Rahul Gandhi: ರಾಹುಲ್ ಗಾಂಧಿ ಅಲ್ಲ, ರಾಹುಲ್ ಖಾನ್! ಪಾಕಿಸ್ತಾನದ ಟಿವಿಯಲ್ಲಿ ಬಿಸಿಬಿಸಿ ಚರ್ಚೆ! - Vistara News

ವೈರಲ್ ನ್ಯೂಸ್

Rahul Gandhi: ರಾಹುಲ್ ಗಾಂಧಿ ಅಲ್ಲ, ರಾಹುಲ್ ಖಾನ್! ಪಾಕಿಸ್ತಾನದ ಟಿವಿಯಲ್ಲಿ ಬಿಸಿಬಿಸಿ ಚರ್ಚೆ!

Rahul Gandhi: ಪಾಕಿಸ್ತಾನದ ಚಾನಲ್‌ ಒಂದರಲ್ಲಿ ಮಾತನಾಡುತ್ತ ಅತಿಥಿಯೊಬ್ಬರು ರಾಹುಲ್‌ ಗಾಂಧಿ ಅವರ ಜಾತಿಯನ್ನು ಪ್ರಶ್ನಿಸಿದ್ದಾರೆ. ʼʼರಾಹುಲ್ ಹೇಗೆ ಗಾಂಧಿಯಾದರು? ರಾಹುಲ್ ಅವರು ನೆಹರೂ ಕುಟುಂಬದ ಕುಡಿ. ಇದು ನೆಹರೂ ವಂಶ. ಇವರೊಂದಿಗೆ ಗಾಂಧಿಯ ಹೆಸರು ಹೇಗೆ ಥಳುಕು ಹಾಕಿಕೊಂಡಿದೆ?ʼʼ ಎಂದು ಅವರು ಕೇಳಿದ್ದಾರೆ. ಸದ್ಯ ಈ ವಿಡಿಯೊ ವೈರಲ್‌ ಆಗುತ್ತಿದೆ

VISTARANEWS.COM


on

Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಂಸತ್‌ನಲ್ಲಿ ಬಜೆಟ್‌ ಅಧಿವೇಶನ ನಡೆಯುತ್ತಿದ್ದು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ಚರ್ಚೆ ಕಂಡು ಬರುತ್ತಿದೆ. ಜುಲೈ 29 ಸಂಸತ್‌ನಲ್ಲಿ ಜಾತಿಗಣತಿ (Caste Census) ಕುರಿತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಪ್ರಸ್ತಾಪಿಸಿದ್ದು, ಲೋಕಸಭೆಯಲ್ಲಿ ನಾವು ಜಾತಿಗಣತಿ ಮಂಡಿಸುತ್ತೇವೆ ಎಂದಿದ್ದರು. ಇದಕ್ಕೆ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ (Anurag Thakur) ತಿರುಗೇಟು ನೀಡಿ, “ತಮ್ಮ ಜಾತಿಯೇ ಯಾವುದೆಂದು ಗೊತ್ತಿರದವರು ಜಾತಿಗಣತಿ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದರು. ಸದ್ಯ ಈ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಅಚ್ಚರಿ ಎಂದರೆ ಈ ವಿಚಾರ ದೇಶದ ಗಡಿ ದಾಟಿ ಪಾಕಿಸ್ತಾನದಲ್ಲಿಯೂ ಚರ್ಚೆಯಾಗುತ್ತಿದೆ. ಪಾಕಿಸ್ತಾನದ ಚಾನಲ್‌ ಒಂದರಲ್ಲಿ ಮಾತನಾಡುತ್ತ ಅತಿಥಿಯೊಬ್ಬರು ರಾಹುಲ್‌ ಗಾಂಧಿ ಅವರ ಜಾತಿಯನ್ನು ಪ್ರಶ್ನಿಸಿದ್ದಾರೆ. ಸದ್ಯ ಈ ವಿಡಿಯೊ ವೈರಲ್‌ ಆಗುತ್ತಿದೆ (Viral Video).

ಸುಮಾರು 2.18 ನಿಮಿಷದ ವಿಡಿಯೊ ಇದಾಗಿದ್ದು, ಸಂವಾದದಲ್ಲಿ ಪಾಲ್ಗೊಂಡ ಅತಿಥಿ ರಾಹುಲ್‌ ಅವರು ಗಾಂಧಿ ಹೇಗಾದರು ಎಂದು ಪ್ರಶ್ನಿಸಿದ್ದಾರೆ. ʼʼರಾಹುಲ್ ಹೇಗೆ ಗಾಂಧಿಯಾದರು? ರಾಹುಲ್ ಅವರು ನೆಹರೂ ಕುಟುಂಬದ ಕುಡಿ. ಇದು ನೆಹರೂ ವಂಶ. ಇವರೊಂದಿಗೆ ಗಾಂಧಿಯ ಹೆಸರು ಹೇಗೆ ಥಳುಕು ಹಾಕಿಕೊಂಡಿದೆ?ʼʼ ಎಂದು ಅವರು ಕೇಳಿದ್ದಾರೆ.

ವಾದ ಹೀಗಿದೆ

ʼʼನೆಹರೂ ಅವರ ಮಗಳು ಇಂದಿರಾ ಫಿರೋಜ್ ಖಾನ್ ಅವರನ್ನು ವಿವಾಹವಾದರು. ಫಿರೋಜ್ ಖಾನ್ ನವಾಬ್ ಖಾನ್ ಅವರ ಮಗ. ಫಿರೋಜ್ ಖಾನ್ ಅವರ ಮಗ ರಾಜೀವ್ ಕ್ರಿಶ್ಚಿಯನ್ ಮಹಿಳೆ ಸೋನಿಯಾ ಅವರನ್ನು ವಿವಾಹವಾಗಿದ್ದಾರೆ. ನಂತರ ಸೋನಿಯಾ ಮತ್ತು ರಾಜೀವ್ ಅವರ ಮಗಳು ಪ್ರಿಯಾಂಕಾ ಕ್ರಿಶ್ಚಿಯನ್ ರಾಬರ್ಟ್ ವಾದ್ರಾ ಅವರನ್ನು ವಿವಾಹವಾದರು. ಅವರ ಮನೆಯಲ್ಲಿ ಮುಸ್ಲಿಂ-ಕ್ರಿಶ್ಚಿಯನ್-ಪಾರ್ಸಿ ಇದ್ದಾರೆʼʼ ಎಂದಿದ್ದಾರೆ. ಸದ್ಯ ಈ ವಿಡಿಯೊ ಅನೇಕರ ಗಮನ ಸೆಳೆದಿದ್ದು ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿದೆ.

ಈಗಾಗಲೇ ಈ ವಿಡಿಯೊವನ್ನು 2 ಲಕ್ಷಕ್ಕಿಂತ ಅದಿಕ ಮಂದಿ ವೀಕ್ಷಿಸಿದ್ದಾರೆ. ʼʼರಾಹುಲ್‌ ಗಾಂಧಿ ಅಲ್ಲ, ರಾಹುಲ್‌ ಖಾನ್‌ ಎನ್ನುವುದು ನಿಮ್ಮ ವಾದ ತಾನೇ?ʼʼ ಎಂದು ಒಬ್ಬರು ಪ್ರಶ್ನಿಸಿದ್ದಾರೆ. ʼʼನೀವು ಗಾಂಧಿ ಕುಟುಂಬದ ಕಣ್ಣನ್ನು ತೆರೆಸಿದ್ದೀರಿʼʼ ಎಂದು ಇನ್ನೊಬ್ಬರು ತಮಾಷೆ ಮಾಡಿದ್ದಾರೆ. ʼʼಗಾಂಧಿ ಕುಟುಂಬದ ಸತ್ಯ ಹೊರ ಬಿತ್ತುʼʼ ಎಂದು ಮತ್ತೊಬ್ಬರು ಹೇಳಿದ್ದಾರೆ. ʼʼಪ್ರತಿಯೊಬ್ಬರಿಗೂ ರಾಹುಲ್‌ ಗಾಂಧಿ ಅವರ ಕುಟುಂಬದ ಬಗ್ಗೆ ಗೊತ್ತು. ಇದೀಗ ಪಾಕಿಸ್ತಾನದ ಮಾಧ್ಯಮಗಳೂ ಈ ಬಗ್ಗೆ ಚರ್ಚೆ ನಡೆಸುತ್ತಿವೆʼʼ ಎಂದು ನೆಟ್ಟಿಗರೊಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʼʼಜಾತಿ ಗಣತಿ ಯಾವಾಗ ಆರಂಭಿಸುತ್ತೀರಿ?ʼʼ ಎಂದು ನೇರವಾಗಿ ರಾಹುಲ್‌ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Viral Video: ಸೆಲ್ಫಿ ತೆಗೆಯಲು ಹೋಗಿ 100 ಅಡಿ ಆಳದ ಕಮರಿಗೆ ಬಿದ್ದ ಮಹಿಳೆ!

ಅನುರಾಗ್‌ ಠಾಕೂರ್‌ ಹೇಳಿದ್ದೇನು?

ಸಂಸತ್‌ನಲ್ಲಿ ಮಾತನಾಡಿದ ಅನುರಾಗ್‌ ಠಾಕೂರ್‌, “ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂದು ಟೀಕಿಸಿದ್ದರು. ಅನುರಾಗ್‌ ಠಾಕೂರ್‌ ಹೇಳಿಕೆಗೆ ರಾಹುಲ್‌ ಗಾಂಧಿ ಪ್ರತ್ಯುತ್ತರ ನೀಡಿ, “ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರೋ ಅವಮಾನಿಸಿ. ಆದರೆ ನಾವು ಸಂಸತ್‌ನಲ್ಲಿ ಜಾತಿಗಣತಿ ವಿಧೇಯಕ ಮಂಡಿಸುತ್ತೇವೆ ಎಂಬುದನ್ನು ನೀವು ಮರೆಯದಿರಿ” ಎಂದು ಸವಾಲು ಹಾಕಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಯುವತಿ ಜತೆ ಡ್ಯಾನ್ಸ್ ಮಾಡ್ತಾ ಮಾಡ್ತಾ ಪ್ರಾಣಬಿಟ್ಟ ಯುವಕ; ಆಘಾತಕಾರಿ ವಿಡಿಯೊ

Viral Video: ಸಾವು ಹೇಗೆ ಬರುತ್ತದೆ ಎನ್ನುವುದು ಯಾರಿಗೂ ಗೊತ್ತಿರುವುದಿಲ್ಲ. ಇಲ್ಲೊಬ್ಬ ವ್ಯಕ್ತಿ ಡ್ಯಾನ್ಸ್ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ರಾಜಸ್ಥಾನದ ಭೈನ್ಸ್ ಲಾನಾ ಗ್ರಾಮದಲ್ಲಿ ನಡೆದಿದೆ. ಮನ್ನಾ ಲಾಲ್ ಜಖರ್ ಅವರ ಹಿರಿಯ ಸಹೋದರ ಕೆಲಸದಿಂದ ನಿವೃತ್ತಿಯನ್ನು ಹೊಂದಿದ ಪ್ರಯುಕ್ತ ‘ಸತ್ಸಂಗ’ ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆ ಸಮಯದಲ್ಲಿ ಇವರು ಸಂಭ್ರಮದಿಂದ ಡ್ಯಾನ್ಸ್ ಮಾಡಿದ್ದು, ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇವರು ಕುಸಿದು ಬಿದ್ದ ಆ ಆಘಾತಕಾರಿ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

VISTARANEWS.COM


on

Viral Video
Koo


ಜೀವನ ಎನ್ನುವುದು ನೀರ ಮೇಲಿನ ಗುಳ್ಳೆಯಂತೆ ಕ್ಷಣಿಕ ಮಾತ್ರ. ಅದು ಯಾವ ಕ್ಷಣದಲ್ಲಾದರೂ ಒಡೆಯಬಹುದು. ಹಾಗಾಗಿ ಸಾವು ಯಾರಿಗೆ ಯಾವಾಗ ಸಂಭವಿಸುತ್ತದೆ ಎಂದು ಹೇಳಲು ಆಗುವುದಿಲ್ಲ. ಇದೀಗ ಶಿಕ್ಷಕನೊಬ್ಬ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ಸಾವನಪ್ಪಿದ ಆಘಾತಕಾರಿ ಘಟನೆ ರಾಜಸ್ಥಾನದ ಭೈನ್ಸ್ ಲಾನಾ ಗ್ರಾಮದಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ಮನ್ನಾ ಲಾಲ್ ಜಖರ್ ಡ್ಯಾನ್ಸ್ ಮಾಡುತ್ತಾ ಸಾವನಪ್ಪಿದ ವ್ಯಕ್ತಿ. ಇವರು ವೃತ್ತಿಯಲ್ಲಿ ಶಿಕ್ಷಕನಾಗಿದ್ದು, ಇವರ ಹಿರಿಯ ಸಹೋದರ ಕೆಲಸದಿಂದ ನಿವೃತ್ತಿಯನ್ನು ಹೊಂದಿದ ಪ್ರಯುಕ್ತ ‘ಸತ್ಸಂಗ’ ಕಾರ್ಯಕ್ರಮವನ್ನು ಆಚರಿಸಲಾಗಿದೆ. ಆ ಸಮಯದಲ್ಲಿ ಇವರು ಸಂಭ್ರಮದಿಂದ ಡ್ಯಾನ್ಸ್ ಮಾಡಿದ್ದು, ಆ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇವರು ಕುಸಿದು ಬಿದ್ದ ಆ ಆಘಾತಕಾರಿ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವಿಡಿಯೊದಲ್ಲಿ ಮಹಿಳೆಯೊಬ್ಬಳ ಜೊತೆ ಜಖರ್ ಡ್ಯಾನ್ಸ್ ಮಾಡುವಾಗ ಅವರು ಇದ್ದಕ್ಕಿದ್ದಂತೆ ನೆಲದ ಮೇಲೆ ಬಿದ್ದಿದ್ದಾರೆ. ಅವರನ್ನು ಮೇಲೆತ್ತಲು ಕುಟುಂಬಸ್ಥರು ಮತ್ತು ಮತ್ತು ಗ್ರಾಮಸ್ಥರು ಎಷ್ಟೇ ಪ್ರಯತ್ನಿಸಿದರೂ ಅವರು ಎದ್ದೇಳದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವೈದ್ಯರು ಜಖರ್ ಮೃತಪಟ್ಟಿದ್ದಾರೆ ಎಂದ ತಿಳಿಸಿದ್ದಾರೆ. ಜಖರ್‌ಗೆ ಹೃದಯಾಘಾತವಾಗಿದೆ ಎಂದು ವೈದ್ಯರು ಶಂಕಿಸಿದ್ದಾರೆ. ಈ ಘಟನೆಯು ಕುಟುಂಬ ಮತ್ತು ಗ್ರಾಮವನ್ನು ಆಘಾತಕ್ಕೀಡು ಮಾಡಿದೆ, ಸಂತೋಷದ ಸಂದರ್ಭದ ನಡುವೆ ಈ ಘಟನೆ ಗೊಂದಲವನ್ನುಂಟು ಮಾಡಿದೆ.

ಜೋಧಪುರದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಜಖರ್, ಈ ಕಾರ್ಯಕ್ರಮಕ್ಕಾಗಿ ತಮ್ಮ ಗ್ರಾಮಕ್ಕೆ ಬಂದಿದ್ದರು. ಆದರೆ ಈ ರೀತಿಯಲ್ಲಿ ದುರಂತಕ್ಕೀಡಾದರು. ಅವರ ಸಾವಿನ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮನುಷ್ಯ ಹೇಗೆ ಅಕಾಲಿಕ ಸಾವಿಗೆ ಗುರುಯಾಗುತ್ತಾನೆ ಎಂಬುದನ್ನು ಈ ವಿಡಿಯೊ ಎತ್ತಿ ತೋರಿಸುತ್ತದೆ.

ಇದನ್ನೂ ಓದಿ: ಮೈಗೆ ಟವೆಲ್ ಸುತ್ತಿಕೊಂಡು ಬೀದಿ ತುಂಬಾ ಓಡಾಡಿದ ಯುವತಿ; ನೋಡಿದ ಜನ ಸುಸ್ತು!

Viral Video
Viral Video

ಈ ಹಿಂದೆ ಈ ವರ್ಷದ ಮೇ ತಿಂಗಳಿನಲ್ಲಿ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಮಲನ್ವಾಸಾ ಗ್ರಾಮದಲ್ಲಿ ಭಜನೆಗೆ ನೃತ್ಯ ಮಾಡುವಾಗ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದರು. ಈ ಘಟನೆಯ ಆಘಾತಕಾರಿ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಮೃತರನ್ನು ರಾಜಸ್ಥಾನ ಪಂಚಾಯತ್ ರಾಜ್ ಇಲಾಖೆಯಲ್ಲಿ ಕಿರಿಯ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಜೋಧ್ರಾಜ್ ನಗರ್ ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ಸಂಜೆ ಆಯೋಜಿಸಿದ್ದ ಭಜನಾ ಕಾರ್ಯಕ್ರಮದಲ್ಲಿ ನಾಗರ್ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದುಬಿದ್ದು ಸಾವನಪ್ಪಿದ್ದರು.

Continue Reading

Latest

Viral Video: ಅಳುತ್ತಿರುವ ಹುಡುಗನನ್ನು ಸಮಾಧಾನಪಡಿಸಿದ ನಾಯಿ ಮರಿ! ಆನಂದ್‌ ಮಹೀಂದ್ರಾ ಹಂಚಿಕೊಂಡ ವಿಡಿಯೊ ಇದು

Viral Video: ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಇತ್ತೀಚೆಗೆ ಅಂತಾರಾಷ್ಟ್ರೀಯ ಸ್ನೇಹಿತರ ದಿನದಂದು ನಾಯಿಮರಿ ಮತ್ತು ಮಗುವಿನ ಸ್ನೇಹದ ಮುದ್ದಾದ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅಳುತ್ತಿರುವ ಹುಡುಗನನ್ನು ಆತನ ಸ್ನೇಹಿತನಂತೆ ಇದ್ದ ಸಾಕುಪ್ರಾಣಿ ನಾಯಿಮರಿ ಸಂತೈಸುತ್ತಿದೆ. 39 ಸೆಕೆಂಡುಗಳ ಈ ವಿಡಿಯೊದಲ್ಲಿ ಪುಟ್ಟ ಹುಡುಗನೊಬ್ಬ ನೆಲದ ಮೇಲೆ ಕುಳಿತು ತನ್ನ ಬೆನ್ನನ್ನು ಮಂಚದ ಮೇಲೆ ಇಟ್ಟುಕೊಂಡು ಬೇಸರದಿಂದ ಅಳುತ್ತಿದ್ದಾನೆ. ಆಗ ಅವನ ಪಕ್ಕ ಇದ್ದ ನಾಯಿಮರಿ ಅವನನ್ನು ಸಮಾಧಾನಪಡಿಸುತ್ತಿದೆ.ಈ ಮುದ್ದಾದ ವಿಡಿಯೊ ಸಖತ್ ವೈರಲ್ ಆಗಿದೆ.

VISTARANEWS.COM


on

Viral Video
Koo


ನವದೆಹಲಿ: ಜಗತ್ತಿನೆಲ್ಲೆಡೆ ಆಗಸ್ಟ್ 4ರಂದು ಸ್ನೇಹಿತರ ದಿನವನ್ನು ಆಚರಿಸಲಾಗಿದೆ. ನಮ್ಮ ರಕ್ತ ಸಂಬಂಧಿಕರ ಜೊತೆ ನಮ್ಮ ಸಂಬಂಧ ಬೆಸೆದುಕೊಳ್ಳುವುದು ಸಹಜ. ಆದರೆ ನಮ್ಮ ಜೊತೆ ಯಾವುದೇ ಸಂಬಂಧವಿಲ್ಲದೇ ಬೆಸೆದುಕೊಳ್ಳುವುದೇ ಸ್ನೇಹ. ಜಗತ್ತಿನಲ್ಲಿ ಹೆಚ್ಚಿನ ಜನರಿಗೆ ಸಂಬಂಧಿಕರಿಗಿಂತ ಹೆಚ್ಚು ನೆರವಾಗುವವರು ಸ್ನೇಹಿತರು. ತಮ್ಮ ಸುಖ, ದುಃಖಗಳನ್ನು ಹಂಚಿಕೊಳ್ಳುವ ಮನಸ್ಸೆಂದರೆ ಅದು ಸ್ನೇಹ. ಎಷ್ಟೋ ಜನರು ತಮ್ಮ ಕಷ್ಟಗಳನ್ನು ಸಂಬಂಧಿಕರಿಗಿಂತ ಹೆಚ್ಚು ಸ್ನೇಹಿತರ ಬಳಿಯೇ ಹಂಚಿಕೊಳ್ಳುತ್ತಾರೆ. ಯಾಕೆಂದರೆ ಸ್ನೇಹ ಸಂಬಂಧ ಅಷ್ಟೋಂದು ಬಲವಾಗಿರುತ್ತದೆ. ನಾವು ಸ್ನೇಹವನ್ನು ಮನುಷ್ಯರ ಜೊತೆಯೇ ಮಾಡಬೇಕೆಂದಿಲ್ಲ. ಕೆಲವರು ತಮ್ಮ ಸಾಕು ಪ್ರಾಣಿಗಳ ಜೊತೆಯೂ ಸ್ನೇಹ ಬೆಳೆಸುತ್ತಾರೆ. ಇಂತಹ ಸ್ನೇಹವನ್ನು ವ್ಯಕ್ತಪಡಿಸುವ ಸ್ನೇಹಿತರ ದಿನದಂದು ಉದ್ಯಮಿಯೊಬ್ಬರು ಉತ್ತಮ ಸ್ನೇಹಕ್ಕೆ ನಿರ್ದಶನವೆಂಬಂತೆ ಮುದ್ದಾದ ವಿಡಿಯೊವನ್ನು ಹಂಚಿಕೊಂಡಿದ್ದು ಅದು ಸಖತ್ ವೈರಲ್ (Viral Video) ಆಗಿದೆ.

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಇತ್ತೀಚೆಗೆ ಅಂತರರಾಷ್ಟ್ರೀಯ ಸ್ನೇಹಿತರ ದಿನದಂದು ನಾಯಿಮರಿ ಮತ್ತು ಮಗುವಿನ ಸ್ನೇಹದ ಮುದ್ದಾದ ವಿಡಿಯೊವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಅಳುತ್ತಿರುವ ಹುಡುಗನನ್ನು ಆತನ ಸ್ನೇಹಿತನಂತೆ ಇದ್ದ ಸಾಕುಪ್ರಾಣಿ ನಾಯಿಮರಿ ಸಂತೈಸುತ್ತಿದೆ. 39 ಸೆಕೆಂಡುಗಳ ಈ ವಿಡಿಯೊದಲ್ಲಿ ಪುಟ್ಟ ಹುಡುಗನೊಬ್ಬ ನೆಲದ ಮೇಲೆ ಕುಳಿತು ತನ್ನ ಬೆನ್ನನ್ನು ಮಂಚದ ಮೇಲೆ ಇಟ್ಟುಕೊಂಡು ಬೇಸರದಿಂದ ಅಳುತ್ತಿದ್ದಾನೆ. ಆಗ ಅವನ ಪಕ್ಕ ಇದ್ದ ನಾಯಿಮರಿ ಅವನನ್ನು ಸಮಾಧಾನಪಡಿಸುತ್ತಿದೆ. ಹಾಗೇ ಅವನ ಕಣ್ಣೀರನ್ನು ಒರೆಸಿಕೊಳ್ಳಲು ಅದು ಟಿಶ್ಯೂವನ್ನು ಅವನಿಗೆ ತಂದು ನೀಡಿದೆ. ಮತ್ತು ಅಳುತ್ತಿರುವ ಅವನ ಮುಖವನ್ನೇ ಬೇಸರದಿಂದ ನೋಡುತ್ತಿದೆ. ಆ ಹುಡುಗ ಕೂಡ ನಾಯಿಮರಿಯನ್ನು ಗಟ್ಟಿಯಾಗಿ ತಬ್ಬಿಕೊಳ್ಳುತ್ತಾನೆ. ಈ ದೃಶ್ಯವನ್ನು ನೋಡಿದ ಎಂತವರಿಗೂ ಹೃದಯ ಭಾರವೆನಿಸುತ್ತದೆ. ಮೂಕ ಪ್ರಾಣಿಗಳಲ್ಲಿರುವ ಸ್ನೇಹದ ಮನೋಭಾವನೆಯನ್ನು ಈ ವಿಡಿಯೊ ಎತ್ತಿ ತೋರಿಸಿದೆ.

Viral Video
Viral Video

ಇದನ್ನೂ ಓದಿ: ವಯನಾಡ್ ಭೂಕುಸಿತ; ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

“ನಿಜವಾದ ಸ್ನೇಹಿತರು ನಮ್ಮ ಪ್ರತಿ ಕಣ್ಣೀರನ್ನು ಹಂಚಿಕೊಳ್ಳುತ್ತಾರೆ” ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ. “ಈ ದೃಶ್ಯ ನಿಜವಾಗಿಯೂ ಸುಂದರವಾಗಿದೆ,” ಎಂದು ಇನ್ನೊಬ್ಬರು ಹೇಳಿದರು. “ಇದು ಮುದ್ದಾದ ಸಂಬಂಧ,” ಎಂದು ಮೂರನೆಯವರು ತಿಳಿಸಿದ್ದಾರೆ. “ಸ್ನೇಹವು ಎಂದಿಗೂ ವಿಶೇಷ ಜನರೊಂದಿಗೆ ಇರುವುದಿಲ್ಲ … ನಾವು ಸ್ನೇಹಿತರಾಗಿರುವ ಜನರು ವಿಶೇಷವಾಗುತ್ತಾರೆ” ಎಂದು ಬಳಕೆದಾರ ಸುಲೇಮಾನ್ ಖಾನ್ ಎಂಬುವವರು ಹಂಚಿಕೊಂಡಿದ್ದಾರೆ.

Continue Reading

ದೇಶ

Wayanad Landslide: ವಯನಾಡು ದುರಂತ: 6 ದಿನಗಳ ಬಳಿಕ ಒಡತಿಯನ್ನು ಕಂಡ ಶ್ವಾನದ ಸಂಭ್ರಮ ಹೇಗಿದೆ ನೋಡಿ

Wayanad Landslide: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ 360ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಅವಶೇಷಗಳಡಿ ಸಿಲುಕಿದವರನ್ನು, ನಾಪತ್ತೆಯಾದವರನ್ನು ಹುಡುಕುವ ಕಾರ್ಯ ಭರದಿಂದ ಸಾಗುತ್ತಿದೆ. ಈ ಮಧ್ಯೆ ದುರಂತ ನಡೆದು 6 ದಿನಗಳಿಂದ ಅಲೆದಾಡುತ್ತಿದ್ದ ಸಾಕುನಾಯಿಯೊಂದು ತನ್ನವರನ್ನು ಪತ್ತೆ ಹಚ್ಚಿ ಸಂತಸ ವ್ಯಕ್ತಪಡಿಸಿದ ಹೃದಯಸ್ಪರ್ಶಿ ಘಟನೆಯೂ ನಡೆದಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ವಿಡಿಯೊ ನೀವೂ ನೋಡಿ.

VISTARANEWS.COM


on

Wayanad Landslide
Koo

ತಿರುವನಂತಪುರಂ: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ 360ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ (Wayanad Landslide). ಅವಶೇಷಗಳಡಿ ಸಿಲುಕಿದವರನ್ನು, ನಾಪತ್ತೆಯಾದವರನ್ನು ಹುಡುಕುವ ಕಾರ್ಯ ಭರದಿಂದ ಸಾಗುತ್ತಿದೆ. ಈ ಮಹಾನ್‌ ಕಾರ್ಯಕ್ಕೆ ಸೇನೆಯೂ ಕೈ ಜೋಡಿದೆ. ಜತೆಗೆ ಶ್ವಾನದಳದ ಮೂಲಕವೂ ಕಾರ್ಯಾಚರಣೆ ನಡಯುತ್ತಿದೆ. ಈ ಮಧ್ಯೆ ದುರಂತ ನಡೆದು 6 ದಿನಗಳಿಂದ ಅಲೆದಾಡುತ್ತಿದ್ದ ಸಾಕುನಾಯಿಯೊಂದು ತನ್ನವರನ್ನು ಪತ್ತೆ ಹಚ್ಚಿ ಸಂತಸ ವ್ಯಕ್ತಪಡಿಸಿದ ಹೃದಯಸ್ಪರ್ಶಿ ಘಟನೆಯೂ ನಡೆದಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ (Viral Video).

ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ವಯನಾಡಿನ ಮೆಪ್ಪಾಡಿಯಲ್ಲಿ ಜುಲೈ 30ರ ಮುಂಜಾನೆ ಸುಮಾರು 2 ಗಂಟೆ ಮತ್ತು 4 ಗಂಟೆಗೆ ನಡೆದ ಭೀಕರ ಭೂಕುಸಿತದಿಂದ ಮಣ್ಣಿನ ರಾಶಿ, ಕಲ್ಲು ಬಂಡೆ, ಮರಗಳ ದಿಮ್ಮಿ ತೇಲಿ ಬಂದು ಇಡೀ ಊರನ್ನೇ ಮುಚ್ಚಿ ಹಾಕಿದೆ. ಜತೆಗೆ ನದಿಯೂ ಮೇರೆ ಮೀರಿ, ಪಥ ಬದಲಾಯಿಸಿ ಹರಿದು ಇನ್ನಷ್ಟು ನಾಶ ನಷ್ಟಕ್ಕೆ ಕಾರಣವಾಗಿದೆ.

ಈ ಭೀಕರ ದುರಂತದಿಂದ ಪಾರಾದವರನ್ನು ಸುರಕ್ಷಿತ ಸ್ಥಳದಲ್ಲಿ ತೆರೆಯಲಾದ ನಿರಾಶ್ರಿತರ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಂತಹವರ ಪೈಕಿ ಈ ಶ್ವಾನದ ಮನೆಯವರೂ ಇದ್ದರು. ಇವರ ಮನೆ ಕುಸಿದು ಬಿದ್ದಿತ್ತು. ಹೀಗಾಗಿ ಅವರು ಸುರಕ್ಷಿತ ಜಾಗಕ್ಕೆ ತೆರಳಿದ್ದರು. ಆದರೆ ಆ ವೇಳೆ ಶ್ವಾನ ಇವರೊಂದಿಗೆ ಇರಲಿಲ್ಲ.

ಇತ್ತ ಮನೆಯ ಬಳಿ ಬಂದ ಶ್ವಾನ ತನ್ನವರನ್ನು ಕಾಣದೆ ಕಂಗಾಲಾಗಿತ್ತು. ಮನೆಯವರನ್ನು ಹುಡುಕುತ್ತ ಅಲ್ಲೇ ನೋವಿನಿಂದ ಓಡಾಡಿಕೊಂಡಿತ್ತು. ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಕಾರಣ ಮತ್ತು ಪ್ರತಿಕೂಲ ಹವಾಮಾನ ಇದ್ದುದರಿಂದ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಸ್ವಯಂ ಸೇವಕರಲ್ಲದವರು ಆಗಮಿಸುವಂತಿರಲಿಲ್ಲ. ಹೀಗಾಗಿ ಈ ಶ್ವಾನದ ವಾರಸುದಾರರು ಮನೆ ಇದ್ದ ಜಾಗಕ್ಕೆ ಬಂದಿರಲಿಲ್ಲ. ಇತ್ತ ಸ್ವಯಂ ಸೇವಕರು ಆಹಾರ ನೀಡುತ್ತಿದ್ದರೂ ಮನೆಯವರನ್ನು ಕಾಣದೆ ಶ್ವಾನ ಯಾವುದನ್ನೂ ಮುಟ್ಟುತ್ತಿರಲಿಲ್ಲ. ದಿನ ಅತ್ತ ಇತ್ತ ಓಡಾಡಿ ತನ್ನವರಿಗಾಗಿ ಶೋಧ ಕಾರ್ಯ ನಡೆಸುತ್ತಲೇ ಇತ್ತು.

ಇದೀಗ ಮಳೆ ಕಡಿಮೆಯಾಗಿದೆ. ಶೋಧ ಕಾರ್ಯವೂ ಬಹುತೇಕ ಪೂರ್ಣಗೊಂಡಿದೆ. ಹೀಗಾಗಿ ಸ್ಥಳೀಯರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಅದರಂತೆ ಭಾನುವಾರ ಈ ಶ್ವಾನದ ಮಾಲಕರು ತಮ್ಮ ಮನೆ ಇರುವ ಜಾಗಕ್ಕೆ ಬಂದಿದ್ದಾರೆ. ಈ ವೇಳೆ ಇವರನ್ನು ನೋಡಿ ಶ್ವಾನದ ಖುಷಿಗೆ ಪಾರವೇ ಇಲ್ಲ. ತನ್ನ ಒಡತಿಯನ್ನು ಕಂಡಾಗ ಓಡೋಡಿ ಬಂದು ತಬ್ಬಿಕೊಂಡಿದೆ. ಅವರ ಮೈಮೇಲೆ ಹತ್ತಿ ಬಾಲ ಅಲ್ಲಾಡಿಸಿ ಖುಷಿಯನ್ನು ವ್ಯಕ್ತಪಡಿಸಿದೆ. ಮಾಲಕಿಯೂ ಅಳಬೇಡ ಎಂದು ಹೇಳಿ ಅದನ್ನು ಸಂತೈಸಿದ್ದಾರೆ. ಶ್ವಾನದ ಪ್ರೀತಿ ಕಂಡು ಅಲ್ಲಿದ್ದವರು ಒಂದು ಕ್ಷಣ ಮೂಕರಾಗಿದ್ದಾರೆ.

ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಶ್ವಾನದ ಮಮತೆಗೆ ಹಲವರು ಭಾವುಕರಾಗಿದ್ದಾರೆ. ಸಾವಿರಾರು ಮಂದಿ ಲೈಕ್‌ ಬಟನ್‌ ಒತ್ತಿದ್ದಾರೆ.

ಇದನ್ನೂ ಓದಿ: Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

Continue Reading

ಕ್ರೈಂ

Bengaluru:‌ ಬೆಂಗಳೂರಲ್ಲಿ ಸ್ತ್ರೀಯರಿಗಿಲ್ಲ ರಕ್ಷಣೆ; ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಕಿಸ್‌ ಕೊಟ್ಟ ಕಾಮುಕ; Video ವೈರಲ್

Bengaluru: ಬೆಂಗಳೂರಿನ ಕೋಣನಕುಂಟೆ ಬಳಿಯ ಕೃಷ್ಣಾ ನಗರದಲ್ಲಿ ಮಹಿಳೆಯೊಬ್ಬರು ವಾಕಿಂಗ್‌ ಮಾಡುತ್ತಿದ್ದರು. ಇದೇ ವೇಳೆ ದುಷ್ಕರ್ಮಿಯೊಬ್ಬ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಗೆ ಕಿಸ್‌ ಕೊಟ್ಟು ಆತ ಪರಾರಿಯಾಗಿದ್ದಾನೆ. ಈ ವಿಡಿಯೊ ಈಗ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

VISTARANEWS.COM


on

Bengaluru
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಹೌದು, ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಸಿಸಿಟಿವಿ ದೃಶ್ಯಾವಳಿ

ಶುಕ್ರವಾರ (ಆಗಸ್ಟ್‌ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್‌ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ.

ವಿಡಿಯೊ ವೈರಲ್‌ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್‌ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಕೆಲವು ವಾರಗಳಿಂದ ಸಕ್ರಿಯವಾಗಿರುವ ಎಟಿಎಂ ಕಳ್ಳರ ಗ್ಯಾಂಗ್‌ಗಳು ಕೂಡ ಪೊಲೀಸರಿಗೆ ತಲೆನೋವಾಗಿವೆ. ಹರಿಯಾಣ ಮೂಲದ ಎರಡು ಗ್ಯಾಂಗ್‌ಗಳು ಸತತವಾಗಿ ಎಟಿಎಂಗಳಿಂದ ಹಣ ಎತ್ತುತ್ತಿವೆ. ಗುರುತೇ ಸಿಗದಂತೆ ದರೋಡೆ ಮಾಡುತ್ತಿರುವ ಈ ಗ್ಯಾಂಗ್‌ಗಳು ಪೊಲೀಸರಿಗೆ ತಲೆನೋವಾಗಿವೆ.

ಬೆಳ್ಳಂದೂರು ಠಾಣೆ ವ್ಯಾಪ್ತಿಯ ಎಕ್ಸಿಸ್ ಬ್ಯಾಂಕ್ ಎಟಿಎಂನಿಂದ ಕಳ್ಳತನ ಮಾಡಲಾಗಿದೆ. ಇಕೋ ಎರ್ಟಿಗಾ ಕಾರ್‌ನಲ್ಲಿ ಬಂದು ಕಳವು ಮಾಡಲಾಗಿದೆ. ಪರಿಶೀಲಿಸಿದಾಗ ಕಾರು ಕೂಡ ಕಳವು ಮಾಲು ಎಂಬುದು ಗೊತ್ತಾಗಿದೆ. ಆರೋಪಿಗಳು ಮೈಮೇಲೆ ಹೊದಿಕೆ ಹೊದ್ದುಕೊಂಡು ಎಟಿಎಂ ಒಳಗೆ ಹೋಗಿ ಕೃತ್ಯ ನಡೆಸುತ್ತಿದ್ದಾರೆ. ಹೀಗಾಗಿ ಇವರು ಗುರುತು ಕಾಣಿಸದಾಗಿದೆ.

ಇದನ್ನೂ ಓದಿ: Kangana Ranaut: ಮಲಗುವ ಕೋಣೆಗಳಲ್ಲಿ ಲೈಂಗಿಕತೆ ಏಕೆ ಉಳಿಯಬಾರದು?; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ

Continue Reading
Advertisement
Viral Video
Latest5 mins ago

Viral Video: ಯುವತಿ ಜತೆ ಡ್ಯಾನ್ಸ್ ಮಾಡ್ತಾ ಮಾಡ್ತಾ ಪ್ರಾಣಬಿಟ್ಟ ಯುವಕ; ಆಘಾತಕಾರಿ ವಿಡಿಯೊ

Physical Abuse
ವಿಜಯಪುರ16 mins ago

Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

Sex Racket
Latest20 mins ago

Sex Racket: ಹೋಟೆಲ್‍ನಲ್ಲಿ ಸೆಕ್ಸ್ ದಂಧೆ ಪತ್ತೆ; ನಗ್ನ ಸ್ಥಿತಿಯಲ್ಲಿದ್ದ 10 ಜೋಡಿಗಳು ಪೊಲೀಸ್‌ ಬಲೆಗೆ!

Duniya Vijay- Ganesh To Combined together make Movie in future
ಸ್ಯಾಂಡಲ್ ವುಡ್21 mins ago

Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

Cloudburst
ದೇಶ23 mins ago

Cloudburst: ಮೇಘಸ್ಫೋಟದಿಂದ ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ; 40ಕ್ಕೂ ಹೆಚ್ಚು ಮಂದಿ ನಾಪತ್ತೆ

Viral Video
Latest27 mins ago

Viral Video: ಅಳುತ್ತಿರುವ ಹುಡುಗನನ್ನು ಸಮಾಧಾನಪಡಿಸಿದ ನಾಯಿ ಮರಿ! ಆನಂದ್‌ ಮಹೀಂದ್ರಾ ಹಂಚಿಕೊಂಡ ವಿಡಿಯೊ ಇದು

Valmiki Corporation Scam
ಪ್ರಮುಖ ಸುದ್ದಿ37 mins ago

Valmiki Corporation scam: ವಾಲ್ಮೀಕಿ ನಿಗಮ ಹಗರಣ; ಕೋರ್ಟ್‌ಗೆ 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎಸ್‌ಐಟಿ

Indian stock market
ಪ್ರಮುಖ ಸುದ್ದಿ38 mins ago

Stock Market News: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ, ರೂ.17.03 ಲಕ್ಷ ಕೋಟಿ ನಷ್ಟ

Kannada New Movie idu enta lokavayya movie Kannada ananth nag
ಸಿನಿಮಾ57 mins ago

Kannada New Movie: ʻಇದು ಎಂಥಾ ಲೋಕವಯ್ಯʼ ಸಿನಿಮಾ ಬಿಡುಗಡೆಗೆ ಸಜ್ಜು; ತಂಡಕ್ಕೆ ನಟ ಅನಂತ್ ನಾಗ್ ಸಾಥ್‌!

Nursing student dies
ಕರ್ನಾಟಕ1 hour ago

Nursing Student Dies: 6ನೇ ಮಹಡಿಯಿಂದ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌