Viral Video: ಅಬ್ಬಾ.. ಎಂಥಾ ಭೀಕರ ದೃಶ್ಯ! ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿ ಒದ್ದಾಡಿ ಸಾವು - Vistara News

ವೈರಲ್ ನ್ಯೂಸ್

Viral Video: ಅಬ್ಬಾ.. ಎಂಥಾ ಭೀಕರ ದೃಶ್ಯ! ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿ ಒದ್ದಾಡಿ ಸಾವು

Viral Video:ಭಾರೀ ಮಳೆಯಲ್ಲಿ ಕರೆಂಟ್‌ ಶಾಕ್‌ ಹೊಡೆದು 40ವರ್ಷದ ಹಣ್ಣು-ತರಕಾರಿ ವ್ಯಾಪಾರಿಯೊಬ್ಬ ನೋಡ ನೋಡ್ತಿದ್ದಂತೆ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಫಕ್ರು ಎಂದು ಗುರುತಿಸಲಾಗಿದ್ದು, ನೀರು ತುಂಬಿದ್ದ ರಸ್ತೆ ದಾಟಿ ಬಂದು ವಿದ್ಯುತ್‌ ಕಂಬವನ್ನು ಮುಟ್ಟಿದ ಕೂಡಲೇ ಅವರಿಗೆ ಶಾಕ್‌ ಹೊಡೆದಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಭಾರೀ ಮಳೆಯಲ್ಲಿ ಕರೆಂಟ್‌ ಶಾಕ್‌(Electric Shock) ಹೊಡೆದು 40ವರ್ಷದ ಹಣ್ಣು-ತರಕಾರಿ ವ್ಯಾಪಾರಿಯೊಬ್ಬ ನೋಡ ನೋಡ್ತಿದ್ದಂತೆ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಫಕ್ರು ಎಂದು ಗುರುತಿಸಲಾಗಿದ್ದು, ನೀರು ತುಂಬಿದ್ದ ರಸ್ತೆ ದಾಟಿ ಬಂದು ವಿದ್ಯುತ್‌ ಕಂಬವನ್ನು ಮುಟ್ಟಿದ ಕೂಡಲೇ ಅವರಿಗೆ ಶಾಕ್‌ ಹೊಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌ (Viral Video) ಆಗುತ್ತಿದೆ.

ತೆಲಂಗಾಣದ ಬಹುದ್ದೂರ್‌ಪುರದಲ್ಲಿ ಈ ಘಟನೆ ನಡೆದಿದ್ದು, ಆರಂಭದಲ್ಲಿ ನೀರಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಕಂಡು ಆತ ಕುಡಿದು ಬಿದ್ದಿರುವುದೆಂದು ಭಾವಿಸಿದ ಜನ ನಿರ್ಲಕ್ಷ್ಯ ಮಾಡಿ ಹೋಗಿದ್ದರು. ಬಳಿಕ ಆತನನ್ನು ಗಮನಿಸಿದ ಪೊಲೀಸರು ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಆತನ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಫಕ್ರು ಜಲಾವೃತಗೊಂಡಿದ್ದ ರಸ್ತೆ ದಾಟಿ ಬಂದು ಅಲ್ಲೇ ಇದ್ದ ವಿದ್ಯುತ್‌ ಕಂಬವನ್ನು ಮುಟ್ಟುತ್ತಾನೆ ಆಗ ಇದ್ದಕ್ಕಿದ್ದಂತೆ ಆತ ಕುಸಿದು ಬಿದ್ದು ನೆಲದಲ್ಲಿ ಒದ್ದಾಡೋಕೆ ಶುರು ಮಾಡುವುದನ್ನು ವೈರಲಾಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ. ಬಹದ್ದೂರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಯಿ ಹಾಗೂ ಮಗು ವಿದ್ಯುತ್ ಶಾಕ್‌ ತಗುಲಿ ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ನಗರದ ಹೋಪ್ ಫಾರ್ಮ್‌ ಬಳಿ ಪಾದಚಾರಿ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತಾಯಿ – ಮಗು ತುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿತ್ತು .ಘಟನೆಯಲ್ಲಿ 23 ವರ್ಷ ವಯಸ್ಸಿನ ತಾಯಿ ಹಾಗೂ 9 ತಿಂಗಳ ಹೆಣ್ಣು ಮಗು ದುರ್ಮರಣ ಅಪ್ಪಿದೆ ಎಂದು ತಿಳಿದು ಬಂದಿದೆ. ಮೃತರನ್ನು ಸೌಂದರ್ಯಾಂದ್ ಹಾಗೂ ಆಕೆಯ ಮಗು ಸುವಿಕ್ಷಾ ಎಂದು ಗುರ್ತಿಸಲಾಗಿದೆ. ತಮಿಳುನಾಡಿನಿಂದ ಬೆಂಗಳೂರು ನಗರಕ್ಕೆ ತಾಯಿ – ಮಗು ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ:

ಪಾದಚಾರಿ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಕೂಡಲೇ ತಾಯಿ ಹಾಗೂ ಮಗು ಕೆಳಗೆ ಬಿದ್ದ ಒದ್ದಾಟ ನಡೆಸಿದರು. ಇಬ್ಬರಿಗೂ ಸಾಕಷ್ಟು ಸುಟ್ಟ ಗಾಯಗಳಾಗಿದ್ದವು. ತಾಯಿ ಹಾಗೂ ಮಗುವಿನ ಜೊತೆಗೆ ಇದ್ದ ಪತಿ ಸಂತೋಷ್ ಕುಮಾರ್ ಅವರು ತಮ್ಮ ಪತ್ನಿ ಹಾಗೂ ಮಗುವನ್ನು ಉಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸಿದರು. ಆದರೆ ಅವರ ಪ್ರಯತ್ನಗಳೆಲ್ಲವೂ ವಿಫಲವಾದವು. ಸಂತೋಷ್ ಕುಮಾರ್ ಅವರ ಕಣ್ಣೆದುರಲ್ಲೇ ಪತ್ನಿ ಹಾಗೂ ಮಗು ಸಾವನ್ನಪ್ಪಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

Viral Run Out Video: ರನೌಟ್​ ಪ್ರಯತ್ನದ ವಿಡಿಯೊವನ್ನು ಅಂಪೈರ್​ ರಿಚರ್ಡ್‌ ಕೆಟಲ್‌ಬರೋ ತಮ್ಮ ಟ್ವಿಟರ್ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡು ‘ಕ್ರಿಕೆಟ್‌ನಲ್ಲಿ ಬಿಲಿಯನ್ ಕ್ಷಣವನ್ನು ನೋಡಿದ್ದೇನೆ. ಆದರೆ ಈ ರೀತಿಯ ರೋಚಕ ಕ್ಷಣವನ್ನು ನೋಡಿದ್ದು ಇದೇ ಮೊದಲು’ ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Viral Run Out Video
Koo

ಮುಂಬಯಿ: ಸಾಮಾಜಿಕ ಜಾಲತಾಣದಲ್ಲಿ ಹಲವು ವೈರಲ್​ ವಿಡಿಯೋಗಳು(Viral Video) ಹರಿದಾಡುತ್ತಿರುತ್ತವೆ. ಆದರೆ ಅವುಗಳಲ್ಲಿ ಕೆಲವೊಂದು ವಿಡಿಯೋಗಳು ವಿಶೇಷ ಕಾರಣದಿಂದಾಗಿ ಜನರ ಗಮನ ಸೆಳೆದುಬಿಡುತ್ತದೆ. ಇದೀಗ ಇತಂಹದ್ದೇ ವಿಡಿಯೊವೊಂದು ಕ್ರಿಕೆಟ್​ ಅಭಿಮಾನಿಗಳ ಮನಗೆದ್ದಿದೆ. ಮಕ್ಕಳ ಕ್ರಿಕೆಟ್​ ಟೂರ್ನಿಯಲ್ಲಿ ರನೌಟ್​ ಮಾಡು ಹರಸಾಹಸಪಟ್ಟ ವಿಡಿಯೊವೊಂದು ವೈರಲ್(Viral Run Out Video)​ ಆಗಿದೆ.

ಮೈದಾನದಲ್ಲಿ ಶಾಲಾ ವಿದ್ಯಾರ್ಥಿಗಳು ಕ್ರಿಕೆಟ್ ಟೂರ್ನಿಯೊಂದ ಪಂದ್ಯವನ್ನು ಆಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಟ್ರೈಕರ್​ನಲ್ಲಿದ್ದ ಬ್ಯಾಟರ್​ ಚೆಂಡನ್ನು ಹೊಡೆದು ರನ್​ ಗಳಿಸಲು ನಾನ್​ಸ್ಟ್ರೈಕ್​ಗೆ ಓಡಿದ್ದಾನೆ. ಚೆಂಡು ಫೀಲ್ಡರ್​ ಕೈ ಸೇರಿದ ಕಾರಣ ನಾನ್​ಸ್ಟ್ರೈಕ್​ಕರ್​ನಲ್ಲಿದ್ದ ಬ್ಯಾಟರ್​ ಓಡಲು ನಿರಾಕರಿಸಿ ನಾನ್​ಸ್ಟ್ರೈಕ್​ನಲ್ಲಿಯೇ ನಿಲ್ಲುತ್ತಾನೆ. ಸುಲಭವಾಗಿ ರನೌಟ್​ ಅವಕಾಶ ಸಿಕ್ಕರೂ ಕೂಡ ಫೀಲ್ಡರ್​ ಗಡಿಬಿಡಿಯಲ್ಲಿ ಚೆಂಡನ್ನು ಕೀಪರ್​ ಕೈಗೆ ಎಸೆಯದೆ ನಾನ್​ಸ್ಟ್ರೈಕ್​ನತ್ತ ಬಿಸಾಡುತ್ತಾನೆ. ಚೆಂಡು ವಿಕೆಟ್​ಕೆ ಬಡಿಯದೆ ಮತ್ತೊಂದು ಫೀಲ್ಡರ್​ ಕೈ ಸೇರಿತು. ಆತ ಕೀಪರ್​ ಕಡೆ ಚೆಂಡನ್ನು ಎಸೆದ ವೇಳೆ ಪಿಚ್​ ಬದಿಯಲ್ಲಿ ನಿಂತಿದ್ದ ಫೀಲ್ಡರ್​ ಒಬ್ಬ ಚೆಂಡು ಕ್ಯಾಚ್​ ಹಿಡಿದು ವಿಕೆಟ್​ಕೆ ಎಸೆತುತ್ತಾನೆ. ಇಲ್ಲಿಯೂ ಗುರಿ ತಪ್ಪುತ್ತದೆ. ನಾನ್​ಸ್ಟ್ರೈಕ್​ನಲ್ಲಿದ್ದ ಬ್ಯಾಟರ್​ಗಳು ತಮ್ಮ ಪಾಡಿಗೆ ತಾವು ಚರ್ಚೆಯಲ್ಲಿ ಮಗ್ನರಾಗಿರುತ್ತಾರೆ. ಕೀಪರ್​ ಕೂಡ ರನೌಟ್​ ಮಾಡಲು ಎಡವುತ್ತಾನೆ. ಎದುರಾಳಿಗಳ ಪರದಾಟ ಕಂಡ ಬ್ಯಾಟರ್​ ತಕ್ಷಣ ಸ್ಟ್ರೈಕ್​ಗೆ ಓಡಿ ರನೌಟ್​ ಅಪಾಯದಿಂದ ಪಾರಾಗಿದ್ದಾನೆ.

ಈ ಹಾಸ್ಯಮಯ ರನೌಟ್​ ಪ್ರಯತ್ನದ ವಿಡಿಯೊವನ್ನು ಅಂಪೈರ್​ ರಿಚರ್ಡ್‌ ಕೆಟಲ್‌ಬರೋ ತಮ್ಮ ಟ್ವಿಟರ್ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡು ‘ಕ್ರಿಕೆಟ್‌ನಲ್ಲಿ ಬಿಲಿಯನ್ ಕ್ಷಣವನ್ನು ನೋಡಿದ್ದೇನೆ. ಆದರೆ ಈ ರೀತಿಯ ರೋಚಕ ಕ್ಷಣವನ್ನು ನೋಡಿದ್ದು ಇದೇ ಮೊದಲು’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

ಐಸಿಸಿ ಕೂಟಗಳಲ್ಲಿ ಅಂಪೈರ್​ ರಿಚರ್ಡ್‌ ಕೆಟಲ್‌ಬರೋ ಟೀಮ್ ಇಂಡಿಯಾ ಪಾಲಿಗೆ ಐರನ್ ಲೆಗ್ ಎನಿಸಿಕೊಂಡಿದ್ದಾರೆ. ರಿಚರ್ಡ್‌ ಕೆಟಲ್‌ಬರೋ ಕಾರ್ಯನಿರ್ವಹಿಸಿದ ಎಲ್ಲ ಮಹತ್ವದ ಪಂದ್ಯದಲ್ಲಿಯೂ ಭಾರತ ತಂಡ ಸೋಲುಕಂಡಿದೆ.

2014 ರಿಂದ ರಿಚರ್ಡ್‌ ಕೆಟಲ್‌ಬರೋ ಅಂಪೈರಿಂಗ್‌ ಮಾಡಿದ ಎಲ್ಲ ಪ್ರಮುಖ ಪಂದ್ಯಗಳಲ್ಲಿಯೂ ಟೀಮ್‌ ಇಂಡಿಯಾ ಸೋಲು ಕಂಡಿದೆ. 2014ರ ಟಿ20 ವಿಶ್ವ ಕಪ್ ಫೈನಲ್, 2015ರ ಏಕದಿನ ವಿಶ್ವ ಕಪ್ ಸೆಮಿಫೈನಲ್, 2016ರ ಟಿ20 ವಿಶ್ವ ಕಪ್ ಸೆಮಿಫೈನಲ್, 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್, 2019ರ ಏಕದಿನ ವಿಶ್ವ ಕಪ್ ಸೆಮಿಫೈನಲ್, 2021ರ ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್ ಫೈನಲ್, 2023ರ ಏಕದಿನ ವಿಶ್ವಕಪ್ ಫೈನಲ್​​ ಪಂದ್ಯದಲ್ಲಿ ಭಾರತ ಸೋತಿತ್ತು. ಹೀಗಾಗಿ ಭಾರತ ತಂಡ ಆಡುವ ಪ್ರಮುಖ ಪಂದ್ಯಗಳಲ್ಲಿ ರಿಚರ್ಡ್‌ ಕೆಟಲ್‌ಬರೋ ಅಂಪೈರ್ ಆದರೆ ಭಾರತ ಸೋಲುವುದು ಖಚಿತ ಎಂಬ ಅಭಿಪ್ರಾಯ ಅಭಿಮಾನಿಗಳದ್ದಾಗಿದೆ.

Continue Reading

ರಾಜಕೀಯ

All Eyes on Rafah: 30 ಮಿಲಿಯನ್ ಜನರನ್ನು ತಲುಪಿದ ‘ಆಲ್ ಐಸ್ ಆನ್ ರಫಾ’ ಪೋಸ್ಟ್‌!

All Eyes on Rafah:’ಆಲ್ ಐಸ್ ಆನ್ ರಫಾ’ ಎಐ ನಿರ್ಮಿತ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ 30 ಮಿಲಿಯನ್ ಜನರನ್ನು ಇದು ತಲುಪಿದ್ದು, ಸಾಕಷ್ಟು ಸಲೆಬ್ರಿಟಿಗಳು ಇದನ್ನು ಹಂಚಿಕೊಳ್ಳುತ್ತಿದ್ದಾರೆ.

VISTARANEWS.COM


on

By

All Eyes on Rafah
Koo

ನವದೆಹಲಿ: ಹಲವಾರು ಮಂದಿಯ ಇನ್ ಸ್ಟಾಗ್ರಾಮ್ (Instagram) ಖಾತೆಗಳಲ್ಲಿ ಮಂಗಳವಾರ ‘ಆಲ್ ಐಸ್ ಆನ್ ರಫಾ’ (All Eyes on Rafah) ಎಂಬ ಶೀರ್ಷಿಕೆಯೊಂದಿಗೆ ಚಿತ್ರ ಕಾಣಿಸಿಕೊಂಡಿದೆ. ಸೋಶಿಯಲ್ ಮೀಡಿಯಾ (social media) ಬಳಕೆದಾರರು ಎಐ (artificial intelligence) ರಚಿತವಾದ ಚಿತ್ರವನ್ನು ಪೋಸ್ಟ್ ಮಾಡಿದ್ದು, ಹಲವಾರು ಟೆಂಟ್ ಮನೆಗಳನ್ನು (tent house) ಚಿತ್ರದಲ್ಲಿ ಕಾಣಬಹುದಾಗಿದೆ.

ಆಲ್ ಐಸ್ ಆನ್ ರಫಾ ಚಿತ್ರವು ಗಾಝಾದ ದಕ್ಷಿಣದಲ್ಲಿರುವ ರಾಫಾ ನಗರದ ನಿರಾಶ್ರಿತರ ಶಿಬಿರದಲ್ಲಿರುವ ಡೇರೆಗಳನ್ನು ತೋರಿಸಿದೆ. ಅಲ್ಲಿ ಇಸ್ರೇಲ್ ನಿಂದ ನಡೆಸಿದ ದಾಳಿಯ ಅನಂತರ ಅನೇಕ ಪ್ಯಾಲೇಸ್ಟಿನಿಯರು ಇಲ್ಲಿಗೆ ಸ್ಥಳಾಂತರಗೊಂಡಿದ್ದಾರೆ. ಇಸ್ರೇಲ್ ದಾಳಿಯನ್ನು ಖಂಡಿಸಿ ಪ್ಯಾಲೆಸ್ಟೈನ್‌ ಗೆ ಬೆಂಬಲ ಸೂಚಿಸಿ ಅನೇಕರು ಇನ್ ಸ್ಟಾ ಗ್ರಾಮ್ ನಲ್ಲಿ ‘ಆಲ್ ಐಸ್ ಆನ್ ರಫಾ’ ಘೋಷಣೆಯೊಂದಿಗೆ ಹಂಚಿಕೊಂಡಿದ್ದಾರೆ. ಇದನ್ನು ಇನ್ ಸ್ಟಾ ಗ್ರಾಮ್ ನಲ್ಲಿ ಹಂಚಿಕೊಂಡಿರುವವರ ಸಂಖ್ಯೆ 30 ಮಿಲಿಯನ್ ದಾಟಿದೆ.

ಪ್ಯಾಲೇಸ್ಟಿನಿಯನ್ನರ ವಿರುದ್ಧದ ದಾಳಿಯನ್ನು ಖಂಡಿಸಿ ಮತ್ತು ಕದನ ವಿರಾಮಕ್ಕೆ ಒತ್ತಾಯಿಸಲು ಇದು ಸಾಮಾಜಿಕ ಜಾಲತಾಣದ ಮೂಲಕ ಜನರನ್ನು ಒಗ್ಗೂಡಿಸುತ್ತಿದೆ. ವರದಿಗಳ ಪ್ರಕಾರ ಡಬ್ಲ್ಯೂ ಹೆಚ್ ಒ ಪ್ರತಿನಿಧಿ ರಿಚರ್ಡ್ ಪೀಪರ್‌ಕಾರ್ನ್ ಅವರು ಫೆಬ್ರವರಿಯಲ್ಲಿ ಮೊದಲು ಈ ಘೋಷಣೆಯನ್ನು ಮಾಡಿದರು. ಡೇರೆ ಶಿಬಿರಗಳಿಂದ ತುಂಬಿದ ಪ್ರದೇಶವನ್ನು ಚಿತ್ರದಲ್ಲಿ ಕಾಣಬಹುದು. ಇದು ಇತ್ತೀಚಿನದು. ಎಲ್ಲರ ಗಮನ ಸೆಳೆಯಲು ಇದು ಅವರ ಪ್ರಯತ್ನ. ಇಸ್ರೇಲ್ ದಾಳಿಯಿಂದ ರಫಾದಲ್ಲಿ ಕನಿಷ್ಠ 45 ನಾಗರಿಕರು ಮೃತಪಟ್ಟಿದ್ದಾರೆ ಎಂದು ಹಲವರು ನೆಟ್ಟಿಗರು ಕಾಮೆಂಟ್ ನಲ್ಲಿ ಹೇಳಿದ್ದಾರೆ.

ಪೋಸ್ಟ್‌ ಶೇರ್‌ ಮಾಡಿದ ಸೆಲೆಬ್ರಿಟಿಗಳು

ಭಾರತೀಯ ನಟರಾದ ಆಲಿಯಾ ಭಟ್, ಪ್ರಿಯಾಂಕಾ ಚೋಪ್ರಾ ಕರೀನಾ ಕಪೂರ್ ಖಾನ್ ಮತ್ತು ವರುಣ್ ಧವನ್ ಸೇರಿದಂತೆ ಅನೇಕ ಬಾಲಿವುಡ್ ತಾರೆಯರು ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮ ಸಲಹೆಗಾರ ಮ್ಯಾಟ್ ನವರ್ರಾ ಅವರು “‘ಆಲ್ ಐಸ್ ಆನ್ ರಾಫಾ’ ಪೋಸ್ಟ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇಷ್ಟೊಂದು ದೊಡ್ಡ ಮಟ್ಟದ ಬೆಂಬಲ ಸಿಗುತ್ತದೆ ಎಂದು ನಾವು ಆರಂಭದಲ್ಲಿ ಭಾವಿಸಿರಲಿಲ್ಲ. ಸಾಕಷ್ಟು ಪ್ರಭಾವಿಗಳು ಮತ್ತು ಸೆಲೆಬ್ರಿಟಿಗಳು ಇದನ್ನು ಹಂಚಿಕೊಂಡಿದ್ದಾರೆ. ಈ ಸಂದೇಶದ ಭಾವನೆ ಅಥವಾ ಉದ್ದೇಶ ಒಂದೇ. ಅನೇಕರನ್ನು ತಲುಪುವುದು ಮತ್ತು ಅಲ್ಲಿನ ಪರಿಸ್ಥಿತಿ ಬಗ್ಗೆ ಎಲ್ಲರ ಗಮನ ಸೆಳೆಯುವುದು.

ಇದನ್ನೂ ಓದಿ: Viral Video: ಭಾರತ-ಚೀನಾ ಯೋಧರ ನಡುವೆ ಹಗ್ಗಜಗ್ಗಾಟ; ಗೆದ್ದವರು ಯಾರು? ವಿಡಿಯೊ ನೋಡಿ!

ರಫಾ ನಿರ್ಮೂಲನೆ ಮಾಡುವ ಗುರಿ

ಇದರ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ದೇಶದಲ್ಲಿ ಈ ಸಾವುನೋವುಗಳು ‘ದುರಂತ’ ಎಂದು ಹೇಳಿದ್ದಾರೆ. ರಫಾವನ್ನು ಹಮಾಸ್‌ ಉಗ್ರರ ಕಟ್ಟ ಕಡೆಯ ಭದ್ರಕೋಟೆ ಎಂದಿರುವ ನೆತನ್ಯಾಹು, ಅದನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿರುವುದಾಗಿ ತಿಳಿಸಿದ್ದರು. ಈ ಪ್ರದೇಶದಲ್ಲಿ ಸುಮಾರು 14 ದಶಲಕ್ಷಕ್ಕೂ ಹೆಚ್ಚು ಪ್ಯಾಲೇಸ್ಟಿನಿಯರು ಆಶ್ರಯ ಪಡೆದಿದ್ದಾರೆ. ಪ್ಯಾಲೇಸ್ಟಿನ್ ಮೇಲಿನ ಇಸ್ರೇಲ್‌ ದಾಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

Continue Reading

ವೈರಲ್ ನ್ಯೂಸ್

Viral Video: ಇವನೇ ನಿಜವಾದ ಹೀರೋ! ಇವರ ಧೈರ್ಯ, ಶೌರ್ಯಕ್ಕೆ ಸರಿಸಾಟಿಯೇ ಇಲ್ಲ; ವೈರಲಾಯ್ತು ವಿಡಿಯೋ

Viral Video: ಆಕಸ್ಮಿಕವಾಗಿ ನದಿಗೆ ಬಿದ್ದು ಸಾವಿನೊಂದಿಗೆ ಸೆಣಸಾಡುತ್ತಿದ್ದ ಪುಟ್ಟ ಕಂದನನ್ನು ತನ್ನ ಜೀವದ ಹಂಗು ತೊರೆದು ವ್ಯಕ್ತಿಯೊಬ್ಬರು ರಕ್ಷಿಸಿದ್ದಾರೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಈಗ ಫುಲ್ ವೈರಲ್ ಆಗಿದ್ದು, ಆ ವ್ಯಕ್ತಿಗೆ ಪ್ರಶಂಸೆಗಳ ಸುರಿಮಳೆಯೇ ಹರಿದು ಬರುತ್ತಿದೆ. ಈ ಘಟನೆ ಜಮ್ಮು ಕಾಶ್ಮೀರದಲ್ಲಿನ ಶ್ರೀನಗರದ ಸಫಾಕದಲ್ ಏರಿಯಾದಲ್ಲಿ ನಡೆದಿದ್ದು, ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಝೀಲಂ ನದಿಗೆ ಬಿದ್ದಿದ್ದಾನೆ. ಆತ ನೀರಿನಲ್ಲಿ ಮುಳುಗಿ ಕೈ ಕಾಲು ಬಡಿಯುತ್ತಿದ್ದಾಗ ಇದನ್ನು ಸ್ಥಳೀಯರು ಗಮನಿಸಿದ್ದಾರೆ.

VISTARANEWS.COM


on

Viral Video
Koo

ಜಮ್ಮು ಕಾಶ್ಮೀರ: ಸಂಕಷ್ಟದಲ್ಲಿ ಸಿಲುಕಿದವರ ರಕ್ಷಣೆಗಾಗಿ ಕೆಲವೊಮ್ಮೆ ದೇವರು ಆಪತ್ಬಾಂದವರನ್ನು ಯಾವ ರೀತಿಯಲ್ಲಾದರೂ ಹೇಗಾದರೂ ಮಾಡಿ ಕಳಿಸುತ್ತಾನೆ. ಹಾಗೆ ಬಂದ ವ್ಯಕ್ತಿ ತನ್ನ ಜೀವದ ಹಂಗನ್ನು ತೊರೆದು ಸಾವಿನೊಂದಿಗೆ ಸೆಣಸಾಡಿ ಕಷ್ಟದಲ್ಲಿದ್ದ ವ್ಯಕ್ತಿಯನ್ನು ರಕ್ಷಿಸುತ್ತಾನೆ. ಅಂತಹದ್ದೇ ಒಂದು ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಇದು ನಿಜ ಜೀವನದ ಸೂಪರ್‌ ಹೀರೋನ ಕಥೆ. ಈತನ ಧೈರ್ಯ, ಸಮಯಪ್ರಜ್ಞೆಗೆ ಸಾಟಿಯೇ ಇಲ್ಲ. ಆತನ ಈ ವಿಡಿಯೋ ಒಂದು ಕ್ಷಣಕ್ಕೆ ಎಲ್ಲರನ್ನೂ ದಂಗಾಗಿಸಿದೆ. ಸೋಶಿಯಲ್‌ ಮೀಡಿಯಾ(Social Media)ದಲ್ಲಿ ಈ ವಿಡಿಯೋ ಫುಲ್‌ ವೈರಲ್‌(Viral Video) ಆಗಿದೆ

ಆಕಸ್ಮಿಕವಾಗಿ ನದಿಗೆ ಬಿದ್ದು ಸಾವಿನೊಂದಿಗೆ ಸೆಣಸಾಡುತ್ತಿದ್ದ ಪುಟ್ಟ ಕಂದನನ್ನು ತನ್ನ ಜೀವದ ಹಂಗು ತೊರೆದು ವ್ಯಕ್ತಿಯೊಬ್ಬರು ರಕ್ಷಿಸಿದ್ದಾರೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಈಗ ಫುಲ್ ವೈರಲ್ ಆಗಿದ್ದು, ಆ ವ್ಯಕ್ತಿಗೆ ಪ್ರಶಂಸೆಗಳ ಸುರಿಮಳೆಯೇ ಹರಿದು ಬರುತ್ತಿದೆ. ಈ ಘಟನೆ ಜಮ್ಮು ಕಾಶ್ಮೀರದಲ್ಲಿನ ಶ್ರೀನಗರದ ಸಫಾಕದಲ್ ಏರಿಯಾದಲ್ಲಿ ನಡೆದಿದ್ದು, ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಝೀಲಂ ನದಿಗೆ ಬಿದ್ದಿದ್ದಾನೆ. ಆತ ನೀರಿನಲ್ಲಿ ಮುಳುಗಿ ಕೈ ಕಾಲು ಬಡಿಯುತ್ತಿದ್ದಾಗ ಇದನ್ನು ಸ್ಥಳೀಯರು ಗಮನಿಸಿದ್ದಾರೆ.

ಕೂಡಲೇ ಸಮಯ ಪ್ರಜ್ಞೆ ಮೆರೆದ ವ್ಯಕ್ತಿಯೊಬ್ಬರು ನದಿಗೆ ಹಾರಿ ಬಾಲಕನನ್ನು ಸುರಕ್ಷಿತವಾಗಿ ದಂಡೆಗೆ ಕರೆ ತಂದಿದ್ದಾರೆ. ಈ ಸಂದರ್ಭದಲ್ಲಿ ದಡದ ಮೇಲಿದ್ದ ಮತ್ತೊಬ್ಬ ವ್ಯಕ್ತಿ ಮಗುವನ್ನು ಎತ್ತಿಕೊಂಡಿದ್ದು, ಬಳಿಕ ಸಿಪಿಆರ್ ಮಾಡಿ ಆತನನ್ನು ಸಾವಿನಿಂದ ರಕ್ಷಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಅಂತಹದ್ದೇ ಒಂದು ಘಟನೆ ಕೆಲವು ದಿನಗಳ ಹಿಂದೆ ಉತ್ತರಾಖಂಡದಲ್ಲಿ ನಡೆದಿತ್ತು. ಚಲಿಸುತಿದ್ದ ರೈಲು ಹತ್ತಲು ಹೋಗಿ ವ್ಯಕ್ತಿಯೊಬ್ಬ ಕಾಲು ಜಾರಿ ಬಿದ್ದಿದ್ದು, ತಕ್ಷಣ ಅಲ್ಲೇ ಇದ್ದ ಮಹಿಳಾ ಪೊಲೀಸ್‌ ಸಿಬ್ಬಂದಿ ತಮ್ಮ ಜೀವದ ಹಂಗನ್ನು ತೊರೆದು ಆತನನ್ನು ರಕ್ಷಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌ ಆಗಿದ್ದು, ಸಿಬ್ಬಂದಿಯ ಶಕ್ತಿ ಸಾಮರ್ಥ್ಯ ಹಾಗೂ ಕರ್ತವ್ಯ ಪ್ರಜ್ಞೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:Viral Video: ದಿಗಂಬರ ಜೈನ ಮುನಿಗಳಿಗೆ ಈ ಪಾಪಿ ಮಾಡಿದ್ದೇನು ಗೊತ್ತಾ? ಶಾಕಿಂಗ್‌ ವಿಡಿಯೋ ವೈರಲ್‌

ಉತ್ತರಾಖಂಡದ ಲಸ್ಕರ್‌ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿದ್ದ ವ್ಯಕ್ತಿ ಫ್ಲ್ಯಾಟ್‌ಫಾರ್ಮ್‌ ಮತ್ತು ರೈಲಿನ ನಡುವಿನ ಸಂದಿಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ಜಿಆರ್‌ಪಿ ಕಾನ್‌ಸ್ಟೇಬಲ್‌ ಉಮಾ, ಆಪದ್ಬಾಂಧವಳಂತೆ ಬಂದು ಆತನನ್ನು ರಕ್ಷಿಸಿದ್ದಾರೆ. ಇನ್ನು ಈ ಘಟನೆ ಏ.24ರಂದು ನಡೆದಿದ್ದು, ಆಹಾರ ಮತ್ತು ಜ್ಯೂಸ್‌ ತೆಗೆದು ಕೊಳ್ಳಲೆಂದು ಆ ವ್ಯಕ್ತಿ ರೈಲಿನಿಂದ ಇಳಿದಿದ್ದ. ತಕ್ಷಣ ಹೊರಡುತ್ತಿದ್ದನ್ನು ಗಮನಿಸಿದ ಆ ಓಡಿ ಹೋಗಿ ಹತ್ತಿದ್ದಾನೆ ಎನ್ನಲಾಗಿದೆ. ಕೈನಲ್ಲಿ ಆಹಾರ ಪೊಟ್ಟಣಗಳು ಇದ್ದ ಕಾರಣ ಆತನಿಗೆ ಸುಲಭವಾಗಿ ಹತ್ತಲು ಸಾಧ್ಯವಾಗಿಲ್ಲ. ಹೀಗಾಗಿ ಆಯ ತಪ್ಪಿ ಕೆಳಗೆ ಬಿದ್ದಿದ್ದ.

Continue Reading

ವೈರಲ್ ನ್ಯೂಸ್

Viral News: ರೈಲಿನಲ್ಲಿ ಅಶ್ಲೀಲವಾಗಿ ಮೈ ಕುಣಿಸಿದ ಮಹಿಳೆ; ರೀಲ್ಸ್ ಮಾಡುವವರ ಕಾಟವಿಲ್ಲದ ಪ್ರಯಾಣ ಅಸಾಧ್ಯ ಎಂದ ನೆಟ್ಟಿಗರು

Viral News: ಮುಂಬೈಯ ಲೋಕಲ್‌ ರೈಲಿನಲ್ಲಿ ಮಹಿಳೆಯೊಬ್ಬಳು ಪ್ರಯಾಣಿಕರ ಮಧ್ಯೆ ಅಶ್ಲೀಲವಾಗಿ ಹೆಜ್ಜೆ ಹಾಕಿ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾಳೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ನೆಟ್ಟಿಗರು ಆಕೆಗೆ ಛೀಮಾರಿ ಹಾಕುತ್ತಿದ್ದಾರೆ. ʼʼಕಾನೂನಿನ ಭಯವಿಲ್ಲದಿದ್ದರೆ ಹೀಗೆಲ್ಲ ಸಂಭವಿಸುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲವಾಗಿ ನೃತ್ಯ ಪ್ರದರ್ಶಿಸುವುದು ತಪ್ಪು. ರೈಲ್ವೆ ಅಧಿಕಾರಿಗಳು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕುʼʼ ಎಂದು ಬಹುತೇಕರು ಆಗ್ರಹಿಸಿದ್ದಾರೆ.

VISTARANEWS.COM


on

Viral News
Koo

ಮುಂಬೈ: ಇತ್ತೀಚೆಗೆ ಯುವ ಜನತೆಯಲ್ಲಿ ರೀಲ್ಸ್‌ ಮಾಡುವ ಟ್ರೆಂಡ್‌ ಹೆಚ್ಚಾಗುತ್ತಿದೆ. ಇದು ಯಾವ ಮಟ್ಟಿಗೆ ಅತಿರೇಕಕ್ಕೆ ಹೋಗಿದೆ ಎಂದರೆ ಸಾರ್ವಜನಿಕ ಸ್ಥಳಗಳಲ್ಲಿಯೂ ವಿಡಿಯೊ ಮಾಡಲು ಮುಂದಾಗುತ್ತಿದ್ದಾರೆ. ಇತರರಿಗೆ ತೊಂದರೆಯಾಗುತ್ತದೆ, ಕಿರಿಕಿರಿ ಅನುಭವಿಸುತ್ತಾರೆ ಎನ್ನುವ ಕನಿಷ್ಠ ಸೌಜನ್ಯವೂ ಇಲ್ಲದೆ ರೀಲ್ಸ್‌ಗೆ ಹೆಜ್ಜೆ ಹಾಕುತ್ತಿರುವ ಪ್ರವೃತ್ತಿಗೆ ಬ್ರೇಕ್‌ ಬೀಳುತ್ತಿಲ್ಲ. ರೈಲು, ಮೆಟ್ರೋ, ವಿಮಾನ ಹೀಗೆ ಎಲ್ಲೆಂದರಲ್ಲಿ ಮೈ ಕುಣಿಸಿ ಜನಪ್ರಿಯತೆ ಪಡೆದುಕೊಳ್ಳಲು ಮುಂದಾಗುವವರು ಅಧಿಕ ಸಂಖ್ಯೆಯಲ್ಲಿ ಕಾಣ ಸಿಗುತ್ತಾರೆ. ಮೈ ಚಳಿ ಬಿಟ್ಟು ಅಶ್ಲೀಲವಾಗಿ ಕುಣಿಯುವವರ ಸಂಖ್ಯೆಯೂ ಕಡಿಮೆ ಏನಿಲ್ಲ. ಇದೀಗ ಅಂತಹದ್ದೇ ಘಟನೆ ವರದಿಯಾಗಿದ್ದು, ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮುಂಬೈಯ ಲೋಕಲ್‌ ರೈಲಿನಲ್ಲಿ ಮಹಿಳೆಯೊಬ್ಬಳು ಪ್ರಯಾಣಿಕರ ಮಧ್ಯೆ ಅಶ್ಲೀಲವಾಗಿ ಹೆಜ್ಜೆ ಹಾಕಿ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾಳೆ (Viral News).

ಅಧಿಕಾರಿಗಳು ಎಷ್ಟೇ ಎಚ್ಚರಿಸಿದರೂ, ಕ್ರಮ ಕೈಗೊಂಡರೂ ಚಲಿಸುತ್ತಿರುವ ರೈಲು, ಫ್ಲಾಟ್‌ಫಾರ್ಮ್‌ನಲ್ಲಿ ಡ್ಯಾನ್ಸ್‌ ಮಾಡುವುದನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ. ಈ ವಿಡಿಯೊದಲ್ಲಿ ಚಲಿಸುತ್ತಿರುವ ಮುಂಬೈ ಲೋಕಲ್‌ ರೈಲು ಮತ್ತು ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ (CSMT)ನಲ್ಲಿ ಮಹಿಳೆಯೊಬ್ಬಳು ತುಂಡು ಬಟ್ಟೆ ತೊಟ್ಟು ಭೋಜ್‌ಪುರಿ ಹಾಡಿಗೆ ಅಶ್ಲೀಲವಾಗಿ ನರ್ತಿಸುತ್ತಿರುವುದು ಕಂಡು ಬಂದಿದೆ. ನೆಟ್ಟಿಗರು ಈ ವಿಡಿಯೊ ನೋಡಿ ಮಹಿಳೆಗೆ ಛೀಮಾರಿ ಹಾಕುತ್ತಿದ್ದಾರೆ.

ಮಹಿಳೆ ರೈಲಿನ ಬೋಗಿಯ ಒಳಗೆ ಮತ್ತು ಪ್ಲಾಟ್‌ಫಾರ್ಮ್‌ನಲ್ಲಿ ಪ್ರಚೋದನಕಾರಿಯಾಗಿ ನೃತ್ಯ ಮಾಡಿ ಪ್ರಯಾಣಿಕರಿಗೆ ಮುಜುಗರ ಉಂಟು ಮಾಡುತ್ತಿರುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕಂಡು ಬಂದಿದೆ. ʼ’ಮುಂಬೈ ರೈಲಿನಲ್ಲಿ ಭಿಕ್ಷುಕರು ಮತ್ತು ರೀಲ್ಸ್ ಮಾಡುವವರ ಕಾಟವಿಲ್ಲದೆ ಶಾಂತಿಯುತವಾಗಿ ಪ್ರಯಾಣಿಸಲು ಸಾಧ್ಯವಿಲ್ಲʼʼ ಎಂದು ಕ್ಯಾಪ್ಶನ್‌ ನೀಡಿ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ. ಜತೆಗೆ ಮುಂಬೈ ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳನ್ನು ಟ್ಯಾಗ್‌ ಮಾಡಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಲಾಗಿದೆ.

ನೆಟ್ಟಿಗರು ಏನಂದ್ರು?

ʼʼಈ ಮಹಿಳೆ ಎಲ್ಲ ಕಡೆ ಡ್ಯಾನ್ಸ್‌ ಮಾಡಿ ಕಿರಿಕಿರಿ ಉಂಟು ಮಾಡುತ್ತಿದ್ದಾಳೆ. ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಆಕೆಯನ್ನು ಬಂಧಿಸಿ ಮುಂಬೈಯಿಂದ ಗಡಿಪಾರು ಮಾಡಬೇಕುʼʼ ಎಂದು ಒಬ್ಬರು ಆಗ್ರಹಿಸಿದ್ದಾರೆ. ʼʼಇಂತಹ ಪ್ರವೃತ್ತಿಗೆ ಕೂಡಲೇ ಕಡಿವಾಣ ಹಾಕಬೇಕುʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼಕಾನೂನಿನ ಭಯವಿಲ್ಲದಿದ್ದರೆ ಹೀಗೆಲ್ಲ ಸಂಭವಿಸುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲವಾಗಿ ನೃತ್ಯ ಪ್ರದರ್ಶಿಸುವುದು ತಪ್ಪು. ರೈಲ್ವೆ ಅಧಿಕಾರಿಗಳು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಪ್ರಯಾಣಿಕರು ಜವಾಬ್ದಾರಿಯುತ ನಾಗರಿಕರಾಗಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು’ʼ ಎಂದು ಮಗದೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಿರಿಕಿರಿ ಉಂಟು ಮಾಡುವವರನ್ನು ಬಂಧಿಸಬೇಕು ಎಂದು ಬಹುತೇಕರು ಅಧಿಕಾರಿಗಳನ್ನು ಟ್ಯಾಗ್‌ ಮಾಡಿ ಒತ್ತಾಯಿಸಿದ್ದಾರೆ.

ಅಧಿಕಾರಿಗಳು ಹೇಳಿದ್ದೇನು?

ಸದ್ಯ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಮುಂಬೈ ಸೆಂಟ್ರಲ್ ಡಿಆರ್‌ಎಂನ ಅಧಿಕೃತ ಎಕ್ಸ್ ಹ್ಯಾಂಡಲ್, ಘಟನೆಯ ತನಿಖೆ ನಡೆಸಲು ಮತ್ತು ಅಗತ್ಯ ಕ್ರಮ ಕೈಗೊಳ್ಳಲು ಮುಂಬೈ ವಿಭಾಗದ ಭದ್ರತಾ ಇಲಾಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದೆ. ʼʼಮಾಹಿತಿಗಾಗಿ ಧನ್ಯವಾದಗಳು. ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ’ʼ ಎಂದು ಹೇಳಿದೆ.

ಇದನ್ನೂ ಓದಿ: Viral Video: ಅರೆಬರೆ ಬಟ್ಟೆಯಲ್ಲೇ ರೈಲಿನಲ್ಲಿ ಡ್ಯಾನ್ಸ್‌ ಮಾಡಿದ ಯುವತಿ; ಛೀಮಾರಿ ಹಾಕಿದ ಜನ

Continue Reading
Advertisement
PM Narendra Modi
ದೇಶ12 mins ago

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

Arvind Kejriwal
ದೇಶ13 mins ago

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Love Jihad
ಪ್ರಮುಖ ಸುದ್ದಿ16 mins ago

Love Jihad: ಲವ್ ಜಿಹಾದ್ ತಡೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Karan Bhushan Singh
ದೇಶ28 mins ago

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

mlc election
ರಾಜಕೀಯ30 mins ago

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

Viral Run Out Video
ಕ್ರೀಡೆ37 mins ago

Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

Ambareesh Birthday during Sumalatha Ambareesh Talks About Abhishek Ambareesh And Aviva
ಸ್ಯಾಂಡಲ್ ವುಡ್43 mins ago

Ambareesh Birthday: ಸಿಹಿ ಸುದ್ದಿ ಕೊಡಲಿದ್ದಾರಾ ಅಭಿಷೇಕ್‌-ಅವಿವಾ? ಸುಮಲತಾ ಹೇಳಿದ್ದೇನು?

All Eyes on Rafah
ರಾಜಕೀಯ48 mins ago

All Eyes on Rafah: 30 ಮಿಲಿಯನ್ ಜನರನ್ನು ತಲುಪಿದ ‘ಆಲ್ ಐಸ್ ಆನ್ ರಫಾ’ ಪೋಸ್ಟ್‌!

Bomb Threat
ಪ್ರಮುಖ ಸುದ್ದಿ50 mins ago

Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Hardik Pandya
ಕ್ರೀಡೆ1 hour ago

Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ20 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌