Viral Video : ಅಪ್ಪ ನಾನೀಗ ಡಾಕ್ಟರ್‌ ಎಂದ ಮಗಳು! ಭಾವುಕರಾದ ತಂದೆ! - Vistara News

ವೈರಲ್ ನ್ಯೂಸ್

Viral Video : ಅಪ್ಪ ನಾನೀಗ ಡಾಕ್ಟರ್‌ ಎಂದ ಮಗಳು! ಭಾವುಕರಾದ ತಂದೆ!

ಮಗಳೊಬ್ಬಳು ಎಂಬಿಬಿಎಸ್‌ ಪರೀಕ್ಷೆ ಪಾಸ್‌ ಆದ ಸಂತೋಷವನ್ನು ತಂದೆಗೆ ಕರೆ ಮಾಡಿ ತಿಳಿಸುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಅದು ಭಾರೀ ವೈರಲ್‌ (Viral Video) ಆಗಿದೆ.

VISTARANEWS.COM


on

daughter tells father that she is a doctor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಂದೆ ತಾಯಿಗೆ ಮಕ್ಕಳನ್ನು ದೊಡ್ಡ ಹಂತದಲ್ಲಿ ನೋಡಬೇಕು ಎನ್ನುವ ಆಸೆಯಿರುತ್ತದೆ. ಆ ಸಾಧನೆಯನ್ನು ಮಕ್ಕಳು ಮಾಡಿದಾಗ ತಂದೆ ತಾಯಿ ನಿಜಕ್ಕೂ ಸಂತಸದಿಂದ ಕುಣಿದಾಡಿಬಿಡುತ್ತಾರೆ. ಅದೇ ರೀತಿ ತಂದೆಯೊಬ್ಬರು ತಮ್ಮ ಮಗಳು ಡಾಕ್ಟರ್‌ ಆದಳು ಎನ್ನುವ ಸಂತೋಷದಿಂದ ಹರಸುವ ವಿಡಿಯೊವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಭಾರೀ ವೈರಲ್‌ (Viral Video) ಆಗಿದೆ.

ಸನಾ ಅರ್ಷಫ್‌ ಹೆಸರಿನ ಯುವತಿ ವಿಡಿಯೊ ರೆಕಾರ್ಡಿಂಗ್‌ ಮಾಡುತ್ತಾ ತನ್ನ ತಂದೆಗೆ ಕರೆ ಮಾಡುತ್ತಾಳೆ. ಮೊದಲಿಗೆ ಅವರ ಕ್ಷೇಮ ಸಮಾಚಾರ ವಿಚಾರಿಸುತ್ತಾಳೆ. ನಂತರ ನನಗೆ ಸ್ವಲ್ಪ ಹಣ ವರ್ಗಾಯಿಸಿ ಎಂದು ಕೇಳುತ್ತಾಳೆ. ಹಾಗೆಯೇ, “ನೀವು ನನಗೆ ಹಣ ವರ್ಗಾಯಿಸುವಾಗ ಏನೆಂದು ಹೆಸರು ತೋರಿಸುತ್ತದೆ” ಎಂದು ಕೇಳುತ್ತಾಳೆ. ಅದಕ್ಕೆ ಆಕೆಯ ತಂದೆ ಸನಾ ಅರ್ಷಫ್‌ ಎಂದು ಹೇಳುತ್ತಾರೆ. ಆಗ ಆಕೆ “ಬರೀ ಸನಾ ಅಲ್ಲ ಅಪ್ಪ, ಡಾಕ್ಟರ್‌ ಸನಾ ಅರ್ಷಫ್‌. ರಿಸಲ್ಟ್‌ ಬಂದಿದೆ. ನಾನು ಪಾಸ್‌ ಆಗಿಬಿಟ್ಟೆ” ಎಂದು ಸಂತಸದಿಂದ ಹೇಳುತ್ತಾಳೆ.

ಇದನ್ನೂ ಓದಿ: Viral Video: ಮಹಾಕಾಲನ ಮೆರವಣಿಗೆ ಮೇಲೆ ನೀರು ಉಗುಳಿದ್ದವರ ಮನೆ ಧ್ವಂಸ; ಜತೆಗೆ ತಮಟೆ, ಡ್ರಮ್ ವಾದನ
ಅದನ್ನು ಕೇಳಿದ ತಂದೆ ಸಂತಸದಿಂದ ಮಗಳಿಗೆ ಅಭಿನಂದನೆ ತಿಳಿಸಲಾರಂಭಿಸುತ್ತಾರೆ. ಹಲವಾರು ರೀತಿಯಲ್ಲಿ ಮಗಳಿಗೆ ಆಶೀರ್ವದಿಸುತ್ತಾರೆ. ಈ ಎಲ್ಲ ದೃಶ್ಯವನ್ನು ಸನಾ ಅವರು ವಿಡಿಯೊ ರೆಕಾರ್ಡ್‌ ಮಾಡಿಕೊಂಡಿದ್ದಾರೆ.


ಈ ವಿಡಿಯೊವನ್ನು ಡಾ. ಹರೆ ಹೆಸರಿನವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. ವಿಡಿಯೊವನ್ನು ಮೇ 30ರಂದು ಪೋಸ್ಟ್‌ ಮಾಡಲಾಗಿದೆ. ಅಂದಿನಿಂದ ಇಂದಿನವರೆಗೆ ಈ ವಿಡಿಯೊ 20 ಲಕ್ಷಕ್ಕೂ ಅಧಿಕ ಮಂದಿಯಿಂದ ವೀಕ್ಷಣೆಗೊಂಡಿದೆ. 2.5 ಲಕ್ಷಕ್ಕೂ ಅಧಿಕ ಮಂದಿ ವಿಡಿಯೊಗೆ ಲೈಕ್‌ ಮಾಡಿದ್ದಾರೆ. ಹಾಗೆಯೇ ಸಾವಿರಾರು ಮಂದಿ ವಿಡಿಯೊವನ್ನು ತಮ್ಮ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾರೆ. ಸಾವಿರಾರು ಮಂದಿ ವಿಡಿಯೊಗೆ ತರೇವಾರು ಕಾಮೆಂಟ್‌ಗಳನ್ನು ಮಾಡಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

“ನೀಟ್ ಆಕಾಂಕ್ಷಿಯಾಗಿರುವ ನನಗೆ ಈ ವಿಡಿಯೊ ನೋಡಿದಾಕ್ಷಣ ಕಣ್ಣಲ್ಲಿ ನೀರು ಬಂದಿತು. ನೀವು ನಿಜಕ್ಕೂ ಗ್ರೇಟ್‌. ಎಲ್ಲ ಒಳ್ಳೆಯದೇ ಆಗಲಿ”, “ಪ್ರತಿಯೊಬ್ಬ ತಂದೆಯೂ ಹೆಮ್ಮೆ ಪಡುವ ವಿಚಾರ. ವಿಡಿಯೊ ತುಂಬಾ ಚೆನ್ನಾಗಿದೆ”, “ನಮಗೂ ಇಂಥದ್ದೇ ದೊಡ್ಡ ಕನಸಿದೆ. ನಮ್ಮ ಕನಸೂ ಆದಷ್ಟು ಬೇಗ ಈಡೇರುವಂತಾಗಲಿ” ಎನ್ನುವಂತಹ ನೂರಾರು ಕಮೆಂಟ್‌ಗಳು ವಿಡಿಯೊಗೆ ಬಂದಿವೆ. ಹಾಗೆಯೇ “ವಾವ್‌”, “ಅಭಿನಂದನೆಗಳು”, “ಗ್ರೇಟ್‌ ಡಾಟರ್‌ ಅಂಡ್‌ ಡಾಕ್ಟರ್‌” ಎನ್ನುವಂತಹ ಹಲವಾರು ಕಮೆಂಟ್‌ಗಳೂ ವಿಡಿಯೊಗೆ ಬಂದಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Bus Accident: ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದು ವಿಡಿಯೊ ಮಾಡಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು!

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಪಂಕಜ್ ಮುಂಡೆ ಸೋತರೆ ಇನ್ನಿಲ್ಲ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹಾಕಿದ್ದ ವ್ಯಕ್ತಿಯೊಬ್ಬ ಬಸ್ ಅಪಘಾತದಲ್ಲಿ (Bus Accident) ಮೃತಪಟ್ಟಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು ಇದು ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂದು ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

By

Bus Accident
Koo

ಲಾತೂರ್: ಲೋಕಸಭಾ ಚುನಾವಣೆಯಲ್ಲಿ (lok sabha election) ಮಹಾರಾಷ್ಟ್ರದ (maharastra) ಬೀಡ್ ನಿಂದ ಕಣಕ್ಕೆ ಇಳಿದಿದ್ದ ಬಿಜೆಪಿ (bjp) ನಾಯಕಿ ಪಂಕಜಾ ಮುಂಡೆ (Pankaja Munde) ಅವರು ಸೋತರೆ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಸಾಮಾಜಿಕ ಜಾಲತಾಣದಲ್ಲಿ (social media) ವಿಡಿಯೋ (video) ಅಪ್‌ಲೋಡ್ ಮಾಡಿದ್ದ ವ್ಯಕ್ತಿಯೊಬ್ಬರು ಬಸ್‌ನಡಿ (Bus Accident) ಸಿಲುಕಿ ಮೃತಪಟ್ಟಿದ್ದಾರೆ.

ವಿಡಿಯೋ ಮಾಡಿದ 38 ವರ್ಷದ ಟ್ರಕ್ ಚಾಲಕ ಶುಕ್ರವಾರ ರಾತ್ರಿ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದು, ಇದು ಆತ್ಮಹತ್ಯೆ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಬೋರ್ಗಾಂವ್ ಪಾಟಿ ಬಳಿಯ ಅಹ್ಮದ್‌ಪುರ- ಅಂಧೋರಿ ರಸ್ತೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಲಿಯಾದವರನ್ನು ಟ್ರಕ್ ಚಾಲಕ ಲಾತೂರ್‌ನ ಅಹ್ಮದ್‌ಪುರದ ಯೆಸ್ಟರ್‌ನ ನಿವಾಸಿ ಸಚಿನ್ ಕೊಂಡಿಬಾ ಮುಂಡೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

ಘಟನೆಗೆ ಸಂಬಂಧಿಸಿ ಬಸ್ ಚಾಲಕನನ್ನು ಬಂಧಿಸಲಾಗಿದ್ದು, ಇದು ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂದು ತನಿಖೆ ನಡೆಸಲಾಗುತ್ತಿದೆ. ಯಲ್ದರವಾಡಿ ರಾತ್ರಿ ಬಸ್ ನಿಲುಗಡೆ ಮಾಡುತ್ತಿದ್ದಾಗ ಬಸ್ ನ ಹಿಂದೆ ನಿಂತಿದ್ದ ಸಚಿನ್ ಅವರು ಬಸ್ ನ ಚಕ್ರದಡಿ ಬಿದ್ದು ನಜ್ಜುಗುಜ್ಜಾಗಿದ್ದಾರೆ ಎಂದು ಆತನ ಪತ್ನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬಸ್ ಚಾಲಕನನ್ನು ಬಂಧಿಸಲಾಗಿದ್ದು, ಇದು ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಕಿಂಗಾವ್ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪತ್ನಿಯನ್ನು ಕೊಂದಿದ್ದ ವ್ಯಕ್ತಿಯ ಬಂಧನ

ಆನೇಕಲ್: ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದಿದ್ದ ಪತಿಯೊಬ್ಬನನ್ನು ಬಂಧಿಸಲಾಗಿದೆ. ಗಂಗಿರೆಡ್ಡಿ ಬಂಧಿತ ಆರೋಪಿ.
ಮನೆ ಬಾಡಿಗೆ ಹಣ ಪಡೆಯುವ ವಿಚಾರಕ್ಕೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿತ್ತು. ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಪುರದಲ್ಲಿ ಕಳೆದ 3ರಂದು ಹತ್ಯೆ ನಡೆದಿತ್ತು.

ಇತ್ತೀಚೆಗೆ ಗಂಗಿರೆಡ್ಡಿ ಬಾಡಿಗೆ ಹಣ ಪಡೆದು ಆ ಹಣದಿಂದ ಕುಡಿದು ಮಜಾ ಮಾಡುತ್ತಿದ್ದ. ಹೀಗಾಗಿ ಸುಜಾತ ಮನೆ ಬಾಡಿಗೆ ಹಣವನ್ನು ಗಂಗಿರೆಡ್ಡಿಗೆ ನೀಡದೆ ತಾನೇ ಪಡೆಯುತ್ತಿದ್ದಳು. ಇತ್ತ ತರಕಾರಿ ಅಂಗಡಿ ಇಟ್ಟುಕೊಂಡಿದ್ದ ಸುಜಾತ ಮೇಲೆ ಗಂಗಿರೆಡ್ಡಿ ಶೀಲ ಶಂಕಿಸಿದ್ದ. ಇಬ್ಬರ ನಡುವೆ ದಿನನಿತ್ಯ ಗಲಾಟೆ ನಡೆಯುತ್ತಿತ್ತು.

ಕಳೆದ 3ರಂದು ಇಬ್ಬರ ನಡುವೆ ಜಗಳ ನಡೆದು ಮನೆಯಲ್ಲಿದ್ದ ಚಾಕುವಿನಿಂದ ಇರಿದು ಸುಜಾತಳನ್ನು ಕೊಂದು ಗಂಗಿರೆಡ್ಡಿ ಪರಾರಿ ಆಗಿದ್ದ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಸರ್ಜಾಪುರ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

Continue Reading

ಕ್ರೈಂ

Killer Python: ಮಹಿಳೆಯನ್ನು ಜೀವಂತವಾಗಿ ನುಂಗಿದ ಹೆಬ್ಬಾವು! ಹೊಟ್ಟೆ ಸೀಳಿ ಹೊರ ತೆಗೆದರು!

45 ವರ್ಷದ ಮಹಿಳೆಯೊಬ್ಬರನ್ನು ಸುಮಾರು 16 ಅಡಿ ಉದ್ದದ ಹೆಬ್ಬಾವು (Killer Python) ಜೀವಂತವಾಗಿ ನುಂಗಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಮಹಿಳೆ ಮನೆಗೆ ಹಿಂದಿರುಗದೇ ಇದ್ದಾಗ ಅನುಮಾನಗೊಂಡ ಪತಿ ಗ್ರಾಮಸ್ಥರ ನೆರವಿನಿಂದ ಮಹಿಳೆಯ ಹುಡುಕಾಟದಲ್ಲಿ ತೊಡಗಿದ್ದರು.

VISTARANEWS.COM


on

By

Killer Python
Koo

ಇಂಡೋನೇಷ್ಯಾ: ನಾಪತ್ತೆಯಾದ 45 ವರ್ಷದ ಮಹಿಳೆಯೊಬ್ಬರು (women) ಶವವಾಗಿ ಮೂರು ದಿನಗಳ ಬಳಿಕ ಹೆಬ್ಬಾವಿನ (Killer Python) ಹೊಟ್ಟೆಯೊಳಗೆ ಪತ್ತೆಯಾಗಿರುವ ಘಟನೆ ಇಂಡೋನೇಷ್ಯಾದಲ್ಲಿ (Indonesian) ನಡೆದಿದೆ. ಮಹಿಳೆಯ ಪತಿ ಸೇರಿದಂತೆ ದಕ್ಷಿಣ ಸುಲವೆಸಿ ಪ್ರಾಂತ್ಯದ ಕಲೆಂಪಂಗ್ ಗ್ರಾಮದ ನಿವಾಸಿಗಳು ಸುಮಾರು 16 ಅಡಿ ಉದ್ದದ ಹೆಬ್ಬಾವಿನೊಳಗೆ (python) ಮಹಿಳೆ ಇರುವುದನ್ನು ಪತ್ತೆ ಹಚ್ಚಿದ್ದಾರೆ.

ಮಧ್ಯ ಇಂಡೋನೇಷ್ಯಾದಲ್ಲಿ ಹೆಬ್ಬಾವು 45 ವರ್ಷದ ಫರೀದಾ ಅವರನ್ನು ಸಂಪೂರ್ಣವಾಗಿ ನುಂಗಿತ್ತು. ಅದರ ಹೊಟ್ಟೆಯಲ್ಲಿ ಫರೀದಾ ಅವರ ಶವ ಪತ್ತೆಯಾಗಿದೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ನಾಲ್ಕು ಮಕ್ಕಳ ತಾಯಿಯಾಗಿರುವ ಫರೀದಾ ಗುರುವಾರ ರಾತ್ರಿ ನಾಪತ್ತೆಯಾಗಿದ್ದರು. ಹೀಗಾಗಿ ಅವರ ಪತಿ ಮತ್ತು ಮಕ್ಕಳು ಸಾಕಷ್ಟು ಹುಡುಕಾಡಿದ್ದಾರೆ. ಎಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಗ್ರಾಮದ ಮುಖ್ಯಸ್ಥ ಸುರ್ದಿ ರೋಸಿ ಎಎಫ್‌ಪಿಗೆ ಮಾಹಿತಿ ನೀಡಿದ್ದಾರೆ. ಮಹಿಳೆ ನಾಪತ್ತೆಯಾದ ಸ್ಥಳದಲ್ಲಿ ಮಹಿಳೆಯ ವಸ್ತುಗಳು ಕಂಡು ಬಂದಿದೆ. ಇದರಿಂದ ಅನುಮಾನಗೊಂಡ ಆಕೆಯ ಪತಿ ಮತ್ತು ಗ್ರಾಮಸ್ಥರು ಆ ಪ್ರದೇಶವನ್ನು ಹುಡುಕಿದರು. ಆಗ ಅವರಿಗೆ ದೊಡ್ಡ ಹೊಟ್ಟೆಯ ಹೆಬ್ಬಾವೊಂದು ಕಂಡು ಬಂದಿದೆ.

ಅವರು ಹೆಬ್ಬಾವಿನ ಹೊಟ್ಟೆಯನ್ನು ಸೀಳಿದಾಗ ತಕ್ಷಣ ಫರೀದಾ ಅವರ ತಲೆ ಗೋಚರಿಸಿದೆ ಮತ್ತು ಹಾವಿನೊಳಗೆ ಫರೀದಾ ಸಂಪೂರ್ಣ ಬಟ್ಟೆ ಧರಿಸಿದ ಸ್ಥಿತಿಯಲ್ಲೇ ಇರುವುದು ಕಂಡುಬಂದಿದೆ. ಇಂತಹ ಘಟನೆಗಳನ್ನು ಅತ್ಯಂತ ಅಪರೂಪವೆಂದು ಪರಿಗಣಿಸಲಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಇಂಡೋನೇಷ್ಯಾದಲ್ಲಿ ಹೆಬ್ಬಾವುಗಳು ಹಲವಾರು ಜನರನ್ನು ಸಂಪೂರ್ಣ ನುಂಗಿರುವ ಪ್ರಕರಣಗಳು ನಡೆದಿವೆ.

ಕಳೆದ ವರ್ಷ ಆಗ್ನೇಯ ಸುಲವೆಸಿಯ ಟಿನಾಂಗ್ಜಿಯಾ ಜಿಲ್ಲೆಯ ನಿವಾಸಿಗಳು ಎಂಟು ಮೀಟರ್ ಹೆಬ್ಬಾವನ್ನು ಕೊಂದಾಗ ಅದು ಹಳ್ಳಿಯೊಂದರಲ್ಲಿ ರೈತರೊಬ್ಬರನ್ನು ಕತ್ತು ಹಿಸುಕಿ ತಿಂದಿರುವುದು ಕಂಡುಬಂದಿದೆ.

ಇದನ್ನೂ ಓದಿ: Road Accident : ವಾಕಿಂಗ್‌ ಹೊರಟಿದ್ದ ವೃದ್ಧೆಗೆ ಬೈಕ್‌ ಡಿಕ್ಕಿ; ಕ್ಷಣದಲ್ಲೇ ಹಾರಿಹೋಯ್ತು ಪ್ರಾಣ

2018 ರಲ್ಲಿ ಆಗ್ನೇಯ ಸುಲವೆಸಿಯ ಮುನಾ ಪಟ್ಟಣದಲ್ಲಿ 54 ವರ್ಷದ ಮಹಿಳೆ ಏಳು ಮೀಟರ್ ಹೆಬ್ಬಾವಿನೊಳಗೆ ಶವವಾಗಿ ಪತ್ತೆಯಾಗಿದ್ದರು. ಅದಕ್ಕೂ ಮೊದಲು ಪಶ್ಚಿಮ ಸುಲವೆಸಿಯ ರೈತರೊಬ್ಬರು ತಾಳೆ ಎಣ್ಣೆ ತೋಟದಲ್ಲಿ ಕಾಣೆಯಾಗಿದ್ದು, ನಾಲ್ಕು ಮೀಟರ್ ಉದ್ದದ ಹೆಬ್ಬಾವು ಅವರನ್ನು ಜೀವಂತವಾಗಿ ನುಂಗಿತ್ತು.

ದೇವರ ದರ್ಶನ ಮಾಡಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನ; ಒಬ್ಬನ ಸಾವು

ಕೌಟುಂಬಿಕ ಸಮಸ್ಯೆಯಿಂದಾಗಿ ಒಂದೇ ಕುಟುಂಬದ ನಾಲ್ವರು ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದರಲ್ಲಿ ಒಬ್ಬರು ಮೃತಪಟ್ಟಿದ್ದು, ಮೂವರು ತೀವ್ರ ಅಸ್ವಸ್ಥಗೊಂಡಿದ್ದರು. ಈ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯ ತಾಳಬೆಟ್ಟದಲ್ಲಿ ಘಟನೆ ನಡೆದಿದೆ.

ಚಂದಗಾಲು ಗ್ರಾಮದ ಮಹದೇವನಾಯಕ (65) ಮೃತರು. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ(60), ರಿಷಿತಾ (21), ಲೀಲಾವತಿ (45) ಎಂಬವರನ್ನು ಮೈಸೂರಿನ ಕೆಆರ್‌ನಗರ ತಾಲೂಕಿನ ಚಂದಗಾಲು ಗ್ರಾಮಸ್ಥರು ಎಂದು ತಿಳಿದು ಬಂದಿದೆ.

ಮಹದೇಶ್ವರ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹದೇವನಾಯಕ ವಿಷ ಸೇವಿಸಿದ ಕೂಡಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇತ್ತ ಗೌರಮ್ಮ, ಲೀಲಾವತಿ, ರಿಷಿತಾ ವಿಷ ಸೇವನೆ ಮಾಡಿದ್ದಾರೆ. ಆದರೆ ದೇಹದಲ್ಲಿ ಉರಿ ಕಾಣಿಸಿಕೊಂಡು ಜೋರಾಗಿ ಕೂಗಿಕೊಂಡು ನರಳಾಡಿದ್ದಾರೆ.

ಈ ವೇಳೆ ತಾಳ ಬೆಟ್ಟದಲ್ಲಿದ್ದ ಸ್ಥಳೀಯರು ಕೂಡಲೇ ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದರು. ಮೂವರು ಮಹಿಳೆಯರಿಗೆ ಚಿಕಿತ್ಸೆ ಮುಂದುವರಿದಿದೆ. ಈ ಕುರಿತು ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Continue Reading

ಕ್ರೈಂ

Viral Video: ಹೋಟೆಲ್‌ನೊಳಗೆ ಪಿಜ್ಜಾ ತಿನ್ನುತ್ತಿರುವಾಗಲೇ ಮಹಿಳೆಯ ಸರ ಅಪಹರಣ!

ಸ್ನೇಹಿತರೊಂದಿಗೆ ಪಿಜ್ಜಾ ಸೇವಿಸುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ 20 ಗ್ರಾಂ ನ ಚಿನ್ನವನ್ನು ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ಕಸಿದುಕೊಂಡು ಓಡಿ ಹೋಗಿರುವ ಸಂಪೂರ್ಣ ದೃಶ್ಯ ಪಿಜ್ಜಾ ಗ್ಯಾಲರಿಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ಇದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಪಾಣಿಪತ್: ಸರಗಳ್ಳರು (Chain Snatcher ) ನಿರ್ಭೀತರಾಗಿರುವುದರಿಂದ ಅಂಗಡಿಗಳಿಗೆ ನುಗ್ಗಿ ಜನರ ಚಿನ್ನಾಭರಣ ದೋಚುತ್ತಿದ್ದಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪಿಜ್ಜಾ ತಿನ್ನುತ್ತಾ ಮೂವರು ಮಹಿಳೆಯರು ಕುಳಿತು ಮಾತನಾಡುತ್ತಿರುವಾಗಲೇ ವ್ಯಕ್ತಿಯೊಬ್ಬ ಮಹಿಳೆಯ ಚಿನ್ನದ ಸರವನ್ನು ಕಸಿದುಕೊಂಡು ಓಡಿ ಹೋದ ಘಟನೆ ಹರಿಯಾಣದ (Haryana) ಪಾಣಿಪತ್ ನಲ್ಲಿ (Panipat) ನಡೆದಿದೆ. ಇದರ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

ಸಾಕಷ್ಟು ಹೊತ್ತು ತನ್ನ ಸ್ನೇಹಿತರೊಂದಿಗೆ ಪಿಜ್ಜಾ ಸೇವಿಸುತ್ತಿದ್ದ ಮಹಿಳೆಯ ಮೇಲೆ ನಿಗಾ ವಹಿಸುತ್ತಿದ್ದ ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ಚೈನ್ ಕಸಿದುಕೊಂಡು ಓಡಿ ಹೋಗಿದ್ದಾನೆ. ಇದರ ಸಂಪೂರ್ಣ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದೆ. ಇದು ಈಗ ಸಾಮಾಜಿಕ ಜಾಲತಾಣದ ಎಕ್ಸ್ ನಲ್ಲಿ ವೈರಲ್ ಆಗಿದೆ.

ವರದಿಗಳ ಪ್ರಕಾರ, ವ್ಯಕ್ತಿಯೊಬ್ಬ ಆರ್ಡರ್ ಸಂಗ್ರಹಿಸುವ ನೆಪದಲ್ಲಿ ಪಾಣಿಪತ್ ನಗರದ ತಹಸೀಲ್ ಕ್ಯಾಂಪ್ ರಸ್ತೆಯಲ್ಲಿರುವ ಪಿಜ್ಜಾ ಗ್ಯಾಲರಿಗೆ ಬಂದಿದ್ದಾನೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಚೈನ್ ಸ್ನ್ಯಾಚರ್ ಬಹಳಷ್ಟು ಹೊತ್ತು ಅಲ್ಲೇ ಕುಳಿತು ಪಿಜ್ಜಾ ತಿನ್ನುತ್ತಿದ್ದ ಮಹಿಳೆಯರ ಮೇಲೆ ಗಮನವಿಟ್ಟಿದ್ದ. ಆತ ಮಹಿಳೆಯ ಸರ ​​ಕಿತ್ತುಕೊಂಡು ಪರಾರಿಯಾದಾಗ ಪಿಜ್ಜಾ ಗ್ಯಾಲರಿ ಸ್ಟಾಫ್ ಯಾರೂ ಅಲ್ಲಿ ಇರಲಿಲ್ಲ.


ಮಹಿಳೆಯ ಚಿನ್ನದ ಸರವನ್ನು ಕಿತ್ತುಕೊಂಡು ಪಿಜ್ಜಾ ಅಂಗಡಿಯಿಂದ ಹೊರಗೋಡಿದ ಆತನನ್ನು ಇನ್ನೊಬ್ಬ ಮಹಿಳೆ ಹಿಂಬಾಲಿಸಲು ಯತ್ನಿಸಿದ್ದಾನೆ. ಆದರೆ ದರೋಡೆಕೋರರು ತಪ್ಪಿಸಿಕೊಂಡ. ಪಿಜ್ಜಾ ಅಂಗಡಿಯ ಸಿಬ್ಬಂದಿಯೊಬ್ಬರು ಆತನನ್ನು ಹಿಂಬಾಲಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ: Viral Video: ಹೋಟೆಲ್ ಕಾರಿಡಾರ್​ನಲ್ಲಿ ಗಾಲ್ಫ್ ಆಡಿದ ಪಂತ್​-ಸೂರ್ಯಕುಮಾರ್​

ಈ ಘಟನೆಯು ಜೂನ್ 8ರಂದು ಶನಿವಾರ ಮಧ್ಯಾಹ್ನ 3.40 ರ ಸುಮಾರಿಗೆ ಸಂಭವಿಸಿದೆ ಎಂದು ವೈರಲ್ ವಿಡಿಯೋದ ಸಮಯ ತೋರಿಸುತ್ತದೆ. ಮಹಿಳೆಯ ಸರ ಸುಮಾರು 20 ಗ್ರಾಂನದ್ದು ಎಂದು ಹೇಳಲಾಗಿದೆ. ಈ ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರೆಸ್ಟೋರೆಂಟ್ ಮಾಲೀಕನಿಗೆ ಟಿಎಂಸಿ ಶಾಸಕನಿಂದ ಕಪಾಳಮೋಕ್ಷ

ಕೋಲ್ಕತ್ತಾದ ರೆಸ್ಟೋರೆಂಟ್ ಮಾಲೀಕರಿಗೆ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಶಾಸಕ ಕಪಾಳಮೋಕ್ಷ ಮಾಡುವ ಮೂಲಕ ದಾಂಧಲೆ ಎಬ್ಬಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕೋಲ್ಕತ್ತಾದಲ್ಲಿ ಈ ಘಟನೆ ನಡೆದಿದ್ದು, ನಟ, ಟಿಎಂಸಿ ಶಾಸಕ ಸೋಹಮ್‌ ಚಕ್ರವರ್ತಿ ರೆಸ್ಟೋರೆಂಟ್‌ ಮಾಲೀಕರ ಮೇಲೆ ಹಲ್ಲೆ ನಡೆಸಿದ್ದಾರೆ.

ಕೋಲ್ಕತ್ತಾ ಡಿಲೈಟ್‌ ಎಂಬ ರೆಸ್ಟೋರೆಂಟ್‌ ಮಾಲೀಕ ಅನಿಸುರ್‌ ಆಲಂ ಮತ್ತು ಶಾಸಕ ಸೋಹಮ್‌ ನಡುವೆ ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ ನಡೆದಿತ್ತು. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಈ ವೇಳೆ ಆಲಂ ಟಿಎಂಸಿ ಪಕ್ಷ ಪ್ರಧಾನ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆಂಬ ಕಾರಣಕ್ಕೆ ಸೋಹಮ್‌ ಆತನಿಗೆ ಕಪಾಳ ಮೋಕ್ಷ ಮಾಡಿ ಥಳಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸೋಹಮ್‌, ರೆಸ್ಟೋರೆಂಟ್‌ ಮಾಲೀಕನ ಮೇಲೆ ಹಲ್ಲೆ ನಡೆಸಿರುವುದು ನಿಜ. ಕೆಳಗೆ ಮಾರಾಮಾರಿ ಸದ್ದು ಕೇಳಿ ಧಾವಿಸಿ ಬಂದೆ. ಮಾಲೀಕರು ನನ್ನ ಸಿಬ್ಬಂದಿಯನ್ನು ನಿಂದಿಸುತ್ತಿರುವುದನ್ನು ನಾನು ನೋಡಿದೆ. ಅವರು ನನ್ನನ್ನು ಮತ್ತು ಅಭಿಷೇಕ್ ಬ್ಯಾನರ್ಜಿಯನ್ನು ನಿಂದಿಸಿದ್ದಾರೆ. ನಾನು ನನ್ನ ತಾಳ್ಮೆ ಕಳೆದುಕೊಂಡೆ ಮತ್ತು ಅವನಿಗೆ ಕಪಾಳಮೋಕ್ಷ ಮಾಡಿದ್ದೇನೆ ಎಂದು ಹೇಳಿದರು.

ಇನ್ನು ಸೋಹಮ್‌ ಒಬ್ಬ ಸೋಶಿಯಲ್‌ ಮೀಡಿಯಾ ಇನ್‌ಫ್ಲೂವೆನ್ಶಿಯಲ್‌. ಅವರು ಶೂಟಿಂಗ್‌ಗಾಗಿ ಹೊಟೇಲ್‌ಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಸೋಹಮ್ ಸೆಕ್ಯುರಿಟಿಯವರು ಕೂಡ ನಮ್ಮನ್ನು ಥಳಿಸಿದ್ದಾರೆ. ನಾವು ಇನ್ನೂ ಪೊಲೀಸರಿಗೆ ದೂರು ನೀಡಿಲ್ಲ ಎಂದು ಹೊಟೇಲ್‌ ಮ್ಯಾನೇಜರ್ ಹೇಳಿದ್ದಾರೆ.

Continue Reading

ಧಾರವಾಡ

Dharwad News : ಅಗ್ನಿ ಸ್ಪರ್ಶ ಮಾಡುವಾಗಲೇ ಶವದ ಮೇಲೆ ಹಾರಿ ಕುಳಿತ ಮಂಗ! ಮುಂದೇನಾಯಿತು?

Heart Attack : ಹೃದಯಾಘಾತದಿಂದ ಮೃತಪಟ್ಟಿದ್ದ ಯುವಕನ ಅಂತ್ಯ ಸಂಸ್ಕಾರ ನಡೆಯುತ್ತಿರುವಾಗಲೇ ಮಂಗವೊಂದು ಪ್ರತ್ಯಕ್ಷವಾಗಿತ್ತು. ಇನ್ನೇನು ಅಗ್ನಿ ಸ್ಪರ್ಶ ಮಾಡಬೇಕು ಎಂದಾಗ ಶವದ ಮೇಲೆ ಕುಳಿತುಕೊಂಡು ಅಚ್ಚರಿಯನ್ನು (Dharwad News) ಮೂಡಿಸಿತ್ತು. ಸದ್ಯ ಈ ವಿಡಿಯೊ ಎಲ್ಲೆಡೆ ವೈರಲ್‌ ಆಗುತ್ತಿದೆ.

VISTARANEWS.COM


on

By

Dharwad News The monkey sat on the corpse during the funeral
Koo

ಧಾರವಾಡ: ಯುವಕನೊರ್ವ ಚಿಕ್ಕ ವಯಸ್ಸಿಗೆ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದ. ಆ ಕುಟುಂಬದವರು ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದರು. ಮಗನ ಅಗಲಿಕೆಯ ನೋವಿನಲ್ಲೇ ಬಂಧು-ಬಾಂಧವರು ಅಂತಿಮ ವಿಧಿವಿಧಾನ ಮುಗಿಸಿ, ಇನ್ನೇನು ಯುವಕನ ಮೃತದೇಹಕ್ಕೆ ಅಗ್ನಿ ಸ್ಪರ್ಶ ಮಾಡಬೇಕು ಎಂದಾಗ ಅಚ್ಚರಿಯೊಂದು ಕಾದಿತ್ತು. ಎಲ್ಲಿಂದಲ್ಲೋ ಬಂದ ಮಂಗವೊಂದು ಶವದ ಮೇಲೆ ಕುಳಿತುಕೊಂಡಿತ್ತು. ಧಾರವಾಡ ಜಿಲ್ಲೆಯ (Dharwad News) ನವಲಗುಂದ ಪಟ್ಟಣದಲ್ಲಿ ಈ ಅಚ್ಚರಿಯ ಘಟನೆ ನಡೆದಿದೆ.

ನವಲಗುಂದ ಪಟ್ಟಣದ ಬಸವೇಶ್ವರ ನಗರದ ನಿವಾಸಿ ರವಿ ಮಾಗ್ರೆ (35) ಎಂಬುವವರು ಗುರುವಾರ ಹೃದಯಾಘಾತದಿಂದ ಮೃತಪಟ್ಟಿದ್ದರು. ಶುಕ್ರವಾರ ಮಧ್ಯಾಹ್ನ ಕುಟುಂಬಸ್ಥರು ಅಂತಿಮ ವಿಧಿವಿಧಾನ ಕಾರ್ಯದಲ್ಲಿ ತೊಡಗಿದ್ದರು. ಇದೇ ವೇಳೆ ಪ್ರತ್ಯಕ್ಷವಾದ ಮಂಗವೊಂದು ಅಂತ್ಯಕ್ರಿಯೆ ನಡೆಯುವಾಗ ಶವದ ಮೇಲೆ ಕೂತು ಅಚ್ಚರಿ ಮೂಡಿಸಿತು.

ಇತ್ತ ದುಃಖದಲ್ಲಿದ್ದ ಕುಟುಂಬಸ್ಥರಿಗೆ ಇದು ಯಾವ ತರಹದ ಬಾಂಧವ್ಯ ಎಂದು ಆಶ್ಚರ್ಯಗೊಂಡರು. ಮೃತಪಟ್ಟ ರವಿಗೂ ಈ ಮಂಗಕ್ಕೂ ಯಾವುದೇ ಸಂಬಂಧ ಇರಲಿಲ್ಲ. ಅಂತ್ಯಕ್ರಿಯೆಗೆ ಸಮಯ ಮೀರುತ್ತಿದ್ದ ಕಾರಣಕ್ಕೆ ಮಂಗನನ್ನು ಓಡಿಸಲು ಜನರು ಮುಂದಾದರು. ಆದರೂ ಮಂಗ ಮಾತ್ರ ಮೃತದೇಹವನ್ನು ಬಿಟ್ಟು ಕೆಳಗೆ ಇಳಿಯಲೇ ಇಲ್ಲ.

ಎಲ್ಲರಿಗೂ ಮಂಗನ ವರ್ತನೆಯು ಕುತೂಹಲವನ್ನು ಮೂಡಿಸಿತ್ತು. ಮಂಗ ಇಳಿಯದೇ ಇದ್ದಾಗ ಕೊನೆಗೆ ರವಿ ಕುಟುಂಬಸ್ಥರು ಮೃತದೇಹಕ್ಕೆ ಅಗ್ನಿ ಸ್ಪರ್ಶಿಸಿದಾಗ ಕೆಳಗೆ ಇಳಿದಿದೆ. ಮೃತದೇಹಕ್ಕೆ ಬೆಂಕಿ ಹಚ್ಚಿದ ನಂತರವೂ ಅಲ್ಲಿಯೇ ಕುಳಿತು ನೋಡುತ್ತಿತ್ತು. ಮಂಗನ ಈ ಎಲ್ಲ ನಡೆಗಳನ್ನು ಅಲ್ಲಿದ್ದ ಜನರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿಯುತ್ತಿದ್ದರು.

ಇದನ್ನೂ ಓದಿ: Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

ಅಯ್ಯೋ..ಇದೆಂಥಾ ಹುಚ್ಚಾಟ! ಬಿಜೆಪಿ ಗೆಲ್ಲಲ್ಲಿ ಎಂದು ಬೆರಳನ್ನೇ ಕತ್ತರಿಸಿಕೊಂಡ ಭೂಪ

ಛತ್ತೀಸ್‌ಗಡ: ಚುನಾವಣೆ(Election) ಅಂದ್ರೆನೇ ಹಾಗೆಯೇ ಅದೊಂದು ತರಹ ಯುದ್ಧದ ರೀತಿಯೇ ಭಾಸವಾಗುತ್ತದೆ. ತಮ್ಮ ತಮ್ಮ ನೆಚ್ಚಿನ ಪಕ್ಷಗಳು, ನಾಯಕರ ಗೆಲುವಿಗೆ ನೂರಾರು ಕಾರ್ಯಕರ್ತರು, ಬೆಂಬಲಿಗರು ಹಂಬಲಿಸೋದು ಸಹಜ. ಕೆಲವೊಮ್ಮೆ ಕಾರ್ಯಕರ್ತರ ಪಕ್ಷದ ಬಗೆಗಿನ ಒಲವು ಅತಿರೇಕಕ್ಕೆ ತಿರುಗಿದಾಗ ಅನೇಕ ಅವಘಡಗಳು ಸಂಭವಿಸುತ್ತಿರುತ್ತವೆ. ಅಂತಹದ್ದೇ ಒಂದು ಘಟನೆ(Viral News) ಛತ್ತೀಸ್‌ಗಡದಲ್ಲಿ ನಡೆದಿದ್ದು, ಎನ್‌ಡಿಎ(NDA) ಬಹುಮತದೊಂದಿಗೆ ಗೆಲವು ಸಾಧಿಸಿರುವ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಬೆರಳು ಕತ್ತರಿಸಿ ಕಾಳಿ ದೇವಿಗೆ ಅರ್ಪಿಸಿದ್ದಾನೆ.

ಏನಿದು ಘಟನೆ?

ಛತ್ತೀಸ್‌ಗಡದ ಬಾಲರಾಮ್‌ಪುರದಲ್ಲಿ ಈ ಘಟನೆ ನಡೆದಿದ್ದು, ದುರ್ಗೇಶ್‌ ಪಾಂಡೆ ಎಂಬಾತನೇ ಬಿಜೆಪಿ ಬೆಂಬಲಿಗ. ಜೂ.4ರಂದು ಚನಾವಣಾ ಫಲಿತಾಂಶ ಹೊರಬಿದ್ದಾಗ ಆರಂಭದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದ್ದಂತೆ ತೀವ್ರ ಬೇಸರಗೊಂಡಿದ್ದನಂತೆ. ಈ ಬಾರಿ ಅಧಿಕಾರ ಎನ್‌ಡಿಎ ಕೈ ತಪ್ಪಿ ಹೋಗುತ್ತದೆ ಎಂಬ ಆತಂಕಕ್ಕೆ ಬಿದ್ದ ದುರ್ಗೇಶ್‌, ಕಾಳಿ ಮಂದಿರಕ್ಕೆ ತೆರಳಿ ಬಿಜೆಪಿ ಗೆಲುವಿಗೆ ಪ್ರಾರ್ಥಿಸಿದ್ದಾನೆ. ಅಲ್ಲದೇ ತನ್ನ ಒಂದು ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ್ದಾನೆ.

ಇನ್ನು ಬೆರಳು ಕತ್ತರಿಸಿಕೊಂಡ ದುರ್ಗೇಶ್‌ ಪಾಂಡೆ, ಬಟ್ಟೆಯನ್ನು ಕಟ್ಟಿ ಸುರಿಯುತ್ತಿದ್ದ ರಕ್ತವನ್ನು ತಡೆಯಲು ಯತ್ನಿಸಿದ್ದಾನೆ. ಆದರೆ ರಕ್ತ ಮಾತ್ರ ನಿಲ್ಲಲೇ ಇಲ್ಲ. ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆ ಆತನ ಕುಟುಂಬಸ್ಥರು ಆತನನ್ನು ತಕ್ಷಣ ಸಮಾರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಆತನನ್ನು ಅಂಬಿಕಾಪುರದ ಮೆಡಿಕಲ್‌ ಕಾಲೇಜಿಗೆ ರವಾನಿಸಲಾಗಿತ್ತು. ಬಹಳ ಹೊತ್ತಾದ ಕಾರಣ ನಜ್ಜುಗುಜ್ಜಾಗಿದ್ದ ಆತನ ಬೆರಳನ್ನು ಮತ್ತೆಜೋಡಿಸಲು ಸಾಧ್ಯವಾಗಿಲ್ಲ. ಅದ್ಯ ಚಿಕಿತ್ಸೆ ಮುಂದುವರೆದಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ದುರ್ಗೇಶ್‌ ಪಾಂಡೆ, ಆರಂಭಿಕ ಟ್ರೆಂಡ್‌ಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುವುದನ್ನು ಕಂಡು ನಾನು ವಿಚಲಿತನಾದೆ. ಮತ್ತೊಂದೆಡೆ ಕಾಂಗ್ರೆಸ್ ಬೆಂಬಲಿಗರು ಕೂಡ ಉತ್ಸಾಹದಲ್ಲಿದ್ದರು. ಇಡೀ ಗ್ರಾಮವು ನಂಬಿರುವ ಕಾಳಿ ದೇವಸ್ಥಾನಕ್ಕೆ ನಾನು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಬಿಜೆಪಿ ಗೆಲುವಿಗೆ ಬೆರಳು ಕೊಡುವುದಾಗಿ ಪ್ರತಿಜ್ಞೆ ಮಾಡಿದ್ದೆ. ಅಂದು ಸಂಜೆ ಬಿಜೆಪಿ ಚುನಾವಣೆಯಲ್ಲಿ ಗೆದ್ದಾಗ, ನಾನು ದೇವಸ್ಥಾನಕ್ಕೆ ಹೋಗಿ, ನನ್ನ ಬೆರಳು ಕತ್ತರಿಸಿ ಅದನ್ನು ಅರ್ಪಿಸಿದೆ, ಬಿಜೆಪಿ ಈಗ ಸರ್ಕಾರ ರಚಿಸುತ್ತದೆ, ಆದರೆ ಅವರು (ಎನ್‌ಡಿಎ) 400 ರ ಗಡಿ ದಾಟಿದರೆ ನನಗೆ ಹೆಚ್ಚು ಸಂತೋಷವಾಗುತ್ತಿತ್ತು ಎಂದಿದ್ದಾನೆ.

ಕೆಲವು ದಿನಗಳ ಹಿಂದೆ ಆಪ್‌ ನಾಯಕ, ನವದೆಹಲಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸೋಮನಾಥ್‌ ಭಾರ್ತಿ, ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾದರೆ ನನ್ನ ತಲೆ ಬೋಳಿಸಿಕೊಳ್ಳುತ್ತೇನೆ” ಎಂದಿದ್ದರು. ಜೂನ್‌ 4ರಂದು ಎಲ್ಲ ಮತಗಟ್ಟೆ ಸಮೀಕ್ಷೆಗಳು ತಪ್ಪು ಎಂಬುದು ಸಾಬೀತಾಗಲಿದೆ. ಖಂಡಿತವಾಗಿಯೂ, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದಿಲ್ಲ. ದೆಹಲಿಯ ಎಲ್ಲ 7 ಲೋಕಸಭೆ ಕ್ಷೇತ್ರಗಳಲ್ಲೂ ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಇನ್ನು, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾದರೆ, ನಾನು ನನ್ನ ತಲೆಯನ್ನು ಬೋಳಿಸಿಕೊಳ್ಳುತ್ತೇನೆ” ಎಂಬುದಾಗಿ ಮತಗಟ್ಟೆ ಸಮೀಕ್ಷೆಗಳ ವರದಿಗಳ ಬಳಿಕ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Veeraloka
Latest25 mins ago

Veeraloka Books : ಹೊಸ ಲೇಖಕರಿಗೆ ವೀರಲೋಕ ಪ್ರಕಾಶನ ಹೆದ್ದಾರಿಯನ್ನೇ ಸೃಷ್ಟಿಸಿದೆ: ಜಯಂತ್‌ ಕಾಯ್ಕಿಣಿ ಶ್ಲಾಘನೆ

IND vs PAK
ಪ್ರಮುಖ ಸುದ್ದಿ47 mins ago

IND vs PAK : ಮರೆಗುಳಿ ರೋಹಿತ್​; ಜೇಬಿನಲ್ಲಿ​ ಕಾಯಿನ್​ ಇಟ್ಟು ಹುಡುಕಾಡಿದ ಭಾರತ ತಂಡದ ನಾಯಕ

Modi 3.0 Cabinet
ದೇಶ1 hour ago

Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Modi 3.0 Cabinet
ದೇಶ1 hour ago

Modi 3.0 Cabinet: 30 ಕ್ಯಾಬಿನೆಟ್‌ ದರ್ಜೆ, 5 ಸ್ವತಂತ್ರ, 36 ಸಂಸದರಿಗೆ ರಾಜ್ಯ ಖಾತೆ; ಇಲ್ಲಿದೆ ಕಂಪ್ಲೀಟ್‌ ಲಿಸ್ಟ್

V Somanna profile
ಪ್ರಮುಖ ಸುದ್ದಿ2 hours ago

V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

Terror Attack
ಕ್ರೈಂ2 hours ago

Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ; 10 ಸಾವು

Ind vs pak
ಪ್ರಮುಖ ಸುದ್ದಿ3 hours ago

IND VS PAK : ಭಾರತ- ಪಾಕಿಸ್ತಾನ ಪಂದ್ಯ ಅರ್ಧ ಗಂಟೆ ತಡ; ಟಾಸ್ ಗೆದ್ದ ಪಾಕ್​ನಿಂದ ಫೀಲ್ಡಿಂಗ್ ಆಯ್ಕೆ

Narendra Modi
ದೇಶ3 hours ago

Narendra Modi: ರಾಜಕೀಯದಾಚೆ ಕವಿ, ಗಾಳಿಪಟ ಪ್ರೇಮಿ; ಮೋದಿ ಬಗ್ಗೆ ನಿಮಗೆ ಗೊತ್ತಿರದ 20 ಸಂಗತಿ ಇಲ್ಲಿವೆ

Bus Accident
ಕ್ರೈಂ3 hours ago

Bus Accident: ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದು ವಿಡಿಯೊ ಮಾಡಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು!

HD Kumaraswamy
ಕರ್ನಾಟಕ3 hours ago

HD Kumaraswamy Profile: ಹರದನಹಳ್ಳಿಯಿಂದ ದೆಹಲಿವರೆಗೆ; ಕುಮಾರಸ್ವಾಮಿ ಸಾಗಿಬಂದ ದಾರಿ ಹೀಗಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌