Brahmastra trailer ಔಟ್‌, ಕೊನೆಗಾದರೂ ಬಾಲಿವುಡ್‌ನಿಂದ ಒಂದು ಪ್ಯಾನ್‌ ಇಂಡಿಯಾ ಚಿತ್ರ ಬರಲಿದೆಯಾ? - Vistara News

ಬಾಲಿವುಡ್

Brahmastra trailer ಔಟ್‌, ಕೊನೆಗಾದರೂ ಬಾಲಿವುಡ್‌ನಿಂದ ಒಂದು ಪ್ಯಾನ್‌ ಇಂಡಿಯಾ ಚಿತ್ರ ಬರಲಿದೆಯಾ?

ಬಹುನಿರೀಕ್ಷಿತ ಬಾಲಿವುಡ್‌ ಫಿಲಂ brahmastra trailer ಬಿಡುಗಡೆ ಆಗಿದೆ. ಮೇಕಿಂಗ್‌ ರಿಚ್‌ ಆಗಿದ್ದು, ಕಡೆಗೂ ಹಿಂದಿಯಿಂದ ಒಂದು ಪ್ಯಾನ್‌ ಇಂಡಿಯಾ ಮೂವಿ ನಿರೀಕ್ಷೆ ಮಾಡುವಂತಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಣಬೀರ್‌ ಕಪೂರ್‌ ಹಾಗೂ ಆಲಿಯಾ ಭಟ್‌ ಮುಖ್ಯ ಭೂಮಿಕೆಯಲ್ಲಿರುವ ಬಹು ನಿರೀಕ್ಷಿತ ʻಬ್ರಹ್ಮಾಸ್ತ್ರ, ಪಾರ್ಟ್‌ ಒನ್-‌ ಶಿವʼ ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದ್ದು, ಕೆಲವೇ ಗಂಟೆಗಳಲ್ಲಿ ಯುಟ್ಯೂಬ್‌ನಲ್ಲಿ 40 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ಸೆಪ್ಟೆಂಬರ್‌ 9ಕ್ಕೆ ಬಿಡುಗಡೆಯಾಗಲು ಸಜ್ಜಾಗಿರುವ ಆಯಾನ್‌ ಮುಖರ್ಜಿ ನಿರ್ದೇಶನದ ಈ ಚಿತ್ರದಲ್ಲಿ ಅಮಿತಾಭ್‌ ಬಚ್ಚನ್‌, ನಾಗಾರ್ಜುನ ಅಕ್ಕಿನೇನಿ, ಡಿಂಪಲ್‌ ಕಪಾಡಿಯಾ, ಮೌನಿ ರಾಯ್‌ ಅವರಂತಹ ದಿಗ್ಗಜರ ತಾರಾಗಣವೂ ಇದೆ.

ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಭಾಷೆಗಳಲ್ಲಿ ದೇಶದೆಲ್ಲೆಡೆ ಏಕಕಾಲಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ, ಟ್ರೈಲರ್‌ನಲ್ಲಿ ತನ್ನ ಅದ್ದೂರಿತನದಿಂದ ಹಾಗೂ ಬೆರಗುಗೊಳಿಸುವ ಮೇಕಿಂಗ್‌ನಿಂದ ಕುತೂಹಲ ಹುಟ್ಟು ಹಾಕಿದ್ದು, ಈ ಚಿತ್ರದ ಬಗೆಗಿದ್ದ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಪ್ಯಾನ್‌ ಇಂಡಿಯಾ ಸಿನಿಮಾಗೆ ಬೇಕಾದಂಥ ಮೇಕಿಂಗ್‌ ತೋರಿಸಿದೆ.

ಮೂರು ನಿಮಿಷದ ಟ್ರೈಲರ್‌ ತುಂಬ ಸಾಕಷ್ಟು ಮೈ ನವಿರೇಳಿಸುವ ದೃಶ್ಯಗಳಿದ್ದು, ಬೆರಗುಗೊಳಿಸುವ ವಿಎಫ್‌ಎಕ್ಸ್‌ ಕೂಡಾ ಇದೆ. ಬಾಲಿವುಡ್‌ನಲ್ಲಿ ಈವರೆಗೆ ತೆರೆ ಕಾಣುತ್ತಿದ್ದ ಪ್ರೇಮ ಕಥಾನಕಗಳಿಂದ ಈ ಚಿತ್ರ ಭಿನ್ನ ಲೋಕವನ್ನು ಪರಿಚಯಿಸುವ ಎಲ್ಲಾ ಲಕ್ಷಣಗಳನ್ನು ತೋರುತ್ತಿರುವುದು, ಸಿನಿಪ್ರಿಯರಲ್ಲಿ ಕುತೂಹಲ ಉಳಿಸಿಕೊಂಡಿದೆ. ಇಂಥದ್ದೊಂದು ಕಥಾಹಂದರ ಅದ್ಭುತ ಮೇಕಿಂಗ್‌ ಜೊತೆಗೆ ಹೊರಬರುತ್ತಿರುವುದು ಬಾಲಿವುಡ್‌ ಪಾಲಿಗೆ ಹೊಸತು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಮಿತಾಭ್ ಬಚ್ಚನ್‌ ಧ್ವನಿಯಿಂದ ಟ್ರೈಲರ್‌ ಆರಂಭವಾಗುತ್ತದೆ. ʼʼಪುರಾತನ ಕಾಲದಿಂದಲೂ ಜಲ, ವಾಯು ಅಗ್ನಿಗಳಂಥ ಪಂಚತತ್ವಗಳ ಶಕ್ತಿಗಳು ಅಸ್ತ್ರಗಳಲ್ಲಿದ್ದು, ಈ ಅಸ್ತ್ರಗಳೆಲ್ಲವುಗಳ ಮುಖ್ಯ ದೇವರ ಕಥೆ ಇದಾಗಿದೆ. ಅದುವೇ ಬ್ರಹ್ಮಾಸ್ತ್ರ” ಎಂಬ ಪೀಠಿಕೆಯಿದೆ. ಚಿತ್ರದಲ್ಲೊಬ್ಬ ಯುವಕ ಶಿವ, ಆತನಿಗೊಬ್ಬಳು ಪ್ರೇಯಸಿ, ಈಶಾ ನಡುವಿನ ಪ್ರೇಮ ಕಥಾನಕ ಹಾಗೂ ಈ ಶಿವ ಹಾಗೂ ಬ್ರಹ್ಮಾಸ್ತ್ರದ ನಡುವಿನ ಸಂಬಂಧ ಕಥೆಯ ಎಳೆಯಾಗಿದೆ. ಈಗಷ್ಟೇ ಪತಿ ಪತ್ನಿಯರಾಗಿ ಬಡ್ತಿ ಹೊಂದಿದ ರಣಬೀರ್‌ ಆಲಿಯಾ ಜೋಡಿ ತೆರೆ ಮೇಲೂ ತಮ್ಮ ಲವ್‌ ಕೆಮೆಸ್ಟ್ರಿ ಮೂಲಕ ಸಿನಿರಸಿಕರನ್ನು ಮೋಡಿ ಮಾಡಲಿದೆ.

ಚಿತ್ರದಲ್ಲಿ ಶಾರುಖ್‌ ಖಾನ್‌ ಕೂಡ ವಿಶೇಷ ಅತಿಥಿ ಪಾತ್ರವೊಂದರಲ್ಲಿ ನಟಿಸಿದ್ದಾರೆ ಎನ್ನಲಾಗುತ್ತಿದೆ. ಸುಮಾರು 20 ನಿಮಿಷಗಳ ಪಾತ್ರ ಇದಾಗಿದ್ದು, ವಿಜ್ಞಾನಿಯ ಪಾತ್ರದಲ್ಲಿ ಅವರು ಮಿಂಚಲಿದ್ದಾರೆ. ಇದು ಚಿತ್ರದ ನಿರ್ಣಾಯಕ ಪಾತ್ರವೂ ಆಗಿದೆ ಎನ್ನಲಾಗಿದೆ.

ವೇಕ್‌ ಅಪ್‌ ಸಿದ್‌, ಯೇ ಜವಾನಿ ಹೇ ದಿವಾನಿಯಂತಹ ಚಿತ್ರಗಳನ್ನು ನೀಡಿರುವ ನಿರ್ದೇಶಕ ಅಯಾಯ್‌ ಮುಖರ್ಜಿ ಪಾಲಿಗೆ ಇದು ಕನಸು ನನಸಾದ ಕ್ಷಣ ಎಂದು ಅವರು ಭಾವುಕರಾಗಿದ್ದಾರೆ. ಇದು ನನ್ನ ಕನಸಿನ ಕೂಸು. ಈ ಚಿತ್ರ ಖಂಡಿತ ನಮ್ಮ ದೇಶದ ಚಿತ್ರರಂಗಕ್ಕೆ ಹೆಮ್ಮೆಯ ಕ್ಷಣಗಳನ್ನು ದೊರಕಿಸಿಕೊಡಲಿದೆ. ನಮ್ಮ ಶ್ರೀಮಂತ ಸಂಸ್ಕೃತಿಯ ಬೇರುಗಳ ಆಳಕ್ಕಿಳಿವ ಕಥಾ ಹಂದರವಿರುವ ಚಿತ್ರ ಇದಾಗಿದ್ದು, ಕಲ್ಪನಾ ಲೋಕಕ್ಕೆ ಸಿನಿಮಾಲೋಕದ ಮೂಲಕ ಕೊಂಡೊಯ್ಯಬಲ್ಲ ಶಕ್ತಿಯನ್ನು ನೀಡಲಿದೆ. ಕೇವಲ ಹಿಂದಿನ ಬೇರಷ್ಟೇ ಅಲ್ಲದೆ, ಆಧುನಿಕ ಜಗತ್ತಿನ ತಂತ್ರಜ್ಞಾನ, ವಿಜ್ಞಾನ ಲೋಕದ ಸಂಬಂಧ ಈ ಚಿತ್ರದಲ್ಲಿದ್ದು, ಆ ಮೂಲಕ ಪ್ರೇಕ್ಷಕರನ್ನು ಅನೂಹ್ಯ ಕಲ್ಪನಾ ಲೋಕದಲ್ಲಿ ವಿಹರಿಸುವಂತೆ ಮಾಡುತ್ತದೆ. ತಾಂತ್ರಿಕವಾಗಿಯೂ ಅತ್ಯಂತ ಶ್ರೀಮಂತವಾಗಿ ಚಿತ್ರವನ್ನು ಮಾಡಲಾಗಿದೆ ಎಂದಿದ್ದಾರೆ.

ಪ್ಯಾನ್‌ ಇಂಡಿಯಾ ಚಿತ್ರ ಇದಾಗಿದೆ. ಈಗಾಗಲೇ ಟ್ರೈಲರ್‌ ವೀಕ್ಷಿಸಿದ ಮಂದಿ ಪ್ರತಿಕ್ರಿಯೆಗಳ ಸುರಿಮಳೆ ಸುರಿಸುತ್ತಿದ್ದು, ಬಾಲಿವುಡ್‌ ಕೊನೆಗೂ ತನ್ನ ಪ್ರೇಮ ಕಥಾನಕಗಳಿಂದ ಹೊರ ಬಂದು ಹೊಸತೊಂದು ಪ್ರಯತ್ನಕ್ಕೆ ಕೈಹಾಕಿದ್ದು ಸಂತಸ ತಂದಿದೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Richa Chadda:  ರಿಚಾ ಚಡ್ಡಾ ಬೇಬಿ ಬಂಪ್‌ಗೆ ಮುತ್ತಿಟ್ಟ ನಟಿ ರೇಖಾ!

Richa Chadda:ರಿಚಾ ಚಡ್ಡಾ ಅವರು ಹಲವು ವೆಬ್​ ಸರಣಿಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದೀಗ ‘ಹೀರಾಮಂಡಿ’ ಚಿತ್ರದಲ್ಲಿಯೂ ನಟಿ ಅಭಿನಯಿಸಿದ್ದಾರೆ. ‘ಹೀರಾಮಂಡಿ’ ವೀಕ್ಷಿಸಿದ ನಂತರ ರೇಖಾ ಅವರು ರಿಚಾ ಚಡ್ಡಾ ಅವರ ನಟನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಹೀರಾಮಂಡಿ’ ಸಿನಿಮಾ ತಂಡವನ್ನು ಬೆಂಬಲಿಸಲು ಬಾಲಿವುಡ್ ತಾರೆಯರ ಗುಂಪೇ ನೆರೆದಿತ್ತು. ʻಹೀರಾಮಂಡಿʼ ಸಿರೀಸ್‌ ಮೇ 1ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ.

VISTARANEWS.COM


on

Rekha kisses Richa Chadha baby bump at Heeramandi event
Koo

ಬೆಂಗಳೂರು: ‘ಹೀರಾಮಂಡಿ’ ಚಿತ್ರದ ಪ್ರೀಮಿಯರ್‌ ವೇಳೆ ಹಿರಿಯ ನಟಿ ರೇಖಾ (Richa Chadda) ಅವರು ರಿಚಾ ಚಡ್ಡಾ ಬೇಬಿ ಬಂಪ್‌ಗೆ ಮುತ್ತಿಟ್ಟಿದ್ದಾರೆ. ಈ ಫೋಟೊ ಹಾಗೂ ವಿಡಿಯೊ ವೈರಲ್‌ ಆಗಿದೆ. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಹೀರಾಮಂಡಿ’ ಸಿನಿಮಾ ತಂಡವನ್ನು ಬೆಂಬಲಿಸಲು ಬಾಲಿವುಡ್ ತಾರೆಯರ ಗುಂಪೇ ನೆರೆದಿತ್ತು. ʻಹೀರಾಮಂಡಿʼ ಸಿರೀಸ್‌ ಮೇ 1ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ.

ರಿಚಾ ಚಡ್ಡಾ ಅವರು ಹಲವು ವೆಬ್​ ಸರಣಿಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದೀಗ ‘ಹೀರಾಮಂಡಿ’ ಚಿತ್ರದಲ್ಲಿಯೂ ನಟಿ ಅಭಿನಯಿಸಿದ್ದಾರೆ. ‘ಹೀರಾಮಂಡಿ’ ವೀಕ್ಷಿಸಿದ ನಂತರ ರೇಖಾ ಅವರು ರಿಚಾ ಚಡ್ಡಾ ಅವರ ನಟನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಜಯ್ ಲೀಲಾ ಬನ್ಸಾಲಿಯವರ ಬಹು ನಿರೀಕ್ಷಿತ ಸರಣಿಯಲ್ಲಿ ʻಲಜ್ಜೋʼ ಪಾತ್ರದಲ್ಲಿ ನಟಿಸಿದ್ದಾರೆ.

ರಿಚಾ ಚಡ್ಡಾ ಕೂಡ ಈ ಬಗ್ಗೆ ಮಾತನಾಡಿ ʻʻರೇಖಾ ಅವರಂತಹ ಪೂಜ್ಯರಿಂದ ಪ್ರಶಂಸೆ ಮತ್ತು ಪ್ರೀತಿಯನ್ನು ಸ್ವೀಕರಿಸುತ್ತಿರುವುದು ಖುಷಿಯ ಕ್ಷಣವಾಗಿದೆ. ನನ್ನ ಹೃದಯ ತುಂಬಿದೆ. ‘ಹೀರಾಮಂಡಿ’ ಚಿತ್ರದಲ್ಲಿನ ನನ್ನ ಅಭಿನಯದ ಮೇಲಿನ ಪ್ರೀತಿಯು ನನ್ನನ್ನು ಮೂಕನನ್ನಾಗಿ ಮಾಡಿತುʼʼಎಂದರು.

ಇದನ್ನೂ ಓದಿ: Kiran Rao: ಆಮೀರ್ ಖಾನ್ ಮಾಜಿ ಪತ್ನಿ ಸಿನಿಮಾ ಒಟಿಟಿಗೆ ಬಂದೇ ಬಿಡ್ತು! ಎಲ್ಲಿ ಸ್ಟ್ರೀಮಿಂಗ್?

ಸಂಜಯ್ ಲೀಲಾ ಬನ್ಸಾಲಿಯವರ ( Sanjay Leela Bhansali) ಹದಿನಾಲ್ಕು ವರ್ಷಗಳ ಕನಸಿನ ಕೂಸಾಗಿರುವ ನೆಟ್‌ಫ್ಲಿಕ್ಸ್ ಸೀರೀಸ್ ʻಹೀರಾಮಂಡಿ: ದಿ ಡೈಮಂಡ್ ಬಜಾರ್ʼ ಚಿತ್ರದ (Hiramandi: The Diamond Bazaar) ಬಹು ನಿರೀಕ್ಷಿತ ಟ್ರೈಲರ್‌ ಏಪ್ರಿಲ್‌ 10ರಂದು ಬಿಡುಗಡೆಯಾಗಿತ್ತು. ಅನೇಕ ನಟಿಯರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿದ್ದಾರೆ. ನೆಟ್​ಫ್ಲಿಕ್ಸ್​ ಮೂಲಕ ಮೇ 1ರಂದು ಈ ವೆಬ್​ ಸಿರೀಸ್​ ವೀಕ್ಷಣೆಗೆ ಲಭ್ಯವಾಗಲಿದೆ.

ಹೀರಾಮಂಡಿ: ದಿ ಡೈಮಂಡ್ ಬಜಾರ್’ನ ಮೊದಲ ಹಾಡು ‘ಸಕಲ್ ಬನ್’ (Sakal Ban) ಮಿಸ್ ವರ್ಲ್ಡ್ 2024 ರ ಫಿನಾಲೆಯಲ್ಲಿ ಲಾಂಚ್‌ ಆಗಿತ್ತು. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್ ಹೈದರಿ, ರಿಚಾ ಚಡ್ಡಾ, ಸಂಜೀದಾ ಶೇಖ್ ಮತ್ತು ಶರ್ಮಿನ್ ಸೆಗಲ್ ಸೇರಿದಂತೆ ಅನೇಕರು ಈ ಹಾಡಿಗೆ ರ್‍ಯಾಂಪ್‌ ವಾಕ್‌ ಮಾಡಿದ್ದರು.

ಸಂಜಯ್ ಲೀಲಾ ಬನ್ಸಾಲಿ ಚಿತ್ರಗಳೆಂದರೆ ಅಲ್ಲೊಂದು ಅದ್ಭುತ ಮಾಯಾಲೋಕವನ್ನೇ ನಾವು ನಿರೀಕ್ಷಿಸಬಹುದು. “ಹೀರಾಮಂಡಿ” ಸ್ವಾತಂತ್ರ್ಯಪೂರ್ವ ಭಾರತದಲ್ಲಿನ ವೇಶ್ಯೆಯರ ಜೀವನದಲ್ಲಿ ಪ್ರೀತಿ ಮತ್ತು ದ್ರೋಹದ ವಿಷಯಗಳನ್ನು ಅನ್ವೇಷಿಸುತ್ತದೆ. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್​ ಹೈದರಿ, ರಿಚಾ ಚಡ್ಡಾ, ಶರ್ಮಿನ್​ ಸೇಗಲ್​, ಸಂಜೀದಾ ಶೇಖ್​ ಮುಂತಾದವರು ‘ಹೀರಾಮಂಡಿ’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Kiran Rao: ಆಮೀರ್ ಖಾನ್ ಮಾಜಿ ಪತ್ನಿ ಸಿನಿಮಾ ಒಟಿಟಿಗೆ ಬಂದೇ ಬಿಡ್ತು! ಎಲ್ಲಿ ಸ್ಟ್ರೀಮಿಂಗ್?

Kiran Rao: ʻಲಾಪತಾ ಲೇಡೀಸ್‌ʼ (Laapataa Ladies) ಇತ್ತೀಚೆಗೆ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. 14 ವರ್ಷಗಳ ಬ್ರೇಕ್‌ ನಂತರ ಚಿತ್ರವನ್ನು ನಿರ್ದೇಶಿಸಿದ್ದಾರೆ ಕಿರಣ್. ‘ಲಾಪತಾ ಲೇಡೀಸ್’ ಬಿಪ್ಲಬ್ ಗೋಸ್ವಾಮಿಯವರ ಕಾದಂಬರಿಯನ್ನು ಆಧರಿಸಿದೆ. ಮಾರ್ಚ್ 1 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತು

VISTARANEWS.COM


on

Kiran Rao Laapataa Ladies to release on OTT
Koo

ಬೆಂಗಳೂರು: ಆಮೀರ್ ಖಾನ್ ಪ್ರೊಡಕ್ಷನ್ (APK) ಮತ್ತು ಕಿರಣ್ ಅವರ ಕಿಂಡ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ ʻಲಾಪತಾ ಲೇಡೀಸ್‌ʼ (Laapataa Ladies) ಇತ್ತೀಚೆಗೆ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. 14 ವರ್ಷಗಳ ಬ್ರೇಕ್‌ ನಂತರ ಚಿತ್ರವನ್ನು ನಿರ್ದೇಶಿಸಿದ್ದಾರೆ ಕಿರಣ್. ಇದೀಗ ಈ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದೆ. ಇಂದು (ಏಪ್ರಿಲ್ 26)ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಪ್ರಾರಂಭಗೊಂಡಿದೆ.

ಸಿನಿಮಾ ಬಗ್ಗೆ ಮೆಚ್ಚುಗೆ ಕೇಳಿಬಂದಿದ್ದರೂ ಕೂಡ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಈ ಸಿನಿಮಾವನ್ನು ಥಿಯೇಟರ್​ನಲ್ಲಿ ನೋಡಿರಲಿಲ್ಲ. ಒಟಿಟಿಯಲ್ಲಿ ನೋಡಬೇಕು ಎಂದು ಕಾದಿದ್ದ ಪ್ರೇಕ್ಷಕರಿಗೆ ಈಗ ಖುಷಿ ಸುದ್ದಿ ಸಿಕ್ಕಿದೆ. ಸ್ನೇಹಾ ದೇಸಾಯಿ ಬರೆದು ಆಮೀರ್ ಖಾನ್ ನಿರ್ಮಿಸಿದ ‘ಲಾಪತಾ ಲೇಡೀಸ್’ ಬಿಪ್ಲಬ್ ಗೋಸ್ವಾಮಿಯವರ ಕಾದಂಬರಿಯನ್ನು ಆಧರಿಸಿದೆ. ಮಾರ್ಚ್ 1 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತು.

‘ಮಹಿಳಾ ಪ್ರಧಾನ ವಸ್ತುವಿಷಯವನ್ನು ‘ಲಾಪತಾ ಲೇಡೀಸ್​’ ಚಿತ್ರದಲ್ಲಿದೆ. ಗಂಭೀರವಾದ ವಿಷಯವಾದರೂ ಕೂಡ ಇಡೀ ಸಿನಿಮಾವನ್ನು ಹಾಸ್ಯದ ಧಾಟಿಯಲ್ಲಿ ಕಟ್ಟಿಕೊಡಲಾಗಿದೆ. ಎಮೋಷನಲ್​ ದೃಶ್ಯಗಳು ಕೂಡ ಈ ಚಿತ್ರದಲ್ಲಿ ಗಮನ ಸೆಳೆದಿವೆ.

ಇದನ್ನೂ ಓದಿ: Aamir Khan: ಆಮೀರ್ ಖಾನ್-ರೀನಾ ದತ್ತಾ ಡಿವೋರ್ಸ್‌ಗೆ ನಾನು ಕಾರಣನಲ್ಲ: ಕಿರಣ್ ರಾವ್!

‘ಲಾಪತಾ ಲೇಡೀಸ್’ ಚಿತ್ರವನ್ನು ಕಿರಣ್ ರಾವ್ ಅವರು ನಿರ್ದೇಶಿಸಿದ್ದಾರೆ. ಆಮೀರ್ ಖಾನ್ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ್ದಾರೆ. ಚಿತ್ರದಲ್ಲಿ ರವಿ ಕಿಶನ್ ಜತೆಗೆ ನಿತಾಂಶಿ ಗೋಯೆಲ್, ಪ್ರತಿಭಾ ರಂತ, ಸ್ಪರ್ಶ ಶ್ರೀವಾತ್ಸವ್ ಕಾಣಿಸಿಕೊಂಡಿದ್ದಾರೆ. ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸ್ನೇಹಾ ದೇಸಾಯಿ ಬರೆದಿದ್ದರು.

ಈಗ ಆಮಿರ್ ಖಾನ್​ ಅವರು ‘ಸಿತಾರೆ ಜಮೀನ್​ ಪರ್​’ (Sitaare Zameen Par) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ವರ್ಷದ ಕ್ರಿಸ್‌ಮಸ್ ಸಂದರ್ಭದಲ್ಲಿ ‘ಸಿತಾರೆ ಜಮೀನ್ ಪರ್’ ಸಿನಿಮಾ ಬಿಡುಗಡೆ ಮಾಡಲು ಯೋಜಿಸುತ್ತಿದ್ದೇನೆ ಎಂದು ಆಮೀರ್ ಖಾನ್ ಬಹಿರಂಗಪಡಿಸಿದ್ದರು. ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ಆಮೀರ್ ಖಾನ್ ಜೋಡಿಯಾಗಿ ಜೆನಿಲಿಯಾ ದೇಶಮುಖ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿತಾರೆ ಜಮೀನ್ ಪರ್’ ಚಿತ್ರದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ನಟ ಮಾಹಿತಿ ಹಂಚಿಕೊಳ್ಳಲಿದ್ದಾರೆ.

Continue Reading

ಬಾಲಿವುಡ್

Heeramandi Premiere: ʻಹೀರಾಮಂಡಿʼ ಪ್ರೀಮಿಯರ್‌ನಲ್ಲಿ ಅಪರೂಪವಾಗಿ ಕಂಡ ʻಕಭಿ ಖುಷಿ ಕಭಿ ಗಮ್ʼ ಸಿನಿಮಾ ನಟಿ!

Heeramandi Premiere: ಕಭಿ ಖುಷಿ ಕಭಿ ಗಮ್ʼ ಸಿನಿಮಾ ಮೂಲಕ ಫರೀದಾ ಹೆಚ್ಚು ಜನಪ್ರೀಯತೆ ಪಡೆದವರು. ಬಳಿ ಬಣ್ಣದ ಉಡುಗೆಯಲ್ಲಿ ನಟಿ ಫರೀದಾ ಕ್ಯೂಟ್‌ ಆಗಿ ಕಾಣುತ್ತಿದ್ದರು. ಪಾಪರಾಜಿಗಳಿಗೆ ಮುದ್ದಾಗಿ ಪೋಸ್‌ ಕೊಟ್ಟರು. ಈ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ನಟಿಯನ್ನು ಕಂಡು ಫ್ಯಾನ್ಸ್‌ ಸಂತಸ ಹೊರಹಾಕಿದ್ದಾರೆ.

VISTARANEWS.COM


on

Heeramandi Premiere Farida Jalal rare public appearance
Koo

ಬೆಂಗಳೂರು:  ʼದೇವ್‌ದಾಸ್‌ʼ ‘ರಾಮ್​ ಲೀಲಾ’, ‘ಬಾಜಿರಾವ್​ ಮಸ್ತಾನಿ’ಯಂತಹ ಹಿಟ್‌ ಸಿನಿಮಾಗಳನ್ನು ನೀಡಿದವರು ಸಂಜಯ್ ಲೀಲಾ ಬನ್ಸಾಲಿ. ಇದೀಗ ಸಂಜಯ್‌ ಲೀನಾ ಬನ್ಸಾಲಿ ಅವರು ʻಹೀರಾಮಂಡಿ: ದಿ ಡೈಮಂಡ್ ಬಜಾರ್‌ʼ ಸಿರೀಸ್‌ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಏ.24ರ ಬುಧವಾರದಂದು ʻಹೀರಾಮಂಡಿ: ದಿ ಡೈಮಂಡ್ ಬಜಾರ್‌ʼ (Heeramandi: The Diamond Bazaar) ಸಿರೀಸ್‌ ಪ್ರೀಮಿಯರ್‌ ಶೋ (Heeramandi Premiere) ಇತ್ತು. ಕಾರ್ಯಕ್ರಮವೊಂದರಲ್ಲಿ ಹಿರಿಯ ನಟಿ ಫರೀದಾ ಜಲಾಲ್ (Farida Jalal) ಬಹಳ ಸಮಯದ ನಂತರ ಕ್ಯಾಮೆರಾ ಮುಂದೆ ಕಾಣಿಸಿಕೊಂಡರು. ಈ ಸಿರೀಸ್‌ನಲ್ಲಿ ಫರೀದಾ ಕೂಡ ನಟಿಸಿದ್ದಾರೆ.

ʻಕಭಿ ಖುಷಿ ಕಭಿ ಗಮ್ʼ ಸಿನಿಮಾ ಮೂಲಕ ಫರೀದಾ ಹೆಚ್ಚು ಜನಪ್ರೀಯತೆ ಪಡೆದವರು. ಬಳಿ ಬಣ್ಣದ ಉಡುಗೆಯಲ್ಲಿ ನಟಿ ಫರೀದಾ ಕ್ಯೂಟ್‌ ಆಗಿ ಕಾಣುತ್ತಿದ್ದರು. ಪಾಪರಾಜಿಗಳಿಗೆ ಮುದ್ದಾಗಿ ಪೋಸ್‌ ಕೊಟ್ಟರು. ಈ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ನಟಿಯನ್ನು ಕಂಡು ಫ್ಯಾನ್ಸ್‌ ಸಂತಸ ಹೊರಹಾಕಿದ್ದಾರೆ. ಅಭಿಮಾನಿಯೊಬ್ಬರು ʻʻಫರೀದಾ ಅವರ ನಟನೆ ಮರೆಯುವಂತಿಲ್ಲʼʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಇಂದಿಗೂ ನಟಿ ಸುಂದರವಾಗಿ ಕಾಣುತ್ತಿದ್ದಾರೆʼʼಎಂದು ಕಮೆಂಟ್‌ ಮಾಡಿದ್ದಾರೆ. ಹೀರಾಮಂಡಿ ಚಿತ್ರದಲ್ಲಿನ ಫರೀದಾ ಪಾತ್ರವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ಫರೀದಾ ಇತ್ತೀಚೆಗೆ ಅಕ್ಷಯ್ ಕುಮಾರ್ ಅವರ ʻವೆಲ್ಕಮ್ ಟು ದಿ ಜಂಗಲ್‌ʼಗೆ ಸಿನಿಮಾಗೆ ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: Heeramandi Trailer: ʻಹೀರಾಮಂಡಿʼ ಟ್ರೈಲರ್‌ ಕಂಡು ರಶ್ಮಿಕಾ, ಆಲಿಯಾ, ವಿಕ್ಕಿ ಕೌಶಲ್‌ ಫಿದಾ!

ಸಂಜಯ್ ಲೀಲಾ ಬನ್ಸಾಲಿಯವರ ( Sanjay Leela Bhansali) ಹದಿನಾಲ್ಕು ವರ್ಷಗಳ ಕನಸಿನ ಕೂಸಾಗಿರುವ ನೆಟ್‌ಫ್ಲಿಕ್ಸ್ ಸೀರೀಸ್ ʻಹೀರಾಮಂಡಿ: ದಿ ಡೈಮಂಡ್ ಬಜಾರ್ʼ ಚಿತ್ರದ (Hiramandi: The Diamond Bazaar) ಬಹು ನಿರೀಕ್ಷಿತ ಟ್ರೈಲರ್‌ ಏಪ್ರಿಲ್‌ 10ರಂದು ಬಿಡುಗಡೆಯಾಗಿತ್ತು. ಅನೇಕ ನಟಿಯರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿದ್ದಾರೆ. ನೆಟ್​ಫ್ಲಿಕ್ಸ್​ ಮೂಲಕ ಮೇ 1ರಂದು ಈ ವೆಬ್​ ಸಿರೀಸ್​ ವೀಕ್ಷಣೆಗೆ ಲಭ್ಯವಾಗಲಿದೆ.

ಹೀರಾಮಂಡಿ: ದಿ ಡೈಮಂಡ್ ಬಜಾರ್’ನ ಮೊದಲ ಹಾಡು ‘ಸಕಲ್ ಬನ್’ (Sakal Ban) ಮಿಸ್ ವರ್ಲ್ಡ್ 2024 ರ ಫಿನಾಲೆಯಲ್ಲಿ ಲಾಂಚ್‌ ಆಗಿತ್ತು. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್ ಹೈದರಿ, ರಿಚಾ ಚಡ್ಡಾ, ಸಂಜೀದಾ ಶೇಖ್ ಮತ್ತು ಶರ್ಮಿನ್ ಸೆಗಲ್ ಸೇರಿದಂತೆ ಅನೇಕರು ಈ ಹಾಡಿಗೆ ರ್‍ಯಾಂಪ್‌ ವಾಕ್‌ ಮಾಡಿದ್ದರು.

ಸಂಜಯ್ ಲೀಲಾ ಬನ್ಸಾಲಿ ಚಿತ್ರಗಳೆಂದರೆ ಅಲ್ಲೊಂದು ಅದ್ಭುತ ಮಾಯಾಲೋಕವನ್ನೇ ನಾವು ನಿರೀಕ್ಷಿಸಬಹುದು. “ಹೀರಾಮಂಡಿ” ಸ್ವಾತಂತ್ರ್ಯಪೂರ್ವ ಭಾರತದಲ್ಲಿನ ವೇಶ್ಯೆಯರ ಜೀವನದಲ್ಲಿ ಪ್ರೀತಿ ಮತ್ತು ದ್ರೋಹದ ವಿಷಯಗಳನ್ನು ಅನ್ವೇಷಿಸುತ್ತದೆ. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್​ ಹೈದರಿ, ರಿಚಾ ಚಡ್ಡಾ, ಶರ್ಮಿನ್​ ಸೇಗಲ್​, ಸಂಜೀದಾ ಶೇಖ್​ ಮುಂತಾದವರು ‘ಹೀರಾಮಂಡಿ’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

Ranbir Kapoor: ಈ ಮುಂಚೆ ನಟರ ವೇಷಭೂಷಣದಲ್ಲಿರುವ ಚಿತ್ರಗಳು ಸೋರಿಕೆಯಾದ ಬಳಿಕ ಚಿತ್ರೀಕರಣದ ಮೊದಲ ಎರಡು ದಿನಗಳು ಕಾಲ ನಿರ್ದೇಶಕರು ಒತ್ತಡವನ್ನುಂಟುಮಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಈ ಫೋಟೊಗಳಿಂದ ನಿರ್ದೇಶಕ ನಿತೇಶ್ ತಿವಾರಿ ತುಂಬ ಬೇಸರಿಸಿಗೊಂಡಿದ್ದರು ಎಂದು ವರದಿಯಾಗಿತ್ತು.ದೃಶ್ಯಕ್ಕೆ ಅಗತ್ಯವಿರುವ ನಟರು ಮತ್ತು ತಂತ್ರಜ್ಞರನ್ನು ಮಾತ್ರ ಸೆಟ್‌ನಲ್ಲಿ ಇರುವಂತೆ ಆದೇಶ ನೀಡಿದ್ದು, ಉಳಿದವರಿಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿತ್ತು.

VISTARANEWS.COM


on

Ranbir Kapoor trainer shares transformation Of Ranbir
Koo

ಬೆಂಗಳೂರು: ರಣಬೀರ್ ಕಪೂರ್ (Ranbir Kapoor) ಮುಂಬರುವ ಸಿನಿಮಾ ‘ರಾಮಾಯಣ’ (Ramayana Movie) ಚಿತ್ರದ ರಾಮನ ಪಾತ್ರಕ್ಕಾಗಿ ಕಠಿಣ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಮುಂಚೆ ʻಅನಿಮಲ್‌ʼ ಸಿನಿಮಾಗಾಗಿ ತೂಕ ಹೆಚ್ಚಿಸಿಕೊಂಡಿದ್ದರು. ಇದೀಗ ರಾಮಾಯಣ ಸಿನಿಮಾಗಾಗಿ ಸಖತ್‌ ಫಿಟ್‌ ಫೈನ್‌ ಆಗಿದ್ದಾರೆ. ಇದೀಗ ಬಾಡಿ ಟ್ರಾನ್ಸ್‌ಫರ್ಮೇಶನ್‌ ಫೋಟೊವನ್ನು ಹಂಚಿಕೊಂಡಿದ್ದಾರೆ.

ಏಪ್ರಿಲ್ 24ರಂದು, ರಣಬೀರ್ ಅವರ ತರಬೇತುದಾರ ಶಿವೋಹಂ (trainer Shivoham) ಅವರು ರಣಬೀರ್‌ ಅವರ ಟ್ರಾನ್ಸ್‌ಫರ್ಮೇಶನ್‌ ಫೋಟೊವನ್ನು ಹಂಚಿಕೊಂಡಿದ್ದಾರೆ. ಮೊದಲಿಗೆ ʻಅನಿಮಲ್‌ʼ ಸಿನಿಮಾ ಲುಕ್‌, ಬಳಿಕ ನಾರ್ಮಲ್‌ ಫೋಟೊ, ಹಾಗೇ ಮೂರನೇ ಫೋಟೊದಲ್ಲಿ ರಾಮನ ಪಾತ್ರಕ್ಕೆ ಫಿಟ್‌ ಆಗಿರುವ ರಣಬೀರ್‌ ಫೋಟೊವನ್ನು ಹಂಚಿಕೊಂಡಿದ್ದಾರೆ.

ಶಿವೋಹಂ ಫೋಟೊ ಜತೆಗೆ ʻ “ಇದೊಂದು ಸುಂದರ ಪ್ರಯಾಣ ಮತ್ತು ಮುಂದಿನ ಬ್ಲಾಕ್ಬಸ್ಟರ್ ಯಶಸ್ಸಿಗೆ! ರಣಬೀರ್‌ ಅವರ ʻರಾಮಾಯಣʼ ಸಿನಿಮಾಗೆ ಶುಭ ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಈ ಸಿನಿಮಾದಲ್ಲಿ ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ ಅವರು ರಾವಣನಾಗಿ ಕಾಣಿಸಿಕೊಳ್ಳುತ್ತಾರೆ ಎಂಬ ಗಾಸಿಪ್ ಹಬ್ಬಿದೆ.

ಈ ಮುಂಚೆ ನಟರ ವೇಷಭೂಷಣದಲ್ಲಿರುವ ಚಿತ್ರಗಳು ಸೋರಿಕೆಯಾದ ಬಳಿಕ ಚಿತ್ರೀಕರಣದ ಮೊದಲ ಎರಡು ದಿನಗಳು ಕಾಲ ನಿರ್ದೇಶಕರು ಒತ್ತಡವನ್ನುಂಟುಮಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಈ ಫೋಟೊಗಳಿಂದ ನಿರ್ದೇಶಕ ನಿತೇಶ್ ತಿವಾರಿ ತುಂಬ ಬೇಸರಿಸಿಗೊಂಡಿದ್ದರು ಎಂದು ವರದಿಯಾಗಿತ್ತು. ಈಗಾಗಲೇ ಸೆಟ್‌ನಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಂಡಿದ್ದು ಫೋನ್‌ಕೂಡ ನಿಷೇಧಿಸಲಾಗಿದೆ ಎನ್ನಲಾಗಿತ್ತು.

ದೃಶ್ಯಕ್ಕೆ ಅಗತ್ಯವಿರುವ ನಟರು ಮತ್ತು ತಂತ್ರಜ್ಞರನ್ನು ಮಾತ್ರ ಸೆಟ್‌ನಲ್ಲಿ ಇರುವಂತೆ ಆದೇಶ ನೀಡಿದ್ದು, ಉಳಿದವರಿಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: Ranbir Kapoor: `ರಾಮಾಯಣ’ ಸಿನಿಮಾಗಾಗಿ ಕಠಿಣ ವರ್ಕೌಟ್ ಮಾಡುತ್ತಿರುವ ರಣಬೀರ್ ಕಪೂರ್!

ಇನ್ನು ದಶರಥನಾಗಿ ಅರುಣ್‌ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ಹಾಗೂ ಮಡದಿ ಮಂಡೋದರಿಯಾಗಿ ಸಾಕ್ಷಿ ತನ್ವರ್ ನಟಿಸುತ್ತಾರೆ ಎಂದು ವರದಿಯಾಗಿದೆ.

ಸದ್ಯ ಯಶ್ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಮಾಯಣ’ ಚಿತ್ರದಲ್ಲಿ ಸದ್ಯ ಬೇರೆ ಕಲಾವಿದರ ದೃಶ್ಯಗಳನ್ನು ಸೆರೆಹಿಡಿಯಲಿದ್ದು ನಿಧಾನವಾಗಿ ಯಶ್ ತಂಡ ಸೇರಿಕೊಳ್ಳುತ್ತಾರೆ ಎನ್ನಲಾಗುತ್ತಿದೆ.

Continue Reading
Advertisement
Dina Bhavishya
ಭವಿಷ್ಯ28 mins ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Implement the work without damaging the drinking water pipelines says ZP CEO Sadashiva Prabhu
ವಿಜಯನಗರ5 hours ago

Vijayanagara News: ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾಳಾಗದಂತೆ ಕಾಮಗಾರಿ ಅನುಷ್ಠಾನಗೊಳಿಸಿ: ಜಿಪಂ ಸಿಇಒ

Congress leader Rahul Gandhi speech in Ballari
ಕರ್ನಾಟಕ5 hours ago

Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

lok sabha election
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

Neha Murder Case
ಕರ್ನಾಟಕ6 hours ago

Neha Murder Case: ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ ಏರ್ಪಡಿಸಿದ ರಾಜ್ಯ ಸರ್ಕಾರ

IPL 2024
ಪ್ರಮುಖ ಸುದ್ದಿ6 hours ago

IPL 2024 : ಬೈರ್​ಸ್ಟೋವ್​ ಸ್ಫೋಟಕ ಶತಕ; ಕೆಕೆಆರ್​ ವಿರುದ್ಧ ಪಂಜಾಬ್​​ಗೆ ವಿಶ್ವ ದಾಖಲೆಯ ವಿಜಯ

Bike Accident
ಕರ್ನಾಟಕ6 hours ago

Bike Accident: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಬೈಕ್‌ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

lok sabha election
Lok Sabha Election 20246 hours ago

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Hassan News
ಕರ್ನಾಟಕ7 hours ago

Hassan News: ಎರಡು ಗುಂಪುಗಳ ನಡುವೆ ಮಾರಾಮಾರಿ; ಕೈ ಕಾರ್ಯಕರ್ತನಿಗೆ ಗಂಭೀರ ಗಾಯ

Pandya brothers
ಕ್ರೀಡೆ7 hours ago

Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ28 mins ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ17 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202418 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202418 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌