ವೈರಲ್‌ ನ್ಯೂಸ್ | ಅಧ್ಯಾಪಕರ ಮನೆಗೆ ಕನ್ನ ಹಾಕಿದ ಕಳ್ಳನ ಗುರುಭಕ್ತಿ ಹೀಗಿತ್ತು! - Vistara News

ವೈರಲ್ ನ್ಯೂಸ್

ವೈರಲ್‌ ನ್ಯೂಸ್ | ಅಧ್ಯಾಪಕರ ಮನೆಗೆ ಕನ್ನ ಹಾಕಿದ ಕಳ್ಳನ ಗುರುಭಕ್ತಿ ಹೀಗಿತ್ತು!

ಕಳ್ಳ ಮನೆಗೆ ನುಗ್ಗಿ ಜಾಲಾಡಿ ಸಿಕ್ಕಿದ್ದನ್ನೆಲ್ಲಾ ಮೂಟೆ ಕಟ್ಟಿದ. ಆಮೇಲೆ ಅವನಿಗೆ ಗೊತ್ತಾದ್ದು- ಅದು ಅವನ ಅಧ್ಯಾಪಕರ ಮನೆ! ಆಮೇಲೇನು ಮಾಡಿದ ಗೊತ್ತೆ?

VISTARANEWS.COM


on

theft
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅದೊಂದು ನಿವೃತ್ತ ಮುಖ್ಯೋಪಾಧ್ಯಾಯರ ಮನೆ. ಅವರ ಹೆಸರು ಹರಿಶ್ಚಂದ್ರ ರಾಯ್.‌ ಪಶ್ಚಿಮ ಬಂಗಾಳದಲ್ಲಿ ನೆಲೆಸಿರುವ ಅವರು ನಿವೃತ್ತರಾಗಿ ೨೫ ವರ್ಷ ಕಳೆದಿದ್ದರೂ, ಸ್ಥಳೀಯರ ಗೌರವಕ್ಕೆ ಪಾತ್ರರಾದವರು. ಬದಲಿಗೆ, ಸುತ್ತಮುತ್ತಲಿನ ಬಡ ಮಕ್ಕಳ ಓದು-ವಿದ್ಯೆಗೆ ನೆರವಾಗುತ್ತಾ ನಿವೃತ್ತ ಜೀವನವನ್ನು ಕಳೆಯುತ್ತಿರುವವರು. ಕೆಲಕಾಲದಿಂದ ಅನಾರೋಗ್ಯಕ್ಕೆ ಈಡಾಗಿರುವ ರಾಯ್‌ ಅವರೊಂದಿಗೆ ಅವರ ಸಹೋದರರ ಕುಟುಂಬವಿದ್ದು ಆರೈಕೆ ಮಾಡುತ್ತಿದೆ. ದಿನಂಪ್ರತಿ ಔಷಧ ಮತ್ತು ಫಿಸಿಯೊಥೆರಪಿಯ ಅಗತ್ಯವಿದೆ ನಿವೃತ್ತ ಅಧ್ಯಾಪಕರಿಗೆ.

ವಿಷಯ ಈವರೆಗಿನದ್ದಲ್ಲ: ಇನ್ನು ಮುಂದೆ ಪ್ರಾರಂಭ. ಅದೊಂದು ರಾತ್ರಿ ಊಟದ ನಂತರ ಹವಾ ಸೇವನೆಗೆಂದು ಮನೆಯ ಬಾಗಿಲು ತೆರೆಯುತ್ತಿದ್ದಂತೆ, ಹರಿತ ಆಯುಧಗಳನ್ನು ಹೊಂದಿದ ಇಬ್ಬರು ಮುಸುಕುಧಾರಿ ಆಗಂತುಕರು ಮನೆಯೊಳಗೆ ದಾಂಗುಡಿಯಿಟ್ಟರು. ಅವರನ್ನು ತಡೆಯಲು ಯತ್ನಿಸಿದ ರಾಯ್‌ ಅವರ ತಮ್ಮನನ್ನು ತಳ್ಳಿ, ಟಾಯ್ಲೆಟ್ಟಿನೊಳಗೆ ಕೂಡಿಟ್ಟರು. ವೃದ್ಧ ಅಧ್ಯಾಪಕರನ್ನು ಬೆದರಿಸಿದ ಚೋರರು, ಇರುವ ಹಣ ಮತ್ತು ಒಡವೆಯನ್ನೆಲ್ಲಾ ನೀಡುವಂತೆ ಒತ್ತಾಯಿಸಿದರು. ಹೆದರಿದ ರಾಯ್‌, ತಮ್ಮಲ್ಲಿದ್ದ ಸುಮಾರು ೧೭ ಸಾವಿರ ರೂ.ಗಳನ್ನು ಕಳ್ಳರಿಗೆ ಒಪ್ಪಿಸಿದರು. ಈ ಹೊತ್ತಿಗೆ ಮನೆಯನ್ನೆಲ್ಲಾ ಜಾಲಾಡಿದ ಖದೀಮರು, ಎದುರಿಗಿದ್ದ ಎರಡು ಮೊಬೈಲ್‌ ಫೋನ್‌ಗಳನ್ನೂ ಕಿಸೆಗಿಳಿಸಿದರು. ಈವರೆಗೆ ನಡೆದಿದ್ದೆಲ್ಲಾ ಮಾಮೂಲಿ ದರೋಡೆಯ ಪ್ರಕರಣವೇ. ನಂತರ ಒಂದು ವಿಲಕ್ಷಣ ಘಟನೆ ನಡೆಯಿತು.

ಬಂದಿದ್ದ ಕಳ್ಳರ ಪೈಕಿ ಒಬ್ಬ ಇದ್ದಕ್ಕಿದ್ದಂತೆ ನಿವೃತ್ತ ಅಧ್ಯಾಪಕರ ಎದುರು ಗೌರವ ತೋರುವಂತೆ ಬಾಗಿದ. ತಾನು ಕದಿಯುತ್ತಿರುವುದು ತನಗೆ ಪಾಠ ಹೇಳಿಕೊಟ್ಟ ಗುರುಗಳ ಮನೆಯಲ್ಲಿ, ದೋಚುತ್ತಿರುವುದು ಅವರನ್ನೇ ಎಂಬುದು ಅರ್ಥವಾದವರಂತೆ, ಸುಮ್ಮನೆ ನಿಂತ. ಈ ಚೋರರು ತನಗಾಗಲೀ, ತನ್ನ ಮನೆಯವರಿಗಾಗಲೀ ಅಪಾಯ ಮಾಡುವುದಿಲ್ಲ ಎಂಬುದನ್ನು ಅರಿತ ರಾಯ್‌ ಅವರು, ಮರುದಿನ ಬೆಳಗಿನ ಹಾಲು-ತರಕಾರಿಗೆ ಮತ್ತು ಫಿಸಿಯೊಥೆರಪಿಗೆ ಸ್ವಲ್ಪ ಹಣ ಕೊಟ್ಟು ಹೋಗಿ ಎಂದು ಕೇಳಿದರು. ತಕ್ಷಣ ೨೦೦ ರೂ.ಗಳನ್ನು ಮತ್ತು ಒಂದು ಮೊಬೈಲ್‌ ಫೋನನ್ನು ಅವರ ಪಾದಮೂಲದಲ್ಲಿಟ್ಟು ಅಲ್ಲಿಂದ ಪರಾರಿಯಾದರು.

ʻಇರುವ ಹಣವನ್ನೆಲ್ಲಾ ಅವರ ಕೈಗಿತ್ತರೂ, ಇಡೀ ಮನೆಯನ್ನು ಕಳ್ಳರು ಕಿತ್ತಾಡಿದರು. ಆದರೆ ಹೋಗುವಾಗ ನನ್ನೆದುರು ಬಾಗಿ ವಂದಿಸಿದರುʼ ಎಂದು ರಾಯ್‌ ಹೇಳಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಗಾಬರಿ ಹುಟ್ಟಿಸಿದ್ದು, ಪ್ರದೇಶದಲ್ಲಿ ಭದ್ರತೆ ಹೆಚ್ಚಿಸುವುದಾಗಿ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಉದ್ಯೋಗಿಯೊಬ್ಬ ರಜೆ ಕೇಳಿ ಬಾಸ್‌ಗೆ ಕಳಿಸಿದ ಇ-ಮೇಲ್‌ ವೈರಲ್‌; ಪ್ರಾಮಾಣಿಕತೆ ಮೆಚ್ಚುವಂಥದ್ದು !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ರಾಹುಲ್‌ ಗಾಂಧಿ ಗಂಡಸ್ತನ ತಿಳಿಯಲು ಅವರ ಜತೆ ನಿಮ್ಮ ತಾಯಿಯನ್ನು ಮಲಗಿಸಿ ಎಂದ ಕಾಂಗ್ರೆಸ್‌ ನಾಯಕ!

ರಾಹುಲ್‌ ಗಾಂಧಿ ಅವರು ಗಂಡಸು ಹೌದೋ, ಅಲ್ಲವೋ ಎಂಬುದನ್ನು ತಿಳಿಯಲು ಬಿಜೆಪಿ ನಾಯಕರು ತಮ್ಮ ತಾಯಿ, ಪುತ್ರಿಯರನ್ನು ಅವರ ಜತೆ ಮಲಗಿಸಬೇಕು ಎಂದು ಗುಜರಾತ್‌ ಕಾಂಗ್ರೆಸ್‌ ನಾಯಕ ಪ್ರತಾಪ್‌ ದುಧನ್‌ ಹೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಇವರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Pratap Dudhat
Koo

ಗಾಂಧಿನಗರ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದ ಸೃಷ್ಟಿಸುತ್ತಿವೆ. ಪ್ರತಿಪಕ್ಷ ನಾಯಕರ ವಿರುದ್ಧ ಮಾತನಾಡುವ ಭರದಲ್ಲಿ ಅವಾಚ್ಯ, ಅಶ್ಲೀಲ ಪದಗಳ ಬಳಕೆ, ಏಕವಚನದಲ್ಲಿಯೇ ದಾಳಿ ಮಾಡುವುದು ಸೇರಿ ಹಲವು ರೀತಿಯ ಹೇಳಿಕೆಗಳು ಜನರಲ್ಲಿ ಅಸಹ್ಯ ಮೂಡಿಸಿವೆ. ಇದರ ಬೆನ್ನಲ್ಲೇ, ಗುಜರಾತ್‌ ಕಾಂಗ್ರೆಸ್‌ ನಾಯಕ (Gujarat Congress Leader) ಪ್ರತಾಪ್‌ ದುಧತ್‌ (Pratap Dudhat) ಅವರು ನೀಡಿದ ಹೇಳಿಕೆಯು ಭಾರಿ ವಿವಾದ ಭುಗಿಲೆಬ್ಬಿಸಿದೆ. “ರಾಹುಲ್‌ ಗಾಂಧಿ ಅವರು ಗಂಡಸೋ ಅಥವಾ ನಪುಂಸಕರೋ ಎಂಬುದನ್ನು ತಿಳಿಯಲು, ನಿಮ್ಮ ತಾಯಿ, ಪುತ್ರಿಯರನ್ನು ಅವರ ಜತೆ ಮಲಗಿಸಿ” ಎಂಬುದಾಗಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವುದು ಭಾರಿ ಸಂಚಲನ ಮೂಡಿಸಿದೆ.

ಚುನಾವಣಾ ಸಭೆಯೊಂದರಲ್ಲಿ ಮಾತನಾಡಿದ ಪ್ರತಾಪ್‌ ದುಧತ್‌, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು. “ಬಿಜೆಪಿ ನಾಯಕರು ಯಾವಾಗಲೂ ರಾಹುಲ್‌ ಗಾಂಧಿ ಅವರ ಮದುವೆ ಬಗ್ಗೆ ಮಾತನಾಡುತ್ತಾರೆ. ಅಷ್ಟಕ್ಕೂ, ರಾಹುಲ್‌ ಗಾಂಧಿ ಅವರು ಗಂಡಸೋ ಅಥವಾ ನಪುಂಸಕರೋ ಎಂಬುದನ್ನು ತಿಳಿಯಲು ನಿಮ್ಮ ಪುತ್ರಿಯರು, ತಾಯಿಯನ್ನು ಅವರ ಜತೆ ಮಲಗಿಸಿ. ಆಗ ನಿಮಗೆ ರಾಹುಲ್‌ ಗಾಂಧಿ ಗಂಡಸು ಹೌದೋ, ಅಲ್ಲವೋ ಎಂಬುದು ಗೊತ್ತಾಗುತ್ತದೆ” ಎಂದು ಹೇಳಿದ್ದಾರೆ. ಈ ವಿಡಿಯೊ ಈಗ ವೈರಲ್‌ ಆಗಿದ್ದು, ಕಾಂಗ್ರೆಸ್ ನಾಯಕನ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಾಪ್‌ ದುಧತ್‌ ಅವರ ವಿಡಿಯೊ ವೈರಲ್‌ ಆಗುತ್ತಲೇ ಜನ ಪ್ರತಿಕ್ರಿಯಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. “ದೇಶದ ಹೆಣ್ಣುಮಕ್ಕಳಿಗೆ ಕಾಂಗ್ರೆಸ್‌ ಕೊಡುವ ಗೌರವ ಹೇಗಿದೆ ನೋಡಿ” ಎಂಬುದಾಗಿ ಒಬ್ಬರು ಟೀಕಿಸಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 25 ಕ್ಷೇತ್ರಗಳಲ್ಲೂ ಗೆಲ್ಲಬಾರದು ಎಂದು ತೀರ್ಮಾನಿಸಿದೆ. ಇದೇ ಕಾರಣಕ್ಕಾಗಿ ಆ ಪಕ್ಷದ ನಾಯಕರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮತಗಳನ್ನು ಕೇಳಲು ಬಂದಾಗ ಇಂತಹ ನಾಯಕರಿಗೆ ಹೆಣ್ಣುಮಕ್ಕಳು ಸರಿಯಾಗಿ ಪಾಠ ಕಲಿಸಬೇಕು” ಎಂದು ಇನ್ನೊಬ್ಬರು ಹೇಳಿದ್ದಾರೆ. ಅಷ್ಟೇ ಅಲ್ಲ, “ಈ ಕಾಂಗ್ರೆಸ್ ನಾಯಕನ ವಿರುದ್ಧ ಕೇಸ್‌ ದಾಖಲಿಸಬೇಕು”, “ಹೆಣ್ಣುಮಕ್ಕಳ ಬಗ್ಗೆ ಕಾಂಗ್ರೆಸ್‌ ನಾಯಕರು ಹೀಗೆ ಮಾತಾಡಿ, ಮಾತಾಡಿಯೇ ಕಾಂಗ್ರೆಸ್‌ ಸೋಲಿಗೆ ಕಾರಣರಾಗಿದ್ದಾರೆ”, “ಕಾಂಗ್ರೆಸ್‌ನಲ್ಲಿ ಟಿಕೆಟ್‌ ಗಿಟ್ಟಿಸಿಕೊಳ್ಳಲು ಹೀಗೆ ಮಾತನಾಡುವುದೇ ಮೊದಲ ಅರ್ಹತೆ ಇರಬೇಕು” ಎಂಬುದು ಸೇರಿ ನೂರಾರು ಜನ ಕಾಂಗ್ರೆಸ್‌ ನಾಯಕನ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ನಾಯಕ ಸುರ್ಜೇವಾಲಾ ಅವರ ವಿವಾದಾತ್ಮಕ ಹೇಳಿಕೆ ಬಳಿಕ ಟಿಎಂಸಿಗೂ ಸಂಕಷ್ಟ

Continue Reading

ಕ್ರೀಡೆ

Sachin Tendulkar Birthday: ಈ ಬಾರಿ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್‌ ತೆಂಡೂಲ್ಕರ್‌; ವಿಡಿಯೊ ವೈರಲ್​

Sachin Tendulkar Birthday: ಸಚಿನ್‌ ಸಾಧನೆ ನಿಜಕ್ಕೂ ಒಂದು ಅದ್ಭುತವೇ ಸರಿ. ಕ್ರಿಕೆಟ್​ ಬಾಳ್ವೆಯ ಆರಂಭದಿಂದ ಹಿಡಿದು ಕಡೇಯ ದಿನದವರೆಗೂ ಯಾವುದೇ ವಿವಾದವಿಲ್ಲದೆ ಸವ್ಯಸಾಚಿಯಾಗಿದ್ದ ಸಚಿನ್​ ಎಲ್ಲ ಕ್ರಿಕೆಟ್​ ಆಟಗಾರರಿಗೂ ಸ್ಫೂರ್ತಿಯಾಗಿದ್ದಾರೆ.

VISTARANEWS.COM


on

Sachin Tendulkar Birthday
Koo

ಮುಂಬಯಿ: ವಿಶ್ವ ಕಂಡ ಶ್ರೇಷ್ಠ ಬ್ಯಾಟ್ಸ್‌ಮನ್‌, ಲೆಜೆಂಡರಿ ಕ್ರಿಕೆಟರ್‌, ಕ್ರಿಕೆಟ್‌ ದೇವರು ಎಂದೆಲ್ಲ ನಾಮಾಂಕಿತರಾದ ಸಚಿನ್‌ ತೆಂಡೂಲ್ಕರ್‌(Sachin Tendulkar Birthday) ಅವರು ಎಪ್ರಿಲ್​ 24ರಂದು ತಮ್ಮ 51ನೇ ವರ್ಷದ ಹುಟ್ಟು ಹಬ್ಬವನ್ನು ‘ಸಚಿನ್​ ತೆಂಡೂಲ್ಕರ್​ ಫೌಂಡೇಶನ್‌’ನ(sachin tendulkar foundation) ಮಕ್ಕಳೊಂದಿಗೆ ಆಚರಿಸಿದ್ದರು. ಇದರ ವಿಡಿಯೊವನ್ನು ಸಚಿನ್(Sachin Tendulkar)​ ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಸಚಿನ್​ ಅವರಿಗೆ ಕೋಟ್ಯಂತರ ಕ್ರಿಕೆಟ್‌ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹರಸಿ ಹಾರೈಸಿದ್ದಾರೆ.

ಸಚಿನ್​ ಅವರು ‘ಸಚಿನ್​ ತೆಂಡೂಲ್ಕರ್ ಫೌಂಡೇಶನ್‌’ ಎನ್ನುವ ಹೆಸರಿನ ಪ್ರತಿಷ್ಠಾನದ ಮೂಲಕ ಬಡ ಮಕ್ಕಳಿಗೆ ಶಿಕ್ಷಣ, ಕ್ರಿಡೆ ಮತ್ತು ವೈದ್ಯಕೀಯ ನೆರವನ್ನು ನೀಡುತ್ತಿದ್ದಾರೆ. ಸಮಾಜಮುಖಿ ಕಾರ್ಯವನ್ನು ಮಾಡುವ ಮೂಲಕ ಅನೇಕ ಬಡ ಮಕ್ಕಳ ಕನಸನ್ನು ನನಸು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಈ ಪ್ರತಿಷ್ಠಾನವು ಮಕ್ಕಳಿಗೆ ಸಮಾನ ಅವಕಾಶವನ್ನು ನೀಡಲು ಮತ್ತು ಉತ್ತಮ ಜಗತ್ತನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ.

ಸಚಿನ್​ ಅವರು ತಮ್ಮ ಹುಟ್ಟು ಹಬ್ಬವನ್ನು ಈ ಫೌಂಡೇಶನ್​ನ ಮಕ್ಕಳೊಂದಿದೆ ಕೆಲ ಕಾಲ ಫುಟ್ಬಾಲ್​ ಆಡಿ, ಊಟ ಮಾಡುವ ಜತೆಗೆ ಕೇಕ್​ ಕತ್ತರಿಸಿ ಆಚರಿಸಿದ್ದಾರೆ. ಬಳಿಕ ಮಕ್ಕಳಿಗೆ ವಿಶೇಷವಾಗಿ ಹಾರೈಸಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಂತೆ ಕಿವಿ ಮಾತು ಹೇಳಿದ್ದಾರೆ.

ಇದನ್ನೂ ಓದಿ Sachin Tendulkar : ಕಾಶ್ಮೀರದ ಬಾಲಕಿಯ ಕ್ರಿಕೆಟ್​ ಪ್ರೀತಿ ಸಚಿನ್ ಫಿದಾ; ಇಲ್ಲಿದೆ ವಿಡಿಯೊ

​ಕಳೆದ ವರ್ಷ ಸಚಿನ್​ ಅವರು ತಮ್ಮ 50ನೇ ವರ್ಷದ ಜನ್ಮ ದಿನಾಚರಣೆಯನ್ನು ತಮ್ಮ ಕುಟುಂಬದೊಂದಿಗೆ ಗೋವಾದಲ್ಲಿ ಆಚರಿಸಿದ್ದರು. ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾದ ಸಚಿನ್​ ಅವರು ತಮ್ಮ ಹುಟ್ಟು ಹಬ್ಬವನ್ನು ಮಾತ್ರ ಹಳ್ಳಿ ಸೊಗಡಿನಲ್ಲಿ ಆಚರಿಸಿದ್ದರು. ಪತ್ನಿ ಅಂಜಲಿ ಮತ್ತು ಮಗಳು ಸಾರಾ ತೆಂಡೂಲ್ಕರ್ ಅವರೊಂದಿಗೆ ಒಲೆಯ ಪಕ್ಕದಲ್ಲಿ ಕುಳಿತು ಸಚಿನ್ ಒಲೆ ಊದುತ್ತಿರುವ ಫೋಟೊವನ್ನು ಹಂಚಿಕೊಂಚಿಕೊಂಡಿದ್ದರು.

2020ರಲ್ಲಿ ಹುಟ್ಟುಹಬ್ಬ ಆಚರಿಸದ ಸಚಿನ್​!

ಪ್ರತಿ ವರ್ಷವೂ ಸಂಭ್ರಮದೊಂದಿಗೆ ಹುಟ್ಟು ಹಬ್ಬ ಆಚರಿಸುತ್ತಿದ್ದ ಸಚಿನ್​ 2020ರಲ್ಲಿ ತಮ್ಮ 47ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ್ದ ಕೋವಿಡ್​ ಸಂಕಷ್ಟದಲ್ಲಿ ಸೇವೆ ಸಲ್ಲಿಸಿದ್ದ ಆರೋಗ್ಯ ಸೈನಿಕರಿಗೆ ಗೌರವ ಕೊಡುವ ನಿಟ್ಟಿನಲ್ಲಿ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿರಲಿಲ್ಲ. ಮನೆಯಲ್ಲಿಯೇ ತಾಯಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದರು.

24 ವರ್ಷಗಳ ಕ್ರಿಕೆಟ್‌ ಬಾಳ್ವೆಯಲ್ಲಿ 664 ಪಂದ್ಯ, 34,357 ರನ್‌, 201 ವಿಕೆಟ್‌, 100 ಅಂತಾರಾಷ್ಟ್ರೀಯ ಶತಕ, 164 ಅರ್ಧ ಶತಕ, ಲೆಕ್ಕವಿಲ್ಲದಷ್ಟು ದಾಖಲೆಗಳ ಸರದಾರ, ದೇಶದ ಶ್ರೇಷ್ಠ ಗೌರವ ಭಾರತ ರತ್ನ, ಪದ್ಮ ಪ್ರಶಸ್ತಿಗಳ ಒಡೆಯ, ರಾಜೀವ್‌ ಗಾಂಧಿ ಖೇಲ್‌ರತ್ನ ಪ್ರಶಸ್ತಿಗಳಿಂದೆಲ್ಲ ಪುರಸ್ಕೃತರಾಗಿರುವ ಸಚಿನ್‌ ಸಾಧನೆ ನಿಜಕ್ಕೂ ಒಂದು ಅದ್ಭುತವೇ ಸರಿ. ಕ್ರಿಕೆಟ್​ ಬಾಳ್ವೆಯ ಆರಂಭದಿಂದ ಹಿಡಿದು ಕಡೇಯ ದಿನದವರೆಗೂ ಯಾವುದೇ ವಿವಾದವಿಲ್ಲದೆ ಸವ್ಯಸಾಚಿಯಾಗಿದ್ದ ಸಚಿನ್​ ಎಲ್ಲ ಕ್ರಿಕೆಟ್​ ಆಟಗಾರರಿಗೂ ಸ್ಫೂರ್ತಿಯಾಗಿದ್ದಾರೆ.

Continue Reading

ಕ್ರೀಡೆ

MS Dhoni: ಸಿಟ್ಟಿನಲ್ಲಿ ಕ್ಯಾಮೆರಾಗೆ ನೀರಿನ ಬಾಟಲ್​ ಎಸೆಯಲು ಮುಂದಾದ ಧೋನಿ; ವಿಡಿಯೊ ವೈರಲ್​

MS Dhoni: ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಕಳೆದ ವರ್ಷ ಮುಂಬೈಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿಯೇ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು.

VISTARANEWS.COM


on

MS Dhoni
Koo

ಚೆನ್ನೈ: ವಿದಾಯದ ಐಪಿಎಲ್(IPL 2024)​ ಟೂರ್ನಿ ಆಡುತ್ತಿರುವ ಚೆನ್ನೈ ಸೂಪರ್​ ಕಿಂಗ್ಸ್(CSK)​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ. ಕ್ಯಾಮೆರಾಮೆನ್​ಗಳು ಧೋನಿಯನ್ನು ಪಂದ್ಯದ ನಡುವೆ ತೋರಿಸಿದಾಗಲೆಲ್ಲವೂ ಸ್ಟೇಡಿಯಂನಲ್ಲಿ ಧೋನಿಯ ಹೆಸರು ಜೋರಾಗಿ ಕೇಳಿ ಬರುತ್ತದೆ. ಮಂಗಳವಾರದ ಲಕ್ನೋ(Lucknow Super Giants) ವಿರುದ್ಧದ ಪಂದ್ಯದ ವೇಳೆಯೂ ಧೋನಿ ಬ್ಯಾಟಿಂಗ್​ಗೆ ರೆಡಿಯಾಗಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಇರುವುದನ್ನು ದೊಡ್ಡ ಪರದೆಯಲ್ಲಿ ತೋರಿಸಲಾಯಿತು. ಈ ವೇಳೆ ಧೋನಿ ಕೋಪಗೊಂಡು ಕ್ಯಾಮೆರಾಗೆ ನೀರಿನ ಬಾಟಲ್​ ಎಸೆಯಲು ಮುಂದಾಗಿದ್ದಾರೆ. ತಕ್ಷಣ ಕ್ಯಾಮೆರಾಮೆನ್​ ತನ್ನ ಕ್ಯಾಮೆರಾವನ್ನು ಬೇರೆಡೆಗೆ ತಿರುಗಿಸಿದ್ದಾನೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಎಂ.ಎಸ್.ಧೋನಿ(MS Dhoni), ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ.

ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಕಳೆದ ವರ್ಷ ಮುಂಬೈಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿಯೇ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಕಳೆದ ಮುಂಬೈ ಮತ್ತು ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ನಡೆಸಿದ ವೇಳೆ ಕುಂಟುತಾ ನಡೆದಾಡಿದ ಫೋಟೊ ಮತ್ತು ವಿಡಿಯೊ ವೈರಲ್​ ಆಗಿತ್ತು. ಕಳೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯಗೆ ಹ್ಯಾಟ್ರಿಕ್​ ಸಿಕ್ಸರ್​ಗಳ ರುಚಿ ತೋರಿಸಿದ್ದರು. ವಯಸ್ಸು 42 ಆದರೂ, ತಮ್ಮ ಬ್ಯಾಟಿಂಗ್​ ಫಾರ್ಮ್​ ಮಾತ್ರ ಈ ಹಿಂದಿನಂತೆಯೇ ಇದೆ.​

ಇದನ್ನೂ ಓದಿ IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

ಧೋನಿ ಅವರು ಲಕ್ನೋ ವಿರುದ್ಧ ಕೇವಲ ಒಂದು ಎಸೆತ ಎದುರಿಸಿ ಬೌಂಡರಿ ಮೂಲಕ ಅಜೇಯ 4 ರನ್ ಗಳಿಸಿದರು. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇತ್ತಂಡಗಳ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 210 ರನ್‌ ಗಳಿಸಿತು. ಇದನ್ನು ಬೆನ್ನತ್ತಿದ ಲಕ್ನೋ 19.3 ಓವರ್‌ ಗಳಲ್ಲಿ 4 ವಿಕೆಟ್‌ಗೆ 213 ರನ್‌ ಗಳಿಸಿ, 6 ವಿಕೆಟ್‌ ಗಳಿಂದ ಜಯಭೇರಿ ಬಾರಿಸಿತು.

Continue Reading

ವೈರಲ್ ನ್ಯೂಸ್

Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

Viral News: ಉತ್ತರಪ್ರದೇಶದ ಬಾರಾಬಂಕಿ ಗ್ರಾಮದಲ್ಲಿ ಮದುವೆ ಮನೆಯೊಂದರಲ್ಲಿ ಉಡುಗೊರೆ ವಿಚಾರದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ತನ್ನ ಸಹೋದರಿಯ ಮದುವೆಯ ಸಂದರ್ಭದಲ್ಲಿ ಆಕೆಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಲು ಮುಂದಾಗಿದ್ದ ಚಂದ್ರಪ್ರಕಾಶ್ ಮಿಶ್ರಾನನ್ನು ಪತ್ನಿ ಮನೆಯವರು ಕೊಲೆ ಮಾಡಿದ್ದಾರೆ.

VISTARANEWS.COM


on

Viral News
Koo

ಲಕ್ನೋ: ಇತ್ತೀಚಿನ ದಿನಗಳಲ್ಲಿ ಸಣ್ಣ-ಪುಟ್ಟ ಕಾರಣಕ್ಕೂ ಜಗಳ ನಡೆಯುವುದು ಸಾಮಾನ್ಯ ಎಂಬಂತಾಗಿದೆ. ಮದುವೆ ಮನೆಯಲ್ಲಿ ನೆಚ್ಚಿನ ತಿಂಡಿ ಬಡಿಸಲಿಲ್ಲ, ಸರಿಯಾಗಿ ಉಪಚಾರ ಮಾಡಲಿಲ್ಲ ಎಂಬಿತ್ಯಾದಿ ಕಾರಣಕ್ಕೆ ಜಗಳ ನಡೆದು ಸಂಭ್ರಮದ ಮನೆ ಸ್ಮಶಾನವಾಗಿ ಮಾರ್ಪಟ್ಟಿದ್ದನ್ನು ನೋಡಿದ್ದೇವೆ. ಇಲ್ಲೂ ಅಂತಹದ್ದೇ ಘಟನೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಕಲಹ ವ್ಯಕ್ತಿಯೊಬ್ಬನ ಜೀವವನ್ನೇ ಬಲಿ ಪಡೆದಿದೆ. ಉತ್ತರಪ್ರದೇಶದ ಬಾರಾಬಂಕಿ ಗ್ರಾಮದಲ್ಲಿ ಮದುವೆ ಮನೆಯೊಂದರಲ್ಲಿ ಉಡುಗೊರೆ ವಿಚಾರದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಆ ಮೂಲಕ ಸಂಭ್ರಮದಿಂದ ಕೂಡಿದ್ದ ಮನೆಯಲ್ಲಿ ಈಗ ದುಃಖ ಮಡುಗಟ್ಟಿದೆ (Viral News).

ಘಟನೆ ವಿವರ

ಚಂದ್ರಪ್ರಕಾಶ್ ಮಿಶ್ರಾ (35) ಕೊಲೆಯಾದ ವ್ಯಕ್ತಿ. ತನ್ನ ಸಹೋದರಿಯ ಮದುವೆಯ ಸಂದರ್ಭದಲ್ಲಿ ಆಕೆಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಲು ಮುಂದಾಗಿದ್ದೇ ಆತ ಮಾಡಿದ ದೊಡ್ಡ ತಪ್ಪು! ಹೌದು, ಚಂದ್ರಪ್ರಕಾಶ್ ಮಿಶ್ರಾ ತನ್ನ ತಂಗಿಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ನೀಡಲು ಚಿಂತನೆ ನಡೆಸಿದ್ದರು. ಇದರಿಂದ ಕೋಪಗೊಂಡ ಆತನ ಪತ್ನಿ ಚಾಬಿ ಈ ವಿಚಾರವನ್ನು ತನ್ನ ಕುಟುಂಬದವರಿಗೆ ತಿಳಿಸಿದ್ದಳು. ಇದರಿಂದ ಅಸಮಾಧಾನಗೊಂಡ ಆಕೆಯ ಮನೆಯವರು ಚಂದ್ರಪ್ರಕಾಶ್ ಮಿಶ್ರಾ ಅವರನ್ನು ಚೆನ್ನಾಗಿ ಥಳಿಸಿದ್ದರು. ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ʼʼಏಪ್ರಿಲ್‌ 26ಕ್ಕೆ ಚಂದ್ರಪ್ರಕಾಶ್ ಮಿಶ್ರಾ ಅವರ ತಂಗಿಯ ಮದುವೆ ನಿಗದಿಯಾಗಿದೆ. ಹೀಗಾಗಿ ಅವರು ಪ್ರೀತಿಯ ತಂಗಿಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ಕೊಡಲು ಯೋಜನೆ ಹಾಕಿಕೊಂಡಿದ್ದರು. ಅದನ್ನು ಪತ್ನಿ ಚಾಬಿ ಬಳಿ ಹೇಳಿಕೊಂಡಿದ್ದರು. ಆದರೆ ಇದನ್ನು ಕೇಳಿ ಚಾಬಿ ಉರಿದು ಬಿದ್ದಳು. ಈ ವಿಚಾರವಾಗಿ ದಂಪತಿಯ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವೇ ನಡೆಯಿತುʼʼ ಎಂದು ಪೊಲೀಸರು ತಿಳಿಸಿದ್ದಾರೆ.

ʼʼಅಷ್ಟಕ್ಕೇ ಸುಮ್ಮನಾಗದ ಚಾಬಿ ತನ್ನ ಸಹೋದರರನ್ನು ಕರೆದು ಚಂದ್ರಪ್ರಕಾಶ್‌ಗೆ ಪಾಠ ಕಲಿಸುವಂತೆ ಹೇಳಿದ್ದಾಳೆ. ತಂಗಿಯ ಕರೆಗೆ ಓಗೊಟ್ಟು ಬಂದ ಚಾಬಿಯ ಸಹೋದರರು ಚಂದ್ರಪ್ರಕಾಶ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಕೋಲುಗಳಿಂದ ಥಳಿಸಿದ್ದಾನೆ. ಕೊನೆಗೆ ಚಂದ್ರಪ್ರಕಾಶ್‌ ಕುಟುಂಬದ ಸದಸ್ಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದರೆ ಆಸ್ಪತ್ರೆಯಲ್ಲಿ ನಿಧನರಾದರುʼʼ ಎಂದು ಅಧಿಕಾರಿಗಳು ಘಟನೆಯನ್ನು ವಿವರಿಸಿದ್ದಾರೆ.

ಸದ್ಯ ಪೊಲೀಸರು ಘಟನೆಯ ಸಂಬಂಧ ಐವರನ್ನು ಬಂಧಿಸಿದ್ದಾರೆ. ಚಾಬಿ ಮತ್ತು ಆಕೆಯ ಸಹೋದರರು ಸೇರಿ 5 ಮಂದಿಯ ವಿರುದ್ಧ ದೂರು ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಮದುವೆ ಮನೇಲಿ ರಸಗುಲ್ಲಾಗಾಗಿ ಹೊಡೆದಾಟ; ಆರು ಮಂದಿಯ ಪರಿಸ್ಥಿತಿ ಗಂಭೀರ!

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. ವಿವಾಹ ವಾರ್ಷಿಕೋತ್ಸವದ ಉಡುಗೊರೆಯನ್ನು ನೀಡದ ಕಾರಣಕ್ಕೆ ಕೋಪಗೊಂಡ ಮಹಿಳೆಯೊಬ್ಬಳು ತನ್ನ ಪತಿಗೆ ಚಾಕುವಿನಿಂದ ಇರಿದಿದ್ದಳು. ಕೂಡಲೇ ಎಚ್ಚೆತ್ತುಕೊಂಡ ಆತ ತಪ್ಪಿಸಿಕೊಂಡು ಪಾರಾಗಿದ್ದ. ಬಳಿಕ ನೆರೆಮನೆಯವರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ತನ್ನ ಅಜ್ಜ ನಿಧನ ಹೊಂದಿದ್ದರಿಂದ ಪತ್ನಿಗೆ ಉಡುಗೊರೆ ನೀಡಿರಲಿಲ್ಲ. ಇದೇ ಕಾರಣಕ್ಕೆ ಆಕೆ ಹಲ್ಲೆ ನಡೆಸಿದ್ದಳು ಎಂದು ಬಳಿಕ ಆತ ದೂರು ನೀಡಿದ್ದ.

Continue Reading
Advertisement
PM
ದೇಶ20 mins ago

ಪ್ರಧಾನಿ ವಿರುದ್ಧ ಪಿತೂರಿ ನಡೆಸುವುದು ದೇಶದ್ರೋಹ; ದೆಹಲಿ ಹೈಕೋರ್ಟ್ ಮಹತ್ವದ ಆದೇಶ

Union Minister Pralhad Joshi Statement in Unakal
ಹುಬ್ಬಳ್ಳಿ35 mins ago

Lok Sabha Election 2024: ಹಿಂದೂ ಧರ್ಮದ ಉಳಿವಿಗಾಗಿ ಮತ್ತೆ ಮೋದಿ ಬೆಂಬಲಿಸಿ: ಪ್ರಲ್ಹಾದ್‌ ಜೋಶಿ

DC vs GT
ಕ್ರೀಡೆ55 mins ago

DC vS GT: ಗುಜರಾತ್​ ವಿರುದ್ಧ ಡೆಲ್ಲಿಗೆ ರೋಚಕ ಗೆಲುವು ; ಪ್ಲೇ ಆಫ್​ ರೇಸ್ ಜೀವಂತ

PUBG Love
ದೇಶ55 mins ago

PUBG Love: ಪಬ್ಜಿ ಆಡುವಾಗ ಸಿಕ್ಕ ಮುಸ್ಲಿಂ ಯುವಕನ ಜತೆ ಹಿಂದು ಯುವತಿ ಮದುವೆ; ಈಗ ಬಾಳೇ ನರಕ!

Nada Gheethe
ಪ್ರಮುಖ ಸುದ್ದಿ1 hour ago

‌Nada Geethe: ನಾಡಗೀತೆ ವಿವಾದ; ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ತಿರಸ್ಕಾರ ಮಾಡಿದ ಹೈಕೋರ್ಟ್

Sachin Tendulkar Birthday
ಕ್ರೀಡೆ2 hours ago

Sachin Tendulkar Birthday: ಎಐ ತಂತ್ರಜ್ಞಾನದ ಮೂಲಕ ತೆಂಡೂಲ್ಕರ್​ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಐಸಿಸಿ

PM Narendra Modi
ಕರ್ನಾಟಕ2 hours ago

PM Narendra Modi: ಪ್ರಧಾನಿ ಮೋದಿಗೆ ‘ಪ್ರಾಮಿಸ್ಡ್ ನೇಷನ್’ ಪುಸ್ತಕ ಅರ್ಪಣೆ

Chikkaballapur Lok Sabha Constituency Congress candidate Raksha Ramaiah election campaign in Nelamangala
ಚಿಕ್ಕಬಳ್ಳಾಪುರ2 hours ago

Lok Sabha Election 2024: ನೆಲಮಂಗಲದಲ್ಲಿ ಬೃಹತ್‌ ರೋಡ್‌ ಶೋ ನಡೆಸಿ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ

Sunetra Pawar
ದೇಶ2 hours ago

Sunetra Pawar: 25 ಸಾವಿರ ಕೋಟಿ ರೂ. ಹಗರಣ; ಅಜಿತ್‌ ಪವಾರ್‌ ಪತ್ನಿ ಸುನೇತ್ರಾಗೆ ಕ್ಲೀನ್‌ಚಿಟ್!

2nd PUC Exam
ಕರ್ನಾಟಕ2 hours ago

2nd PUC Exam: ಏ.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಪ್ರವೇಶ ಪತ್ರ ಬಿಡುಗಡೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ19 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌