Snake Catch : ಬೃಹತ್‌ ಗಾತ್ರದ ಹೆಬ್ಬಾವನ್ನು ಹಿಡಿದ 12ರ ಬಾಲಕ! Video ಇದೆ ನೋಡಿ! - Vistara News

ಉಡುಪಿ

Snake Catch : ಬೃಹತ್‌ ಗಾತ್ರದ ಹೆಬ್ಬಾವನ್ನು ಹಿಡಿದ 12ರ ಬಾಲಕ! Video ಇದೆ ನೋಡಿ!

Snake Catch : ಉಡುಪಿಯ ಸಾಲಿಗ್ರಾಮದ ಬಳಿ ಕಂಡುಬಂದ ಹೆಬ್ಬಾವನ್ನು ಹಿಡಿಯಲು ಜನರು ಒಬ್ಬ ಹಾವು ಹಿಡಿಯೋರಿಗೆ ಕರೆ ಮಾಡಿದ್ದರು. ಆದರೆ, ಬಂದದ್ದು ಒಬ್ಬ ಹುಡುಗ! ಮುಂದೇನಾಯ್ತು?

VISTARANEWS.COM


on

Python catch video
ಹಾವಿನ ತಲೆಯನ್ನೇ ಹಿಡಿಯುತ್ತಿರುವ ಬಾಲಕ ಧೀರಜ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಅವನು ಕೇವಲ 12 ವರ್ಷದ ಬಾಲಕ (12 year old boy). ಏಳನೇ ತರಗತಿಯ ವಿದ್ಯಾರ್ಥಿ. ಆದರೆ, ಅವನ ವಯಸ್ಸಿಗೆ ಮೀರಿದ ಬುದ್ಧಿಶಕ್ತಿ, ಧೈರ್ಯ ಎಷ್ಟಿದೆ ಎಂದರೆ ಅತ್ಯಂತ ದೊಡ್ಡದಾದ ಹೆಬ್ಬಾವಿನ ತಲೆಗೇ ಕೈಹಾಕಿ (Snake Catch) ಹಿಡಿದಿದ್ದಾನೆ. ಪುಟ್ಟ ಬಾಲಕನ ಈ ಸಾಹಸದ ವಿಡಿಯೊ ಜಾಲತಾಣದಲ್ಲಿ ವೈರಲ್‌ (Viral video) ಆಗಿದ್ದ ಜನರ ಪ್ರಶಂಸೆಯ ಸುರಿಮಳೆಗೈಯುತ್ತಿದ್ದಾರೆ.

ಉಡುಪಿ ತಾಲೂಕಿನ ಸಾಲಿಗ್ರಾಮ ದೇವಾಡಿಗರಬೆಟ್ಟು ಗ್ರಾಮದಲ್ಲಿ ಹೆಬ್ಬಾವೊಂದು (Python catch) ಬಂದಿದೆ ಎಂಬ ಮಾಹಿತಿ ಪಡೆದ ಈ ಹುಡುಗ ತನ್ನ ತಂದೆಯೊಂದಿಗೆ ಅಲ್ಲಿಗೆ ಹೋಗಿದ್ದ. ಪೊದೆಯಲ್ಲಿ ಅಡಗಿಕೊಂಡಿದ್ದ ಹಾವನ್ನು ಅಪ್ಪ ಬಾಲದಲ್ಲಿ ಹಿಡಿದರೆ ಮಗ ತಲೆಗೇ ಕೈ ಹಾಕಿ ದರದರನೆ ಎಳೆದುಕೊಂಡು ಬಂದಿದ್ದಾನೆ!

ಈ ಹುಡುಗನ ಹೆಸರು ಧೀರಜ್‌ ಐತಾಳ್‌. ಅವನ ತಂದೆ ಬೇರೆ ಯಾರೂ ಅಲ್ಲ, ಉಡುಪಿ ಭಾಗದ ಖ್ಯಾತ ಉರಗ ತಜ್ಞ ಸುಧೀಂದ್ರ ಐತಾಳ್‌ (Snake catcher Sudhindra Aithal). ಸಾಲಿಗ್ರಾಮ ಭಾಗದಲ್ಲಿ ಎಲ್ಲೇ ವಿಷ ಜಂತುಗಳು ಕಂಡರೂ ಮೊದಲ ಕರೆ ಹೋಗುವುದು ಐತಾಳರಿಗೇ. ಕಳೆದ ಹಲವಾರು ವರ್ಷಗಳಿಂದ ಹಾವುಗಳ ಜತೆಗೇ ಬದುಕು ಎನ್ನುವಂತೆ ಬಾಳುತ್ತಿರುವರು ಅವರು. ಹಿಡಿದ ಹಾವುಗಳನ್ನು ಎಲ್ಲಾದರೂ ಬಿಡುವುದು ವಾಡಿಕೆ. ಆದರೆ, ಸೂಕ್ತ ಜಾಗ ಸಿಗದೆ ಹೋದರೆ ತನ್ನ ಮನೆಯಲ್ಲೇ ಇಟ್ಟುಕೊಳ್ಳುವಷ್ಟು ಹಾವುಗಳ ಮೇಲೆ ಪ್ರೀತಿ ಅವರಿಗೆ. ಹಾವುಗಳು ಮಾತ್ರವಲ್ಲ, ಇತರ ಕೆಲವು ಪ್ರಾಣಿಗಳನ್ನೂ ಅವರು ಸಾಕುತ್ತಿದ್ದರು. ಅವರು ಅಕ್ರಮವಾಗಿ ಪ್ರಾಣಿಗಳನ್ನು ಸಾಕುತ್ತಾರೆ ಎಂದು ಅವರ ಮೇಲೆ ಪ್ರಕರಣ ಕೂಡಾ ದಾಖಲಾಗಿತ್ತು.

ಹೀಗೆ ಸುಧೀಂದ್ರ ಐತಾಳ್‌ ಅವರ ಹಾವುಗಳ ಸ್ನೇಹವನ್ನು, ಮನೆಯಲ್ಲೂ ಹಾವುಗಳ ವಾತಾವರಣವನ್ನು ನೋಡುತ್ತಾ ಬೆಳೆದವನು ಧೀರಜ್‌. ಹೀಗಾಗಿ ಸಣ್ಣ ವಯಸ್ಸಿನಿಂದಲೂ ಧೀರಜ್‌ ಹಾವುಗಳೆಂದರೆ ಅಷ್ಟೊಂದು ಭಯವಿಲ್ಲ.

ಕೆಲವೊಮ್ಮೆ ತಂದೆಗೆ ಹಾವು ಹಿಡಿಯುವ ಕರೆ ಬಂದಾಗ ಅವರ ಜತೆಗೆ ಹೋಗುತ್ತಿದ್ದ ಅವನಿಗೆ ಬೇರೆ ಬೇರೆ ಹಾವುಗಳನ್ನು ಹೇಗೆ ಹಿಡಿಯಬೇಕು ಎಂಬ ಬಗ್ಗೆ ಮಾಹಿತಿಯೂ ಗೊತ್ತಾಗಿದೆ.

ಇತ್ತೀಚೆಗೆ ದೇವಾಡಿಗರ ಬೆಟ್ಟು ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಬಂದಿದೆ ಎಂಬ ಮಾಹಿತಿ ಬಂದಿತ್ತು. ಸುಧೀಂದ್ರ ಐತಾಳರು ಹೊರಟು ನಿಂತಾಗ ಧೀರಜ್‌ ಕೂಡಾ ಜತೆಗೆ ತೆರಳಿದ್ದ. ಹೋಗಿ ನೋಡಿದರೆ ಅದು ಸಾಮಾನ್ಯ ಗಾತ್ರದ್ದೇನೂ ಅಲ್ಲ.

ನಿಜವೆಂದರೆ ಸುಧೀಂದ್ರ ಐತಾಳು ಸಣ್ಣ ಜೀವ. ಅವರು ಹೆಬ್ಬಾವನ್ನು ಬಾಲದಿಂದ ಹಿಡಿದು ಹಿಂದಕ್ಕೆ ಎಳೆಯುತ್ತಿದ್ದರೆ ಬೃಹತ್‌ ಗಾತ್ರದ ಆ ಹಾವು ಅವರನ್ನೇ ಮುಂದಕ್ಕೆ ಎಳೆಯುತ್ತಿತ್ತು. ಇದನ್ನೆಲ್ಲ ನೋಡುತ್ತಿದ್ದ ಧೀರಜ್‌ ತಂದೆಗೆ ಸಹಾಯ ಮಾಡಲು ಮುಂದಾದ.

ಇದನ್ನೂ ಓದಿ : Viral Video: ಕೋಳಿಯ ಹಿಂಭಾಗಕ್ಕೆ ಪಟಾಕಿ ತುರುಕಿ ಸಿಡಿಸಿದರು! ಕೃತ್ಯ ಎಸಗಿದವರಿಗೆ ಶಿಕ್ಷೆಗೆ ಆಗ್ರಹ

python Catch by boy
python Catch by boy

ಸಹಾಯ ಎಂದರೆ ಅಪ್ಪನ ಜತೆಗೆ ನಿಂತು ಬಾಲದಲ್ಲಿ ಎಳೆಯುವುದಲ್ಲ. ಅಪ್ಪ ಬಾಲದಲ್ಲಿ ಎಳೆದರೆ ಧೀರಜ್‌ ಅವರ ತಲೆ ಭಾಗವನ್ನೇ ಹಿಡಿಯಲು ಹೋದ. ಆದರೆ, ಬೃಹತ್‌ ಗಾತ್ರದ ಹಾವಿನ ತೆರೆದ ಬಾಯಿಯನ್ನು ತಪ್ಪಿಸಿ ತಲೆಯನ್ನು ಹಿಡಿಯಬೇಕು ಎಂದು ಸಾಕಷ್ಟು ಅನುಭವ ಬೇಕು. ತಾನು ತಂದೆಯ ಜತೆಗೆ ಇದ್ದಾಗ ಅವರೇನು ಮಾಡುತ್ತಿದ್ದರು ಎಂಬುದನ್ನು ನೆನಪಿಸಿಕೊಂಡು ತಲೆಗೇ ಕೈ ಹಾಕಿ ಹಿಡಿದಿದ್ದಾನೆ. ಬಳಿಕ ಅಪ್ಪ-ಮಗ ಇಬ್ಬರೂ ಸೇರಿ ದೊಡ್ಡ ಹೆಬ್ಬಾವನ್ನು ಹೊರಗೆಳೆದು ತಂದಿದ್ದಾರೆ. ಹೀಗೆ ಧೈರ್ಯದಿಂದ ಹಾವು ಹಿಡಿದ ಬಾಲಕನ ಸಾಹಸ ಈಗ ಎಲ್ಲೆಡೆ ವೈರಲ್‌ ಆಗಿದೆ.

ಹಾವನ್ನು ಹಿಡಿದಾಗ ಅದು ಸಾಕಷ್ಟು ಹೋರಾಟವನ್ನು ಮಾಡುತ್ತದೆ ಹಿಡಿದವರ ಕೈ, ಮೈಯನ್ನು ಸುತ್ತಿ ಸುರುಳಿ ಹಾಕಲು ಯತ್ನಿಸುತ್ತದೆ. ಆದರೆ, ಬಾಲಕ ಅದಕ್ಕೆ ಅವಕಾಶ ಕೊಡದೆ ಹಾಗೇ ಹಿಡಿದಿರುತ್ತಾನೆ!

ಹಾವು ಹಿಡಿಯುತ್ತಿರುವ ದೃಶ್ಯ ಇಲ್ಲಿ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ವಾರಾಂತ್ಯದಲ್ಲಿ ರಾಜ್ಯಾದ್ಯಂತ ಸಾಧಾರಣ ಮಳೆ ಮುನ್ಸೂಚನೆ

Karnataka weather Forecast : ರಾಜ್ಯಾದ್ಯಂತ ಮಳೆ ಅಬ್ಬರ ಕಡಿಮೆ ಆಗಿದೆ. ನಾಲ್ಕೈದು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Rain News) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕ ಕರಾವಳಿ ಮತ್ತು ಮಲೆನಾಡು ಸುತ್ತಮುತ್ತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ (Rain News) ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡು ಚದುರಿದ ಅತ್ಯಂತ ಹಗುರದಿಂದ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಸುತ್ತಮುತ್ತ ಅತಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಚದುರಿದಂತೆ ಚದುರಿದ ಸಣ್ಣ ಮಳೆಯಾಗಲಿದೆ.

ಇನ್ನು ಮಲೆನಾಡಿನ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸಾಧಾರಣ ಮಳೆಯಾಗಬಹುದು. ಕರಾವಳಿಯಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಒಣಹವೆ ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 20 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಂಡ್ಯ

Road Accident : ಮಂಡ್ಯದಲ್ಲಿ ಕಾರು ಹಾಗೂ ಗೂಡ್ಸ್ ಆಟೋ ನಡುವೆ ಡಿಕ್ಕಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Road Accident : ಮಂಡ್ಯದಲ್ಲಿ ಕಾರು ಹಾಗೂ ಗೂಡ್ಸ್ ಆಟೋ ನಡುವೆ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಉಡುಪಿಯಲ್ಲಿ ವೇಗವಾಗಿ ಬಂದ ಶಾಲಾವಾಹನ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

VISTARANEWS.COM


on

By

Road Accident
Koo

ಮಂಡ್ಯ: ಕಾರು ಹಾಗೂ ಗೂಡ್ಸ್ ಆಟೋ ನಡುವೆ ಡಿಕ್ಕಿಯಾಗಿದ್ದು, ಟಾಟಾ ಏಸ್ ನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅಪಘಾತದಲ್ಲಿ (Road Accident) ಯಾವುದೇ ಪ್ರಾಣಾಪಾಯವಾಗಿಲ್ಲ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಣಿಗೆರೆ ಗ್ರಾಮದಲ್ಲಿ ನಡೆದಿದೆ. ತೋರೆಬೊಮ್ಮನಹಳ್ಳಿ ಗ್ರಾಮದ 22 ಮಂದಿಗೆ ಗಾಯವಾಗಿದೆ. ಗೂಡ್ಸ್ ಆಟೋ ಮಳವಳ್ಳಿ ಕಡೆಗೆ, ಕಾರು ಬೆಂಗಳೂರು ಕಡೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

ಡಿಕ್ಕಿ ರಭಸಕ್ಕೆ ಟಾಟಾ ಏಸ್ ಟೆಂಪೋ ಉರುಳಿ ಬಿದ್ದಿದೆ. ಟೆಂಪೋದಲ್ಲಿದ್ದ 22 ಜನರಿಗೆ ಗಾಯವಾಗಿದ್ದು, ಗಾಯಾಳುಗಳನ್ನ ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್‌ಗೆ ದಾಖಲು ಮಾಡಲಾಗಿದೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಡಿಸಿ, ಎಸ್ಪಿ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಾಯಾಳುಗಳ ಆರೋಗ್ಯವನ್ನು ಡಿಸಿ ಡಾ.ಕುಮಾರ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ವಿಚಾರಿಸಿದರು.

ಮಣಿಗೆರೆ ಬಳಿ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಮಿಮ್ಸ್‌ಗೆ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ ನೀಡಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿ ಬಳಿಕ ಮಾತನಾಡಿದ ಅವರು, ಕಾರು-ಗೂಡ್ಸ್ ಗಾಡಿ ನಡುವೆ ಡಿಕ್ಕಿಯಾಗಿ 28 ಜನರಿಗೆ ಗಂಭೀರ ಗಾಯವಾಗಿದೆ. ಎಲ್ಲರಿಗೂ ಸೂಕ್ತ ಚಿಕಿತ್ಸೆ ಕೊಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲರೂ ಆರೋಗ್ಯವಾಗಿದ್ದಾರೆ, ಯಾವುದೇ ರೀತಿಯ ಪ್ರಾಣ ಹಾನಿಯಾಗಿಲ್ಲ. ಗ್ರಾಮೀಣ ಭಾಗದ ಜನರು ಟೆಂಪೋ ಹಾಗೂ ಗೂಡ್ಸ್ ಗಾಡಿಗಳಲ್ಲಿ ಹೋಗುವುದನ್ನ ನಿಲ್ಲಿಸಬೇಕು. ಹೆಚ್ಚು ಜನರು ಗೂಡ್ಸ್ ಗಾಡಿಗಳಲ್ಲಿ ಪ್ರಯಾಣಿಬಾರದು ಎಂದು ನಿಷೇಧ ಇದೆ. ಜನರು ಎಚ್ಚರಿಕೆ ವಹಿಸಬೇಕು. ಇದರ ಬಗ್ಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ವೇಗವಾಗಿ ಬಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾವಾಹನ

ಅತೀ ವೇಗದ ವಾಹನ ಚಾಲನೆ ಮಾಡಿದ ಶಾಲಾವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಾಹನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಚಾಲಕನ ತಲೆಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಾಹನದಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯಗೊಂಡಿದ್ದಾರೆ. ಕುಂದಾಪುರ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ಶಾಲಾವಾಹನ ಇದಾಗಿದೆ. ಹೆದ್ದಾರಿಯಲ್ಲಿ ಅಡ್ಡ ಬಂದ ಬೈಕ್‌ವೊಂದನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಶಾಲಾ ವಾಹನವು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ವಾಹನ ಬ್ರಹ್ಮಾವರದಿಂದ ಹೆಮ್ಮಾಡಿ ಕಡೆಗೆ ಬರುತ್ತಿದ್ದಾಗ ನಡೆದಿದೆ. ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ನಿರ್ಲಕ್ಷಿಸಿ ಅತೀ ವೇಗದ ವಾಹನ ಚಾಲನೆಯಿಂದ ಅಪಘಾತ ನಡೆದಿದೆ.

ದೇವನಹಳ್ಳಿಯಲ್ಲಿ ಹೊತ್ತಿ ಉರಿದ ಕ್ಯಾಂಟರ್‌

ಅಂಗಡಿಗಳಿಗೆ ಬಟ್ಟೆ‌ ಹಾಗೂ ದಿನಸಿ ಪದಾರ್ಥಗಳು ಡಂಪ್ ಮಾಡಲು‌ ಬಂದಿದ್ದ ಕ್ಯಾಂಟರ್‌ಗೆ ಆಕಸ್ಮಿಕ ಬೆಂಕಿ ತಗುಲಿದೆ. ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಪಟ್ಟಣದ ಹಳೇಯ ಬಸ್ ನಿಲ್ದಾಣ ಇಂದಿರಾ ಕ್ಯಾಂಟಿನ್ ಬಳಿ‌ ಘಟನೆ ನಡೆದಿದೆ. ಬೆಳಗಿನ ಜಾವ 3 ಗಂಟೆಗೆ ಪಟ್ಟಣದ ಅಂಗಡಿಗಳಿಗೆ ಸಾಮಾಗ್ರಿಗಳು ಹಾಗೂ ಬಟ್ಟೆಗಳು ಡಂಪ್ ಮಾಡಲು‌ ಬಂದಿದ್ದ ಕ್ಯಾಂಟರ್‌ ಬಜಾರ್ ರಸ್ತೆಗೆ ತೆರಳಲು ಹೋಗುತ್ತಿದ್ದಾಗ, ವಿದ್ಯುತ್ ತಂತಿ ತಗುಲಿರುವ ಶಂಕೆ ಇದೆ.

ಅಗ್ನಿಶಾಮದಳದ ಸಿಬ್ಬಂದಿ ಹಾಗೂ ಪೊಲೀಸರಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿಯಿಲ್ಲ. ಬೆಂಕಿ ಬಿದ್ದ ಪರಿಣಾಮ ಕ್ಯಾಂಟರ್ ಸಂಪೂರ್ಣ ಬೆಂಕಿಗಾಹುತಿ ಆಗಿದೆ. ಕ್ಯಾಂಟರ್‌ನಲ್ಲಿದ್ದ ಲಕ್ಷಾಂತರ ಮೌಲ್ಯದ ಬಟ್ಟೆ ಹಾಗೂ ದಿನಸಿ ಅಂಗಡಿಯ ಪದಾರ್ಥಗಳು ಸುಟ್ಟು ಕರಕಲಾಗಿದೆ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಡಿಕ್ಕಿಗೆ ಬೈಕ್‌ ಸವಾರ ಗಂಭೀರ

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು ಸಂತೆಮಾಳದ ಬಳಿ ಟಿ.ವಿ.ಎಸ್. ಮೊಪೆಡ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ. ಕರುಹಟ್ಟಿಯ ಮಹದೇವಪ್ಪ ಎಂಬುವವರಿಗೆ ಗಂಭೀರ ಗಾಯವಾಗಿದೆ. ಅಪಘಾತದ ನಂತರ ಲಾರಿ ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳು ಮಹದೇವಪ್ಪಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡು ಸೇರಿ ಉತ್ತರ ಒಳನಾಡಿನಲ್ಲಿ ಹಗುರ ಮಳೆ

Karnataka Weather : ಕರಾವಳಿ, ಮಲೆನಾಡು ಸೇರಿ ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಒಣಹವೆ ಮುಂದುವರಿಯಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ. ಈ ದಿನ ಬುಧವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಉಳಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ.

ಇನ್ನು ಬೆಂಗಳೂರು ನಗರ ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಒಣ ಹವಾಮಾನ ಮುಂದುವರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 20 ಡಿ.ಸೆ ಇರಲಿದೆ.

ಇಲ್ಲೆಲ್ಲ ಮಳೆ?

ಪುತ್ತೂರು ಎಚ್‌ಎಂಎಸ್, ಕೋಟ, ಹಣಂಬೂರು ವೀಕ್ಷಣಾಲಯ, ಗೋಕರ್ಣ, ಅಂಕೋಲಾ, ಕಾರ್ಕಳದಲ್ಲಿ ತಲಾ 3 ಸೆಂ.ಮೀ ಮಳೆಯಾಗಲಿದೆ. ಕಾರವಾರ ವೀಕ್ಷಣಾಲಯ, ಮಂಕಿ, ಮಂಗಳೂರು ಎಪಿ ಅನ್ಸರ್ವೇಟರಿ, ಗೇರ್ಸೊಪ್ಪ, ಕುಮಟಾ, ಉಡುಪಿ, ಶಿರಾಲಿ ಪಿಟಿಒ, ಲಿಂಗನಮಕ್ಕಿ ಎಚ್‌ಎಂಎಸ್, ಶೃಂಗೇರಿ ಎಚ್‌ಎಂಎಸ್ 2 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಸುಳ್ಯ, ಮೂಲ್ಕಿ , ಕುಂದಾಪುರ, ಧಾರವಾಡ ಪಿಟಿಒ, ಶಿರಹಟ್ಟಿ , ಧಾರವಾಡ, ನರಗುಂದ, ಭಾಗಮಂಡಲ, ಕಮ್ಮರಡಿ ಸೇರಿ ಕೊಟ್ಟಿಗೆಹಾರ, ಜಯಪುರ, ಪೊನ್ನಂಪೇಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಕರಾವಳಿಯಲ್ಲಿ ಸಾಧಾರಣ ಮಳೆ; ಉಳಿದೆಡೆ ಮುಂದುವರಿಯಲಿದೆ ಒಣಹವೆ

Karnataka Weather Forecast : ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Karnataka Weather Forecast) ಕಡಿಮೆ ಆಗಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ (Rain News) ಮುನ್ಸೂಚನೆಯನ್ನು ನೀಡಿದೆ. ಸೆ.16ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ ಸೇರಿ ಮಲೆನಾಡನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಮುಖ್ಯವಾಗಿ ಒಣ ಹವೆಯೇ ಮುಂದುವರಿಯುವ ಸಾಧ್ಯತೆಯಿದೆ. ಒಳನಾಡಿನ ಕೆಲವೆಡೆ ಪ್ರತ್ಯೇಕ ಸ್ಥಳದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇಲ್ಲೆಲ್ಲ ಮಳೆಯ ಸಿಂಚನ

ನಿನ್ನೆ ಕರಾವಳಿಯ ಹಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ. ಉಡುಪಿಯ ಕೋಟ 3 ಸೆಂ.ಮೀ, ಗೋಕರ್ಣ, ಹೊನ್ನಾವರ ವೀಕ್ಷಣಾಲಯ, ಶಿರಾಲಿ ಪಿಟಿಒ, ಸಿದ್ದಾಪುರ, ಗೇರ್ಸೊಪ್ಪದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕುಂದಾಪುರ, ಉಡುಪಿ, ಕ್ಯಾಸಲ್ ರಾಕ್, ಉಪ್ಪಿನಂಗಡಿ, ಕಾರ್ಕಳ, ಕುಮಟಾ ಹಾಗೂ ಲೋಂಡಾ, ಕಮ್ಮರಡಿ, ಹಾಸನ ಪಿಟ್ಟಿಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka Weather Forecast
ಮಳೆ1 ಗಂಟೆ ago

Karnataka Weather : ವಾರಾಂತ್ಯದಲ್ಲಿ ರಾಜ್ಯಾದ್ಯಂತ ಸಾಧಾರಣ ಮಳೆ ಮುನ್ಸೂಚನೆ

Dina Bhavishya
ಭವಿಷ್ಯ2 ಗಂಟೆಗಳು ago

Dina Bhavishya : ದಿನದ ಮಟ್ಟಿಗೆ ಖರ್ಚು ಹೆಚ್ಚು; ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Use nandini ghee compulsorily in temple prasadam Order of the Department of Religious Endowments
ಕರ್ನಾಟಕ14 ಗಂಟೆಗಳು ago

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Temporary additional coaches to be attached to 34 trains for Dasara 2024
ಬೆಂಗಳೂರು14 ಗಂಟೆಗಳು ago

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Theft case
ಬೆಂಗಳೂರು15 ಗಂಟೆಗಳು ago

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Also test the prasadam of the holy places of the state Pralhad Joshi urges state government
ಬೆಂಗಳೂರು17 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು19 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ19 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್19 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ20 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌