Viral News: ಗಂಡನನ್ನು ವೇಶ್ಯೆಯರ ಮನೆಯಲ್ಲಿ ನೋಡಿದ್ದರಂತೆ ಮಾಡೆಲ್‌ ಖ್ಲೋ ಕಾರ್ಡಶಿಯಾನ್‌ - Vistara News

ವೈರಲ್ ನ್ಯೂಸ್

Viral News: ಗಂಡನನ್ನು ವೇಶ್ಯೆಯರ ಮನೆಯಲ್ಲಿ ನೋಡಿದ್ದರಂತೆ ಮಾಡೆಲ್‌ ಖ್ಲೋ ಕಾರ್ಡಶಿಯಾನ್‌

ಅಮೆರಿಕದ ಇಬ್ಬರು ಸೆಲೆಬ್ರಿಟಿಗಳಾದ ಖ್ಲೋ ಕಾರ್ಡಶಿಯಾನ್‌ ಮತ್ತು ಲಾಮರ್‌ ಓಡೋಮ್‌ ನಡುವಿನ ವಿಚ್ಛೇದನಕ್ಕೆ ಕಾರಣವನ್ನು ಖ್ಲೋ (Viral News)ಹೇಳಿಕೊಂಡಿದ್ದಾರೆ.

VISTARANEWS.COM


on

Khloe Kardashian and Lamar Odom
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಅಮೆರಿಕದ ಮಾಧ್ಯಮಗಳಲ್ಲಿ ಸದಾ ಕಾಣಿಸಿಕೊಳ್ಳುವ ಮಾಡೆಲ್‌ ಖ್ಲೋ ಕಾರ್ಡಶಿಯಾನ್‌ ಮತ್ತು ಅಮೆರಿಕನ್‌ ಬಾಸ್ಕೆಟ್‌ಬಾಲ್‌ನ ಮಾಜಿ ಆಟಗಾರ ಲಾಮರ್‌ ಓಡೋಮ್‌ ಅವರ ದಾಂಪತ್ಯ ಮುರಿದುಬಿದ್ದು ಏಳು ವರ್ಷಗಳು ಕಳೆದಿವೆ. ದಾಂಪತ್ಯ ಮುರಿದು ಬೀಳುವುದಕ್ಕೆ ಕಾರಣವನ್ನು ಖ್ಲೋ ಅವರು ಇತ್ತೀಚೆಗೆ (Viral News) ಹೇಳಿಕೊಂಡಿದ್ದಾರೆ.

ಖ್ಲೋ ಮತ್ತು ಲಾಮರ್‌ 2009ರಲ್ಲಿ ಪ್ರೀತಿಯಲ್ಲಿ ಬಿದ್ದವರು. ಅವರಿಬ್ಬರ ಪ್ರೀತಿ ಎಷ್ಟರ ಮಟ್ಟಿಗೆ ಸುದ್ದಿಯಾಗಿತ್ತೆಂದರೆ ಅವರ ಜೀವನ ಪ್ರಯಾಣ ತೋರಿಸಲೆಂದೇ ʼಖ್ಲೋ ಮತ್ತು ಲಾಮರ್‌ʼ ಹೆಸರಿನ ಧಾರಾವಾಹಿ ಕೂಡ ಪ್ರಸಾರವಾಗಿತ್ತು. ಆದರೆ ಅವರ ಜೀವನ ಆರಂಭವಾದಷ್ಟೇ ಚೆನ್ನಾಗಿ ನಡೆದುಕೊಂಡು ಹೋಗಲಿಲ್ಲ.

ಇದನ್ನೂ ಓದಿ: Viral video: ನಾನೊಬ್ಳೇ ಎಷ್ಟೂಂತ ಮಾಡ್ಲಿ, ಆಗಲ್ಲ ನಂಗೆ; ಆಧಾರ್‌ ಕೇಂದ್ರದ ಒತ್ತಡಕ್ಕೆ ಮಹಿಳಾ ಸಿಬ್ಬಂದಿ ಕಣ್ಣೀರು
ಲಾಮರ್‌ ಅವರು ಮಾದಕ ವ್ಯಸನಗಳನ್ನು ಅಭ್ಯಾಸ ಮಾಡಿಕೊಂಡಿದ್ದರು. ಅದಲ್ಲದೆ ದಾಂಪತ್ಯದಲ್ಲಿ ದ್ರೋಹ ಮಾಡುವುದಕ್ಕೂ ಆರಂಭಿಸಿದ್ದರು. ಅದೇ ಕಾರಣಕ್ಕೆ ಖ್ಲೋ ಅವರು 2013ರಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು. ಆದರೆ ನ್ಯಾಯಾಲಯದಲ್ಲಿ ವಿಚ್ಛೇದನ ಪ್ರಕ್ರಿಯೆಗೆ ಸಾಕಷ್ಟು ವಿಳಂಬವಾಯಿತು. ವಿಚಿತ್ರವೆಂದರೆ 2015ರಲ್ಲಿ ದಂಪತಿ ಆ ಅರ್ಜಿಯನ್ನು ವಾಪಸು ತೆಗೆದುಕೊಂಡರು.

ಇದಾದ ನಂತರ 2015ರ ಅಕಟೋಬರ್‌ನಲ್ಲಿ ಲಾಮರ್‌ ಅವರು ಮಿತಿ ಮೀರಿ ಡ್ರಗ್ಸ್‌ ಸೇವಿಸಿ ಬಳಲಾರಂಭಿಸಿದರು. ಆಗ ಕೂಡ ಖ್ಲೋ ಅವರು ಪತಿಯ ಪರವಾಗಿಯೇ ನಿಂತರು. ಅವರ ಪರವಾಗಿಯೇ ಹೋರಾಟ ಮಾಡಿದರು. ಕೊನೆಗೆ 2016ರಲ್ಲಿ ಇಬ್ಬರು ಒಮ್ಮತದಿಂದ ವಿಚ್ಛೇದನ ಪಡೆದುಕೊಂಡರು.

ಇದನ್ನೂ ಓದಿ: Viral Video: ಇದು ಬರೀ ಪುಶ್‌ಅಪ್‌ ಅಲ್ಲ, ಸೈನ್‌ ಬೋರ್ಡ್‌ ಪುಶ್‌ಅಪ್‌! ಇಂತಹ ಸಾಹಸವನ್ನು ಮಾಡಲೇ ಬೇಡಿ
ವಿಚ್ಛೇದನಕ್ಕೆ ಕಾರಣವನ್ನು ಖ್ಲೋ ಅವರು ಇತ್ತೀಚೆಗೆ ಹೇಳಿಕೊಂಡಿದ್ದಾರೆ. 2015ರಲ್ಲಿ ಲಾಸ್‌ ವೇಗಾಸ್‌ನಲ್ಲಿ ನಾನು ಲಾಮರ್‌ರನ್ನು ವೇಶ್ಯೆಯರ ಮನೆಯಲ್ಲಿ ನೋಡಿದ್ದೆ. ಅದರ ಬಗ್ಗೆ ನಮ್ಮಿಬ್ಬರ ನಡುವೆ ಸಾಕಷ್ಟು ಚರ್ಚೆಯಾಗಿತ್ತು ಕೂಡ. ನಾವಿಬ್ಬರೂ ದೂರವಿದ್ದು ಪರಸ್ಪರ ಗೌರವ ಉಳಿಸಿಕೊಳ್ಳುವುದೇ ಒಳಿತು ಎನಿಸಿದ್ದರಿಂದ ವಿಚ್ಛೇದನದ ನಿರ್ಧಾರ ತೆಗೆದುಕೊಂಡೆವು ಎಂದು ಅವರು ಹೇಳಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

YouTube channels: ಅತಿ ಹೆಚ್ಚು ಸಬ್‌ಸ್ಕ್ರೈಬರ್‌ಗಳನ್ನು ಹೊಂದಿರುವ ಟಾಪ್‌ 10 ಯುಟ್ಯೂಬ್‌ ಚಾನೆಲ್‌ಗಳಿವು!

ಲಕ್ಷಾಂತರ ಯುಟ್ಯೂಬ್ ಚಾನೆಲ್ ಗಳಿದ್ದು ಇದರಲ್ಲಿ ಅತೀ ಹೆಚ್ಚು ಚಂದಾದಾರನ್ನು ಹೊಂದಿರುವ ಮೊದಲ ಹತ್ತು ಯು ಟ್ಯೂಬ್ ಚಾನೆಲ್ ಗಳು (YouTube channels) ಯಾವುದು ಗೊತ್ತೇ? ಅತಿ ಹೆಚ್ಚು ಚಂದಾದಾರರನ್ನು ಹೊಂದಿರುವ ಹತ್ತು ಯುಟ್ಯೂಬ್‌ ಚಾನೆಲ್‌ಗಳ ವಿವರ ಇಲ್ಲಿದೆ.

VISTARANEWS.COM


on

By

YouTube channels
Koo

ಲಕ್ಷಾಂತರ ಯೂಟ್ಯೂಬ್ ಚಾನೆಲ್‌ಗಳಿದ್ದು (YouTube channels) ಇದರಲ್ಲಿ ಮಿಸ್ಟರ್ ಬೀಸ್ಟ್ (MrBeast) 267 ಮಿಲಿಯನ್ ಚಂದಾದಾರರನ್ನು (subscribers) ಹೊಂದಿದ್ದು, ಅತೀ ಹೆಚ್ಚು ಸಬ್ ಸ್ಕ್ರೈಬ್ ಆಗಿರುವ ಯುಟ್ಯೂಬ್ ಚಾನೆಲ್ ಎಂಬ ಖ್ಯಾತಿಯನ್ನು ಪಡೆದಿದೆ. ಟಿ-ಸಿರೀಸ್‌ಅನ್ನು (T-Series) ಕೆಳಗಿಳಿಸಿ ಮಿಸ್ಟರ್ ಬೀಸ್ಟ್ ಮೊದಲ ಸ್ಥಾನವನ್ನು ಪಡೆದಿದೆ.

ಯು ಟ್ಯೂಬ್‌ನಲ್ಲಿ ಟಿ-ಸಿರೀಸ್ 266 ಮಿಲಿಯನ್ ಚಂದಾದಾರರನ್ನು ಹೊಂದಿದೆ. ಇದರ ಬಳಿಕ ಕೊಕೊಮೆಲನ್ – ನರ್ಸರಿ ರೈಮ್ಸ್ (Cocomelon – Nursery Rhymes) 176 ಮಿಲಿಯನ್, ಎಸ್ ಇಟಿ ಇಂಡಿಯಾ (SET India) 173 ಮಿಲಿಯನ್, ಕಿಡ್ಸ್ ಡಯಾನಾ ಶೋ (Kids Diana Show) 122 ಮಿಲಿಯನ್, ವ್ಲಾಡ್ ಮತ್ತು ನಿಕಿ (Vlad and Niki) 118 ಮಿಲಿಯನ್, ಲೈಕ್ ನಾಸ್ತ್ಯ (Like Nastya) 116 ಮಿಲಿಯನ್, ಪ್ಯೂಡಿಪಿ (Pewdiepie) 111 ಮಿಲಿಯನ್, ಝೀ ಸಂಗೀತ ಕಂಪೆನಿ (Zee Music Company) 107 ಮಿಲಿಯನ್ ಮತ್ತು WWE 102 ಮಿಲಿಯನ್ ಚಂದಾದಾರನ್ನು ಹೊಂದಿದೆ.

ಮಿಸ್ಟರ್ ಬೀಸ್ಟ್ ಭಾನುವಾರ ಟಿ-ಸರಣಿಯನ್ನು ಮೀರಿಸಿ ಅತಿ ಹೆಚ್ಚು ಚಂದಾದಾರರಾಗಿರುವ ಯೂಟ್ಯೂಬರ್ ಆಗಿ ಹೊರಹೊಮ್ಮಿದೆ. 26 ವರ್ಷದ ಮಿಸ್ಟರ್ ಬೀಸ್ಟ್ ಅವರ ನಿಜವಾದ ಹೆಸರು ಜೇಮ್ಸ್ ಸ್ಟೀಫನ್. ತಮ್ಮ ಸಾಧನೆಯನ್ನು ಕೊಂಡಾಡುತ್ತಾ ಮಿಸ್ಟರ್ ಬೀಸ್ಟ್ ಹೀಗೆ ಬರೆದಿದ್ದಾರೆ: ಆರು ವರ್ಷಗಳ ಅನಂತರ ನಾವು ಅಂತಿಮವಾಗಿ ಪ್ಯೂಡಿಪಿಯ (PewDiePie) ಮೇಲೆ ಸೇಡು ತೀರಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಮಿಸ್ಟರ್ ಬೀಸ್ಟ್ ಈ ವಾರದ ಆರಂಭದಲ್ಲೇ 2018ರ ಟಿ-ಸೀರೀಸ್‌ನೊಂದಿಗೆ ಚಂದಾದಾರರನ್ನು ಹೆಚ್ಚಿಸುವ ಪೈಪೋಟಿಗೆ ಇಳಿದಿತ್ತು. ಈ ಸಮಯದಲ್ಲಿ PewDiePie ಗೆ ಸಹಾಯ ಮಾಡುವ ಕುರಿತು ಅವರು ಹೇಳಿದ್ದರು. ಜಾನ್ ಯೂಶೈ ಅವರೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಮಿಸ್ಟರ್ ಬೀಸ್ಟ್ ಜೇಮ್ಸ್ ಸ್ಟೀಫನ್ ಅವರು, ಇದು ಅಮೆರಿಕ ಮತ್ತು ಭಾರತದ ವಿರುದ್ಧ ನಡೆದ ಯುದ್ಧ ಎಂದು ನಾನು ಭಾವಿಸುವುದಿಲ್ಲ. ಪ್ರಾರಂಭದಲ್ಲಿ ಇದು ಮೊದಲು ಸ್ವಲ್ಪ ಜನಾಂಗೀಯತೆ ರೂಪವನ್ನು ಪಡೆಯಿತು. ಅಲ್ಲದೇ ಇದು ಭಾರತ ವಿರುದ್ಧ ಅಮೆರಿಕ ಚರ್ಚೆಯಾಗಿ ಬದಲಾಗಬಹುದೆಂಬ ಭಯವಿತ್ತು ಎಂದರು.

ಇದನ್ನೂ ಓದಿ: YouTube New Feature: ನಿಮ್ಮಿಷ್ಟದ ಹಾಡು ಗುನುಗಿದ್ರೂ ಸಾಕು ಯುಟ್ಯೂಬ್ ಆ ಹಾಡನ್ನು ಹೆಕ್ಕಿ ತೆಗೆಯುತ್ತದೆ!

ಚಾನಲ್‌ಗೆ ಇನ್ನೂ ಹೆಚ್ಚು ಚಂದಾದಾರರಾಗಲು ಬಯಸುತ್ತಿದ್ದಾರೆ. ನನಗೆ ಸಹಾಯ ಮಾಡುವ ಬಹಳಷ್ಟು ಜನರಿದ್ದಾರೆ. ನಾನು ಇದರೊಂದಿಗೆ ಬದುಕುತ್ತೇನೆ ಮತ್ತು ಉಸಿರಾಡುತ್ತೇನೆ. ನಾನು ಇದರ ಸೃಷ್ಟಿಕರ್ತ ಎಂದು ಅವರು ಹೇಳಿದರು.

ಹೆಚ್ಚಿನ ಯೂಟ್ಯೂಬ್ ಚಾನೆಲ್ ಸೃಷ್ಟಿಕರ್ತರೇ ನನ್ನ ಚಾನೆಲ್‌ಗೆ ಹೆಚ್ಚು ಚಂದಾದಾರರಾಗಿರುವುದು ಸಂತೋಷವಾಗಿದೆ ಎಂದು ನಾನು ಭಾವಿಸುತ್ತೇನೆ. T-ಸಿರೀಸ್‌ ಅನ್ನು ನಾಕ್ ಮಾಡುತ್ತಿಲ್ಲ. ಯಾಕೆಂದರೆ ಅವರು ನನಗಿಂತ ಸಾವಿರ ಪಟ್ಟು ಹೆಚ್ಚು ಉದ್ಯೋಗಿಗಳನ್ನು ಹೊಂದಿದ್ದಾರೆ ಎಂದು ತಿಳಿಸಿದರು.

Continue Reading

ಕರ್ನಾಟಕ

Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Lok Sabha Election 2024: ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿರುವ ಶ್ವಾನ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಯಾರು ಜಯಭೇರಿ ಬಾರಿಸುತ್ತಾರೆ ಎಂಬುವುದರ ಬಗ್ಗೆಯೂ ಭವಿಷ್ಯ ನುಡಿದಿದೆ.

VISTARANEWS.COM


on

Lok Sabha Election 2024
Koo

ಮೈಸೂರು: 2024ರ ಲೋಕಸಭಾ ಚುನಾವಣೆಯ (Lok Sabha Election 2024) 7ನೇ ಹಂತದ ಮತದಾನ ಶನಿವಾರ ಮುಕ್ತಾಯವಾದ ಬೆನ್ನಲ್ಲೇ ಬಿಡುಗಡೆಯಾದ ಎಕ್ಸಿಟ್‌ ಪೋಲ್‌ಗಳ ಫಲಿತಾಂಶದಲ್ಲಿ ಬಹುತೇಕವು ಕೇಂದ್ರದಲ್ಲಿ ಸತತ ಮೂರನೇ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ, ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಲಾಗಿದೆ. ಈ ನಡುವೆ ಮೈಸೂರಿನಲ್ಲಿ ಶ್ವಾನವೊಂದು ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿರುವ ಶ್ವಾನ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಯಾರು ಜಯಭೇರಿ ಬಾರಿಸುತ್ತಾರೆ ಎಂಬುವುದರ ಬಗ್ಗೆಯೂ ತಿಳಿಸಿದೆ.

ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ (ಜೂನ್‌ 4) ಜನರು ಕಾತರಿಂದ ಕಾಯುತ್ತಿದ್ದಾರೆ. ಇದಕ್ಕೂ ಮೊದಲು ನಗರದ ಕೆ.ಟಿ. ಸ್ಟ್ರೀಟ್‌ನ ಕಾಲಭೈರವೇಶ್ವರ ದೇಗುಲದಲ್ಲಿ ಭೈರವ ಎಂಬ 2 ವರ್ಷದ ಶ್ವಾನ ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಭವಿಷ್ಯ ನುಡಿಯುವ ಮೂಲಕ ಗಮನ ಸೆಳೆದಿದೆ. ಶ್ವಾನದ ಭವಿಷ್ಯ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ | MLC Election: ಪರಿಷತ್ ಚುನಾವಣೆ; ಯತೀಂದ್ರ ಸೇರಿ 8 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಕಾಂಗ್ರೆಸ್‌

ಗೋಪಿನಾಥ್ ಎಂಬುವವರು ಸಾಕಿರುವ ಭೈರವ ಶ್ವಾನದ ಮುಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಅವರ ಭಾವಚಿತ್ರವಿಟ್ಟಾಗ ಶ್ವಾನ ಮೋದಿ ಅವರ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಬಿಜೆಪಿ ಮೈತ್ರಕೂಟ ಮತ್ತೊಮ್ಮೆ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಎಂ. ಲಕ್ಷ್ಮಣ್ ಹಾಗೂ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಭಾವಚಿತ್ರ ತೋರಿಸಿದಾಗ ಶ್ವಾನ ಯದುವೀರ್ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಈ ಚುನಾವಣೆಯಲ್ಲಿ ಗೆಲುವು ಯಾರಿಗೆ ಎಂಬುವುದನ್ನು ಸೂಚಿಸಿದೆ.

Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

Exit poll 2024

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಫಲಿತಾಂಶ ಬಿಜೆಪಿಗೆ 2019ರ ಚುನಾವಣೆಯಷ್ಟು ಪೂರಕವಾಗಿಲ್ಲ (Exit Poll 2024 ) ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿವೆ. ಈ ಬಾರಿ ಕರ್ನಾಟಕದಲ್ಲಿ 18 ಸೀಟುಗಳು ಬಿಜೆಪಿಗೆ ದೊರೆಯಲಿದ್ದು, 8 ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ ಎಂದು ಪೋಲ್​​ ಸ್ಟಾಟ್ ಹೇಳಿದೆ. ಜೆಡಿಎಸ್​​ ರೀತಿ ಸ್ಪರ್ಧಿಸಿರುವ ಒಟ್ಟು 3ರಲ್ಲಿ ಎರಡು ಸ್ಥಾನಗಳನ್ನು ಜೆಡಿಎಸ್​ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ. ದೇಶಾದ್ಯಂತ ಬಿಜಪಿಗೆ ಹಿಂದಿಗಿಂತ ಹೆಚ್ಚು ಸೀಟುಗಳು ಸಿಗಲಿವೆ ಎಂಬ ಟ್ರೆಂಡ್ ಇರುವ ಹೊರತಾಗಿಯೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಬಿಜೆಪಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ತಲಾ ಒಂದು ಸ್ಥಾನವನ್ನು ಹಂಚಿಕೊಂಡಿತ್ತು. ಪಕ್ಷೇತರರಾದ ಸುಮಲತಾ ಅವರು ಮಂಡ್ಯ ಕ್ಷೇತ್ರದಲ್ಲಿ ಗೆದ್ದಿದ್ದರು.

ವಿಸ್ತಾರ ನ್ಯೂಸ್​- COPS ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿಗೆ 18ರಿಂದ-22 ಸ್ಥಾನಗಳು ದೊರಕಿದೆ, ಕಾಂಗ್ರೆಸ್​ಗೆ 08ರಿಂದ 10 ಸ್ಥಾನಗಳು ಲಭಿಸಲಿವೆ. ಜೆಡಿಎಸ್​ಗೆ 2ರಿಂದ 3 ಸ್ಥಾನ ಸಿಗುವುದು ಎಂದು ಹೇಳಲಾಗಿದೆ. ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ರಿಂದ 22, ಕಾಂಗ್ರೆಸ್ 3ರಿಂದ 5 ಮತ್ತು ಜೆಡಿಎಸ್ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ . ಇಂಡಿಯಾ ಟುಡೆ ಪ್ರಕಾರ ಕರ್ನಾಟದಲ್ಲಿ ಬಿಜೆಪಿಗೆ 23ರಿಂದ 25 ಹಾಗೂ ಕಾಂಗ್ರೆಸ್​ಗೆ 04ರಿಂದ 05 ಹಾಗೂ ಜೆಡಿಎಸ್​ಗೆ 1ರಿಂದ 3ಸ್ಥಾನ ಸಿಗಲಿದೆ ಎಂದು ಅಂದಾಜಿಸಿದೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಇದನ್ನೂ ಓದಿ: Exit Poll 2024: ಮೋದಿ ಹ್ಯಾಟ್ರಿಕ್‌ ಖಚಿತ, ಇಂಡಿಯಾ ಒಕ್ಕೂಟಕ್ಕೆ ಸೋಲು ನಿಶ್ಚಿತ; ಇಲ್ಲಿದೆ ಎಕ್ಸಿಟ್‌ ಪೋಲ್‌ ವರದಿ

ಅಭ್ಯರ್ಥಿಗಳ ಆಯ್ಕೆ ಮತ್ತು ಕೆಲವೊಂದು ಗೊಂದಲಗಳ ಕಾರಣ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದು ಎಂಬುದಾಗಿ ರಾಜಕೀಯ ವಿಶ್ಲೇಷಕರು ಈ ಹಿಂದೆಯೇ ಅಂದಾಜಿಸಿದ್ದರು. ಚುನಾವಣೋತ್ತರ ಸಮೀಕ್ಷೆಯಲ್ಲೂ ಅದು ಪ್ರತಿಫಲನಗೊಂಡಿದೆ. ಬಿಜೆಪಿ ಕಳೆದ ಬಾರಿಗಿಂತ 3ರಿಂದ 5 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳು ಕಂಡಿವೆ. ಏತನ್ಮಧ್ಯೆ ಕಾಂಗ್ರೆಸ್​ ತನಗೆ ಭಾಗ್ಯಗಳು ಕೈ ಹಿಡಿಯಬಹುದು ಎಂದು ಅಂದಾಜಿಸಿತ್ತು. ಹೀಗಾಗಿ 10ಕ್ಕಿಂತಲೂ ಹೆಚ್ಚು ಸ್ಥಾನವನ್ನು ಗೆಲ್ಲಬಲ್ಲೆವು ಎಂದು ಆಂತರಿಕವಾಗಿ ಹೇಳಿಕೊಂಡಿತ್ತು. ಆದರೆ, ಅವರ ಲೆಕ್ಕಾಚಾರವೂ ತಪ್ಪಾಗಿದೆ. ಇವೆಲ್ಲದರ ನಡುವೆ ಜೆಡಿಎಸ್​ ಬಿಜೆಪಿ ಜತೆಗಿನ ಮೈತ್ರಿಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ. ಸಮೀಕ್ಷೆಗಳ ಪ್ರಕಾರ ಈ ಪಕ್ಷ ಕನಿಷ್ಠ2 ಸೀಟ್​ ಗೆಲ್ಲುವು ಖಾತರಿ. ಇನ್ನೊಂದು ಸೀಟ್​ ಕೂಡ ಅವರ ಪರವಾಗಬಹುದು ಎಂದು ಹೇಳಲಾಗಿದೆ.

2024 ರ ಲೋಕಸಭಾ ಚುನಾವಣೆ ಎರಡು ಪ್ರಮುಖ ಮೈತ್ರಿಕೂಟಗಳಾದ ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಎನ್ಡಿಎ ಬಣಗಳ ನಡುವೆ ತೀವ್ರ ಹೋರಾಟವಾಗಿ ರೂಪುಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸತತ ಮೂರನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ನಿರ್ಧರಿಸಿದ್ದರೆ, ಬಿಜೆಪಿ ಮೈತ್ರಿಕೂಟವು ಅಸಮಾಧಾನದ ಗೆಲುವನ್ನು ಸಂಘಟಿಸಲು ದಣಿವರಿಯದೆ ಕೆಲಸ ಮಾಡುತ್ತಿದೆ. ಈ ಚುನಾವಣೆಯ ಫಲಿತಾಂಶವು ರಾಷ್ಟ್ರದ ರಾಜಕೀಯ ಭೂದೃಶ್ಯದ ಮೇಲೆ ದೂರಗಾಮಿ ಪರಿಣಾಮಗಳನ್ನು ಬೀರುತ್ತದೆ.

ಕರ್ನಾಟಕದಲ್ಲಿ ಹೀಗಿದೆ ಚುನಾವಣಾ ಫಲಿತಾಂಶ ಸಮೀಕ್ಷೆ

  • ವಿಸ್ತಾರ-COPS: ಬಿಜೆಪಿ 18-20, ಕಾಂಗ್ರೆಸ್‌ 8-10, ಜೆಡಿಎಸ್‌ 2-3
  • ಜನ್ ಕೀ ಬಾತ್: ಬಿಜೆಪಿ 17-23, ಕಾಂಗ್ರೆಸ್ 4-8, ಜೆಡಿಎಸ್ 1-2
  • ಝೀ ನ್ಯೂಸ್: ಬಿಜೆಪಿ 18-22, ಕಾಂಗ್ರೆಸ್ 4-6, ಜೆಡಿಎಸ್ 1-3
  • CNN ನ್ಯೂಸ್ 18: ಬಿಜೆಪಿ 21-23, ಕಾಂಗ್ರೆಸ್ 3-7, ಜೆಡಿಎಸ್ 2-3
  • ಪೋಲ್‌ಸ್ಟ್ರಾಟ್‌: ಬಿಜೆಪಿ 18, ಕಾಂಗ್ರೆಸ್-08, ಜೆಡಿಎಸ್-02 ಸ್ಥಾನ
  • ಇಂಡಿಯಾ ಟಿವಿ: ಬಿಜೆಪಿ 18-22, ಕಾಂಗ್ರೆಸ್‌ 4-8, ಜೆಡಿಎಸ್‌ 1-3
  • ಸಿ-ವೋಟರ್: ಬಿಜೆಪಿ 21-22, ಕಾಂಗ್ರೆಸ್ 3-5, ಜೆಡಿಎಸ್ 1-3
  • ಇಂಡಿಯಾ ಟುಡೇ: ಬಿಜೆಪಿ 20-22, ಕಾಂಗ್ರೆಸ್ 3-5, ಜೆಡಿಎಸ್ 2-3
  • ಪೋಲ್ ಆಫ್ ಪೋಲ್: ಬಿಜೆಪಿ-20, ಕಾಂಗ್ರೆಸ್-6, ಜೆಡಿಎಸ್-2
  • ಟೈಮ್ಸ್ ನೌ: ಬಿಜೆಪಿ 21-25, ಕಾಂಗ್ರೆಸ್ 3-7, ಜೆಡಿಎಸ್ 1-2
  • ಇಂಡಿಯಾ ನ್ಯೂಝ್: ಬಿಜೆಪಿ-21, ಕಾಂಗ್ರೆಸ್-5, ಜೆಡಿಎಸ್-2
  • ನ್ಯೂಸ್ ನೇಷನ್: ಬಿಜೆಪಿ-16, ಕಾಂಗ್ರೆಸ್-10, ಜೆಡಿಎಸ್-02
  • ನ್ಯೂಸ್ 24-ಟುಡೇಸ್ ಚಾಣಕ್ಯ: ಬಿಜೆಪಿ-ಜೆಡಿಎಸ್ 24, ಕಾಂಗ್ರೆಸ್-4
Continue Reading

ವೈರಲ್ ನ್ಯೂಸ್

Viral Video: ರೈಲು ಚಲಿಸುತ್ತಿರುವಾಗಲೇ ಹೇಗೆ ಮೊಬೈಲ್‌ ಎಗರಿಸುತ್ತಾರೆ ನೋಡಿ!

ಚಲಿಸುತ್ತಿರುವ ರೈಲಿನಲ್ಲಿದ್ದ ಪ್ರಯಾಣಿಕನ ಮೊಬೈಲ್ ಕಿತ್ತುಕೊಂಡು ಯುವಕನೊಬ್ಬ ಓಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು ಸಾಕಷ್ಟು ನೆಟ್ಟಿಗರು ಇದಕ್ಕೆ ಕಾಮೆಂಟ್ ಮಾಡಿದ್ದಾರೆ. ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಹೇಗೆ ಎಚ್ಚರಿಕೆಯಿಂದ ಇರಬೇಕು ಎನ್ನುವುದನ್ನು ಈ ವಿಡಿಯೊ ಸಾರಿ ಹೇಳುತ್ತದೆ.

VISTARANEWS.COM


on

By

Viral Video
Koo

ನವದೆಹಲಿ: ಚಲಿಸುತ್ತಿರುವ ರೈಲಿನ (train) ಪಕ್ಕದಲ್ಲಿ ಸ್ಟೇಷನ್ ಪ್ಲಾಟ್‌ಫಾರ್ಮ್‌ನಲ್ಲಿ (Platform) ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಪ್ರಯಾಣಿಕರ ಮೊಬೈಲ್ (mobile) ಕಿತ್ತುಕೊಂಡು ಹೋಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದ್ದು, ಈ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿವೆ.

ಬಸ್, ರೈಲು ಅಥವಾ ಮೆಟ್ರೋದಲ್ಲಿ ಪ್ರಯಾಣಿಸುವಾಗ ಕಳ್ಳರ ಬಗ್ಗೆ ಎಚ್ಚರದಿಂದಿರಿ ಎಂದು ಕೆಲವರು ಹೇಳುವುದನ್ನು ನೋಡಿರಬೇಕು. ಜೇಬುಗಳ್ಳರ ಬಗ್ಗೆ ಎಚ್ಚರದಿಂದಿರಿ ಎಂಬ ಎಚ್ಚರಿಕೆಯನ್ನು ಸಾಮಾನ್ಯವಾಗಿ ಎಲ್ಲೆಡೆ ಪೋಸ್ಟ್ ಮಾಡಲಾಗುತ್ತದೆ ಅಥವಾ ಕೆಲವು ಸ್ಥಳಗಳಲ್ಲಿ ಪ್ರಕಟಿಸಲಾಗುತ್ತದೆ. ಎಷ್ಟೇ ಎಚ್ಚರಿಕೆ ವಹಿಸಿದ್ದರೂ ಕಳ್ಳರೂ ಬುದ್ದಿವಂತರಾಗಿದ್ದಾರೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

ಈ ದಿನಗಳಲ್ಲಿ ರೈಲ್ವೇ ಸಿಬ್ಬಂದಿ ಮತ್ತು ರೈಲ್ವೇ ರಕ್ಷಣಾ ಪಡೆ ಸಿಬ್ಬಂದಿ ಕೂಡ ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಜಾಗರೂಕರಾಗಿದ್ದಾರೆ. ನಿಲ್ದಾಣಗಳಲ್ಲಿ ಮತ್ತು ರೈಲುಗಳ ಒಳಗೆ ಅಪರಾಧಗಳನ್ನು ತಡೆಯುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ಆದರೆ ಹಲವು ಬಾರಿ ಅಪರಾಧಿಗಳು ಎಷ್ಟು ಜಾಣ್ಮೆಯಿಂದ ಅಪರಾಧ ಎಸಗುತ್ತಾರೆ ಎಂದರೆ ರೈಲ್ವೆ ಸಿಬ್ಬಂದಿಗೂ ಸುಳಿವು ಸಿಗುವುದಿಲ್ಲ.

ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆಯಾದಾಗ ಫೋನ್‌ಗಳೊಂದಿಗೆ ಕಿಟಕಿಯ ಬಳಿ ಕುಳಿತುಕೊಳ್ಳಬೇಡಿ ಅಥವಾ ಚಾರ್ಜಿಂಗ್‌ನಲ್ಲಿ ಇರಿಸಬೇಡಿ ಎಂದು ಅಧಿಕಾರಿಗಳು ಯಾವಾಗಲೂ ಎಚ್ಚರಿಸುತ್ತಾರೆ. ಮಹಿಳೆಯರು ಆಭರಣಗಳನ್ನು ಧರಿಸಿದರೆ ಕಿಟಕಿಯ ಹತ್ತಿರ ಕುಳಿತುಕೊಳ್ಳಬಾರದು ಎಂದು ಹೇಳಲಾಗುತ್ತದೆ. ಕಳ್ಳರು ಇವುಗಳನ್ನು ಕಸಿದುಕೊಂಡು ಓಡಿ ಹೋಗುವುದೇ ಇದಕ್ಕೆ ಕಾರಣ.

ವೈರಲ್ ಆಗಿರುವ ಈ ವಿಡಿಯೋದಲ್ಲಿ ಕಿತ್ತಳೆ ಬಣ್ಣದ ಟೀ ಶರ್ಟ್ ಧರಿಸಿದ್ದ ಹುಡುಗನೊಬ್ಬ ಚಲಿಸುತ್ತಿರುವ ರೈಲಿನ ಪಕ್ಕದ ಪ್ಲಾಟ್‌ಫಾರ್ಮ್‌ನಲ್ಲಿ ನಿಧಾನವಾಗಿ ನಡೆದುಕೊಂಡು ಹೋಗುತ್ತಿದ್ದಾನೆ. ಎಲ್ಲವೂ ಸಾಮಾನ್ಯವಾಗಿದೆ ಎಂದು ಆ ಕ್ಷಣದಲ್ಲಿ ಭಾಸವಾದರೂ ಸ್ವಲ್ಪ ಸಮಯದ ಬಳಿಕ ಹುಡುಗ ಚಲಿಸುತ್ತಿರುವ ರೈಲಿನಿಂದ ಪ್ರಯಾಣಿಕನ ಫೋನ್ ಅನ್ನು ಇದ್ದಕ್ಕಿದ್ದಂತೆ ಕಿತ್ತುಕೊಂಡು ಓಡಿ ಹೋಗಿದ್ದಾನೆ.

ಈ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿ ಪ್ರತಿಕ್ರಿಯಿಸಿದ್ದಾರೆ. ಕೆಲವರು ಇಂತಹ ಪರಿಸ್ಥಿತಿಯಲ್ಲಿ ಏನನ್ನಾದರೂ ಮಾಡುವ ಬದಲು ವಿಡಿಯೋವನ್ನು ರೆಕಾರ್ಡ್ ಮಾಡಿರುವ ವ್ಯಕ್ತಿಯನ್ನು ದೂಷಿಸಿದ್ದಾರೆ.
ಇದರ ವಿಡಿಯೋವನ್ನು ಇನ್ ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಮಾಡಲಾಗಿದ್ದು, ಇದರಲ್ಲಿ ಯುವಕನೊಬ್ಬ ಚಲಿಸುವ ರೈಲಿನಿಂದ ಪ್ರಯಾಣಿಕರ ಮೊಬೈಲ್ ಅನ್ನು ಕಸಿದುಕೊಳ್ಳುತ್ತಿರುವುದನ್ನು ನೋಡಬಹುದು.

ನಿಲ್ದಾಣದಿಂದ ರೈಲು ಪ್ರಾರಂಭವಾಗಿ ನಿಧಾನ ವೇಗದಲ್ಲಿ ಚಲಿಸುತ್ತಿರುವಾಗಲೇ ಯುವಕ ರೈಲಿನ ಪಕ್ಕದ ಪ್ಲಾಟ್‌ಫಾರ್ಮ್‌ನಲ್ಲಿ ನಡೆಯಲು ಪ್ರಾರಂಭಿಸುತ್ತಾನೆ. ರೈಲಿನ ವೇಗ ಹೆಚ್ಚಿದ ತಕ್ಷಣ ಕೈ ಒಳಗೆ ಹಾಕಿ ಪ್ರಯಾಣಿಕರೊಬ್ಬರ ಫೋನ್ ಕಿತ್ತುಕೊಂಡು ಓಡಿ ಹೋದ. ಈ ಘಟನೆ ಎಲ್ಲಿ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಆದರೆ ಹ್ಯಾಶ್‌ಟ್ಯಾಗ್‌ಗಳಲ್ಲಿ ಬಳಕೆದಾರರು ಸತ್ನಾ ಮತ್ತು ರೇವಾ ಎಂದು ನಮೂದಿಸಿದ್ದಾರೆ.

ಅಂತರ್ಜಾಲದಲ್ಲಿ ವೈರಲ್ ಆಗಿರುವ ವಿಡಿಯೋವನ್ನು ಈ ವರೆಗೆ 4 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ವಿಡಿಯೋ ನೋಡಿದ ಕೆಲವರು ತಮ್ಮ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ.


ವಿಡಿಯೋ ರೆಕಾರ್ಡ್ ಮಾಡುವ ವ್ಯಕ್ತಿಯನ್ನು ಹಲವರು ಪ್ರಶ್ನಿಸುತ್ತಿದ್ದು, ಯಾಕೆ ಸಹಾಯ ಮಾಡಲಿಲ್ಲ, ಕಳ್ಳನನ್ನು ಏಕೆ ಹಿಡಿಯಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Virat Kohli: ಸಿಕ್ಸ್​ ಪ್ಯಾಕ್​ ತೋರಿಸಿ ಡ್ಯಾನ್ಸ್​ ಮಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

ಒಬ್ಬ ಬಳಕೆದಾರರು, ಹೊಸ ಭಯ ಅನ್ಲಾಕ್ ಆಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಕ್ಯಾಮರಾಮನ್‌ನಿಗೂ ಕಳ್ಳತನದಲ್ಲಿ ಕೈ ಇದೆ ಎಂದು ತೋರುತ್ತಿದೆ ಎಂದಿದ್ದಾರೆ. ಮೂರನೆಯವ, ಬ್ರೂ ನನಗೆ ಅದೇ ಅನುಭವವಾಗಿತ್ತು ಮತ್ತು ಇದು ನನಗೆ ತುಂಬಾ ಆಘಾತಕಾರಿ ಕ್ಷಣವಾಗಿತ್ತು. ಆದರೆ ಕೊನೆಯಲ್ಲಿ ನಾನು ಪ್ಲಾಟ್‌ಫಾರ್ಮ್‌ನಲ್ಲಿ ಓಡುತ್ತಿರುವ ರೈಲಿನಿಂದ ಜಿಗಿದ ಕಾರಣ ನನ್ನ ಫೋನ್ ಅನ್ನು ಹಿಂತಿರುಗಿಸಿದ ಎಂದು ಹೇಳಿದ್ದಾರೆ.

Continue Reading

ಕ್ರೀಡೆ

Virat Kohli: ಸಿಕ್ಸ್​ ಪ್ಯಾಕ್​ ತೋರಿಸಿ ಡ್ಯಾನ್ಸ್​ ಮಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Virat Kohli: ಭಾರತ ತಂಡ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್​ 5ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ತಯಾರಿ ನಡೆಸುವ ವೇಳೆ ವಿರಾಟ್​ ತಮ್ಮ ಸಿಕ್ಸ್​ ಪ್ಯಾಕ್​ ತೋರಿಸಿ ತಾನೆಷ್ಟು ಬಲಿಷ್ಠ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ.

VISTARANEWS.COM


on

Virat Kohli
Koo

ನ್ಯೂಯಾರ್ಕ್: ವಿರಾಟ್‌ ಕೊಹ್ಲಿ(Virat Kohli) ಮೈದಾನದಲ್ಲಿ ಎಷ್ಟು ಬದ್ಧತೆ, ಗಮನ ಕೇಂದ್ರೀಕರಿಸಿ ಅಬ್ಬರಿಸುತ್ತಾರೋ, ಅಷ್ಟೇ ನಿಷ್ಠೆಯಿಂದ ಫಿಟ್‌ನೆಸ್‌ಗೂ(Virat Kohli Fitness) ಆದ್ಯತೆ ಕೊಡುತ್ತಾರೆ. ಅದರಲ್ಲೂ, ಯಾವುದಾದರೂ ಸರಣಿ, ವಿಶ್ವಕಪ್‌ ಆರಂಭವಾಗುವ ಕೆಲ ದಿನಗಳ ಮೊದಲಂತೂ ಅವರು ಹೆಚ್ಚು ಕ್ರಿಕೆಟ್‌ ಪ್ರಾಕ್ಟೀಸ್‌ ಮಾಡುತ್ತಾರೆ. ಹಾಗೆಯೇ, ಜಿಮ್‌ನಲ್ಲಿ ತಾಸುಗಟ್ಟಲೆ ವರ್ಕೌಟ್‌ ಮಾಡುವ ಮೂಲಕ ಹೆಚ್ಚು ಫಿಟ್‌ ಆಗಿರಲು, ಮೈದಾನದಲ್ಲಿ ಮಿಂಚಲು ಸಿದ್ಧರಾಗುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಅಮೆರಿಕ ಮತ್ತು ವೆಸ್ಟ್​ ಇಂಡಿಸ್​ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗೂ(T20 World Cup 2024) ಮುನ್ನ ಕೊಹ್ಲಿ ಸಿಕ್ಸ್​ ಪ್ಯಾಕ್(Virat Kohli Six-Pack)​ ತೋರಿಸಿದ್ದಾರೆ.

ಭಾರತ ತಂಡ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್​ 5ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಈ ಪಂದ್ಯಕ್ಕೆ ತಯಾರಿ ನಡೆಸುವ ವೇಳೆ ವಿರಾಟ್​ ತಮ್ಮ ಸಿಕ್ಸ್​ ಪ್ಯಾಕ್​ ತೋರಿಸಿ ತಾನೆಷ್ಟು ಬಲಿಷ್ಠ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಬಾಂಗ್ಲಾದೇಶ ವಿರುದ್ಧ ನಿನ್ನೆ(ಶನಿವಾರ) ನಡೆದಿದ್ದ ಅಭ್ಯಾಸ ಪಂದ್ಯ ಆಡಿರಲಿಲ್ಲ. ವಿಶ್ರಾಂತಿ ಪಡೆದಿದ್ದರು. ಅಭ್ಯಾಸದ ವೇಳೆ ನೃತ್ಯವೊಂದನ್ನು ಕೂಡ ಮಾಡಿ ಗಮನಸೆಳೆದರು. ಕೊಹ್ಲಿಗೆ ಡ್ಯಾನ್ಸ್​ ಎಂದರೆ ಅಚ್ಚುಮೆಚ್ಚು. ಪಂದ್ಯದ ವೇಳೆಯೂ ಅವರು ಹಲವು ಬಾರಿ ಡ್ಯಾನ್ಸ್​ ಮಾಡಿ ಪ್ರೇಕ್ಷಕರನ್ನು ರಂಜಿಸಿದ್ದಾರೆ.

ಹಲವರಿಗೆ ಸ್ಫೂರ್ತಿ

ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ ಅವರು ವಿಶ್ವ ಕ್ರಿಕೆಟ್​ನ ಅತ್ಯಂತ ಫಿಟ್​ ಆಗಿರುವ ಕ್ರಿಕೆಟಿಗ ಅವರ ಫಿಟ್​ನೆಸ್​ ಬಗ್ಗೆ ಬದ್ಧ ವೈರಿ ಪಾಕ್​ ತಂಡದ ಆಟಗಾರರು ಸೇರಿ ವಿಶ್ವದ ಅನೇಕರು ಸಲಾಂ ಹೊಡೆದಿದ್ದಾರೆ. ಅದೆಷ್ಟೋ ಕ್ರಿಕೆಟ್‌ ಆಟಗಾರರಿಗೆ ಅವರು ಫಿಟ್‌ನೆಸ್‌ ವಿಚಾರದಲ್ಲಿಯೂ ಸ್ಫೂರ್ತಿಯಾಗಿದ್ದಾರೆ. ಇತರ ಆಟಗಾರರಂತೆ ವಿರಾಟ್ ಕೊಹ್ಲಿ ಗಾಯಗೊಂಡು ತಂಡದಿಂದ ಹೊರಗುಳಿದ ನಿದರ್ಶನ ಇದುವರೆಗೂ ಕಂಡುಬಂದಿಲ್ಲ. ಕ್ರಿಕೆಟ್​ ಆಡಲು ಆರಂಭಿಸಿದ ದಿನದಿಂದಲೂ ಕೊಹ್ಲಿ ತಮ್ಮ ಫಿಟ್​ನೆಸ್​ ಬಗ್ಗೆ ವಿಶೇಷ ಕಾಳಜಿ ವಹಿಸಿಕೊಂಡು ಕ್ರಿಕೆಟ್​ನಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ Virat Kohli: ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿ ಸ್ವೀಕರಿಸಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ(Virat Kohli) ಅವರು ಐಸಿಸಿ ವರ್ಷದ(ICC ODI Player Of The Year 2023) ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾನುವಾರ ಕೊಹ್ಲಿ ಈ ಪ್ರಶಸ್ತಿ ಸ್ವೀಕರಿಸಿದರು. ಈ ಮೂಲಕ ವೃತ್ತಿಜೀವನದಲ್ಲಿ ಮತ್ತೊಂದು ಬೃಹತ್ ಉತ್ತುಂಗಕ್ಕೆ ಏರಿದ್ದಾರೆ. ಟಿ20 ವಿಶ್ವಕಪ್​ ಆಡುವ ಸಲುವಾಗಿ ನ್ಯೂಯಾರ್ಕ್​ನಲ್ಲಿರು ಕೊಹ್ಲಿ ಈ ಪ್ರಶಸ್ತಿಯನ್ನು ಇಲ್ಲಿಯೇ ಸ್ವೀಕರಿಸಿದ್ದಾರೆ. ಇದರ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. 2012, 2017, 2018 ರಲ್ಲಿಯೂ ಕೊಹ್ಲಿ ಈ ಪ್ರಶಸ್ತಿ ಪಡೆದಿದ್ದರು.

35 ವರ್ಷದ ಕೊಹ್ಲಿ 2023 ರಲ್ಲಿ 27 ಏಕದಿನ ಪಂದ್ಯಗಳಿಂದ 24 ಇನ್ನಿಂಗ್ಸ್‌ಗಳಲ್ಲಿ ಆರು ಶತಕಗಳು ಮತ್ತು ಎಂಟು ಅರ್ಧಶತಕಗಳೊಂದಿಗೆ 72.47 ರ ಸರಾಸರಿ ಮತ್ತು 99.13 ರ ಸ್ಟ್ರೈಕ್ ರೇಟ್‌ನಲ್ಲಿ 1,377 ರನ್ ಗಳಿಸಿದ್ದಾರೆ. ಈ ಪೈಕಿ ಗರಿಷ್ಠ ಸ್ಕೋರ್ 166* ಆಗಿತ್ತು. ಏಷ್ಯಾ ಕಪ್ 2023 ರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಿರ್ಣಾಯಕ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 94 ಎಸೆತಗಳಲ್ಲಿ ಅಜೇಯ 122* ರನ್ ಗಳಿಸಿದ್ದರು.

ಕಳೆದ ವರ್ಷ ತವರಿನಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ, ವಿರಾಟ್ 11 ಪಂದ್ಯಗಳಲ್ಲಿ 95.62 ಸರಾಸರಿಯಲ್ಲಿ 765 ರನ್‌ಗಳನ್ನು ಗಳಿಸಿದ್ದರು. ಇದರಲ್ಲಿ ಮೂರು ಶತಕಗಳು, ಆರು ಅರ್ಧ ಶತಕಗಳು ದಾಖಲಾಗಿತ್ತು. ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಇದೀಗ ಟಿ20 ವಿಶ್ವಕಪ್​ ಆಡಲು ಸಜ್ಜಾಗಿದ್ದಾರೆ.

Continue Reading
Advertisement
Chikballapur lok sabha constituency
ಪ್ರಮುಖ ಸುದ್ದಿ5 mins ago

Chikballapur lok sabha constituency : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತರುವರೇ ಸುಧಾಕರ್​?

Bangalore Rain
ಕರ್ನಾಟಕ30 mins ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ32 mins ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ34 mins ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

kolar lok sabha constituency
ಪ್ರಮುಖ ಸುದ್ದಿ1 hour ago

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

Money Guide
ಮನಿ-ಗೈಡ್1 hour ago

Money Guide: ಗೃಹಸಾಲದ ಕಂತು ಪೂರ್ತಿಯಾಯ್ತೆ? ನಿಲ್ಲಿ, ನಿಮ್ಮ ಜವಾಬ್ದಾರಿ ಇನ್ನೂ ಇದೆ!

mandya lok sabha constituency
ಪ್ರಮುಖ ಸುದ್ದಿ1 hour ago

Mandya Lok Sabha Constituency : ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕುಮಾರಸ್ವಾಮಿಗೆ ಗೆಲುವು ಸಿಗುವುದೇ?

Bellary Lok Sabha Constituency
ಬಳ್ಳಾರಿ1 hour ago

Bellary Lok Sabha Constituency: ಶ್ರೀರಾಮುಲು vs ತುಕಾರಾಮ್;‌ ಗಣಿ ನಾಡಲ್ಲಿ ಯಾರು ಧಣಿ?

YouTube channels
ವೈರಲ್ ನ್ಯೂಸ್2 hours ago

YouTube channels: ಅತಿ ಹೆಚ್ಚು ಸಬ್‌ಸ್ಕ್ರೈಬರ್‌ಗಳನ್ನು ಹೊಂದಿರುವ ಟಾಪ್‌ 10 ಯುಟ್ಯೂಬ್‌ ಚಾನೆಲ್‌ಗಳಿವು!

Highest Paying Companies
ವಾಣಿಜ್ಯ2 hours ago

Highest Salary Paying Companies: ಎಂಜಿನಿಯರ್‌ಗಳಿಗೆ ಅತೀ ಹೆಚ್ಚು ಸಂಬಳ ಕೊಡುವ ಕಂಪನಿಗಳ ಪಟ್ಟಿ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ11 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌