Karimani Malika Ninalla: ಗೋಕರ್ಣದ ವಿದೇಶಿಯರ ಬಾಯಲ್ಲೂ ʻಕರಿಮಣಿ ಮಾಲಿಕ ರಾವುಲ್ಲಾʼ ಸಾಂಗ್‌! - Vistara News

ವೈರಲ್ ನ್ಯೂಸ್

Karimani Malika Ninalla: ಗೋಕರ್ಣದ ವಿದೇಶಿಯರ ಬಾಯಲ್ಲೂ ʻಕರಿಮಣಿ ಮಾಲಿಕ ರಾವುಲ್ಲಾʼ ಸಾಂಗ್‌!

ವಿದೇಶಿಗರು ಗಿಟಾರ್ ಬಾರಿಸುತ್ತಾ, ‘ಕರಿಮಣಿ ಮಾಲಿಕ ರಾವುಲ್ಲಾ..’ ಹಾಡನ್ನು ಹಾಡಿದ್ದಾರೆ. ಗೋಕರ್ಣದ ಬೀಚ್‌ನಲ್ಲಿ ವಿದೇಶಿಗರ ಬಾಯಲ್ಲಿ ಕನ್ನಡ ಹಾಡನ್ನು ಅಷ್ಟು ಮೆಲೋಡಿಯಸ್ ಆಗಿ ಕೇಳಿ ಕನ್ನಡಿಗರೇ ಥ್ರಿಲ್ ಆಗಿದ್ದಾರೆ.

VISTARANEWS.COM


on

gokarna foreigners singing karimani malika song
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿಜವಾದ ʻಬೆಳ್ಳುಳ್ಳಿ ಕಬಾಬ್‌ʼ ಖ್ಯಾತಿಯ ಚಂದ್ರು ಹಾಗೂ ʻರಾವುಲ್ಲʼ ಜತೆಗೂಡಿ ʻಕರಿಮಣಿ ಮಾಲಿಕʼ ನೀನಲ್ಲ ರೀಲ್ಸ್‌ ಶೇರ್‌ ಮಾಡಿದ ಬಳಿಕ ಇನ್ನಷ್ಟು ಪ್ರತಿಭೆಗಳು ಈ ರೀಲ್ಸ್‌ಗೆ ಲಿಪ್‌ ಸಿಂಕ್‌ ಮಾಡಿವೆ. ಇದುವರೆಗೆ ಈ ರೀಲ್ಸ್‌ಗೆ ಕ್ರೇಜ್‌ ಕಡಿಮೆಯಾಗಿಲ್ಲ. ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ʻಕರಿಮಣಿ ಮಾಲಿಕʼ ನೀನಲ್ಲ ರೀಲ್ಸ್‌ಗೆ ಇನ್ನಷ್ಟು ಮೆರಗು ನೀಡಿದರು. ಇದೀಗ ಗೋಕರ್ಣದ ವಿದೇಶಿಯರ ಬಾಯಲ್ಲೂ ʻಕರಿಮಣಿ ಮಾಲಿಕ ರಾವುಲ್ಲಾʼ ಸಾಂಗ್‌ ಸೌಂಡ್‌ ಮಾಡುತ್ತಿದೆ.

ಗೋಕರ್ಣದ (Gokarna) ಸಮುದ್ರ ದಂಡೆಯಲ್ಲಿ ಮತ್ತೆ ‘ಕರಿಮಣಿ ‘ ಸಾಂಗ್ ಕೇಳಿ ಬಂದಿದೆ. ವಿದೇಶಿಗರು ಈ ಹಾಡನ್ನು ಹಾಡುತ್ತ ಇರುವ ವೀಡಿಯೋ ಸಖತ್ ವೈರಲ್ ಆಗಿದೆ. ವಿದೇಶಿಗರು ಗಿಟಾರ್ ಬಾರಿಸುತ್ತಾ, ‘ಕರಿಮಣಿ ಮಾಲಿಕ ರಾವುಲ್ಲಾ..’ ಹಾಡನ್ನು ಹಾಡಿದ್ದಾರೆ. ಗೋಕರ್ಣದ ಬೀಚ್‌ನಲ್ಲಿ ವಿದೇಶಿಗರ ಬಾಯಲ್ಲಿ ಕನ್ನಡ ಹಾಡನ್ನು ಅಷ್ಟು ಮೆಲೋಡಿಯಸ್ ಆಗಿ ಕೇಳಿ ಕನ್ನಡಿಗರೇ ಥ್ರಿಲ್ ಆಗಿದ್ದಾರೆ.

ಇದನ್ನೂ ಓದಿ: Karimani Malika Ninalla: ʻಕರಿಮಣಿ ಮಾಲೀಕ ನೀನಲ್ಲ’ ಮೂಲ ಹಾಡನ್ನು ಹಾಡಿದ ಗಾಯಕಿ ಸಿಕ್ಕೇ ಬಿಟ್ರು ನೋಡಿ!

ವಿದೇಶಿಯರ ಬಾಯಲ್ಲೂ ʻಕರಿಮಣಿʼ!

ಉಪೇಂದ್ರ’ ಸಿನಿಮಾದ “ಓ ನಲ್ಲ..” ಹಾಡು ಇಷ್ಟೊಂದು ಟ್ರೆಂಡಿಂಗ್‌ನಲ್ಲಿ ಇರಲು ಕಾರಣ ಕಲ್ಯಾಣ ಕರ್ನಾಟಕ ಭಾಗದ ಕನಕ ಅವರು. ಕನಕ ತಮ್ಮ ಇನ್‌ಸ್ಟಾದಲ್ಲಿ ಪ್ರೀತಿಸಿದ ಹುಡುಗಿ ಕೈ ಕೊಟ್ಟು ಹೋದಾಗ ಆಕೆ ಹೇಳಿದ ಮಾತುಗಳು ಎಂದು ಹೇಳಿ ಈ ಹಾಡಿನ ಸಾಲುಗಳನ್ನು ಪೋಸ್ಟ್‌ ಮಾಡಿದ್ದರು. ಇದು ಸಖತ್‌ ವೈರಲ್‌ ಆಗಿತ್ತು. ಅಲ್ಲಿಂದ ಹಲವಾರು ಪ್ರತಿಭೆಗಳು ರೀಲ್ಸ್‌ ಹಂಚಿಕೊಂಡಿದೆ. ಅದರ ಜತೆಗೆ ಇನ್ನು ಹೋಟೆಲ್ ಉದ್ಯಮಿ ಹಾಗೂ ಬಾಣಸಿಗ ಚಂದ್ರು ಮಾಡಿದ ತಮ್ಮ ವಿಡಿಯೋಗಳಲ್ಲಿ “ರಾವುಲ್ಲಾ.. ರಾವುಲ್ಲಾ” ಎಂದು ಹೇಳಿರುವುದು ವೈರಲ್ ಆಗಿಬಿಟ್ಟಿದೆ.

ಇದನ್ನೂ ಓದಿ; Karimani Malika Ninalla: ʻಕರಿಮಣಿ ಮಾಲೀಕ ನೀನಲ್ಲ’ ಮೂಲ ಹಾಡನ್ನು ಹಾಡಿದ ಗಾಯಕಿ ಸಿಕ್ಕೇ ಬಿಟ್ರು ನೋಡಿ!

1999ರಲ್ಲಿ ʻಉಪೇಂದ್ರʼ ಸಿನಿಮಾ ಬಿಡುಗಡೆಯಾಗಿತ್ತು. 1999ರ ಅಕ್ಟೋಬರ್ 22ಕ್ಕೆ ಬಿಡುಗಡೆಯಾದ ಈ ಸಿನಿಮಾ ಹಿಟ್ ಆಗಿತ್ತು. ನಟಿ ಪ್ರೇಮಾ, ರವೀನಾ ಟಂಡನ್, ದಾಮಿನಿ ಮೂವರು ನಾಯಕಿಯರಾಗಿದ್ದರು. ಈ ಹಾಡು ಮಾತ್ರವಲ್ಲ ಸಿನಿಮಾದ ಇತರೆ ಹಾಡುಗಳು ಕೂಡ ಭಾರಿ ಸದ್ದು ಮಾಡಿದ್ದವು.

ಏನಿಲ್ಲ..ಏನಿಲ್ಲ ಪದ ಹುಟ್ಟಿದ್ದು ಹೇಗೆ?

ಆಗ ಉಪೇಂದ್ರ ಹಾಗೂ ಪ್ರೇಮಾ ಮಧ್ಯೆ ಏನೋ ಇದೆ ಎನ್ನುವ ಗಾಸಿಪ್‌ಗಳು ಹುಟ್ಟಿಕೊಂಡಿದ್ದವು. ಹಾಗೇನೂ ಇಲ್ಲ ಎಂದು ಹೇಳಲು ʻಉಪೇಂದ್ರʼ ಸಿನಿಮಾದಲ್ಲಿ ಗುರು ಕಿರಣ್ ಈ ಹಾಡು ಮಾಡಲು ಪ್ಲಾನ್ ಮಾಡಿದ್ದರು. ಏನಿಲ್ಲ ಏನಿಲ್ಲ ಅಂತಲೇ ಶುರು ಮಾಡಿದ್ದರು. ಹಾಗೆ ಏನೀಲ್ಲ ಏನೀಲ್ಲ ನನ್ನ ನಿನ್ನ ನಡುವೆ ಏನಿಲ್ಲ… ಹೀಗೆ ಹಲವು ಪದಗಳು ಸೇರಿ ಒಂದು ಪಲ್ಲವಿ ಕೂಡ ಆಗಿತ್ತು. ಉಪ್ಪಿ ಹೆಸರಿನ ಸಿನಿಮಾಕ್ಕೂ ಗುರುಕಿರಣ್ ಸಂಗೀತ ಕೊಟ್ಟಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Rupert Murdoch: ಮಾಧ್ಯಮ ಲೋಕದ ದೊರೆಗೆ ಐದನೇ ಮದುವೆ; 93ನೇ ವಯಸ್ಸಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ರೂಪರ್ಟ್ ಮುರ್ಡೋಕ್

Rupert Murdoch:ಜೂನ್ 1 ರಂದು ರೂಪರ್ಟ್ ಮುರ್ಡೋಕ್ ತಮ್ಮ ಕ್ಯಾಲಿಫೋರ್ನಿಯಾದ ವೈನ್‌ಯಾರ್ಡ್ ಮತ್ತು ಎಸ್ಟೇಟ್ ಮೊರಾಗದಲ್ಲಿ 62 ವರ್ಷದ ಎಲೆನಾ ಝುಕೋವಾ ಅವರನ್ನು ವಿವಾಹವಾಗಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಎಲೆನಾ ನಿವೃತ್ತ ಜೀವಶಾಸ್ತ್ರಜ್ಞೆ ಎಂದು ಹೇಳಲಾಗಿದೆ. ಅಲ್ಲದೆ ರಷ್ಯಾ ಮೂಲದವರಾದ ಅವರು ಅಮೆರಿಕಾಗೆ ವಲಸೆ ಬಂದಿದ್ದಾರೆ.

VISTARANEWS.COM


on

Rupert Murdoch
Koo

ಅಮೆರಿಕ: ಮಾಧ್ಯಮ ಲೋಕದ ಅನಭಿಷಿಕ್ತ ದೊರೆ ರೂಪರ್ಟ್ ಮುರ್ಡೋಕ್(Rupert Murdoch) ತಮ್ಮ 93ನೇ ವಯಸ್ಸಿನಲ್ಲಿ ಐದನೇ ಮದುವೆ ಮಾಡಿಕೊಂಡಿದ್ದಾರೆ. ತಮ್ಮ ಇಳಿವಯಸ್ಸಿನಲ್ಲಿ ರಷ್ಯಾ(Russia) ಮೂಲದ 67 ವರ್ಷದ ಎಲೆನಾ ಜೊತೆ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದು, ಅಮೆರಿಕಾದ ಕ್ಯಾಲಿಫೋರ್ನಿಯ(California)ದಲ್ಲಿರುವ ಅವರ ಫಾರ್ಮ್ ಹೌಸ್ ನಲ್ಲಿ ಈ ವಿವಾಹ ಸಮಾರಂಭ ನೆರವೇರಿದೆ. ಈ ಸಂದರ್ಭದಲ್ಲಿ ಆತ್ಮೀಯರು ಹಾಗೂ ಹತ್ತಿರದ ಸಂಬಂಧಿಗಳು ಉಪಸ್ಥಿತರಿದ್ದರು.

ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಇಬ್ಬರ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎನ್ನಲಾಗಿತ್ತು. ಆದರೆ ಬಹುತೇಕರು ಇದು ಸುಳ್ಳು ಸುದ್ದಿ ಎಂದೇ ನಂಬಿದ್ದರು. ಆದರೆ ಇದೀಗ ಜೂನ್ 1ರಂದು ಈ ಜೋಡಿ ವಿವಾಹವಾಗಿದ್ದಾರೆ ಎಂದು ತಿಳಿದುಬಂದಿದೆ. ಜೂನ್ 1 ರಂದು ತಮ್ಮ ಕ್ಯಾಲಿಫೋರ್ನಿಯಾದ ವೈನ್‌ಯಾರ್ಡ್ ಮತ್ತು ಎಸ್ಟೇಟ್ ಮೊರಾಗದಲ್ಲಿ 62 ವರ್ಷದ ಎಲೆನಾ ಝುಕೋವಾ ಅವರನ್ನು ವಿವಾಹವಾಗಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಎಲೆನಾ ನಿವೃತ್ತ ಜೀವಶಾಸ್ತ್ರಜ್ಞೆ ಎಂದು ಹೇಳಲಾಗಿದೆ. ಅಲ್ಲದೆ ರಷ್ಯಾ ಮೂಲದವರಾದ ಅವರು ಅಮೆರಿಕಾಗೆ ವಲಸೆ ಬಂದಿದ್ದಾರೆ.

ಮುರ್ಡೋಕ್ ಅವರ ಮೂರನೇ ಪತ್ನಿ ವೆಂಡಿ ಡೆಂಗ್ ಮೂಲಕ ನೂತನ ದಂಪತಿಯ ಸಂಬಂಧವು ಪ್ರಾರಂಭವಾಯಿತು. 1991 ರಲ್ಲಿ ಮಾಸ್ಕೋದಿಂದ ಅಮೆರಿಕಗೆ ವಲಸೆ ಬಂದ ನಿವೃತ್ತ ಆಣ್ವಿಕ ಜೀವಶಾಸ್ತ್ರಜ್ಞ ಝುಕೋವಾ ಅವರು ಹಿಂದೆ ಬಿಲಿಯನೇರ್ ಇಂಧನ ಹೂಡಿಕೆದಾರ ಅಲೆಕ್ಸಾಂಡರ್ ಝುಕೋವ್ ಅವರನ್ನು ವಿವಾಹವಾಗಿದ್ದರು. ಆಗಾಗ ಇಬ್ಬರು ಕೆಲವು ಪ್ರಸಿದ್ಧ ಹೋಟೆಲ್‌ಗಳು, ಹಾಲಿಡೆ ಡೆಸ್ಟಿನೇಷನ್‌ಗಳಲ್ಲಿ ಕಂಡುಬಂದಿದ್ದರು.

ಆರು ಮಕ್ಕಳನ್ನು ಹೊಂದಿರುವ ರೂಪರ್ಟ್ ಮುರ್ಡೋಕ್ ಮೊದಲಿಗೆ ಆಸ್ಟ್ರೇಲಿಯನ್ ಫ್ಲೈಟ್ ನಲ್ಲಿ ಪರಿಚಾರಿಕೆಯಾಗಿದ್ದ ಪೆಟ್ರಿಷಿಯಾ ಜೊತೆ ಮದುವೆಯಾಗಿದ್ದು, 1960ರಲ್ಲಿ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು. ಆ ಬಳಿಕ ಅನ್ನಾ ಎಂಬ ವರದಿಗಾರ್ತಿಯನ್ನು ರೂಪರ್ಟ್ ಮುರ್ಡೂಕ್ ಮದುವೆ ಮಾಡಿಕೊಂಡಿದ್ದು ಅವರೊಂದಿಗೆ ಸುಧೀರ್ಘ 30 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿ 1999 ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದರು. ಮುರ್ಡೂಕ್ ಅವರ ಮೂರನೇ ಮದುವೆ 2013ರಲ್ಲಿ ಮುರಿದು ಬಿದ್ದಿತ್ತು. ಮಾಡೆಲ್ ಜೆರ್ರಿ ಜೊತೆ ನಾಲ್ಕನೇ ಬಾರಿಗೆ ಮದುವೆಯಾಗಿದ್ದ ರೂಪರ್ಟ್ ಮುರ್ಡೋಕ್ ಬಳಿಕ ವಿಚ್ಛೇದನ ಪಡೆದುಕೊಂಡಿದ್ದು, ವಾಲ್ ಸ್ಟ್ರೀಟ್ ಜರ್ನಲ್, ಫಾಕ್ಸ್ ನ್ಯೂಸ್ ನಂತಹ ಬಹುದೊಡ್ಡ ಮಾಧ್ಯಮ ಸಂಸ್ಥೆಗಳ ಒಡೆಯರಾಗಿರುವ ಮುರ್ಡೋಕ್ ಈಗ ಐದನೇ ಮದುವೆ ಮಾಡಿಕೊಂಡಿದ್ದಾರೆ.

ಯಾರು ಈ ರೂಪರ್ಟ್ ಮುರ್ಡೋಕ್?

ರೂಪರ್ಟ್ ಮುರ್ಡೋಕ್ ದಿ ವಿಲ್ ಸ್ಟ್ರೀಟ್ ಜರ್ನಲ್, ದಿ ಸನ್, ದಿ ಟೈಮ್ಸ್, ನ್ಯೂಯಾರ್ಕ್ ಪೋಸ್ಟ್, ಹೆರಾಲ್ಡ್ ಸನ್ ಮತ್ತು ದಿ ಡೈಲಿ ಟೆಲಿಗ್ರಾಫ್ ಇತರೆ ಪ್ರಸಿದ್ಧ ಸುದ್ದಿ ಮಾಧ್ಯಮಗಳ ಒಡೆಯರಾಗಿದ್ದರು. ಇವರು ಪೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 2022ರಲ್ಲಿ 31ನೇ ಸ್ಥಾನ ಪಡೆದಿದ್ದರು. ರೂಬರ್ಟ್ ಮುರ್ಡೋಕ್ ಅವರ ನಿವ್ವಳ ಆಸ್ತಿ ಮೌಲ್ಯವು 21.7 ಬಿಲಿಯನ್ ಡಾಲರ್ ಆಗಿದೆ. ಆಸ್ಟ್ರೇಲಿಯಾದಲ್ಲಿ 1952 ರಲ್ಲಿ ತನ್ನ ತಂದೆಯಿಂದ ವಾರ್ತಾಪತ್ರಿಕೆಯನ್ನು ಪಡೆದ ಮುರ್ಡೋಕ್ ತನ್ನ ಸಾಮ್ರಾಜ್ಯವನ್ನು ಯುನೈಟೆಡ್ ಸ್ಟೇಟ್ಸ್ ಮತ್ತು ಬ್ರಿಟನ್‌ಗೂ ವಿಸ್ತರಿಸಿದ್ದರು. ಮುರ್ಡೋಕ್ 1996ರಲ್ಲಿ ಫಾಕ್ಸ್ ನ್ಯೂಸ್ ಚಾನೆಲ್ ಅನ್ನು ಸ್ಥಾಪಿಸಿದರು. ಬಳಿಕ ಫಾಕ್ಸ್ ನ್ಯೂಸ್ ಸಂಸ್ಥೆ ದೊಡ್ಡ ಜಾಲವಾಗಿ ಹರಡಿತು. ಫಾಕ್ಸ್ ನ್ಯೂಸ್‌ನ ಪೋಷಕ ಕಂಪನಿ ಮತ್ತು ನ್ಯೂಸ್ ಕಾರ್ಪೊರೇಷನ್‌ನ ಹುದ್ದೆಗಳಿಂದ ಅವರು ನಿವೃತ್ತಿ ಪಡೆದರು. ಬಳಿಕ ಅವರ ಪುತ್ರ ಲಾಚ್ಲಾನ್ ಮುರ್ಡೋಕ್, ಆಧುನಿಕತೆಯ ಮೇಲೆ ಸಾಕಷ್ಟು ಪ್ರಭಾವ ಬೀರಿದ ವ್ಯವಹಾರದ ನಿಯಂತ್ರಣವನ್ನು ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ:Lok Sabha Election 2024: ವಿಜಯೋತ್ಸವಕ್ಕೆ ಬಿಜೆಪಿ ಪ್ಲ್ಯಾನ್‌ ಹೇಗಿದೆ? ಈಗಿನಿಂದಲೇ ಶುರು ಭರ್ಜರಿ ತಯಾರಿ

Continue Reading

ವಿದೇಶ

Shootout: ಬರ್ತ್‌ ಡೇ ಪಾರ್ಟಿಯಲ್ಲಿ ಭಾರೀ ಶೂಟೌಟ್‌-27 ಮಂದಿಗೆ ಗುಂಡೇಟು

Shootout: ಓಹಿಯೋ ರಾಜ್ಯದ ಅಕ್ರಾನ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ಕೆಲ್ಲಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ 10 ಗಂಟೆಗೆ ಬರ್ತ್‌ ಡೇ ಪಾರ್ಟಿವೊಂದನ್ನು ಆಯೋಜಿಸಲಾಗಿತ್ತು. ಹೀಗಾಗಿ ಸುಮಾರು 200ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮನೆಯ ಎದುರುಗಡೆ ಇರುವ ರಸ್ತೆಯಲ್ಲಿ ಜನ ಕಿಕ್ಕಿರಿದಿದ್ದ ಹಿನ್ನೆಲೆ ಟ್ರಾಫಿಕ್‌ ಸಮಸ್ಯೆಯೂ ಉಂಟಾಗಿತ್ತು ಹೀಗಾಗಿ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಸ್ತೆ ಕ್ಲಿಯರ್‌ ಮಾಡುವಂತೆ ಸೂಚಿಸಿದ್ದರು. ಇದಾದ ಬಳಿಕ ಅವರು ಅಲ್ಲಿಂದ ತೆರಳಿದ್ದರು.

VISTARANEWS.COM


on

Shootout
Koo

ಅಕ್ರಾನ್‌ : ಕೆಲವೊಮ್ಮೆ ಸಣ್ಣ ಪುಟ್ಟ ಗಲಾಟೆ ಜಗಳ, ಕೋಪ, ಎಡವಟ್ಟಿನಿಂದಾಗಿ ಅದೆಂಥಾ ದೊಡ್ಡ ಸಂಭ್ರಮಾಚರಣೆ ಆಗಿದ್ದರೂ ಅದನ್ನು ಒಂದು ಕ್ಷಣದಲ್ಲಿ ಸ್ಮಶಾನವನ್ನಾಗಿಸಿ ಬಿಡುತ್ತದೆ. ಅಂತಹದ್ದೇ ಒಂದು ಘಟನೆ ಅಮೆರಿಕದ ಓಹಿಯೋ ರಾಜ್ಯದಲ್ಲಿ ನಡೆದಿದೆ. ಸಂಭ್ರಮದಿಂದ ನಡೆಯುತ್ತಿದ್ದ ಬರ್ತ್‌ ಡೇ ಪಾರ್ಟಿ(Birthday Party) ದುರಂತ ಅಂತ್ಯ ಕಂಡಿದೆ. ಏಕಾಏಕಿ ಶೂಟೌಟ್‌(Shootout) ನಡೆದಿದ್ದು, ಬರೋಬ್ಬರಿ 27 ಮಂದಿಗೆ ಗುಂಡೇಟು ಬಿದ್ದಿದೆ. ಇನ್ನು ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ಘಟನೆ ವಿವರ:

ಓಹಿಯೋ ರಾಜ್ಯದ ಅಕ್ರಾನ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ಕೆಲ್ಲಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ 10 ಗಂಟೆಗೆ ಬರ್ತ್‌ ಡೇ ಪಾರ್ಟಿವೊಂದನ್ನು ಆಯೋಜಿಸಲಾಗಿತ್ತು. ಹೀಗಾಗಿ ಸುಮಾರು 200ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮನೆಯ ಎದುರುಗಡೆ ಇರುವ ರಸ್ತೆಯಲ್ಲಿ ಜನ ಕಿಕ್ಕಿರಿದಿದ್ದ ಹಿನ್ನೆಲೆ ಟ್ರಾಫಿಕ್‌ ಸಮಸ್ಯೆಯೂ ಉಂಟಾಗಿತ್ತು ಹೀಗಾಗಿ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಸ್ತೆ ಕ್ಲಿಯರ್‌ ಮಾಡುವಂತೆ ಸೂಚಿಸಿದ್ದರು. ಇದಾದ ಬಳಿಕ ಅವರು ಅಲ್ಲಿಂದ ತೆರಳಿದ್ದರು. ಇದಾದ ಕೆಲವೇ ಹೊತ್ತಲ್ಲಿ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆ ಪೊಲೀಸರಿಗೆ ಬ್ಯಾಕ್‌ ಟು ಬ್ಯಾಕ್‌ ಕರೆಗಳು ಹೋಗಿವೆ. ಸ್ಥಳಕ್ಕೆ ಬಂದು ನೋಡಿದಾಗ 25ಜನ ಗುಂಡೇಟು ತಗುಲಿ ಗಂಭಿರವಾಗಿ ಗಾಯಗೊಂಡು ಸ್ಥಳದಲ್ಲೇ ಜೀವನ್ಮರಣದ ನಡುವೆ ಹೋರಾಡುತ್ತಿದ್ದರು.

ಇನ್ನು ಘಟನೆಯಲ್ಲಿ 27ವರ್ಷದ ಒಬ್ಬ ಯುವಕ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಬಹಳ ಗಂಭೀರವಾಗಿದೆ. ಇನ್ನು ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ, ರೈಫಲ್‌ನಿಂದ ಕೇಸಿಂಗ್‌ಗಳು ಸೇರಿದಂತೆ ಎರಡು ಬಂದೂಕುಗಳು ಮತ್ತು ಅನೇಕ ರೀತಿಯ ಶೆಲ್ ಕೇಸಿಂಗ್‌ಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Parvathi Menon: ಸದ್ದಿಲ್ಲದೇ ಮದುವೆಯಾದ್ರಾ ʻಮಿಲನʼ ನಾಯಕಿ ಪಾರ್ವತಿ ಮೆನನ್?

Continue Reading

ವೈರಲ್ ನ್ಯೂಸ್

YouTube channels: ಅತಿ ಹೆಚ್ಚು ಸಬ್‌ಸ್ಕ್ರೈಬರ್‌ಗಳನ್ನು ಹೊಂದಿರುವ ಟಾಪ್‌ 10 ಯುಟ್ಯೂಬ್‌ ಚಾನೆಲ್‌ಗಳಿವು!

ಲಕ್ಷಾಂತರ ಯುಟ್ಯೂಬ್ ಚಾನೆಲ್ ಗಳಿದ್ದು ಇದರಲ್ಲಿ ಅತೀ ಹೆಚ್ಚು ಚಂದಾದಾರನ್ನು ಹೊಂದಿರುವ ಮೊದಲ ಹತ್ತು ಯು ಟ್ಯೂಬ್ ಚಾನೆಲ್ ಗಳು (YouTube channels) ಯಾವುದು ಗೊತ್ತೇ? ಅತಿ ಹೆಚ್ಚು ಚಂದಾದಾರರನ್ನು ಹೊಂದಿರುವ ಹತ್ತು ಯುಟ್ಯೂಬ್‌ ಚಾನೆಲ್‌ಗಳ ವಿವರ ಇಲ್ಲಿದೆ.

VISTARANEWS.COM


on

By

YouTube channels
Koo

ಲಕ್ಷಾಂತರ ಯೂಟ್ಯೂಬ್ ಚಾನೆಲ್‌ಗಳಿದ್ದು (YouTube channels) ಇದರಲ್ಲಿ ಮಿಸ್ಟರ್ ಬೀಸ್ಟ್ (MrBeast) 267 ಮಿಲಿಯನ್ ಚಂದಾದಾರರನ್ನು (subscribers) ಹೊಂದಿದ್ದು, ಅತೀ ಹೆಚ್ಚು ಸಬ್ ಸ್ಕ್ರೈಬ್ ಆಗಿರುವ ಯುಟ್ಯೂಬ್ ಚಾನೆಲ್ ಎಂಬ ಖ್ಯಾತಿಯನ್ನು ಪಡೆದಿದೆ. ಟಿ-ಸಿರೀಸ್‌ಅನ್ನು (T-Series) ಕೆಳಗಿಳಿಸಿ ಮಿಸ್ಟರ್ ಬೀಸ್ಟ್ ಮೊದಲ ಸ್ಥಾನವನ್ನು ಪಡೆದಿದೆ.

ಯು ಟ್ಯೂಬ್‌ನಲ್ಲಿ ಟಿ-ಸಿರೀಸ್ 266 ಮಿಲಿಯನ್ ಚಂದಾದಾರರನ್ನು ಹೊಂದಿದೆ. ಇದರ ಬಳಿಕ ಕೊಕೊಮೆಲನ್ – ನರ್ಸರಿ ರೈಮ್ಸ್ (Cocomelon – Nursery Rhymes) 176 ಮಿಲಿಯನ್, ಎಸ್ ಇಟಿ ಇಂಡಿಯಾ (SET India) 173 ಮಿಲಿಯನ್, ಕಿಡ್ಸ್ ಡಯಾನಾ ಶೋ (Kids Diana Show) 122 ಮಿಲಿಯನ್, ವ್ಲಾಡ್ ಮತ್ತು ನಿಕಿ (Vlad and Niki) 118 ಮಿಲಿಯನ್, ಲೈಕ್ ನಾಸ್ತ್ಯ (Like Nastya) 116 ಮಿಲಿಯನ್, ಪ್ಯೂಡಿಪಿ (Pewdiepie) 111 ಮಿಲಿಯನ್, ಝೀ ಸಂಗೀತ ಕಂಪೆನಿ (Zee Music Company) 107 ಮಿಲಿಯನ್ ಮತ್ತು WWE 102 ಮಿಲಿಯನ್ ಚಂದಾದಾರನ್ನು ಹೊಂದಿದೆ.

ಮಿಸ್ಟರ್ ಬೀಸ್ಟ್ ಭಾನುವಾರ ಟಿ-ಸರಣಿಯನ್ನು ಮೀರಿಸಿ ಅತಿ ಹೆಚ್ಚು ಚಂದಾದಾರರಾಗಿರುವ ಯೂಟ್ಯೂಬರ್ ಆಗಿ ಹೊರಹೊಮ್ಮಿದೆ. 26 ವರ್ಷದ ಮಿಸ್ಟರ್ ಬೀಸ್ಟ್ ಅವರ ನಿಜವಾದ ಹೆಸರು ಜೇಮ್ಸ್ ಸ್ಟೀಫನ್. ತಮ್ಮ ಸಾಧನೆಯನ್ನು ಕೊಂಡಾಡುತ್ತಾ ಮಿಸ್ಟರ್ ಬೀಸ್ಟ್ ಹೀಗೆ ಬರೆದಿದ್ದಾರೆ: ಆರು ವರ್ಷಗಳ ಅನಂತರ ನಾವು ಅಂತಿಮವಾಗಿ ಪ್ಯೂಡಿಪಿಯ (PewDiePie) ಮೇಲೆ ಸೇಡು ತೀರಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಮಿಸ್ಟರ್ ಬೀಸ್ಟ್ ಈ ವಾರದ ಆರಂಭದಲ್ಲೇ 2018ರ ಟಿ-ಸೀರೀಸ್‌ನೊಂದಿಗೆ ಚಂದಾದಾರರನ್ನು ಹೆಚ್ಚಿಸುವ ಪೈಪೋಟಿಗೆ ಇಳಿದಿತ್ತು. ಈ ಸಮಯದಲ್ಲಿ PewDiePie ಗೆ ಸಹಾಯ ಮಾಡುವ ಕುರಿತು ಅವರು ಹೇಳಿದ್ದರು. ಜಾನ್ ಯೂಶೈ ಅವರೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಮಿಸ್ಟರ್ ಬೀಸ್ಟ್ ಜೇಮ್ಸ್ ಸ್ಟೀಫನ್ ಅವರು, ಇದು ಅಮೆರಿಕ ಮತ್ತು ಭಾರತದ ವಿರುದ್ಧ ನಡೆದ ಯುದ್ಧ ಎಂದು ನಾನು ಭಾವಿಸುವುದಿಲ್ಲ. ಪ್ರಾರಂಭದಲ್ಲಿ ಇದು ಮೊದಲು ಸ್ವಲ್ಪ ಜನಾಂಗೀಯತೆ ರೂಪವನ್ನು ಪಡೆಯಿತು. ಅಲ್ಲದೇ ಇದು ಭಾರತ ವಿರುದ್ಧ ಅಮೆರಿಕ ಚರ್ಚೆಯಾಗಿ ಬದಲಾಗಬಹುದೆಂಬ ಭಯವಿತ್ತು ಎಂದರು.

ಇದನ್ನೂ ಓದಿ: YouTube New Feature: ನಿಮ್ಮಿಷ್ಟದ ಹಾಡು ಗುನುಗಿದ್ರೂ ಸಾಕು ಯುಟ್ಯೂಬ್ ಆ ಹಾಡನ್ನು ಹೆಕ್ಕಿ ತೆಗೆಯುತ್ತದೆ!

ಚಾನಲ್‌ಗೆ ಇನ್ನೂ ಹೆಚ್ಚು ಚಂದಾದಾರರಾಗಲು ಬಯಸುತ್ತಿದ್ದಾರೆ. ನನಗೆ ಸಹಾಯ ಮಾಡುವ ಬಹಳಷ್ಟು ಜನರಿದ್ದಾರೆ. ನಾನು ಇದರೊಂದಿಗೆ ಬದುಕುತ್ತೇನೆ ಮತ್ತು ಉಸಿರಾಡುತ್ತೇನೆ. ನಾನು ಇದರ ಸೃಷ್ಟಿಕರ್ತ ಎಂದು ಅವರು ಹೇಳಿದರು.

ಹೆಚ್ಚಿನ ಯೂಟ್ಯೂಬ್ ಚಾನೆಲ್ ಸೃಷ್ಟಿಕರ್ತರೇ ನನ್ನ ಚಾನೆಲ್‌ಗೆ ಹೆಚ್ಚು ಚಂದಾದಾರರಾಗಿರುವುದು ಸಂತೋಷವಾಗಿದೆ ಎಂದು ನಾನು ಭಾವಿಸುತ್ತೇನೆ. T-ಸಿರೀಸ್‌ ಅನ್ನು ನಾಕ್ ಮಾಡುತ್ತಿಲ್ಲ. ಯಾಕೆಂದರೆ ಅವರು ನನಗಿಂತ ಸಾವಿರ ಪಟ್ಟು ಹೆಚ್ಚು ಉದ್ಯೋಗಿಗಳನ್ನು ಹೊಂದಿದ್ದಾರೆ ಎಂದು ತಿಳಿಸಿದರು.

Continue Reading

ಕರ್ನಾಟಕ

Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Lok Sabha Election 2024: ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿರುವ ಶ್ವಾನ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಯಾರು ಜಯಭೇರಿ ಬಾರಿಸುತ್ತಾರೆ ಎಂಬುವುದರ ಬಗ್ಗೆಯೂ ಭವಿಷ್ಯ ನುಡಿದಿದೆ.

VISTARANEWS.COM


on

Lok Sabha Election 2024
Koo

ಮೈಸೂರು: 2024ರ ಲೋಕಸಭಾ ಚುನಾವಣೆಯ (Lok Sabha Election 2024) 7ನೇ ಹಂತದ ಮತದಾನ ಶನಿವಾರ ಮುಕ್ತಾಯವಾದ ಬೆನ್ನಲ್ಲೇ ಬಿಡುಗಡೆಯಾದ ಎಕ್ಸಿಟ್‌ ಪೋಲ್‌ಗಳ ಫಲಿತಾಂಶದಲ್ಲಿ ಬಹುತೇಕವು ಕೇಂದ್ರದಲ್ಲಿ ಸತತ ಮೂರನೇ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ, ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಲಾಗಿದೆ. ಈ ನಡುವೆ ಮೈಸೂರಿನಲ್ಲಿ ಶ್ವಾನವೊಂದು ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿರುವ ಶ್ವಾನ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಯಾರು ಜಯಭೇರಿ ಬಾರಿಸುತ್ತಾರೆ ಎಂಬುವುದರ ಬಗ್ಗೆಯೂ ತಿಳಿಸಿದೆ.

ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ (ಜೂನ್‌ 4) ಜನರು ಕಾತರಿಂದ ಕಾಯುತ್ತಿದ್ದಾರೆ. ಇದಕ್ಕೂ ಮೊದಲು ನಗರದ ಕೆ.ಟಿ. ಸ್ಟ್ರೀಟ್‌ನ ಕಾಲಭೈರವೇಶ್ವರ ದೇಗುಲದಲ್ಲಿ ಭೈರವ ಎಂಬ 2 ವರ್ಷದ ಶ್ವಾನ ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಭವಿಷ್ಯ ನುಡಿಯುವ ಮೂಲಕ ಗಮನ ಸೆಳೆದಿದೆ. ಶ್ವಾನದ ಭವಿಷ್ಯ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ | MLC Election: ಪರಿಷತ್ ಚುನಾವಣೆ; ಯತೀಂದ್ರ ಸೇರಿ 8 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಕಾಂಗ್ರೆಸ್‌

ಗೋಪಿನಾಥ್ ಎಂಬುವವರು ಸಾಕಿರುವ ಭೈರವ ಶ್ವಾನದ ಮುಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಅವರ ಭಾವಚಿತ್ರವಿಟ್ಟಾಗ ಶ್ವಾನ ಮೋದಿ ಅವರ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಬಿಜೆಪಿ ಮೈತ್ರಕೂಟ ಮತ್ತೊಮ್ಮೆ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಎಂ. ಲಕ್ಷ್ಮಣ್ ಹಾಗೂ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಭಾವಚಿತ್ರ ತೋರಿಸಿದಾಗ ಶ್ವಾನ ಯದುವೀರ್ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಈ ಚುನಾವಣೆಯಲ್ಲಿ ಗೆಲುವು ಯಾರಿಗೆ ಎಂಬುವುದನ್ನು ಸೂಚಿಸಿದೆ.

Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

Exit poll 2024

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಫಲಿತಾಂಶ ಬಿಜೆಪಿಗೆ 2019ರ ಚುನಾವಣೆಯಷ್ಟು ಪೂರಕವಾಗಿಲ್ಲ (Exit Poll 2024 ) ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿವೆ. ಈ ಬಾರಿ ಕರ್ನಾಟಕದಲ್ಲಿ 18 ಸೀಟುಗಳು ಬಿಜೆಪಿಗೆ ದೊರೆಯಲಿದ್ದು, 8 ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ ಎಂದು ಪೋಲ್​​ ಸ್ಟಾಟ್ ಹೇಳಿದೆ. ಜೆಡಿಎಸ್​​ ರೀತಿ ಸ್ಪರ್ಧಿಸಿರುವ ಒಟ್ಟು 3ರಲ್ಲಿ ಎರಡು ಸ್ಥಾನಗಳನ್ನು ಜೆಡಿಎಸ್​ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ. ದೇಶಾದ್ಯಂತ ಬಿಜಪಿಗೆ ಹಿಂದಿಗಿಂತ ಹೆಚ್ಚು ಸೀಟುಗಳು ಸಿಗಲಿವೆ ಎಂಬ ಟ್ರೆಂಡ್ ಇರುವ ಹೊರತಾಗಿಯೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಬಿಜೆಪಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ತಲಾ ಒಂದು ಸ್ಥಾನವನ್ನು ಹಂಚಿಕೊಂಡಿತ್ತು. ಪಕ್ಷೇತರರಾದ ಸುಮಲತಾ ಅವರು ಮಂಡ್ಯ ಕ್ಷೇತ್ರದಲ್ಲಿ ಗೆದ್ದಿದ್ದರು.

ವಿಸ್ತಾರ ನ್ಯೂಸ್​- COPS ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿಗೆ 18ರಿಂದ-22 ಸ್ಥಾನಗಳು ದೊರಕಿದೆ, ಕಾಂಗ್ರೆಸ್​ಗೆ 08ರಿಂದ 10 ಸ್ಥಾನಗಳು ಲಭಿಸಲಿವೆ. ಜೆಡಿಎಸ್​ಗೆ 2ರಿಂದ 3 ಸ್ಥಾನ ಸಿಗುವುದು ಎಂದು ಹೇಳಲಾಗಿದೆ. ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ರಿಂದ 22, ಕಾಂಗ್ರೆಸ್ 3ರಿಂದ 5 ಮತ್ತು ಜೆಡಿಎಸ್ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ . ಇಂಡಿಯಾ ಟುಡೆ ಪ್ರಕಾರ ಕರ್ನಾಟದಲ್ಲಿ ಬಿಜೆಪಿಗೆ 23ರಿಂದ 25 ಹಾಗೂ ಕಾಂಗ್ರೆಸ್​ಗೆ 04ರಿಂದ 05 ಹಾಗೂ ಜೆಡಿಎಸ್​ಗೆ 1ರಿಂದ 3ಸ್ಥಾನ ಸಿಗಲಿದೆ ಎಂದು ಅಂದಾಜಿಸಿದೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಇದನ್ನೂ ಓದಿ: Exit Poll 2024: ಮೋದಿ ಹ್ಯಾಟ್ರಿಕ್‌ ಖಚಿತ, ಇಂಡಿಯಾ ಒಕ್ಕೂಟಕ್ಕೆ ಸೋಲು ನಿಶ್ಚಿತ; ಇಲ್ಲಿದೆ ಎಕ್ಸಿಟ್‌ ಪೋಲ್‌ ವರದಿ

ಅಭ್ಯರ್ಥಿಗಳ ಆಯ್ಕೆ ಮತ್ತು ಕೆಲವೊಂದು ಗೊಂದಲಗಳ ಕಾರಣ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದು ಎಂಬುದಾಗಿ ರಾಜಕೀಯ ವಿಶ್ಲೇಷಕರು ಈ ಹಿಂದೆಯೇ ಅಂದಾಜಿಸಿದ್ದರು. ಚುನಾವಣೋತ್ತರ ಸಮೀಕ್ಷೆಯಲ್ಲೂ ಅದು ಪ್ರತಿಫಲನಗೊಂಡಿದೆ. ಬಿಜೆಪಿ ಕಳೆದ ಬಾರಿಗಿಂತ 3ರಿಂದ 5 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳು ಕಂಡಿವೆ. ಏತನ್ಮಧ್ಯೆ ಕಾಂಗ್ರೆಸ್​ ತನಗೆ ಭಾಗ್ಯಗಳು ಕೈ ಹಿಡಿಯಬಹುದು ಎಂದು ಅಂದಾಜಿಸಿತ್ತು. ಹೀಗಾಗಿ 10ಕ್ಕಿಂತಲೂ ಹೆಚ್ಚು ಸ್ಥಾನವನ್ನು ಗೆಲ್ಲಬಲ್ಲೆವು ಎಂದು ಆಂತರಿಕವಾಗಿ ಹೇಳಿಕೊಂಡಿತ್ತು. ಆದರೆ, ಅವರ ಲೆಕ್ಕಾಚಾರವೂ ತಪ್ಪಾಗಿದೆ. ಇವೆಲ್ಲದರ ನಡುವೆ ಜೆಡಿಎಸ್​ ಬಿಜೆಪಿ ಜತೆಗಿನ ಮೈತ್ರಿಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ. ಸಮೀಕ್ಷೆಗಳ ಪ್ರಕಾರ ಈ ಪಕ್ಷ ಕನಿಷ್ಠ2 ಸೀಟ್​ ಗೆಲ್ಲುವು ಖಾತರಿ. ಇನ್ನೊಂದು ಸೀಟ್​ ಕೂಡ ಅವರ ಪರವಾಗಬಹುದು ಎಂದು ಹೇಳಲಾಗಿದೆ.

2024 ರ ಲೋಕಸಭಾ ಚುನಾವಣೆ ಎರಡು ಪ್ರಮುಖ ಮೈತ್ರಿಕೂಟಗಳಾದ ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಎನ್ಡಿಎ ಬಣಗಳ ನಡುವೆ ತೀವ್ರ ಹೋರಾಟವಾಗಿ ರೂಪುಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸತತ ಮೂರನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ನಿರ್ಧರಿಸಿದ್ದರೆ, ಬಿಜೆಪಿ ಮೈತ್ರಿಕೂಟವು ಅಸಮಾಧಾನದ ಗೆಲುವನ್ನು ಸಂಘಟಿಸಲು ದಣಿವರಿಯದೆ ಕೆಲಸ ಮಾಡುತ್ತಿದೆ. ಈ ಚುನಾವಣೆಯ ಫಲಿತಾಂಶವು ರಾಷ್ಟ್ರದ ರಾಜಕೀಯ ಭೂದೃಶ್ಯದ ಮೇಲೆ ದೂರಗಾಮಿ ಪರಿಣಾಮಗಳನ್ನು ಬೀರುತ್ತದೆ.

ಕರ್ನಾಟಕದಲ್ಲಿ ಹೀಗಿದೆ ಚುನಾವಣಾ ಫಲಿತಾಂಶ ಸಮೀಕ್ಷೆ

  • ವಿಸ್ತಾರ-COPS: ಬಿಜೆಪಿ 18-20, ಕಾಂಗ್ರೆಸ್‌ 8-10, ಜೆಡಿಎಸ್‌ 2-3
  • ಜನ್ ಕೀ ಬಾತ್: ಬಿಜೆಪಿ 17-23, ಕಾಂಗ್ರೆಸ್ 4-8, ಜೆಡಿಎಸ್ 1-2
  • ಝೀ ನ್ಯೂಸ್: ಬಿಜೆಪಿ 18-22, ಕಾಂಗ್ರೆಸ್ 4-6, ಜೆಡಿಎಸ್ 1-3
  • CNN ನ್ಯೂಸ್ 18: ಬಿಜೆಪಿ 21-23, ಕಾಂಗ್ರೆಸ್ 3-7, ಜೆಡಿಎಸ್ 2-3
  • ಪೋಲ್‌ಸ್ಟ್ರಾಟ್‌: ಬಿಜೆಪಿ 18, ಕಾಂಗ್ರೆಸ್-08, ಜೆಡಿಎಸ್-02 ಸ್ಥಾನ
  • ಇಂಡಿಯಾ ಟಿವಿ: ಬಿಜೆಪಿ 18-22, ಕಾಂಗ್ರೆಸ್‌ 4-8, ಜೆಡಿಎಸ್‌ 1-3
  • ಸಿ-ವೋಟರ್: ಬಿಜೆಪಿ 21-22, ಕಾಂಗ್ರೆಸ್ 3-5, ಜೆಡಿಎಸ್ 1-3
  • ಇಂಡಿಯಾ ಟುಡೇ: ಬಿಜೆಪಿ 20-22, ಕಾಂಗ್ರೆಸ್ 3-5, ಜೆಡಿಎಸ್ 2-3
  • ಪೋಲ್ ಆಫ್ ಪೋಲ್: ಬಿಜೆಪಿ-20, ಕಾಂಗ್ರೆಸ್-6, ಜೆಡಿಎಸ್-2
  • ಟೈಮ್ಸ್ ನೌ: ಬಿಜೆಪಿ 21-25, ಕಾಂಗ್ರೆಸ್ 3-7, ಜೆಡಿಎಸ್ 1-2
  • ಇಂಡಿಯಾ ನ್ಯೂಝ್: ಬಿಜೆಪಿ-21, ಕಾಂಗ್ರೆಸ್-5, ಜೆಡಿಎಸ್-2
  • ನ್ಯೂಸ್ ನೇಷನ್: ಬಿಜೆಪಿ-16, ಕಾಂಗ್ರೆಸ್-10, ಜೆಡಿಎಸ್-02
  • ನ್ಯೂಸ್ 24-ಟುಡೇಸ್ ಚಾಣಕ್ಯ: ಬಿಜೆಪಿ-ಜೆಡಿಎಸ್ 24, ಕಾಂಗ್ರೆಸ್-4
Continue Reading
Advertisement
Self Harming
ಕ್ರೈಂ31 seconds ago

Self Harming: ಐಎಎಸ್‌ ದಂಪತಿ ಪುತ್ರಿ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

mlc election nomination
ಪ್ರಮುಖ ಸುದ್ದಿ7 mins ago

MLC Election: ಕಾಂಗ್ರೆಸ್‌ನ 7, ಬಿಜೆಪಿಯ 3, ಜೆಡಿಎಸ್‌ನ ಒಬ್ಬ ಅಭ್ಯರ್ಥಿಯಿಂದ ಮೇಲ್ಮನೆಗೆ ನಾಮಪತ್ರ ಸಲ್ಲಿಕೆ

Snake Rescue Snakes spotted in heavy rain
ಮಳೆ9 mins ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Riyan Parag
ಕ್ರಿಕೆಟ್23 mins ago

Riyan Parag: ಟಿ20 ವಿಶ್ವಕಪ್​ ನೋಡಲಾರೆ ಎಂದ ‘ಹಾಟ್​ ಫೇವರಿಟ್’ ರಿಯಾನ್​ ಪರಾಗ್

Actor Chetan Ahimsa
ಪ್ರಮುಖ ಸುದ್ದಿ27 mins ago

Actor Chetan Ahimsa: ಬಿಜೆಪಿ ಸಂವಿಧಾನ ಬದಲಿಸಲ್ಲ; ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಮ್ಮಿ ಇಲ್ಲ ಎಂದ ನಟ ಚೇತನ್!

World Bicycle Day
ಆರೋಗ್ಯ45 mins ago

World Bicycle Day: ಸೈಕಲ್‌ ಹೊಡೆಯುವುದರ ಲಾಭಗಳು ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು!

Battery Life Tips
ಗ್ಯಾಜೆಟ್ಸ್46 mins ago

Battery Life Tips: ಈ 5 ಸಲಹೆ ಪಾಲಿಸಿ; ನಿಮ್ಮ ಸ್ಮಾರ್ಟ್‌ಫೋನ್ ಬ್ಯಾಟರಿ ಸಾಮರ್ಥ್ಯ ಹೆಚ್ಚಿಸಿ!

MP Renukacharya
ಕ್ರೈಂ54 mins ago

MP Renukacharya : ಎಂ.ಪಿ ರೇಣುಕಾಚಾರ್ಯ, ಪುತ್ರನಿಗೆ ಫೋನ್‌ನಲ್ಲಿ ಕೊಲೆ ಬೆದರಿಕೆ

Nataša Stanković
ಕ್ರೀಡೆ1 hour ago

Nataša Stanković: ಹಾರ್ದಿಕ್ ಪಾಂಡ್ಯ ಜತೆ ವಿಚ್ಛೇದನ?; ಅನುಮಾನಕ್ಕೆ ತೆರೆ ಎಳೆದ ಪತ್ನಿ ನತಾಶಾ

Drowns in Lake
ಕರ್ನಾಟಕ1 hour ago

Drowns in Lake: ಕೆರೆಯಲ್ಲಿ ಮುಳುಗಿ ಯುವಕ ಸಾವು; ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Snake Rescue Snakes spotted in heavy rain
ಮಳೆ9 mins ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌