Viral News: 1969ರಲ್ಲಿ ಮಾಡಿದ್ದ ಪೋಸ್ಟ್‌ 2023ರಲ್ಲಿ ವಿಳಾಸಕ್ಕೆ ತಲುಪಿತು! ಇದೆಂಥ ವಿಚಿತ್ರ ಸ್ವಾಮಿ - Vistara News

ವೈರಲ್ ನ್ಯೂಸ್

Viral News: 1969ರಲ್ಲಿ ಮಾಡಿದ್ದ ಪೋಸ್ಟ್‌ 2023ರಲ್ಲಿ ವಿಳಾಸಕ್ಕೆ ತಲುಪಿತು! ಇದೆಂಥ ವಿಚಿತ್ರ ಸ್ವಾಮಿ

1969ರಲ್ಲಿ ಮಾಡಲಾಗಿದ್ದ ಅಂಚೆಯೊಂದು ಇದೀಗ ವಿಳಾಸಕ್ಕೆ ತಲುಪಿರುವ ವಿಶೇಷ ಘಟನೆ ಅಮೆರಿಕದಲ್ಲಿ ನಡೆದಿದೆ. ಅದರ ವಿಚಾರ ಎಲ್ಲೆಡೆ ವೈರಲ್‌ (Viral News) ಆಗಿದೆ.

VISTARANEWS.COM


on

1969 post delivered in 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಅಂಚೆ ಮಾಡುವುದೆಲ್ಲ ಈಗಿನ ಕಾಲಕ್ಕೆ ʼಟೂ ಓಲ್ಡ್‌ʼ ಎನ್ನುವಂತಹ ಸಂಪ್ರದಾಯ. ಆದರೆ ಹಿಂದಿನ ಕಾಲದಲ್ಲಿ ಆ ಅಂಚೆಯೇ ಜನರ ಸಂಪರ್ಕದ ಸಂಪನ್ಮೂಲವಾಗಿತ್ತು. ಏನೇ ಆದರೂ ಅಂಚೆ ಮೂಲಕವೇ ಅದನ್ನು ದೂರದೂರವರಿಗೆ ತಿಳಿಸಬೇಕಿತ್ತು. ಕೆಲವೊಮ್ಮೆ ಅಂಚೆ ಸರಿಯಾದ ಸಮಯಕ್ಕೆ ತಲುಪಿತ್ತಾದರೂ ಎಷ್ಟೋ ಬಾರಿ ಲೇಟಾಗಿ ತಲುಪಿ ಉಪಯೋಗವೇ ಇಲ್ಲದಂತಾಗುತ್ತಿತ್ತು. ಅದೇ ರೀತಿ ಅಮೆರಿಕದಲ್ಲಿ 1969ರಲ್ಲಿ ಮಾಡಲಾಗಿದ್ದ ಪೋಸ್ಟ್‌ ಒಂದು ಇದೀಗ ಅಂದರೆ 2023ರಲ್ಲಿ ವಿಳಾಸಕ್ಕೆ (Viral News) ತಲುಪಿದೆ!

ಹೌದು. ಬರೋಬ್ಬರಿ 54 ವರ್ಷಗಳ ನಂತರ ಪೋಸ್ಟ್‌ ಒಂದು ಅದರ ವಿಳಾಸಕ್ಕೆ ತಲುಪಿದೆ. ಆದರೆ ಈಗ ಆ ವಿಳಾಸದಲ್ಲಿ ಬೇರೆಯ ಕುಟುಂಬವೇ ಇದೆ. ಗ್ಯಾಗ್ನೋನ್ಸ್‌ ಹೆಸರಿಗೆ ಪೋಸ್ಟ್‌ ಬಂದಿದ್ದು ಅದು ಯಾರು ಎನ್ನುವುದು ಕೂಡ ಅಂಚೆ ಪಡೆದವರಿಗೆ ತಿಳಿದಿಲ್ಲವಂತೆ. ಈ ವಿಚಾರವಾಗಿ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Viral Video : ಅಪ್ಪ ನಾನೀಗ ಡಾಕ್ಟರ್‌ ಎಂದ ಮಗಳು! ಭಾವುಕರಾದ ತಂದೆ!

“ಇದೊಂದು ವಿಚಿತ್ರ. ನಿಮಗ್ಯಾರಿಗಾದರೂ ಈ ಗ್ಯಾಗ್ನೋನ್ಸ್‌ ಯಾರು ಎಂದು ತಿಳಿದಿದ್ದರೆ ತಿಳಿಸಿ. ವಿಚಿತ್ರವೆಂದರೆ ಇದರಲ್ಲಿ ವಿಳಾಸದಲ್ಲಿ ಗ್ಯಾಗ್ನೋನ್ಸ್‌ ಅಥವಾ ಆ ವಿಳಾಸದಲ್ಲಿ ಯಾರಿದ್ದಾರೋ ಅವರಿಗೆ ಎಂದು ಬರೆಯಲಾಗಿದೆ” ಎಂದು ಪೋಸ್ಟ್‌ ಪಡೆದ ಜೆಸ್ಸಿಕಾ ಮಾಹಿತಿ ನೀಡಿದ್ದಾರೆ. ಹಾಗೆಯೇ ಅವರ ಅಕ್ಕ ಪಕ್ಕದ ಮನೆಯವರ ಮಾಹಿತಿ ಪ್ರಕಾರ ಗ್ಯಾಗ್ನೋನ್ಸ್‌ ಅವರು ಜೆಸ್ಸಿಕಾ ಅವರ ಮನೆಯೆ ಮಾಜಿ ಮಾಲೀಕರಾಗಿದ್ದರಂತೆ. ಅವರು ಆ ಮನೆಯಲ್ಲಿ 90ರ ದಶಕದ ತನಕ ವಾಸವಿದ್ದರಂತೆ.

ಈ ಪೋಸ್ಟ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಜನರು ಈ ಅಂಚೆಯ ಬಗ್ಗೆ ಕುತೂಹಲವನ್ನು ವ್ಯಕ್ತಪಡಿಸಲಾರಂಭಿಸಿದ್ದಾರೆ. ಅದರಲ್ಲೂ ಪೋಸ್ಟ್‌ ಮೇಲೆ ಇತ್ತೀಚಿನ ಅಂಚೆ ಚೀಟಿ ಇರುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. “ಹೀಗೆ ನಮಗೂ ನಮ್ಮ ಪೂರ್ವಜರ ಯಾವುದಾದರೂ ಅಂಚೆ ಸಿಗುವುದಾಗಿದ್ದರೆ ಅದೆಷ್ಟು ಕುತೂಹಲಕಾರಿಯಾಗಿರುತ್ತಿತ್ತು” ಎಂದು ಜನರು ಕಾಮೆಂಟ್‌ಗಳನ್ನು ಮಾಡಲಾರಂಭಿಸಿದ್ದಾರೆ. ಈ ಪೋಸ್ಟ್‌ ಅನ್ನು ಜೆಸ್ಸಿಕಾ ಅವರು ಫೇಸ್‌ಬುಕ್‌ನಲ್ಲಿ ಜುಲೈ 18ರಂದು ಹಂಚಿಕೊಂಡಿದ್ದಾರೆ. ಅಂದಿನಿಂದ ಇಂದಿನವರೆಗೆ ಪೋಸ್ಟ್‌ ಹಲವಾರು ಜನರಿಂದ ಲೈಕ್‌ಗಳನ್ನು ಪಡೆದುಕೊಂಡಿದೆ. ಹತ್ತಾರು ಮಂದಿ ವಿಧ ವಿಧದ ಕಾಮೆಂಟ್‌ಗಳನ್ನು ಪೋಸ್ಟ್‌ಗೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

17 ವರ್ಷದ ವಿದ್ಯಾರ್ಥಿಯ ಜತೆ 30 ಸಲ ಸೆಕ್ಸ್‌ ಮಾಡಿದ ಶಿಕ್ಷಕಿ; ಮುಂದೇನಾಯ್ತು ಅನ್ನೋದೇ ರೋಚಕ!

ಅರ್ಕನಾಸ್‌ನಲ್ಲಿರುವ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಹೀದರ್‌ ಕೇರ್‌ ಎಂಬ ಶಿಕ್ಷಕಿಯು ಇಂತಹ ಹೀನ ಕೃತ್ಯ ಎಸೆಗಿದ್ದಾರೆ. ಮದುವೆಯಾಗಿ, ಇಬ್ಬರು ಮಕ್ಕಳಿರುವ ಹೀದರ್‌ ಕೇರ್‌, ವಾಷಿಂಗ್ಟನ್‌ ಡಿಸಿಗೆ ಪ್ರವಾಸಕ್ಕೆ ಹೋದಾಗ 17 ವರ್ಷದ ವಿದ್ಯಾರ್ಥಿಯ ಜತೆ ಸೆಕ್ಸ್‌ ಮಾಡಿದ್ದಾರೆ. ಈ ವಿಷಯ ಬಹಿರಂಗವಾದ ಬಳಿಕ ನ್ಯಾಯಾಲಯವು ಆಕೆಗೆ 13 ವರ್ಷ ಜೈಲು ಶಿಕ್ಷೆ ವಿಧಿಸಿದೆ.

VISTARANEWS.COM


on

Teacher
Koo

ವಾಷಿಂಗ್ಟನ್: ತಂದೆ-ತಾಯಿಯ ನಂತರದ ಸ್ಥಾನವನ್ನು ಗುರುವಿಗೆ ಕೊಡುತ್ತೇವೆ. ಗುರುವನ್ನೇ ತಂದೆಯ ಸ್ಥಾನದಲ್ಲಿಟ್ಟು ನೋಡುವವರು ಇದ್ದಾರೆ. ಇನ್ನು ಗುರು ಎನಿಸಿಕೊಂಡವರೂ ಅಷ್ಟೇ, ಶಿಷ್ಯಂದಿರು ಮಾಡಿದ ತಪ್ಪನ್ನು ಮನ್ನಿಸಿ, ದಾರಿ ತಪ್ಪಿದಾಗ ಮಾರ್ಗದರ್ಶನ ನೀಡಿ, ಅವರನ್ನು ಸರಿದಾರಿಗೆ ತರಬೇಕು. ಅಂತಹ ಗುರುಗಳು ಇರುವ ಕಾರಣಕ್ಕಾಗಿಯೇ ಆಧುನಿಕ ಕಾಲದಲ್ಲೂ ಗುರುಗಳ ಮೇಲೆ ಗೌರವ ಇದೆ. ಆದರೆ, ಅಮೆರಿಕದಲ್ಲಿ ಶಿಕ್ಷಕಿಯೊಬ್ಬಳು ಗುರುವಿನ ಪದಕ್ಕೇ ಕಳಂಕ ತರುವ ಕೆಲಸ ಮಾಡಿದ್ದಾಳೆ. 17 ವರ್ಷದ ವಿದ್ಯಾರ್ಥಿಯ ಜತೆ 30 ಬಾರಿ ಸೆಕ್ಸ್‌ ಮಾಡುವ ಮೂಲಕ ಈಗ ಜೈಲು ಶಿಕ್ಷೆಗೆ ಗುರಿಯಾಗಿದ್ದಾಳೆ.

ಹೌದು, ಅರ್ಕನಾಸ್‌ನಲ್ಲಿರುವ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಹೀದರ್‌ ಕೇರ್‌ ಎಂಬ ಶಿಕ್ಷಕಿಯು ಇಂತಹ ಹೀನ ಕೃತ್ಯ ಎಸೆಗಿದ್ದಾರೆ. ಮದುವೆಯಾಗಿ, ಇಬ್ಬರು ಮಕ್ಕಳಿರುವ ಹೀದರ್‌ ಕೇರ್‌, ವಾಷಿಂಗ್ಟನ್‌ ಡಿಸಿಗೆ ಪ್ರವಾಸಕ್ಕೆ ಹೋದಾಗ 17 ವರ್ಷದ ವಿದ್ಯಾರ್ಥಿಯ ಜತೆ ಸೆಕ್ಸ್‌ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಸುದ್ದಿವಾಹಿನಿಯೊಂದರಲ್ಲಿ ಲೈವ್‌ ಬಂದಿದ್ದ ಶಿಕ್ಷಕಿಯು, ವಿದ್ಯಾರ್ಥಿಗಳಿಗೆ ಗುಡ್‌ ಬೈ ಹೇಳಿ ಭಾರಿ ಸುದ್ದಿಯಾಗಿದ್ದಾರೆ. ಇದಾದ ಕೆಲ ವರ್ಷಗಳಲ್ಲಿ ಶಿಕ್ಷಕಿಯ ಕರಾಳ ಮುಖ ಬಯಲಾಗಿದೆ.

2021-22ರಲ್ಲಿ ತರಗತಿಯ ಮಕ್ಕಳೊಂದಿಗೆ ಹೀದರ್‌ ಹೇರ್‌ ಅವರು ವಾಷಿಂಗ್ಟನ್‌ ಡಿಸಿಗೆ ಪ್ರವಾಸಕ್ಕೆ ಹೋಗಿದ್ದರು. ಅಲ್ಲಿ, ಜೆ.ಆರ್.‌ ಎಂಬ 17 ವರ್ಷದ ವಿದ್ಯಾರ್ಥಿಗೆ ಆಕೆ ಮೊದಲ ಬಾರಿಗೆ ಲೈಂಗಿಕ ಕಿರುಕುಳ ಮಾಡಿದ್ದಾರೆ. ಆತನ ಜತೆ ಸೆಕ್ಸ್‌ ಮಾಡಿದ ಬಳಿಕ ಪದೇಪದೆ ಸೆಕ್ಸ್‌ ಮಾಡುವಂತೆ ಒತ್ತಾಯಿಸಿದ್ದಾರೆ. ಶಿಕ್ಷಕಿಯು ವಿದ್ಯಾರ್ಥಿಯ ಜತೆ ಪಾರ್ಕ್‌, ಕಾರು, ಮನೆ, ಸ್ಕೂಲ್‌ ಪಾರ್ಕಿಂಗ್‌, ತರಗತಿಯ ಕೊಠಡಿಯಲ್ಲಿಯೇ ಸೆಕ್ಸ್‌ ಮಾಡಿದ್ದಾರೆ ಎಂಬ ಭೀಕರ ಮಾಹಿತಿಯು ಬಹಿರಂಗವಾಗಿದೆ.

ಹಾಗಾಗಿ, ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾರಣದಿಂದ ನ್ಯಾಯಾಲಯವು ಹೈದರ್‌ ಹೇರ್‌ ಅವರಿಗೆ 13 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪ್ರವಾಸಕ್ಕೆ ಹೋಗುವ ಮೊದಲೇ ಬಾಲಕನ ಜತೆ ಸೆಕ್ಸ್‌ ಮಾಡುವ ಕುರಿತು ಟೀಚರ್‌ ಹೇಳಿದ್ದರು. ಇದಕ್ಕೆ ಬಾಲಕನು ಒಪ್ಪಿರಲಿಲ್ಲ. ಆದರೆ, ಬಲವಂತವಾಗಿ ಹೋಟೆಲ್‌ ರೂಮ್‌ಗೆ ಕರೆಸಿಕೊಂಡು, ಸೆಕ್ಸ್‌ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಬಳಿಕ ಬಾಲಕನು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಆತನ ಜತೆ ಆಪ್ತ ಸಮಾಲೋಚನೆ ನಡೆಯುತ್ತಿದೆ ಎಂಬುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

Continue Reading

ಕ್ರೀಡೆ

Hardik Pandya & Natasa Stankovic: ಹಾರ್ದಿಕ್​ ಪಾಂಡ್ಯಗೆ ಕೈ ಕೊಟ್ಟರೇ ಪತ್ನಿ ನತಾಶಾ!

Hardik Pandya & Natasa Stankovic: ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು.

VISTARANEWS.COM


on

Hardik Pandya & Natasa Stankovic
Koo

ಮುಂಬಯಿ: ಟಿ20 ವಿಶ್ವಕಪ್​ ಟೂರ್ನಿಗೆ ಸಜ್ಜಾಗುತ್ತಿರುವಾಗಲೇ ಟೀಮ್​ ಇಂಡಿಯಾದ ಉಪನಾಯಕ, ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ(Hardik Pandya) ಅವರ ಖಾಸಗಿ ಬದುಕಿನಲ್ಲಿ ಬಿರುಕೊಂದು ಮೂಡಿದಂತಿದೆ. ಹೌದು, ಅವರ ಪತ್ನಿ ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರು ಪಾಂಡ್ಯ(Hardik Pandya & Natasa Stankovic) ಅವರಿಂದ ದೂರವಾಗಲು ಬಯಸಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.


ಅಂದು ಗೌನ್‌ ರೀತಿಯ ಬಿಳಿ ಉಡುಗೆಯನ್ನುಟ್ಟ ನತಾಶಾ ಮತ್ತು ಕಪ್ಪು ಸೂಟ್‌ನಲ್ಲಿ ಕಾಣಿಸಿಕೊಂಡ ಹಾರ್ದಿಕ್‌ ಪಾಂಡ್ಯಾ ವಿವಾಹ ವೇದಿಕೆಯ ಕಡೆ ಡ್ಯಾನ್ಸ್‌ ಮಾಡಿಕೊಂಡು ಬರುವ ವಿಡಿಯೋವೊಂದು ಭರ್ಜರಿ ಸದ್ದು ಮಾಡಿತ್ತು. ಇದೀಗ ಜೋಡಿ ಬೇರೆಯಾಗುತ್ತಿದ್ದಾರೆ ಎನ್ನಲಾಗಿದೆ. ಈ ಅನುಮಾನ ಹುಟ್ಟಿಕೊಳ್ಳಲು ಕಾರಣವೂ ಇದೆ.


ಇದನ್ನೂ ಓದಿ Hardik Pandya : ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್​​ನಲ್ಲಿ ಮತ್ತೆ ವಿಫಲ; ಬೆಂಡೆತ್ತಿದ ಅಭಿಮಾನಿಗಳು

ಹಾರ್ದಿಕ್​ ಪಾಂಡ್ಯ ಕಳೆದ 2 ಆವೃತ್ತಿಯಲ್ಲಿ ಗುಜರಾತ್​ ಟೈಟಾನ್ಸ್​ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಪ್ರತಿ ಪಂದ್ಯದಲ್ಲಿಯೂ ನತಾಶಾ ಸ್ಟೇಡಿಯಂಗೆ ಬಂದು ಗಂಡನಿಗೆ ಬೆಂಬಲ ಸೂಚಿಸಿದ್ದರು. ಆದರೆ ಈ ಬಾರಿ ಮುಂಬೈ ತಂಡವನ್ನು ಮುನ್ನಡೆಸಿ ವೇಳೆ ಒಮ್ಮೆಯೂ ಕೂಡ ನತಾಶಾ ಪಂದ್ಯ ನೋಡಲು ಸ್ಟೇಡಿಯಂಗೆ ಬಂದಿರಲಿಲ್ಲ. ಇದೀಗ ನತಾಶಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಮ್ಮ ಹೆಸರನ್ನು ಕೂಡ ಬದಲಿಸಿದ್ದಾರೆ ಹೀಗಾಗಿ ಈ ಜೋಡಿ ಬೇರ್ಪಡಲಿದ್ದಾರೆ ಎನ್ನಲಾಗಿದೆ.


ಹೌದು, ನತಾಶಾ ಸ್ಟಾಂಕೋವಿಕ್ ಪಾಂಡ್ಯ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಹೆಸರನ್ನು ಹೊಂದಿದ್ದರು. ಆದರೆ, ಇದೀಗ ಪಾಂಡ್ಯ ಅವರ ಹೆಸರನ್ನು ತೆಗೆದುಹಾಕಿದ್ದಾರೆ. ಮಾರ್ಚ್ 4 ರಂದು ನತಾಶಾ ಅವರ ಹುಟ್ಟುಹಬ್ಬವಿತ್ತು ಮತ್ತು ಆ ದಿನ ಹಾರ್ದಿಕ್ ಕೂಡ ಯಾವುದೇ ಪೋಸ್ಟ್ ಹಾಕಿಲ್ಲ. ನತಾಶಾ ಅವರು ಅಗಸ್ತ್ಯನೊಂದಿಗೆ ಇರುವ ಪೋಸ್ಟ್ ಹೊರತುಪಡಿಸಿ ತನ್ನ ಮತ್ತು ಹಾರ್ದಿಕ್ ಜತೆಗಿರುವ ಇತ್ತೀಚಿನ ಎಲ್ಲ ಪೋಸ್ಟ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಹಾರ್ದಿಕ್ ಮತ್ತು ನತಾಶಾ ನಡುವೆ ಬಿರುಕು ಮೂಡಿರುವುದು ನಿಜ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.


ರೋಹಿತ್ ಶರ್ಮಾರನ್ನು ನಾಯಕ ಸ್ಥಾನದಿಂದ ಕೆಳಗಿಳಿಸಿ ತಾವೇ ತಂಡ ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ಅಭಿಮಾನಿಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಜತೆಗೆ ಪಾಂಡ್ಯ ಕೆಟ್ಟ ನಾಯಕತ್ವದಿಂದ ಮುಂಬೈ ಹಿಂದೆದು ಕಾಣದ ಘೋರ ವೈಫಲ್ಯ ಕಂಡಿತ್ತು ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಈ ಬಾರಿ ಆಡಿದ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಿಯಾಯಿತು.

Continue Reading

ವೈರಲ್ ನ್ಯೂಸ್

Viral Video: ಮದುವೆಗೂ ಮೊದಲು ವಧುವನ್ನು ಕಿಡ್ನ್ಯಾಪ್‌ ಮಾಡಲೇಬೇಕು! ಇದು ಈ ಜನಾಂಗದ ಕಡ್ಡಾಯ ನಿಯಮ!

ಮದುವೆಗೂ ಮುನ್ನ ಹಿಂಬಾ ಬುಡಕಟ್ಟಿನ ಸಂಪ್ರದಾಯದಲ್ಲಿ ವಧುವನ್ನು ಅಪಹರಿಸಿ ನೂರು ದಿನಗಳ ಕಾಲ ಕೆಂಪು ಮಣ್ಣಿನ ಲೇಪನ ಮಾಡಲಾಗುತ್ತದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ವಿವಾಹ ವಿಧಿವಿಧಾನಗಳು (Wedding Rituals) ವಿಶ್ವದ ಬೇರೆಬೇರೆ ಭಾಗಗಳಲ್ಲಿ ಬೇರೆಬೇರೆಯಾಗಿರುತ್ತದೆ. ಅದರಲ್ಲೂ ಕೆಲವೊಂದು ಚಿತ್ರವಿಚಿತ್ರ ಆಚರಣೆಗಳೂ ಇವೆ. ಅದರಲ್ಲಿ ನಮಿಬಿಯಾದ (Namibia) ಅರೆ ಅಲೆಮಾರಿ ಬುಡಕಟ್ಟು (tribe) ಜನಾಂಗವಾದ ಹಿಂಬಾದ (himba) ಈ ವಿವಾಹ ಆಚರಣೆಯು ಸೇರಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (social media) ವಿಡಿಯೋಗಳು ವೈರಲ್ (Viral Video) ಆಗಿ ಚರ್ಚೆಗೆ ಕಾರಣವಾಗಿದೆ.

ಹಿಂಬಾವನ್ನು ನಮೀಬಿಯಾದ ಕೊನೆಯ ಅರೆ ಅಲೆಮಾರಿ ಬುಡಕಟ್ಟು ಜನಾಂಗ ಎಂದು ಪರಿಗಣಿಸಲಾಗಿದೆ. ಸುಮಾರು 50,000 ಜನಸಂಖ್ಯೆಯನ್ನು ಹೊಂದಿರುವ ಇವರು ಇಲ್ಲಿನ ಸ್ಥಳೀಯ ಜನರು. ಅವರಿಗೆ ಸ್ವಂತ ಮನೆಗಳಿದ್ದರೂ ಮಳೆ ಅಥವಾ ನೀರಿನ ಕೊರತೆಯಿಂದಾಗಿ ಅಲೆಮಾರಿಗಳಂತೆ ಜೀವನ ನಡೆಸುತ್ತಾರೆ. ಹೀಗಾಗಿ ಇವರನ್ನು ಅರೆ ಅಲೆಮಾರಿ ಎಂದು ಕರೆಯಲಾಗುತ್ತದೆ. ಈ ಬುಡಕಟ್ಟು ಜನ ತಮ್ಮ ವಿಚಿತ್ರ ವಿವಾಹ ಪದ್ಧತಿಗಳಿಂದಾಗಿ ಆಗಾಗ್ಗೆ ಎಲ್ಲರ ಗಮನ ಸೆಳೆಯುತ್ತಾರೆ.

ವಧುವಿನ ಅಪಹರಣ

ಹಿಂಬಾ ಬುಡಕಟ್ಟಿನಲ್ಲಿ ಮದುವೆಗೆ ಮೊದಲು ವಧುವನ್ನು ಅಪಹರಿಸಲಾಗುತ್ತದೆ. ಆಕೆಯನ್ನು 100 ದಿನಗಳ ಕಾಲ ಹೆಚ್ಚಿನ ಭದ್ರತೆಯ ಕೋಣೆಯಲ್ಲಿ ಇರಿಸಲಾಗುತ್ತದೆ. ಆ ಸಮಯದಲ್ಲಿ ಕೆಂಪು ಮಣ್ಣನ್ನು ಅವಳ ಸಂಪೂರ್ಣ ದೇಹಕ್ಕೆ ಲೇಪಿಸಲಾಗುತ್ತದೆ. ಇದೀಗ ಅಂತಹ ವಿಡಿಯೋ ವೈರಲ್ ಆಗಿದೆ. ಹಿಂಬಾ ಬುಡಕಟ್ಟಿನಲ್ಲಿ ಮದುವೆಯ ಸಂಪ್ರದಾಯದಲ್ಲಿ ವಧುವಿನ ಅಪಹರಣ ಮತ್ತು ಅವಳಿಗೆ ಕೆಂಪು ಮಣ್ಣನ್ನು ಹೊದಿಸುವುದನ್ನು ಒಳಗೊಂಡಿರುತ್ತದೆ.

ಹೀಗೆ ಅವಳನ್ನು ಅಪಹರಿಸುವಾಗ ವಧು ಹೊಸ ಬಟ್ಟೆ ಮತ್ತು ದುಬಾರಿ ಆಭರಣಗಳೊಂದಿಗೆ ಅಲಂಕರಿಸಲ್ಪಡುತ್ತಾಳೆ. ಈ ಸಮಯದಲ್ಲಿ ಅವಳು ಧರಿಸುವ ಕೆಲವು ವಿಶೇಷ ಉಡುಪುಗಳು ಒಕೋರಿ ಎಂದು ಕರೆಯಲ್ಪಡುವ ಚರ್ಮದ ಶಿರಸ್ತ್ರಾಣವಾಗಿದೆ. ಇದು ಸಾಮಾನ್ಯವಾಗಿ ವಧುವಿನ ತಾಯಿಯಿಂದ ಸಿಗುವ ಉಡುಗೊರೆಯಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಹಿಂಬಾ ಬುಡಕಟ್ಟಿನ ಹುಡುಗಿಯೊಬ್ಬಳು ತನ್ನ ದೇಹದಾದ್ಯಂತ ಕೆಂಪು ಮಣ್ಣನ್ನು ಲೇಪಿಸಿಕೊಂಡು ಕುಳಿತಿದ್ದಾಳೆ. ಕಾಲ್ಬೆರಳಿನಿಂದ ಕೂದಲಿನವರೆಗೆ, ಹುಡುಗಿ ಕೆಂಪು ಮಣ್ಣಿನಲ್ಲಿಮುಚ್ಚಲ್ಪಟ್ಟಿರುತ್ತಾಳೆ.
ಘಾನಾದ ಫ್ರಾಫಾ ಬುಡಕಟ್ಟು ಕೂಡ ಈ ಪದ್ಧತಿಯನ್ನು ಅನುಸರಿಸುತ್ತದೆ.

ಈ ಕುರಿತು ಕಾಮೆಂಟ್ ಮಾಡಿರುವ ಒಬ್ಬರು, ಹುಡುಗಿಯನ್ನು 100 ದಿನಗಳ ಕಾಲ ಕೆಂಪು ಮಣ್ಣಿನಲ್ಲಿ ಮುಚ್ಚಲು ಏನಾದರೂ ವೈಜ್ಞಾನಿಕ ಕಾರಣವಿದೆಯೇ ಎಂದು ಪ್ರಶ್ನಿಸಿದ್ದಾರೆ.


ಮದುವೆ ಮತ್ತು ಮಧುಚಂದ್ರದ ಮೊದಲು ಅವಳ ಚರ್ಮವನ್ನು ನಯಗೊಳಿಸುವುದಕ್ಕಾಗಿ ಮತ್ತು ಅವಳ ದೇಹವನ್ನು ಸ್ವಚ್ಛ ಗೊಳಿಸುವುದಕ್ಕಾಗಿ ಈ ರೀತಿ ಮಾಡುತ್ತಾರೆಯೇ ಎಂಬುದನ್ನು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ಹೆಚ್ಚಿನ ಸಂಪ್ರದಾಯ, ಪದ್ಧತಿ ಮತ್ತು ಆಚರಣೆಗಳು ವೈಜ್ಞಾನಿಕ ಮಹತ್ವವನ್ನು ಹೊಂದಿವೆ ಮತ್ತು ಜನರು ಅದನ್ನು ಅನುಸರಿಸುವಂತೆ ಮಾಡಲು ಧಾರ್ಮಿಕ ನಂಬಿಕೆಗಳಿಗೆ ಸೇರಿಸಲಾಗುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ

Continue Reading

ವೈರಲ್ ನ್ಯೂಸ್

Miracle case : ಮುರ್ತುಜಾ ಖಾದ್ರಿ ಪವಾಡ; ಅಂತ್ಯಕ್ರಿಯೆ ಮಾಡುವಾಗಲೇ ಕೆಮ್ಮಿದ ಮಗು!

Miracle case : ಪ್ರಜ್ಞೆ ತಪ್ಪಿದ ಮಗುವನ್ನು ಸಾವನ್ನಪ್ಪಿದೆ ಎಂದು ಭಾವಿಸಿದ ಪೋಷಕರು ಸಂಬಂಧಿಕರು, ಆಪ್ತರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದರು. ಇನ್ನೇನು ಮಗುವಿನ ಅಂತ್ಯಸಂಸ್ಕಾರ ಮಾಡಬೇಕು ಎಂದಾಗ ಕೆಮ್ಮುವ ಮೂಲಕ ಬದುಕಿ ಬಂದಿದ್ದು, ಇದೆಲ್ಲ ಮುರ್ತುಜಾ ಖಾದ್ರಿ ಪವಾಡ ಎಂದಿದ್ದಾರೆ.

VISTARANEWS.COM


on

By

Miracle case At Bagalakote News
Koo

ಬಾಗಲಕೋಟೆ: ಆ ದಂಪತಿ ತಮ್ಮ ಒಂದು ವರ್ಷದ ಮಗನ (Miracle case) ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಸಂಬಂಧಿಕರು, ಬಂಧು ಬಳಗದವರೆಲ್ಲರ ಆಕ್ರಂದನ ಮುಗಿಲು ಮುಟ್ಟಿತ್ತು. ಇನ್ನೇನು ಮಗುವನ್ನು ಮಣ್ಣು ಮಾಡಬೇಕು ಎನ್ನುವಾಗ ದಿಢೀರ್‌ ಕಣ್ಣು ಬಿಟ್ಟು, ಜೋರಾಗಿ ಕೆಮ್ಮಿ ಪುನಃ ಬದುಕಿ ಬಂದಿದೆ. ಬಾಗಲಕೋಟೆ ‌ಜಿಲ್ಲೆ ಇಳಕಲ್‌ ನಗರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ.

ಒಂದು ವರ್ಷದ ದ್ಯಾಮಣ್ಣ ಭಜಂತ್ರಿ ಎಂಬ ಮಗುವಿಗೆ ಉಸಿರಾಟ ತೊಂದರೆ, ಹೃದಯ ಸಂಬಂಧಿ ಖಾಯಿಲೆ ಸೇರಿದಂತೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿತ್ತು. ಹುಟ್ಟಿದಾಗಿನಿಂದ ಖಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ಕಳೆದ ನಾಲ್ಕು ದಿನಗಳಿಂದ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಈ ವೇಳೆ ವೈದ್ಯರು ಮಗು ಬದುಕೋದು ಕಷ್ಟ ಎಂದು ಹೇಳಿ ಡಿಸ್ಜಾರ್ಜ್‌ ಮಾಡಿದ್ದಾರೆ. ವಾಪಸ್ ವಾಹನದಲ್ಲಿ ಮನೆಗೆ ಬರುವಾಗ ಮಗು ಪ್ರಜ್ಞೆ ತಪ್ಪಿದೆ. ಪ್ರಜ್ಞೆ ತಪ್ಪಿದ ಮಗುವನ್ನು ಮೃತಪಟ್ಟಿದೆ ಎಂದು ಭಾವಿಸಿದ ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ದಂಪತಿ, ಸಂಬಂಧಿಕರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದಾರೆ.

ಇತ್ತ ಮಗು ಸಾವಿನ ಸುದ್ದಿ ತಿಳಿದು ಬಂಧು ಬಳಗದವರು ಮನೆಗೆ ಬಂದಿದ್ದಾರೆ. ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸುತ್ತಿರುವಾಗಲೇ ಮಗು ಕೆಮ್ಮಿದೆ ಈ ಮೂಲಕ ಬದುಕಿದೆ ಎಂದು ಅಚ್ಚರಿಗೊಂಡಿದ್ದಾರೆ.ಇದು ಮುರ್ತುಜಾ ಖಾದ್ರಿ ಪವಾಡ ಎಂದು ತಿಳಿದ ಪೋಷಕರು ಅಂತ್ಯಸಂಸ್ಕಾರದ ಜಾಗದಿಂದ ದರ್ಗಾಕ್ಕೆ ಮಗುವನ್ನು ಕರೆದುಕೊಂಡು ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಲ್ಲಿಂದ ಕೂಡಲೇ ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಮಗುವಿಗೆ ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ: Thunderbolt: ಮುಂಗಾರಿಗೆ ಮೊದಲೇ ಸಿಡಿಲಿನ ದುಃಸ್ವಪ್ನ, ಇಬ್ಬರು ಬಲಿ, ಇಬ್ಬರು ಗಂಭೀರ

ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದರೆ ಆ ಹುಡುಗಿ ಒಪ್ಪಲಿಲ್ಲ ಎಂದ ಸಿದ್ದರಾಮಯ್ಯ

ಮೈಸೂರು: ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Mysore News) ಅಭಿಪ್ರಾಯಪಟ್ಟರು. ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಆ ಹುಡುಗಿ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ತಮ್ಮ ಕಾಲೇಜು ದಿನಗಳನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ಮೈಸೂರಿನಲ್ಲಿ ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್‌ಸೈಟ್ ಉದ್ಘಾಟಿಸಿ ಮಾತನಾಡಿದ ಅವರು, ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ ಎಂದು ಹೇಳಿದರು.

ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ ಎಂದ ಅವರು, ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Crew on OTT
ಸಿನಿಮಾ31 seconds ago

Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

Soundarya Jagadish Cheating by soundarya Constructions Business Partners
ಬೆಂಗಳೂರು34 seconds ago

Soundarya Jagadish : ಪಾರ್ಟ್ನರ್ಸ್ ದೋಖಾಕ್ಕೆ 60 ಕೋಟಿ ರೂ. ನಷ್ಟ ; ಸೌಂದರ್ಯ ಜಗದೀಶ್‌ ಡೆತ್‌ನೋಟ್‌ನಲ್ಲಿ ಬಯಲಾಯ್ತು ಸತ್ಯ

Fashion Show news
ಫ್ಯಾಷನ್44 seconds ago

Fashion Show News: ಬಿಎಂಎಸ್‌ ಕಾಲೇಜಿನಲ್ಲಿ ನೋಡುಗರನ್ನು ಸೆಳೆದ ವಿದ್ಯಾರ್ಥಿಗಳ ಫ್ಯಾಷನ್‌ ಶೋ

Teacher
ವಿದೇಶ21 mins ago

17 ವರ್ಷದ ವಿದ್ಯಾರ್ಥಿಯ ಜತೆ 30 ಸಲ ಸೆಕ್ಸ್‌ ಮಾಡಿದ ಶಿಕ್ಷಕಿ; ಮುಂದೇನಾಯ್ತು ಅನ್ನೋದೇ ರೋಚಕ!

Travel Tips
ಪ್ರವಾಸ31 mins ago

Travel Tips: ಪ್ರವಾಸಪ್ರಿಯರೇ, ನಿಮ್ಮ ವಿಮಾನ ಪ್ರಯಾಣ ಆರಾಮದಾಯಕವಾಗಬೇಕಿದ್ದರೆ ಈ ಟಿಪ್ಸ್‌‌ ಪಾಲಿಸಿ!

SRH vs RR Qualifier 2
ಕ್ರೀಡೆ37 mins ago

SRH vs RR Qualifier 2: ಕ್ವಾಲಿಫೈಯರ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ಬಲಾಬಲ ಹೇಗಿದೆ?

Road Accident
ಕರ್ನಾಟಕ46 mins ago

Road Accident: ಮೂಡಿಗೆರೆಯಲ್ಲಿ ಮೆಸ್ಕಾಂ ಲಾರಿ-ಓಮ್ನಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಕ್ರೈಂ47 mins ago

Rave party: ಆಶಿ ರಾಯ್ ಡ್ರಗ್ಸ್‌ ಸೇವಿಸಿಲ್ಲ; ನಟಿ ಹೇಮಾ ಸೇವಿಸಿದ್ದು ಯಾವ ಮಾತ್ರೆ? ರಿಪೋರ್ಟ್‌ ರಿವೀಲ್!

Rameshwaram Cafe
ಪ್ರಮುಖ ಸುದ್ದಿ48 mins ago

Rameshwaram Cafe: ನಮ್ಮ ರೆಸ್ಟೋರೆಂಟ್‌ನಲ್ಲಿ ಜಿರಳೆ ಇರಲಿಲ್ಲ, ಕಳಪೆ ಆಹಾರ ಬಳಸಿಲ್ಲ; ರಾಮೇಶ್ವರಂ ಕೆಫೆ ಸ್ಪಷ್ಟನೆ

RBI Dividend
ದೇಶ60 mins ago

RBI Dividend: ಆರ್‌ಬಿಐನಿಂದ ಕೇಂದ್ರಕ್ಕೆ 2.11 ಲಕ್ಷ ಕೋಟಿ ರೂ.‌ ಡಿವಿಡೆಂಡ್! ಮುಂದಿನ ಸರ್ಕಾರಕ್ಕೆ ವರ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌