ಅಮ್ಮನ ವಿರುದ್ಧ ಅಜ್ಜಿಗೆ ದೂರು ಕೊಡಲು 22 ತಾಸು ಸೈಕಲ್​ ಹೊಡೆದ 11 ವರ್ಷದ ಬಾಲಕ; 130 ಕಿಮೀ ದೂರ ಸಾಗಿದ ಬಳಿಕ ಏನಾಯ್ತು? - Vistara News

ವೈರಲ್ ನ್ಯೂಸ್

ಅಮ್ಮನ ವಿರುದ್ಧ ಅಜ್ಜಿಗೆ ದೂರು ಕೊಡಲು 22 ತಾಸು ಸೈಕಲ್​ ಹೊಡೆದ 11 ವರ್ಷದ ಬಾಲಕ; 130 ಕಿಮೀ ದೂರ ಸಾಗಿದ ಬಳಿಕ ಏನಾಯ್ತು?

ಬಾಲಕನ ಮನೆ ಇರುವುದು ಪೂರ್ವ ಚೀನಾದ ಝೆಜಿಯಾಂಗ್ ಎಂಬ ಪ್ರಾಂತ್ಯದಲ್ಲಿ. ಅವನ ಮನೆಯಿಂದ ಅಜ್ಜಿ ಮನೆ ಇರುವುದು ಸುಮಾರು 140 ಕಿಮೀ ದೂರದಲ್ಲಿರುವ ಮೀಜಿಯಾಂಗ್‌ ಎಂಬಲ್ಲಿ. ಅವನು ಅಲ್ಲಿಗೆ ಸೈಕಲ್​​ನಲ್ಲಿಯೇ ಸಾಗಿದ್ದಾನೆ.

VISTARANEWS.COM


on

Chinese boy cycled 130 KM for complain about his mother to his grandmother
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಕ್ಕಳಿಗೆ ಅಜ್ಜಿಯ ಮಡಿಲೆಂದರೆ ಒಂದು ಸುರಕ್ಷಿತವಾದ ಸ್ಥಳ. ಅವರಿಗೂ ಅಷ್ಟೇ, ತಮ್ಮ ಮಕ್ಕಳಿಗಿಂತಲೂ ಮೊಮ್ಮಕ್ಕಳ ಮೇಲೇ ಅಪಾರವಾದ ಪ್ರೀತಿ-ಅಕ್ಕರೆ ಇರುತ್ತದೆ. ಅಜ್ಜ-ಅಜ್ಜಿಯರು ಎಂಥ ಸಂದರ್ಭದಲ್ಲೂ ತಮ್ಮ ಮೊಮ್ಮಕ್ಕಳನ್ನು ಬಿಟ್ಟುಕೊಡುವುದಿಲ್ಲ. ಅವರು ತಂದೆಯ ಅಪ್ಪ-ಅಮ್ಮನೇ ಆಗಿರಲಿ, ಅಮ್ಮನ ಪಾಲಕರೇ ಆಗಿರಲಿ. ಮಕ್ಕಳನ್ನಾದರೂ ಬೈದಾರು, ಮೊಮ್ಮಕ್ಕಳ ಬಗ್ಗೆ ಸ್ವಲ್ಪವೂ ಕಠಿಣ ವರ್ತನೆ ತೋರಿಸುವುದಿಲ್ಲ. ಹೀಗಾಗಿ ಪುಟ್ಟ ಮಕ್ಕಳು ತಾವೇನಾದರೂ ತಪ್ಪು ಮಾಡಿ ಅಪ್ಪ-ಅಮ್ಮನ ಬಳಿ ಬೈಸಿಕೊಂಡಾಗ ದೂರು ಹೇಳಲು, ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸೀದಾ ಅಜ್ಜ-ಅಜ್ಜಿಯ ಬಳಿ ಹೋಗುತ್ತಾರೆ.

ಚೀನಾದಲ್ಲೂ ಹೀಗೆ ಒಂದು ಘಟನೆ ನಡೆದಿದೆ. 11ವರ್ಷದ ಬಾಲಕನೊಬ್ಬ ತನ್ನ ಅಮ್ಮನ ಮೇಲೆ ಕೋಪಗೊಂಡು, ಅಮ್ಮನ ಬಗ್ಗೆ ಅವರ ಅಮ್ಮನ ಬಳಿ ಅಂದರೆ ತನ್ನ ಅಜ್ಜಿಯ ಬಳಿ ದೂರ ಹೇಳಲು 130 ಕಿಮೀ ದೂರ ಸೈಕ್ಲಿಂಗ್ ಮಾಡಿಕೊಂಡು ಅವರ ಮನೆಗೆ ಹೋಗಿದ್ದಾನೆ. ಇದಕ್ಕಾಗಿ ಅವನು ತೆಗೆದುಕೊಂಡ ಸಮಯ 22 ತಾಸು. ಬಾಲಕನ ಮನೆ ಇರುವುದು ಪೂರ್ವ ಚೀನಾದ ಝೆಜಿಯಾಂಗ್ ಎಂಬ ಪ್ರಾಂತ್ಯದಲ್ಲಿ. ಅವನ ಮನೆಯಿಂದ ಅಜ್ಜಿ ಮನೆ ಇರುವುದು ಸುಮಾರು 140 ಕಿಮೀ ದೂರದಲ್ಲಿರುವ ಮೀಜಿಯಾಂಗ್‌ ಎಂಬಲ್ಲಿ. ಸೈಕಲ್ ತೆಗೆದುಕೊಂಡು ಹೊರಟ ಹುಡುಗ ಸಿಕ್ಕಿದ್ದು, ಅಜ್ಜಿ ಮನೆಯಿಂದ ಸುಮಾರು 9-10 ಕಿಮೀ ದೂರದಲ್ಲಿ. ಆತನಿಗೆ ಸೈಕಲ್​​ನಲ್ಲಿ ಇನ್ನು ಒಂದು ತಾಸು ಹೋಗಿದ್ದರೆ, ಅಜ್ಜಿಮನೆ ಬರುತ್ತಿತ್ತು. ಅಷ್ಟು ಹತ್ತಿರ ಅವನು ಹೋಗಿದ್ದ.

ಏಪ್ರಿಲ್​ 2ರಂದು ಬಾಲಕ ಎಕ್ಸ್​ಪ್ರೆಸ್​ವೇ ಒಂದರ ಸುರಂಗ ಮಾರ್ಗದಲ್ಲಿ ಸೈಕಲ್​​ನೊಂದಿಗೆ ನಿಂತಿದ್ದ. ಆತ ಸುಸ್ತಿನಿಂದ ಬಸವಳಿದು ಹೋಗಿದ್ದ. ಇದೇ ವೇಳೆ ಪೊಲೀಸ್​ ಅವನನ್ನು ಮಾತನಾಡಿಸಿದ್ದಾರೆ. ಆಗ ತನ್ನ ಕತೆಯನ್ನು ಹೇಳಿಕೊಂಡಿದ್ದಾನೆ. ಅಮ್ಮನೊಂದಿಗೆ ಜಗಳ ಮಾಡಿಕೊಂಡು, ಅಜ್ಜಿ ಬಳಿ ದೂರು ಕೊಡಲು ಹೊರಟಿದ್ದೆ. ನಾನು ರಾತ್ರಿಯೆಲ್ಲ ಸೈಕಲ್ ಹೊಡೆದೆ. ರಸ್ತೆಬದಿಯಲ್ಲಿ ಇರುವ ಬೋರ್ಡ್​, ಮತ್ತು ಮಾರ್ಗ ಸೂಚಕಗಳನ್ನು ನೋಡಿಕೊಂಡೇ ಸಾಗಿದೆ. ಆದರೂ ಕೆಲವೊಮ್ಮೆ ತಪ್ಪಾಗಿ, ಬೇರೆ ದಾರಿಯಲ್ಲಿ ಹೋಗುವಂತಾಯ್ತು. ಮತ್ತೆ ವಾಪಸ್ ಬಂದು ಸರಿದಾರಿಯಲ್ಲಿ ಹೋದೆ. ಮಧ್ಯೆ ಹಸಿವಾದಾಗ ಮನೆಯಿಂದ ತಂದಿದ್ದ ಬ್ರೆಡ್​ ತಿಂದು, ನೀರು ಕುಡಿದೆ ಎಂದು ಹೇಳಿದ್ದಾನೆ.

ಇದನ್ನೂ ಓದಿ: Viral News : ಏರ್‌ ಇಂಡಿಯಾ ವಿಮಾನದಲ್ಲಿ ತೆಂಗಿನ ಕಾಯಿ ಬ್ಯಾನ್‌! ವೈರಲ್‌ ಆಯ್ತು ಸುದ್ದಿ

ಬಳಿಕ ಪೊಲೀಸರು ಅವನ ಪಾಲಕರ ಬಗ್ಗೆ ಎಲ್ಲ ಮಾಹಿತಿ ಪಡೆದು, ಅವರಿಗೆ ವಿಷಯ ತಿಳಿಸಿದ್ದಾರೆ. ಅಪ್ಪ-ಅಮ್ಮನೇ ಬಂದು ಬಾಲಕನನ್ನು ಕರೆದುಕೊಂಡು ಹೋಗಿದ್ದಾರೆ. ಅವನಿಗೆ ನನ್ನ ಜತೆ ಜಗಳವಾಯಿತು. ಆತ ನನಗೆ ಹೇಳಿದ್ದ, ಅಜ್ಜಿಯ ಮನೆಗೆ ಹೋಗಿ, ನಿನ್ನ ಬಗ್ಗೆ ಕಂಪ್ಲೇಂಟ್ ಮಾಡುತ್ತೇನೆ ಎಂದಿದ್ದ. ಆದರೆ ನಾನದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ನಿಜಕ್ಕೂ ಅವನು ಹೊರಟೇಬಿಟ್ಟಿದ್ದಾನೆ. ಅದು ಗೊತ್ತಾಗಲಿಲ್ಲ ಎಂದು ಹುಡುಗನ ಅಮ್ಮ ಪೊಲೀಸರಿಗೆ ತಿಳಿಸಿದ್ದಾರೆ. ಈ ಸ್ಟೋರಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಅನೇಕರು ಬಾಲಕನ ಧೈರ್ಯವನ್ನು ಹೊಗಳಿದ್ದಾರೆ. ‘ಹೀಗೆ ಹುಡುಗ ಒಬ್ಬೊಬ್ಬನೇ ಹೊರಟ ಅಂದಮೇಲೆ ಅವನಿಗೆ ಅಮ್ಮನ ಮೇಲೆ ಅದೆಷ್ಟು ಬೇಸರ ಆಗಿರಬಹುದು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌; ವಿಡಿಯೋ ವೈರಲ್‌

Viral Video:ಸೊಸೆಯನ್ನು ಅತ್ತೆ ಮತ್ತು ನಾದಿನಿ ಸೇರಿಕೊಂಡು ಚೆನ್ನಾಗಿ ಥಳಿಸಿದ್ದು, ಬಳಿಕ ಆಕೆಯನ್ನು ನೆಲದಲ್ಲಿ ಎಳೆದಾಡಿದ್ದಾರೆ. ಅಲ್ಲೇ ಇದ್ದ ಪತಿ ಮತ್ತು ಮಾವನ ಬಳಿ ಸಹಾಯಕ್ಕಾಗಿ ಆಕೆ ಎಷ್ಟೇ ಅಂಗಲಾಚಿದರೂ ಆಕೆ ಮೇಲೆ ನಡೆಯುತ್ತಿದ್ದ ಮಾರಣಾಂತಿಕ ಹಲ್ಲೆ ಮಾತ್ರ ನಿಲ್ಲುವುದೇ ಇಲ್ಲ. ಮಹಿಳೆಯ ಜೋರಾಗಿ ಕಿರುಚಿಕೊಂಡು ಬಿಟ್ಟು ಬಿಡಿ ಎಂದು ಬೇಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಕೈಹಿಡಿದು ರಕ್ಷಿಸಬೇಕಿದ್ದ ಪತಿಯೇ ಆಕೆಯ ಸಹಾಯಕ್ಕೆ ಬಾರದೇ ಬೆಟೀ ವಿಡಿಯೋ ಮಾಡುತ್ತಾ ನಿಂತಿದ್ದ.

VISTARANEWS.COM


on

Viral Video
Koo

ಉತ್ತರಪ್ರದೇಶ: ಸೊಸೆ ಮೇಲೆ ಅತ್ತೆ ಮತ್ತು ನಾದಿನಿ ಸೇರಿಕೊಂಡು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶ(Uttar Pradesh)ದ ಇಟಾ ಪ್ರದೇಶದಲ್ಲಿ ನಡೆದಿದೆ. ವಿಚಿತ್ರವೆಂದರೆ ಮಹಿಳೆಯ ಪತಿ, ತನ್ನ ತಾಯಿ ಮತ್ತು ತಂಗಿಯನ್ನು ತಡೆಯುವ ಬದಲು ವಿಡಿಯೋ ರೆಕಾರ್ಡ್‌(Video record) ಮಾಡಿದ್ದಾನೆ. ಬಿಟ್ಟು ಬಿಡುವಂತೆ ಎಷ್ಟೇ ಗೋಗರೆದರೂ ಕೇಳದೆ ಮಹಿಳೆ ಮೇಲೆ ಬಹಳ ಕ್ರೂರವಾಗಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌(Viral Video) ಆಗಿದೆ.

ಇಟಾದಲ್ಲಿ ಈ ಘಟನೆ ನಡೆದಿದ್ದು, ಸೊಸೆಯನ್ನು ಅತ್ತೆ ಮತ್ತು ನಾದಿನಿ ಸೇರಿಕೊಂಡು ಚೆನ್ನಾಗಿ ಥಳಿಸಿದ್ದು, ಬಳಿಕ ಆಕೆಯನ್ನು ನೆಲದಲ್ಲಿ ಎಳೆದಾಡಿದ್ದಾರೆ. ಅಲ್ಲೇ ಇದ್ದ ಪತಿ ಮತ್ತು ಮಾವನ ಬಳಿ ಸಹಾಯಕ್ಕಾಗಿ ಆಕೆ ಎಷ್ಟೇ ಅಂಗಲಾಚಿದರೂ ಆಕೆ ಮೇಲೆ ನಡೆಯುತ್ತಿದ್ದ ಮಾರಣಾಂತಿಕ ಹಲ್ಲೆ ಮಾತ್ರ ನಿಲ್ಲುವುದೇ ಇಲ್ಲ. ಮಹಿಳೆಯ ಜೋರಾಗಿ ಕಿರುಚಿಕೊಂಡು ಬಿಟ್ಟು ಬಿಡಿ ಎಂದು ಬೇಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಕೈಹಿಡಿದು ರಕ್ಷಿಸಬೇಕಿದ್ದ ಪತಿಯೇ ಆಕೆಯ ಸಹಾಯಕ್ಕೆ ಬಾರದೇ ಬರೀ ವಿಡಿಯೋ ಮಾಡುತ್ತಾ ನಿಂತಿದ್ದ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ. ಇಂತಹ ಕ್ರೂರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪೊಲೀಸರು ಸ್ವಯಂಪ್ರೇರಿತರಾಗಿ ದೂರ ದಾಖಲಿಸಿಕೊಂಡು ಆರೋಪಿಗಳನ್ನು ತಕ್ಷಣ ಅರೆಸ್ಟ್‌ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:Weight Lose: ತೂಕ ಇಳಿಸಲು ಬಯಸುವಿರಾ? ಈ ಸಂಗತಿ ತಿಳಿದಿರಲಿ

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಿಪಲ್ಲಿ ಗ್ರಾಮದಲ್ಲಿ ಕೆಲವು ತಿಂಗಳ ಹಿಂದೆ ಸೊಸೆಯೇ ಅತ್ತೆಯ ಮೇಲೆ ಮೃಗೀಯ ವರ್ತನೆ ತೋರಿದ್ದಳು. 80 ವರ್ಷದ ವೆಂಕಟಲಕ್ಷ್ಮಮ್ಮ ಅವರು ಮನೆಯ ಎದುರು ಮಲಗಿದ್ದಾಗ ಲಕ್ಷ್ಮೀದೇವಮ್ಮ ಎಂಬ ಮಹಿಳೆಯು ಅವರನ್ನು ಎಳೆದಾಡಿದ್ದಾಳೆ. ವೃದ್ಧೆ ಎಂಬುದನ್ನೂ ಲೆಕ್ಕಿಸದ ಸೊಸೆಯು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಿಸಿಲು ಎಂದು ನೆರಳಿನಲ್ಲಿ ಮಲಗಿದ್ದ ಅತ್ತೆಯ ಮೇಲೆ ಸೊಸೆ ತೋರಿದ ಕ್ರೌರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಳಿಯ ವಯಸ್ಸಿನಲ್ಲಿ ಎರಡು ಹೊತ್ತು ಊಟ ಸಿಕ್ಕರೆ ಸಾಕು ಎಂದು ಬಯಸುವ ಜೀವಕ್ಕೆ ಕಿರುಕುಳ ನೀಡಲು ಅವರು ಮಾಡಿದ ತಪ್ಪೇನು ಎಂಬುದು ತಿಳಿದುಬಂದಿಲ್ಲ. ವೆಂಕಟಲಕ್ಷ್ಮಮ್ಮ ಅವರನ್ನು ಎಳೆದು, ತಿಪ್ಪೆಗೆ ಎಸೆಯುವಾಗ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

Continue Reading

ವೈರಲ್ ನ್ಯೂಸ್

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

Viral Video: ರತ್ಲಮ್‌ನಲ್ಲಿರುವ ಡಾಲ್ಫಿನ್‌ ಈಜುಕೊಳದಲ್ಲಿ ಈ ಘಟನೆ ನಡೆದಿದ್ದು, ಅನೇಕ ಯುವಕರು ಸ್ವಿಮ್ಮಿಂಗ್‌ ಮಾಡುತ್ತಿರುತ್ತಾರೆ. ಇನ್ನೇ ಒಬ್ಬ ಯುವಕ ಮೇಲೆ ಹತ್ತಲು ಮುದಾಗುತ್ತಿದ್ದಾಗ ಮತ್ತೊರ್ವ ಯುವಕ ಸ್ವಿಮ್ಮಿಂಗ್‌ಪೂಲ್‌ಗೆ ಸ್ಟಂಟ್‌ ಮಾಡಿ ಜಂಪ್‌ ಹೊಡೆಯುತ್ತಾನೆ. ಆಗ ಇದ್ದ ಮೇಲೆ ಹತ್ತುತ್ತಿದ್ದ ಯುವಕನ ತಲೆಗೆ ಅವನ ಕಾಲಿನಿಂದ ಗಂಭೀರವಾಗಿ ಏಟಾಗುತ್ತದೆ. ಇದ್ದಕ್ಕಿದ್ದಂತೆ ಆ ಯುವಕ ಸ್ವಿಮ್ಮಿಂಗ್‌ಪೂಲ್‌ ಒಳಗೆ ಬೀಳುತ್ತಾನೆ. ತಕ್ಷಣ ಪ್ರಜ್ಞೆ ತಪ್ಪುತ್ತಾನೆ.

VISTARANEWS.COM


on

Viral Video
Koo

ಮಧ್ಯಪ್ರದೇಶ: ಕೆಲವೊಮ್ಮೆ ಅತಿಯಾದ ಮೋಜು ಪ್ರಾಣಕ್ಕೆ ಸಂಚು ತಂದು ಬಿಡುತ್ತದೆ. ಮೋಜಿಗೆಂದು ಮಾಡಿದ ಕಾರ್ಯದಿಂದ ಎದುರಿಗಿರುವವರ ಪ್ರಾಣವನ್ನೇ ಬಲಿ ಪಡೆದಂತಹ ಘಟನೆಗಳು ಆಗಾಗ ಕಣ್ಣ ಮುಂದೆ ಬರುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಮಧ್ಯಪ್ರದೇಶ(Madya Pradesh)ದ ರತ್ಲಮ್‌ನಲ್ಲಿ ನಡೆದಿದೆ. ಈಜುಕೊಳ(Swimming pool) ದಲ್ಲಿ ಯುವಕನೊರ್ವ ಸ್ಟಂಟ್‌ ಮಾಡಲು ಹೋಗಿ ಮತ್ತೊರ್ವ ಯುವಕನ ಪ್ರಾಣಕ್ಕೆ ಕುತ್ತು ತಂದಿದ್ದಾನೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral Video)ಆಗಿದೆ.

ಘಟನೆ ವಿವರ:

ರತ್ಲಮ್‌ನಲ್ಲಿರುವ ಡಾಲ್ಫಿನ್‌ ಈಜುಕೊಳದಲ್ಲಿ ಈ ಘಟನೆ ನಡೆದಿದ್ದು, ಅನೇಕ ಯುವಕರು ಸ್ವಿಮ್ಮಿಂಗ್‌ ಮಾಡುತ್ತಿರುತ್ತಾರೆ. ಇನ್ನೇ ಒಬ್ಬ ಯುವಕ ಮೇಲೆ ಹತ್ತಲು ಮುದಾಗುತ್ತಿದ್ದಾಗ ಮತ್ತೊರ್ವ ಯುವಕ ಸ್ವಿಮ್ಮಿಂಗ್‌ಪೂಲ್‌ಗೆ ಸ್ಟಂಟ್‌ ಮಾಡಿ ಜಂಪ್‌ ಹೊಡೆಯುತ್ತಾನೆ. ಆಗ ಇದ್ದ ಮೇಲೆ ಹತ್ತುತ್ತಿದ್ದ ಯುವಕನ ತಲೆಗೆ ಅವನ ಕಾಲಿನಿಂದ ಗಂಭೀರವಾಗಿ ಏಟಾಗುತ್ತದೆ. ಇದ್ದಕ್ಕಿದ್ದಂತೆ ಆ ಯುವಕ ಸ್ವಿಮ್ಮಿಂಗ್‌ಪೂಲ್‌ ಒಳಗೆ ಬೀಳುತ್ತಾನೆ. ತಕ್ಷಣ ಪ್ರಜ್ಞೆ ತಪ್ಪುತ್ತಾನೆ. ಅನೇಕರು ಅಲ್ಲೇ ಇದ್ದರೂ ತಕ್ಷಣ ಅವರ ಸಹಾಯಕ್ಕೆ ಯಾದೂ ಧಾವಿಸಲಿಲ್ಲ. ಅದಾದ ಬಳಿಕ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರಲ್ಲಿ ಆತ ಕೊನೆಯುಸಿರೆಳೆದಿದ್ದ.

ಮೃತ ಯುವಕನನ್ನು ಅನಿಕೇತ್‌ ಎಂದು ಗುರುತಿಸಲಾಗಿದೆ. ಇಂತಹದ್ದೇ ಒಂದು ಘಟನೆ ಈ ಹಿಂದೆಯೂ ನಡೆದಿತ್ತು. ಇದಾದ ಬಳಿಕ ಸ್ವಿಮ್ಮಿಂಗ್‌ ಪೂಲ್‌ ನಿರ್ವಾಹಕರಿಗೆ ಎಚ್ಚರಿಕೆ ನೀಡಲಾಗಿತ್ತು. ಆದರೆ ಇದೀಗ ಮತ್ತೆ ಇಂತಹದ್ದೇ ಮತ್ತೊಂದು ಘಟನೆ ನಡೆದಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಈಜುಕೊಳವನ್ನು ಸೀಲ್‌ಡೌನ್‌ ಮಾಡಲಾಗಿದೆ.

ಕಳೆದ ವರ್ಷ ಬೆಂಗಳೂರಿನಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಜೆಪಿ ನಗರ 7 ನೇ ಹಂತದಲ್ಲಿರುವ ಖಾಸಗಿ ಈಜುಕೊಳದಲ್ಲಿ 13 ವರ್ಷದ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿದ್ದರು. ಮೃತ ವಿದ್ಯಾರ್ಥಿಗಳನ್ನು ಜರಗನಹಳ್ಳಿ ನಿವಾಸಿಗಳಾದ ಮೋಹನ್ ಮತ್ತು ಜಯಂತ್ ಎಂದು ಗುರುತಿಸಲಾಗಿದೆ. ಇಬ್ಬರು ಬಾಲಕರು ತಮ್ಮ ಶಾಲೆಯಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿತ್ತು. ಬಳಿಕ ಇಬ್ಬರ ಮೃತದೇಹಗಳು ಈಜುಕೊಳದಲ್ಲಿ ಕಂಡುಬಂದಿದ್ದವು.

ಇದನ್ನೂ ಓದಿ:ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

ಈಜುಕೊಳದ ತರಬೇತುದಾರ ಬಾಲಕರನ್ನು ಈಜುಕೊಳಕ್ಕೆ ಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ., ಆದರೆ ದುರಂತ ನಡೆದ ಸಮಯದಲ್ಲಿ ಅವರು ಇರಲಿಲ್ಲ ಎಂಬುದು ಆನಂತರ ಬಯಲಾಗಿತ್ತು. ಪೊಲೀಸರ ಪ್ರಕಾರ, ಇಬ್ಬರು ಬಾಲಕರು ತರಗತಿಗಳನ್ನು ಬಿಟ್ಟು ಜೆಪಿ ನಗರದಲ್ಲಿರುವ ಎಂಎನ್‌ಸಿ ಸ್ಪೋರ್ಟ್ಸ್ ಅಕಾಡೆಮಿಗೆ ಭೇಟಿ ನೀಡಿ, ಈಜುಕೊಳದಲ್ಲಿ ಆಟವಾಡಿದ್ದಾರೆ. ಈಜುಕೊಳದ ಸರಿಯಾದ ಬಳಕೆಯ ಬಗ್ಗೆ ಬಾಲಕರಿಗೆ ಸೂಚನೆಗಳು ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕ್ರೀಡೆ

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

MS Dhoni Bike Riding: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಬಳಿಕ ವಿಶ್ರಾಂತ ಜೀವನವನ್ನು ಎಂಜಾಯ್​ ಮಾಡುತ್ತಿರುವ ಧೋನಿ ಅವರು ತಮ್ಮ ಬೈಕ್ ಮತ್ತು ಕಾರ್​ಗಳನ್ನು ಇರಿಸಲು ತಮ್ಮ ಮನೆಯ ಪಕ್ಕದಲ್ಲಿ ದೊಡ್ಡ ಕಟ್ಟಡವನ್ನೇ ಹೊಂದಿದ್ದಾರೆ. ಕೆಳವು ದಿನಗಳ ಹಿಂದೆ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ಧೋನಿಯ ರಾಂಚಿಯಲ್ಲಿರುವ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಧೋನಿ ಫಾರ್ಮ್ ಹೌಸ್​ನಲ್ಲಿರುವ ಬೈಕ್​(ms dhoni bike collection) ಮತ್ತು ಕಾರುಗಳ ವಿಡಿಯೊವನ್ನು ಹಂಚಿಕೊಂಡಿದ್ದರು

VISTARANEWS.COM


on

MS Dhoni Bike Riding
Koo

ರಾಂಚಿ: ಆರ್​ಸಿಬಿ ವಿರುದ್ಧ ಸೋಲುವ ಮೂಲಕ ಚೆನ್ನೈ ಸೂಪರ್​ ಕಿಂಗ್ಸ್​(CSK) ತಂಡ 17ನೇ ಆವೃತ್ತಿಯ ಐಪಿಎಲ್​ನಿಂದ ಹೊರಬಿದ್ದಿತ್ತು. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಚೆನ್ನೈ 27 ರನ್​ಗಳ ಅಂತರದಿಂದ ಸೋಲು ಕಂಡಿತ್ತು. ಈ ಸೋಲಿನ ಮರು ದಿನವೇ ಧೋನಿ(MS Dhoni) ತಮ್ಮ ತವರಾದ ರಾಂಚಿಗೆ ಮರಳಿದ್ದರು. ಇದೀಗ ತವರಿನಲ್ಲಿ ಬೈಕ್​ ರೈಡಿಂಗ್​ ಮಾಡಿದ್ದಾರೆ. ಅವರು ಬೈಕ್​ನಲ್ಲಿ ಸುತ್ತಾಡಿಕೊಂಡು ವಾಪಸ್​ ಮನೆಗೆ ಬರುತ್ತಿರುವ ವಿಡಿಯೊ ವೈರಲ್​ ಆಗಿದೆ. ಸದ್ಯ ಧೋನಿ ಅವರು ಬೈಕ್​ ಓಡಿಸಿದ(MS Dhoni Bike Riding) ವಿಡಿಯೊ ವೈರಲ್(Viral Video)​ ಆಗಿದ್ದು, ಅವರ ಅಭಿಮಾನಿಗಳು ಹಲವು ಕಮೆಂಟ್​ಗಳನ್ನು ಮಾಡಿದ್ದಾರೆ.

ಧೋನಿ ಬಳಿ ಇದೆ ದೊಡ್ಡ ಬೈಕ್​ ಗ್ಯಾರೇಜ್​


ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಬಳಿಕ ವಿಶ್ರಾಂತ ಜೀವನವನ್ನು ಎಂಜಾಯ್​ ಮಾಡುತ್ತಿರುವ ಧೋನಿ ಅವರು ತಮ್ಮ ಬೈಕ್ ಮತ್ತು ಕಾರ್​ಗಳನ್ನು ಇರಿಸಲು ತಮ್ಮ ಮನೆಯ ಪಕ್ಕದಲ್ಲಿ ದೊಡ್ಡ ಕಟ್ಟಡವನ್ನೇ ಹೊಂದಿದ್ದಾರೆ. ಕೆಳವು ದಿನಗಳ ಹಿಂದೆ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ಧೋನಿಯ ರಾಂಚಿಯಲ್ಲಿರುವ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಧೋನಿ ಫಾರ್ಮ್ ಹೌಸ್​ನಲ್ಲಿರುವ ಬೈಕ್​(ms dhoni bike collection) ಮತ್ತು ಕಾರುಗಳ ವಿಡಿಯೊವನ್ನು ಹಂಚಿಕೊಂಡಿದ್ದರು. ಇದನ್ನು ಕಂಡ ಅನೇಕರು ಅಬ್ಬಾ… ಎಂದು ಆಶ್ಚರ್ಯವಾಗಿದ್ದರು. ಈ ಫಾರ್ಮ್​ಹೌಸ್​ನ ವಿಡಿಯೊ ವೈರಲ್​ ಆಗುತ್ತು.

ಇದನ್ನೂ ಓದಿ MS Dhoni Retirement: ಧೋನಿ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಚೆನ್ನೈ ಫ್ರಾಂಚೈಸಿ

ಎಂಎಸ್ ಧೋನಿ ಬೈಕ್ ಕಲೆಕ್ಷನ್

ಯಮಹಾ, ಡುಕಾಟಿ, ಕವಾಸಕಿ ಮುಂತಾದ ಪ್ರಸಿದ್ಧ ಬ್ರಾಂಡ್ ಗಳು ಧೋನಿ ಅವರ ಆಕರ್ಷಕ ಬೈಕ್ ಗಳ ಸಂಗ್ರಹದಲ್ಲಿವೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ. ಹೆಚ್ಚುವರಿಯಾಗಿ, ಕಾನ್ಫೆಡರೇಟ್ ಎಕ್ಸ್ 132 ಹೆಲ್ ಕ್ಯಾಟ್, ವಿಂಟೇಜ್ ನಾರ್ಟನ್ ಜುಬಿಲಿ 250 ಮತ್ತು ಹಲವಾರು ಗಮನಾರ್ಹ ಬೈಕುಗಳಂತಹ ವಿಶಿಷ್ಟ ಮತ್ತು ಅಪರೂಪದ ಮಾದರಿಗಳನ್ನು ಹೊಂದಿದ್ದಾರೆ. ಇತ್ತೀಚೆಗೆ, ಧೋನಿ ಹೊಸದಾಗಿ ಕಸ್ಟಮೈಸ್ ಮಾಡಿದ ಜಾವಾ 42 ಬಾಬ್ಬರ್ ಅನ್ನು ತಮ್ಮ ಬೆಳೆಯುತ್ತಿರುವ ಬೈಕುಗಳ ಸಂಗ್ರಹಕ್ಕೆ ಸೇರಿಸಿದ್ದಾರೆ.

ಮಹೇಂದ್ರ ಸಿಂಗ್​ ಧೋನಿ(MS Dhoni Retirement) ಅವರ ನಿವೃತ್ತಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೀಗ ಧೋನಿ ನಿವೃತ್ತಿ ವಿಚಾರವಾಗಿ ಸಿಎಸ್​ಕೆ ಫ್ರಾಂಚೈಸಿಯ ಅಧಿಕಾರಿಯೊಬ್ಬರು ಮಹತ್ವದ ಹೇಳಿಕೆ ನೀಡಿದ್ದಾರೆ.

“ಧೋನಿ ಅವರು ಸಿಎಸ್‌ಕೆ ಜತೆ ಯಾರೊಂದಿಗೂ ತಮ್ಮ ನಿವೃತ್ತಿ ಬಗ್ಗೆ ಇದುವರೆಗೂ ಮಾತನಾಡಿಲ್ಲ. ಕೆಲವು ಸಕ್ರಿಯ ಕ್ರಿಕೆಟಿಗರಿಂದ ಹೆಚ್ಚು ಟೀಕೆಗೆ ಒಳಗಾಗಿರುವ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವು ಧೋನಿಯ ನಿವೃತ್ತಿಯ ವಿಚಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆಯಿದೆ. ನಿಯಮವು ಮುಂದುವರಿದರೆ, ತಂಡದೊಂದಿಗೆ ನಿರ್ದಿಷ್ಟ ಕೆಲಸವನ್ನು ಪೂರೈಸಲು ಇದು ಅವರಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ. ನಿಯಮವನ್ನು ರದ್ದುಗೊಳಿಸಿದರೆ, ಧೋನಿ ಆಡುವುದು ಕಷ್ಟ” ಎಂದು ಹೇಳಿದ್ದಾರೆ.

ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಾಗಿತ್ತು. ಇದೀಗ ಚೆನ್ನೈ ಸೋತು ಟೂರ್ನಿಯಿಂದ ಹೊರಬಿದ್ದರೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

Continue Reading

ಕ್ರೀಡೆ

IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

IPL 2024: ರಾಜಸ್ಥಾನ್​(RCB vs RR) ವಿರುದ್ಧ ಬುಧವಾರ ನಡೆಯುವ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ಆಟಗಾರರು ಫುಟ್ಬಾಲ್​ ಆಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್​ ಟೂರ್ನಿ(IPL 2024) ಆರಂಭಕ್ಕೂ ಮುನ್ನ ವಿರಾಟ್​ ಕೊಹ್ಲಿ(virat kohli) ಇದು ಆರ್​ಸಿಬಿಯ ಹೊಸ ಅಧ್ಯಾಯ ಎಂದು ಹೇಳುವು ಮೂಲಕ ಆರ್‌ಸಿಬಿ ಹವಾ ಸೃಷ್ಟಿಸಿತ್ತು. ಈ ಮಾತಿಗೆ ತಕ್ಕಂತೆ ಮೊದಲ ಹಂತದಲ್ಲಿ ಆರ್​ಸಿಬಿ(RCB players) ಪ್ರದರ್ಶನ ನೀಡಲು ವಿಫಲವಾಗಿತ್ತು. 7 ಸೋಲು ಕಂಡು ಇನ್ನೇನು ಟೂರ್ನಿಯಿಂದ ಹೊರಬೀಳುವ ಸ್ಥಿತಿಯಲ್ಲಿತ್ತು. ಆರ್​ಸಿಬಿ ಅಭಿಮಾನಿಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಇದು ಮುಗಿದು ಹೋದ ಅಧ್ಯಾಯ ಎಂದು ಬೇಸರ ಹೊರಹಾಕಿದ್ದರು. ಆದರೆ ಆ ಬಳಿಕ ನಡೆದದ್ದೇ ಬೇರೆ. ಪವಾಡ ಸಂಭವಿಸಿದೆ ಆರ್​ಸಿಬಿ ಸತತವಾಗಿ 6 ಪಂದ್ಯಗಳನ್ನು ಒಟ್ಟು 7 ಪಂದ್ಯಗಳಲ್ಲಿ ಜಯ ಸಾಧಿಸಿ ಕೊನೆಯ ಸ್ಥಾನದಿಂದ ಮೇಲೆದ್ದು ಅಚ್ಚರಿ ಎಂಬಂತೆ ಪ್ಲೇ ಆಫ್​ ಪ್ರವೇಶಿಸಿತ್ತು. ಇದೀಗ ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ರಾಜಸ್ಥಾನ್​(RCB vs RR) ವಿರುದ್ಧ ಆಡಲಿದೆ.

ಆರ್​ಸಿಬಿ ತಂಡದ ಆಟಗಾರರು ರಾಜಸ್ಥಾನ್​ ವಿರುದ್ಧ ಎಲಿಮಿನೇಟರ್​ ಪಂದ್ಯವನ್ನಾಡಲು ಈಗಾಗಲೇ ಅಹಮದಾಬಾದ್​ಗೆ ತಲುಪಿದ್ದಾರೆ. ಸೋಮವಾರ ಆಟಗಾರರು ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡುವ(RCB players played football) ಮೂಲಕ ತಮ್ಮ ಫಿಟ್​ನೆಸ್​ ತರಬೇತಿ ಮುಗಿಸಿದ್ದಾರೆ. ಆಟಗಾರರು 2 ತಂಡಗಳಾಗಿ ಫುಟ್ಬಾಲ್​ ಆಡಿದ ವಿಡಿಯೊವನ್ನು ಆರ್​ಸಿಬಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಕಳೆದ 5 ವರ್ಷದಲ್ಲಿ ಆರ್‌ಸಿಬಿ 4 ಬಾರಿ ಪ್ಲೇ ಆಫ್ ಪ್ರವೇಶಿಸಿದ ಸಾಧನೆ ಮಾಡಿದೆ. ಈ ಮೂಲಕ ಆರ್‌ಸಿಬಿ ನಿರಂತವಾಗಿ ತನ್ನ ಸಾಮರ್ಥ್ಯ ಪ್ರದರ್ಶಿಸಿದೆ. 3 ಬಾರಿ ಫೈನಲ್​ ಪ್ರವೇಶೀಸಿದರೂ ಕಪ್​ ಗೆಲ್ಲಲು ಸಾಧ್ಯವಾಗಿರಲಿಲ್ಲ. 2009, 2011 ಮತ್ತು 2016ರಲ್ಲಿ ಆರ್​ಸಿಬಿ ಫೈನಲ್​ಗೆ ಲಗ್ಗೆಯಿಟ್ಟಿತ್ತು.

ಎಲಿಮಿನೇಟರ್(IPL 2024 Eliminator)​ ಪಂದ್ಯಕ್ಕೂ ಮುನ್ನವೇ ಆರ್​ಸಿಬಿಗೆ ದೊಡ್ಡ ಆಘಾತವೊಂದು ಎದುರಾಗಿದೆ. ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ನಡೆಸುವ ಸಲುವಾಗಿ ರಾಷ್ಟ್ರೀಯ ತಂಡದಿಂದ ಕರೆ ಬಂದರೆ ಆಸ್ಟ್ರೇಲಿಯಾದ ಸ್ಟಾರ್​ ಆಲ್​ರೌಂಡರ್​ಗಳಾದ ಕ್ಯಾಮರೂನ್​ ಗ್ರೀನ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಂಡ ತೊರೆಯಬೇಕಾಗಿದೆ.

ಈಗಾಗಲೇ ಇಂಗ್ಲೆಂಡ್​ನ ಆಟಗಾರರು ಐಪಿಎಲ್​ ಪಂದ್ಯವಾವಳಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ. ಇದೀಗ ಆಸ್ಟ್ರೇಲಿಯಾ ಸರದಿ ಎನ್ನಲಾಗಿದೆ. ಕೇವಲ ಆರ್​ಸಿಬಿ ಮಾತ್ರವಲ್ಲದೆ ಇತರ ತಂಡದ ಪರ ಆಡುತ್ತಿರುವ ಆಸ್ಟ್ರೇಲಿಯಾ ಆಟಗಾರರು ಕೂಡ ಐಪಿಎಲ್​ ತೊರೆಬೇಕಾಗಬಹುದು. ಎಂದು ವರದಿಯಾಗಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಐಪಿಎಲ್​ನಿಂದ ಹೊರಹೋದರೆ ಸನ್​ರೈಸರ್ಸ್​ ಮತ್ತು ಆರ್​ಸಿಬಿ ತಂಡಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಏಕೆಂದರೆ ಈ 2 ತಂಡಗಳಲ್ಲಿಯೇ ತಲಾ 2 ಆಸೀಸ್​ ಆಟಗಾರರಿದ್ದಾರೆ.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ಪಂದ್ಯಗಳು ಮೇ 27ರಿಂದ ಆರಂಭಗೊಳ್ಳಲಿದೆ. ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ನಮೀಬಿಯಾ ವಿರುದ್ಧ ಮೇ 29ಕ್ಕೆ ಆಡಲಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಎಲಿಮಿನೇಟರ್​ ಮತ್ತು ಕ್ವಾಲಿಫೈಯರ್​ ಪಂದ್ಯದಲ್ಲಿ ಆಡಿದರೂ ಕೂಡ ಫೈನಲ್​ ತನಕ ಭಾರತದಲ್ಲಿ ನಿಲ್ಲುವುದು ಅನುಮಾನ ಎನ್ನಲಾಗಿದೆ.

Continue Reading
Advertisement
jain monk samadhi sena chikkodi sallekhana
ಚಿಕ್ಕೋಡಿ5 mins ago

Sallekhana: ಸಲ್ಲೇಖನ ವ್ರತ ಸ್ವೀಕರಿಸಿ ಸಮಾಧಿಸೇನ ಮುನಿ ಜಿನೈಕ್ಯ

Viral Video
ವೈರಲ್ ನ್ಯೂಸ್12 mins ago

Viral Video: ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌; ವಿಡಿಯೋ ವೈರಲ್‌

Prashant Kishor
Lok Sabha Election 202418 mins ago

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Cannes 2024 Sonam Kapoor dubs this outfit the best at Cannes this year
ಬಾಲಿವುಡ್36 mins ago

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

cisf soldier death raichur
ಕ್ರೈಂ55 mins ago

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Viral Video
ವೈರಲ್ ನ್ಯೂಸ್1 hour ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

T20 World Cup 2024
ಕ್ರಿಕೆಟ್1 hour ago

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

Crime News
ದೇಶ1 hour ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

missing case davanagere
ಕ್ರೈಂ2 hours ago

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Star Kids with Sanskrit Names From Yami Gautam to Priyanka Chopra
ಬಾಲಿವುಡ್2 hours ago

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌