Dr Bro: ಸೋಷಿಯಲ್​ ಮೀಡಿಯಾ ಸ್ಟಾರ್‌ಗಳ ಮೇಲೆ ಹೆಚ್ಚಾಯ್ತು ಕ್ರೇಜ್‌! ನಿಮಗ್ಯಾರಿಷ್ಟ? - Vistara News

ವೈರಲ್ ನ್ಯೂಸ್

Dr Bro: ಸೋಷಿಯಲ್​ ಮೀಡಿಯಾ ಸ್ಟಾರ್‌ಗಳ ಮೇಲೆ ಹೆಚ್ಚಾಯ್ತು ಕ್ರೇಜ್‌! ನಿಮಗ್ಯಾರಿಷ್ಟ?

Dr Bro:  ಇತ್ತೇಚೆಗೆ ಬೆಳ್ಳೆ ತೆರೆ ಮಾತ್ರವಲ್ಲ ಸೋಷಿಯಲ್‌ ಮೀಡಿಯಾ ಸ್ಟಾರ್‌ಗಳು ಉದ್ಭವವಾಗುತ್ತಿದ್ದಾರೆ. ಹಲವು ಕಂಟೆಂಟ್‌ ಕ್ರಿಯೇಟರ್‌ಗಳು ತಮ್ಮದೇ ಆದ ಫ್ಯಾನ್ಸ್‌ ಫಾಲೋವರ್ಸ್‌ ಹೊಂದಿದ್ದಾರೆ.

VISTARANEWS.COM


on

Dr Bro shreenaval kishori Craze social media stars
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿನಿಮಾ ಸ್ಟಾರ್‌ಗಳಿಗೆ ಕ್ರಶ್‌ ಆಗಿರುವುದು ನಾವು ನೋಡಿದ್ದೇವೆ. ಅದೇ ರೀತಿ ತಮ್ಮ ಮೆಚ್ಚಿನ ನಟನ ನಟಿಯರನ್ನು ಫ್ಯಾನ್ಸ್‌ ಆರಾಧಿಸಿರುವುದನ್ನೂ ಕಂಡಿದ್ದೇವೆ. ಇತ್ತೇಚೆಗೆ ಬೆಳ್ಳೆ ತೆರೆ ಮಾತ್ರವಲ್ಲ ಸೋಷಿಯಲ್‌ ಮೀಡಿಯಾ ಸ್ಟಾರ್‌ಗಳು ಉದ್ಭವವಾಗುತ್ತಿದ್ದಾರೆ. ಹಲವು ಕಂಟೆಂಟ್‌ ಕ್ರಿಯೇಟರ್‌ಗಳು ತಮ್ಮದೇ ಆದ ಫ್ಯಾನ್ಸ್‌ ಫಾಲೋವರ್ಸ್‌ ಹೊಂದಿದ್ದಾರೆ. . ಅಶ್ಲೀಲತೆ, ಕೆಟ್ಟ ಸಂದೇಶ ಮೂಲಕ ರಾತ್ರೋರಾತ್ರಿ ಸ್ಟಾರ್​ ಆದವರೂ ಇದೇ ಸೋಷಿಯಲ್​ ಮೀಡಿಯಾದಲ್ಲಿ ಇದ್ದರೆ, ಕಠಿಣ ಪರಿಶ್ರಮದಿಂದ, ಜನರಿಗೆ ಹತ್ತಿರವಾಗಿರುವ ವರ್ಗ ಕೂಡ ಇದೆ. ಆ ಸಾಲಿಗೆ ಡಾ.ಬ್ರೋ ​ ಗಗನ್ (Dr Bro)​ ಹಾಗೂ ಇನ್ನೊಬ್ಬಾಕೆ ಧಾರ್ಮಿಕತೆಯಿಂದ ಯುವ ಮನಸ್ಸುಗಳನ್ನು ಕದಿಯುತ್ತಿರುವ ಶ್ರೀನವಲ್​ ಕಿಶೋರಿ (shreenaval kishori) ಸೇರಿದ್ದಾರೆ. ಯಾರಿವರು? ಫೇಮಸ್‌ ಆಗಿದ್ದೇಕೆ? ಎಂಬುದನ್ನು ತಿಳಿಯಲು ಮುಂದೆ ಓದಿ.

ನಮಸ್ಕಾರ ದೇವ್ರು’ ಎಂದು ಯೂಟ್ಯೂಬ್‌ನಲ್ಲಿ ವಿಡಿಯೊ ಆರಂಭಿಸುವ ಡಾ. ಬ್ರೋ (Dr Bro) ನಿಜವಾದ ಹೆಸರು ಗಗನ್‌ ಶ್ರೀನಿವಾಸ್‌. ವಿದೇಶಗಳಿಗೆ ಹೋಗಿ ಅಲ್ಲಿ ಅದ್ಭುತ ಸಾಹಸಗಳನ್ನು ಮಾಡುವ, ಅಲ್ಲಿನ ಪರಿಸರ, ಜನರ ಬದುಕು, ರೀತಿ ನೀತಿಗಳನ್ನು ಪರಿಚಯಿಸುವ ಕಾರ್ಯವನ್ನು ಅವರು ಮಾಡುತ್ತ ಬಂದಿದ್ದಾರೆ. ಡಾ. ಬ್ರೋಗೆ ಈಗಾಗಲೇ ದೊಡ್ಡ ಅಭಿಮಾನಿ ವರ್ಗವಿದೆ. ಡಾ. ಬ್ರೋ ಅವರನ್ನು ಬಿಗ್‌ ಬಾಸ್‌ನಲ್ಲಿ ನೋಡಬೇಕು ಎಂಬುದು ಅವರ ಫ್ಯಾನ್ಸ್‌ ಆಸೆ. ಅರ್ಚಕರ ಮಗನಾಗಿ   ಕುಟುಂಬದಲ್ಲಿ ಹುಟ್ಟಿ, ಪೌರೋಹಿತ್ಯ ಕಲಿತು, ಪೂಜಾ ಪುನಸ್ಕಾರ ಮಾಡುತ್ತ ಜೀವನ ಸಾಗಿಸುತ್ತಿದ್ದ ಸಾಮಾನ್ಯ ಹುಡುಗ ಇವರು.  ಇಂದು ಯೂಟ್ಯೂಬ್​ ಮೂಲಕ ಕೋಟ್ಯಂತರ ಕನ್ನಡಿಗರ ಹೃದಯ ಗೆಲ್ಲುತ್ತಿದ್ದಾರೆ. ವಿಶೇಷತೆ ಎಂದರೆ ಯಾವ ದೇಶಕ್ಕೆ ಹೋದರೂ ಅಲ್ಲಿ ಕನ್ನಡದಲ್ಲಿಯೇ ಮಾತನಾಡಿ ಕನ್ನಡಿಗರ ಹೃದಯ ಗೆಲ್ಲುತ್ತಿದ್ದಾರೆ. 

ಇದನ್ನೂ ಓದಿ: Chiyaan Vikram: ʻKGFʼ ಅಸಲಿ ಕಥೆ ಹೇಳಲು ಬರ್ತಾ ಇದೆ ‘ತಂಗಲಾನ್’; ಸಿನಿಮಾ ಬಿಡುಗಡೆಗೆ ಕೌಂಟ್ ಡೌನ್!

ಇನ್ನು ಶ್ರೀನವಲ್​ ಕಿಶೋರಿ ,  ಸಂಸ್ಕೃತ, ತಮಿಳು, ಕನ್ನಡ ಭಾಷೆಗಳಲ್ಲಿ ನಿರರ್ಗಳವಾಗಿ ಪಠಣ ಮಾಡಿದ್ದಾರೆ. ಕೆಲವೊಮ್ಮೆ ನಿಜಕ್ಕೂ ಇವರೇ ಈ ಹಾಡು ಹಾಡಿದ್ದು ಹೌದಾ ಎನ್ನುವಷ್ಟರ ಮಟ್ಟಿಗೆ ಕಾಣಿಸುವುದೂ ಇದೆ.ವಿಭಿನ್ನ ರೀತಿಯ ಮೇಕಪ್​ ಹಾಗೂ ಹಾಡುವ ಶೈಲಿ. ಗಾಯನದಿಂದಲೇ ಪ್ರಸಿದ್ಧಿ ಪಡೆದಿರುವ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಸೂರ್ಯಮಾಲಾ ಅವರನ್ನೇ ಹೋಲುವ, ಅವರ ದನಿಯನ್ನೇ ಹೋಲುವ ಅದ್ಭುತ ಪ್ರತಿಭೆ ಈಕೆಯದ್ದು. 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Police viral video: ಫುಲ್ ಟೈಟ್ ಆಗಿ ಬೈಕ್ ಎತ್ತೋಕೆ ಪೊಲೀಸಪ್ಪ ಒದ್ದಾಟ! ವಿಡಿಯೊ ನೋಡಿ

Police viral video: ಬೆಂಗಳೂರಿನ ಪೀಣ್ಯ ಬಳಿ ಪೊಲೀಸ್ ಸಿಬ್ಬಂದಿ ಎಣ್ಣೆ ಏಟಿನಲ್ಲಿ ಪರದಾಡಿರುವುದು ಕಂಡುಬಂದಿದೆ. ತನ್ನ ಬೈಕ್ ಅನ್ನು ಎತ್ತಲೂ ಆಗದಷ್ಟು ನಶೆಯಲ್ಲಿ ತೇಲಾಡುತ್ತಿದ್ದ ಪೊಲೀಸಪ್ಪನ ಕಂಡು ಸ್ಥಳೀಯರು ವಿಡಿಯೊ ಮಾಡಿದ್ದಾರೆ.

VISTARANEWS.COM


on

Police viral video
Koo

ಬೆಂಗಳೂರು: ರಾತ್ರಿ ಕಂಠಪೂರ್ತಿ ಕುಡಿದ ಹಿನ್ನೆಲೆಯಲ್ಲಿ ಬೈಕ್ ಎತ್ತಲು ಪೊಲೀಸ್‌ ಸಿಬ್ಬಂದಿಯೊಬ್ಬರು ಒದ್ದಾಡಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಕುಡಿತ ಮತ್ತಿನಲ್ಲಿ ಬೈಕ್‌ನಿಂದ ಕೆಳಗೆ ಬಿದ್ದಿರುವ ಪೊಲೀಸ್‌, ಮೇಲೇಳಲು ಸಾಧ್ಯವಾಗದೆ ಒದ್ದಾಡಿದ್ದಾರೆ. ಪೊಲೀಸಪ್ಪ ನಶೆಯಲ್ಲಿ ತೇಲಾಡುತ್ತಿದ್ದ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Police viral video) ಆಗಿದೆ.

ಪೀಣ್ಯ ಬಳಿ ಪೊಲೀಸ್ ಸಿಬ್ಬಂದಿ ಎಣ್ಣೆ ಏಟಿನಲ್ಲಿ ಪರದಾಡಿರುವುದು ನಡೆದಿದೆ. ತನ್ನ ಬೈಕ್ ಅನ್ನು ಎತ್ತಲೂ ಆಗದಷ್ಟು ನಶೆಯಲ್ಲಿ ತೇಲಾಡುತ್ತಿದ್ದ ಪೊಲೀಸಪ್ಪನ ಕಂಡು ಸ್ಥಳೀಯರು ವಿಡಿಯೊ ಮಾಡಿದ್ದಾರೆ. ಯಾವ ಠಾಣೆ ಸಿಬ್ಬಂದಿ ಎಂಬುವುದರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಸದ್ಯ ವಿಡಿಯೊ ಪರಿಶೀಲನೆಯಲ್ಲಿ ಪೊಲೀಸರು ತೊಡಗಿದ್ದಾರೆ.

ವೇಗವಾಗಿ ಬಂದ ಟ್ರಕ್‌ ಬೈಕ್‌ಗಳ ಮೇಲೆ ಪಲ್ಟಿ; ಪವಾಡಸದೃಶ ಪಾರು! ವಿಡಿಯೊ ನೋಡಿ

Hit and Run Case


ಗುಜರಾತ್‌ನ ವಡೋದರ ನಗರದಲ್ಲಿ ವೇಗವಾಗಿ ಬರುತ್ತಿದ್ದ ಅಗ್ನಿಶಾಮಕ ದಳದ ಟ್ರಕ್ ಪಲ್ಟಿಯಾಗಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಟ್ರಕ್‌ನ ಚಾಲಕ ಪರಾರಿ (Hit and Run Case)ಯಾಗಿದ್ದಾನೆ. ವಡೋದರಾದ ದಭೋಯ್ ರಸ್ತೆಯಲ್ಲಿ ಜುಲೈ 19ರಂದು ಈ ಅಪಘಾತ ಸಂಭವಿಸಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಗ್ನಿಶಾಮಕ ದಳದ ಚಾಲಕ ಮತ್ತು ಸಬ್ ಆಫೀಸರ್ ಬೆಂಕಿಯ ಅಪಘಾತದ ಬಗ್ಗೆ ಮಾಹಿತಿ ಪಡೆದು ನಂತರ ಗಜ್ರವಾಡಿಯಿಂದ ಹೊರಟಿದ್ದರು. ದಭೋಯ್ ರಸ್ತೆಯ ಗಣೇಶನಗರದ ಬಳಿ ಚಾಲಕ ತಿರುವು ತೆಗೆದುಕೊಂಡಾಗ ಈ ಅಪಘಾತ ಸಂಭವಿಸಿದೆ. ಅತಿಯಾದ ವೇಗದಲ್ಲಿದ್ದ ಕಾರಣ ಟ್ರಕ್‌ನ ವೇಗವನ್ನು ನಿಯಂತ್ರಿಸಲು ಸಾಧ್ಯವಾಗದಿದ್ದಾಗ ಟ್ರಕ್ ಪಲ್ಟಿಯಾಗಿ ಅಲ್ಲಿ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆ ನಡೆದ ಕೂಡಲೇ ಟ್ರಕ್‌ನ ಚಾಲಕ ಕೃಷ್ಣ ಪಟೇಲ್ ಅಪಘಾತದ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಬೈಕ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಇದೇರೀತಿಯ ಅಪಘಾತದ ಘಟನೆ ಮೇ 29ರಂದು ನಡೆದಿತ್ತು. ವಡೋದರಾ-ಹಲೋಲ್ ಹೆದ್ದಾರಿಯಲ್ಲಿ ಬೊಲೆರೊ ಪಿಕಪ್ ವ್ಯಾನ್ ಪಲ್ಟಿಯಾಗಿ ಕೊತಂಬಿ ಗ್ರಾಮದ ಬಳಿ ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಬೊಲೆರೊ ಚಾಲಕ ಸ್ಟೀರಿಂಗ್ ಮೇಲೆ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ಕ್ರಿಕೆಟ್ ಕ್ರೀಡಾಂಗಣದ ಬಳಿ ಪಲ್ಟಿಯಾಗಿದೆ.

ಇದನ್ನೂ ಓದಿ: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

ಜರೋಡ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕೃಪಾಲ್ಸಿನ್ಹ್ ಝಾಲಾ, ಈ ದುರಂತದಲ್ಲಿ ಇಬ್ಬರು ಮಕ್ಕಳು ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ. ನಾವು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ. ಸಮಸ್ಯೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಿರುವುದಾಗಿ ತಿಳಿಸಿದ್ದರು.

Continue Reading

ಕ್ರೀಡೆ

Hardik Pandya: ಬಾಲಿವುಡ್​ ನಟಿಯೊಂದಿಗೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ ಹಾರ್ದಿಕ್​ ಪಾಂಡ್ಯ

Hardik Pandya: ವರದಿಗಳ ಪ್ರಕಾರ ಹಾರ್ದಿಕ್​ ಪಾಂಡ್ಯ ಬಾಲಿವುಡ್ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಂಡ್ಯ ಇನ್‌ಸ್ಟಾಗ್ರಾಂನಲ್ಲಿ ಅನನ್ಯ ಪಾಂಡೆ ಅವರನ್ನು ದೀಢಿರ್​ ಆಗಿ ಫಾಲೋ ಮಾಡಲಾರಂಭಿಸಿದ್ದು.

VISTARANEWS.COM


on

Hardik Pandya
Koo

ಮುಂಬಯಿ: ಹಾರ್ದಿಕ್​ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡಿ ಒಂದು ವಾರ ಕಳೆಯುವ ಮುನ್ನವೇ ಇದೀಗ ಹಾರ್ದಿಕ್​ ಮತ್ತೊಂದು ಮದುವೆಯಾಗಲು ಸಿದ್ಧರಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಬಾಲಿವುಡ್​ನ ಖ್ಯಾತ ನಟಿಯನ್ನು ಪಾಂಡ್ಯ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಕಳೆದ ಗುರುವಾರ ಹಾರ್ದಿಕ್​ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಜಂಟಿ ಹೇಳಿಕೆ ಪ್ರಕಟಿಸುವ ಮೂಲಕ ತಮ್ಮ 4 ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದರು.

ಹೌದು, ವರದಿಗಳ ಪ್ರಕಾರ ಹಾರ್ದಿಕ್​ ಪಾಂಡ್ಯ ಬಾಲಿವುಡ್ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಂಡ್ಯ ಇನ್‌ಸ್ಟಾಗ್ರಾಂನಲ್ಲಿ ಅನನ್ಯ ಪಾಂಡೆ ಅವರನ್ನು ದೀಢಿರ್​ ಆಗಿ ಫಾಲೋ ಮಾಡಲಾರಂಭಿಸಿದ್ದು. ಅತ್ತ ಅನನ್ಯ ಪಾಂಡೆ ಕೂಡಾ ಹಾರ್ದಿಕ್ ಪಾಂಡ್ಯ ಅವರನ್ನು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲಾರಂಭಿಸಿದ್ದಾರೆ. ಈ ವಿಚಾರ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಹೊಸ ಸಂಚಲನ ಹುಟ್ಟುಹಾಕಿದ್ದು ಪಾಂಡ್ಯ ಸದ್ಯದಲ್ಲೇ ಅನನ್ಯ ಪಾಂಡೆ ಜತೆ ಹಸೆಮಣೆ ಏರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯ ಸಂದರ್ಭದಲ್ಲೂ ಹಾರ್ದಿಕ್ ಪಾಂಡ್ಯ ಹಾಗೂ ಅನನ್ಯ ಪಾಂಡೆ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅಲ್ಲದೇ ಇಬ್ಬರೂ ಜತೆಯಾಗಿ ಬಿಂದಾಸ್ ಡ್ಯಾನ್ಸ್​ ಕೂಡ ಮಾಡಿದ್ದರು. ಈ ಘಟನೆ ನಡೆದ 2 ದಿನಗಳ ಬಳಿಕ ಇದೀಗ ಇಬ್ಬರು ಪರಸ್ಪರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಫೋಲೊ ಮಾಡಿಕೊಂಡಿದ್ದಾರೆ. ಸದ್ಯ ಚಾಟಿಂಗ್​ನಲ್ಲಿರುವ ಈ ಜೋಡಿ ಮುಂದೆ ಡೇಟಿಂಗ್​ ಮಾಡಲಿದ್ದಾರೆ ಎಂದು ಕೆಲ ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ Suryakumar Yadav : ಮುಂದಿನ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ನಾಯಕತ್ವವೂ ನಷ್ಟ

ಅನನ್ಯ ಪಾಂಡೆ ನಟ ಆಧಿತ್ಯ ರಾಯ್ ಕಪೂರ್ ಜತೆ ಕೆಲವು ಸಮಯದಿಂದ ಡೇಟಿಂಗ್ ನಡೆಸುತ್ತಿದ್ದರು. ಆದರೆ ಈ ಜೋಡಿ ತಮ್ಮ ಸಂಬಂಧದ ಬಗ್ಗೆ ಎಲ್ಲೂ ತುಟಿಬಿಚ್ಚಿರಲಿಲ್ಲ. ಆದರೆ, ಕೆಲ ದಿನಗಳ ಹಿಂದಷ್ಟೇ ಅನನ್ಯ ಪಾಂಡೆ ಮತ್ತು ಆಧಿತ್ಯ ರಾಯ್​ ಜತೆ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿತ್ತು. ಇದೀಗ ಪಾಂಡ್ಯ ಜತೆ ಡೇಟಿಂಗ್​ ನಡೆಸುತ್ತಿರುವುದಾಗಿ ವರದಿಯಾಗಿದೆ.

ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿದೆ. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು. ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಇವರಿಬ್ಬರ ಬಗ್ಗೆ ಯಾವುದೇ ತಪ್ಪು ಸುದ್ದಿ ಹಬ್ಬಿಸಬಾರದು ಎಂದು ಆಪ್ತ ಮೂಲಗಳು ತಿಳಿಸಿವೆ.

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

Continue Reading

Latest

Hit and Run Case: ವೇಗವಾಗಿ ಬಂದ ಟ್ರಕ್‌ ಬೈಕ್‌ಗಳ ಮೇಲೆ ಪಲ್ಟಿ; ಪವಾಡಸದೃಶ ಪಾರು! ವಿಡಿಯೊ ನೋಡಿ

Hit and Run Case: ಗುಜರಾತ್‌ನ ವಡೋದರ ನಗರದಲ್ಲಿ ವೇಗವಾಗಿ ಬರುತ್ತಿದ್ದ ಅಗ್ನಿಶಾಮಕ ದಳದ ಟ್ರಕ್ ಪಲ್ಟಿಯಾಗಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಅದೃಷ್ಟವಶಾತ್ ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ. ಟ್ರಕ್ ಚಾಲಕ ಅತೀಯಾದ ವೇಗದಲ್ಲಿ ಇದ್ದ ಕಾರಣ ಈ ಅಪಘಾತ ನಡೆಯಿತು. ವೇಗವನ್ನು ನಿಯಂತ್ರಿಸಲು ಸಾಧ್ಯವಾಗದಿದ್ದಾಗ ಟ್ರಕ್ ಪಲ್ಟಿಯಾಗಿ ಅಲ್ಲಿ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.

VISTARANEWS.COM


on

Hit and Run Case
Koo


ಗುಜರಾತ್‌ನ ವಡೋದರ ನಗರದಲ್ಲಿ ವೇಗವಾಗಿ ಬರುತ್ತಿದ್ದ ಅಗ್ನಿಶಾಮಕ ದಳದ ಟ್ರಕ್ ಪಲ್ಟಿಯಾಗಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಟ್ರಕ್‌ನ ಚಾಲಕ ಪರಾರಿ (Hit and Run Case)ಯಾಗಿದ್ದಾನೆ. ವಡೋದರಾದ ದಭೋಯ್ ರಸ್ತೆಯಲ್ಲಿ ಜುಲೈ 19ರಂದು ಈ ಅಪಘಾತ ಸಂಭವಿಸಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಗ್ನಿಶಾಮಕ ದಳದ ಚಾಲಕ ಮತ್ತು ಸಬ್ ಆಫೀಸರ್ ಬೆಂಕಿಯ ಅಪಘಾತದ ಬಗ್ಗೆ ಮಾಹಿತಿ ಪಡೆದು ನಂತರ ಗಜ್ರವಾಡಿಯಿಂದ ಹೊರಟಿದ್ದರು. ದಭೋಯ್ ರಸ್ತೆಯ ಗಣೇಶನಗರದ ಬಳಿ ಚಾಲಕ ತಿರುವು ತೆಗೆದುಕೊಂಡಾಗ ಈ ಅಪಘಾತ ಸಂಭವಿಸಿದೆ. ಅತಿಯಾದ ವೇಗದಲ್ಲಿದ್ದ ಕಾರಣ ಟ್ರಕ್‌ನ ವೇಗವನ್ನು ನಿಯಂತ್ರಿಸಲು ಸಾಧ್ಯವಾಗದಿದ್ದಾಗ ಟ್ರಕ್ ಪಲ್ಟಿಯಾಗಿ ಅಲ್ಲಿ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆ ನಡೆದ ಕೂಡಲೇ ಟ್ರಕ್‌ನ ಚಾಲಕ ಕೃಷ್ಣ ಪಟೇಲ್ ಅಪಘಾತದ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಬೈಕ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಇದೇರೀತಿಯ ಅಪಘಾತದ ಘಟನೆ ಮೇ 29ರಂದು ನಡೆದಿತ್ತು. ವಡೋದರಾ-ಹಲೋಲ್ ಹೆದ್ದಾರಿಯಲ್ಲಿ ಬೊಲೆರೊ ಪಿಕಪ್ ವ್ಯಾನ್ ಪಲ್ಟಿಯಾಗಿ ಕೊತಂಬಿ ಗ್ರಾಮದ ಬಳಿ ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಬೊಲೆರೊ ಚಾಲಕ ಸ್ಟೀರಿಂಗ್ ಮೇಲೆ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ಕ್ರಿಕೆಟ್ ಕ್ರೀಡಾಂಗಣದ ಬಳಿ ಪಲ್ಟಿಯಾಗಿದೆ.

ಇದನ್ನೂ ಓದಿ: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

ಜರೋಡ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕೃಪಾಲ್ಸಿನ್ಹ್ ಝಾಲಾ, ಈ ದುರಂತದಲ್ಲಿ ಇಬ್ಬರು ಮಕ್ಕಳು ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ. ನಾವು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ. ಸಮಸ್ಯೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಿರುವುದಾಗಿ ತಿಳಿಸಿದ್ದರು.

Continue Reading

ವೈರಲ್ ನ್ಯೂಸ್

Viral Video: ಏಳು ತಿಂಗಳ ಮಗುವಿನ ಮೇಲೆ ಗುಂಡು ಹಾರಿಸಿದ ಕ್ರೂರ ಮಹಿಳೆ!

ಅಮೆರಿಕದ ಫಿಲಡೆಲ್ಫಿಯಾ ನಗರದ ಈಶಾನ್ಯ ಭಾಗದಲ್ಲಿ ಏಳು ತಿಂಗಳ ಗಂಡು ಮಗುವನ್ನು ಸ್ಟ್ರೋಲರ್ ನಲ್ಲಿ ಮಲಗಿಸಿ ಸುತ್ತಾಡಿ ಬರಲು ಕರೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ದರೋಡೆಕೋರ ಮಹಿಳೆ ಗುಂಡಿನ ದಾಳಿ ನಡೆಸಿದ್ದಾಳೆ. ಗುಂಡು ಮಗುವಿನ ಕಾಲಿಗೆ ತಾಗಿದೆ. ಈ ಘಟನೆಯ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral video
Koo

ಮಗುವಿನೊಂದಿಗೆ ಸುತ್ತಾಡಿ ಬರಲು ಹೋಗುತ್ತಿದ್ದ ತಾಯಿಯ ಮೇಲೆ ಮಹಿಳೆಯೊಬ್ಬಳು ಗುಂಡಿನ ದಾಳಿ ನಡೆಸಿದ್ದು, ಗುಂಡು ಮಗುವಿನ ಕಾಲಿಗೆ (Shoots Baby) ತಾಗಿದೆ. ಅಮೆರಿಕದ ಫಿಲಿಡೆಲ್ಫಿಯಾದಲ್ಲಿ (Philadelphia) ನಡೆದ ಈ ಘಟನೆಯ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

ಏಳು ತಿಂಗಳ ಗಂಡು ಮಗುವನ್ನು ಸ್ಟ್ರೋಲರ್ ನಲ್ಲಿ ಮಲಗಿಸಿ ಸುತ್ತಾಡಿ ಬರಲು ಕರೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ದರೋಡೆಕೋರ ಮಹಿಳೆ ಗುಂಡಿನ ದಾಳಿ ನಡೆಸಿದ್ದಾಳೆ. ಗುಂಡು ಮಗುವಿನ ಕಾಲಿಗೆ ತಾಗಿದೆ. ಇದೀಗ ಮಗುವಿನ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಫಿಲಡೆಲ್ಫಿಯಾ ನಗರದ ಈಶಾನ್ಯ ಭಾಗದಲ್ಲಿ ಈ ಘಟನೆ ನಡೆದಿದ್ದು, ಗುಂಡು ಹಾರಿಸಿದ ದರೋಡೆಕೋರ ಮಹಿಳೆಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಮಗುವಿನ ಮೇಲೆ ಗುಂಡು ಹಾರಿಸಿರುವ ಭಯಾನಕ ದೃಶ್ಯ ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿದೆ. ಮಗು ಮತ್ತು ಪೋಷಕ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಮಹಿಳೆಯೊಬ್ಬಳು ಏಕಾಏಕಿ ಬಂದು ಅವರ ಮೇಲೆ ಗುಂಡಿನ ದಾಳಿ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ದರೋಡೆಕೋರ ಮಹಿಳೆಯು ಹಲವು ಬಾರಿ ಗುಂಡು ಹಾರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.


ಪೊಲೀಸರು ಈ ಕುರಿತು ವಿಡಿಯೋ ಬಿಡುಗಡೆ ಮಾಡಿದ್ದು, ಅದರಲ್ಲಿ ಹೀಗೆ ಬರೆದಿದ್ದರೆ. 2024ರ ಜುಲೈ 18ರಂದು ಮೆರಿಡಿಯನ್ ಸ್ಟ್ರೀಟ್‌ನ 4000 ಬ್ಲಾಕ್‌ನಲ್ಲಿ ಏಳು ತಿಂಗಳ ಮಗುವಿನ ಕಾಲಿನ ಮೇಲೆ ಮಹಿಳೆಯೊಬ್ಬಳು ಗುಂಡು ಹರಿಸಿದ್ದಾಳೆ. ಗುಂಡಿನ ದಾಳಿಯಲ್ಲಿ ಬೇರೆ ಯಾರಿಗೂ ಗಾಯವಾಗಿಲ್ಲ. ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಬಳಿಕ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಮಗುವಿನ ಆರೋಗ್ಯ ಸ್ಥಿರವಾಗಿದೆ.

ಇದನ್ನೂ ಓದಿ: Udupi News : ಸತ್ತ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ಅಸಾಮಿ!

ಪೊಲೀಸರು ಆಗಮಿಸಿದಾಗ ಮಗುವಿನ ಪೋಷಕರು ಘಟನಾ ಸ್ಥಳದಲ್ಲಿ ಇರಲಿಲ್ಲ.ಗುಂಡಿನ ದಾಳಿ ನಡೆಸಿದ ಮಹಿಳೆ ತಾನು ಮಾಡಿದ್ದಕ್ಕೆ ಪಶ್ಚಾತ್ತಾಪ ಪಡದೆ ಸುಮ್ಮನೆ ಅಲ್ಲಿಂದ ಹೊರನಡೆದಳು. ಇದು ತುಂಬಾ ಭಯಾನಕವಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

Continue Reading
Advertisement
PM Narendra Modi
ಬೆಂಗಳೂರು20 seconds ago

PM Narendra Modi: ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಸಹೋದರ ಭೇಟಿ

IPL 2025
ಕ್ರೀಡೆ13 mins ago

IPL 2025: ರಾಹುಲ್​ ಆರ್​ಸಿಬಿಗೆ, ಪಂತ್​ ಸಿಎಸ್​ಕೆ ಸೇರ್ಪಡೆ ಖಚಿತ

nipah virus
ದೇಶ40 mins ago

Nipah Virus: ಕೇರಳದಲ್ಲಿ ನಿಫಾ ವೈರಸ್‌ ತಗುಲಿದ್ದ ಬಾಲಕ ಸಾವು

HD Kumaraswamy
ಹಾಸನ51 mins ago

HD Kumaraswamy: ಸಮಯ ಬಂದಾಗ ಮಿಲಿಟರಿಯನ್ನೂ ಕರೆ ತರುತ್ತೇವೆ; ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

Police viral video
ಕರ್ನಾಟಕ53 mins ago

Police viral video: ಫುಲ್ ಟೈಟ್ ಆಗಿ ಬೈಕ್ ಎತ್ತೋಕೆ ಪೊಲೀಸಪ್ಪ ಒದ್ದಾಟ! ವಿಡಿಯೊ ನೋಡಿ

kalaburagi News
ಕಲಬುರಗಿ59 mins ago

Kalaburagi News : ಕಾಮಗಾರಿ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

Guru Purnima 2024
ಕ್ರೀಡೆ1 hour ago

Guru Purnima 2024: ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

Divya Vasanthamother requests darshan fans not get troll her daughter
ಸಿನಿಮಾ2 hours ago

Divya Vasantha: ನನ್ನ ಮಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಿರುವುದು ದರ್ಶನ್‌ ಫ್ಯಾನ್ಸ್‌ ಎಂದು ಕಣ್ಣೀರಿಟ್ಟ ದಿವ್ಯಾ ವಸಂತ ಅಮ್ಮ!

Kedarnath Landslide
ದೇಶ2 hours ago

Kedarnath Landslide: ಕೇದಾರನಾಥದಲ್ಲಿ ಭೀಕರ ಭೂಕುಸಿತ; ಮೂವರು ಯಾತ್ರಿಕರು ದುರ್ಮರಣ

HD Kumaraswamy
ಹಾಸನ2 hours ago

HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌ಡಿಕೆ ಭೇಟಿ; ಮಳೆಯಿಂದ ಹಾನಿಯಾದ ಪ್ರದೇಶಗಳ ಪರಿಶೀಲನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌