ನಾನು ಬಂದಾಗ ನೀವು ಯಾಕೆ ಇರಲಿಲ್ಲ ಎಂದ ಬಾಸ್​ಗೆ ಈ ಉದ್ಯೋಗಿ ಕೊಟ್ಟ ಉತ್ತರ ಈಗ ಫುಲ್ ವೈರಲ್! - Vistara News

ವೈರಲ್ ನ್ಯೂಸ್

ನಾನು ಬಂದಾಗ ನೀವು ಯಾಕೆ ಇರಲಿಲ್ಲ ಎಂದ ಬಾಸ್​ಗೆ ಈ ಉದ್ಯೋಗಿ ಕೊಟ್ಟ ಉತ್ತರ ಈಗ ಫುಲ್ ವೈರಲ್!

ಜಿ.ಎಸ್​.ಬೈರ್ವಾ ಅವರು ಬೆಳಗ್ಗೆ ಇನ್​​ಸ್ಪೆಕ್ಷನ್​​ಗೆ ಬಂದಾಗ ಅಜಿತ್​ ಸಿಂಗ್​ ಇರಲಿಲ್ಲ. ಹೀಗಾಗಿ ಅವರ ಬಳಿ ಸ್ಪಷ್ಟನೆ ಕೇಳಿ ನೋಟಿಸ್ ಕೊಟ್ಟಿದ್ದರು. ಅದಕ್ಕೆ ಅಜಿತ್ ಸಿಂಗ್​ ಕೊಟ್ಟ ಉತ್ತರ ಸಿಕ್ಕಾಪಟೆ ವೈರಲ್ ಆಗುತ್ತಿದೆ.

VISTARANEWS.COM


on

Boss Notice
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಚೇರಿಗೆ ತಡವಾಗಿ ಹೋಗುವುದು, ಮ್ಯಾನೇಜರ್​/ಚೀಫ್ ಬಳಿ ಬೈಸಿಕೊಳ್ಳುವುದು ತೀರ ಸಾಮಾನ್ಯ. ಲೇಟ್​ ಆಗಿ ಬಂದಿದ್ದಕ್ಕೆ ಮ್ಯಾನೇಜರ್​ ಬೈದಾಗ, ಅದೆಷ್ಟೋ ಉದ್ಯೋಗಿಗಳು ನಿರುತ್ತರರಾಗುತ್ತಾರೆ. ಏನಾದರೂ ತಿರುಗಿ ಉತ್ತರ ಕೊಡಲು ಹಿಂಜರಿಯುತ್ತಾರೆ. ಇನ್ನು ಕೆಲವು ಬಾಸ್​ಗಳು ಬಿಡಿ, ಫ್ರೆಂಡ್ಲಿಯಾಗಿ ಇರುತ್ತಾರೆ. ನೀವು ಲೇಟ್ ಆಗಿ ಬಂದಿದ್ದಕ್ಕೆ ನಿಮ್ಮನ್ನು ಕ್ಷಮಿಸಿಬಿಡುತ್ತಾರೆ.

ಆದರೆ ರಾಜಸ್ಥಾನದಲ್ಲಿ ಒಬ್ಬ ಸರ್ಕಾರಿ ಉದ್ಯೋಗಿ ತಡವಾಗಿ ಬಂದಿದ್ದಲ್ಲದೆ, ಅದನ್ನು ಪ್ರಶ್ನಿಸಿದ ತನ್ನ ಮೇಲಧಿಕಾರಿಗೆ ತುಂಬ ಕಟುವಾಗಿ ಉತ್ತರ ಕೊಟ್ಟಿದ್ದಾರೆ. ಉದ್ಯೋಗಿ ಇಂಥದ್ದೊಂದು ಉತ್ತರ ಕೊಡಬಹುದು ಎಂದು ಮೇಲಧಿಕಾರಿ ನಿರೀಕ್ಷೆಯನ್ನೂ ಮಾಡಿರದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಜೈಫುರದ ವಿದ್ಯುತ್​ ವಿತರಣ ನಿಗಮ ಲಿಮಿಟೆಡ್​​ನಲ್ಲಿ ಕಮರ್ಷಿಯಲ್ ಅಸಿಸ್ಟೆಂಟ್​ ಆಗಿರುವ ಅಜಿತ್ ಸಿಂಗ್​ಗೆ ಅವರ ಬಾಸ್​ ಅಂದರೆ ಮೇಲಧಿಕಾರಿ ಜಿ.ಎಸ್​.ಬೈರ್ವಾ ಎಂಬುವರು ನೋಟಿಸ್ ಕೊಟ್ಟಿದ್ದರು. ಕೋಟಾ ಝೋನ್​​ನ ಮುಖ್ಯ ಇಂಜಿನಿಯರ್​ ಆಗಿರುವ ಜಿ.ಎಸ್.ಬೈರ್ವಾ ಅವರು ಜಲೈ 14ರಂದು ಜೈಪುರ ವಿದ್ಯುತ್​ ವಿತರಣ ನಿಗಮಕ್ಕೆ ಅಚಾನಕ್ ಆಗಿ ಇನ್​ಸ್ಪೆಕ್ಷನ್​​ಗಾಗಿ ಬಂದಿದ್ದರು.

ಇದನ್ನೂ ಓದಿ: Viral Video: ಮಹಾಕಾಲನ ಮೆರವಣಿಗೆ ಮೇಲೆ ನೀರು ಉಗುಳಿದ್ದವರ ಮನೆ ಧ್ವಂಸ; ಜತೆಗೆ ತಮಟೆ, ಡ್ರಮ್ ವಾದನ

ಜಿ.ಎಸ್​.ಬೈರ್ವಾ ಬಂದಾಗ ಅಜಿತ್​ ಸಿಂಗ್​ ಇರಲಿಲ್ಲ. ಹೀಗಾಗಿ ಅವರ ಬಳಿ ಸ್ಪಷ್ಟನೆ ಕೇಳಿ ನೋಟಿಸ್ ಕೊಟ್ಟಿದ್ದರು. ಬೆಳಗ್ಗೆ ಬೈರ್ವಾ ಅವರು ತಪಾಸಣೆಗೆ ಬಂದಾಗ ಅಜಿತ್ ಸಿಂಗ್ ಅಲ್ಲಿರಲಿಲ್ಲ. ಹಾಜರಿ ಪುಸ್ತಕದಲ್ಲಿ ಅವರ ಸಹಿಯೂ ಇರಲಿಲ್ಲ. ಹೀಗಾಗಿ ಸಿಟ್ಟಾದ ಜಿ.ಎಸ್.ಬೈರ್ವಾ ಗೈರಾದ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಅಜಿತ್ ಸಿಂಗ್​ಗೆ ನೋಟಿಸ್ ಕೊಟ್ಟಿದ್ದರು. ಆದರೆ ಅಜಿತ್​ ಸಿಂಗ್ ತುಂಬ ರಫ್​ ಆಗಿ ಉತ್ತರ ಕೊಟ್ಟಿದ್ದಾರೆ. ’ನೀವೆಂದೂ ಸರಿಯಾದ ಸಮಯಕ್ಕೆ ಬಂದಿಲ್ಲ, ಹಾಗಾಗಿ ನಾನೂ ಸಮಯಕ್ಕೆ ಸರಿಯಾಗಿ ಬರುವುದಿಲ್ಲ’ ಎಂದು ಹೇಳಿದ್ದಾರೆ. ಅಜಿತ್ ಸಿಂಗ್ ಅವರು ನೋಟಿಸ್​ಗೆ ಕೊಟ್ಟ ಉತ್ತರದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat- Anushka: ಕೊಹ್ಲಿ ಮಾಡಿದ ರನೌಟ್​ ಕಂಡು ಆಶ್ಚರ್ಯ ಚಕಿತರಾದ ಅನುಷ್ಕಾ

Virat- Anushka: ಎರಡನೇ ಮಗುವಾದ ಬಳಿಕ ಅನುಷ್ಕಾ ಇದುವರೆಗೂ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ವಿರಾಟ್​ ಕೊಹ್ಲಿಗೆ(Virat Kohli) ಸ್ಫೂರ್ತಿ ನೀಡಲೆಂದೇ ಐಪಿಎಲ್​ನ ದ್ವಿತಿಯಾರ್ಧದ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಇದೀಗ ಅವರು ಸ್ಟೇಡಿಯಂನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು ಪತಿಗೆ ಚಿಯರ್ ಅಪ್ ಮಾಡಿದ್ದಾರೆ.

VISTARANEWS.COM


on

Virat- Anushka
Koo

ಬೆಂಗಳೂರು: ಶನಿವಾರ ನಡೆದ ಗುಜರಾತ್​ ಟೈಟಾನ್ಸ್​ ವಿರುದ್ಧದ ಪಂದ್ಯದ ಆರ್​ಸಿಬಿ 4 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat- Anushka) ಅವರು ಎದುರಾಳಿ ತಂಡದ ಆಟಗಾರ ಶಾರೂಖ್​ ಖಾನ್​ ಅವರನ್ನು ಮಿಂಚಿನ ಎಸೆತದ ಮೂಲಕ ರನೌಟ್​ ಮಾಡಿ ಗಮನಸೆಳೆದರು. ಬುಲೆಟ್​ ಚಿಮ್ಮಿದ ವೇಗದಲ್ಲಿ ರನೌಟ್​ ಮಾಡಿದ್ದನ್ನು ಕಂಡು ಪತ್ನಿ ಅನುಷ್ಕಾ(Anushka Sharma) ದಂಗಾಗಿದ್ದಾರೆ. ಇದರ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿದೆ.


ಆರಂಭಿಕ ಆಘಾತ ಕಂಡಿದ್ದ ಗುಜರಾತ್​ಗೆ ಶಾರೂಖ್​ ಖಾನ್​ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್​ ಮೂಲಕ ಆಸರೆಯಾಗಿದ್ದರು. 24 ಎಸೆತಗಳಿಂದ 37 ರನ್​ ಗಳಿಸಿ ನಾನ್​ಸ್ಟ್ರೈಕ್​ನಲ್ಲಿದ್ದ ಶಾರೂಖ್ ಇಲ್ಲದ ರನ್​ ಕದಿಯಲು ಯತ್ನಿಸಿದ ವೇಳೆ ಚಿರತೆ ವೇಗದಲ್ಲಿ ಫೀಲ್ಡಿಂಗ್​ ನಡೆಸಿ ಕೊಹ್ಲಿ ಚೆಂಡನ್ನು ನೇರವಾಗಿ ವಿಕೆಟ್​ಗೆ ಎಸೆದು ರನೌಟ್​ ಮಾಡಿದರು. ಒಂದೊಮ್ಮೆ ಕೊಹ್ಲಿ ಈ ರನೌಟ್​ ಮಾಡದಿದ್ದರೆ ಶಾರೂಖ್​ ಆರ್​ಸಿಬಿಗೆ ಅಪಾಯಕಾರಿಯಾಗಿ ಗೋಚರಿಸುವ ಸಾಧ್ಯತೆಯೂ ಇತ್ತು.

ಎರಡನೇ ಮಗುವಾದ ಬಳಿಕ ಅನುಷ್ಕಾ ಇದುವರೆಗೂ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ವಿರಾಟ್​ ಕೊಹ್ಲಿಗೆ(Virat Kohli) ಸ್ಫೂರ್ತಿ ನೀಡಲೆಂದೇ ಐಪಿಎಲ್​ನ ದ್ವಿತಿಯಾರ್ಧದ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಇದೀಗ ಅವರು ಸ್ಟೇಡಿಯಂನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು ಪತಿಗೆ ಚಿಯರ್ ಅಪ್ ಮಾಡಿದ್ದಾರೆ. ಹಿಂದೆ ಅನೇಕ ಬಾರಿ ಅನುಷ್ಕಾ ಮೈದಾನದಲ್ಲಿದ್ದು, ಪತಿ ಕೊಹ್ಲಿಗೆ ಚಿಯರ್ ಅಪ್ ಮಾಡಿದ್ದರು. ಕಳೆದ ಬಾರಿ ಏಕದಿನ ವಿಶ್ವಕಪ್ ಟೂರ್ನಿಯ ವೇಳೆಯೂ ಬಹುತೇಖ ಪಂದ್ಯಗಳಲ್ಲಿ ಅನುಷ್ಕಾ ಅವರು ಕೊಹ್ಲಿಗೆ ಹುರಿದುಂಬಿಸಿದ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿತ್ತು.

ಇದನ್ನೂ ಓದಿ IPL 2024: ಇಂದು ಐಪಿಎಲ್​ನಲ್ಲಿ ಡಬಲ್​ ಹೆಡರ್​ ಪಂದ್ಯ; ಮೊದಲ ಪಂದ್ಯ ಯಾವುದು?

ಗುಜರಾತ್​ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 27 ಎಸೆತಗಳಿಂದ 4 ಸಿಕ್ಸರ್​ ಮತ್ತು 2 ಬೌಂಡರಿ ನೆರವಿನಿಂದ 42 ರನ್​ ಬಾರಿಸಿದರು. ಇದೇ ವೇಳೆ ಮತ್ತೆ ಆರೆಂಜ್​ ಕ್ಯಾಪ್​ ತನ್ನದಾಗಿಸಿಕೊಂಡರು. ಸದ್ಯ ಕೊಹ್ಲಿ 542 ರನ್​ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ಇಂದು ನಡೆಯುವ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಚೆನ್ನೈ ನಾಯಕ ಋತುರಾಜ್​ ಗಾಯಕ್ವಾಡ್(509)​ 34 ರನ್​ ಬಾರಿಸಿದರೆ ಈ ಕ್ಯಾಪ್ ಗಾಯಕ್ವಾಡ್ ಪಾಲಾಗಲಿದೆ.

​ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​​ಸಿಬಿ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಗುಜರಾತ್ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿದ ಕಾರಣ 19.3 ಓವರ್​ಗಳಲ್ಲಿ 147 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆರ್​ಸಿಬಿ ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು.

Continue Reading

ಉತ್ತರ ಕನ್ನಡ

Murder case : ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

Murder case : ಸಿಟ್ಟು ಮನುಷ್ಯನನ್ನು ಏನೆಲ್ಲ ತಪ್ಪು ಮಾಡಿಸುತ್ತೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ.. ಪತಿ ಮೇಲಿನ ಸಿಟ್ಟಿಗೆ ತಾಯಿಯೊಬ್ಬಳು 6 ವರ್ಷ ಪ್ರಾಯದ ಮಗನನ್ನು ನಾಲೆಗೆ ಎಸೆದಿದ್ದಾಳೆ. ನೀರಲ್ಲಿ ಮುಳುಗಿದ ಮಗುವಿನ ಬಲಗೈ ಅನ್ನು ಮೊಸಳೆ ಕಚ್ಚಿ ತಿಂದಿದೆ.

VISTARANEWS.COM


on

By

murder case In karwar
ರವಿಕುಮಾರ್‌ ಹಾಗೂ ಸಾವಿತ್ರಿ ದಂಪತಿ.. ಮತ್ತೊಂದು ಬದಿಯಲ್ಲಿ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ ಪೊಲೀಸರು
Koo

ಕಾರವಾರ : ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ (Murder case ) ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.

ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್‌ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್‌ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.

ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ಇದನ್ನೂ ಓದಿ: Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.

ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

Urvashi Rautela: ಪಂತ್​ ಜತೆ ಮದುವೆಯಾಗುತ್ತೀರಾ?; ಅಭಿಮಾನಿಯ ಪ್ರಶ್ನೆಗೆ ಉತ್ತರಿಸಿದ ಊರ್ವಶಿ ರೌಟೇಲಾ; ವಿಡಿಯೊ ವೈರಲ್​

Urvashi Rautela: ರಿಷಭ್‌ ಪಂತ್ ನಿಮ್ಮನ್ನು ತುಂಬಾ ಗೌರವಿಸುತ್ತಾರೆ, ತುಂಬಾ ಚೆನ್ನಾಗಿಯೂ ನೋಡಿಕೊಳ್ಳುತ್ತಾರೆ, ನೀವು ಅವರನ್ನು ಮದುವೆಯಾಗಬೇಕು ಅನ್ನೋದು ನಮ್ಮ ಬಯಕೆ, ಇದಕ್ಕೆ ಏನಂತೀರಾ?ʼ ಎಂದು ನೆಟ್ಟಿಗನ ಪ್ರಶ್ನೆಗೆ ಉತ್ತರಿಸಿದ ಊರ್ವಶಿ ನೋ ಕಾಮೆಂಟ್ಸ್‌ ಎಂದು ಹೇಳಿದ್ದಾರೆ.

VISTARANEWS.COM


on

Urvashi Rautela
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್​ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ರಿಷಭ್​ ಪಂತ್(Rishabh Pant)​ ಜತೆ ಮದುವೆಯ ವಿಚಾರಕ್ಕೆ ಸಂಬಂಧಿಸಿ ಬಾಲಿವುಡ್ ನಟಿ ಊರ್ವಶಿ ರೌಟೇಲಾ(Urvashi Rautela) ನೀಡಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿದೆ.

ರಿಷಭ್​ ಪಂತ್ ಮತ್ತು ಊರ್ವಶಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲ ವರ್ಷಗಳ ಹಿಂದೆ ಬಾರೀ ಸದ್ದು ಮಾಡಿತ್ತು. ಇದೇ ವೇಳೆ ಊರ್ವಶಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಭ್‌ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಈ ಬಗ್ಗೆ ರಿಷಭ್‌ ನಟಿಗೆ ಖಡಕ್ ತಿರುಗೇಟು ನೀಡಿದ್ದರು. ಇದೇ ವಿಚಾರವಾಗಿ ಇವರಿಬ್ಬರ ಮಧ್ಯೆ ಟ್ವೀಟ್​ ವಾರ್​ ಕೂಡ ನಡೆದಿತ್ತು. ಈ ಘಟನೆ ನಡೆದ ಬಳಿಕ ಇವರಿಬ್ಬರು ಬ್ರೇಕಪ್​ ಆಗಿದ್ದಾರೆ ಎನ್ನಲಾಗಿತ್ತು. ಇದೀಗ ಅಭಿಮಾನಿಗಳ ಬಯಕೆಯಂತೆ ಪಂತ್​ ಅವರನ್ನು ವಿವಾಹವಾಗುತ್ತೀರ ಎಂದು ಕೇಳಿದ ಪ್ರಶ್ನೆಗೆ ಊರ್ವಶಿ ಸ್ಪಷ್ಟ ಉತ್ತರ ನೀಡಿದ್ದಾರೆ.

ಇದನ್ನೂ ಓದಿ Urvashi Rautela: ಕ್ರಿಕೆಟಿಗರಾದ ಪಂತ್​,ನಸೀಮ್​ಗೆ ಕೈಕೊಟ್ಟು ಖ್ಯಾತ ಫುಟ್ಬಾಲರ್​ ಜತೆ ಡೇಟಿಂಗ್ ಆರಂಭಿಸಿದ ಊರ್ವಶಿ ರೌಟೇಲಾ​

ಪಾಡ್‌ಕಾಸ್ಟ್‌ವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಭಿಮಾನಿಗಳು ಸೋಶಿಯಲ್‌ ಮೀಡಿಯಾಗಳಲ್ಲಿ ಕೇಳಲಾದ ಪ್ರಶ್ನೆಗಳನ್ನು ಊರ್ವಶಿಗೆ ಸಂದರ್ಶಕ ಕೇಳಿದ್ದಾರೆ. ʻರಿಷಭ್‌ ಪಂತ್ ನಿಮ್ಮನ್ನು ತುಂಬಾ ಗೌರವಿಸುತ್ತಾರೆ, ತುಂಬಾ ಚೆನ್ನಾಗಿಯೂ ನೋಡಿಕೊಳ್ಳುತ್ತಾರೆ, ನೀವು ಅವರನ್ನು ಮದುವೆಯಾಗಬೇಕು ಅನ್ನೋದು ನಮ್ಮ ಬಯಕೆ, ಇದಕ್ಕೆ ಏನಂತೀರಾ?ʼ ಎಂದು ನೆಟ್ಟಿಗನ ಪ್ರಶ್ನೆಯೊಂದನ್ನು ಪ್ರಸ್ತಾಪಿಸಿದರು. ಆದರೆ ಊರ್ವಶಿ ಇದಕ್ಕೆ ನೋ ಕಾಮೆಂಟ್ಸ್‌ ಎಂದು ಮದುವೆ ಪ್ರಸ್ತಾವವನ್ನು ತಿರಸ್ಕರಿಸಿದ್ದಾರೆ. ಪಂತ್​ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದಾಗ ಆರೋಗ್ಯ ಸುಧಾರಿಸಿಕೊಳ್ಳಲಿ ಇದಕ್ಕಾಗಿ ಹ್ಯಾಶ್​ ಟ್ಯಾಗ್​ ಹೆಲ್ತ್​ ಎಂದು ಉತ್ತರಿಸಿದರು.  ಪಂತ್​ ಅವರು ಕಾರು ಅಪಘಾತಗೊಂಡಾದ ಚೇತರಿಕೆಗಾಗಿ ದೇವರಲ್ಲಿ ಪ್ರಾರ್ಧಿಸುವೆ ಎಂಬ ಪೋಸ್ಟರ್​ ಕೂಡ ಹಾಕಿದ್ದರು. 

ಪಾಕ್​ ಆಟಗಾರ ಬಗ್ಗೆ ಮೆಚ್ಚುಗೆ


ಪಾಕಿಸ್ತಾನ ತಂಡದ ಸ್ಟಾರ್‌ ಯುವ ವೇಗಿ ನಸೀಮ್‌ ಶಾ (Naseem Shah) ಬಗ್ಗೆ ಪ್ರಶ್ನೆ ಕೇಳಿದಾಗ, ಖುಷಿಯಿಂದಲೇ ಉತ್ತರಿಸಿದ ಊರ್ವಶಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌ ಬೌಲರ್‌ ಎಂದು ಹೇಳಿದರು. ನಸೀಮ್‌ ಒಳ್ಳೆಯ ಬೌಲರ್‌, ಭಾರತ ಮತ್ತು ಪಾಕಿಸ್ತಾನ ಪಂದ್ಯಗಳಲ್ಲಂತೂ ಹೆಚ್ಚು ಜನಪ್ರಿಯರಾಗಿದ್ದಾರೆ ಎಂದು ಹೇಳಿದರು. ಸದ್ಯ ನಟಿ ನೀಡಿರುವ ಪ್ರತಿಕ್ರಿಯೆಗೆ ಸೋಶಿಯಲ್‌ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಳೆದ ವರ್ಷ ನಡೆದಿದ್ದ ಏಷ್ಯಾಕಪ್​(Asia cup 2023) ವೇಳೆ ಊರ್ವಶಿ ರೌಟೇಲಾ ಪಾಕಿಸ್ತಾನ ಆಟಗಾರ ನಸೀಮ್ ಶಾ ಅವರು ಸಹ ಆಟಗಾರರೊಂದಿಗಿರುವ ಫೋಟೊವನ್ನು ತಮ್ಮ ಸಾಮಾಜಿಕ ಜಾಲತಾಣವಾದ ಇನ್​ಸ್ಟಾಗ್ರಾಮ್​ನಲ್ಲಿ ಹಾಕಿದ್ದರು. ದುಬೈನಲ್ಲಿ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯಕ್ಕೆ ಹಾಜರಾಗಿದ್ದರು. ಅಲ್ಲದೆ ನಸೀಮ್ ಶಾ ಅವರ ದೊಡ್ಡ ಅಭಿಮಾನಿ ಎಂದು ಪೋಸ್ಟ್​ ಕೂಡ ಹಾಕಿದ್ದರು. ಇದು ಮಾತ್ರವಲ್ಲದೆ ನಸೀಮ್‌ ಶಾ ಅವರ ಹುಟ್ಟುಹಬ್ಬಕ್ಕೂ ಶುಭಾಶಯ ಕೋರಿದ್ದರು. ಶುಭಾಶಯದ ಜತೆಗೆ ಡಿಎಸ್‌ಪಿ ಗೌರವ ಪಡೆದಿದ್ದಕ್ಕೂ ನಸೀಮ್ ಶಾ ಅವರಿಗೆ ಊರ್ವಶಿ ಅಭಿನಂದಿಸಿದ್ದರು. ಇದಕ್ಕೆ ನಸೀಮ್ ಶಾ, ‘ಧನ್ಯವಾದಗಳು’ ಎಂದು ಪ್ರತಿಕ್ರಿಕೆ ನೀಡಿದ್ದರು. ಈ ವೇಳೆ ನೆಟ್ಟಿಗರು ಇವರಿಬ್ಬರ ಮಧ್ಯೆ ಪ್ರೇಮಾಂಕುರ ಆಗಿದೆ ಎಂದಿದ್ದರು. ಇದೀಗ ಮತ್ತೆ  ನಸೀಮ್‌ ಅವರನ್ನು ಹೊಗಳಿದ್ದು ನೋಡಿದರೆ ಇವರಿಬ್ಬರು ಪ್ರೀತಿಯ ಬಲೆಯಲ್ಲಿ ಬಿದ್ದಿರುವುದು ನಿಜ ಎನ್ನುವಂತಿದೆ.

Continue Reading

ಕ್ರೀಡೆ

MI vs KKR: ಮತ್ತೆ ಮುಂಬೈ ವಿರುದ್ಧ ಕೇಳಿಬಂದ ಟಾಸ್​ ಫಿಕ್ಸಿಂಗ್​ ಆರೋಪ

MI vs KKR: ಹಾರ್ದಿಕ್​ ಪಾಂಡ್ಯ ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಟಾಸ್​ ನಾಣ್ಯವನ್ನು ದೂರಕ್ಕೆ ಚಿಮ್ಮಿಸಿದರು. ಇದನ್ನು ಕ್ಯಾಮರದಲ್ಲಿ ತೋರಿಸುವ ಮುನ್ನವೇ ಮ್ಯಾಚ್​ ರೆಫ್ರಿ ಪಂಕಜ್ ಧರ್ಮನಿ ನಾಣ್ಯವನ್ನು ಹೆಕ್ಕಿ ಟಾಸ್​ ಮುಂಬೈ ಗೆದ್ದಿದೆ ಎಂದು ಹೇಳಿದರು. ಇದು ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

MI vs KKR
Koo

ಮುಂಬಯಿ: ಈ ಬಾರಿಯ ಐಪಿಎಲ್​ನಲ್ಲಿ(IPL 2024) ಮುಂಬೈ ಇಂಡಿಯನ್ಸ್(MI vs KKR)​ ತಂಡ ತವರಿನಲ್ಲಿ ಪಂದ್ಯವನ್ನಾಡುವ ವೇಳೆ ತನಗೆ ಅನುಕೂಲವಾಗುವಂತೆ ಟಾಸ್​ ಫಿಕ್ಸಿಂಗ್ಸ್​ ಮಾಡುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿತ್ತು. ಇದಕ್ಕೆ ಕಾರಣ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ(Hardik Pandya) ಟಾಸ್​ ಕಾಯಿನ್​ ದೂರಕ್ಕೆ ಹಾರಿಸುವ ಮೂಲಕ ಬಳಿಕ ಎದುರಾಳಿ ನಾಯಕ ಇದನ್ನು ನೋಡುವ ಮುನ್ನವೇ ಮ್ಯಾಚ್​ ರೆಫ್ರಿ ಕಾಯಿನ್​ ಹೆಕ್ಕಿ ಮುಂಬೈ ಟಾಸ್​ ಗೆದ್ದಿದೆ ಎಂದು ಹೇಳಿದ್ದರು. ಈ ಘಟನೆ ಬಗ್ಗೆ ಭಾರೀ ಚರ್ಚೆಯಾಗಿತ್ತು ಮತ್ತು ಆರ್​ಸಿಬಿ ನಾಯಕ ಫಾರ್ಫ್ ಡುಪ್ಲೆಸಿಸ್​ ಹೈದರಾಬಾದ್​ ವಿರುದ್ಧದ ಪಂದ್ಯದ ವೇಳೆ ಈ ಪ್ಯಾಟ್​ ಕಮಿನ್ಸ್​ ಜತೆ ಈ ಘಟನೆಯನ್ನು ವಿವರಿಸಿದ್ದರು. ಇದರ ವಿಡಿಯೊ ಕೂಡ ವೈರಲ್(viral video)​ ಆಗಿತ್ತು.

ಮುಂಬೈ ಫ್ರಾಂಚೈಸಿ ವಿರುದ್ಧ ಅನೇಕ ಆರೋಪ ಕೇಳಿ ಬಂದ ಬಳಿಕ ಐಪಿಎಲ್​ ಆಡಳಿತ ಮಂಡಳಿ ಎಲ್ಲ ಪಂದ್ಯಗಳ ಟಾಸ್​ ಕಾಯಿನ್ ಕ್ಯಾಮೆರಾದ ಮೂಲಕ ಝೂಮ್​ ಮಾಡಿ ತೋರಿಸಿದ ಬಳಿಕವೇ ಮ್ಯಾಚ್​ ರೆಫ್ರಿ ನಾಣ್ಯವನ್ನು ಹೆಕ್ಕುತ್ತಿದ್ದರು. ಆದರೆ, ಶುಕ್ರವಾರ ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಇದು ಕಂಡು ಬರಲಿಲ್ಲ. ಹೀಗಾಗಿ ಮತ್ತೆ ಮುಂಬೈ ವಿರುದ್ಧ ಟಾಸ್​ ಫಿಕ್ಸಿಂಗ್​ ಆರೋಪ ಕೇಳಿಬಂದಿದೆ.​

​ಹೌದು, ಹಾರ್ದಿಕ್​ ಪಾಂಡ್ಯ ಟಾಸ್​ ನಾಣ್ಯವನ್ನು ದೂರಕ್ಕೆ ಚಿಮ್ಮಿಸಿದರು. ಇದನ್ನು ಕ್ಯಾಮರದಲ್ಲಿ ತೋರಿಸುವ ಮುನ್ನವೇ ಮ್ಯಾಚ್​ ರೆಫ್ರಿ ಪಂಕಜ್ ಧರ್ಮನಿ ನಾಣ್ಯವನ್ನು ಹೆಕ್ಕಿ ಟಾಸ್​ ಮುಂಬೈ ಗೆದ್ದಿದೆ ಎಂದು ಹೇಳಿದರು. ಇದು ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ಮ್ಯಾಚ್ ರೆಫರಿ ಮತ್ತೊಮ್ಮೆ ಮುಂಬೈಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಬಳಿಕ ಅನೇಕ ನೆಟ್ಟಿಗರು ಮುಂಬೈ ತಂಡವನ್ನು ಬ್ಯಾನ್​ ಮಾಡುವಂತೆ ಆಗ್ರಹಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ(IPL 2024) ಮುಂಬೈ ತಂಡಕ್ಕೆ ಚೇಸಿಂಗ್​ ವೇಳೆ ಎದುರಾದ 5ನೇ ಸೋಲು ಇದಾಗಿದೆ. 6 ಪಂದ್ಯಗಳಲ್ಲಿ ಮುಂಬೈ ಚೇಸಿಂಗ್​ ನಡೆಸಿತ್ತು. ಗೆಲುವು ಸಾಧಿಸಿದ್ದು ಒಂದು ಬಾರಿ ಮಾತ್ರ. ಇದು ಆರ್​ಸಿಬಿ ವಿರುದ್ಧ. ಸದ್ಯ ಮುಂಬೈ ತಂಡದ ಪ್ಲೇ ಆಫ್​ ರೇಸ್​ ಬಹುತೇಕ ಅಂತ್ಯ ಕಂಡಿದೆ. 9ನೇ ಸ್ಥಾನದಲ್ಲಿರುವ ಮುಂಬೈಗೆ ಇನ್ನು ಮೂರು ಪಂದ್ಯ ಬಾಕಿ ಇದೆ. ಈ ಪಂದ್ಯ ಗೆದ್ದರೂ ಕೂಡ 12 ಅಂಕ ಆಗಲಿದೆ. ಪ್ಲೇ ಆಫ್​ಗೆ ಈ ಅಂಕ ಸಾಲದು. ಹೀಗಾಗಿ ತಂಡ ಟೂರ್ನಿಯಿಂದ ಹೊರಬಿದ್ದಿದೆ ಎಂದರೂ ತಪ್ಪಾಗಲಾರದು.

ವಾಖೆಂಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 19.5 ಓವರ್​ಗಳಲ್ಲಿ 169 ರನ್​ಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ 18.5 ಓವರ್​​ 145 ರನ್​ಗಳಿಗೆ ಶರಣಾಗಿ ಸೋಲೊಪ್ಪಿಕೊಂಡಿತು. ಕೆಕೆಅರ್​ ಪರ ಬ್ಯಾಟಿಂಗ್​ನಲ್ಲಿ ವೆಂಕಟೇಶ್​ ಅಯ್ಯರ್​ (70) ಅರ್ಧ ಶತಕ ಬಾರಿಸಿ ಮಿಂಚಿದರೆ ಬೌಲಿಂಗ್​ನಲ್ಲಿ ಮಿಚೆಲ್ ಸ್ಟಾರ್ಕ್​ 4 ವಿಕೆಟ್ ತಮ್ಮದಾಗಿಸಿಕೊಂಡರು.

Continue Reading
Advertisement
Gold Rate
ಕರ್ನಾಟಕ7 mins ago

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ದರ; 22, 24 ಕ್ಯಾರಟ್‌ ದರಗಳು ಇಲ್ಲಿವೆ

Virat- Anushka
ಕ್ರೀಡೆ7 mins ago

Virat- Anushka: ಕೊಹ್ಲಿ ಮಾಡಿದ ರನೌಟ್​ ಕಂಡು ಆಶ್ಚರ್ಯ ಚಕಿತರಾದ ಅನುಷ್ಕಾ

Jyotika Trolled For Claiming Online Private Voting
ಕಾಲಿವುಡ್15 mins ago

Jyotika Trolled: ಆನ್​ಲೈನ್​ ಮೂಲಕ ವೋಟ್ ಮಾಡಿದ್ದಾರಂತೆ ಜ್ಯೋತಿಕಾ! ಟ್ರೋಲ್‌ ಆದ ಸೂರ್ಯ ಪತ್ನಿ!

Prajwal Revanna Case
ಕರ್ನಾಟಕ16 mins ago

Prajwal Revanna Case: ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

murder case In karwar
ಉತ್ತರ ಕನ್ನಡ18 mins ago

Murder case : ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

Nijjar Killing
ದೇಶ39 mins ago

Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

Bhavya Gowda shares her experiences during shooting
ಕಿರುತೆರೆ58 mins ago

Bhavya Gowda: ಡ್ರಿಪ್ಸ್‌ ಹಾಕಿದ್ದರೂ ಶೂಟಿಂಗ್‌ಗೆ ಬರಲೇ ಬೇಕು ಅಂದ್ರು ಎಂದ ʻಗೀತಾ ಧಾರಾವಾಹಿʼ ನಟಿ ಭವ್ಯಾ ಗೌಡ!

IPL 2024
ಕ್ರೀಡೆ1 hour ago

IPL 2024: ಇಂದು ಐಪಿಎಲ್​ನಲ್ಲಿ ಡಬಲ್​ ಹೆಡರ್​ ಪಂದ್ಯ; ಮೊದಲ ಪಂದ್ಯ ಯಾವುದು?

Kangana Ranaut
ರಾಜಕೀಯ2 hours ago

Kangana Ranaut: ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡ್ತಾನೆ ಎಂದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್! ವಿಡಿಯೊ ನೋಡಿ

Virat Kohli
ಕ್ರೀಡೆ2 hours ago

Virat Kohli: ಟಿ20ಯಲ್ಲಿ ದಾಖಲೆ ಬರೆದ ಕೊಹ್ಲಿ; ಈ ಸಾಧನೆ ಮಾಡಿದ ಮೊದಲ ಭಾರತೀಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌