Viral Video: ಯುವತಿ ತಲೆಗೆ ಬಲವಂತವಾಗಿ ಹಿಜಾಬ್‌ ಹಾಕಿದ ಪಾಕ್‌ ಯುವಕ; ಮುಂದೇನಾಯ್ತು? - Vistara News

ವೈರಲ್ ನ್ಯೂಸ್

Viral Video: ಯುವತಿ ತಲೆಗೆ ಬಲವಂತವಾಗಿ ಹಿಜಾಬ್‌ ಹಾಕಿದ ಪಾಕ್‌ ಯುವಕ; ಮುಂದೇನಾಯ್ತು?

Viral Video: ಪಾಕಿಸ್ತಾನದಲ್ಲಿ ಮಹಿಳೆಯರು ಹೇಗಿರಬೇಕು, ಯಾವ ರೀತಿ ಉಡುಗೆಗಳನ್ನು ಧರಿಸಬೇಕು ಎಂದು ಹೇಳಲು ಮುಂದಾದ ವ್ಯಕ್ತಿಗೆ ಯೂಟ್ಯೂಬರ್ ಮಹಿಳೆ ನೀಡಿದ ದಿಟ್ಟ ಉತ್ತರವೇನು ಗೊತ್ತೇ?

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಸ್ಲಾಮಾಬಾದ್: ಯೂಟ್ಯೂಬರ್ (YouTuber) ಮಹಿಳೆಗೆ ಪಾಕಿಸ್ತಾನದ (Pakistan) ಯುವಕನೊಬ್ಬ ಬಲವಂತವಾಗಿ ತಲೆಗೆ ಸ್ಕಾರ್ಫ್ (scarf) ಹೊದಿಸಲು ಪ್ರಯತ್ನಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (viral video) ಆಗಿದ್ದು, ಲಕ್ಷಾಂತರ ಮಂದಿ ಇದನ್ನು ವೀಕ್ಷಿಸಿ ಯೂಟ್ಯೂಬರ್ ಶೈಲಾ ಖಾನ್ ನ (YouTuber Shaila Khan) ದಿಟ್ಟತನದ ಮಾತಿಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಯೂಟ್ಯೂಬರ್ ಶೈಲಾ ಖಾನ್ ದಾರಿಹೋಕರನ್ನು ಸಂದರ್ಶನ ಮಾಡುತ್ತಿರುತ್ತಾರೆ. ಈ ವೇಳೆ ವ್ಯಕ್ತಿಯೊಬ್ಬ ಆಕೆಗೆ ಎದುರಾಗಿ ಇಸ್ಲಾಮಿಕ್ ದೇಶದಲ್ಲಿ ಮಾಡಬೇಕಾದ ಸರಿಯಾದ ಕೆಲಸವನ್ನು ಹೇಳಲು ನಿರ್ಧರಿಸುತ್ತಾನೆ.

ಆತ ಯೂಟ್ಯೂಬರ್ ಶೈಲಾ ಖಾನ್ ಶಾಲು, ಸ್ಕಾರ್ಫ್ ಅನ್ನು ತಲೆಗೆ ಸುತ್ತಿಕೊಳ್ಳದೆ ತನ್ನ ಮುಂದೆ ನಿಂತಿರುವುದು ಆಕೆ ಮಾಡಿರುವ “ಅಪರಾಧ” ಎನ್ನುವಂತ ಮಾತನಾಡುತ್ತಾನೆ. ಮಹಿಳೆ ಹೇಗೆ ಡ್ರೆಸ್ ಮಾಡಿಕೊಳ್ಳಬೇಕು ಎಂಬ ಬಗ್ಗೆ ಆತ ಟೀಕೆಗಳನ್ನು ಮುಂದುವರಿಸುತ್ತಾನೆ. ಅಷ್ಟೇ ಅಲ್ಲದೇ ತನ್ನ ಕುತ್ತಿಗೆಯಲ್ಲಿದ್ದ ಶಾಲ್ ನಿಂದ ಆಕೆಯ ತಲೆಯನ್ನು ಮುಚ್ಚಲು ಪ್ರಯತ್ನಿಸುತ್ತಾನೆ. ಎಕ್ಸ್ ನಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

ಯೂಟ್ಯೂಬರ್ ಶೈಲಾ ಖಾನ್ ಬೀದಿಯಲ್ಲಿ ನಿಂತಿದ್ದ ಕೆಲವು ಜನರಲ್ಲಿ ಸಂದರ್ಶಿಸುತ್ತಿರುತ್ತಾರೆ. ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಅವರ ಅಭಿಪ್ರಾಯಗಳನ್ನು ಕೇಳುತ್ತಿರುತ್ತಾರೆ. ಕೆಲವು ಸೆಕೆಂಡುಗಳ ಬಳಿಕ ವ್ಯಕ್ತಿಯೊಬ್ಬ ಆಕೆಯ ಬಳಿ ಮಾತನಾಡಲು ಮುಂದಾಗಿದ್ದಾನೆ. ನೀನು ಇಸ್ಲಾಮಿಕ್ ರಾಷ್ಟ್ರದಲ್ಲಿರುವೆ. ಅಲ್ಲಾನ ಆದೇಶಗಳನ್ನು ಅನುಸರಿಸಬೇಕು ಎಂದು ಹೇಳುತ್ತಾನೆ.

ನೀವು ನಿಮ್ಮ ತಲೆಯನ್ನು ಮುಚ್ಚಿಕೊಳ್ಳದೆ ಇಸ್ಲಾಮಿಕ್ ದೇಶದಲ್ಲಿ ನನ್ನ ಮುಂದೆ ನಿಂತಿದ್ದೀರಿ ಎಂದು ಆ ವ್ಯಕ್ತಿ ಯೂಟ್ಯೂಬರ್‌ ಶೈಲಾ ಖಾನ್ ಗೆ ಹೇಳುತ್ತಾನೆ. ಅನಂತರ, ಅವನು ಅವಳ ತಲೆಗೆ ಶಾಲನ್ನು ಸುತ್ತಲು ಪ್ರಯತ್ನಿಸುತ್ತಿರುವಾಗ ಶೈಲಾ ಖಾನ್ ಅದನ್ನು ತೀವ್ರವಾಗಿ ವಿರೋಧಿಸುತ್ತಾರೆ ಮತ್ತು ತಕ್ಷಣವೇ ಅವನಿಗೆ ತನ್ನ ಒಪ್ಪಿಗೆ ಇದಕ್ಕೆ ಎಷ್ಟು ಮುಖ್ಯ ಎಂಬುದನ್ನು ಹೇಳುತ್ತಾಳೆ. ಆತನ ಕೃತ್ಯವನ್ನು ಖಂಡಿಸಿದ ಆಕೆ, ಇಸ್ಲಾಮಿಕ್ ನಂಬಿಕೆಗಳು ಮತ್ತು ನೈತಿಕತೆಗಳು ಯಾವಾಗಲೂ ದುಪಟ್ಟಾ ಧರಿಸಲು ಏಕೆ ಸೀಮಿತವಾಗಿದೆ ಎಂದು ಪ್ರಶ್ನಿಸಿದ್ದಾಳೆ.


ಶಾಲನ್ನು ಆತನಿಗೆ ಹಿಂದಿರುಗಿಸುತ್ತಾ, ಅವಳು ತನ್ನದೇ ಆದ ಶಿರಸ್ತ್ರಾಣವನ್ನು ಹೊಂದಿದ್ದಾಳೆ ಎಂದು ಪ್ರತಿಪಾದಿಸುತ್ತಾಳೆ. ಅವಳು ತನ್ನ ತಲೆಯನ್ನು ಮುಚ್ಚಲು ಬಯಸುತ್ತಾಳೆಯೇ ಎಂಬುದಕ್ಕೆ ಅದು ತನ್ನ “ನಿರ್ಧಾರ” ಎಂದು ಹೇಳುತ್ತಾಳೆ. ಅವಳ ಅನುಮತಿಯಿಲ್ಲದೆ ಅವನು ಅವಳನ್ನು ಮುಟ್ಟಿದ್ದೇ ದೊಡ್ಡ ಪಾಪ ಎಂದು ಅವಳು ಅವನಿಗೆ ಹೇಳುತ್ತಾಳೆ. ಇಸ್ಲಾಂ ನಿಮಗೆ ಕಲಿಸುವುದು ಇದನ್ನೇ? ಎಂದು ಅವಳು ಆತನನ್ನು ಪ್ರಶ್ನಿಸಿದ್ದಾಳೆ.

ಸಾಮಾಜಿಕ ಕಿರುಕುಳದ ಆಧಾರದ ಮೇಲೆ ತನ್ನ ನಡವಳಿಕೆಗಾಗಿ ಆತನನ್ನು ಬಂಧಿಸಬಹುದು ಎಂದು ಯೂಟ್ಯೂಬರ್ ಶೈಲಾ ಖಾನ್ ಆತನನ್ನು ಎಚ್ಚರಿಸುತ್ತಾಳೆ. ಆದರೆ ಆತ ತಾನು ಮಾಡಿರುವುದು ತಪ್ಪು ಎಂದು ಒಪ್ಪಿಕೊಳ್ಳಲು ನಿರಾಕರಿಸುತ್ತಾನೆ ಮತ್ತು ತನ್ನದೇ ಸರಿ ಎಂದು ಅಭಿಪ್ರಾಯ ಮಂಡಿಸುತ್ತಾನೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋ ಗೆ ಹಲವಾರು ಮಂದಿ ಕಾಮೆಂಟ್ ಮಾಡಿದ್ದಾರೆ. ಮತಾಂಧ ವ್ಯಕ್ತಿಯ ವಿರುದ್ಧ ದಿಟ್ಟವಾಗಿ ಮಾತನಾಡಿದ ಯೂಟ್ಯೂಬರ್ ಮಹಿಳೆಯನ್ನು ಸಾಕಷ್ಟು ಮಂದಿ ಹೊಗಳಿದ್ದಾರೆ.

ಒಬ್ಬ ಬಳಕೆದಾರ “ಬ್ರೇವ್ ಪಾಕಿಸ್ತಾನಿ ಗರ್ಲ್ ಯೂಟ್ಯೂಬರ್” ಎಂದು ಹೇಳಿದ್ದು, ಮತ್ತೊಬ್ಬ “ತಮ್ಮ ಪರವಾಗಿ ನಿಂತಿರುವ ಹುಡುಗಿಗೆ ಹ್ಯಾಟ್ಸ್ ಆಫ್!! ಅಂತಹ ದೇಶದಲ್ಲಿ ಹಾಗೆ ಮಾಡಲು ಧೈರ್ಯ ಬೇಕು!! ಎಂದು ಕಾಮೆಂಟ್ ಮಾಡಿದ್ದಾನೆ. ಪಾಕಿಸ್ತಾನದಲ್ಲಿ ಈ ವ್ಯಕ್ತಿಯ ವರ್ತನೆ ಎಲ್ಲಿಯವರೆಗೆ ವ್ಯಾಪಕವಾಗಿದೆಯೋ ಅಲ್ಲಿಯವರೆಗೆ ಅದು ಕೆಳಗಿಳಿಯುತ್ತದೆ ಮತ್ತು ಹೊರಗಿರುತ್ತದೆ ಎಂದು ಮತ್ತೊಬ್ಬ ಬಳಕೆದಾರ ಕಾಮೆಂಟ್ ಮಾಡಿದ್ದಾನೆ.

ಇದನ್ನೂ ಓದಿ: Viral Video: ಎಸಿ ಕೋಚ್ ಸಿಗದಕ್ಕೆ ಸಿಟ್ಟಿಗೆದ್ದು ರೈಲಿನ ಬಾಗಿಲಿನ ಗಾಜನ್ನೇ ಪುಡಿ ಪುಡಿ ಮಾಡಿದ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

MS Dhoni: ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.

VISTARANEWS.COM


on

MS Dhoni
Koo

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಹಾಗೂ ಮಹೇಂದ್ರ ಸಿಂಗ್​ ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಕೆಲವು ದಿನಗಳ ಹಿಂದೆ ಎಸ್ ರಾಮದಾಸ್ ಅವರು ಮಗನ ಬಳಿ ಮಾತನಾಡುವ ವೇಳೆ, ಚೆನ್ನೈ ಸೂಪರ್ ಕಿಂಗ್ಸ್​ನ ಪಂದ್ಯ ಮತ್ತು ಧೋನಿಯನ್ನು ನೋಡಲು ರಾಜಧಾನಿ ದೆಹಲಿಯವರೆಗೂ ನಡೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದರು. ಧೋನಿಯನ್ನು ಮತ್ತು ಚೆನ್ನೈ ಪಂದ್ಯವನ್ನು ನೋಡುವ ಅಪ್ಪನ ಈ ಬಯಕೆಯನ್ನು ಈಡೇರಿಸುವುದಾಗಿ ಮಗ ಮಾತು ಕೊಟ್ಟಿದ್ದರು. ಚೆನ್ನೈನಲ್ಲಿ ನಡೆಯುವ ಪಂದ್ಯದ ಟಿಕೆಟ್​ ಖರೀದಿಸಿ ಪಂದ್ಯ ತೋರಿಸುತ್ತೇನೆ ಎಂದು ಹೇಳಿದ್ದರು. ಕೊಟ್ಟ ಮಾತಿನಂತೆ ಮಗ ಅಪ್ಪನಿಗೆ ಚೆಪಾಕ್​ನಲ್ಲಿ ನಡೆದ ಚೆನ್ನೈ ಮತ್ತು ಪಂಜಾಬ್​ ವಿರುದ್ಧದ ಪಂದ್ಯಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪಂದ್ಯ ಮುಕ್ತಾಯಕ ಬಳಿಕ ಈ ವಿಶೇಷ ಅಭಿಮಾನೊಯನ್ನು ಧೋನಿ ಡ್ರೆಸ್ಸಿಂಗ್​ ರೋಮ್​ನಲ್ಲಿ ಭೇಟಿಯಾಗಿದ್ದಾರೆ. ಧೋನಿ ತಮ್ಮ ಜೆರ್ಸಿಯಲ್ಲಿ “ನಿಮ್ಮ ಈ ಬೆಂಬಲಕ್ಕೆ ಧನ್ಯವಾದಗಳು ತಾತ” ಎಂದು ಬರೆದು ತಮ್ಮ ಹಸ್ತಾಕ್ಷರ ಹಾಕಿ ಜೆರ್ಸಿಯನ್ನು ರಾಮದಾಸ್​ಗೆ ನೀಡಿದ್ದಾರೆ. ಇದೇ ವೇಳೆ ರಾಮದಾಸ್ ನಿಮ್ಮನ್ನು ನೋಡಿ ತುಂಬಾ ಖಷಿಯಾಯಿತು. ನೀವೊಬ್ಬರು ಗ್ರೇಟ್​ ಕ್ರಿಕೆಟರ್​ ಎಂದು ಹಾರೈಸಿದರು. ರಾಮ್​ದಾಸ್​ ಜತೆ ಅರ ಪತ್ನಿಯೂ ಜತೆಗಿದ್ದರು. ಚೆನ್ನೈ ಫ್ರಾಂಚೈಸಿ ವತಿಯಿಂದ ರಾಮದಾಸ್ 103 ಎಂದು ಬರೆದ ಚೆನ್ನೈ ತಂಡದ ಜೆರ್ಸಿಯನ್ನು ವಿಶೇಷ ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

ಬ್ರಿಟಿಷ್ ಮಿಲಿಟರಿಯ ಸೈನ್ಯದ ಭಾಗವಾಗಿದ್ದ ರಾಮದಾಸ್ ಕ್ರಿಕೆಟ್ ಆಡಲು ಹೆದರುತ್ತಿದ್ದರಂತೆ. ಆದರೆ ಸಿಎಸ್‌ಕೆ ಜರ್ಸಿ ಧರಿಸಿ ಟಿವಿ ಮುಂದೆ ಕುಳಿತು ಐಪಿಎಲ್ ಆಟವನ್ನು ನೋಡಲು ಇಷ್ಟಪಡುತ್ತೇನೆ. ಒಮ್ಮೆಯಾದರೂ ಧೋನಿಯನ್ನು ಭೇಟಿಯಾಗಬೇಕು ಎಂದು ಹೇಳಿದ್ದ ವಿಡಿಯೊವನ್ನು ಕೂಡ ಚೆನ್ನೈ ಫ್ರಾಂಚೈಸಿ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿತ್ತು.

ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

Continue Reading

ಕೋಲಾರ

Drowned In water : ಈಜಲು ಕೃಷಿ ಹೊಂಡಕ್ಕೆ ಜಿಗಿದ; ಸಾವಿನ ಕೊನೆ ಕ್ಷಣವನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ತಂಗಿ!

Drowned In water : ಕೃಷಿ ಹೊಂಡದಲ್ಲಿ ಈಜಲು ಹೋದ ವ್ಯಕ್ತಿಯೊಬ್ಬ ದಾರುಣ ಅಂತ್ಯ ಕಂಡಿದ್ದಾನೆ. ಕೃಷಿ ಹೊಂಡದಲ್ಲಿ ಅಣ್ಣ ಈಜುವುದನ್ನು ತಂಗಿ ಮೊಬೈಲ್‌ನಲ್ಲಿ ವಿಡಿಯೊ ಮಾಡುವಾಗಲೇ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾನೆ.

VISTARANEWS.COM


on

By

Drowned in water
Koo

ಕೋಲಾರ : ಕೋಲಾರ ತಾಲೂಕಿನ ನಾಗನಾಳ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ (Drowned In water) ಆಕಸ್ಮಿಕವಾಗಿ ಮುಳುಗಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೊನ್ನೆ ಬುಧವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್ ಗೌಡ (26) ಮೃತ ದುರ್ದೈವಿ.

ಗೌತಮ್‌ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗನಾಳ ಗ್ರಾಮಕ್ಕೆ ಆಗಮಿಸಿದ್ದ. ಕುಟುಂಬದವರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ. ಒಂದು ಬದಿ ಮಕ್ಕಳಿಬ್ಬರು ಈಜುತ್ತಿದ್ದರು. ಈ ಕಡೆ ತಂಗಿಗೆ ಮೊಬೈಲ್‌ನಲ್ಲಿ ಕೊಟ್ಟು ಈಜುವುದನ್ನು ವಿಡಿಯೊ ಮಾಡು ಎಂದು ತಿಳಿಸಿದ್ದ.

ಬಳಿಕ ಗೌತಮ್‌ ಕೃಷಿ ಹೊಂಡಕ್ಕೆ ಜಿಗಿದು ಈಜುತ್ತಿದ್ದ. ಇತ್ತ ತಂಗಿಯು ವಾಪಸ್‌ ಬಾ ಎಂದು ಕೂಗಿದ್ದಾಳೆ. ಆಕೆಯ ಮಾತನ್ನು ಕೇಳಿಸಿಕೊಳ್ಳದ ಗೌತಮ್‌ ಈಜುತ್ತಾ ಕೊಂಚ ದೂರ ಹೋಗಿದ್ದಾನೆ. ಅಷ್ಟೇ ನೋಡ ನೋಡುತ್ತಿದ್ದಂತೆಯೇ ನೀರಿನಲ್ಲಿ ಉಸಿರುಗಟ್ಟಿ ಪ್ರಾಣಬಿಟ್ಟಿದ್ದಾನೆ.

ಸರಿಯಾಗಿ ಈಜು ಬಾರದಿದ್ದರು ಈಜಲು ಹೋಗಿ ನೀರುಪಾಲಾಗಿದ್ದಾನೆ. ಗೌತಮ್‌ ನೀರಿನಲ್ಲಿ ಮುಳುಗುತ್ತಿರುವ ಎಲ್ಲವೂ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸದ್ಯ ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Elephant attack : ನಿಲ್ಲದ ಕಾಡು ಪ್ರಾಣಿಗಳ ಹಾವಳಿ; ಶಿವಮೊಗ್ಗದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

ಲಕ್ನೋ: ಮುಸ್ಲಿಂ ಹೆಣ್ಣು ಮಕ್ಕಳ ಜೀವನಕ್ಕೇ ಕುತ್ತು ತರುತ್ತಿದ್ದ ತ್ರಿವಳಿ ತಲಾಕ್ (Triple Talaq) ಎಂಬ ಅನಿಷ್ಟ ಪದ್ಧತಿಯನ್ನು ಕೇಂದ್ರ ಸರ್ಕಾರ ಈಗಾಗಲೇ ನಿಷೇಧಿಸಿದೆ. ಆದರೂ ಕಾನೂನು ಕಣ್ಣು ತಪ್ಪಿಸಿ ಹಲವರು ಇನ್ನೂ ಈ ಅನಾಚಾರವನ್ನು ಮುಂದುವರಿಸುತ್ತಿದ್ದಾರೆ ಎನ್ನುವುದಕ್ಕೆ ಇಲ್ಲಿದೆ ಉದಾಹರಣೆ. ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿದ್ದಾನೆ.

ಏಪ್ರಿಲ್‌ 29ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಮೊಹಮ್ಮದ್‌ ಅರ್ಷದ್‌ ಹೀಗೆ ತ್ರಿವಳಿ ತಲಾಕ್‌ ನೀಡಿದ ಭೂಪ. ಮೊಹಮ್ಮದ್ ಅರ್ಷದ್ ತನ್ನ ಪತ್ನಿ ಅಫ್ಸಾನಾ (26) ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ ಈ ಘಟನೆ ನಡೆದಿದೆ.

ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರ್ಷದ್ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ರೈಲಿನಿಂದ ಇಳಿದಿದ್ದಾನೆ. ಹೋಗುವ ಮುನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ ಎಂದು ಮೂಲಗಳು ತಿಳಿಸಿವೆ. ಅನಿರೀಕ್ಷಿತ ಆಘಾತದಿಂದ ತಬ್ಬಿಬ್ಬಾದ ಅಫ್ಸಾನಾ ಕೂಡಲೇ ರೈಲ್ವೇ ಪೊಲೀಸರನ್ನು ಸಂಪರ್ಕಿಸಿದ್ದರು. ಪೊಲೀಸರು ಅವರನ್ನು ಕಾನ್ಪುರ್ ದೆಹತ್‌ನ ಪುಖ್ರಾಯನ್‌ಗೆ ಕಳುಹಿಸಿದರು. ಅಲ್ಲಿಂದ ಅವರು ಭೋಪಾಲ್‌ಗೆ ರೈಲು ಹತ್ತಿದ್ದರು. ಕೊನೆಗೆ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಮೊಹಮ್ಮದ್ ಅರ್ಷದ್‌ಗಾಗಿ ಹುಡುಕಾಟ ನಡೆಸಿದ್ದಾರೆ.

ಭೋಪಾಲ್‌ನ ಖಾಸಗಿ ಕಂಪನಿಯೊಂದರಲ್ಲಿ ಕಂಪ್ಯೂಟರ್‌ ಎಂಜಿನಿಯರ್‌ ಆಗಿರುವ ಅರ್ಷದ್‌ ಈ ವರ್ಷದ ಜನವರಿ 12ರಂದು ರಾಜಸ್ಥಾನದ ಕೋಟದ ಅಫ್ಸಾನಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ. ಮ್ಯಾಟ್ರಿಮೋನಿ ಜಾಹೀರಾತು ಮೂಲಕ ಪದವೀಧರೆಯಾದ ಅಫ್ಸಾನಾ ಮತ್ತು ಅರ್ಷದ್‌ ಪರಸ್ಪರ ಪರಿಚಿತರಾಗಿದ್ದರು. ದಂಪತಿ ಕಳೆದ ವಾರ ಪುಖ್ರಾಯನ್‌ನಲ್ಲಿರುವ ಅರ್ಷದ್‌ನ ಪೂರ್ವಜರ ಮನೆಗೆ ಭೇಟಿ ನೀಡಿದಾಗ ಅಫ್ಸಾನಾ ಅವರಿಗೆ ಆಘಾತಕಾರಿ ಸತ್ಯವೊಂದು ತಿಳಿಯಿತು. ಅರ್ಷದ್‌ಗೆ ಅದಾಗಲೇ ಮದುವೆಯಾಗಿತ್ತು ಎನ್ನುವುದು ಅಫ್ಸಾನಾ ಅವರಿಗೆ ಆಗಷ್ಟೇ ತಿಳಿದು ಬಂದಿತ್ತು.

ಈ ಬಗ್ಗೆ ಅಫ್ಸಾನಾ ಪ್ರಶ್ನಿಸಿದಾಗ ಕಿರುಕುಳ ಆರಂಭವಾಗಿತ್ತು. ಅರ್ಷದ್‌ ಮತ್ತು ಆತನ ತಾಯಿ ವರದಕ್ಷಿಣೆ ನೀಡುವಂತೆ ಪೀಡಿಸತೊಡಗಿದರು ಎಂದು ಅಫ್ಸಾನಾ ದೂರಿನಲ್ಲಿ ತಿಳಿಸಿದ್ದಾರೆ. ಕೊನೆಗೆ ರೈಲಿನಲ್ಲಿ ಆತ ತ್ರಿವಳಿ ತಲಾಕ್‌ ಕೊಟ್ಟು ನಾಪತ್ತೆಯಾಗಿದ್ದಾನೆ ಎಂದು ಅಫ್ಸಾನಾ ವಿವರಿಸಿದ್ದಾರೆ.

ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ

ಸದ್ಯ ಈ ವಿಚಾರ ಸದ್ದು ಮಾಡುತ್ತಿದೆ. ಅಫ್ಸಾನಾ ಈ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ ಸಲ್ಲಿಸಿ ತನಗೆ ನೆರವಾಗಬೇಕು ಎಂದು ಕೋರಿದ್ದಾರೆ. ಹೀಗೆ ತ್ರಿವಳಿ ತಲಾಕ್‌ ಕೊಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ. ಸರ್ಕಲ್‌ ಆಫೀಸರ್‌ ಪ್ರಿಯಾ ಸಿಂಗ್‌ ಈ ಬಗ್ಗೆ ಮಾತನಾಡಿ, ʼʼಅಫ್ಸಾನಾ ಅವರ ದೂರಿನ ಮೇರೆಗೆ ಅರ್ಷಾದ್‌, ಆತನ ಮಾವ ಅಖೀಲ್‌, ತಂದೆ ನಫೀಸುಲ್ ಹಸನ್ ಮತ್ತು ತಾಯಿ ಪರ್ವೀನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೆತ್ತಿಕೊಳ್ಳಲಾಗಿದೆʼʼ ಎಂದು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Triple Talaq: ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

Triple Talaq: ಮುಸ್ಲಿಂ ಹೆಣ್ಣು ಮಕ್ಕಳ ಜೀವನಕ್ಕೇ ಕುತ್ತು ತರುತ್ತಿದ್ದ ತ್ರಿವಳಿ ತಲಾಕ್ ಅನ್ನು ಕೇಂದ್ರ ಸರ್ಕಾರ ಈಗಾಗಲೇ ನಿಷೇಧಿಸಿದೆ. ಆದರೂ ಸಲ್ಲೊಂದು ಇಲ್ಲೊಂದು ಇಂತಹ ಪ್ರಕರಣ ವರದಿಯಾಗುತ್ತಲೇ ಇರುತ್ತದೆ. ಅದಕ್ಕೆ ಇಲ್ಲಿದೆ ಉತ್ತಮ ಉದಾಹರಣೆ. ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿದ್ದಾನೆ. 28 ವರ್ಷದ ಮೊಹಮ್ಮದ್‌ ಅರ್ಷದ್‌ ಹೀಗೆ ತ್ರಿವಳಿ ತಲಾಕ್‌ ನೀಡಿದ ಭೂಪ. ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರ್ಷದ್ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ರೈಲಿನಿಂದ ಇಳಿದಿದ್ದಾನೆ. ಹೋಗುವ ಮುನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ ಎಂದು ಮೂಲಗಳು ತಿಳಿಸಿವೆ. ಸದ್ಯ ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

Triple Talaq
Koo

ಲಕ್ನೋ: ಮುಸ್ಲಿಂ ಹೆಣ್ಣು ಮಕ್ಕಳ ಜೀವನಕ್ಕೇ ಕುತ್ತು ತರುತ್ತಿದ್ದ ತ್ರಿವಳಿ ತಲಾಕ್ (Triple Talaq) ಎಂಬ ಅನಿಷ್ಟ ಪದ್ಧತಿಯನ್ನು ಕೇಂದ್ರ ಸರ್ಕಾರ ಈಗಾಗಲೇ ನಿಷೇಧಿಸಿದೆ. ಆದರೂ ಕಾನೂನು ಕಣ್ಣು ತಪ್ಪಿಸಿ ಹಲವರು ಇನ್ನೂ ಈ ಅನಾಚಾರವನ್ನು ಮುಂದುವರಿಸುತ್ತಿದ್ದಾರೆ ಎನ್ನುವುದಕ್ಕೆ ಇಲ್ಲಿದೆ ಉದಾಹರಣೆ. ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿದ್ದಾನೆ.

ಏಪ್ರಿಲ್‌ 29ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಮೊಹಮ್ಮದ್‌ ಅರ್ಷದ್‌ ಹೀಗೆ ತ್ರಿವಳಿ ತಲಾಕ್‌ ನೀಡಿದ ಭೂಪ. ಮೊಹಮ್ಮದ್ ಅರ್ಷದ್ ತನ್ನ ಪತ್ನಿ ಅಫ್ಸಾನಾ (26) ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ ಈ ಘಟನೆ ನಡೆದಿದೆ.

ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರ್ಷದ್ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ರೈಲಿನಿಂದ ಇಳಿದಿದ್ದಾನೆ. ಹೋಗುವ ಮುನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ ಎಂದು ಮೂಲಗಳು ತಿಳಿಸಿವೆ. ಅನಿರೀಕ್ಷಿತ ಆಘಾತದಿಂದ ತಬ್ಬಿಬ್ಬಾದ ಅಫ್ಸಾನಾ ಕೂಡಲೇ ರೈಲ್ವೇ ಪೊಲೀಸರನ್ನು ಸಂಪರ್ಕಿಸಿದ್ದರು. ಪೊಲೀಸರು ಅವರನ್ನು ಕಾನ್ಪುರ್ ದೆಹತ್‌ನ ಪುಖ್ರಾಯನ್‌ಗೆ ಕಳುಹಿಸಿದರು. ಅಲ್ಲಿಂದ ಅವರು ಭೋಪಾಲ್‌ಗೆ ರೈಲು ಹತ್ತಿದ್ದರು. ಕೊನೆಗೆ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಮೊಹಮ್ಮದ್ ಅರ್ಷದ್‌ಗಾಗಿ ಹುಡುಕಾಟ ನಡೆಸಿದ್ದಾರೆ.

ಭೋಪಾಲ್‌ನ ಖಾಸಗಿ ಕಂಪನಿಯೊಂದರಲ್ಲಿ ಕಂಪ್ಯೂಟರ್‌ ಎಂಜಿನಿಯರ್‌ ಆಗಿರುವ ಅರ್ಷದ್‌ ಈ ವರ್ಷದ ಜನವರಿ 12ರಂದು ರಾಜಸ್ಥಾನದ ಕೋಟದ ಅಫ್ಸಾನಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ. ಮ್ಯಾಟ್ರಿಮೋನಿ ಜಾಹೀರಾತು ಮೂಲಕ ಪದವೀಧರೆಯಾದ ಅಫ್ಸಾನಾ ಮತ್ತು ಅರ್ಷದ್‌ ಪರಸ್ಪರ ಪರಿಚಿತರಾಗಿದ್ದರು. ದಂಪತಿ ಕಳೆದ ವಾರ ಪುಖ್ರಾಯನ್‌ನಲ್ಲಿರುವ ಅರ್ಷದ್‌ನ ಪೂರ್ವಜರ ಮನೆಗೆ ಭೇಟಿ ನೀಡಿದಾಗ ಅಫ್ಸಾನಾ ಅವರಿಗೆ ಆಘಾತಕಾರಿ ಸತ್ಯವೊಂದು ತಿಳಿಯಿತು. ಅರ್ಷದ್‌ಗೆ ಅದಾಗಲೇ ಮದುವೆಯಾಗಿತ್ತು ಎನ್ನುವುದು ಅಫ್ಸಾನಾ ಅವರಿಗೆ ಆಗಷ್ಟೇ ತಿಳಿದು ಬಂದಿತ್ತು.

ಈ ಬಗ್ಗೆ ಅಫ್ಸಾನಾ ಪ್ರಶ್ನಿಸಿದಾಗ ಕಿರುಕುಳ ಆರಂಭವಾಗಿತ್ತು. ಅರ್ಷದ್‌ ಮತ್ತು ಆತನ ತಾಯಿ ವರದಕ್ಷಿಣೆ ನೀಡುವಂತೆ ಪೀಡಿಸತೊಡಗಿದರು ಎಂದು ಅಫ್ಸಾನಾ ದೂರಿನಲ್ಲಿ ತಿಳಿಸಿದ್ದಾರೆ. ಕೊನೆಗೆ ರೈಲಿನಲ್ಲಿ ಆತ ತ್ರಿವಳಿ ತಲಾಕ್‌ ಕೊಟ್ಟು ನಾಪತ್ತೆಯಾಗಿದ್ದಾನೆ ಎಂದು ಅಫ್ಸಾನಾ ವಿವರಿಸಿದ್ದಾರೆ.

ಇದನ್ನೂ ಓದಿ: Triple Talaq: ಮದುವೆಯಾದ 2 ಗಂಟೆಯಲ್ಲೇ ಪತ್ನಿಗೆ ತ್ರಿವಳಿ ತಲಾಕ್ ನೀಡಿದ ದುರುಳ; ವರದಕ್ಷಿಣೆ ಆಸೆಗೆ ನೀಚ ಕೃತ್ಯ

ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ

ಸದ್ಯ ಈ ವಿಚಾರ ಸದ್ದು ಮಾಡುತ್ತಿದೆ. ಅಫ್ಸಾನಾ ಈ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ ಸಲ್ಲಿಸಿ ತನಗೆ ನೆರವಾಗಬೇಕು ಎಂದು ಕೋರಿದ್ದಾರೆ. ಹೀಗೆ ತ್ರಿವಳಿ ತಲಾಕ್‌ ಕೊಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ. ಸರ್ಕಲ್‌ ಆಫೀಸರ್‌ ಪ್ರಿಯಾ ಸಿಂಗ್‌ ಈ ಬಗ್ಗೆ ಮಾತನಾಡಿ, ʼʼಅಫ್ಸಾನಾ ಅವರ ದೂರಿನ ಮೇರೆಗೆ ಅರ್ಷಾದ್‌, ಆತನ ಮಾವ ಅಖೀಲ್‌, ತಂದೆ ನಫೀಸುಲ್ ಹಸನ್ ಮತ್ತು ತಾಯಿ ಪರ್ವೀನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೆತ್ತಿಕೊಳ್ಳಲಾಗಿದೆʼʼ ಎಂದು ತಿಳಿಸಿದ್ದಾರೆ.

Continue Reading

ಕ್ರೀಡೆ

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

Kavya Maran: ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ.

VISTARANEWS.COM


on

Kavya Maran
Koo

ಹೈದರಾಬಾದ್​: ಗುರುವಾರ ರಾತ್ರಿ ನಡೆದ ಐಪಿಎಲ್​ನ(IPL 2024) 50ನೇ ಪಂದ್ಯದಲ್ಲಿ ಭುವನೇಶ್ವರ್​ ಕುಮಾರ್(Bhuvneshwar Kumar)​ ಅವರು ಅಂತಿಮ ಎಸೆತದ ಮ್ಯಾಜಿಕ್​ನಿಂದ ಸನ್​ರೈಸರ್ಸ್ ಹೈದರಾಬಾದ್(Sunrisers Hyderabad)​ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ರೋಚಕ 1 ರನ್​ ಅಂತರದ ಗೆಲುವು ಸಾಧಿಸಿತು. ಈ ಗೆಲುವನ್ನು ತಂಡದ ಆಟಗಾರರಿಗಿಂತಲ್ಲೂ ಹೆಚ್ಚು ಸಂಭ್ರಮಿಸಿದ್ದು ತಂಡದ ಮಾಲಕಿ ಕಾವ್ಯಾ ಮಾರನ್​. ಗ್ಯಾಲರಿಯಲ್ಲಿದ್ದ ಕಾವ್ಯ ತಂಡ ಗೆಲ್ಲುತ್ತಿದ್ದಂತೆ ಫೂಲ್​ ಜೋಶ್​ನಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

31 ಹರೆಯದ ಕಾವ್ಯಾ ತನ್ನ ಅದ್ಭುತ ನೋಟ ಮತ್ತು ಆಟದ ಮೇಲಿನ ಅಪಾರ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದಾರೆ. ಪಂದ್ಯ ಸೋತಾಗ ಮತ್ತು ಗೆದ್ದಾಗ ಅವರು ವಿಭಿನ್ನವಾಗಿ ಕಂಡುಬರುತ್ತಾರೆ. ಕ್ಯಾಮೆರಾ ಮೆನ್​ಗಳು ಕೂಡ ಪಂದ್ಯದ ವೇಳೆ ಇವರ ಮೇಲೆ ವಿಶೇಷ ನಿಗಾ ಇರಿಸಿರುತ್ತಾರೆ. ಪಂದ್ಯ ಸೋತಾಗ ಅತಿಯಾದ ಬೇಸರಿಂದ ಸಪ್ಪೆ ಮೋರೆ ಹಾಕಿ ಕುಳಿತಿದ್ದ ವಿಡಿಯೊ ಮತ್ತು ಫೋಟೊಗಳು ಕೂಡ ಹಲವು ಬಾರಿ ವೈರಲ್​ ಆಗಿತ್ತು.

ಖ್ಯಾತ ಸೂಪರ್​ ಸ್ಟಾರ್​ ನಟ ರಜನಿಕಾಂತ್ ಅವರು ಐಪಿಎಲ್​ ಆರಂಭಕ್ಕೂ ಮುನ್ನ ನಡೆದಿದ್ದ ಸಿನೆಮಾ ಕಾರ್ಯಕ್ರಮದ ಸಮಾರಂಭದ ವೇದಿಕೆಯಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡಕ್ಕೆ ಒಳ್ಳೆ ಆಟಗಾರರನ್ನು ಆಯ್ಕೆ ಮಾಡಿ ಏಕೆಂದರೆ ಈ ಪಂದ್ಯ ಸೋತಾಗ ಕಾವ್ಯಾ ಅವರು ನೋಡಲು ಸಾಧ್ಯವಾಗುದಿಲ್ಲ ಎಂದು ಹೇಳಿದ್ದರು.

ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ.

ಪಂದ್ಯ ಗೆದ್ದ ಹೈದರಾಬಾದ್​


ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

Continue Reading
Advertisement
Ram Mandir
ದೇಶ10 mins ago

Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

MS Dhoni
ಕ್ರೀಡೆ10 mins ago

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

Drowned in water
ಕೋಲಾರ21 mins ago

Drowned In water : ಈಜಲು ಕೃಷಿ ಹೊಂಡಕ್ಕೆ ಜಿಗಿದ; ಸಾವಿನ ಕೊನೆ ಕ್ಷಣವನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ತಂಗಿ!

Triple Talaq
ದೇಶ35 mins ago

Triple Talaq: ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

Covishield vaccine Puneeth Rakumar
ಸ್ಯಾಂಡಲ್ ವುಡ್42 mins ago

Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

Kavya Maran
ಕ್ರೀಡೆ50 mins ago

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

murder case stabbing bengaluru
ಕ್ರೈಂ52 mins ago

Murder Case: ಎಣ್ಣೆ ಪಾರ್ಟಿ ನಂತರ ರಿಕ್ಷಾ ಚಾಲಕನ ಇರಿದು ಕೊಂದ ರೌಡಿ ಶೀಟರ್‌

Elephant attack in Shivamogga
ಶಿವಮೊಗ್ಗ1 hour ago

Elephant attack : ನಿಲ್ಲದ ಕಾಡು ಪ್ರಾಣಿಗಳ ಹಾವಳಿ; ಶಿವಮೊಗ್ಗದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

Lalu Prasad Yadav
ದೇಶ1 hour ago

Lalu Prasad Yadav: ಬಿಹಾರದಲ್ಲಿ ಲಾಲೂ ಪ್ರಸಾದ್‌ ಯಾದವ್‌ v/s ಲಾಲೂ ಪುತ್ರಿ

Kiccha Sudeep jailer fame kevin has composed stunt in max
ಸ್ಯಾಂಡಲ್ ವುಡ್1 hour ago

Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ17 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌