Dog Attack: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ - Vistara News

ವೈರಲ್ ನ್ಯೂಸ್

Dog Attack: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉತ್ತರ ಪ್ರದೇಶದ ಗೋರಖ್‌ಪುರದ ಶಹಪುರದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸುಮಾರು 17 ಮಂದಿಯ ಮೇಲೆ ಹುಚ್ಚು ನಾಯಿಯೊಂದು ದಾಳಿ (Dog Attack) ನಡೆಸಿದೆ. ಇದರ ಭಯಾನಕ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಗೋರಖ್‌ಪುರದ ಹೆಚ್ಚುವರಿ ಮುನ್ಸಿಪಲ್ ಕಮಿಷನರ್ ದುರ್ಗೇಶ್ ಮಿಶ್ರಾ ಅವರು, ಬೀದಿ ನಾಯಿಗಳ ಸಂತಾನ ಶಕ್ತಿ ಹರಣ ಅಭಿಯಾನವನ್ನು ನಾವು ನಿಯಮಿತವಾಗಿ ನಡೆಸುತ್ತಿದ್ದೇವೆ. ಪ್ರಾಣಿ ಜನನ ನಿಯಂತ್ರಣ ಕೇಂದ್ರವನ್ನು ಸಹ ನಿರ್ಮಿಸಲಾಗುತ್ತಿದೆ. ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಚುಚ್ಚು ಮದ್ದು ನೀಡಲಾಗುತ್ತಿದೆ ಎಂದಿದ್ದಾರೆ.

VISTARANEWS.COM


on

Dog attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಕ್ಕಳು, ಮಹಿಳೆಯರು ಸೇರಿದಂತೆ ಸುಮಾರು 17 ಮಂದಿಯ ಮೇಲೆ ಉತ್ತರ ಪ್ರದೇಶದ (uttarpradesh) ಗೋರಖ್‌ಪುರದ ಶಹಪುರದಲ್ಲಿ ಆಗಸ್ಟ್ 14ರಂದು ಹುಚ್ಚು ನಾಯಿಯೊಂದು ದಾಳಿ (Dog Attack) ನಡೆಸಿದೆ. ಇದರ ಭಯಾನಕ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆವಾಸ್ ವಿಕಾಸ್ ಕಾಲೋನಿಯಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ 22 ವರ್ಷದ ಆಶಿಶ್ ಯಾದವ್ ಮೇಲೆ ನಾಯಿಯು ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಿಬಿಎ ವಿದ್ಯಾರ್ಥಿಯಾಗಿರುವ ಆಶಿಶ್ ಯಾದವ್ ಅವರು ರಾತ್ರಿ 9.45ರ ಸುಮಾರಿಗೆ ಮನೆಯ ಹೊರಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಬಂದ ನಾಯಿ ಏಕಾಏಕಿ ಅವರ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದೆ.


ಆಶಿಶ್ ನಾಯಿಯನ್ನು ಹಿಮ್ಮೆಟ್ಟಿಸಲು ಮತ್ತು ಅದರ ಮೇಲೆ ಪ್ರತಿ ದಾಳಿ ನಡೆಸಲು ಪ್ರಯತ್ನಿಸಿದ್ದಾರೆ. ಆದರೆ ಅದು ಬೊಗಳುವುದು ಮತ್ತು ಕಚ್ಚುವುದನ್ನು ನಿಲ್ಲಿಸಲಿಲ್ಲ. ಆಶಿಶ್ ನೆಲಕ್ಕೆ ಬೀಳುತ್ತಿದ್ದಂತೆ ಅದು ಅವರ ಕಾಲಿಗೆ ಕಚ್ಚಿದೆ. ಅಲ್ಲದೇ ಜಿಗಿದು ಮುಖದ ಮೇಲೂ ಕಚ್ಚಿದೆ. ನಾಯಿಯ ದಾಳಿಯಿಂದ ಅವರ ಬಾಯಿ, ಕಣ್ಣು ಮತ್ತು ತುಟಿಗಳಿಂದ ರಕ್ತಸ್ರಾವವಾಗುತ್ತಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದಾದ ನಂತರ ಇನ್ನೊಂದು ಮನೆಯ ಗೇಟ್‌ ಬಳಿ ನಿಂತಿದ್ದ ಮಹಿಳೆಯ ಮೇಲೆ ದಾಳಿ ನಡೆಸಿದ ನಾಯಿ ಆಕೆಯ ಕಾಲನ್ನು ಕಚ್ಚಿದೆ. ಇದರಿಂದ ಆಕೆಗೆ ಆಳವಾದ ಗಾಯವಾಗಿದ್ದು, ಹಲವಾರು ಹೊಲಿಗೆಗಳನ್ನು ವೈದ್ಯರು ಹಾಕಿದ್ದಾರೆ ಎನ್ನಲಾಗಿದೆ. ಅನಂತರ ಮನೆಯ ಹೊರಗೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರ ಮೇಲೂ ನಾಯಿ ದಾಳಿ ಮಾಡಿದೆ.

ಆಶಿಶ್ ಅವರನ್ನು ರೇಬಿಸ್ ಲಸಿಕೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲಿ ಔಷಧ ಖಾಲಿಯಾಗಿತ್ತು ಎಂದು ಆಶಿಶ್ ತಂದೆ ವಿಜಯ್ ಯಾದವ್ ಹೇಳಿದ್ದಾರೆ. ಬೀದಿ ನಾಯಿಗಳ ಹಾವಳಿ ಬಗ್ಗೆ ನಗರಸಭೆಗೆ ಮಾಹಿತಿ ನೀಡಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ ಎಂದು ನಾಯಿ ದಾಳಿಯಿಂದ ಗಾಯಗೊಂಡಿರುವ ಅನೇಕರು ದೂರಿದ್ದಾರೆ.

ಇದನ್ನೂ ಓದಿ: Viral Video: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

ಈ ಕುರಿತು ಪ್ರತಿಕ್ರಿಯಿಸಿರುವ ಗೋರಖ್‌ಪುರದ ಹೆಚ್ಚುವರಿ ಮುನ್ಸಿಪಲ್ ಕಮಿಷನರ್ ದುರ್ಗೇಶ್ ಮಿಶ್ರಾ ಅವರು, ಘಟನೆಯ ಬಗ್ಗೆ ತನಗೆ ತಿಳಿದಿಲ್ಲ ಮತ್ತು ಯಾವುದೇ ದೂರುಗಳನ್ನು ಸ್ವೀಕರಿಸಿಲ್ಲ ಎಂದು ಹೇಳಿದರು. ಬೀದಿ ನಾಯಿಗಳ ಸಂತಾನಹರಣ ಅಭಿಯಾನವನ್ನು ನಾವು ನಿಯಮಿತವಾಗಿ ನಡೆಸುತ್ತಿದ್ದೇವೆ. ಪ್ರಾಣಿ ಜನನ ನಿಯಂತ್ರಣ ಕೇಂದ್ರವನ್ನು ಸಹ ನಿರ್ಮಿಸಲಾಗುತ್ತಿದೆ. ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಚುಚ್ಚು ಮದ್ದು ನೀಡಲಾಗುತ್ತಿದೆ ಮತ್ತು ಸಾಕು ನಾಯಿಗಳಿಗೆ ಲಸಿಕೆ ಹಾಕಲು ನಾವು ಜಾಗೃತಿ ಅಭಿಯಾನವನ್ನು ನಡೆಸುತ್ತೇವೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡುತ್ತ ದೇವಾಲಯದೊಳಗೇ ಹಸ್ತಮೈಥುನ!

Viral Video: ಉತ್ತರ ಪ್ರದೇಶದ ದೇವಾಲಯದ ಆವರಣದಲ್ಲಿ ವ್ಯಕ್ತಿಯೊಬ್ಬ ಅಶ್ಲೀಲ ಕೃತ್ಯದಲ್ಲಿ ತೊಡಗಿಕೊಂಡಿರುವ ವಿಡಿಯೊವೊಂದು ವೈರಲ್ ಆಗಿದೆ. ಇದು ಸ್ಥಳೀಯ ಸಮುದಾಯ ಮತ್ತು ಧಾರ್ಮಿಕ ಭಕ್ತರಲ್ಲಿ ಬೇಸರವನ್ನುಂಟುಮಾಡಿದೆ. ವಿಡಿಯೊ ವೈರಲ್ ಆದ ನಂತರ ಎಚ್ಚೆತ್ತುಕೊಂಡ ಗಾಜಿಯಾಬಾದ್ ಪೊಲೀಸರು ಪ್ರಕರಣ ಗಂಭೀರತೆಯನ್ನು ತಿಳಿದುಕೊಂಡು ವಿಡಿಯೊ ದೃಶ್ಯವಳಿಯನ್ನು ಪರಿಶೀಲಿಸಿ ಆರೋಪಿಯನ್ನು ಗುರುತಿಸಿದ್ದು, ಆತನನ್ನು ಬಂಧಿಸಲು ಹುಡುಕಾಟ ನಡೆಸುತ್ತಿದ್ದಾರೆ.

VISTARANEWS.COM


on

Viral Video
Koo


ಗಾಜಿಯಾಬಾದ್: ಇತ್ತೀಚಿನ ದಿನಗಳಲ್ಲಿ ಕಾಮುಕರ ಹಾವಳಿ ಮಿತಿ ಮೀರುತ್ತಿದೆ. ತಮ್ಮ ಕಾಮದಾಸೆಯನ್ನು ತೀರಿಸಿಕೊಳ್ಳಲು ಎಲ್ಲೆಂದರಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವುದು, ಖಾಸಗಿ ಭಾಗಗಳನ್ನು ಪ್ರದರ್ಶನ ಮಾಡುವುದು, ಮೂಕ ಪ್ರಾಣಿಗಳ ಮೇಲೂ ಲೈಂಗಿಕ ದೌರ್ಜನ್ಯ ಮಾಡುವುದು ಹೀಗೆ ನೀಚ ಕೃತ್ಯಗಳನ್ನು ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈಗ ಅವರು ಪವಿತ್ರವಾದ ದೇವಾಲಯದೊಳಗೂ ಈ ನಾಚಿಕೆಗೇಡಿನ ಕೆಲಸಕ್ಕೆ ಮುಂದಾಗಿದ್ದಾರೆ. ಅದಕ್ಕೆ ಸಂಬಂಧಪಟ್ಟ ವಿಡಿಯೊ ಈಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ (Viral Video)ಆಗಿ, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ಈ ದೇವಾಲಯದೊಳಗೆ ಕಾಮುಕ ವ್ಯಕ್ತಿಯೊಬ್ಬ ಮೊಬೈಲ್ ಫೋನ್‍ನಲ್ಲಿ ಅಶ್ಲೀಲ ವಿಡಿಯೊವನ್ನು ನೋಡುತ್ತಾ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ವೈರಲ್ ಆದ ಹಿನ್ನೆಲೆಯಲ್ಲಿ ಆ ವ್ಯಕ್ತಿಗಾಗಿ ಗಾಜಿಯಾಬಾದ್ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ ಎನ್ನಲಾಗಿದೆ. ಈ ವಿಡಿಯೊವನ್ನು ಸಚಿನ್ ಗುಪ್ತಾ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ಸಿಕ್ಕಾಪಟ್ಟೆ ವೈರಲ್ ಆಗಿದೆ.

ಉತ್ತರ ಪ್ರದೇಶದ ದೇವಾಲಯವೊಂದರಲ್ಲಿ ನಡೆದ ಈ ಆಘಾತಕಾರಿ ಘಟನೆಯನ್ನು ಅಲ್ಲಿದ್ದ ವ್ಯಕ್ತಿಯೊಬ್ಬರು ರೆಕಾರ್ಡ್ ಮಾಡಿ ನಂತರ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇದು ಈಗ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ದೇವಾಲಯದ ಆವರಣದಲ್ಲಿ ವ್ಯಕ್ತಿಯು ಅಶ್ಲೀಲ ಕೃತ್ಯದಲ್ಲಿ ತೊಡಗಿರುವುದನ್ನು ವಿಡಿಯೊ ತೋರಿಸುತ್ತದೆ. ಇದು ಸ್ಥಳೀಯ ಸಮುದಾಯ ಮತ್ತು ಧಾರ್ಮಿಕ ಭಕ್ತರಲ್ಲಿ ಬೇಸರವನ್ನುಂಟುಮಾಡಿದೆ. ವಿಡಿಯೊ ವೈರಲ್ ಆದ ನಂತರ ಎಚ್ಚೆತ್ತುಕೊಂಡ ಗಾಜಿಯಾಬಾದ್ ಪೊಲೀಸರು ಪ್ರಕರಣ ಗಂಭೀರತೆಯನ್ನು ತಿಳಿದುಕೊಂಡು ವಿಡಿಯೊ ದೃಶ್ಯವಳಿಯನ್ನು ಪರಿಶೀಲಿಸಿ ಆರೋಪಿಯನ್ನು ಗುರುತಿಸಿದ್ದು, ಆತನನ್ನು ಬಂಧಿಸಲು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ:ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಸರ್ಕಾರಿ ನೌಕರ ಗಜೇಂದ್ರ ಸಿಂಗ್ ಎಂಬಾತ ಹಸ್ತಮೈಥುನ ಮಾಡಲು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಳಸಿಕೊಂಡಿದ್ದಾನೆ. ಅಲ್ಲದೇ ಆತ ತನ್ನ ಕಾಮದಾಹ ತೀರಿಸಿಕೊಳ್ಳಲು ಮೇಕೆಯ ಜೊತೆಗೂ ಕ್ರೂರವಾಗಿ ವರ್ತಿಸಿದ್ದಾನೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಆತ ಹಸ್ತಮೈಥುನ ಮಾಡಿಕೊಳ್ಳಲು ಹುಡುಗಿಯ ಖಾಸಗಿ ಭಾಗಗಳನ್ನು ಮುಟ್ಟಿ ಅವಳನ್ನು ಚುಂಬಿಸಿದನು. ಹುಡುಗಿ ಹೇಗೋ ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದಾಗ, ಆತನ ಕೆಟ್ಟ ಕಣ್ಣು ಮೇಕೆಯ ಮೇಲೆ ಬಿದ್ದಿದೆ. ನಂತರ ಆತನ ಕಾಮದಾಹಕ್ಕೆ ಮೇಕೆ ಬಲಿಪಶುವಾಗಿತ್ತು.

Continue Reading

ಕ್ರೀಡೆ

Viral Video: ಜಸ್​ಪ್ರೀತ್​ ಬುಮ್ರಾಗಿಂತ ವೇಗವಾಗಿ ಬೌಲಿಂಗ್​ ನಡೆಸಿ ವಿಕೆಟ್ ಕಿತ್ತ ಶಾಲಾ ಬಾಲಕಿ; ವಿಡಿಯೊ ವೈರಲ್​​

Viral Video: ಫೀಮೇಲ್ ಕ್ರಿಕೆಟ್​ ಎನ್ನುವ ಟ್ವಿಟರ್​ ಎಕ್ಸ್​ ಖಾತೆಯಿಂದ ಪೋಸ್ಟ್ ಆಗಿರುವ ಈ ವಿಡಿಯೊದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬಳು ತನ್ನ ಶಾಲೆಯ ಸಮವಸ್ತ್ರದಲ್ಲೇ ಅತ್ಯಂತ ವೇಗದ ಬೌಲಿಂಗ್​ ನಡೆಸುವ ಮೂಲಕ ಬ್ಯಾಟರ್​ ಅನ್ನು ಕ್ಲೀನ್​ ಬೌಲ್ಟ್​ ಮಾಡಿದ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Koo

ಮುಂಬಯಿ: ಸಾಮಾಜಿಕ ಜಾಲತಾಣದಲ್ಲಿ ಹಲವು ವೈರಲ್​ ವಿಡಿಯೋಗಳು(Viral Video) ಹರಿದಾಡುತ್ತಿರುತ್ತವೆ. ಆದರೆ ಅವುಗಳಲ್ಲಿ ಕೆಲವೊಂದು ವಿಡಿಯೋಗಳು ವಿಶೇಷ ಕಾರಣದಿಂದಾಗಿ ಜನರ ಗಮನ ಸೆಳೆದುಬಿಡುತ್ತದೆ. ಇದೀಗ ಇತಂಹದ್ದೇ ವಿಡಿಯೊವೊಂದು ಕ್ರಿಕೆಟ್​ ಪ್ರಿಯರ ಮನಗೆದ್ದಿದೆ. ಶಾಲಾ ವಿದ್ಯಾರ್ಥಿಯೊಬ್ಬಳು ಜಸ್​ಪ್ರೀತ್​ ಬುಮ್ರಾ ಅವರಂತೆ ವೇಗದ ಬೌಲಿಂಗ್​ ನಡೆಸುತ್ತಿರುವ ವಿಡಿಯೊ ವೈರಲ್​ ಆಗಿದೆ.

ಫೀಮೇಲ್ ಕ್ರಿಕೆಟ್​ ಎನ್ನುವ ಟ್ವಿಟರ್​ ಎಕ್ಸ್​ ಖಾತೆಯಿಂದ ಪೋಸ್ಟ್ ಆಗಿರುವ ಈ ವಿಡಿಯೊದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬಳು ತನ್ನ ಶಾಲೆಯ ಸಮವಸ್ತ್ರದಲ್ಲೇ ಅತ್ಯಂತ ವೇಗದ ಬೌಲಿಂಗ್​ ನಡೆಸುವ ಮೂಲಕ ಬ್ಯಾಟರ್​ ಅನ್ನು ಕ್ಲೀನ್​ ಬೌಲ್ಟ್​ ಮಾಡುತ್ತಿರುವುದನ್ನು ಕಾಣಬಹುದು. ಅತ್ಯುತ್ತಮ ಲೆಂತ್​ ಮತ್ತು ಲೈನ್​ನಲ್ಲಿ ಬೌಲಿಂಗ್​ ನಡೆಸುವ ಈಕೆ ಭವಿಷ್ಯದ ಭಾರತ ಮಹಿಳಾ ತಂಡದ ಸ್ಟಾರ್(Indian Women’s Cricket team)​ ವೇಗಿ ಎಂದು ನೆಟ್ಟಿಗರು ಈಗಲೇ ಭವಿಷ್ಯ ನುಡಿಯಲಾರಂಭಿಸಿದ್ದಾರೆ.

ಕಳೆದ ವರ್ಷ ಹಳ್ಳಿ ಹುಡುಗಿಯೊಬ್ಬಳ ಬ್ಯಾಟಿಂಗ್​ ಕಂಡು ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್(sachin tendulkar)​ ಕೂಡ ಅಚ್ಚರಿಗೊಂಡಿದ್ದರು. ತೆಂಡೂಲ್ಕರ್​ ತಮ್ಮ ಟ್ವಿಟರ್​ನಲ್ಲಿ ಶೇರ್​ ಮಾಡಿ ಈ ಹುಡುಗಿಯ ಬ್ಯಾಟಿಂಗ್​ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿಮ್ಮ ಅತ್ಯದ್ಭುತ ಬ್ಯಾಟಿಂಗ್​ಗೆ ನಾನು ಮನಸೋತಿರುವೆ. ಇದೇ ರೀತಿ ಆಟ ಮುಂದುವರಿಸಿ ಮುಂದೊಂದು ದಿನ ಟೀಮ್​ ಇಂಡಿಯಾದಲ್ಲಿ ನೀವು ಕಾಣಿಸಿಕೊಳ್ಳುವಂತಾಗಲಿ ಎಂದು ಹಾರೈಸಿದ್ದರು.

ಹಳ್ಳಿ ಹುಡುಗಿಯ ಈ ಪರ್ಫೆಕ್ಟ್​ ಬ್ಯಾಟಿಂಗ್​ ಕಂಡು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಕೂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿ, ಹುಡುಗಿಯ ಬ್ಯಾಟಿಂಗ್​ ಕೊಂಡಾಡಿದ್ದರು. ಮಹಿಳೆಯರ ಕ್ರಿಕೆಟ್ ಬೆಳವಣಿಗೆಯ ಹಾದಿಯಲ್ಲಿದೆ ಎಂದು ಹೇಳಿದ್ದರು.

ಎಬಿಡಿ ವಿಲಿಯರ್ಸ್ ಶೈಲಿಯಲ್ಲೇ ಕ್ಯಾಚ್​ ಹಿಡಿದ ಇಂಗ್ಲೆಂಡ್​ ಆಟಗಾರ್ತಿ ಮ್ಯಾಡಿ ವಿಲಿಯರ್ಸ್


ಲಂಡನ್​: ವಿಶ್ವ ಕ್ರಿಕೆಟ್‌ನಲ್ಲಿ ಈಗಾಗಲೇ ಹಲವು ಅದ್ಭುತ ಕ್ಯಾಚ್‌ಗಳು(stunning catch) ದಾಖಲಾಗಿವೆ. ಆ ಸಾಲಿಗೆ ಇದೀಗ ಇಂಗ್ಲೆಂಡ್​ ತಂಡದ ಆಟಗಾರ್ತಿ ಮ್ಯಾಡಿ ವಿಲಿಯರ್ಸ್(Mady Villiers) ಸೇರ್ಪಡೆಗೊಂಡಿದ್ದಾರೆ. ‘ದಿ ಹಂಟ್ರೆಡ್​’ ಕ್ರಿಕೆಟ್(The Hundred)​ ಟೂರ್ನಿಯ ಪಂದ್ಯವೊಂದರಲ್ಲಿ ಮ್ಯಾಡಿ ವಿಲಿಯರ್ಸ್ ಯಾರೂ ಊಹಿಸದ ರೀತಿಯಲ್ಲಿ ಮೇಲಕ್ಕೆ ಜಂಪ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಒಂದನ್ನು ಹಿಡಿಯುವ ಮೂಲಕ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಸದ್ಯ ಈ ಕ್ಯಾಚ್​ನ ವಿಡಿಯೊ ವೈರಲ್​ ಆಗುತ್ತಿದ್ದು, ಮಹಿಳಾ ಕ್ರಿಕೆಟ್​ನಲ್ಲಿ ಕಂಡು ಬಂದ ಅತ್ಯದ್ಭುತ ಕ್ಯಾಚ್​ ಎಂದು ಕ್ರಿಕೆಟ್​ ಪಂಡಿತರು ಹೇಳಿದ್ದಾರೆ.

ಇದನ್ನೂ ಓದಿ Viral Video: ಕಂಬಕ್ಕೆ ಸಿಲುಕಿದ ತ್ರಿವರ್ಣ ಧ್ವಜ; ಮಿಂಚಂತೆ ಬಂದು ಧ್ವಜ ಬಿಡಿಸಿದ ಹಕ್ಕಿ; ಅಪರೂಪದ ಘಟನೆ!

ಓವಲ್‌ ಇನ್ವಿನ್ಸಿಬಲ್‌ ತಂಡದ ಪರವಾಗಿ ಆಡುತ್ತಿರುವ 25 ವರ್ಷದ ಮ್ಯಾಡಿ ವಿಲಿಯರ್ಸ್‌ 30ಯಾರ್ಡ್​ನಲ್ಲಿ ಫೀಲ್ಡಿಂಗ್​ ನಡೆಸುತ್ತಿದ್ದರು. ಈ ವೇಳೆ ಎದುರಾಳಿ ತಂಡದ ಆಟಗಾರ್ತಿ ಬೌಂಡರಿ ಕಡೆಗೆ ಬಾರಿಸಿದ ಚೆಂಡನ್ನು ಕಣ್ಣು ಮಿಟುಕಿಸುವಷ್ಟರಲ್ಲಿ ಮೇಲಕ್ಕೆ ಜಿಗಿದು ತನ್ನ ಎಡಗೈಯಿಂದ ಕ್ಯಾಚ್​ ಹಿಡಿದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಈ ಕ್ಯಾಚ್​ ಕಂಡ ಪ್ರೇಕ್ಷಕರು ಒಂದು ಕ್ಷಣ ದಂಗಾಗಿದ್ದಾರೆ. ಅತ್ತ ಕಾಮೆಂಟ್ರಿ ನಡೆಸುತ್ತಿದ್ದವರು, ಕ್ಯಾಚ್‌ ಆಫ್‌ ದಿ ಟೂರ್ನಮೆಂಟ್‌ ಎಂದು ಬಣ್ಣಿಸಿದ್ದಾರೆ. ಟ್ರೆಂಟ್‌ ರಾಕೆಟ್ಸ್‌ ತಂಡ ಆರಂಭಿ ಆಟಗಾರ್ತಿ ಬ್ರಯೋನಿ ಸ್ಮಿತ್ ಅವರ ಕ್ಯಾಚ್​ ಇದಾಗಿತ್ತು.

Continue Reading

Latest

Viral Video: ಕಂಬಕ್ಕೆ ಸಿಲುಕಿದ ತ್ರಿವರ್ಣ ಧ್ವಜ; ಮಿಂಚಂತೆ ಬಂದು ಧ್ವಜ ಬಿಡಿಸಿದ ಹಕ್ಕಿ; ಅಪರೂಪದ ಘಟನೆ!

Viral Video: ಸ್ವಾತಂತ್ರ್ಯ ದಿನಾಚರಣೆ, ರಾಷ್ಟ್ರಧ್ವಜವೆಂದರೆ ಎಲ್ಲರೊಳಗೂ ಒಂದು ಭಕ್ತಿ ಭಾವವಿರುತ್ತದೆ. ಸಾಕಷ್ಟು ರಕ್ತಹರಿಸಿ ನಾವು ನಮ್ಮ ದೇಶದ ಸ್ವಾತಂತ್ರ್ಯವನ್ನು ಪಡೆದುಕೊಂಡಿದ್ದೇವೆ. ಹಾಗೇ ಈ ಸ್ವಾತಂತ್ಯ ದಿನಾಚರಣೆಯಂದು ನಡೆದ ಘಟನೆಯೊಂದು ಈ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವೈರಲ್ ವಿಡಿಯೊದಲ್ಲಿ ರಾಷ್ಟ್ರಧ್ವಜವನ್ನು ಹಗ್ಗಕ್ಕೆ ಕಟ್ಟಿ ಮೇಲಕ್ಕೆ ಎಳೆಯುವಾಗ ಎಷ್ಟೇ ಎಳೆದರೂ ಧ್ವಜ ಬಿಡಿಸಿಕೊಂಡು ಹಾರಲಿಲ್ಲ. ಆಗ ಇದ್ದಕ್ಕಿದ್ದಂತೆ ಎಲ್ಲಿಂದಲೋ ಬಂದ ಹಕ್ಕಿಯೊಂದು ಧ್ವಜವನ್ನು ಬಿಡಿಸಿ ಅದು ಹಾರುವಂತೆ ಮಾಡಿ ಹಾರಿ ಹೋಗಿದೆ. ವಿಡಿಯೊ ಸಿಕ್ಕಾಪಟ್ಟೆ ವೈರಲ್ ಆಗಿದೆ.

VISTARANEWS.COM


on

Viral Video
Koo


ಆಗಸ್ಟ್ 15ರಂದು ದೇಶದ ಸ್ವಾತಂತ್ರ್ಯೋತ್ಸವವನ್ನು ಎಲ್ಲಾ ಕಡೆ ಧ್ವಜ ಹಾರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಗಿತ್ತು. ಸೋಶಿಯಲ್ ಮೀಡಿಯಾಗಳಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಸಂಬಂಧಿಸಿದ ಹಲವು ವಿಡಿಯೊಗಳನ್ನು ಪೋಸ್ಟ್ ಮಾಡಲಾಗಿತ್ತು. ಆದರೆ ಒಂದು ವಿಡಿಯೊ ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರಲ್ಲೂ ಆಶ್ಚರ್ಯ ಮೂಡಿಸುವ ಮೂಲಕ ಗಮನ ಸೆಳೆದಿದ್ದು, ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ.

ಈ ವೈರಲ್ ವಿಡಿಯೊದಲ್ಲಿ ಶಾಲೆಯ ಮಕ್ಕಳು ಝಂಡಾ ಊಂಚಾ ರಹೆ ಹಮಾರಾ ಎಂಬ ಹಿಂದಿ ಭಾಷೆಯ ದೇಶ ಭಕ್ತಿಗೀತೆ ಹಾಡುತ್ತಿರುವುದು ಕೇಳುತ್ತಿದೆ. ಆ ವೇಳೆ ರಾಷ್ಟ್ರಧ್ವಜವನ್ನು ಹಗ್ಗಕ್ಕೆ ಕಟ್ಟಿ ಮೇಲಕ್ಕೆ ಎಳೆಯುತ್ತಿದ್ದಾರೆ. ಆದರೆ ಧ್ವಜ ಮೇಲೆ ಹೋಗಿ ಎಷ್ಟೇ ಎಳೆದರೂ ಅದು ಬಿಡಿಸಿಕೊಂಡು ಹಾರಲಿಲ್ಲ. ಆಗ ಇದ್ದಕ್ಕಿದ್ದಂತೆ ಎಲ್ಲಿಂದಲೋ ಬಂದ ಹಕ್ಕಿಯೊಂದು ಧ್ವಜವನ್ನು ಬಿಡಿಸಿ ಅದು ಹಾರುವಂತೆ ಮಾಡಿ ಹಾರಿ ಹೋಗಿದೆ. ವಿಡಿಯೊ ಕೊನೆಯಲ್ಲಿ ಮಲಯಾಳಂನಲ್ಲಿ ಕೈಯಡಿ ಕೈಯಡಿ ( ಚಪ್ಪಾಳೆ ತಟ್ಟಿ, ಚಪ್ಪಾಳೆ ತಟ್ಟಿ) ಎನ್ನುತ್ತಿರುವುದು ಕೇಳಿದೆ.

ಈ ವಿಡಿಯೊವನ್ನು ನಚಿಕೇತಸ್ (@nach1keta) ಎಂಬ ಮೈಕ್ರೋ ಬ್ಲಾಗಿಂಗ್ ತಾಣ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಆಗಸ್ಟ್ 16ರ ರಾತ್ರಿ 11.24ಕ್ಕೆ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದ್ದು, ಈಗ ಇದು ವೈರಲ್ ಆಗಿದೆ. ಈ ವಿಡಿಯೊ ಈಗಾಗಲೇ 7700ಕ್ಕೂ ಹೆಚ್ಚು ಲೈಕ್ಸ್ ,11 ಸಾವಿರಕ್ಕೂ ಹೆಚ್ಚು ವೀವ್ಸ್, 1600ಕ್ಕೂ ಹೆಚ್ಚು ರೀಟ್ವೀಟ್ ಮತ್ತು 50ರಷ್ಟು ಕಾಮೆಂಟ್ ಕೂಡ ಬಂದಿದೆ. ಹಲವರು ಈ ವಿಡಿಯೊವನ್ನು ಡೌನ್ಲೋಡ್ ಮಾಡಿ ತಮ್ಮ ಖಾತೆಯಿಂದ ಶೇರ್ ಕೂಡ ಮಾಡಿದ್ದಾರೆ. ಇದು ಕೇರಳದ ವಿಡಿಯೊ ಎಂದು ಹೇಳಲಾಗುತ್ತಿದ್ದು, ಈ ಘಟನೆ ಯಾವಾಗ ಮತ್ತು ಎಲ್ಲಿ ನಡೆಯಿತು ಎಂಬುದು ತಿಳಿದುಬಂದಿಲ್ಲ.

ಈ ವಿಡಿಯೊ ನೋಡಿದವರು ಒಂದೊಂದು ರೀತಿ ಕಾಮೆಂಟ್ ಮಾಡಿದ್ದಾರೆ. ಹಲವರು ವಾವ್ ಎಂದು ಬರೆದರೆ, ಅನೇಕರು ಈ ವಿಡಿಯೊ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.ಈ ವಿಡಿಯೊಗೆ ಕಾಮೆಂಟ್ ಮಾಡಿದ ಒಬ್ಬರು ಆ ಹಕ್ಕಿ ಹಿಂದಿನ ಜನ್ಮದಲ್ಲಿ ಸೈನಿಕನಾಗಿ ಕೆಲಸ ಮಾಡಿರಬೇಕು ಎಂದು ಹೇಳಿದರೆ, ಇನ್ನೊಬ್ಬರು , ಆ ಹಕ್ಕಿ ಉದ್ದೇಶಪೂರ್ವಕವಾಗಿಯೇ ಧ್ವಜದ ಹತ್ತಿರ ಬಂದಿದೆ. ಧ್ವಜ ಹಾರಿದ ಕೂಡಲೇ ಅಲ್ಲಿಂದ ಹಿಂತಿರುಗಿದೆ, ನಿಜಕ್ಕೂ ಪವಾಡದಂತೆಯೇ ಇದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಆ ಹಕ್ಕಿ ದೂರದಲ್ಲೆಲ್ಲೋ ತೆಂಗಿನ ಮರದ ಮೇಲಿತ್ತು. ಅದು ರಾಷ್ಟ್ರಧ್ವಜಕ್ಕೆ ಸಮೀಪದಲ್ಲೆಲ್ಲೂ ಇರಲಿಲ್ಲ. ಇದ್ದಕ್ಕಿದ್ದಂತೆ ಬಂದಿದೆ ಎಂದರೆ ಅದು ವಿಷುವಲ್ ಎಫೆಕ್ಟ್ ಇರಬೇಕು ಎಂದು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ:ನಡು ರಸ್ತೆಯಲ್ಲಿ ಸ್ಟಂಟ್ ಮಾಡುತ್ತ ಬೈಕ್‍ ಸವಾರರ ರೀಲ್ಸ್; ಮುಂದೇನಾಯ್ತು ನೋಡಿ!

ಇತ್ತೀಚೆಗಷ್ಟೇ ಜಪಾನಿನ ಫೇಮಸ್ ಕೋಕಿ ಶಿಶಿಡೋ ಅವರು ‘ಜಪಾನ್ ನಲ್ಲಿ 24 ಗಂಟೆಗಳ ಭಾರತೀಯ ಆಹಾರ ಚಾಲೆಂಜ್’ ಅನ್ನು ಸ್ವೀಕರಿಸಿ ಜಪಾನ್‌ನ ಭಾರತೀಯ ಪಾಕಪದ್ಧತಿ ರೆಸ್ಟೋರೆಂಟ್‌ಗೆ ಭೇಟಿ ನೀಡುವ ವಿಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಅವರು ರೆಸ್ಟೋರೆಂಟ್‍ಗೆ ಭೇಟಿ ನೀಡಿದಾಗ, ಜನರು ವಿಡಿಯೊ ನೋಡಿ ಅದರಲ್ಲಿ ಏನೋ ಸರಿಯಾಗಿಲ್ಲ ಎಂದು ಕಂಡುಕೊಂಡರು. ಆದರೆ ಜನರ ಗಮನವನ್ನು ಸೆಳೆದದ್ದು ಆಹಾರ ಅಥವಾ ಸಿಬ್ಬಂದಿಯ ನಡವಳಿಕೆಯಲ್ಲ ಬದಲಾಗಿ ಭಾರತೀಯ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಿದ ರೀತಿ ಅಲ್ಲಿ ತಪ್ಪಾಗಿತ್ತು. ಭಾರತದ ತ್ರಿವರ್ಣ ಧ್ವಜವನ್ನು ತಲೆಕೆಳಗಾಗಿ ನೇತುಹಾಕಲಾಗಿದೆ ಎಂದು ನೆಟ್ಟಿಗರು ತಿಳಿಸಿದ್ದಾರೆ.

Continue Reading

ಕ್ರೀಡೆ

Bajrang Punia: ತ್ರಿವರ್ಣ ಧ್ವಜದ ಪೋಸ್ಟರ್​ ಮೇಲೆ ಕಾಲಿಟ್ಟ ಬಜರಂಗ್ ಪೂನಿಯಾ; ವಿಡಿಯೊ ವೈರಲ್

Bajrang Punia: ವಿನೇಶ್​ ಫೋಗಟ್(Vinesh Phogat)​ ಸೆಮಿಫೈನಲ್​ ಪ್ರವೇಶಿಸಿದ್ದ ವೇಳೆ ಬಜರಂಗ್‌ ಪೂನಿಯ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ವಿನೇಶ್ ಸಾಧನೆಯನ್ನು ಕೊಂಡಾಡಿ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದರು.

VISTARANEWS.COM


on

Bajrang Punia
Koo

ನವದೆಹಲಿ: ಪ್ಯಾರಿಸ್​ನಿಂದ ಇಂದು ನವದೆಹಲಿಗೆ ಆಗಮಿಸಿದ್ದ ಕುಸ್ತಿಪಟು ವಿನೇಶ್​ ಫೋಗಟ್(Vinesh Phogat)​ ಅವರಿಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಕೋರಲಾಗಿತ್ತು. ಇದೇ ವೇಳೆ ಕುಸ್ತಿಪಟು ಬಜರಂಗ್​ ಪೂನಿಯ(Bajrang Punia) ಮಾಧ್ಯಮದವರನ್ನು ಸಂಬಾಳಿಸುವ ಫಜೀತಿಯಲ್ಲಿ ತ್ರಿವರ್ಣ ಧ್ವಜದ ಪೋಸ್ಟರ್ ಮೇಲೆ ಕಾಲಿಟ್ಟಿ ಇದೀಗ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ವಿನೇಶ್ ಅವರನ್ನು ಒಲಿಂಪಿಯನ್‌ಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಇದೇ ವೇಳೆ ನೆರದಿದ್ದ ಪತ್ರಕರ್ತರು ವಿನೇಶ್​ ಅವರ ಬೈಟ್ಸ್​ಗಳಿಗೆ ಮೈಕ್​ ಹಿಡಿದು ಕಾರಿಗೆ ಸುತ್ತುವರಿದಿದ್ದರು. ಇವರನ್ನು ಸಂಬಾಳಿಸುವ ಭರದಲ್ಲಿ ಕಾರ್‌ನ ಬಾನೆಟ್‌ ಮೇಲೆ ಹಾಕಲಾಗಿದ್ದ ತ್ರಿವರ್ಣ ಧ್ವಜದ ಪೋಸ್ಟರ್ ಇರುವ ಬ್ಯಾನರ್‌ ಮೇಲೆ ಬಜರಂಗ್ ಪೂನಿಯಾ ನಿಂತಿದ್ದರು. ಸದ್ಯ ಈ ಫೋಟೊ ಮತ್ತು ವಿಡಿಯೊ ವೈರಲ್​ ಆಗಿದ್ದು, ರಾಷ್ಟ್ರ ಧ್ವಜದ ಮೇಲೆ ಕಾಲಿಡಬಾರದು ಎಂಬ ಕಿಂಚಿತ್ತು ಬುದ್ಧಿ ಕೂಡ ನಿಮಗಿಲ್ಲವೇ ಎಂದು ನೆಟ್ಟಿಗರು ಬಜರಂಗ್​ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿನೇಶ್​ ಫೋಗಟ್(Vinesh Phogat)​ ಸೆಮಿಫೈನಲ್​ ಪ್ರವೇಶಿಸಿದ್ದ ವೇಳೆ ಬಜರಂಗ್‌ ಪೂನಿಯ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ವಿನೇಶ್ ಸಾಧನೆಯನ್ನು ಕೊಂಡಾಡಿ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದರು.

“ಜಗತನ್ನೇ ಗೆಲ್ಲಲು ಹೊರಟಿರುವ ವಿನೇಶಾ ಫೋಗಟ್ ಹಿಂದೊಮ್ಮೆ ತನ್ನದೇ ದೇಶದಲ್ಲಿ ಸೋಲು ಎದುರಿಸಿದ್ದಳು. ಲೈಗಿಂಕ ಕಿರುಕುಳದ ವಿರುದ್ಧ ನ್ಯಾಯಕ್ಕಾಗಿ ಹೋರಾಡಿದ್ದ ಈಕೆಯ ಮೇಲೆ ತನ್ನದೇ ದೇಶದಲ್ಲಿ ಲಾಠಿಯಿಂದ ಹೊಡೆದು ದಮನಿಸಲಾಗಿತ್ತು. ಬೀದಿಯಲ್ಲಿ ಎಳೆದಾಡಿ ತುಳಿದು ಅವಾಮಾನಿಸಲಾಗಿತ್ತು. ಇಂದು ಈ ಹುಡುಗಿಯ ಸಾಧನೆಯ ಮುಂದೆ ದೇಶದ ವ್ಯವಸ್ಥೆ ಸೋಲು ಕಂಡಿದೆ” ಎಂದು ಬರೆದುಕೊಂಡಿದ್ದರು.

ಡಬ್ಲ್ಯೂಎಫ್‌ಐ ವಿವಾದಕ್ಕೆ ಸಂಬಂಧಿಸಿದಂತೆ ಬಜರಂಗ್‌ ಪೂನಿಯಾ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಕರ್ತವ್ಯ ಪಥದಲ್ಲಿ ಪದ್ಮಶ್ರೀ ಬಿಟ್ಟು ಹೋಗಿದ್ದರು. ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ, ಆದರೆ ಪದಕವನ್ನು ಮನೆಗೆ ಕೊಂಡೊಯ್ಯುವುದಿಲ್ಲ. ಹೀಗಾಗಿ ಅಲ್ಲಿಯೇ ಬಿಟ್ಟು ಬಂದಿದ್ದೇನೆ ಎಂದು ಹೇಳಿದ್ದರು. ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್​ಭೂಷಣ್​ ಸಿಂಗ್ ವಿರುದ್ಧ ನಡೆಸಿದ್ದ ಪ್ರತಿಭಟನೆ ರೂವಾರಿಗಳಲ್ಲಿ ಬಜರಂಗ್​ ಕೂಡ ಒಬ್ಬರಾಗಿದ್ದರು.

ಇದನ್ನೂ ಓದಿ Bajrang Punia: ‘ದೇಶದಲ್ಲಿ’ ಸೋತು ಒಲಿಂಪಿಕ್ಸ್​ನಲ್ಲಿ ಗೆಲುವಿನ ಹೆಜ್ಜೆಯಿಟ್ಟ​ ವಿನೇಶ್​​; ಬಜರಂಗ್‌ ಪೂನಿಯ ಟಾಂಗ್​

ನಿಗದಿತ ತೂಕಗಿಂತ ಹೆಚ್ಚಿನ ಭಾರ ಇದ್ದ ಕಾರಣ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಚಿನ್ನದ ಪದಕದ ಸ್ಪರ್ಧೆಯಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್‌ ಪೋಗಟ್‌(Vinesh Phogat) ಶನಿವಾರ ಭಾರತಕ್ಕೆ ಆಗಮಿಸಿದ್ದಾರೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಪದಕ ಗೆಲ್ಲಲಾಗದ ನೋವಿನಲ್ಲಿದ್ದ ವಿನೇಶ್ ಅಭಿಮಾನಿಗಳನ್ನು ಕಂಡ ತಕ್ಷಣ ಜೋರಾಗಿ ಅಳುತ್ತಾ ಕೈ ಮುಗಿದು ಧನ್ಯವಾದ ತಿಳಿಸಿದರು. ಕುಟುಂಬದ ಸದಸ್ಯರು, ಮಾಜಿ ಒಲಿಂಪಿನ್,​ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್​, ಬಜರಂಗ್​ ಪೂನಿಯಾ ಸೇರಿ ಹಲವು ಕುಸ್ತಿಪಟುಗಳು ಈ ವೇಳೆ ​ಜತೆಗಿದ್ದರು.

Continue Reading
Advertisement
cm siddaramaiah
ಪ್ರಮುಖ ಸುದ್ದಿ2 mins ago

CM siddaramaiah : ಕಾಂಗ್ರೆಸ್ ಪಕ್ಷ, ಸರ್ಕಾರ ಸಿದ್ದರಾಮಯ್ಯ ಬೆಂಬಲಕ್ಕಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Kundapura Kannada Habba
ಕರ್ನಾಟಕ9 mins ago

Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

NPS News
ಕರ್ನಾಟಕ13 mins ago

NPS News: ಹೊಸ ಪಿಂಚಣಿ ರದ್ದುಗೊಳಿಸಲು ಸಮಿತಿ ಪುನರ್‌ ರಚನೆ; ಎನ್‌ಪಿಎಸ್‌ ನೌಕರರ ಸಂಘ ವಿರೋಧ

ಪ್ರಮುಖ ಸುದ್ದಿ52 mins ago

7th pay commission : 7ನೇ ವೇತನ ಆಯೋಗ ಜಾರಿ ಬಳಿಕ ನೌಕರರ ಸಂಬಳ ಏರಿಕೆ ಎಷ್ಟು? ಅಧಿಕೃತ ಪಟ್ಟಿ ಬಿಡುಗಡೆ

Prabhas New Film
ಸಿನಿಮಾ1 hour ago

Prabhas New Film: ಹೊಸ ಯುದ್ಧ ಶುರು; ಪ್ರಭಾಸ್ ಅಭಿನಯದ ಮುಂದಿನ ಚಿತ್ರ ಸುಳಿವು!

NPS
ಬೆಂಗಳೂರು2 hours ago

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ

TJ Abraham
ಪ್ರಮುಖ ಸುದ್ದಿ2 hours ago

TJ Abraham : ಎಸ್ಎಂ ಕೃಷ್ಣರಿಂದ ಹಿಡಿದು ಸಿದ್ದರಾಮಯ್ಯವರೆಗೆ; ಕರ್ನಾಟಕ ರಾಜಕೀಯದ ದೊಡ್ಡ ಹುಲಿಗಳನ್ನೇ ಬೋನಿಗೆ ಬೀಳಿಸಿದ ಟಿ ಜೆ ಅಬ್ರಾಹಂ

Positive Pay System
ವಾಣಿಜ್ಯ2 hours ago

Positive Pay System: ಏನಿದು ಪಾಸಿಟಿವ್‌ ಪೇ ಸಿಸ್ಟಮ್‌? ಚೆಕ್ ಪಾವತಿ ಸುರಕ್ಷಿತಗೊಳಿಸುವುದು ಹೇಗೆ?

Dog attack
ವೈರಲ್ ನ್ಯೂಸ್3 hours ago

Dog Attack: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Kannada New Movie
ಬೆಂಗಳೂರು3 hours ago

Kannada New Movie: ಮಂಸೋರೆ ನಿರ್ದೇಶನದ ʼದೂರ ತೀರ ಯಾನʼ ಟೈಟಲ್ ಟೀಸರ್ ರಿಲೀಸ್‌

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌