Bengaluru News : ಕರುವಿನ ಮೇಲೆ ಕಾರು ಹತ್ತಿಸಿದ; ಚಕ್ರಕ್ಕೆ ಸಿಕ್ಕಿ ನರಳಾಡಿದರೂ ಬಿಡಲಿಲ್ಲ ಕಲಿಯುಗದ ಈ ರಾಕ್ಷಸ - Vistara News

ವೈರಲ್ ನ್ಯೂಸ್

Bengaluru News : ಕರುವಿನ ಮೇಲೆ ಕಾರು ಹತ್ತಿಸಿದ; ಚಕ್ರಕ್ಕೆ ಸಿಕ್ಕಿ ನರಳಾಡಿದರೂ ಬಿಡಲಿಲ್ಲ ಕಲಿಯುಗದ ಈ ರಾಕ್ಷಸ

ಮೂಕಪ್ರಾಣಿಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಲೇ ಇದೆ. ರಾಜಧಾನಿ ಬೆಂಗಳೂರಲ್ಲಿ (Bengaluru News ) ಮತ್ತೊಂದು ಅಮಾನವೀಯ ಘಟನೆಗೆ ಸಾಕ್ಷಿ ಆಗಿದೆ.

VISTARANEWS.COM


on

Bengaluru News Animals Assault
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ ಹಿಂದೊಮ್ಮೆ (Bengaluru News) ಮುತ್ತುರಾಯ ನಗರದ ಸಪ್ತಗಿರಿ ಲೇಔಟ್‌ ಹಾಗೂ ಯುನಿಟಿ ಬಿಲ್ಡಿಂಗ್‌ನ ಸಿಲ್ವರ್ ಜೂಬ್ಲಿ ಬ್ಲಾಕ್ ಮಿಷನ್ ರೋಡ್‌ನಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ (Animal Assault) ಕೊಂದಿದ್ದರು. ಇದೀಗ ದೇವರ ಸ್ವರೂಪದಂತೆ ಕಾಣುವ ಹಸುವಿನ ಮೇಲೆ ಕಾರು ಹತ್ತಿಸಿ ನಿರ್ದಯಿಯೊಬ್ಬ ಕ್ರೌರ್ಯ ಮೆರೆದಿದ್ದಾನೆ.

ಕಲಿಯುಗದ ರಾಕ್ಷಸನೊಬ್ಬ ಮೂಕ ಪ್ರಾಣಿಯ ಮೇಲೆ ದರ್ಪ ತೋರಿದ್ದಾನೆ. ಕಾರಲ್ಲಿ ಬಂದ ಹಂತಕ ಕರುವಿಗೆ ಡಿಕ್ಕಿ ಹೊಡೆದು ನಂತರ ಕಾರು ಹತ್ತಿಸಿದ್ದಾನೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ಘಟನೆ ನಡೆದಿದೆ. ಕರು ಚಕ್ರದಡಿ ಸಿಲುಕಿ ಕೂಗುತ್ತಿದ್ದರೂ ಕರುಣೆ ತೋರದ ಪಾಪಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ಮರಣ ವೇದನೆಯಿಂದ ನರಳಾಡಿದ ಕರುವಿನ ಹೊಟ್ಟೆಹಾಗೂ ಕಾಲಿನ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿದೆ. ವಾರದ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಪಾಪಿಯ ಕ್ರೌರ್ಯವು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಈ ಕೃತ್ಯಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಮೂಕಜೀವಿಗಳ ಮೇಲೆ ಇಂತಹ ಕ್ರೌರ್ಯ ತೋರಿಸುವುದು ಸರಿಯಲ್ಲ ಎಂದಿದ್ದಾರೆ. ಪ್ರಾಣಿಗಳ ಮೇಲೆ ದರ್ಪ ತೋರುವವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Love Failure: ಮದುವೆ ಆಗದಿದ್ದರೆ ಬಿಲ್ಡಿಂಗ್ ಮೇಲಿಂದ ಬಿದ್ದು ಸಾಯ್ತೀನಿ ಎಂದಳು ಇನ್ಸ್ಟಾಗ್ರಾಮ್ ಚೆಲುವೆ

ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ ನಿರ್ದಯಿ

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru News ) ಅಮಾನವೀಯ ಘಟನೆಗೆ ಸಾಕ್ಷಿ ಆಗಿತ್ತು.

Bengaluru News
ರಸ್ತೆಯಲ್ಲಿ ಮಲಗಿರುವ ಶ್ವಾನ

ನಿರ್ದಯಿಯೊಬ್ಬ ಮನೆ ಮುಂದೆ ಮಲಗಿದ್ದ ನಾಯಿ ಮೇಲೆ ಕಾರು ಚಲಾಯಿಸಿಕೊಂಡು ಹೋಗಿದ್ದ. ಉದ್ದೇಶ ಪೂರ್ವಕವಾಗಿಯೇ ನಾಯಿ ಮೇಲೆ ಕಾರು ಚಾಲನೆ ಮಾಡಲಾಗಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು

Bengaluru News
ಕಾರಿನಲ್ಲಿ ಬಂದ ನಿರ್ದಯಿ

ಕಾರು ಬರುವುದು ಅರಿವಿಗೆ ಬರುತ್ತಿದ್ದಂತೆ ಬೀದಿಯಲ್ಲಿ ಮಲಗಿದ್ದ ಶ್ವಾನ ಜಾಗ ಬಿಡಲು ಮುಂದಾಗಿತ್ತು. ಆದರೆ ನಾಯಿ ಏಳುವುದು ಕಾಣುತ್ತಿದ್ದಂತೆ ಕಾರಿನ ವೇಗ ಹೆಚ್ಚಿಸಿದ ದುಷ್ಕರ್ಮಿ ನಾಯಿ ಮೇಲೆ ಹರಿಸಿಕೊಂಡು ಹೋಗಿದ್ದ. ಕಾರಿಗೆ ಸಿಕ್ಕು ಒದ್ದಾಡಿದ ನಾಯಿ ಕ್ಷಣ ಮಾತ್ರದಲ್ಲಿಯೇ ಪ್ರಾಣ ಬಿಟ್ಟಿತ್ತು.

Bengaluru News
ಮಲಗಿದ್ದ ಶ್ವಾನದ ಮೇಲೆ ಕಾರು ಚಲಾಯಿಸಿಕೊಂಡು ಹೋದ ಪಾಪಿ

ಮುತ್ತುರಾಯ ನಗರದ ಸಪ್ತಗಿರಿ ಲೇಔಟ್‌ ಜನವರಿ 7ರಂದು ಬೆಳಗ್ಗೆ 11.10ರ ವೇಳೆಗೆ ಈ ದುರ್ಘಟನೆ ಸಂಭವಿಸಿತ್ತು. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Bengaluru News
ಚೀರಾಡಿದ ಶ್ವಾನ

ಜಿ ಸುಬ್ರಹ್ಮಣ್ಯ ಎಂಬುವವರ ಹೆಸರಲ್ಲಿ ರಿಜಿಸ್ಟರ್ ಆಗಿರುವ KA 05 MP 5836 ಸಂಖ್ಯೆಯ ಮಾರುತಿ ಸ್ವಿಫ್ಟ್ ಕಾರು ಎಂದು ತಿಳಿದು ಬಂದಿತ್ತು.

Bengaluru News
ಒದ್ದಾಡುತ್ತಲೆ ಮೃತಪಟ್ಟ ಶ್ವಾನ
Bengaluru News
ಶ್ವಾನದ ಕೂಗಾಟ ಕೇಳಿ ಓಡಿ ಬಂದ ಸ್ಥಳೀಯರು
Bengaluru News

ಇತ್ತ ಈ ಕೃತ್ಯಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಮೂಕಜೀವಿಗಳ ಮೇಲೆ ಇಂತಹ ಕ್ರೌರ್ಯ ತೋರಿಸುವುದು ಸರಿಯಲ್ಲ ಎಂದಿದ್ದರು.

ಬೆಂಗಳೂರು: ಮಲಗಿದ್ದ ಬೀದಿ ನಾಯಿಯ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru News) ಯುನಿಟಿ ಬಿಲ್ಡಿಂಗ್‌ನ ಸಿಲ್ವರ್ ಜೂಬ್ಲಿ ಬ್ಲಾಕ್ ಮಿಷನ್ ರೋಡ್ ಬಳಿ ನಡೆದಿತ್ತು.

ಕಳೆದ ಜ. 25ರಂದು ಅಮಾನವೀಯ ಘಟನೆ ನಡೆದಿದ್ದು, ನಾಯಿ ಮೇಲೆ ಕಾರು ಹತ್ತಿಸುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಾರ್ಕಿಂಗ್‌ ಜಾಗದಲ್ಲಿ ನಾಲ್ಕೈದು ಶ್ವಾನಗಳು ಒಂದೆಡೆ ಇದ್ದರೆ, ಇನ್ನೊಂದು ಶ್ವಾನವು ಮಲಗಿತ್ತು. ಪಾರ್ಕಿಂಗ್‌ನಿಂದ ಕಾರು ತೆಗೆದ ಚಾಲಕ ಏಕಾಏಕಿ ಮಲಗಿದ್ದ ಶ್ವಾನದ ಸಮೀಪ ಬಂದಿದ್ದಾನೆ. ಕಾರಿನ ಶಬ್ಧಕ್ಕೆ ಎದ್ದೇಳಲು ಮುಂದಾಗುವಷ್ಟರಲ್ಲಿ ನಾಯಿ ಮೇಲೆ ಕಾರನ್ನು ಹಾಯಿಸಿದ್ದಾನೆ.

ನಾಯಿ ಮೇಲೆ ಕಾರಿನ ಮುಂದಿನ ಟಯರ್ ಹರಿದ ಪರಿಣಾಮ ನರಳಾಡಿ ನರಳಾಡಿ ಸಾವನ್ನಪ್ಪಿತ್ತು. ಸದ್ಯ ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಇದು ಚಾಲಕನ ಅರಿವಿಗೆ ಬಾರದೆ ಸಂಭವಿಸಿದ ಘಟನೆಯಾ ಅಥವಾ ಬೇಕಂತಲೇ ಮಲಗಿದ್ದ ನಾಯಿ ಮೇಲೆ ಕಾರನ್ನು ಹತ್ತಿಸಿದ್ದನ್ನಾ? ಎಂಬುದು ತನಿಖೆಯಿಂದ ತಿಳಿಯಬೇಕಿದೆ. ಸಿಸಿ ಟಿವಿಯಲ್ಲಿ ಸೆರೆಯಾಗಿರುವ ದೃಶ್ಯವು ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

Zameer Ahmed Khan‌: ಗೋಕಾಕ್ ನಗರದಲ್ಲಿ‌ ನಡೆದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಜಮೀರ್‌ ಅಹ್ಮದ್‌ ಅವರು ಭಾಷಣ ಮಾಡುತ್ತಿದ್ದಾಗ, ಡಯಾಸ್‌ ಮೇಲೆ ಗುದ್ದಿ ಗಾಜನ್ನು ಪುಡಿಪುಡಿ ಮಾಡಿದ್ದಾರೆ.

VISTARANEWS.COM


on

Zameer Ahmed Khan‌
Koo

ಬೆಳಗಾವಿ: ರೋಷಾವೇಶವಾಗಿ ಭಾಷಣ ಮಾಡುವ ವೇಳೆ ಸಚಿವ ಜಮೀರ್ ಅಹ್ಮದ್‌ ಅವರು ಕೈಯಿಂದ ಗುದ್ದಿ ಡಯಾಸ್‌ ಗಾಜನ್ನು ಪುಡಿ ಪುಡಿ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಗೋಕಾಕ್ ನಗರದಲ್ಲಿ‌ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಕೈ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಜಮೀರ್‌ ಅಹ್ಮದ್‌ (Zameer Ahmed Khan‌) ಅವರು ಭಾಷಣ ಮಾಡುತ್ತಿದ್ದರು. ಈ ವೇಳೆ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕುತ್ತಾ ಡಯಾಸ್‌ ಮೇಲೆ ಗುದ್ದಿದ್ದರಿಂದ ಗಾಜು ಪುಡಿಪುಡಿಯಾಗಿದ್ದು, ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಗೋಕಾಕ್‌ ಕೆಜಿಎನ್ ಹಾಲ್‌ ಶನಿವಾರ ನಡೆದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಘಟನೆ ನಡೆದಿದೆ. ಭಾಷಣದ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಜಮೀರ್‌ ಅಹ್ಮದ್‌ ಅವರು, ಮುಸ್ಲಿಮರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು. ಎದೆಗೆ ಗುಂಡು ತಿಂದು ಸ್ವಾತಂತ್ರ್ಯವನ್ನು ತಂದು ಕೊಟ್ಟಿದ್ದಾರೆ. ಆದರೆ, ಬಿಜೆಪಿಯವರು ಕೋಮು ದ್ವೇಷ ಬಿತ್ತಲು ಮುಂದಾಗುತ್ತಾರೆ ಎಂದು ಆರೋಪಿಸಿದರು.

ಸಾರೇ ಜಹಾಂಸೇ ಅಚ್ಚಾ, ನಾವೆಲ್ಲ ಒಂದು, ದೇಶ ಹಮಾರಾ ಹೈ ಹಮಾರಾ ಹೈ ಎನ್ನುತ್ತಾ ಜಮೀರ್ ಅವರು ಕೈಯಿಂದ ಡಯಾಸ್ ಗಾಜಿಗೆ ಗುದ್ದಿದ್ದಾರೆ. ಜಮೀರ್ ಗುದ್ದುತ್ತಿದ್ದಂತೆಯೇ ಡಯಾಸ್‌ಗೆ ಅಳವಡಿಸಿದ ಗಾಜು ಒಡೆದು ಚೂರು ಚೂರಾಗಿದೆ. ಈ ವೇಳೆ ಅಲ್ಲೆ ನೆರೆದಿದ್ದ ಕಾರ್ಯಕರ್ತರು ಕೂಗ ತೊಡಗಿದರು. ಗಾಜು ಒಡೆದರೂ ಸಚಿವರು ಮಾತ್ರ ತಮ್ಮ ಭಾಷಣ ಮುಂದುವರೆಸಿದ್ದು ಕಂಡುಬಂತು.

ಇವ್ರು ನಮ್ಮ ಪ್ರಧಾನಿ ಮೋದಿ ಅಲ್ಲ; ಪಾನಿಪುರಿ ಮಾರೋ ಈ ಮೋದಿ ಫುಲ್‌ ಫೇಮಸ್‌

ಗುಜರಾತ್‌: ದೇಶಾದ್ಯಂತ ಲೋಕಸಭೆ ಚುನಾವಣೆ ರಂಗೇರಿದೆ. ಅಬ್ಬರದ ಪ್ರಚಾರ, ಪ್ರತಿಪಕ್ಷಗಳಿಗೆ ಟಾಂಗ್‌ ಕೊಡುತ್ತಾ ಒಂದೆಡೆ ಪ್ರಧಾನಿ ಮೋದಿ ಬ್ಯುಸಿ ಆಗಿದ್ದರೆ, ಮತ್ತೊಂದೆಡೆ ಗುಜರಾತ್‌ನಲ್ಲೊಬ್ಬ ಮೋದಿ ಪಾನಿಪುರಿ(Viral video) ಮಾರುತ್ತಾ ಎಲ್ಲರನ್ನು ತನ್ನತ್ತ ಸೆಳೆಯುತ್ತಿದ್ದಾನೆ. ಒಂದು ಕ್ಷಣ ನೋಡೋರಿಗೆ ಪ್ರಧಾನಿ ಮೋದಿಯೇ ಪಾನಿಪುರಿ ಮಾರುತ್ತಿದ್ದಾರೋ ಅಂತ ಅನಿಸೋದು ಪಕ್ಕಾ! ಗುಜರಾತ್‌ನ ಆನಂದ್‌ನಲ್ಲಿ ಪಾನಿಪುರಿ ಅಂಗಡಿ(Pani puri seller) ನಡೆಸುತ್ತಿರುವ ಅನಿಲ್‌ ಭಾಯಿ ಠಕ್ಕರ್‌ ಪ್ರಧಾನಿ ನರೇಂದ್ರ ಮೋದಿ(Narendra Modi) ಯಂತೆ ಉಡುಪು ತೊಟ್ಟು, ಕನ್ನಡಕ ಧರಿಸಿ, ಹೇರ್‌ಸ್ಟೈಲ್‌ ಮಾಡಿಕೊಂಡು ಸ್ಥಳೀಯ ಮಟ್ಟದಲ್ಲಿ ಮೋದಿ ಎಂದೇ ಫುಲ್‌ ಫೇಮಸ್‌ ಆಗಿದ್ದಾರೆ.

ಬಿಳಿ ಗಡ್ಡ, ಕೇಶ ವಿನ್ಯಾಸ ಆತನ ಹಾವಭಾವ ಪ್ರಧಾನಿ ಮೋದಿಗೆ ಹೋಲುತ್ತಿರುವ ಠಕ್ಕರ್‌, ಮೂಲತಃ ಜುನಾಗಢ್‌ ನಿವಾಸಿ. ಅವರು ತಮ್ಮ 18ನೇ ವಯಸ್ಸಿನಿಂದಲೂ ತುಳಸಿ ಪಾನಿ ಪುರಿ ಎಂಬ ಅಂಗಡಿಯನ್ನು ನಡೆಸುತ್ತಿದ್ದಾರೆ. ಈ ಅಂಗಡಿಯನ್ನು ಅವರ ತಾತ ಶುರು ಮಾಡಿದ್ದರು ಎಂಬುದು ವಿಶೇಷ. ಇನ್ನು ಮೋದಿಯಂತೆ ಕಾಣುತ್ತಿರುವ ಠಕ್ಕರ್‌ ಅವರ ವಿಶೇಷ ಲುಕ್‌ಗೆ ಮನಸೋತಿರುವ ಗ್ರಾಹಕರು ಅವರ ಬಳಿ ಬಂದು ಪಾನಿಪುರಿ ತಿಂದು ಸೆಲ್ಫಿ ಕ್ಲಿಕ್ಕಿಸಿಕೊಂಡು ಹೋಗುತ್ತಿದ್ದಾರೆ.

ಸುಮಾರು 71 ವರ್ಷದ ಠಕ್ಕರ್‌ ಪ್ರಧಾನಿ ನರೇಂದ್ರ ಮೋದಿಯ ಅಪ್ಪಟ ಅಭಿಮಾನಿ. ಅವರ ಸ್ವಚ್ಛ ಭಾರತ ಅಭಿಯಾನದಿಂದ ಬಹಳಷ್ಟು ಸ್ಫೂರ್ತಿಗೊಂಡಿರುವ ಠಕ್ಕರ್‌ ತಮ್ಮ ಅಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುತ್ತಾರೆ. ತಮ್ಮ ವಿಶೇಷ ಲುಕ್‌ ಬಗ್ಗೆ ಪ್ರತಿಕ್ರಿಯಿಸಿರುವ ಠಕ್ಕರ್‌, ನನ್ನ ಪ್ರಧಾನಿ ಮೋದಿಯ ಲುಕ್‌ ಬಗ್ಗೆ ಜನ ಅತ್ಯಂತ ಪ್ರೀತಿ ತೋರುತ್ತಿದ್ದಾರೆ. ಸ್ಥಳೀಯರು ಮತ್ತು ಪ್ರವಾಸಿಗರು ನನ್ನ ಬಳಿ ಬಂದು ಸೆಲ್ಫಿ ತೆಗೆದುಕೊಂಡು ಹೋಗುವುದು ಬಹಳ ಸಂತೋಷ ಕೊಡುತ್ತಿದೆ. ಅವರ ಪ್ರೀತಿ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Mamata Banerjee: ಹೆಲಿಕಾಪ್ಟರ್‌ ಏರುವಾಗ ಬಿದ್ದ ಮಮತಾ ಬ್ಯಾನರ್ಜಿ, ಗಾಯ

ಇನ್ನು ಠಕ್ಕರ್‌ ಮಾತ್ರವಲ್ಲ ಮುಂಬೈನಲ್ಲೂ ಮತ್ತೋರ್ವ ವ್ಯಕ್ತಿಯೂ ಪ್ರಧಾನಿ ಮೋದಿಯಂತೆ ತನ್ನ ಸ್ಟೈಲ್‌ ಅನ್ನು ಬದಲಿಸಿಕೊಂಡು ಫುಲ್‌ ಫೇಮಸ್‌ ಆಗಿದ್ದಾನೆ. ಮುಂಬೈನ ವಿಕಾಸ್‌ ಮಹಂತೆ ಎಂಬಾತ ಗರ್ಬಾ ಡಾನ್ಸ್‌ ಮಾಡುತ್ತಿರುವ ವಿಡಿಯೋ ಫೇಮಸ್‌ ಆಗಿತ್ತು. ಇದು ಪ್ರಧಾನಿ ಮೋದಿಯ ಡೀಪ್‌ ಫೇಕ್‌ ವಿಡಿಯೋ ಎನ್ನಲಾಗಿತ್ತು. ಆದಾದ ಬಳಿಕ ಸ್ವತಃ ವಿಕಾಸ್‌ ಮಹಾಂತೆ ವಿಡಿಯೋದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ತಾವೊಬ್ಬ ಪ್ರಧಾನಿ ಮೋದಿಯ ಅಭಿಯಾನಿ. ಆ ವಿಡಿಯೋ ಸ್ವತಃ ತನ್ನದೇ ಎಂದು ಹೇಳಿದ್ದರು. ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಆಗಾಗ ಜೂನಿಯರ್‌ ಮೋದಿಗಳು ಗಮನ ಸೆಳೆಯುತ್ತಿರುತ್ತಾರೆ. ಆದರೆ ಇದೀಗ ಪಾನಿಪುರಿ ಮಾರುತ್ತಿರುವ ಮೋದಿಯನ್ನು ಕಂಡು ಜನಕ್ಕೆ ಖುಷಿಯೋ ಖುಷಿ.





Continue Reading

ವೈರಲ್ ನ್ಯೂಸ್

Viral News: ಅಪ್ರಾಪ್ತ ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಗೂಸಾ

Viral News: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಹಿಂದು ಹುಡುಗಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಸ್ಥಳೀಯರು ತಕ್ಕ ಪಾಠ ಕಲಿಸಿದ್ದಾರೆ. ಮೊಬೈಲ್‌ ಅಂಗಡಿ ಇಟ್ಟುಕೊಂಡಿರುವ ಆರೋಪಿ ಅಥರುದ್ದೀನ್‌ ರೀಚಾರ್ಜ್‌ಗಾಗಿ ತನ್ನ ಬಳಿಗೆ ಬರುವ ಹಿಂದು ಹುಡುಗಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ. ಈ ಬಗ್ಗೆ ಸಂತ್ರಸ್ತ ಅಪ್ರಾಪ್ತ ಬಾಲಕಿಯೊಬ್ಬರ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಇನ್ನು ಈತನ ವರ್ತನೆ ಬಗ್ಗೆ ಅನುಮಾನಗೊಂಡಿದ್ದ ಸ್ಥಳೀಯರು ಅಂಗಡಿಗೆ ದಾಳಿ ನಡೆಸಿ ಆತನಿಗೆ ಥಳಿಸಿದ್ದಾರೆ. ಸದ್ಯ ಘಟನೆಯ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Viral News
Koo

ಡೆಹ್ರಾಡೂನ್: ಒಂದಷ್ಟು ಜನರ ಗುಂಪು ಮೊಬೈಲ್‌ ಅಂಗಡಿಯಾತನನ್ನು ರಸ್ತೆಗೆಳೆದು ಸರಿಯಾಗಿ ಥಳಿಸುತ್ತಾರೆ. ಮಹಿಳೆಯರೂ ಆತನಿಗೆ ಧರ್ಮದೇಟು ನೀಡುತ್ತಾರೆ. ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಈ ಘಟನೆಯ ವಿಡಿಯೊ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಅಷ್ಟಕ್ಕೂ ಜನರ ಗುಂಪು ಯಾಕೆ ಮೊಬೈಲ್‌ ಅಂಗಡಿಯಾತನನ್ನು ಥಳಿಸಿದ್ದು? ಏನಿದು ಘಟನೆ? ನಿಮ್ಮ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ (Viral News).

ಘಟನೆಯ ಹಿಂದೆ ಲವ್‌ ಜಿಹಾದ್‌ನ ಶಂಕೆ ವ್ಯಕ್ತವಾಗುತ್ತಿದೆ. ಹಲ್ಲೆಗೊಳಗಾದ ಮುಸ್ಲಿಂ ಯುವ ಲವ್‌ ಜಿಹಾದ್‌ಗೆ ಪ್ರಯತ್ನಿಸುತ್ತಿದ್ದ. ಅದನ್ನು ರೆಡ್‌ ಹ್ಯಾಂಡಾಗಿ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ (ಏಪ್ರಿಲ್ 25) ಈ ಘಟನೆ ನಡೆದಿದೆ.

ಅನಿಲ್ ಶರ್ಮಾ ಎನ್ನುವವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ 1.39 ನಿಮಿಷಗಳ ಈ ವಿಡಿಯೊ ಹಂಚಿಕೊಂಡಿದ್ದಾರೆ. “ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಘಟನೆ ಇದು. ಹಿಂದೂಗಳು ಮುಸ್ಲಿಮರಿಗೆ ಅಂಗಡಿಗಳನ್ನು ಬಾಡಿಗೆಗೆ ನೀಡುತ್ತಾರೆ. ಬಳಿಕ ಮುಸ್ಲಿಮರು ಲವ್‌ ಜಿಹಾದ್‌ ಆರಂಭಿಸುತ್ತಾರೆ. ಇಲ್ಲೂ ಆಗಿದ್ದು ಅದೇ. ಮೊಬೈಲ್ ಅಂಗಡಿಯನ್ನು ನಡೆಸುತ್ತಿದ್ದ ಆರೋಪಿ ಅಥರುದ್ದೀನ್‌ ರೀಚಾರ್ಜ್‌ಗಾಗಿ ತನ್ನ ಬಳಿಗೆ ಬರುವ ಹಿಂದು ಹುಡುಗಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ” ಎಂದು ಅವರು ಬರೆದುಕೊಂಡಿದ್ದಾರೆ.

ಘಟನೆಯ ವಿವರ

ಈ ಪ್ರಕರಣವು ಹಲ್ದ್ವಾನಿಯ ಕೊಟ್ವಾಲಿಯಲ್ಲಿ ನಡೆದಿದೆ. ಅಲ್ಲಿ ವಾಸಿಸುವ ಮಹಿಳೆಯೊಬ್ಬರು ಏಪ್ರಿಲ್ 25ರಂದು ಪೊಲೀಸರಿಗೆ ದೂರು ನೀಡಿದ್ದು, ತನ್ನ 17 ವರ್ಷದ ಮಗಳು ಕೆಲವು ದಿನಗಳ ಹಿಂದೆ ಮೊಬೈಲ್ ಫೋನ್ ರೀಚಾರ್ಜ್ ಮಾಡಲು ಅಥರುದ್ದೀನ್‌ನ ‘ದೆಹಲಿ ಮೊಬೈಲ್ ಶಾಪ್’ ತೆರಳಿದ್ದಳು. ಬಳಿಕ ಆತ ಮಗಳ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ ಕಳುಹಿಸಲು ಆರಂಭಿಸಿದ್ದ ಎಂದು ಆರೋಪಿಸಿದ್ದರು. ಜತೆಗೆ ಮೆಸೇಜ್‌ನ ಸ್ಕ್ರೀನ್‌ ಶಾಟ್‌ ಒದಗಿಸಿದ್ದರು.

ಅಪ್ರಾಪ್ತ ಬಾಲಕಿ ಸಂದೇಶಗಳಲ್ಲಿ ಅಥರುದ್ದೀನ್‌ನನ್ನು ಪದೇ ಪದೆ ‘ಸಹೋದರ’ ಎಂದೇ ಕರೆದಿರುವುದು ಕಂಡು ಬಂದಿದೆ. ಆದಾಗ್ಯೂ ಅವನು ಆಕೆ ಸಹೋದರ ಎಂದು ಕರೆಯುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ. ಮಾತ್ರವಲ್ಲ ತನ್ನೊಂದಿಗೆ ಸ್ನೇಹ ಬೆಳೆಸಲು ಒತ್ತಾಯಿಸಿದ್ದ. ತನ್ನ ಕನಸಿನಲ್ಲಿ ನಿನ್ನನ್ನು ನೋಡಿದ್ದೇನೆ ಎಂದೂ ಪೂಸಿ ಹೊಡೆದಿದ್ದ. ತನ್ನನ್ನು ಸಿಖ್ ಎಂದು ಉಲ್ಲೇಖಿಸುವ ಮೂಲಕ ಅಪ್ರಾಪ್ತ ಬಾಲಕಿಯನ್ನು ಮೋಸಗೊಳಿಸಲು ಪ್ರಯತ್ನಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇಲ್ಲಿಗೇ ಮುಗಿದಿಲ್ಲ

ಅಥರುದ್ದೀನ್‌ ಕಿರುಕುಳ ಅಲ್ಲಿಗೆ ನಿಂತಿರಲಿಲ್ಲ. ಆತ ಅವಳನ್ನು ಕಾಲೇಜು ನಿಲ್ದಾಣದವರೆಗೂ ಹಿಂಬಾಲಿಸಿದ್ದ. ಜತೆಗೆ ದಾರಿಯಲ್ಲಿ ಅವಳ ಕೈಯನ್ನು ಹಿಡಿಯಲು ಪ್ರಯತ್ನಿಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆತನ ಕಿರುಕುಳದಿಂದ ಮಗಳು ಭಯಗೊಂಡಿದ್ದಾಳೆ ಮತ್ತು ಮಾನಸಿಕ ಖಿನ್ನತೆಗೆ ಜಾರಿದ್ದಾಳೆ. ಸರಿಯಾಗಿ ಊಟವನ್ನೂ ಮಾಡುತ್ತಿಲ್ಲ ಎಂದು ಮಹಿಳೆ ಬಹಿರಂಗಪಡಿಸಿದ್ದಾರೆ. ದೂರಿನಲ್ಲಿ ಮುಸ್ಲಿಂ ಯುವಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸದ್ಯ ಪೊಲೀಸರು ಅಥರುದ್ದೀನ್‌ನನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತನಿಖೆ ಆರಂಭವಾಗಿದೆ.

ಇದನ್ನೂ ಓದಿ: Love jihad? : ಮೆಸೇಜ್‌ನಲ್ಲೇ ಹಿಂದು ಯುವತಿಯರನ್ನು ಸೆಳೆಯುತ್ತಿದ್ದ ಖದೀಮ ಫಯಾಜ್‌ಗೆ ಗೂಸಾ!

ಇತರರೊಂದಿಗೂ ಇದೇ ವರ್ತನೆ

ಘಟನೆ ಬಗ್ಗೆ ಬಜರಂಗ ದಳದ ಕಾರ್ಯಕರ್ತ ಜೋಗಿಂದರ್‌ ಸಿಂಗ್‌ ರಾಣಾ ಹೆಚ್ಚಿನ ಮಾಹಿತಿ ನೀಡಿದ್ದಾರೆ. ʼʼಆರೋಪಿ ಅಥರುದ್ದೀನ್‌ ಹಲ್ದ್ವಾನಿಯ ಮಖಾನಿ ರಸ್ತೆಯಲ್ಲಿ ತನ್ನ ಕುಟುಂಬದೊಂದಿಗೆ ವಾಸವಾಗಿದ್ದಾನೆ. ಈತ ಸಂತ್ರಸ್ತೆಗಿಂತ 10 ವರ್ಷ ಹಿರಿಯವನು. ತನ್ನ ತಂಗಿಯ ವಯಸ್ಸಿನ ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ್ದಾನೆʼʼ ಎಂದು ಹೇಳಿದ್ದಾರೆ. ʼʼಅಲ್ಲದೆ ಅಂಗಡಿ ನಡೆಸಲು ಆತನ ಬಳಿ ಸೂಕ್ತ ದಾಖಲೆಗಳೇ ಇಲ್ಲ. ಅಲ್ಲದೆ ಆತನ ಮೊಬೈಲ್‌ನಲ್ಲಿ ಇನ್ನೂ ಅನೇಕ ಹಿಂದೂ ಹುಡುಗಿಯರ ಸಂಖ್ಯೆಗಳು ಕಂಡು ಬಂದಿವೆ. ಅವರೊಂದಿಗೆ ಅಶ್ಲೀಲವಾಗಿ ಚಾಟ್‌ ನಡೆಸಿರುವುದು ಕೂಡ ತಿಳಿದು ಬಂದಿದೆʼʼ ಎಂದು ಜೋಗಿಂದರ್‌ ಸಿಂಗ್‌ ರಾಣಾ ಹೇಳಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

Viral News: ಆಘಾತಕಾರಿ ಘಟನೆಯೊಂದರಲ್ಲಿ ಅತೀ ವೇಗವಾಗಿ ಸಾಗಿದ ಪಿಕ್‌ಅಪ್‌ ವಾಹನವೊಂದು ಸೈಕಲ್‌ ಸವಾರಿಗೆ ಗುದ್ದಿ ದೇಹವನ್ನು ಸುಮಾರು 2 ಕಿ.ಮೀ.ಯಷ್ಟು ದೂರು ರಸ್ತೆಯಲ್ಲಿ ಎಳೆದುಕೊಂಡು ಹೋಗಿದೆ. ಹರಿಯಾಣದ ರಾಷ್ಟ್ರೀಯ ಹೆದ್ದಾರಿ 9ರ ಪನ್ನಿವಾಲಾ ಮೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಪಿಕ್‌ಅಪ್‌ ಚಾಲಕನಿಗೆ ಸ್ಥಳೀಯರು ಥಳಿಸಿದ್ದು, ಆತನ ವಿರುದ್ಧ ದೂರು ದಾಖಲಾಗಿದೆ.

VISTARANEWS.COM


on

Viral News
Koo

ಚಂಡಿಗಢ: ಆಘಾತಕಾರಿ ಘಟನೆಯೊಂದರಲ್ಲಿ ಅತೀ ವೇಗವಾಗಿ ಸಾಗಿದ ಪಿಕ್‌ಅಪ್‌ ವಾಹನವೊಂದು ಸೈಕಲ್‌ ಸವಾರಿಗೆ ಗುದ್ದಿ ದೇಹವನ್ನು ಸುಮಾರು 2 ಕಿ.ಮೀ.ಯಷ್ಟು ದೂರು ರಸ್ತೆಯಲ್ಲಿ ಎಳೆದುಕೊಂಡು ಹೋಗಿದೆ. ಸದ್ಯ ಈ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದ್ದು, ನೆಟ್ಟಿಗರು ಶಾಕ್‌ಗೆ ಒಳಗಾಗಿದ್ದಾರೆ. ಹರಿಯಾಣದ ರಾಷ್ಟ್ರೀಯ ಹೆದ್ದಾರಿ 9ರ ಪನ್ನಿವಾಲಾ ಮೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಿಕ್‌ಅಪ್‌ನ ಹಿಂದಿದ್ದ ವಾಹನವೊಂದರಲ್ಲಿದ್ದ ವ್ಯಕ್ತಿಗಳು ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಬಳಿಕ ಪಿಕ್‌ ಅಪ್‌ ಅನ್ನು ನಿಲ್ಲಿಸಿ ಚಾಲಕ ಮತ್ತು ಸಹಾಯಕನಿಗೆ ಥಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಕರ್ಮ್ಘರ್ ಗ್ರಾಮದ 50 ವರ್ಷದ ಗುರ್‌ನಾಮ್‌ ಸಿಂಗ್ ಎಂದು ಗುರುತಿಸಲಾಗಿದೆ. ಪನ್ನಿವಾಲಾ ಮೋಟಾದಿಂದ ತನ್ನ ಗ್ರಾಮಕ್ಕೆ ಸೈಕಲ್‌ನಲ್ಲಿ ಹಿಂದಿರುಗುತ್ತಿದ್ದಾಗ ಹೆದ್ದಾರಿಯ ಪೊಲೀಸ್ ಚೆಕ್‌ ಪಾಯಿಂಟ್‌ ಬಳಿ ಪಿಕ್‌ಅಪ್‌ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ವಾಹನದ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದರು. ಬಳಿಕ ಪಿಕ್‌ಅಪ್‌ ಅವರನ್ನು ಎಳೆದುಕೊಂಡು ವೇಗವಾಗಿ ಸಾಗಿದೆ. ಪಿಕ್‌ಅಪ್‌ನ ಹಿಂದಿನ ಟ್ರಕ್ ಚಾಲಕ ಸಿಗ್ನಲ್ ಮಾಡಿದರೂ ನಿಲ್ಲಿಸಿಲ್ಲ.

ಅಂತಿಮವಾಗಿ ಟ್ರಕ್ ಚಾಲಕ ಪಿಕ್‌ಅಪ್‌ ಮುಂದೆ ಅಡ್ಡಲಾಗಿ ನಿಲ್ಲಿಸಬೇಕಾಯಿತು. ಈ ಮೂಲಕ ಪಿಕ್‌ಅಪ್‌ ಅನ್ನು ತಡೆಯುವಲ್ಲಿ ಯಶಸ್ವಿಯಾದರು. ನಂತರ ಅವರು ಗಾಯಗೊಂಡ ಸೈಕಲ್‌ ಸವಾರನನ್ನು ಪಿಕ್‌ಅಪ್‌ ಅಡಿಯಿಂದ ಹೊರಗೆ ಎಳೆದರು. ಈ ವೇಳೆ ಗುರ್‌ನಾಮ್‌ ಸಿಂಗ್ ವೈಯೆಲ್ಲ ರಕ್ಷಸಿಕ್ತವಾಗಿತ್ತು. ಏತನ್ಮಧ್ಯೆ ಸ್ಥಳದಲ್ಲಿದ್ದವರು ಕೋಪಗೊಂಡ ಪಿಕ್‌ಅಪ್‌ ಚಾಲಕ ಹೊಡೆದಿದ್ದಾರೆ. ಈ ದೃಶ್ಯಗಳೆಲ್ಲ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಗುರ್‌ನಾಮ್‌ ಸಿಂಗ್ ಅವರನ್ನು ಆಂಬ್ಯುಲೆನ್ಸ್‌ ಮೂಲಕ ಸಮೀಪದ ಆಸ್ಪತ್ರಗೆ ದಾಖಲಿಸಲಾಯಿತು. ಆದರೆ ಅವರ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಗುರ್‌ನಾಮ್‌ ಸಿಂಗ್ ಅವರ ಸಂಬಂಧಿಕರ ಹೇಳಿಕೆ ಆಧಾರದಲ್ಲಿ ಪಿಕ್‌ಅಪ್‌ ಚಾಲಕನ ವಿರುದ್ಧ ಕೊಲೆಯ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಘಟನೆ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

ಹೈದರಾಬಾದ್‌ನಲ್ಲಿಯೂ ನಡೆದಿತ್ತು

ಕೆಲವು ದಿನಗಳ ಹಿಂದೆ ಇಂತಹದ್ದೇ ಘಟನೆ ಹೈದರಾಬಾದ್‌ನಲ್ಲಿಯೂ ನಡೆದಿತ್ತು. ಬೈಕ್‌ ಸವಾರ ಅತ್ಯಂತ ಸಾಹಸಿಕವಾಗಿ ಅಂದು ಪಾರಾಗಿದ್ದ. ಆ ಘಟನೆಯ ವಿಡಿಯೊ ಕೂಡ ವೈರಲ್‌ ಆಗಿತ್ತು. ಅಂದು ವೇಗವಾಗಿ ಚಲಿಸುತ್ತಿದ್ದ ಲಾರಿ ಜನನಿಬಿಡ ರಸ್ತೆಯಲ್ಲಿ ತನ್ನ ಮುಂಭಾಗದ ಟೈರ್ ಕೆಳಗೆ ಮೋಟಾರ್ ಸೈಕಲ್ ಅನ್ನು ಎಳೆದುಕೊಂಡು ಹೋಗುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿತ್ತು. ಅದೃಷ್ಟವಶಾತ್‌ ಬೈಕ್‌ ಸವಾರ ಪಾರಾಗಿ ಲಾರಿಯ ಸ್ಟೆಪ್‌ನಲ್ಲಿ ನಿಂದುಕೊಂಡಿದ್ದ. ವೇಗವಾಗಿ ಸಾಗುತ್ತಿದ್ದ ಲಾರಿ ಬೈಕ್‌ ಅನ್ನು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿತ್ತು. ಈ ವೇಳೆ ಬೈಕ್‌ ಮತ್ತು ರಸ್ತೆಯ ಘರ್ಷಣೆಯಿಂದ ಬೆಂಕಿ ಹತ್ತಿಕೊಳ್ಳುವುದು ಕೂಡ ವಿಡಿಯೊದಲ್ಲಿ ಸೆರೆಯಾಗಿತ್ತು. ಬಳಿಕ ಬೈಕ್‌ ಚೂರು ಚೂರಾಗಿತ್ತು. ಹಾಗಿದ್ದರೂ ಚಾಲಕ ಲಾರಿಯನ್ನು ನಿಲ್ಲಿಸಿರಲಿಲ್ಲ. ಲಾರಿಯ ಹಿಂದಿನಿಂದ ಬರುತ್ತಿದ್ದ ಪ್ರಯಾಣಿಕರು ವಿಡಿಯೊವನ್ನು ಸೆರೆ ಹಿಡಿದಿದ್ದರು. ಕೊನೆಗೆ ಲಾರಿ ಚಾಲಕ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

Continue Reading

ದೇಶ

Road Accident: ಅಮೆರಿಕದಲ್ಲಿ ಭೀಕರ ಅಪಘಾತ, 20 ಅಡಿ ಎತ್ತರ ಜಿಗಿದ ಕಾರು; 3 ಭಾರತೀಯ ಮಹಿಳೆಯರ ಸಾವು

Road Accident: ಗ್ರೀನ್‌ವಿಲ್ಲೆ ಕೌಂಟಿ ಕರೋನರ್ ಆಫೀಸ್‌ನ ಪ್ರಕಾರ, ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ SUV, ಎಲ್ಲಾ ಲೇನ್‌ಗಳನ್ನು ದಾಟಿ, ಒಡ್ಡುಗಳನ್ನು ಏರಿತು ಮತ್ತು ಗಾಳಿಯಲ್ಲಿ ಕನಿಷ್ಠ 20 ಅಡಿಗಳಷ್ಟು ಮೇಲೆ ಹಾರಿ ಸೇತುವೆಯ ಎದುರು ಭಾಗದಲ್ಲಿರುವ ಮರಗಳಿಗೆ ಅಪ್ಪಳಿಸಿತು.

VISTARANEWS.COM


on

car accident USA
Koo

ನ್ಯೂಯಾರ್ಕ್‌: ಅಮೇರಿಕಾದಲ್ಲಿ (US) ನಡೆದ ಭೀಕರ ಕಾರು ಅಪಘಾತ ಒಂದರಲ್ಲಿ (Road Accident) ಗುಜರಾತ್‌ನ ಮೂವರು ಮಹಿಳೆಯರು (Women killed) ಸಾವನ್ನಪ್ಪಿದ್ದಾರೆ. ಗುಜರಾತ್‌ನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ನಡೆದ ಅಪಘಾತದಲ್ಲಿ (Car accident) ಮೃತಪಟ್ಟವರು.

ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ಅವರು ವೇಗವಾಗಿ ಎಸ್‌ಯುವಿ ಚಲಾಯಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಗ್ರೀನ್‌ವಿಲ್ಲೆ ಕೌಂಟಿ ಕರೋನರ್ ಆಫೀಸ್‌ನ ಪ್ರಕಾರ, ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ SUV, ಎಲ್ಲಾ ಲೇನ್‌ಗಳನ್ನು ದಾಟಿ, ಒಡ್ಡುಗಳನ್ನು ಏರಿತು ಮತ್ತು ಗಾಳಿಯಲ್ಲಿ ಕನಿಷ್ಠ 20 ಅಡಿಗಳಷ್ಟು ಮೇಲೆ ಹಾರಿ ಸೇತುವೆಯ ಎದುರು ಭಾಗದಲ್ಲಿರುವ ಮರಗಳಿಗೆ ಅಪ್ಪಳಿಸಿತು.

“ಅವರು ನಿಗದಿಪಡಿಸಲಾದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿ ಪ್ರಯಾಣಿಸುತ್ತಿದ್ದರು ಎಂಬುದು ಸ್ಪಷ್ಟವಾಗಿದೆ” ಎಂದು ಮುಖ್ಯ ಉಪ ಕರೋನರ್ ಮೈಕ್ ಎಲ್ಲಿಸ್ ತಿಳಿಸಿದರು. ಬೇರೆ ಯಾವುದೇ ಕಾರುಗಳು ಅಪಘಾತದಲ್ಲಿ ಭಾಗಿಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಾರು ಮರದ ಮೇಲೆ ಸಿಲುಕಿಕೊಂಡಿದ್ದು, ಹಲವು ತುಂಡುಗಳಾಗಿ ಛಿದ್ರಗೊಂಡಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚೂರುಗಳು ಚೆಲ್ಲಿದ್ದು, ಡಿಕ್ಕಿ ಹೊಡೆದ ವೇಗಕ್ಕೆ ಸಾಕ್ಷಿಯಾಗಿದೆ.

“ರಸ್ತೆಮಾರ್ಗವನ್ನು ಅತಿ ವೇಗದಲ್ಲಿ ಬಿಟ್ಟು ಜಿಗಿಯುವ ವಾಹನಗಳು ವಿರಳ. ಇದು 4-6 ಲೇನ್ ಟ್ರಾಫಿಕ್ ಅನ್ನು ದಾಟಿದೆ ಮತ್ತು ಸುಮಾರು 20 ಅಡಿ ಎತ್ತರದ ಮರಗಳ ಮೇಲೆ ಕೂತಿದೆ. ವಾಹನವು ಹಲವು ಲೇನ್ ಟ್ರಾಫಿಕ್ ಅನ್ನು ಹಾರಿದಾಗ, ಅದು ಬಹುಶಃ ನೆಲದಿಂದ ಕನಿಷ್ಠ 20 ಅಡಿಗಳಷ್ಟು ಎತ್ತರದಲ್ಲಿ ಮರಗಳಿಗೆ ಡಿಕ್ಕಿ ಹೊಡೆದಿದೆ” ಎಂದು ಎಲ್ಲಿಸ್‌ ತಿಳಿಸಿದರು.

ದಕ್ಷಿಣ ಕೆರೊಲಿನಾ ಹೈವೇ ಪೆಟ್ರೋಲ್, ಗ್ಯಾಂಟ್ ಫೈರ್ ಮತ್ತು ಪಾರುಗಾಣಿಕಾ ತಂಡಗಳು ಮತ್ತು ಗ್ರೀನ್‌ವಿಲ್ಲೆ ಕೌಂಟಿ ಇಎಂಎಸ್ ಘಟಕಗಳು ಸೇರಿದಂತೆ ತುರ್ತು ಪ್ರತಿಕ್ರಿಯೆ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಅವರ ಆರೋಗ್ಯ ಸ್ಥಿತಿ ಅನಿಶ್ಚಿತವಾಗಿದೆ. ವಾಹನದ ಪತ್ತೆ ವ್ಯವಸ್ಥೆಯು ಅಪಘಾತದ ಬಗ್ಗೆ ಕೆಲವು ಕುಟುಂಬ ಸದಸ್ಯರಿಗೆ ಅಲಾರ್ಮ್‌ ನೀಡಿತು. ನಂತರ ಅವರು ದಕ್ಷಿಣ ಕೆರೊಲಿನಾದ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

Continue Reading
Advertisement
Dina Bhavishya
ಭವಿಷ್ಯ21 mins ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Swiggy fined
ಬೆಂಗಳೂರು5 hours ago

Swiggy fined: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲ; ಸ್ವಿಗ್ಗಿಗೆ 5000 ರೂ. ದಂಡ ವಿಧಿಸಿದ ಕೋರ್ಟ್!

Vistara Editorial
ಪ್ರಮುಖ ಸುದ್ದಿ6 hours ago

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕರ್ನಾಟಕ6 hours ago

Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

IPL 2024
ಪ್ರಮುಖ ಸುದ್ದಿ6 hours ago

IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

CBI Raid
ದೇಶ6 hours ago

CBI Raid: ಸಂದೇಶ್‌ಖಾಲಿ ಟಿಎಂಸಿ ನಾಯಕನ ಆಪ್ತನ ಮನೆಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರದ ಮೂಲ ಪತ್ತೆ

Hassan Pen Drive Case
ಪ್ರಮುಖ ಸುದ್ದಿ6 hours ago

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

KL Rahul
ಕ್ರಿಕೆಟ್6 hours ago

KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

Modi in Karnataka
ಪ್ರಮುಖ ಸುದ್ದಿ7 hours ago

Modi in Karnataka: ಬೆಳಗಾವಿಗೆ ಆಗಮಿಸಿದ ಪ್ರಧಾನಿ‌ ಮೋದಿ; ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ

Hasan pen drive case
ಹಾಸನ7 hours ago

Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ21 mins ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202413 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ17 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ3 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

ಟ್ರೆಂಡಿಂಗ್‌