Viral Video : ವಿಮಾನದಲ್ಲೇ ಕುಸ್ತಿ ಆರಂಭಿಸಿದ ಬ್ರಿಟನ್‌-ಅಮೆರಿಕ ಪ್ರಜೆಗಳು! - Vistara News

ವೈರಲ್ ನ್ಯೂಸ್

Viral Video : ವಿಮಾನದಲ್ಲೇ ಕುಸ್ತಿ ಆರಂಭಿಸಿದ ಬ್ರಿಟನ್‌-ಅಮೆರಿಕ ಪ್ರಜೆಗಳು!

ವಿಮಾನವೊಂದರಲ್ಲಿ ಅಮೆರಿಕ ಮೂಲಕ ಪ್ರಯಾಣಿಕ ಮತ್ತು ಬ್ರಿಟನ್‌ ಮೂಲದ ಪ್ರಯಾಣಿಕ ಸೀಟಿನ ವಿಚಾರದಲ್ಲಿ ಕುಸ್ತಿಯಾಡಿಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್‌ (Viral Video) ಆಗಿದೆ.

VISTARANEWS.COM


on

fight in flight
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ವಿಮಾನದಲ್ಲಿ ಸಣ್ಣ ಪುಟ್ಟ ಜಗಳಗಳು ಆಗುವುದು ಸಾಮಾನ್ಯ. ಆದರೆ ಇಬ್ಬರು ಪ್ರಯಾಣಿಕರು ಕುಸ್ತಿಗೇ ಬೀಳುವುದನ್ನು ನೋಡಿದ್ದೀರಾ? ಅಂಥದ್ದೊಂದು ಘಟನೆ ಇತ್ತೀಚೆಗೆ ರ್ಯಾನಾರ್‌ ವಿಮಾನದಲ್ಲಿ ನಡೆದಿದೆ. ಅಮೆರಿಕ ಮೂಲದ ಪ್ರಯಾಣಿಕ ಹಾಗೂ ಬ್ರಿಟನ್‌ ಮೂಲದ ಪ್ರಯಾಣಿಕ ಕುಸ್ತಿ ಆಡಿಕೊಂಡಿರುವ ಘಟನೆ ಈ ವಿಮಾನದಲ್ಲಿ ನಡೆದಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ.

ರ್ಯಾನಾರ್‌ ವಿಮಾನವು ಯುರೋಪ್‌ನ ಮಾಲ್ಟಾದಿಂದ ಬ್ರಿಟನ್‌ನ ಲಂಡನ್‌ಗೆ ಹೊರಟಿತ್ತು. ಅಮೆರಿಕದ ಮೂಲದ ವ್ಯಕ್ತಿಯ ಸೀಟು ವಿಮಾನದ ಕಿಟಕಿಯ ಪಕ್ಕದಲ್ಲಿತ್ತು. ಹಾಗೆಯೇ ಆ ಸಾಲಿನ ಮಧ್ಯದ ಸೀಟು ಬ್ರಿಟನ್‌ ಮೂಲದ ಪ್ರಯಾಣಿಕನಾಗಿತ್ತು. ಬ್ರಿಟನ್‌ ಪ್ರಯಾಣಿಕ ಅದಾಗಲೇ ಮಧ್ಯದ ಸೀಟಿನಲ್ಲಿ ಕುಳಿತಿದ್ದ. ಅಮೆರಿಕದ ಪ್ರಯಾಣಿಕ ನಂತರ ಬಂದಿದ್ದು, ಕಿಟಕಿಯ ಬಳಿಯಿರುವ ಸೀಟಿಗೆ ಹೋಗಲು ಜಾಗ ಕೊಡು ಎಂದು ಬ್ರಿಟನ್‌ ಮೂಲದ ಪ್ರಯಾಣಿಕನಿಗೆ ಕೇಳಿದ್ದಾನೆ. ಆದರೆ ಅದಕ್ಕೆ ಆತ ಒಪ್ಪದಿದ್ದಾಗ ಮಾತಿನ ಚಕಮಕಿ ಆರಂಭವಾಗಿದೆ. ಕೊನೆಗೆ ಅದು ಹೆಚ್ಚಾಗಿದ್ದು, ಇಬ್ಬರೂ ಕೈಕೈ ಮಿಲಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral News: ತೂಕ ಹೆಚ್ಚಾಯ್ತೆಂದು 19 ಪ್ರಯಾಣಿಕರನ್ನು ಕೆಳಗಿಳಿಸಿ ಹೊರಟು ಹೋದ ವಿಮಾನ!
ಈ ದೃಶ್ಯವನ್ನು ವಿಮಾನದಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಅದರಲ್ಲಿ ಹಲವು ಸಹ ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿ ಜಗಳವನ್ನು ನಿಲ್ಲಿಸಲು ಹರಸಾಹಸ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳ ತುಂಬೆಲ್ಲ ಹರಿದಾಡಿದ್ದು, ವೈರಲ್‌ ಆಗಿದೆ. ಎರಡು ಪ್ರಮುಖ ದೇಶಗಳ ನಾಗರಿಕರು ಈ ರೀತಿಯಲ್ಲಿ ಕಿತ್ತಾಡಿಕೊಳ್ಳುತ್ತಿರುವುದನ್ನು ನೋಡಿ ಜನರು ಆಡಿಕೊಂಡು ನಗಲಾರಂಭಿಸಿದ್ದಾರೆ.

ಈ ರ್ಯಾನರ್‌ ಏರ್‌ಲೈನ್‌ ಹಲವು ವಿಚಾರಗಳಲ್ಲಿ ಇತ್ತೀಚೆಗೆ ಸುದ್ದಿಯಾಗಿದೆ. ಇತ್ತೀಚೆಗೆ ರ್ಯಾನರ್‌ ವಿಮಾನದ ಶೌಚಾಲಯದಲ್ಲಿ ಪ್ರಯಾಣಿಕನೊಬ್ಬ ಧೂಮಪಾನ ಮಾಡಿದ್ದರಿಂದ ವಿಮಾನದ ಸಿಬ್ಬಂದಿ ಆತನಿಗೆ ಬೈದಿದ್ದರು. ನಂತರ ಬ್ರಿಟನ್‌ ಪೊಲೀಸರು ಆತನನ್ನು ವಶಕ್ಕೆ ಪಡೆದು ಕರೆದುಕೊಂಡು ಹೋಗುತ್ತಿದ್ದ ವಿಡಿಯೊ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಹಾಗೆಯೇ ಮೇ ತಿಂಗಳಲ್ಲಿ ಈ ವಿಮಾನದಲ್ಲಿ ಪ್ರಯಾಣಿಸಿದ ಅಂಗವಿಕಲ ಪ್ರಯಾಣಿಕರೊಬ್ಬರು ವಿಮಾನದಲ್ಲಿ ಸರಿಯಾದ ವ್ಯವಸ್ಥೆಗಳೇ ಇಲ್ಲ ಎಂದು ದೂರಿದ್ದು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Viral Video: ಅಭಿಮಾನಿಯ ಮಾತಿನಿಂದ ಸಿಟ್ಟುಗೊಂಡ ರೌಫ್​ ಏಕಾಏಕಿ ಆತನ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಅವರ ಪತ್ನಿ ಮತ್ತು ಮ್ಯಾನೇಜರ್​ಗಳು ಅವರನ್ನು ತಡೆದು ನಿಲ್ಲಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Viral Video
Koo

ಫ್ಲೋರಿಡಾ: ಪಾಕಿಸ್ತಾನ ತಂಡದ ವೇಗದ ಬೌಲರ್ ಹ್ಯಾರಿಸ್ ರೌಫ್(Haris Rauf) ಅವರು ಫ್ಲೋರಿಡಾದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಲು ಮುಂದಾದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್(Viral Video)​ ಆಗಿದೆ. ಹಲ್ಲೆಗೆ ಮುಂದಾದ ಹ್ಯಾರಿಸ್ ರೌಫ್(Angry Haris Rauf) ಅವರನ್ನು ಅವರ ಪತ್ನಿ ತಡೆದು ನಿಲ್ಲಿಸಿದ್ದನ್ನು ಈ ವಿಡಿಯೊದಲ್ಲಿ ಕಾಣಬಹುದಾಗಿದೆ.

ಈಗಾಗಲೇ ಟಿ20 ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದಿರುವ ಪಾಕಿಸ್ತಾನ ತಂಡದ ಆಟಗಾರರು ಫ್ಲೋರಿಡಾದಲ್ಲಿ ಕೆಲ ದಿನಗಳ ಕಾಲ ಎಂಜಾಯ್​ ಮಾಡಲಿದ್ದಾರೆ. ಹ್ಯಾರಿಸ್ ರೌಫ್ ಕೂಡ ತಮ್ಮ ಪತ್ನಿ ಜತೆ ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಕಾಲ ಕಳೆಯುತ್ತಿದ್ದಾರೆ. ಇದೇ ವೇಳೆ ತಾವು ತಂಗಿದ್ದ ಹೋಟೆಲ್​ಗೆ ಹೋಗುತ್ತಿದ್ದಾಗ ಅಭಿಮಾನಿಯೊಬ್ಬ ನಿಮ್ಮ ಜತೆಗೊಂದು ಫೋಟೊ ಬೇಕಿತ್ತು ಎಂದು ಕೇಳಿದ್ದಾನೆ. ಈ ವೇಳೆ ರೌಫ್​, ನೀನು ಭಾರತೀಯನಾಗಿರಬೇಕು ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಅಭಿಮಾನಿ ನಾನು ಕೂಡ ಪಾಕಿಸ್ತಾನ ಮೂಲದವನೇ ಎಂದು ಹೇಳಿ ಬಳಿಕ ಏನೋ ಹೇಳಿದ್ದಾನೆ.

ಅಭಿಮಾನಿಯ ಮಾತಿನಿಂದ ಸಿಟ್ಟುಗೊಂಡ ರೌಫ್​ ಏಕಾಏಕಿ ಆತನ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಪತ್ನಿ ರೌಫ್​ ಅವರನ್ನು ಹಿಡಿದು ನಿಲ್ಲಿಸುವ ಪ್ರಯತ್ನ ಪಟ್ಟರೂ ಕೂಡ ರೌಫ್​ ತಪ್ಪಿಸಿಕೊಂಡು ಹಲ್ಲೆಗೆ ಮುಂದಾದರು. ತಕ್ಷಣ ರೌಫ್​ ಅವರ ಮ್ಯಾನೇಜರ್​ ಹಾಗು ಕೆಲ ಸಿಬ್ಬಂದಿಗಳು ಅವರನ್ನು ತಡೆದು ನಿಲ್ಲಿಸಿದ್ದಾರೆ. ಪತ್ನಿ ಕೂಡ ಅವರ ಕೈಗಳನ್ನು ಹಿಡಿದು ಹಲ್ಲೆ ಮಾಡದಂತೆ ಮನವಿ ಮಾಡುತ್ತಲೇ ಅವರನ್ನು ಸಮಾಧಾನ ಪಡೆಸಿದ್ದಾರೆ. ಈ ಎಲ್ಲ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ರೌಫ್​ ಅವರ ಈ ದರ್ಪವನ್ನು ಅನೇಕ ನೆಟ್ಟಿಗರು ಮತ್ತು ಪಾಕ್​ ಅಭಿಮಾನಿಗಳು ಖಂಡಿಸಿದ್ದಾರೆ. ಇದೇ ದರ್ಪವನ್ನು ಟಿ20 ವಿಶ್ವಕಪ್​ ಪಂದ್ಯದಲ್ಲಿ ತೋರಿಸುತ್ತಿದ್ದರೆ ನಿಮಗೆ ಈ ಗತಿ ಬರುತ್ತಿರಲಿಲ್ಲ ಎಂದು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ; ಅಭ್ಯಾಸದ ವೇಳೆ ಸ್ಟಾರ್​ ಆಟಗಾರನಿಗೆ ಗಾಯ

ಪಾಕ್​ ಆಟಗಾರರ ವೇತನ ಕಡಿತ!


ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ(T20 World Cup 2024) ಕಳಪೆ ಪ್ರದರ್ಶನ ತೋರಿದ ಕಾರಣ ಆಟಗಾರರ ವಾರ್ಷಿಕ ಸಂಭಾವನೆಯಲ್ಲಿ ಕಡಿತ ಮಾಡಲು ಪಾಕ್​ ಕ್ರಿಕೆಟ್​ ಮಂಡಳಿ(PCB) ನಿರ್ಧರಿಸಿದೆ. ಪಾಕ್​ ಮಾಧ್ಯಮ ವರದಿಗಳ ಪ್ರಕಾರ ಮಾಜಿ ಆಟಗಾರರು ಹಾಗೂ ಪಿಸಿಬಿ ಸದಸ್ಯರು ಆಟಗಾರರ ಸಂಬಳ ಕಡಿತಗೊಳಿಸಲು ಪಾಕ್​ ಕ್ರಿಕೆಟ್​ ಮಂಡಳಿಯ ಅಧ್ಯಕ್ಷ ಮೊಹ್ಸಿನ್​ ನಖ್ವಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಪಾಕ್​ ಕ್ರಿಕೆಟ್​ ಮಂಡಳಿ ಕೂಡ ಈ ವಿಚಾರವನ್ನು ಗಂಭಿರವಾಗಿ ಪರಿಗಣಿಸಿದ್ದು ಉನ್ನತ ಮಟ್ಟದ ಸಭೆ ನಡೆಸಿ ಆಟಗಾರರ ಕೇಂದ್ರೀಯ ಗುತ್ತಿಗೆಯನ್ನು ಮರು ಪರಿಶೀಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪಾಕ್​ ತಂಡದ ವಿರುದ್ಧ ದೇಶದ್ರೋಹದ ಕೇಸ್‌


ನಿರಾಸದಾಯಕ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡದ ವಿರುದ್ಧ ಪಾಕ್‌ನ ಗುಜ್ರಾನ್ವಾಲಾ ನಗರದ ವಕೀಲರೊಬ್ಬರು ದೇಶದ್ರೋಹ ಕೇಸ್‌ ದಾಖಲಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಕೇಸ್‌ನ ಬಗ್ಗೆ ಜೂನ್​ 21ಕ್ಕೆ ಮುನ್ನ ವರದಿ ಸಲ್ಲಿಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ ಎಂದು ತಿಳಿದುಬಂದಿದೆ. ಪಾಕ್‌ ತಂಡದ ಕಳಪೆ ಪ್ರದರ್ಶನದಿಂದ ಹಣ ವ್ಯರ್ಥವಾಗುತ್ತಿದೆ ಮತ್ತು ರಾಷ್ಟ್ರದ ನಂಬಿಕೆಗೆ ದ್ರೋಹ ಉಂಟಾಗಿದೆ. ಆಟಗಾರರು ದೇಶದ ಬಗ್ಗೆ ಗೌರವಕ್ಕಿಂತ ಆರ್ಥಿಕ ಲಾಭಕ್ಕೆ ಆದ್ಯತೆ ನೀಡಿದ್ದಾರೆ ಎಂದು ಅರ್ಜಿದಾರ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾಗಿ ವರದಿಯಾಗಿದೆ.

Continue Reading

Latest

Viral News: 20 ತಿಂಗಳ ಮಗುವಿಗೆ ಸಿಗರೇಟ್ ಸೇದಿಸಲು, ಮದ್ಯ ಕುಡಿಸಲು ಯತ್ನಿಸಿದ ತಾಯಿ!

Viral News: ಮನೆಯ ಮೊದಲ ಪಾಠಶಾಲೆ ಜನನಿ ತಾನೇ ಮೊದಲು ಗುರು ಈ ವಾಕ್ಯವನ್ನು ಕೇಳದೇ ಇದ್ದವರು ಇರಲಿಕ್ಕಿಲ್ಲವೇನೋ. ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳಿಗೆ ಈ ವಾಕ್ಯ ಚಿರಪರಿಚಿತ. ಯಾಕೆಂದರೆ ಶಾಲೆಯ ಗೋಡೆಯ ಮೇಲೆ ಈ ವಾಕ್ಯದ ಬೋರ್ಡ್‌ಗಳನ್ನು ಅಂದಿನ ಶಿಕ್ಷಕರು ಹಾಕಿರುತ್ತಿದ್ದರು. ಆದರೆ ಈಗ ಆಗಿನ ಶಿಕ್ಷಣವೂ ಇಲ್ಲ, ಆ ತರಹದ ಶಿಕ್ಷಕರೂ ಇಲ್ಲ ಎನ್ನುವುದೇ ವಿಪರ್ಯಾಸ! ಇಷ್ಟೆಲ್ಲಾ ಪೀಠಿಕೆ ಯಾಕೆಂದರೆ ಇಲ್ಲೊಬ್ಬಳು ಮಹಾನ್‌ ತಾಯಿ ತನ್ನ ಮಗುವಿಗೆ ಸಿಗರೇಟ್ ಸೇದಲು ಮತ್ತು ಮದ್ಯಪಾನ ಮಾಡಲು ಒತ್ತಾಯಿಸಿದ ಘಟನೆಯೊಂದು ನಡೆದಿದೆ. ನಮ್ಮ ಸಮಾಜ ಎತ್ತಕಡೆ ಸಾಗುತ್ತಿದೆ ಎನ್ನುವುದೇ ಕಳವಳ ಮೂಡಿಸುತ್ತಿದೆ.

VISTARANEWS.COM


on

Viral News
Koo

ಹುಟ್ಟಿದ ಮಗುವಿಗೆ ಮೊದಲ ಗುರು ತಾಯಿಯೇ ಆಗಿರುತ್ತಾಳೆ. ಯಾಕೆಂದರೆ ತಾಯಿಯನ್ನು ನೋಡಿಯೇ ಮಕ್ಕಳು ಕಲಿಯುವುದರಿಂದ, ಮಕ್ಕಳು ತಾಯಿಯ ಜೊತೆ ಸಾಕಷ್ಟು ಸಮಯ ಕಳೆಯುವುದರಿಂದ ಮಕ್ಕಳ ಪಾಲಿಗೆ ಅವಳೇ ಗುರುವಾಗಿರುತ್ತಾಳೆ. ಮಕ್ಕಳು ಉತ್ತಮ ಸಂಸ್ಕಾರವಂತರಾದರೆ ಅದಕ್ಕೆ ಅವರ ತಾಯಿಯೇ ಕಾರಣೀಕರ್ತಳಾಗಿರುತ್ತಾಳೆ. ಇನ್ನು ತಾನು ಹಾಲೂಣಿಸಿ ಬೆಳೆಸಿದ ಮಗು ಕೆಟ್ಟದಾರಿ ಹಿಡಿದರೆ ಆ ತಾಯಿಗೆ ಆಗುವ ಅಘಾತ ಅಷ್ಟಿಷ್ಟಲ್ಲ. ಇಷ್ಟೆಲ್ಲಾ ಯಾಕೆ ಹೇಳುತ್ತಿರುವುದು ಎಂದರೆ ಇಲ್ಲೊಬ್ಬಳು ತಾಯಿ ಆ ಸ್ಥಾನಕ್ಕೆ ಅಪಮಾನ ಮಾಡಿದ್ದಾಳೆ. ತನ್ನ ಕರುಳಬಳ್ಳಿಗೆ ಕೆಟ್ಟ ಗುಣಗಳನ್ನು ಕಲಿಸುತ್ತಿರುವ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದೆ.

ಅಸ್ಸಾಂನ ಸಿಲ್ಚಾರ್‌ನ ಚೆಂಗ್ಕುರಿಯಲ್ಲಿ ಮಹಿಳೆಯೊಬ್ಬಳು ತನ್ನ 20 ತಿಂಗಳ ಮಗುವಿಗೆ ಸಿಗರೇಟ್ ಸೇದಲು ಮತ್ತು ಮದ್ಯಪಾನ ಮಾಡಲು ಒತ್ತಾಯಿಸಿದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟ ಪೋಟೊಗಳ ಆಧಾರದ ಮೇಲೆ ಸ್ಥಳೀಯ ಮಕ್ಕಳ ಸಹಾಯವಾಣಿ ಘಟಕವು ಮಹಿಳೆಯ ಮೇಲೆ ದೂರು ದಾಖಲಿಸಿದೆ ಎಂಬುದಾಗಿ ವರದಿಯಾಗಿದೆ. ದೂರಿನ ನಂತರ ಪೊಲೀಸರು ಮಹಿಳೆಯ ನಿವಾಸಕ್ಕೆ ತಲುಪಿ ಮಗುವನ್ನು ರಕ್ಷಿಸಿ ತಾಯಿಯನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

‘ಸಿಲ್ಚಾರ್ ನ ಚೆಂಗ್ಕುರಿಯಲ್ಲಿ ಬುಧವಾರ ರಾತ್ರಿ ತಾಯಿಯೊಬ್ಬಳು ಮಗುವನ್ನು ಧೂಮಪಾನ ಮತ್ತು ಮದ್ಯಪಾನ ಮಾಡುವಂತೆ ಒತ್ತಾಯಿಸುತ್ತಿರುವ ಬಗ್ಗೆ ಮಾಹಿತಿ ತಿಳಿದ ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಅವರು ಸೂಕ್ತ ಕ್ರಮ ಕೈಗೊಂಡು ತಾಯಿಯನ್ನು ವಶಕ್ಕೆ ತೆಗೆದುಕೊಂಡು ಮಗುವನ್ನು ರಕ್ಷಿಸಿದ್ದಾರೆ’ ಎಂದು ಮಕ್ಕಳ ಸಹಾಯವಾಣಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ತಾಯಿ ಮತ್ತು ಮಗು ಮಕ್ಕಳ ಕಲ್ಯಾಣ ಸಮಿತಿಯ ವಶದಲ್ಲಿದ್ದಾರೆ ಮತ್ತು ಸಮಗ್ರ ತನಿಖೆಗಾಗಿ ದೃಶ್ಯ ಪುರಾವೆಗಳನ್ನು ಪರಿಶೀಲಿಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ. ಈ ಘಟನೆಗೆ ಸಂಬಂಧಿಸಿದ ಪೋಟೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ಹಿನ್ನಲೆಯಲ್ಲಿ ಈ ಪೋಟೊಗೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ಅನೇಕರು ಮಹಿಳೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕೆಲವರು ಮಗುವನ್ನು ದತ್ತು ತೆಗೆದುಕೊಳ್ಳಲು ಬಯಸಿದ್ದಾರೆ. ಮತ್ತೊಬ್ಬರು, ಮಗುವನ್ನು ಪ್ರೀತಿ ಮತ್ತು ಜವಬ್ದಾರಿಯಿಂದ ನೋಡಿಕೊಳ್ಳುವ ಕುಟುಂಬಕ್ಕೆ ದತ್ತು ನೀಡಬೇಕು. ಅವಳು ತಾಯಿಯಾಗಲು ಯೋಗ್ಯಳಲ್ಲ. ವಿದೇಶಗಳಲ್ಲಿ ಇಂತಹ ತಾಯಿಗೆ ದೀರ್ಘಕಾಲದವರೆಗೆ ಜೈಲಿನಲ್ಲಿ ಬಂಧಿಯಾಗಿರುವಂತಹ ಶಿಕ್ಷೆ ನೀಡುತ್ತಾರೆ ಎಂದು ಪೋಸ್ಟ್ ಮಾಡಿದ್ದಾರೆ.

ಕೆಲವರು ಮಹಿಳೆಗೆ ಕೌನ್ಸಿಲಿಂಗ್ ಅಗತ್ಯವಿದೆ ಎಂದರೆ, ಇನ್ನೂ ಕೆಲವರು ಮಹಿಳೆಯರು ಸಹಾನುಭೂತಿಯ ಪ್ರತಿರೂಪವೆಂದು ಪರಿಗಣಿಸುವ ದಿನಗಳು ಕಳೆದುಹೋಗಿವೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪುರುಷರಿಗಿಂತ ಕೆಟ್ಟವರಾಗಿದ್ದಾರೆ ಎಂದು ಮಹಿಳಾ ಕುಲದ ಬಗ್ಗೆ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

ಇದೇರೀತಿಯ ಘಟನೆಯೊಂದು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಕಾಣಿಕೊಂಡಿದ್ದು, ಇದರಲ್ಲಿ ಮಹಿಳೆಯೊಬ್ಬಳು ತನ್ನ ಮಗುವನ್ನು ಎತ್ತಿಕೊಂಡು ಹಳೆಯ ಪ್ರಸಿದ್ಧ ಬಾಲಿವುಡ್ ಹಾಡಿಗೆ ರೀಲ್ಸ್ ಮಾಡುವಾಗ ಸಿಗರೇಟ್ ಸೇದುತ್ತಿರುವ ವಿಡಿಯೊ ಇದೆ. ಈ ವಿಡಿಯೊ ಕೂಡ ವೈರಲ್ ಆಗಿದ್ದು, ಅನೇಕರು ಮಹಿಳೆಯ ಮೇಲೆ ಕಿಡಿಕಾರಿದ್ದಾರೆ.

Continue Reading

Latest

Viral News: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು! ವಿಡಿಯೊ ನೋಡಿ

Viral News: ಆಹಾರವನ್ನು ಅನ್ನಪೂರ್ಣೆ ಎಂದು ಕಣ್ಣಿಗೊತ್ತಿ ಸೇವಿಸುವ ನಂಬಿಕೆಯುಳ್ಳ ಈ ದೇಶದಲ್ಲಿ ಇಂದು ತಿನ್ನುವ ಆಹಾರವನ್ನು ಅನುಮಾನದಿಂದ ನೋಡುವ ಕಾಲ ಬಂದಿದೆ. ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ. ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ.

VISTARANEWS.COM


on

Viral News
Koo

ಬಿಹಾರ : ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸರ್ಕಾರ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ನೀಡುತ್ತಿದೆ. ಅದರಂತೆ ಮಕ್ಕಳಿಗೆ ಮಧ್ಯಾಹ್ನದ ಊಟವನ್ನು ಶಾಲೆಯಲ್ಲಿಯೇ ತಯಾರಿಸಿ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಊಟ ಸೇವಿಸಿ ಹಲವು ಬಾರಿ ಮಕ್ಕಳು ಅಸ್ವಸ್ಥರಾದ ಬಗ್ಗೆ ನಾವು ಕೇಳಿದ್ದೇವೆ. ಅಂತಹದೊಂದು ಘಟನೆ ಬಿಹಾರದ ಬಂಕಾದಲ್ಲಿ ನಡೆದಿದ್ದು, ಈ ಬಗ್ಗೆ ಇಲ್ಲಿನ ವಿದ್ಯಾರ್ಥಿಯೊಬ್ಬ ಸಾಕ್ಷಿ ಸಮೇತ ನಿರೂಪಿಸಿದ್ದಾನೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ರಿಷಿ ಸಿಂಗ್ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್‌ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ. ಇದಕ್ಕೆ ಸಂಬಂಧಿಸಿದ ಪೋಟೊಗಳನ್ನು ಪೋಸ್ಟ್ ಮಾಡಿದ್ದಾನೆ.

ಹಾಗೇ ಮತ್ತೊಂದು ಪೋಸ್ಟ್ ನಲ್ಲಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬ್ರೆಡ್‌ನ ಬಗ್ಗೆ ತಿಳಿಸಿದ್ದಾನೆ. ಬ್ರೆಡ್‌ಗೆ ಅವಧಿ ಮೀರಿದ ಕಾರಣ ಅದರಲ್ಲಿ ಇರುವೆ, ಹುಳುಗಳು ಇವೆ. ಅದನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದು ವಿದ್ಯಾರ್ಥಿಗಳ ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ಅದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾನೆ.

ಅಲ್ಲದೇ ಇದರ ಕುರಿತು ಕ್ರಮ ತೆಗೆದುಕೊಳ್ಳಲು ಕಾಲೇಜು ಆಡಳಿತ ಮತ್ತು ಸ್ಥಳೀಯ ಪ್ರಾಧಿಕಾರ ಯಾರು ಮುಂದೆ ಬರುತ್ತಿಲ್ಲ ಎಂದು ವಿದ್ಯಾರ್ಥಿಯು ತಿಳಿಸಿದ್ದಾನೆ. ಹಾಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಬಂಕಾಗೆ ಟ್ಯಾಗ್ ಮಾಡಿದ್ದಾನೆ. ಜೂನ್ 17 ಸೋಮವಾರದಿಂದು ಈ ಘಟನೆ ವರದಿಯಾಗಿದೆ.

ಇದನ್ನೂ ಓದಿ: Viral Video: ಯುಪಿಎಸ್‌ಸಿ ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ; ಗೇಟ್ ಬಳಿ ಮೂರ್ಛೆ ಹೋದ ತಾಯಿ!

ಈ ಘಟನೆಯ ನಂತರ ಬಂಕಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಶುಲ್ ಕುಮಾರ್ ಮತ್ತು ಇತರ ಕೆಲವು ಅಧಿಕಾರಿಗಳು ಈ ವಿಷಯವನ್ನು ತನಿಖೆ ಮಾಡಲು ಮೆಸ್ ಗೆ ಭೇಟಿ ನೀಡಿದ್ದಾರೆ ಮತ್ತು ಮೆಸ್ ಮಾಲೀಕರಿಗೆ ದಂಡ ವಿಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

Latest

Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

Video Viral: ಮಹಿಳೆಯೊಬ್ಬಳು ಕಿರಿದಾದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಎದುರು ಬದಿಯಿಂದ ಓಡಿ ಬರುತ್ತಿರುವ ಎಮ್ಮೆ ಆಕೆಯನ್ನು ತಿವಿದಿದೆ. ಆಗ ಎಮ್ಮೆಯ ಕೊಂಬಿಗೆ ಮಹಿಳೆಯ ಉಡುಪು ಸಿಕ್ಕಿಹಾಕಿಕೊಂಡಿದ್ದ ಪರಿಣಾಮ ಬೀದಿಯಲ್ಲಿ 500 ಮೀಗಳಷ್ಟು ದೂರ ಅದು ಎಳೆದುಕೊಂಡು ಹೋಗಿದೆ. ಕೊನೆಗೆ ಸ್ಥಳೀಯರು ಎಮ್ಮೆಯಿಂದ ಮಹಿಳೆಯನ್ನು ಕಾಪಾಡಿದ್ದಾರೆ. ಹಾಗೇ ಆಕೆಗೆ ಗಂಭೀರ ಗಾಯಗಳಾದ ಹಿನ್ನೆಲೆ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

VISTARANEWS.COM


on

Viral Video
Koo

ಚೆನ್ನೈ : ಮಹಿಳೆಯೊಬ್ಬಳನ್ನು ಎಮ್ಮೆಯೊಂದು ರಸ್ತೆಯುದ್ದಕ್ಕೂ 500 ಮೀಗಳಷ್ಟು ದೂರ ತಿವಿದುಕೊಂಡು ಹೋಗಿ ಗಂಭೀರವಾಗಿ ಗಾಯಗೊಳಿಸಿದ ಆಘಾತಕಾರಿ ಘಟನೆ ಚೆನ್ನೈನ ತಿರುವೊಟ್ರಿಯೂರ್‌ನಲ್ಲಿ ನಡೆದಿದೆ. ಈ ಘಟನೆ ಸಿಸಿಟಿಯಲ್ಲಿ ಸೆರೆಯಾಗಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಇದೀಗ ಸಿಕ್ಕಾಪಟ್ಟೆ ವೈರಲ್ (Video Viral) ಆಗಿದೆ.

ವಿಡಿಯೊದಲ್ಲಿ ಮಹಿಳೆಯನ್ನು ಎಮ್ಮೆ ಎಳೆದುಕೊಂಡು ಹೋಗುತ್ತಿದ್ದು, ಅನೇಕರು ಮಹಿಳೆಗೆ ಸಹಾಯ ಮಾಡಲು ಅದರ ಹಿಂದೆ ಓಡಿ ಬರುತ್ತಿರುವ ದೃಶ್ಯ ಕಂಡುಬಂದಿದೆ. ಭಾನುವಾರ ಮಧ್ಯಾಹ್ನದ ವೇಳೆ 35 ವರ್ಷದ ಈ ಮಹಿಳೆ ಗ್ರಾಮದ ಕಿರಿದಾದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಎದುರು ಬದಿಯಿಂದ ಓಡಿ ಬರುತ್ತಿರುವ ಎಮ್ಮೆ ಆಕೆಯನ್ನು ತಿವಿದಿದೆ. ಆಗ ಎಮ್ಮೆಯ ಕೊಂಬಿಗೆ ಮಹಿಳೆಯ ಉಡುಪು ಸಿಕ್ಕಿಹಾಕಿಕೊಂಡಿದ್ದ ಪರಿಣಾಮ ಬೀದಿಯಲ್ಲಿ 500 ಮೀಗಳಷ್ಟು ದೂರ ಅದು ಎಳೆದುಕೊಂಡು ಹೋಗಿದೆ. ಕೊನೆಗೆ ಸ್ಥಳೀಯರು ಎಮ್ಮೆಯಿಂದ ಮಹಿಳೆಯನ್ನು ಕಾಪಾಡಿದ್ದಾರೆ. ಹಾಗೇ ಆಕೆಗೆ ಗಂಭೀರ ಗಾಯಗಳಾದ ಹಿನ್ನೆಲೆ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮಹಿಳೆಗೆ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿದ್ದು ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಮತ್ತು ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮಹಿಳೆಯನ್ನು ಎಮ್ಮೆಯಿಂದ ಬಿಡಿಸಿದ ನಂತರ ಆ ಎಮ್ಮೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಸಿಕ್ಕ ಸಿಕ್ಕ ವಾಹನಗಳನ್ನು ಕೆಡವಿದೆ. ಹಾಗಾಗಿ ಎಮ್ಮೆಯನ್ನು ಸೆರೆ ಹಿಡಿಯಲು ಗ್ರೇಟರ್ ಚೆನ್ನೈ ಕಾರ್ಪೋರೇಷನ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅದನ್ನು ಹಿಡಿದು, ಪುಲಿಯಂಥೋಪ್‌ನಲ್ಲಿರುವ ಗ್ರೇಟರ್ ಚೆನ್ನೈ ಕಾರ್ಪೋರೇಷನ್‌ ಆಶ್ರಯಕ್ಕೆ ಕರೆದೊಯ್ಯಲಾಯಿತು ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

ಈ ವರ್ಷದ ಕಾರ್ಪೋರೇಷನ್ ಬಜೆಟ್ ಮಂಡನೆಯ ವೇಳೆ ಮೇಯರ್ ಆರ್. ಪ್ರಿಯಾ ಅವರು ನಗರದಾದ್ಯಂತ ಹಸುಗಳಿಗೆ ಪರವಾನಗಿ ಮತ್ತು ದಕ್ಷಿಣ ಚೆನ್ನೈನಲ್ಲಿ ಹೆಚ್ಚುವರಿ ಆಶ್ರಯಗಳ ಸ್ಥಾಪನೆಯ ಯೋಜನೆ ಜಾರಿಗೊಳಿಸಿದ್ದರು. ಆದರೆ ಲೋಕಸಭಾ ಚುನಾವಣೆಯ ಕಾರಣದಿಂದ ಈ ಎರಡೂ ಯೋಜನೆಗಳಿಗೆ ಕೆಲಸ ಪ್ರಾರಂಭಿಸಲು ಸಾಧ್ಯವಾಗಿಲ್ಲ ಎಂಬುದಾಗಿ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
wild animals Attack
ಕೊಡಗು5 mins ago

Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

Viral Video
ಕ್ರಿಕೆಟ್19 mins ago

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Kempegowda Jayanti
ಕರ್ನಾಟಕ25 mins ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Train Accident
ದೇಶ25 mins ago

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Mumbai News
ದೇಶ55 mins ago

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

prajwal revanna case test
ಪ್ರಮುಖ ಸುದ್ದಿ58 mins ago

Prajwal Revanna Case: ʼಮತ್ತೆ ಮತ್ತೆ ಅದನ್ನು ತೋರಿಸೋಕೆ ಮುಜುಗರ….ʼ ಜಡ್ಜ್‌ ಮುಂದೆ ಅಲವತ್ತುಕೊಂಡ ಪ್ರಜ್ವಲ್!‌

Gemini Mobile App
ತಂತ್ರಜ್ಞಾನ1 hour ago

Gemini Mobile App: ಕನ್ನಡ ಸೇರಿದಂತೆ 9 ಭಾರತೀಯ ಭಾಷೆಗಳಲ್ಲಿ ಗೂಗಲ್ ಜೆಮಿನಿ ಆ್ಯಪ್; ಏನಿದರ ಉಪಯೋಗ?

SA vs USA
ಕ್ರೀಡೆ1 hour ago

SA vs USA: ನಾಳೆ ಮೊದಲ ಸೂಪರ್​-8 ಪಂದ್ಯ; ಅಮೆರಿಕ ಸವಾಲಿಗೆ ಹರಿಣ ಪಡೆ ಸಿದ್ಧ

Kolar News
ಕೋಲಾರ1 hour ago

Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

Actor Darshan
ಕರ್ನಾಟಕ1 hour ago

Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌