Viral Video: ಕಡಲ ತೀರಕ್ಕೆ ಬಂತು ತಿಮಿಂಗಿಲ ಶವ; ಹತ್ತಿರ ಹೋಗಬೇಡಿ ಬ್ಲಾಸ್ಟ್‌ ಆಗತ್ತೆ ಎಂದ ನೆಟ್ಟಿಗರು - Vistara News

ವೈರಲ್ ನ್ಯೂಸ್

Viral Video: ಕಡಲ ತೀರಕ್ಕೆ ಬಂತು ತಿಮಿಂಗಿಲ ಶವ; ಹತ್ತಿರ ಹೋಗಬೇಡಿ ಬ್ಲಾಸ್ಟ್‌ ಆಗತ್ತೆ ಎಂದ ನೆಟ್ಟಿಗರು

Viral Video: ಕೇರಳದ ಕಲ್ಲಿಕೋಟೆಯ ಕಡಲ ತೀರದಲ್ಲಿ ಬೃಹತ್‌ ಗಾತ್ರದ ತಿಮಿಂಗಿಲವೊಂದರ ಮೃತದೇಹ ಪತ್ತೆಯಾಗಿದೆ. ಅದರ ಬಳಿ ಜನ ಹೋಗಿ ನೋಡುತ್ತಿರುವ ದೃಶ್ಯ ವೈರಲ್‌ ಆಗಿದೆ. ತಿಮಿಂಗಿಲದ ಶವದ ಬಳಿ ತೆರಳಬೇಡಿ ಎಂದು ನೆಟ್ಟಿಗರು ಎಚ್ಚರಿಸಿದ್ದಾರೆ. ಅದಕ್ಕೇನು ಕಾರಣ? ಇಲ್ಲಿದೆ ವಿವರ.

VISTARANEWS.COM


on

bluewale
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ಕೇರಳದ ಕಲ್ಲಿಕೋಟೆ (Kozhikode) ಕಡಲ ತೀರದಲ್ಲಿ ಬೃಹತ್ ತಿಮಿಂಗಿಲದ ಶವವೊಂದು (Giant whale carcass) ಪತ್ತೆಯಾಗಿದೆ. ಈ ಬೃಹತ್‌ ಪ್ರಾಣಿಯ ಮೃತದೇಹದ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ʼಬ್ಲೂ ವೇಲ್‌ನ ಮೃತದೇಹ ಬೆಳಗ್ಗೆ ಕೋಯಿಕ್ಕೋಡ್‌ನ ದಕ್ಷಿಣ ಕಡಲ ತೀರದಲ್ಲಿ ಕಂಡು ಬಂತು. ಈ ಅಪರೂಪದ ನೀಲಿ ತಿಮಿಂಗಿಲಕ್ಕೆ ಸುಮಾರು 80-100 ವರ್ಷ ವಯಸ್ಸಾಗಿರಬಹುದು ಎಂದು ತಜ್ಞರು ಅಂದಾಜಿಸಿದ್ದಾರೆʼ ಎಂದು ಕ್ಯಾಪ್ಶನ್‌ ಬರೆಯಲಾಗಿದೆ. ಈ ಅಪರೂಪದ ಪ್ರಾಣಿಯನ್ನು ನೋಡಲು ಜನರು ತಂಡೋಪತಂಡವಾಗಿ ಆಗಮಿಸುವ ದೃಶ್ಯ (Viral Video) ವಿಡಿಯೊದಲ್ಲಿ ಸೆರೆಯಾಗಿದೆ.

ಈ ವಿಡಿಯೊವನ್ನು ಅಕ್ಟೋಬರ್‌ 1ರಂದು ಪೋಸ್ಟ್‌ ಮಾಡಲಾಗಿದ್ದು, ಇದುವರೆಗೆ 1 ಲಕ್ಷಕ್ಕಿಂತ ಅಧಿಕ ಮಂದಿ ವೀಕ್ಷಿಸಿದ್ದಾರೆ. ಅನೇಕ ಮಂದಿ ಈ ನೀಲ ತಿಮಿಂಗಿಲ ಕಡಲ ತೀರದಲ್ಲಿ ಕಂಡುಬಂದುದು ಹೇಗೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸಂತಬೊಮ್ಮಲಿ ಮಂಡಲದ ಮೇಘವರಂ ಗ್ರಾಮದ ಸಮುದ್ರ ದಂಡೆಯಲ್ಲಿ ಸತ್ತ ಬೃಹತ್‌ ಗಾತ್ರದ ತಿಮಿಂಗಿಲವೊಂದು ಪತ್ತೆಯಾಗಿತ್ತು. ಆ ತಿಮಿಂಗಿಲದ ಮೃತದೇಹವನ್ನು ಜನರು ವೀಕ್ಷಿಸುವ ವಿಡಿಯೊಗಳೊಂದಿಗೆ ಕೆಲವು ಸಮಯದ ಹಿಂದೆ ಎಲ್ಲೆಡೆ ಹರಿದಾಡಿತ್ತು. ಆಗ ಸತ್ತ ತಿಮಿಂಗಿಲವನ್ನು ಪರೀಕ್ಷಿಸಿದ ತಜ್ಞರು ಅದರ ವಿಶಿಷ್ಟ ಭೌತಿಕ ಗುಣಲಕ್ಷಣಗಳ ಆಧಾರದಲ್ಲಿ ಬ್ರೈಡ್ಸ್ ತಿಮಿಂಗಿಲ ಎಂದು ಗುರುತಿಸಿದ್ದರು. ಉಷ್ಣವಲಯದ ತಿಮಿಂಗಿಲಗಳು ಎಂದು ಕರೆಯಲ್ಪಡುವ ಬ್ರೈಡ್ಸ್ ತಿಮಿಂಗಿಲಗಳು ನಯವಾದ ದೇಹಗಳು ಮತ್ತು ತೆಳುವಾದ, ಚೂಪಾದ ಈಜಲು ಸಹಾಯ ಮಾಡುವ ಕೈಯಂತಹ ರಚನೆಗಳನ್ನು ಹೊಂದಿದೆ.

ಬೃಹತ್‌ ಗಾತ್ರ, ತೂಕ

ಕಲ್ಲಿಕೋಟೆಯಲ್ಲಿ ಕಂಡುಬಂದ ತಿಮಿಂಗಿಲ ಸುಮಾರು 50 ಅಡಿಗಳಷ್ಟು ಉದ್ದದ ದೇಹ ಹೊಂದಿದೆ. ತೂಕ ಸುಮಾರು 5 ಟನ್‌ ಇರಬಹುದು ಎಂದು ಅಂದಾಜಿಸಲಾಗಿದೆ. ಆಳವಿಲ್ಲದ ನೀರಿನಲ್ಲಿ ಸಿಕ್ಕಿ ಬಿದ್ದಿದ್ದರಿಂದ ಈ ತಿಮಿಂಗಿಲ ಅಲ್ಲಿಂದ ಹೊರ ಬರಲಾರದೆ ಮೃತಪಟ್ಟಿದ್ದಿರಬಹುದು ಎಂದು ಸ್ಥಳೀಯ ಮೀನುಗಾರರು ಊಹಿಸಿದ್ದಾರೆ.

ನೆಟ್ಟಿಗರು ಏನಂತಾರೆ?

ಈ ವಿಡಿಯೊ ನೋಡಿದ ನೆಟ್ಟಿಗರು ನಾನಾ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ”ದಯವಿಟ್ಟು ಆ ತಿಮಿಂಗಿಲದ ಮೃತದೇಹದ ಬಳಿ ಹೋಗಬೇಡಿ. ಅದು ಹೆಪ್ಪುಗಟ್ಟಿದರೆ ಸ್ಫೋಟಗೊಳ್ಳುವ ಸಾಧ್ಯತೆ ಇದೆ. ಇದು ಬಹಳ ಅಪಾಯಕಾರಿ” ಎಂದು ಒಂದಿಬ್ಬರು ಎಚ್ಚರಿಸಿದ್ದಾರೆ. ”ಸ್ಫೋಟಗೊಳ್ಳುವ ಮುನ್ನ ಅಧಿಕಾರಿಗಳು ಇದನ್ನು ವಿಲೇವಾರಿ ಮಾಡಬೇಕು” ಎಂದು ಇನ್ನೊಬ್ಬರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Viral News: ಹುಟ್ಟುಹಬ್ಬದಂದು ಮಗಳಿಗೆ ಕೊಳಕು ನೀರು ತುಂಬಿದ ಬಾಟಲಿ ನೀಡಿದ ತಂದೆ; ಹಿಂದಿದೆ ಅದ್ಭುತ ಪಾಠ

ತಿಮಿಂಗಿಲಗಳ ಮೃತದೇಹ ಸ್ಫೋಟಗೊಳ್ಳುತ್ತಾ?

ಹೀಗೊಂದು ಕುತೂಹಲ ಕೆಲವರಲ್ಲಿದೆ. ಇಂತಹ ಸಾಧ್ಯತೆ ಇದೆ ಎಂದು ತಜ್ಞರು ಹೇಳುತ್ತಾರೆ. ದೊಡ್ಡ ತಿಮಿಂಗಿಲಗಳ ಶವದ ಒಳಗೆ ಅನಿಲಗಳು ನಿರ್ಮಾಣವಾದಾಗ ಸ್ಫೋಟಗೊಳ್ಳಬಹುದು. ಕೆಲವೊಮ್ಮೆ ಈ ಸ್ಫೋಟ ಸಣ್ಣ ಪ್ರಮಾಣದಲ್ಲಿದ್ದರೆ ಇನ್ನು ಕೆಲವೊಮ್ಮೆ ಬೃಹತ್ ಪ್ರಮಾಣದಲ್ಲಿರುತ್ತದೆ. ಇದಕ್ಕೆ ಉದಾಹರಣೆಗಳೂ ಇವೆ. 2004ರ ಜನವರಿ 29ರಂದು ತೈವಾನ್‌ನ ತೈನಾನ್ ನಗರದಲ್ಲಿ ತಿಮಿಂಗಿಲದ ಶವ ಸ್ಫೋಟಿಸಿತು. 2021ರ ಆಗಸ್ಟ್‌ನಲ್ಲಿ ಅಮೇರಿಕಾದ ಟೊಮಾಲೆಸ್ ಕೊಲ್ಲಿಯ ಬಳಿ ತಿಮಿಂಗಿಲ ಸ್ಫೋಟಗೊಳ್ಳುವ ವಿಡಿಯೊ ವೈರಲ್‌ ಆಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli: ಪಂಜಾಬಿ ಮಾತನಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Virat Kohli: ಅಭ್ಯಾಸದ ವೇಳೆ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(Virat Kohli) ಪಂಜಾಬ್​ನ ಸ್ಥಳೀಯ ಕ್ರಿಕೆಟಿಗರೊಂದಿಗೆ ಪಂಜಾಬಿ ಮಾತನಾಡಿ ಗಮನಸೆಳೆದಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Virat Kohli
Koo

ಧರ್ಮಶಾಲಾ: ನಾಳೆ(ಗುರುವಾರ) ನಡೆಯುವ ಐಪಿಎಲ್​ನ(IPL 2024) 58ನೇ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(Punjab Kings)​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ಮುಖಾಮುಖಿಯಾಗಲಿವೆ. ಈ ಪಂದ್ಯ ಹಿಮಾಲಯದ ತಪ್ಪಲಿನ ರಮಣೀಯ ತಾಣವಾದ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(Virat Kohli) ಇಲ್ಲಿನ ಸ್ಥಳೀಯ ಆಟಗಾರರೊಂದಿಗೆ ಪಂಜಾಬಿ ಮಾತನಾಡಿ ಗಮನಸೆಳೆದಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಪಂಜಾಬ್​ನ ಸ್ಥಳೀಯ ಕ್ರಿಕೆಟಿಗರು ಕೂಡ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಶನ್‌ ಸ್ಟೇಡಿಯಂ (ಎಚ್‌ಪಿಸಿಎ)ನಲ್ಲಿ ಕ್ರಿಕೆಟ್​ ಅಭ್ಯಾಸ ನಡೆಸುತ್ತಿದ್ದರು. ಈ ವೇಳೆ ತಮ್ಮ ನೆಚ್ಚಿನ ಆಟಗಾರರ ವಿರಾಟ್​ ಕೊಹ್ಲಿಯ ಆಟೋಗ್ರಾಫ್​ ಪಡೆದುಕೊಂಡಿದ್ದಾರೆ. ಈ ವೇಳೆ ಕೊಹ್ಲಿ ಕೆಲವು ಪಂಜಾಬಿ ಪದಗಳನ್ನು ಹೇಳಿದ್ದಾರೆ. ಕೊಹ್ಲಿಯ ಪಂಜಾಬಿ ಮಾತುಗಳು ಕೇಳಿ ಸಹ ಆಟಗಾರರು ಜೋರಾಗಿ ನಕ್ಕಿದ್ದಾರೆ. ಕೊಹ್ಲಿ ಕೂಡ ಇವರೊಂದಿಗೆ ನಕ್ಕಿದ್ದಾರೆ.

ಶನಿವಾರ ನಡೆದಿದ್ದ ಗುಜರಾತ್​ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ 4 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat- Anushka) ಅವರು ಎದುರಾಳಿ ತಂಡದ ಆಟಗಾರ ಶಾರೂಖ್​ ಖಾನ್​ ಅವರನ್ನು ಮಿಂಚಿನ ಎಸೆತದ ಮೂಲಕ ರನೌಟ್​ ಮಾಡಿ ಗಮನಸೆಳೆದಿದ್ದರು. ಬುಲೆಟ್​ ಚಿಮ್ಮಿದ ವೇಗದಲ್ಲಿ ರನೌಟ್​ ಮಾಡಿದ್ದನ್ನು ಕಂಡು ಪತ್ನಿ ಅನುಷ್ಕಾ(Anushka Sharma) ದಂಗಾಗಿದ್ದರು. ಇದರ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿತ್ತು.

ಆರಂಭಿಕ ಆಘಾತ ಕಂಡಿದ್ದ ಗುಜರಾತ್​ಗೆ ಶಾರೂಖ್​ ಖಾನ್​ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್​ ಮೂಲಕ ಆಸರೆಯಾಗಿದ್ದರು. 24 ಎಸೆತಗಳಿಂದ 37 ರನ್​ ಗಳಿಸಿ ನಾನ್​ಸ್ಟ್ರೈಕ್​ನಲ್ಲಿದ್ದ ಶಾರೂಖ್ ಇಲ್ಲದ ರನ್​ ಕದಿಯಲು ಯತ್ನಿಸಿದ ವೇಳೆ ಚಿರತೆ ವೇಗದಲ್ಲಿ ಫೀಲ್ಡಿಂಗ್​ ನಡೆಸಿ ಕೊಹ್ಲಿ ಚೆಂಡನ್ನು ನೇರವಾಗಿ ವಿಕೆಟ್​ಗೆ ಎಸೆದು ರನೌಟ್​ ಮಾಡಿದರು. ಒಂದೊಮ್ಮೆ ಕೊಹ್ಲಿ ಈ ರನೌಟ್​ ಮಾಡದಿದ್ದರೆ ಶಾರೂಖ್​ ಆರ್​ಸಿಬಿಗೆ ಅಪಾಯಕಾರಿಯಾಗಿ ಗೋಚರಿಸುವ ಸಾಧ್ಯತೆಯೂ ಇತ್ತು.

ಇದನ್ನೂ ಓದಿ IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

ಗುಜರಾತ್​ ವಿರುದ್ಧ  6 ರನ್​ ಗಳಿಸುತ್ತಿದ್ದಂತೆ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 12500 ರನ್​ ಪೂರೈಸಿದ ಮೊದಲ ಭಾರತೀಯ ಎನಿಸಿಕೊಂಡರು. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಮೋಹಿತ್​ ಶರ್ಮ ಎಸೆದ ಇನಿಂಗ್ಸ್​ನ ಮೊದಲ ಓವರ್​ನ ದ್ವಿತೀಯ ಎಸೆತವನ್ನು ಸಿಕ್ಸರ್​ಗೆ ಬಡಿದಟ್ಟುವ ಮೂಲಕ ​ ವಿರಾಟ್​ ಕೊಹ್ಲಿ ರನ್​ ಖಾತೆ ತೆರೆದರು. ಜತೆಗೆ ಈ ರನ್​ ಮೂಲಕ ಟಿ20 ಕ್ರಿಕೆಟ್​ನಲ್ಲಿ 12500 ರನ್​ ಪೂರೈಸಿದರು. ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ವಿಂಡೀಸ್​ನ ಮಾಜಿ ಆಟಗಾರ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 14562 ರನ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಶೊಯೆಬ್ ಮಲಿಕ್ (13360) ದ್ವಿತೀಯ, ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್(12900) ತೃತೀಯ ಸ್ಥಾನದಲ್ಲಿದ್ದಾರೆ. ಕೊಹ್ಲಿ 12536* ರನ್​ಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ಅಂಬಾನಿಗಿಂತಲೂ ರಿಚ್‌ ಈತ.. ಗದ್ದೆ ಉಳುಮೆಗೆ 20 ಲಕ್ಷದ ಕಾರೇ ಬೇಕು..!

Viral Video: ಸಾಮಾನ್ಯವಾಗಿ ಗದ್ದೆ, ಹೊಲ ಉಳಮೆ ಮಾಡಲು ಟ್ರ್ಯಾಕ್ಟರ್‌ ಅಥವಾ ಸಾಂಪ್ರದಾಯಿಕ ಪದ್ಧತಿ ಅನುಸರಿಸುವುದಾದರೆ ಎತ್ತುಗಳನ್ನು ಬಳಸುತ್ತೇವೆ. ಆದರೆ ಇಲ್ಲೊಬ್ಬ ಭೂಪ ಗದ್ದೆ ಉಳುಮೆ ಬಳಸಿರೋದು ದುಬಾರಿ ಕಾರು. ಈ ಕಾರಿನ ಬೆಲೆ ಐದಲ್ಲ.. ಹತ್ತಲ್ಲ ಬರೋಬ್ಬರಿ 20 ಲಕ್ಷ ರೂ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ.

VISTARANEWS.COM


on

Viral video
Koo

ನವದೆಹಲಿ: ಈಗಿನ ಕಾಲದಲ್ಲಿ ಜನಪ್ರಿಯತೆ ಪಡೆಯಲು ಅಥವಾ ಪ್ರಚಾರ ಪಡೆಯಲು ಜನ ಏನು ಬೇಕಾದರೂ ಮಾಡಲು ತಯಾರಿರುತ್ತಾರೆ. ಬೇಗ ಫೇಮಸ್‌ ಆಗ್ಬೇಕು ಅನ್ನೋ ಹುಚ್ಚಿಗೆ ಬಿದ್ದು ಎಂಥಾ ರಿಸ್ಕ್‌ ತೆಗೆದುಕೊಳ್ಳೋಕೂ ರೆಡಿ ಆಗಿರುತ್ತಾರೆ. ಇಲ್ಲ, ತಮ್ಮ ಬೆಲೆ ಬಾಳುವ ವಸ್ತುಗಳನ್ನೂ ತಮ್ಮ ಮೋಜಿಗೆ ಪಣಕ್ಕಿಡುತ್ತಾರೆ. ಒಟ್ಟಿನಲ್ಲಿ ಪ್ರಚಾರ ಸಿಕ್ಕರೆ ಸಾಕು ಎಂಬ ಭಾವನೆ ಅವರದ್ದಾಗಿರುತ್ತದೆ. ಇದೀಗ ಅಂತಹದ್ದೇ ಒಂದು ಬಹಳ ಸದ್ದು ಮಾಡುತ್ತಿದೆ. ಸಾಮಾನ್ಯವಾಗಿ ಗದ್ದೆ, ಹೊಲ ಉಳಮೆ ಮಾಡಲು ಟ್ರ್ಯಾಕ್ಟರ್‌ ಅಥವಾ ಸಾಂಪ್ರದಾಯಿಕ ಪದ್ಧತಿ ಅನುಸರಿಸುವುದಾದರೆ ಎತ್ತುಗಳನ್ನು ಬಳಸುತ್ತೇವೆ. ಆದರೆ ಇಲ್ಲೊಬ್ಬ ಭೂಪ ಗದ್ದೆ ಉಳುಮೆ ಬಳಸಿರೋದು ದುಬಾರಿ ಕಾರು(Car). ಈ ಕಾರಿನ ಬೆಲೆ ಐದಲ್ಲ.. ಹತ್ತಲ್ಲ ಬರೋಬ್ಬರಿ 20 ಲಕ್ಷ ರೂ. ಸಾಮಾಜಿಕ ಜಾಲತಾಣ(Social Media)ದಲ್ಲಿ ವಿಡಿಯೋ(Viral Video)ವೊಂದು ವೈರಲ್‌ ಆಗುತ್ತಿದೆ.

ಸ್ಕೋರ್ಪಿಯೋ N ಎಂಬ 20 ಲಕ್ಷ ರೂ ಬೆಲೆ ಈ ದುಬಾರಿ ಕಾರನ್ನು ರೋಡಿನಲ್ಲಿ ಓಡಿಸುವ ಬದಲು ಇಲ್ಲೊಬ್ಬ ಗದ್ದೆ ಉಳುಮೆಗೆ ಬಳಸಿದ್ದಾನೆ. ಲಕ್ಷಾಂತರ ರೂ ಬೆಲೆ ಈ ಸುಂದರ ಕಾರನ್ನು ಟ್ರ್ಯಾಕ್ಟರ್‌ಗಳಾಗಿ ಪರಿವರ್ತಿಸಿ ಉಳುಮೆ ಮಾಡಿದ್ದಾನೆ. ವ್ಯಕ್ತಿಯೊಬ್ಬ ಐಷಾರಾಮಿ ಕಾರಿನೊಂದಿಗೆ ಕೆಸರು ಗದ್ದೆಯನ್ನು ಉಳುಮೆ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ವೀಡಿಯೋದಲ್ಲಿ ಕಾರಿನ ಹಿಂಬದಿಯಲ್ಲಿ ಟ್ರ್ಯಾಕ್ಟರ್ ನೇಗಿಲು ಜೋಡಿಸಲಾಗಿದ್ದು, ಕಾರು ಹೊಲವನ್ನು ಉಳುಮೆ ಮಾಡಲು ಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಕಾರು ಚಲಾಯಿಸಿಕೊಂಡು ಬಂದ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಕಾರಿನಿಂದ ಹಾಗೆಯೇ ಇಳಿಯುತ್ತಾನೆ. ಕಾರು ತನ್ನಷ್ಟಕ್ಕೆ ಮುಂದಕ್ಕೆ ಚಲಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಚಾಲಕ ಮುಖಕ್ಕೆ ಮಾಸ್ಕ್‌ ಹಾಕಿಕೊಂಡಿರುವುದರಿಂದ ಅವನ ಗುರುತು ಪತ್ತೆ ಆಗಿಲ್ಲ. ಇನ್ನು ಡ್ರೈವರ್‌ ಇಲ್ಲದೆಯೇ ಕಾರು ಚಲಿಸುತ್ತದೆ ಎಂದು ಒಬ್ಬ ವ್ಯಕ್ತಿ ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕೇಳಬಹುದಾಗಿದೆ. ಇನ್ನು ಇದು ಬರೀ ರೀಲ್ಸ್‌ಗಾಗಿ ಮಾಡಿರುವಂತೆ ಕಾಣುತ್ತಿದೆ. ಈ ಅಚ್ಚರಿಯ ವಿಡಿಯೋ ನೋಡಿ ಹಲವರು ದಂಗಾಗಿದ್ದಾರೆ. ದುಬಾರಿ ಕಾರನ್ನು ಕೊಂಡುಕೊಳ್ಳುವುದಕ್ಕೇ ಕಷ್ಟ ಪಡುತ್ತಿದ್ದರೆ ಈತ ಈ ರೀತಿಯಾಗಿ ಕಾರನ್ನು ಧೂಳಲ್ಲಿ ಮುಳುಗಿಸಿ ಗದ್ದೆ ಉಳುಮೆ ಮಾಡುತ್ತಿದ್ದಾನೆ ಎಂದು ಸಾಮಾಜಿಕ ಜಾಲತಾಣ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:Narendra Modi: “ನಾನು ಇಸ್ಲಾಂ ವಿರೋಧಿ ಅಲ್ಲ, ಆದರೆ ಮುಸ್ಲಿಮರು…”; ಕಾಂಗ್ರೆಸ್‌ ಆರೋಪದ ಬಗ್ಗೆ ಮೋದಿ ಹೇಳಿದ್ದೇನು?

ಈ ಶಾಕಿಂಗ್‌ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ @TorqueIndia ಐಡಿಯೊಂದಿಗೆ ಹಂಚಿಕೊಳ್ಳಲಾಗಿದೆ. ಕೇವಲ 32 ಸೆಕೆಂಡ್ ಗಳ ಈ ವೀಡಿಯೋವನ್ನು ಇದುವರೆಗೆ 2 ಲಕ್ಷ 83 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದು, ನೂರಾರು ಮಂದಿ ವಿಡಿಯೋವನ್ನು ಲೈಕ್ ಮಾಡಿದ್ದಾರೆ. Instagram ನಲ್ಲಿ ರಾಹುಲ್ ರಾವ್ (@rahul_raosaheb) ಅವರು ಹಂಚಿಕೊಂಡಿರುವ ಈ ವಿಡಿಯೋ ನೋಡಿದ ಜನರು ವಿಭಿನ್ನ ಪ್ರತಿಕ್ರಿಯೆ ನೀಡಿದ್ದು, ಈತ ಅಂಬಾನಿಗಿಂತಲೂ ಶ್ರೀಮಂತ ಎಂದು ರಿಯಾಕ್ಟ್‌ ಮಾಡಿದ್ದಾರೆ.

Continue Reading

ಕ್ರೀಡೆ

Shakib Al Hasan: ಸೆಲ್ಫಿ ತೆಗೆಯಲು ಬಂದ ಅಭಿಮಾನಿಗೆ ಥಳಿಸಲು ಮುಂದಾದ ಶಕಿಬ್; ವಿಡಿಯೊ ವೈರಲ್​

Shakib Al Hasan: ಶೇಖ್ ಜಮಾಲ್ ಧನ್ಮೊಂಡಿ ಕ್ಲಬ್ ಪರವಾಗಿ ಆಡುತ್ತಿರುವ ಶಕೀಬ್​ ಪಂದ್ಯಕ್ಕೂ ಮುನ್ನ ಸಹ ಆಟಗಾರರ ಜತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ಬಂದು ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಈ ಅಭಿಮಾನಿಯನ್ನು ಕಂಡ ಕೂಡಲೇ ಕೆರಳಿದ ಶಕೀಬ್ ಕುತ್ತಿಗೆಗೆ ಕೈಹಾಕಿ ಹೊಡೆಯಲು ಮುಂದಾಗಿದ್ದಾರೆ. ಈ ವಿಡಿಯೊ ಇದೀಗ ವೈರಲ್​ ಆಗುತ್ತಿದೆ.

VISTARANEWS.COM


on

Shakib Al Hasan
Koo

ಢಾಕಾ: ಬಾಂಗ್ಲಾದೇಶದ ಕ್ರಿಕೆಟ್​ ತಂಡದ ಹಿರಿಯ ಆಲ್​ರೌಂಡರ್​ ಶಕಿಬ್ ಅಲ್ ಹಸನ್‌(Shakib Al Hasan) ತಾಳ್ಮೆ ಕಳೆದುಕೊಂಡು, ಅಂಪೈರ್​ಗಳ ಜತೆ ಮತ್ತು ಅಭಿಮಾನಿಗಳ ನಡುವೆ ಈಗಾಗಲೇ ಹಲವು ಬಾರಿ ಕಿರಿಕ್​ ಮಾಡಿಕೊಂಡು ಸುದ್ದಿಯಾಗಿದ್ದರು. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ. ಸೆಲ್ಫಿ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಶಕಿಬ್​ ಥಳಿಸಲು ಮುಂದಾಗಿದ್ದಾರೆ. ಈ ವಿಡಿಯೊ ವೈರಲ್(Video Viral)​ ಆಗಿದ್ದು ಶಕಿಬ್​​ ವರ್ತನೆ ಬಗ್ಗೆ ಅನೇಕ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಕಣ್ಣಿನ ದೃಷ್ಟಿ ಸಮಸ್ಯೆಗೆ ಒಳಗಾಗಿದ್ದ ಶಕೀಬ್​ ಶಸ್ತ್ರಚಿಕಿತ್ಸೆಗೆ ಒಳಗಾಗಿ ಬಹುದಿನಗಳ ವಿಶ್ರಾಂತಿ ಪಡೆದಿದ್ದರು. ಇದೇ ಜೂನ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಆಡುವ ಸಲುವಾಗಿ ಢಾಕಾ ಪ್ರೀಮಿಯರ್ ಲೀಗ್​ನಲ್ಲಿ ಆಡಲಿಳಿದಿದ್ದಾರೆ.

ಶೇಖ್ ಜಮಾಲ್ ಧನ್ಮೊಂಡಿ ಕ್ಲಬ್ ಪರವಾಗಿ ಆಡುತ್ತಿರುವ ಶಕೀಬ್​ ಪಂದ್ಯಕ್ಕೂ ಮುನ್ನ ಸಹ ಆಟಗಾರರ ಜತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ಬಂದು ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಈ ಅಭಿಮಾನಿಯನ್ನು ಕಂಡ ಕೂಡಲೇ ಕೆರಳಿದ ಶಕೀಬ್, ಇಲ್ಲ ಫೋಟೊ ತೆಗೆಸಿಕೊಳ್ಳಲ್ಲ ಇಲ್ಲಿಂದ ಹೋಗು ಎಂದು ​ಸೂಚನೆ ನೀಡಿದ್ದಾರೆ. ಆದರೂ ಕೂಡ ಅಭಿಮಾನಿ ಮತ್ತೆ ಮತ್ತೆ ಫೋಟೊ ತೆಗೆಯಲು ಒತ್ತಾಯಿಸಿದಾಗ, ಅವರ ಕುತ್ತಿಗೆಗೆ ಕೈಹಾಕಿದ ಶಾಕಿಬ್ ಹೊಡೆಯಲು ಮುಂದಾದರು. ಈ ವಿಡಿಯೊ ಇದೀಗ ವೈರಲ್​ ಆಗುತ್ತಿದೆ.

ಶಕಿಬ್‌ ಅವರು ಈ ರೀತಿ ತಾಳ್ಮೆ ಕಳೆದುಕೊಂಡಿರುವುದು ಇದೇ ಮೊದಲೇನಲ್ಲ ಹಲವು ಬಾರಿ ಅವರು ಮೈದಾನದಲ್ಲಿ ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಅಂಪೈರ್‌ ಅವರೊಂದಿಗೆ ಶಕಿಬ್‌ ಹಲವು ಬಾರಿ ವಾಗ್ವಾದಕ್ಕೆ ಇಳಿದ ಹಲವು ನಿದರ್ಶನಗಳಿವೆ. ಕಳೆದ ಬಾರಿಯ ಬಾಂಗ್ಲಾ ಪ್ರೀಮಿಯರ್​ ಲೀಗ್​ನಲ್ಲಿ ಅಂಪೈರ್​ ಅವರು ಔಟ್​ ನೀಡಿಲ್ಲ ಎಂಬ ಕಾರಣಕ್ಕೆ ಶಬಿಕ್​ ವಿಕೆಟ್​ಗೆ ಕಾಲಿನಿಂದ ಒದ್ದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ Shakib Al Hasan : ರಾಜಕೀಯ ಆಟದಲ್ಲಿ ಗೆಲುವು ಕಂಡ ಶಕಿಬ್ ಅಲ್ ಹಸನ್​

ಹಿಂದೊಮ್ಮೆ ಜಾಹೀರಾತು ಪ್ರಚಾರದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ ಶಕಿಬ್‌ ಸಾಗುವ ಮಾರ್ಗದಲ್ಲಿ ಅನೇಕ ಕ್ರೀಡಾಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಮುಂದಾಗಿದ್ದರು. ಈ ವೇಳೆ ಅಭಿಮಾನಿಯೊಬ್ಬ ಗುಂಪಿನ ಮಧ್ಯೆಯಿಂದ ಫೋಟೊ ತೆಗೆಯಲು ಮುಂದಾಗಿದ್ದ ಇದರಿಂದ ಸಿಟ್ಟಿಗೆದ್ದ ಶಕೀಬ್​ತಲೆಯಿಂದ ಕ್ಯಾಪ್​ ಎಳೆದಿದ್ದರು. ಅಲ್ಲದೆ ಕ್ಯಾಪ್‌ ನಿಂದಲೇ ಒಂದೆರಡು ಬಾರಿ ಥಳಿಸಿದ್ದರು. 

Continue Reading

ವೈರಲ್ ನ್ಯೂಸ್

Viral Video: ಅಬ್ಬಾ.. ಎಂಥಾ ಭೀಕರ ದೃಶ್ಯ! ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿ ಒದ್ದಾಡಿ ಸಾವು

Viral Video:ಭಾರೀ ಮಳೆಯಲ್ಲಿ ಕರೆಂಟ್‌ ಶಾಕ್‌ ಹೊಡೆದು 40ವರ್ಷದ ಹಣ್ಣು-ತರಕಾರಿ ವ್ಯಾಪಾರಿಯೊಬ್ಬ ನೋಡ ನೋಡ್ತಿದ್ದಂತೆ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಫಕ್ರು ಎಂದು ಗುರುತಿಸಲಾಗಿದ್ದು, ನೀರು ತುಂಬಿದ್ದ ರಸ್ತೆ ದಾಟಿ ಬಂದು ವಿದ್ಯುತ್‌ ಕಂಬವನ್ನು ಮುಟ್ಟಿದ ಕೂಡಲೇ ಅವರಿಗೆ ಶಾಕ್‌ ಹೊಡೆದಿದೆ.

VISTARANEWS.COM


on

Koo

ಹೈದರಾಬಾದ್‌: ಭಾರೀ ಮಳೆಯಲ್ಲಿ ಕರೆಂಟ್‌ ಶಾಕ್‌(Electric Shock) ಹೊಡೆದು 40ವರ್ಷದ ಹಣ್ಣು-ತರಕಾರಿ ವ್ಯಾಪಾರಿಯೊಬ್ಬ ನೋಡ ನೋಡ್ತಿದ್ದಂತೆ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಫಕ್ರು ಎಂದು ಗುರುತಿಸಲಾಗಿದ್ದು, ನೀರು ತುಂಬಿದ್ದ ರಸ್ತೆ ದಾಟಿ ಬಂದು ವಿದ್ಯುತ್‌ ಕಂಬವನ್ನು ಮುಟ್ಟಿದ ಕೂಡಲೇ ಅವರಿಗೆ ಶಾಕ್‌ ಹೊಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌ (Viral Video) ಆಗುತ್ತಿದೆ.

ತೆಲಂಗಾಣದ ಬಹುದ್ದೂರ್‌ಪುರದಲ್ಲಿ ಈ ಘಟನೆ ನಡೆದಿದ್ದು, ಆರಂಭದಲ್ಲಿ ನೀರಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಕಂಡು ಆತ ಕುಡಿದು ಬಿದ್ದಿರುವುದೆಂದು ಭಾವಿಸಿದ ಜನ ನಿರ್ಲಕ್ಷ್ಯ ಮಾಡಿ ಹೋಗಿದ್ದರು. ಬಳಿಕ ಆತನನ್ನು ಗಮನಿಸಿದ ಪೊಲೀಸರು ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಆತನ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಫಕ್ರು ಜಲಾವೃತಗೊಂಡಿದ್ದ ರಸ್ತೆ ದಾಟಿ ಬಂದು ಅಲ್ಲೇ ಇದ್ದ ವಿದ್ಯುತ್‌ ಕಂಬವನ್ನು ಮುಟ್ಟುತ್ತಾನೆ ಆಗ ಇದ್ದಕ್ಕಿದ್ದಂತೆ ಆತ ಕುಸಿದು ಬಿದ್ದು ನೆಲದಲ್ಲಿ ಒದ್ದಾಡೋಕೆ ಶುರು ಮಾಡುವುದನ್ನು ವೈರಲಾಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ. ಬಹದ್ದೂರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಯಿ ಹಾಗೂ ಮಗು ವಿದ್ಯುತ್ ಶಾಕ್‌ ತಗುಲಿ ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ನಗರದ ಹೋಪ್ ಫಾರ್ಮ್‌ ಬಳಿ ಪಾದಚಾರಿ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತಾಯಿ – ಮಗು ತುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿತ್ತು .ಘಟನೆಯಲ್ಲಿ 23 ವರ್ಷ ವಯಸ್ಸಿನ ತಾಯಿ ಹಾಗೂ 9 ತಿಂಗಳ ಹೆಣ್ಣು ಮಗು ದುರ್ಮರಣ ಅಪ್ಪಿದೆ ಎಂದು ತಿಳಿದು ಬಂದಿದೆ. ಮೃತರನ್ನು ಸೌಂದರ್ಯಾಂದ್ ಹಾಗೂ ಆಕೆಯ ಮಗು ಸುವಿಕ್ಷಾ ಎಂದು ಗುರ್ತಿಸಲಾಗಿದೆ. ತಮಿಳುನಾಡಿನಿಂದ ಬೆಂಗಳೂರು ನಗರಕ್ಕೆ ತಾಯಿ – ಮಗು ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ:

ಪಾದಚಾರಿ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಕೂಡಲೇ ತಾಯಿ ಹಾಗೂ ಮಗು ಕೆಳಗೆ ಬಿದ್ದ ಒದ್ದಾಟ ನಡೆಸಿದರು. ಇಬ್ಬರಿಗೂ ಸಾಕಷ್ಟು ಸುಟ್ಟ ಗಾಯಗಳಾಗಿದ್ದವು. ತಾಯಿ ಹಾಗೂ ಮಗುವಿನ ಜೊತೆಗೆ ಇದ್ದ ಪತಿ ಸಂತೋಷ್ ಕುಮಾರ್ ಅವರು ತಮ್ಮ ಪತ್ನಿ ಹಾಗೂ ಮಗುವನ್ನು ಉಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸಿದರು. ಆದರೆ ಅವರ ಪ್ರಯತ್ನಗಳೆಲ್ಲವೂ ವಿಫಲವಾದವು. ಸಂತೋಷ್ ಕುಮಾರ್ ಅವರ ಕಣ್ಣೆದುರಲ್ಲೇ ಪತ್ನಿ ಹಾಗೂ ಮಗು ಸಾವನ್ನಪ್ಪಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು.

Continue Reading
Advertisement
SSLC Exam Result 2024 to be declared tomorrow Here are the details
ಶಿಕ್ಷಣ4 mins ago

SSLC Exam Result 2024: ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

Cooking Oils
ಆಹಾರ/ಅಡುಗೆ6 mins ago

Cooking Oils: ಭಾರತೀಯ ಅಡುಗೆ ಶೈಲಿಗೆ ಯೋಗ್ಯವಾದ 7 ಅಡುಗೆ ಎಣ್ಣೆಗಳಿವು

Karnataka Weather
ಕರ್ನಾಟಕ56 mins ago

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

Sam Pitroda
ಪ್ರಮುಖ ಸುದ್ದಿ1 hour ago

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

dina bhavishya read your daily horoscope predictions for May 09 2024
ಪ್ರಮುಖ ಸುದ್ದಿ2 hours ago

Dina Bhavishya: 12 ರಾಶಿಗಳ ಇಂದಿನ ಭವಿಷ್ಯ ಏನು? ಯಾರಿಗೆ ಪ್ಲಸ್‌? ಯಾರಿಗೆ ಮೈನಸ್!?

Pune
ದೇಶ7 hours ago

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಉತ್ತರ ಕನ್ನಡ8 hours ago

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Kulgam
ದೇಶ8 hours ago

Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

ವಿಸ್ತಾರ ಗ್ರಾಮದನಿ Vistara Gramadaani
ಕರ್ನಾಟಕ8 hours ago

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

LSG vs SRH
ಕ್ರೀಡೆ9 hours ago

LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌