ವಿಶ್ವ ಪ್ರವಾಸೋದ್ಯಮ ದಿನ: ಭಾರತದ ಟಾಪ್‌ 10 ಪ್ರವಾಸೀ ತಾಣಗಳು! - Vistara News

ಪ್ರಮುಖ ಸುದ್ದಿ

ವಿಶ್ವ ಪ್ರವಾಸೋದ್ಯಮ ದಿನ: ಭಾರತದ ಟಾಪ್‌ 10 ಪ್ರವಾಸೀ ತಾಣಗಳು!

ವಿಶ್ವದ ಯಾವುದೇ ಕಡೆಗೆ ಸರಿಗಟ್ಟಬಲ್ಲ ಪ್ರವಾಸೋದ್ಯಮ ತಾಣಗಳು ಭಾರತದಲ್ಲಿವೆ. ವಿಶ್ವ ಪ್ರವಾಸೋದ್ಯಮ ದಿನದ (ಸೆ.27) ಹಿನ್ನೆಲೆಯಲ್ಲಿ ನಮ್ಮ ದೇಶದ ಟಾಪ್‌ ಟೆನ್‌ ತಾಣಗಳಲ್ಲಿವೆ.

VISTARANEWS.COM


on

tourism
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾಷೆ ಸಂಸ್ಕೃತಿ, ಆಚಾರ ವಿಚಾರ, ನಡೆನುಡಿ, ಜಾತಿ, ಧರ್ಮ ಇತ್ಯಾದಿ ಯಾವುದೇ ವಿಚಾರಕ್ಕೆ ಬಂದರೂ ವಿವಿಧತೆಯಲ್ಲಿ ಏಕತೆ ಎಂಬ ತತ್ವವನ್ನೇ ಎತ್ತಿ ಹಿಡಿವ ಭಾರತ, ಪ್ರವಾಸೋದ್ಯಮದಲ್ಲೂ ವಿವಿಧತೆಯಲ್ಲೂ ಏಕತೆಯಿದೆ. ಭಾರತ ಎಂಥ ದೇಶವೆಂದರೆ, ಇಲ್ಲಿ ಸಮುದ್ರದಿಂದ ಹಿಡಿದು ಹಿಮಪರ್ವತಗಳವರೆಗೆ ಪ್ರಕೃತಿ ಸೌಂದರ್ಯದಲ್ಲಿ ವಿವಿಧ ಬಗೆಯನ್ನು ಹೊಂದಿದೆ. ಭವ್ಯ ಇತಿಹಾಸ, ಅದ್ಭುತ ಪ್ರಕೃತಿ ಸೌಂದರ್ಯ, ಪ್ರಾಚೀನ ವಾಸ್ತುಶಿಲ್ಪ, ಶ್ರೀಮಂತ ಆಹಾರ ಪದ್ಧತಿ ಕಲೆ ಸಂಸ್ಕೃತಿಗಳ ಹಳ್ಳಿಗಳು, ನಡೆದಷ್ಟೂ ಮುಗಿಯದ ಸಮುದ್ರ ತೀರ, ಮೋಜು ಮಸ್ತಿಗಳಿಗೆ ಆಧುನಿಕ ನಗರಗಳು, ಕ್ಲಬ್ಬು ನೈಟ್‌ ಲೈಫು ಹೀಗೆ ಎಲ್ಲ ಬಗೆಯ ಆಸಕ್ತಿಗಳಿಗೆ ನೀರೆರೆವ ತಾಣಗಳೂ ಭಾರತದಲ್ಲಿವೆ. ಇಡೀ ಪ್ರಪಂಚದ ಮಿನಿ ಅವತರಣಿಕೆಯೇ ಭಾರತ ಎಂದರೂ ತಪ್ಪಲ್ಲ.

ಪ್ರವಾಸ ಎಂದರೆ, ವಿದೇಶ ಪ್ರಯಾಣವೊಂದೇ ಅಲ್ಲ. ನಮ್ಮ ದೇಶದಲ್ಲೂ ಅತ್ಯಪೂರ್ವ ಜಾಗಗಳಿವೆ. ಹಾಗಾದರೆ ಪ್ರವಾಸದ ವಿಷಯಕ್ಕೆ ಬಂದರೆ ನಮ್ಮ ದೇಶದ ಟಾಪ್‌ ೧೦ ಸ್ಥಳಗಳು ಯಾವುವು ನೋಡೋಣ.

kashmir

೧. ಕಾಶ್ಮೀರ: ಭಾರತದ ಮುಕುಟ ಮಣಿ ಕಾಶ್ಮೀರ ಪ್ರವಾಸಿಗರ ಸೂಜಿಗಲ್ಲಿನ ಸೆಳೆತ. ಭೂಮಿ ಮೇಲಿನ ಸ್ವರ್ಗ. ಅತ್ಯದ್ಭುತ ಸರೋವರಗಳು, ಹಿಮ ಪರ್ವತಗಳು, ಹಸಿರು ಕಣಿವೆ ಕಾನನ ಹೀಗೆ ರಮಣೀಯ ಪ್ರಕೃತಿ ಸೌಂದರ್ಯವಿರುವ ಕಾಶ್ಮೀರ ಭಾರತದ ಸೌಂದರ್ಯಕ್ಕೆ ಇನ್ನೊಂದು ಹೆಸರೂ ಕೂಡ. ಇಲ್ಲಿನ ಭಯೋತ್ಪಾದನೆ, ರಾಜಕೀಯ ಸಮಸ್ಯೆಗಳೇನೇ ಇರಲಿ, ಪ್ರವಾಸಿಗರಿಗೆ ಸದಾ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಕಾಶ್ಮೀರ ಈ ವರ್ಷ ಅತ್ಯಂತ ಹೆಚ್ಚು ಪ್ರವಾಸಿಗರನ್ನು ಸೆಳೆದಿತ್ತು.

shimla

೨. ಶಿಮ್ಲಾ, ಹಿಮಾಚಲ ಪ್ರದೇಶ: ಹೊಸತಾಗಿ ಮದುವೆಯಾದವರ ಟಾಪ್‌ ಹನಿಮೂನ್‌ ಡೆಸ್ಟಿನೇಶನ್‌ಗಳ ಪಟ್ಟಿಯಲ್ಲಿ ಸದಾ ಮುಂದಿರುವ ಶಿಮ್ಲಾ ಚಳಿಯೂರು. ಗಿಜಿಗುಡುವ ಮಾರ್ಕೆಟ್‌, ಸಾಲು ಸಾಲು ಬೆಟ್ಟಗಳ ದರ್ಶನ ನೀಡುವ, ಚಳಿಗಾಲದಲ್ಲಿ ಹಿಮ ಸುರಿವ ಚಳಿಗಾಲದಲ್ಲಿ ಹಿಮ ಸುರಿವ ಭಾರತದ ಪ್ರಖ್ಯಾತ ಹಿಲ್‌ ಸ್ಟೇಶನ್‌ಗಳ ಪೈಕಿ ಒಂದು.

ladakh

೩. ಲೇಹ್‌, ಲಡಾಕ್: ಸಾಹಸ ಪ್ರಿಯರನ್ನು ಸದಾ ಕೈಬೀಸಿ ಕರೆವ ಲಡಾಕ್‌ ಭಾರತದಲ್ಲಿ ಪ್ರವಾಸೋದ್ಯಮವನ್ನು ಉತ್ತುಂಗಕ್ಕೇರಿಸಿದ ಇನ್ನೊಂದು ಸ್ಥಳ. ಇಲ್ಲಿನ ರಮಣೀಯ ನೀಲಿ ಸರೋವರಗಳು, ಹಿಮಚ್ಛಾದಿತ ಪರ್ವತಗಳು, ಮೈನವಿರೇಳಿಸುವ ಸಾಹಸಮಯ ರಸ್ತೆಗಳ ಪಯಣ, ಬೌದ್ಧ ಮಂದಿರಗಳು, ಮರಳು ದಿಬ್ಬಗಳು ಹೀಗೆ ಕಿಚ್ಚಿರುವ ಮಂದಿಗೆ ರೋಮಾಂಚಕ ಅನುಭವ ನೀಡುವ ತಾಣ.

gangtok

೪. ಗ್ಯಾಂಗ್‌ಟಕ್‌, ಸಿಕ್ಕಿಂ: ಕಾಂಚನಜುಂಗದ ಮೈನವಿರೇಳಿಸುವ ದೃಶ್ಯ, ಹಿಮ ಬೆಟ್ಟಗಳು, ಶ್ರೀಮಂತ ಕಲೆ ಸಂಸ್ಕೃತಿಗಳನ್ನು ಹೊಂದಿದ ತನ್ನ ಅತ್ಯಪೂರ್ವ ನಿಸರ್ಗ ಸೌಂದರ್ಯಕ್ಕೇ ಹೆಸರುವಾಸಿಯಾದ ಪ್ರವಾಸಪ್ರಿಯರ ಸ್ವರ್ಗ ಸಿಕ್ಕಿಂ.

munnar

೫. ಮುನ್ನಾರ್‌, ಕೇರಳ: ದೇವರನಾಡು ಎಂದೇ ಹೆಸರಾದ ಕೇರಳದಲ್ಲಿ ಒಂದೆರಡಲ್ಲ. ಹೋದದ್ದೆಲ್ಲ ಪ್ರವಾಸೀ ತಾಣವೇ. ಮುನ್ನಾರ್‌ ಕೂಡಾ ಮುಂಚೂಣಿಯಲ್ಲಿರುವ ತಾಣ. ದಟ್ಟ ಕಾಡು, ಹೋದಷ್ಟೂ ಮುಗಿಯದ ಚಹಾ ತೋಟಗಳು, ಅಲ್ಲಿಲ್ಲಿ ಜಲಪಾತ ಹೀಗೆ ಹಸಿರಲ್ಲಿ ಮಿಂದೇಳಬಯಸುವ ಎಲ್ಲ ನಿಸರ್ಗ ಪ್ರಿಯರಿಗೂ ಕೇರಳವೆಂದರೆ ದೇವರನಾಡೇ.

varanasi

೬. ವಾರಣಾಸಿ, ಉತ್ತರಪ್ರದೇಶ: ಭಾರತವಿಡೀ ಸುತ್ತಿದರೂ ವಾರಣಾಸಿಗೆ ಹೋಗದಿದ್ದರೆ ಅಂಥವರ ಪ್ರವಾಸ ಅಪೂರ್ಣವೇ. ಅತ್ಯಂತ ಪ್ರಾಚೀನ ನಗರವೆಂಬ ಹೆಗ್ಗಳಿಕೆಯ ಭಾರತದ ಧಾರ್ಮಿಕ ಕೇಂದ್ರವಾದರೂ ಎಲ್ಲ ಬಗೆಯ ಪ್ರವಾಸಿಗರನ್ನೂ, ವಿದೇಶೀಯರನ್ನೂ ಸೆಳೆವ ಅತ್ಯದ್ಭುತ ತಾಣವಿದು. ಬದುಕಿದ್ದಾಗ ಒಮ್ಮೆ ನೋಡು ವಾರಣಾಸಿಯ ಎಂದರೂ ತಪ್ಪಿಲ್ಲ.

rann of kutch

೭. ರಣ್‌ ಆಫ್‌ ಕಚ್‌, ಗುಜರಾತ್:‌ ದಿ ಗ್ರೇಟ್‌ ರಣ್‌ ಆಫ್‌ ಕಚ್‌, ಬೆಳ್ಳನೆಯ ಉಪ್ಪಿನ ಹಾಸಿನ ಮರಳುಗಾಡಿನಂತೆ ಹೊಳೆಯುವ ನಾಡು. ಇಲ್ಲಿನ ೭,೫೦೦ ಚದರ ಕಿಲೋಮೀಟರುಗಳ ವ್ಯಾಪ್ತಿಯ ಉಪ್ಪಿನ ಮರಳುಗಾಡನ್ನು ಸೂರ್ನ ಬಿಸಿಲಲ್ಲಿ ಪ್ರತೊಫಲಿಸುವುದು ನೋಡುವುದೇ ಕಣ್ಣಿಗೆ ಹಬ್ಬ. ಜೊತೆಗೆ ಇದಕ್ಕೆ ಕಳಶಪ್ರಾಯದಂತೆ ಬಣ್ಣಗಳಲ್ಲೇ ಮಿಂದೇಳುವ ಗುಜರಾತಿನ ಶ್ರೀಮಂತ ಕಲೆ ಸಂಸ್ಕೃತಿ ಯಾವ ಪ್ರವಾಸಿ ಪ್ರಿಯನೂ ಕಳೆದುಕೊಳ್ಳನು ಇಷ್ಟಪಡಲಾರ.

jaisalmer

೮. ಜೈಸಲ್ಮೇರ್‌, ರಾಜಸ್ಥಾನ: ಕಣ್ಣು ಹಾಯಿಸಿದಲ್ಲೆಲ್ಲ ಮರಳು ದಿಬ್ಬಗಳನ್ನು ಕನ್ತುಂಬಿಕೊಂಡು, ಮೈನವಿರೇಳಿಸುವ ಡೆಸರ್ಟ್‌ ಸಫಾರಿ ಮಾಡಿಕೊಂಡು, ಒಂಟೆಯ ಬೆನ್ನ ಮೇಲೆ ಕುಳಿತು ನಮೋಹಕ ದೃಶ್ಯಗಳನ್ನು ಭಾರತದೊಳಗೇ ಸವಿಬೇಕೆನ್ನುವ ಆಸೆಯ ಮಂದಿ ಖಂಡಿತವಾಗಿಯೂ ಜೈಸಲ್ಮೇರಿಗೊಮ್ಮೆ ಹೋಗಬೇಕು. ಜೊಗೆತೆ ರಾಜಸ್ಥಾನದ ಅತ್ಯದ್ಭುತ ವಾಸ್ತುಶಿಲ್ಪ, ಕಲೆ ಸಂಸ್ಕೃತಿ ಆಹಾರ ನಿಮಗೆ ಸಿಗುವ ಬೋನಸ್!‌

jaipur

೯. ಜೈಪುರ್‌, ರಾಜಸ್ಥಾನ: ಪಿಂಕ್‌ ಸಿಟಿ ಎಂಬ ಹೆಸರಿನ ಜೈಪುರ ರಾಜಸ್ಥಾನದ ಬಗ್ಗೆ ತಿಳಿದುಕೊಳ್ಳ ಬಯಸುವ ಎಲ್ಲರಿಗೂ ಒಂದು ಝಲಕ್‌ ನೀಡುವ ನಗರಿ. ಕೋಟೆ ಕೊತ್ತಲಗಳ, ಕಣ್ತುಂಬ ಬಣ್ಣ ತುಂಬುವ ದಿರಿಸುಗಳ ರಾಜರ ಹಾಗೆ ಐಷಾರಾಮಿ ಝಲಕ್‌ ಅನುಭವಿಸಬಯಸುವ ಮಂದಿಗೆ ಇದು ಹೇಳಿ ಮಾಡಿಸಿದ ತಾಣ.

mysore palace

೧೦. ಮೈಸೂರು, ಕರ್ನಾಟಕ: ಅರಮನೆಗಳ ನಗರಿ ಮೈಸೂರು ಭಾರತದಲ್ಲಿ ಇಂದಿಗೂ ದಸರಾಕ್ಕೆ ವಿಶ್ವದೆಲ್ಲೆಡೆಯಿಂದ ಜನರನ್ನು ಕೈಬೀಸಿ ಕರೆವ ನಗರಿ. ಇಂದಿಗೂ ವೈಭವೋಪೇತ ದಸರೆಯ ಸಂಭ್ರಮವನ್ನು ದೇಶದೆಲ್ಲೆಡೆ ಹಂಚುವ, ರಾಜ ವೈಭೋಗದ ಆದರೆ ಸದಾ ಶಾಂತಿಯುತ ಸುಂದರ ನಗರ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

Neha Murder Case: ಹುಬ್ಬಳ್ಳಿ ನಗರವನ್ನು ನಡುಗಿಸಿದ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್‌ನನ್ನು ಪೊಲೀಸರು ಇಂದು ಕೋರ್ಟ್ ಮುಂದೆ ಹಾಜರುಪಡಿಸಿದರು. ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಆರೋಪಿಯನ್ನು‌ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿ ನ್ಯಾಯಾಧೀಶರು ಆದೇಶಿಸಿದರು.

VISTARANEWS.COM


on

Murder case Man stabbed to death 9 times for refusing to love
Koo

ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ (Neha Hirematt) ಎಂಬ ಕಾಲೇಜು ವಿದ್ಯಾರ್ಥಿನಿಯನ್ನು ಹತ್ಯೆ (Neha Murder Case) ಮಾಡಿದ ಆರೋಪಿ ಫಯಾಜ್‌ನನ್ನು ಪೊಲೀಸರು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಫಯಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನ (Judicial Custody) ವಿಧಿಸಲಾಗಿದೆ. ನೇಹಾ ಕುಟುಂಬಸ್ಥರನ್ನು ಬಿಜೆಪಿ ಮುಖಂಡರಾದ ಪ್ರಹ್ಲಾದ್‌ ಜೋಶಿ, ಬಸವರಾಜ್‌ ಬೊಮ್ಮಾಯಿ ಮುಂತಾದವರು ಭೇಟಿಯಾಗಿದ್ದು, ʼʼಹಿಂದೂಗಳಿಗೆ ರಕ್ಷಣೆ ನೀಡದ ರಾಜ್ಯ ಸರ್ಕಾರʼʼದ ವಿರುದ್ಧ ಗುಡುಗಿದ್ದಾರೆ.

ಹುಬ್ಬಳ್ಳಿ ನಗರವನ್ನು ನಡುಗಿಸಿದ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್‌ನನ್ನು ಪೊಲೀಸರು ಇಂದು ಕೋರ್ಟ್ ಮುಂದೆ ಹಾಜರುಪಡಿಸಿದರು. ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಆರೋಪಿಯನ್ನು‌ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿ ನ್ಯಾಯಾಧೀಶರು ಆದೇಶಿಸಿದರು.

ಮೂರು ದಿನ ಮುನವಳ್ಳಿ ಬಂದ್‌

ನೇಹಾ ಹಿರೇಮಠ ಅವರ ಮೂಲವಾದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ನಗರ ಕೂಡ ಉದ್ವಿಗ್ನಗೊಂಡಿದೆ. ಇಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಗರ ಬಂದ್‌ಗೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಕರೆ ನೀಡಿವೆ. ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ. ಈ ನಡುವೆ, ಇಂದು ʼಲವ್‌ ಜಿಹಾದ್‌ ಕೊಲೆʼ ಎಂದು ಹೇಳುವ ಪೋಸ್ಟರ್‌ಗಳು ಸೋಶಿಯಲ್‌ ಮೀಡಿಯಾದಲ್ಲಿ ಓಡಾಡುತ್ತಿವೆ. ‌

ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಶವವನ್ನು ಕಿಮ್ಸ್ ಶವಾಗಾರದಲ್ಲಿ ಇಡಲಾಗಿದೆ. ಬಿಜೆಪಿ ಮುಖಂಡರಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ಪ್ರಹ್ಲಾದ್‌ ಜೋಶಿ, ಹಿಂದೂ ಮುಖಂಡ ಪ್ರಮೋದ್ ಮುತಾಲಿಕ್ ಇಲ್ಲಿಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಬಿಡ್ನಾಳದ ಬಸವನಗರದಲ್ಲಿರುವ ಕಾರ್ಪೊರೇಟರ್ ನಿರಂಜನ್ ಮನೆ ಬಳಿ ಜನರು ಹಾಗೂ ಸಂಬಂಧಿಕರು ಜಮಾಯಿಸುತ್ತಿದ್ದಾರೆ. ನಿರಂಜನರಿಗೆ ಸಾಂತ್ವನ ಹೇಳಲು ಮಾಜಿ ಮೇಯರ್ ಇರೇಶ್ ಅಂಚಟಗೇರಿ, ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಸೇರಿದಂತೆ ಬಿಜೆಪಿ ಸ್ಥಳೀಯ ನಾಯಕರು ಆಗಮಿಸಿದ್ದಾರೆ.

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಇದನ್ನೂ ಓದಿ: Murder Case: ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

Continue Reading

ವೈರಲ್ ನ್ಯೂಸ್

Viral Video: ಶಾಲೆಯಲ್ಲಿ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡು ಸಿಕ್ಕಿಬಿದ್ದ ಪ್ರಿನ್ಸಿಪಾಲ್!

Viral Video: ವಿದ್ಯೆ ಕಲಿಸಬೇಕಿರುವ ಗುರು ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡು ಸಿಕ್ಕಿಬಿದ್ದ ವಿಡಿಯೊ ಈಗ ಎಲ್ಲೆಡೆ ಹರಿದಾಡುತ್ತಿದೆ. ಹೀಗೆ ಆದರೆ ನಮ್ಮ ಮುಂದಿನ ಪೀಳಿಗೆಯ ಭವಿಷದ್ಯದ ಗತಿಯೇನು ಎಂಬ ಚಿಂತೆ ಪೋಷಕರದ್ದು!

VISTARANEWS.COM


on

Viral Video
Koo

ಲಖನೌ: ಇತ್ತೀಚೆಗಷ್ಟೇ ಶಿಕ್ಷಕಿಗೆ ವಿದ್ಯಾರ್ಥಿಯೊಬ್ಬ ಕಪಾಳಮೋಕ್ಷ ಮಾಡಿದ ವಿಡಿಯೊ ವೈರಲ್ ಆಗಿದೆ. ಈಗ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಮಾಡಿದ ಅವಾಂತರದ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ. ಮಕ್ಕಳಿಗೆ ವಿದ್ಯೆ ಕಲಿಸಿ ಬುದ್ದಿ ಹೇಳಬೇಕಾಗಿರುವ ಶಿಕ್ಷಕರಿಯೊಬ್ಬರು ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ.

ಒಳ್ಳೆಯ ಗುರುವಿದ್ದರೆ ಮಕ್ಕಳ ಭವಿಷ್ಯ  ಒಳ್ಳೆಯದಾಗಿರುತ್ತದೆ ಎಂಬ ನಂಬಿಕೆ ಪೋಷಕರದ್ದು. ನಮ್ಮ ಮಗು ಶಾಲೆಗೆ ಹೋಗುತ್ತಿದೆ. ಏನಾದರೂ ಕಲಿತು ನಾಳೆ ನಮ್ಮ ಕಷ್ಟವನ್ನು ನಿಭಾಯಿಸುತ್ತದೆ ಎಂದು ಸಾಲ ಮಾಡಿ ಮಕ್ಕಳನ್ನು ಶಾಲೆಗೆ ಕಳಿಸುತ್ತಾರೆ. ಆದರೆ ಅಲ್ಲಿ ಅವರಿಗೆ ವಿದ್ಯೆಯನ್ನು ಧಾರೆ ಎರೆಯುವವರೇ ಸರಿ ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಗತಿಯೇನು? ವಿದ್ಯೆ ಕಲಿಸುವ ಗುರುಗಳೇ ಬೇರೆ ಕೆಲಸದಲ್ಲಿ ತೊಡಗಿಕೊಂಡು ಉಳಿದ ಶಿಕ್ಷಕರನ್ನು ತಲೆ ತಗ್ಗಿಸುವಂತೆ ಮಾಡಿದ ಘಟನೆ ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ನಡೆದಿದೆ.

ಏಪ್ರಿಲ್ 18ರಂದು ಬೆಳಿಗ್ಗೆ ಉತ್ತರ ಪ್ರದೇಶದ ಬಿಘಾಪುರ ಬ್ಲಾಕ್ ನ ದಂಡಮಾವು ಗ್ರಾಮದ ಪ್ರಾಥಮಿಕ ಶಾಲೆಯೊಂದರಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿಯೊಬ್ಬರು ಮಕ್ಕಳಿಗೆ ಪಾಠ ಮಾಡುವ ಬದಲು ತನ್ನ ಮುಖದ ಸೌಂದರ್ಯ ಹೆಚ್ಚು ಮಾಡಿಕೊಳ್ಳುವುದಕ್ಕಾಗಿ ಫೇಶಿಯಲ್ ಮಾಡಿಸಿಕೊಳ್ಳುವುದರಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಇದರಿಂದ ಆ ಶಾಲೆಯ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎನ್ನಲಾಗಿದೆ.

ಶಾಲಾ ಮುಖ್ಯೋಪಾಧ್ಯಾಯಿನಿ ಸಂಗೀತಾ ಸಿಂಗ್ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡ ಶಿಕ್ಷಕಿ.  ವಿದ್ಯಾರ್ಥಿಗಳಿಗೆ ಊಟ ತಯಾರಿಸುವ ಕೋಣೆಯಲ್ಲಿ ಫೇಶಿಯಲ್ ಮಾಡಿಕೊಳ್ಳುತ್ತಿರುವುದನ್ನು ಕಂಡು ಸಹಾಯಕ ಶಿಕ್ಷಕಿ ಅನಮ್ ಖಾನ್ ಅವರು ಇದನ್ನು ವಿಡಿಯೊ ಮಾಡಿದ್ದಾರೆ. ಇದರಿಂದ ಕೋಪಗೊಂಡ ಸಂಗೀತಾ ಸಿಂಗ್, ಅನಮ್ ಖಾನ್ ಅವರನ್ನು ಹಿಗ್ಗಾಮುಗ್ಗಾ  ಥಳಿಸಿ, ಆಕೆಯ ಕೈಯನ್ನು ಕಚ್ಚಿ ಗಾಯಗೊಳಿಸಿದ್ದಾರೆ. ಇನ್ನು ಸಂಗೀತ ಸಿಂಗ್ ಹಲ್ಲೆ ಮಾಡಿದ ವಿಡಿಯೊ ಹಾಗೂ ಫೇಶಿಯಲ್ ಮಾಡಿದ ವಿಡಿಯೊಗಳನ್ನು ಅನಮ್ ಖಾನ್ ಪೋಸ್ಟ್ ಮಾಡಿದ್ದಾರೆ. ಇವೆರಡು ವಿಡಿಯೊಗಳು ಸಿಕ್ಕಾಪಟ್ಟೆ ವೈರಲ್ ಆಗಿವೆ.

ಈ ವಿಡಿಯೊ ನೋಡಿದ ಬ್ಲಾಕ್ ನ ಶಿಕ್ಷಣಾಧಿಕಾರಿ ಸಂಗೀತಾ ಸಿಂಗ್ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ ಶಿಕ್ಷಕಿ ಅನಮ್ ಖಾನ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಸಂಗೀತಾ ಸಿಂಗ್ ವಿರುದ್ಧ ಬಿಘಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಂಡಮಾವು ಗ್ರಾಮದ ಶಾಲಾ ಮುಖ್ಯ ಶಿಕ್ಷಕಿ ಶಾಲಾ ಆವರಣದಲ್ಲೇ ಫೇಶಿಯಲ್ ಮಾಡಿಸಿಕೊಳ್ಳುತ್ತಿದ್ದು, ಸಿಕ್ಕಿಬಿದ್ದಿದ್ದಕ್ಕಾಗಿ ಥಳಿಸಿದ್ದಾರೆ ಎಂದು ಶಾಲಾ ಸಹಾಯಕ ಶಿಕ್ಷಕಿಯಿಂದ ದೂರು ಬಂದಿದೆ. ಈ ಬಗ್ಗ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಘಾಪುರ ವೃತ್ತಾಧಿಕಾರಿ ಮಾಯಾ ರೈ ತಿಳಿಸಿದ್ದಾರೆ.

ಇದನ್ನೂ ಓದಿ:  ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವ ಬದಲು ಶಿಕ್ಷಕರು ತಮ್ಮ ವೈಯಕ್ತಿಕ ಕೆಲಸಗಳಲ್ಲಿ ತಲ್ಲೀನರಾಗಿರುತ್ತಾರೆ. ಇದಕ್ಕೆ ಕಾರಣ ಸರ್ಕಾರದ ನಿರ್ಲಕ್ಷ್ಯ ಎನ್ನಬಹುದು. ಯಾಕೆಂದರೆ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ  ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿಗೆ ತರದ ಕಾರಣ ಶಿಕ್ಷಕರು ಮನಬಂದಂತೆ ವರ್ತಿಸುತ್ತಿದ್ದಾರೆ. ಹಾಗಾಗಿ ಇದನ್ನು ಗಮನಿಸಿದ ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಹಣವಿಲ್ಲದಿದ್ದರೂ ಸಾಲ ಮಾಡಿ ಖಾಸಗಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿದೆ. ಸರ್ಕಾರ ಈ ಕುರಿತು ಸೂಕ್ತ ಕ್ರಮ ಕೈಗೊಂಡರೆ ಒಳಿತು.

Continue Reading

ಪ್ರಮುಖ ಸುದ್ದಿ

Indian Navy: ನೌಕಾಪಡೆ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ

Indian Navy: ಸಂವಹನ ಮತ್ತು ಎಲೆಕ್ಟ್ರಾನಿಕ್ ಯುದ್ಧ ತಜ್ಞರಾದ ತ್ರಿಪಾಠಿ ಅವರು ನೌಕಾಪಡೆಯ ಮುಂಚೂಣಿ ಯುದ್ಧನೌಕೆಗಳಲ್ಲಿ ಸಿಗ್ನಲ್ ಸಂವಹನ ಅಧಿಕಾರಿ ಮತ್ತು ಎಲೆಕ್ಟ್ರಾನಿಕ್ ವಾರ್‌ಫೇರ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. ನಂತರ ನಿರ್ದೇಶಿತ ಕ್ಷಿಪಣಿ ವಿಧ್ವಂಸಕ INS ಮುಂಬೈನ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪ್ರಧಾನ ಯುದ್ಧ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.

VISTARANEWS.COM


on

indian navy chief of naval staff dinesh tripathi
Koo

ಹೊಸದಿಲ್ಲಿ: ವೈಸ್ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ (Vice Admiral Dinesh Tripathi) ಅವರನ್ನು ನೌಕಾಪಡೆ (Indian Navy) ಮುಂದಿನ ಮುಖ್ಯಸ್ಥರನ್ನಾಗಿ (Chief of Naval Staff) ಕೇಂದ್ರ ಸರಕಾರ ನೇಮಿಸಿದೆ. ಪ್ರಸ್ತುತ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ (Admiral R. Harikumar) ಅವರು ಸೇವೆಯಿಂದ ನಿವೃತ್ತರಾದ ನಂತರ ಅವರು ಏಪ್ರಿಲ್ 30ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಮೇ 15, 1964ರಂದು ಜನಿಸಿದ ತ್ರಿಪಾಠಿ, ಖಡಕ್‌ವಾಸ್ಲಾದ ಸೈನಿಕ್ ಸ್ಕೂಲ್ ರೇವಾ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿ. ಅವರನ್ನು 1985ರಲ್ಲಿ ಭಾರತೀಯ ನೌಕಾಪಡೆಯ ಕಾರ್ಯನಿರ್ವಾಹಕ ಶಾಖೆಗೆ ನಿಯೋಜಿಸಲಾಯಿತು.

ಸಂವಹನ ಮತ್ತು ಎಲೆಕ್ಟ್ರಾನಿಕ್ ಯುದ್ಧ ತಜ್ಞರಾದ ತ್ರಿಪಾಠಿ ಅವರು ನೌಕಾಪಡೆಯ ಮುಂಚೂಣಿ ಯುದ್ಧನೌಕೆಗಳಲ್ಲಿ ಸಿಗ್ನಲ್ ಸಂವಹನ ಅಧಿಕಾರಿ ಮತ್ತು ಎಲೆಕ್ಟ್ರಾನಿಕ್ ವಾರ್‌ಫೇರ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. ನಂತರ ನಿರ್ದೇಶಿತ ಕ್ಷಿಪಣಿ ವಿಧ್ವಂಸಕ INS ಮುಂಬೈನ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪ್ರಧಾನ ಯುದ್ಧ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.

ವೈಸ್ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಅವರ ಸಮುದ್ರ ಕಮಾಂಡ್‌ಗಳಲ್ಲಿ ಐಎನ್‌ಎಸ್ ವಿನಾಶ್, ಕಿರ್ಚ್ ಮತ್ತು ತ್ರಿಶೂಲ್ ಸೇರಿವೆ. ಸುಮಾರು 39 ವರ್ಷಗಳ ಕಾಲ ಅವರ ಸುದೀರ್ಘ ಮತ್ತು ವಿಶಿಷ್ಟ ಸೇವೆಯಲ್ಲಿ, ಅವರು ಮುಂಬೈನಲ್ಲಿ ವೆಸ್ಟರ್ನ್ ಫ್ಲೀಟ್‌ನ ಫ್ಲೀಟ್ ಆಪರೇಷನ್ ಆಫೀಸರ್, ನೌಕಾ ಕಾರ್ಯಾಚರಣೆಗಳ ನಿರ್ದೇಶಕರು, ಪ್ರಧಾನ ನಿರ್ದೇಶಕ ನೆಟ್‌ವರ್ಕ್ ಸೆಂಟ್ರಿಕ್ ಕಾರ್ಯಾಚರಣೆಗಳು ಮತ್ತು ಪ್ರಧಾನ ನಿರ್ದೇಶಕ ನೌಕಾ ಯೋಜನೆಗಳನ್ನು ಒಳಗೊಂಡಂತೆ ವಿವಿಧ ಪ್ರಮುಖ ಕಾರ್ಯಾಚರಣೆ ಮತ್ತು ಸಿಬ್ಬಂದಿ ನೇಮಕಾತಿಗಳನ್ನು ಸಹ ನಡೆಸಿದ್ದಾರೆ.

ಹಿಂದಿನ ಅಡ್ಮಿರಲ್ ಹುದ್ದೆಗೆ ಬಡ್ತಿ ಪಡೆದ ನಂತರ, ಅವರು NHQ ನಲ್ಲಿ ನೌಕಾ ಸಿಬ್ಬಂದಿಯ ಸಹಾಯಕ ಮುಖ್ಯಸ್ಥರಾಗಿ (ನೀತಿ ಮತ್ತು ಯೋಜನೆಗಳು) ಸೇವೆ ಸಲ್ಲಿಸಿದರು ಮತ್ತು ಪೂರ್ವ ನೌಕಾಪಡೆಗೆ ಕಮಾಂಡ್ ಮಾಡುವ ಧ್ವಜ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.

ಕೇರಳದ ಎಝಿಮಲದಲ್ಲಿರುವ ಪ್ರತಿಷ್ಠಿತ ಇಂಡಿಯನ್ ನೇವಲ್ ಅಕಾಡೆಮಿಯ ಕಮಾಂಡೆಂಟ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಜುಲೈ 2020 ರಿಂದ ಮೇ 2021 ರವರೆಗೆ ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕರಾಗಿದ್ದರು.

ತ್ರಿಪಾಠಿ ಅವರು ಕೊಚ್ಚಿಯ ಸಿಗ್ನಲ್ ಸ್ಕೂಲ್, ಡಿಫೆನ್ಸ್ ಸರ್ವಿಸಸ್ ಸ್ಟಾಫ್ ಕಾಲೇಜ್, ವೆಲ್ಲಿಂಗ್ಟನ್, ನೇವಲ್ ಹೈಯರ್ ಕಮಾಂಡ್ ಕೋರ್ಸ್, ಕಾರಂಜಾ ಮತ್ತು ಯುನೈಟೆಡ್ ಸ್ಟೇಟ್ಸ್ ನೇವಲ್ ವಾರ್ ಕಾಲೇಜಿನಲ್ಲಿ ನೇವಲ್ ಕಮಾಂಡ್ ಕಾಲೇಜಿನಲ್ಲಿ ಕೋರ್ಸ್‌ಗಳನ್ನು ಪಡೆದಿದ್ದಾರೆ.

ಅವರು ಪರಮ ವಿಶಿಷ್ಟ ಸೇವಾ ಪದಕ (PVSM), ಅತಿ ವಿಶಿಷ್ಟ ಸೇವಾ ಪದಕ (AVSM) ಮತ್ತು ನವೋ ಸೇನಾ ಪದಕ (NSM) ಗಳನ್ನೂ ಸಹ ಪಡೆದಿದ್ದಾರೆ.

ಇದನ್ನೂ ಓದಿ: Job Alert: ಭಾರತೀಯ ನೌಕಾಪಡೆಯಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಏಪ್ರಿಲ್‌ 30ರೊಳಗೆ ಅರ್ಜಿ ಸಲ್ಲಿಸಿ

Continue Reading

Lok Sabha Election 2024

Modi in Karnataka: ನಾಳೆ ರಾಜ್ಯಕ್ಕೆ ಮೋದಿ; ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಬೃಹತ್‌ ಸಮಾವೇಶ

Modi in Karnataka: ನಾಳೆ (ಏಪ್ರಿಲ್‌ 20) ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

VISTARANEWS.COM


on

Modi in Karnataka on April 20 Massive rallies in Chikkaballapura and Bengaluru
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 20ರಂದು ಮೋದಿ ರಾಜ್ಯಕ್ಕೆ (Modi in Karnataka) ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ.

ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮೋದಿ ಹವಾ!

ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಬೃಹತ್‌ ರ‍್ಯಾಲಿ

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌!

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ಮೈಸೂರು ಸಮಾವೇಶದಲ್ಲಿ ಗುಡುಗಿದ್ದ ಮೋದಿ!

ಮೈಸೂರಿನಲ್ಲಿ ನಡೆದಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ಹಿಂದುತ್ವದ ವಿರುದ್ಧ ಆ ಪಕ್ಷ ಹಾಗೂ ಮಿತ್ರ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದರು. ಇನ್ನು ದೇಶದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಇಲ್ಲಿನ ಕಾಂಗ್ರೆಸ್‌ ಸರ್ಕಾರವು ಎಟಿಎಂ ಆಗಿದ್ದು, ನೂರಾರು ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್‌ 20 ರಂದು ನಡೆಯಲಿರುವ ಎರಡು ಸಮಾವೇಶಗಳಲ್ಲಿ ಮೋದಿ ಏನು ಮಾತನಾಡಲಿದ್ದಾರೆ? ಯಾವೆಲ್ಲ ಹೊಸ ವಿಷಯಗಳನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Continue Reading
Advertisement
Teja Sajja Hanuman Movie Feme Mirai announce
ಟಾಲಿವುಡ್10 mins ago

Teja Sajja: ಹೊಸ ಸಿನಿಮಾ ಅನೌನ್ಸ್‌ ಮಾಡಿದ ʻಹನುಮಾನ್ʼ ಹೀರೊ ತೇಜ್ ಸಜ್ಜಾ

Murder case Man stabbed to death 9 times for refusing to love
ಪ್ರಮುಖ ಸುದ್ದಿ18 mins ago

Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

Viral Video
ವೈರಲ್ ನ್ಯೂಸ್19 mins ago

Viral Video: ಶಾಲೆಯಲ್ಲಿ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡು ಸಿಕ್ಕಿಬಿದ್ದ ಪ್ರಿನ್ಸಿಪಾಲ್!

IPL 2024
ಕ್ರೀಡೆ20 mins ago

IPL 2024: ಮುಂಬೈ ಗೆದ್ದರೂ ಪಾಂಡ್ಯಗಿಲ್ಲ ಖುಷಿ; ನಿಧಾನಗತಿಯ ಓವರ್​ಗೆ ಬಿತ್ತು 12 ಲಕ್ಷ ದಂಡ

Murder Case
ಬೆಂಗಳೂರು44 mins ago

Murder case : ಬೆಂಗಳೂರಲ್ಲಿ ರಕ್ತದೋಕುಳಿ; ಪ್ರತ್ಯೇಕ ಕಡೆಗಳಲ್ಲಿ ಯುವಕರಿಬ್ಬರ ಬರ್ಬರ ಹತ್ಯೆ

IPL 2024
ಕ್ರೀಡೆ52 mins ago

IPL 2024: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರೋಹಿತ್​ ಶರ್ಮ

Lok Sabha Election 2024 Rajinikanth Kamal Haasan Dhanush Vijay Sethupathi vote in Chennai
ಕಾಲಿವುಡ್53 mins ago

Lok Sabha Election 2024: ಚೆನ್ನೈನಲ್ಲಿ ಮತ ಚಲಾಯಿಸಿದ ರಜನಿಕಾಂತ್​, ಧನುಷ್, ಕಮಲ್ ಹಾಸನ್, ವಿಜಯ್‌!

summer trip
ಪ್ರವಾಸ1 hour ago

Summer Tour: ಹಚ್ಚ ಹಸುರಿನ ಪ್ರಶಾಂತ ನಗರ ಶಿಲ್ಲಾಂಗ್; ಬೇಸಿಗೆ ಪ್ರವಾಸಕ್ಕೆ ಸೂಕ್ತ

Viral Video
ವೈರಲ್ ನ್ಯೂಸ್2 hours ago

Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Harshika Poonacha Bhuvan! for speak Kannada
ಸ್ಯಾಂಡಲ್ ವುಡ್2 hours ago

Harshika Poonacha: ಹರ್ಷಿಕಾ ಪೂಣಚ್ಚ-ಭುವನ್‌ ಮೇಲೆ ಅಟ್ಯಾಕ್! ಕನ್ನಡ ಮಾತನಾಡಿದ್ದೇ ತಪ್ಪಾಯ್ತಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ7 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌