Viral Video: ಪ್ರೀತಿಯಲ್ಲಿ ಬಿದ್ದ ಮಗಳಿಗೆ ಬಾಸುಂಡೆ ಬರುವಂತೆ ಬಾರಿಸಿದ ಅಮ್ಮ! ಇದು ಲವ್ ಸೈಡ್ ಎಫೆೆಕ್ಟ್ Vistara News
Connect with us

ವೈರಲ್ ನ್ಯೂಸ್

Viral Video: ಪ್ರೀತಿಯಲ್ಲಿ ಬಿದ್ದ ಮಗಳಿಗೆ ಬಾಸುಂಡೆ ಬರುವಂತೆ ಬಾರಿಸಿದ ಅಮ್ಮ! ಇದು ಲವ್ ಸೈಡ್ ಎಫೆೆಕ್ಟ್

ಪ್ರೀತಿಯಲ್ಲಿ ಬಿದ್ದ ಮಗಳಿಗೆ ತಾಯಿಯೊಬ್ಬಳು ಬಾಸುಂಡೆ ಬರುವಂತೆ ಹೊಡೆದಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

VISTARANEWS.COM


on

mother beats daughter
Koo

ಬೆಂಗಳೂರು: ಭಾರತದಲ್ಲಿ ತಂದೆ ತಾಯಿಯರು ಬೇರೆ ದೇಶದ ತಂದೆ ತಾಯಿಯರಿಗೆ ಹೋಲಿಸಿದರೆ ತುಂಬಾ ಸ್ಟ್ರಿಕ್ಟ್‌ ಎನ್ನುವ ನಂಬಿಕೆಯೊಂದಿದೆ. ಆದರೆ ಮಕ್ಕಳು ಬೆಳೆದು ತಮ್ಮೆತ್ತರಕ್ಕೆ ಬಂದ ನಂತರ ಅವರನ್ನು ಮಕ್ಕಳಂತೆ ಕಾಣದೆ ಸ್ನೇಹಿತರಂತೆ ಕಾಣಬೇಕು ಎಂದು ಹೇಳಲಾಗುತ್ತದೆ. ಆದರೂ ಕೆಲವು ಕಡೆ ತಂದೆ ತಾಯಿ ಮಕ್ಕಳನ್ನು ಅತ್ಯಂತ ಕಟ್ಟುನಿಟ್ಟಿನಿಂದ ಬೆಳೆಸುವುದನ್ನು ನೀವು ಕಂಡಿರಬಹುದು. ಅಂತದ್ದೊಂದು ಕುಟುಂಬದಲ್ಲಿ ಮಗಳು ಪ್ರೀತಿಯಲ್ಲಿ ಬಿದ್ದಿದ್ದಾಳೆ ಎಂದು ತಿಳಿದ ತಕ್ಷಣ ತಾಯಿ ಮಗಳಿಗೆ ಬಾಸುಂಡೆ ಬರುವಂತೆ ಹೊಡೆದಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ.

ಕಪ್ಪು ಬಣ್ಣದ ಉಡುಗೆ ತೊಟ್ಟು, ಫ್ರೀ ಹೇರ್‌ ಬಿಟ್ಟಿರುವ ಮಗಳು ಮನೆಯ ಕೋಣೆಯಲ್ಲಿ ನಿಂತಿದ್ದಾಳೆ. ಅಲ್ಲಿದ್ದ ತಾಯಿ ಆಕೆಗೆ ಬೈಯುತ್ತಾ ಹೊಡೆಯುತ್ತಿದ್ದಾರೆ. ಅಮ್ಮ ಬೇಡಮ್ಮಾ ಎಂದು ಮಗಳು ಅದೆಷ್ಟೇ ಗೋಗರೆದರೂ ಬಿಡದೆ ತಾಯಿ ಹೊಡೆಯುತ್ತಿದ್ದಾಳೆ. ನೋವು ತಾಳಲಾರದೆ ಮಗಳು ಜೋರಾಗಿ ಅತ್ತರೂ ತಾಯಿ ಕರುಣೆ ತೋರದೆಯೇ ಹೊಡೆದಿದ್ದಾಳೆ.

ಇದನ್ನೂ ಓದಿ: Viral Video: ಕಾಟ ಕೊಟ್ಟ ಪುಂಡನನ್ನು ಕೆಡವಿ ಹೊಡೆದು ಹಾಕಿದ್ರು! ಅಕ್ಕ-ತಂಗಿಯ ವಿಡಿಯೊ ಸಕತ್‌ ವೈರಲ್‌
ಕೊನೆಯಲ್ಲಿ ಬೇರೊಬ್ಬ ವ್ಯಕ್ತಿ ಬಂದು ಇಬ್ಬರನ್ನೂ ರೂಮಿನಿಂದ ಹೊರಗೆ ಎಳೆದುಕೊಂಡು ಹೋಗುತ್ತಾರೆ. ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಘರ್‌ ಕೆ ಕಲೇಶ್‌ ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಭಾನುವಾರ ಮಧ್ಯ ರಾತ್ರಿಯಲ್ಲಿ ಹಂಚಿಕೊಳ್ಳಲಾಗಿರುವ ಈ ವಿಡಿಯೊ ಈಗಾಗಲೇ ನಾಲ್ಕು ಲಕ್ಷದಷ್ಟು ಜನರಿಂದ ವೀಕ್ಷಣೆ ಪಡೆದುಕೊಂಡಿದೆ.

ಹಲವಾರು ಮಂದಿ ವಿಡಿಯೊಗೆ ಲೈಕ್‌ ಮಾಡಿದ್ದು, ತಮ್ಮ ಖಾತೆಗಳಲ್ಲೂ ಹಂಚಿಕೊಂಡಿದ್ದಾರೆ. ಈ ವಿಡಿಯೊಗೆ ಅನೇಕ ರೀತಿಯ ಕಾಮೆಂಟ್‌ಗಳು ಬರುತ್ತಿದ್ದು, ಭಾರೀ ಚರ್ಚೆಯೂ ನಡೆಯುತ್ತಿದೆ. “ಇದೇ ಕಾರಣಕ್ಕೆ ಭಾರತದಲ್ಲಿ ಮಕ್ಕಳು ತಮ್ಮ ಖಾಸಗಿ ವಿಚಾರಗಳನ್ನು ಅಪ್ಪ ಅಮ್ಮನಿಂದ ಮುಚ್ಚಿಡುತ್ತಾರೆ”, “ಈ ರೀತಿಯವರು ಪೋಷಕರಾಗುವುದಕ್ಕೇ ಲಾಯಕ್ಕಲ್ಲ”, “ಈ ಚಂದಕ್ಕೆ ಮಕ್ಕಳನ್ನೇಕೆ ಮಾಡಿಕೊಳ್ಳಬೇಕು” ಎಂದು ಅನೇಕರು ಅಲ್ಲಿ ಮಗಳಿಗೆ ಹೊಡೆಯುತ್ತಿರುವ ತಾಯಿಗೆ ಕಾಮೆಂಟ್‌ಗಳಲ್ಲಿ ಬೈದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Shah Rukh Khan: ಕೇವಲ ಸ್ಮಾರ್ಟ್‌ ಫೋನ್‌ ಬಳಸಿ ʻಜವಾನ್‌ʼ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್; ಶಾರುಖ್‌ ಫಿದಾ!

Shah Rukh Khan: ಕಡಿಮೆ ಬಜೆಟ್‌ನಲ್ಲಿ ಕೇವಲ ಸ್ಮಾರ್ಟ್‌ಫೋನ್ ಬಳಸಿ ‘ಜವಾನ್’ ದೃಶ್ಯಗಳನ್ನು ಮರುಸೃಷ್ಟಿಸಿರುವ ವಿಡಿಯೊ ಕಂಡು ಶಾರುಖ್‌ ಫಿದಾ ಆಗಿದ್ದಾರೆ. ಯೂಟ್ಯೂಬರ್‌ನ ಕ್ರಿಯೇಟಿವಿಟಿ ಕಂಡು ಶಾರುಖ್‌ ಟ್ವೀಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Edited by

Shah Rukh Khan YouTuber Zarmatics scene
Koo

ಶಾರುಖ್ ಖಾನ್ (Shah Rukh Khan) ಅವರು ತಮ್ಮ ಇತ್ತೀಚಿನ ಬ್ಲಾಕ್‌ಬಸ್ಟರ್‌ ‘ಜವಾನ್’ ಸಿನಿಮಾ ಯಶಸ್ಸಿನ ಖುಷಿಯಲ್ಲಿದ್ದಾರೆ. ಸಿನಿಮಾ ಪ್ರೇಕ್ಷಕರಿಂದ ಉತ್ತಮ ವಿಮರ್ಶೆಗಳನ್ನು ಪಡೆಯುತ್ತಿದೆ. ಫ್ಯಾನ್ಸ್‌ ಬೆಂಬಲಕ್ಕಾಗಿ ಕೃತಜ್ಞತೆಯ ಸಂಕೇತವಾಗಿ ಶಾರುಖ್‌ ಆಗಾಗ ಟ್ವಿಟರ್‌ನಲ್ಲಿ ಸೇಷನ್‌ ಏರ್ಪಡಿಸಿ ಮಾತನಾಡುತ್ತಿದ್ದಾರೆ.

ಇತ್ತೀಚಿನ ಪೋಸ್ಟ್‌ನಲ್ಲಿ ಶಾರುಖ್ ಖಾನ್ ಅವರು ಯೂಟ್ಯೂಬರ್, ಜರ್ಮಾಟಿಕ್ಸ್ (zarmatics) ರಚಿಸಿದ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಕಡಿಮೆ ಬಜೆಟ್‌ನಲ್ಲಿ ಕೇವಲ ಸ್ಮಾರ್ಟ್‌ಫೋನ್ ಬಳಸಿ ‘ಜವಾನ್’ ದೃಶ್ಯಗಳನ್ನು ಮರುಸೃಷ್ಟಿಸಿರುವ ವಿಡಿಯೊ ಕಂಡು ಶಾರುಖ್‌ ಫಿದಾ ಆಗಿದ್ದಾರೆ. ಯೂಟ್ಯೂಬರ್‌ನ ಕ್ರಿಯೇಟಿವಿಟಿ ಕಂಡು ಶಾರುಖ್‌ ಟ್ವೀಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯೂಟ್ಯೂಬರ್‌ ಜವಾನ್‌ ಸಿನಿಮಾದ ದೃಶ್ಯವೊಂದನ್ನು ಮರುಸೃಷ್ಟಿ ಮಾಡಿರುವ ಬಗ್ಗೆ ಶಾರುಖ್‌ ಇದೀಗ ʻʻತುಂಬಾ ಮಾಸ್‌ ಆಗಿದೆ, ಅದ್ಭುತʼʼ ಎಂದು ಹೊಗಳಿದ್ದಾರೆ. ಶಾರುಖ್ ಖಾನ್ ಅವರ ‘ಜವಾನ್’ ಸೆಪ್ಟೆಂಬರ್ 7ರಂದು ಬಿಡುಗಡೆಯಾದಾಗಿನಿಂದ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಮಾಡುತ್ತಿದೆ. ಈಗಾಗಲೇ 1000 ಕೋಟಿ ರೂ. ಗಡಿ ದಾಟತಿದೆ. ಚಿತ್ರದಲ್ಲಿ ನಯನತಾರಾ ಮತ್ತು ವಿಜಯ್ ಸೇತುಪತಿ ಮತ್ತು ದೀಪಿಕಾ ಪಡುಕೋಣೆ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

2023 ಬಾದ್‌ಷಾ ವರ್ಷ 

ಈ ಬಾರಿ ಶಾರುಖ್‌ ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ʼಡಂಕಿʼ ಸಿನಿಮಾವನ್ನು ಫ್ಯಾನ್ಸ್‌ಗೆ ಗಿಫ್ಟ್‌ ಆಗಿ ನೀಡಲಿದ್ದಾರೆ. ʼಡಂಕಿʼ ಚಿತ್ರಕ್ಕೆ ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬೆಂಬಲ ನೀಡಿವೆ. ಚಿತ್ರವನ್ನು ರಾಜ್‌ಕುಮಾರ್ ಹಿರಾನಿ ನಿರ್ದೇಶಿಸಿದ್ದಾರೆ. ತಾಪ್ಸಿ ಪನ್ನು ನಾಯಕಿಯಾಗಿದ್ದಾರೆ. ಇದರಲ್ಲಿ ಶಾರುಖ್ ಖಾನ್ ಮತ್ತು ತಾಪ್ಸಿಯ ಹೊರತಾಗಿ ಬೊಮನ್ ಇರಾನಿ ಕೂಡ ನಟಿಸಲಿದ್ದಾರೆ.

ಇದನ್ನೂ ಓದಿ: Jawan box office collection: 9 ತಿಂಗಳಲ್ಲೇ 2000 ಕೋಟಿ ರೂ. ಕೊಳ್ಳೆ ಹೊಡೆದ ಶಾರುಖ್‌; ʻಜವಾನ್‌ʼ ಹೊಸ ದಾಖಲೆ!

ʼಬಾಲಿವುಡ್​ ಹಂಗಾಮಾ’ ವರದಿ ಮಾಡಿರುವ ಪ್ರಕಾರ ಶೂಟಿಂಗ್​ ಮುಗಿಯುವುದಕ್ಕೂ ಮುನ್ನವೇ ‘ಡಂಕಿ’ (Dunki Movie) ಚಿತ್ರದ ಒಟಿಟಿ (Dunki OTT) ಹಕ್ಕುಗಳು ಸೇಲ್​ ಆಗಿವೆ. ಅದು ಕೂಡ ಬರೋಬ್ಬರಿ 155 ಕೋಟಿ ರೂ. ಎಂದು ಹೇಳಲಾಗುತ್ತಿದೆ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.ಕ್ಲಾಸ್​ ಸಿನಿಮಾಗಳನ್ನು ಮಾಡಿ ಅವರು ಅಪಾರ ಖ್ಯಾತಿ ಗಳಿಸಿದ್ದಾರೆ. ‘ಮುನ್ನಾಭಾಯ್​ ಎಂಬಿಬಿಎಸ್​​’, ‘3 ಈಡಿಯಟ್ಸ್​’, ‘ಪಿಕೆ’, ‘ಸಂಜು’ ಚಿತ್ರಗಳ ಮೂಲಕ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. ಮೊದಲ ಬಾರಿಗೆ ‘ಡಂಕಿ’ ಸಿನಿಮಾದಲ್ಲಿ ಶಾರುಖ್​ ಖಾನ್​ ಜತೆ ರಾಜ್​ಕುಮಾರ್​ ಹಿರಾನಿ ಕೈ ಜೋಡಿಸಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ.

Continue Reading

ವೈರಲ್ ನ್ಯೂಸ್

Viral video: 101 ಕೋಟಿ ರೂ. ಮೌಲ್ಯದ ಷೇರು ಹೊಂದಿರುವ ಈ ವ್ಯಕ್ತಿ ಹೇಗೆ ಜೀವನ ಸಾಗಿಸುತ್ತಿದ್ದಾರೆ ನೋಡಿ!

ಮನೆಯ ಮುಂದೆ ಅರೆಬೆತ್ತಲೆಯಾಗಿ ವಾಕಿಂಗ್‌ ಮಾಡುತ್ತಿರುವ ಇವರು ಮಾತನಾಡಿರುವ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ. ಈ ವಿಡಿಯೋ ಎಕ್ಸ್‌ (ಟ್ವಿಟರ್‌)ನಲ್ಲಿ ಇದುವರೆಗೆ ಸುಮಾರು 4 ಲಕ್ಷ ವೀಕ್ಷಣೆ ಹಾಗೂ ನೂರಾರು ಕಾಮೆಂಟ್‌ಗಳನ್ನು ಪಡೆದುಕೊಂಡಿದೆ.

VISTARANEWS.COM


on

Edited by

rich man with 101 cr worth shares
Koo

ಹೊಸದಿಲ್ಲಿ: ಒಂದು ದೊಡ್ಡ ಚಡ್ಡಿ ಧರಿಸಿ, ಮೇಲುಮೈಯಲ್ಲಿ ಇನ್ಯಾವ ದಿರಸನ್ನೂ ಧರಿಸದೆ ಅತ್ಯಂತ ಸರಳವಾಗಿ ನಗುತ್ತಿರುವ ಈ ಹಿರಿಯ ನಾಗರಿಕರ ಆಸ್ತಿ ಮೌಲ್ಯ ಎಷ್ಟು ಎಂದು ತಿಳಿದರೆ ನೀವು ನಿಜಕ್ಕೂ ಬೆಚ್ಚಿ ಬೀಳಬಹುದು. ಹೌದು, ಇವರೇ ಹೇಳಿಕೊಳ್ಳುವಂತೆ, ಇವರ ಬಳಿ 101 ಕೋಟಿ ರೂ. ಮೌಲ್ಯದ ಷೇರುಗಳಿವೆ!

ವಿಡಿಯೋದಲ್ಲಿ ತೋರಿಸಿರುವಂತೆ ಇವರು ತಮ್ಮ ಮನೆಯ ಮುಂದೆ ನಿಂತಿದ್ದಾರೆ. ಕೊಂಕಣಿ ಹಾಗೂ ಕನ್ನಡ ಭಾಷೆಯಲ್ಲಿ ಮಾತನಾಡುತ್ತಿರುವ ಇವರ ಮನೆ ಹಳೆಯದು, ಗ್ರಾಮೀಣ ಶೈಲಿಯದ್ದು ಮತ್ತು ಸರಳವಾಗಿದೆ. ಅದರ ಮುಂದೆ ಅರೆಬೆತ್ತಲೆಯಾಗಿ ವಾಕಿಂಗ್‌ ಮಾಡುತ್ತಿರುವ ಇವರು ಮಾತನಾಡಿರುವ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ. ಈ ವಿಡಿಯೋ ಎಕ್ಸ್‌ (ಟ್ವಿಟರ್‌)ನಲ್ಲಿ ಇದುವರೆಗೆ ಸುಮಾರು 4 ಲಕ್ಷ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನೂರಾರು ಕಾಮೆಂಟ್‌ಗಳಿಗೆ ಕಾರಣವಾಗಿದೆ.

ಈ ಹಿರಿಯ ನಾಗರಿಕರು ಹೇಳಿಕೊಳ್ಳುವಂತೆ ಅವರು ಎಲ್&ಟಿ, ಅಲ್ಟ್ರಾಟೆಕ್ ಮತ್ತು ಕರ್ಣಾಟಕ ಬ್ಯಾಂಕ್ ಷೇರುಗಳನ್ನು ಹೊಂದಿದ್ದಾರೆ. ಇಷ್ಟು ಶ್ರೀಮಂತಿಕೆಯ ನಡುವೆಯೂ ಅವರು ಸರಳ ನಡವಳಿಕೆ ಹಾಗೂ ಸರಳ ಜೀವನ ಹೊಂದಿದ್ದಾರೆ ಎಂಬುದು ನೆಟ್ಟಿಗರ ಆಕರ್ಷಣೆಗೆ ಕಾರಣವಾಗಿದೆ.

ಸರಳ ಜೀವನ:

ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ರಾಜೀವ್ ಮೆಹ್ತಾ, “ಅವರು ಹೇಳಿದಂತೆ, ಹೂಡಿಕೆ ಮಾಡುವಾಗ, ನೀವು ಒಮ್ಮೆ ಅದೃಷ್ಟಶಾಲಿಯಾಗಿರಬೇಕು. ಅವರು 80 ಕೋಟಿ ರೂಪಾಯಿ ಮೌಲ್ಯದ ಎಲ್&ಟಿ ಷೇರು, 21 ಕೋಟಿ ರೂಪಾಯಿ ಮೌಲ್ಯದ ಅಲ್ಟರ್‌ಟೆಕ್ ಸಿಮೆಂಟ್ ಷೇರು, 1 ಕೋಟಿ ರೂಪಾಯಿ ಮೌಲ್ಯದ ಕರ್ಣಾಟಕ ಬ್ಯಾಂಕ್ ಷೇರುಗಳನ್ನು ಹೊಂದಿದ್ದಾರೆ. ಈಗಲೂ ಸರಳ ಜೀವನ ನಡೆಸುತ್ತಿದ್ದಾರೆʼʼ ಎಂದು ಬರೆದಿದ್ದಾರೆ.

ಈ ಪೋಸ್ಟ್ ಕುರಿತು ಪ್ರತಿಕ್ರಿಯಿಸಿದ ಕ್ಯಾಪಿಟಲ್ ಮೈಂಡ್‌ನ ಸಂಸ್ಥಾಪಕ ಮತ್ತು ಸಿಇಒ ದೀಪಕ್ ಶೆಣೈ ಅವರು, ʼʼ27,000 ಎಲ್&ಟಿ ಷೇರುಗಳ ಒಟ್ಟು ಮೌಲ್ಯ ಸುಮಾರು 8 ಕೋಟಿ ರೂ.ಗಳಾಗಿದ್ದರೆ, ಅಲ್ಟ್ರಾಟೆಕ್ ಷೇರುಗಳು ಸುಮಾರು 3.2 ಕೋಟಿ ರೂ. ಮತ್ತು ಕರ್ಣಾಟಕ ಬ್ಯಾಂಕ್ ಷೇರು ಮೌಲ್ಯ ಸುಮಾರು 10 ಲಕ್ಷ ರೂ. ಇದು ಸರಿಯಾದ ಮೊತ್ತವಾಗಿದೆ. ಅವರಿಗೆ ಇನ್ನೂ ಹೆಚ್ಚಿನ ಶಕ್ತಿ ದೊರೆಯಲಿ” ಎಂದು ಬರೆದಿದ್ದಾರೆ.

ವರ್ಷಕ್ಕೆ 6 ಲಕ್ಷ ರೂ. ಲಾಭಾಂಶ:

ಕಮೆಂಟ್‌ ಮಾಡಿರುವ ಇನ್ನೊಬ್ಬರು, ಈ 3.5 ಕೋಟಿ ಷೇರುಗಳಿಂದ ಅವರು ಪ್ರತಿವರ್ಷ 6 ಲಕ್ಷ ರೂಪಾಯಿ ಲಾಭಾಂಶವನ್ನು ಗಳಿಸುತ್ತಿರಬಹುದು ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು, ಇಷ್ಟು ಹಣವಿದ್ದರೂ ಅದನ್ನು ಸರಿಯಾಗಿ ಬಳಸದಿದ್ದರೆ ನಿಷ್ಪ್ರಯೋಜಕ ಎಂದು ವಾದಿಸಿದ್ದಾರೆ. “ಹಣವು ಇಂಧನದಂತೆ. ಟ್ಯಾಂಕ್‌ನಲ್ಲಿ ಬಹಳಷ್ಟು ಇದ್ದರೂ ಬಳಸದಿದ್ದರೆ ಏನು ಪ್ರಯೋಜನ? ಸರಳತೆ ಒಂದು ಉತ್ತಮ ವಿಷಯ. ಆದರೆ ನಿಮ್ಮ ಹಣವನ್ನು ಖರ್ಚು ಮಾಡಲು ಸಾಧ್ಯವಾಗದಿರುವುದು ಬೇರೆ. ಅವರು ಸಾಕಷ್ಟು ಹೊಂದಿರುವಾಗಲೂ ಖರ್ಚು ಮಾಡುವ ಅವಕಾಶ ಬಳಸಿಕೊಳ್ಳದಿರುವುದು ತುಂಬಾ ಕಷ್ಟಕರ” ಎಂದಿದ್ದಾರೆ.

ಇನ್ನು ಕೆಲವರು ಇದರಲ್ಲಿ ಒನ್‌ವೆಸ್ಟ್‌ಮೆಂಟ್‌ನ ಪಾಠವನ್ನು ಕಂಡಿದ್ದಾರೆ. ವಿಕೆಜೆ ಇನ್ವೆಸ್ಟ್‌ಮೆಂಟ್‌ನ ಸಿಇಒ ವಿನೋದ್ ಝವೇರಿ ಎಂಬವರು, “ಸರಿಯಾದ ಸಮಯದಲ್ಲಿ ಲಾಭವನ್ನು ಕಾಯ್ದಿರಿಸುವುದನ್ನು ಇದರಿಂದ ಕಲಿಯಬೇಕು. ಸಿಂಧಿಯಾ ಶಿಪ್ಪಿಂಗ್, ಯುನಿಟೆಕ್ ಮತ್ತು ಇನ್ನೂ ಅನೇಕ ಷೇರುಗಳು ಜಂಕ್ ಆಗಿ ಮಾರ್ಪಟ್ಟಿರುವ ಅಥವಾ ಎಲ್ಲಿಯೂ ಕಾಣದಿರುವುದರಿಂದ ಹತಾಶರಾದ ಅನೇಕರ ಬಗ್ಗೆ ನಾನು ತಿಳಿದಿದ್ದೇನೆ. ಇದರ ಅರ್ಥವೇನೆಂದರೆ ಸರಿಯಾದ ಸಮಯದಲ್ಲಿ ಷೇರು ಖರೀದಿಸುವುದು” ಎಂದಿದ್ದಾರೆ.

ಅಬ್ಬಾ! ಎಂಥ ಸರಳತೆ!:

ಮತ್ತೊಬ್ಬ ಟ್ವಿಟರ್ ಬಳಕೆದಾರರು, ಆತಂಕದ ಸಮಯದಲ್ಲಿ (ಪ್ಯಾನಿಕ್‌) ತಮ್ಮ ಷೇರುಗಳನ್ನು ಮಾರಾಟ ಮಾಡದೆ ಉಳಿದುಕೊಂಡಿದ್ದಕ್ಕಾಗಿ ಈ ಇವರನ್ನು ಶ್ಲಾಘಿಸಿದ್ದಾರೆ. “ಇದನ್ನೇ ಸರಳತೆಯ ಶಕ್ತಿ ಎಂದು ಕರೆಯಬಹುದು. ಗಾಬರಿಯ ಸಮಯದಲ್ಲಿ ಪ್ಯಾನಿಕ್ ಮಾರಾಟದಿಂದ ದೂರವಿರುವುದು ಅಗತ್ಯ. ಹೂಡಿಕೆಯ ಹಲವು ಅಂಶಗಳು ಸಂಪತ್ತಿನ ಸೃಷ್ಟಿಯ ಮಾದರಿಯನ್ನು ಬದಲಾಯಿಸಬಹುದು” ಎಂದಿದ್ದಾರೆ.

ಇವರು ಎಲ್ಲಿಯವರು, ಅವರ ಹೆಸರೇನು ಎಂಬುದು ತಿಳಿದುಬಂದಿಲ್ಲ. ಕೊಂಕಣಿ ಹಾಗೂ ಕನ್ನಡದಲ್ಲಿ ಅವರು ಮಾತನಾಡುತ್ತಿರುವುದರಿಂದ, ಗೋವಾ ಅಥವಾ ಉತ್ತರ ಕನ್ನಡದವರು ಇರಬಹುದು ಎಂದು ತರ್ಕಿಸಲಾಗಿದೆ.

ಇದನ್ನೂ ಓದಿ: Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು

Continue Reading

ದೇಶ

Push Up Challenge: ಚಲಿಸುವ ಮೆಟ್ರೋದಲ್ಲೇ ಪುಶ್‌ಅಪ್‌ ಮಾಡಿದ ಅಂಕಲ್;‌ ನಿಬ್ಬೆರಗಾದ ಯುವಕರು!

Push Up Challenge: ಮುಂಬೈ ಮೆಟ್ರೋ ರೈಲೊಂದರಲ್ಲಿ ಮಧ್ಯ ವಯಸ್ಕರೊಬ್ಬರು ಪುಶ್‌ ಅಪ್‌(pushup)ಮಾಡುತ್ತಿರುವ ವಿಡಿಯೊ ವೈರಲ್‌ ಆಗಿದೆ. ಲಕ್ಷಾಂತರ ಮಂದಿ ಇದನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Edited by

metro
Koo

ಮುಂಬೈ: ಇತ್ತೀಚಿನ ದಿನಗಳಲ್ಲಿ ಮೆಟ್ರೋ ರೈಲುಗಳು (metro train) ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಿವೆ. ದೆಹಲಿ ಮೆಟ್ರೋದಲ್ಲಿ ಇತ್ತೀಚೆಗೆ ಯುವ ಜೋಡಿ ಅಶ್ಲೀಲವಾಗಿ ವರ್ತಿಸುವ ಮೂಲಕ ಸುದ್ದಿಯಾಗಿತ್ತು. ಇದೀಗ ವೈರಲ್‌ ಆಗಿರುವ ವಿಡಿಯೊ ಒಂದರಲ್ಲಿ ಮಧ್ಯ ವಯಸ್ಕ ವ್ಯಕ್ತಿಯೊಬ್ಬರು ಪುಶ್‌ ಅಪ್‌ (Pushup)ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಇಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಈ ಪೋಸ್ಟ್‌ ನೆಟ್ಟಿಗರ ಗಮನ ಸೆಳೆದಿದೆ. ವಯಸ್ಸು ಯಾವುದಾದರೇನು ಫಿಟ್‌ ಆಗಿರುವುದು ಮುಖ್ಯ ಎಂಬ ಪಾಠವನ್ನು ಅವರು ಈ ಮೂಲಕ ತಿಳಿಸಿ ಕೊಟ್ಟಿದ್ದಾರೆ.

ವಿಡಿಯೊ ವೈರಲ್

ಈ ವಿಡಿಯೊವನ್ನು ಕಂಟೆಂಟ್‌ ಕ್ರಿಯೇಟರ್‌ ಭರತ್‌ ರಗತಿ ತಮ್ಮ ಖಾತೆಯಯಲ್ಲಿ ಹಂಚಿಕೊಂಡಿದ್ದಾರೆ. ಮುಂಬೈ ಮೆಟ್ರೋ ರೈಲೊಂದರ ಒಳಗೆ ಪ್ರಯಾಣಿಕರು ನೋಡುತ್ತಿದ್ದಂತೆ ಮೊದಲು ರಗತಿ ವಿವಿಧ ರೀತಿಯ ಪುಶ್‌ ಅಪ್‌ ಪ್ರಕಾರಗಳನ್ನು ಪ್ರದರ್ಶಿಸಿದರು. ಬಳಿಕ ಅಲ್ಲೇ ನಿಂತಿದ್ದ ಮಧ್ಯ ವಯಸ್ಕ ವ್ಯಕ್ತಿಯೊಬ್ಬರ ಬಳಿ ಪ್ರಯತ್ನಿಸಲು ಹೇಳಿದರು. ಮೊದಲು ಅವರು ನಿರಾಕರಿಸಿದರು.  ಬಳಿಕ ಪುಶ್‌ ಅಪ್‌ ಮಾಡುತ್ತ ತಮ್ಮ ಸಾಮರ್ಥ್ಯ ಪ್ರದರ್ಶಿಸತೊಡಗಿದರು. ಅವರ ಈ ಸಾಹಸವನ್ನು ಉಳಿದ ಪ್ರಯಾಣಿಕರು ನಿಬ್ಬೆರಗಾಗಿ ನೋಡುತ್ತಿದ್ದರು.

ಸ್ಟ್ರಾಂಗೆಸ್ಟ್‌ ಅಂಕಲ್‌

ಸ್ಟ್ರಾಂಗೆಸ್ಟ್‌ ಅಂಕಲ್‌ ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೊ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಈಗಾಗಲೇ ಈ ವಿಡಿಯೊವನ್ನು 3 ಲಕ್ಷಕ್ಕಿಂತ ಅಧಿಕ ಮಂದಿ ವೀಕ್ಷಿಸಿದ್ದಾರೆ. ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ʼಅಂಕಲ್‌ʼನ ಫಿಟ್ನೆಸ್‌ಗೆ ಅನೇಕರು ಫಿದಾ ಆಗಿದ್ದಾರೆ.

ತರಹೇವಾರಿ ಕಮೆಂಟ್‌

ಅನೇಕರು ಈ ವಿಡಿಯೊ ನೋಡಿ ತಮ್ಮ ಕಣ್ಣನ್ನು ತಾವೇ ನಂಬಲಾರದ ಸ್ಥಿತಿ ತಲುಪಿದ್ದಾರೆ. ಬಳಿ ಷರ್ಟ್‌, ಕಪ್ಪು ಪ್ಯಾಂಟ್‌ ಧರಿಸಿ ಇನ್‌ಶರ್ಟ್ ಮಾಡಿಕೊಂಡಿದ್ದ ಆ ವ್ಯಕ್ತಿ ಈ ರೀತಿ ಎಲ್ಲರನ್ನೂ ಬೆರಗುಗೊಳಿಸುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಇದನ್ನೇ ಅನೇಕರು ಕಮೆಂಟ್‌ ಮೂಲಕ ತಿಳಿಸಿದ್ದಾರೆ. ʼʼಇವರು ಖಂಡಿತವಾಗಿ ಸೈನಿಕರಾಗಿದ್ದಿರಬೇಕುʼʼ ಎಂದು ಒಬ್ಬರು ಹೇಳಿದ್ದಾರೆ. ʼʼಈ ಅಂಕಲ್‌ ರೀತಿ ತಾಳ್ಮೆಯಿಂದ, ಪ್ರಬುದ್ಧರಾಗಿ, ಸರಳವಾಗಿ ಇರುವುದನ್ನು ಕಲಿಯಬೇಕುʼʼ ಎಂದು ಇನ್ನೊಬ್ಬರು ಸಲಹೆ ನೀಡಿದ್ದಾರೆ. ʼʼಆರಂಭದಲ್ಲಿ ಅವರು ಸ್ವಲ್ಪ ತಯಾರಿ ನಡೆಸಿಕೊಂಡು ಬಳಿಕ ಸರಾಗವಾಗಿ ಪುಶ್‌ ಅಪ್‌ ತೆಗೆದರುʼʼ ಎಂದು ಮತ್ತೊಬ್ಬರು ಹೇಳಿದ್ದಾರೆ. ʼʼಈ ಅಂಕಲ್‌ ಯುವ ಜನತೆಗೆ ಸ್ಫೂರ್ತಿʼʼ ಎಂದು ಮಗದೊಬ್ಬರು ತಿಳಿಸಿದ್ದಾರೆ. ʼʼಕವರ್‌ ನೋಡಿ ಪುಸ್ತಕವನ್ನು ನಿರ್ಧರಿಸಬೇಡಿ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆʼʼ ಎಂದು ಕಮೆಂಟ್‌ ಮಾಡಿದ್ದಾರೆ ಇನ್ನೊಬ್ಬರು. ಅನೇಕರು ಬೆಂಕಿ ಮತ್ತು ಹೃದಯದ ಎಮೋಜಿ ಕಳುಹಿಸುವ ಮೂಲಕ ತಮ್ಮ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: Viral News: ತುಂಬಿ ಹರಿವ ಹಳ್ಳದಲ್ಲಿ ಶಾಲಾ ಬಸ್‌ ಚಲಾಯಿಸಿ ಮಕ್ಕಳ‌ ಜೀವದ ಜೊತೆಗೆ ಚಾಲಕನ ಚೆಲ್ಲಾಟ!

ಸದ್ಯ ಈ ಪುಶ್‌ ಅಪ್‌ ಚಾಲೆಂಜ್‌ ಮೊದಲೇ ಪ್ಲಾನ್‌ ಆಗಿತ್ತಾ ಅಥವಾ ಆಕಸ್ಮಿಕವಾಗಿ ಜರುಗಿದ್ದೇ ಎನ್ನುವುದು ಸ್ಪಷ್ಟವಾಗಿಲ್ಲ. ಅದೇನೇ ಇರಲಿ ಒಟ್ಟಿನಲ್ಲಿ ಅಂಕಲ್‌ ‌ಪುಶ್‌ ಅಪ್‌ ಚಾಲೆಂಜ್‌ ಸ್ವೀಕರಿಸುವ ಮೂಲಕ ತಮ್ಮ ಸಾಮರ್ಥ್ಯ ಪ್ರದರ್ಶಿಸಿ ಹಲವರ ಮನಸ್ಸು ಬದಲಾಯಿಸಿದ್ದಂತೂ ಸುಳ್ಳಲ್ಲ.

Continue Reading

ಬೆಳಗಾವಿ

Viral News: ತುಂಬಿ ಹರಿವ ಹಳ್ಳದಲ್ಲಿ ಶಾಲಾ ಬಸ್‌ ಚಲಾಯಿಸಿ ಮಕ್ಕಳ‌ ಜೀವದ ಜೊತೆಗೆ ಚಾಲಕನ ಚೆಲ್ಲಾಟ!

ಭಾರಿ ಮಳೆಗೆ ಹಳ್ಳದಿಂದ ರಸ್ತೆಗೆ ನೀರು ನುಗ್ಗಿದ್ದು, ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನೀರಿನಲ್ಲಿ ಚಾಲಕ ಅತಿಯಾದ ಆತ್ಮವಿಶ್ವಾಸದಿಂದ ಬಸ್‌ ಚಲಾಯಿಸಲು ಮುಂದಾಗಿದ್ದಾನೆ.

VISTARANEWS.COM


on

Edited by

bus in river
Koo

ಚಿಕ್ಕೋಡಿ: ತುಂಬಿ ಹರಿವ ಹಳ್ಳದಲ್ಲಿ ಶಾಲಾ ಬಸ್‌ (School bus) ಚಲಾಯಿಸಿ ಮಕ್ಕಳ‌ ಜೀವದ ಜೊತೆಗೆ ಚಾಲಕ ಚೆಲ್ಲಾಟ ನಡೆಸಿದ ಘಟನೆ ಬೆಳಗಾವಿ (Belagavi news) ಜಿಲ್ಲೆಯ ಹುಕ್ಕೇರಿ ತಾಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ (Viral News) ನಡೆದಿದೆ.

ಎಲಿಮುನ್ನೋಳಿ ಗ್ರಾಮದ ಬೀರೇಶ್ವರ ಶಿಕ್ಷಣ ಸಂಸ್ಥೆಯ ಶಾಲಾ ವಾಹನ 20ಕ್ಕೂ ಹೆಚ್ಚು ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿತ್ತು. ಭಾರಿ ಮಳೆಗೆ ಹಳ್ಳದಿಂದ ರಸ್ತೆಗೆ ನೀರು ನುಗ್ಗಿದ್ದು, ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನೀರಿನಲ್ಲಿ ಚಾಲಕ ಅತಿಯಾದ ಆತ್ಮವಿಶ್ವಾಸದಿಂದ ಬಸ್‌ ಚಲಾಯಿಸಲು ಮುಂದಾಗಿದ್ದಾನೆ. ಅರ್ಧ ದಾರಿಯಲ್ಲಿ ಗುಂಡಿಯಲ್ಲಿ ಬಸ್‌ ಅರ್ಧ ಮಗುಚಿಕೊಂಡಿದೆ. ಮಕ್ಕಳನ್ನು ಪಾರು ಮಾಡಲಾಗಿದೆ.

ಭಾರಿ ಅನಾಹುತಕ್ಕೆ ಕಾರಣವಾಗಬಹುದಾಗಿದ್ದ ಚಾಲಕನ ಉಡಾಫೆ ಚಾಲನೆಯನ್ನು ಗ್ರಾಮಸ್ಥರು ಖಂಡಿಸಿ ಆತನನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ನಿನ್ನೆ ಹುಕ್ಕೇರಿ ತಾಲೂಕಿನ ವಿವಿಧೆಡೆ ಭಾರಿ ಮಳೆ ಸುರಿದಿದ್ದು, ಹಳ್ಳಗಳು ತುಂಬಿಕೊಂಡಿವೆ. ಭಾರಿ ಮಳೆಯಿಂದ ಜನ‌ ಜೀವನ ಅಸ್ತವ್ಯಸ್ತಗೊಂಡಿದೆ.

ಇದನ್ನೂ ಓದಿ: Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?

Continue Reading
Advertisement
Virat kohli
ಕ್ರಿಕೆಟ್6 mins ago

ind vs Aus : ಆಸೀಸ್​ ವಿರುದ್ಧ ಆರಂಭಿಕರಾಗಿ ಆಡಲಿದ್ದಾರೆ ರೋಹಿತ್​- ವಿರಾಟ್​ ಜೋಡಿ

Election officers attacked in Ramanagara
ಕರ್ನಾಟಕ26 mins ago

Rowdism in Ramanagara : ರೋಡಲ್ಲೇ ರೌಡಿಸಂ; ಚುನಾವಣಾಧಿಕಾರಿಗಳ ಮೇಲೆ ಕಾರು ಹಾಯಿಸಿ ಬ್ಯಾಲೆಟ್‌ ಪೇಪರ್‌ ಲೂಟಿ

Kolara MP Muniswamy complaint to governor of Karnataka
ಕರ್ನಾಟಕ40 mins ago

MP Muniswamy : ಸಚಿವ ಬೈರತಿ, ಶಾಸಕ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಸಂಸದ ಮುನಿಸ್ವಾಮಿ

Nepal Team
ಕ್ರಿಕೆಟ್52 mins ago

Asian Games 2023 : ಏಷ್ಯನ್ ಗೇಮ್ಸ್​ನಲ್ಲಿ ನೇಪಾಳ ತಂಡ ಸೃಷ್ಟಿಸಿದ ಮಾಡಿದ ದಾಖಲೆಗಳ ವಿವರ ಇಲ್ಲಿದೆ

Malayalam Film 2018
South Cinema56 mins ago

Oscars 2024: ‘ಆಸ್ಕರ್‌’ಗೆ ಪ್ರವೇಶ ಪಡೆದ ಮಲಯಾಳಂ ಸಿನಿಮಾ; ನೀವೂ ಇದನ್ನು ನೋಡಿರುತ್ತೀರಿ!

Mulayam Singh Yadav Statue
ದೇಶ1 hour ago

Mulayam Singh Yadav: ಮುಲಾಯಂ ಸಿಂಗ್‌ ಮೂರ್ತಿ ತೆರವು; ಯೋಗಿ ನಾಡಲ್ಲಿ ರೂಲ್ಸ್‌ ಎಂದರೆ ರೂಲ್ಸ್!

Parineeti Chopra with Raghav
ಬಾಲಿವುಡ್1 hour ago

Parineeti Chopra: ‘ಓ ಪ್ರಿಯಾ’; ಪತಿಗಾಗಿ ವಿಶೇಷ ಹಾಡು ರೆಕಾರ್ಡ್‌ ಮಾಡಿದ ಪರಿಣಿತಿ ಚೋಪ್ರಾ!

demat account
ಮನಿ ಗೈಡ್1 hour ago

Demat Account: ಡಿಮ್ಯಾಟ್ ಖಾತೆದಾರರಿಗೆ ಗುಡ್‌ ನ್ಯೂಸ್:‌ ನಾಮಿನಿ ಘೋಷಣೆಗೆ ಸಮಯ ವಿಸ್ತರಣೆ

HD Kumaraswamy Press meet vs congress government
ಕರ್ನಾಟಕ1 hour ago

BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

ODI AUS
Live News1 hour ago

ind vs Aus : ಡ್ರಿಂಕ್ಸ್​ ಬ್ರೇಕ್​ ವೇಳೆ 1 ವಿಕೆಟ್​ಗೆ 131 ರನ್ ಬಾರಿಸಿದ ಆಸ್ಟ್ರೇಲಿಯಾ ತಂಡ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

bangalore bandh
ಕರ್ನಾಟಕ1 day ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

dina bhavishya
ಪ್ರಮುಖ ಸುದ್ದಿ10 hours ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ2 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌