Video: ಯಾವ ಉದ್ಯೋಗಿಯೂ ಹೊರಗೆ ಹೋಗಬಾರದು; ಕಂಪನಿ ಬಾಗಿಲಿಗೆ ಸರಪಳಿ ಬೀಗ ಹಾಕಿದ ವಾಚ್​ಮ್ಯಾನ್ - Vistara News

ವೈರಲ್ ನ್ಯೂಸ್

Video: ಯಾವ ಉದ್ಯೋಗಿಯೂ ಹೊರಗೆ ಹೋಗಬಾರದು; ಕಂಪನಿ ಬಾಗಿಲಿಗೆ ಸರಪಳಿ ಬೀಗ ಹಾಕಿದ ವಾಚ್​ಮ್ಯಾನ್

ಉದ್ಯೋಗಿಗಳು ಅನುಮತಿ ಇಲ್ಲದೆ ಹೊರಗೆ ಹೋಗಬಾರದು ಎಂಬ ಕಾರಣಕ್ಕೆ ಹೀಗೆ ಮಾಡಿದ್ದಾಗಿ ವಾಚ್​ಮ್ಯಾನ್​ ಹೇಳುವುದು ವಿಡಿಯೊದಲ್ಲಿ ಕೇಳಿಸುತ್ತದೆ.

VISTARANEWS.COM


on

Security Locked Door OF Office
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಂಪನಿಗಳಲ್ಲಿ ಅವಧಿಗೂ ಮೀರಿ ಕೆಲಸ ಮಾಡಿಸಿಕೊಳ್ಳುವುದು ಸಾಮಾನ್ಯ. ಎಲ್ಲ ಕಂಪನಿಗಳಲ್ಲೂ ಅಲ್ಲವೆಂದರೂ ಸಾಮಾನ್ಯವಾಗಿ ಬಹುತೇಕ ಕಚೇರಿ/ಸಂಸ್ಥೆಗಳಲ್ಲಿ ಲಾಗಿನ್​ ಆಗುವ ಸಮಯ ಮಾತ್ರ ಸರಿಯಾಗಿರಬೇಕು ಎಂಬ ನಿಯಮ ಮಾಡಿರುತ್ತಾರೆ ಹೊರತು, ಉದ್ಯೋಗಿಗಳು ಲಾಗೌಟ್ ಆಗುವ ಅಂದರೆ ಕೆಲಸ ಮುಗಿಸಿ ಹೊರಡುವ ಸಮಯಕ್ಕೆ ಯಾವುದೇ ನಿಯಮ ಇರುವುದಿಲ್ಲ. ಅವಧಿಗೂ ಮುನ್ನ ಹೋಗುವಂತಿಲ್ಲ. ಸಮಯಕ್ಕೆ ಸರಿಯಾಗಿ ಎದ್ದು ಹೋಗಬಹುದು. ಅಗತ್ಯ ಬಿದ್ದರೆ, ಕೆಲಸದ ಅವಧಿ ಮುಗಿದ ಬಳಿಕವೂ ಕುಳಿತುಕೊಳ್ಳಬೇಕು..ಇದು ಸಾಮಾನ್ಯವಾಗಿ ಉದ್ಯೋಗಸ್ಥರ ಜೀವನ.

ಹೀಗೆಲ್ಲ ಇರುವಾಗ ಕಂಪನಿಯೊಂದರಲ್ಲಿ ವಾಚ್​​ಮ್ಯಾನ್​ವೊಬ್ಬರು ಬಾಗಿಲು ಮುಚ್ಚಿ, ಸರಪಳಿಯ ಬೀಗ ಹಾಕುತ್ತಿರುವ ವಿಡಿಯೊ ವೈರಲ್ ಆಗಿದೆ. ಉದ್ಯೋಗಿಗಳು ಅನುಮತಿ ಇಲ್ಲದೆ ಹೊರಗೆ ಹೋಗಬಾರದು ಎಂಬ ಕಾರಣಕ್ಕೆ ಹೀಗೆ ಮಾಡಿದ್ದಾಗಿ ಆತ ಹೇಳುವುದು ವಿಡಿಯೊದಲ್ಲಿ ಕೇಳಿಸುತ್ತದೆ. ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಹಾಗೇ, ನೆಟ್ಟಿಗರ ಆಕ್ರೋಶಕ್ಕೂ ಕಾರಣವಾಗಿದೆ.

ಎಡ್​ಟೆಕ್​ ಕಂಪನಿಯೊಂದರಲ್ಲಿ ಉದ್ಯಮಿಯಾಗಿರುವ ರವಿ ಹಂಡಾ ಎಂಬುವರು ಈ ವಿಡಿಯೊವನ್ನು ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಹೀಗೆ ಬಾಗಿಲನ್ನು ಲಾಕ್​ ಮಾಡಿದ್ದು ಯಾವ ಕಂಪನಿಯಲ್ಲಿ ಎಂಬುದು ಗೊತ್ತಾಗಿಲ್ಲ. ಹೀಗ್ಯಾಕೆ ಬಾಗಿಲನ್ನು ಮುಚ್ಚುತ್ತೀದ್ದೀರಿ ಎಂದು ವಿಡಿಯೊ ಮಾಡುತ್ತಿರುವವರು, ವಾಚ್​​ಮ್ಯಾನ್​​ನನ್ನು ಪ್ರಶ್ನೆ ಮಾಡಿದ್ದಕ್ಕೆ ಆತ ‘ಈ ಕಂಪನಿಯ ಮ್ಯಾನೇಜರ್​ ಒಬ್ಬರು ಹೇಳಿದ್ದಕ್ಕೆ ಮಾಡುತ್ತಿದ್ದೇನೆ. ಇಲ್ಲಿನ ಯಾವ ಉದ್ಯೋಗಿಯೂ ನನ್ನ ಅನುಮತಿ ಪಡೆಯದೆಯೇ ಹೊರಗೆ ಹೋಗುವಂತಿಲ್ಲ. ಮನೆಗೂ ಹೋಗುವಂತಿಲ್ಲ. ಹೀಗಾಗಿ ಬಾಗಿಲನ್ನು ಲಾಕ್​ ಮಾಡು ಎಂದಿದ್ದಾರೆ’ ಎಂದು ವಾಚ್​ಮ್ಯಾನ್ ಹೇಳುತ್ತಾನೆ.

ವಿಡಿಯೊ ಸಿಕ್ಕಾಪಟೆ ವೈರಲ್ ಆಗುತ್ತಿದೆ. ವಿಡಿಯೊ ಶೇರ್ ಮಾಡಿಕೊಂಡಿರುವ ರವಿ ಹಂಡಾ ‘ಭಾರತದ ಎಡ್​​ಟೆಕ್​ ಕಂಪನಿಗಳನ್ನು ಹುಟ್ಟುಹಾಕಿದವರು ಈಗ ಅವರ ಉದ್ಯೋಗಿಗಳನ್ನು ಹೀಗೆ ಕೂಡಿ ಹಾಕುತ್ತಿದ್ದಾರೆ. ಇಂಥ ನರಕಸದೃಶ ಕಂಪನಿಗಳನ್ನು ಈ ದೇಶದಿಂದ ಹೊರಹಾಕಬೇಕು. ಇನ್ಯಾವುದೇ ದೇಶದಲ್ಲೂ ಹೀಗೆ ಕಂಪನಿಗಳು ಬಾಗಿಲು ಹಾಕುವ ಧೈರ್ಯವನ್ನು ಮಾಡುವುದಿಲ್ಲ ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ.

Coding Ninjas ಎಂಬ ಗುರುಗ್ರಾಮ ಮೂಲದ ಕಂಪನಿಯಲ್ಲಿ ಕಂಡು ಬಂದ ದೃಶ್ಯ ಇದಾಗಿದೆ. ವಿಡಿಯೊ ವೈರಲ್ ಆಗುತ್ತಿದ್ದಂತೆ Coding Ninjas ಕಂಪನಿ ಹೇಳಿಕೆ ಬಿಡುಗಡೆ ಮಾಡಿದ್ದು, ಈ ಬಗ್ಗೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದೆ. ಹೀಗೆ ಬಾಗಿಲು ಹಾಕಲು ಸೂಚನೆ ನೀಡಿದ ಉದ್ಯೋಗಿಯನ್ನು ಪತ್ತೆ ಹಚ್ಚಲಾಯಿತು. ಅವರೂ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ್ದಾರೆ ಎಂದು ತಿಳಿಸಿದೆ. ಕಂಪನಿಯ ಸಂಸ್ಥಾಪಕರಿಗೂ ಈ ಬಗ್ಗೆ ವಿಷಯ ಗೊತ್ತಾಗಿದೆ. ಕ್ಷಮೆ ಕೇಳಿದರೂ ಉದ್ಯೋಗಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಿದ್ದೇವೆ ಎಂದು Coding Ninjas ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಕಂಪನಿಯ ಸಂಸ್ಥಾಪಕನ ಹೆಸರು ಅಂಕುಶ್ ಸಿಂಗ್ಲಾ ಎಂದಾಗಿದ್ದು, ಅವರೂ ಕೂಡ ಟ್ವೀಟ್ ಮಾಡಿಕೊಂಡಿದ್ದಾರೆ. ಕಳೆದ ವಾರ ನಮ್ಮ ಕಂಪನಿಯಲ್ಲಿ ಹೀಗಾಗಿದ್ದು ನಿಜ. ಸೇಲ್ಸ್ ವಿಭಾಗದ ಒಬ್ಬ ಮ್ಯಾನೇಜರ್​​ನಿಂದಾಗಿ ಸಮಸ್ಯೆಯಾಯಿತು. ತಕ್ಷಣವೇ ಕ್ರಮ ವಹಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಕಂಪನಿಯ ಹೇಳಿಕೆಗಳು ಮತ್ತು ಅಂಕುಶ್​ ಸಿಂಗ್ಲಾ ಟ್ವೀಟ್​ನ್ನು ಕೂಡ ರವಿ ಹಂಡಾ ಶೇರ್ ಮಾಡಿಕೊಂಡಿದ್ದಾರೆ. ಆದರೆ ನೆಟ್ಟಿಗರು ವಿಡಿಯೊ ನೋಡಿ, ಇದು ಅತಿರೇಕದ ವರ್ತನೆ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಶಾಲೆಯಲ್ಲಿ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡು ಸಿಕ್ಕಿಬಿದ್ದ ಪ್ರಿನ್ಸಿಪಾಲ್!

Viral Video: ವಿದ್ಯೆ ಕಲಿಸಬೇಕಿರುವ ಗುರು ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡು ಸಿಕ್ಕಿಬಿದ್ದ ವಿಡಿಯೊ ಈಗ ಎಲ್ಲೆಡೆ ಹರಿದಾಡುತ್ತಿದೆ. ಹೀಗೆ ಆದರೆ ನಮ್ಮ ಮುಂದಿನ ಪೀಳಿಗೆಯ ಭವಿಷದ್ಯದ ಗತಿಯೇನು ಎಂಬ ಚಿಂತೆ ಪೋಷಕರದ್ದು!

VISTARANEWS.COM


on

Viral Video
Koo

ಲಖನೌ: ಇತ್ತೀಚೆಗಷ್ಟೇ ಶಿಕ್ಷಕಿಗೆ ವಿದ್ಯಾರ್ಥಿಯೊಬ್ಬ ಕಪಾಳಮೋಕ್ಷ ಮಾಡಿದ ವಿಡಿಯೊ ವೈರಲ್ ಆಗಿದೆ. ಈಗ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಮಾಡಿದ ಅವಾಂತರದ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ. ಮಕ್ಕಳಿಗೆ ವಿದ್ಯೆ ಕಲಿಸಿ ಬುದ್ದಿ ಹೇಳಬೇಕಾಗಿರುವ ಶಿಕ್ಷಕರಿಯೊಬ್ಬರು ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ.

ಒಳ್ಳೆಯ ಗುರುವಿದ್ದರೆ ಮಕ್ಕಳ ಭವಿಷ್ಯ  ಒಳ್ಳೆಯದಾಗಿರುತ್ತದೆ ಎಂಬ ನಂಬಿಕೆ ಪೋಷಕರದ್ದು. ನಮ್ಮ ಮಗು ಶಾಲೆಗೆ ಹೋಗುತ್ತಿದೆ. ಏನಾದರೂ ಕಲಿತು ನಾಳೆ ನಮ್ಮ ಕಷ್ಟವನ್ನು ನಿಭಾಯಿಸುತ್ತದೆ ಎಂದು ಸಾಲ ಮಾಡಿ ಮಕ್ಕಳನ್ನು ಶಾಲೆಗೆ ಕಳಿಸುತ್ತಾರೆ. ಆದರೆ ಅಲ್ಲಿ ಅವರಿಗೆ ವಿದ್ಯೆಯನ್ನು ಧಾರೆ ಎರೆಯುವವರೇ ಸರಿ ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಗತಿಯೇನು? ವಿದ್ಯೆ ಕಲಿಸುವ ಗುರುಗಳೇ ಬೇರೆ ಕೆಲಸದಲ್ಲಿ ತೊಡಗಿಕೊಂಡು ಉಳಿದ ಶಿಕ್ಷಕರನ್ನು ತಲೆ ತಗ್ಗಿಸುವಂತೆ ಮಾಡಿದ ಘಟನೆ ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ನಡೆದಿದೆ.

ಏಪ್ರಿಲ್ 18ರಂದು ಬೆಳಿಗ್ಗೆ ಉತ್ತರ ಪ್ರದೇಶದ ಬಿಘಾಪುರ ಬ್ಲಾಕ್ ನ ದಂಡಮಾವು ಗ್ರಾಮದ ಪ್ರಾಥಮಿಕ ಶಾಲೆಯೊಂದರಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿಯೊಬ್ಬರು ಮಕ್ಕಳಿಗೆ ಪಾಠ ಮಾಡುವ ಬದಲು ತನ್ನ ಮುಖದ ಸೌಂದರ್ಯ ಹೆಚ್ಚು ಮಾಡಿಕೊಳ್ಳುವುದಕ್ಕಾಗಿ ಫೇಶಿಯಲ್ ಮಾಡಿಸಿಕೊಳ್ಳುವುದರಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಇದರಿಂದ ಆ ಶಾಲೆಯ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎನ್ನಲಾಗಿದೆ.

ಶಾಲಾ ಮುಖ್ಯೋಪಾಧ್ಯಾಯಿನಿ ಸಂಗೀತಾ ಸಿಂಗ್ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡ ಶಿಕ್ಷಕಿ.  ವಿದ್ಯಾರ್ಥಿಗಳಿಗೆ ಊಟ ತಯಾರಿಸುವ ಕೋಣೆಯಲ್ಲಿ ಫೇಶಿಯಲ್ ಮಾಡಿಕೊಳ್ಳುತ್ತಿರುವುದನ್ನು ಕಂಡು ಸಹಾಯಕ ಶಿಕ್ಷಕಿ ಅನಮ್ ಖಾನ್ ಅವರು ಇದನ್ನು ವಿಡಿಯೊ ಮಾಡಿದ್ದಾರೆ. ಇದರಿಂದ ಕೋಪಗೊಂಡ ಸಂಗೀತಾ ಸಿಂಗ್, ಅನಮ್ ಖಾನ್ ಅವರನ್ನು ಹಿಗ್ಗಾಮುಗ್ಗಾ  ಥಳಿಸಿ, ಆಕೆಯ ಕೈಯನ್ನು ಕಚ್ಚಿ ಗಾಯಗೊಳಿಸಿದ್ದಾರೆ. ಇನ್ನು ಸಂಗೀತ ಸಿಂಗ್ ಹಲ್ಲೆ ಮಾಡಿದ ವಿಡಿಯೊ ಹಾಗೂ ಫೇಶಿಯಲ್ ಮಾಡಿದ ವಿಡಿಯೊಗಳನ್ನು ಅನಮ್ ಖಾನ್ ಪೋಸ್ಟ್ ಮಾಡಿದ್ದಾರೆ. ಇವೆರಡು ವಿಡಿಯೊಗಳು ಸಿಕ್ಕಾಪಟ್ಟೆ ವೈರಲ್ ಆಗಿವೆ.

ಈ ವಿಡಿಯೊ ನೋಡಿದ ಬ್ಲಾಕ್ ನ ಶಿಕ್ಷಣಾಧಿಕಾರಿ ಸಂಗೀತಾ ಸಿಂಗ್ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ ಶಿಕ್ಷಕಿ ಅನಮ್ ಖಾನ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಸಂಗೀತಾ ಸಿಂಗ್ ವಿರುದ್ಧ ಬಿಘಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಂಡಮಾವು ಗ್ರಾಮದ ಶಾಲಾ ಮುಖ್ಯ ಶಿಕ್ಷಕಿ ಶಾಲಾ ಆವರಣದಲ್ಲೇ ಫೇಶಿಯಲ್ ಮಾಡಿಸಿಕೊಳ್ಳುತ್ತಿದ್ದು, ಸಿಕ್ಕಿಬಿದ್ದಿದ್ದಕ್ಕಾಗಿ ಥಳಿಸಿದ್ದಾರೆ ಎಂದು ಶಾಲಾ ಸಹಾಯಕ ಶಿಕ್ಷಕಿಯಿಂದ ದೂರು ಬಂದಿದೆ. ಈ ಬಗ್ಗ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಘಾಪುರ ವೃತ್ತಾಧಿಕಾರಿ ಮಾಯಾ ರೈ ತಿಳಿಸಿದ್ದಾರೆ.

ಇದನ್ನೂ ಓದಿ:  ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವ ಬದಲು ಶಿಕ್ಷಕರು ತಮ್ಮ ವೈಯಕ್ತಿಕ ಕೆಲಸಗಳಲ್ಲಿ ತಲ್ಲೀನರಾಗಿರುತ್ತಾರೆ. ಇದಕ್ಕೆ ಕಾರಣ ಸರ್ಕಾರದ ನಿರ್ಲಕ್ಷ್ಯ ಎನ್ನಬಹುದು. ಯಾಕೆಂದರೆ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ  ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿಗೆ ತರದ ಕಾರಣ ಶಿಕ್ಷಕರು ಮನಬಂದಂತೆ ವರ್ತಿಸುತ್ತಿದ್ದಾರೆ. ಹಾಗಾಗಿ ಇದನ್ನು ಗಮನಿಸಿದ ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಹಣವಿಲ್ಲದಿದ್ದರೂ ಸಾಲ ಮಾಡಿ ಖಾಸಗಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿದೆ. ಸರ್ಕಾರ ಈ ಕುರಿತು ಸೂಕ್ತ ಕ್ರಮ ಕೈಗೊಂಡರೆ ಒಳಿತು.

Continue Reading

ವೈರಲ್ ನ್ಯೂಸ್

Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Viral Video: ಮನೆಯಲ್ಲಿ ಒಂದು ಕಾರಿದ್ದರೆ ಮಕ್ಕಳು ಎಲ್ಲಿ ಹಾಳು ಮಾಡುತ್ತಾರೆ ಎಂದು ಬಹಳ ಕಾಳಜಿಯಿಂದ ನೋಡಿಕೊಳ್ಳುತ್ತೇವೆ. ಇಲ್ಲೊಬ್ಬಳು ಮಹಿಳೆ ಮಾತ್ರ ದುಬಾರಿ ಬೆಲೆಯ ಲ್ಯಾಂಬೋರ್ಗಿನಿ ಕಾರಿನ ಮೇಲೆ ಹತ್ತಿ ಕುಣಿದು ಕಾರನ್ನು ಯಾವ ಅವಸ್ಥೆಗೆ ತಂದಿದ್ದಾಳೆ ನೋಡಿ.

VISTARANEWS.COM


on

Viral Video
Koo

ಬೆಂಗಳೂರು: ಇತ್ತೀಚೆಗೆ ಏನೇ ಮಾಡಿದರೂ ಸೋಷಿಯಲ್ ಮೀಡಿಯಾದಲ್ಲಿ ಹಾಕಬೇಕು ಎನ್ನುವ ಹಪಹಪಿಯವರೇ ಹೆಚ್ಚು. ಊಟ ಮಾಡಿದ್ದು, ತಿರುಗಾಡಿದ್ದು ಕೊನೆಗೆ ಹೊಡೆದಾಡಿಕೊಂಡಿದ್ದನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿ ಅಲ್ಲಿ ಬರುವ ಲೈಕ್ಸ್, ಕಾಮೆಂಟ್ ಗಳನ್ನೇ ಚಾತಕಪಕ್ಷಿಯಂತೆ ಕಾಯುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆ ಮಾತ್ರ ತೀರಾ ಅತಿರೇಕಕ್ಕೆ ಹೋಗಿದ್ದಾಳೆ. ದುಬಾರಿ ಬೆಲೆಯ ಲ್ಯಾಂಬೋರ್ಗಿನಿ ಕಾರಿನ ಮೇಲೆ ಹಿಗ್ಗಾಮುಗ್ಗಾ ಕುಣಿದು ಅದರ ವಿಂಡ್ ಶೀಲ್ಡ್ ಅನ್ನೇ ಒಡೆದುಹಾಕಿದ್ದಾಳೆ. ಈ ವಿಡಿಯೊ ಈಗ ಸಖತ್ ವೈರಲ್ (Viral Video) ಆಗಿದೆ.

ಕಾರೆಂದರೆ ಜೀವಕ್ಕಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ. ಅದರಲ್ಲೂ ದುಬಾರಿ ಬೆಲೆಯ ಕಾರನ್ನು ಮುಟ್ಟುವುದಕ್ಕೂ ಬಿಡುವುದಿಲ್ಲ ಕೆಲವರು. ಆದರೆ ಈ ಮಹಿಳೆ ಮಾತ್ರ ವೀವ್ಸ್ ಹಾಗೂ ಲೈಕ್ಸ್ ಪಡೆಯಲು ದುಬಾರಿ ಬೆಲೆಯ ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿ ಅದರ ವಿಂಡ್ ಶೀಲ್ಡ್ ಒಡೆದು ಹಾಕಿದ್ದಾಳೆ.ಈ ವಿಡಿಯೋ ಈಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ಜನ ಹಿಗ್ಗಾಮುಗ್ಗಾ ಬೈದಿದ್ದಾರೆ.

ವಿಂಡ್ ಶಿಲ್ಡ್ ಒಡೆದರೂ ಡಾನ್ಸ್ ಬಿಡದ ಮಹಿಳೆ!

ಈ ವಿಡಿಯೊದಲ್ಲಿ ಗುಲಾಬಿ ಬಣ್ಣದ ಟ್ಯೂಬ್ ಟಾಪ್ ಮತ್ತು ಬಿಳಿ ಬಣ್ಣದ ಶಾರ್ಟ್ ಸ್ಕರ್ಟ್ ಧರಿಸಿದ ಮಹಿಳೆಯೊಬ್ಬಳು ನೀಲಿ ಬಣ್ಣದ ಲ್ಯಾಂಬೋರ್ಗಿನಿ ಕಾರ್ ನ ಮೇಲೆ ಡ್ಯಾನ್ಸ್ ಮಾಡುತ್ತಿದ್ದಳು. ಕುಣಿದ ಸ್ಪೀಡಿಗೆ ಕಾರಿನ ವಿಂಡ್ ಶಿಲ್ಡ್ ಒಡೆದು ಬಿರುಕು ಬಿಟ್ಟಿದೆ. ಕಾರಿನ ವಿಂಡ್ ಶಿಲ್ಡ್ ಒಡೆದಿದ್ದು ನೋಡಿಯೂ ಮಹಿಳೆ ಡ್ಯಾನ್ಸ್ ಮಾಡುವುದನ್ನು ಬಿಟ್ಟಿಲ್ಲ. ಈ ವಿಡಿಯೋವನ್ನು ರೆಡ್ಡಿಟ್ ಪೋಸ್ಟ್ ಮಾಡಿದ್ದು, ‘ಕೇವಲ ವೀವ್ಸ್ ಮತ್ತು ಲೈಕ್ಸ್ ಪಡೆಯಲು ಜನರು ಇದನ್ನೆಲ್ಲಾ ಯಾಕೆ ಮಾಡುತ್ತಾರೆ’? ಎಂದು ಈ ವಿಡಿಯೋಗೆ ಶೀರ್ಷಿಕೆ ನೀಡಿದೆ. ಇನ್ನು ಈ  ಘಟನೆ ನಡೆದ ಸ್ಥಳ ಮತ್ತು ದಿನ ತಿಳಿದುಬಂದಿಲ್ಲ.

ಸಿಕ್ಕಾಪಟ್ಟೆ ದುಬಾರಿಯಾಗಿರುವ ಲ್ಯಾಂಬೋರ್ಗಿನಿ ಕಾರು ಇರುವವರು ಅದನ್ನು ತುಂಬಾ ಕಾಳಜಿಯಿಂದ ನೋಡಿಕೊಳ್ಳುತ್ತಾರೆ. ಅಂತಹದರಲ್ಲಿ ಈ ಮಹಿಳೆ ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್ ಮತ್ತು ವೀವ್ಸ್ ಪಡೆಯಲು ಅಂತಹ ದುಬಾರಿ ಕಾರನ್ನೇ ಹಾಳುಮಾಡಿಕೊಳ್ಳುತ್ತಿರುವುದು ಜನರಿಗೆ ಬಹಳ ಅಚ್ಚರಿಯನ್ನುಂಟು ಮಾಡಿದೆ.

MC dances on top of car and breaks the windshield 🤦‍♂️
byu/EthanthegamerGD inImTheMainCharacter

ಈ ಹಿಂದೆಯೂ ಟಿಕ್ ಟಾಕ್ ನಲ್ಲಿ ಮಹಿಳೆಯರು ಇಂತಹ ವಿಡಿಯೊಗಳನ್ನು ಮಾಡಿದ್ದರು. ಕಾರುಗಳ ಮೇಲೆ ಕೆಸರನ್ನು ಎರಚುವುದು, ಕಾರಿನ ಮೇಲೆ ಹತ್ತಿ ಅದರ ಗ್ಲಾಸ್ ಅನ್ನು ಒಡೆಯುವಂತಹ ಹಲವಾರು ವಿಡಿಯೋಗಳು ಟಿಕ್ ಟಾಕ್ ನಲ್ಲಿ ಕಂಡುಬಂದಿವೆ.

ಈ ವಿಡಿಯೊ ವೈರಲ್ ಆಗಿದ್ದು, ಇದಕ್ಕೆ ವೀಕ್ಷಕರಿಂದ ಹಲವಾರು ಪ್ರತಿಕ್ರಿಯೆ ಬಂದಿದೆ. ಕೆಲವರು ಈ ವಿಡಿಯೊ ನೋಡಿ ಕೋಪವನ್ನು ವ್ಯಕ್ತಪಡಿಸಿದ್ದರೆ, ಕೆಲವರು ದುಬಾರಿ ಕಾರನ್ನು ಹಾಳುಮಾಡುತ್ತಿರುವುದನ್ನು ಕಂಡು ನೊಂದುಕೊಂಡಿದ್ದಾರೆ. ಕೆಲವರು ಕಾರಿನ ಗ್ಲಾಸ್ ಬಿರುಕು ಬಿಟ್ಟಿರುವುದನ್ನು ನೋಡಿಯೂ ಮತ್ತೆ ಡ್ಯಾನ್ಸ್ ಮುಂದುವರಿಸಿದ ಮಹಿಳೆಯ ಮೇಲೆ ಕಿಡಿಕಾರಿದ್ದಾರೆ.

ಇದನ್ನೂ ಓದಿ: Honour Killing: ರಸ್ತೆ ಬದಿಯಲ್ಲೇ ಮಹಿಳೆಯನ್ನು ದರದರನೆ ಎಳೆದು, ತಲೆಗೆ ಹೊಡೆದು ಕೊಲೆ ಮಾಡಿದ್ರು; ಇದೇನು ಮರ್ಯಾದೆ ಹತ್ಯೆಯಾ?

ಒಟ್ಟಾರೆ ಯುವಕ, ಯುವತಿಯರು ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು,  ವೀವ್ಸ್ ಮತ್ತು ಲೈಕ್ಸ್ ಅನ್ನು ಪಡೆಯಲು ಮಾಡುತ್ತಿರುವ ಹುಚ್ಚಾಟಗಳನ್ನು ನೋಡಿದರೆ ಮುಂದೆ ಅವರ ಜೀವಕ್ಕೆ ಅಪಾಯ ತಂದುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅನಿಸುತ್ತದೆ.

Continue Reading

ಕ್ರೀಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ ನೋಡಲು ಮುಗಿಬಿದ್ದ ಅಭಿಮಾನಿಗಳು

Virat Kohli: ಪ್ರಸಕ್ತ ಸಾಗುತ್ತಿರುವ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ವಿರಾಟ್​ ಕೊಹ್ಲಿ ಆರ್​ಸಿಬಿ ಪರ ಆಡಿದ 7 ಪಂದ್ಯಗಳಲ್ಲಿ 361 ರನ್​ ಬಾರಿಸಿ ಸದ್ಯ ಟೂರ್ನಿಯಲ್ಲಿ ಅತ್ಯಧಿಕ ರನ್​ಗಳಿಸಿ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

VISTARANEWS.COM


on

virat kohli
Koo

ಜೈಪುರ: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿಗೆ(Virat Kohli) ವಿಶ್ವದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅದರಲ್ಲಿಯೂ ಕೊಹ್ಲಿಯನ್ನು ನೋಡಲು ಅಭಿಮಾನಿಗಳು ಮುಗಿ ಬೀಳುತ್ತಾರೆ. ಕೊಹ್ಲಿ ಮೇಲಿನ ಅಭಿಮಾನಕ್ಕೋಸ್ಕರ ಜೈಪುರದಲ್ಲಿ ಕೊಹ್ಲಿಯ ಮೇಣದ ಪ್ರತಿಮೆಯೊಂದನ್ನು(Virat Kohli wax statue) ನಿರ್ಮಾಣ ಮಾಡಲಾಗಿದೆ. ಈ ಪ್ರತಿಮೆ ಜೈಪುರದ ವ್ಯಾಕ್ಸ್‌ ಮ್ಯೂಸಿಯಂನಲ್ಲಿದೆ. ಗುರುವಾರ ಇದನ್ನು ಅನಾವರಣಗೊಳಿಸಲಾಗಿತ್ತು.

35 ಕೆ.ಜಿ. ತೂಕದ ಕೊಹ್ಲಿ ಅವರ ಪ್ರತಿಮೆಯನ್ನು ಸುಮಾರು ಎರಡು ತಿಂಗಳಲ್ಲಿ ಕೆತ್ತಲಾಗಿದೆ. ಈ ಮ್ಯೂಸಿಯಂನಲ್ಲಿ ಈಗಾಗಗಲೇ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಸಚಿನ್‌ ತೆಂಡೂಲ್ಕರ್‌ ಮತ್ತು ಎಂ.ಎಸ್‌. ಧೋನಿ ಸಹಿತ 44 ಮಂದಿಯ ಮೇಣದ ಪ್ರತಿಮೆಗಳಿವೆ. ಮಹಾತ್ಮಾ ಗಾಂಧಿ, ಜವಾಹರ್‌ಲಾರ್‌ ನೆಹರೂ, ಎಪಿಜೆ ಅಬ್ದುಲ್‌ ಕಲಾಂ, ಸುಭಾಷ್‌ಚಂದ್ರ ಬೋಸ್‌, ಭಗತ್‌ ಸಿಂಗ್‌, ಕಲ್ಪನಾ ಚಾವ್ಲಾ, ಅಮಿತಾಭ್‌ ಬಚ್ಚನ್‌ ಮತ್ತು ಮದರ್‌ ತೆರೇಸಾ ಅವರ ಪ್ರತಿಮೆಯಿದೆ. ಕೊಹ್ಲಿಯ ಪ್ರತಿಮೆಯನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಬರುತ್ತಿದ್ದಾರೆ ಎಂದು ಮ್ಯೂಸಿಯಂನ ಸಂಸ್ಥಾಪಕ ನಿರ್ದೇಶಕ ಅನೂಪ್‌ ಶ್ರೀವಾಸ್ತವ ಹೇಳಿದ್ದಾರೆ.

ಕಳೆದ ವರ್ಷ ದೆಹಲಿಯ ಮೇಡಮ್ ಟುಸ್ಸಾಡ್ಸ್‌ನಲ್ಲಿರುವ ವಿರಾಟ್ ಕೊಹ್ಲಿ ಅವರ ಮೇಣದ ಪ್ರತಿಮೆಗೆ ಯುವತಿಯೊಬ್ಬಳು ಲಿಪ್ ಕಿಸ್ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಜತೆಗೆ ಮೇಣದ ಪ್ರತಿಮೆಯೊಂದಿಗೆ ಯುವತಿ ಪೋಸ್ ನೀಡಿರುವ ಫೋಟೋಗಳು ಕೂಡ ವೈರಲ್ ಆಗಿತ್ತು.

ಪ್ರಸಕ್ತ ಸಾಗುತ್ತಿರುವ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ವಿರಾಟ್​ ಕೊಹ್ಲಿ ಆರ್​ಸಿಬಿ ಪರ ಆಡಿದ 7 ಪಂದ್ಯಗಳಲ್ಲಿ 361 ರನ್​ ಬಾರಿಸಿ ಸದ್ಯ ಟೂರ್ನಿಯಲ್ಲಿ ಅತ್ಯಧಿಕ ರನ್​ಗಳಿಸಿ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಟಿ20 ವಿಶ್ವಕಪ್(T20 World Cup)​ ಟೂರ್ನಿಯಲ್ಲಿ ವಿರಾಟ್​ ಅವರು ರೋಹಿತ್​ ಜತೆ ಆರಂಭಿಕನಾಗಿ ಆಡಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

ಏಕದಿನ ವಿಶ್ವಕಪ್​ನಲ್ಲಿ ಹಲವು ದಾಖಲೆ


ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಬ್ಯಾಟಿಂಗ್​ ವಿರಾಟ ದರ್ಶನ ತೋರಿದ್ದ ಕೊಹ್ಲಿ ಟೂರ್ನಿಯ ಟಾಪ್‌ ಸ್ಕೋರರ್‌ ಆಗಿ ಹೊರಮೊಮ್ಮಿದ್ದರು. ಅಲ್ಲದೆ ತಮ್ಮ ಹೆಸರಿಗೆ ನಾನಾ ದಾಖಲೆಗಳನ್ನೂ ಬರೆದಿದ್ದರು. ಲೀಗ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 101 ರನ್‌ ಗಳಿಸಿ ಸಚಿನ್​ ಅವರ 49ನೇ ಶತಕವನ್ನು ಸರಿಗಟ್ಟಿದ್ದರು. ನ್ಯೂಜಿಲ್ಯಾಂಡ್‌ ವಿರುದ್ಧದ ಸೆಮಿಫೈನಲ್‌ನಲ್ಲಿ 117 ರನ್‌ ಗಳಿಸಿದ ಕೊಹ್ಲಿ, ಸಚಿನ್​ ಅವರ ದಾಖಲೆ ಮುರಿದು 50ನೇ ಸೆಂಚುರಿ ಬಾರಿಸಿ ದಾಖಲೆ ನಿರ್ಮಿಸಿದ್ದರು. ಒಟ್ಟಾರೆಯಾಗಿ ಟೂರ್ನಿಯಲ್ಲಿ ಆಡಿದ 11 ಪಂದ್ಯಗಳಲ್ಲಿ 765 ರನ್​ ಬಾರಿಸಿದ್ದರು.

Continue Reading

ಪ್ರಮುಖ ಸುದ್ದಿ

Viral Video: ಐಷಾರಾಮಿ ಹಾರ್ಲೆ –ಡೇವಿಡ್ಸನ್​ ಬೈಕ್​ನಲ್ಲಿ ಫುಡ್​ ಡೆಲಿವರಿ ಕೊಟ್ಟ ಯುವಕ; ವಿಡಿಯೊ ವೈರಲ್

Viral Video ಜೊಮ್ಯಾಟೋ ಡೆಲಿವರಿ ಬಾಯ್ ಒಬ್ಬ ಹಾರ್ಲೆ –ಡೇವಿಡ್ಸ್ ನ ಬೈಕ್ ನಲ್ಲಿ ಪಾರ್ಸೆಲ್ ಅನ್ನು ಸಾಗಿಸುತ್ತಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

VISTARANEWS.COM


on

Video Viral
Koo

ಬೆಂಗಳೂರು: ನಮ್ಮಲ್ಲಿ ಹಲವಾರು ಫುಡ್ ಡೆಲಿವರಿ ಕಂಪೆನಿಗಳಿವೆ. ಅವುಗಳಲ್ಲಿ ಹಲವಾರು ಯುವಕರು ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಈ ಡೆಲಿವರಿ ಬಾಯ್​ ಕೆಲಸವನ್ನು (Viral Video) ತುಂಬಾ ಬಡತನದಲ್ಲಿರುವವರೇ ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಮನೆಯ ದಿನನಿತ್ಯದ ಖರ್ಚುಗಳನ್ನು ತೂಗಿಸಲು, ಓದಿನ ಫೀಸ್ ಗಾಗಿ ಇಲ್ಲಿ ಕೆಲಸಕ್ಕೆ ಸೇರುತ್ತಾರೆ. ಬಿಸಿಲು, ಮಳೆ, ಚಳಿ ಎನ್ನದೇ ಸಮಯಕ್ಕೆ ಸರಿಯಾಗಿ ಗ್ರಾಹಕರ ಮನೆಗೆ ಫುಡ್ ಅನ್ನು ತಂದು ಕೊಡುತ್ತಾರೆ.

ಫುಡ್ ಡೆಲಿವರಿ ಕಂಪೆನಿಗಳಲ್ಲಿ ಕೆಲಸ ಮಾಡುವ ಹುಡುಗರು ಬೈಕ್ ಅನ್ನು ಹೊಂದಿರಲೇಬೇಕು. ಯಾಕೆಂದರೆ ಫುಡ್ ಗಳನ್ನು ಡೆಲಿವರಿ ಮಾಡಲು ಬೈಕ್ ಮೂಲಕವೇ ಹೋಗಬೇಕಾಗುತ್ತದೆ ಹಾಗಾಗಿ ಇಲ್ಲಿ ಕೆಲಸ ಮಾಡುವಂತಹ ಹೆಚ್ಚಿನ ಯುವಕರು ಬೈಕ್ ಅನ್ನು ಸಾಲ ಮಾಡಿ ಖರೀದಿಸಿರುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುತ್ತದೆ. ಆದರೆ ಇಲ್ಲೊಬ್ಬ ಡೆಲಿವರಿ ಬಾಯ್ ಸೂಪರ್ ಬೈಕ್​ನಲ್ಲಿ ಹೋಗಿ ಡೆಲಿವರಿ ಮಾಡುತ್ತಿದ್ದಾನೆ. ಆತನ ವೈಖರಿ ನೋಡಿ ಎಲ್ಲರೂ ಚಕಿತರಾಗಿದ್ದಾರೆ.

ಜೊಮ್ಯಾಟೋ ಡೆಲಿವರಿ ಬಾಯ್ ಒಬ್ಬ ಹಾರ್ಲೆ –ಡೇವಿಡ್ಸನ್​ ಬೈಕ್ ನಲ್ಲಿ ಪಾರ್ಸೆಲ್ ಅನ್ನು ಸಾಗಿಸುವುದು ಕಂಡು ಬಂದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವಿಡಿಯೊದಲ್ಲಿರುವ ಸಿಟಿ ಪೊಲೀಸ್ ಬ್ಯಾರಿಕೆಡ್ ಮತ್ತು ಪೊಲೀಸರ ಸಮವಸ್ತ್ರ ನೋಡಿ ಇದು ಬೆಂಗಳೂರಿನಲ್ಲಿ ಶೂಟ್ ಮಾಡಿದ ವಿಡಿಯೊ ಎನ್ನಲಾಗಿದೆ.

ಈ ವಿಡಿಯೊ ಡೆಲಿವರಿ ಬಾಯ್ ಕೆಲಸವನ್ನು ಕೀಳುಮಟ್ಟದಲ್ಲಿ ನೋಡತ್ತಿಲ್ಲ. ಆದರೆ ಹಾರ್ಲೆ ಡೇವಿಡ್ಸ್ ಕಂಪೆನಿ ಅಮೇರಿಕಾ ಪ್ರಸಿದ್ಧ ಬೈಕ್ ಉತ್ಪಾದನಾ ಕಂಪೆನಿಯಾಗಿದೆ. ಕೆಲ ದಿನಗಳ ಹಿಂದೆ ಈ ಕಂಪೆನಿ ಎಕ್ಸ್ 440 ಬೈಕ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಈ ಬೈಕ್ ನ ಬೆಲೆ 2.4 ಲಕ್ಷ ರೂಪಾಯಿಯಾಗಿದೆ. ಇಂತಹ ಐಷರಾಮಿ ಬೈಕ್ ಅನ್ನು ಹೆಚ್ಚಾಗಿ ಶ್ರೀಮಂತರು ಬಳಸುತ್ತಾರೆ. ಆದರೆ ಇದನ್ನು ಜೊಮೆಟೊ ಡೆಲಿವರಿ ಬಾಯ್ ಬಳಿ ನೋಡಿ ಜನರು ಆಶ್ಚರ್ಯಚಕಿತರಾಗಿದ್ದಾರೆ.

ಇದನ್ನೂ ಓದಿ: Raj Kundra: ಬಿಟ್‌ಕಾಯಿನ್‌ ಪೋಂಜಿ ಸ್ಕೀಮ್‌; ಇಡಿಯಿಂದ ರಾಜ್‌ ಕುಂದ್ರಾ ₹97 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಫುಡ್ ಕಂಪೆನಿಯ ಗಿಮಿಕ್!

ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದುವರೆಗೂ 2 ಮಿಲಿಯನ್ ಕ್ಕಿಂತ ಹೆಚ್ಚು ವೀವ್ಸ್​ ಅನ್ನು ಪಡೆದಿದೆ ಎನ್ನಲಾಗಿದೆ. ಅಲ್ಲದೇ ಈ ವಿಡಿಯೊಗೆ ಹೆಚ್ಚು ಕಾಮೆಂಟ್ ಬಂದಿದ್ದು, ಕೆಲವರು ವ್ಯಕ್ತಿಯನ್ನು ಹೊಗಳಿದರೆ ಇನ್ನು ಕೆಲವರು ತಮಾಷೆ ಮಾಡಿದ್ದಾರೆ. ಇದು ಫುಡ್ ಕಂಪೆನಿಯ ಪ್ರಚಾರಕ್ಕಾಗಿ ಮಾಡಿರಬಹುದು ಎಂದರೆ ಕೆಲವರು ಜೊಮ್ಯಾಟೋ ಫುಡ್ ಕಂಪೆನಿ ಮಾಲೀಕರು ಈ ಫುಡ್ ಅನ್ನು ಡೆಲಿವರಿ ಮಾಡುತ್ತಿರಬಹುದು ಎಂದಿದ್ದಾರೆ. ಇನ್ನೂಬ್ಬರು ಮನೆಯಲ್ಲಿ ಖರ್ಚಿಗೆ ಹಣ ನೀಡದ ಕಾರಣ ಈ ಕೆಲಸ ಮಾಡುತ್ತಿದ್ದಾನೆ ಎಂದಿದ್ದಾರೆ. ಒಟ್ಟಾರೆ ಡೆಲಿವರಿ ಬಾಯ್ ಬಳಿ ಈ ಬೈಕ್ ನೋಡಿ ಜನರು ಅಚ್ಚರಿಗೊಂಡಿದ್ದಲ್ಲದೇ ಡೆಲಿವರಿ ಬಾಯ್ ಐಷರಾಮಿ ಬೈಕ್ ಅನ್ನು ಹೊಂದಲು ಸಾಧ್ಯವಿಲ್ಲ ಎಂಬ ನಿಲುವನ್ನು ಬದಲಾಯಿಸಿದ್ದಾರೆ.

Continue Reading
Advertisement
Suicide bomb Attack karachi
ವಿದೇಶ12 mins ago

Suicide bomb Attack: ಪಾಕ್‌ನಲ್ಲಿ ಜಪಾನೀಯರಿದ್ದ ವಾಹನಕ್ಕೆ ಆತ್ಮಹತ್ಯಾ ಬಾಂಬ್‌ ದಾಳಿ: 2 ಬಲಿ

Dubai Rain
ಕ್ರೀಡೆ12 mins ago

Dubai Rain: ಭಾರತೀಯ ಕುಸ್ತಿಪಟುಗಳ ಪ್ಯಾರಿಸ್​ ಒಲಿಂಪಿಕ್ಸ್​ ಕನಸಿಗೆ ತಣ್ಣೀರೆರಚಿದ ದುಬೈ ಮಳೆ

Self Harming In Karwar
ಉತ್ತರ ಕನ್ನಡ16 mins ago

Self Harming : ಕಾಲೇಜಿನಿಂದ ಬಂದವಳೇ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

Neha Murder Case Neha stabbed in ISIS model murdered for not working Love jihad says Pramod Muthalik
ಕ್ರೈಂ27 mins ago

Neha Murder Case: ಐಸಿಸ್‌ ಮಾದರಿಯಲ್ಲಿ ನೇಹಾಗೆ ಚಾಕು ಇರಿತ; ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

Lok sabha election-2024
Latest34 mins ago

Lok sabha Election‌ 2024: ಲೋಕಸಭೆ ಚುನಾವಣೆಯಲ್ಲಿ ಈ 10 ವಿಷಯಗಳೇ ನಿರ್ಣಾಯಕ

Nenapirali Prem New Movie announced
ಸ್ಯಾಂಡಲ್ ವುಡ್44 mins ago

Nenapirali Prem: ಪೊಲೀಸ್ ಖದರ್‌ನಲ್ಲಿ `ನೆನಪಿರಲಿ ಪ್ರೇಮ್’: ಹೊಸ ಸಿನಿಮಾ ಅನೌನ್ಸ್‌!

Neha murder case Karnataka is becoming another Bihar says Basavaraj Bommai
ಕರ್ನಾಟಕ47 mins ago

Neha Murder Case: ನೇಹಾ ಕೊಲೆ ಕೇಸ್; ಕರ್ನಾಟಕ ಮತ್ತೊಂದು ಬಿಹಾರವಾಗುತ್ತಿದೆ: ಬಸವರಾಜ ಬೊಮ್ಮಾಯಿ

Assault Case
ಬೆಂಗಳೂರು48 mins ago

Assault Case: ಸಿಸಿಬಿ ಪೊಲೀಸರ ಮೇಲೆ ಕಲ್ಲು, ದೊಣ್ಣೆಯಿಂದ ನೈಜೀರಿಯಾ ಪ್ರಜೆಗಳು ಅಟ್ಯಾಕ್‌

India’s Russian oil imports hit record high in February
ಪ್ರಮುಖ ಸುದ್ದಿ54 mins ago

Israel- Iran war: ಇರಾನ್‌ ವಾಯುನೆಲೆ ಮೇಲೆ ಇಸ್ರೇಲ್‌ ದಾಳಿ ಆರಂಭ; ಕಚ್ಚಾ ತೈಲ ಬೆಲೆ 4% ಏರಿಕೆ

Teja Sajja Hanuman Movie Feme Mirai announce
ಟಾಲಿವುಡ್1 hour ago

Teja Sajja: ಹೊಸ ಸಿನಿಮಾ ಅನೌನ್ಸ್‌ ಮಾಡಿದ ʻಹನುಮಾನ್ʼ ಹೀರೊ ತೇಜ್ ಸಜ್ಜಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ8 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌