Site icon Vistara News

Siddaramaiah: ʼಪ್ರತಿಯೊಬ್ಬರಿಗೂ 500 ರೂ. ಕೊಟ್ಟು ಕರ್ಕೊಂಡು ಬರಬೇಕುʼ ಎಂದರೇ ಸಿದ್ದರಾಮಯ್ಯ?

siddaramaih

ಬೆಳಗಾವಿ: ʼಪ್ರತಿಯೊಬ್ಬರಿಗೆ 500 ರೂಪಾಯಿ ಕೊಟ್ಟು ಕರ್ಕೊಂಡು ಬರಬೇಕು’ ಎಂದು ಸಿದ್ದರಾಮಯ್ಯ ಅವರು ಹೇಳುತ್ತಿರುವ ವಿಡಿಯೋ ವೈರಲ್‌ ಆಗಿದೆ. ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಯಾತ್ರೆಯ ಬಸ್‌ನಲ್ಲಿ ಸಿದ್ದರಾಮಯ್ಯ ಅವರು ಇತರ ನಾಯಕರೊಂದಿಗೆ ಆಡಿದ ಮಾತಿನ ವಿಡಿಯೋ ಇದಾಗಿದೆ.

ಬೆಳಗಾವಿಯ ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ಮುಗಿಸಿ ಬಸ್ಸಿನಲ್ಲಿ ನಾಯಕರು ವಾಪಸ್ ಬರುತ್ತಿದ್ದಾಗ ಇದು ನಡೆದಿದೆ. ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಸ್ಸಿನಲ್ಲಿದ್ದವರು. ನೀವಿಬ್ಬರು ಸಮಾವೇಶಕ್ಕೆ ಬರಬೇಕು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ ನೀಡಿದ ಸಂದರ್ಭ, ʼಚುನಾವಣೆ ಇರೋದ್ರಿಂದ ಅವರು ಜನರನ್ನು ಸೇರಿಸುತ್ತಾರೆʼ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಂತರ ʼ500 ರೂಪಾಯಿ ಕೊಟ್ಟು ಕರೆದುಕೊಂಡು ಬರಬೇಕು ಪ್ರತಿಯೊಬ್ಬರನ್ನುʼ ಎಂದು ಸಿದ್ದರಾಮಯ್ಯ ಹೇಳಿರುವುದು ಕಂಡುಬಂದಿದೆ.

ಸಿದ್ದರಾಮಯ್ಯ ಮಾತನಾಡಿದ 20 ಸೆಕೆಂಡ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಜನರನ್ನು ಸೇರಿಸಲು 500 ರೂ. ಕೊಡಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿರುವುದು ವಿಪಕ್ಷಗಳನ್ನು ಉದ್ದೇಶಿಸಿಯೋ ಅಥವಾ ತಾವು ನಡೆಸುವ ಸಮಾವೇಶ ಬಗ್ಗೆಯೋ ಎಂಬುದು ಮಾತ್ರ ಈ ವಿಡಿಯೋದಲ್ಲಿ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: Siddaramaiah: ಸದನದಲ್ಲಿ ನಾನಿಲ್ಲದಿರುವಾಗ ಸಿಎಂ ಆರೋಪ ಮಾಡಿದ್ದಾರೆ: ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ

Exit mobile version