Viral Video : ವಿಮಾನದಲ್ಲಿ ಒಬ್ಬನೇ ಒಬ್ಬ ಪ್ರಯಾಣಿಕ! ಇದು ವಿಳಂಬದ ಎಫೆಕ್ಟ್‌ - Vistara News

ವೈರಲ್ ನ್ಯೂಸ್

Viral Video : ವಿಮಾನದಲ್ಲಿ ಒಬ್ಬನೇ ಒಬ್ಬ ಪ್ರಯಾಣಿಕ! ಇದು ವಿಳಂಬದ ಎಫೆಕ್ಟ್‌

ವಿಮಾನ ನಿಗದಿತ ಸಮಯಕ್ಕಿಂತ 18 ತಾಸು ವಿಳಂಬವಾದ ಹಿನ್ನೆಲೆ ಒಬ್ಬನೇ ಪ್ರಯಾಣಿಕ ವಿಮಾನದಲ್ಲಿ ಪ್ರಯಾಣ ಮಾಡಿದ ವಿಶೇಷ ಘಟನೆ ನಡೆದಿದೆ. ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ.

VISTARANEWS.COM


on

flight journey
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಮಾನದಲ್ಲಿ ಪ್ರಯಾಣ ಮಾಡುವುದಕ್ಕೆಂದು ಪೂರ್ತಿ ಸಿದ್ಧತೆ ಮಾಡಿಕೊಂಡು ವಿಮಾನ ನಿಲ್ದಾಣಕ್ಕೆ ಹೋಗಿರುತ್ತೀರಿ. ಆಗ ನಿಮ್ಮ ವಿಮಾನ ಬರೋಬ್ಬರಿ 18 ತಾಸು ವಿಳಂಬಗೊಂಡಿದೆ ಎಂದು ಘೋಷಣೆಯಾಗಿಬಿಟ್ಟರೆ ಏನು ಮಾಡುತ್ತೀರಿ? ಒಂದೋ ಬೇರೊಂದು ವಿಮಾನ ಹತ್ತುತ್ತೀರಿ. ಇಲ್ಲವೇ ಮನೆಗೆ ವಾಪಸು ಬರುತ್ತೀರಿ ಅಲ್ಲವೆ? ಆದರೆ ಇಲ್ಲೊಬ್ಬ ವ್ಯಕ್ತಿ ಅದ್ಯಾವುದನ್ನೂ ಮಾಡದೆ ಬರೋಬ್ಬರಿ 18 ತಾಸು ಕಾದು ವಿಮಾನ ಹತ್ತಿದ್ದಾನೆ. ಆಗ ಆತನಿಗೆ ಆದ ಅನುಭವ ಪೂರ್ತಿ ಜೀವನದಲ್ಲಿ (Viral Video) ಮರೆಯುವಂಥದ್ದಲ್ಲ.

ಅಮೆರಿಕನ್‌ ಏರ್‌ಲೈನ್‌ ವಿಮಾನವೊಂದರಲ್ಲಿ ಇಂತಹ ವಿಶೇಷ ಘಟನೆ ನಡೆದಿದೆ. ಫಿಲ್‌ ಸ್ಟ್ರಿಂಜರ್‌ ಹೆಸರಿನ ವ್ಯಕ್ತಿ 18 ತಾಸುಗಳನ್ನು ವಿಮಾನ ನಿಲ್ದಾಣದಲ್ಲೇ ಕಳೆದು ನಂತರ ವಿಮಾನ ಬಂದಾಗ ಹತ್ತಿದ್ದಾನೆ. ವಿಶೇಷವೆಂದರೆ ಆ ವಿಮಾನ ಬಂದಾಗ ಅದನ್ನು ಹತ್ತಲೆಂದು ಹೋದವನು ಅವನೊಬ್ಬನೇ. ಆ ವಿಮಾನದ ಟಿಕೆಟ್‌ ಬುಕ್ಕಿಂಗ್‌ ಮಾಡಿಕೊಂಡಿದ್ದ ಎಲ್ಲರೂ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಂಡು ವಿಮಾನ ನಿಲ್ದಾಣದಿಂದ ಹೊರ ನಡೆದಿದ್ದರು.

ಇದನ್ನೂ ಓದಿ: Viral Video : ಕತ್ತಲೆ ತುಂಬಿದ ಮನೆಗೆ ಬೆಳಕು ತಂದ ಐಪಿಎಸ್‌ ಅಧಿಕಾರಿ!
ವಿಮಾನದ ಸಿಬ್ಬಂದಿಗಳೊಂದಿಗೆ ತಾನೊಬ್ಬನೇ ಪ್ರಯಾಣ ಮಾಡಿದ ವಿಡಿಯೊವನ್ನು ಫಿಲ್‌ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾನೆ. ಸಿಬ್ಬಂದಿ ಆತನೊಂದಿಗೆ ಎಂಜಾಯ್‌ ಮಾಡಿದ್ದು, ವಿಮಾನದೊಳಗೆ ಕುಳಿತುಕೊಂಡು ಫೋಟೋಗಳನ್ನು ತೆಗೆದುಕೊಂಡ ದೃಶ್ಯಗಳನ್ನೆಲ್ಲ ಆತ ವಿಡಿಯೊದಲ್ಲಿ ತೋರಿಸಿದ್ದಾನೆ.

ಫಿಲ್‌ ಅವರ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಎರಡು ಲಕ್ಷಕ್ಕೂ ಅಧಿಕ ಜನರಿಂದ ವೀಕ್ಷಣೆ ಪಡೆದುಕೊಂಡಿದೆ. ಸಾವಿರಾರು ಮಂದಿ ವಿಡಿಯೊಗೆ ಲೈಕ್‌ ಮಾಡಿದ್ದಾರೆ. ಹಲವಾರು ಮಂದಿ ವಿವಿಧ ರೀತಿಯ ಕಾಮೆಂಟ್‌ಗಳನ್ನೂ ಮಾಡಿದ್ದಾರೆ. “ನಾನು ಪ್ರಯಾಣಿಸುವ ವಿಮಾನಗಳೂ ಇದೇ ರೀತಿಯಲ್ಲಿ ಇರುವುದಾಗಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು” ಎಂದು ಅನೇಕರು ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ಫಿಲ್‌ ಅವರು ತಮ್ಮ ವಿಮಾನ ಪ್ರಯಾಣ ಮುಗಿಸಿದ ಮೇಲೆ ಏನಾಯಿತು ಎನ್ನುವುದನ್ನೂ ಮತ್ತೊಂದು ವಿಡಿಯೊ ಮೂಲಕ ಹಂಚಿಕೊಂಡಿದ್ದಾರೆ. ವಿಮಾನ ಮುಂಜಾನೆ ನಾಲ್ಕು ಗಂಟೆಗೇ ಲ್ಯಾಂಡಿಂಗ್‌ ಆಯಿತು. ಆದರೆ ನನ್ನ ಲಗೇಜ್‌ ಇನ್ನೂ ಬಂದಿಲ್ಲ. ಹಾಗಾಗಿ ವಿಮಾನ ನಿಲ್ದಾಣದಲ್ಲೇ ಕುಳಿತುಕೊಂಡು ಕಾಯುವಂತಾಗಿದೆ ಎಂದು ಅವರು ವಿಡಿಯೊದಲ್ಲಿ ಮಾಹಿತಿ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral News: 20 ತಿಂಗಳ ಮಗುವಿಗೆ ಸಿಗರೇಟ್ ಸೇದಿಸಲು, ಮದ್ಯ ಕುಡಿಸಲು ಯತ್ನಿಸಿದ ತಾಯಿ!

Viral News: ಮನೆಯ ಮೊದಲ ಪಾಠಶಾಲೆ ಜನನಿ ತಾನೇ ಮೊದಲು ಗುರು ಈ ವಾಕ್ಯವನ್ನು ಕೇಳದೇ ಇದ್ದವರು ಇರಲಿಕ್ಕಿಲ್ಲವೇನೋ. ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳಿಗೆ ಈ ವಾಕ್ಯ ಚಿರಪರಿಚಿತ. ಯಾಕೆಂದರೆ ಶಾಲೆಯ ಗೋಡೆಯ ಮೇಲೆ ಈ ವಾಕ್ಯದ ಬೋರ್ಡ್‌ಗಳನ್ನು ಅಂದಿನ ಶಿಕ್ಷಕರು ಹಾಕಿರುತ್ತಿದ್ದರು. ಆದರೆ ಈಗ ಆಗಿನ ಶಿಕ್ಷಣವೂ ಇಲ್ಲ, ಆ ತರಹದ ಶಿಕ್ಷಕರೂ ಇಲ್ಲ ಎನ್ನುವುದೇ ವಿಪರ್ಯಾಸ! ಇಷ್ಟೆಲ್ಲಾ ಪೀಠಿಕೆ ಯಾಕೆಂದರೆ ಇಲ್ಲೊಬ್ಬಳು ಮಹಾನ್‌ ತಾಯಿ ತನ್ನ ಮಗುವಿಗೆ ಸಿಗರೇಟ್ ಸೇದಲು ಮತ್ತು ಮದ್ಯಪಾನ ಮಾಡಲು ಒತ್ತಾಯಿಸಿದ ಘಟನೆಯೊಂದು ನಡೆದಿದೆ. ನಮ್ಮ ಸಮಾಜ ಎತ್ತಕಡೆ ಸಾಗುತ್ತಿದೆ ಎನ್ನುವುದೇ ಕಳವಳ ಮೂಡಿಸುತ್ತಿದೆ.

VISTARANEWS.COM


on

Viral News
Koo

ಹುಟ್ಟಿದ ಮಗುವಿಗೆ ಮೊದಲ ಗುರು ತಾಯಿಯೇ ಆಗಿರುತ್ತಾಳೆ. ಯಾಕೆಂದರೆ ತಾಯಿಯನ್ನು ನೋಡಿಯೇ ಮಕ್ಕಳು ಕಲಿಯುವುದರಿಂದ, ಮಕ್ಕಳು ತಾಯಿಯ ಜೊತೆ ಸಾಕಷ್ಟು ಸಮಯ ಕಳೆಯುವುದರಿಂದ ಮಕ್ಕಳ ಪಾಲಿಗೆ ಅವಳೇ ಗುರುವಾಗಿರುತ್ತಾಳೆ. ಮಕ್ಕಳು ಉತ್ತಮ ಸಂಸ್ಕಾರವಂತರಾದರೆ ಅದಕ್ಕೆ ಅವರ ತಾಯಿಯೇ ಕಾರಣೀಕರ್ತಳಾಗಿರುತ್ತಾಳೆ. ಇನ್ನು ತಾನು ಹಾಲೂಣಿಸಿ ಬೆಳೆಸಿದ ಮಗು ಕೆಟ್ಟದಾರಿ ಹಿಡಿದರೆ ಆ ತಾಯಿಗೆ ಆಗುವ ಅಘಾತ ಅಷ್ಟಿಷ್ಟಲ್ಲ. ಇಷ್ಟೆಲ್ಲಾ ಯಾಕೆ ಹೇಳುತ್ತಿರುವುದು ಎಂದರೆ ಇಲ್ಲೊಬ್ಬಳು ತಾಯಿ ಆ ಸ್ಥಾನಕ್ಕೆ ಅಪಮಾನ ಮಾಡಿದ್ದಾಳೆ. ತನ್ನ ಕರುಳಬಳ್ಳಿಗೆ ಕೆಟ್ಟ ಗುಣಗಳನ್ನು ಕಲಿಸುತ್ತಿರುವ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದೆ.

ಅಸ್ಸಾಂನ ಸಿಲ್ಚಾರ್‌ನ ಚೆಂಗ್ಕುರಿಯಲ್ಲಿ ಮಹಿಳೆಯೊಬ್ಬಳು ತನ್ನ 20 ತಿಂಗಳ ಮಗುವಿಗೆ ಸಿಗರೇಟ್ ಸೇದಲು ಮತ್ತು ಮದ್ಯಪಾನ ಮಾಡಲು ಒತ್ತಾಯಿಸಿದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟ ಪೋಟೊಗಳ ಆಧಾರದ ಮೇಲೆ ಸ್ಥಳೀಯ ಮಕ್ಕಳ ಸಹಾಯವಾಣಿ ಘಟಕವು ಮಹಿಳೆಯ ಮೇಲೆ ದೂರು ದಾಖಲಿಸಿದೆ ಎಂಬುದಾಗಿ ವರದಿಯಾಗಿದೆ. ದೂರಿನ ನಂತರ ಪೊಲೀಸರು ಮಹಿಳೆಯ ನಿವಾಸಕ್ಕೆ ತಲುಪಿ ಮಗುವನ್ನು ರಕ್ಷಿಸಿ ತಾಯಿಯನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

‘ಸಿಲ್ಚಾರ್ ನ ಚೆಂಗ್ಕುರಿಯಲ್ಲಿ ಬುಧವಾರ ರಾತ್ರಿ ತಾಯಿಯೊಬ್ಬಳು ಮಗುವನ್ನು ಧೂಮಪಾನ ಮತ್ತು ಮದ್ಯಪಾನ ಮಾಡುವಂತೆ ಒತ್ತಾಯಿಸುತ್ತಿರುವ ಬಗ್ಗೆ ಮಾಹಿತಿ ತಿಳಿದ ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಅವರು ಸೂಕ್ತ ಕ್ರಮ ಕೈಗೊಂಡು ತಾಯಿಯನ್ನು ವಶಕ್ಕೆ ತೆಗೆದುಕೊಂಡು ಮಗುವನ್ನು ರಕ್ಷಿಸಿದ್ದಾರೆ’ ಎಂದು ಮಕ್ಕಳ ಸಹಾಯವಾಣಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ತಾಯಿ ಮತ್ತು ಮಗು ಮಕ್ಕಳ ಕಲ್ಯಾಣ ಸಮಿತಿಯ ವಶದಲ್ಲಿದ್ದಾರೆ ಮತ್ತು ಸಮಗ್ರ ತನಿಖೆಗಾಗಿ ದೃಶ್ಯ ಪುರಾವೆಗಳನ್ನು ಪರಿಶೀಲಿಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ. ಈ ಘಟನೆಗೆ ಸಂಬಂಧಿಸಿದ ಪೋಟೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ಹಿನ್ನಲೆಯಲ್ಲಿ ಈ ಪೋಟೊಗೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ಅನೇಕರು ಮಹಿಳೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕೆಲವರು ಮಗುವನ್ನು ದತ್ತು ತೆಗೆದುಕೊಳ್ಳಲು ಬಯಸಿದ್ದಾರೆ. ಮತ್ತೊಬ್ಬರು, ಮಗುವನ್ನು ಪ್ರೀತಿ ಮತ್ತು ಜವಬ್ದಾರಿಯಿಂದ ನೋಡಿಕೊಳ್ಳುವ ಕುಟುಂಬಕ್ಕೆ ದತ್ತು ನೀಡಬೇಕು. ಅವಳು ತಾಯಿಯಾಗಲು ಯೋಗ್ಯಳಲ್ಲ. ವಿದೇಶಗಳಲ್ಲಿ ಇಂತಹ ತಾಯಿಗೆ ದೀರ್ಘಕಾಲದವರೆಗೆ ಜೈಲಿನಲ್ಲಿ ಬಂಧಿಯಾಗಿರುವಂತಹ ಶಿಕ್ಷೆ ನೀಡುತ್ತಾರೆ ಎಂದು ಪೋಸ್ಟ್ ಮಾಡಿದ್ದಾರೆ.

ಕೆಲವರು ಮಹಿಳೆಗೆ ಕೌನ್ಸಿಲಿಂಗ್ ಅಗತ್ಯವಿದೆ ಎಂದರೆ, ಇನ್ನೂ ಕೆಲವರು ಮಹಿಳೆಯರು ಸಹಾನುಭೂತಿಯ ಪ್ರತಿರೂಪವೆಂದು ಪರಿಗಣಿಸುವ ದಿನಗಳು ಕಳೆದುಹೋಗಿವೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪುರುಷರಿಗಿಂತ ಕೆಟ್ಟವರಾಗಿದ್ದಾರೆ ಎಂದು ಮಹಿಳಾ ಕುಲದ ಬಗ್ಗೆ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

ಇದೇರೀತಿಯ ಘಟನೆಯೊಂದು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಕಾಣಿಕೊಂಡಿದ್ದು, ಇದರಲ್ಲಿ ಮಹಿಳೆಯೊಬ್ಬಳು ತನ್ನ ಮಗುವನ್ನು ಎತ್ತಿಕೊಂಡು ಹಳೆಯ ಪ್ರಸಿದ್ಧ ಬಾಲಿವುಡ್ ಹಾಡಿಗೆ ರೀಲ್ಸ್ ಮಾಡುವಾಗ ಸಿಗರೇಟ್ ಸೇದುತ್ತಿರುವ ವಿಡಿಯೊ ಇದೆ. ಈ ವಿಡಿಯೊ ಕೂಡ ವೈರಲ್ ಆಗಿದ್ದು, ಅನೇಕರು ಮಹಿಳೆಯ ಮೇಲೆ ಕಿಡಿಕಾರಿದ್ದಾರೆ.

Continue Reading

Latest

Viral News: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು! ವಿಡಿಯೊ ನೋಡಿ

Viral News: ಆಹಾರವನ್ನು ಅನ್ನಪೂರ್ಣೆ ಎಂದು ಕಣ್ಣಿಗೊತ್ತಿ ಸೇವಿಸುವ ನಂಬಿಕೆಯುಳ್ಳ ಈ ದೇಶದಲ್ಲಿ ಇಂದು ತಿನ್ನುವ ಆಹಾರವನ್ನು ಅನುಮಾನದಿಂದ ನೋಡುವ ಕಾಲ ಬಂದಿದೆ. ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ. ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ.

VISTARANEWS.COM


on

Viral News
Koo

ಬಿಹಾರ : ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸರ್ಕಾರ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ನೀಡುತ್ತಿದೆ. ಅದರಂತೆ ಮಕ್ಕಳಿಗೆ ಮಧ್ಯಾಹ್ನದ ಊಟವನ್ನು ಶಾಲೆಯಲ್ಲಿಯೇ ತಯಾರಿಸಿ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಊಟ ಸೇವಿಸಿ ಹಲವು ಬಾರಿ ಮಕ್ಕಳು ಅಸ್ವಸ್ಥರಾದ ಬಗ್ಗೆ ನಾವು ಕೇಳಿದ್ದೇವೆ. ಅಂತಹದೊಂದು ಘಟನೆ ಬಿಹಾರದ ಬಂಕಾದಲ್ಲಿ ನಡೆದಿದ್ದು, ಈ ಬಗ್ಗೆ ಇಲ್ಲಿನ ವಿದ್ಯಾರ್ಥಿಯೊಬ್ಬ ಸಾಕ್ಷಿ ಸಮೇತ ನಿರೂಪಿಸಿದ್ದಾನೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ರಿಷಿ ಸಿಂಗ್ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್‌ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ. ಇದಕ್ಕೆ ಸಂಬಂಧಿಸಿದ ಪೋಟೊಗಳನ್ನು ಪೋಸ್ಟ್ ಮಾಡಿದ್ದಾನೆ.

ಹಾಗೇ ಮತ್ತೊಂದು ಪೋಸ್ಟ್ ನಲ್ಲಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬ್ರೆಡ್‌ನ ಬಗ್ಗೆ ತಿಳಿಸಿದ್ದಾನೆ. ಬ್ರೆಡ್‌ಗೆ ಅವಧಿ ಮೀರಿದ ಕಾರಣ ಅದರಲ್ಲಿ ಇರುವೆ, ಹುಳುಗಳು ಇವೆ. ಅದನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದು ವಿದ್ಯಾರ್ಥಿಗಳ ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ಅದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾನೆ.

ಅಲ್ಲದೇ ಇದರ ಕುರಿತು ಕ್ರಮ ತೆಗೆದುಕೊಳ್ಳಲು ಕಾಲೇಜು ಆಡಳಿತ ಮತ್ತು ಸ್ಥಳೀಯ ಪ್ರಾಧಿಕಾರ ಯಾರು ಮುಂದೆ ಬರುತ್ತಿಲ್ಲ ಎಂದು ವಿದ್ಯಾರ್ಥಿಯು ತಿಳಿಸಿದ್ದಾನೆ. ಹಾಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಬಂಕಾಗೆ ಟ್ಯಾಗ್ ಮಾಡಿದ್ದಾನೆ. ಜೂನ್ 17 ಸೋಮವಾರದಿಂದು ಈ ಘಟನೆ ವರದಿಯಾಗಿದೆ.

ಇದನ್ನೂ ಓದಿ: Viral Video: ಯುಪಿಎಸ್‌ಸಿ ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ; ಗೇಟ್ ಬಳಿ ಮೂರ್ಛೆ ಹೋದ ತಾಯಿ!

ಈ ಘಟನೆಯ ನಂತರ ಬಂಕಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಶುಲ್ ಕುಮಾರ್ ಮತ್ತು ಇತರ ಕೆಲವು ಅಧಿಕಾರಿಗಳು ಈ ವಿಷಯವನ್ನು ತನಿಖೆ ಮಾಡಲು ಮೆಸ್ ಗೆ ಭೇಟಿ ನೀಡಿದ್ದಾರೆ ಮತ್ತು ಮೆಸ್ ಮಾಲೀಕರಿಗೆ ದಂಡ ವಿಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

Latest

Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

Video Viral: ಮಹಿಳೆಯೊಬ್ಬಳು ಕಿರಿದಾದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಎದುರು ಬದಿಯಿಂದ ಓಡಿ ಬರುತ್ತಿರುವ ಎಮ್ಮೆ ಆಕೆಯನ್ನು ತಿವಿದಿದೆ. ಆಗ ಎಮ್ಮೆಯ ಕೊಂಬಿಗೆ ಮಹಿಳೆಯ ಉಡುಪು ಸಿಕ್ಕಿಹಾಕಿಕೊಂಡಿದ್ದ ಪರಿಣಾಮ ಬೀದಿಯಲ್ಲಿ 500 ಮೀಗಳಷ್ಟು ದೂರ ಅದು ಎಳೆದುಕೊಂಡು ಹೋಗಿದೆ. ಕೊನೆಗೆ ಸ್ಥಳೀಯರು ಎಮ್ಮೆಯಿಂದ ಮಹಿಳೆಯನ್ನು ಕಾಪಾಡಿದ್ದಾರೆ. ಹಾಗೇ ಆಕೆಗೆ ಗಂಭೀರ ಗಾಯಗಳಾದ ಹಿನ್ನೆಲೆ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

VISTARANEWS.COM


on

Viral Video
Koo

ಚೆನ್ನೈ : ಮಹಿಳೆಯೊಬ್ಬಳನ್ನು ಎಮ್ಮೆಯೊಂದು ರಸ್ತೆಯುದ್ದಕ್ಕೂ 500 ಮೀಗಳಷ್ಟು ದೂರ ತಿವಿದುಕೊಂಡು ಹೋಗಿ ಗಂಭೀರವಾಗಿ ಗಾಯಗೊಳಿಸಿದ ಆಘಾತಕಾರಿ ಘಟನೆ ಚೆನ್ನೈನ ತಿರುವೊಟ್ರಿಯೂರ್‌ನಲ್ಲಿ ನಡೆದಿದೆ. ಈ ಘಟನೆ ಸಿಸಿಟಿಯಲ್ಲಿ ಸೆರೆಯಾಗಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಇದೀಗ ಸಿಕ್ಕಾಪಟ್ಟೆ ವೈರಲ್ (Video Viral) ಆಗಿದೆ.

ವಿಡಿಯೊದಲ್ಲಿ ಮಹಿಳೆಯನ್ನು ಎಮ್ಮೆ ಎಳೆದುಕೊಂಡು ಹೋಗುತ್ತಿದ್ದು, ಅನೇಕರು ಮಹಿಳೆಗೆ ಸಹಾಯ ಮಾಡಲು ಅದರ ಹಿಂದೆ ಓಡಿ ಬರುತ್ತಿರುವ ದೃಶ್ಯ ಕಂಡುಬಂದಿದೆ. ಭಾನುವಾರ ಮಧ್ಯಾಹ್ನದ ವೇಳೆ 35 ವರ್ಷದ ಈ ಮಹಿಳೆ ಗ್ರಾಮದ ಕಿರಿದಾದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಎದುರು ಬದಿಯಿಂದ ಓಡಿ ಬರುತ್ತಿರುವ ಎಮ್ಮೆ ಆಕೆಯನ್ನು ತಿವಿದಿದೆ. ಆಗ ಎಮ್ಮೆಯ ಕೊಂಬಿಗೆ ಮಹಿಳೆಯ ಉಡುಪು ಸಿಕ್ಕಿಹಾಕಿಕೊಂಡಿದ್ದ ಪರಿಣಾಮ ಬೀದಿಯಲ್ಲಿ 500 ಮೀಗಳಷ್ಟು ದೂರ ಅದು ಎಳೆದುಕೊಂಡು ಹೋಗಿದೆ. ಕೊನೆಗೆ ಸ್ಥಳೀಯರು ಎಮ್ಮೆಯಿಂದ ಮಹಿಳೆಯನ್ನು ಕಾಪಾಡಿದ್ದಾರೆ. ಹಾಗೇ ಆಕೆಗೆ ಗಂಭೀರ ಗಾಯಗಳಾದ ಹಿನ್ನೆಲೆ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮಹಿಳೆಗೆ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿದ್ದು ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಮತ್ತು ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮಹಿಳೆಯನ್ನು ಎಮ್ಮೆಯಿಂದ ಬಿಡಿಸಿದ ನಂತರ ಆ ಎಮ್ಮೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಸಿಕ್ಕ ಸಿಕ್ಕ ವಾಹನಗಳನ್ನು ಕೆಡವಿದೆ. ಹಾಗಾಗಿ ಎಮ್ಮೆಯನ್ನು ಸೆರೆ ಹಿಡಿಯಲು ಗ್ರೇಟರ್ ಚೆನ್ನೈ ಕಾರ್ಪೋರೇಷನ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅದನ್ನು ಹಿಡಿದು, ಪುಲಿಯಂಥೋಪ್‌ನಲ್ಲಿರುವ ಗ್ರೇಟರ್ ಚೆನ್ನೈ ಕಾರ್ಪೋರೇಷನ್‌ ಆಶ್ರಯಕ್ಕೆ ಕರೆದೊಯ್ಯಲಾಯಿತು ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

ಈ ವರ್ಷದ ಕಾರ್ಪೋರೇಷನ್ ಬಜೆಟ್ ಮಂಡನೆಯ ವೇಳೆ ಮೇಯರ್ ಆರ್. ಪ್ರಿಯಾ ಅವರು ನಗರದಾದ್ಯಂತ ಹಸುಗಳಿಗೆ ಪರವಾನಗಿ ಮತ್ತು ದಕ್ಷಿಣ ಚೆನ್ನೈನಲ್ಲಿ ಹೆಚ್ಚುವರಿ ಆಶ್ರಯಗಳ ಸ್ಥಾಪನೆಯ ಯೋಜನೆ ಜಾರಿಗೊಳಿಸಿದ್ದರು. ಆದರೆ ಲೋಕಸಭಾ ಚುನಾವಣೆಯ ಕಾರಣದಿಂದ ಈ ಎರಡೂ ಯೋಜನೆಗಳಿಗೆ ಕೆಲಸ ಪ್ರಾರಂಭಿಸಲು ಸಾಧ್ಯವಾಗಿಲ್ಲ ಎಂಬುದಾಗಿ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

Latest

Viral Video: ಗಂಭೀರ ಸ್ಥಿತಿಯಲ್ಲಿರುವ ಅಪ್ಪನ ಆಸೆ ಈಡೇರಿಕೆ; ಆಸ್ಪತ್ರೆಯ ಐಸಿಯುನಲ್ಲೇ ಮಗಳ ಮದುವೆ!

Viral Video: ಹೆಣ್ಣುಮಕ್ಕಳ ಮದುವೆಯನ್ನು ಕಣ್ತುಂಬಿಸಿಕೊಳ್ಳಬೇಕು ಎಂಬ ಆಸೆ ಎಲ್ಲಾ ತಂದೆಯರಿಗಿರುತ್ತದೆ. ಆದರೆ ಆ ಸಂದರ್ಭದಲ್ಲಿ ಆರೋಗ್ಯ ಕೈ ಕೊಟ್ಟರೆ ಆ ತಂದೆಯ ಪರಿಸ್ಥಿತಿ ಹೇಗಿರಬೇಡ? ಇಂತಹದ್ದೇ ಒಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಇನ್ನೇನು ಕೆಲವೇ ದಿನಗಳಲ್ಲಿ ಹೆಣ್ಣುಮಕ್ಕಳ ಮದುವೆ ಇದೆಯೆನ್ನುವಾಗ ತಂದೆಯೊಬ್ಬರಿಗೆ ಆರೋಗ್ಯ ಸಮಸ್ಯೆ ಎದುರಾಗಿ ಐಸಿಯುಗೆ ದಾಖಲಾದರು. ಮಕ್ಕಳ ಮದುವೆಯ ವೇಳೆ ಅವರನ್ನು ಡಿಸ್ಚಾರ್ಜ್ ಮಾಡಲು ವೈದ್ಯರು ನಿರಾಕರಿಸಿದರು. ಹಾಗಾಗಿ ಅವರ ಮಕ್ಕಳ ಮದುವೆ ನೋಡಬೇಕೆಂಬ ಬಯಕೆಯನ್ನು ಈಡೇರಿಸಲು ಆಸ್ಪತ್ರೆಯ ವೈದ್ಯರ ಬೆಂಬಲದೊಂದಿಗೆ ಅವರಿದ್ದ ಐಸಿಯುನಲ್ಲಿಯೇ ಅವರ ಮಕ್ಕಳಿಗೆ ಮದುವೆ ಮಾಡಲಾಗಿದೆ.

VISTARANEWS.COM


on

Viral Video
Koo

ಲಕ್ನೋ : ಆಸ್ಪತ್ರೆಗೆ ಎಲ್ಲರೂ ಅನಾರೋಗ್ಯಕ್ಕೆ ಚಿಕಿತ್ಸೆಗೆಂದು ಹೋಗುತ್ತಾರೆ. ಆದರೆ ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆಂದು ಬಂದ ರೋಗಿಯ ಹೆಣ್ಣು ಮಕ್ಕಳಿಗೆ ಐಸಿಯುನಲ್ಲಿ ಮದುವೆ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ.

ಉತ್ತರ ಪ್ರದೇಶದ ಲಕ್ನೋದ ಎರಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಲಕ್ನೋ ನಿವಾಸಿಯಾದ ಮೊಹಮ್ಮದ್ ಇಕ್ಬಾಲ್ (51) ಅವರು ದಾಖಲಾಗಿದ್ದರು. ಆದರೆ ಇನ್ನೂ ಕೆಲವೇ ದಿನಗಳಲ್ಲಿ ಅವರ ಹೆಣ್ಣುಮಕ್ಕಳ ಮದುವೆ ಇತ್ತು. ಇಕ್ಬಾಲ್ ಅವರು ತೀವ್ರ ಎದೆ ನೋವಿನಿಂದ ನರಳುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ದಾಖಲಿಸಲಾಗಿತ್ತು. ಆದರೆ ಮಕ್ಕಳ ಮದುವೆಯ ವೇಳೆ ಅವರನ್ನು ಡಿಸ್ಚಾರ್ಜ್ ಮಾಡಲು ವೈದ್ಯರು ನಿರಾಕರಿಸಿದರು. ಹಾಗಾಗಿ ಅವರ ಮಕ್ಕಳ ಮದುವೆ ನೋಡಬೇಕೆಂಬ ಬಯಕೆಯನ್ನು ಈಡೇರಿಸಲು ಆಸ್ಪತ್ರೆಯ ವೈದ್ಯರ ಬೆಂಬಲದೊಂದಿಗೆ ಅವರಿದ್ದ ಐಸಿಯುನಲ್ಲಿಯೇ ಅವರ ಮಕ್ಕಳಿಗೆ ಮದುವೆ ಮಾಡಲಾಯಿತು!

ಇಕ್ಬಾಲ್ ಸಂಬಂಧಿಕರು ಆತ ಇಲ್ಲದೇ ಮಕ್ಕಳ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು. ಆದರೆ ಇಕ್ಬಾಲ್ ಮದುವೆಗೆ ಬರಲು ಸಾಧ್ಯವಾಗದ ಕಾರಣ ಆಸ್ಪತ್ರೆಯಲ್ಲಿಯೇ ಸರಳವಾಗಿ ಮದುವೆಯಾಗಲು ಅವಕಾಶ ನೀಡುವಂತೆ ವೈದ್ಯರ ಬಳಿ ಮನವಿ ಮಾಡಿದ್ದರು. ಸಾಕಷ್ಟು ಚರ್ಚೆಯ ಬಳಿಕ ವೈದ್ಯರು ಮದುವೆಗೆ ಅನುಮತಿ ನೀಡಿದ ಕಾರಣ ಅವರ ಮಕ್ಕಳ ಮದುವೆ ಅವರ ಕಣ್ಣುಮುಂದೆಯೇ ನಡೆದಿದೆ. ಇಕ್ಬಾಲ್ ಮೊದಲ ಮಗಳು ಐಸಿಯುನಲ್ಲಿ ಗುರುವಾರ ಮದುವೆಯಾದರೆ, ಅವರ ಎರಡನೇ ಮಗಳು ಮರುದಿನ ಮದುವೆಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಇದಕ್ಕೆ ಸಂಬಂಧಿಸಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗೇ ಈ ಅದ್ಭುತ ಕ್ಷಣವನ್ನು ಆಸ್ಪತ್ರೆಯಲ್ಲಿ ನಡೆಸುವ ಮುನ್ನ ಆಸ್ಪತ್ರೆಯ ಸಿಬ್ಬಂದಿ ಮತ್ತು ಆಡಳಿತ ವರ್ಗ, ಇತರರ ರೋಗಗಳಿಗೆ ಸಮಸ್ಯೆಯಾಗುವುದನ್ನು ತಡೆಯಲು ವಿಶೇಷ ವ್ಯವಸ್ಥೆಯನ್ನು ಮಾಡಿದ್ದಾರೆ. ಮತ್ತು ಮಾನವೀಯತೆಯಿಂದ ಈ ಮದುವೆಗೆ ಐದು ಜನರಿಗೆ ಭಾಗವಹಿಸಲು ಅವಕಾಶ ನೀಡಿದ್ದರು ಎಂಬುದಾಗಿ ತಿಳಿದುಬಂದಿದೆ. ವರದಿ ಪ್ರಕಾರ ಇಕ್ಬಾಲ್ ಮಕ್ಕಳ ಮದುವೆ ಜೂನ್ 22ರಂದು ಮುಂಬೈನಲ್ಲಿ ನಿಗದಿಯಾಗಿತ್ತು.

ಇದನ್ನೂ ಓದಿ: Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

“ನಮ್ಮ ತಂದೆ ನಮ್ಮ ಜಗತ್ತು. ಮತ್ತು ಅವರ ಆಶೀರ್ವಾದವಿಲ್ಲದೆ ಮದುವೆಯಾಗಲು ನಮಗೆ ಇಷ್ಟವಿಲ್ಲ. ಇದಕ್ಕೆ ಅವಕಾಶ ಮಾಡಿಕೊಟ್ಟ ಆಸ್ಪತ್ರೆಯ ಆಡಳಿತ ವರ್ಗಕ್ಕೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ. ನಮ್ಮ ತಂದೆ ವೆಂಟಿಲೇಟರ್ ಸಹಾಯದಿಂದ ಪ್ರಜ್ಞೆಯಲ್ಲಿದ್ದರು. ನಮ್ಮ ಮದುವೆ ನೋಡಿ ಅವರ ಕಣ್ಣು ತೃಪ್ತಿಯಿಂದ ತುಂಬಿದವು” ಎಂದು ಇಕ್ಬಾಲ್ ಮಕ್ಕಳು ಹೇಳಿದ್ದಾರೆ.

Continue Reading
Advertisement
Kempegowda Jayanti
ಕರ್ನಾಟಕ6 mins ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Train Accident
ದೇಶ6 mins ago

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Mumbai News
ದೇಶ36 mins ago

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

prajwal revanna case test
ಪ್ರಮುಖ ಸುದ್ದಿ39 mins ago

Prajwal Revanna Case: ʼಮತ್ತೆ ಮತ್ತೆ ಅದನ್ನು ತೋರಿಸೋಕೆ ಮುಜುಗರ….ʼ ಜಡ್ಜ್‌ ಮುಂದೆ ಅಲವತ್ತುಕೊಂಡ ಪ್ರಜ್ವಲ್!‌

Gemini Mobile App
ತಂತ್ರಜ್ಞಾನ44 mins ago

Gemini Mobile App: ಕನ್ನಡ ಸೇರಿದಂತೆ 9 ಭಾರತೀಯ ಭಾಷೆಗಳಲ್ಲಿ ಗೂಗಲ್ ಜೆಮಿನಿ ಆ್ಯಪ್; ಏನಿದರ ಉಪಯೋಗ?

SA vs USA
ಕ್ರೀಡೆ52 mins ago

SA vs USA: ನಾಳೆ ಮೊದಲ ಸೂಪರ್​-8 ಪಂದ್ಯ; ಅಮೆರಿಕ ಸವಾಲಿಗೆ ಹರಿಣ ಪಡೆ ಸಿದ್ಧ

Kolar News
ಕೋಲಾರ60 mins ago

Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

Actor Darshan
ಕರ್ನಾಟಕ1 hour ago

Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

Reliance Jio Down
ದೇಶ1 hour ago

Reliance Jio Down: ದೇಶಾದ್ಯಂತ ಜಿಯೋ ನೆಟ್‌ವರ್ಕ್‌ ಡೌನ್;‌ ಇಂಟರ್‌ನೆಟ್‌ ಇಲ್ಲದೆ ಅಲ್ಲೋಲಕಲ್ಲೋಲ!

Self Harming
ಕೋಲಾರ1 hour ago

Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್‌ ಉದ್ಯೋಗಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌