ವೈರಲ್ ನ್ಯೂಸ್
ಉತ್ತರ ಪ್ರದೇಶದಲ್ಲಿ ಪತ್ತೆಯಾದ ಈ ತೇಲುವ ಕಲ್ಲು ರಾಮಸೇತುವಿನದ್ದೇ?: ಹೆಚ್ಚಿದ ಕುತೂಹಲ
ಅಹಿಮಲ್ಪುರ್ ಎಂಬಲ್ಲಿ ಮೀನು ಹಿಡಿಯಲು ಹೋಗಿದ್ದ ಮಕ್ಕಳಿಗೆ ಈ ತೇಲುವ ಕಲ್ಲು ಪತ್ತೆಯಾಗಿದೆ. ಅದನ್ನೀಗ ದೇವಾಲಯದಲ್ಲಿ ಇಟ್ಟು, ಪೂಜಿಸಲು ಅನುಮತಿ ಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಲಖನೌ: ತೇಲುವ ಕಲ್ಲೊಂದು ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಅದರ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅದಕ್ಕೆ ನಾನಾ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ಜಿಲ್ಲೆಯ ಅಹಿಮಲ್ಪುರ್ ಪ್ರದೇಶದಲ್ಲಿ ಇಸಾನ್ ನದಿಯಲ್ಲಿ ಕಂಡು ಬಂದ ಈ ತೇಲುವ ಕಲ್ಲಿನ ಮೇಲೆ ಬರೆದಿರುವ ಅಕ್ಷರಗಳನ್ನು ಕಂಡ ಗ್ರಾಮಸ್ಥರು, ಇದು ತ್ರೇತಾಯುಗ ಕಾಲದ ರಾಮಸೇತುವಿನ ಕಲ್ಲು ಎಂದೂ ವ್ಯಾಖ್ಯಾನಿಸಿದ್ದಾರೆ. ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಮಕ್ಕಳ ಕಣ್ಣಿಗೆ, ನದಿಯಲ್ಲಿ ತೇಲುತ್ತಿದ್ದ ಈ ಕಲ್ಲು ಗೋಚರಿಸಿತ್ತು. ಕುತೂಹಲ ತಡೆಯಲಾರದ ಮಕ್ಕಳು ಅದನ್ನು ತಂದು ಹಿರಿಯರಿಗೆ ತೋರಿಸಿದ್ದರು. ಸುಮಾರು ೫.೭ ಕೆ.ಜಿ. ತೂಗುವ ಈ ಕಲ್ಲು ನೀರಿನಲ್ಲಿ ತೇಲುತ್ತಿರುವ ವೀಡಿಯೊ ಎಲ್ಲೆಡೆ ಹರಿದಾಡುತ್ತಿದೆ.
ʻನದಿಯಲ್ಲಿ ತೇಲುವ ಕಲ್ಲೊಂದು ನಮಗೆ ದೊರೆತಿರುವುದು ನಿಜ. ಅದರ ಮೇಲೆ ರಾಮ ನಾಮ ಬರೆದಿರುವುದೂ ಹೌದು. ರಾಮೇಶ್ವರದಲ್ಲಿ ರಾಮ ಸೇತು ಕಟ್ಟುವಾಗ ಉಪಯೋಗಿಸಿದ ಕಲ್ಲಿದು ಎಂದೂ ಗ್ರಾಮದ ಕೆಲವರು ಹೇಳುತ್ತಿದ್ದಾರೆ. ಎಲ್ಲರಿಗೂ ಅವರವರದ್ದೇ ಅಭಿಪ್ರಾಯವಿರಬಹುದಲ್ಲʼ ಎಂದು ಗ್ರಾಮದ ಮುಖ್ಯಸ್ಥ ನಿತಿನ್ ಪಾಂಡೆ ಹೇಳಿದ್ದಾರೆ. ಈ ಕಲ್ಲನ್ನು ಸಮೀಪದ ದೇವಳದಲ್ಲಿ ಇರಿಸಬೇಕು. ಅದಕ್ಕೆ ಪೂಜೆ ಸಲ್ಲಿಸುವಂತಾಗಬೇಕು ಎಂದೂ ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಲಾಹೋರಿನ ಕೆಎಫ್ಸಿ ಡೆಲಿವರಿ ಗರ್ಲ್ ಮೀರಬ್ ಸ್ಫೂರ್ತಿ ಕತೆ ಈಗ ವೈರಲ್!
ದೇಶ
17 ವರ್ಷದ ಹೆಣ್ಣುಮಕ್ಕಳು ಮಗು ಹೆರುವ ಕಾಲವಿತ್ತು; ರೇಪ್ ಸಂತ್ರಸ್ತೆಯ ಗರ್ಭಪಾತ ಬೇಡವೆಂದ ಹೈಕೋರ್ಟ್
Viral News: ಅತ್ಯಾಚಾರಕ್ಕೀಡಾದ ಬಾಲಕಿಯು ಈಗ ಗರ್ಭ ಧರಿಸಿದ್ದು, ಆಕೆಯ ವಯಸ್ಸನ್ನು ಪರಿಗಣಿಸಿ ನ್ಯಾಯಾಲಯವು ವೈದ್ಯಕೀಯ ಗರ್ಭಪಾತಕ್ಕೆ ಅನುಮತಿ ನೀಡಬೇಕು ಎಂದು ಅರ್ಜಿ ಸಲ್ಲಿಸಲಾಗಿದೆ. ಆದರೆ, ಇದಕ್ಕೆ ಗುಜರಾತ್ ಹೈಕೋರ್ಟ್ ನಿರಾಕರಿಸಿದೆ.
ಗಾಂಧಿನಗರ: 17 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೋಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದೆ. ಅತ್ಯಾಚಾರ ಸಂತ್ರಸ್ತೆ ಗರ್ಭ ಧರಿಸಿ ಈಗ ತಿಂಗಳಾಗಿದೆ. ಆಕೆಯ ಗರ್ಭಪಾತಕ್ಕೆ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ತಳ್ಳಿಹಾಕಿದೆ. ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯವು, “ಮೊದಲೆಲ್ಲ 17 ವರ್ಷದ ಹೆಣ್ಣುಮಕ್ಕಳು ಮಕ್ಕಳನ್ನು ಹೆರುತ್ತಿದ್ದರು, 14-15 ವರ್ಷಕ್ಕೆ ಮದುವೆಯಾಗುತ್ತಿದ್ದರು. ಇದೆಲ್ಲ ತಿಳಿಯಲು (Viral News) ಮನುಸ್ಮೃತಿ ಓದಿ” ಎಂದು ಕೂಡ ಹೇಳಿದೆ.
ಅತ್ಯಾಚಾರ ಸಂತ್ರಸ್ತೆಯ ವಯಸ್ಸನ್ನು ಪರಿಗಣಿಸಿ, ಆಕೆಗೆ ವೈದ್ಯಕೀಯ ಗರ್ಭಪಾತಕ್ಕೆ ಅನುಮತಿ ನೀಡಬೇಕು ಎಂದು ಸಂತ್ರಸ್ತ ಬಾಲಕಿಯ ತಂದೆಯು ಅರ್ಜಿ ಸಲ್ಲಿಸಿದ್ದರು. “ಹಿಂದಿನ ಕಾಲದಲ್ಲಿ 18 ವರ್ಷ ತುಂಬುವ ಮೊದಲೇ ಹೆಣ್ಣುಮಕ್ಕಳು ಮದುವೆಯಾಗಿ, ಮಕ್ಕಳನ್ನು ಹೆರುತ್ತಿದ್ದರು ಎಂಬುದು ಗೊತ್ತಿರಲಿ. ಇದನ್ನು ನೀವು ಓದಿಲ್ಲವೆಂದರೆ, ಮನುಸ್ಮೃತಿ ಓದಿ ತಿಳಿದುಕೊಳ್ಳಿ” ಎಂದು ನ್ಯಾಯಮೂರ್ತಿ ಸಮೀರ್ ಜೆ ದಾವೆ ಹೇಳಿದರು.
ಸಂತ್ರಸ್ತೆಯ ತಂದೆ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಿಕಂದರ್ ಸೈಯದ್, “ಆಗಸ್ಟ್ 18ರಂದು ಬಾಲಕಿಯು ಮಗು ಹೆರುವ ಸಾಧ್ಯತೆ ಇದೆ. ವೈದ್ಯರು ಡೇಟ್ ಕೊಟ್ಟಿದ್ದಾರೆ. ಆಕೆಯ ವಯಸ್ಸನ್ನು ಪರಿಗಣಿಸಿ ಗರ್ಭಪಾತಕ್ಕೆ ಅನುಮತಿ ನೀಡಬೇಕು” ಎಂದು ವಾದ ಮಂಡಿಸಿದರು. ಆದರೆ, ನ್ಯಾಯಾಲಯವು, “ಬಾಲಕಿ ಹಾಗೂ ಮಗು ಆರೋಗ್ಯವಾಗಿದ್ದರೆ ಗರ್ಭಪಾತಕ್ಕೆ ಅನುಮತಿ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿತು. ಹಾಗೆಯೇ, ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿತು.
ಇದನ್ನೂ ಓದಿ: Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್ ಆಯ್ತು ವಿಡಿಯೊ
ರಾಜಕೋಟ್ನಲ್ಲಿರುವ ಸಿವಿಲ್ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಅವರು ಬಾಲಕಿ ಹಾಗೂ ಆಕೆಯ ಹೊಟ್ಟೆಯಲ್ಲಿರುವ ಮಗುವಿನ ವೈದ್ಯಕೀಯ ತಪಾಸಣೆಯನ್ನು ತುರ್ತಾಗಿ ಮಾಡಬೇಕು ಎಂದು ಗುಜರಾತ್ ಹೈಕೋರ್ಟ್ ನಿರ್ದೇಶನ ನೀಡಿದೆ. ವೈದ್ಯಕೀಯ ವರದಿಯನ್ನು ಆಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ ನ್ಯಾಯಾಲಯವು, ಜೂನ್ 15ಕ್ಕೆ ವಿಚಾರಣೆ ಮುಂದೂಡಿದೆ.
ಸಹೋದರನಿಂದಲೇ ಗರ್ಭ ಧರಿಸಿದ 15 ವರ್ಷದ ಬಾಲಕಿಯ ಗರ್ಭಪಾತಕ್ಕೆ ಕೆಲ ದಿನಗಳ ಹಿಂದೆ ಕೇರಳ ಹೈಕೋರ್ಟ್ ಅನುಮತಿ ನೀಡಿತ್ತು. ಗರ್ಭಪಾತ ಮಾಡಿಸಲು ಅನುಮತಿ ಕೋರಿ ಬಾಲಕಿಯ ತಂದೆ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ್ದ ಏಕ ಸದಸ್ಯ ಪೀಠದ ನ್ಯಾ. ಜಿಯಾದ್ ರೆಹಮಾನ್ ಅವರು ಗರ್ಭಪಾತ ಮಾಡಿಸಲು ಅನುಮತಿ ನೀಡಿದ್ದರು.
“ಗರ್ಭಪಾತಕ್ಕೆ ಅನುಮತಿ ನೀಡದೆ ಹೋದರೆ ಸಾಮಾಜಿಕ ವ್ಯವಸ್ಥೆ ಹಾಗೂ ಬಾಲಕಿಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ, ಗರ್ಭಪಾತಕ್ಕೆ ಅನುಮತಿ ನೀಡಲಾಗಿದೆ” ಎಂದು ಸ್ಪಷ್ಟಪಡಿಸಿತು. ವೈದ್ಯಕೀಯ ಮಂಡಳಿಯು ಗರ್ಭಪಾತದ ಕುರಿತು ವರದಿ ಸಲ್ಲಿಸಿತ್ತು. 15 ವರ್ಷದ ಬಾಲಕಿಗೆ ಗರ್ಭಪಾತಕ್ಕೆ ಅನುಮತಿ ನೀಡದಿದ್ದರೆ ಸಾಮಾಜಿಕ ವ್ಯವಸ್ಥೆ ಹಾಗೂ ಆಕೆಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಹಾಗಾಗಿ, ಗರ್ಭಪಾತಕ್ಕೆ ಅನುಮತಿ ಸಿಕ್ಕಿತ್ತು.
ಕ್ರಿಕೆಟ್
WTC Final 2023: ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಆಡು; ಔಟಾದ ಬಳಿಕ ಊಟದ ಜತೆ ಬೈಗುಳ ತಿಂದ ಕೊಹ್ಲಿ
ವಿರಾಟ್ ಕೊಹ್ಲಿ ಅವರು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಔಟಾದ ತಕ್ಷಣ ಡಗೌಟ್ನಲ್ಲಿ ಆಹಾರ ಸೇವಿಸಿದ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.
ಲಂಡನ್: ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ನಿರೀಕ್ಷಿತ ಮಟ್ಟದ ಬ್ಯಾಟಿಂಗ್ ಪ್ರದರ್ಶನ ತೋರುವಲ್ಲಿ ಎಡವಿದ್ದಾರೆ. ಆದರೆ ಅವರು ಔಟ್ ಆಗಿರುವ ವಿಚಾರವನ್ನು ಹೊರತುಪಡಿಸಿ ಬೇರೆಯೇ ಕಾರಣಕ್ಕೆ ಇದೀಗ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಲಂಡನ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ದಿನದಾಟದ ವೇಳೆ ವಿರಾಟ್ ಅವರು 14 ರನ್ ಗಳಿಸಿ ವಿಕೆಟ್ ಕೈಚೆಲ್ಲಿದರು. ಪೆವಿಲಿಯನ್ಗೆ ತೆರಳಿದ ವಿರಾಟ್ ಕೊಹ್ಲಿ ಯಾವುದೇ ಚಿಂತೆ ಇಲ್ಲದವರಂತೆ ಇಶಾನ್ ಕಿಶನ್ ಮತ್ತು ಗಿಲ್ ಜತೆ ಹರಾಟೆ ಹೊಡೆಯುತ್ತಾ ಆಹಾರ ಸೇವಿಸಿದ್ದಾರೆ. ಇದರ ಫೋಟೊ ಮತ್ತು ವಿಡಿಯೊ ಎಲ್ಲಡೆ ವೈರಲ್ ಆಗಿದೆ.
ಕೊಹ್ಲಿಯ ಈ ವರ್ತನೆ ಕಂಡ ಅನೇಕ ಟೀಮ್ ಇಂಡಿಯಾದ ಅಭಿಮಾನಿಗಳು ಮತ್ತು ಕೆಲವು ಕ್ರಿಕೆಟ್ ಪಂಡಿತರು ಟೀಕೆ ವ್ಯಕ್ತಪಡಿಸಿದ್ದಾರೆ. ಜತೆಗೆ ಅವರನ್ನು ತೀಕ್ಷ್ಣ ಮಾತುಗಳಿಂದ ಟ್ರೋಲ್ ಮಾಡಿದ್ದಾರೆ. ಐಪಿಎಲ್ನಲ್ಲಿ ಪಂದ್ಯ ಸೋತಾಗ ಕಣ್ಣೀರು ಸುರಿಸುವ ನೀವು ಭಾರತ ತಂಡಕ್ಕೆ ಆಡುವಾಗ ಮಾತ್ರ ಈ ರೀತಿ ಮಾಡುತ್ತೀರಿ ಇದರ ಅರ್ಥ ನೀವು ಹಣಕ್ಕಾಗಿ ಆಡುತ್ತೀರಿ, ದೇಶಕಾಕ್ಕಾಗಿ ಅಲ್ಲ ಎಂದು ನೆಟ್ಟಿಗರೊಬ್ಬರು ಟ್ರೋಲ್ ಮಾಡಿದ್ದಾರೆ.
ಇದನ್ನೂ ಓದಿ WTC Final 2023: ಇನಿಂಗ್ಸ್ ಹಿನ್ನಡೆ ಭಯದಲ್ಲಿ ಟೀಮ್ ಇಂಡಿಯಾ
Seriousness of Virat Kohli for IPL vs India#INDvAUS pic.twitter.com/4CKM9LK80K
— Ctrl C Ctrl Memes (@Ctrlmemes_) June 8, 2023
ತಂಡ ಸಂಕಷ್ಟದಲ್ಲಿದ್ದರೂ ನೀವು ಈ ರೀತಿ ಆನಂದದಲ್ಲಿರುವುದನ್ನು ಕಾಣುವಾಗ ಭಾರತ ತಂಡಕ್ಕಿಂತ ನಿಮಗೆ ಐಪಿಎಲ್ ಟೂರ್ನಿಯೇ ಹೆಚ್ಚಾದಂತೆ ಕಾಣುತ್ತಿದೆ ಎಂದು ಮತ್ತೊಬ್ಬ ನೆಟ್ಟಿಗ ಟ್ರೋಲ್ ಮಾಡಿದ್ದಾರೆ. ಇನ್ನಿ ಕೆಲವರು ಅರೇ ನೀವು ತಿನ್ನುತ್ತಿರುವ ಆಹಾರ ಯಾವುದು? ಎಂದು ಪ್ರಶ್ನೆ ಮಾಡುವ ಮೂಲಕ ಕೊಹ್ಲಿಯ ಕಾಲೆಳೆದಿದ್ದಾರೆ.
Never compare great Sachin Tendulkar with money makers like Virat Kohli#INDvAUS pic.twitter.com/ML58p3jdxc
— Ctrl C Ctrl Memes (@Ctrlmemes_) June 8, 2023
ಎಷ್ಟ್ರೇ ಸಾಧನೆ ಮಾಡಿದ್ದರೂ ಹಣಕ್ಕೆ ಆಸೆಪಡುವ ವಿರಾಟ್ ಕೊಹ್ಲಿಯನ್ನು ಸಚಿನ್ ತೆಂಡೂಲ್ಕರ್ ಜತೆ ಯಾವತ್ತೂ ಹೋಲಿಕೆ ಮಾಡಬೇಡಿ ಎಂದು ನೆಟ್ಟಿಗೊರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಕೊಹ್ಲಿಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹಲವು ಕಾರಣಕ್ಕೆ ಟ್ರೋಲ್ ಆಗುತ್ತಿದೆ.
ಕರ್ನಾಟಕ
Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್ ಜಾಸ್ತಿ ಮಾಡ್ಬೇಡಿ; BPL ಕಾರ್ಡ್ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!
liquor price: ರಾಜ್ಯ ಸರ್ಕಾರ ಮದ್ಯದ ಮೇಲಿನ ಸುಂಕವನ್ನು ಏರಿಕೆ ಮಾಡುತ್ತಲೇ ಇದೆ. ಇದು ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ. ಈ ಕಾರಣದಿಂದಾಗಿ ಮದ್ಯದ ಮೇಲಿನ ಸುಂಕವನ್ನು ಇಳಿಕೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಡುಕರ ಸಂಘವು ಪತ್ರ ಬರೆದು ಮನವಿ ಮಾಡಿದೆ!
ಬೆಂಗಳೂರು: ಅನೇಕ ಬಜೆಟ್ ಮಂಡನೆ ಸಂದರ್ಭದಲ್ಲಿ ಮದ್ಯ ಪ್ರಿಯರಿಗೆ ಆಯಾ ಸರ್ಕಾರಗಳು ಶಾಕ್ ಕೊಡುತ್ತಲೇ ಬರುತ್ತಿವೆ. ಮದ್ಯದ ದರದ ಮೇಲೆ ಅಬಕಾರಿ ಸುಂಕವನ್ನು ಹೇರುತ್ತಿವೆ. ಈಗ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ನಡುವೆ ಅವರಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸವಾಲಿದೆ. ಅದಕ್ಕೆ ಹಣ ಹೊಂದಾಣಿಕೆಯನ್ನು ಮಾಡಬೇಕಿದೆ. ಇದು ಈಗ ಮದ್ಯ ಪ್ರಿಯರಲ್ಲಿ ತಲ್ಲಣವನ್ನು ಹುಟ್ಟಿಸಿದೆ. ಈ ಕಾರಣಕ್ಕೆ ಅವರೆಲ್ಲರೂ “ಎಣ್ಣೆಯ ವಿಷ್ಯ, ಬೇಡವೋ ಶಿಷ್ಯ” ಎಂಬ ಹಾಡನ್ನು ಹಾಡಬೇಕಾಗುತ್ತದೆ ಎಂದು ಆತಂಕದಲ್ಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮದ್ಯ ಪ್ರೇಮಿಗಳ/ಕುಡುಕರ ಸಂಘವು, ಈಗಾಗಲೇ ಮದ್ಯದ ಸುಂಕವನ್ನು ಹೆಚ್ಚಳ ಮಾಡಿದ್ದು, ಅದನ್ನು ಇಳಿಸಿ ಎಂದು ಮನವಿ ಮಾಡಿದ್ದಾರೆ. ಈ ಪತ್ರ ಈಗ ವೈರಲ್ (Viral News) ಆಗಿದೆ.
ಇದಲ್ಲದೆ, ಅಬಕಾರಿ ಸಚಿವರು, ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷರು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೂ ಪತ್ರದ ಪ್ರತಿಯನ್ನು ಲಗತ್ತಿಸಿದ್ದು, ದಯಮಾಡಿ ಅಬಕಾರಿ ಸುಂಕವನ್ನು ಇಳಿಸಿ ಸಂಕಷ್ಟದಲ್ಲಿರುವ ಮದ್ಯ ಪ್ರಿಯರ ರಕ್ಷಣೆಗೆ ದಾವಿಸಿ ಎಂದು ಮೊರೆ ಇಟ್ಟಿದ್ದಾರೆ!
ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್! 90 ರೂಪಾಯಿ ಮಿನಿಮಮ್ ಚಾರ್ಜ್ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?
ಮನವಿ ಪತ್ರದಲ್ಲೇನಿದೆ?
ಮಾನ್ಯ ಮುಖ್ಯಮಂತ್ರಿ ಮತ್ತು ಮದ್ಯ ಪ್ರಿಯರ ಇಲಾಖೆ ಅಂದರೆ ಅಬಕಾರಿ ಇಲಾಖೆಯ ಸಚಿವರಲ್ಲಿ ವಿನಂತಿಸುವುದೇನೆಂದರೆ, ರಾಜ್ಯದಲ್ಲಿ ಜಾತಿ, ಧರ್ಮ, ಬಡವ ,ಬಲ್ಲಿದ, ರಾಜಕಾರಣಿ, ಡಾಕ್ಟರ್, ಪತ್ರಕರ್ತ, ಸರ್ಕಾರಿ ನೌಕರರು, ವಕೀಲರು ಎಂಬ ತಾರತಮ್ಯ ಇಲ್ಲದೆ ಮದ್ಯ ಸೇವನೆಯನ್ನು ಮಾಡುತ್ತಾರೆ. ಎಲ್ಲ ವರ್ಗದವರು ಮದ್ಯ ಸೇವನೆಯನ್ನು ಮಾಡುತ್ತಿದ್ದು, ಇದು ಆಹಾರ ಸಂಸ್ಕೃತಿಯ ಭಾಗವಾಗಿದೆ. ಮದುವೆ, ಹಬ್ಬ ಹರಿದಿನಗಳಲ್ಲಿ ಆರಾಧನೆ ಪದ್ಧತಿಯಲ್ಲಿ, ಸಂತೋಷ ಕೂಟದಲ್ಲಿ ಮದ್ಯ ಪ್ರಿಯರು ಮದ್ಯ ಸೇವನೆಯನ್ನು ಮಾಡುತ್ತಿದ್ದಾರೆ. ಸುರಪಾನಕ್ಕೆ ಭಾರತೀಯ ಸಂಸ್ಕೃತಿಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇದೆ.
ಇದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ಆದಾಯ ಬರುತ್ತಿದೆ. ಇಷ್ಟೆಲ್ಲ ಆದಾಯ ಬರುತ್ತಿದ್ದರೂ ಮದ್ಯ ಪ್ರೇಮಿಗಳ ಬಗ್ಗೆ ಕಾಳಜಿ ವಹಿಸದಿರುವುದು ತುಂಬ ದುಃಖಕರ ವಿಷಯ. ಈಗಾಗಲೇ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆಯನ್ನು ಜಾಸ್ತಿ ಮಾಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ.
ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿ ಏನೆಂದರೆ, ಒಬ್ಬ ಬಿಪಿಎಲ್ ಕಾರ್ಡ್ ಹೊಂದಿದವನ ಆದಾಯ ಅಲ್ಪ ಪ್ರಮಾಣದಲ್ಲಿ ಇರುತ್ತದೆ. ಮದ್ಯ ಪ್ರೇಮಿ ದಿನಗೂಲಿ ನೌಕರ ದಿನವೂ ಸರಾಸರಿ 180 ಎಂ.ಎಲ್. ಕುಡಿದರೂ ಅವನಿಗೆ ದಿನಕ್ಕೆ 200 ರಿಂದ 250 ರೂಪಾಯಿಯಷ್ಟು ಮದ್ಯಕ್ಕೆ ಖರ್ಚು ತಗಲುತ್ತದೆ. ಅಂದರೆ, ತಿಂಗಳಿಗೆ 7500 ರೂಪಾಯಿ ಬೇಕಾಗುತ್ತದೆ. ವಾರ್ಷಿಕ 90,000 ರೂಪಾಯಿ ಒಬ್ಬ ಮದ್ಯ ಪ್ರೇಮಿ ಕುಡುಕನಿಗೆ ಬೇಕಾಗುತ್ತದೆ.
ಇದನ್ನೂ ಓದಿ: Congress Guarantee: ʼಗೃಹಲಕ್ಷ್ಮಿʼಗೂ ಮಗನ ಐಟಿಗೂ ಸಂಬಂಧ ಇಲ್ಲ; ಉಲ್ಟಾ ಹೊಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಇದರಿಂದ ಮದ್ಯಮ ವರ್ಗ ಮತ್ತು ಬಡವರಿಗೆ ಆರ್ಥಿಕವಾಗಿ ಹೊರೆಯಾಗಲಿದೆ. ಆದ್ದರಿಂದ ಮದ್ಯದ ಮೇಲಿನ ಸುಂಕದ ದರ ಹೆಚ್ಚಳ ಬಗ್ಗೆ ಪುನರ್ ಪರಿಶೀಲನೆ ಮಾಡಿ ಸ್ಥಳೀಯ ಬ್ರಾಂಡ್ನ ಇಂಡಿಯನ್ ಮೇಡ್ ಫಾರಿನ್ ಲಿಕ್ಕರ್ ಹಾಗೂ ಬಿಯರ್ ಮೇಲಿನ ಸುಂಕವನ್ನು ಕಡಿಮೆ ಮಾಡಬೇಕು ಎಂದು ಎಲ್ಲ ಮದ್ಯ ಪ್ರಿಯ ಬ್ರದರ್ಸ್ & ಸಿಸ್ಟರ್ಸ್ ಪರವಾಗಿ ವಿನಂತಿಸುತ್ತೇವೆ.
ಪ್ರಮುಖ ಸುದ್ದಿ
New Country: ಕೇವಲ 15 ಲಕ್ಷ ರೂ.ನಲ್ಲಿ ರೆಡಿ ಆಯ್ತು ಹೊಸ ದೇಶ, ಹೆಸರು ಸ್ಲೋಜಾಮ್ಸ್ತಾನ!
New Country: ಅಮೆರಿಕದ ಪ್ರವಾಸಿಗ ತನ್ನದೇ ಆದ ಸ್ವಂತ ರಾಷ್ಟ್ರ ನಿರ್ಮಾಣ ಮಾಡಿದ್ದಾನೆ. ಅದು ಕೇವಲ ಹದಿನೈದು ಲಕ್ಷ ರೂಪಾಯಿ ವೆಚ್ಚ ಮಾಡಿದ್ದಾನಷ್ಟೇ.
ನವದೆಹಲಿ: ರೇಪ್ ಆರೋಪ ಹೊತ್ತು ದೇಶ ಪಲಾಯನ ಮಾಡಿದ ನಿತ್ಯಾನಂದ ಸ್ವಾಮಿ ಈಕ್ವೆಡಾರ್ ಕರಾವಳಿಯಲ್ಲಿ ಕೈಲಾಸ ಎಂಬ ತನ್ನದೇ ಆದ ಸ್ವಂತ ದೇಶ ನಿರ್ಮಾಣ ಮಾಡಿದ್ದು ಭಾರತೀಯರಿಗೆ ಗೊತ್ತೇ ಇರುತ್ತದೆ. ಅದೇ ರೀತಿ, ಅಮೆರಿಕ ವ್ಯಕ್ತಿಯೊಬ್ಬ ಸ್ವಂತ ದೇಶವನ್ನು (New Country) ಸೃಷ್ಟಿಸಿಕೊಂಡಿದ್ದಾನೆ. ವೃತ್ತಿಯಿಂದ ಡಿಜೆ ಆಗಿರುವ ಆರ್ ಡಬ್ ವಿಲಿಯಮ್ಸ್(R Dub Williams), ತಮ್ಮ ಪ್ರದರ್ಶನಕ್ಕೆ ಸ್ಲೋ ಜಾಮ್ಸ್ ಎಂದು ಹೆಸರಿಟ್ಟಿದ್ದಾರೆ. ಈಗ ಅದೇ ಹೆಸರನ್ನು ತಮ್ಮ ದೇಶಕ್ಕೆ ಇಟ್ಟಿದ್ದಾರೆ(Viral News). ಅಂದರೆ, ವಿಲಿಯಮ್ಸ್ ಅವರ ದೇಶದ ಹೆಸರು ಸ್ಲೋಜಾಮ್ಸ್ತಾನ (Slowjamastan).
ಸಿಎನ್ಎನ್ ಟ್ರಾವೆಲ್ಲರ್ ಜತೆ ಮಾತನಾಡಿರುವ ವಿಲಿಯಮ್ಸ್, ನನಗೆ ಪ್ರವಾಸ ಮಾಡಲು ಈಗ ದೇಶಗಳೇ ಉಳಿದಿಲ್ಲ. ಹಾಗಾಗಿ, ನನ್ನದೇ ಆದ ಸ್ವಂತ ನಿರ್ಮಾಣ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ವಿಶ್ವಸಂಸ್ಥೆ ಗುರುತಿಸಿರುವ 193 ರಾಷ್ಟ್ರಗಳ ಪೈಕಿ 192 ರಾಷ್ಟ್ರಗಳನ್ನು ಈ ಮಿಲಿಯಮ್ಸ್ ಭೇಟಿ ನೀಡಿದ್ದಾರೆ. ತಮ್ಮ ಈ ಪ್ರವಾಸದ ಪಟ್ಟಿಯಲ್ಲಿ ತುರ್ಕಮೇನಿಸ್ತಾನ ಕೊನೆಯ ರಾಷ್ಟ್ರವಾಗಿದ್ದು, ಶೀಘ್ರವೇ ಆ ರಾಷ್ಟ್ರಕ್ಕೂ ಅವರ ಭೇಟಿ ನೀಡಲಿದ್ದಾರೆ. ಈ ಕಾರಣಕ್ಕಾಗಿಯೇ ಅವರು 194ನೇ ರಾಷ್ಟ್ರವಾಗಿ ತಮ್ಮದೇ ಸ್ವಂತ ದೇಶವನ್ನು ನಿರ್ಮಾಣ ಮಾಡಿದ್ದಾರೆಂದು ಸಿಎನ್ಎನ್ ವರದಿ ಮಾಡಿದೆ.
ಅಮೆರಿಕದ ಕ್ಯಾಲಿಫೋರ್ನಿಯಾದ ಮರಳುಗಾಡಿನಲ್ಲಿ 11.07 ಎಕರೆ ಭೂಮಿಯನ್ನು ಖರೀದಿಸಿ ವಿಲಿಯಮ್ಸ್ ಅದಕ್ಕೆ ತಾವು ನಡೆಸಿಕೊಡುವ ಶೋ ಹೆಸರನ್ನೇ ಇಟ್ಟಿದ್ದಾರೆ. ಸ್ಲೋಜಾಮ್ಸ್ತಾನ್ ಸುಲ್ತಾನ್ ಆಗಿರುವ ವಿಲಿಯಮ್ಸ್, 2021 ಡಿಸೆಂಬರ್ 1ರಂದ ಅಮೆರಿಕದಿಂದ ಪ್ರತ್ಯೇಕಗೊಂಡ ಸ್ವತಂತ್ರ ರಾಷ್ಟ್ರ ಎಂದು ಘೋಷಿಸಿಕೊಂಡಿದ್ದಾರೆ. ದುಬ್ಲಾಂಡಿಯಾ, ಸ್ಲೋಜಾಮ್ಸ್ತಾನ್ ರಾಷ್ಟ್ರದ ರಾಜಧಾನಿಯಾಗಿದೆ. ಅಲ್ಲಿಂದಲೇ ಲೈವ್ ಮೂಲಕ ಸ್ವತಂತ್ರ ರಾಷ್ಟ್ರ ಎಂದು ಘೋಷಿಸಿದ್ದಾರೆ.
ಇದನ್ನೂ ಓದಿ: Swami Nithyananda: ʼಕೈಲಾಸʼದಿಂದ ವಿಶ್ವಸಂಸ್ಥೆಗೆ ಬಂದ ನಿತ್ಯಾನಂದನ ಪ್ರತಿನಿಧಿ ಯಾರೀಕೆ?
ಈ ಹೊಸ ರಾಷ್ಟ್ರವು ತನ್ನದೇ ಪಾಸ್ಪೋರ್ಟ್, ಸ್ವಂತ ಧ್ವಜ, ಸ್ವಂತ ಕರೆನ್ಸ್, ರಾಷ್ಟ್ರಗೀತೆ ಸೇರಿದಂತೆ ಸಾರ್ವಭೌಮ ರಾಷ್ಟ್ರಕ್ಕಿರುವ ಎಲ್ಲ ಸಂಗತಿಗಳನ್ನು ಒಳಗೊಂಡಿದೆ. ಸಿಎನ್ಎನ್ ಟ್ರಾವಲರ್ ವರದಿಯ ಪ್ರಕಾರ, ಸದ್ಯ 500 ನೋಂದಾಯಿತ ನಾಗರಿಕರಿದ್ದರು, ನೋಂದಣಿಗೆ ಇನ್ನೂ 4500 ಜನರು ಕಾಯ್ದು ಕುಳಿತಿದ್ದಾರೆ. ಅಂದ ಹಾಗೆ, ಹೊಸ ದೇಶ ನಿರ್ಮಾಣಕ್ಕೆ ವಿಲಿಯಮ್ಸ್ ಕೇವಲ 15 ಲಕ್ಷ ವೆಚ್ಚವಾಗಿದೆ.
ವಿದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
-
ಸುವಚನ13 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ19 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
South Cinema23 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema23 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ದೇಶ18 hours ago
ಬದುಕುಳಿಯಲಿಲ್ಲ ಬೋರ್ವೆಲ್ಗೆ ಬಿದ್ದ ಕಂದಮ್ಮ; ಸಾವಿನ ವಿರುದ್ಧ 50 ಗಂಟೆ ಹೋರಾಟದಲ್ಲಿ ಗೆದ್ದಿದ್ದು ವಿಧಿ
-
ದೇಶ21 hours ago
ಸಹಕಾರಿ ಬ್ಯಾಂಕ್ಗಳು ಕೂಡ ಸುಸ್ತಿದಾರರ ಜತೆ ರಾಜಿ, ಸಾಲ ರೈಟ್-ಆಫ್ ಮಾಡಬಹುದು; ಆರ್ಬಿಐ ಮಹತ್ವದ ಘೋಷಣೆ
-
ಕರ್ನಾಟಕ22 hours ago
Fraud Case: ಬೆಳದಿಂಗಳ ಬಾಲೆ ಪ್ರಕರಣಕ್ಕೆ ಟ್ವಿಸ್ಟ್; ಸ್ವಾಮೀಜಿ ವಂಚನೆ ಕೇಸಲ್ಲಿ ಎ2 ಆರೋಪಿ ಈಗ ಎ1!
-
ದೇಶ10 hours ago
Miss World- 2023: 27 ವರ್ಷಗಳ ಬಳಿಕ ಭಾರತಕ್ಕೆ ಬರುತ್ತಿರುವ ʼಮಿಸ್ ವರ್ಲ್ಡ್ʼ