಗವಾದ ಕೊಚ್ಚಿಯು ಅತ್ಯಂತ ಆಕರ್ಷಕ ಪ್ರವಾಸಿ (Kochi Tour) ತಾಣಗಳಿಂದ ದೂರದ ಊರಿನ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಸಾಂಸ್ಕೃತಿಕ ಶ್ರೀಮಂತಿಕೆಯಿಂದ ಹೆಸರುವಾಸಿಯಾಗಿರುವ ಕೊಚ್ಚಿ ಗೇಟ್ ವೇ ಆಗಿರುವ ಹಿನ್ನೀರು (backwaters) ಪ್ರದೇಶಗಳಿಂದ, ಗಿರಿಧಾಮಗಳಿಂದ (hill stations) ನೈಸರ್ಗಿಕ ಸೌಂದರ್ಯವನ್ನು ಮಡಿಲಲ್ಲಿ ತುಂಬಿಕೊಂಡು ನಿಂತಂತಿದೆ.

ಕಣ್ಣಿಗೆ ಸೌಂದರ್ಯ, ಮನಸ್ಸಿಗೆ ಶಾಂತಿ ನೀಡುವ ಪ್ರಶಾಂತವಾದ ಮರಳಿನ ಬಿಳಿ ಕಡಲತೀರಗಳು ಮನೆಯಿಂದ ದೂರವಿದ್ದು, ಕೊಂಚ ರಿಲ್ಯಾಕ್ಸ್ ಮಾಡಿಕೊಳ್ಳಬೇಕು ಎನ್ನುವವರಿಗೆ ಸೂಕ್ತ ತಾಣ ಕೊಚ್ಚಿ. ಇಲ್ಲಿನ ಸುತ್ತಮುತ್ತ ಕೆಲವು ಅತ್ಯುತ್ತಮ ಪ್ರವಾಸಿ ತಾಣಗಳಿವೆ. ವಾರಾಂತ್ಯದ ರಜೆಯನ್ನು ಇಲ್ಲಿ ಕಳೆಯಬಹುದು.


ಮುನ್ನಾರ್ (Munnar)

ಚಹಾ ತೋಟಗಳು, ಮಂಜಿನ ಕಣಿವೆಗಳು ಮತ್ತು ಶಾಂತ ವಾತಾವರಣಕ್ಕೆ ಹೆಸರುವಾಸಿಯಾದ ಮುನ್ನಾರ್ ಸುಂದರವಾದ ಗಿರಿಧಾಮವಾಗಿದ್ದು, ಕೊಚ್ಚಿಯ ಸಮೀಪದಲ್ಲಿದೆ. ಮುನ್ನಾರ್‌ಗೆ ಹೋಗುವ ದಾರಿಯಲ್ಲಿ ದಟ್ಟ ಕಾಡುಗಳು ಮತ್ತು ಹಸಿರು ಪರ್ವತಗಳ ರುದ್ರರಮಣೀಯ ದೃಶ್ಯಗಳನ್ನು ನೀಡುತ್ತದೆ. ಮುನ್ನಾರ್ ತಲುಪಿದ ಅನಂತರ ಟ್ರೆಕ್ಕಿಂಗ್, ಪಕ್ಷಿ ವೀಕ್ಷಣೆಗೆ ಹೋಗಬಹುದು ಅಥವಾ ಶಾಂತಿಯುತ ಪರಿಸರದಲ್ಲಿ ವಿಶ್ರಾಂತಿ ಪಡೆಯಬಹುದು. ಇಲ್ಲಿನ ಟೀ ಮ್ಯೂಸಿಯಂಗೆ ಭೇಟಿ ನೀಡಿದರೆ ಚಹಾ ತಯಾರಿಕೆಯಲ್ಲಿ ಒಳಗೊಂಡಿರುವ ಸಾಂಸ್ಕೃತಿಕ ಅಭ್ಯಾಸಗಳ ಬಗ್ಗೆ ತಿಳಿದುಕೊಳ್ಳಬಹುದು.


ಅಲೆಪ್ಪಿ (Alleppey)

‘ಪೂರ್ವದ ವೆನಿಸ್ ಎಂದು ಕರೆಯಲ್ಪಡುವ ಅಲೆಪ್ಪಿ ಹಿನ್ನೀರು, ಪ್ರಶಾಂತವಾದ ಹೌಸ್‌ಬೋಟ್ ವಿಹಾರ ಮತ್ತು ಎಲ್ಲಿ ನೋಡಿದರೂ ಹಸಿರಿನಿಂದ ತುಂಬಿದ ಭತ್ತದ ಗದ್ದೆಗಳ ವ್ಯಾಪಕ ಜಾಲದಿಂದ ಆವರಿಸಲ್ಪಟ್ಟಿದೆ. ಈ ನಿಶ್ಯಬ್ದ ತಾಣವು ಕೊಚ್ಚಿನ್‌ನಿಂದ ಸ್ವಲ್ಪ ದೂರದಲ್ಲಿದೆ. ಪ್ರವಾಸಿಗರು ಹಿನ್ನೀರಿನಲ್ಲಿ ಹೌಸ್‌ಬೋಟ್ ಸವಾರಿಗಳನ್ನು ನಡೆಸಬಹುದು. ಇಲ್ಲಿ ತಂಗುವ ಸಮಯದಲ್ಲಿ ಸುತ್ತಲಿನ ಸುಂದರವಾದ ಭೂದೃಶ್ಯಗಳನ್ನು ವೀಕ್ಷಿಸಬಹುದು. ರಾತ್ರಿಯಲ್ಲಿ ಆಕಾಶದಲ್ಲಿ ನಕ್ಷತ್ರಗಳನ್ನು ನೋಡುತ್ತಾ ದೋಣಿ ವಿಹಾರ ನಡೆಸುವುದು ಅಲೆಪಿಯ ಮ್ಯಾಜಿಕ್ ಅನುಭವವನ್ನು ಕೊಡುತ್ತದೆ.


ಫೋರ್ಟ್ ಕೊಚ್ಚಿ (Fort Kochi)

ವಾರಾಂತ್ಯದ ವಿಹಾರಕ್ಕೆ ಫೋರ್ಟ್ ಕೊಚ್ಚಿಯು ಒಂದು ಸುಂದರ ತಾಣ. ಹಳೆಯ ವಸಾಹತುಶಾಹಿ ಕಟ್ಟಡಗಳಿಂದ ಕೂಡಿದ್ದು, ಕಿರಿದಾದ ಕಲ್ಲುಮಣ್ಣುಗಳಿಂದ ತುಂಬಿದ ಬೀದಿಗಳಲ್ಲಿ ನಡೆದುಕೊಂಡು ಹೋಗುವಾಗ ಈ ಸ್ಥಳದ ಹಿಂದಿನ ವೈಭವದ ದಿನಗಳ ಬಗ್ಗೆ ಚಿತ್ರ ಬರೆದಂತ ಭಾಸವಾಗುವುದು. ಇಲ್ಲಿ ಚೈನೀಸ್ ಫಿಶಿಂಗ್ ನೆಟ್ಸ್, ಸೇಂಟ್ ಫ್ರಾನ್ಸಿಸ್ ಚರ್ಚ್ ಮತ್ತು ಮತ್ತಂಚೇರಿ ಅರಮನೆಗೆ ಭೇಟಿ ನೀಡಿ ರಜಾ ದಿನವನ್ನು ಕಳೆಯಬಹುದು. ಈ ನಗರದ ಪರಂಪರೆಯ ಬಗ್ಗೆ ತಿಳಿದುಕೊಳ್ಳಲು ಕಥಕ್ಕಳಿ ಪ್ರದರ್ಶನವನ್ನು ಮಿಸ್ ಮಾಡದೇ ನೋಡಿ. ಕೇರಳದ ಶಾಸ್ತ್ರೀಯ ನೃತ್ಯ ಪ್ರಕಾರವು ಅದರ ರೋಮಾಂಚಕ ಸಾಂಸ್ಕೃತಿಕ ಸಂಪ್ರದಾಯಗಳನ್ನು ಬಹಿರಂಗಪಡಿಸುತ್ತದೆ.


ವಾಗಮೋನ್ (Vagamon)

ಕೇರಳದ ಪಶ್ಚಿಮ ಘಟ್ಟಗಳ ಮಡಿಕೆಗಳೊಳಗೆ ಅಡಗಿರುವ ವಾಗಮೋನ್ ಶಾಂತವಾದ, ಸಣ್ಣ ಗಿರಿಧಾಮವಾಗಿದೆ. ಪ್ರವಾಸಿಗರಿಗೆ ರೋಲಿಂಗ್ ಬೆಟ್ಟಗಳು, ಹಸಿರು ಹುಲ್ಲುಗಾವಲುಗಳು ಮತ್ತು ಪೈನ್ ಮರಗಳ ತೋಪುಗಳು ಜಲಪಾತಗಳ ನಡುವೆ ವಿಶ್ರಾಂತಿ ಪಡೆಯಲು ಅತ್ಯುತ್ತಮ ಅವಕಾಶವನ್ನು ನೀಡುತ್ತದೆ. ನಿಸರ್ಗವನ್ನು ಪ್ರೀತಿಸುವವರಿಗೆ ಮತ್ತು ಪೈನ್ ಫಾರೆಸ್ಟ್ ಅಥವಾ ಕುರಿಸುಮಲ ಆಶ್ರಮದಂತಹ ಹಲವಾರು ಗುಪ್ತ ರತ್ನಗಳಿಂದ ಕೂಡಿದ ವಿಸ್ಮಯಕಾರಿಯಾಗಿ ಸುಂದರವಾದ ಭೂದೃಶ್ಯದ ಮೂಲಕ ಟ್ರೆಕ್ಕಿಂಗ್‌ನಂತಹ ಸಾಹಸ ಚಟುವಟಿಕೆಗಳನ್ನು ಇಲ್ಲಿ ನಡೆಸಬಹುದು. ಪ್ಯಾರಾಗ್ಲೈಡಿಂಗ್ ಮತ್ತು ರಾತ್ರಿಯ ಕ್ಯಾಂಪಿಂಗ್ ಗೆ ಸೂಕ್ತ ತಾಣ ಗಳು ಇಲ್ಲಿದೆ.

ಇದನ್ನೂ ಓದಿ: Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?


ಚೆರೈ ಬೀಚ್ (Cherai Beach)

ಕೊಚ್ಚಿ ಬಳಿ ಪರಿಪೂರ್ಣ ವಿಶ್ರಾಂತಿ ಅನುಭವಕ್ಕಾಗಿ, ಬೀಚ್ ವಿಹಾರಕ್ಕಾಗಿ ಪಟ್ಟಣದಿಂದ ಸ್ವಲ್ಪ ದೂರದಲ್ಲಿರುವ ಚೆರೈ ಬೀಚ್‌ಗೆ ಭೇಟಿ ನೀಡಬಹುದು. ಇದು ಕರಾವಳಿಯ ಉದ್ದಕ್ಕೂ ತೂಗಾಡುತ್ತಿರುವ ತೆಂಗಿನ ಮರಗಳು, ಪ್ರಾಚೀನ ಮರಳು, ಚಿನ್ನದ ಬಣ್ಣದಲ್ಲಿ ಕಂಗೊಳಿಸುವ ಸೂರ್ಯ ಮತ್ತು ನೀಲಿ ಅರೇಬಿಯನ್ ಸಮುದ್ರದಿಂದ ಸುತ್ತುವರೆದಿದೆ. ಸೂರ್ಯನನ್ನು ನೋಡುತ್ತಾ ತೀರದಲ್ಲಿ ಸುತ್ತಾಡಲು ಪರಿಪೂರ್ಣ ವಾತಾವರಣವನ್ನು ಸೃಷ್ಟಿಸುತ್ತದೆ. ಇಲ್ಲಿ ತಾಜಾ ಸಮುದ್ರಾಹಾರ ಸತ್ಕಾರವನ್ನು ಪಡೆಯಬಹುದು

Continue Reading

ಧಾರ್ಮಿಕ

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

ಶ್ರೀ ಶಂಕರರು (Shankara Jayanti 2024) ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡಿದ್ದರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತಿದ್ದರು. ಸಂನ್ಯಾಸಕ್ಕೆ ತಾಯಿಯ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಆಗ ತಾಯಿ ಒಪ್ಪಲೇಬೇಕಾಯಿತು.

VISTARANEWS.COM


on

Shankara Jayanti 2024
Koo

ಶಂಕರಾಚಾರ್ಯರು (Shankara Jayanti 2024) ಜೀವಿಸಿದ್ದು ಕೇವಲ 32 ವರ್ಷ. ಆದರೆ ಅವರು ಸಾಧಿಸಿದ್ದು ಅಪಾರ. ಹಿಂದೂ ಧರ್ಮದ ಏಳಿಗೆಗೆ ಅವರ ಕೊಡುಗೆ ಅಮೂಲ್ಯ. ಶಂಕರರ ಬದುಕಿನ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ.

Adi Shankaracharya Jayanti
  1. ಶ್ರೀ ಶಂಕರರು ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡುಬಿಟ್ಟರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತರು. ಸಾಮಾನ್ಯರಿಗೆ ಒಂದು ವೇದವನ್ನು ಅರ್ಥ ಮಾಡಿಕೊಳ್ಳಲೇ ಹತ್ತಾರು ವರ್ಷಗಳು ಬೇಕು.
  2. ಶಂಕರಾಚಾರ್ಯರು ಜನಿಸಿದ್ದು ಕೇರಳ ಕಾಲಟಿ ಎಂಬ ಪುಟ್ಟ ಗ್ರಾಮದಲ್ಲಿ. ತಂದೆಯನ್ನು ಕಳೆದುಕೊಂಡರು. ತಾಯಿ ಅವರನ್ನು ಬೆಳೆಸಿದರು. ಅವರು ಸಂನ್ಯಾಸ ಸ್ವೀಕರಿಸಲು ಒಂದು ಪುಟ್ಟ ಪವಾಡವನ್ನೇ ಮಾಡಬೇಕಾಯಿತು. ಸಂನ್ಯಾಸಕ್ಕೆ ತಾಯಿ ಆರ್ಯಾಂಬೆಯವರ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಮಗ ಬದುಕುತ್ತಾನಲ್ಲ ಎಂಬ ಭರವಸೆಯೊಂದಿಗೆ ತಾಯಿ ಒಪ್ಪಿದರು.
  3. ಹದಿನಾರು ವರ್ಷ ಪ್ರಾಯ ಆಗುವುದರೊಳಗಾಗಿ ಅವರು ಉಪನಿಷತ್, ಬ್ರಹ್ಮಸೂತ್ರ, ಭಗವದ್ಗೀತೆಗಳಿಗೆ ಭಾಷ್ಯವನ್ನು ರಚಿಸಿದರು. ಆದಿಶಂಕರರು ಭಗವದ್-ಗೀತೆ, ಉಪನಿಷತ್ ಹಾಗು ಬ್ರಹ್ಮಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು.
  4. ಭಾರತದಾದ್ಯಂತ ‘ದಿಗ್ವಿಜಯ ಯಾತ್ರೆʼ ಕೈಗೊಂಡರು. ವೇದವಿರೋಧಿಗಳನ್ನು ವಾಗ್ವಾದಕ್ಕೆ ಕರೆದರು. ಏಕಾಂಗಿಯಾಗಿ ಚರ್ಚೆ, ವಿಚಾರಮಂಡನೆ, ವಾದಗಳ‌ ಮೂಲಕ ಬ್ರಹ್ಮವಾದಕ್ಕೆ ಎಳೆತಂದರು. ದೇಶದುದ್ದಗಲಕ್ಕೂ ಸಂಚರಿಸಿ, ಅಲ್ಲಿಯ ವಿದ್ವಾಂಸರನ್ನು, ಜನರನ್ನು, ರಾಜರನ್ನು ವೈದಿಕತೆಗೆ ತಂದರು.
  5. ಆರು ಮತಗಳನ್ನು ಖಂಡಿಸಿ ತಮ್ಮ ಮತವನ್ನು ಸ್ಥಾಪಿಸಿದ ಪರಿಣಾಮ ಅವರನ್ನು ‘ಷಣ್ಮತ ಖಂಡನಾಚಾರ್ಯ’ ಮತ್ತು ಷಣ್ಮತ ಪ್ರತಿಷ್ಠಾಪನಾಚಾರ್ಯ’ ಎಂದು ಕರೆಯಲಾಯಿತು. ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು.
  6. ಧರ್ಮವನ್ನು ಉಳಿಸಿ ಬೆಳೆಸುವ ಉದ್ದೇಶಕ್ಕಾಗಿ ಮಠಗಳ ಪರಿಕಲ್ಪನೆಯನ್ನು ತಂದರು. ಮಠ ಮತ್ತು ಯತಿಗಳು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು ಎಂಬ ಆಶಯ ಅವರದಾಗಿತ್ತು. ದೇಶದ ಉದ್ದಗಲಗಳಲ್ಲಿ ಮಠಗಳನ್ನು ಸ್ಥಾಪಿಸಿದರು. ಅವುಗಳಲ್ಲಿ ಮುಖ್ಯವಾದದ್ದು ಶೃಂಗೇರಿಯ ಮಠ. ಇತರವು ಪೂರ್ವದಲ್ಲಿ ಪುರಿ, ಪಶ್ಚಿಮದಲ್ಲಿ ದ್ವಾರಕಾ, ಉತ್ತರದಲ್ಲಿ ಬದರೀನಾಥ, ಕಂಚಿಯ ಕಾಮಕೋಟಿಗಳಲ್ಲಿವೆ.
  7. ಸೂರ್ಯ- ಗಣಪತಿ- ಅಂಬಿಕಾ- ಶಿವ- ವಿಷ್ಣುಗಳನ್ನು ಪೂಜಿಸುವ ಪಂಚಾಯತನ ಪೂಜೆಯನ್ನು ತಂದರು. ಈ ದೇವತೆಗಳನ್ನು ಭಾರತದ ಐದು ಕಡೆಗಳಲ್ಲಿ ಸಿಗುವ ಸ್ಫಟಿಕ, ಶೋಣಾಭದ್ರ, ಸ್ವರ್ಣಮುಖಿ, ಬಾಣಲಿಂಗ, ಸಾಲಿಗ್ರಾಮ ಎಂಬ ಕಲ್ಲಿನ ಮೂಲಕ ಪೂಜಿಸಲಾಗುತ್ತದೆ.
  8. ಮೂವತ್ತೆರಡು ವರ್ಷಗಳಲ್ಲಿ ಹಲವು ಮನುಷ್ಯರು ಸೇರಿ ಹಲವು ಜನ್ಮಗಳಲ್ಲಿ ಮಾಡುವಷ್ಟು ಕೆಲಸವನ್ನು ಮಾಡಿ ಮುಗಿಸಿದರು. ಭಾಷ್ಯಗಳನ್ನು ಹೊರತುಪಡಿಸಿ ನೂರಾರು ಸ್ತೋತ್ರ – ಸಾಹಿತ್ಯಗಳನ್ನು ರಚಿಸಿದರು.
  9. ಮೂರು ಸೂತ್ರಗಳಲ್ಲಿ ಶ್ರೀ ಶಂಕರರ ಉಪದೇಶವನ್ನು ಸೂತ್ರೀಕರಿಸಬಹುದು- “ಅಹಂ ಬ್ರಹ್ಮಾಸ್ಮಿ” (ನನ್ನೊಳಿರುವ ಆತ್ಮವೇ ಪರಂಬ್ರಹ್ಮ), “ತತ್ ತ್ವಮ್ ಅಸಿ” (ನೀನು ಅದೇ ಆತ್ಮದಿಂದ ಆಗಿರುವೆ) ಮತ್ತು ಜೀವಶ್ಶಿವೋಹಂʼ (ಜೀವನೇ ಶಿವ) ಎಂಬುದು ಅದ್ವೈತ ತತ್ವದ ಮೂಲ ಮಂತ್ರಗಳು. ಇದಲ್ಲದೇ ಪರಮಾತ್ಮ ಮಾತ್ರ ಸತ್ಯ; ಈ ಜಗತ್ತಿನಲ್ಲಿ ಮಿಕ್ಕೆಲ್ಲವೂ ಮಿಥ್ಯ ಹಾಗೂ “ಸರ್ವಂ ಬ್ರಹ್ಮಮಯಂ ಜಗತ್” (ಈ ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದಲೇ ಆವರಿಸಲ್ಪಟ್ಟಿದೆ) ಎಂಬುದಾಗಿ ಜಗತ್ತಿಗೆ ಸಾರಿದರು.
Continue Reading

ಪ್ರವಾಸ

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

ನಿರ್ದಿಷ್ಟ ಯೋಜನೆ ಮತ್ತು ಸ್ಥಳೀಯ ವಿಚಾರಗಳನ್ನು ತಿಳಿದುಕೊಳ್ಳುವ ಮೂಲಕ ಕಡಿಮೆ ಬಜೆಟ್‌ನಲ್ಲಿ ಸಂಪೂರ್ಣ ದ್ವಾರಕವನ್ನು ಸುತ್ತಾಡಲು (Dwarka Tour) ಸಾಧ್ಯವಿದೆ. ಪುರಾತನ ದೇವಾಲಯ, ಸುಂದರವಾದ ಕಡಲತೀರಗಳೊಂದಿಗೆ ಅತ್ಯಾಕರ್ಷಕ ತಾಣದಲ್ಲಿ ಸುಂದರವಾದ ಪ್ರವಾಸ ಅನುಭವವನ್ನು ನಮ್ಮದಾಗಿಸಬಹುದು.

VISTARANEWS.COM


on

By

Dwarka Tour
Koo

ದ್ವಾರಕಾ ಹೆಸರು ಕೇಳಿದಾಕ್ಷಣವೇ ಮನಸ್ಸು ಪ್ರಫುಲ್ಲವಾಗುತ್ತದೆ. ಹಿಂದೂಗಳಿಗೆ ಅಯೋಧ್ಯೆ (ayodhya) ರಾಮ ಮಂದಿರದಷ್ಟೇ (ram mandir) ಪವಿತ್ರವಾದ ಮತ್ತೊಂದು ಕ್ಷೇತ್ರ ದ್ವಾರಕಾ (Dwarka Tour). ಭಾರತದ ಪಶ್ಚಿಮ ಕರಾವಳಿಯ ಗುಜರಾತ್ (gujarat) ರಾಜ್ಯದಲ್ಲಿರುವ ದ್ವಾರಕಾ ಆಳವಾದ ಆಧ್ಯಾತ್ಮಿಕ, ಐತಿಹಾಸಿಕ ಮತ್ತು ನೈಸರ್ಗಿಕ ಸೌಂದರ್ಯಗಳನ್ನು ಹೊಂದಿರುವ ಪಟ್ಟಣವಾಗಿದೆ. ಬಜೆಟ್ ಸ್ನೇಹಿ (Budget Friendly) ಪ್ರವಾಸ ಮಾಡುವ ಯೋಚನೆ ಇದ್ದರೆ ದ್ವಾರಕವನ್ನು ಅನ್ವೇಷಿಸಬಹುದು.

ದ್ವಾರಕಾದ ಪ್ರಾಚೀನ ದೇವಾಲಯಗಳು, ಸುಂದರ ಕಡಲತೀರಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುತ್ತದೆ. ಇದು ದೂರದೂರುಗಳಿಂದ ಪ್ರವಾಸಿಗರನ್ನು ಹಾಗೂ ಯಾತ್ರಿಕರನ್ನು ತನ್ನತ್ತ ಚುಂಬಕದಂತೆ ಸೆಳೆಯುತ್ತದೆ. ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕೃಷ್ಣನ ನಗರಿಯಲ್ಲಿ ಪ್ರವಾಸಿಗರು ಬಜೆಟ್ ಸ್ನೇಹಿಯಾಗಿ ಸುತ್ತಾಡ ಬಹುದಾದ ಹಲವಾರು ಪ್ರದೇಶಗಳಿವೆ.


ಪ್ರಾಚೀನ ದೇವಾಲಯಗಳು

ದ್ವಾರಕಾವು ಚಾರ್ ಧಾಮ್ ತೀರ್ಥಯಾತ್ರಾ ಸ್ಥಳಗಳಲ್ಲಿ ಮತ್ತು ಶ್ರೀಕೃಷ್ಣನ ಪ್ರಾಚೀನ ಸಾಮ್ರಾಜ್ಯದಲ್ಲಿ ಸ್ಥಾನ ಪಡೆದಿರುವುದರಿಂದ ಅದು ಆಧ್ಯಾತ್ಮಿಕ ನೆಲೆಯಾಗಿದೆ. ಬಜೆಟ್ ಸ್ನೇಹಿ ಪ್ರಯಾಣ ಮಾಡಲು ಶ್ರೀಕೃಷ್ಣ ಸಮರ್ಪಿತ ದ್ವಾರಕಾಧೀಶ ದೇವಾಲಯ ಅಥವಾ ನಾಗೇಶ್ವರ ಜ್ಯೋತಿರ್ಲಿಂಗ ದೇವಾಲಯದಂತಹ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಬಹುದು. ಇದು ಹನ್ನೆರಡು ಪವಿತ್ರ ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದ್ದು, ಭಕ್ತರು ಮತ್ತು ಸಂದರ್ಶಕರಿಗೆ ಉಚಿತ ಪ್ರವೇಶವನ್ನು ಕಲ್ಪಿಸುತ್ತದೆ. ಯಾವುದೇ ವೆಚ್ಚವಿಲ್ಲದೆ ಇಲ್ಲಿ ದೈವಿಕ ವಾತಾವರಣವನ್ನು ಅನುಭವಿಸಬಹುದು. ಇದಲ್ಲದೇ ಪವಿತ್ರ ಸ್ಥಳಗಳಾದ ರುಕ್ಮಿಣಿ ದೇವಿ ದೇವಸ್ಥಾನ, ಗೋಮತಿ ಘಾಟ್ ಮತ್ತು ಹಿಂದೂ ಪುರಾಣಗಳಲ್ಲಿ ಗಮನಾರ್ಹವಾದ ಬೆಟ್ ದ್ವಾರಕಾ ದ್ವೀಪಕ್ಕೆ ಭೇಟಿ ನೀಡಬಹುದು. ಇದು ಎಲ್ಲರಿಗೂ ಮುಕ್ತವಾಗಿದೆ.


ರಮಣೀಯ ಕಡಲತೀರಗಳು

ದ್ವಾರಕಾವು ಪ್ರಾಚೀನ ಕಡಲತೀರಗಳು ಮತ್ತು ಕರಾವಳಿ ಪ್ರದೇಶಗಳನ್ನು ಹೊಂದಿದೆ. ವಿವಿಧ ಮನರಂಜನಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು, ವಿಶ್ರಾಂತಿ ಪಡೆಯಲು ಜೊತೆಗೆ ಅರೇಬಿಯನ್ ಸಮುದ್ರದ ಸ್ಪಷ್ಟ ನೋಟವನ್ನು ಕಾಣಲು, ವಿಹಂಗಮ ಸೂರ್ಯಾಸ್ತ, ಒಂಟೆ ಸವಾರಿ, ಬೀಚ್ ಪಿಕ್ನಿಕ್‌ಗಳನ್ನು ಇಲ್ಲಿ ಆನಂದಿಸಬಹುದು. ಇದರೊಂದಿಗೆ ಬೀಟ್ ದ್ವಾರಕಾ ಬೀಚ್, ಗೋಪಿ ತಲವ್ ಮತ್ತು ಓಖಾ-ಮಧಿ ಬೀಚ್ ನಲ್ಲಿ ಶಾಂತಿಯುತ ಪರಿಸರದಲ್ಲಿ ಈಜು, ಸೂರ್ಯನ ಸ್ನಾನ ಮತ್ತು ಪಕ್ಷಿ ವೀಕ್ಷಣೆಯನ್ನು ನಡೆಸಬಹುದು.

ಸ್ಥಳೀಯ ಸಂಸ್ಕೃತಿ

ವರ್ಷದುದ್ದಕ್ಕೂ ದ್ವಾರಕಾದಲ್ಲಿ ವಿವಿಧ ಸಾಂಸ್ಕೃತಿಕ ಹಬ್ಬಗಳು ಮತ್ತು ಕಾರ್ಯಕ್ರಮಗಳು ನಡೆಯುತ್ತವೆ. ಇದು ಪ್ರಯಾಣಿಕರಿಗೆ ಸ್ಥಳೀಯ ಸಂಪ್ರದಾಯಗಳು ಮತ್ತು ಪದ್ಧತಿಗಳ ಒಳನೋಟವನ್ನು ತೋರಿಸುತ್ತದೆ. ಪಟ್ಟಣದಲ್ಲಿ ವರ್ಣರಂಜಿತ ಮೆರವಣಿಗೆ, ಸಾಂಸ್ಕೃತಿಕ ಪ್ರದರ್ಶನ ಮತ್ತು ಧಾರ್ಮಿಕ ಆಚರಣೆಗಳನ್ನು ಆನಂದಿಸಬಹುದು. ಜನ್ಮಾಷ್ಟಮಿ, ದೀಪಾವಳಿ ಮತ್ತು ಹೋಳಿ ಹಬ್ಬಗಳು ಇಲ್ಲಿ ಅತ್ಯಂತ ವೈಭವದಿಂದ ನಡೆಯುತ್ತದೆ. ಅಲ್ಲದೆ, ಗರ್ಬಾ ಮತ್ತು ದಾಂಡಿಯಾ ರಾಸ್ ನೃತ್ಯಗಳು, ಸಾಂಪ್ರದಾಯಿಕ ಸಂಗೀತ ಕಛೇರಿಗಳು ಮತ್ತು ಪಟ್ಟಣದ ವಿವಿಧ ಸ್ಥಳಗಳಲ್ಲಿ ನಡೆಯುವ ಜಾನಪದ ಕಲಾ ಪ್ರದರ್ಶನಗಳನ್ನು ವೀಕ್ಷಿಸಲು ತಪ್ಪಿಸಿಕೊಳ್ಳಬೇಡಿ. ಇದು ದ್ವಾರಕೆಯ ಸಂಸ್ಕೃತಿಯ ರೋಮಾಂಚಕ ಅನುಭವವನ್ನು ಕೊಡುತ್ತದೆ.


ಗುಜರಾತಿ ಖಾದ್ಯ

ದ್ವಾರಕಾ ಪ್ರವಾಸವು ಅಲ್ಲಿನ ಗುಜರಾತಿ ಖಾದ್ಯಗಳನ್ನು ಸವಿಯದೇ ಪೂರ್ಣಗೊಳ್ಳುವುದಿಲ್ಲ. ಸ್ಥಳೀಯ ತಿನಿಸುಗಳು ಅಥವಾ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಅಲ್ಲಿ ಧೋಕ್ಲಾ, ಖಾಂಡ್ವಿ ಅಥವಾ ಥೇಪ್ಲಾ ಮೊದಲಾದ ಭಕ್ಷ್ಯಗಳನ್ನು ಸವಿಯಬಹುದು. ಇದರೊಂದಿಗೆ ಪಟ್ಟಣದಲ್ಲಿ ಖಿಚು, ಫಫ್ಡಾ, ಜಲೇಬಿ-ಫಫ್ಡಾ ಸೇರಿದಂತೆ ಕೆಲವು ಪ್ರಸಿದ್ಧ ಭಕ್ಷ್ಯಗಳು ಕೈಗೆಟುಕುವ ದರದಲ್ಲಿ ಲಭ್ಯವಾಗುತ್ತದೆ.

ಇದನ್ನೂ ಓದಿ: Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಕೈಗೆಟುಕುವ ದರದಲ್ಲಿ ವಸತಿ

ದ್ವಾರಕಾದಲ್ಲಿ ಬಜೆಟ್‌ಗೆ ಅನುಗುಣವಾದ ಅತಿಥಿ ಗೃಹಗಳು, ವಸತಿಗೃಹಗಳು ಮತ್ತು ಹೊಟೇಲ್ ಗಳು ಲಭ್ಯವಿದೆ. ಸಮಂಜಸವಾದ ದರದಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸ್ವಚ್ಛ ಕೊಠಡಿಗಳನ್ನು ಒದಗಿಸುವ ಬಜೆಟ್ ಸ್ನೇಹಿ ಹೊಟೇಲ್‌ಗಳಲ್ಲಿ ಉಳಿಯಬಹುದು.

ಇದರೊಂದಿಗೆ ದ್ವಾರಕಾದಲ್ಲಿನ ಹಲವಾರು ಅತಿಥಿಗೃಹಗಳು ಮತ್ತು ಬಜೆಟ್ ಸ್ನೇಹಿ ಹೊಟೇಲ್ ಗಳು ರಿಯಾಯಿತಿ ದರದಲ್ಲಿ ಹತ್ತಿರದ ಆಕರ್ಷಣೆಗಳಿಗೆ ವಸತಿ, ಊಟ ಮತ್ತು ಸಾರಿಗೆಯನ್ನು ಒಳಗೊಂಡಿರುವ ಪ್ಯಾಕೇಜ್ ಡೀಲ್‌ಗಳನ್ನು ಒದಗಿಸುತ್ತದೆ. ಹೆಚ್ಚು ಖರ್ಚು ಮಾಡದೇ ಇದರ ಪ್ರಯೋಜನವನ್ನು ಪಡೆಯಬಹುದು.

Continue Reading
Advertisement
Kannada New Movie swapna mantapa shooting compleated
ಸ್ಯಾಂಡಲ್ ವುಡ್21 mins ago

Kannada New Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’ ಚಿತ್ರೀಕರಣ ಮುಕ್ತಾಯ

ಫ್ಯಾಷನ್21 mins ago

Star saree fashion: ಯುವತಿಯರನ್ನು ಸೆಳೆಯುತ್ತಿದೆ ನಟಿ ಭಾವನಾ ರಾವ್‌ ಸ್ಯಾಟೀನ್‌ ಸಿಲ್ಕ್‌ ಸೀರೆ

Google
ವಿದೇಶ35 mins ago

Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Crazy MS Dhoni fan
ಕ್ರಿಕೆಟ್35 mins ago

Crazy MS Dhoni fan: 2100 ಕಿ.ಮೀ ದೂರ ಸೈಕಲ್​ ತುಳಿದು ದಿಲ್ಲಿಯಿಂದ ಚೆನ್ನೈಗೆ ಬಂದ ಧೋನಿ ಅಭಿಮಾನಿ; 23 ದಿನಗಳಲ್ಲಿ ಮಿಷನ್​ ಕಂಪ್ಲೀಟ್​

Money Guide
ಮನಿ-ಗೈಡ್37 mins ago

Money Guide: ಪ್ಯಾನ್‌ ಕಾರ್ಡ್‌ ಕಳೆದುಹೋದರೆ ಚಿಂತೆ ಬೇಡ; ಮನೆಯಲ್ಲೇ ಕೂತು ಡುಬ್ಲಿಕೇಟ್‌ ಪಡೆಯುವ ವಿಧಾನ ಇಲ್ಲಿದೆ

Prajwal Revanna Case Prajwal never boarded a flight from Germany
ಕ್ರೈಂ40 mins ago

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

B C Mylarappa
ಕರ್ನಾಟಕ42 mins ago

B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

Job Alert
ಉದ್ಯೋಗ44 mins ago

Job Alert: ಐಐಎಂಬಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

House of the Dragon season 2 new trailer hints at a bloody
ಸಿನಿಮಾ57 mins ago

House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

Google Update
ತಂತ್ರಜ್ಞಾನ57 mins ago

Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ12 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ22 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202424 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌