Viral Video| ದೆವ್ವವಾಗಿ ಬಂದ ರೋಗಿಗೆ ವೈದ್ಯರ ಕೋಣೆ ತೋರಿಸಿದ ಆಸ್ಪತ್ರೆ ಸಿಬ್ಬಂದಿ; ಭಯ ಹುಟ್ಟಿಸುವ ವಿಡಿಯೊ ಇದು! Vistara News

ವೈರಲ್ ನ್ಯೂಸ್

Viral Video| ದೆವ್ವವಾಗಿ ಬಂದ ರೋಗಿಗೆ ವೈದ್ಯರ ಕೋಣೆ ತೋರಿಸಿದ ಆಸ್ಪತ್ರೆ ಸಿಬ್ಬಂದಿ; ಭಯ ಹುಟ್ಟಿಸುವ ವಿಡಿಯೊ ಇದು!

ಸಿಸಿಟಿವಿ ಫೂಟೇಜ್​ ದೃಶ್ಯ ವೈರಲ್ ಆದ ಬೆನ್ನಲ್ಲೇ ಕೆಲವು ಸ್ಥಳೀಯ ಮಾಧ್ಯಮಗಳು ಆಸ್ಪತ್ರೆಗೆ ಹೋಗಿ ಪ್ರಶ್ನೆ ಮಾಡಿವೆ. ಆ ಹೊತ್ತಲ್ಲಿ ಅಲ್ಲಿದ್ದ ಸಿಬ್ಬಂದಿ ಯಾರ ಹೆಸರನ್ನು ಬರೆದಿದ್ದಾನೆ ಎಂದೂ ಪರಿಶೀಲನೆ ಮಾಡಿದ್ದಾರೆ.

VISTARANEWS.COM


on

Hospital Guard Greets Ghost Patient Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೆವ್ವ-ಭೂತ-ಪಿಶಾಚಿಗಳೆಲ್ಲ ನಿಜವಾಗಿಯೂ ಇದ್ದಾವೋ-ಇಲ್ಲವೋ ಗೊತ್ತಿಲ್ಲ. ಅವೆಲ್ಲ ತರ್ಕಕ್ಕೆ ನಿಲುಕದ ವಿಚಾರಗಳು. ಆದರೆ ಇಂಟರ್​​ನೆಟ್​​ನಲ್ಲಿ ಆಗಾಗ ಈ ದೆವ್ವ-ಭೂತ-ಆತ್ಮದ ವಿಡಿಯೊಗಳೆಲ್ಲ ವೈರಲ್​ ಆಗುತ್ತಿರುತ್ತವೆ. ಅದೇ ರೀತಿ ಈಗ ಅರ್ಜೆಂಟಿನಾ ಆಸ್ಪತ್ರೆಯೊಂದರಲ್ಲಿ, ಸಿಸಿಟಿವಿ ಫೂಟೇಜ್​​ನಲ್ಲಿ ಸೆರೆಯಾದ ಭಯಾನಕ ದೃಶ್ಯದ ವಿಡಿಯೊವೊಂದು ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ‘ಅಲ್ಲಿ ಆ ವ್ಯಕ್ತಿ ಅದೇನು ಮಾಡಿದ? ಯಾರಿದ್ದಾರೆ?’ ಎಂಬ ಪ್ರಶ್ನೆ ಮೂಡುತ್ತದೆ.

ಅರ್ಜೆಂಟಿನಾದ ರಾಜಧಾನಿ ಬ್ಯೂನಸ್​ ಐರಿಸ್​​ನ ಆಸ್ಪತ್ರೆ ಅದು. ಆಸ್ಪತ್ರೆಯ ಒಳಗೆ ಸಿಬ್ಬಂದಿಯೊಬ್ಬ ಕುಳಿತಿದ್ದಾರೆ. ಅದು ರಾತ್ರಿ ಸಮಯವಾಗಿದ್ದರಿಂದ ಅಲ್ಲಿ ರಿಸಪ್ಷನ್​​ನಲ್ಲಿ ಅವರೊಬ್ಬರೇ ಇದ್ದರು. ಆಸ್ಪತ್ರೆಯ ಗಾಜಿನ ಬಾಗಿಲು ತೆರೆದುಕೊಳ್ಳುತ್ತದೆ. ನೀವು ನೋಡಿ, ಅಲ್ಲಿಂದ ಯಾರೂ ಒಳಗೆ ಬರುವುದಿಲ್ಲ. ಆದರೆ ಈ ವ್ಯಕ್ತಿ ಎದ್ದು ಹೋಗಿ, ಟೇಪ್​​ನ ತಡೆಯನ್ನು ತೆಗೆಯುತ್ತಾನೆ, ನಂತರ ಅದ್ಯಾರ ಬಳಿಯೋ ಮಾತನಾಡುತ್ತಾನೆ. ಡಾಕ್ಟರ್​ ಕೋಣೆಯ ಕಡೆಗೆ ಕೈ ತೋರಿಸಿ ‘ಹೀಗೆ ಹೋಗಿ’ ಎಂಬಂಥ ಸಂಜ್ಞೆ ಮಾಡುತ್ತಾನೆ. ಬಳಿಕ ಅಲ್ಲಿಯೇ ಇದ್ದ ವ್ಹೀಲ್​ ಚೇರ್​ ಕೂಡ ತೆಗೆದುಕೊಡುತ್ತಾನೆ. ವಿಡಿಯೊ ನೋಡಿದರೆ ಅಲ್ಲಿ ಯಾರೂ ಇರುವುದಿಲ್ಲ. ಆದರೆ ಅವನ ಹಾವ-ಭಾವಗಳೆಲ್ಲ ಯಾರ ಬಳಿಯೋ ಮಾತನಾಡಿದಂತೆಯೇ ಇರುತ್ತವೆ’ ​

ಈ ಸಿಸಿಟಿವಿ ಫೂಟೇಜ್​ ದೃಶ್ಯ ವೈರಲ್ ಆದ ಬೆನ್ನಲ್ಲೇ ಕೆಲವು ಸ್ಥಳೀಯ ಮಾಧ್ಯಮಗಳು ಆಸ್ಪತ್ರೆಗೆ ಹೋಗಿ ಪ್ರಶ್ನೆ ಮಾಡಿವೆ. ಆ ಹೊತ್ತಲ್ಲಿ ಅಲ್ಲಿದ್ದ ಸಿಬ್ಬಂದಿ ಯಾರ ಹೆಸರನ್ನು ಬರೆದಿದ್ದಾನೆ ಎಂದೂ ಪರಿಶೀಲನೆ ಮಾಡಿದ್ದಾರೆ. ಆತ ಬರೆದಿದ್ದು ಒಬ್ಬ ಮಹಿಳೆಯ ಹೆಸರು ಮತ್ತು ಆಕೆ ಮುನ್ನಾದಿನ ಅದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು ಎಂದು ಹೇಳಲಾಗಿದೆ. ಆ ಮಹಿಳೆ ಮೃತಪಟ್ಟ ವಿಚಾರವನ್ನು ಅದೇ ಆಸ್ಪತ್ರೆಯೂ ಸ್ಪಷ್ಟಪಡಿಸಿದೆ ಎಂದು ವರದಿಯಾಗಿದೆ.

ಇನ್ನು ಆಸ್ಪತ್ರೆಯ ಮಾಧ್ಯಮ ವ್ಯವಹಾರಗಳ ನಿರ್ದೇಶಕ ಗಿಲ್ಲೆರ್ಮೊ ಕಪುಯಾ ಈ ಬಗ್ಗೆ ಪ್ರತಿಕ್ರಿಯೆ ನೀಡಿ ‘ಆಸ್ಪತ್ರೆಯ ಮುಖ್ಯದ್ವಾರಕ್ಕೆ ಸಮಸ್ಯೆ ಇದೆ. ಅದು ಪದೇಪದೆ ಅದರಷ್ಟಕ್ಕೇ ಅದು ತೆರೆದುಕೊಳ್ಳುತ್ತದೆ, ಹಾಗೆ ತೆರೆದುಕೊಂಡಾಗ ಅಲ್ಲಿಯೇ ಇದ್ದ ಸಿಬ್ಬಂದಿ ತಮಾಷೆಗಾಗಿ ಎದ್ದು ಹೋಗಿ ಏನೋ ಮಾಡಿರಬೇಕು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸುವುದು ಬೇಡ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video | ಉಚಿತ ಹೆಲ್ಮೆಟ್‌ಗಾಗಿ ಮುಗಿಬಿದ್ದ ಜನ; ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೊ ವೈರಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ತಮ್ಮ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸುಟ್ಟು ಹಾಕಿ ಎಂದ ಭವಾನಿ ರೇವಣ್ಣ! ವಿಡಿಯೊ ನೋಡಿ

ಅಪಘಾತ ನಡೆದಾಗ ಬೈಕ್‌ ಸವಾರನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈಯುವ ಮೂಲಕ ಮಾನವೀಯತೆ ಮರೆತ ಭವಾನಿ ರೇವಣ್ಣ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

Bhavani Revanna
Koo

ಮೈಸೂರು: ಕಾರಿಗೆ ಡಿಕ್ಕಿ ಹೊಡೆದ ಬೈಕ್ ಚಾಲಕನನ್ನು ಭವಾನಿ ರೇವಣ್ಣ (Bhavani Revanna) ತರಾಟೆಗೆ ತೆಗೆದುಕೊಂಡ ಘಟನೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಪಘಾತ ನಡೆದಾಗ ಬೈಕ್‌ ಸವಾರನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈದಿರುವ ಭವಾನಿ ರೇವಣ್ಣ, ಬೈಕ್‌ ಸುಟ್ಟು ಹಾಕಿ ಎಂದು ಆಕ್ರೋಶ ಹೊರಹಾಕಿರುವುದು ಕಂಡುಬಂದಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಹೊರವಲಯದಲ್ಲಿ ಅಪಘಾತ ನಡೆದಿದೆ. ಹಾಸನ – ಕೆ.ಆರ್.ನಗರ ರಸ್ತೆಯಲ್ಲಿ ಬರುತ್ತಿದ್ದಾಗ ಭವಾನಿ ರೇವಣ್ಣ ಕಾರಿಗೆ ಬೈಕ್‌ ಸವಾರರೊಬ್ಬರು ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಅಕ್ಕಾ ಕಾರು ಸೈಡಿಗೆ ಹಾಕಿ ಅಂದಿದ್ದಕ್ಕೆ ಕಿಡಿಕಾರಿರುವ ಭವಾನಿ ರೇವಣ್ಣ, ನನ್ನ ಕಾರಿಗೆ ಡ್ಯಾಮೇಜ್‌ ಆಗಿದೆ. ರಿಪೇರಿ ಮಾಡಿಸೋಕೆ 50 ಲಕ್ಷ ರೂ. ಹಣ ಬೇಕು. ಯಾರಾದರೂ ನ್ಯಾಯ ಮಾತನಾಡುವವರು ಐವತ್ತು ಲಕ್ಷ ಹಣ ಕೊಟ್ಟು ಮಾತನಾಡಿ. ಒಂದೂವರೆ ಕೋಟಿ ರೂಪಾಯಿ ಗಾಡಿ ಇದು ಎಂದು ದರ್ಪ ತೋರಿದ್ದಾರೆ.

ಸಾಲಿಗ್ರಾಮ ಠಾಣೆಯ ಇನ್ಸ್‌ಪೆಕ್ಟರ್‌ನ ಕರೀರಿ, ತಗೊಂಡು ಹೋಗಿ ಇವನನ್ನು ಒಳಗೆ ಹಾಕಲಿ, ಸಾಯಂಗಿದ್ರೆ ಬಸ್ಸಿಗೆ ಸಿಕ್ಕಿ ಸಾಯಬೇಕಿತ್ತು. ಸಾಯೋಕೆ ನನ್ ಕಾರೇ ಬೇಕಿತ್ತಾ? ಅವನು ಸತ್ತೋಗ್ತಾನೆ ಅಂತ ಅವನ ಬಗ್ಗೆ ಯಾಕೆ ಯೋಚನೆ ಮಾಡ್ತೀಯಾ? ಒಂದೂವರೆ ಕೋಟಿ ರೂಪಾಯಿ ಕಾರು ಬಗ್ಗೆ ಯೋಚನೆ ಮಾಡು ಎಂದಿರುವ ಭವಾನಿ ರೇವಣ್ಣ, ಬೈಕ್ ಸವಾರನ‌ನ್ನು ನಿಲ್ಲಿಸಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ.

ಇದನ್ನೂ ಓದಿ | ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಅಪಘಾತದಲ್ಲಿ ಗಾಯಗೊಂಡವನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈಯುವ ಮೂಲಕ ಭವಾನಿ ರೇವಣ್ಣ ಮಾನವೀಯತೆ ಮರೆತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

ಮೆಲೋನಿ+ಮೋದಿ=ಮೆಲೋಡಿ; ಇಟಲಿ ಪ್ರಧಾನಿ ಸೆಲ್ಫಿ ‘ಜಸ್ಟ್ ಲುಕ್ಕಿಂಗ್‌ ಲೈಕ್‌ ಎ ವಾವ್’!

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜತೆಗಿನ ಸೆಲ್ಫಿಯನ್ನು ಪೋಸ್ಟ್‌ ಮಾಡಿದ್ದಾರೆ. ಜನ ಜಸ್ಟ್‌ ಲುಕ್ಕಿಂಗ್‌ ಲೈಕ್‌ ಎ ವಾವ್‌ ಎಂದು ಪ್ರತಿಕ್ರಿಯಿಸಿದ್ದಾರೆ. ಫೋಟೊ ಕೂಡ ಭಾರಿ ವೈರಲ್‌ ಆಗಿದೆ.

VISTARANEWS.COM


on

Narendra Modi Giorgia Melone
Koo

ದುಬೈ: ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರ ಸ್ನೇಹದ ಬಗ್ಗೆ ಜಗತ್ತಿಗೇ ಗೊತ್ತಿದೆ. ಭಾರತದಲ್ಲಂತೂ ನರೇಂದ್ರ ಮೋದಿ (Narendra Modi) ಹಾಗೂ ಜಾರ್ಜಿಯಾ ಮೆಲೋನಿ ಅವರ ಅಸಂಖ್ಯಾತ ಟ್ರೋಲ್‌ಗಳು, ವಿಡಿಯೊಗಳು, ಹಾಡುಗಳು, ಮೀಮ್‌ಗಳು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತವೆ. ಈಗ ಜಾರ್ಜಿಯಾ ಮೆಲೋನಿ ಅವರೇ ನರೇಂದ್ರ ಮೋದಿ ಜತೆ ಸೆಲ್ಫಿ ತೆಗೆಸಿಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಫೋಟೊ ಈಗ ವೈರಲ್‌ (Viral News) ಆಗಿದ್ದು, ಜನ “ಜಸ್ಟ್‌ ಲುಕ್ಕಿಂಗ್‌ ಲೈ ಎ ವಾವ್”‌ ಎಂದು ಪ್ರತಿಕ್ರಿಯಿಸಿದ್ದಾರೆ.

ಯುಎಇ ದೇಶದ ರಾಜಧಾನಿ ದುಬೈನಲ್ಲಿ ನಡೆದ 28ನೇ ಕಾನ್ಫರೆನ್ಸ್‌ ಆಫ್‌ ದಿ ಪಾರ್ಟೀಸ್‌ (COP28) ಶೃಂಗಸಭೆಯಲ್ಲಿ ನರೇಂದ್ರ ಮೋದಿ ಹಾಗೂ ಜಾರ್ಜಿಯಾ ಮೆಲೋನಿ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಜಾರ್ಜಿಯಾ ಮೆಲೋನಿ ಅವರು ನರೇಂದ್ರ ಮೋದಿ ಅವರ ಜತೆ ಸೆಲ್ಫಿ ತೆಗೆಸಿಕೊಂಡಿದ್ದಾರೆ. “ಸಿಒಪಿ28 ಸಭೆಯಲ್ಲಿ ಆತ್ಮೀಯ ಸ್ನೇಹಿತರು” ಎಂದು ಒಕ್ಕಣೆ ಬರೆದಿದ್ದಾರೆ. ಅಷ್ಟೇ ಅಲ್ಲ, ಮೆಲೋನಿ+ಮೋದಿ= ಮೆಲೋಡಿ ಎಂಬ ಅರ್ಥ ಬರುವ ಕಾರಣ ಮೆಲೋಡಿ ಎಂಬ ಹ್ಯಾಶ್‌ ಟ್ಯಾಗ್‌ ಬಳಸಿದ್ದಾರೆ. ಈ ಫೋಟೊ ಭಾರಿ ವೈರಲ್‌ ಆಗಿದ್ದು, ಸಾವಿರಾರು ಜನ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Giorgia Meloni On Modi: ವಿಶ್ವ ನಾಯಕರಲ್ಲೇ ಮೋದಿ ಹೆಚ್ಚು ಪ್ರೀತಿಪಾತ್ರರು, ಇಟಲಿ ಪ್ರಧಾನಿ ಮೆಲೋನಿ ಮೆಚ್ಚುಗೆ

“ಜಸ್ಟ್‌ ಲುಕ್ಕಿಂಗ್‌ ಲೈಕ್‌ ಎ ವಾವ್”‌ ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸುವ ಮೂಲಕ ಇತ್ತೀಚಿನ ಟ್ರೆಂಡ್‌ ಫಾಲೋ ಮಾಡಿದ್ದಾರೆ. “ಈ ಒಂದು ಫೋಟೊ ಎಲ್ಲ ವೈರಲ್‌ ರೆಕಾರ್ಡ್‌ಗಳನ್ನೂ ಮೀರಿಸುತ್ತದೆ” ಎಂದು ಮತ್ತೊಬ್ಬರು ಹೇಳಿದ್ದಾರೆ. “ಮೋದಿ ಹಾಗೂ ಮೆಲೋಡಿ ಜೋಡಿ ಚೆನ್ನಾಗಿದೆ” ಎಂದು ಇನ್ನೊಬ್ಬರು ಕಿಚಾಯಿಸಿದ್ದಾರೆ. ಹಾಗೆಯೇ ಸಾವಿರಾರು ಮೀಮ್‌ಗಳು, ಟ್ರೋಲ್‌ಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ.

ಮೋದಿಯನ್ನು ಹಾಡಿ ಹೊಗಳಿದ್ದ ಮೆಲೋನಿ

ಜಾರ್ಜಿಯಾ ಮೆಲೋನಿ ಅವರು ಇದಕ್ಕೂ ಮೊದಲು ನರೇಂದ್ರ ಮೋದಿ ಅವರನ್ನು ಹೊಗಳಿದ್ದರು. ರೈಸಿನಾ ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಜಾರ್ಜಿಯಾ ಮೆಲೋನಿ, “ನರೇಂದ್ರ ಮೋದಿ ಅವರು ವಿಶ್ವದ ನಾಯಕರಲ್ಲಿಯೇ ಹೆಚ್ಚು ಪ್ರೀತಿಗೆ ಪಾತ್ರರಾಗಿದ್ದಾರೆ. ಅವರು ಧೀಮಂತ ನಾಯಕರು ಎಂಬುದು ಸಾಬೀತಾಗಿದೆ. ಇದಕ್ಕಾಗಿ ಮೋದಿ ಅವರಿಗೆ ಅಭಿನಂದನೆಗಳು” ಎಂದಿದ್ದರು. “ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಾಗೂ ಇಟಲಿ ಸಂಬಂಧ ಮತ್ತಷ್ಟು ವೃದ್ಧಿಯಾಗುತ್ತಿದೆ. ಉಭಯ ದೇಶಗಳ ಸಂಬಂಧವನ್ನು ವ್ಯೂಹಾತ್ಮಕ ಸಂಬಂಧವಾಗಿ ಮಾರ್ಪಡಿಸಲು ನಾವು ಉತ್ಸುಕರಾಗಿದ್ದೇವೆ. ಇದರಿಂದ ಎರಡೂ ದೇಶಗಳ ಸಂಬಂಧ ಇನ್ನಷ್ಟು ವೃದ್ಧಿಯಾಗಲಿದೆ” ಎಂದು ತಿಳಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿದೇಶ

Medical Miracle: ಈ ಅಜ್ಜಿ 50 ವರ್ಷದಿಂದ ಬರೀ ಕೋಲ್ಡ್‌ ಡ್ರಿಂಕ್ಸ್‌ ಕುಡಿದೇ ಬದುಕ್ತಿದ್ದಾರೆ!

Medical Miracle: ವಿಯೆಟ್ನಾಂನ ವೃದ್ಧೆಯೊಬ್ಬರು 50 ವರ್ಷಗಳಿಂದ ಕೇವಲ ತಂಪು ಪಾನೀಯ, ನೀರು ಕುಡಿದೇ ಜೀವಿಸುತ್ತಿದ್ದಾರೆ. ಇದಕ್ಕಿರುವ ಕಾರಣ ಇಲ್ಲಿದೆ.

VISTARANEWS.COM


on

water drinking
Koo

ವಿಯೆಟ್ನಾಂ: ಉತ್ತಮ ಆರೋಗ್ಯಕ್ಕೆ ಸರಿಯಾದ, ಪೋಷಕಾಂಶಯುಕ್ತ ಆಹಾರ ಮುಖ್ಯ ಎನ್ನುತ್ತದೆ ವೈದ್ಯ ಲೋಕ. ಅದಕ್ಕಾಗಿ ದ್ರವ ರೂಪದ ಆಹಾರದ ಜತೆಗೆ ಘನ ಆಹಾರವನ್ನೂ ಸೇವಿಸಬೇಕು ಎಂದು ಸಲಹೆ ನೀಡಲಾಗುತ್ತದೆ. ಆದರೆ ವೈದ್ಯಲೋಕವನ್ನೇ ಅಚ್ಚರಿಗೆ ದೂಡಿ ಇಲ್ಲೊಬ್ಬರು ಸುಮಾರು 50 ವರ್ಷಗಳಿಂದ ಕೇವಲ ನೀರು ಮತ್ತು ತಂಪು ಪಾನೀಯ (Cold drinks) ಕುಡಿದೇ ಬದುಕುತ್ತಿದ್ದಾರೆ. ಅದೂ ಅವರು ಈ 75ರ ಇಳಿವಯಸ್ಸಿನಲ್ಲೂ ಆರೋಗ್ಯವಂತರಾಗಿದ್ದಾರೆ ಎನ್ನುವುದು ವಿಶೇಷ (Medical Miracle). ಯಾರು ಈ ವೃದ್ಧೆ? ಏನಿವರ ಹಿನ್ನೆಲೆ ಎನ್ನುವುದರ ವಿವರ ಇಲ್ಲಿದೆ.

ವಿಯಟ್ನಾಂನ ಬುಯಿ ಲೋಯಿ ಎಂಬ 75ರ ಹರೆಯದ ಅಜ್ಜಿಯೇ ವೈದ್ಯ ಲೋಕಕ್ಕೆ ಸವಾಲಾಗಿರುವವರು. ಅವರಿಗೆ ಯಾವುದೇ ಘನ ಆಹಾರ ತಿನ್ನಬೇಕೆಂದು ಅನಿಸುವುದೇ ಇಲ್ಲವಂತೆ. ಬರೀ ನೀರು, ಸಕ್ಕರೆಯಂಶವಿರುವ ತಂಪು ಪಾನೀಯವಷ್ಟೇ ಅವರ ಆಹಾರ.

ಕಾರಣವೇನು?

ಬುಯಿ ಲೋಯಿ ಅವರ ಈ ವಿಚಿತ್ರ ವರ್ತನೆಯ ಹಿಂದೆ ಬಲವಾದ ಕಾರಣವಿದೆ. ಆಗ ಬುಯಿ ಲೋಯಿ ಅವರಿಗೆ ಸುಮಾರು 25 ವರ್ಷವಾಗಿತ್ತು. 50 ವರ್ಷಗಳ ಹಿಂದೆ ಅವರು ಹಾಗೂ ಮತ್ತೊಬ್ಬ ಮಹಿಳೆ ಗಾಯವಾದ ಸೈನಿಕರಿಗೆ ಚಿಕಿತ್ಸೆ ನೀಡಲು ಬೆಟ್ಟ ಹತ್ತುತ್ತಿದ್ದರು. ಆಗ ಸಿಡಿಲು ಬಡಿದು ಬುಯಿ ಲೋಯಿ ಪ್ರಜ್ಞೆ ತಪ್ಪಿತ್ತು. ಕೆಲವು ಸಮಯದ ಬಳಿಕ ಎಚ್ಚರವಾದ ಮೇಲೆ ಗೆಳತಿ ಜ್ಯೂಸ್ ಕುಡಿಸಿದ್ದರು. ಆ ಬಳಿಕ ಬುಯಿ ಲೋಯಿ ಅವರ ಜೀವನ ಶೈಲಿಯೇ ಬದಲಾಯಿತು. ನಂತರ ಅವರಿಗೆ ಯಾವುದೇ ಘನ ಆಹಾರ ತಿನ್ನಲು ಅಷ್ಟು ಇಷ್ಟವಾಗುತ್ತಿರಲಿಲ್ಲವಂತೆ. ಸ್ವಲ್ಪ ಸಮಯ ಹಣ್ಣು, ಮತ್ತಿತರ ಆಹಾರ ಸೇವಿಸಿದರು. ಆದರೆ 1970ರಿಂದ ಹಣ್ಣು ಹಾಗೂ ಇತರ ಘನ ಆಹಾರ ಸೇವಿಸುವುದನ್ನು ಸಹ ಸಂಪೂರ್ಣ ನಿಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೀಗ ಅವರ ಮನೆಯ ಫ್ರಿಡ್ಜ್‌ ತುಂಬಾ ಬರೀ ನೀರು ಹಾಗೂ ಜ್ಯೂಸ್‌ಗಳಿವೆ. ಅದರಲ್ಲೂ ತಂಪು ಪಾನೀಯಗಳನ್ನು ಹೆಚ್ಚಾಗಿ ಸೇವಿಸುತ್ತಾರೆ. ಈ ಡಯಟ್‌ನಿಂದಾಗಿ ಹೆರಿಗೆಯಾದಾಗ ಮಕ್ಕಳಿಗೆ ಹಾಲುಣಿಸಲು ಕೂಡ ಅವರಿಗೆ ಸಾಧ್ಯವಾಗಲಿಲ್ಲ ಎಂದು ಅವರ ಆಪ್ತರು ಹೇಳಿದ್ದಾರೆ. ಸದ್ಯ ಈ ಬಗ್ಗೆ ವೈದ್ಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೇವಲ ದ್ರವ ಆಹಾರದಿಂದಲೇ ಆರೋಗ್ಯವಾಗಿರುವುದು ಹೇಗೆ ಎನ್ನುವುದು ಬಹು ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ.

ಇದನ್ನೂ ಓದಿ: Viral video : ಶಾಲೆಗೆ ಹೊರಟಿದ್ದ ಟೀಚರ್‌ ಸಿನಿಮಾ ಸ್ಟೈಲ್‌ನಲ್ಲಿ ಕಿಡ್ನಾಪ್‌

ಕೇವಲ ಬೆಲ್ಲ, ಹಾಲು, ನೀರು ಸೇವಿಸುವ ಬಾಲಕಿ

ಇದೇ ಮಾದರಿಯ ಘಟನೆಯೊಂದು ಇತ್ತೀಚೆಗೆ ನಮ್ಮ ರಾಜ್ಯದಲ್ಲೂ ವರದಿಯಾಗಿತ್ತು. ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ರಂಗಂಪೇಟೆಯ ರೇಣುಕಮ್ಮ ಎಂಬ ಬಾಲಕಿ 14 ವರ್ಷಗಳಿಂದ ಕೇವಲ ಬೆಲ್ಲ, ಹಾಲು ಹಾಗೂ ನೀರು ಸೇವಿಸುತ್ತಿದ್ದಾಳೆ. ಮನೆಯಲ್ಲಿ ಅವಳ ತಂದೆ-ತಾಯಿ, ಸಹೋದರರು ಹಾಗೂ ಸಹಪಾಠಿಗಳು ಎಷ್ಟೇ ಒತ್ತಾಯ ಮಾಡಿದರೂ ಊಟ ಮಾತ್ರ ಮಾಡೋದಿಲ್ಲ. ಊಟ ಮಾಡಿದರೆ ವಾಂತಿ ಆಗುತ್ತದೆಯಂತೆ. ಹೀಗಾಗಿ ಈ 14 ವರ್ಷದ ಬಾಲಕಿ ರೇಣುಕಮ್ಮ ಹುಟ್ಟಿದಾಗಿನಿಂದಲೂ ಕೇವಲ ಬೆಲ್ಲ, ಹಾಲು ಮಾತ್ರ ಸೇವಿಸುತ್ತಾ ಬಂದಿದ್ದಾಳೆ. ವೈದ್ಯರು ತಪಾಸಣೆ ಮಾಡಿದ್ದರೂ ಪರಿಹಾರ ಹುಡುಕುವುದು ಸಾಧ್ಯವಾಗಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral Video: ಚಲಿಸುವ ರೈಲೇ ಈ ಜೋಡಿಗೆ ಮದುವೆ ಮಂಟಪ; ವಿಶಿಷ್ಟ ವಿವಾಹದ ವಿಡಿಯೊ ಇಲ್ಲಿದೆ

Viral Video: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ವಿಶಿಷ್ಟ ವಿವಾಹ ಶೈಲಿಗೆ ಇದು ಹೊಸ ಸೇರ್ಪಡೆ. ಚಲಿಸುತ್ತಿರುವ ರೈಲಿನಲ್ಲಿ ಜೋಡಿಯೊಂದು ಮದುವೆಯಾಗಿದೆ.

VISTARANEWS.COM


on

train marriage
Koo

ಬೆಂಗಳೂರು: ಕಾಲದ ಜತೆಗೆ ಜೀವನ ಶೈಲಿಯೂ ಬದಲಾಗುತ್ತಿದೆ. ಆಹಾರ ಪದ್ಧತಿ, ಉಡುಗೆ ತೊಡುಗೆ ಮಾತ್ರವಲ್ಲ ಆಚರಣೆಗಳಲ್ಲಿಯೂ ಬದಲಾವಣೆ ಕಂಡು ಬರುತ್ತಿದೆ. ಇದೀಗ ಬದಲಾವಣೆಯ ಗಾಳಿ ಮದುವೆ ಪದ್ಧತಿ ಮೇಲೂ ಬೀಸಲಾರಂಭಿಸಿದೆ. ಸಾಂಪ್ರದಾಯಿಕ ಮಂಟಪದಲ್ಲಿ ವಿವಾಹವಾಗುವ ಬದಲು ಬೆಟ್ಟದ ಮೇಲೆ, ಗಾಳಿಯಲ್ಲಿ, ನೀರಿನಾಳದಲ್ಲಿ ಹೀಗೆ ಬೇರೆ ಬೇರೆ ವಿಧಾನಗಳಲ್ಲಿ ಸಪ್ತಪದಿ ತುಳಿಯುವವರ ಸಂಖ್ಯೆ ಹೆಚ್ಚಾಗಿದೆ. ಈ ನಡುವೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಜೋಡಿಯೊಂದು ಚಲಿಸುತ್ತಿರುವ ರೈಲಿನಲ್ಲೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ಸದ್ಯ ಈ ವಿಡಿಯೊ ವೈರಲ್‌ (Viral Vieo) ಆಗಿದೆ.

ವಿಡಿಯೊದಲ್ಲಿ ಏನಿದೆ?

ಈ ವಿಡಿಯೊದಲ್ಲಿ ಜೋಡಿಯೊಂದು ರೈಲಿನಲ್ಲಿ ಹೂಮಾಲೆಗಳನ್ನು ವಿನಿಮಯ ಮಾಡಿಕೊಳ್ಳುವುದು ಕಂಡು ಬಂದಿದೆ. ರೈಲಿನ ಬೋಗಿಯೊಂದನ್ನು ತೋರಿಸುವ ಮೂಲಕ ವಿಡಿಯೊ ಆರಂಭವಾಗುತ್ತದೆ. ಯುವಕ ಮೊದಲು ಯುವತಿಯ ಹಣೆಗೆ ಸಿಂಧೂರ ಹಚ್ಚುತ್ತಾನೆ. ಹೂಮಾಲೆಗಳ ವಿನಿಮಯದ ನಂತರ ಭಾವುಕ ವಧು ವರನನ್ನು ಅಪ್ಪಿಕೊಳ್ಳುತ್ತಾಳೆ. ಬಳಿಕ ಸುತ್ತಲಿದ್ದವರ ಹರ್ಷೋದ್ಗಾರದ ನಡುವೆ ಆ ಯುವಕ ಅವಳ ಕುತ್ತಿಗೆಗೆ ಮಂಗಳಸೂತ್ರವನ್ನು ಕಟ್ಟುತ್ತಾನೆ. ಅಸನ್ಸೋಲ್-ಜಸಿದಿಹ್ ರೈಲು ಈ ವಿಶೇಷ ವಿವಾಹಕ್ಕೆ ಸಾಕ್ಷಿಯಾಗಿದೆ ಎಂದು ಕೆಲವು ವರದಿಗಳು ತಿಳಿಸಿದೆ. ಅದಾಗ್ಯೂ ಯಾವ ರೈಲು ಎನ್ನುವುದರ ಬಗ್ಗೆ ಖಚಿತತೆ ಇಲ್ಲ.

ನೆಟ್ಟಿಗರು ಏನಂದ್ರ?

ಸಹಜವಾಗಿಯೇ ಈ ವಿಡಿಯೊ ನೆಟ್ಟಿಗರ ಗಮನ ಸೆಳೆದಿದೆ. ಸ್ಮರಣೀಯ ಮದುವೆಗೆ ಅಲಂಕಾರಿಕ ಹೋಟೆಲ್‌, ಸಭಾಂಗಣಗಳು ಅಥವಾ ಅಥವಾ ಔತಣಕೂಟವೇ ಆಗಬೇಕೆಂದಿಲ್ಲ ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ. ಹಲವರು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ʼʼವಿವಿಧೋದ್ದೇಶದ ಭಾರತೀಯ ರೈಲ್ವೆ” ಎಂದು ಒಬ್ಬರು ಹೇಳಿದ್ದಾರೆ. ಇನ್ನೊಬ್ಬರು “ಬಜೆಟ್ ಸೀಮಿತವಾಗಿದ್ದಿರಬೇಕು. ಇಲ್ಲದಿದ್ದರೆ ಅವರು ವಿಮಾನದಲ್ಲಿ ವಿವಾಹವಾಗುತ್ತಿದ್ದರುʼʼ ಎಂದು ಊಹಿಸಿದ್ದಾರೆ.

ಈ ಎಲ್ಲ ತಮಷೆಯ ನಡುವೆ ನೆಟ್ಟಿಗರೊಬ್ಬರು ಗಂಭೀರ ಪ್ರಶ್ನೆಯೊಂದನ್ನು ಎತ್ತಿದ್ದಾರೆ. “ಮದುವೆಯಾಗುವುದು ಹೀಗೆ ತುಂಬ ಸುಲಭವಾಗಿರುವಾಗ ವಿಚ್ಛೇದನವನ್ನು ಏಕೆ ನೋವಿನ ಪ್ರಕ್ರಿಯೆಯನ್ನಾಗಿ ಮಾಡಬೇಕು? ಜೋಡಿಯೊಂದು ಚಲಿಸುವ ರೈಲಿನಲ್ಲಿ ಮದುವೆಯಾಗಬಹುದಾಗಿದ್ದರೆ ವಿಚ್ಛೇದನಕ್ಕಾಗಿ ನ್ಯಾಯಾಲಯವನ್ನು ಏಕೆ ಸಂಪರ್ಕಿಸಬೇಕು? ವಿಚ್ಛೇದನವನ್ನು ಮದುವೆಯಷ್ಟೇ ಸುಲಭಗೊಳಿಸಿʼʼ ಎಂದು ಸಲಹೆ ನೀಡಿದ್ದಾರೆ. ಹಲವರು ಇದಕ್ಕೆ ಪರ-ವಿರೋಧ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಈ ವಿವಾಹ ಹಲವು ಚರ್ಚೆಯನ್ನು ಹುಟ್ಟು ಹಾಕಿದ್ದಂತೂ ಸತ್ಯ.

ಸರಳವಾಗಿ ಹಸೆಮಣೆಗೇರಿದ ಪೂಜಾ ಗಾಂಧಿ

ಈ ಮಧ್ಯೆ ನವೆಂಬರ್‌ 29ರಂದು ನಟಿ, ʼಮಳೆ ಹುಡುಗಿʼ ಪೂಜಾ ಗಾಂಧಿ ಕುವೆಂಪು ಅವರ ಮಂತ್ರ ಮಾಂಗಲ್ಯ ಪದ್ಧತಿ ಪ್ರಕಾರ ವಿವಾಹಿತರಾಗಿದ್ದು ಗಮನ ಸೆಳೆದಿದೆ. ಆಡಂಬರದ ಮದುವೆಗಳ ಭರಾಟೆ ನಡುವೆ ಅವರು ಸರಳವಾಗಿ ಉದ್ಯಮಿ ವಿಜಯ್ ಘೋರ್ಪಡೆ ಅವರ ಕೈ ಹಿಡಿದಿದ್ದು ಮೆಚ್ಚುಗೆ ಗಳಿಸಿದೆ. ತನ್ನ ಕನ್ನಡ ಪ್ರೇಮದಿಂದ ಈಗಾಗಲೇ ಹಲವರ ಮನಸ್ಸು ಕದ್ದಿದ್ದ ಪೂಜಾ ಗಾಂಧಿ ಮದುವೆಯಲ್ಲಿಯೂ ಸರಳತೆ ಮೆರೆದಿದ್ದು ಮಾದರಿ ಎಂದು ಅನೇಕರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: Viral News: ಗೂಗಲ್‌ ಉದ್ಯೋಗ ತೊರೆದು ಉಬರ್‌ ಚಾಲಕನಾದ; ಇದರ ಹಿಂದಿದೆ ಅಚ್ಚರಿಯ ಕಾರಣ

ಆಸ್ಪತ್ರೆಯಲ್ಲೇ ಮದುವೆಯಾದ ಜೋಡಿ

ಇದರ ಜತೆಗೆ ಇತ್ತೀಚೆಗೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಜೋಡಿಯೊಂದು ಆಸ್ಪತ್ರೆಯಲ್ಲೇ ಮದುವೆಯಾದ ವಿಡಿಯೊ ವೈರಲ್‌ ಆಗಿತ್ತು. ವಿವಾಹ ನಿಶ್ಚಯವಾಗಿದ್ದ ವರನಿಗೆ ಡೆಂಗ್ಯೂ ಕಾಣಿಸಿಕೊಂಡಿತ್ತು. ಹೀಗಾಗಿ ಆತ ಆಸ್ಪತ್ರೆಗೆ ದಾಖಲಾಗಿದ್ದ. ಮೊದಲೇ ನಿಗದಿ ಪಡಿಸಿದ ದಿನದಂದೇ ವಿವಾಹ ನೆರವೇರಿಸಲು ವಧು-ವರರ ಕುಟುಂಬದವರು ತೀರ್ಮಾನಿಸಿದ್ದರು. ಅದರಂತೆ ವರ ದಾಖಲಾಗಿರುವ ಕೋಣೆಯನ್ನೇ ಮಂಟಪದಂತೆ ಶೃಂಗರಿಸಿ ಅಲ್ಲೇ ಮದುವೆ ನೆರವೇರಿಸಿದ್ದರು. ಸದ್ಯ ಈ ವಿಚಾರವೂ ಗಮನ ಸೆಳೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading
Advertisement
Sangeetha is more cruel than Vinay drinking tonic task bigg boss
ಬಿಗ್ ಬಾಸ್13 mins ago

BBK SEASON 10: ವಿನಯ್‌ಗಿಂತ ಸಂಗೀತಾಗೆ ಕೊಬ್ಬು ಜಾಸ್ತಿ; ಟಾನಿಕ್ ಕುಡಿಸಿದ ಮೇಲೆ ಒದ್ದಾಟ-ಗುದ್ದಾಟ!

Kichcha Sudeep Save Snehith Gowda And Michel From Eliminations
ಬಿಗ್ ಬಾಸ್27 mins ago

BBK SEASON 10: ಬಿಗ್‌ ಬಾಸ್‌ ಇತಿಹಾಸದಲ್ಲೇ ಮೊದಲು; ಈ ವಾರ ನೋ ಎಲಿಮಿನೇಶನ್‌! ಸ್ನೇಹಿತ್- ಮೈಕಲ್‌ ಸೇಫ್‌!

Kodagu News
ಕರ್ನಾಟಕ56 mins ago

ಕೊಡಗು ಜಿಲ್ಲೆಯ ಹೊಳೆಯಲ್ಲಿ ತಾಯಿ, ಇಬ್ಬರು ಯುವತಿಯರ ಶವ ಪತ್ತೆ; ಸಾವಿಗೆ ಕಾರಣ?

Ishwar Sahu
ದೇಶ2 hours ago

ಮುಸ್ಲಿಮರಿಂದ ಹತ್ಯೆಗೀಡಾದ ಯುವಕನ ತಂದೆ 7 ಬಾರಿಯ ಕಾಂಗ್ರೆಸ್ ಶಾಸಕನನ್ನು ಸೋಲಿಸಿದರು!

Jyothi Reddy CEO of American Company
ಅಂಕಣ2 hours ago

Raja Marga Column : ಅನ್ನಕ್ಕಾಗಿ ಕಲ್ಲು ಒಡೆಯೋ ಕೆಲಸ ಮಾಡ್ತಿದ್ದ ಆಕೆ ಈಗ ಅಮೆರಿಕನ್‌ ಕಂಪನಿ ಸಿಇಓ!

Venkataramana Reddy
ದೇಶ2 hours ago

ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

Complaint to CM Siddaramaiah
ಕರ್ನಾಟಕ2 hours ago

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

women enjoying in rain
ಉಡುಪಿ3 hours ago

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Mizoram Election Result
ದೇಶ3 hours ago

Mizoram Election Result: ಮಿಜೋರಾಂ ಫಲಿತಾಂಶಕ್ಕೆ ಕ್ಷಣಗಣನೆ; ಯಾರಿಗೆ ಗೆಲುವು?

4 state election results shows us that, freebies are not the way for win elections
ದೇಶ3 hours ago

ವಿಸ್ತಾರ ಸಂಪಾದಕೀಯ: ವಿಧಾನಸಭೆ ಚುನಾವಣೆ ಫಲಿತಾಂಶ; ‘ಗ್ಯಾರಂಟಿ’ಯೇ ಅಂತಿಮವಲ್ಲ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ4 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ21 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌