Viral Video: ಕಣ್ಣು ಮಿಟುಕಿಸದೆ ನೋಡುವ ಡ್ಯಾನ್ಸ್‌ ಇದು! ಅಬ್ಬಬ್ಬಾ ಏನ್‌ ಸ್ಟೆಪ್ಸ್‌ ಗುರೂ… - Vistara News

ವೈರಲ್ ನ್ಯೂಸ್

Viral Video: ಕಣ್ಣು ಮಿಟುಕಿಸದೆ ನೋಡುವ ಡ್ಯಾನ್ಸ್‌ ಇದು! ಅಬ್ಬಬ್ಬಾ ಏನ್‌ ಸ್ಟೆಪ್ಸ್‌ ಗುರೂ…

ಯುವಕ ಯುವತಿಯಿಬ್ಬರು ಶಾರುಖ್‌ ಖಾನ್‌ ಅವರ ಮೈ ಹೂಂ ನಾ ಸಿನಿಮಾದ ಗೋರಿ ಗೋರಿ ಹಾಡಿಗೆ ನೃತ್ಯ ಮಾಡಿದ್ದು, ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ.

VISTARANEWS.COM


on

gori gori dance
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡ್ಯಾನ್ಸ್‌ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುವುದು ಸಾಮಾನ್ಯವಾಗಿಬಿಟ್ಟಿದೆ. ಇದೀಗ ಅದೇ ರೀತಿಯಲ್ಲಿ ಮತ್ತೊಂದು ಡ್ಯಾನ್ಸ್‌ ವಿಡಿಯೊ ಇನ್‌ಸ್ಟಾಗ್ರಾಂನಲ್ಲಿ ಭಾರೀ ಸದ್ದು ಮಾಡುತ್ತಿದೆ. ಗೋರಿ ಗೋರಿ ಎನ್ನುತ್ತಾ ಕುಣಿಯುತ್ತಿರುವ ಯುವಕ ಯುವತಿಯನ್ನು ಜನರು ಕಣ್ಣು ಮಿಟುಕಿಸದೆ (Viral Video) ನೋಡಲಾರಂಭಿಸಿದ್ದಾರೆ.

2004ರಲ್ಲಿ ಬಿಡುಗಡೆಯಾದ ಶಾರುಖ್‌ ಖಾನ್‌ ಅವರ ಮೈ ಹೂಂ ನ ಸಿನಿಮಾ ನಿಮಗೆ ನೆನಪಿರಬಹುದು. ಅದರಲ್ಲಿನ ಗೋರಿ ಗೋರಿ ಹಾಡು ಆಗ ಅನೇಕರ ಕಾಲು ಕುಣಿಯುವಂತೆ ಮಾಡಿತ್ತು. ಇದೀಗ ಅದೇ ಹಳೆ ಹಾಡಿಗೆ ಹೊಸ ರೀತಿಯಲ್ಲಿ ಜೋಡಿಯೊಂದು ನೃತ್ಯ ಮಾಡಿದೆ. ಸಾಕ್ಷಿ ಹೆಸರಿನ ನೃತ್ಯ ಕಲಾವಿದೆ ಆಶಿಶ್‌ ಖಂಡಲ್‌ ಹೆಸರಿನ ನೃತ್ಯ ಕಲಾವಿದನೊಂದಿಗೆ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಅದು ಇನ್‌ಸ್ಟಾಗ್ರಾಂ ವೈರಲ್‌ ವಿಡಿಯೊ ಪಟ್ಟಿಗೆ ಸೇರಿಕೊಂಡಿದೆ.

ಇದನ್ನೂ ಓದಿ: Video Viral : ಕೈಯಲ್ಲಿ ಗರುಡ ರೇಖೆ ಇದೆ, ನಂಗೇನೂ ಆಗಲ್ಲ ಎಂದು ಹಾವು‌ ಹಿಡಿದು ಕಚ್ಚಿಸಿಕೊಂಡ! ಸತ್ತೇ ಹೋದ್ನಾ?

ಆಫ್‌ ಶೋಲ್ಡರ್‌ ಡ್ರೆಸ್‌ ತೊಟ್ಟಿರುವ ಸಾಕ್ಷಿ ಫ್ರೀ ಹೇರ್‌ ಬಿಟ್ಟುಕೊಂಡು ಕುಣಿದಿದ್ದಾರೆ. ಅವರಿಗೆ ಜತೆಯಾದ ಆಶಿಶ್‌ ಕಪ್ಪು ಬಣ್ಣದ ಪ್ಯಾಂಟ್‌ ಮತ್ತು ಟೀ ಶರ್ಟ್‌ ಮೇಲೆ ಕಡು ಬೂದು ಬಣ್ಣದ ಶರ್ಟ್‌ ಧರಿಸಿದ್ದಾರೆ. ಇವರಿಬ್ಬರು ಒಬ್ಬರಿಗೊಬ್ಬರು ಜತೆಯಾಗಿಕೊಂಡು ಹೆಜ್ಜೆ ಹಾಕುತ್ತಿದ್ದಾರೆ. ನೋಡುಗರು ಬಿಟ್ಟ ಕಣ್ಣು ಬಿಟ್ಟಂತೆ ನೋಡಿದ್ದಾರೆ. ಎಲ್ಲಿಯೂ ಒಂಚೂರೂ ತಪ್ಪದೆ ಈ ಜೋಡಿ ನೃತ್ಯ ಮಾಡಿದೆ.


ಈ ವಿಡಿಯೊವನ್ನು ಸಾಕ್ಷಿ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಆಶಿಶ್‌ನೊಂದಿಗೆ ನೃತ್ಯ ಮಾಡುವುದು ಯಾವಾಗಲೂ ಮಜಾ ಆಗಿರುತ್ತದೆ” ಎಂದು ಕ್ಯಾಪ್ಶನ್‌ನಲ್ಲಿ ತಿಳಿಸಿದ್ದಾರೆ. ಈ ವಿಡಿಯೊವನ್ನು ಜೂನ್‌ 5ರಂದು ಹಂಚಿಕೊಳ್ಳಲಾಗಿದೆ. ಅಂದಿನಿಂದ ಇಂದಿನವರೆಗೆ ವಿಡಿಯೊ 6.3 ಲಕ್ಷಕ್ಕೂ ಅಧಿಕ ಜನರಿಂದ ವೀಕ್ಷಣೆಗೊಂಡಿದೆ. 35 ಸಾವಿರದಷ್ಟು ಜನರು ವಿಡಿಯೊಗೆ ಲೈಕ್‌ ಮಾಡಿದ್ದಾರೆ. ನೂರಾರು ಮಂದಿ ವಿಡಿಯೊವನ್ನು ತಮ್ಮ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Viral News: 30 ವರ್ಷದ ಹಳೆಯ ಏರ್‌ ಪಾಸ್‌ ಮೂಲಕ ಒಂದೇ ವರ್ಷದಲ್ಲಿ 373 ವಿಮಾನ ಪ್ರಯಾಣ ಮಾಡಿದ!

ವಿಡಿಯೊಗೆ ಹಲವಾರು ರೀತಿಯ ಕಾಮೆಂಟ್‌ಗಳ ಸುರಿಮಳೆ ಬಂದಿದೆ. “ಅಬ್ಬಾ, ಎಂತಹ ಅದ್ಭುತ ನೃತ್ಯ”, “ಹಳೆಯ ಹಾಡಿಗೆ ನೃತ್ಯ ಮಾಡಿ ಆ ಹಾಡು ಟ್ರೆಂಡ್‌ ಆಗುವಂತೆ ಮಾಡಿದ್ದಕ್ಕೆ ಧನ್ಯವಾದಗಳು”, “ನಿಮ್ಮಿಬ್ಬರ ಡ್ಯಾನ್ಸ್‌ ಜೋಡಿ ತುಂಬಾನೆ ಚೆನ್ನಾಗಿದೆ” ಎನ್ನುವಂತಹ ಹಲವಾರು ಕಾಮೆಂಟ್‌ಗಳು ವಿಡಿಯೊಗೆ ಬಂದಿವೆ. ಹಾಗೆಯೇ “ಸೂಪರ್‌”, “ವಾವ್‌” ಎನ್ನುವಂತಹ ನೂರಾರು ಕಾಮೆಂಟ್‌ಗಳನ್ನು ಇಲ್ಲಿ ಕಾಣಬಹುದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

RCB Funny Memes: ಚೆನ್ನೈ ಸೂಪರ್​ ಕಿಂಗ್ಸ್​ನ ಫ್ಯಾನ್ಸ್ ಪೇಜ್‌ವೊಂದು ಬೆಂಗಳೂರು ದಂಡು ರೈಲ್ವೇ ನಿಲ್ದಾಣದ (Bangalore cant) ಫೋಟೋವನ್ನು ಹಂಚಿಕೊಂಡಿದೆ. ಈ ಮೂಲಕ ಬೆಂಗಳೂರು ತಂಡದಿಂದ ಕಪ್‌ ಗೆಲ್ಲಲು ಸಾಧ್ಯವಿಲ್ಲ ಎಂಬರ್ಥದಲ್ಲಿ ಈ ಮೀಮ್ಸ್ ಅನ್ನು ಸಿಎಸ್‌ಕೆ ಫ್ಯಾನ್ ಪೇಜ್‌ ಹಂಚಿಕೊಂಡಿದೆ

VISTARANEWS.COM


on

RCB Funny Memes
Koo

ಬೆಂಗಳೂರು: ಐಪಿಎಲ್​ನ(IPL 2024) ಸಾಂಪ್ರದಾಯಿಕ ಬದ್ಧ ಎದುರಾಳಿಗಳೆಂದರೆ ಅದು ಚೆನ್ನೈ ಸೂಪರ್​ ಕಿಂಗ್ಸ್(CSK)​ ಮತ್ತು ಆರ್​ಸಿಬಿ(RCB). ಅಭಿಮಾನಿಗಳ ಅತಿಯಾದ ಹುಚ್ಚಾಟದಿಂದಲೇ ಉಭಯ ತಂಡಗಳನ್ನು ಬುದ್ಧ ಎದುರಾಳಿಗಳೆಂದು ಕರೆಯಲಾಗುತ್ತದೆ. ಯಾರೇ ಗೆದ್ದರೂ ಅಥವಾ ಸೋತರೂ ಅಭಿಮಾನಿಗಳು ಪರಸ್ಪರ ಟ್ರೋಲ್​ ಮಾಡುತ್ತಾರೆ. ಅಲ್ಲದೆ ಹೊಡೆದಾಟ ನಡೆಸಿದ ನಿದರ್ಶನ ಕೂಡ ಸಾಕಷ್ಟಿದೆ.

ಕಳೆದ ಶನಿವಾರ ಚಿನ್ನಸ್ವಾಮಿ ಕ್ರೀಡಾಂಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಚೆನ್ನೈ ತಂಡ ಆರ್​ಸಿಬಿ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿತ್ತು. ಈ ವೇಳೆ ಆರ್​ಸಿಬಿ ಅಭಿಮಾನಿಗಳು ಎಲ್ಲೆ ಮೀರಿದ ಸಂಭ್ರಮಾಚರಣೆ ಮಾಡಿ ಚೆನ್ನೈ ಅಭಿಮಾನಿಗಳಿಗೆ ಎಲ್ಲೆಂದರಲ್ಲಿ ಕಾಟ ಕೊಟ್ಟಿದ್ದರು. ಇದೀಗ ಆರ್​ಸಿಬಿ ರಾಜಸ್ಥಾನ್​ ವಿರುದ್ಧ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದೆ. ಇದೇ ಸಂತಸದಲ್ಲಿ ಆರ್​ಸಿಬಿ ಅಭಿಮಾನಿಗಳನ್ನು ಚೆನ್ನೈ ಅಭಿಮಾನಿಗಳು ಸಿಕ್ಕಾಪಟ್ಟೆ ಟ್ರೋಲ್​ ಮಾಡಿದ್ದಾರೆ.

ಆರ್‌ಸಿಬಿ ಅಭಿಮಾನಿಗಳಿ ತಮ್ಮ ತಂಡದ ಸೋಲಿನ ನಿರಾಸೆ ಮಧ್ಯೆ ಇದೀಗ ಚೆನ್ನೈ ಅಭಿಮಾನಿಗಳ ಟ್ರೋಲ್​ ಮತ್ತು ಮೀಮ್ಸ್​ಗಳ ಬಿಸಿ ಮುಟ್ಟಿದೆ. ಚೆನ್ನೈ ಸೂಪರ್ ಕಿಂಗ್ಸ್ ಅಧಿಕೃತ ಫ್ಯಾನ್ಸ್ ಪುಟದಲ್ಲಿ ಆರ್‌ಸಿಬಿ ಸೋಲನ್ನು ಟ್ರೋಲ್ ಮಾಡಲಾಗಿದ್ದು. ‘ಕರ್ಮ’ ಗುರಿಯಿಟ್ಟವನ ಬಳಿಗೇ ತಿರುಗು ಬಾಣದಂತೆ ಹಿಂತಿರುಗಲಿದೆ ಎಂದು ಕಾಲೆಳೆದಿದ್ದಾರೆ.

ಇದನ್ನೂ ಓದಿ RCB: ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಜಯ್​ ಮಲ್ಯ ಕಾರಣವಂತೆ!

ಚೆನ್ನೈ ಸೂಪರ್​ ಕಿಂಗ್ಸ್​ನ ಫ್ಯಾನ್ಸ್ ಪೇಜ್‌ವೊಂದು ಬೆಂಗಳೂರು ದಂಡು ರೈಲ್ವೇ ನಿಲ್ದಾಣದ (Bangalore cant) ಫೋಟೋವನ್ನು ಹಂಚಿಕೊಂಡಿದೆ. ಈ ಮೂಲಕ ಬೆಂಗಳೂರು ತಂಡದಿಂದ ಕಪ್‌ ಗೆಲ್ಲಲು ಸಾಧ್ಯವಿಲ್ಲ ಎಂಬರ್ಥದಲ್ಲಿ ಈ ಮೀಮ್ಸ್ ಅನ್ನು ಸಿಎಸ್‌ಕೆ ಫ್ಯಾನ್ ಪೇಜ್‌ ಹಂಚಿಕೊಂಡಿದೆ. ಈ ಮೀಮ್ಸ್‌ ಅನ್ನು ತುಷಾರ್‌ ದೇಶ್‌ಪಾಂಡೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯ ಸ್ಟೋರಿಯನ್ನು ಹಂಚಿಕೊಂಡಿದ್ದಾರೆ.

ಎಲಿಮಿನೇಟರ್​ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ವಿಕೆಟಿಗೆ 172 ರನ್‌ ಗಳಿಸಿತು. ರಾಜಸ್ಥಾನ್‌ 19 ಓವರ್‌ಗಳಲ್ಲಿ 6 ವಿಕೆಟಿಗೆ 174 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು. ಚೇಸಿಂಗ್​ ವೇಳೆ ರಾಜಸ್ಥಾನ್‌ ಬಿರುಸಿನ ಆಡವಾಡಿತು. ಜೈಸ್ವಾಲ್‌ (45)-ಕ್ಯಾಡ್‌ಮೋರ್‌ (20) ಮೊದಲ ವಿಕೆಟ್​ಗೆ 46 ರನ್‌ ಜತೆಯಾಟ ನಿಭಾಯಿಸಿದರು. ಆ ಬಳಿಕ ಜೈಸ್ವಾಲ್‌-ಸ್ಯಾಮ್ಸನ್‌ ಜತೆಗೂಡಿ 35 ರನ್‌ ಕಲೆಹಾಕಿದರು. 112ಕ್ಕೆ 4 ವಿಕೆಟ್‌ ಬಿದ್ದಾಗ ಪಂದ್ಯ ಕುತೂಹಲ ಘಟ್ಟ ತಲುಪಿತು. ಆದರೆ ಪರಾಗ್‌-ಹೆಟ್‌ಮೈರ್‌ ಸಿಡಿದು ನಿಂತು 45 ರನ್‌ ಜತೆಯಾಟ ನಿಭಾಯಿಸಿ ಆರ್‌ಸಿಬಿಗೆ ಸೋಲುಣಿಸಿದರು. ಮೂರು ಓವರ್​ ತನಕ ಉತ್ತಮ ಲಯದಲ್ಲಿದ್ದ ಕ್ಯಾಮರೂನ್​ ಗ್ರೀನ್​ ನಾಲ್ಕನೇ ಓವರ್​ನಲ್ಲಿ ದುಬಾರಿಯಾದರು. ಹೆಟ್‌ಮೈರ್‌ ಈ ಓವರ್​ನಲ್ಲಿ ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಬಿಸಿ ಮುಟ್ಟಿಸಿದರು.

Continue Reading

ವಿದೇಶ

ಎಲ್ಲೆ ಮೀರಿದ ಹಮಾಸ್‌ ಉಗ್ರರ ಅಟ್ಟಹಾಸ; ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಲೈಂಗಿಕ ದೌರ್ಜನ್ಯ: ಭಯಾನಕ ವಿಡಿಯೊ ಇಲ್ಲಿದೆ

Hamas Terrorists: 2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ನಡೆಸಿದ ದಾಳಿಗೆ ತೀವ್ರ ಪ್ರಮಾಣದಲ್ಲಿ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್‌ ಸೈನಿಕರು ಇಂದಿಗೂ ಕದನ ವಿರಾಮ ಘೋಷಿಸಿಲ್ಲ. ಈ ಮಧ್ಯೆ ಹಮಾಸ್‌ ಉಗ್ರರ ದೌರ್ಜನ್ಯವನ್ನು ಬಹಿರಂಗಪಡಿಸುವ ಇನ್ನೊಂದು ಭಯಾನಕ ವಿಡಿಯೊ ಹೊರ ಬಂದಿದ್ದು, ವೈರಲ್‌ ಆಗಿದೆ. ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಹಮಾಸ್‌ ಉಗ್ರರು ಲೈಂಗಿಕ ದೌರ್ಜನ್ಯ ನಡೆಸುವ ವಿಡಿಯೊ ಇದಾಗಿದ್ದು, ಅವರ ಕ್ರೂರತೆಗೆ ಜಗತ್ತೇ ಬೆಚ್ಚಿ ಬಿದ್ದಿದೆ.

VISTARANEWS.COM


on

Hamas Terrorists
Koo

ಗಾಜಾ: 2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು (Hamas Terrorists) ನಡೆಸಿದ ದಾಳಿಗೆ ತೀವ್ರ ಪ್ರಮಾಣದಲ್ಲಿ ಪ್ರತಿದಾಳಿ (Israel Hamas War) ನಡೆಸುತ್ತಿರುವ ಇಸ್ರೇಲ್‌ ಸೈನಿಕರು ಇಂದಿಗೂ ಕದನ ವಿರಾಮ ಘೋಷಿಸಿಲ್ಲ. ಈ ಮಧ್ಯೆ ಹಮಾಸ್‌ ಉಗ್ರರ ದೌರ್ಜನ್ಯವನ್ನು ಬಹಿರಂಗಪಡಿಸುವ ಇನ್ನೊಂದು ಭಯಾನಕ ವಿಡಿಯೊ ಹೊರ ಬಂದಿದ್ದು, ವೈರಲ್‌ ಆಗಿದೆ. ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಹಮಾಸ್‌ ಉಗ್ರರು ಲೈಂಗಿಕ ದೌರ್ಜನ್ಯ ನಡೆಸುವ ವಿಡಿಯೊ ಇದಾಗಿದ್ದು, ಅವರ ಕ್ರೂರತೆಗೆ ಜಗತ್ತೇ ಬೆಚ್ಚಿ ಬಿದ್ದಿದೆ (Viral Video)

ಒತ್ತೆಯಾಳುಗಳು ಮತ್ತು ಕಾಣೆಯಾದವರ ಕುಟುಂಬ ವೇದಿಕೆ ಬಿಡುಗಡೆ ಮಾಡಿದ ವಿಡಿಯೊದಲ್ಲಿ ಈ ಆಘಾತಕಾರಿ ದೃಶ್ಯ ಕಂಡು ಬಂದಿದೆ. ಅಕ್ಟೋಬರ್‌ 7ರಂದು ನಡೆದ ದಾಳಿಯ ವೇಳೆ ಹಮಾಸ್‌ ಉಗ್ರರು ಸೆರೆಸಿಕ್ಕ ಇಸ್ರೇಲ್‌ನ 5 ಮಹಿಳಾ ಸೈನಿಕರಿಗೆ ಕೈಕೋಳ ತೊಡಿಸಿ ಗೋಡೆಗೆ ಒತ್ತಿ ಹಿಡಿದಿರುವುದು ಕಂಡು ಬರುತ್ತಿದೆ. ಹತರಾದ ಇತರ ಸೈನಿಕರ ಶವವೂ ಪಕ್ಕದಲ್ಲೇ ಕಂಡು ಬರುತ್ತಿದೆ. ಬಂಧಿತ ಮಹಿಳಾ ಸೈನಿಕರು ಗಾಯಗೊಂಡಿದ್ದು, ಅವರ ಮುಖದ ಮೇಲೆ ರಕ್ತ ಹರಿಯುತ್ತಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಸಾರಿ ಹೇಳುತ್ತಿದೆ.

ಗಾಜಾ ಪಟ್ಟಿಯ ಹೊರಗಿನ ನಹಾಲ್ ಓಜ್ ನೆಲೆಯಲ್ಲಿ ಈ ಯೋಧರು ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಬಂಧಿತರನ್ನು ಲಿರಿ ಅಲ್ಬಾಗ್, ಕರೀನಾ ಆರೀವ್, ಅಗಮ್ ಬರ್ಗರ್, ಡೇನಿಯೆಲ್ಲಾ ಗಿಲ್ಬೋವಾ ಮತ್ತು ನಾಮಾ ಲೆವಿ ಎಂದು ಗುರುತಿಸಲಾಗಿದೆ.

ಭಯಾನಕ ವಿಡಿಯೊದಲ್ಲಿ ಏನಿದೆ?

ಬಂದೂಕುಧಾರಿ ಭಯೋತ್ಪಾದಕನೊಬ್ಬ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ತಮ್ಮ ಯೋಜನೆಯನ್ನು ಘೋಷಿಸುವುದು ಕೂಡ ವಿಡಿಯೊದಲ್ಲಿ ಸೆರೆಯಾಗಿದೆ. ʼʼಗರ್ಭಿಣಿಯಾಗಬಹುದಾದ ಕೆಲವು ಮಹಿಳೆಯರು ಇಲ್ಲಿದ್ದಾರೆʼʼ ಒಂದು ಓರ್ವ ಹೇಳಿದರೆ, ಇನ್ನೋರ್ವ ಸೆರೆ ಸಿಕ್ಕ ಮಹಿಳೆಯ ಸೌಂದರ್ಯವನ್ನು ಹೊಗಳುತ್ತಿರುವುದೂ ಕಂಡು ಬಂದಿದೆ.

ನಹಾಲ್ ಓಜ್‌ನ ಬಾಂಬ್‌ ಶೆಲ್ಟರ್‌ನಲ್ಲಿ ಸೆರೆ ಹಿಡಿಯಲಾದ ಈ ವಿಡಿಯೊದಲ್ಲಿ ಉಗ್ರರು ಸೆರೆಸಿಕ್ಕವರು ನಾಯಿಗಳೆಂದು ನಿಂದಿಸುತ್ತಿರುವುದೂ ಸೆರೆಯಾಗಿದೆ. ಜತೆಗೆ ಫೋಟೊಗಳಿಗೆ ಪೋಸ್‌ ನೀಡುವಂತೆಯೂ ಮಹಿಳೆಯರಿಗೆ ಹಿಂಸೆ ನೀಡುತ್ತಾರೆ. ಈ ಪೈಕಿ ಒಬ್ಬಾಕೆಯ ಮುಖದಲ್ಲಿ ರಕ್ತ ಸೋರುತ್ತಿದ್ದರೆ, ಇನ್ನೋರ್ವ ಮಹಿಳೆಯ ಬಾಯಿಯಿಂದ ರಕ್ತ ಜಿನುಗುತ್ತಿದೆ. ಮಹಿಳೆಯರ ಪೈಕಿ ಒಬ್ಬಾಕೆ ಇಂಗ್ಲಿಷ್‌ ಗೊತ್ತಿರುವವರನ್ನು ಕರೆತನ್ನಿ ಎಂದು ಮನವಿ ಮಾಡುತ್ತಾರೆ. ಜತೆಗೆ ಇನ್ನೊಬ್ಬರು ತಮಗೆ ಗಾಜಾದಲ್ಲಿ ಸ್ನೇಹಿತರೊಬ್ಬರಿದ್ದು, ಅವರನ್ನು ಭೇಟಿ ಮಾಡಿಸುವಂತೆ ಆಗ್ರಹಿಸುತ್ತಾರೆ. ಆದರೆ ಬಂಧೂಕುದಾರಿಗಳು ಇದ್ಯಾವುದನ್ನೂ ಲೆಕ್ಕಿಸುವುದಿಲ್ಲ. ಕಿರುಚಿ ಸುಮ್ಮನೆ ಕುಳಿತುಕೊಳ್ಳುವಂತೆ ಬೆದರಿಸುತ್ತಾರೆ. ತಮ್ಮ ಸಂಗಾತಿಗಳ ಸಾವಿಗೆ ಇವರೇ ಕಾರಣ ಎಂದು ಆರೋಪಿಸುತ್ತಾರೆ.

ಇದನ್ನೂ ಓದಿ: Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

ಸ್ವಲ್ಪ ಸಮಯದ ಬಳಿಕ ಉಗ್ರರು ಪ್ರಾರ್ಥನೆಗಾಗಿ ಕೆಲ ಕಾಲ ಸುಮ್ಮನಾಗುತ್ತಾರೆ. ಬಳಿಕ ಮಹಿಳೆಯರನ್ನು ತಳ್ಳಿಕೊಂಡು ಹೊರಗೆ ಕರೆತಂದು ಕಾರಿಗೆ ಹತ್ತಿಸುತ್ತಾರೆ. ಕಾಲಿಗೆ ಗಾಯಗೊಂಡ ಕೆಲವು ಮಹಿಳೆಯರು ನಡೆಯಲೂ ಕಷ್ಟಪಡುತ್ತಾರೆ. ಹಿನ್ನೆಲೆಯಲ್ಲಿ ಗುಂಡಿನ ಸದ್ದು ಕೂಡ ಕೇಳಿಸುತ್ತದೆ. ಮಹಿಳೆಯರನ್ನು ಹತ್ತಿಸಿಕೊಂಡ ಕಾರು ಅಲ್ಲಿಂದ ಮುಂದೆಕ್ಕೆ ಚಲಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೊ ಬಗ್ಗೆ ವಿಶ್ವಾದ್ಯಂತ ವ್ಯಾಪಕ ಚರ್ಚೆ ನಡೆಯುತ್ತಿದೆ. ಹಲವರು ಕಳವಳ ವ್ಯಕ್ತಪಡಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ಸುಡುವ ಮರಳಿನಲ್ಲಿ ಹಪ್ಪಳ ಸುಟ್ಟ ಬಿಎಸ್‌ಎಫ್‌ ಯೋಧ; ಎಲ್ಲೆಡೆ ಇದೇ ವಿಡಿಯೋ ವೈರಲ್‌

Viral Video:ರಾಜಸ್ಥಾನದ ಬಿಕಾನೆರ್‌ ನಲ್ಲಿ ಬಿಎಸ್ ಎಫ್ ಯೋಧರೊಬ್ಬರು ಸುಡು ಬಿಸಿಲಿನಲ್ಲಿ ಮರಳ ಮೇಲೆ ಹಪ್ಪಳ ಹುರಿದಿದ್ದಾರೆ. ಖಾಜುವಾಲದ ಬಳಿ ಇರುವ ಭಾರತ-ಪಾಕ್ ಗಡಿಯಲ್ಲಿ ಈ ದೃಶ್ಯ ಕಂಡುಬಂದಿದ್ದು, ಪ್ರದೇಶದಲ್ಲಿ ಬಿಸಿಗಾಳಿಯ ತೀವ್ರತೆ ಹೆಚ್ಚಾಗಿದೆ. ಇನ್ನು ಮರುಭೂಮಿಯಲ್ಲಿ ಯೋಧ ಕೈಯಲ್ಲಿ ಹಪ್ಪಳ ಹಿಡಿದು ಮರಳನ್ನು ಮೆಲ್ಲಗೆ ಸರಿಸುತ್ತಾರೆ. ನಂತರ ಅದರ ಒಳಗೆ ಹಪ್ಪಳ ಇಟ್ಟು ಮರಳನ್ನು ಮುಚ್ಚುತ್ತಾರೆ. ಕೆಲ ಸಮಯ ಹಾಗೇ ಬಿಟ್ಟು ನಂತರ ಮೆಲ್ಲಗೆ ಮರಳನ್ನು ಸರಿಸುತ್ತಾರೆ. ಆಗಾ ಹಪ್ಪಳ ಚೆನ್ನಾಗಿ ರೋಸ್ಟ್‌ ಆಗುತ್ತದೆ.

VISTARANEWS.COM


on

Viral Video
Koo

ನವದೆಹಲಿ: ದಕ್ಷಿಣ ಭಾರತದಲ್ಲಿ ಮಳೆ ಶುರುವಾಗಿದ್ದರೂ ಉತ್ತರಭಾರತ(North India)ದಲ್ಲಿ ಮಾತ್ರ ವರುಣನ ಕೃಪೆ ಇನ್ನೂ ಆಗಿಲ್ಲ. ರಣಬಿಸಿಲಿಗೆ ಹೈರಾಣಾಗಿರುವ ಜನ ಇದೀಗ ಬಿಸಿಗಾಳಿ(Heat wave)ಯ ತಾಪಕ್ಕೆ ಸಿಲುಕಿ ಬಸವಳಿದಿದ್ದಾರೆ. ಸಾಮಾನ್ಯ ತಾಪಾಮಾನವೇ 47°C.ಕ್ಕೆ ಏರಿಕೆ ಆಗಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿಯೇ ಹವಾಮಾನ ಇಲಾಖೆ(IMD) ದಿಲ್ಲಿ, ರಾಜಸ್ಥಾನ, ಪಂಜಾಬ್‌, ಹರ್ಯಾಣ ಮತ್ತು ಉತ್ತರಪ್ರದೇಶಗಳ ಕೆಲವು ಪ್ರದೇಶಗಳಲ್ಲಿ ರೆಡ್‌ ಅಲರ್ಟ್‌(Red alert) ಘೋಷಿಸಿದೆ. ಮುಂದಿನ ಐದು ದಿನಗಳಲ್ಲಿ ಈ ಪರಿಸ್ಥಿತಿ ಮತ್ತಷ್ಟು ಹಡಗೆಡುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ. ಇದರ ನಡುವೆ ರಾಜಸ್ಥಾನದಲ್ಲಿ ಯೋಧರೊಬ್ಬರು ಸುಡುವ ಮರಳಿನಲ್ಲಿ ಹಪ್ಪಳ ಸುಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್‌(Viral Video) ಆಗಿದೆ.

ರಾಜಸ್ಥಾನದ ಬಿಕಾನೆರ್‌ ನಲ್ಲಿ ಬಿಎಸ್ ಎಫ್ ಯೋಧರೊಬ್ಬರು ಸುಡು ಬಿಸಿಲಿನಲ್ಲಿ ಮರಳ ಮೇಲೆ ಹಪ್ಪಳ ಹುರಿದಿದ್ದಾರೆ. ಖಾಜುವಾಲದ ಬಳಿ ಇರುವ ಭಾರತ-ಪಾಕ್ ಗಡಿಯಲ್ಲಿ ಈ ದೃಶ್ಯ ಕಂಡುಬಂದಿದ್ದು, ಪ್ರದೇಶದಲ್ಲಿ ಬಿಸಿಗಾಳಿಯ ತೀವ್ರತೆ ಹೆಚ್ಚಾಗಿದೆ. ಇನ್ನು ಮರುಭೂಮಿಯಲ್ಲಿ ಯೋಧ ಕೈಯಲ್ಲಿ ಹಪ್ಪಳ ಹಿಡಿದು ಮರಳನ್ನು ಮೆಲ್ಲಗೆ ಸರಿಸುತ್ತಾರೆ. ನಂತರ ಅದರ ಒಳಗೆ ಹಪ್ಪಳ ಇಟ್ಟು ಮರಳನ್ನು ಮುಚ್ಚುತ್ತಾರೆ. ಕೆಲ ಸಮಯ ಹಾಗೇ ಬಿಟ್ಟು ನಂತರ ಮೆಲ್ಲಗೆ ಮರಳನ್ನು ಸರಿಸುತ್ತಾರೆ. ಆಗಾ ಹಪ್ಪಳ ಚೆನ್ನಾಗಿ ರೋಸ್ಟ್‌ ಆಗುತ್ತದೆ. ಹಪ್ಪಳ ಎಷ್ಟು ರೋಸ್ಟ್‌ ಆಗಿದೆ ಎಂಬುದನ್ನು ಯೋಧ ಮುರಿದು ತೋರಿಸುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದೆ.

ಇನ್ನು ಈ ವಿಡಿಯೋವನ್ನು ರಾಜಸ್ಥಾನದ ಬಿಕಾನೇರ್‌ನಲ್ಲಿ ತಾಪಮಾನವು 47 °C ಗೆ ಏರಿದೆ ಎಂಬ ಶೀರ್ಷಿಕೆಯೊಂದಿಗೆ ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ. ಈ ಪ್ರಮಾಣದ ಬಿಸಿಲಿನಲ್ಲಿಯೂ ಬದ್ಧತೆಯಿಂದ ದೇಶದ ರಕ್ಷಣೆ ಮಾಡುತ್ತಿರುವ ಯೋಧರಿಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಧನ್ಯವಾದ ತಿಳಿಸಿದ್ದಾರೆ. ಅಂತರಾಷ್ಟ್ರೀಯ ಗಡಿಯುದ್ದಕ್ಕೂ ಇರುವ ಮರಳು ಕುಲುಮೆಯಂತೆ ಭಾಸವಾಗುತ್ತದೆ, ಆದರೆ ತಾಯ್ನಾಡಿಗೆ ಸೇವೆ ಸಲ್ಲಿಸುತ್ತಿರುವ ನಮ್ಮ ಸೈನಿಕರು ದೃಢವಾಗಿ ನಿಂತಿದ್ದಾರೆ ಎಂದು ಈ ವೀಡಿಯೊಗೆ ಜನರು ಹೇಗೆ ಪ್ರತಿಕ್ರಿಯಿಸಿದ್ದಾರೆ

ಇದನ್ನೂ ಓದಿ:Mother Dies: ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ಸಾವು; 35 ಲಕ್ಷ ಬಿಲ್‌ ಕಟ್ಟಿ ಮೃತದೇಹ ತೆಗೆದುಕೊಳ್ಳಿ ಎಂದ ಆಸ್ಪತ್ರೆ!

“ನಮ್ಮ ಯೋಧರು ಸದಾ ನಮ್ಮ ರಕ್ಷಣೆಗೆ ನಿಂತಿದ್ದಾರೆ.. ಅದೂ +47 ಡಿಗ್ರಿ ಅಥವಾ -47 ಡಿಗ್ರಿ ಆಗಿದ್ದರೂ… ಸೆಲ್ಯೂಟ್!” ಒಬ್ಬ ವ್ಯಕ್ತಿಯನ್ನು ಬರೆದಿದ್ದರೆ, ಮತ್ತೊಬ್ಬರು, “ನಮ್ಮ ಧೈರ್ಯಶಾಲಿಗಳಿಗೆ ಸೆಲ್ಯೂಟ್. ಈ ಬಿಸಿಯ ಅಲೆಯಲ್ಲೂ ನಮ್ಮ ಸೈನಿಕರು ಗಡಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಮ್ಮ ಯೋಧರಿಗೆ ಗ್ರ್ಯಾಂಡ್ ಸೆಲ್ಯೂಟ್ ಮತ್ತು ದೊಡ್ಡ ಗೌರವ! ಜೈ ಹಿಂದ್!” ಎಂದು ಕಮೆಂಟ್‌ ಮಾಡಿದ್ದಾರೆ.

Continue Reading

ಕ್ರೀಡೆ

RCB: ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಜಯ್​ ಮಲ್ಯ ಕಾರಣವಂತೆ!

RCB: ನೆಟ್ಟಿಗರು ಮಲ್ಯ ಶುಭ ಹಾರೈಕೆಯಿಂದಲೇ ಆರ್​ಸಿಬಿ ಸೋಲು ಕಂಡಿದೆ ಎಂದು ಹೇಳಲಾರಂಭಿಸಿದ್ದಾರೆ. ಮಲ್ಯ ಹಾರೈಕೆಗೂ ಮುನ್ನ ಆರ್​​ಸಿಬಿ ಉತ್ತಮವಾಗಿ ಆಡುತ್ತಿತ್ತು. ಮಲ್ಯ ಹಾರೈಕೆಯಿಂದ ಆರ್​ಸಿಬಿ ಆಟಗಾರರಿಗೆ ಹಳೆಯ ಪಾರ್ಟಿಗಳು ನೆನೆಪಿಗೆ ಬಂದಿರಬೇಕು ಇದೇ ಗುಂಗಿನಲ್ಲಿ ಪಂದ್ಯ ಸೋತುರು ಎಂದು ಕಾಲೆಳೆದಿದ್ದಾರೆ.

VISTARANEWS.COM


on

RCB
Koo

ಬೆಂಗಳೂರು: ಬುಧವಾರ ರಾತ್ರಿ ನಡೆದ ಐಪಿಎಲ್​ನ(IPL 2024) ಎಲಿಮಿನೇಟರ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB) ತಂಡ ರಾಜಸ್ಥಾನ್​(Rajasthan Royals) ವಿರುದ್ಧ 4 ವಿಕೆಟ್​ ಅಂತರದ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಈ ಸೋಲಿಗೆ ತಂಡದ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಎಂದು ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ.

ಹೌದು, ಆರ್​ಸಿಬಿ ತಂಡ ಆರಂಭಿಕ ಹಂತದಲ್ಲಿ ಸತತವಾಗಿ ಸೋಲಿಗೆ ಸಿಲುಕಿ ಇನ್ನೇನು ಟೂರ್ನಿಯಿಂದ ಹೊರಬೀಳುತ್ತದೆ ಎನ್ನುವಷ್ಟರಲ್ಲಿ ಪುಟಿದೆದ್ದು ಸತತವಾಗಿ 6 ಪಂದ್ಯ ಗೆದ್ದು ಅಚ್ಚರಿ ಎಂಬಂತೆ ಪ್ಲೇ ಆಫ್​ ಪ್ರವೇಶಿಸಿತ್ತು. ಇದೇ ಖುಷಿಯಲ್ಲಿ ವಿಜಯ್​ ಮಲ್ಯ ತಂಡಕ್ಕೆ ಶುಭ ಹಾರೈಸಿದ್ದರು.

“ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್​ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದರು.

ಎಲಿಮಿನೇಟರ್​ ಪಂದ್ಯ ಆರಂಭಕ್ಕೂ ಕೂಡ ಮಲ್ಯ ಟ್ವೀಟ್​ ಮೂಲಕ ಶುಭ ಹಾರೈಸಿ, ‘ನಾನು ಆರ್‌ಸಿಬಿ ಫ್ರಾಂಚೈಸಿಗಾಗಿ ಬಿಡ್ ಮಾಡಿದಾಗ, ವಿರಾಟ್‌ ಕೊಹ್ಲಿಗೆ ಬಿಡ್ ಮಾಡಿದಾಗ, ನಾನು ಇದಕ್ಕಿಂತ ಉತ್ತಮ ಆಯ್ಕೆಗಳನ್ನು ಮಾಡಲು ಸಾಧ್ಯವಿಲ್ಲ ಎಂದು ನನ್ನ ಆಂತರಾತ್ಮ ಹೇಳಿತ್ತು. ಈ ಬಾರಿ ಐಪಿಎಲ್ ಟ್ರೋಫಿ ಗೆಲ್ಲಲು ಆರ್‌ಸಿಬಿಗೆ ಉತ್ತಮ ಅವಕಾಶವಿದೆ ಎಂದು ನನ್ನ ಮನಸ್ಸು ಹೇಳುತ್ತಿದೆ. ತಂಡಕ್ಕೆ ಶುಭವಾಗಲಿ’ ಎಂದು ಹಾರೈಸಿದ್ದರು.

ಇದನ್ನೂ ಓದಿ Virat Kohli: ಅಂದು ವಿಶ್ವಕಪ್​ನಲ್ಲಿ, ಇಂದು ಐಪಿಎಲ್​ನಲ್ಲಿ ವಿಕೆಟ್​ ಬೇಲ್ಸ್​ ಹಾರಿಸಿ ಬೇಸರದಿಂದ ಮೈದಾನ ತೊರೆದ ಕೊಹ್ಲಿ

ಇದೀಗ ನೆಟ್ಟಿಗರು ಮಲ್ಯ ಶುಭ ಹಾರೈಕೆಯಿಂದಲೇ ಆರ್​ಸಿಬಿ ಸೋಲು ಕಂಡಿದೆ ಎಂದು ಹೇಳಲಾರಂಭಿಸಿದ್ದಾರೆ. ಮಲ್ಯ ಹಾರೈಕೆಗೂ ಮುನ್ನ ಆರ್​​ಸಿಬಿ ಉತ್ತಮವಾಗಿ ಆಡುತ್ತಿತ್ತು. ಮಲ್ಯ ಹಾರೈಕೆಯಿಂದ ಆರ್​ಸಿಬಿ ಆಟಗಾರರಿಗೆ ಹಳೆಯ ಪಾರ್ಟಿಗಳು ನೆನೆಪಿಗೆ ಬಂದಿರಬೇಕು ಇದೇ ಗುಂಗಿನಲ್ಲಿ ಪಂದ್ಯ ಸೋತುರು ಎಂದು ಕಾಲೆಳೆದಿದ್ದಾರೆ. ಮಲ್ಯ ಅವರು ಆರ್​ಸಿಬಿಯ ಮಾಲಿಕರಾಗಿದ್ದಾಗ ಪಂದ್ಯ ಗೆದ್ದ ಬಳಿಕ ಆಟಗಾರರಿಗೆ ಫುಲ್​ ಪಾರ್ಟಿ ನೀಡುತ್ತಿದ್ದರು. ಶುಭ ಹಾರೈಸದೇ ಇದ್ದಿದ್ದರೆ ಆಟಗಾರರಿಗೆ ಹಳೆಯ ನೆನಪು ಮತ್ತೆ ಮರುಕಳಿಸುತ್ತಿರಲ್ಲಿ. ಜತೆಗೆ ಪಂದ್ಯವನ್ನೂ ಕೂಡ ಗೆಲ್ಲುತ್ತಿದ್ದರು ಎಂದು ಕಮೆಂಟ್​ ಮಾಡಿದ್ದಾರೆ. ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಆಟಗಾರ ತುಷಾರ್‌ ದೇಶ್‌ಪಾಂಡೆ ಕೂಡ ಆರ್‌ಸಿಬಿಯನ್ನು ಟ್ರೋಲ್​ ಮಾಡಿದ್ದಾರೆ.

ಚೆನ್ನೈ ಸೂಪರ್​ ಕಿಂಗ್ಸ್​ನ ಫ್ಯಾನ್ಸ್ ಪೇಜ್‌ವೊಂದು ಬೆಂಗಳೂರು ದಂಡು ರೈಲ್ವೇ ನಿಲ್ದಾಣದ (Bangalore cant) ಫೋಟೋವನ್ನು ಹಂಚಿಕೊಂಡಿದೆ. ಈ ಮೂಲಕ ಬೆಂಗಳೂರು ತಂಡದಿಂದ ಕಪ್‌ ಗೆಲ್ಲಲು ಸಾಧ್ಯವಿಲ್ಲ ಎಂಬರ್ಥದಲ್ಲಿ ಈ ಮೀಮ್ಸ್ ಅನ್ನು ಸಿಎಸ್‌ಕೆ ಫ್ಯಾನ್ ಪೇಜ್‌ ಹಂಚಿಕೊಂಡಿದೆ. ಈ ಮೀಮ್ಸ್‌ ಅನ್ನು ತುಷಾರ್‌ ದೇಶ್‌ಪಾಂಡೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯ ಸ್ಟೋರಿಯನ್ನು ಹಂಚಿಕೊಂಡಿದ್ದಾರೆ.

Continue Reading
Advertisement
RCB Funny Memes
ಕ್ರೀಡೆ8 mins ago

RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

Hamas Terrorists
ವಿದೇಶ11 mins ago

ಎಲ್ಲೆ ಮೀರಿದ ಹಮಾಸ್‌ ಉಗ್ರರ ಅಟ್ಟಹಾಸ; ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಲೈಂಗಿಕ ದೌರ್ಜನ್ಯ: ಭಯಾನಕ ವಿಡಿಯೊ ಇಲ್ಲಿದೆ

PM Narendra Modi
Lok Sabha Election 202420 mins ago

PM Narendra Modi: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಜನವೋ…ಜನ! ಅದ್ಬುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ-ವಿಡಿಯೋ ವೈರಲ್‌

Murder Case
ಬೆಳಗಾವಿ20 mins ago

Murder case : ಮಕ್ಕಳ ಎದುರೇ ಪತ್ನಿಗೆ ಸಲಾಕೆಯಿಂದ ಹೊಡೆದು ಕೊಂದು ಪರಾರಿಯಾದ ಪತಿ

gold rate today kiara
ಚಿನ್ನದ ದರ38 mins ago

Gold Rate Today: ಚಿನ್ನ ಕೊಳ್ಳಲು ಇಂದೇ ಸುದಿನ, ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ!

hotel oterra bomb hoax
ಕ್ರೈಂ56 mins ago

bomb Hoax: ಶಾಲೆ, ದೇವಸ್ಥಾನದ ಬಳಿಕ ರಾಜಧಾನಿಯ ಪ್ರತಿಷ್ಠಿತ ಹೋಟೆಲ್‌ಗೂ ಬಾಂಬ್‌ ಬೆದರಿಕೆ

T20 World Cup 2024
ಕ್ರೀಡೆ57 mins ago

T20 World Cup 2024: ಇನ್ನೆರಡು ದಿನದಲ್ಲಿ ಮಿನಿ ವಿಶ್ವಕಪ್​ ಸಮರಕ್ಕೆ ರೋಹಿತ್​, ಕೊಹ್ಲಿ ಸೇರಿ ಮೊದಲ ಬ್ಯಾಚ್​ ನ್ಯೂಯಾರ್ಕ್​ಗೆ ಪ್ರಯಾಣ

physical abuse & murder
ಕ್ರೈಂ1 hour ago

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ; ದೃಶ್ಯಂ ಸಿನಿಮಾ ರೀತಿಯಲ್ಲಿ ಎಸ್ಕೇಪ್‌ಗೆ ಯತ್ನ

cylinder blast in Tumkur
ತುಮಕೂರು1 hour ago

Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; 7 ದಿನ ನರಳಾಡಿ ಪ್ರಾಣಬಿಟ್ಟ ಇಬ್ಬರು ಗಾಯಾಳುಗಳು

Kalki 2898 AD
ಸಿನಿಮಾ1 hour ago

Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ7 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌