Lesbian Couple: ಭಾರತ- ಪಾಕ್‌ ಮೂಲದ ಸಲಿಂಗ ಜೋಡಿಯ ವಿಚ್ಛೇದನ; ದಾಂಪತ್ಯದ್ರೋಹವೇ ಕಾರಣ! - Vistara News

ವೈರಲ್ ನ್ಯೂಸ್

Lesbian Couple: ಭಾರತ- ಪಾಕ್‌ ಮೂಲದ ಸಲಿಂಗ ಜೋಡಿಯ ವಿಚ್ಛೇದನ; ದಾಂಪತ್ಯದ್ರೋಹವೇ ಕಾರಣ!

Lesbian Couple: ಅಂಜಲಿ ಚಕ್ರಾ ಭಾರತ ಹಾಗೂ ಸೂಫಿ ಮಲಿಕ್‌ ಪಾಕಿಸ್ತಾನ ಮೂಲದವರು. ಜೋಡಿಯಾಗಿ ಇವರ ಪ್ರಕಟಣೆ ಹಾಗೂ ಫೋಟೋಶೂಟ್‌ ಸೋಶಿಯಲ್‌ ಮೀಡಿಯಾದಲ್ಲಿ ವಿವಾದ ಹುಟ್ಟುಹಾಕಿತ್ತು.

VISTARANEWS.COM


on

lesbian couple anjali chakra sufi malik
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನ್ಯೂಯಾರ್ಕ್‌: ಪ್ರಭಾವಿ ಸೋಶಿಯಲ್‌ ಇನ್‌ಫ್ಲುಯೆನ್ಸರ್‌ಗಳು ಹಾಗೂ ಸಲಿಂಗ ಪ್ರೇಮಿಗಳಾದ (Lesbian Couple) ಅಂಜಲಿ ಚಕ್ರಾ (Anjali Chakra) ಮತ್ತು ಸೂಫಿ ಮಲಿಕ್ (Sufi Malik) 5 ವರ್ಷಗಳ ತಮ್ಮ ಸಾಂಗತ್ಯವನ್ನು (Marriage) ಕೊನೆಗೊಳಿಸಿದ್ದಾರೆ. ಇಬ್ಬರೂ ಪ್ರತ್ಯೇಕ ಹೇಳಿಕೆಗಳನ್ನು ಪೋಸ್ಟ್‌ ಮಾಡಿ ತಮ್ಮ ಬ್ರೇಕಪ್‌ (breakup) ಅನ್ನು ಪ್ರಕಟಿಸಿದ್ದಾರೆ. ಇವರಿಬ್ಬರೂ ಭಾರತ ಹಾಗೂ ಪಾಕ್‌ ಮೂಲದವರಾಗಿದ್ದು, ನ್ಯೂಯಾರ್ಕ್‌ನಲ್ಲಿ ನೆಲೆಸಿದ್ದರು.

ಭಾನುವಾರ ಇಬ್ಬರೂ Instagram ಪ್ರೊಫೈಲ್‌ಗಳಲ್ಲಿ ಇದನ್ನು ಹೇಳಿಕೊಂಡಿದ್ದಾರೆ. ಅಂಜಲಿ ಚಕ್ರಾ ಈ ಬಗ್ಗೆ ನೀಡಿರುವ ಹೇಳಿಕೆಯಲ್ಲಿ, “ತಾನು ಮಾಡಿರುವ ದಾಂಪತ್ಯದ್ರೋಹವೇ ವಿಚ್ಛೇದನಕ್ಕೆ ಕಾರಣ, ಇದಕ್ಕೆ ತಾನು ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ ಹಾಗೂ ಕ್ಷಮೆ ಕೇಳುತ್ತೇನೆ” ಎಂದಿದ್ದಾರೆ.

“ಅಂಜಲಿಯೊಂದಿಗಿನ ನನ್ನ ಸಂಬಂಧದಲ್ಲಿ ಪ್ರಮುಖ ತಿರುವು ಉಂಟಾಗಿದೆ. ನಾನು ಅವಳಿಗೆ ಮದುವೆಗೆ ಕೆಲವು ವಾರಗಳ ಮೊದಲು ಮೋಸ, ದ್ರೋಹ ಮಾಡಿದ್ದೇನೆ. ನನಗೆ ತಿಳಿದುದಕ್ಕಿಂತಲೂ ಹೆಚ್ಚು ತೀವ್ರವಾಗಿ ಆಕೆಯನ್ನು ನೋಯಿಸಿದ್ದೇನೆ. ನನ್ನ ತಪ್ಪನ್ನು ನಾನು ಒಪ್ಪಿಕೊಂಡಿದ್ದೇನೆ, ಮುಂದೆಯೂ ಒಪ್ಪಿಕೊಳ್ಳುತ್ತೇನೆ. ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು, ಅಂಜಲಿ ಮತ್ತು ಅಲ್ಲಾನಿಂದ ಕ್ಷಮೆಯನ್ನು ಪಟ್ಟುಬಿಡದೆ ಯಾಚಿಸುತ್ತೇನೆ. ನಾನು ತುಂಬಾ ಪ್ರೀತಿಸುವ ಮತ್ತು ಕಾಳಜಿ ವಹಿಸುವ ಜನರನ್ನು ನಾನು ನೋಯಿಸಿದ್ದೇನೆ. ನಮ್ಮ ಕುಟುಂಬ ಮತ್ತು ಸ್ನೇಹಿತರು ಸೇರಿದಂತೆ ನಾನು ಗೌರವಿಸುವ ನಮ್ಮ ಸಮುದಾಯದ ಎಲ್ಲರಿಗೂ, ಇಷ್ಟು ವರ್ಷ ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ನಾನು ತುಂಬಾ ಋಣಿಯಾಗಿದ್ದೇನೆ. ಈ ಸಮಯದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸಲು ಕೇಳಿಕೊಳ್ಳುತ್ತೇವೆ” ಎಂದು ಮಲಿಕ್ ಬರೆದಿದ್ದಾರೆ.

ಮಲಿಕ್ ಪೋಸ್ಟ್‌ನ ಬಳಿಕ ಸೋಶಿಯಲ್‌ ಮೀಡಿಯಾದಲ್ಲಿ ಆಕೆಯ ಕಡೆ ಟೀಕೆಗಳ ಮಹಾಪೂರವೇ ಹರಿದುಬಂದಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಚಕ್ರಾ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡುವಂತೆ ಜನ ಒತ್ತಾಯಿಸಿದ್ದಾರೆ. ಮಲಿಕ್ ಕಡೆಗೆ ನಕಾರಾತ್ಮಕ ಟೀಕೆ ಮಾಡದಂತೆ ಚಕ್ರಾ ಹೇಳಿದ್ದಾರೆ.

“ಸೂಫಿ ಮತ್ತು ನಾನು ಕಳೆದ 5 ಪ್ಲಸ್‌ ವರ್ಷಗಳನ್ನು ಪ್ರೀತಿಯಿಂದ ಒಟ್ಟಿಗೆ ಕಳೆದಿದ್ದೇವೆ. ಈ ಸುಂದರವಾದ ಪಾಲುದಾರಿಕೆಯನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುವುದು ನಮಗೆ ತುಂಬಾ ಗೌರವದಾಯಕ ವಿಷಯ. ನಿಮ್ಮ ಪ್ರೀತಿ ಮತ್ತು ಬೆಂಬಲದ ಹರಿವು ನಮ್ಮ ಜೀವನದ ಪ್ರಯಾಣದಲ್ಲಿ ವಿಶೇಷ ಪಾತ್ರ ವಹಿಸಿದೆ; ಮತ್ತು ನಾವು ಆ ಪ್ರೀತಿಯನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಈ ಬೆಳವಣಿಗೆಯಿಂದ ಆಘಾತವಾಗಬಹುದು, ಆದರೆ ನಮ್ಮ ಪ್ರಯಾಣ ಈಗ ಬದಲಾಗುತ್ತಿದೆ. ನಾವು ನಮ್ಮ ಮದುವೆಯನ್ನು ಕೊನೆಗೊಳಿಸಲು ನಿರ್ಧರಿಸಿದ್ದೇವೆ. ಸೂಫಿ ಮಾಡಿದ ದಾಂಪತ್ಯದ್ರೋಹದಿಂದಾಗಿ ನಮ್ಮ ಮದುವೆ ಮತ್ತು ನಮ್ಮ ಸಂಬಂಧ ಕೊನೆಗೊಂಡಿದೆ. ನಾವು ಈ ಅಧ್ಯಾಯವನ್ನು ಕೊನೆಗೊಳಿಸುತ್ತಿದ್ದೇವೆ. ನೀವೂ ಸೂಫಿಯ ಬಗ್ಗೆ ಯಾವುದೇ ನಕಾರಾತ್ಮಕತೆಯನ್ನು ತೋರಿಸಬಾರದು ಎಂದು ನಾನು ಬಯಸುತ್ತೇನೆ. ಈ ಕಠಿಣ ನಿರ್ಧಾರವನ್ನು ನೀವು ಗೌರವಿಸಬೇಕು. ನಾವು ಇದುವರೆಗೆ ಹಂಚಿಕೊಂಡ ಪ್ರೀತಿ ಯಾವುದೇ ಮಾಂತ್ರಿಕತೆಗೆ ಕಡಿಮೆಯಿಲ್ಲ” ಎಂದು ಚಕ್ರಾ ಬರೆದಿದ್ದಾರೆ.

ಅಂಜಲಿ ಚಕ್ರಾ ತಂದೆತಾಯಿಗಳು ಭಾರತ ಮೂಲದವರು. ಈಕೆ ಕೆನಡಾದ ಒಂಟಾರಿಯೊದ ಒಟ್ಟಾವಾದಲ್ಲಿ ಜನಿಸಿ ಸ್ಯಾನ್‌ಫ್ರಾನ್ಸಿಸ್ಕೊ ​​​​ಕೊಲ್ಲಿ ಪ್ರದೇಶದಲ್ಲಿ ಬೆಳೆದವಳು. ಮದುವೆ ಮತ್ತು ಕಾರ್ಯಕ್ರಮಗಳ ಯೋಜನೆ ವ್ಯವಹಾರವನ್ನು ನಿರ್ವಹಿಸುತ್ತಾಳೆ. ಸೂಫಿ ಮಲಿಕ್‌ ಪಾಕಿಸ್ತಾನ ಮೂಲದವಳಾಗಿದ್ದು, ನ್ಯೂಯಾರ್ಕ್‌ನ ಬ್ರಾಂಕ್ಸ್‌ನಲ್ಲಿ ಹುಟ್ಟಿ ಬೆಳೆದವಳು. ಬ್ರೂಕ್ಲಿನ್‌ನಲ್ಲಿ ಐದು ವರ್ಷಗಳಿಂದ ಜೊತೆಯಾಗಿ ವಾಸಿಸುತ್ತಿದ್ದ ಇವರು 2024ರಲ್ಲಿ ವಿಧ್ಯುಕ್ತವಾಗಿ ಮದುವೆಯಾಗಲು ಯೋಜಿಸಿದ್ದರು. ಜೋಡಿಯಾಗಿ ಇವರ ಪ್ರಕಟಣೆ ಹಾಗೂ ಫೋಟೋಶೂಟ್‌ ಸೋಶಿಯಲ್‌ ಮೀಡಿಯಾದಲ್ಲಿ ವಿವಾದ ಹುಟ್ಟುಹಾಕಿತ್ತು.

ಇದನ್ನೂ ಓದಿ: LGBT community: ಯಾವ ಸಲಿಂಗಕಾಮಿಗೆ ಋತುಚಕ್ರವಿದೆ ಹೇಳಿ? ಸಚಿವೆ ಸ್ಮೃತಿ ಇರಾನಿ ಪ್ರಶ್ನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Fact Check: ತಾವು ಮಹಿಳೆಯೇ ಅಲ್ಲ ಎಂದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಹೈದರಾಬಾದ್ ನ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವುದು ನಿಜವೇ, ಅವರು ಯಾಕೆ ಹಾಗೆ ಹೇಳಿದರು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದ ನಿಜಾಂಶ ಏನು? ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

By

Viral Video
Koo

ಹೈದರಾಬಾದ್: ಭಾರತೀಯ ಜನತಾ ಪಕ್ಷದ (BJP) ಹೈದರಾಬಾದ್ ನ (Hyderabad) ಅಭ್ಯರ್ಥಿ ಮಾಧವಿ ಲತಾ (Madhavi Latha) ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದ್ದು, ಇದನ್ನು ನೋಡಿರುವ ನೆಟ್ಟಿಗರು (Fact Check) ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾಧವಿ ಲತಾ ಅವರು “ನಾನು ಮಹಿಳೆ ಅಲ್ಲ” ಎಂದು ಹೇಳುವ ವಿಡಿಯೋವನ್ನು ಕತ್ತರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ. ಹೈದರಾಬಾದ್‌ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಮಹಿಳೆ ಅಲ್ಲ ಎಂದು ಸುಳ್ಳು ಪ್ರಚಾರವನ್ನೂ ಮಾಡಲಾಗುತ್ತಿದೆ. ಇದರ ಮೂಲ ಸಂದರ್ಶನದಲ್ಲಿ ಲತಾ ಅವರು ತಾನು ಕೇವಲ ಮಹಿಳೆಯಲ್ಲ ಆದರೆ ಶಕ್ತಿ ಎಂದು ಹೇಳಿದ್ದರು.

ಓವೈಸಿ ವಿರುದ್ಧ ಕಣಕ್ಕೆ

ತೆಲಂಗಾಣದ ಹೈದರಾಬಾದ್‌ನಲ್ಲಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನ ಹಾಲಿ ಸಂಸದ ಅಸಾದುದ್ದೀನ್ ಓವೈಸಿ ವಿರುದ್ಧ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ನಟಿ ಲತಾ ಅವರು ಇತ್ತೀಚೆಗೆ ಪ್ರಚಾರ ಕಾರ್ಯಕ್ರಮವೊಂದರಲ್ಲಿ 221 ಕೋಟಿ ರೂ. ಮೌಲ್ಯದ ಕುಟುಂಬದ ಆಸ್ತಿಯನ್ನು ಘೋಷಿಸಿದ ನಂತರ ಹೈದರಾಬಾದ್ ಕ್ಷೇತ್ರದ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

ವಿಡಿಯೋದಲ್ಲಿ ಏನಿದೆ?

ಈಗ ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರು ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ಮಹಿಳೆಯಾಗಿ ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, “ನಾನು ಮಹಿಳೆ ಅಲ್ಲ, ದಯವಿಟ್ಟು ನನ್ನನ್ನು ಮಹಿಳೆ ಎಂದು ಕರೆಯಬೇಡಿ”’ ಎಂದು ನೇರವಾಗಿ ಹೇಳಿದ್ದಾರೆ. ಆದರೆ ಮುಂದೆ ಅವರು, ನಾನು ಮಹಿಳೆ ಅಲ್ಲ, ಕೇವಲ ಮಹಿಳೆ ಅಲ್ಲ, ಮಹಾ ಶಕ್ತಿ ಎಂದು ಮಾಧವಿ ಲತಾ ಹೇಳಿದ್ದರು. ಆದರೆ ಈ ಭಾಗ ತೋರಿಸದೆ ತಾವು ಮಹಿಳೆ ಅಲ್ಲ ಎಂದ ದೃಶ್ಯವನ್ನಷ್ಟೇ ಕಟ್ ಮಾಡಿ ಶೇರ್ ಮಾಡಲಾಗುತ್ತದೆ.

ಈ ಕುರಿತು ಹಲವಾರು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದು, ಹಾಗಾದರೆ ಹೈದರಾಬಾದ್ ಬಿಜೆಪಿ ಅಭ್ಯರ್ಥಿ ಮಹಿಳೆ ಅಲ್ಲವೇ, ಮುಖ ನೋಡುವಾಗ ಮಹಿಳೆಯಂತೆ ಕಾಣುತ್ತಾರೆ, ಹಾಗಾದರೆ ಅವರು ಮಂಗಳಮುಖಿಯೇ… ಹೀಗೆ ಹಲವು ರೀತಿಯಲ್ಲಿ ಕಾಮೆಂಟ್ ಗಳನ್ನು ಮಾಡಿದ್ದಾರೆ.


ಸತ್ಯ ಏನು?

ಲತಾ ಅವರು ಮಹಿಳೆ ಅಲ್ಲ ಎಂದು ನೀಡಿರುವ ಹೇಳಿಕೆಯನ್ನು ಕತ್ತರಿಸಿ ಹಂಚಿಕೊಳ್ಳಲಾಗಿದೆ ಎಂದು ಬೂಮ್ ಕಂಡುಹಿಡಿದಿದೆ. ‘ನ್ಯೂಸ್ ನೇಷನ್’ ಎಂಬ ಹಿಂದಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಲತಾ ಅವರು, ಓವೈಸಿ ವಿರುದ್ಧ ಸ್ಪರ್ಧಿಸುತ್ತಿರುವ ವಿಚಾರವಾಗಿ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ್ದಾರೆ. ಅಲ್ಲದೇ ತಾವು ಬಿಜೆಪಿ ಸೇರಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಹಲವಾರು ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.

ಹೈದರಾಬಾದ್‌ನ ಹಳೆಯ ನಗರ ಭಾಗದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎಂದಿರುವ ಅವರು, ನಗರದ ಅತಿದೊಡ್ಡ ಕೊಳೆಗೇರಿ ವಸಾಹತುಗಳಲ್ಲಿ ಒಂದಾದ ತಾಲಾಬ್ ಕಟ್ಟಾ ಮುಂತಾದವುಗಳ ಬಗ್ಗೆ ವರದಿಗಾರ ಪ್ರಶ್ನೆಗಳಿಗೆ ಉತ್ತರಿಸಿದರು. ಒಬ್ಬ ಮಹಿಳೆಯಾಗಿ ನೀವು ಆ ಪರಿಸ್ಥಿತಿಯನ್ನು ಹೇಗೆ ಎದುರಿಸಲು ಯೋಜಿಸುತ್ತೀರಿ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಿಟ್ಟಾದ ಸ್ವರದಲ್ಲಿ ನಾನು ಮಹಿಳೆ ಅಲ್ಲ, ನಾನು ಶಕ್ತಿ. ನೀವು ಅದನ್ನು ಮೊದಲು ಸ್ಪಷ್ಟಪಡಿಸಬೇಕು. ನನ್ನನ್ನು ಮಹಿಳೆ ಎಂದು ಪದೇ ಪದೇ ಕರೆಯಬೇಡಿ. ನೀವು ನನ್ನನ್ನು ದುರ್ಬಲ ಎಂದು ಪರಿಗಣಿಸುವಂತೆ ತೋರುತ್ತಿದೆ ಎಂದು ಹೇಳಿದ್ದಾರೆ.

ಇದಾದ ನಂತರ ಲತಾ ಕ್ಯಾಮೆರಾದತ್ತ ತಿರುಗಿ, ನೇರವಾಗಿ ವೀಕ್ಷಕರನ್ನು ಉದ್ದೇಶಿಸಿ, ನಾನು ಒಬ್ಬ ಮಹಿಳೆ ಅಲ್ಲ, ತನ್ನ ಸಹೋದರ ಸಹೋದರಿಯರ ಶಕ್ತಿಯಿಂದ ಇಲ್ಲಿರುವ ಶಕ್ತಿ ಸ್ವತಃ ನಾನು. ಅವರ ಶಕ್ತಿಯಿಂದಾಗಿ ನಾನು ಉಳಿದಿದ್ದೇನೆ ಎಂದು ತಿಳಿಸಿದ್ದಾರೆ.

ಶಕ್ತಿ ಎಂಬ ಪದವನ್ನು ಹಿಂದೂ ಧರ್ಮದಲ್ಲಿ ವಿವಿಧ ರೂಪಗಳಲ್ಲಿ ಪೂಜಿಸುವ ದೈವಿಕ ಸ್ತ್ರೀಲಿಂಗ ಶಕ್ತಿಯನ್ನು ಉಲ್ಲೇಖಿಸಲು ಇದನ್ನು ಬಳಸಲಾಗುತ್ತದೆ. ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರ ಹೇಳಿಕೆಯನ್ನು ಕತ್ತರಿಸಿ ಹಾಕಲಾಗಿದೆ.

Continue Reading

ವೈರಲ್ ನ್ಯೂಸ್

Jai SriRam Slogan: ಉತ್ತರಪತ್ರಿಕೆಯಲ್ಲಿ `ಜೈ ಶ್ರೀರಾಮ್’ ಬರೆದ ವಿದ್ಯಾರ್ಥಿಗಳು ಪಾಸ್;‌ ಪ್ರಾಧ್ಯಾಪಕರು ವಜಾ!

Jai SriRam Slogan: ಉತ್ತರ ಪತ್ರಿಕೆಯಲ್ಲಿ ಸಿನಿಮಾ ಹಾಡುಗಳು, ಮ್ಯೂಸಿಕ್‌ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದು, ಅದಕ್ಕೆ ಅಂಕಗಳನ್ನು ನೀಡುವುದಕ್ಕಾಗಿ ವಿದ್ಯಾರ್ಥಿಗಳಿಂದ ಹಣವನ್ನು ಲಂಚ ಪಡೆದ ಆರೋಪದ ಮೇಲೆ ಜೌನ್‌ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ.

VISTARANEWS.COM


on

jai sriram slogan viral news
Koo

ಲಖನೌ: ಉತ್ತರ ಪ್ರದೇಶದ (Uttar Pradesh) ವಿಶ್ವವಿದ್ಯಾನಿಲಯವೊಂದರಲ್ಲಿ (University) ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ (Answer Paper) ಉತ್ತರಗಳ ಬದಲು “ಜೈ ಶ್ರೀ ರಾಮ್” ಘೋಷಣೆ (Jai SriRam Slogan) ಮತ್ತು ಕ್ರಿಕೆಟಿಗರ ಹೆಸರನ್ನು ಬರೆದು ಪರೀಕ್ಷೆ ಮುಗಿಸಿದ್ದಾರೆ. ಅವರೇನೋ ಪಾಸಾಗಿದ್ದಾರೆ. ಆದರೆ ನಂತರ ಕಾನೂನು ಉರುಳು ಪ್ರಾಧ್ಯಾಪಕರನ್ನು ಸುತ್ತಿಕೊಂಡಿದೆ.

ಉತ್ತರ ಪತ್ರಿಕೆಯಲ್ಲಿ ಸಿನಿಮಾ ಹಾಡುಗಳು, ಮ್ಯೂಸಿಕ್‌ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದು, ಅದಕ್ಕೆ ಅಂಕಗಳನ್ನು ನೀಡುವುದಕ್ಕಾಗಿ ವಿದ್ಯಾರ್ಥಿಗಳಿಂದ ಹಣವನ್ನು ಲಂಚ ಪಡೆದ ಆರೋಪದ ಮೇಲೆ ಜೌನ್‌ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ವಿಶ್ವವಿದ್ಯಾನಿಲಯದ ಕೆಲವು ಅಧಿಕಾರಿಗಳ ಸಹಕಾರದಿಂದ, ಶೂನ್ಯ ಅಂಕ ಪಡೆದ ವಿದ್ಯಾರ್ಥಿಗಳಿಗೂ ಶೇ.60ಕ್ಕಿಂತ ಹೆಚ್ಚು ಅಂಕ ನೀಡಿ ಉತ್ತೀರ್ಣಗೊಳಿಸಲಾಗಿದೆ ಎಂದು ವಿದ್ಯಾರ್ಥಿ ಮುಖಂಡ ದಿವ್ಯಾಾಂಶು ಸಿಂಗ್ ಅವರು ಪ್ರಧಾನಿ, ಮುಖ್ಯಮಂತ್ರಿ, ರಾಜ್ಯಪಾಲರು ಹಾಗೂ ಉಪಕುಲಪತಿಗಳಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.

ಆರ್‌ಟಿಐ ಮೂಲಕ ಪಡೆಯಲಾದ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಪ್ರತಿಗಳಲ್ಲಿ ಈ ಅಕ್ರಮಗಳನ್ನು ಗುರುತಿಸಲಾಗಿದೆ. ಮರು ಮೌಲ್ಯಮಾಪನದ ಅಂಕಗಳಲ್ಲಿ ಗಮನಾರ್ಹ ವ್ಯತ್ಯಾಸ ಉಂಟಾಗಿದೆ. “ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ನೀಡಲಾಗಿದೆ ಎಂಬ ಆರೋಪವಿತ್ತು. ಹಾಗಾಗಿ ನಾವು ಸಮಿತಿಯನ್ನು ರಚಿಸಿದ್ದೇವೆ. ಆ ಸಮಿತಿಯು ತನ್ನ ವರದಿಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕಗಳನ್ನು ನೀಡಲಾಗಿದೆ ಎಂದು ಹೇಳಿದೆ” ಎಂದು ಉಪಕುಲಪತಿ ವಂದನಾ ಸಿಂಗ್ ಹೇಳಿದರು.

ಧಾರ್ಮಿಕ ಘೋಷಣೆಗಳ ಬಗ್ಗೆ ಕೇಳಿದಾಗ, ಅವರು ಹೇಳಿದರು: “ಜೈ ಶ್ರೀ ರಾಮ್ ಉತ್ತರಗಳಿರುವ ಪ್ರತಿಯನ್ನು ನಾನು ನೋಡಿಲ್ಲ. ಆದರೆ ವಿದ್ಯಾರ್ಥಿಗೆ ಯಾವ ಅಂಕಗಳನ್ನೂ ನೀಡಲು ಸಾಧ್ಯವಾಗದ ಪ್ರತಿಗಳನ್ನು ನೋಡಿದ್ದೇನೆ. ಕೈಬರಹವು ಸ್ಪಷ್ಟವಾಗಿಲ್ಲ.” ಈ ಕುರಿತು ರಾಜಭವನವು ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

ಬುಧವಾರ ನಡೆದ ಪರೀಕ್ಷಾ ಸಮಿತಿ ಸಭೆಯಲ್ಲಿ ಪರೀಕ್ಷಕರಾದ ಡಾ ವಿನಯ್ ವರ್ಮಾ ಮತ್ತು ಮನೀಶ್ ಗುಪ್ತಾ ಅವರನ್ನು ಅಮಾನತುಗೊಳಿಸಲಾಗಿದೆ. ಇಂತಹ ಘಟನೆ ಪುನರಾವರ್ತನೆಯಾಗದಂತೆ ಶಿಕ್ಷಕರಿಗೆ ಎಚ್ಚರಿಕೆ ನೀಡಲಾಗಿದೆ. ಈ ಶಿಕ್ಷಕರನ್ನು ವಜಾಗೊಳಿಸಲು ಸಮಿತಿ ಶಿಫಾರಸು ಮಾಡಿದೆ. ಆದರೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ನೀತಿ ಸಂಹಿತೆ ತೆರವಾದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಪಕುಲಪತಿ ಹೇಳಿದರು.

ಇದನ್ನೂ ಓದಿ: Jai Sriram Slogan: ಜೈ ಶ್ರೀರಾಮ್‌ ಹೇಳಿದ್ದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ; ಇನ್ನೊಂದು ಘಟನೆ

Continue Reading

Lok Sabha Election 2024

Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

Lok Sabha Election 2024: ಕರುನಾಡಿನೆಲ್ಲೆಡೆ ಸಂಭ್ರಮದ ಚುನಾವಣೆ ನಡೆಯುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ವಧು-ವರರಿಂದಲೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಕ್ಕು ಚಲಾವಣೆ ಮಾಡಿದ್ದಾರೆ. ಚಾಮರಾಜನಗರದಲ್ಲಿ ವರನೊಬ್ಬ ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಬಂದರೆ, ಇತ್ತ ಚಿಕ್ಕಮಗಳೂರಲ್ಲಿ ವಧು ಹಸೆಮಣೆ ಏರುವ ಮುನ್ನ ಮತದಾನ ಮಾಡಿದ್ದಾರೆ.

VISTARANEWS.COM


on

By

Lok sabha election 2024
Koo

ಚಾಮರಾಜನಗರ/ಚಿಕ್ಕಮಗಳೂರು: ಲೋಕಸಭಾ ಚುನಾವಣೆ (Lok sabha Election 2024) ಹಿನ್ನೆಲೆಯಲ್ಲಿ ಮತದಾನದ ಹಬ್ಬ ಬಿರುಸಿನ ನಡೆಯುತ್ತಿದೆ. ವಿಶೇಷ ಚೇನತರು, ವೃದ್ಧರೆನ್ನದೆ ಎಲ್ಲರೂ ಸಂಭ್ರಮದಿಂದ ಮತಗಳನ್ನು ಚಲಾವಣೆ ಮಾಡುತ್ತಿದ್ದಾರೆ. ಎಲ್ಲರ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ, ನೂತನ ವರ- ವಧುಗಳೂ ಸಹ ವಿವಾಹಕ್ಕೂ ಮುಂಚೆ ಮತಗಟ್ಟೆಗೆ ಬಂದು ಮತವನ್ನು ಚಲಾಯಿಸುವ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಈ ಮೂಲಕ ಎಲ್ಲರೂ ಮತದಾನ ಮಾಡುವಂತೆ ಕರೆ ಕೊಟ್ಟಿದ್ದಾರೆ.

ಮತ ಚಲಾವಣೆ ಮಾಡಿದ ವರ ಚೇತನ್‌

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ವರನೊಬ್ಬ ಮತಗಟ್ಟೆಗೆ ಓಡೋಡಿ ಬಂದು ಮತ ಚಲಾಯಿಸಿದ್ದಾರೆ. ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಮತಕೇಂದ್ರಕ್ಕೆ ಓಡೋಡಿ ಹೋದ ವರ ವೋಟ್‌ ಹಾಕಿ ನಿರಾಳರಾದರು. ವರ ಚೇತನ್ ಎಂಬುವವರು ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆದರು. ಚೇತನ್‌ ಅವರು ದೀಪಿಕಾ ಎಂಬುವರ ಜತೆಗೆ ವಿವಾಹವಾಗುತ್ತಿದ್ದು, ತಮ್ಮ ಮುಹೂರ್ತದ ವಸ್ತ್ರದಲ್ಲೇ ಬಂದು ವೋಟ್‌ ಹಾಕಿದ್ದಾರೆ.

ಮುಹೂರ್ತಕ್ಕೂ ಮುನ್ನ ವಧುವಿನ ಮತದಾನ

ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕೊತ್ತುಗೋಡು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮುಹೂರ್ತಕ್ಕೂ ಮುನ್ನ ನವ ವಧುವೊಬ್ಬರು ಮತದಾನ ಮಾಡಿ ಗಮನ ಸೆಳೆದಿದ್ದಾರೆ. ರೇಷ್ಮೆ ಸೀರೆ ಉಟ್ಟಿದ್ದ ಮದುವಣಗಿತ್ತಿ ಸಂಪೂರ್ಣ ರೆಡಿಯಾಗಿ ಬಂದು ಮತ ಚಲಾಯಿಸಿ ಮದುವೆ ಮಂಟಪಕ್ಕೆ ಹೋಗಿದ್ದಾರೆ. ಬಳಿಕ ಹಸೆಮಣೆ ಏರಿದ್ದಾರೆ.

ಈ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಕುಂದೂರಿನ ತಳವಾರದ ಸೌಮ್ಯ ಅವರು ಮೂಡಿಗೆರೆಯ ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆ ಕುಟುಂಬ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Lok Sabha Election 2024: ಆಪರೇಷನ್‌ಗೂ ಮುನ್ನ ಆಂಬ್ಯುಲೆನ್ಸ್‌ನಲ್ಲಿ ಬಂದು ವೋಟ್‌ ಮಾಡಿದ ಉತ್ಸಾಹಿ ಮತದಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಉತ್ಸಾಹಿ ಮತದಾರರೊಬ್ಬರು ಶಸ್ತ್ರಚಿಕಿತ್ಸೆಗೂ ಮುನ್ನ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಮುರಳಿಧರ್‌ ಎಂಬುವವರು ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆಗಿದೆ. 39 ವರ್ಷದ ಎಚ್‌.ಎನ್ ಮುರಳಿಧರ್ ಶುಕ್ರವಾರ ಮಧ್ಯಾಹ್ನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅನಾರೋಗ್ಯದ ನಡುವೆಯೂ ನೋವಿನಲ್ಲೂ ಮತಕೇಂದ್ರಕ್ಕೆ ಬಂದು ಮತವನ್ನು ಚಲಾಯಿಸಿದ್ದಾರೆ.

ಮನಿಪಾಲ್ ಆಸ್ಪತ್ರೆ ವೈಟ್‌ಫೀಲ್ಡ್‌ನ ಯೂರೋಲಾಜಿ, ರೋಬೋಟಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮುರಳಿಧರ್‌ಗೆ ಮೂತ್ರದ್ವಾರದಲ್ಲಿ 6 MM ಕಲ್ಲಿದೆ. ಹೀಗಾಗಿ ಮಧ್ಯಾಹ್ನ ಡಿಜೆ ಸ್ಟೆಂಟಿಂಗ್ ಸರ್ಜರಿ ಮಾಡಬೇಕಿದೆ. ಸರ್ಜರಿಗೂ ಮುನ್ನ ಖುದ್ದು ಆಂಬ್ಯುಲೆನ್ಸ್‌ ಮೂಲಕ ಬಂದ ಮುರಳಿಧರ್‌ ಅವರು ಮತದಾನ ಮಾಡಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದರೂ, ಡೋಂಟ್‌ ಕೇರ್‌ ಮಾಡದ ಮುರಳಿಧರ್‌ ಶಸ್ತ್ರಚಿಕಿತ್ಸೆಗೂ ಮುನ್ನ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಮಾದರಿ ಆಗಿದ್ದಾರೆ.

ಇದನ್ನೂ ಓದಿ: Lok Sabha Election 2024: ಮತದಾರರು ಜಸ್ಟ್‌ ಮಿಸ್‌; ಮತಗಟ್ಟೆ ಸಮೀಪವೇ ನೆಲಕ್ಕುರುಳಿದ ಬೃಹತ್ ಮರ, ಕಾರು ಜಖಂ

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Narendra Modi: ಭ್ರಷ್ಟರ ಬೇಟೆಯಾಡಿದ, ಉಗ್ರರ ಓಡಿಸಿದ; ಮೋದಿಗಾಗಿ ಕನ್ನಡದಲ್ಲಿ ಹಾಡು ಹಾಡಿದ ಅಜ್ಜಿ!

Narendra Modi: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಜನ ಮತದಾನ ಮಾಡುತ್ತಿದ್ದಾರೆ. ಇದರ ಮಧ್ಯೆಯೇ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿ, ಅಜ್ಜಿಯೊಬ್ಬರು ಕನ್ನಡದಲ್ಲಿ ಹಾಡು ಬರೆದು, ಅದನ್ನು ರಾಗವಾಗಿ ಹಾಡಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Narendra Modi
Koo

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಭರಾಟೆ ಜೋರಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪರವಾದ ಅಲೆ ಇದೆ ಎಂದು ಹೇಳಲಾಗುತ್ತಿದೆ. ಚುನಾವಣೆ ಇರಲಿ, ಇಲ್ಲದಿರಲಿ, ಮಕ್ಕಳಿಂದ ಹಿಡಿದು ಹಿರಿಯರವರೆಗೆ ಮೋದಿ ಅವರು ಅಚ್ಚುಮೆಚ್ಚಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಕರ್ನಾಟಕದಲ್ಲಿ ಅಜ್ಜಿಯೊಬ್ಬರು ನರೇಂದ್ರ ಮೋದಿ ಅವರಿಗಾಗಿ ಹಾಡೊಂದನ್ನು ಬರೆದು, ಹಾಡಿದ್ದಾರೆ. ಕರ್ನಾಟಕ ಬಿಜೆಪಿ (Karnataka BJP) ಘಟಕವು ಅಜ್ಜಿಯ ಈ ವಿಡಿಯೊವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿಡಿಯೊ (Viral Video) ವೈರಲ್‌ ಆಗಿದೆ.

“ಮೋದಿಯ ನಿಂದಿಸದಿರೋ ಅಣ್ಣಗಳಿರಾ…” ಎಂಬುದಾಗಿ ಅಜ್ಜಿಯು ಹಾಡು ಬರೆದಿದ್ದು, ರಾಗವಾಗಿ ಮೋದಿ ಅವರನ್ನು ಮೆಚ್ಚಿ ಹಾಡು ಹಾಡಿದ್ದಾರೆ. ನರೇಂದ್ರ ಮೋದಿ ಅವರು ದೊರೆ, ಉತ್ತಮ ಆಡಳಿತಗಾರ, ಭ್ರಷ್ಟಾಚಾರವನ್ನು ನಿಗ್ರಹಿಸಿದವರು, ಭಯೋತ್ಪಾದಕರನ್ನು ಓಡಿಸಿದವರು, ವಿವೇಕಾನಂದರಿಗೆ ಸಮಾನವಾದವರು, ಭಾರತೀಯರ ಮೇಲೆ ಮೋದಿ ಹೊಂದಿರುವ ಪ್ರೇಮ, ದೇಶದ ಮೇಲೆ ಅಭಿಮಾನ ಸೇರಿ ಹಲವು ಅಂಶಗಳನ್ನು ಉಲ್ಲೇಖಿಸಿ ಅಜ್ಜಿಯೊಬ್ಬರು ಹಾಡು ಹಾಡಿದ್ದಾರೆ.

ಅಜ್ಜಿ ಹಾಡಿನ ಸ್ಯಾಂಪಲ್

ಮೋದಿಯ ನಿಂದಿಸದಿರೋ ಅಣ್ಣಗಳಿರಾ
ಸಂತಾನ ನಿಂತಿಸದಿರೋ
ಧರೆಯನುದ್ಧರಿಸಲು ಬಂದ
ದೊರೆಯ ನಿಂದಿಸದರಿ ಅಣ್ಣಗಳಿರಾ
ಮೋದಿಯ ನಿಂದಿಸದಿರೋ…

ಅಜ್ಜಿಯ ವಿಡಿಯೊವನ್ನು ಹಂಚಿಕೊಂಡಿರುವ ಬಿಜೆಪಿಯು, ಕಾಂಗ್ರೆಸ್‌ಗೆ ತಿರುಗೇಟು ನೀಡಿದೆ. “ಸ್ಟುಡಿಯೋದಲ್ಲಿ ರೆಕಾರ್ಡಿಂಗ್‌ ಮಾಡಿಸಿ ಪ್ರಚಾರ ಪಡೆದುಕೊಂಡು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುವುದಲ್ಲ ಸಿದ್ದರಾಮಯ್ಯನವರೇ, ಈ ಇಳಿ ವಯಸ್ಸಿನಲ್ಲೂ ತಂತ್ರ‌ಜ್ಞಾನ ಬಳಸದೆ ಮೋದಿಯವರ ಸಾಧನೆಯನ್ನು ವೃದ್ಧೆ ಓರ್ವರು ಹಾಡಿರುವ ಹಾಡನ್ನೊಮ್ಮೆ ಕೇಳಿ” ಎಂಬುದಾಗಿ ಸಿದ್ದರಾಮಯ್ಯ ಅವರು ಹಂಚಿಕೊಂಡ ವಿಡಿಯೊಗೆ ಬಿಜೆಪಿ ತಿರುಗೇಟು ನೀಡಿದೆ.

ಕಾಂಗ್ರೆಸ್‌ಅನ್ನು ಟೀಕಿಸಿದ ಅಜ್ಜಿ

ಅಜ್ಜಿಯು ಹಾಡು ಹಾಡುವ ಮುನ್ನ ಕಾಂಗ್ರೆಸ್ಸಿಗರನ್ನು ಟೀಕಿಸಿದ್ದಾರೆ. “500 ವರ್ಷದಿಂದ ದೇಶದಲ್ಲಿ ರಾಮಮಂದಿರ ನಿರ್ಮಾಣ ಆಗಿರಲಿಲ್ಲ. ಅದನ್ನು ನರೇಂದ್ರ ಮೋದಿ ಅವರು ಸಾಕಾರಗೊಳಿಸಿದ್ದಾರೆ. ಈಗ ಮೋದಿ ಬಗ್ಗೆ ಇಲ್ಲಸಲ್ಲದ ಮಾತನಾಡುತ್ತಾರೆ. ರಾಮ ಎದೆಯಲ್ಲಿದ್ದಾನೆ ಎಂದೆಲ್ಲ ಹೇಳುತ್ತಿದ್ದಾರೆ. ಇವರು ಇಷ್ಟು ದಿನ ಎಲ್ಲಿದ್ದರು” ಎಂಬುದಾಗಿ ಅಜ್ಜಿಯು ಟೀಕಿಸಿದ್ದಾರೆ. ಇದಾದ ಬಳಿಕ ಮೋದಿ ಕುರಿತು ಹಾಡುಹಾಡಿದ್ದಾರೆ.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

Continue Reading
Advertisement
ದೇಶ18 mins ago

Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

road Accident in kolar evm
ಕೋಲಾರ28 mins ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Vampire Facial
ಆರೋಗ್ಯ41 mins ago

Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

Yogi Adithyanatha
ಪ್ರಮುಖ ಸುದ್ದಿ43 mins ago

Yogi Adityanath: “ಗೋಮಾಂಸ ಸೇವಿಸುವ ಹಕ್ಕು….” ಕಾಂಗ್ರೆಸ್‌ ವಿರುದ್ಧ ಯೋಗಿ ಇನ್ನೊಂದು ಆರೋಪ

Road Accident in Bengaluru
ಬೆಂಗಳೂರು58 mins ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Dhanush Gowda Wedding With Sanjana Photos
ಕಿರುತೆರೆ1 hour ago

Dhanush Gowda:  ವೈವಾಹಿಕ ಜೀವನಕ್ಕೆ ಕಾಲಿಟ್ಟ ʻಗೀತಾʼ ಧಾರಾವಾಹಿ ನಟ

ಕರ್ನಾಟಕ1 hour ago

Parkinson’s disease: ಪಾರ್ಕಿನ್ಸನ್ ರೋಗಿಗಳಲ್ಲಿ ಡಿಬಿಎಸ್ ಚಿಕಿತ್ಸೆಗಾಗಿ ಹೊಸ ತಂತ್ರಜ್ಞಾನ- ಇದು ದೇಶದಲ್ಲೇ ಮೊದಲು

Drought Relief
ಕರ್ನಾಟಕ1 hour ago

Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

IRCTC Jyotirlinga Yatra
ಪ್ರವಾಸ1 hour ago

IRCTC Jyotirlinga Yatra: ರೈಲ್ವೆ ಇಲಾಖೆಯಿಂದ ಏಳು ಜ್ಯೋತಿರ್ಲಿಂಗ ವೀಕ್ಷಣೆ ಪ್ರವಾಸ; ದರ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್1 hour ago

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ28 mins ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ7 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌