Viral News: ಹಾವಿನಿಂದ ಹುಟ್ಟಿದ ಪ್ರೀತಿ! ಕೈ ಹಿಡಿದು ತಿರುಗಿ ನಿಂತ ಜೋಡಿ ಮೇಲೆ ಅದೇ ಸರ್ಪದ ಕಣ್ಣಿತ್ತು! - Vistara News

ವೈರಲ್ ನ್ಯೂಸ್

Viral News: ಹಾವಿನಿಂದ ಹುಟ್ಟಿದ ಪ್ರೀತಿ! ಕೈ ಹಿಡಿದು ತಿರುಗಿ ನಿಂತ ಜೋಡಿ ಮೇಲೆ ಅದೇ ಸರ್ಪದ ಕಣ್ಣಿತ್ತು!

ಹುಡುಗಿ ತನ್ನ ಮನೆಯ ಹಿತ್ತಿಲಿಗೆ ಹೋಗುತ್ತಾಳೆ. ಆಗ ಅಲ್ಲೊಂದು ನಾಗರ ಹಾವು ಹೆಡೆಯನ್ನು ಎತ್ತಿಕೊಂಡು ಕುಳಿತಿರುತ್ತದೆ. ಅದನ್ನು ನೋಡಿ ಹಾವು ಹಿಡಿಯುವವನಿಗೆ ಕರೆ ಮಾಡುತ್ತಾಳೆ.

VISTARANEWS.COM


on

Pre Wedding Photo Shoot with Snake Photoshoot
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮದುವೆಯಲ್ಲಿ ಒಂದು ಶಾಸ್ತ್ರವನ್ನಾದರೂ ಕೈಬಿಟ್ಟಾರು, ಆದರೆ ಪ್ರೀ ವೆಡ್ಡಿಂಗ್ ಫೋಟೋ ಶೂಟ್ (Pre Wedding Photoshoot)​ ಮಾತ್ರ ಮಾಡಿಸಿಕೊಳ್ಳದೆ ಬಿಡೋದಿಲ್ಲ ಎಂಬ ಕಾಲ ಇದು. ಹೊಸಹೊಸ ತರದ ಪ್ಲ್ಯಾನ್​ ಮಾಡಿ, ವಿಭಿನ್ನ ರೀತಿಯ ಕಂಟೆಂಟ್​​ಗಳನ್ನು ಸೃಷ್ಟಿಸಿ ಮದುವೆಗೂ ಮುನ್ನ ವಧು/ವರ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಾರೆ. ಅಂಥ ಹಲವು ಫೋಟೋ-ವಿಡಿಯೊಗಳನ್ನು ನಾವು ಸೋಷಿಯಲ್ ಮೀಡಿಯಾಗಳಲ್ಲಿ ನೋಡುತ್ತಿರುತ್ತೇವೆ. ಈಗೊಂದು ಜೋಡಿ ಮತ್ತಷ್ಟು ವಿಚಿತ್ರವಾಗಿ-ಭಿನ್ನವಾಗಿ ಪ್ರೀ ವೆಡ್ಡಿಂಗ್​ ಫೋಟೋಶೂಟ್ ಮಾಡಿಸಿಕೊಂಡಿದೆ. ಇವರ ಫೋಟೋ ಶೂಟ್​​ನ ವಿಷಯದ ಮುಖ್ಯ ಅಂಶ ಒಂದು ನಾಗರ ಹಾವು!

‘ಹುಡುಗಿ (ವಧು) ತಮ್ಮ ಮನೆಯ ಹಿತ್ತಿಲಿಗೆ ಹೋಗುತ್ತಾಳೆ. ಆಗ ಅಲ್ಲೊಂದು ನಾಗರ ಹಾವು ಹೆಡೆಯನ್ನು ಎತ್ತಿಕೊಂಡು ಕುಳಿತಿರುತ್ತದೆ. ಅದನ್ನು ನೋಡಿದ ಹುಡುಗಿ ಹಾವು ಹಿಡಿಯುವವನಿಗೆ (ಇಲ್ಲಿ ವರ) ಕರೆ ಮಾಡುತ್ತಾಳೆ. ಆತ ತನ್ನ ಸ್ನೇಹಿತನೊಂದಿಗೆ ಸ್ಕೂಟರ್​​ನಲ್ಲಿ ಅಲ್ಲಿಗೆ ಬಂದು, ಸರ್ಪವನ್ನು ಹಿಡಿದು ಪೆಟ್ಟಿಗೆಯಲ್ಲಿ ತುಂಬಿಕೊಂಡು ಹೋಗುತ್ತಾನೆ. ಅವನು ಅಲ್ಲಿಂದ ಹೋದ ಬಳಿಕ ಇವರಿಬ್ಬರ ಲವ್​ ಸ್ಟೋರಿ ಶುರುವಾಗುತ್ತದೆ. ಫೋನ್​​ನಲ್ಲಿ ಮಧುರ ಮಾತುಕತೆ ನಡೆಯುತ್ತಿರುತ್ತದೆ. ಹಾಗೇ, ಒಂದು ದಿನ ಪಾರ್ಕ್​​ನಲ್ಲಿ ಕೈಕೈ ಹಿಡಿದು ನಿಂತ ಈ ಜೋಡಿಯ ಹಿಂದೆ ಅದೇ ಸರ್ಪ ಹೆಡೆ ಬಿಚ್ಚಿ ನಿಂತಿರುತ್ತದೆ. ಅವರನ್ನೇ ದಿಟ್ಟಿಸಿ ನೋಡುತ್ತಿರುತ್ತದೆ’ ಇವಿಷ್ಟು ಕಂಟೆಂಟ್​. ಇದನ್ನೇ ಫೋಟೋ ರೂಪದಲ್ಲಿ ಕಟ್ಟಿಕೊಡಲಾಗಿದೆ. ಹಾವನ್ನಿಟ್ಟುಕೊಂಡು ಫೋಟೋ ಶೂಟ್ ಮಾಡಿಸಿದ ಈ ಜೋಡಿಯನ್ನು ನೋಡಿ ನೆಟ್ಟಿಗರು ಶಾಕ್ ವ್ಯಕ್ತಪಡಿಸಿದ್ದಾರೆ. ಅನೇಕರು ಮೆಚ್ಚಿಕೊಂಡಿದ್ದರೆ, ಇನ್ನೂ ಕೆಲವರು ಇಂಥ ಅಪಾಯಕಾರಿ ಕಂಟೆಂಟ್​ಗಳೆಲ್ಲ ಬೇಕಾ? ಎಂದು ಪ್ರಶ್ನಿಸಿದ್ದಾರೆ. ಇನ್ನೊಂದಿಷ್ಟು ದಿನ ಆಸ್ಕರ್​ ನಾಮಿನೇಶನ್​​ಗೆ ಕಳಿಸಿ ಎಂದು ಕಾಲೆಳೆಯುತ್ತಿದ್ದಾರೆ. ಕೆಳಗೆ ಕೊಟ್ಟಿರುವ ಟ್ವಿಟರ್​​ ಗೆ ಹೋಗಿ, ನೀವು ಎಲ್ಲ ಫೋಟೋಗಳನ್ನೂ ವೀಕ್ಷಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Suryakumar Yadav: 8 ವರ್ಷಗಳ ಹಿಂದೆಯೇ ಅದ್ಭುತ ಕ್ಯಾಚ್​ ಹಿಡಿದೆ ಎಂದು ವಿವಾಹ ವಾರ್ಷಿಕೋತ್ಸವ ಆಚರಿಸಿದ ಸೂರ್ಯಕುಮಾರ್

Suryakumar Yadav: ಆ ಕ್ಯಾಚ್‌ ಹಿಡಿದು 8 ದಿನಗಗಳು ಕಳೆದಿವೆ. ಆದರೆ ನನ್ನ ಪ್ರಮುಖ ಕ್ಯಾಚ್ 8 ವರ್ಷಗಳ ಹಿಂದೆ ಹಿಡಿದದ್ದು!’ ಎಂದು ಬರೆದುಕೊಳ್ಳುವ ಮೂಲಕ ಸೂರ್ಯಕುಮಾರ್ ಯಾದವ್ ತಮ್ಮ ಪತ್ನಿಗೆ ವಿವಾಹ ವಾರ್ಷಿಕೋತ್ಸದ ಶುಭ ಹಾರೈಸಿದ್ದಾರೆ.

VISTARANEWS.COM


on

Suryakumar Yadav
Koo

ಮುಂಬಯಿ: ಟಿ20 ವಿಶ್ವಕಪ್ ವಿಜೇತ ಹೀರೋ ಸೂರ್ಯಕುಮಾರ್ ಯಾದವ್(Suryakumar Yadav) ಅವರು ತಮ್ಮ ಎಂಟನೇ ವಿವಾಹ ವಾರ್ಷಿಕೋತ್ಸವನ್ನು ಪತ್ನಿ ದೇವಿಶಾ ಶೆಟ್ಟಿ(Devisha Shetty) ಜತೆ ಆಚರಿಸಿಕೊಂಡಿದ್ದಾರೆ. ವಿದೇಶದಲ್ಲಿ ಈ ಜೋಡಿ ತಮ್ಮ ವಿವಾಹ ವಾರ್ಷಿಕೋತ್ಸವನ್ನು ಆಚರಿಸಿಕೊಂಡಿರುವ ಫೋಟೊವನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸೂರ್ಯಕುಮಾರ್​ ಅವರು ಪತ್ನಿಗೆ ಶುಭ ಹಾರೈಸಿರುವ ಪೋಸ್ಟ್​ ಇದೀಗ ವೈರಲ್​ ಆಗಿದೆ.

ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಸೂರ್ಯಕುಮಾರ್​ ಯಾದವ್ ಅದ್ಭುತ ಕ್ಯಾಚ್​ ಹಿಡಿದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೇ ಕ್ಯಾಚ್​ ಅನ್ನು ಸೂರ್ಯಕುಮಾರ್ ತಮ್ಮ ವಿವಾಹ ವಾರ್ಷಿಕೋತ್ಸ ಆಚರಣೆಯ ವೇಳೆಯೂ ಬಳಸಿಕೊಂಡಿದ್ದಾರೆ. ‘ಆ ಕ್ಯಾಚ್‌ ಹಿಡಿದು 8 ದಿನಗಗಳು ಕಳೆದಿವೆ. ಆದರೆ ನನ್ನ ಪ್ರಮುಖ ಕ್ಯಾಚ್ 8 ವರ್ಷಗಳ ಹಿಂದೆ ಹಿಡಿದದ್ದು!’ ಎಂದು ಬರೆದುಕೊಳ್ಳುವ ಮೂಲಕ ಪತ್ನಿಗೆ ವಿವಾಹ ವಾರ್ಷಿಕೋತ್ಸದ ಶುಭ ಹಾರೈಸಿದ್ದಾರೆ. ಸದ್ಯ ಸೂರ್ಯ ಅವರು ಈ ಪೋಸ್ಟ್​ ವೈರಲ್ ಆಗಿದೆ. ಜುಲೈ 7, 2016ರಲ್ಲಿ ಸೂರ್ಯ ಮತ್ತು ದೇವಿಶಾ ವಿವಾಹವಾಗಿದ್ದರು. ದೇವಿಶಾ ಶೆಟ್ಟಿ ಮೂಲತಃ ಕರಾವಳಿಯವರಾಗಿದ್ದಾರೆ.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಮಿಲ್ಲರ್​ ಔಟ್​ ಆಗುತ್ತಿದ್ದಂತೆ ಭಾರತದ ಗೆಲುವು ಕೂಡ ಖಚಿತಗೊಂಡಿತ್ತು. ಸೂರ್ಯ ಈ ಕ್ಯಾಚ್​ ಹಿಡಿಯದೇ ಹೋಗಿದ್ದರೆ ಭಾರತ ಸೋಲುವ ಸಾಧ್ಯತೆಯೂ ಅಧಿಕವಾಗಿತ್ತು.

ಇದನ್ನೂ ಓದಿ Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

ಸೂರ್ಯಕುಮಾರ್​ ಯಾದವ್(Suryakumar Yadav Catch)​ ಅವರು ಹಿಡಿದ ಈ ಕ್ಯಾಚ್​ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಸೂರ್ಯಕುಮಾರ್​ ಬೌಂಡರಿ ಗೆರೆಯನ್ನು ತುಳಿದಿದ್ದಾರೆ ಎನ್ನಲಾದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಈಗಲೂ ಕೂಡ ಈ ಚರ್ಚೆ ನಿಂತಿಲ್ಲ.

ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ ರಜನೀಶ್ ಗುಪ್ತಾ ಎಂಬವರು ಸೂರ್ಯಕುಮಾರ್​ ಕ್ಯಾಚ್​ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. “ನಾನು ಅಂದು ಮೈದಾನದ ಟಿವಿ ಕಾಮೆಂಟರಿ ಬಾಕ್ಸ್‌ನಲ್ಲಿದ್ದೆ. ಬಿಳಿ ಗೆರೆಯು ಬೌಂಡರಿಯಾಗಿರಲಿಲ್ಲ ಎಂದು ನಾನು ಹೇಳಬಲ್ಲೆ. ಏಕೆಂದರೆ ಬೌಂಡರಿ ರೋಪ್ ವೆಡ್ಜ್ ಆ ಬಿಳಿ ಗೆರೆಯ ಹಿಂದೆ ಇತ್ತು. ಪಂದ್ಯದ ಆರಂಭದಿಂದಲೂ ಹಾಗೆಯೇ ಇತ್ತು. ಪಿಚ್ ಅನ್ನು ಬದಲಾಯಿಸಿದಾಗ, ಬೌಂಡರಿಗಳನ್ನು ಸರಿಹೊಂದಿಸಲಾಗುತ್ತದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದಿದ್ದಾರೆ.

Continue Reading

ದೇಶ

Rahul Gandhi: ಹಿಂದುಗಳಿಗೆ ಅವಮಾನ ಖಂಡಿಸಿ ದೇಗುಲದ ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಫೋಟೊ; ಇಲ್ಲಿದೆ Video

Rahul Gandhi: ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ದೇವಾಲಯವೊಂದರ ಆಡಳಿತ ಮಂಡಳಿಯು ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಅವರ ಫೋಟೊವನ್ನು ಅಳವಡಿಸಿದೆ. ದೇಗುಲಕ್ಕೆ ತೆರಳುವ ಭಕ್ತರು ರಾಹುಲ್‌ ಗಾಂಧಿ ಅವರ ಫೋಟೊ ಇರುವ ಡೋರ್‌ಮ್ಯಾಟ್‌ಅನ್ನು ತುಳಿದುಕೊಂಡು ಹೋಗುತ್ತಿರುವ ವಿಡಿಯೊ ಲಭ್ಯವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ ಶುರುವಾಗಿದೆ.

VISTARANEWS.COM


on

Rahul Gandhi
Koo

ಮುಂಬೈ: ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ (Rahul Gandhi) ಅವರು ಹಿಂದುಗಳ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೂಡ ಸಂಸತ್‌ನಲ್ಲಿ ರಾಹುಲ್‌ ಗಾಂಧಿ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ, ಹಿಂದುಗಳ ಕುರಿತು ರಾಹುಲ್‌ ಗಾಂಧಿ ನೀಡಿದ ಹೇಳಿಕೆಯನ್ನು ಖಂಡಿಸಿ ಮಹಾರಾಷ್ಟ್ರದ ದೇಗುಲದ (Maharashtra Temple) ಡೋರ್‌ ಮ್ಯಾಟ್‌ಗೆ ರಾಹುಲ್‌ ಗಾಂಧಿ ಅವರ ಫೋಟೊವನ್ನು ಅಳವಡಿಸಲಾಗಿದೆ. ಈ ವಿಡಿಯೊ (Viral Video) ಈಗ ವೈರಲ್‌ ಆಗಿದೆ.

ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿ ದೇವಾಲಯದ ಆಡಳಿತ ಮಂಡಳಿಯು ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಅವರ ಫೋಟೊವನ್ನು ಅಳವಡಿಸಿದೆ. ದೇಗುಲಕ್ಕೆ ತೆರಳುವ ಭಕ್ತರು ರಾಹುಲ್‌ ಗಾಂಧಿ ಅವರ ಫೋಟೊ ಇರುವ ಡೋರ್‌ಮ್ಯಾಟ್‌ಅನ್ನು ತುಳಿದುಕೊಂಡು ಹೋಗುತ್ತಿರುವ ವಿಡಿಯೊ ಲಭ್ಯವಾಗಿದೆ. ಅಷ್ಟೇ ಅಲ್ಲ, ಡೋರ್‌ ಮ್ಯಾಟ್‌ ಮೇಲೆ, “ಹಿಂದುಗಳನ್ನು ಹಿಂಸಾವಾದಿಗಳು ಎಂಬುದಾಗಿ ಕರೆಯಲು ನಿಮಗೆ ಎಷ್ಟು ಧೈರ್ಯ” ಎಂದು ಕೂಡ ಬರೆಯಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಪರ-ವಿರೋಧ ಚರ್ಚೆಯಾಗುತ್ತಿದೆ.

ರಾಹುಲ್‌ ಗಾಂಧಿ ಹೇಳಿದ್ದೇನು?

“ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಗಂಟೆ ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ” ಎಂದು ರಾಹುಲ್‌ ಗಾಂಧಿ ಸಂಸತ್‌ನಲ್ಲಿ ಜುಲೈ 1ರಂದು ಹೇಳಿದ್ದರು.

ಮೋದಿ ತಿರುಗೇಟು ಕೊಟ್ಟಿದ್ದರು

ರಾಹುಲ್‌ ಗಾಂಧಿ ಹೇಳಿಕೆಗೆ ನರೇಂದ್ರ ಮೋದಿ ಅವರು ಸಂಸತ್‌ನಲ್ಲಿಯೇ ತಿರುಗೇಟು ಕೊಟ್ಟಿದ್ದರು. “ಸ್ವಾಮಿ ವಿವೇಕಾನಂದರು ಯಾವ ಧರ್ಮದ ಕುರಿತು ಅಭಿಮಾನದಿಂದ ಹೇಳಿದ್ದರೋ, ಯಾವ ಧರ್ಮದ ಮಹತ್ವ, ಸಹಿಷ್ಣುತೆಯನ್ನು ಜಗತ್ತಿಗೇ ತಿಳಿಸಿದ್ದರೋ, ಅದೇ ಧರ್ಮದವರು ನಾವು. ಹಿಂದು ಧರ್ಮವು ಎಂದಿಗೂ ದ್ವೇಷ, ಹಿಂಸೆಯನ್ನು ಪ್ರಚೋದಿಸಿಲ್ಲ. ಬಿಜೆಪಿಯು ಇಂತಹ ಧರ್ಮದಲ್ಲಿ ನಂಬಿಕೆ ಇರಿಸಿದ್ದು, ರಾಜಕೀಯ ಕಾರಣಕ್ಕಾಗಿ ಕಾಂಗ್ರೆಸ್‌ ಹಿಂದುಗಳನ್ನು ಅವಮಾನಿಸುತ್ತಿದೆ. ಹಿಂದುಗಳು ಕಾಂಗ್ರೆಸ್‌ನ ಈ ಷಡ್ಯಂತ್ರವನ್ನು ತಿಳಿಯಬೇಕು. ದೇಶದಲ್ಲಿ ಹಿಂದುಗಳು ಕಾಂಗ್ರೆಸ್‌ ಬಗ್ಗೆ ಎಚ್ಚರದಿಂದ ಇರಬೇಕು” ಎಂದು ಹೇಳಿದ್ದರು.

“ಹಿಂದುಗಳ ಕುರಿತು ರಾಹುಲ್‌ ಗಾಂಧಿ ಅವರು ಸುಳ್ಳುಗಳನ್ನು ಹರಡಿಸುತ್ತಿದ್ದಾರೆ. ಹಿಂದುಗಳು ಹಿಂಸಾವಾದಿಗಳು ಎಂದು ಹೇಳುವ ಮೂಲಕ ಪ್ರಚೋದನೆ ನೀಡುತ್ತಿದೆ. ಇದು ಕಾಂಗ್ರೆಸ್‌ ಹಾಗೂ ಕಾಂಗ್ರೆಸ್‌ ನಾಯಕನ ಸಂಸ್ಕೃತಿ, ಇದು ನಿಮ್ಮ ವ್ಯಕ್ತಿತ್ವ, ಇವು ನಿಮ್ಮ ಕೆಟ್ಟ ವಿಚಾರಗಳು, ಹಿಂದುಗಳ ಮೇಲೆ ನೀವು ಹೊಂದಿರುವ ದ್ವೇಷ, ನಿಮ್ಮ ಚಟುವಟಿಕೆಗಳು ಹಿಂದುಗಳ ವಿರೋಧಿಯಾಗಿವೆ. ಇದನ್ನು ಹಿಂದುಗಳು ಗಮನಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Continue Reading

Latest

First Night Video: ಫಸ್ಟ್‌ ನೈಟ್‌ ವಿಡಿಯೊ ಹಂಚಿಕೊಂಡ ನವ ದಂಪತಿ! ಇನ್ನೇನು ಬಾಕಿ ಉಳಿದಿದೆ ಎಂದ ನೆಟ್ಟಿಗರು!

First Night Video: ಮೊದಲ ರಾತ್ರಿ ಈ ಪದ ಕೇಳುತ್ತಲೇ ಕೆಲವರ ಕೆನ್ನೆ ಕೆಂಪಾಗುತ್ತದೆ. ನಾಚಿಕೆಯಾಗುವುದು ಸಾಮಾನ್ಯ. ಆದರೆ ಈ ದಂಪತಿ ತಮ್ಮ ಮೊದಲ ರಾತ್ರಿಯ ವಿಡಿಯೊವನ್ನು ಯಾವುದೇ ನಾಚಿಕೆ ಇಲ್ಲದೇ ತೋರಿಸಿದ್ದಾರೆ. ತಾವು ಮಲಗುವ ಕೋಣೆ, ಹಾಸಿಗೆ ಇವೆಲ್ಲದರ ವಿಡಿಯೊ ತೋರಿಸುವುದರ ಜೊತೆಗೆ ವಧುವಿನ ಬಳಿ ಮೊದಲ ರಾತ್ರಿಯ ಅನುಭವದ ಬಗ್ಗೆ ವರನು ಪ್ರಶ್ನೆ ಕೇಳಿದ್ದಾನೆ. ನೆಟ್ಟಿಗರು ಮಾತ್ರ ಇವರಿಬ್ಬರ ವಿಡಿಯೊ ನೋಡಿ ಹೌಹಾರಿದ್ದಾರೆ!

VISTARANEWS.COM


on

First Night Video
Koo

ಹೊಸದಾಗಿ ಮದುವೆಯಾದ ದಂಪತಿಗೆ ತಮ್ಮ ಹೊಸ ಜೀವನ ಶುರುಮಾಡಲು ಮೊದಲ ರಾತ್ರಿಯನ್ನು ಏರ್ಪಡಿಸುವುದು ಸಂಪ್ರದಾಯ. ಈ ದಿನ ಅವರು ಮಲಗುವ ಕೋಣೆಯನ್ನು ಸುಗಂಧ ದ್ರವ್ಯಗಳಿಂದ, ಹೂಗಳು, ಹಣ್ಣುಗಳಿಂದ ಅಲಂಕರಿಸುವುದು ಸಹಜ. ಸಾಮಾನ್ಯವಾಗಿ ದಂಪತಿ ತಮ್ಮ ಮೊದಲ ರಾತ್ರಿಯ ಅನುಭವವನ್ನು ಹಂಚಿಕೊಳ್ಳಲು ಮುಜುಗರಪಡುತ್ತಾರೆ. ಕೆಲವರು ಸೂಚ್ಯವಾಗಿ ತಮ್ಮ ಅನುಭವವನ್ನು ಆತ್ಮೀಯರಲ್ಲಿ ಹಂಚಿಕೊಂಡಿರಬಹುದು. ಆದರೆ ಯಾರೂ ಆ ರಾತ್ರಿ ಕಳೆದ ಕ್ಷಣವನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದಿಲ್ಲ. ಅಂತಹದರಲ್ಲಿ ಇಲ್ಲಿ ಒಂದು ದಂಪತಿ ತಮ್ಮ ಮೊದಲ ರಾತ್ರಿಯ (First Night Video) ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಇದು ವೈರಲ್ ಆಗಿದೆ. ಸಾಕಷ್ಟು ಟೀಕೆಗಳಿಗೆ ಕಾರಣವಾಗಿದೆ.

ಈ ವೈರಲ್ ಆಗಿರುವ ವೀಡಿಯೊದಲ್ಲಿ, ದಂಪತಿ ತಮ್ಮ ವಿವಾಹ ಸಮಾರಂಭದ ನಂತರದ ಕ್ಷಣಗಳ ಬಗ್ಗೆ ತಮ್ಮ ಅನುಭವವನ್ನು ಚರ್ಚಿಸುತ್ತಿರುವುದನ್ನು ತೋರಿಸುತ್ತದೆ. ದಂಪತಿ ಅವರ ಮಲಗುವ ಕೋಣೆಯ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಇದರಲ್ಲಿ ವರನು ವಧುವನ್ನು ಆಕೆಯ ‘ಮೊದಲ ರಾತ್ರಿಯ’ ಅನುಭವದ ಬಗ್ಗೆ ಕೇಳುತ್ತಾನೆ. ಆಕೆ ಅದು ಇನ್ನೂ ನಡೆದಿಲ್ಲ ಎಂದು ಉತ್ತರಿಸಿದ್ದಾಳೆ. ನಂತರ ದಂಪತಿ ತಮ್ಮ ಮಲಗುವ ಕೋಣೆಯ ಅಲಂಕಾರಗಳನ್ನು ಪ್ರದರ್ಶನ ಮಾಡಿದ್ದಾರೆ.

ಈ ವಿಡಿಯೊವನ್ನು ಸುನಂದಾ ರಾಯ್ ಅವರು ಇದನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ಈ ವೀಡಿಯೊ ನೆಟ್ಟಿಗರಿಂದ ಟೀಕೆಗೆ ಒಳಗಾಗಿದೆ. ಅನೇಕರು ಇವರ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಇವರು ತಮ್ಮ ಗಡಿಗಳನ್ನು ದಾಟಿದ್ದಾರೆ ಎಂದು ಹಲವರು ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಈ ಬಗ್ಗೆ ಅಪನಂಬಿಕೆಯನ್ನು ವ್ಯಕ್ತಪಡಿಸಿ, ಕೇವಲ ಹಣಕ್ಕಾಗಿ, ಜನರು ಈಗ ತಮ್ಮ ವೈಯಕ್ತಿಕ ಜೀವನವನ್ನು ಮಾರಾಟ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದರು.ಇನ್ನೊಬ್ಬರು, ಅವರು ಮದುವೆಯ ರಾತ್ರಿ ಹಾಸಿಗೆಯನ್ನು ತೋರಿಸುತ್ತಿದ್ದಾರೆ, ಆಗ ನೋಡಲು ಇನ್ನೇನು ಉಳಿದಿದೆ? ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಕದ್ದುಮುಚ್ಚಿ ಸರಸವಾಡುತ್ತಿದ್ದ ಮಹಿಳೆ ಸಿಕ್ಕಿಬಿದ್ದಾಗ ಗಂಡನನ್ನೇ ಕೊಂದಳು!

ಇಂತಹ ನಾಚಿಕೆಗೇಡಿನ ಕೆಲಸಗಳು ಇತ್ತೀಚಿನ ದಿನಗಳಲ್ಲಿ ಸರ್ವೇಸಾಮಾನ್ಯವಾಗಿ ಬಿಟ್ಟಿದೆ. ಅದರಲ್ಲೂ ಸೋಶಿಯಲ್ ಮೀಡಿಯಾದಲ್ಲಿ ಇಂತಹ ಘಟನೆಗಳನ್ನು ಒಂದಲ್ಲ ಒಂದು ಪೋಸ್ಟ್ ಆಗುತ್ತಿರುತ್ತದೆ. ಅದೇರೀತಿ ಈ ವರ್ಷದ ಜನವರಿಯಲ್ಲಿ ಅಮೆರಿಕದ ನ್ಯೂಯಾರ್ಕ್‍ನಲ್ಲಿ ದಂಪತಿ ಸಾರ್ವಜನಿಕ ಉದ್ಯಾನವನದಲ್ಲಿ ಲೈಂಗಿಕ ಕೃತ್ಯದಲ್ಲಿ ತೊಡಗಿರುವುದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇದು ವೈರಲ್ ಆಗಿದ್ದು, ಸೋಷಿಯಲ್ ಮೀಡಿಯಾ ಬಳಕೆದಾರರ ಆಕ್ರೋಶಕ್ಕೆ ಕಾರಣವಾಗಿದೆ. ತೆರೆದ ಪ್ರದೇಶದಲ್ಲಿ ದಂಪತಿಯ ಕೃತ್ಯವನ್ನು ಹಲವಾರು ಜನರು ಟೀಕಿಸಿದ್ದರು.

Continue Reading

ಕ್ರೀಡೆ

Hasin Jahan: ‘ನಾಯಿಗಳ ದಂಡು’… ಎಂದು ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ವಿಚ್ಛೇದಿತ ಪತ್ನಿ?; ವಿಡಿಯೊ ವೈರಲ್​

Hasin Jahan: ಶಮಿ ವಿರುದ್ಧ ಹಸೀನ್ ಜಹಾನ್ ಈ ರೀತಿ ಮಾಡುತ್ತಿರುವುದು ಇದೇ ಮೊದಲೇನಲ್ಲ. ಏಕದಿನ ವಿಶ್ವಕಪ್​ ಟೂರ್ನಿಯ ವೇಳೆ ಉತ್ತಮ ಪ್ರದರ್ಶನ ತೋರಿದಾಗ ಎಮ್ಮೆ ನೀರು ಕುಡಿಯುತ್ತಿರುವ ಚಿತ್ರಗಳನ್ನು ಪೋಸ್ಟ್​ ಮಾಡುವ ಮೂಲಕ ವಿಲಕ್ಷಣದ ಹೇಳಿಕೆ ನೀಡಿದ್ದರು.

VISTARANEWS.COM


on

Hasin Jahan: Divorced wife who scolded Shami unnecessarily as 'pack of dogs'; The video is viral
Koo

ಕೋಲ್ಕತ್ತಾ: ಟೀಮ್​ ಇಂಡಿಯಾದ ಸ್ಟಾರ್​ ವೇಗಿ ಮೊಹಮ್ಮದ್​ ಶಮಿ(Mohammed Shami) ಅವರ ವಿರುದ್ಧ ಸದಾ ಒಂದಿಲ್ಲೊಂದು ಕಾರಣಗಳಿಂದ ಟೀಕಿಸುತ್ತಿರುವ ಅವರ ವಿಚ್ಛೇದಿತ ಪತ್ನಿ ಹಸೀನ್ ಜಹಾನ್(Hasin Jahan) ಈ ಬಾರಿ ನಾಯಿಗೆ ಹೋಲಿಕೆ ಮಾಡಿ ಪರೋಕ್ಷವಾಗಿ ಹೀಯಾಳಿಸಿದ್ದಾರೆ.

ಹೌದು, ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕಣ್ಣು ಮಿಟುಕಿಸುವ ಒಂದು ನಿಮಿಷದ ವಿಡಿಯೊ ಹಂಚಿಕೊಂಡಿರುವ ಹಸೀನ್ ಜಹಾನ್, ನಾಯಿಗಳ ದಂಡು ಹೆಣ್ಣು ಮಕ್ಕಳ ಹಿಂದಿನಿಂದ ಮಾತ್ರ ಬೊಗಳುತ್ತದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ಎಂದ ಅನುಮಾನ ಮೂಡಿದೆ.

ಶಮಿ ವಿರುದ್ಧ ಹಸೀನ್ ಜಹಾನ್ ಈ ರೀತಿ ಮಾಡುತ್ತಿರುವುದು ಇದೇ ಮೊದಲೇನಲ್ಲ. ಏಕದಿನ ವಿಶ್ವಕಪ್​ ಟೂರ್ನಿಯ ವೇಳೆ ಉತ್ತಮ ಪ್ರದರ್ಶನ ತೋರಿದಾಗ ಎಮ್ಮೆ ನೀರು ಕುಡಿಯುತ್ತಿರುವ ಚಿತ್ರಗಳನ್ನು ಪೋಸ್ಟ್​ ಮಾಡುವ ಮೂಲಕ ವಿಲಕ್ಷಣದ ಹೇಳಿಕೆ ನೀಡಿದ್ದರು.

ಕೆಲವು ತಿಂಗಳ ಹಿಂದೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ರೋಹಿತ್​ ಶರ್ಮ ಅವರು ತಮ್ಮ ಪುಟ್ಟ ಮಗಳು ಸಮೈರಾ ತೊಡೆ ಮೇಲೆ ಹಾಯಾಗಿ ಮಲಗಿರುವ ಫೋಟೊ ಹಂಚಿಕೊಂಡಿದ್ದ ಹಸೀನ್ ಜಹಾನ್, ಹೆಚ್ಚಿನ ತಂದೆಯಂದಿರು ತಮ್ಮ ಪುಟ್ಟ ಮಗಳನ್ನು ದೇವರಂತೆ ಕಂಡು ಅವರಿಂದ ಶಾಂತಿ ಕಂಡುಕೊಳ್ಳುತ್ತಾರೆ. ಮತ್ತು ಕೆಲವು ತಂದೆಯರು ವೇಶ್ಯೆಯರ ಮಡಿಲಲ್ಲಿ!. ಅಲ್ಲಾಹು ಯಾವುದೇ ಮಗಳಿಗೆ ಇಂತಹ ಗುಣವಿಲ್ಲದ ತಂದೆಯನ್ನು ಎಂದಿಗೂ ನೀಡದಿರಲಿ. ಆಮೀನ್. ನನ್ನ ಪುಟ್ಟ ಮಗಳಿಗೆ ತಾಳ್ಮೆಯನ್ನು ನೀಡುವಂತೆ ನಾನು ಅಲ್ಲಾಹುವಿನನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್​ ಮಾಡಿ ಶಮಿಯನ್ನು ಅನಗತ್ಯವಾಗಿ ಕೆಣಕ್ಕಿದ್ದರು.

16 ಆಗಸ್ಟ್ 2018 ರಂದು, ಹಸಿನ್ ಜಹಾನ್(Hasin Jahan) ಮೊಹಮ್ಮದ್ ಶಮಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಹಲ್ಲೆ, ಅತ್ಯಾಚಾರ, ಕೊಲೆ ಯತ್ನ ಮತ್ತು ಕೌಟುಂಬಿಕ ಹಿಂಸಾಚಾರದ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗನ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಗಳ ಖರ್ಚಿಗೆ ಹಾಗೂ ತನಗೆ ಯಾವುದೇ ರೀತಿಯ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಹಸಿನ್ ಜಹಾನ್ ದೂರಿನಲ್ಲಿ ಅಪಾದಿಸಿದ್ದರು.

ಜೀವನಾಂಶ ನೀಡುತ್ತಿರುವ ಶಮಿ

2018 ರಲ್ಲಿ ಹಸಿನ್ ಜಹಾನ್ ಅವರು ಮಾಸಿಕ 10 ಲಕ್ಷ ರೂ ಜೀವನಾಂಶವನ್ನು ಕೋರಿ ಶಮ್ಮಿ ವಿರುದ್ಧ ಕಾನೂನು ಮೊಕದ್ದಮೆ ಹೂಡಿದ್ದರು. ವೈಯಕ್ತಿಕ ವೆಚ್ಚಕ್ಕಾಗಿ 7 ಲಕ್ಷ ರೂ., ತಮ್ಮ ಮಗಳ ನಿರ್ವಹಣೆಗಾಗಿ 3 ಲಕ್ಷ ರೂ. ಕೇಳಿದ್ದರು. ಇದರ ವಿಚಾರಣೆ ನಡೆಸಿದ ಕೋಲ್ಕೊತಾ ನ್ಯಾಯಾಲಯ ಇದೇ ವರ್ಷದ ಜನವರಿಯಲ್ಲಿ ತೀರ್ಪು ಪ್ರಕಟಿಸಿ, ಶಮಿ ಅವರು ಪತ್ಯೇಕವಾಗಿ ವಾಸಿಸುತ್ತಿರುವ ಪತ್ನಿ ಜಹಾನ್​ಗೆ ತಿಂಗಳಿಗೆ 50 ಸಾವಿರ ರೂ. ನೀಡುವಂತೆ ಸೂಚಿಸಿತ್ತು. ಕೋರ್ಟ್​ ಸೂಚನೆಯಂತೆ ಶಮಿ ಅವರು ಈ ಮೊತ್ತವನ್ನು ನೀಡಿತ್ತಲೇ ಬರುತ್ತಿದ್ದಾರೆ.

Continue Reading
Advertisement
PGET 2024 Online application for PGET can be submitted till July 10
ಶಿಕ್ಷಣ13 mins ago

PGET 2024 : ಪಿಜಿಇಟಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 10ರವರೆಗೆ ಅವಕಾಶ

Suryakumar Yadav
ಕ್ರೀಡೆ14 mins ago

Suryakumar Yadav: 8 ವರ್ಷಗಳ ಹಿಂದೆಯೇ ಅದ್ಭುತ ಕ್ಯಾಚ್​ ಹಿಡಿದೆ ಎಂದು ವಿವಾಹ ವಾರ್ಷಿಕೋತ್ಸವ ಆಚರಿಸಿದ ಸೂರ್ಯಕುಮಾರ್

Rahul Gandhi
ದೇಶ20 mins ago

Rahul Gandhi: ಹಿಂದುಗಳಿಗೆ ಅವಮಾನ ಖಂಡಿಸಿ ದೇಗುಲದ ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಫೋಟೊ; ಇಲ್ಲಿದೆ Video

Manvita Kamath Honeymoon in baali
ಸ್ಯಾಂಡಲ್ ವುಡ್26 mins ago

Manvita Kamath: ಪತಿ ಅರುಣ್ ಜತೆ ಬಾಲಿಯಲ್ಲಿ ಸಖತ್‌ ಎಂಜಾಯ್‌ ಮಾಡುತ್ತಿರುವ ಮಾನ್ವಿತಾ ಕಾಮತ್!

NEET UG 2024
ದೇಶ39 mins ago

NEET UG 2024: ನೀಟ್‌ ಅಕ್ರಮ ಮೇಲ್ನೋಟಕ್ಕೆ ಸಾಬೀತು ಎಂದ ಸುಪ್ರೀಂ; ಎನ್‌ಟಿಎ, ಸಿಬಿಐಗೆ ಖಡಕ್ ಸೂಚನೆ!

OPS News
ಕರ್ನಾಟಕ39 mins ago

OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

ಕ್ರೀಡೆ48 mins ago

Paris 2024 Olympics Athletics: ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜೆಸ್ವಿನ್‌, ಅಂಕಿತಾ ಧ್ಯಾನಿ

First Night Video
Latest52 mins ago

First Night Video: ಫಸ್ಟ್‌ ನೈಟ್‌ ವಿಡಿಯೊ ಹಂಚಿಕೊಂಡ ನವ ದಂಪತಿ! ಇನ್ನೇನು ಬಾಕಿ ಉಳಿದಿದೆ ಎಂದ ನೆಟ್ಟಿಗರು!

Ragging case in Bengaluru
ಬೆಂಗಳೂರು56 mins ago

Ragging Case : ಬೆಂಗಳೂರಲ್ಲಿ ನಿಲ್ಲದ ವ್ಹೀಲಿಂಗ್‌ ಆ್ಯಂಡ್‌ ರ‍್ಯಾಗಿಂಗ್‌ ಹಾವಳಿ; ಮಹಿಳೆ ಹಿಂದೆ ಬಿದ್ದ ಪೋಲಿ ಹುಡುಗರು

Supreme Court
ಪ್ರಮುಖ ಸುದ್ದಿ57 mins ago

Sandeshkhali case : ಸಿಬಿಐ ತನಿಖೆ ವಿರುದ್ಧದ ಅರ್ಜಿ ವಜಾ; ಸುಪ್ರೀಂ ಕೋರ್ಟ್‌‌ನಲ್ಲಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಹಿನ್ನಡೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain Effect
ಮಳೆ1 hour ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ4 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು5 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ21 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ23 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಟ್ರೆಂಡಿಂಗ್‌