Viral Video: ಚಲಿಸುತ್ತಿದ್ದ ಕಾರಿನಲ್ಲಿ ಕುಳಿತು ರಸ್ತೆಗೆ ಹಣ ಎಸೆದ ಯುವಕ​; ವೆಬ್ ಸಿರೀಸ್​ ದೃಶ್ಯ ಮರು ಸೃಷ್ಟಿಸಿದವ ಅರೆಸ್ಟ್​ Vistara News
Connect with us

ವೈರಲ್ ನ್ಯೂಸ್

Viral Video: ಚಲಿಸುತ್ತಿದ್ದ ಕಾರಿನಲ್ಲಿ ಕುಳಿತು ರಸ್ತೆಗೆ ಹಣ ಎಸೆದ ಯುವಕ​; ವೆಬ್ ಸಿರೀಸ್​ ದೃಶ್ಯ ಮರು ಸೃಷ್ಟಿಸಿದವ ಅರೆಸ್ಟ್​

ವಿಡಿಯೊ ವೈರಲ್ ಆದ ಕೆಲವೇ ಹೊತ್ತಲ್ಲಿ ಹರ್ಯಾಣ ಪೊಲೀಸರು ಪ್ರತಿಕ್ರಿಯೆ ನೀಡಿ ‘ಆರೋಪಿಗಳನ್ನು ಗುರುತಿಸಲಾಗಿದೆ, ಶೀಘ್ರವೇ ಬಂಧಿಸುತ್ತೇವೆ ಎಂದಿದ್ದರು. ಇಂದು ಅವರಿಬ್ಬರನ್ನೂ ಅರೆಸ್ಟ್ ಮಾಡಲಾಗಿದ್ದು, ಒಬ್ಬಾತ ಜೋರಾವರ್​ ಸಿಂಗ್​ ಕಲ್ಸಿ ಮತ್ತು ಇನ್ನೊಬ್ಬಾತನ ಹೆಸರು ಗುರ್​ಪ್ರೀತ್​ ಸಿಂಗ್​ ಎಂದು ಗುರುತಿಸಲಾಗಿದೆ.

VISTARANEWS.COM


on

Man throws currency notes From Car Arrested By Haryana Police
Koo

ಹರ್ಯಾಣದ ಗುರುಗ್ರಾಮದಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಕಾರಿನ ಡಿಕ್ಕಿಯಲ್ಲಿ ಕುಳಿತು, ನೋಟುಗಳನ್ನು ರಸ್ತೆ ಮೇಲೆ ಎಸೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿತ್ತು. ಅದರ ಬೆನ್ನಲ್ಲೇ ಈಗ ಆ ವ್ಯಕ್ತಿಯನ್ನು ಮತ್ತು ಕಾರು ಡ್ರೈವ್ ಮಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಮಾರುತಿ ಸುಜುಕಿ ಬಲೆನೋ ಕಾರಿನ ಟ್ರಂಕ್​​ನಲ್ಲಿ ಕುಳಿತವ ನೋಟು ಎಸೆಯುತ್ತಿದ್ದರೆ, ಹಿಂಬದಿಯಿಂದ ಬೈಕ್​​ನಲ್ಲಿ ಬರುತ್ತಿದ್ದ ಇಬ್ಬರು ಅದನ್ನು ವಿಡಿಯೊ ಮಾಡಿದ್ದರು. ಆ ವಿಡಿಯೊ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗೆಲ್ಲ ಮಾಡುವುದರಿಂದ ರಸ್ತೆ ಮೇಲೆ ಪ್ರಯಾಣ ಮಾಡುವ ಇತರರ ಗಮನ ಹಾಳಾಗುತ್ತದೆ. ಭೀಕರ ಅಪಘಾತಗಳಿಗೂ ಕಾರಣವಾಗಬಹುದು ಎಂದು ಆರೋಪಿಸಿದ್ದರು. ವಿಡಿಯೊ ವೈರಲ್ ಆಗುತ್ತಿದ್ದಂತೆ ಪೊಲೀಸರು ಸುಮೊಟೊ ಕೇಸ್​ ದಾಖಲಿಸಿದ್ದರು.

ಶಾಹೀದ್​ ಕಪೂರ್ ಅಭಿನಯದ ‘ಫರ್ಜಿ಼’ ವೆಬ್​ಸೀರಿಸ್​​ನಲ್ಲಿ ಇಂಥದ್ದೇ ಒಂದು ದೃಶ್ಯವಿದ್ದು, ಅದನ್ನು ಮರುಸೃಷ್ಟಿಸುವ ಸಲುವಾಗಿಯೇ ಈ ಯುವಕರು ಇಂಥ ಸಾಹಸ ಮಾಡಿದ್ದರು. ಅದರಲ್ಲಿ ಮುಖ ಮುಚ್ಚಿಕೊಂಡ ಯುವಕನೊಬ್ಬ ಕಾರಿನ ಡಿಕ್ಕಿಯಿಂದ ನೋಟುಗಳನ್ನು ಮೊಗೆದು ಮೊಗೆದು ರಸ್ತೆಗೆ ಎಸೆದಿದ್ದಾನೆ. ಕೆಲ ಸಮಯ ಹೀಗೇ ಮಾಡಿ, ಕಾರಿನ ಡಿಕ್ಕಿಯ ಬಾಗಿಲು ಹಾಕಿದ್ದಾನೆ.

ಇದನ್ನೂ ಓದಿ: KR Market Flyover : ಕೆ.ಆರ್‌. ಮಾರ್ಕೆಟ್‌ನಲ್ಲಿ ಹಣ ಎಸೆದ ಅರುಣ್‌ ಪೊಲೀಸ್‌ ವಶಕ್ಕೆ, ಅಜ್ಞಾತ ಸ್ಥಳದಲ್ಲಿ ವಿಚಾರಣೆ

ವಿಡಿಯೊ ವೈರಲ್ ಆದ ಕೆಲವೇ ಹೊತ್ತಲ್ಲಿ ಹರ್ಯಾಣ ಪೊಲೀಸರು ಪ್ರತಿಕ್ರಿಯೆ ನೀಡಿ ‘ಆರೋಪಿಗಳನ್ನು ಗುರುತಿಸಲಾಗಿದೆ, ಶೀಘ್ರವೇ ಬಂಧಿಸುತ್ತೇವೆ ಎಂದಿದ್ದರು. ಇಂದು ಅವರಿಬ್ಬರನ್ನೂ ಅರೆಸ್ಟ್ ಮಾಡಲಾಗಿದ್ದು, ಒಬ್ಬಾತ ಜೋರಾವರ್​ ಸಿಂಗ್​ ಕಲ್ಸಿ ಮತ್ತು ಇನ್ನೊಬ್ಬಾತನ ಹೆಸರು ಗುರ್​ಪ್ರೀತ್​ ಸಿಂಗ್​ ಎಂದು ಗುರುತಿಸಲಾಗಿದೆ. ಇದರಲ್ಲಿ ಕಾರು ಡ್ರೈವ್​ ಮಾಡುತ್ತಿದ್ದವನ್ಯಾರು. ಹಣ ಎಸೆಯುತ್ತಿದ್ದವನು ಯಾರು ಎಂಬುದು ಗೊತ್ತಾಗಿಲ್ಲ. ಆರೋಪಿಗಳು ಹೋಗುತ್ತಿದ್ದ ಮಾರುತಿ ಸುಜುಕಿ ಕಾರನ್ನೂ ವಶಪಡಿಸಿಕೊಳ್ಳಲಾಗಿದೆ. ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಗುರುಗ್ರಾಮ ಎಸಿಪಿ ವಿಕಾಸ್ ಕೌಶಿಕ್​ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

Viral Video: ಭಾರತದಲ್ಲಿ ವಿಶ್ವದಲ್ಲೇ ಎತ್ತರದ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ, ಇಲ್ಲಿದೆ ವಿಡಿಯೊ

Viral Video: ವಿಶ್ವದಲ್ಲೇ ಅತಿ ಎತ್ತರದ ರೈಲು ಎಂದೇ ಖ್ಯಾತಿಯಾದ ದೆಹಲಿ-ಜೈಪುರ-ಅಜ್ಮೇರ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಪ್ರಾಯೋಗಿಕ ಸಂಚಾರ ಕೈಗೊಳ್ಳಲಾಗಿದೆ. ಇದರ ವಿಡಿಯೊ ಇಲ್ಲಿದೆ.

VISTARANEWS.COM


on

Edited by

Worlds first 72 metre high rise train set on trial on Delhi Jaipur route video out
Koo

ಜೈಪುರ: ಕೇಂದ್ರ ಸರ್ಕಾರದ ಪ್ರಯತ್ನದ ಫಲವಾಗಿ ದೇಶದಲ್ಲಿ ರೈಲುಗಳು ಹಾಗೂ ರೈಲು ನಿಲ್ದಾಣಗಳು ಆಧುನೀಕರಣಗೊಂಡಿವೆ. ಇದರ ಭಾಗವಾಗಿ ಇಂದು ದೇಶದ ಹಲವೆಡೆ ಸುಸಜ್ಜಿತ ಹಾಗೂ ಅತ್ಯಾಧುನಿಕ ಸೌಕರ್ಯಗಳುಳ್ಳ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ ಆರಂಭವಾಗಿದೆ. ಇದರ ಬೆನ್ನಲ್ಲೇ, ಭಾರತೀಯ ರೈಲ್ವೆಯು ಮತ್ತೊಂದು ಸಾಧನೆ ಮಾಡಿದೆ. ವಿಶ್ವದಲ್ಲೇ ಅತಿ ಎತ್ತರದ ರೈಲು ಎಂದೇ ಖ್ಯಾತಿಯಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ರೈಲು ಸಂಚಾರದ ವಿಡಿಯೊ (Viral Video) ಈಗ ವೈರಲ್‌ ಆಗಿದೆ.

7.2 ಮೀಟರ್‌ ಎತ್ತರದ ದೆಹಲಿ-ಜೈಪುರ-ಅಜ್ಮೇರ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಪ್ರಾಯೋಗಿಕ ಸಂಚಾರವು ಜೈಪುರದಲ್ಲಿ ನಡೆದಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ರೈಲು ಸಂಚಾರದ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಅಶ್ವಿನಿ ವೈಷ್ಣವ್‌ ಟ್ವೀಟ್‌

ಭಾರತೀಯ ರೈಲ್ವೆಯು ದೆಹಲಿ-ಜೈಪುರ ಮಾರ್ಗದಲ್ಲಿ ಹೊಸ ಸೆಮಿ-ಹೈಸ್ಪೀಡ್‌ ರೈಲನ್ನು ನವೀಕರಿಸಿದೆ. ಅಲ್ಲದೆ, ಅಶ್ವಿನಿ ವೈಷ್ಣವ್‌ ಅವರ ಪ್ರಕಾರ, ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳು ಡಬಲ್‌ ಡೆಕ್ಕರ್‌ ಆಗಿ ಪರಿವರ್ತನೆ ಆಗಲಿವೆ. ಇದಕ್ಕಾಗಿ ವಿದ್ಯುತ್‌ ವೈರ್‌ಗಳನ್ನು ಎತ್ತರಿಸುವ ಯೋಜನೆ ಅವರ ಮುಂದಿದೆ.

ದೆಹಲಿ-ಜೈಪುರ-ಅಜ್ಮೇರ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಮಾರ್ಚ್‌ 28ರಂದು ಪ್ರಾಯೋಗಿಕ ಸಂಚಾರ ಕೈಗೊಂಡಿದೆ. ದೆಹಲಿ-ಜೈಪುರ ಮಾರ್ಗದಲ್ಲಿ ಇದೇ ವರ್ಷದ ಏಪ್ರಿಲ್‌ನಲ್ಲಿ ಸಂಚಾರ ಆರಂಭಿಸಲಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ದೇಶದಲ್ಲಿ ಸಂಚಾರ ಆರಂಭಿಸಿದ 11ನೇ ವಂದೇ ಭಾರತ್‌ ರೈಲು ಎಂಬ ಖ್ಯಾತಿಗೆ ಭಾಜನವಾಗಲಿದೆ. ಸದ್ಯ, ದೇಶದಲ್ಲಿ 10 ವಂದೇ ಭಾರತ್‌ ರೈಲುಗಳು ಓಡಾಟ ನಡೆಸುತ್ತಿವೆ.

ಇದನ್ನೂ ಓದಿ: Namma Metro : ಕೆ.ಆರ್‌.ಪುರಂ-ವೈಟ್‌ಫೀಲ್ಡ್‌ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರ ಆರಂಭ

Continue Reading

ವೈರಲ್ ನ್ಯೂಸ್

Viral News : ಹತ್ತೇ ಸೆಕೆಂಡುಗಳಲ್ಲಿ ಈ ಎರಡು ಚಿತ್ರಗಳಲ್ಲಿ ಆರು ವ್ಯತ್ಯಾಸ ಕಂಡುಹಿಡಿಯಿರಿ!

ಎರಡು ಒಂದೇ ರೀತಿಯ ಚಿತ್ರಗಳಲ್ಲಿ ವ್ಯತ್ಯಾಸಗಳನ್ನು ಹುಡುಕುವ ಸವಾಲೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral News) ಆಗಿದೆ. ಈ ಸವಾಲಲ್ಲಿ ನೀವೂ ಪಾಲ್ಗೊಳ್ಳಿ.

VISTARANEWS.COM


on

Edited by

Koo

ಬೆಂಗಳೂರು: ಸಾಮಾಜಿಕ ಜಾಲತಾಣಗಳು ಒಂದು ರೀತಿಯಲ್ಲಿ ಮನೋರಂಜನೆಯ ತಾಣಗಳೂ ಹೌದು. ಹಾಗೆಯೇ ಸುಸ್ತಾದ ಮೆದುಳಿಗೆ ಕೆಲ ಕಾಲ ಶಾಂತವಾಗಿರಿಸಲು ಸಹಕರಿಸುವ ಸ್ಥಳವೂ ಹೌದು. ಅದಕ್ಕೆಂದೇ ಹಲವು ಮೈಂಡ್‌ ಗೇಮ್‌ಗಳು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡು ವೈರಲ್‌ ಆಗುತ್ತಿರುತ್ತವೆ. ಇದೀಗ ಅಂತದ್ದೇ ಒಂದು ಗೇಮ್‌ ವೈರಲ್‌ (Viral News) ಆಗಿದ್ದು, ನಿಮ್ಮ ದೃಷ್ಟಿಗೇ ಸವಾಲನ್ನು ಎಸೆಯುತ್ತಿದೆ.

ಇದನ್ನೂ ಓದಿ: Viral News : ಮಾರ್ಕ್ಸ್‌ ಕಾರ್ಡ್‌ನಲ್ಲಿ ಶಿಕ್ಷಕರು ಹೀಗಾ ರಿಮಾರ್ಕ್‌ ಬರೆಯೋದು! ಸಿಟ್ಟಾದ ನೆಟ್ಟಿಗರು
ಇಲ್ಲಿ ಎರಡು ಚಿತ್ರಗಳನ್ನು ಕೊಡಲಾಗಿದೆ. ಎರಡೂ ಚಿತ್ರಗಳು ಒಂದೇ ರೀತಿಯಲ್ಲಿವೆ. ಆದರೆ ಇದರಲ್ಲಿ ಆರು ಸಣ್ಣ ಸಣ್ಣ ವ್ಯತ್ಯಾಸಗಳಿವೆ. ಅವುಗಳನ್ನು ನೀವು ಕಂಡುಹಿಡಿಯಬೇಕು. ಹಾಗೆಂದ ಮಾತ್ರಕ್ಕೆ ಗಂಟೆಯ ಕಾಲ ಕುಳಿತುಕೊಂಡು ಹುಡುಕುವುದಲ್ಲ. ಕೇವಲ 10 ಸೆಕೆಂಡುಗಳಲ್ಲಿ ಎಲ್ಲ ವ್ಯತ್ಯಾಸಗಳನ್ನು ಹುಡುಕಿದರೆ ನೀವು ಸವಾಲನ್ನು ಗೆದ್ದಂತೆ.


ಇಂತದ್ದೊಂದು ಫೋಟೋವನ್ನು ಊಬರ್‌ಫ್ಯಾಕ್ಟ್ಸ್‌ ಹೆಸರಿನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮೂಲವಾಗಿ ಈ ಚಿತ್ರವನ್ನು ಜಾರ್ಜ್ಲೆ ದುದಾಸ್‌ ಹೆಸರಿನ ಲೇಖಕ ತಮ್ಮ ವೆಬ್‌ಸೈಟ್‌ನಲ್ಲಿ ಹಂಚಿಕೊಂಡಿದ್ದಾರೆ. ಆ ಚಿತ್ರ ಇದೀಗ ಸಾಮಾಜಿಕ ಜಾಲತಾಣದ ತುಂಬೆಲ್ಲ ಹರಿದಾಡಿದ್ದು, ವೈರಲ್‌ ಆಗಿದೆ. ಅನೇಕರು ಈ ಸವಾಲನ್ನು ಸ್ವೀಕರಿಸಿಕೊಂಡು ಉತ್ತರಗಳನ್ನು ಕೊಡಲಾರಂಭಿಸಿದ್ದಾರೆ. ಇನ್ನೂ ಅನೇಕರು ಈ ರೀತಿಯ ಸವಾಲುಗಳು ತಮಗೆ ಇಷ್ಟವೆಂದೂ ಹೇಳಿಕೊಂಡಿದ್ದಾರೆ.

ಈ ಚಿತ್ರಗಳಲ್ಲಿರುವ ಆರು ವ್ಯತ್ಯಾಸಗಳು ಈ ಕೆಳಗಿನಂತಿವೆ

Continue Reading

ವೈರಲ್ ನ್ಯೂಸ್

Viral News : ಮಾರ್ಕ್ಸ್‌ ಕಾರ್ಡ್‌ನಲ್ಲಿ ಶಿಕ್ಷಕರು ಹೀಗಾ ರಿಮಾರ್ಕ್‌ ಬರೆಯೋದು! ಸಿಟ್ಟಾದ ನೆಟ್ಟಿಗರು

ಅಂಕಪಟ್ಟಿಯಲ್ಲಿ ಶಿಕ್ಷಕರೇ ತಪ್ಪಾಗಿ ರಿಮಾರ್ಕ್‌ ಬರೆದಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್‌ ಆಗಿದೆ.

VISTARANEWS.COM


on

Edited by

Koo

ಬೆಂಗಳೂರು: ಪ್ರಾಥಮಿಕ ಶಾಲೆಗಳ ಅಂಕ ಪಟ್ಟಿ(ಮಾರ್ಕ್ಸ್‌ ಕಾರ್ಡ್‌) ನಿಮಗೆ ನೆನಪಿರಬಹುದು. ಎಲ್ಲ ವಿಷಯಗಳಿಗೆ ವಿದ್ಯಾರ್ಥಿ ತೆಗೆದುಕೊಂಡ ಅಂಕ ಬರೆಯುವ ಶಿಕ್ಷಕರು ಅದರ ಜತೆ ವಿದ್ಯಾರ್ಥಿಯ ಬಗ್ಗೆ ಒಂದೆರೆಡು ಪದಗಳಲ್ಲಿ ಬರೆದುಕೊಡುತ್ತಿದ್ದರು. ಇದೀಗ ಅದೇ ರೀತಿ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯ ಅಂಕ ಪಟ್ಟಿಗೆ ಬರೆದ ರಿಮಾರ್ಕ್‌ ಎಲ್ಲೆಡೆ ಭಾರೀ ವೈರಲ್‌ (Viral News) ಆಗಿದೆ.

ಇದನ್ನೂ ಓದಿ: Viral Video: ತರಗತಿಯಲ್ಲೇ ವಿದ್ಯಾರ್ಥಿಗಳ ಹೊಡಿಬಡಿ; ನಗರ ಪೊಲೀಸರಿಗೆ ಟ್ಯಾಗ್‌ ಮಾಡಿದ ವಿಡಿಯೊ ವೈರಲ್‌
ವಿದ್ಯಾರ್ಥಿನಿಯೊಬ್ಬಳ ಅಂಕಪಟ್ಟಿಯಲ್ಲಿ ಶಿಕ್ಷಕರು ಎಲ್ಲ ವಿಷಯಗಳ ಪರೀಕ್ಷೆಯಲ್ಲಿ ಆಕೆ ತೆಗೆದುಕೊಂಡ ಅಂಕಗಳನ್ನು ಬರೆದಿದ್ದಾರೆ. ಒಟ್ಟು ಎಷ್ಟು ಅಂಕಗಳಿಗೆ ಎಷ್ಟು ಅಂಕ ಬಂದಿವೆ, ಆಕೆ ತರಗತಿಯಲ್ಲಿ ಎಷ್ಟನೇ ಸ್ಥಾನದಲ್ಲಿದ್ದಾಳೆ ಎನ್ನುವ ಎಲ್ಲ ಮಾಹಿತಿ ಅದರಲ್ಲಿದೆ. ಕೊನೆಯಲ್ಲಿ ವಿದ್ಯಾರ್ಥಿನಿಯ ಬಗ್ಗೆ ರಿಮಾರ್ಕ್‌ ಅನ್ನೂ ಕೂಡ ಬರೆಯಲಾಗಿದೆ. ಅಲ್ಲಿ ಶಿಕ್ಷಕರು, “She has passed away” ಎಂದು ಬರೆದಿದ್ದಾರೆ.


ಪಾಸಡ್‌, ಪಾಸಡ್‌ ಔಟ್‌ ಎನ್ನುವ ಪದಗಳು ತೇರ್ಗಡೆಯಾಗಿದ್ದಾರೆ ಎಂದು ಅರ್ಥ ಕೊಡುತ್ತದೆ. ಆದರೆ ಪಾಸಡ್‌ ಅವೇ ಎನ್ನುವ ಪದ ಸಾವನ್ನಪ್ಪಿದ್ದಾರೆ ಎನ್ನುವ ಅರ್ಥ ಕೊಡುತ್ತದೆ. ಹಾಗಾಗಿ ಈ ಅಂಕಪಟ್ಟಿಯಲ್ಲಿರುವ ರಿಮಾರ್ಕ್‌ ಫೋಟೋ ಸಾಮಾಜಿಕ ಜಾಲತಾಣಗಳ ತುಂಬೆಲ್ಲ ಹರಿದಾಡಿದೆ. ಇದು 2019ರ ಅಂಕಪಟ್ಟಿಯಾಗಿದ್ದು ಆಗ ಕೂಡ ಫೋಟೋ ಎಲ್ಲೆಡೆ ವೈರಲ್‌ ಆಗಿತ್ತು. ಈಗಲೂ ಮತ್ತೊಮ್ಮೆ ಈ ಅಂಕಪಟ್ಟಿ ಫೋಟೋ ವೈರಲ್‌ ಆಗುತ್ತಿದೆ.

ಬೇಜವಾಬ್ದಾರಿತನದಿಂದ ತಪ್ಪು ಅರ್ಥ ಬರುವ ರಿಮಾರ್ಕ್‌ ಬರೆದ ಶಿಕ್ಷಕರಿಗೆ ನೆಟ್ಟಿಗರು ಬೈಯಲಾರಂಭಿಸಿದ್ದಾರೆ. ಇನ್ನೂ ಕೆಲವರು ಶಿಕ್ಷಕರಿಗೇ ಪಾಠ ಹೇಳಿಕೊಡಬೇಕಾದ ಕಾಲ ಬಂದಿದೆ ಎಂದು ಹೇಳಲಾರಂಭಿಸಿದ್ದಾರೆ.

Continue Reading

ದೇಶ

Corruption Case: ಪ್ರಾಮಾಣಿಕತೆಗಾಗಿ ಪ್ರಶಸ್ತಿ ಪಡೆದಿದ್ದ ಮಹಿಳಾ ಎಸ್ಐ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದರು! ವಿಡಿಯೊ ನೋಡಿ

Corruption Case: ಕಳೆದ ಗಣರಾಜ್ಯೋತ್ಸವದ ದಿನ, ತಮ್ಮ ಪ್ರಾಮಾಣಿಕತೆ, ದಕ್ಷತೆಯ ಕಾರ್ಯನಿರ್ವಹಣೆಗಾಗಿ ಪ್ರಶಸ್ತಿ ಸ್ವೀಕರಿಸಿದ್ದ ಮಹಿಳಾ ಎಸ್ಐ ಒಬ್ಬರು ಈಗ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

VISTARANEWS.COM


on

Edited by

Corruption Case Woman IS Caught while taking bribe in Haryana
Koo

ಹಿಸಾರ್, ಹರ್ಯಾಣ: ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದಕ್ಕಾಗಿ ಪ್ರಶಸ್ತಿ ಪಡೆದಿದ್ದ ಮಹಿಳಾ ಎಸ್ಐ (Woman SI) ಒಬ್ಬರು ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳ(ACB)ದ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅತ್ಯುತ್ತಮ ಕಾರ್ಯನಿರ್ವಹಣೆ ಹಾಗೂ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವುದಕ್ಕಾಗಿ ಎಸ್ಐ ಮುನ್ನಿದೇವಿ ಅವರಿಗೆ ಗಣರಾಜ್ಯೋತ್ಸವ ದಿನ ಪ್ರಶಸ್ತಿ ನೀಡಿ, ಸನ್ಮಾನ ಮಾಡಲಾಗಿತ್ತು! ಅದೇ ಎಸ್ಐ ಈಗ, ಮಹಿಳೆಯೊಬ್ಬರಿಂದ 5000 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದಿದ್ದಾರೆ(Corruption Case)!

ಮುನ್ನಿ ದೇವಿ ಅವರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಹಿಸಾರ್‌ನ ಬವಾನಿ ಖೇಡಾ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Corruption Case: ಮಹಿಳಾ ಎಸ್ಐ ಎಸಿಬಿ ಬಲೆಗೆ ಬಿದ್ದ ವಿಡಿಯೋ ಟ್ವೀಟ್ ಮಾಡಿರುವ ಎನ್‌ಸಿಐಬಿ

ವಸೂಲಾತಿ ಪ್ರಕರಣವೊಂದರಲ್ಲಿ ಎಸ್ಐ ಮುನ್ನಿದೇವಿ ಅವರು ತನಿಖಾಧಿಕಾರಿಯಾಗಿದ್ದರು. ಈ ವೇಳೆ, ಸಂತ್ರಸ್ತ ಮಹಿಳೆಯೊಬ್ಬರ ಕೆಲಸ ಮಾಡಿಕೊಡಲು ಲಂಚಕ್ಕೆ ಮುನ್ನಿದೇವಿ ಬೇಡಿಕೆ ಇಟ್ಟಿದ್ದರು. ಸಂತ್ರಸ್ತೆ ಮಹಿಳೆ ಲಂಚಕ್ಕೆ ಬೇಡಿಕೆ ಇಟ್ಟಿರುವ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಬಳಿಕ ಎಸಿಬಿ ಅಧಿಕಾರಿಗಳ ತಂಡವನ್ನು ರಚಿಸಿತ್ತು. ಮಹಿಳೆಯು, ಎಸ್ಐಗೆ ಐದು ಸಾವಿರ ರೂ. ಲಂಚ ನೀಡುವಾಗ ದಾಳಿ ಮಾಡಿದ ಎಸಿಬಿ ಅಧಿಕಾರಿಗಳ ತಂಡವು, ಮಹಿಳಾ ಎಸ್ಐಯನ್ನು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿಯಿತು. ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Neharu Olekar: ಭ್ರಷ್ಟಾಚಾರ ಪ್ರಕರಣ; ಹಾವೇರಿ ಬಿಜೆಪಿ ಶಾಸಕ, ಇಬ್ಬರು ಪುತ್ರರಿಗೆ ಜೈಲು ಶಿಕ್ಷೆ

ಏತನ್ಮಧ್ಯೆ, ಎಸಿಬಿ ಕಾರ್ಯಾಚರಣೆಯ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗಿದೆ. ಈ ವಿಡಯೋ ಸಾಕಷ್ಟು ವೈರಲ್ ಆಗಿದೆ. ಸಾಕಷ್ಟು ಜನರು ಮಹಿಳಾ ಎಸ್ಐ ಲಂಚ ಪ್ರವೃತ್ತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Continue Reading
Advertisement
Establishment of Backward Classes Category-I Pinjara, Nadaf and 13 Other Castes Development Corporation
ಕರ್ನಾಟಕ50 mins ago

Reservation: ಒಬಿಸಿ ಮೀಸಲಾತಿ ಪುನರ್‌ ವರ್ಗೀಕರಿಸಿ ರಾಜ್ಯ ಸರ್ಕಾರ ಆದೇಶ; 2ಸಿ ಪ್ರವರ್ಗಕ್ಕೆ ಶೇ.6, 2ಡಿ ಪ್ರವರ್ಗಕ್ಕೆ ಶೇ.7 ಮೀಸಲಾತಿ

World’s first 7.2-metre high-rise train set on trial on Delhi-Jaipur route, video out
ದೇಶ1 hour ago

Viral Video: ಭಾರತದಲ್ಲಿ ವಿಶ್ವದಲ್ಲೇ ಎತ್ತರದ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ, ಇಲ್ಲಿದೆ ವಿಡಿಯೊ

Road Accident
ಕರ್ನಾಟಕ2 hours ago

Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು

High way robbery
ಕರ್ನಾಟಕ2 hours ago

Highway robbery : ಯುವಕ-ಯುವತಿಯನ್ನು ಅಡ್ಡಗಟ್ಟಿ ಬೈಕ್‌, ಐಫೋನ್‌ ಕಿತ್ತುಕೊಂಡು ಹೋದ ಮೂವರು ಸುಲಿಗೆಕೋರರು ಅರೆಸ್ಟ್‌

Restrictions on entry to Dharwad, Supreme Court dismisses Vinay Kulkarni's plea seeking exemption
ಕರ್ನಾಟಕ2 hours ago

Vinay kulkarni: ಧಾರವಾಡಕ್ಕೆ ಪ್ರವೇಶ ನಿರ್ಬಂಧ; ವಿನಾಯಿತಿ ಕೋರಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

Ram Navami 2023
ಧಾರ್ಮಿಕ3 hours ago

Ram Navami 2023: ಶ್ರೀರಾಮನ ಪರಿಪೂರ್ಣತೆ ನಮ್ಮಲ್ಲಿ ತುಂಬಿಕೊಳ್ಳೋದು ಹೇಗೆ? 

IPL 2023: Rohit likely to be unavailable for some IPL matches to relieve stress
ಕ್ರಿಕೆಟ್3 hours ago

IPL 2023: ಒತ್ತಡ ನಿವಾರಣೆಗಾಗಿ ಕೆಲ ಐಪಿಎಲ್​ ಪಂದ್ಯಗಳಿಗೆ ರೋಹಿತ್​ ಅಲಭ್ಯ ಸಾಧ್ಯತೆ

Karnataka Elections 2023
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ಮತ ಪ್ರಮಾಣ ಹೆಚ್ಚಿಸುವ ಆಯೋಗದ ಕ್ರಮವನ್ನು ಬೆಂಬಲಿಸೋಣ

Aam Aadmi Party announces 300 units of free electricity, Rs 3,000. unemployment allowance, Implementation of OPS guarantee scheme
ಕರ್ನಾಟಕ3 hours ago

Karnataka Election: ಎಎಪಿಯಿಂದ 300 ಯೂನಿಟ್‌ ವಿದ್ಯುತ್‌ ಉಚಿತ, 3000 ರೂ. ನಿರುದ್ಯೋಗ ಭತ್ಯೆ, ಒಪಿಎಸ್‌ ಜಾರಿ ಗ್ಯಾರಂಟಿ

Indian govt let go of Rs 7 lakh in GST to save a baby girl’s life
ದೇಶ4 hours ago

ಬಾಲಕಿಯ ಪ್ರಾಣ ಉಳಿಸಲು 7 ಲಕ್ಷ ರೂ. ಜಿಎಸ್‌ಟಿ ಬಿಟ್ಟ ಕೇಂದ್ರ, ಮಾನವೀಯತೆ ಮೆರೆದ ಶಶಿ ತರೂರ್‌

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Paid leave for govt employees involved in the strike
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

amit shah convoy
ಕರ್ನಾಟಕ2 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ3 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 week ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 week ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ1 week ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ1 week ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ1 week ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

ಟ್ರೆಂಡಿಂಗ್‌

error: Content is protected !!