ನಿದ್ರಿಸಿದಂತೆ ನಟಿಸುವ ಜಾಣ ಕುದುರೆ ಉಪಾಯ! - Vistara News

ವೈರಲ್ ನ್ಯೂಸ್

ನಿದ್ರಿಸಿದಂತೆ ನಟಿಸುವ ಜಾಣ ಕುದುರೆ ಉಪಾಯ!

ಈ ಕುದುರೆ ಬಲೇ ತಮಾಷಿ. ಯಾರಾದರೂ ರೈಡ್‌ ಮಾಡಲು ಮುಂದಾದರೆ ಬಡಕ್ಕನೆ ಮಲಗಿ ನಿದ್ರೆ ಮಾಡಿದಂತೆ ನಟಿಸುತ್ತೆ. ಅದರ ಮಾಲಿಕ ಫೋಟೋ ತೆಗೆದು ಟ್ವಿಟರ್‌ನಲ್ಲಿ ಹಾಕಿದ್ದಾನೆ.

VISTARANEWS.COM


on

horse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮನುಷ್ಯ ತಾನೇ ಬುದ್ಧಿವಂತ ಎಂದು ಅಂದುಕೊಂಡರೆ, ಇಲ್ಲೊಂದು ಕುದುರೆ ಮನುಷ್ಯ ಮಾಡಿಸುವ ಕೆಲಸದಿಂದ ತಪ್ಪಿಸಿಕೊಳ್ಳಲು ನಿದ್ರೆ ಬಂದಂತೆ ನಟಿಸಲೂ ಕಲಿತಿದೆ! ಆ ಮೂಲಕ ನೀವು ಚಾಪೆ ಕೆಳಗೆ ನುಸುಳಿದರೆ, ನನಗೆ ರಂಗೋಲಿ ಕೆಳಗೆ ನುಸುಳುವುದು ಗೊತ್ತು ಎಂಬ ಗಾದೆಯನ್ನು ಮನುಷ್ಯನಿಗೆ ಪರೋಕ್ಷವಾಗಿ ದಾಟಿಸಿದೆ.

ಹೌದು. ಇದ್ಯಾವುದೋ ಪಂಚತಂತ್ರದ ಕಥೆ ಎಂದು ಭಾವಿಸಬೇಡಿ. ಶುಗರ್‌ ಎಂಬ ಹೆಸರಿನ ಕುದುರೆಯೊಂದು ನಿದ್ರಿಸಿದಂತೆ ನಟಿಸುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ, ಗಂಟೆಗಳಲ್ಲಿ ವೈರಲ್‌ ಆಗಿದೆ. ಜಿಮ್‌ ರೋಲ್‌ ಎಂಬಾತ ತನ್ನ ಶುಗರ್‌ ಎಂಬ ಹೆಸರಿನ ಈ ಕುದುರೆಯನ್ನು ಸಾಕಿದ್ದು, ಈ ಕುದುರೆ, ಕೆಲಸ ಮಾಡಲು ಮೈಗಳ್ಳತನ ತೋರುವಾಗಲೆಲ್ಲ ಹೀಗೆ ನಿದ್ರೆ ಬಂದಂತೆ ನಟಿಸುತ್ತಾಳೆ ಎಂದು ಎಂದು ತನ್ನ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಕುದುರೆ ಎಷ್ಟು ಜಾಣೆ ಎಂದರೆ, ತನಗೆ ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ, ಹೀಗೆ ಕಣ್ಣು ಮುಚ್ಚಿ ಅಂಗಾತ ಮಲಗಿಕೊಳ್ಳುತ್ತಾಳೆ. ಈಕೆ ಕಣ್ಣು ಬಿಟ್ಟಾಳೆಂದು ಈಕೆಯ ಬೆನ್ನ ಮೇಲೇರಿ ಸವಾರಿ ಮಾಡಲು ಬಯಸಿದವರು ಕಾದು ಕಾದು ಸೋತು ಸುಣ್ಣವಾಗಿ ಕೊನೆಗೆ ಅಲ್ಲಿಂದ ಪಲಾಯನ ಮಾಡಿದ ಮೇಲಷ್ಟೇ ಈಕೆ ಕಣ್ಣು ಬಿಟ್ಟು ಬಿಟ್ಟು ಏಳುತ್ತಾಳಂತೆ. ಅಷ್ಟರವರೆಗೆ ಯಾರು ಎಷ್ಟೇ ಪ್ರಯತ್ನಿಸಿದರೂ, ಜಪ್ಪಯ್ಯ ಎಂದರೂ ಅಲ್ಲಿಂದ ಕದಲುವುದಿಲ್ಲವಂತೆ.

ಇದನ್ನೂ ಓದಿ: ಸೈಕಲ್‌ ಓಡಿಸುತ್ತಿದ್ದ ಗೋರಿಲ್ಲಾ ಕೆಳಗೆ ಬಿದ್ದ ಬಳಿಕ ಮಾಡಿದ್ದೇನು?-ನಗು ತರಿಸುವ ವಿಡಿಯೋ ವೈರಲ್‌

ಈ ಪೋಸ್ಟ್‌ಗೆ ಸಾವಿರಾರು ಪ್ರತಿಕ್ರಿಯೆಗಳು ಬಂದಿದ್ದು, ಜನರು ಈ ಕುದುರೆಯ ಈ ನಡತೆಯನ್ನು ತಮಾಷೆಯಾಗಿಯೂ, ಗಂಭೀರವಾಗಿಯೂ ಚರ್ಚೆ ಮಾಡಿದ್ದಾರೆ. ʻಶುಗರ್‌ ನನ್ನಂತೆಯೇ! ಇವಳು ನನ್ನ ಆಫೀಸಿನಲ್ಲಿ ಕೆಲಸ ಮಾಡಬೇಕಾಗಿತ್ತುʼ ಎಂದು ಹಲವರು ನಗೆಯಾಡಿದ್ದರೆ, ಇನ್ನೂ ಕೆಲವರು ʻಜಾಣ ಕುದುರೆʼ ಎಂದಿದ್ದಾರೆ. ಹಲವರು ಇದೊಂದು ʻಸ್ಪೂರ್ತಿ ತುಂಬುವ ಕುದುರೆʼ ಎಂದೂ ವ್ಯಾಖ್ಯಾನಿಸಿದ್ದಾರೆ. ಇನ್ನೂ ಕೆಲವರು, ಇದನ್ನು ಗಂಭೀರವಾಗಿ ಪರಿಗಣಿಸಿ, ಕುದುರೆಗಳು ನಿಜವಾಗಿಯೂ ಭಯಂಕರ ಸುಸ್ತಾಗದ ಹೊರತು, ಸಾಮಾನ್ಯವಾಗಿ ಹೀಗೆ ಮಲಗಿಕೊಂಡಿರಲು ಬಯಸುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಫ್ರೀಜರ್‌ನಲ್ಲಿ ಮಲಗಿದ ಮುದ್ದುಮುಖದ ಆಲೂಗಡ್ಡೆಗೆ ಐದು ವರ್ಷ! ಇನ್ನೂ ಮುಗಿದಿಲ್ಲ ಅದರ ಬದುಕು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

Viral Video:ಲಕ್ನೋದಲ್ಲಿರುವ ವೆಬ್‌ ಮಾಲ್‌ನಲ್ಲಿ ಈ ಘಟನೆ ನಡೆದಿದ್ದು, ಅಂತಾರಾಷ್ಟ್ರೀಯ ಮಟ್ಟದ ಪಿಸ್ತೂಲ್‌ ಶೂಟರ್‌ ವಿನೋದ್‌ ಮಿಶ್ರಾ ರಂಜೀತ್‌ ಎಂಬ ಕಾರು ಚಾಲಕನ ಶರ್ಟ್‌ನ ಕಾಲರ್‌ ಹಿಡಿದು ಎಳೆದಾಡಿದ್ದಾನೆ. ಅಷ್ಟೇ ಅಲ್ಲದೇ ಪಿಸ್ತೂಲ್‌ನಲ್ಲಿ ಆತನ ಹೊಟ್ಟೆ, ತಲೆಗೆ ಹಲ್ಲೆ ಮಾಡಿದ್ದಾನೆ. ರಂಜೀತ್‌ನನ್ನು ಕಾರಿನತ್ತ ತಳ್ಳಿದ ಮಿಶ್ರಾ ಪಿಸ್ತೂಲ್‌ ಹಿಂಬಾಗದಿಂದ ಆತನ ಭುಜ, ತಲೆ, ಹೊಟ್ಟೆಗೆ ಹೊಡೆಯುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Viral Video
Koo

ಲಕ್ನೋ: ಉತ್ತರಪ್ರದೇಶ(Uttar Pradesh)ದಲ್ಲಿ ಯೋಗಿ ಆದಿತ್ಯಾನಾಥ್‌(Yogi Adityanath) ನೇತೃತ್ವದ ಸರ್ಕಾರ ಬಂದ ಮೇಲೆ ಪುಡಿರೌಡಿಗಳ ಅಟ್ಟಹಾಸಕ್ಕೆ ಬ್ರೇಕ್‌ ಬಿದ್ದಿರೋದಂತೂ ನಿಜ. ಬುಲ್ಡೋಜರ್‌ ಬಾಬಾನ ಭಯದಿಂದ ಮನೆಯಿಂದ ಹೊರ ಬರೋದಿಕ್ಕೂ ಹೆದರುತ್ತಾರೆ ಅನ್ನೋ ಮಾತಿದೆ. ಅಷ್ಟಾಗಿಯೂ ಅಲ್ಲೊಂದು ಇಲ್ಲೊಂದು ಅನ್ನೋ ಹಾಗೆ ರೌಡಿಗಳು ಬಾಲ ಬಿಚ್ಚುತ್ತಲೇ ಇರುತ್ತಾರೆ. ಅಂತಹದ್ದೇ ಒಂದು ಘಟನೆ ಇದೀಗ ವರದಿ ಆಗಿದೆ. ಅಂತಾರಾಷ್ಟ್ರೀಯ ಮಟ್ಟದ ಪಿಸ್ತೂಲ್‌ ಶೂಟರ್‌ ಒಬ್ಬ ಹಾಡಹಗಲೇ ನಡು ರಸ್ತೆಯಲ್ಲಿ ಪಿಸ್ತೂಲ್‌ ಹಿಡಿದು ಮತ್ತೋರ್ವನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ವೈರಲ್‌(Viral Video) ಆಗಿದೆ.

ಲಕ್ನೋದಲ್ಲಿರುವ ವೆಬ್‌ ಮಾಲ್‌ನಲ್ಲಿ ಈ ಘಟನೆ ನಡೆದಿದ್ದು, ಅಂತಾರಾಷ್ಟ್ರೀಯ ಮಟ್ಟದ ಪಿಸ್ತೂಲ್‌ ಶೂಟರ್‌ ವಿನೋದ್‌ ಮಿಶ್ರಾ ರಂಜೀತ್‌ ಎಂಬ ಕಾರು ಚಾಲಕನ ಶರ್ಟ್‌ನ ಕಾಲರ್‌ ಹಿಡಿದು ಎಳೆದಾಡಿದ್ದಾನೆ. ಅಷ್ಟೇ ಅಲ್ಲದೇ ಪಿಸ್ತೂಲ್‌ನಲ್ಲಿ ಆತನ ಹೊಟ್ಟೆ, ತಲೆಗೆ ಹಲ್ಲೆ ಮಾಡಿದ್ದಾನೆ. ರಂಜೀತ್‌ನನ್ನು ಕಾರಿನತ್ತ ತಳ್ಳಿದ ಮಿಶ್ರಾ ಪಿಸ್ತೂಲ್‌ ಹಿಂಬಾಗದಿಂದ ಆತನ ಭುಜ, ತಲೆ, ಹೊಟ್ಟೆಗೆ ಹೊಡೆಯುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಪೊಲೀಸರು ಹೇಳೋದೇನು?

ಘಟನೆ ಬಗ್ಗೆ ಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ ಕುಮಾವತ್‌ ಪ್ರತಿಕ್ರಿಯಿಸಿದ್ದು,ರಂಜೀತ್‌ ತನ್ನ ವ್ಯಾಗನರ್‌ ಕಾರಿನಲ್ಲಿ ಭೂತ್‌ನಾಥ್‌ಗೆ ತೆರಳುತ್ತಿದ್ದರು. ಮಿಶ್ರಾ ಅಲ್ಲಿಂದ ತಮ್ಮ ಟಾಟಾ ಸಫಾರಿ ಕಾರಿನಲ್ಲಿ ವಾಪಾಸಾಗುತ್ತಿದ್ದರು. ಈ ವೇಳೆ ಎರಡೂ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಇದರಿಂದಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಮಿಶ್ರಾ ತನ್ನ ಪಿಸ್ತೂಲನ್ನು ತೆಗೆದು ಮೂರು ಬಾರಿ ಹಲ್ಲೆ ನಡೆಸಿದ್ದಾನೆ. ಆಗ ರಂಜೀತ್‌ ಎಷ್ಟೇ ಕ್ಷಮೆ ಕೇಳಿದರೂ ಮಿಶ್ರಾ ಮಾತ್ರ ನಿರಂತರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.

ಹಿಂಬದಿ ಇದ್ದ ಕಾರಿನಲ್ಲಿದ್ದ ಕ್ಯಾಮೆರಾದಲ್ಲಿ ಘಟನೆ ವಿಡಿಯೋ ರೆಕಾರ್ಡ್‌ ಆಗಿದೆ. ರಂಜಿತ್‌ ಎಫ್‌ಐಆರ್‌ ದಾಖಲಿಸಿದ್ದು, ಮಿಶ್ರಾನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಆತನಿಂದ ಲೈಸೆನ್ಸ್‌ ಪಿಸ್ತೂಲ್‌ ಅನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಇನ್ನು ಮಿಶ್ರಾ ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ ಆಗಿದ್ದು, ಶೂಟಿಂಗ್‌ ತರಬೇತುದಾರನಾಗಿ ಕಾರ್ಯನಿರ್ಹಿಸುತ್ತಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ:SBI Warning: ನಕಲಿ ಸಂದೇಶಗಳ ಬಗ್ಗೆ ಎಚ್ಚರ‌ ಇರಲಿ; ಗ್ರಾಹಕರಿಗೆ ಎಸ್ ಬಿ ಐ ಸೂಚನೆ

Continue Reading

ದೇಶ

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

ಮೌಂಟ್ ಎವರೆಸ್ಟ್ ನಲ್ಲಿ ಪರ್ವತಾರೋಹಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು,ಈ ಬಗ್ಗೆ ಭಾರತದ ಪರ್ವತಾರೋಹಿ ರಾಜನ್ ದ್ವಿವೇದಿ ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video)ಆಗಿದೆ. ಅಲ್ಲೇಕೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ? ಈ ಕುರಿತ ಕುತೂಹಲಕರ ವರದಿ ಇಲ್ಲಿದೆ.

VISTARANEWS.COM


on

By

Viral Video
Koo

ಮೌಂಟ್ ಎವರೆಸ್ಟ್ ನಲ್ಲಿ (Mount Everest) ಪರ್ವತಾರೋಹಿಗಳು (climber) ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಆರೋಹಿಗಳ ಉದ್ದನೆಯ ಸರತಿಯ ಬಗ್ಗೆ ಇನ್ ಸ್ಟಾಗ್ರಾಮ್ ನಲ್ಲಿ (Instagram) ಭಾರತದ (indian) ಪರ್ವತಾರೋಹಿ ರಾಜನ್ ದ್ವಿವೇದಿ (Rajan Dwivedi) ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದೆ.

ಮೌಂಟ್ ಎವರೆಸ್ಟ್ ನಲ್ಲಿ ಮಂಗಳವಾರ ಪರ್ವತಾರೋಹಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಬ್ರಿಟಿಷ್ ಪರ್ವತಾರೋಹಿ ಮಾರ್ ಪ್ಯಾಟರ್ಸನ್ (39) ಮತ್ತು ನೇಪಾಳಿ ಶೆರ್ಪಾ ಪಾಸ್ತೆಂಜಿ (23) ಅವರು ಹಿಲರಿ ಹಂತವನ್ನು ಹತ್ತುವಾಗ ಕುಸಿದು ಬಿದ್ದಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಮೇ 20ರಂದು ರಾಜನ್ ದ್ವಿವೇದಿ ಅವರು ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ ವಿಡಿಯೋ ಅವರ ಹಿಂದೆ ಇರುವ ಆರೋಹಿಗಳ ಗುಂಪಿನ ಚಿತ್ರಣವನ್ನು ತೋರಿಸಿದೆ.

ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ದ್ವಿವೇದಿ ಅವರು ಮೌಂಟ್ ಎವರೆಸ್ಟ್ ಅನ್ನು ಏರುವಾಗ ಎದುರಾಗುವ ಸವಾಲುಗಳ ಬಗ್ಗೆ ಹೇಳಿದ್ದಾರೆ. ಒಂದೇ ಹಗ್ಗವನ್ನು ಹಿಡಿದುಕೊಂಡು ನಾವೆಲ್ಲ ಜೊತೆಯಾಗಿ ಸಾಗುತ್ತಿದ್ದೇವೆ. ಪರ್ವತ ಏರಲು, ಇಳಿಯಲು ಟ್ರಾಫಿಕ್ ತೊಂದರೆ ಎದುರಾಗಿದೆ. ಇದಕ್ಕೆ ಮುಖ್ಯ ಕಾರಣ ಇಲ್ಲಿನ ಹವಾಮಾನ. ಆರೋಹಿಗಳ ದೊಡ್ಡ ಸಾಲು ಬರುತ್ತಿರುವುದನ್ನು ನೋಡುವಾಗ ನನಗೆ ಕೆಳಗೆ ಬರುವುದು ಒಂದು ದುಃಸ್ವಪ್ನದಂತೆ ಕಂಡಿತ್ತು ಮತ್ತು ತೀವ್ರವಾಗಿ ದಣಿದಿದ್ದೆ ಎಂದು ಹೇಳಿದ್ದಾರೆ.


ದ್ವಿವೇದಿ ಆರೋಹಣದ ಮೂರು ನಿರ್ದಿಷ್ಟ ಪ್ರಯಾಸಕರ ವಿಭಾಗಗಳನ್ನು ಏರಿದ್ದಾರೆ. ಖುಂಬು ಐಸ್‌ಫಾಲ್ಸ್, ಕ್ಯಾಂಪ್ 3 ರಿಂದ ಕ್ಯಾಂಪ್ 4 ಕ್ಕೆ ಆರೋಹಣ. ಕ್ಯಾಂಪ್ 4 ರಿಂದ ಶಿಖರದ ಅಂತಿಮ ವಲಯ ಸಾವಿನ ವಲಯ ವೆಂದು ಪರಿಗಣಿಸಲ್ಪಟ್ಟಿದೆ. ಇಲ್ಲಿ ರಾತ್ರಿಯ ಸಮಯದಲ್ಲಿ ಹೆಪ್ಪುಗಟ್ಟಿದ ತಾಪಮಾನದ ನಡುವೆ ಪ್ರವಾಸ ಕೈಗೊಳ್ಳಲಾಗುತ್ತದೆ.

ಮೌಂಟ್ ಎವರೆಸ್ಟ್ ಏರುವುದು ಒಂದು ತಮಾಷೆಯ ಸಂಗತಿ ಅಲ್ಲ ಮತ್ತು ವಾಸ್ತವವಾಗಿ ಅದು ಗಂಭೀರ ಆರೋಹಣ ಎಂದು ದ್ವಿವೇದಿ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಶಿಖರದಿಂದ ಇಳಿಯುವುದು ಸವಾಲಿನ ಕಾರ್ಯವಾಗುತ್ತಿದೆ. ವಿಶೇಷವಾಗಿ ಹವಾಮಾನ ವೈಪರೀತ್ಯದ ನಡುವೆಯೂ ಹೆಚ್ಚಿನ ಸಂಖ್ಯೆಯ ಆರೋಹಿಗಳು ಮೇಲೆ ಏರುತ್ತಿದ್ದಾರೆ ಎಂದು ದ್ವಿವೇದಿ ತಿಳಿಸಿದ್ದಾರೆ.

ಪ್ರಪಂಚದಾದ್ಯಂತ ಸುಮಾರು 500 ಆರೋಹಿಗಳು, ಹವ್ಯಾಸಿಗಳು ಮತ್ತು ಅನನುಭವಿಗಳು ಇದನ್ನು ಏರಲು ಪ್ರಯತ್ನಿಸುತ್ತಾರೆ. ಬಹುಶಃ 250- 300 ಮಂದಿ ಮಾತ್ರ ಯಶಸ್ವಿಯಾಗುತ್ತಾರೆ. ಅನೇಕರು ಗಾಯಗೊಂಡು ಪ್ರವಾಸವನ್ನು ಕೊನೆಗೊಳಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ದ್ವಿವೇದಿ ಹಂಚಿಕೊಂಡಿರುವ ವಿಡಿಯೋವು ಒಂದು ಹಗ್ಗದ ಸಾಲಿನಲ್ಲಿ ದೀರ್ಘ ಕಾಯುವಿಕೆ ಮತ್ತು ಟ್ರಾಫಿಕ್ ಅಪ್‌ಸ್ಟ್ರೀಮ್ ಮತ್ತು ಡೌನ್‌ಸ್ಟ್ರೀಮ್‌ನಲ್ಲಿ ಇಂಟರ್‌ಚೇಂಜ್‌ಗಳ ಮಾತುಕತೆಗಳನ್ನು ತೋರಿಸುತ್ತದೆ.

ಇದನ್ನೂ ಓದಿ: Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು


ಉದ್ದನೆಯ ಸರದಿಯ ಮತ್ತೊಂದು ವಿಡಿಯೋ ವನ್ನು ಹಂಚಿಕೊಂಡ ಮಾಸ್ಸಿಮೊ ಎಕ್ಸ್ ನಲ್ಲಿ ಟ್ರಾಫಿಕ್ ಜಾಮ್‌ಗಳ ಕಾರಣಗಳು, ತಾಪಮಾನದಲ್ಲಿ ತೀವ್ರ ಕುಸಿತ, ಹಗ್ಗಗಳನ್ನು ಸರಿಪಡಿಸಿದ ದಿನಾಂಕ ಮತ್ತು ನಿಧಾನ ಪ್ರಯಾಣ, ಅನನುಭವಿ ಆರೋಹಿಗಳ ಕುರಿತು ಹೇಳಿಕೊಂಡಿದ್ದಾರೆ.

ಅನೇಕ ಪರಿಸರವಾದಿಗಳು ಮತ್ತು ಆರೋಹಿಗಳು ಎವರೆಸ್ಟ್‌ನಲ್ಲಿ ಜನಸಂದಣಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪರ್ವತದ ಮೇಲೆ ಅನೇಕ ಅಪಘಾತಗಳು ಮತ್ತು ಸಾವುಗಳ ಹೊರತಾಗಿಯೂ ನೂರಾರು ಜನರು ವಿಶ್ವದ ಅತಿ ಎತ್ತರದ ಶಿಖರವನ್ನು ಏರಲು ತಯಾರಾಗುತ್ತಾರೆ.

Continue Reading

ದೇಶ

Balkar Singh: ಕೆಲಸ ಕೇಳಿಕೊಂಡು ಬಂದ ಯುವತಿ ಎದುರು ಹಸ್ತಮೈಥುನ ಮಾಡಿಕೊಂಡ ಆಪ್‌ ಸಚಿವ; ವಿಡಿಯೊ ವೈರಲ್

Balkar Singh: ಬಲ್ಕಾರ್‌ ಸಿಂಗ್‌ ಅವರು ಕೆಲಸ ಕೇಳಿಕೊಂಡು ಬಂದ 21 ವರ್ಷದ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ. ಕೆಲಸ ಕೊಡಿಸುವ ಆಸೆ ಹುಟ್ಟಿಸಿದ ಅವರು ವಿಡಿಯೊ ಕಾಲ್‌ ಮಾಡಿ ನಿನ್ನ ಬಟ್ಟೆ ಬಿಚ್ಚು ಎಂಬುದಾಗಿ ಒತ್ತಾಯಿಸಿದ್ದಾರೆ. ಅವರೂ ಯುವತಿಗೆ ಕಾಣುವಂತೆ ಹಸ್ತಮೈಥುನ ಮಾಡಿಕೊಂಡಿದ್ದಾರೆ ಎಂಬುದಾಗಿ ಬಿಜೆಪಿಯ ತಜಿಂದರ್‌ ಬಗ್ಗಾ ಆರೋಪಿಸುವ ಜತೆಗೆ ವಿಡಿಯೊವನ್ನು ಕೂಡ ಹಂಚಿಕೊಂಡಿದ್ದಾರೆ.

VISTARANEWS.COM


on

Balkar Singh
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಸೇರಿ ಆಮ್‌ ಆದ್ಮಿ ಪಕ್ಷದ ಹಲವು ನಾಯಕರು, ಸಚಿವರು ಜೈಲುಪಾಲಾಗಿದ್ದಾರೆ. ಇದರ ಬೆನ್ನಲ್ಲೇ, ಪಂಜಾಬ್‌ನಲ್ಲಿ ಆಪ್‌ ಸಚಿವ ಬಲ್ಕಾರ್‌ ಸಿಂಗ್‌ (Balkar Singh) ಅವರ ಕಾಮಕೇಳಿಯೊಂದು ಬಯಲಾಗಿದೆ. ಕೆಲಸ ಕೇಳಿಕೊಂಡು ಬಂದಿದ್ದ ಯುವತಿ ಜತೆ ಪಂಜಾಬ್‌ ಸಚಿವ ಬಲ್ಕಾರ್‌ ಸಿಂಗ್‌ ಹಸ್ತಮೈಥುನ ಮಾಡಿಕೊಂಡಿದ್ದಾರೆ” ಎಂಬುದಾಗಿ ಬಿಜೆಪಿ ನಾಯಕ ತಜಿಂದರ್‌ ಬಗ್ಗಾ ಆರೋಪಿಸುವ ಜತೆಗೆ, ವಿಡಿಯೊವನ್ನು ಕೂಡ ಹಂಚಿಕೊಂಡಿದ್ದಾರೆ. ಇದು ಈಗ ಭಾರಿ ವೈರಲ್‌ ಆಗಿದೆ.

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ತಜಿಂದರ್‌ ಬಗ್ಗಾ ಅವರು ಬಲ್ಕಾರ್‌ ಸಿಂಗ್‌ ವಿಡಿಯೊವನ್ನು ಹಂಚಿಕೊಂಡಿದ್ದಾರೆ. “ಆಮ್‌ ಆದ್ಮಿ ಪಕ್ಷದಲ್ಲಿ ಮಹಿಳೆಯರಿಗೆ ರಕ್ಷಣೆ, ಗೌರವ ಇಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಈಗ ಆಪ್‌ ಸಚಿವ ಬಲ್ಕಾರ್‌ ಸಿಂಗ್‌ ಅವರು ಕೆಲಸ ಕೇಳಿಕೊಂಡು ಬಂದ 21 ವರ್ಷದ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ. ಕೆಲಸ ಕೊಡಿಸುವ ಆಸೆ ಹುಟ್ಟಿಸಿದ ಅವರು ವಿಡಿಯೊ ಕಾಲ್‌ ಮಾಡಿ ನಿನ್ನ ಬಟ್ಟೆ ಬಿಚ್ಚು ಎಂಬುದಾಗಿ ಒತ್ತಾಯಿಸಿದ್ದಾರೆ. ಅವರೂ ಯುವತಿಗೆ ಕಾಣುವಂತೆ ಹಸ್ತಮೈಥುನ ಮಾಡಿಕೊಂಡಿದ್ದಾರೆ” ಎಂಬುದಾಗಿ ತಜಿಂದರ್‌ ಬಗ್ಗಾ ಆರೋಪಿಸಿದ್ದಾರೆ.

“ಕರ್ತಾರ್‌ಪುರ ಸಾಹಿಬ್‌ ವಿಧಾನಸಭೆ ಕ್ಷೇತ್ರದ ಶಾಸಕ, ಸ್ಥಳೀಯ ಸಂಸ್ಥೆಗಳ ಸಚಿವ ಬಲ್ಕಾರ್‌ ಸಿಂಗ್‌ ಅವರನ್ನು ಮುಂದಿನ 24 ಗಂಟೆಗಳಲ್ಲಿಯೇ ವಜಾಗೊಳಿಸಬೇಕು. ಇಲ್ಲದಿದ್ದರೆ, ಮುಂಬರುವ ಚುನಾವಣೆಯಲ್ಲಿ ಪಂಜಾಬ್‌ನ ಜನರು ಆಮ್‌ ಆದ್ಮಿ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಹೇಳಿದ್ದಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಬಲ್ಕಾರ್‌ ಸಿಂಗ್‌ ವಿಡಿಯೊ ವೈರಲ್‌ ಆಗುತ್ತಲೇ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಅವರು ಕೂಡ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಕಾಂಗ್ರೆಸ್‌, ಅಕಾಲಿದಳ ಟೀಕೆ

ಬಲ್ಕಾರ್‌ ಸಿಂಗ್‌ ಅವರು ಅನುಚಿತವಾಗಿ ವರ್ತಿಸುವ ವಿಡಿಯೊ ವೈರಲ್‌ ಆಗಿರುವ ಬಗ್ಗೆ ಶಿರೋಮಣಿ ಅಕಾಲಿ ದಳ ಹಾಗೂ ಕಾಂಗ್ರೆಸ್‌ ಟೀಕೆ ವ್ಯಕ್ತಪಡಿಸಿವೆ. “ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು ಬಲ್ಕಾರ್‌ ಸಿಂಗ್‌, ಲಾಲ್‌ ಚಾಂದ್‌ ಕಟರುಚಾಕ್‌ ಅವರಂತಹ ನಾಚಿಕೆ ಇಲ್ಲದ ಸಚಿವರನ್ನು ರಕ್ಷಣೆ ಮಾಡುತ್ತಿರುವುದು ಖಂಡನೀಯ. ಕೂಡಲೇ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿವೆ. ಆದಾಗ್ಯೂ, ಬಲ್ಕಾರ್‌ ಸಿಂಗ್‌ ವಿರುದ್ಧ ಯಾವುದೇ ಯುವತಿಯು ದೂರು ನೀಡಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Aam Aadmi Party: ಆಪ್‌ಗೆ ಬರ್ತಿದ್ಯಾ ಖಲಿಸ್ತಾನಿ ಫಂಡಿಂಗ್ಸ್?‌ BKI ಉಗ್ರನ ಜೊತೆ ಪಕ್ಷ ಮುಖಂಡ ಫೊಟೋ

Continue Reading

ಕ್ರೈಂ

Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

Snake Bite: ಕಾಲಿಗೆ ಎರಡು ಬಾರಿ ಹಾವು ಕಚ್ಚಿದ್ದರೂ, ಮುಳ್ಳು ಚುಚ್ಚಿರಬಹುದೆಂದು ನಿರ್ಲಕ್ಷ್ಯ ತೋರಿದ ವ್ಯಕ್ತಿಯೊಬ್ಬ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

snake bite in chikkamagaluru
Koo

ಚಿಕ್ಕಮಗಳೂರು: ಜಮೀನಿನಲ್ಲಿ ಕೆಲಸ ಮುಗಿಸಿ ಬಂದ ವ್ಯಕ್ತಿಯೊಬ್ಬ ಮುಳ್ಳು ಚುಚ್ಚಿದೆ ಎಂದು ತಿಳಿದು ರಾತ್ರಿ ಊಟ ಮಾಡಿ ಮಲಗಿದವ ಚಿರನಿದ್ರೆಗೆ ಜಾರಿದ್ದ. ಗ್ರಾಮದ ಗಣ್ಯ ನಾಯ್ಕ್ (44) ಮೃತ ದುರ್ದೈವಿ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಘಟನೆ (Snake Bite) ನಡೆದಿದೆ.

ಗಣ್ಯ ನಾಯ್ಕ್‌ ಜಮೀನಿನಲ್ಲಿ ಕೆಲಸ ಮಾಡುವಾಗ ಕಾಲಿಗೆ ಎರಡು ಬಾರಿ ಹಾವು ಕಚ್ಚಿತ್ತು. ಆದರೆ ಮುಳ್ಳು ಚುಚ್ಚಿರಬೇಕು ಏನು ಆಗಲ್ಲ ಎಂದು ನಿರ್ಲಕ್ಷಿಸಿದ್ದ. ಹಾವು ಕಚ್ಚಿದ್ದು ಗಮನಕ್ಕೆ ಬಾರದೆ ಮನೆಗೆ ಬಂದು ಊಟ ಮಾಡಿ ಮಲಗಿದ್ದರು. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಹೆಣವಾಗಿದ್ದ.

ಕುಟುಂಬಸ್ಥರು ಮಲಗಿದ್ದ ಗಣ್ಯನನ್ನು ಎಬ್ಬಿಸಲು ಮುಂದಾಗಿದ್ದಾರೆ. ಆದರೆ ಆತ ಅಲುಗಾಡದೆ ಇದ್ದಾಗ ಅನುಮಾನಗೊಂದು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾಗಿ ಹೇಳಿದ್ದಾರೆ. ಒಂದು ಸಣ್ಣ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಜಿಂಕೆಗಳ ಅನುಮಾನಾಸ್ಪದ ಸಾವು

ಹತ್ತು ದಿನಗಳ ಅಂತರದಲ್ಲಿ ಎರಡು ಜಿಂಕೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಕಿಡಿಕಾರಿದ್ದಾರೆ. ಚಿಕ್ಕಬಳ್ಳಾಪುರದ ಚಿಂತಾಮಣಿ ‌ತಾಲ್ಲೂಕಿನ‌ ಏನಿಗದೆಲೆ ಗ್ರಾಮದಲ್ಲಿ ಘಟನೆ ನಡೆದಿದೆ. ಏನಿಗದೆಲೆ ಗ್ರಾಮದ ಹರೀಶ್ ಎಂಬುವರ ತೋಟದಲ್ಲಿ ಜಿಂಕೆಗಳ ಮೃತಪಟ್ಟಿವೆ. ಚಿಲಕಲನೇರ್ಪು ಗ್ರಾಮಪಂಚಾಯ್ತಿ ವ್ಯಾಪ್ತಿಯ ಏನಿಗದೆಲೆ ಗ್ರಾಮದಲ್ಲಿ ಬೇಟೆಗಾರರ ಹಾವಳಿಗೆ ಜಿಂಕೆಗಳು ಬಲಿಯಾಗುತ್ತಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

ಬೈಕ್‌-ಕ್ಯಾಂಟರ್‌ ಡಿಕ್ಕಿಗೆ ಯುವತಿ ನಾಲಿಗೆ ಕಟ್! ಸವಾರ ಸ್ಪಾಟ್‌ ಡೆತ್‌

ಚಿಕ್ಕಮಗಳೂರು/ಬೆಳಗಾವಿ: ಬೈಕ್-ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಇದ್ದ ಯುವತಿಯ ನಾಲಿಗೆ ಕಟ್ ಆಗಿದೆ. ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ (Road Accident) ಘಟನೆ ನಡೆದಿದೆ.

ಶಿವರಾಜ್ (26) ಮೃತ ದುರ್ದೈವಿ. ಲಾವಣ್ಯ (20) ನಾಲಿಗೆ ಕಳೆದುಕೊಂಡವಳು. ಲಾವಣ್ಯ ಹಾಸನದ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಳು. ಶಿವರಾಜ್-ಲಾವಣ್ಯ ಇಬ್ಬರು ಅರಸೀಕೆರೆ ತಾಲೂಕಿನ ಬಂದೂರು ಮೂಲದವರು.

ಇಬ್ಬರು ಬೈಕ್‌ನಲ್ಲಿ ಬರುವಾಗ ಕ್ಯಾಂಟರ್‌ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಶಿವರಾಜ್‌ ಸ್ಥಳದಲ್ಲೆ ಮೃತಪಟ್ಟರೆ, ಇತ್ತ ಹಿಂಬದಿ ಕುಳಿತಿದ್ದ ಲಾವಣ್ಯ ಡಿಕ್ಕಿ ರಭಸಕ್ಕೆ ನಾಲಿಗೆಯೇ ಕಟ್‌ ಆಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಗಾಯಾಳು ಲಾವಣ್ಯಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

ಉಳುಮೆ ಮಾಡುವಾಗ ಕರೆಂಟ್‌ ಶಾಕ್‌ಗೆ ರೈತ ಬಲಿ

ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ರೈತರೊಬ್ಬರು ದುರ್ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರೈತ ಮಂಜುನಾಥ್ ದಾಸನಕೊಪ್ಪ ಮೃತ ದುರ್ದೈವಿ.

ಗ್ರಾಮದಲ್ಲ ಭಾರಿ ಮಳೆ ಗಾಳಿಗೆ ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಅದನ್ನು ಗಮನಿಸದ ರೈತ ಮಂಜುನಾಥ್ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಕಿತ್ತೂರು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
India Head Coach
ಕ್ರೀಡೆ23 mins ago

India Head Coach: ಗಂಭೀರ್‌ ಕೋಚ್​ ಆಗುವುದು ಬಹುತೇಕ ಖಚಿತ; ಕುತೂಹಲ ಮೂಡಿಸಿದ ಜಯ್‌ ಶಾ ಭೇಟಿ

hindalaga jail assault case
ಕ್ರೈಂ41 mins ago

Assault Case: ಹಿಂಡಲಗಾ ಜೈಲಿನಲ್ಲಿ ಕೈದಿಯಿಂದಲೇ ಮಾರಣಾಂತಿಕ ಹಲ್ಲೆ; ಭಯದಲ್ಲಿ ಬದುಕುತ್ತಿರುವ ಸಿಬ್ಬಂದಿ!

Viral Video
ವೈರಲ್ ನ್ಯೂಸ್42 mins ago

Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

swagat babu no more
ಸಿನಿಮಾ1 hour ago

Swagat Babu: ಕನ್ನಡ ಚಲನಚಿತ್ರ ನಿರ್ಮಾಪಕ ಸ್ವಾಗತ್ ಬಾಬು ಇನ್ನಿಲ್ಲ

Porsche car accident ವಿಸ್ತಾರ ಸಂಪಾದಕೀಯ
ಪ್ರಮುಖ ಸುದ್ದಿ1 hour ago

ವಿಸ್ತಾರ ಸಂಪಾದಕೀಯ: ಕುಡುಕ ಬಾಲಕನಿಂದ ಅಪಘಾತ ಪ್ರಕರಣ; ಪುಣೆ ಪೊಲೀಸರ ದಿಟ್ಟ ಕ್ರಮ ಶ್ಲಾಘನೀಯ

Cooking In An Iron Pot
ಆರೋಗ್ಯ2 hours ago

Cooking In An Iron Pot: ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವುದು ಒಳ್ಳೆಯದು! ಯಾಕೆ ಗೊತ್ತೇ?

karnataka weather Forecast
ಮಳೆ2 hours ago

Karnataka Weather : ಕರಾವಳಿ, ಮಲೆನಾಡಲ್ಲಿ ಗುಡುಗು, ಮಿಂಚು; ಒಳನಾಡಿನಲ್ಲಿ ಸಾಧಾರಣ ಮಳೆ

Which Type Of Roti Is Best
ಆಹಾರ/ಅಡುಗೆ3 hours ago

Which Type Of Roti Is Best: ಯಾರಿಗೆ ಯಾವ ರೊಟ್ಟಿ ಸೂಕ್ತ? ತಿನ್ನುವ ಮೊದಲು ತಿಳಿದುಕೊಂಡಿರಿ!

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಹೊರ ಬರುತ್ತೀರಿ

Vijayapura news
ಪ್ರಮುಖ ಸುದ್ದಿ9 hours ago

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ15 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌