Viral News : ಒಂದು ಕನ್ನಡಕದ ಬಾಕ್ಸ್‌ನಿಂದ ಬಯಲಾಯ್ತು ಎರಡೆರೆಡು ಕೊಲೆ ಪ್ರಕರಣ! Vistara News

ವೈರಲ್ ನ್ಯೂಸ್

Viral News : ಒಂದು ಕನ್ನಡಕದ ಬಾಕ್ಸ್‌ನಿಂದ ಬಯಲಾಯ್ತು ಎರಡೆರೆಡು ಕೊಲೆ ಪ್ರಕರಣ!

ಕನ್ನಡಕದ ಬಾಕ್ಸ್‌ನಿಂದಾಗಿ ಎರಡು ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿರುವ ವಿಶೇಷ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಈ ವಿಚಾರ ಎಲ್ಲೆಡೆ ವೈರಲ್‌ (Viral News) ಆಗಿದೆ.

VISTARANEWS.COM


on

spectacle case led Navi Mumbai police to crack two murder cases
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಜುಲೈ 10ರಂದು ಮಹಾರಾಷ್ಟ್ರದ ನವಿ ಮುಂಬೈನ ಪೊಲೀಸರಿಗೆ ಫೋನ್‌ ಕರೆಯೊಂದು ಬಂದಿದೆ. ಅದರಲ್ಲಿ ಉರಾನ್ ತಾಲೂಕಿನ ಪಿರ್ಕಾನ್-ಸರ್ದೇಗಾಂವ್ ರಸ್ತೆಯಲ್ಲಿ ಮಹಿಳೆಯ ಶವವೊಂದು ಬಿದ್ದಿರುವುದಾಗಿ ದಾರಿಹೋಕರು ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ತಕ್ಷಣ ಸ್ಥಳಕ್ಕೆ ಬಂದಿದ್ದಾರೆ. ಆದರೆ ಮಹಿಳೆಯ ಶವದ ಬಳಿ ಯಾವೊಂದು ಸಾಕ್ಷಿಯೂ ಪೊಲೀಸರಿಗೆ ಸಿಕ್ಕಿರಲಿಲ್ಲ. ಅಲ್ಲಿ ಸಿಕ್ಕ ಒಂದೇ ಒಂದು ಕನ್ನಡಕದ ಬಾಕ್ಸ್‌ನಿಂದಾಗಿ ಪೊಲೀಸರು ಎರಡು ಕೊಲೆ ಪ್ರಕರಣಗಳನ್ನು ಬೇಧಿಸಿದ್ದಾರೆ. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral News) ಆಗಿದೆ.

ರಸ್ತೆ ಬದಿ ಇದ್ದ ಶವದ ಮೇಲಿದ್ದ ಎಲ್ಲ ಆಭರಣವನ್ನು ಕೊಲೆಗಾರ ಕೊಂಡೊಯ್ದಿದ್ದ. ಎರಡು ಬುಲೆಟ್‌ ಅನ್ನು ತಲೆಗೆ ಹೊಡೆದಿದ್ದರೂ, ಮತ್ತೆ ಶವದ ಕುತ್ತಿಗೆಯನ್ನೂ ಕೊಯ್ದಿದ್ದ. ಶವದ ಬಳಿ ಯಾವುದೇ ಸಾಕ್ಷಿಗಳನ್ನು ಉಳಿಸದಂತೆ ಎಲ್ಲವನ್ನೂ ಹೊತ್ತೊಯ್ದಿದ್ದ. ಎಲ್ಲ ಕಡೆ ಸೂಕ್ಷ್ಮವಾಗಿ ಪರಿಶೀಲನೆ ಮಾಡಿದ ಪೊಲೀಸರಿಗೆ ಅಲ್ಲಿ ಒಂದು ಕನ್ನಡಕದ ಬಾಕ್ಸ್‌ ಸಿಕ್ಕಿದೆ. ಆ ಬಾಕ್ಸ್‌ನಲ್ಲಿ ಡೊಂಬಿವಲಿಯ ಕನ್ನಡಕದ ಅಂಗಡಿಯೊಂದರ ಮಾಹಿತಿ ಸಿಕ್ಕಿದ್ದು, ಪೊಲೀಸರು ಸೀದಾ ಅಲ್ಲಿಗೆ ಹೋಗಿದ್ದಾರೆ. ಅಲ್ಲಿ ಶವದ ಫೋಟೋ ತೋರಿಸಿದಾಗ ಅಂಗಡಿಯವರು ಆ ಮಹಿಳೆ ತಮಗೆ ಗೊತ್ತೆಂದು ಹೇಳಿದ್ದಾರೆ. ಆ ಮಹಿಳೆಯ ಹೆಸರು ಭಾರತಿ ಎಂದೂ ಆಕೆ ತಮ್ಮ ಗ್ರಾಹಕರೆಂದು ಅವರು ತಿಳಿಸಿದ್ದಾರೆ. ಅಂಗಡಿಯಲ್ಲಿ ಪೊಲೀಸರು ಆಕೆಯ ವಿಳಾಸ ಮತ್ತು ಫೋನ್‌ ನಂಬರ್‌ ಅನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Viral Video : ಎಲ್ಲರ ಎದುರೇ ಯುವತಿಯ ಕೆನ್ನೆಗೆ ಬಾರಿಸಿದ ಸರ್ಕಾರಿ ಅಧಿಕಾರಿ!
ಅಲ್ಲಿಂದ ಡೊಂಬಿವಲಿಯ ಭಾರತಿ ಮನೆಗೆ ಹೋಗಿ ಆಕೆಯ ಅಕ್ಕ ಪಕ್ಕದ ಮನೆಯವರನ್ನು ವಿಚಾರಣೆ ಮಾಡಲಾಗಿದೆ. ಭಾರತಿ ಆಲಿಬಗ್‌ನ ಪೊಯ್ನಾಡಿನಲ್ಲಿರುವ ತನ್ನ ಮಗಳು ಪ್ರೀತಿಯ ಮನೆಗೆ ಹೋಗುವುದಾಗಿ ಹೇಳಿ ಹೋಗಿದ್ದಾಗಿ ಪಕ್ಕದ ಮನೆಯವರು ತಿಳಿಸಿದ್ದಾರೆ. ಹಾಗೆಯೇ ಆಕೆಯನ್ನು ಕರೆದುಕೊಂಡು ಹೋಗಲು ಆಕೆಯ ಅಳಿಯ ಮಯುರೇಶ್‌ ಅಜೀತ್‌ ಗಂಭೀರ್‌ ಬಂದಿದ್ದಾಗಿಯೂ ಅವರು ತಿಳಿಸಿದ್ದಾರೆ.

ಮಯುರೇಶ್‌ ಹಾಗೂ ಆತನ ಮೂವರು ಸ್ನೇಹಿತರ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು, ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾರಂಭಿಸಿದ್ದಾರೆ. ಆಗ ಮಯುರೇಶ್‌ ತನ್ನ ಅತ್ತೆಯನ್ನು ತಾನೇ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಅತ್ತೆ ತನ್ನ ಮಗಳನ್ನು ನೋಡಬೇಕೆಂದು ಪದೇಪದೆ ಹಠ ಮಾಡುತ್ತಿದ್ದರಿಂದಾಗಿ ಆಕೆಯನ್ನು ಕೊಲೆ ಮಾಡಿ, ರಸ್ತೆ ಬದಿ ಹೆಣವನ್ನು ಎಸೆದಿದ್ದಾಗಿ ಆತ ತಿಳಿಸಿದ್ದಾನೆ.

ಇದನ್ನೂ ಓದಿ: Viral Video : ವಂದೇ ಭಾರತ್‌ ರೈಲಿನ ಶೌಚಾಲಯದಲ್ಲಿ ಬೀಡಿಯ ಹೊಗೆ; ನಿಂತೇ ಹೋಯ್ತು ರೈಲು!
ಆಗ ಪೊಲೀಸರಿಗೆ ಮತ್ತೊಂದು ಅನುಮಾನ ಶುರುವಾಗಿದೆ. ಮಗಳನ್ನು ಭೇಟಿ ಮಾಡುವುದಕ್ಕೆ ಯಾಕಾಗಿ ಆತ ಅನುಮತಿ ಕೊಡುತ್ತಿರಲಿಲ್ಲ ಎಂದು ಆತನನ್ನು ಪ್ರಶ್ನಿಸಲಾಗಿದೆ. ಆಗ ಆತ ಪ್ರೀತಿಯನ್ನು 2022ರ ಆಗಸ್ಟ್‌ನಲ್ಲೇ ಲಾಡ್ಜ್‌ ಒಂದರಲ್ಲಿ ಕೊಲೆ ಮಾಡಿ ಹೆಣವನ್ನು ಬೇರೆಡೆ ಎಸೆದಿದ್ದಾಗಿ ಹೇಳಿದ್ದಾನೆ. ಆ ವಿಚಾರ ಯಾರಿಗೂ ಗೊತ್ತಿರಲಿಲ್ಲವಾದ್ದರಿಂದ ಭಾರತಿಗೆ ಪ್ರೀತಿಯನ್ನು ಭೇಟಿ ಮಾಡಿಸಲು ತನ್ನಿಂದ ಸಾಧ್ಯವಾಗಿರಲಿಲ್ಲ ಎಂದು ತಿಳಿಸಿದ್ದಾನೆ.

ಪ್ರೀತಿಯ ಕೊಲೆಗೆ ಕಾರಣ ಕೇಳಿದಾಗ ಆತ ಪ್ರೀತಿ ಕೈಗೆ ಈ ಹಿಂದೆ 9 ಲಕ್ಷ ರೂ. ಹಣ ಕೊಟ್ಟಿದ್ದಾಗಿ ತಿಳಿಸಿದ್ದಾನೆ. ಪ್ರೀತಿ ತನ್ನ ಎರಡನೇ ಹೆಂಡತಿಯಾಗಿದ್ದು, ಬೇರೊಂದು ಕೊಲೆ ಪ್ರಕರಣದಲ್ಲಿ ಆತ 2014ರಲ್ಲಿ ಜೈಲಿಗೆ ಹೋಗಿದ್ದಾನೆ 2022ರಲ್ಲಿ ಜೈಲಿನಿಂದ ಹೊರಬಂದ ಆತ ಪ್ರೀತಿ ಬಳಿ ಹಣ ವಾಪಸು ಕೊಡಲು ಕೇಳಿದ್ದಾನೆ. ಅದಕ್ಕೆ ಆಕೆ ಒಪ್ಪದ ಕಾರಣ ಆಕೆಯ ಕೊಲೆಯನ್ನು ಮಾಡಿದ್ದಾಗಿ ಹೇಳಿಕೊಂಡಿದ್ದಾನೆ.

45 ವರ್ಷದ ಮಯುರೇಶ್‌ ಈ ಹಿಂದೆ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು, ಅಲ್ಲಿಂದ ಮರಳಿ ಬಂದ ಮೇಲೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಎರಡೆರೆಡು ಕೊಲೆ ಮಾಡಿರುವ ಮಯುರೇಶ್‌ ವಿರುದ್ಧ ಇದೀಗ ಮತ್ತೆ ಕೊಲೆ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Viral Video : ನಾಯಿಮರಿಯನ್ನು ನೆಲಕ್ಕೆ ಬಡಿದು ತುಳಿದು ಸಾಯಿಸಿದ ಕ್ರೂರಿ, ಭಯಾನಕ ವಿಡಿಯೊ ಇಲ್ಲಿದೆ

Viral Video : ನಾಯಿಯನ್ನು ಕ್ರೂರವಾಗಿ ಕೊಂದ ವ್ಯಕ್ತಿಯನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

VISTARANEWS.COM


on

Dog killing
Koo

ಗುನಾ (ಮಧ್ಯಪ್ರದೇಶ): ಕ್ರೌರ್ಯಕ್ಕೆ ಒಂದು ಮಿತಿ ಇರುತ್ತದೆ. ಶತ್ರುವಿನ ಮೇಲೆ ಅಥವಾ ಅಪಾಯಕಾರಿ ಮೃಗಗಳ ಮೇಲೆ ಮನಷ್ಯ ಕೋಪದಲ್ಲಿ ದಾಳಿ ಮಾಡಿದರೆ ಕನಿಷ್ಠ ಪಕ್ಷ ಅದಕ್ಕೊಂದು ಕಾರಣ ಇರುತ್ತದೆ. ಆದರೆ, ಯಾವುದೇ ದುರುದ್ದೇಶವಿಲ್ಲದ ಆಹಾರದ ಆಸೆಗೆ ಸನಿಹ ಬರುವ ಮುಗ್ಧ ಪ್ರಾಣಿಗಳನ್ನು ಬಡಿದು, ವಿಕೃತವಾಗಿ ಕೊಲ್ಲುವುದೆಂದರೆ ಆ ವ್ಯಕ್ತಿ ಶಿಕ್ಷೆ ಅರ್ಹ. ಜತೆಗೆ ಇಂಥ ದೃಶ್ಯಗಳು ನೋಡುಗರ ಕಣ್ಣಲ್ಲಿ ನೀರು ತರದೇ ಇರದು. ಇದೇ ಮಾದರಿಯ ಘಟನೆಯೊಂದು ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಮುಗ್ಧ ನಾಯಿ ಮರಿಯೊಂದು ತನ್ನ ಬಳಿಗೆ ಬಂದಾಗ ವ್ಯಕ್ತಿಯೊಬ್ಬ ಹಾಡಹಗಲೇ ಅದನ್ನು ಎತ್ತಿ ನೆಲಕ್ಕೆ ಅಪ್ಪಳಿಸಿ ಬಳಿಕ ತುಳಿದು ಸಾಯಿಸಿದ ಘಟನೆ ನಡೆದಿದೆ. ಈ ಘಟನೆಯು ಶನಿವಾರ ಬೆಳಿಗ್ಗೆ ಪ್ರದೇಶದ ಸಿಸಿಟಿವಿ ಕ್ಯಾಮೆರಾದಲ್ಲಿ (Viral Video) ಸೆರೆಯಾಗಿದ್ದು, ಭಯಂಕರ ವಿರೋಧ ವ್ಯಕ್ತವಾಗಿದೆ.

ಇಡೀ ಘಟನೆಯ ಆತಂಕಕಾರಿ ವೀಡಿಯೊ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಇದರಲ್ಲಿ ವ್ಯಕ್ತಿಯು ಅಂಗಡಿಯೊಂದರ ಹೊರಗೆ ಕುಳಿತಿರುವುದ ಕಂಡು ಬಂದಿದೆ. ಆತ ಕುಳಿತಲ್ಲಿಎ ನಾಯಿಮರಿಯೊಂದು ಬರುತ್ತದೆ ಮತ್ತು ಪ್ರೀತಿಯಿಂದ ಬಾಲ ಅಲ್ಲಾಡಿಸುತ್ತದೆ. ಆತ ನಾಯಿಮರಿಯನ್ನು ಎತ್ತಿಕೊಂಡು ಕ್ರೂರವಾಗಿ ಹೊಡೆಯುತ್ತಾನೆ. ನಂತರ ಅದನ್ನು ಒಂದು ಕೈಯಿಂದ ಎತ್ತಿ ನೆಲಕ್ಕೆ ಜೋರಾಗಿ ಎತ್ತಿ ಎಸೆಯುತ್ತಾನೆ. ನೋವಿನಿಂದ ಅರಚುತ್ತಾ ಬಿದ್ದಿದ್ದ ಕುನ್ನಿಯನ್ನು ಪಾದಗಳ ಕೆಳಗೆ ಕ್ರೂರವಾಗಿ ತುಳಿಯುತ್ತಾನೆ. ಅನೇಕ ಬಾರಿ ತುಳಿದು ಪುಡಿಮಾಡುತ್ತಿರುವ ದೃಶ್ಯಗಳು ಸೆರೆಯಾಗಿವೆ.

ಈ ಅನಾಹುತಕಾರಿ ದೃಶ್ಯಗಳು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಾಣಿಗಳ ಮೇಲಿನ ಇಂತಹ ಅನವರ್ಶಯಕ ಕ್ರೌರ್ಯದ ಕೃತ್ಯಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಬಹುಶಃ ಸ್ವಲ್ಪ ಆಹಾರವನ್ನು ನಿರೀಕ್ಷಿಸುತ್ತಿದ್ದ ಮುಗ್ಧ ನಾಯಿಮರಿ ಕ್ರೂರ ಕೃತ್ಯಕ್ಕೆ ಬಲಿಯಾಗಿದೆ ಎಂದು ಜನರು ಭಾವಿಸಿದ್ದರಿಂದ ಕೊಂದವನ ಮೇಲೆ ಜನರ ಕೋಪ ಹೆಚ್ಚಾಗಿದೆ.

ಇದನ್ನೂ ಓದಿ : Bhagwant Mann : ಅಪ್ಪ ಮಹಾನ್​ ಕುಡುಕ, ಲಂಪಟ; ಪಂಜಾಬ್ ಸಿಎಂ ಮಾನ್ ಮಾನ ತೆಗೆದ ಪುತ್ರಿ

ಘಟನೆಯ ಸಮಯದಲ್ಲಿ ಅಂಗಡಿಯೊಂದರೊಳಗಿದ್ದ ಇನ್ನೊಬ್ಬ ವ್ಯಕ್ತಿ, ನಾಯಿಮರಿಯ ಕಿರುಚಾಟವನ್ನು ಕೇಳುತ್ತಿದ್ದಂತೆ ಹೊರಗೆ ಧಾವಿಸುತ್ತಿರುವುದು ಕಂಡುಬಂದಿದೆ. ಈ ವೀಡಿಯೊ ವೈರಲ್ ಆಗುತ್ತಿದ್ದಂತೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಟ್ಯಾಗ್ ಮಾಡಿ ವಿಷಯವನ್ನು ಗಮನಕ್ಕೆ ತಂದಿದ್ದಾರೆ.

ವೀಡಿಯೊವನ್ನು ಗಮನಿಸಿದ ಮುಖ್ಯಮಂತ್ರಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಭಯಾನಕ ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಅನಾಗರಿಕ ಕೃತ್ಯಗಳನ್ನು ಮತ್ತು ವೈಯಕ್ತಿಕ ಪ್ರತೀಕಾರವನ್ನು ನಾವು ಖಂಡಿಸುತ್ತೇವೆ ಎಂದು ಅವರು ಬರೆದುಕೊಂಡಿದ್ದಾರೆ.

ಸ್ಥಳೀಯ ಪೊಲೀಸರು ಈ ಘಟನೆಯನ್ನು ಗಮನಿಸಿ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಕೃತ್ಯ ಎಸಗಿದವನನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

“ಗುನಾ ಜಿಲ್ಲೆಯಲ್ಲಿ ನಡೆದ ಪ್ರಾಣಿಗಳ ಮೇಲಿನ ಕ್ರೌರ್ಯದ ಘಟನೆ ಹೃದಯ ವಿದ್ರಾವಕವಾಗಿದೆ. ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳುತ್ತಿರುವಾಗ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇಂತಹ ಕ್ರೌರ್ಯದ ಕೃತ್ಯಗಳನ್ನು ಸಹಿಸಲಾಗದು, ಮತ್ತು ಈ ಅಪರಾಧಕ್ಕಾಗಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಬರೆಯಲಾಗಿದೆ.

ನೋಯ್ಡಾ ಮೂಲದ ಪ್ರಾಣಿ ದಯಾ ಸಂಘದ ಕಾರ್ಯಕರ್ತ ವಿದಿತ್ ಶರ್ಮಾ, ಬಡ ನಾಯಿಮರಿಗೆ ನ್ಯಾಯ ಕೋರಿ ದಾಳಿಯ ವೀಡಿಯೊವನ್ನು ಎಲ್ಲರ ಗಮನಕ್ಕೆ ತಂದಿದ್ದಾರೆ. ಈ ಪ್ರಕರಣದಲ್ಲಿ ತ್ವರಿತ ಕ್ರಮಕ್ಕಾಗಿ ಮಧ್ಯಪ್ರದೇಶ ಸಿಎಂ ಶಿವರಾಜ್ ಚೌಹಾಣ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

“ವ್ಯಕ್ತಿಯೊಬ್ಬ ನಾಯಿಮರಿಯನ್ನು ಕೊಂದ ಪ್ರಾಣಿ ಕ್ರೌರ್ಯ ಪ್ರಕರಣದ ಬಗ್ಗೆ ತ್ವರಿತ ಕ್ರಮ ಕೈಗೊಂಡಿದ್ದಕ್ಕಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರಿಗೆ ಕೃತಜ್ಞತೆಗಳು. ಧ್ವನಿಯಿಲ್ಲದ ನಮ್ಮ ಸಹಚರರಿಗೆ ನ್ಯಾಯ ಒದಗಿಸುವ ನಿಮ್ಮ ಬದ್ಧತೆಯು ಒಂದು ಪ್ರಬಲ ಪೂರ್ವನಿದರ್ಶನವನ್ನು ರೂಪಿಸುತ್ತದೆ” ಎಂದು ಶರ್ಮಾ ಪೋಸ್ಟ್ ಮಾಡಿದ್ದಾರೆ.

Continue Reading

ಕರ್ನಾಟಕ

ಅನಿಮಲ್‌ ಸಿನಿಮಾ ನೋಡಿ ಪರ್ಸ್‌ ಬಿಟ್ಟು ಬಂದಳು; ವಾಪಸ್‌ ತರಲು ಹೋದಾಗ ಸೆಕ್ಯುರಿಟಿ ಗಾರ್ಡ್‌ಗೆ ಒದ್ದಳು!

Assault case: ಸಿನಿಮಾ ಹಾಲ್‌ನಲ್ಲಿ ಮರೆತು ಹೋಗಿದ್ದ ವ್ಯಾಲೆಟ್ ಹಿಂಪಡೆಯುವ ವಿಚಾರಕ್ಕೆ ಮಹಿಳೆಯೊಬ್ಬರು ಕಿರಿಕ್ ಮಾಡಿದ್ದು, ಸಿಬ್ಬಂದಿಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿರುವ ಘಟನೆ ನಡೆದಿದೆ.

VISTARANEWS.COM


on

By

women assaulted in garuda mall
Koo

ಬೆಂಗಳೂರು: ಅನಿಮಲ್‌ ಸಿನಿಮಾ ವೀಕ್ಷಣೆಗೆ ಮಾಲ್‌ಗೆ ಬಂದಿದ್ದ ಮಹಿಳೆಯೊಬ್ಬರು ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ (assault case) ನಡೆಸಿದ್ದಾರೆ. ಮರೆತು ಹೋಗಿದ್ದ ವ್ಯಾಲೆಟ್ ಹಿಂಪಡೆಯುವ ವಿಚಾರಕ್ಕೆ ಶುರುವಾದ ಕಿರಿಕ್ ಠಾಣೆ ಮೆಟ್ಟಿಲೇರಿದೆ. ಗರುಡಾ ಮಾಲ್​ನ (garuda mall) ಪಿವಿಆರ್ ಐನಾಕ್ಸ್ ಚಿತ್ರಮಂದಿರದ ಬಳಿ ನಡೆದಿದೆ.

ಅನಿಮಲ್ ಸಿನಿಮಾ ವೀಕ್ಷಿಸಲು ತಡರಾತ್ರಿ 10:30ರ ಸುಮಾರಿಗೆ ಪಿವಿಆರ್​ ಐನಾಕ್ಸ್ ಚಿತ್ರಮಂದಿರಕ್ಕೆ ಮಹಿಳೆ ಬಂದಿದ್ದರು. ಸಿನಿಮಾ ಮುಗಿಸಿ ಹೊರ ಬಂದಾಗ ಸಿನಿಮಾ ಹಾಲ್‌ನಲ್ಲೇ ವ್ಯಾಲೆಟ್‌ ಮರೆತು ಹೋಗಿದ್ದರು. ಹೌಸ್ ಕೀಪಿಂಗ್ ಸಿಬ್ಬಂದಿ ಸ್ವಚ್ಚತಾ ಕಾರ್ಯದ ಸಂದರ್ಭದಲ್ಲಿ ವ್ಯಾಲೆಟ್‌ ಗಮನಿಸಿದ್ದರು. ಬಳಿಕ ವ್ಯಾಲೆಟ್‌ ಅನ್ನು ಸೆಕ್ಯೂರಿಟಿಗೆ ಒಪ್ಪಿಸಿದ್ದರು.

ಮರೆತು ಹೋಗಿದ್ದ ವ್ಯಾಲೆಟ್‌ಗಾಗಿ ಮಹಿಳೆ ಪುನಃ ತಡರಾತ್ರಿ 3 ಗಂಟೆಯ ಸುಮಾರಿಗೆ ಮಾಲ್ ಬಳಿ ಬಂದಿದ್ದಾಳೆ. ಈ ವೇಳೆ ಸೆಕ್ಯೂರಿಟಿ ಗಾರ್ಡ್ ನಿಯಮಾನುಸಾರ ಐಡೆಂಟಿಟಿ ಮಾಹಿತಿ ಕೇಳಿದ್ದಾರೆ. ಅಷ್ಟಕ್ಕೆ ಕೋಪಗೊಂಡ ಮಹಿಳೆ ಅವಾಚ್ಯವಾಗಿ ನಿಂದಿಸಿ ವ್ಯಾಲೆಟ್ ಕಿತ್ತುಕೊಂಡು, ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾಳೆ. ಕುತ್ತಿಗೆ ಪಟ್ಟಿ ಹಿಡಿದುಕೊಂಡು ಹೊಡೆದಿದ್ದು, ಕಾಲಿನಲ್ಲಿ ಒದ್ದು, ಕಪಾಳಕ್ಕೆ ಬಾರಿಸಿದ್ದಾಳೆ.

Woman assaults staff of Garuda Mall in Bengaluru

ಇದನ್ನೂ ಓದಿ: Theft Case : ನಿನ್ನ ಗಂಡನ ಸಾವು ಎಂದ ಬುಡುಬುಡಿಕೆ; ಮಹಿಳೆಯ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳವು

ಇತ್ತ ಮಾಲ್ ಸಿಬ್ಬಂದಿ ಸಮಾಧಾನಪಡಿಸಲು ಮುಂದಾದರೂ ಮಾತು ಕೇಳದೇ ಮಹಿಳೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೇ ತಪ್ಪಾಯ್ತು ಕ್ಷಮಿಸಿ ಎಂದು ಸಿಬ್ಬಂದಿ ಮಹಿಳೆಯ ಕಾಲಿಗೂ ಬಿದ್ದಿದ್ದಾಳೆ. ಆದರೂ ಬಿಡದೇ ಮಹಿಳೆ ಕುತ್ತಿಗೆ ಪಟ್ಟಿ ಹಿಡಿದುಕೊಂಡು ಹಲ್ಲೆ ಮಾಡಿದ್ದಾಳೆ. ಜತೆಗೆ ಇವರಿಬ್ಬರ ಗಲಾಟೆ ಬಿಡಿಸಲು ಬಂದಿದ್ದ ಸಿಬ್ಬಂದಿಗೂ ಅವಾಚ್ಯವಾಗಿ ನಿಂದಿಸಿದ್ದಾಳೆ.

Woman assaults staff of Garuda Mall in Bengaluru

ಇಷ್ಟಲ್ಲ ಘಟನೆ ಬಳಿಕ ಮಾಲ್‌ ಸಿಬ್ಬಂದಿ ಪೊಲೀಸರನ್ನು ಕರೆಸಿದ್ದಾರೆ. ಈ ವೇಳೆ ತನ್ನ ವ್ಯಾಲೆಟ್‌ನಲ್ಲಿ ಎಂಟು ಸಾವಿರ ರೂ. ಕಳ್ಳತನವಾಗಿದೆ ಎಂದು ದೂರು ನೀಡಿದ್ದಾಳೆ. ಆದರೆ ಸಿಸಿಟಿವಿ ಕ್ಯಾಮೆರಾದಲ್ಲಿ ಪರಿಶೀಲಿಸಿದಾಗ ವ್ಯಾಲೆಟ್‌ನಲ್ಲಿ ಹಣ ಹಾಗೂ ಯಾವುದೇ ವಸ್ತು ಕಳ್ಳತನವಾಗಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಘಟನೆ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ಹಾಗೂ ಸಿಬ್ಬಂದಿ ಇಬ್ಬರ ಮೇಲೂ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ದೇಶ

Viral News: ಗೆಳತಿಯನ್ನು ವರಿಸಲು ಲಿಂಗವನ್ನೇ ಪರಿವರ್ತಿಸಿಕೊಂಡಳು!

Viral News: ಇದು ಅಪರೂಪದ ಲವ್‌ಸ್ಟೋರಿ. ಮಹಿಳೆಯೊಬ್ಬರು ತಮ್ಮ ಗೆಳತಿಯನ್ನು ವಿವಾಹವಾಗಲು ಲಿಂಗವನ್ನೇ ಪರಿವರ್ತಿಸಿಕೊಂಡಿದ್ದಾರೆ.

VISTARANEWS.COM


on

alka
Koo

ಭೋಪಾಲ್‌: ಮಧ್ಯಪ್ರದೇಶದ ಇಂದೋರ್ (Indore) ಇತ್ತೀಚೆಗೆ ಅಪರೂಪದ ವಿವಾಹವೊಂದಕ್ಕೆ ಸಾಕ್ಷಿಯಾಯಿತು. ಇಂದೋರ್‌ನ ಅಲ್ಕಾ ಎಂಬ ಮಹಿಳೆ ಪುರಷನಾಗಿ ಲಿಂಗ ಪರಿವರ್ತನೆ ಮಾಡಿಕೊಂಡು ತನ್ನ ದೀರ್ಘಕಾಲದ ಗೆಳತಿ ಆಸ್ತಾಳನ್ನು ಕಾನೂನುಬದ್ಧವಾಗಿ ವಿವಾಹವಾಗಿದ್ದಾರೆ. ಈ ರೀತಿಯ ವಿವಾಹವು ಇಂದೋರ್‌ನಲ್ಲಿ ಮೊದಲನೆಯದು ಎನ್ನಲಾಗಿದೆ. ವಿಶೇಷ ವಿವಾಹ ಕಾಯ್ದೆಯಡಿ (Special Marriage Act) ಡಿಸೆಂಬರ್ 7ರಂದು ಮದುವೆ ನೆರವೇರಿದೆ. ಸದ್ಯ ಈ ವಿಶೇಷ ಮದುವೆ ಸುದ್ದಿ ವೈರಲ್‌ ಆಗಿದೆ (Viral News).

ಅಲ್ಕಾ ಎನ್ನುವ ಮಹಿಳೆ ತನ್ನ 47ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಲಿಂಗ ಪರಿವರ್ತನೆ ಮಾಡಿಸಿಕೊಂಡು ಅಸ್ತಿತ್ವ ಎಂಬ ಹೆಸರಿನಲ್ಲಿ ಪುರುಷನಾಗಿ ಬದಲಾಗಿದ್ದಾರೆ. ಬಳಿಕ ಅವರು ಕುಟುಂಬ ನ್ಯಾಯಾಲಯದಲ್ಲಿ ತಮ್ಮ ಗೆಳತಿ ಆಸ್ತಾ ಅವರನ್ನು ವಿವಾಹವಾದರು. ಈ ಕಾರ್ಯಕ್ರಮದಲ್ಲಿ ಎರಡೂ ಕಡೆಯ ಕುಟುಂಬ ಸದಸ್ಯರು ಭಾಗವಹಿಸಿದ್ದರು.

ಆಸ್ತಾ ಏನು ಹೇಳುತ್ತಾರೆ?

ಅಸ್ತಿತ್ವ ಅವರನ್ನು ಅವರ ಮನೆಯಲ್ಲಿ ಆಸ್ತಾ ಮೊದಲು ಭೇಟಿಯಾಗಿದ್ದರು. ಅಸ್ತಿತ್ವ ಮತ್ತು ಆಸ್ತಾ ಅವರ ಸಹೋದರಿ ಸ್ನೇಹಿತರಾಗಿದ್ದರು. ಪರಸ್ಪರ ಭೇಟಿ ಮುಂದೊಂದು ದಿನ ಇಬ್ಬರ ಮಧ್ಯೆ ಪ್ರೀತಿಯಾಗಿ ಅರಳಿತು. ಅಂತಿವಾಗಿ ಎರಡು ಕುಟುಂಬಗಳ ಒಪ್ಪಿಗೆಯೊಂದಿಗೆ ಮದುವೆ ನಡೆಸಲಾಯಿತು ಎಂದು ಆಸ್ತಾ ತಿಳಿಸಿದ್ದಾರೆ. ಡಿಸೆಂಬರ್ 11ರಂದು ‘ಸಾತ್ ಫೆರಾಸ್’ (ಸಪ್ತಪದಿ) ಸಂಪ್ರದಾಯ ನೆರವೇರಿಸುವುದಾಗಿಯೂ ಅವರು ಹೇಳಿದ್ದಾರೆ.

ಖುಷಿ ವ್ಯಕ್ತಪಡಿಸಿದ ದಂಪತಿ

ಮದುವೆಗೂ ಮುನ್ನ ದಂಪತಿ ಇಂದೋರ್ ಜಿಲ್ಲಾಧಿಕಾರಿ ರೋಶನ್ ರಾಯ್ ಅವರಿಗೆ ತಮ್ಮ ಪರಿಸ್ಥಿತಿಯನ್ನು ವಿವರಿಸಿ ಮದುವೆಗೆ ಅರ್ಜಿ ಸಲ್ಲಿಸಿದ್ದರು. ಜಿಲ್ಲಾಧಿಕಾರಿ ಅರ್ಜಿಯನ್ನು ಸಮರ್ಪಕವಾಗಿ ಪರಿಶೀಲಿಸಿ ಎರಡೂ ಕಡೆಯ ಕಟುಂಬಸ್ಥರಿಗೆ ತಿಳಿಸಿ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಡಿಸೆಂಬರ್‌ 7ರಂದು ಅಸ್ತಿತ್ವ ಮತ್ತು ಆಸ್ತಾ ಎರಡೂ ಕಡೆಯ ಇಬ್ಬರು ಸಾಕ್ಷಿಗಳು ಮತ್ತು ಜಂಟಿ ಸಾಕ್ಷಿಯ ಸಮ್ಮುಖದಲ್ಲಿ ತಮ್ಮ ವಿವಾಹ ಪ್ರಮಾಣಪತ್ರವನ್ನು ಪಡೆದುಕೊಂಡರು. ಮದುವೆಯ ನಂತರ ಅಸ್ತಿತ್ವ ಮತ್ತು ಆಸ್ತಾ ಇಬ್ಬರೂ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಮದುವೆಯಾಗುವ ನಿರ್ಧಾರಕ್ಕೆ ಬರಲು ಹಲವು ತಿಂಗಳು ಸಮಾಲೋಚನೆ ನಡೆಸಿದ್ದೆವು. ಅಂತಿಮವಾಗಿ ಕುಟುಂಬದ ಒಪ್ಪಿಗೆ ಪಡೆದು ಲಿಂಗ ಪರಿವರ್ತನೆಗೆ ಮುಂದಾಗಿದ್ದೆವು ಎಂದು ದಂಪತಿ ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಎಣ್ಣೆಗೆ ಕಾಸು ಕೊಡದ ಪತ್ನಿಯನ್ನೇ ಕೊಂದ!

ಹಿಂದೆಯೂ ನಡೆದಿತ್ತು

ಈ ಮಾದರಿಯ ಘಟನೆ ಹಿಂದೆಯೂ ದೇಶದಲ್ಲಿ ನಡೆದಿತ್ತು. ಕಳೆದ ವರ್ಷ ರಾಜಸ್ಥಾನದ ಭರತ್‌ಪುರದಲ್ಲಿ, ಮೀರಾ ಎಂಬ ಶಿಕ್ಷಕಿ ಆರವ್ ಆಗಿ ಲಿಂಗ ಪರಿವರ್ತನೆಗೆ ಒಳಗಾಗಿ ಕಲ್ಪನಾ ಅವರನ್ನು ವಿವಾಹವಾಗಿದ್ದರು. ಈ ಜೋಡಿ ಮದುವೆಯ ವೇಳೆ ಎಲ್ಲ ಸಾಂಪ್ರದಾಯಿಕ ವಿವಾಹ ಆಚರಣೆಗಳನ್ನು ನಡೆಸಿತ್ತು. ಹಲವು ತಿಂಗಳ ಶ್ರಮದ ಬಳಿಕ ಮೀರಾ ಅಂತಿಮವಾಗಿ 2022ರ ನವೆಂಬರ್‌ನಲ್ಲಿ ಆರವ್ ಆಗಿ ಬದಲಾಗಿದ್ದರು.

ಈ ಅಸಾಂಪ್ರದಾಯಿಕ ವಿವಾಹಗಳು ಭಾರತದಲ್ಲಿ ತೃತೀಯ ಲಿಂಗಿಗಳ ವಿವಾಹದ ಹಕ್ಕುಗಳನ್ನು ಸಮಾಜ ನಿಧಾನವಾಗಿ ಒಪ್ಪಿಕೊಳ್ಳುತ್ತಿದೆ ಎನ್ನುವುದಕ್ಕೆ ಉದಾಹರಣೆ. ಇದು ಎಲ್ಲರಿಗೂ ಸಮಾನ ಹಕ್ಕುಗಳು ಎನ್ನುವ ಗುರಿಯನ್ನು ಸಾಧಿಸಲಿರುವ ದಿಟ್ಟ ಹೆಜ್ಜೆ ಎಂದೇ ಪರಿಗಣಿಸಲಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.

Continue Reading

ದೇಶ

ವಿವಾಹದ ‘ಅರಿಶಿನ’ ಕಾರ್ಯಕ್ರಮದ ವೇಳೆ ಗೋಡೆ ಕುಸಿದು 8 ಸಾವು

haldi function: ಮದುವೆಯ ಅರಿಶಿನ ಕಾರ್ಯಕ್ರಮ ಅವರು ಅಕ್ಷರಶಃ ಸೂತಕದ ಕಾರ್ಯಕ್ರಮವಾಗಿ ಮಾರ್ಪಟ್ಟಿತು. ಗೋಡೆ ಕುಸಿತು 8 ಜನರು ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

VISTARANEWS.COM


on

8 killed in wall collapse during wedding haldi function
Koo

ಮವು, ಉತ್ತರ ಪ್ರದೇಶ: ಶುಕ್ರವಾರ ಇಲ್ಲಿನ ಘೋಸಿ ಪ್ರದೇಶದಲ್ಲಿ ನಡೆದ ವಿವಾಹ ಪೂರ್ವ ಕಾರ್ಯಕ್ರಮದ (Pre-Wedding Function) ವೇಳೆ ಹಠಾತ್ ಗೋಡೆ ಕುಸಿದು (Wall Collapses) ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿ ಒಟ್ಟು 8 ಜನರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಮಾತನಾಡಿ, ವಿವಾಹ ಪೂರ್ವ ‘ಹಲ್ದಿ’ ಕಾರ್ಯಕ್ರಮದ (haldi function) ವೇಳೆ ಇದ್ದಕ್ಕಿದ್ದಂತೆ 20 ಜನರ ಮೇಲೆ ಗೋಡೆ ಕುಸಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಡೆ ಕುಸಿತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ(viral Video).

ಪೊಲೀಸರು ಹೇಳುವ ಪ್ರಕಾರ, ಹಠಾತ್ ಕುಸಿದಿರುವ ಗೋಡೆಯನ್ನು ಇತ್ತೀಚೆಗಷ್ಟೇ ನಿರ್ಮಾಣ ಮಾಡಲಾಗಿತ್ತು. ಈ ಗೋಡೆ ನಿರ್ಮಾಣ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅರುಣ್ ಕುಮಾರ್ ಅವರು ತಿಳಿಸಿದ್ದಾರೆ. ಶುಕ್ರವಾರ ವಿವಾಹ ಪೂರ್ವ ಕಾರ್ಯಕ್ರಮದ ವೇಳೆ ಪಕ್ಕದ ಗೋಡೆ ಕುಸಿದು ಬಿದ್ದಿದೆ ಎಂದು ಜಿಲ್ಲಾಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ. ಘಟನೆಯಲ್ಲಿ ಆರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, 20 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಎಲ್ಲಾ ಗಾಯಾಳುಗಳಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ ಮತ್ತು ಎಲ್ಲಾ ಗಾಯಾಳುಗಳಿಗೆ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Road Accident: ಮೂವರ ಪ್ರಾಣ ತೆಗೆದ ಅಪಘಾತಗಳು!

Continue Reading
Advertisement
Rambhapuri seer and MB Patil
ಕರ್ನಾಟಕ10 mins ago

ಎಂ.ಬಿ. ಪಾಟೀಲ್‌ಗೆ ನೀರಾವರಿ ಖಾತೆ ಸಿಗಬೇಕಿತ್ತು; ಡಿಕೆಶಿಗೆ ಕೊಟ್ಟಿದ್ದಕ್ಕೆ ರಂಭಾಪುರಿ ಶ್ರೀ ಬೇಸರ!

India U19 vs Pakistan U19
ಕ್ರಿಕೆಟ್11 mins ago

U19 Asia Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ 8 ವಿಕೆಟ್​ ಸೋಲು

Reliance Retail launches beauty retail store 'Tira' in Bengaluru
ದೇಶ26 mins ago

Reliance Retail: ಯಲಹಂಕದಲ್ಲಿ ರಿಲಯನ್ಸ್ ರೀಟೇಲ್‌ನ ‘ಟಿರಾ’ ಮಳಿಗೆ ಆರಂಭ

South Africa vs India 1
ಕ್ರಿಕೆಟ್45 mins ago

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ವಿಳಂಬ

Shri Ram Janmabhoomi Mandir carvings are wonderful
ದೇಶ49 mins ago

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!

Bus-jeep accident
ಉಡುಪಿ56 mins ago

Road Accident: ಕಾರ್ಕಳ ಬಳಿ ಖಾಸಗಿ ಬಸ್‌-ಜೀಪ್ ನಡುವೆ ಭೀಕರ ಅಪಘಾತ; 12 ಮಂದಿಗೆ ಗಂಭೀರ ಗಾಯ

Killers who killed lawyer for property in kalaburagi
ಕರ್ನಾಟಕ1 hour ago

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

air india
ಉದ್ಯೋಗ1 hour ago

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

man accused of murder wins acquittal after studying law and fighting own Case
ದೇಶ1 hour ago

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Kate Cross reveals ‘soft spot for RCB’ after bagging deal
ಕ್ರಿಕೆಟ್1 hour ago

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ4 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ7 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ15 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌