ವಿಚ್ಛೇದನ; ಪತ್ನಿಯೇ ಪತಿಗೆ 5 ಸಾವಿರ ರೂ. ಜೀವನಾಂಶ ಕೊಡಲು ಕೋರ್ಟ್‌ ಆದೇಶ! - Vistara News

ವೈರಲ್ ನ್ಯೂಸ್

ವಿಚ್ಛೇದನ; ಪತ್ನಿಯೇ ಪತಿಗೆ 5 ಸಾವಿರ ರೂ. ಜೀವನಾಂಶ ಕೊಡಲು ಕೋರ್ಟ್‌ ಆದೇಶ!

Viral news: ವಿಚ್ಛೇದನ ಸಂದರ್ಭದಲ್ಲಿ ಪತ್ನಿಗೆ ಪತಿ ಜೀವನಾಂಶ ನೀಡುವುದು ವಾಡಿಕೆ. ಆದರೆ ಇಂದೋರ್‌ನ ಕೋರ್ಟ್‌ ಮಹತ್ವದ ತೀರ್ಪು ನೀಡಿ ಪತ್ನಿಯೇ ಪತಿಗೆ ಜೀವನಾಂಶ ಕೊಡಬೇಕು ಎಂದು ಆದೇಶ ಹೊರಡಿಸಿದೆ.

VISTARANEWS.COM


on

divorce
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭೋಪಾಲ್‌: ಮಧ್ಯ ಪ್ರದೇಶದ ಇಂದೋರ್‌ನ ಕೌಟುಂಬಿಕ ನ್ಯಾಯಾಲಯ (Indore family court)ವು ಮಹತ್ವದ ತೀರ್ಪು ನೀಡಿ, ವಿಚ್ಛೇದನದ ಬಳಿಕ ನಿರುದ್ಯೋಗಿ ಪತಿಗೆ ಪ್ರತಿ ತಿಂಗಳು 5 ಸಾವಿರ ರೂ. ಜೀವನಾಂಶ ನೀಡುವಂತೆ ಬ್ಯೂಟಿ ಪಾರ್ಲರ್‌ ಹೊಂದಿರುವ ಪತ್ನಿಗೆ ಆದೇಶಿಸಿದೆ (Viral news).

ʼʼಪತ್ನಿಯ ಒತ್ತಾಯದ ಮೇರೆಗೆ ಕಾಲೇಜು ತೊರೆದು ನಿರುದ್ಯೋಗಿಯಾಗಿದ್ದೆ. ಆದರೆ ತನ್ನ ಪತ್ನಿ ನಂದಿನಿ (22) ಇಂದೋರ್‌ನಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದಾರೆʼʼ ಎಂದು 23 ವರ್ಷದ ಅಮನ್ ಕುಮಾರ್ ನೀಡಿರುವ ಹೇಳಿಕೆಯನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿ ಈ ವಿಶೇಷ ತೀರ್ಪು ಪ್ರಕಟಿಸಿದೆ.

ಅಮನ್‌ ಪರ ವಾದ ಮಂಡಿಸಿದ ವಕೀಲ ಮನೀಷ್‌ ಝರೋಲಾ ಈ ಬಗ್ಗೆ ಮಾತನಾಡಿ, ʼʼನಾವು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಜೀವನಾಂಶವಲ್ಲದೆ ವ್ಯಾಜ್ಯ ಮುಂದುವರಿಸುವುದಕ್ಕೆ ಸಂಬಂಧಿಸಿದ ವೆಚ್ಚವನ್ನೂ ನೀಡುವಂತೆ ನಂದಿನಿಗೆ ಸೂಚಿಸಿದೆʼʼ ಎಂದು ತಿಳಿಸಿದ್ದಾರೆ.

ʼʼಉಜ್ಜಯಿನಿ ಮೂಲದ ಅಮನ್‌ಗೆ ಸ್ನೇಹಿತರೊಬ್ಬರ ಮುಖಾಂತರ 2020ರಲ್ಲಿ ನಂದಿನಿಯ ಪರಿಚಯವಾಗಿತ್ತು. ಆ ಪರಿಚಯ ಬಳಿಕ ಸಲುಗೆಗೆ ತಿರುಗಿತ್ತು. ನಂತರ ನಂದಿನಿ ಮದುವೆಯಾಗುವಂತೆ ಕೇಳಿಕೊಂಡಿದ್ದರು. ಆದರೆ ಅಮನ್‌ ಇದಕ್ಕೆ ಆರಂಭದಲ್ಲಿ ಒಪ್ಪಿಗೆ ಸೂಚಿಸಿರಲಿಲ್ಲ. ಮದುವೆಯಾಗದಿದ್ದರೆ ಆತ್ಮಹತ್ಯೆ ಮಾಡಿಕ‍್ಳಳುವುದಾಗಿ ನಂದಿನಿ ಬೆದರಿಕೆ ಒಡ್ಡಿದ್ದರು. ಹೀಗಾಗಿ ಅನಿವಾರ್ಯವಾಗಿ ಅಮನ್‌ 2021ರ ಜುಲೈಯಲ್ಲಿ ಆರ್ಯ ಸಮಾಜ ಮಂದಿರದಲ್ಲಿ ನಂದಿನಿಯನ್ನು ವರಿಸಿದ್ದರು. ಬಳಿಕ ಅವರು ಇಂದೋರ್‌ನಲ್ಲಿ ಜೀವನ ಸಾಗಿಸಲು ಆರಂಭಿಸಿದ್ದರುʼʼ ಎಂದು ಮನೀಷ್‌ ಪ್ರಕರಣದ ಹಿನ್ನೆಲೆ ವಿವರಿಸಿದ್ದಾರೆ.

ʼʼಮದುವೆ ಬಳಿಕ ನಂದಿನಿಯ ಮನೆಯವರು ತೊಂದರೆ ಕೊಡಲಾರಂಭಿಸಿದರು. ಮಾತ್ರವಲ್ಲ ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳ್ಳುವಂತೆ ಮಾಡಿದರು. ಹೀಗಾಗಿ ಕೆಲವೇ ದಿನಗಳಲ್ಲಿ ಅಂದರೆ ಸೆಪ್ಟೆಂಬರ್‌ನಲ್ಲಿ ಪೋಷಕರ ಮನೆಗೆ ಮರಳಿದೆ. ಬಳಿಕ ಇಬ್ಬರು ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದೆವುʼʼ ಎಂದು ಅಮನ್‌ ತಿಳಿಸಿದ್ದಾರೆ.

ಅತ್ತ ಅಮನ್‌ ಪೋಷಕರ ಮನೆಗೆ ತೆರಳಿದಾಗ ನಂದಿನಿ ನಾಪತ್ತೆಯ ದೂರು ದಾಖಲಿಸಿದ್ದರು. ಇತ್ತ ಅಮನ್‌ ಉಜ್ಜಯಿನಿ ಪೊಲೀಸ್‌ ಠಾಣೆಗೆ, ನಂದಿನಿ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದರು. ಜತೆಗೆ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಜೀವನಾಂಶವನ್ನು ಕೋರಿದ್ದರು. ಇದಕ್ಕೆ ಪ್ರತಿಯಾಗಿ 2021ರ ಡಿಸೆಂಬರ್‌ನಲ್ಲಿ ಮತ್ತೊಮ್ಮೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ ನಂದಿನಿ ಅಮನ್‌ ವಿರುದ್ಧ ಕೌಟುಂಬಿಕ ಹಿಂಸೆಯ ದೂರು ನೀಡಿದ್ದರು. 2023ರ ಡಿಸೆಂಬರ್‌ನಲ್ಲಿ ಅಮನ್‌ ಇಂದೋರ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ತನ್ನ ಮದುವೆಯನ್ನು ಅಸಿಂಧು ಎಂದು ಪರಿಗಣಿಸುವಂತೆ ಕೋರಿದ್ದರು. ಫೆಬ್ರವರಿ 21ರಂದು ನಡೆದ ವಿಚಾರಣೆಯ ಸಮಯದಲ್ಲಿ ನಂದಿನಿ ತಾನು ಅಮನ್ ಅವರೊಂದಿಗೆ ವಾಸಿಸಲು ಇಚ್ಛಿಸುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: Viral News: ಅಂಗವೈಕಲ್ಯತೆ ಇದ್ದರೂ ಸ್ವಾಭಿಮಾನದ ಬದುಕು; ಈ ಫುಡ್‌ ಡೆಲಿವರಿ ಏಜೆಂಟ್‌ ವಿಲ್‌ ಪವರ್‌ಗೆ ನೆಟ್ಟಿಗರ ಬಹುಪರಾಕ್‌

ʼʼತಾನು ನಿರುದ್ಯೋಗಿ ಮತ್ತು ಅಮನ್‌ ಉದ್ಯೋಗದಲ್ಲಿದ್ದಾರೆ ಎಂದು ನ್ಯಾಯಾಲಯಕ್ಕೆ ನಂದಿನಿ ಸುಳ್ಳು ಮಾಹಿತಿ ನೀಡಿದ್ದರು. ಅಲ್ಲದೆ ಅವರ ಹೇಳಿಕೆಯಲ್ಲಿ ಅನೇಕ ಗೊಂದಲಗಳಿರುವುದನ್ನು ಗಮನಿಸಿ ನ್ಯಾಯಾಲಯ ನಂದಿನಿ ಅರ್ಜಿಯನ್ನು ತಳ್ಳಿ ಹಾಕಿದೆ. ಅಲ್ಲದೆ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆʼʼ ಎಂದು ಮನೀಷ್‌ ಹೇಳಿದ್ದಾರೆ.

ನಿಯಮ ಏನು ಹೇಳುತ್ತದೆ?

ಹಿಂದೂ ವಿವಾಹ ಕಾಯ್ದೆ 1955 (Hindu Marriage Act, 1955)ರ ಅಡಿಯಲ್ಲಿ ಪುರುಷರು ಮತ್ತು ಮಹಿಳೆಯರು ಇಬ್ಬರೂ ಜೀವನಾಂಶವನ್ನು ಕೋರಬಹುದಾಗಿದೆ. ಜೀವನಾಂಶಕ್ಕಾಗಿ ಲಿಂಗ ಮತ್ತು ಧರ್ಮ ತಟಸ್ಥ ಏಕರೂಪದ ನಿಬಂಧನೆಯನ್ನು ಕೋರಿ 2020ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಈ ಬಗ್ಗೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೋರಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಛೇ…ಇವರೆಂಥಾ ರಾಕ್ಷಸರು! ಕೈ ಕಾಲು ಕಟ್ಟಿ ಚೆನ್ನಾಗಿ ಥಳಿಸಿ ಯುವಕನ ಹತ್ಯೆ-ವಿಡಿಯೋ ನೋಡಿ

Viral Video: ಅಕ್ರಮ ಮದ್ಯ ದಂಧೆಕೋರರು ರಾಮೇಶ್ವರ ವಾಲ್ಮೀಕಿಯನ್ನು ಅಪಹರಿಸಿದ್ದರು, ಇದಾದ ಬಳಿಕ ನಾಲ್ಕೈದು ಜನ ಸೇರಿಕೊಂಡು ಆತನ ಕೈ ಮತ್ತು ಕಾಲುಗಳನ್ನು ಕಟ್ಟಿ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಹಲ್ಲೆ ನಡೆಸುತ್ತಿರುವ ವಿಡಿಯೋವನ್ನೂ ಕೂಡ ಮಾಡಿದ್ದಾರೆ. ವಿಡಿಯೋದಲ್ಲಿ ವಾಲ್ಮೀಕಿಯ ಕಾಲುಗಳನ್ನು ಹಗ್ಗದಿಂದ ಒಂದು ರಾಡ್‌ಗೆ ಕಟ್ಟಿ ಮತ್ತೊಬ್ಬ ಆತನ ಕೈಗಳನ್ನು ಹಿಡಿದಿರುತ್ತಾನೆ. ಮತ್ತೊಬ್ಬ ಕಿಡಿಗೇಡಿ ಕೋಲಿನಿಂದ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಾಲ್ಮೀಕಿ ಕೊನೆಯುಸಿಳೆದಿದ್ದಾನೆ.

VISTARANEWS.COM


on

Viral Video
Koo

ರಾಜಸ್ಥಾನ: ದಲಿತ ಯುವಕ(Dalit Youth)ನನ್ನು ಅಪಹರಿಸಿ ಹಗ್ಗದಲ್ಲಿ ಕಟ್ಟಿ ಚೆನ್ನಾಗಿ ಥಳಿಸಿ ಕೊಂದಿರುವ ಅಮಾನವೀಯ ಘಟನೆ ರಾಜಸ್ಥಾನ(Rajasthan)ದಲ್ಲಿ ನಡೆದಿದೆ. ಜುನ್‌ಜುನ್‌ ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ರಾಮೇಶ್ವರ ವಾಲ್ಮೀಕಿ(Rameshwar Valmiki) ಎಂದು ಗುರುತಿಸಲಾಗಿದೆ. ಇನ್ನು ಈ ಶಾಕಿಂಗ್‌ ಘಟನೆಯ ವಿಡಿಯೋವನ್ನು(Viral Video) ಸ್ವತಃ ದುಷ್ಕರ್ಮಿಗಳೇ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದಾದ ಬಳಿಕ ಆಪ್‌ ಮುಖಂಡ ಸಂಜಯ್‌ ಸಿಂಗ್‌ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಿಡಿ ಕಾರಿದ್ದಾರೆ.

ಘಟನೆ ವಿವರ:

ಮೇ ̆̆14 ರಂದು ಜುನ್‌ಜನ್‌ ಜಿಲ್ಲೆಯ ಬಲೋಡಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಕ್ರಮ ಮದ್ಯ ದಂಧೆಕೋರರು ರಾಮೇಶ್ವರ ವಾಲ್ಮೀಕಿಯನ್ನು ಅಪಹರಿಸಿದ್ದರು, ಇದಾದ ಬಳಿಕ ನಾಲ್ಕೈದು ಜನ ಸೇರಿಕೊಂಡು ಆತನ ಕೈ ಮತ್ತು ಕಾಲುಗಳನ್ನು ಕಟ್ಟಿ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಹಲ್ಲೆ ನಡೆಸುತ್ತಿರುವ ವಿಡಿಯೋವನ್ನೂ ಕೂಡ ಮಾಡಿದ್ದಾರೆ. ವಿಡಿಯೋದಲ್ಲಿ ವಾಲ್ಮೀಕಿಯ ಕಾಲುಗಳನ್ನು ಹಗ್ಗದಿಂದ ಒಂದು ರಾಡ್‌ಗೆ ಕಟ್ಟಿ ಮತ್ತೊಬ್ಬ ಆತನ ಕೈಗಳನ್ನು ಹಿಡಿದಿರುತ್ತಾನೆ. ಮತ್ತೊಬ್ಬ ಕಿಡಿಗೇಡಿ ಕೋಲಿನಿಂದ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಾಲ್ಮೀಕಿ ಕೊನೆಯುಸಿಳೆದಿದ್ದಾನೆ.

ಬಿಜೆಪಿ ವಿರುದ್ಧ ಆಪ್‌ ಕಿಡಿ

ಇನ್ನು ವಾಲ್ಮೀಕಿ ಮೇಲಿನ ಹಲ್ಲೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿರುವ ಆಪ್‌ ಮುಖಂಡ ಸಂಜಯ್‌ ಸಿಂಗ್‌ ಪ್ರಧಾನಿ ಮೋದಿ ಮತ್ತು ರಾಜಸ್ಥಾನ ಸಿಎಂ ಭಜನ್‌ಲಾಲ್‌ ವಿರುದ್ಧ ಕಿಡಿ ಕಾರಿದ್ದಾರೆ. ಇದು ರಾಜಸ್ಥಾನದಲ್ಲಿ ಡಬಲ್‌ ಎಂಜಿನ್‌ ಸರ್ಕಾರದ ನೈಜ ಸ್ಥಿತಿ. ದಲಿತರ ಮೀಸಲಾತಿ ಕಿತ್ತುಕೊಂಡು ಅವರು ಹೊಡೆದು ಬಡಿದು ಕೊಲ್ಲಲು ಬಿಜೆಪಿಗೆ 400 ಸ್ಥಾನಗಳು ಬೇಕಾಗಿವೆ. ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಲೇ ಇರುತ್ತದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ:Mother Dies: ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ಸಾವು; 35 ಲಕ್ಷ ಬಿಲ್‌ ಕಟ್ಟಿ ಮೃತದೇಹ ತೆಗೆದುಕೊಳ್ಳಿ ಎಂದ ಆಸ್ಪತ್ರೆ!

ಐವರ ಬಂಧನ

ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಐವರು ಕಿಡಿಗೇಡಿಗಳನ್ನು ಅರೆಸ್ಟ್‌ ಮಾಡಿದ್ದಾರೆ. ದೀಪೇಂದ್ರ ಅಲಿಯಾಸ್ ಚಿಂಟು ರಜಪೂತ್, ಪ್ರವೀಣ್ ಅಲಿಯಾಸ್ ಪಿಕೆ ಮೇಘವಾಲ್, ಪ್ರವೀಣ್ ಅಲಿಯಾಸ್ ಬಾಬಾ ಮೇಘವಾಲ್, ಸುಭಾಷ್ ಅಲಿಯಾಸ್ ಚಿಂಟು ಮೇಘವಾಲ್, ಮತ್ತು ಸತೀಶ್ ಅಲಿಯಾಸ್ ಸುಖ ಮೇಘವಾಲ್ ಬಂಧಿತ ಆರೋಪಿಗಳು. ಆರೋಪಿಗಳು ಈ ಹಿಂದೆಯೂ ಇತರ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ ಎಂಬ ವರದಿಗಳಿವೆ. ಸೂರಜ್‌ಗಢ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ನ್ಯಾಯ ಕೊಡಿಸಿ ಎಂದು ಠಾಣೆ ಎದುರೇ ಎಸ್‌ಐ ಪತ್ನಿ ಅಹೋರಾತ್ರಿ ಧರಣಿ; ಏನಿದು ಕೇಸ್‌?

Viral News:ಕರೀಂ ನಗರ ನಿವಾಸಿಯಾಗಿರುವ ಎಸ್‌ಐ ನಾಗರಾಜು ವಿರುದ್ಧ ಆತನ ಪತ್ನಿ ಮಾನಸ ಠಾಣೆಗೆ ದೂರು ನೀಡಿದ್ದು, ನ್ಯಾಯ ಸಿಗುವವರೆಗೆ ಠಾಣೆ ಎದುರೇ ಧರಣಿ ನಡೆಸುವುದಾಗಿ ಹೇಳಿದ್ದಾರೆ. ಅಲ್ಲದೇ ಅಹೋರಾತ್ರಿ ರಾಣೆ ಎದುರು ಧರಣಿ ನಡೆಸಿದ ಮಾನಸ ರಾಜ್ಯದ ಗಮನ ಸೆಳೆದಿದ್ದಾಳೆ. ಎರಡು ವರ್ಷಗಳಿಂದ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿಲ್ಲ ಎಂದು ಗಂಡನ ವಿರುದ್ಧ ಆರೋಪ ಮಾಡಿರುವ ಮಾನಸ, ನನ್ನಿಬ್ಬರು ಮಕ್ಕಳಿಂದಲೂ ನನ್ನನ್ನು ದೂರವಿಟ್ಟಿದ್ದಾರೆ ಎಂದಿದ್ದಾಳೆ.

VISTARANEWS.COM


on

Viral News
Koo

ತೆಲಂಗಾಣ: ಜನರಿಗೆ ಅನ್ಯಾಯ ಆಗಾದ ಮೊದಲು ಓಡಿ ಹೋಗುವುದು ಪೊಲೀಸರ ಬಳಿಗೆ. ಹಾಗಿರುವಾಗ ಅಂತಹ ಪೊಲೀಸರಿಗೆ ಅನ್ಯಾಯ ಮಾಡಿದರೆ? ಅಂತಹದ್ದೇ ಒಂದು ಘಟನೆ ತೆಲಂಗಾಣದಲ್ಲಿ ನಡೆದಿದೆ(Viral News). ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕಾಗಿದ್ದ ಪೊಲೀಸ್‌ ಅಧಿಕಾರಿಯೇ ಕಟ್ಟಿಕೊಂಡ ಹೆಂಡತಿಗೆ ಅನ್ಯಾಯ ಮಾಡಿದ್ದು, ನ್ಯಾಯ ಒದಗಿಸುವಂತೆ ಪತ್ನಿ ಠಾಣೆ ಎದುರೇ ಧರಣಿ(Protest) ಮಾಡಿದ್ದಾಳೆ. ಸಿದ್ದಿಪೇಟೆ ಜಿಲ್ಲೆಯ ಕೊಮುರವಳ್ಳಿ ಪೊಲೀಸ್ ಠಾಣೆಯ ಎದುರು ಸಬ್​ ಇನ್ಸ್​ಪೆಕ್ಟರ್(Sub inspector)​ ಪತ್ನಿ ಧರಣಿ ಕುಳಿತಿರುವುದು ತೆಲುಂಗಾಣದಲ್ಲಿ ಭಾರಿ ಸುದ್ದಿಯಾಗಿದೆ.

ಕರೀಂ ನಗರ ನಿವಾಸಿಯಾಗಿರುವ ಎಸ್‌ಐ ನಾಗರಾಜು ವಿರುದ್ಧ ಆತನ ಪತ್ನಿ ಮಾನಸ ಠಾಣೆಗೆ ದೂರು ನೀಡಿದ್ದು, ನ್ಯಾಯ ಸಿಗುವವರೆಗೆ ಠಾಣೆ ಎದುರೇ ಧರಣಿ ನಡೆಸುವುದಾಗಿ ಹೇಳಿದ್ದಾರೆ. ಅಲ್ಲದೇ ಅಹೋರಾತ್ರಿ ರಾಣೆ ಎದುರು ಧರಣಿ ನಡೆಸಿದ ಮಾನಸ ರಾಜ್ಯದ ಗಮನ ಸೆಳೆದಿದ್ದಾಳೆ. ಎರಡು ವರ್ಷಗಳಿಂದ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿಲ್ಲ ಎಂದು ಗಂಡನ ವಿರುದ್ಧ ಆರೋಪ ಮಾಡಿರುವ ಮಾನಸ, ನನ್ನಿಬ್ಬರು ಮಕ್ಕಳಿಂದಲೂ ನನ್ನನ್ನು ದೂರವಿಟ್ಟಿದ್ದಾರೆ ಎಂದಿದ್ದಾಳೆ. ಸಾಲದೆನ್ನುವಂತೆ ನಾಗರಾಜ್‌ ಬೇರೊಬ್ಬ ಮಹಿಳೆಯನ್ನೂ ಮದುವೆ ಆಗಿದ್ದಾರೆ ಎಂದು ಗಂಡನ ವಿರುದ್ಧ ಮಾನಸ ಆರೋಪ ಮಾಡಿದ್ದು, ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ನಿರ್ಲಕ್ಷಿಸಲಾಗುತ್ತಿದೆ ಎಂದು ಠಾಣೆಯ ಮುಂದೆಯೇ ಆಕ್ರೋಶ ವ್ಯಕ್ತಪಡಿಸಿದರು.

ಮಾನಸ ಮತ್ತು ನಾಗರಾಜು ಇಬ್ಬರು ಕರೀಂನಗರ ಜಿಲ್ಲೆಗೆ ಸೇರಿದವರು. ಹತ್ತು ವರ್ಷಗಳ ಹಿಂದೆಯೇ ವಿವಾಹವಾದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಎರಡು ವರ್ಷಗಳ ಹಿಂದೆ ಎಸ್‌ಐ ನಾಗರಾಜು ಬೇರೊಬ್ಬ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಇಟ್ಟುಕೊಂಡು ಮಾನಸಗೆ ಕಿರುಕುಳ ನೀಡುತ್ತಿದ್ದ.
ಮೇಲಾಗಿ ವಿಚ್ಛೇದನ ನೀಡುವಂತೆ ಕಿರುಕುಳ ನೀಡುತ್ತಿರುವುದರಿಂದ ಆತ್ಮಹತ್ಯೆಯೊಂದೇ ದಾರಿ ಎಂದು ಮಾನಸ ಅಧಿಕಾರಿಗಳಿಗೆ ಪತ್ರ ಬರೆದಿರುವುದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸಿದ್ದಿಪೇಟೆ ಸಿಪಿ, ಚೆರ್ಯಾಲ ಸಿಐ ಹಾಗೂ ಕರೀಂನಗರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾರೂ ಗಮನ ಹರಿಸುತ್ತಿಲ್ಲ. ಎಸ್‌ಐ ನಾಗರಾಜು ಮತ್ತು ಎರಡನೇ ಪತ್ನಿಯಿಂದಾಗಿ ಇಬ್ಬರು ಮಕ್ಕಳು ಅಪಾಯದಲ್ಲಿದ್ದಾರೆ. ಮಕ್ಕಳಿಗೆ ನ್ಯಾಯ ಕೊಡಿಸುವಂತೆ ಕೋಮುರವಳ್ಳಿ ಪೊಲೀಸ್ ಠಾಣೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಎಸ್‌ಐ ನಾಗರಾಜು ರಜೆಯಲ್ಲಿರುವುದಾಗಿ ಠಾಣೆ ಸಿಬ್ಬಂದಿ ಇದೇ ಸಂದರ್ಭದಲ್ಲಿ ತಿಳಿಸಿದರು. ಆದರೂ ನ್ಯಾಯ ಸಿಗುವವರೆಗೂ ಪ್ರತಿಭಟನೆ ನಡೆಸುವುದಾಗಿ ಮಾಸನ ಹೇಳಿದ್ದಾರೆ. ನಾಗರಾಜು ಎರಡನೇ ಮದುವೆ ಆಗುವುದರಲ್ಲಿ ಆತನ ಕುಟುಂಬಸ್ಥರ ಕೈವಾಡವೂ ಇದೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ.

ಇದನ್ನೂ ಓದಿ: Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

ಇಂತಹದ್ದೇ ಒಂದು ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದಿತ್ತು. ಪತಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಪಿಎಸ್‌ಐ ವಿರುದ್ಧ ಮಹಿಳೆಯೊಬ್ಬರು ಪೊಲೀಸ್‌ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಸೂಲಿಬೆಲೆ ಪೊಲೀಸ್ ಠಾಣೆ ಪಿಎಸ್ಐ ರಮೇಶ್ ಗುಗ್ಗರಿ ವಿರುದ್ದ ಆತನ ಪತ್ನಿ ದೌರ್ಜನ್ಯ ಆರೋಪ ಮಾಡಿದ್ದು, ಅಪರಿಚಿತರನ್ನು ತಂದೆ, ತಾಯಿ ಎಂದು ಪರಿಚಯಿಸಿ 2021ರಲ್ಲಿ ಮದುವೆ ಮಾಡಿಕೊಂಡಿದ್ದಾರೆ. ಮದುವೆಯಾದ ನಂತರ ಪಿಎಸ್‌ಐ ತಂದೆ ತನ್ನ ಮೇಲೆ ಹಲ್ಲೆ ನಡೆಸಿದ್ದು, ಮಾಂಗಲ್ಯ ಕಿತ್ತು ಹಾಕಿ ದೌರ್ಜನ್ಯ ಎಸಗಿದ್ದಾರೆ ಎಂದು ನೊಂದ ಮಹಿಳೆ ಆರೋಪ ಮಾಡಿದ್ದಾರೆ. ಇವಿಷ್ಟೇ ಅಲ್ಲದೇ, ಜ್ವರ ಬಂದಾಗ ಯಾವುದೋ ಟ್ಯಾಬ್ಲೇಟ್ ನೀಡಿ ಮನೆಯಲ್ಲಿ‌ ಬಲವಂತವಾಗಿ‌ ಕೂಡಿ ಹಾಕಿ ಗರ್ಭಪಾತ ಮಾಡಿಸಿದ್ದಾರೆ’ ಎಂದು ಆರೋಪ ಮಾಡಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ರಸ್ತೆ ಜಗಳದಿಂದ ತಪ್ಪಿಸಿಕೊಳ್ಳುವುದು ಹೇಗೆ? ಬೆಂಗಳೂರು ಪೊಲೀಸರ ವಿಡಿಯೊ ಪಾಠ ಇಲ್ಲಿದೆ!

ಬೆಂಗಳೂರು ರಸ್ತೆಗಳಲ್ಲಿ ಗುಂಡಿಗಳು ಸಾಮಾನ್ಯ, ಅಂತೆಯೇ ಜಗಳಗಳು. ಇದು ಕೆಲವೊಮ್ಮೆ ಕೈಕೈ ಮಿಲಾಯಿಸುವ ಹಂತಕ್ಕೂ ಹೋಗುವುದಿದೆ. ಇದನ್ನು ತಪ್ಪಿಸಲು ಬೆಂಗಳೂರು ಪೊಲೀಸರು ಕೆಲವೊಂದು ಸಲಹೆಗಳನ್ನು ನೀಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ (Viral Video) ಭಾರೀ ವೈರಲ್ ಆಗಿದೆ.

VISTARANEWS.COM


on

By

Viral Video
Koo

ಸಣ್ಣಪುಟ್ಟ ಘಟನೆಗಳು ರಸ್ತೆಯಲ್ಲಿ (road) ಕೆಲವೊಮ್ಮೆ ವಾಹನ (vehicle) ಸವಾರರ ನಡುವೆ ಜಗಳಕ್ಕೆ ಕಾರಣವಾಗುತ್ತಿದೆ. ಇತ್ತೀಚೆಗೆ ಇಂತಹ ಮಾತಿನ ಚಕಮಕಿಯ ಘಟನೆಗಳು ಸಾಮಾನ್ಯವಾಗಿದೆ. ಕೆಲವೊಮ್ಮೆ ಇಂತಹ ಘಟನೆಗಳು ಮಾರಾಮಾರಿಗೂ (physical fights) ಕಾರಣವಾಗಿ, ವಾಹನಗಳಿಗೆ ಹಾನಿ, ವ್ಯಕ್ತಿಗಳಿಗೆ ಗಾಯವನ್ನು ಉಂಟು ಮಾಡುತ್ತದೆ. ಕೊಲೆ ನಡೆದಿದ್ದೂ ಇದೆ.

ಹೆಚ್ಚುತ್ತಿರುವ ಇಂತಹ ಪ್ರಕರಣಗಳ ನಡುವೆ ಬೆಂಗಳೂರು ಪೊಲೀಸರು (bengaluru police) ಈ ರೀತಿಯ ಘಟನೆಗಳನ್ನು ಹೇಗೆ ಎದುರಿಸಬೇಕು ಎಂದು ಸಾಮಾಜಿಕ ಜಾಲತಾಣದ (Viral Video) ಮೂಲಕ ಸಾರ್ವಜನಿಕರಿಗೆ ಉಪಯುಕ್ತ ಸಲಹೆ ಮಾಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಪೊಲೀಸ್ ಇಲಾಖೆ ಜಾಗೃತಿ ವಿಡಿಯೋವನ್ನು ಹಂಚಿಕೊಂಡಿದ್ದು, ಈ ರೀತಿಯ ಸಂದರ್ಭಗಳನ್ನು ಎದುರಿಸುವಾಗ ನಾವು ಶಾಂತವಾಗಿರುವುದು ಬಹಳ ಮುಖ್ಯ ಎಂದಿದ್ದಾರೆ. ಈ ವಿಡಿಯೋ ಕ್ಲಿಪ್ ಪ್ರಯಾಣಿಕರ ನಡುವಿನ ಜಗಳದಿಂದ ಪ್ರಾರಂಭವಾಗುತ್ತದೆ. ಇದು ಹಲವಾರು ಅಂಶಗಳನ್ನು ಒಳಗೊಂಡಿದೆ. ಇದೇ ರೀತಿಯ ಸಂದರ್ಭಗಳು ಬಂದರೆ ಪ್ರಯಾಣಿಕರು ಏನು ಮಾಡಬೇಕೆಂಬ ಕುರಿತು ಮಾರ್ಗದರ್ಶನ ನೀಡುತ್ತದೆ.

ರಸ್ತೆಯಲ್ಲಿ ವಾಹನ ಓಡಿಸುವಾಗ ಸುರಕ್ಷತೆ ಮೊದಲನೆಯದು. ಕೆಲವೊಂದು ಘಟನೆಗಳು ನಮಗೆ ಸಿಟ್ಟು ತರಿಸಬಹುದು. ಆದರೆ ಪರಿಸ್ಥಿತಿಗಳನ್ನು ಹೇಗೆ ಸುರಕ್ಷಿತವಾಗಿ ನಿರ್ವಹಿಸುವುದು ಎಂಬುದರ ಕುರಿತು ಪ್ರಾಯೋಗಿಕ ಸಲಹೆಗಳಿಗಾಗಿ ನಮ್ಮ ಇತ್ತೀಚಿನ ವಿಡಿಯೋವನ್ನು ಪರಿಶೀಲಿಸಿ. ಮಾಹಿತಿಯಲ್ಲಿರಿ, ಸುರಕ್ಷಿತವಾಗಿರಿ ಎಂದು ವಿಡಿಯೋವನ್ನು ಹಂಚಿಕೊಳ್ಳುವಾಗ ಬೆಂಗಳೂರು ಪೊಲೀಸರು ಬರೆದಿದ್ದಾರೆ.

ಶಾಂತವಾಗಿರಿ ಜಗಳ ತಪ್ಪಿಸಿ

ಪ್ರಯಾಣಿಕರೇ ಶಾಂತವಾಗಿರಿ, ಇತರ ವ್ಯಕ್ತಿಗಳೊಂದಿಗೆ ಜಗಳವಾಡುವುದನ್ನು ತಪ್ಪಿಸಿ, ಅದನ್ನು ನೀವೇ ಪರಿಹರಿಸಲು ಪ್ರಯತ್ನಿಸಬೇಡಿ. ವಾಹನದ ವಿವರಗಳನ್ನು ಗಮನಿಸಿ, ತುರ್ತು ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಮತ್ತು ಘಟನೆಯ ಬಗ್ಗೆ ತಕ್ಷಣ ಮಾಹಿತಿ ನೀಡಿ ಎಂದು ಬೆಂಗಳೂರು ಪೊಲೀಸ್ ಇಲಾಖೆ ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಟ್ರಾಫಿಕ್ ಅಡಚಣೆಯನ್ನು ತಪ್ಪಿಸಲು ಮತ್ತು ಘಟನೆ ಅಥವಾ ವಾಹನದ ಫೋಟೋಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳು ವೀಕ್ಷಕರಿಗೆ ಹೇಳಿದ್ದಾರೆ. ಪೊಲೀಸರು ಬಂದಾಗ ಏನಾಯಿತು ಎಂಬುದರ ಕುರಿತು ನಿಮ್ಮ ಸಂಪೂರ್ಣ ಮಾಹಿತಿಯನ್ನು ಒದಗಿಸಿ ಮತ್ತು ಇತರ ವ್ಯಕ್ತಿಗಳಿಗೆ ಅವರ ಅನಿಸಿಕೆ ಹಂಚಿಕೊಳ್ಳಲು ಅವಕಾಶ ಮಾಡಿಕೊಡಿ. ಕೊನೆಯದಾಗಿ ಪೊಲೀಸರಿಗೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ನೀಡಿ ಎಂದು ಹೇಳಿದ್ದಾರೆ.

4 ಲಕ್ಷಕ್ಕೂ ಹೆಚ್ಚು ವೀಕ್ಷಣೆ

ಬೆಂಗಳೂರು ಪೊಲೀಸರು ಕೆಲವೇ ಗಂಟೆಗಳ ಹಿಂದೆ ಹಂಚಿಕೊಂಡಿರುವ ಈ ವಿಡಿಯೋ ಪೋಸ್ಟ್ ಇನ್ ಸ್ಟಾಗ್ರಾಮ್ ನಲ್ಲಿ 4,05,000 ಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಈ ಕ್ಲಿಪ್ ಅನ್ನು ಎಕ್ಸ್ ನಲ್ಲೂ ಹಂಚಿಕೊಳ್ಳಲಾಗಿದೆ. ಹಲವಾರು ಬಳಕೆದಾರರು ಈ ಜಾಗೃತಿ ವಿಡಿಯೋ ಗೆ ಪೊಲೀಸರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಆದರೂ ಇಂತಹ ಘಟನೆಗಳು ಸಂಭವಿಸಿದಾಗ ಇಲಾಖೆಯು ಏನನ್ನೂ ಮಾಡುತ್ತಿಲ್ಲ ಎಂದು ಕೆಲವರು ಆರೋಪಿಸಿದರು.

ಇದನ್ನೂ ಓದಿ: IndiGo Flight: ಇಂಡಿಗೊ ವಿಮಾನದಲ್ಲಿ ಮತ್ತೊಂದು ಎಡವಟ್ಟು; ನಿಂತುಕೊಂಡೇ ಪ್ರಯಾಣಿಸಲು ಮುಂದಾದ ಪ್ಯಾಸೆಂಜರ್‌!

ರಸ್ತೆ ಸುರಕ್ಷತೆಯ ಕುರಿತು ಬೆಂಗಳೂರು ಪೊಲೀಸರು ನೀಡಿರುವ ಸಾರ್ವಜನಿಕರಿಗೆ ಶಿಕ್ಷಣವನ್ನು ನಾನು ಇಷ್ಟಪಟ್ಟಿದ್ದೇನೆ. ಪೊಲೀಸ್ ಸಿಬ್ಬಂದಿ ಸೇರಿದಂತೆ ಪ್ರತಿಯೊಬ್ಬರಿಗೂ ಕಾನೂನಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ ಎಂದೊಬ್ಬರು ತಮ್ಮ ಅನಿಸಿಕೆ ಬರೆದಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ಸಿಂಹದ ಹಿಂಡನ್ನೇ ಹಿಮ್ಮೆಟ್ಟಿಸಿದ ಕಾಡುಕೋಣಗಳು; ರೋಮಾಂಚನಕಾರಿ ವಿಡಿಯೊ ನೀವೂ ನೋಡಿ

Viral News: ಕಾಡುಕೋಣಗಳ ಹಿಂಡೊಂದು ದಾಳಿ ನಡೆಸಲು ಬರುವ ಸಿಂಹಗಳ ಗುಂಪನ್ನು ಬೆದರಿಸಿ ಓಡಿಸುವ ವಿಡಿಯೊ ವೈರಲ್‌ ಆಗಿದೆ. ಕೀನ್ಯಾದ ಮಸೈ ಮಾರ ರಾಷ್ಟ್ರೀಯ ಉದ್ಯಾನ (Masai mara national park)ದಲ್ಲಿ ಈ ಅಪರೂಪದ ಘಟನೆ ನಡೆದಿದೆ. ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾದ ಈ ವಿಡಿಯೊವನ್ನು ಸದ್ಯ ಲಕ್ಷಾಂತರ ಮಂದಿ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ. ಕಾಡುಕೋಣಗಳ ಧೈರ್ಯ, ಒಗ್ಗಟ್ಟನ್ನು ಹೊಗಳಿದ್ದಾರೆ.

VISTARANEWS.COM


on

Viral News
Koo

ನವದೆಹಲಿ: ಪ್ರಾಣಿಗಳ ಪ್ರಪಂಚ ಸದಾ ಕುತೂಹಲಕಾರಿಯಾಗಿರುತ್ತದೆ. ಕೌತುಕ ಕಣ್ಣುಗಳಿಂದ ನೋಡುವಂತೆ ಮಾಡುತ್ತದೆ. ಪ್ರಾಣಿಗಳ ಚಲನವಲನ, ಬುದ್ಧಿವಂತಿಕೆ, ಬೇಟೆಯಾಡುವ ರೀತಿ ಇತ್ಯಾದಿ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತವೆ. ಸದ್ಯ ಅಂತಹದ್ದೇ ದೃಶ್ಯವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕಾಡುಕೋಣಗಳ ಹಿಂಡೊಂದು ದಾಳಿ ನಡೆಸಲು ಬರುವ ಸಿಂಹಗಳ ಗುಂಪನ್ನು ಬೆದರಿಸಿ ಓಡಿಸುವ ವಿಡಿಯೊ ಇದಾಗಿದ್ದು, ನೆಟ್ಟಿಗರು ನೋಡಿ ರೋಮಾಂಚನಗೊಂಡಿದ್ದಾರೆ. ಒಗ್ಗಟ್ಟಿನಲ್ಲಿ ಬಲವಿದೆ ಎನ್ನುವ ಗಾದೆಯನ್ನು ಉದ್ಘರಿಸಿದ್ದಾರೆ (Viral News).

ಕೀನ್ಯಾದ ಮಸೈ ಮಾರ ರಾಷ್ಟ್ರೀಯ ಉದ್ಯಾನ (Masai mara national park)ದಲ್ಲಿ ಈ ಅಪರೂಪದ ಘಟನೆ ನಡೆದಿದೆ. ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾದ ಈ ವಿಡಿಯೊವನ್ನು ಸದ್ಯ ಲಕ್ಷಾಂತರ ಮಂದಿ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ. ಕಾಡುಕೋಣಗಳ ಧೈರ್ಯ, ಒಗ್ಗಟ್ಟನ್ನು ಹೊಗಳಿದ್ದಾರೆ.

ವಿಡಿಯೊದಲ್ಲಿ ಏನಿದೆ?

ಹುಲ್ಲುಗಾವಲಿನಲ್ಲಿ ಕಾಡುಕೋಣವೊಂದು ಮೇಯುತ್ತಿರುತ್ತದೆ. ಆಗ ಅಲ್ಲಿಗೆ ಏಳೆಂಟು ಸಿಂಹಗಳ ಗುಂಪು ಲಗ್ಗೆ ಇಡುತ್ತದೆ. ಇಂದು ಭರ್ಜರಿ ಬೇಟೆ ಎಂದು ಲೆಕ್ಕ ಹಾಕುವ ಸಿಂಹಗಳ ಗುಂಪು ಕಾಡುಕೋಣವನ್ನು ಸುತ್ತುವರಿಯುತ್ತದೆ. ಕಾಡುಕೋಣ ಕಡಿಮೆ ಆಸಾಮಿಯೇನಲ್ಲ. ತನ್ನ ಬಳಿಗೆ ಬರುವ ಸಿಂಹಗಳನ್ನು ಬೆದರಿಸುತ್ತದೆ. ಅಲ್ಲಿಂದ ಓಡಿಸಲು ಯತ್ನಿಸುತ್ತದೆ.

ದೈತ್ಯದೇಹಿ ಕಾಡುಕೋಣವನ್ನು ಸುಲಭದಲ್ಲಿ ಸಿಂಹಗಳಿಗೆ ಮಣಿಸಲು ಸಾಧ್ಯವಾಗುವುದಿಲ್ಲ. ಅದು ಗುಟುರು ಹಾಕಿ ಒಂದು ಹೆಜ್ಜೆ ಮುಂದಿಟ್ಟಾಗ ಸಿಂಹಗಳು ಭಯದಿಂದ ಎರಡು ಹೆಜ್ಜೆ ಹಿಂದಿಡುತ್ತವೆ. ಕೊನೆ ಹೊಂಚು ಹಾಕಿ ಸಿಂಹವೊಂದು ಹಿಂದಿನಿಂದ ದಾಳಿ ನಡೆಸುತ್ತದೆ. ತನ್ನ ಮೇಲೆ ಎರಗಿದ ಶತ್ರುವನ್ನು ಕಾಡುಕೋಣ ಕೆಡವಲು ಯತ್ನಿಸುತ್ತದೆ. ಬಳಿಕ ಮೂರು ನಾಲ್ಕು ಸಿಂಹಗಳು ಒಮ್ಮೆಲೆ ದಾಳಿ ನಡೆಸಿದಾಗ ಕಾಡುಕೋಣ ತನ್ನ ಹಿಂಡಿನತ್ತ ಓಡುತ್ತದೆ. ಅಲ್ಲಿ ನೂರಾರು ಸಂಖ್ಯೆಯ ಕಾಡುಕೋಣಗಳು ಮೇಯುತ್ತಿರುತ್ತವೆ. ತಮ್ಮವನೊಬ್ಬ ಸಂಕಷ್ಟಕ್ಕೆ ಸಿಲುಕಿರುವುದನ್ನು ನೋಡಿ ಅವು ಓಡೋಡಿ ಬರುತ್ತವೆ.

ಕಾಡುಕೋಣಗಳ ಹಿಂಡನ್ನು ನೋಡಿ ಸಿಂಹದಂತಹ ಸಿಂಹಗಳಿಗೆ ನಡುಕ ಶುರುವಾಗುತ್ತದೆ. ಭರ್ಜರಿ ಬೇಟೆಯ ನಿರೀಕ್ಷೆಯಲ್ಲಿದ್ದ ಅವುಗಳು ಈಗ ಕಾಡುಕೋಣಗಳ ಸೈನ್ಯವನ್ನು ಕಂಡು ಭಯದಿಂದ ಒಂದೊಂದೆ ಹೆಜ್ಜೆ ಹಿಂದಿಡಲು ಆರಂಭಿಸುತ್ತವೆ. ಬಳಿಕ ಕಾಡುಕೋಣಗಳ ಗುಂಪು ಸಿಂಹಗಳನ್ನು ಅಟ್ಟಿಸಿಕೊಂಡು ಬರುತ್ತವೆ. ಬದುಕಿದ್ದರೆ ಬೇಡಿಯಾದರೂ ತಿನ್ನಬಹುದು ಎನ್ನುವಂತೆ ಜೀವ ಉಳಿಸಿಕೊಳ್ಳಲು ಸಿಂಹಗಳು ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.

ನೆಟ್ಟಿಗರಿಂದ ಶಷಬ್ಬಾಸ್‌ಗಿರಿ

ವಿಡಿಯೊ ನೋಡಿದವರೆಲ್ಲ ಕಾಡುಕೋಣಗಳ ಒಗ್ಗಟ್ಟನ್ನು ಕೊಂಡಾಡುತ್ತಿದ್ದಾರೆ. ಈ ಮೂಕ ಪ್ರಾಣಿಗಳಿಂದ ನಾವು ನೋಡಿ ಕಲಿಯಬೇಕಾದದ್ದು ಬೇಕಾದಷ್ಟಿದೆ ಎಂದು ಕಮೆಂಟ್‌ ಮಾಡಿದ್ದಾರೆ. ʼʼಇಂತಹ ಒಗ್ಗಟ್ಟು ಮನುಷ್ಯರಲ್ಲಿ ಯಾಕಿಲ್ಲ?ʼʼ ಎಂದು ಒಬ್ಬರು ಕೇಳಿದ್ದಾರೆ.

ʼʼಅದೃಷ್ಟವಶಾತ್‌ ದಾಳಿಗೊಳಗಾದ ಈ ಎಳೆಯ ಕೋಣ ಹಿಂಡಿನಿಂದ ತುಂಬ ದೂರ ಹೋಗಿರಲಿಲ್ಲ. ಇಲ್ಲದಿದ್ದರೆ ಅದು ಸಿಂಹಗಳಿಗೆ ಆಹಾರವಾಗುತ್ತಿತ್ತುʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. “ಸಾವು ಬದುಕಿನ ನಿರ್ಧರಿಸುವ ಈ ನಿರ್ಣಾಯಕ ಘಟ್ಟದಲ್ಲಿ ಕಾಡುಕೋಣ ಉತ್ತಮ ನಡೆ ತೋರಿದೆ. ತನ್ನವರ ಬಳಿಗೆ ಸಾರಿ ಜೀವ ಉಳಿಸಿಕೊಂಡಿದೆʼʼ ಎಂದು ಮತ್ತೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಒಟ್ಟಿನಲ್ಲಿ ಈ ಮೂಕ ಪ್ರಾಣಿಗಳ ಸಹಬಾಳ್ವೆ ಹಲವರಲ್ಲಿ ಸಕಾರಾತ್ಮಕ ಭಾವನೆ ಹುಟ್ಟುಹಾಕಿದ್ದಂತೂ ನಿಜ.

ಇದನ್ನೂ ಓದಿ: Viral Video: ಹುಲಿ ಬೆಕ್ಕಿನ ಹಿರಿಯಣ್ಣ ಎನ್ನುವುದು ಇದಕ್ಕೆ; ನೆಟ್ಟಿಗರ ಮನಗೆದ್ದ ವಿಡಿಯೊ ಇಲ್ಲಿದೆ

Continue Reading
Advertisement
Viral Video
ವೈರಲ್ ನ್ಯೂಸ್6 mins ago

Viral Video: ಛೇ…ಇವರೆಂಥಾ ರಾಕ್ಷಸರು! ಕೈ ಕಾಲು ಕಟ್ಟಿ ಚೆನ್ನಾಗಿ ಥಳಿಸಿ ಯುವಕನ ಹತ್ಯೆ-ವಿಡಿಯೋ ನೋಡಿ

Indian 2
ಸಿನಿಮಾ19 mins ago

Indian 2: ಕಮಲ್‌ ಹಾಸನ್‌ ಅಭಿನಯದ ʼಇಂಡಿಯನ್‌ 2ʼ ಚಿತ್ರದ ಮೊದಲ ಹಾಡು ರಿಲೀಸ್‌; ಕುದುರೆ ಏರಿ ಬಂದ ಉಳಗನಾಯಗನ್‌

dhavala dharini column buddha ಧವಳ ಧಾರಿಣಿ
ಅಂಕಣ42 mins ago

ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

Karnataka Weather
ಕರ್ನಾಟಕ1 hour ago

Karnataka Weather: ಇಂದು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

Brain Tumour In Kids
ಆರೋಗ್ಯ1 hour ago

Brain Tumour In Kids: ಮಕ್ಕಳ ಜೀವ ಹಿಂಡುವ ಮೆದುಳಿನ ಟ್ಯೂಮರ್‌ನ ಲಕ್ಷಣಗಳಿವು

Buddha Purnima
ಧಾರ್ಮಿಕ2 hours ago

Buddha Purnima: ಇಂದು ಬುದ್ಧ ಪೂರ್ಣಿಮೆ; ಬುದ್ಧನ ಬೋಧನೆಯನ್ನು ಸ್ಮರಿಸಿಕೊಳ್ಳುವ ದಿನ

Health Benefits Of Okra
ಆರೋಗ್ಯ2 hours ago

Health Benefits Of Okra: ಬೆಂಡೆಕಾಯಿ ತಿನ್ನುತ್ತೀರಿ ನಿಜ; ಅದರಿಂದಾಗುವ ಪ್ರಯೋಜನಗಳೇನು ಗೊತ್ತಿದೆಯಾ?

dina bhavishya read your daily horoscope predictions for May 23 2024
ಭವಿಷ್ಯ3 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

IPL 2024
ಕ್ರೀಡೆ8 hours ago

IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

Karnataka police
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ಒಂದು ಕಡೆ ಸರಣಿ ಕೊಲೆ, ಇನ್ನೊಂದೆಡೆ ಪೊಲೀಸರ ಬೀದಿ ಸುಲಿಗೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ3 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌