Travel Tips: Beach Tourism: ಬ್ಲೂ ಸರ್ಟಿಫಿಕೇಶನ್‌ ಪಡೆದ ಭಾರತದ ಸ್ವಚ್ಛ ಬೀಚ್‌ಗಳಿವು! (ಭಾಗ 2) - Vistara News

ಪ್ರವಾಸ

Travel Tips: Beach Tourism: ಬ್ಲೂ ಸರ್ಟಿಫಿಕೇಶನ್‌ ಪಡೆದ ಭಾರತದ ಸ್ವಚ್ಛ ಬೀಚ್‌ಗಳಿವು! (ಭಾಗ 2)

ಎಲೆಮರೆ ಕಾಯಿಯಂಥ, ಅಷ್ಟಾಗಿ ಇನ್ನೂ ಬೆಳಕಿಗೆ ಬಾರದ ಚಂದನೆಯ ಹಲವು ಸಮುದ್ರತೀರಗಳೆಷ್ಟೋ ಇವೆ. ಇವನ್ನೆಲ್ಲ ಹಾಗೆಯೇ ಉಳಿಸುವ ಜೊತೆಗೆ, ನಮ್ಮ ಸುತ್ತಮುತ್ತಲ ಸಮುದ್ರ ತೀರಗಳನ್ನು ಸ್ವಚ್ಛವಾಗಿರಿಸಿಕೊಳ್ಳುವಲ್ಲಿ ಪ್ರವಾಸಿರ ಪಾತ್ರವೂ ಇದೆ

VISTARANEWS.COM


on

Womens Day 2023 Radhanagar Beach
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿಲ್ಲಬಹುದಾದ, ಚಂದನೆಯ ಸಮುದ್ರ ತೀರಗಳಿವೆ. ಸ್ಫಟಿಕ ಶುದ್ಧ ಸೊಗಸಿನ ಈ ಬೀಚ್‌ಗಳಲ್ಲಿ 12 ತೀರಗಳು ಬ್ಲೂ ಸರ್ಟಿಫಿಕೇಶನ್‌ ಪಡೆದಿವೆ. ಮೊದಲ ಭಾಗದಲ್ಲಿ ಆರು ಬೀಚ್‌ಗಳ ವಿವರ ಓದಿದ್ದೀರಿ. ಪಟ್ಟಿಯ ಮುಂದುವರಿದ ಭಾಗ ಇಲ್ಲಿದೆ!

೭. ಕಪ್ಪದ್‌, ಕೇರಳ: ಕೇರಳದ ಈ ಕಡಲ ಕಿನಾರೆಗೊಂದು ಇತಿಹಾಸವೇ ಇದೆ. ೧1498ರಲ್ಲಿ ವಾಸ್ಕೋಡಗಾಮ 170 ಮಂದಿ ಸಹಚರರೊಂದಿಗೆ ಭಾರತಕ್ಕೆ ಬಂದಿಳಿದ ಕಡಲ ಕಿನಾರೆಯಿದು. ಇದು ಸ್ವಚ್ಛವಷ್ಟೇ ಅಲ್ಲ, ಚಂದನೆಯ ವಲಸಿಗ ಹಕ್ಕಿಗಳಿಗೂ ತಾಣ. ಸದ್ಯ ಪ್ರವಾಸೋದ್ಯಮಕ್ಕೆ ಸೂಕ್ತವಾಗುವಂತೆ ವಾಕಿಂಗ್‌ ಟ್ರ್ಯಾಕ್‌, ವಾಶ್‌ರೂಂಗಳು ಸೇರಿದಂತೆ ಹಲವು  ನಾಗರಿಕ ಸೇವೆಗಳು ಇಲ್ಲಿ ಲಭ್ಯವಿವೆ.

೮. ಗೋಲ್ಡನ್‌ ಬೀಚ್‌, ಪುರಿ, ಒಡಿಶಾ: ಒಡಿಶಾದ ಪುರಿಯ ಗೋಲ್ಡನ್‌ ಬೀಚ್‌ ಸಾವಿರಾರು ಜನರನ್ನು ನಿತ್ಯವೂ ಸೆಳೆಯುವ ಪ್ರಸಿದ್ಧ ಕಡಲತೀರಗಳಲ್ಲೊಂದು. ಇಲ್ಲಿ ಮಾಡಲಾದ ಸಾರ್ವಜನಿಕ ಸೇವೆಗಳಾದ, ಟಾಯ್ಲೆಟ್‌, ವಿಕಲಚೇತನರಿಗೆ ಸರಳ ವ್ಯವಸ್ಥೆಗಳು, ವಾಚ್‌ಟವರ್‌ಗಳು, ಸ್ನಾನದ ಝೋನ್‌ಗಳು ಎಲ್ಲವೂ ಇದನ್ನು ಅಧ್ಬುತವನ್ನಾಗಿಸಿದೆ. ಪ್ರತಿ ವರ್ಷವೂ ಇಲ್ಲಿ ನಡೆಯುವ ಬೀಚ್‌ ಉತ್ಸವ, ಮರಳು ಚಿತ್ರಕಲೆ ಸಾಕಷ್ಟು ಜನರನ್ನಿಲ್ಲಿಗೆ ಸೆಳೆಯುತ್ತದೆ.‌

golden beach
ಗೋಲ್ಡನ್‌ ಬೀಚ್

೯. ಮಿನಿಕೋಯ್‌ ತುಂಡಿ ಬೀಚ್‌, ಲಕ್ಷದ್ವೀಪ: ಪಚ್ಚೆ ರತ್ನವೆನ್ನ ನೀರಲ್ಲಿ ಕರಗಿ ಹೋಗಿದೆಯೋ ಎಂಬಂತೆ ಸದಾ ಹರಿರು ಬಣ್ಣದಲ್ಲಿ ಫಳಪಳಿಸುತ್ತಿರುವ ಸಮುದ್ರ ತೀರವಿದು. ಜೀವನದಲ್ಲಿ ಒಮ್ಮೆಯಾದರೂ ಭಾರತದ ಈ ಪುಟಾಣೀ ದ್ವೀಪವನ್ನು ನೋಡಿ, ಇಲ್ಲಿನ ಸ್ಪಟಿಕ ಶುದ್ಧ ತೀರಗಳಲ್ಲಿ ಅಲೆದಾಡಬೇಕು.

೧೦. ಕದ್ಮತ್‌ ಬೀಚ್‌, ಲಕ್ಷದ್ವೀಪ: ಲಕ್ಷದ್ವೀಪದ ಕಡಲ ಕಿನಾರೆಗಳೆಲ್ಲವೂ ಅದ್ಭುತವೇ. ಹಸಿರು ಹಸಿರಾಗಿ ಕಂಗೊಳಿಸುವ ಇವು ನಮ್ಮ ಸಾದಾ ಬೀಚ್‌ಗಳಿಗಿಂತ ಕೊಂಚ ಭಿನ್ನವಾಗಿಯೇ ಕಾಣುತ್ತವೆ.

ಇದನ್ನೂ ಓದಿ: Travel Tips: ಗುಂಡಿಗೆ ಗಟ್ಟಿ ಇದ್ದವರು ಪ್ರಯಾಣಿಸಲೇಬೇಕಾದ ಭಾರತದ ದುರ್ಗಮ ರಸ್ತೆಗಳು!

೧೧. ಈಡನ್‌ ಬೀಚ್‌, ಪಾಂಡಿಚೇರಿ: ಪಾಂಡಿಚೇರಿ ಎಂಬ ಪುಟಾಣಿ ನಗರ ಹಲವಾರು ಕಾರಣಗಳಿಗೆ ಪ್ರವಾಸಿಗರನ್ನು ಸೆಳೆಯುತ್ತದೆ. ಅವುಗಳ ಪೈಕಿ ಸುಂದರ ಕಡಲ ಕಿನಾರೆಯೂ ಒಂದು. ಈಡೆನ್‌ ಬೀಚ್‌ ಪಾಂಡಿಯ ಚಂದನೆಯ ಸ್ವಚ್ಛವಾದ ಬೀಚ್‌ಗಳ ಪೈಕಿ ಅಗ್ರಗಣ್ಯ. ಪಾಂಡಿಯ ಆರೋವಿಲ್ಲೆಯಲ್ಲಿ ನಡೆದಾಡಿ, ಧ್ಯಾನ ಮಾಡಿ, ಅರವಿಂದಾಶ್ರಮದಲ್ಲಿ ಒಂದಿಷ್ಟು ಹೊತ್ತು ಕೂತು, ಸಂಜೆ ಈ ಕಡಲ ಕಿನಾರೆಯ ಗಾಳಿ ಸೇವನೆಗೆ ಕೂತರೆ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಅನ್ನಬಹುದು.

kovalam
ಕೋವಲಂ ಬೀಚ್

೧೨. ಕೋವಲಂ ಬೀಚ್‌, ತಮಿಳುನಾಡು: ಸರ್ಫಿಂಗ್‌ ಕಲಿಯಲು ಆಸಕ್ತಿಯಿರುವ ಮಂದಿಗೆ ದಕ್ಕುವ ಕೆಲವೇ ಕೆಲವು ದಕ್ಷಿಣದ ಬೀಚ್‌ಗಳ ಪೈಕಿ ಕೋವಲಂ ಬೀಚ್‌ ಕೂಡಾ ಒಂದು. ಚಂದನೆಯ, ಚಿಪ್ಪುಗಳಿಂದಾವೃತವಾದ ಮರಳ ದಿಣ್ಣೆಗಳಿರುವ ಸಂಜೆಯ ಹೊತ್ತು ತಪ್ಪದೇ ಭೇಟಿಕೊಡಬಹುದಾದ ಸರಳ ಸುಂದರ ಬೀಚ್‌ ಇದು. ಚೈನ್ನೈನ ಜನಜಂಗುಳಿಯ ಸಮುದ್ರ ತೀರಗಳಾದ ಬೆಸೆಂಟ್‌ ನಗರ ಹಾಗೂ ಮರೀನಾ ಬೀಚ್‌ಗಳಿಂದ ದೂರವಿರುವ ಆಫ್‌ಬೀಟ್‌ ಜಾಗ ಬೇಕು ಎಂದು ಆಸೆಪಡುವ ಮಂದಿಗೆ, ಚೆನ್ನೈನಿಂದ ಸುಮಾರು ೪೦ ಕಿಮೀ ದೂರದಲ್ಲಿರುವ ಈ ಬೀಚ್‌ ಬೆಸ್ಟ್‌ ಆಯ್ಕೆ.

ಕೇವಲ ಇವಿಷ್ಟೇ ಅಲ್ಲ, ಇವೆಲ್ಲ ಈಗಾಗಲೇ ಬ್ಲೂ ಸರ್ಟಿಫಿಕೇಶನ್‌ ಪಡೆದ ಸಮುದ್ರ ತೀರಗಳ ಕಥೆಯಾಯಿತು. ಇನ್ನೂ ಎಲೆಮರೆ ಕಾಯಿಯಂಥ, ಅಷ್ಟಾಗಿ ಇನ್ನೂ ಬೆಳಕಿಗೆ ಬಾರದ ಚಂದನೆಯ ಹಲವು ಸಮುದ್ರತೀರಗಳೆಷ್ಟೋ ಇವೆ. ಇವನ್ನೆಲ್ಲ ಹಾಗೆಯೇ ಉಳಿಸುವ ಜೊತೆಗೆ, ನಮ್ಮ ಸುತ್ತಮುತ್ತಲ ಸಮುದ್ರ ತೀರಗಳನ್ನು ಸ್ವಚ್ಛವಾಗಿರಿಸಿಕೊಳ್ಳುವಲ್ಲಿ ಪ್ರವಾಸಿರ ಪಾತ್ರವೂ ಇದೆ ಎಂಬುದನ್ನು ಮಾತ್ರ ನಾವು ಸದಾ ನೆನಪಿಟ್ಟುಕೊಳ್ಳಬೇಕು.

ಸ್ಪಟಿಕ ಶುದ್ಧ ಚಂದನೆಯ ಬೀಚ್‌ಗಳ ಪಟ್ಟಿಯ ಮೊದಲ ಆರು ಬೀಚ್‌ಗಳ ವಿವರಕ್ಕೆ ಮೊದಲ ಭಾಗ ಓದಿ. ‌

ಇದನ್ನೂ ಓದಿ: Travel Tips: ಹಿಮದೂರುಗಳಲ್ಲಿ ಬದುಕಿನಲ್ಲೊಮ್ಮೆ ಮಾಡಲೇಬೇಕಾದ ಸಾಹಸ ಕ್ರೀಡೆಗಳಿವು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

ಊಟಿಗೆ ಯಾವ ಸಮಯದಲ್ಲಿ ಬೇಕಾದರೂ ಭೇಟಿ ನೀಡಬಹುದು. ಇಲ್ಲಿ ಪ್ರತಿಯೊಂದು ತಿಂಗಳೂ ಏನಾದರೂ ಒಂದು ವಿಶೇಷ ಇದ್ದೇ ಇರುತ್ತದೆ. ಹೀಗಾಗಿ ನಿಮ್ಮ ಆಸಕ್ತಿಗೆ ಅನುಗುಣವಾಗಿ ಊಟಿಗೆ ಪ್ರವಾಸ (Ooty Tour) ಹೊರಡುವ ಯೋಜನೆ ಮಾಡಬಹುದು. ಊಟಿಯ ಅದ್ಭುತಗಳ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

By

Ooty Tour
Koo

ಬೇಸಿಗೆಯ ಬಿಸಿಲಿನ ಕಣ್ತಪ್ಪಿಸಿ ಪ್ರಕೃತಿಯ ಮಡಿಲಲ್ಲಿ ಕಾಲ ಕಳೆಯಬೇಕು ಎನ್ನುವ ಆಸೆ ಮನದಲ್ಲಿ ಮೂಡಿದಾಗ ಕೂಡಲೇ ನೆನಪುಗುವುದು ದಕ್ಷಿಣ ಭಾರತದ (southern India) ಸುಪ್ರಸಿದ್ಧ ಪ್ರವಾಸಿ ತಾಣ ಊಟಿ (Ooty Tour). ದಕ್ಷಿಣ ಭಾರತದ ನೀಲಗಿರಿ ಬೆಟ್ಟಗಳಲ್ಲಿ ( Nilgiri Hills) ನೆಲೆಯಾಗಿರುವ ಸುಂದರವಾದ ಗಿರಿಧಾಮ ಪ್ರದೇಶವಾಗಿರುವ ಊಟಿಯಲ್ಲಿ ಕಣ್ತುಂಬಿಕೊಳ್ಳಲು ಸಾಕಷ್ಟು ಪ್ರದೇಶಗಳಿವೆ. ಪ್ರಶಾಂತವಾದ ಭೂದೃಶ್ಯಗಳು, ಆಹ್ಲಾದಕರ ಹವಾಮಾನ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಇದು ಹೊಂದಿದೆ.

ಪ್ರವಾಸ ಪ್ರಿಯರಿಗಾಗಿ ಊಟಿ ಏನನ್ನಾದರೂ ನೀಡುತ್ತದೆ. ಅದು ಪ್ರಕೃತಿಯ ಪ್ರೀತಿ, ಸಾಹಸದ ಪ್ರಜ್ಞೆ ಅಥವಾ ಶಾಂತಿ ಮತ್ತು ಶಾಂತತೆಯ ಹಂಬಲವನ್ನು ತಣಿಸುತ್ತದೆ. ಪ್ರತಿ ಋತುವಿಗೂ ತನ್ನದೇ ಆದ ವಿಶೇಷತೆಯನ್ನು ಒದಗಿಸುತ್ತದೆ. ವರ್ಷವಿಡೀ ಬೇಸಿಗೆಯು ಬಹುವರ್ಣದ ಹೂವುಗಳನ್ನು ತರುತ್ತದೆ. ಮಳೆಗಾಲ ಬಂದೊಡನೆ ಎಲ್ಲವನ್ನೂ ಮಂಜಿನಿಂದ ಆವರಿಸುವಂತೆ ಮಾಡುತ್ತದೆ. ಶರತ್ಕಾಲದಲ್ಲಿ ಉಲ್ಲಾಸಕರವಾದ ಗಾಳಿ ಮತ್ತು ಚಳಿಗಾಲದ ತಂಪು ಅಪ್ಪುಗೆಯನ್ನು ಮರೆಯಲಾಗದು.

ಗಿರಿಧಾಮಗಳ ರಾಣಿ ಎಂದೂ ಕರೆಯಲಾಗುವ ಊಟಿಗೆ ವರ್ಷಪೂರ್ತಿ ಭೇಟಿ ಮಾಡಬಹುದು. ಪ್ರತಿ ಋತುವಿನಲ್ಲಿ ಇದು ತನ್ನದೇ ಆದ ವೈಭವವನ್ನು ತೊಂಬಿಕೊಂಡು ತನುಮನಕ್ಕೆ ಸಂತೋಷವನ್ನು ಉಣಬಡಿಸುತ್ತದೆ. ನಿಖರವಾಗಿ ಯಾವಾಗ ಹೋಗಬೇಕೆಂದು ತಿಳಿಯುವುದು ಖಂಡಿತವಾಗಿಯೂ ನಮ್ಮ ಪ್ರಯಾಣದ ಅನುಭವವನ್ನು ಸುಧಾರಿಸುತ್ತದೆ. ಊಟಿಯಲ್ಲಿ ಪ್ರತಿ ಸೀಸನ್ ಏನು ವಿಶೇಷ ಎಂಬ ಮಾಹಿತಿ ಇಲ್ಲಿದೆ.


ಬೇಸಿಗೆಯ ವೈಭವ; ಮಾರ್ಚ್‌ನಿಂದ ಜೂನ್

ಊಟಿಗೆ ಪ್ರವಾಸ ಹೋಗಲು ಅತ್ಯಂತ ಜನಪ್ರಿಯ ಸಮಯವೆಂದರೆ ಬೇಸಿಗೆಯ ತಿಂಗಳು. ಮಾರ್ಚ್‌ನಿಂದ ಜೂನ್‌ವರೆಗೆ ಹಗಲಿನ ತಾಪಮಾನವು ಇಲ್ಲಿ 15 ಡಿಗ್ರಿ ಸೆಲ್ಸಿಯಸ್ ನಿಂದ 25 ಡಿಗ್ರಿ ಸೆಲ್ಸಿಯಸ್‌ವರೆಗೆ ಇರುತ್ತದೆ. ಇದು ಬಿಸಿಯಾದ ಬಯಲು ಪ್ರದೇಶಗಳಿಗೆ ಹೋಲಿಸಿದರೆ ಇದು ತುಂಬಾ ಆರಾಮದಾಯಕವಾಗಿದೆ. ಈ ಅವಧಿಯಲ್ಲಿ ಹವಾಮಾನವು ತಂಪಾಗಿರುತ್ತದೆ. ಇದು ಹಸಿರು ಕಣಿವೆಗಳು, ಹೂಬಿಡುವ ಹೂವುಗಳು ಮತ್ತು ಬೀಳುವ ಕ್ಯಾಸ್ಕೇಡ್‌ಗಳನ್ನು ಅನ್ವೇಷಿಸಲು ಸೂಕ್ತವಾಗಿದೆ. ಪ್ರತೀ ವರ್ಷ ಮೇ ತಿಂಗಳಲ್ಲಿ, ಬೊಟಾನಿಕಲ್ ಗಾರ್ಡನ್ಸ್‌ನಲ್ಲಿ ಅದ್ಭುತವಾದ ಪುಷ್ಪ ಪ್ರದರ್ಶನವನ್ನು ನಡೆಸಲಾಗುತ್ತದೆ.


ಮಾನ್ಸೂನ್‌ ಮ್ಯಾಜಿಕ್ -ಜುಲೈನಿಂದ ಸೆಪ್ಟೆಂಬರ್

ಒಮ್ಮೆ ಮಳೆ ಬಂದರೆ ಮತ್ತೆ ಎಲ್ಲವೂ ಹಸಿರು ಬಣ್ಣಕ್ಕೆ ತಿರುಗುತ್ತದೆ. ಆದರೆ ಈ ಬಾರಿ ಹೆಚ್ಚು ತೀವ್ರವಾಗಿ ಇಡೀ ಪ್ರದೇಶವು ಸೊಂಪಾದ ಸಸ್ಯಗಳಿಂದ ಆವೃತವಾಗಿದೆ. ಎಷ್ಟರಮಟ್ಟಿಗೆ ಎಂದರೆ ಕೆಲವೊಮ್ಮೆ ಇಡೀ ಪಟ್ಟಣವು ದಟ್ಟವಾದ ಎಲೆಗಳ ಅಡಿಯಲ್ಲಿ ಕಣ್ಮರೆಯಾಗುತ್ತದೆ. ಈ ತಿಂಗಳುಗಳಲ್ಲಿ ಜುಲೈನಿಂದ ಸೆಪ್ಟೆಂಬರ್ ವರೆಗೆ, ಊಟಿಯ ಮೇಲೆ ಮಧ್ಯಮ ಅಥವಾ ಭಾರೀ ಮಳೆ ಬೀಳುತ್ತದೆ. ಇದು ಸುತ್ತಲಿನ ಎಲ್ಲವನ್ನೂ ರಿಫ್ರೆಶ್ ಮಾಡಿದಂತೆ ಭಾಸವಾಗುತ್ತದೆ. ಬೇಸಿಗೆಯ ಶಾಖದ ಅನಂತರ ಮತ್ತೊಮ್ಮೆ ಜೀವಂತ ತಳೆದಂತೆ ಕಾಣುತ್ತದೆ. ಮಳೆಯ ಕಾರಣದಿಂದ ಹೊರಾಂಗಣ ಚಟುವಟಿಕೆಗಳು ಸೀಮಿತವಾಗಿರಬಹುದು. ಆದರೆ ಮಂಜಿನಿಂದ ಆವೃತವಾದ ಪರ್ವತಗಳ ಮೂಲಕ ಹರಿಯುವ ತೊರೆಗಳ ಸೌಂದರ್ಯ ಇಮ್ಮಡಿಯಾಗುತ್ತದೆ.


ಶರತ್ಕಾಲದ ಅದ್ಭುತ- ಅಕ್ಟೋಬರ್‌ನಿಂದ ನವೆಂಬರ್

ಮಳೆಗಾಲ ಅವಧಿ ಮುಗಿದ ಅನಂತರ, ಶರತ್ಕಾಲದಲ್ಲಿ ಆಕಾಶವು ಮತ್ತೆ ನೀಲಿ ಬಣ್ಣಕ್ಕೆ ತಿರುಗುತ್ತದೆ. ಚಳಿಗಾಲ ಪ್ರಾರಂಭವಾಗುವವರೆಗೆ ಪ್ರಶಾಂತ ಪರಿಸರ ಮನಸ್ಸಿಗೆ ಹಿತ ನೀಡುತ್ತದೆ. ಈ ಸಮಯದಲ್ಲಿ ತಾಪಮಾನವು 10 ಡಿಗ್ರಿಯಿಂದ 20 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ. ಹೀಗಾಗಿ ಇದು ಚಟುವಟಿಕೆಗಳಿಗೆ ಸೂಕ್ತವಾಗಿರುತ್ತದೆ. ಟ್ರೆಕ್ಕಿಂಗ್, ಬೋಟಿಂಗ್, ದೃಶ್ಯವೀಕ್ಷಣೆ ನಡೆಸಲು ಸೂಕ್ತ ಸಮಯವಾಗಿರುತ್ತದೆ. ಹವಾಮಾನವು ಸಾಕಷ್ಟು ಸ್ನೇಹಪರವಾಗಿರುತ್ತದೆ. ಛಾಯಾಗ್ರಹಣಕ್ಕೆ ಇದು ಸೂಕ್ತ ಸಮಯ. ಈ ಸಂದರ್ಭದಲ್ಲಿ ಊಟಿ ಮಾರಿಯಮ್ಮನ್ ದೇವಾಲಯದ ಉತ್ಸವವನ್ನು ಕಣ್ತುಂಬಿಕೊಳ್ಳಲು ಮರೆಯಬೇಡಿ.


ಚಳಿಗಾಲದ ವಂಡರ್ ಲ್ಯಾಂಡ್ (ಡಿಸೆಂಬರ್‌ನಿಂದ ಫೆಬ್ರವರಿ)

ಚಳಿಗಾಲದಲ್ಲಿ ರಾತ್ರಿಯ ಸಮಯದಲ್ಲಿ ತಾಪಮಾನವು ತೀವ್ರವಾಗಿ ಇಳಿಯುತ್ತದೆ. ಸುಮಾರು 5 ಡಿಗ್ರಿ ಸೆಲ್ಸಿಯಸ್ ಗಿಂತಲೂ ಕೆಳಗೆ ಇಳಿಯುತ್ತದೆ. ಮುಂಜಾನೆಯು ಸಾಮಾನ್ಯವಾಗಿ ಮಂಜಿನಿಂದ ಕೂಡಿರುತ್ತದೆ. ಆದರೆ ಇಡೀ ದಿನ ತಂಪಾಗಿರುತ್ತದೆ.

ಇದನ್ನೂ ಓದಿ: Kochi Tour: ವಾರಾಂತ್ಯದ ಪ್ರವಾಸಕ್ಕೆ ಕೊಚ್ಚಿ ಸೂಕ್ತ ತಾಣ; ಏನೇನಿವೆ ಆಕರ್ಷಣೆ?

ಸಾಕಷ್ಟು ಬಿಸಿಲು ಸಿಗುತ್ತದೆ. ಆದರೂ ಪ್ರದೇಶದ ಸುತ್ತಲಿನ ದಟ್ಟವಾದ ಕಾಡುಗಳಿಂದಾಗಿ ಸೂರ್ಯನ ಬೆಳಕು ಅಷ್ಟೇನೂ ನೆಲದ ಮಟ್ಟವನ್ನು ತಲುಪುವುದಿಲ್ಲ, ಆದ್ದರಿಂದ ಚಹಾ ತೋಟಗಳ ಸುತ್ತಲೂ ಮಾಂತ್ರಿಕ ಸ್ಪರ್ಶ ನೀಡಿದಂತೆ ಭಾಸವಾಗುತ್ತದೆ. ಸಾಹಸಿಗಳು ನೀಲಗಿರಿಯ ಅತೀ ಎತ್ತರದ ಪ್ರದೇಶವಾದ ದೊಡ್ಡಬೆಟ್ಟ ಶಿಖರದಲ್ಲಿ ಚಾರಣಕ್ಕೆ ಹೋಗಬಹುದು ಅಥವಾ ವಿವಿಧ ಜಾತಿಯ ಪ್ರಾಣಿಗಳು, ಪಕ್ಷಿಗಳು, ಸರೀಸೃಪಗಳು, ಕೀಟಗಳನ್ನು ಮುದುಮಲೈ ವನ್ಯಜೀವಿ ಅಭಯಾರಣ್ಯದಲ್ಲಿ ಅನ್ವೇಷಿಸಬಹುದು. ಜನವರಿಯಲ್ಲಿ ಇಲ್ಲಿ ವಾರ್ಷಿಕ ಚಹಾ ಪ್ರವಾಸೋದ್ಯಮ ಉತ್ಸವ ನಡೆಯುತ್ತದೆ. ಇಲ್ಲಿ ಸಾಂಸ್ಕೃತಿಕ ಪ್ರದರ್ಶನಗಳನ್ನು ಆನಂದಿಸಬಹುದು, ವಿವಿಧ ಮಾದರಿಯ ಚಹಾಗಳನ್ನು ಸವಿಯಬಹುದು.

Continue Reading

ಪ್ರವಾಸ

Kochi Tour: ವಾರಾಂತ್ಯದ ಪ್ರವಾಸಕ್ಕೆ ಕೊಚ್ಚಿ ಸೂಕ್ತ ತಾಣ; ಏನೇನಿವೆ ಆಕರ್ಷಣೆ?

ವಾರಾಂತ್ಯದ ವಿಹಾರಕ್ಕೆ ಕೊಚ್ಚಿಯಲ್ಲಿ (Kochi Tour) ಯಾವುದೇ ಕೊರತೆ ಇಲ್ಲ. ಮುನ್ನಾರ್‌ನ ಮಂಜಿನ ಬೆಟ್ಟಗಳಿಂದ ಹಿಡಿದು ಅಲೆಪ್ಪಿ ಮತ್ತು ಚೆರೈ ಬೀಚ್‌ನ ಶಾಂತ ಹಿನ್ನೀರು ಮತ್ತು ಮರಳಿನ ತೀರಗಳವರೆಗೆ ಅನೇಕ ರೋಮಾಂಚಕಾರಿ ಸ್ಥಳಗಳು ಇಲ್ಲಿದೆ. ಈ ಪ್ರವಾಸಿ ಸ್ಥಳಗಳ ಪರಿಚಯ ಇಲ್ಲಿದೆ.

VISTARANEWS.COM


on

By

Kochi Tour
Koo

ಸಮುದ್ರ ತೀರಗಳಿಂದ ಸುತ್ತುವರಿದಿರುವ ಕೇರಳದ (kerala) ಹೃದಯ ಭಾಗವಾದ ಕೊಚ್ಚಿಯು ಅತ್ಯಂತ ಆಕರ್ಷಕ ಪ್ರವಾಸಿ (Kochi Tour) ತಾಣಗಳಿಂದ ದೂರದ ಊರಿನ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಸಾಂಸ್ಕೃತಿಕ ಶ್ರೀಮಂತಿಕೆಯಿಂದ ಹೆಸರುವಾಸಿಯಾಗಿರುವ ಕೊಚ್ಚಿ ಗೇಟ್ ವೇ ಆಗಿರುವ ಹಿನ್ನೀರು (backwaters) ಪ್ರದೇಶಗಳಿಂದ, ಗಿರಿಧಾಮಗಳಿಂದ (hill stations) ನೈಸರ್ಗಿಕ ಸೌಂದರ್ಯವನ್ನು ಮಡಿಲಲ್ಲಿ ತುಂಬಿಕೊಂಡು ನಿಂತಂತಿದೆ.

ಕಣ್ಣಿಗೆ ಸೌಂದರ್ಯ, ಮನಸ್ಸಿಗೆ ಶಾಂತಿ ನೀಡುವ ಪ್ರಶಾಂತವಾದ ಮರಳಿನ ಬಿಳಿ ಕಡಲತೀರಗಳು ಮನೆಯಿಂದ ದೂರವಿದ್ದು, ಕೊಂಚ ರಿಲ್ಯಾಕ್ಸ್ ಮಾಡಿಕೊಳ್ಳಬೇಕು ಎನ್ನುವವರಿಗೆ ಸೂಕ್ತ ತಾಣ ಕೊಚ್ಚಿ. ಇಲ್ಲಿನ ಸುತ್ತಮುತ್ತ ಕೆಲವು ಅತ್ಯುತ್ತಮ ಪ್ರವಾಸಿ ತಾಣಗಳಿವೆ. ವಾರಾಂತ್ಯದ ರಜೆಯನ್ನು ಇಲ್ಲಿ ಕಳೆಯಬಹುದು.


ಮುನ್ನಾರ್ (Munnar)

ಚಹಾ ತೋಟಗಳು, ಮಂಜಿನ ಕಣಿವೆಗಳು ಮತ್ತು ಶಾಂತ ವಾತಾವರಣಕ್ಕೆ ಹೆಸರುವಾಸಿಯಾದ ಮುನ್ನಾರ್ ಸುಂದರವಾದ ಗಿರಿಧಾಮವಾಗಿದ್ದು, ಕೊಚ್ಚಿಯ ಸಮೀಪದಲ್ಲಿದೆ. ಮುನ್ನಾರ್‌ಗೆ ಹೋಗುವ ದಾರಿಯಲ್ಲಿ ದಟ್ಟ ಕಾಡುಗಳು ಮತ್ತು ಹಸಿರು ಪರ್ವತಗಳ ರುದ್ರರಮಣೀಯ ದೃಶ್ಯಗಳನ್ನು ನೀಡುತ್ತದೆ. ಮುನ್ನಾರ್ ತಲುಪಿದ ಅನಂತರ ಟ್ರೆಕ್ಕಿಂಗ್, ಪಕ್ಷಿ ವೀಕ್ಷಣೆಗೆ ಹೋಗಬಹುದು ಅಥವಾ ಶಾಂತಿಯುತ ಪರಿಸರದಲ್ಲಿ ವಿಶ್ರಾಂತಿ ಪಡೆಯಬಹುದು. ಇಲ್ಲಿನ ಟೀ ಮ್ಯೂಸಿಯಂಗೆ ಭೇಟಿ ನೀಡಿದರೆ ಚಹಾ ತಯಾರಿಕೆಯಲ್ಲಿ ಒಳಗೊಂಡಿರುವ ಸಾಂಸ್ಕೃತಿಕ ಅಭ್ಯಾಸಗಳ ಬಗ್ಗೆ ತಿಳಿದುಕೊಳ್ಳಬಹುದು.


ಅಲೆಪ್ಪಿ (Alleppey)

‘ಪೂರ್ವದ ವೆನಿಸ್ ಎಂದು ಕರೆಯಲ್ಪಡುವ ಅಲೆಪ್ಪಿ ಹಿನ್ನೀರು, ಪ್ರಶಾಂತವಾದ ಹೌಸ್‌ಬೋಟ್ ವಿಹಾರ ಮತ್ತು ಎಲ್ಲಿ ನೋಡಿದರೂ ಹಸಿರಿನಿಂದ ತುಂಬಿದ ಭತ್ತದ ಗದ್ದೆಗಳ ವ್ಯಾಪಕ ಜಾಲದಿಂದ ಆವರಿಸಲ್ಪಟ್ಟಿದೆ. ಈ ನಿಶ್ಯಬ್ದ ತಾಣವು ಕೊಚ್ಚಿನ್‌ನಿಂದ ಸ್ವಲ್ಪ ದೂರದಲ್ಲಿದೆ. ಪ್ರವಾಸಿಗರು ಹಿನ್ನೀರಿನಲ್ಲಿ ಹೌಸ್‌ಬೋಟ್ ಸವಾರಿಗಳನ್ನು ನಡೆಸಬಹುದು. ಇಲ್ಲಿ ತಂಗುವ ಸಮಯದಲ್ಲಿ ಸುತ್ತಲಿನ ಸುಂದರವಾದ ಭೂದೃಶ್ಯಗಳನ್ನು ವೀಕ್ಷಿಸಬಹುದು. ರಾತ್ರಿಯಲ್ಲಿ ಆಕಾಶದಲ್ಲಿ ನಕ್ಷತ್ರಗಳನ್ನು ನೋಡುತ್ತಾ ದೋಣಿ ವಿಹಾರ ನಡೆಸುವುದು ಅಲೆಪಿಯ ಮ್ಯಾಜಿಕ್ ಅನುಭವವನ್ನು ಕೊಡುತ್ತದೆ.


ಫೋರ್ಟ್ ಕೊಚ್ಚಿ (Fort Kochi)

ವಾರಾಂತ್ಯದ ವಿಹಾರಕ್ಕೆ ಫೋರ್ಟ್ ಕೊಚ್ಚಿಯು ಒಂದು ಸುಂದರ ತಾಣ. ಹಳೆಯ ವಸಾಹತುಶಾಹಿ ಕಟ್ಟಡಗಳಿಂದ ಕೂಡಿದ್ದು, ಕಿರಿದಾದ ಕಲ್ಲುಮಣ್ಣುಗಳಿಂದ ತುಂಬಿದ ಬೀದಿಗಳಲ್ಲಿ ನಡೆದುಕೊಂಡು ಹೋಗುವಾಗ ಈ ಸ್ಥಳದ ಹಿಂದಿನ ವೈಭವದ ದಿನಗಳ ಬಗ್ಗೆ ಚಿತ್ರ ಬರೆದಂತ ಭಾಸವಾಗುವುದು. ಇಲ್ಲಿ ಚೈನೀಸ್ ಫಿಶಿಂಗ್ ನೆಟ್ಸ್, ಸೇಂಟ್ ಫ್ರಾನ್ಸಿಸ್ ಚರ್ಚ್ ಮತ್ತು ಮತ್ತಂಚೇರಿ ಅರಮನೆಗೆ ಭೇಟಿ ನೀಡಿ ರಜಾ ದಿನವನ್ನು ಕಳೆಯಬಹುದು. ಈ ನಗರದ ಪರಂಪರೆಯ ಬಗ್ಗೆ ತಿಳಿದುಕೊಳ್ಳಲು ಕಥಕ್ಕಳಿ ಪ್ರದರ್ಶನವನ್ನು ಮಿಸ್ ಮಾಡದೇ ನೋಡಿ. ಕೇರಳದ ಶಾಸ್ತ್ರೀಯ ನೃತ್ಯ ಪ್ರಕಾರವು ಅದರ ರೋಮಾಂಚಕ ಸಾಂಸ್ಕೃತಿಕ ಸಂಪ್ರದಾಯಗಳನ್ನು ಬಹಿರಂಗಪಡಿಸುತ್ತದೆ.


ವಾಗಮೋನ್ (Vagamon)

ಕೇರಳದ ಪಶ್ಚಿಮ ಘಟ್ಟಗಳ ಮಡಿಕೆಗಳೊಳಗೆ ಅಡಗಿರುವ ವಾಗಮೋನ್ ಶಾಂತವಾದ, ಸಣ್ಣ ಗಿರಿಧಾಮವಾಗಿದೆ. ಪ್ರವಾಸಿಗರಿಗೆ ರೋಲಿಂಗ್ ಬೆಟ್ಟಗಳು, ಹಸಿರು ಹುಲ್ಲುಗಾವಲುಗಳು ಮತ್ತು ಪೈನ್ ಮರಗಳ ತೋಪುಗಳು ಜಲಪಾತಗಳ ನಡುವೆ ವಿಶ್ರಾಂತಿ ಪಡೆಯಲು ಅತ್ಯುತ್ತಮ ಅವಕಾಶವನ್ನು ನೀಡುತ್ತದೆ. ನಿಸರ್ಗವನ್ನು ಪ್ರೀತಿಸುವವರಿಗೆ ಮತ್ತು ಪೈನ್ ಫಾರೆಸ್ಟ್ ಅಥವಾ ಕುರಿಸುಮಲ ಆಶ್ರಮದಂತಹ ಹಲವಾರು ಗುಪ್ತ ರತ್ನಗಳಿಂದ ಕೂಡಿದ ವಿಸ್ಮಯಕಾರಿಯಾಗಿ ಸುಂದರವಾದ ಭೂದೃಶ್ಯದ ಮೂಲಕ ಟ್ರೆಕ್ಕಿಂಗ್‌ನಂತಹ ಸಾಹಸ ಚಟುವಟಿಕೆಗಳನ್ನು ಇಲ್ಲಿ ನಡೆಸಬಹುದು. ಪ್ಯಾರಾಗ್ಲೈಡಿಂಗ್ ಮತ್ತು ರಾತ್ರಿಯ ಕ್ಯಾಂಪಿಂಗ್ ಗೆ ಸೂಕ್ತ ತಾಣ ಗಳು ಇಲ್ಲಿದೆ.

ಇದನ್ನೂ ಓದಿ: Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?


ಚೆರೈ ಬೀಚ್ (Cherai Beach)

ಕೊಚ್ಚಿ ಬಳಿ ಪರಿಪೂರ್ಣ ವಿಶ್ರಾಂತಿ ಅನುಭವಕ್ಕಾಗಿ, ಬೀಚ್ ವಿಹಾರಕ್ಕಾಗಿ ಪಟ್ಟಣದಿಂದ ಸ್ವಲ್ಪ ದೂರದಲ್ಲಿರುವ ಚೆರೈ ಬೀಚ್‌ಗೆ ಭೇಟಿ ನೀಡಬಹುದು. ಇದು ಕರಾವಳಿಯ ಉದ್ದಕ್ಕೂ ತೂಗಾಡುತ್ತಿರುವ ತೆಂಗಿನ ಮರಗಳು, ಪ್ರಾಚೀನ ಮರಳು, ಚಿನ್ನದ ಬಣ್ಣದಲ್ಲಿ ಕಂಗೊಳಿಸುವ ಸೂರ್ಯ ಮತ್ತು ನೀಲಿ ಅರೇಬಿಯನ್ ಸಮುದ್ರದಿಂದ ಸುತ್ತುವರೆದಿದೆ. ಸೂರ್ಯನನ್ನು ನೋಡುತ್ತಾ ತೀರದಲ್ಲಿ ಸುತ್ತಾಡಲು ಪರಿಪೂರ್ಣ ವಾತಾವರಣವನ್ನು ಸೃಷ್ಟಿಸುತ್ತದೆ. ಇಲ್ಲಿ ತಾಜಾ ಸಮುದ್ರಾಹಾರ ಸತ್ಕಾರವನ್ನು ಪಡೆಯಬಹುದು

Continue Reading

ಧಾರ್ಮಿಕ

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

ಶ್ರೀ ಶಂಕರರು (Shankara Jayanti 2024) ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡಿದ್ದರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತಿದ್ದರು. ಸಂನ್ಯಾಸಕ್ಕೆ ತಾಯಿಯ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಆಗ ತಾಯಿ ಒಪ್ಪಲೇಬೇಕಾಯಿತು.

VISTARANEWS.COM


on

Shankara Jayanti 2024
Koo

ಶಂಕರಾಚಾರ್ಯರು (Shankara Jayanti 2024) ಜೀವಿಸಿದ್ದು ಕೇವಲ 32 ವರ್ಷ. ಆದರೆ ಅವರು ಸಾಧಿಸಿದ್ದು ಅಪಾರ. ಹಿಂದೂ ಧರ್ಮದ ಏಳಿಗೆಗೆ ಅವರ ಕೊಡುಗೆ ಅಮೂಲ್ಯ. ಶಂಕರರ ಬದುಕಿನ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ.

Adi Shankaracharya Jayanti
  1. ಶ್ರೀ ಶಂಕರರು ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡುಬಿಟ್ಟರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತರು. ಸಾಮಾನ್ಯರಿಗೆ ಒಂದು ವೇದವನ್ನು ಅರ್ಥ ಮಾಡಿಕೊಳ್ಳಲೇ ಹತ್ತಾರು ವರ್ಷಗಳು ಬೇಕು.
  2. ಶಂಕರಾಚಾರ್ಯರು ಜನಿಸಿದ್ದು ಕೇರಳ ಕಾಲಟಿ ಎಂಬ ಪುಟ್ಟ ಗ್ರಾಮದಲ್ಲಿ. ತಂದೆಯನ್ನು ಕಳೆದುಕೊಂಡರು. ತಾಯಿ ಅವರನ್ನು ಬೆಳೆಸಿದರು. ಅವರು ಸಂನ್ಯಾಸ ಸ್ವೀಕರಿಸಲು ಒಂದು ಪುಟ್ಟ ಪವಾಡವನ್ನೇ ಮಾಡಬೇಕಾಯಿತು. ಸಂನ್ಯಾಸಕ್ಕೆ ತಾಯಿ ಆರ್ಯಾಂಬೆಯವರ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಮಗ ಬದುಕುತ್ತಾನಲ್ಲ ಎಂಬ ಭರವಸೆಯೊಂದಿಗೆ ತಾಯಿ ಒಪ್ಪಿದರು.
  3. ಹದಿನಾರು ವರ್ಷ ಪ್ರಾಯ ಆಗುವುದರೊಳಗಾಗಿ ಅವರು ಉಪನಿಷತ್, ಬ್ರಹ್ಮಸೂತ್ರ, ಭಗವದ್ಗೀತೆಗಳಿಗೆ ಭಾಷ್ಯವನ್ನು ರಚಿಸಿದರು. ಆದಿಶಂಕರರು ಭಗವದ್-ಗೀತೆ, ಉಪನಿಷತ್ ಹಾಗು ಬ್ರಹ್ಮಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು.
  4. ಭಾರತದಾದ್ಯಂತ ‘ದಿಗ್ವಿಜಯ ಯಾತ್ರೆʼ ಕೈಗೊಂಡರು. ವೇದವಿರೋಧಿಗಳನ್ನು ವಾಗ್ವಾದಕ್ಕೆ ಕರೆದರು. ಏಕಾಂಗಿಯಾಗಿ ಚರ್ಚೆ, ವಿಚಾರಮಂಡನೆ, ವಾದಗಳ‌ ಮೂಲಕ ಬ್ರಹ್ಮವಾದಕ್ಕೆ ಎಳೆತಂದರು. ದೇಶದುದ್ದಗಲಕ್ಕೂ ಸಂಚರಿಸಿ, ಅಲ್ಲಿಯ ವಿದ್ವಾಂಸರನ್ನು, ಜನರನ್ನು, ರಾಜರನ್ನು ವೈದಿಕತೆಗೆ ತಂದರು.
  5. ಆರು ಮತಗಳನ್ನು ಖಂಡಿಸಿ ತಮ್ಮ ಮತವನ್ನು ಸ್ಥಾಪಿಸಿದ ಪರಿಣಾಮ ಅವರನ್ನು ‘ಷಣ್ಮತ ಖಂಡನಾಚಾರ್ಯ’ ಮತ್ತು ಷಣ್ಮತ ಪ್ರತಿಷ್ಠಾಪನಾಚಾರ್ಯ’ ಎಂದು ಕರೆಯಲಾಯಿತು. ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು.
  6. ಧರ್ಮವನ್ನು ಉಳಿಸಿ ಬೆಳೆಸುವ ಉದ್ದೇಶಕ್ಕಾಗಿ ಮಠಗಳ ಪರಿಕಲ್ಪನೆಯನ್ನು ತಂದರು. ಮಠ ಮತ್ತು ಯತಿಗಳು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು ಎಂಬ ಆಶಯ ಅವರದಾಗಿತ್ತು. ದೇಶದ ಉದ್ದಗಲಗಳಲ್ಲಿ ಮಠಗಳನ್ನು ಸ್ಥಾಪಿಸಿದರು. ಅವುಗಳಲ್ಲಿ ಮುಖ್ಯವಾದದ್ದು ಶೃಂಗೇರಿಯ ಮಠ. ಇತರವು ಪೂರ್ವದಲ್ಲಿ ಪುರಿ, ಪಶ್ಚಿಮದಲ್ಲಿ ದ್ವಾರಕಾ, ಉತ್ತರದಲ್ಲಿ ಬದರೀನಾಥ, ಕಂಚಿಯ ಕಾಮಕೋಟಿಗಳಲ್ಲಿವೆ.
  7. ಸೂರ್ಯ- ಗಣಪತಿ- ಅಂಬಿಕಾ- ಶಿವ- ವಿಷ್ಣುಗಳನ್ನು ಪೂಜಿಸುವ ಪಂಚಾಯತನ ಪೂಜೆಯನ್ನು ತಂದರು. ಈ ದೇವತೆಗಳನ್ನು ಭಾರತದ ಐದು ಕಡೆಗಳಲ್ಲಿ ಸಿಗುವ ಸ್ಫಟಿಕ, ಶೋಣಾಭದ್ರ, ಸ್ವರ್ಣಮುಖಿ, ಬಾಣಲಿಂಗ, ಸಾಲಿಗ್ರಾಮ ಎಂಬ ಕಲ್ಲಿನ ಮೂಲಕ ಪೂಜಿಸಲಾಗುತ್ತದೆ.
  8. ಮೂವತ್ತೆರಡು ವರ್ಷಗಳಲ್ಲಿ ಹಲವು ಮನುಷ್ಯರು ಸೇರಿ ಹಲವು ಜನ್ಮಗಳಲ್ಲಿ ಮಾಡುವಷ್ಟು ಕೆಲಸವನ್ನು ಮಾಡಿ ಮುಗಿಸಿದರು. ಭಾಷ್ಯಗಳನ್ನು ಹೊರತುಪಡಿಸಿ ನೂರಾರು ಸ್ತೋತ್ರ – ಸಾಹಿತ್ಯಗಳನ್ನು ರಚಿಸಿದರು.
  9. ಮೂರು ಸೂತ್ರಗಳಲ್ಲಿ ಶ್ರೀ ಶಂಕರರ ಉಪದೇಶವನ್ನು ಸೂತ್ರೀಕರಿಸಬಹುದು- “ಅಹಂ ಬ್ರಹ್ಮಾಸ್ಮಿ” (ನನ್ನೊಳಿರುವ ಆತ್ಮವೇ ಪರಂಬ್ರಹ್ಮ), “ತತ್ ತ್ವಮ್ ಅಸಿ” (ನೀನು ಅದೇ ಆತ್ಮದಿಂದ ಆಗಿರುವೆ) ಮತ್ತು ಜೀವಶ್ಶಿವೋಹಂʼ (ಜೀವನೇ ಶಿವ) ಎಂಬುದು ಅದ್ವೈತ ತತ್ವದ ಮೂಲ ಮಂತ್ರಗಳು. ಇದಲ್ಲದೇ ಪರಮಾತ್ಮ ಮಾತ್ರ ಸತ್ಯ; ಈ ಜಗತ್ತಿನಲ್ಲಿ ಮಿಕ್ಕೆಲ್ಲವೂ ಮಿಥ್ಯ ಹಾಗೂ “ಸರ್ವಂ ಬ್ರಹ್ಮಮಯಂ ಜಗತ್” (ಈ ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದಲೇ ಆವರಿಸಲ್ಪಟ್ಟಿದೆ) ಎಂಬುದಾಗಿ ಜಗತ್ತಿಗೆ ಸಾರಿದರು.
Continue Reading

ಪ್ರವಾಸ

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

ನಿರ್ದಿಷ್ಟ ಯೋಜನೆ ಮತ್ತು ಸ್ಥಳೀಯ ವಿಚಾರಗಳನ್ನು ತಿಳಿದುಕೊಳ್ಳುವ ಮೂಲಕ ಕಡಿಮೆ ಬಜೆಟ್‌ನಲ್ಲಿ ಸಂಪೂರ್ಣ ದ್ವಾರಕವನ್ನು ಸುತ್ತಾಡಲು (Dwarka Tour) ಸಾಧ್ಯವಿದೆ. ಪುರಾತನ ದೇವಾಲಯ, ಸುಂದರವಾದ ಕಡಲತೀರಗಳೊಂದಿಗೆ ಅತ್ಯಾಕರ್ಷಕ ತಾಣದಲ್ಲಿ ಸುಂದರವಾದ ಪ್ರವಾಸ ಅನುಭವವನ್ನು ನಮ್ಮದಾಗಿಸಬಹುದು.

VISTARANEWS.COM


on

By

Dwarka Tour
Koo

ದ್ವಾರಕಾ ಹೆಸರು ಕೇಳಿದಾಕ್ಷಣವೇ ಮನಸ್ಸು ಪ್ರಫುಲ್ಲವಾಗುತ್ತದೆ. ಹಿಂದೂಗಳಿಗೆ ಅಯೋಧ್ಯೆ (ayodhya) ರಾಮ ಮಂದಿರದಷ್ಟೇ (ram mandir) ಪವಿತ್ರವಾದ ಮತ್ತೊಂದು ಕ್ಷೇತ್ರ ದ್ವಾರಕಾ (Dwarka Tour). ಭಾರತದ ಪಶ್ಚಿಮ ಕರಾವಳಿಯ ಗುಜರಾತ್ (gujarat) ರಾಜ್ಯದಲ್ಲಿರುವ ದ್ವಾರಕಾ ಆಳವಾದ ಆಧ್ಯಾತ್ಮಿಕ, ಐತಿಹಾಸಿಕ ಮತ್ತು ನೈಸರ್ಗಿಕ ಸೌಂದರ್ಯಗಳನ್ನು ಹೊಂದಿರುವ ಪಟ್ಟಣವಾಗಿದೆ. ಬಜೆಟ್ ಸ್ನೇಹಿ (Budget Friendly) ಪ್ರವಾಸ ಮಾಡುವ ಯೋಚನೆ ಇದ್ದರೆ ದ್ವಾರಕವನ್ನು ಅನ್ವೇಷಿಸಬಹುದು.

ದ್ವಾರಕಾದ ಪ್ರಾಚೀನ ದೇವಾಲಯಗಳು, ಸುಂದರ ಕಡಲತೀರಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುತ್ತದೆ. ಇದು ದೂರದೂರುಗಳಿಂದ ಪ್ರವಾಸಿಗರನ್ನು ಹಾಗೂ ಯಾತ್ರಿಕರನ್ನು ತನ್ನತ್ತ ಚುಂಬಕದಂತೆ ಸೆಳೆಯುತ್ತದೆ. ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕೃಷ್ಣನ ನಗರಿಯಲ್ಲಿ ಪ್ರವಾಸಿಗರು ಬಜೆಟ್ ಸ್ನೇಹಿಯಾಗಿ ಸುತ್ತಾಡ ಬಹುದಾದ ಹಲವಾರು ಪ್ರದೇಶಗಳಿವೆ.


ಪ್ರಾಚೀನ ದೇವಾಲಯಗಳು

ದ್ವಾರಕಾವು ಚಾರ್ ಧಾಮ್ ತೀರ್ಥಯಾತ್ರಾ ಸ್ಥಳಗಳಲ್ಲಿ ಮತ್ತು ಶ್ರೀಕೃಷ್ಣನ ಪ್ರಾಚೀನ ಸಾಮ್ರಾಜ್ಯದಲ್ಲಿ ಸ್ಥಾನ ಪಡೆದಿರುವುದರಿಂದ ಅದು ಆಧ್ಯಾತ್ಮಿಕ ನೆಲೆಯಾಗಿದೆ. ಬಜೆಟ್ ಸ್ನೇಹಿ ಪ್ರಯಾಣ ಮಾಡಲು ಶ್ರೀಕೃಷ್ಣ ಸಮರ್ಪಿತ ದ್ವಾರಕಾಧೀಶ ದೇವಾಲಯ ಅಥವಾ ನಾಗೇಶ್ವರ ಜ್ಯೋತಿರ್ಲಿಂಗ ದೇವಾಲಯದಂತಹ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಬಹುದು. ಇದು ಹನ್ನೆರಡು ಪವಿತ್ರ ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದ್ದು, ಭಕ್ತರು ಮತ್ತು ಸಂದರ್ಶಕರಿಗೆ ಉಚಿತ ಪ್ರವೇಶವನ್ನು ಕಲ್ಪಿಸುತ್ತದೆ. ಯಾವುದೇ ವೆಚ್ಚವಿಲ್ಲದೆ ಇಲ್ಲಿ ದೈವಿಕ ವಾತಾವರಣವನ್ನು ಅನುಭವಿಸಬಹುದು. ಇದಲ್ಲದೇ ಪವಿತ್ರ ಸ್ಥಳಗಳಾದ ರುಕ್ಮಿಣಿ ದೇವಿ ದೇವಸ್ಥಾನ, ಗೋಮತಿ ಘಾಟ್ ಮತ್ತು ಹಿಂದೂ ಪುರಾಣಗಳಲ್ಲಿ ಗಮನಾರ್ಹವಾದ ಬೆಟ್ ದ್ವಾರಕಾ ದ್ವೀಪಕ್ಕೆ ಭೇಟಿ ನೀಡಬಹುದು. ಇದು ಎಲ್ಲರಿಗೂ ಮುಕ್ತವಾಗಿದೆ.


ರಮಣೀಯ ಕಡಲತೀರಗಳು

ದ್ವಾರಕಾವು ಪ್ರಾಚೀನ ಕಡಲತೀರಗಳು ಮತ್ತು ಕರಾವಳಿ ಪ್ರದೇಶಗಳನ್ನು ಹೊಂದಿದೆ. ವಿವಿಧ ಮನರಂಜನಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು, ವಿಶ್ರಾಂತಿ ಪಡೆಯಲು ಜೊತೆಗೆ ಅರೇಬಿಯನ್ ಸಮುದ್ರದ ಸ್ಪಷ್ಟ ನೋಟವನ್ನು ಕಾಣಲು, ವಿಹಂಗಮ ಸೂರ್ಯಾಸ್ತ, ಒಂಟೆ ಸವಾರಿ, ಬೀಚ್ ಪಿಕ್ನಿಕ್‌ಗಳನ್ನು ಇಲ್ಲಿ ಆನಂದಿಸಬಹುದು. ಇದರೊಂದಿಗೆ ಬೀಟ್ ದ್ವಾರಕಾ ಬೀಚ್, ಗೋಪಿ ತಲವ್ ಮತ್ತು ಓಖಾ-ಮಧಿ ಬೀಚ್ ನಲ್ಲಿ ಶಾಂತಿಯುತ ಪರಿಸರದಲ್ಲಿ ಈಜು, ಸೂರ್ಯನ ಸ್ನಾನ ಮತ್ತು ಪಕ್ಷಿ ವೀಕ್ಷಣೆಯನ್ನು ನಡೆಸಬಹುದು.

ಸ್ಥಳೀಯ ಸಂಸ್ಕೃತಿ

ವರ್ಷದುದ್ದಕ್ಕೂ ದ್ವಾರಕಾದಲ್ಲಿ ವಿವಿಧ ಸಾಂಸ್ಕೃತಿಕ ಹಬ್ಬಗಳು ಮತ್ತು ಕಾರ್ಯಕ್ರಮಗಳು ನಡೆಯುತ್ತವೆ. ಇದು ಪ್ರಯಾಣಿಕರಿಗೆ ಸ್ಥಳೀಯ ಸಂಪ್ರದಾಯಗಳು ಮತ್ತು ಪದ್ಧತಿಗಳ ಒಳನೋಟವನ್ನು ತೋರಿಸುತ್ತದೆ. ಪಟ್ಟಣದಲ್ಲಿ ವರ್ಣರಂಜಿತ ಮೆರವಣಿಗೆ, ಸಾಂಸ್ಕೃತಿಕ ಪ್ರದರ್ಶನ ಮತ್ತು ಧಾರ್ಮಿಕ ಆಚರಣೆಗಳನ್ನು ಆನಂದಿಸಬಹುದು. ಜನ್ಮಾಷ್ಟಮಿ, ದೀಪಾವಳಿ ಮತ್ತು ಹೋಳಿ ಹಬ್ಬಗಳು ಇಲ್ಲಿ ಅತ್ಯಂತ ವೈಭವದಿಂದ ನಡೆಯುತ್ತದೆ. ಅಲ್ಲದೆ, ಗರ್ಬಾ ಮತ್ತು ದಾಂಡಿಯಾ ರಾಸ್ ನೃತ್ಯಗಳು, ಸಾಂಪ್ರದಾಯಿಕ ಸಂಗೀತ ಕಛೇರಿಗಳು ಮತ್ತು ಪಟ್ಟಣದ ವಿವಿಧ ಸ್ಥಳಗಳಲ್ಲಿ ನಡೆಯುವ ಜಾನಪದ ಕಲಾ ಪ್ರದರ್ಶನಗಳನ್ನು ವೀಕ್ಷಿಸಲು ತಪ್ಪಿಸಿಕೊಳ್ಳಬೇಡಿ. ಇದು ದ್ವಾರಕೆಯ ಸಂಸ್ಕೃತಿಯ ರೋಮಾಂಚಕ ಅನುಭವವನ್ನು ಕೊಡುತ್ತದೆ.


ಗುಜರಾತಿ ಖಾದ್ಯ

ದ್ವಾರಕಾ ಪ್ರವಾಸವು ಅಲ್ಲಿನ ಗುಜರಾತಿ ಖಾದ್ಯಗಳನ್ನು ಸವಿಯದೇ ಪೂರ್ಣಗೊಳ್ಳುವುದಿಲ್ಲ. ಸ್ಥಳೀಯ ತಿನಿಸುಗಳು ಅಥವಾ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಅಲ್ಲಿ ಧೋಕ್ಲಾ, ಖಾಂಡ್ವಿ ಅಥವಾ ಥೇಪ್ಲಾ ಮೊದಲಾದ ಭಕ್ಷ್ಯಗಳನ್ನು ಸವಿಯಬಹುದು. ಇದರೊಂದಿಗೆ ಪಟ್ಟಣದಲ್ಲಿ ಖಿಚು, ಫಫ್ಡಾ, ಜಲೇಬಿ-ಫಫ್ಡಾ ಸೇರಿದಂತೆ ಕೆಲವು ಪ್ರಸಿದ್ಧ ಭಕ್ಷ್ಯಗಳು ಕೈಗೆಟುಕುವ ದರದಲ್ಲಿ ಲಭ್ಯವಾಗುತ್ತದೆ.

ಇದನ್ನೂ ಓದಿ: Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಕೈಗೆಟುಕುವ ದರದಲ್ಲಿ ವಸತಿ

ದ್ವಾರಕಾದಲ್ಲಿ ಬಜೆಟ್‌ಗೆ ಅನುಗುಣವಾದ ಅತಿಥಿ ಗೃಹಗಳು, ವಸತಿಗೃಹಗಳು ಮತ್ತು ಹೊಟೇಲ್ ಗಳು ಲಭ್ಯವಿದೆ. ಸಮಂಜಸವಾದ ದರದಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸ್ವಚ್ಛ ಕೊಠಡಿಗಳನ್ನು ಒದಗಿಸುವ ಬಜೆಟ್ ಸ್ನೇಹಿ ಹೊಟೇಲ್‌ಗಳಲ್ಲಿ ಉಳಿಯಬಹುದು.

ಇದರೊಂದಿಗೆ ದ್ವಾರಕಾದಲ್ಲಿನ ಹಲವಾರು ಅತಿಥಿಗೃಹಗಳು ಮತ್ತು ಬಜೆಟ್ ಸ್ನೇಹಿ ಹೊಟೇಲ್ ಗಳು ರಿಯಾಯಿತಿ ದರದಲ್ಲಿ ಹತ್ತಿರದ ಆಕರ್ಷಣೆಗಳಿಗೆ ವಸತಿ, ಊಟ ಮತ್ತು ಸಾರಿಗೆಯನ್ನು ಒಳಗೊಂಡಿರುವ ಪ್ಯಾಕೇಜ್ ಡೀಲ್‌ಗಳನ್ನು ಒದಗಿಸುತ್ತದೆ. ಹೆಚ್ಚು ಖರ್ಚು ಮಾಡದೇ ಇದರ ಪ್ರಯೋಜನವನ್ನು ಪಡೆಯಬಹುದು.

Continue Reading
Advertisement
theft Case
ಕ್ರೈಂ5 mins ago

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

7 books release programme on May 19 in Bengaluru
ಬೆಂಗಳೂರು14 mins ago

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Pension and NAREGA money credited to farmers loans CM Siddaramaiah slams bank
ರಾಜಕೀಯ18 mins ago

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

Canne Film Festival 2024
ಪ್ರಮುಖ ಸುದ್ದಿ21 mins ago

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

Konkani Book Release
ಕಲೆ/ಸಾಹಿತ್ಯ26 mins ago

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

MLC Meeting
ರಾಜಕೀಯ34 mins ago

MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ

Arvind Kejriwal
ದೇಶ39 mins ago

Arvind Kejriwal: ಅಬಕಾರಿ ಕೇಸ್‌: ಕೇಜ್ರಿವಾಲ್‌ಗೆ ಬಿಗ್ ಶಾಕ್; ಇ.ಡಿ ಚಾರ್ಜ್‌ಶೀಟ್‌ನಲ್ಲಿ ಇವರೇ ಆರೋಪಿ!

HD Revanna case Hearing in Holenarasipura sexual assault case adjourned to Monday
ಹಾಸನ1 hour ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ; ರೇವಣ್ಣಗೆ ಜೈಲಾ? ಬೇಲಾ?

Kanguva Film Suriya-Bobby Deol's war scene with 10,000 people
ಕಾಲಿವುಡ್1 hour ago

Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

karnataka weather Forecast
ಮಳೆ1 hour ago

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ12 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌