Viral News | ಪಾಕಿಸ್ತಾನದ ವಕ್ರ ಕುತ್ತಿಗೆಯ ಬಾಲಕಿಗೆ ದೇವರಾದ ಭಾರತದ ಡಾಕ್ಟರ್! - Vistara News

ವೈರಲ್ ನ್ಯೂಸ್

Viral News | ಪಾಕಿಸ್ತಾನದ ವಕ್ರ ಕುತ್ತಿಗೆಯ ಬಾಲಕಿಗೆ ದೇವರಾದ ಭಾರತದ ಡಾಕ್ಟರ್!

Viral News | ಆಕೆ ಪಾಕಿಸ್ತಾನದ ಹುಡುಗಿ. ಚಿಕ್ಕ ವಯಸ್ಸಿನಲ್ಲಿ ನಡೆದ ಒಂದು ದುರಂತದಿಂದ ಆಕೆಯ ಕುತ್ತಿಗೆ 90 ಡಿಗ್ರಿ ತಿರುಗಿತ್ತು. ಜೀವನವಿಡೀ ಹೀಗೇ ಇರಬೇಕೇನೋ ಎಂಬ ನಿರಾಶೆ ನಡುವೆ ಒಂದು ಬೆಳಕು ಭಾರತದಿಂದ ಮೂಡಿತು.

VISTARANEWS.COM


on

ಅಫ್ಷೀನ್‌ ಗುಲ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಪಾಕಿಸ್ತಾನದ 13 ವರ್ಷದ ಬಾಲಕಿಯ ಬಾಲ್ಯದಲ್ಲಿ ನಡೆದ ಒಂದು ಅಪಘಾತದಲ್ಲಿ ಕುತ್ತಿಗೆ 90 ಡಿಗ್ರಿ ತಿರುಗಿ ಹೋಗಿತ್ತು. ದೆಹಲಿಯ ಆಸ್ಪತ್ರೆಯಲ್ಲಿ ಈ ಸಂಬಂಧಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಕುತ್ತಿಗೆಯನ್ನು ಸರಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ (Viral News). ಈ ರೀತಿಯ ಪ್ರಕರಣ ವಿಶ್ವದಲ್ಲೇ ಮೊದಲಿರಬಹುದು ಎಂದು ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ.

ಅಫ್ಷೀನ್‌ ಜೀವನದ ಆಘಾತಕಾರಿ ಘಟನೆ

ಅಫ್ಷೀನ್‌ ಗುಲ್‌ ಎಂಬ ಬಾಲಕಿ 10 ತಿಂಗಳ ಶಿಶುವಿದ್ದಾಗ ಒಂದು ಅಪಘಾತಕ್ಕೆ ಒಳಗಾಗುತ್ತಾಳೆ. ಆಕೆಯ ಸಹೋದರಿಯ ಕೈಯ್ಯಿಂದ ಜಾರಿ ಬೀಳುತ್ತಾಳೆ. ಈ ಘಟನೆಯ ದುಷ್ಪರಿಣಾಮವಾಗಿ ಆಕೆಯ ಕುತ್ತಿಗೆ 90 ಡಿಗ್ರಿ ತಿರುಗಿಬಿಡುತ್ತದೆ. ಇದು ಆಕೆಯ ಬದುಕಿನಲ್ಲಿ ನಡೆದ ದುರಂತ ಘಟನೆಯಾಗಿ ಉಳಿದುಬಿಟ್ಟಿತ್ತು. ಬೆಳೆಯುತ್ತ ಆಕೆ ತನ್ನ ಬಾಲ್ಯದ ಎಲ್ಲ ಆನಂದದ ಕ್ಷಣಗಳಿಂದ ಆಕೆ ವಂಚಿತಳಾಗುತ್ತಾಳೆ. ಆಕೆ ಎಲ್ಲರಂತೆ ಶಾಲೆಗೆ ಹೋಗಲು ಸಾಧ್ಯವಿರಲಿಲ್ಲ, ಉಳಿದ ಮಕ್ಕಳಂತೆ ಆಟವಾಡಲು ಆಗುತ್ತಿರಲಿಲ್ಲ.

ಆಕೆಗೆ ಚಿಕಿತ್ಸೆ ಕೊಡಿಸಲು ಮನೆಯವರ ಆರ್ಥಿಕ ಪರಿಸ್ಥಿತಿ ಪೂರಕವಾಗಿರಲಿಲ್ಲ. ಅಫ್ಷೀನ್‌ ಅವರಿಗೆ ಇನ್ನೊಂದು ಬಾಧಕವಿತ್ತು. ಸೆರೆಬ್ರಲ್‌ ಪಾಲ್ಸಿ ಎಂಬ ಕಾಯಿಲೆಯಿತ್ತು. ಸೆರೆಬ್ರಲ್‌ ಪಾಲ್ಸಿ ಕಾಯಿಲೆಯಲ್ಲಿ ಅನೇಕ ಅನಾರೋಗ್ಯಗಳು ಒಟ್ಟಿಗೆ ಕಾಡುತ್ತವೆ. ಇದರಿಂದ ವ್ಯಕ್ತಿ ತನ್ನ ದೇಹದ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಉಳಿದವರ ಸಹಾಕರವಿಲ್ಲದೆ ಯಾವುದೇ ಕೆಲಸವನ್ನು ಮಾಡಲು ಆಗುವುದಿಲ್ಲ.

ಸುಮಾರು 12 ವರ್ಷಗಳ ಕಾಲ ಈ ರೀತಿಯ ಅಸ್ವಸ್ಥತೆಯಿಂದ ಅಫ್ಷೀನ್ ಬಳಲಿದರು. ಬ್ರಿಟಿಷ್‌ ಪತ್ರಕರ್ತೆ ಅಲೆಕ್ಸಾಂಡರ್‌ ಥಾಮಸ್‌ ಎಂಬವರು ಈಕೆಯ ಬಗ್ಗೆ ಒಂದು ವರದಿ ಮಾಡಿ ಪ್ರಕಟಿಸಿದ್ದರು. ಅದನ್ನು ಓದಿ ಭಾರತದ ದೆಹಲಿಯ ವೈದ್ಯ ಡಾ. ರಾಜಗೋಪಾಲನ್‌ ಕೃಷ್ಣ ಎಂಬುವರು ಅಫ್ಷೀನ್‌ ಕುಟುಂಬದವರನ್ನು ಸಂಪರ್ಕಿಸಿದರು.

ಕಳೆದ ಫೆಬ್ರುವರಿ ತಿಂಗಳಲ್ಲಿ ಅಫ್ಷೀನ್‌ ಕುಟುಂಬದವರು ದೆಹಲಿಗೆ ಬಂದು ರಾಜಗೋಪಾಲನ್‌ ಕೃಷ್ಣ ಅವರನ್ನು ಭೇಟಿ ಮಾಡಿದರು. ರಾಜಗೋಪಾಲನ್‌ ಅವರು ಹಣಕಾಸಿನ ಅಪೇಕ್ಷೆಯಿಲ್ಲದೆ ಶಸ್ತ್ರಚಿಕಿತ್ಸೆ ನಡೆಸಲು ಒಪ್ಪಿ ಮಾನವೀಯತೆ ಮೆರೆದರು. ಪ್ರಮುಖ ನಾಲ್ಕು ಶಸ್ತ್ರಚಿಕಿತ್ಸೆಗಳ ಬಳಿಕ ಅಫ್ಷೀನ್‌ ಸಂಪೂರ್ಣ ಗುಣಮುಖಳಾದಳು. ಈಗ ಎಲ್ಲರಂತೆ ಅಫ್ಷೀನ್ ಕೂಡ ಆಟವಾಡಿ ನಲಿಯುವುದನ್ನು ನೋಡಬಹುದು, ಆಕೆಯ ಮುಖದಲ್ಲಿ ನಗುವನ್ನು ಕಾಣಬಹುದು ಎಂದು ಅಫ್ಷೀನ್‌ ಹಾಗೂ ಆಕೆಯ ಕುಟುಂಬದವರು ಸಂತಸ ವ್ಯಕ್ತಪಡಿಸಿದ್ದಾರೆ.

ಭಾವುಕರಾದ ಕುಟುಂಬದವರು

ಈ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಖರ್ಚುಗಳನ್ನು ಪೂರೈಸಲು ಆನ್‌ಲೈನ್‌ ಫಂಡ್‌ರೈಸರ್‌ ಸಹಾಯ ಮಾಡಿತು ಎಂದು ಅಫ್ಷೀನ್‌ ಕುಟುಂಬದವರು ಹೇಳಿದ್ದಾರೆ. ದೇವರಂತೆ ಬಂದು ಅಫ್ಷೀನ್‌ಗೆ ಸರಿಯಾದ ಚಿಕಿತ್ಸೆ ನೀಡಿ ಗುಣಪಡಿಸಿದ್ದಕ್ಕೆ ರಾಜ್‌ಗೋಪಾಲನ್‌ ಕೃಷ್ಣ ಅವರಿಗೆ ಆಭಾರಿಯಾದ ಕುಟುಂಬದವರು ಕೃತಜ್ಞತೆಯನ್ನು ಸಲ್ಲಿಸಿ ಭಾವುಕರಾಗಿದ್ದಾರೆ.

ಇದನ್ನೂ ಓದಿ: Viral video | ಎಲ್ಲೆಡೆ ಇರುವುದು ದೇವರಲ್ಲ, ತಂದೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Lok Sabha Election 2024

Lok Sabha Election: ಒಂದೇ ಒಂದು ಕುಟುಂಬಕ್ಕಾಗಿ ಪ್ರತ್ಯೇಕ ಮತಗಟ್ಟೆ! ಹೀಗೂ ಉಂಟು!

Lok Sabha Election 2024: ಒಂದೇ ಕುಟುಂಬದ ಐದು ಮಂದಿಗಾಗಿ ಲೇಹ್ ಜಿಲ್ಲೆಯ ವಾಶಿ ಎಂಬ ಹಳ್ಳಿಯಲ್ಲಿಚುನಾವಣಾ ಅಧಿಕಾರಿಗಳು ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಚುನಾವಣಾ ಆಯೋಗದ ಪ್ರಯತ್ನಗಳ ಭಾಗವಾಗಿ ಶೇ. 100ರಷ್ಟು ಮತದಾನವಾಗಬೇಕು ಎನ್ನುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಪಾಲ್ಗೊಳ್ಳಬೇಕು. ಇದಕ್ಕಾಗಿ ದೂರದೂರದ ಸ್ಥಳಗಳಲ್ಲೂ, ಅತ್ಯಲ್ಪ ಮತದಾರರು ಇರುವಲ್ಲೂ ಎಲ್ಲರಿಗೂ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರವನ್ನು ತೆರೆಯಲಾಗಿದೆ.

VISTARANEWS.COM


on

By

Lok Sabha Election-2024
Koo

ಶ್ರೀನಗರ: ಲೋಕಸಭಾ ಚುನಾವಣೆ 2024 (Lok Sabha Election-2024) ಹಲವು ವಿಶೇಷಗಳಿಗೆ ಸಾಕ್ಷಿಯಾಗಿದೆ. ಇದರಲ್ಲಿ ಕೇವಲ ಐದು ಮಂದಿ ಮತದಾರರಿಗಾಗಿ (voters) ಮತದಾನ ಕೇಂದ್ರವನ್ನು (voting booth) ತೆರೆದಿರುವುದು ಕೂಡ ಒಂದು. ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ನ (Ladakh) ಲೇಹ್ (Leh) ಜಿಲ್ಲೆಯ ವಾಶಿ (Washi ) ಎಂಬ ದೂರದ ಹಳ್ಳಿಯಲ್ಲಿ ಒಂದು ಕುಟುಂಬದ ಐದು ಸದಸ್ಯರಿಗೆ ಚುನಾವಣಾ ಅಧಿಕಾರಿಗಳು ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಲಡಾಖ್ ನ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಯತೀಂದ್ರ ಎಂ. ಮರಾಲ್ಕರ್, ಲೇಹ್‌ನಿಂದ ಸುಮಾರು 170 ಕಿ.ಮೀ. ದೂರದಲ್ಲಿರುವ ನುಬ್ರಾದ ವಾಶಿ ಎಂಬ ದೂರದ ಹಳ್ಳಿಯಲ್ಲಿ ಟೆಂಟ್ ಅಡಿಯಲ್ಲಿ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗದ ಪ್ರಯತ್ನಗಳ ಭಾಗವಾಗಿ ಶೇ. 100ರಷ್ಟು ಮತದಾನವಾಗಬೇಕು ಎನ್ನುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಪಾಲ್ಗೊಳ್ಳಬೇಕು. ಇದಕ್ಕಾಗಿ ದೂರದೂರದ ಸ್ಥಳಗಳಲ್ಲೂ, ಅತ್ಯಲ್ಪ ಮತದಾರರು ಇರುವಲ್ಲೂ ಎಲ್ಲರಿಗೂ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರವನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Lok Sabha Election 2024: ಎಲೆಕ್ಷನ್‌ ಹೊತ್ತಲ್ಲೇ ಕಾಂಗ್ರೆಸ್‌ಗೆ ಬಿಗ್‌ ಶಾಕ್! ಕನ್ಹಯ್ಯ ಕುಮಾರ್‌ಗೆ ಸ್ವಪಕ್ಷದಲ್ಲೇ ವಿರೋಧ

ಮೇ 20ರಂದು ಮತದಾನ

ಲಡಾಖ್ ಲೋಕಸಭಾ ಸ್ಥಾನಕ್ಕೆ ಮೇ 20ರಂದು 5ನೇ ಹಂತದಲ್ಲಿ ಮತದಾನ ನಡೆಯಲಿದೆ. ಆರ್ಟಿಕಲ್ 370 ಅನ್ನು ರದ್ದುಗೊಳಿಸಿದ ಅನಂತರ ಮತ್ತು ಜಮ್ಮು ಮತ್ತು ಕಾಶ್ಮೀರದ ರಾಜ್ಯವನ್ನು ಎರಡು ಯುಟಿಗಳಾಗಿ ವಿಭಜಿಸಿದಬಳಿಕ ಶೀತ ಮರುಭೂಮಿ ಪ್ರದೇಶದಲ್ಲಿ ಮೊದಲ ಬಾರಿಗೆ ಮತದಾನ ನಡೆಯಲಿದೆ.


ಐವರು ಮತದಾರರು

ಒಂದೇ ಕುಟುಂಬದ ಐವರು ಗ್ರಾಮದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದು, ಟೆಂಟ್‌ ಹಾಕಿದ ಮತಗಟ್ಟೆ ಅವರ ಮನೆ ಬಾಗಿಲಿಗೆ ಬಂದಿದೆ ಎಂದು ಮಾರಲ್ಕರ್ ಹೇಳಿದರು.

ಕುಟುಂಬವು ಆರು ಸದಸ್ಯರನ್ನು ಒಳಗೊಂಡಿದೆ ಮತ್ತು ಅವರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಕುಟುಂಬದ ಮುಖ್ಯಸ್ಥ ರೈತನಾಗಿದ್ದಾನೆ.

ಲಡಾಖ್ ನಲ್ಲಿ 1,82,571 ಮತದಾರರು

ಲಡಾಖ್ ಯುಟಿಯು ಎರಡು ಜಿಲ್ಲೆಗಳನ್ನು ಒಳಗೊಂಡಿದೆ. ಮುಸ್ಲಿಂ ಪ್ರಾಬಲ್ಯದ ಕಾರ್ಗಿಲ್ ಮತ್ತು ಬೌದ್ಧ ಪ್ರಾಬಲ್ಯದ ಲೇಹ್. 91,703 ಪುರುಷರು ಮತ್ತು 90868 ಮಹಿಳೆಯರು ಸೇರಿದಂತೆ ಒಟ್ಟು 1,82,571 ಮತದಾರರು ಇಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.

577 ಮತಗಟ್ಟೆಗಳು

ಚುನಾವಣಾ ಆಯೋಗವು ಯುಟಿಯಾದ್ಯಂತ 577 ಮತಗಟ್ಟೆಗಳನ್ನು ಸ್ಥಾಪಿಸಿದೆ. ಇದರಲ್ಲಿ 33 ನಗರ ಮತ್ತು 544 ಗ್ರಾಮೀಣ ಪ್ರದೇಶಗಳಲ್ಲಿ ಸೇರಿವೆ. ಲಡಾಖ್‌ನಲ್ಲಿ ಕೆಲವು ಮತಗಟ್ಟೆಗಳ ದುರ್ಗಮತೆಯನ್ನು ಗಮನದಲ್ಲಿಟ್ಟುಕೊಂಡು ದೂರದ ಹಳ್ಳಿಗಳಿಗೆ ಚುನಾವಣಾ ಸಾಮಗ್ರಿಗಳು ಮತ್ತು ಸಿಬ್ಬಂದಿಯನ್ನು ವಿಮಾನದಲ್ಲಿ ರವಾನಿಸಲಾಗುತ್ತದೆ.

Continue Reading

ಕ್ರೀಡೆ

MS Dhoni: ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಆದ ಧೋನಿ ಅಭಿಮಾನಿ

MS Dhoni: ಮಹೇಂದ್ರ ಸಿಂಗ್‌ ಧೋನಿಯ ಅಪ್ಪಟ ಅಭಿಮಾನಿಯೊಬ್ಬ ತನ್ನ ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಮಾಡಿದ್ದಾನೆ. ಭಾನುವಾರ ನಡೆದ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಪೋಸ್ಟರ್​ ಹಿಡಿಯುವ ಮೂಲಕ ಈ ಅಭಿಮಾನಿ ತನ್ನ ಬ್ರೇಕಪ್ ವಿಚಾರವನ್ನು ಬಹಿರಂಗಪಡಿಸಿದ್ದಾನೆ.

VISTARANEWS.COM


on

MS Dhoni
Koo

ಚೆನ್ನೈ: ಮಹೇಂದ್ರ ಸಿಂಗ್‌ ಧೋನಿ(MS Dhoni) ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿ ಹಲವು ವರ್ಷ ಕಳೆದರೂ ಅವರು ಈಗಲೂ ಕ್ರಿಕೆಟಿನ ಸೂಪರ್‌ ಸ್ಟಾರ್‌ ಆಗಿದ್ದಾರೆ. ಅವರ ಅಭಿಮಾನಿಗಳ ಸಂಖ್ಯೆಗೇನೂ ಕೊರತೆ ಇಲ್ಲ. ಐಪಿಎಲ್​ನಲ್ಲಿ(IPL 2024) ಚೆನ್ನೈ ಪರ ಆಡುತ್ತಿರುವ ಧೋನಿ ಮೈದಾನಕ್ಕೆ ಇಳಿದರೆ ಸಾಕು ಇಡೀ ಸ್ಟೇಡಿಯಂ ತುಂಬಾ ಧೋನಿಯ ಹೆಸರಿನದ್ದೇ ಸದ್ದು. ಧೋನಿಯನ್ನು ನೋಡಲೆಂದೇ ಅವರ ಅಭಿಮಾನಿಗಳು ಕಾದು ಕುಳಿತಿರುತ್ತಾರೆ. ಇದೀಗ ಅವರ ಅಪ್ಪಟ ಅಭಿಮಾನಿಯೊಬ್ಬ ತನ್ನ ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಮಾಡಿದ್ದಾನೆ. ಭಾನುವಾರ ನಡೆದ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಪೋಸ್ಟರ್​ ಹಿಡಿಯುವ ಮೂಲಕ ಈ ಅಭಿಮಾನಿ ತನ್ನ ಬ್ರೇಕಪ್ ವಿಚಾರವನ್ನು ಬಹಿರಂಗಪಡಿಸಿದ್ದಾನೆ.

ಚೆನ್ನೈಯ ಚೆಪಾಕ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಐಪಿಎಲ್​(IPL 2024) ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಚೆನ್ನೈ(Chennai Super Kings) ತಂಡ ನಾಯಕ ಋತುರಾಜ್​ ಗಾಯಕ್ವಾಡ್​, ಡೇರಿಯಲ್​ ಮಿಚೆಲ್​ ಮತ್ತು ಶಿವಂ ದುಬೆ ಅವರ ಆಕ್ರಮಣಕಾರಿ ಬ್ಯಾಟಿಂಗ್​ ಸಾಹಸದಿಂದ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ ನಷ್ಟಕ್ಕೆ 212 ರನ್​ ಬಾರಿಸಿತು. ಈ ಹಿಂದಿನ ಪಂದ್ಯಗಳಲ್ಲಿ ಸಲೀಸಾಗಿ ಮೂರು ಬಾರಿ 250ರ ಗಡಿ ದಾಟಿದ್ದ ಸನ್​ರೈಸರ್ಸ್​ ತಂಡಕ್ಕೆ ಈ ಮೊತ್ತ ಎಲ್ಲಿಂದಲೂ ಸಾಲದು ಎಂದು ನಿರೀಕ್ಷೆ ಮಾಡಿದ್ದವರಿಗೆ ಚೆನ್ನೈ ತಂಡದ ಮಧ್ಯಮ ವೇಗಿ ತುಷಾರ್​ ದೇಶ್​ಪಾಂಡೆ ಘಾತಕ ಸ್ಫೆಲ್ ಮೂಲಕ ಕಟ್ಟಿಹಾಕಿದರು. ಅಂತಿಮವಾಗಿ ಹೈದರಾಬಾದ್​ 18.5 ಓವರ್​ಗಳಲ್ಲಿ 134 ರನ್​ಗೆ ಸರ್ವಪತನ ಕಂಡು ಹೀನಾಯವಾಗಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

ಎಂ.ಎಸ್.ಧೋನಿ(MS Dhoni), ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಕಳೆದ ವರ್ಷ ಮುಂಬೈಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿಯೇ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಕಳೆದ ಮುಂಬೈ ಮತ್ತು ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ನಡೆಸಿದ ವೇಳೆ ಕುಂಟುತಾ ನಡೆದಾಡಿದ ಫೋಟೊ ಮತ್ತು ವಿಡಿಯೊ ವೈರಲ್​ ಆಗಿತ್ತು. ಕಳೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯಗೆ ಹ್ಯಾಟ್ರಿಕ್​ ಸಿಕ್ಸರ್​ಗಳ ರುಚಿ ತೋರಿಸಿದ್ದರು. ವಯಸ್ಸು 42 ಆದರೂ, ತಮ್ಮ ಬ್ಯಾಟಿಂಗ್​ ಫಾರ್ಮ್​ ಮಾತ್ರ ಈ ಹಿಂದಿನಂತೆಯೇ ಇದೆ.​

Continue Reading

ವೈರಲ್ ನ್ಯೂಸ್

Viral Video: ಪಾಪಿ ಮಗನಿಂದ ತಂದೆ ಮೇಲೆ ಇದೆಂಥಾ ಕ್ರೌರ್ಯ! ವಿಡಿಯೋ ನೋಡಿ

Viral Video:ಪಾಪಿ ಮಗನೋರ್ವ ತನ್ನ ತಂದೆಯ ಮುಖಕ್ಕೆ ಒಂದೇ ಸಮನೇ ಗುದ್ದಿ ಕ್ರೌರ್ಯ ಮೆರೆದಿರುವ ಘಟನೆ ತಮಿಳುನಾಡಿನ ಪೆರಂಬಲೂರಿನಲ್ಲಿ ನಡೆದಿದೆ.

VISTARANEWS.COM


on

Koo

ತಮಿಳುನಾಡು: ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬ ಪತ್ನಿಯನ್ನು ಚೆನ್ನಾಗಿ ಥಳಿಸಿ ಫ್ಲೈ ಓವರ್‌ನಿಂದ ಕೆಳಗೆ ತಳ್ಳಿ ಕೊಲೆಗೆ ಯತ್ನಿಸಿದ ವಿಡಿಯೋ ವೈರಲ್‌(Viral Video) ಆಗಿದ್ದ ಬೆನ್ನಲ್ಲೇ ಇದೀಗ ತಮಿಳುನಾಡಿ(Tamil nadu)ನಲ್ಲಿ ಮತ್ತೊಂದು ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಾಪಿ ಮಗನೋರ್ವ ತನ್ನ ತಂದೆಯ ಮುಖಕ್ಕೆ ಒಂದೇ ಸಮನೇ ಗುದ್ದಿ ಕ್ರೌರ್ಯ ಮೆರೆದಿರುವ ಘಟನೆ ತಮಿಳುನಾಡಿನ ಪೆರಂಬಲೂರಿ(Perambaluru)ನಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ತಂದೆ ಸ್ಥಳದಲ್ಲೇ ಅಸ್ವಸ್ಥಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಕೃಷ್ಣಪುರಂನಲ್ಲಿ ಈ ಭೀಕರ ಘಟನೆ ನಡೆದಿದ್ದು, 68ವರ್ಷದ ಕುಲಂಡೈವೇಲು ಎಂಬ ವ್ಯಕ್ತಿಯ ಮೇಲೆ ಆತನ ಮಗ 40ವರ್ಷದ ಸಂತೋಷ್‌ ಎಂಬಾತ ಮುಖಾಮೂತಿ ನೋಡದೇ ಚಚ್ಚಿದ್ದಾನೆ. ಕುಲಂಡೈವೇಲು ಶ್ರೀ ಅಮೃತ ಸಾಗೋ ಎಂಬ ಅಕ್ಕಿ ಗಿರಣಿ ನಡೆಸುತ್ತಿದ್ದರು. ಅದರ ಅಧಿಕಾರವನ್ನು ತನಗೆ ವಹಿಸುವಂತೆ ಆಗಾಗ ಸಂತೋಷ್‌ ಕಿರುಕುಳ ನೀಡುತ್ತನಂತೆ. ಇದೇ ವಿಚಾರಕ್ಕೆ ಕೋಪದಲ್ಲಿ ತಂದೆ ಮುಖಕ್ಕೆ ಗುದ್ದಿ ಆತನ ಸಾವಿಗೆ ಸಂತೋಷ್‌ ಕಾರಣನಾಗಿದ್ದಾನೆ. ತಂದೆ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದರೂ ಬಿಡದ ಸಂತೋಷ್‌ ಬಿಡದೇ ಮುಖಕ್ಕೆ ಗುದ್ದಿದ್ದಾನೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಆತನನ್ನು ತಡೆದು ಕುಲಂಡೈವೇಲು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಫೆಬ್ರುವರಿ 16ರಂದು ಈ ಘಟನೆ ನಡೆದಿದ್ದು, ಒಂದು ತಿಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಲಂಡೈವೇಲು ಕೊನೆಯುಸಿರೆಳೆದಿದ್ದಾರೆ.

ಕುಲಂಡೈವೇಲು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅವರು ಮೊದಲಿಗೆ ತಮ್ಮ ಮಗನ ವಿರುದ್ಧ ದೂರು ದಾಖಲಿಸಿದ್ದರು. ಬಳಿಕ ಅದನ್ನು ಹಿಂಪಡೆದಿದ್ದರು ಎನ್ನಲಾಗಿದೆ. ಇದೀಗ ಮತ್ತೆ ಕುಟುಂಬಸ್ಥರು ಸಂತೋಷ್‌ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಯನ್ನು ಅರೆಸ್ಟ್‌ ಮಾಡಿದ್ದಾರೆ. ಸದ್ಯ ಅವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಪಾಪಿ ಮಗನ ಕೃತ್ಯಕ್ಕೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

ಎರಡು ದಿನಗಳ ಹಿಂದೆಯಷ್ಟೇ ತಮಿಳುನಾಡಿನ ಕೊಯಂಬೆಡು ಸೇತುವೆ ಬಳಿ ವ್ಯಕ್ತಿಯೊಬ್ಬ ಪತ್ನಿಯನ್ನು ಥಳಿಸಿ ನಡು ಫ್ಲೈ ಓವರ್‌ ನಿಂದ ಕೆಳಗೆ ಎಸೆಯಲು ಯತ್ನಿಸಿದ್ದ. ಈ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗಿತ್ತು. ಬಳಿಕ ಆರೋಪಿ ರೋಶನ್‌ನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದರು.

Continue Reading

ವೈರಲ್ ನ್ಯೂಸ್

Prachi Nigam: “ನಾನು ಟಾಪ್‌ ಬರಲೇಬಾರದಿತ್ತು…” ಮೀಸೆಯಿಂದಾಗಿ ಟ್ರೋಲ್‌ಗೊಳಗಾದ ಬೋರ್ಡ್‌ ಎಕ್ಸಾಮ್‌ ಟಾಪರ್‌ ಹುಡುಗಿಯ ನೋವು

Prachi Nigam: ತನ್ನ ನೋಟಕ್ಕಾಗಿ ವೈಯಕ್ತಿಕವಾಗಿ ತಾನು ಎದುರಿಸುತ್ತಿರುವ ನಿರಂತರ ಗೇಲಿಗಳ ಬಗ್ಗೆ ಮಾತನಾಡಿರುವ ಆಕೆ, “ಇದು ನೋವುಂಟುಮಾಡುವಂಥದು. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಜನರು ತಮಗೆ ಬೇಕಾದುದನ್ನು ಹೇಳುತ್ತಾರೆ. ಅವರನ್ನು ತಡೆಯಲು ಸಾಧ್ಯವಿಲ್ಲ” ಎಂದಿದ್ದಾಳೆ.

VISTARANEWS.COM


on

prachi nigam online troll
Koo

ಹೊಸದಿಲ್ಲಿ: 98.50 ಪ್ರತಿಶತ ಅಂಕದೊಂದಿಗೆ ಯುಪಿ ಬೋರ್ಡ್ (UP Board) 10ನೇ ತರಗತಿಯ ಟಾಪರ್ (Board exam topper) ಆಗಿ ಹೊರಹೊಮ್ಮಿರುವ ಪ್ರಾಚಿ ನಿಗಮ್ (Prachi Nigam), ತಮ್ಮ ಮುಖದ ಕೂದಲಿನ (facial hair) ಬಗೆಗೆ ಬರುತ್ತಿರುವ ಆನ್‌ಲೈನ್ ಟ್ರೋಲಿಂಗ್‌ನಿಂದಾಗಿ (Online trolling) ನೊಂದಿದ್ದಾಳೆ. ಬಿಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, ತನ್ನ ಅತ್ಯುತ್ತಮ ಶೈಕ್ಷಣಿಕ ಸಾಧನೆಗಿಂತ ಹೆಚ್ಚಾಗಿ ತನ್ನ ಲುಕ್‌ನಿಂದಾಗಿಯೇ ಸೋಶಿಯಲ್‌ ಮೀಡಿಯಾದಲ್ಲಿ ಟ್ರೋಲ್‌ (viral news) ಆಗಿರುವ ಬಗ್ಗೆ ವೇದನೆ ವ್ಯಕ್ತಪಡಿಸಿದ್ದಾಳೆ.

“ನಾನು ಟಾಪರ್‌ ಆಗಬಾರದಿತ್ತು. ಕೇವಲ 1-2 ಅಂಕ ಕಡಿಮೆ ಗಳಿಸಿದ್ದರೆ, ಈ ಸೋಶಿಯಲ್‌ ಮೀಡಿಯಾದ ಜನಪ್ರಿಯತೆ ಮತ್ತು ನನ್ನ ಲುಕ್‌ನಿಂದಾಗಿ ಬಂದ ಇಂತಹ ಟ್ರೋಲಿಂಗ್ ಅನ್ನು ಎದುರಿಸಬೇಕಾಗಿರಲಿಲ್ಲ” ಎಂದಿದ್ದಾಳೆ ಪ್ರಾಚಿ. ತನ್ನ ನೋಟಕ್ಕಾಗಿ ವೈಯಕ್ತಿಕವಾಗಿ ತಾನು ಎದುರಿಸುತ್ತಿರುವ ನಿರಂತರ ಗೇಲಿಗಳ ಬಗ್ಗೆ ಮಾತನಾಡಿರುವ ಆಕೆ, “ಇದು ನೋವುಂಟುಮಾಡುವಂಥದು. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಜನರು ತಮಗೆ ಬೇಕಾದುದನ್ನು ಹೇಳುತ್ತಾರೆ. ಅವರನ್ನು ತಡೆಯಲು ಸಾಧ್ಯವಿಲ್ಲ” ಎಂದಿದ್ದಾಳೆ.

ಕೆಲವು ಪ್ರಜ್ಞಾವಂತ ಸೋಶಿಯಲ್‌ ಮೀಡಿಯಾ ಬಳಕೆದಾರರು ಆಕೆಗಾಗಿ ನಿಜವಾಗಿಯೂ ಮಿಡಿದಿದ್ದಾರೆ. “ನಾವು ಒಂದು ಸಮಾಜವಾಗಿ ಆಕೆಯೆದುರು ವಿಫಲರಾಗಿದ್ದೇವೆ” ಎಂದು ಒಬ್ಬ ಬಳಕೆದಾರರು ಹೇಳಿದ್ದಾರೆ. “ಅವಳ ಜೀವನದ ಅತ್ಯುತ್ತಮ ಕ್ಷಣ ಈಗ ನೋವಿನ ಕ್ಷಣವೂ ಆಗಿದೆ. ಸಾಮಾಜಿಕ ಮಾಧ್ಯಮವು ತುಂಬಾ ವಿಷಕಾರಿ ಮತ್ತು ಕ್ರೂರ” ಎಂದಿದ್ದಾರೆ ಇನ್ನೊಬ್ಬರು. “ಸಮಾಜಕ್ಕಿಂತ ಹೆಚ್ಚಾಗಿ ಅವಳನ್ನು ಟ್ರೋಲ್ ಮಾಡಿದವರು ನಿಜವಾದ ಸೋತವರು. ನಮ್ಮದು ಸೋತವರಿಂದ ತುಂಬಿದ ಸಮಾಜ. ಪ್ರತಿಯೊಬ್ಬ ಯಶಸ್ವಿ ಮಹಿಳೆಯನ್ನೂ ಟ್ರೋಲ್‌ ಮಾಡುತ್ತಾರೆ” ಎಂದಿದ್ದಾರೆ ಮತ್ತೊಬ್ಬರು. “ಅವಳು ಅನುಭವಿಸಿದ ಭಾವನಾತ್ಮಕ ಆಘಾತವನ್ನು ಊಹಿಸಿ. ಜಗತ್ತಿನಿಂದ ಈ ಮಟ್ಟದ ದ್ವೇಷದ ವಿರುದ್ಧ ನಿಲ್ಲಲು ದೊಡ್ಡ ಧೈರ್ಯ ಬೇಕು. ಹೀಗಾಗಿ ಆಕೆ ತುಂಬಾ ಬಲಶಾಲಿಯಾಗಿದ್ದಾಳೆ” ಎಂಬುದು ಇನ್ನೊಬ್ಬರ ಕಾಮೆಂಟ್.

“ಭವಿಷ್ಯದಲ್ಲಿ ಇಂಜಿನಿಯರ್ ಆಗುವ ಗುರಿ ಹೊಂದಿದ್ದೇನೆ ಮತ್ತು ತನ್ನ ಕನಸುಗಳನ್ನು ಮುಂದುವರಿಸುವತ್ತ ಸಂಪೂರ್ಣ ಗಮನಹರಿಸಿದ್ದೇನೆ” ಎಂದು ಪ್ರಾಚಿ ತನ್ನ ಆಕಾಂಕ್ಷೆಗಳನ್ನು ಹಂಚಿಕೊಂಡಿದ್ದಾಳೆ. ಟ್ರೋಲಿಂಗ್ ಪ್ರಾರಂಭವಾದ ನಂತರ ಆಕೆಯ ತಾಯಿ ಮಮತಾ ನಿಗಮ್ ಅವರು ತಮ್ಮ ಮಗಳನ್ನು ಹೇಗೆ ಬೆಂಬಲಿಸಿದರು ಎಂಬುದರ ಕುರಿತು ಮಾತನಾಡುತ್ತಾ, “ಟ್ರೋಲ್‌ಗಳನ್ನು ನಿರ್ಲಕ್ಷಿಸುವಂತೆ ಆಕೆಯನ್ನು ನಾನು ಪ್ರೋತ್ಸಾಹಿಸಿದೆ. ಆಶ್ಚರ್ಯ ಎನಿಸುವಂತೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಕೆಲವು ದಿನಗಳ ನಂತರ ಅವಳನ್ನು ಬೆಂಬಲಿಸಿದರು” ಎಂದಿದ್ದಾರೆ.

ಪ್ರಾಚಿಯ ತಂದೆ ಚಂದ್ರಪ್ರಕಾಶ್ ನಿಗಮ್ ಅವರು ಟ್ರೋಲಿಂಗ್‌ನಿಂದ ಆಗಿರುವ ನಿರಾಶೆಯನ್ನು ಒಪ್ಪಿಕೊಂಡರು. ಆದರೆ ಮಗಳ ಸಾಧನೆಯಿಂದ ಆಗಿರುವ ಹೆಮ್ಮೆಯ ಬಗ್ಗೆ ಹೇಳಿದರು. “ಸಮಾಜದಲ್ಲಿ ಎಲ್ಲಾ ರೀತಿಯ ಜನರಿದ್ದಾರೆ. ನಮ್ಮ ಮಗಳು ಹೆಚ್ಚು ಅಂಕಗಳನ್ನು ಗಳಿಸಿದ್ದಕ್ಕಾಗಿ ನಾವು ಹೆಮ್ಮೆಪಡುತ್ತೇವೆ” ಎಂದು ಅವರು ಹೇಳಿದರು. ಮಮತಾ ನಿಗಮ್ ಅವರು ತಮ್ಮ ಮಗಳ ಚಿಕಿತ್ಸೆಗಾಗಿ ವೈದ್ಯಕೀಯ ಸಲಹೆಯನ್ನು ಪಡೆಯಲು ಯೋಜಿಸಿದ್ದರು. “ಅವಳ ಚಿಕಿತ್ಸೆಯನ್ನು ಈಗ ಸರ್ಕಾರವು ಕೈಗೊಳ್ಳಲಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: Lok Sabha Election 2024 : ಬೋಟ್‌ನಲ್ಲಿ ಬಂದು ವೋಟ್‌ ಮಾಡಿದ 150ಕ್ಕೂ ಮತದಾರರು

Continue Reading
Advertisement
International Labor Day-2024
ಉದ್ಯೋಗ20 mins ago

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

car crossed the divider and collided with a lorry Driver death
ತುಮಕೂರು30 mins ago

Road Accident: ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು

Hassan Pen Drive Case
ಕರ್ನಾಟಕ41 mins ago

Hassan Pen Drive Case: ವಿಚಾರಣೆಗೆ ಕರೆದಾಗ ವಿದೇಶದಿಂದ ಪ್ರಜ್ವಲ್ ಬರುತ್ತಾನೆ ಎಂದ ಎಚ್‌.ಡಿ.ರೇವಣ್ಣ

PF Balance Check
ಮನಿ ಗೈಡ್44 mins ago

PF Balance Check: ಬಡ್ಡಿ ಬಂದಿದೆಯೋ ಇಲ್ಲವೋ… ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ?

MLA Srinivasa Mane Election campaign for Haveri Gadag Lok Sabha constituency Congress candidate Anandaswamy Gaddadevaramath
ಹಾವೇರಿ60 mins ago

Lok Sabha Election: ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಶಾಸಕ ಶ್ರೀನಿವಾಸ ಮಾನೆ ಪ್ರಚಾರ

Toyota Kirloskar Motor launched the Tgloss
ವಾಣಿಜ್ಯ1 hour ago

Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

Lok Sabha Election-2024
Lok Sabha Election 20241 hour ago

Lok Sabha Election: ಒಂದೇ ಒಂದು ಕುಟುಂಬಕ್ಕಾಗಿ ಪ್ರತ್ಯೇಕ ಮತಗಟ್ಟೆ! ಹೀಗೂ ಉಂಟು!

Arvind Kejriwal
ದೇಶ1 hour ago

ಸಿಎಂ ಹುದ್ದೆ ಅಲಂಕಾರಿಕ ಅಲ್ಲ; 24×7 ಜನರಿಗೆ ಲಭ್ಯ ಇರಬೇಕು; ರಾಜೀನಾಮೆ ನೀಡದ ಕೇಜ್ರಿವಾಲ್‌ಗೆ ಕೋರ್ಟ್‌ ಚಾಟಿ

LSG vs MI
ಕ್ರೀಡೆ1 hour ago

LSG vs MI: ಲಕ್ನೋ ಸವಾಲಿಗೆ ಮುಂಬೈ ಸಜ್ಜು; ಸೋತರೆ ಪಾಂಡ್ಯ ಪಡೆಯ ಪ್ಲೇ ಆಫ್​ ಹಾದಿ ಕಠಿಣ

Tumkur News 10 huts burnt down in Chimpuganahalli Minister Dr G Parameshwar visited the place
ತುಮಕೂರು1 hour ago

Tumkur News: ಚಿಂಪುಗಾನಹಳ್ಳಿಯಲ್ಲಿ 10 ಗುಡಿಸಲು ಭಸ್ಮ; ಸ್ಥಳಕ್ಕೆ ಪರಮೇಶ್ವರ್‌ ಭೇಟಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20247 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20248 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌