Viral News: ರಸ್ತೆ ಬದಿ ಕವರ್‌ನಲ್ಲಿದ್ದ ಶಿಶುವನ್ನು ಕಾಪಾಡಿದ ಬೀದಿ ನಾಯಿ! - Vistara News

ವೈರಲ್ ನ್ಯೂಸ್

Viral News: ರಸ್ತೆ ಬದಿ ಕವರ್‌ನಲ್ಲಿದ್ದ ಶಿಶುವನ್ನು ಕಾಪಾಡಿದ ಬೀದಿ ನಾಯಿ!

ಲೆಬನಾನ್‌ನಲ್ಲಿ ನವಜಾತ ಶಿಶುವೊಂದು ರಸ್ತೆಬದಿಯಲ್ಲಿದ್ದ ಕವರ್‌ನಲ್ಲಿ ಪತ್ತೆಯಾಗಿದೆ. ಬೀದಿ ನಾಯಿಯಿಂದಾಗಿ ಆ ಶಿಶುವಿನ ರಕ್ಷಣೆಯಾಗಿದೆ. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral News) ಆಗಿದೆ.

VISTARANEWS.COM


on

stray dog saves newborn baby
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲೆಬನಾನ್‌: ಎಷ್ಟೋ ಜನರು ನವಜಾತ ಶಿಶುಗಳನ್ನು ಬೇಡವೆಂದು ಆಸ್ಪತ್ರೆಯಲ್ಲೇ ಬಿಟ್ಟು ಹೋಗುವುದು ಅಥವಾ ರಸ್ತೆ ಬದಿಯಲ್ಲಿ ಎಸೆದು ಹೋಗುವುದನ್ನು ನಾವು ನೋಡಿದ್ದೇವೆ ಅಥವಾ ಅಂತಹ ಘಟನೆ ಬಗ್ಗೆ ಕೇಳಿದ್ದೇವೆ. ಇದೇ ರೀತಿಯ ಘಟನೆ ಇತ್ತೀಚೆಗೆ ಲೆಬನಾನ್‌ ದೇಶದಲ್ಲಿಯೂ ನಡೆದಿದೆ. ಆದರೆ ಬೀದಿ ನಾಯಿಯೊಂದರಿಂದಾಗಿ ಆ ಶಿಶು ಪ್ರಾಣ (Viral News) ರಕ್ಷಣೆಯಾಗಿದೆ.

ಲೆಬನಾನ್‌ನ ಸರ್ಕಾರಿ ಆಸ್ಪತ್ರೆಯೊಂದರ ಹೊರ ಭಾಗದಲ್ಲಿ ಯಾರೋ ಪೋಷಕರು ನವಜಾತ ಶಿಶುವನ್ನು ಪ್ಲಾಸ್ಟಿಕ್‌ ಕವರ್‌ ಒಂದರಲ್ಲಿ ಹಾಕಿ ಅದನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ. ಅಲ್ಲೇ ಇದ್ದ ಬೀದಿ ನಾಯಿಯೊಂದು ಆ ಕವರ್‌ ಅನ್ನು ಬಾಯಿಯಲ್ಲಿ ಕಚ್ಚಿಕೊಂಡು ನಡೆದುಕೊಂಡು ಹೋಗಿದೆ. ಕವರ್‌ನಲ್ಲಿದ್ದ ಶಿಶು ಅಳುತ್ತಿದ್ದರಿಂದ ದಾರಿಹೋಕರು ನಾಯಿಯನ್ನು ಗಮನಿಸಿದ್ದಾರೆ. ನಾಯಿಯ ಬಾಯಿಯಿಂದ ಕವರ್‌ನ್ನು ತೆಗೆದುಕೊಂಡು ಅದರೊಳಗಿದ್ದ ಶಿಶುವನ್ನು ನೋಡಿದ್ದಾರೆ.

ಇದನ್ನೂ ಓದಿ: Viral Video: ಬಿಜೆಪಿ ‘ಭ್ರಷ್ಟಾಚಾರ’ ಪಟ್ಟಿ ಓದಲು ತಡಕಾಡಿದ ಪ್ರಿಯಾಂಕಾ ವಾದ್ರಾ; ಅಂಕಿ-ಅಂಶ ಹೇಳುವಾಗಲೂ ಎಡವಟ್ಟು

ತಕ್ಷಣವೇ ಆ ಶಿಶುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವಿಗೆ ಆಗಿದ್ದ ಸಣ್ಣ ಪುಟ್ಟ ಗಾಯಗಳಿಗೆ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವನ್ನು ಫರೀದ್‌ ಹೆಸರಿನವರು ಅರೇಬಿಕ್‌ ಭಾಷೆಯಲ್ಲಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಾಗೆಯೇ ಆ ಮಗುವಿನ ಫೋಟೋವನ್ನು ಕೂಡ ಅವರು ಹಂಚಿಕೊಂಡಿದ್ದಾರೆ. “ಆದಷ್ಟು ಬೇಗ ಈ ಮಗುವನ್ನು ದತ್ತು ತೆಗೆದುಕೊಳ್ಳುವ ಕುಟುಂಬ ಸಿಗಲಿ” ಎಂದು ಅವರು ಟ್ವೀಟ್‌ನಲ್ಲಿ ಪ್ರಾರ್ಥಿಸಿದ್ದಾರೆ.

ಫರೀದ್‌ ಅವರ ಈ ಪೋಸ್ಟ್‌ ಎಲ್ಲೆಡೆ ಹರಿದಾಡಿದ್ದು, ಭಾರೀ ವೈರಲ್‌ ಆಗಿದೆ. ಫರೀದ್‌ ಅವರು ಜುಲೈ 19ರಂದು ಈ ಪೋಸ್ಟ್‌ ಮಾಡಿದ್ದು, ಪೋಸ್ಟ್‌ ಈಗಾಗಲೇ ಸಾವಿರಾರು ಜನರಿಂದ ವೀಕ್ಷಣೆಗೊಂಡಿದೆ. ನೂರಾರು ಮಂದಿ ಪೋಸ್ಟ್‌ಗೆ ಕಾಮೆಂಟ್‌ಗಳನ್ನು ಮಾಡಿದ್ದಾರೆ. “ಎಷ್ಟು ಕ್ರೂರ ತಂದೆ ತಾಯಿಯಾಗಿರಬೇಕು. ಆದಷ್ಟು ಬೇಗ ಈ ಮಗುವಿಗೆ ಒಳ್ಳೆಯ ಕುಟುಂಬ ಸಿಗಲಿ”, “ನಾನಾದರೂ ಈ ಮಗುವನ್ನು ದತ್ತು ಪಡೆದುಕೊಳ್ಳುತ್ತಿದ್ದೆ” ಎನ್ನುವಂತಹ ಹಲವಾರು ಕಾಮೆಂಟ್‌ಗಳು ಮಗುವಿನ ಬಗ್ಗೆ ಬಂದಿವೆ. ಹಾಗೆಯೇ ಮಗುವನ್ನು ಕಾಪಾಡಿದ ಬೀದಿ ನಾಯಿಯ ಬಗ್ಗೆಯೂ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

School Principal: ಜೌನ್‌ಪುರದಲ್ಲಿರುವ ಶಾಲೆಯೊಂದರಲ್ಲಿ ಪ್ರಾಂಶುಪಾಲ ಹಾಗೂ ಮಹಿಳಾ ಟೀಚರ್‌ ತಬ್ಬಿಕೊಂಡು, ಮುದ್ದಾಡಿರುವ ಫೋಟೊ ವೈರಲ್‌ ಆಗಿದೆ. ಶಾಲೆಯ ಗೋಡೆಯ ಮೇಲೆ ಭಗತ್‌ ಸಿಂಗ್‌, ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಅಭಿನಂದನ್‌ ವರ್ಧಮಾನ್‌ ಅವರ ಫೋಟೊಗಳನ್ನು ನೇತುಹಾಕಲಾಗಿದೆ. ಆ ಗೋಡೆಯ ಕೆಳಗೆ ಇವರಿಬ್ಬರೂ ರೊಮ್ಯಾನ್ಸ್‌ ಮಾಡಿದ್ದಾರೆ.

VISTARANEWS.COM


on

School Principal
Koo

ಲಖನೌ: “ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ” ಎಂದು ಶಾಲೆಯ ಗೋಡೆ ಮೇಲೆ ಬರೆದಿರಲಾಗುತ್ತದೆ. ಜ್ಞಾನದೇಗುಲದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳುವ ಜತೆಗೆ ಶಿಕ್ಷಕರ ಜೀವನವೂ ಸುಂದರವಾಗುತ್ತದೆ. ಇಂತಹ ಜ್ಞಾನ ದೇಗುಲದಲ್ಲಿ ಶಿಕ್ಷಕರಾದವರು (Teachers) ಮಕ್ಕಳಿಗೆ ಬೋಧನೆ ಮಾಡುವ ಜತೆಗೆ ಮೌಲ್ಯಗಳನ್ನು ತುಂಬಬೇಕು. ಆದರೆ, ಇತ್ತೀಚೆಗೆ ಜ್ಞಾನ ದೇಗುಲಗಳಲ್ಲಿಯೇ ಶಿಕ್ಷಕರು ಅಪದ್ಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಪ್ರಾಂಶುಪಾಲ (School Principal) ಹಾಗೂ ಮಹಿಳಾ ಟೀಚರ್‌ ರೊಮ್ಯಾನ್ಸ್‌ ಮಾಡಿದ ಫೋಟೊ ಈಗ ವೈರಲ್‌ ಆಗಿದೆ.

ಹೌದು, ಜೌನ್‌ಪುರದಲ್ಲಿರುವ ಶಾಲೆಯೊಂದರಲ್ಲಿ ಪ್ರಾಂಶುಪಾಲ ಹಾಗೂ ಮಹಿಳಾ ಟೀಚರ್‌ ತಬ್ಬಿಕೊಂಡು, ಮುದ್ದಾಡಿರುವ ಫೋಟೊ ವೈರಲ್‌ ಆಗಿದೆ. ಶಾಲೆಯ ಗೋಡೆಯ ಮೇಲೆ ಭಗತ್‌ ಸಿಂಗ್‌, ಮಹಾರಾಣಾ ಪ್ರತಾಪ್‌, ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಅಭಿನಂದನ್‌ ವರ್ಧಮಾನ್‌ ಅವರ ಫೋಟೊಗಳನ್ನು ನೇತುಹಾಕಲಾಗಿದೆ. ಆ ಗೋಡೆಯ ಕೆಳಗೆ ಇವರಿಬ್ಬರೂ ರೊಮ್ಯಾನ್ಸ್‌ ಮಾಡಿದ್ದಾರೆ. ಖಾಸಗಿ ಶಾಲೆಯಲ್ಲಿ ಇಂತಹದ್ದೊಂದು ಅನಾಚಾರದ ಕೃತ್ಯ ನಡೆದಿದೆ. ಫೋಟೊಗಳನ್ನು ನೋಡಿದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ (ಜುಲೈ 7) ವಿಡಿಯೊ ವೈರಲ್‌ ಆಗಿದೆ. ಶಿಕ್ಷಕರ ಕುಲಕ್ಕೆ ಇವರು ಅವಮಾನ ಇದ್ದಹಾಗೆ. ಇಂತಹ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇವರನ್ನು ಅಮಾನತುಗೊಳಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಪ್ರಾಂಶುಪಾಲ ಹಾಗೂ ಮಹಿಳಾ ಟೀಚರ್‌ ತುಂಬ ದಿನಗಳಿಂದ ಸಂಬಂಧ ಹೊಂದಿದ್ದಾರೆ. ಆದರೆ, ಇವರು ಶಾಲೆಯಲ್ಲಿಯೇ ರೊಮ್ಯಾನ್ಸ್‌ ಮಾಡಿರುವುದು ಭಾರಿ ಆಕ್ರೋಶಕ್ಕೆ ಗುರಿಯಾಗಿದೆ. ಇದು ಕಾನ್ವೆಂಟ್‌ ಶಾಲೆ ಎಂದು ತಿಳಿದುಬಂದಿದೆ.

ಕೋಲಾರ ಜಿಲ್ಲೆಯ ಕೆಜಿಎಫ್‌ನ ರಾಮಸಾಗರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಜತೆ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿಕೊಂಡು, ಅದನ್ನು ಹಂಚಿ ಬ್ಲ್ಯಾಕ್‌ಮೇಲ್‌ ಎಸಗಿದ ಆರೋಪ ಎದುರಿಸುತ್ತಿರುವ ಬಿಲ್‌ ಕಲೆಕ್ಟರ್‌ ಅರ್ಜುನ್‌ ಹರಿಕೃಷ್ಣ ಎಂಬಾತನನ್ನು ಕೆಲ ದಿನಗಳ ಹಿಂದೆ ಬೇತಮಂಗಲ ಪೊಲೀಸರು ಬಂಧಿಸಿದ್ದರು.

ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ವಿರುದ್ಧ ಲೈಂಗಿಕ ಕಿರುಕುಳ (Physical Abuse), ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಗೆ ಮುಜುಗರ, ಖಾಸಗಿ ಕ್ಷಣಗಳ ಫೋಟೋ ಹಂಚಿಕೆ ಹಾಗೂ ಬೆದರಿಕೆ (threat) ಒಡ್ಡಿದ ಕುರಿತು ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಗ್ರಾಮ ಪಂಚಾಯಿತಿಯ ಕಚೇರಿಯ ಮೊದಲ ಮಹಡಿಯ ಕೊಠಡಿಯಲ್ಲಿ ಸಿಸಿಟಿವಿ ಸಂಪರ್ಕ ಕಡಿತಗೊಳಿಸಿದ ಆರೋಪಿಯು ತಮ್ಮ ಖಾಸಗಿ ಕ್ಷಣಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ. ಸಂತ್ರಸ್ತೆ ನೀಡಿದ ದೂರಿನ ಮೇಲೆ ಅರ್ಜುನ್ ವಿಚಾರಣೆ ನಡೆಸಿದ ಬೇತಮಂಗಲ ಪೊಲೀಸರು ನಂತರ ಆತನನ್ನು ಬಂಧಿದ್ದರು.

ಇದನ್ನೂ ಓದಿ: ಪಿಎಂ ಆವಾಸ್‌ ಯೋಜನೆಯ 40 ಸಾವಿರ ರೂ. ಪಡೆದು 11 ಸ್ತ್ರೀಯರು ಗೆಳೆಯರೊಂದಿಗೆ ಪರಾರಿ; ಕಂಗಾಲಾದ ಪತಿಯರು!

Continue Reading

ವೈರಲ್ ನ್ಯೂಸ್

Viral News: ಸಮುದ್ರದಲ್ಲಿ ಮೂತ್ರ ವಿಸರ್ಜನೆ ಮಾಡಿದರೆ 67 ಸಾವಿರ ರೂ. ದಂಡ; ಕಂಡು ಹಿಡಿಯೋದು ಹೇಗೆ?

Viral News: ಮಾರ್ಬೆಲ್ಲಾ ನಗರದಲ್ಲಿ ಜಾರಿಗೆ ತರಲು ಚಿಂತನೆ ನಡೆದಿರುವ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಪರ-ವಿರೋಧ ಚರ್ಚೆಯಾಗುತ್ತಿದೆ. ಟ್ರೋಲ್‌ಗಳನ್ನು ಮಾಡಲಾಗುತ್ತಿದೆ. ಅದರಲ್ಲೂ, ಕೆಲ ಮಾಧ್ಯಮಗಳು ಬೀಚ್‌ಗಳಿಗೆ ತೆರಳಿ ಜನರ ಅಭಿಪ್ರಾಯಗಳು ಕೇಳಿವೆ. ಮೀಮ್‌ಗಳು, ಟ್ರೋಲ್‌ಗಳು ಕೂಡ ಹರಿದಾಡುತ್ತಿವೆ.

VISTARANEWS.COM


on

Viral News
Koo

ಮ್ಯಾಡ್ರಿಡ್: ಜಗತ್ತನಾದ್ಯಂತ ಹತ್ತಾರು ದೇಶಗಳಲ್ಲಿ ಹಲವು ರೀತಿಯ, ಕೆಲವೊಮ್ಮೆ ವಿಚಿತ್ರ ನಿಯಮ, ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಅದರಲ್ಲೂ, ಸಾರ್ವಜನಿಕ ಸ್ಥಳಗಳಲ್ಲಿ ಜನರ ವರ್ತನೆ ಕುರಿತು ಬಹುತೇಕ ದೇಶಗಳು ಹೆಚ್ಚಿನ ನಿಗಾ ವಹಿಸುತ್ತವೆ. ಕಠಿಣ ನಿಯಮಗಳ ಮೂಲಕ ಶಿಸ್ತು ಕಾಪಾಡುತ್ತವೆ. ಇದರ ಮಧ್ಯೆಯೇ, ಸ್ಪೇನ್‌ (Spain) ದೇಶದ ನಗರವೊಂದರಲ್ಲಿ ವಿಚಿತ್ರ ನಿಯಮವೊಂದನ್ನು ಜಾರಿಗೆ ತರಲಾಗಿದೆ. ಸಮುದ್ರದಲ್ಲಿ ಈಜಾಡುವವರು, ಮೋಜು-ಮಸ್ತಿ ಮಾಡುವವರು ನೀರಿನಲ್ಲೇ ಮೂತ್ರ ವಿಸರ್ಜನೆ ಮಾಡಿದರೆ 67 ಸಾವಿರ ರೂ.ನಿಂದ 1 ಲಕ್ಷ ರೂ. ದಂಡ ವಿಧಿಸುವುದಾಗಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸುದ್ದಿ ಈಗ ಭಾರಿ (Viral News) ಚರ್ಚೆಗೆ ಗ್ರಾಸವಾಗಿದೆ.

ಹೌದು, ಸ್ಪೇನ್‌ನ ಮಾರ್ಬೆಲ್ಲಾ ಎಂಬ ನಗರದಲ್ಲಿರುವ ಸಮುದ್ರಗಳಲ್ಲಿ ನೀರಿನ ಸ್ವಚ್ಛತೆ, ಶಿಸ್ತು ಕಾಪಾಡುವ ದಿಸೆಯಲ್ಲಿ ಹೊಸ ನಿಯಮಗಳನ್ನು ರೂಪಿಸಲಾಗುತ್ತದೆ. ಸಾರ್ವಜನಿಕರ ಆರೋಗ್ಯ, ನೀರಿನ ಗುಣಮಟ್ಟ, ಸ್ವಚ್ಛತೆ ದೃಷ್ಟಿಯಿಂದ ನಿಯಮಗಳನ್ನು ರೂಪಿಸುತ್ತಿದೆ. ಅದರಲ್ಲೂ, ಮೊದಲ ಬಾರಿಗೆ ಮೂತ್ರ ವಿಸರ್ಜನೆ ಮಾಡಿ ಸಿಕ್ಕಿಬಿದ್ದರೆ 67 ಸಾವಿರ ರೂ. ದಂಡ ಪಾವತಿಸಬೇಕಾಗುತ್ತದೆ. ದಂಡ ಪಾವತಿಸಿದ ಒಂದು ವರ್ಷದಲ್ಲಿ ಮತ್ತೆ ಸಿಕ್ಕಿಬಿದ್ದರೆ ಒಂದು ಲಕ್ಷ ರೂಪಾಯಿವರೆಗೆ ದಂಡ ವಿಧಿಸಲು ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ

ಮಾರ್ಬೆಲ್ಲಾ ನಗರದಲ್ಲಿ ಜಾರಿಗೆ ತರಲು ಚಿಂತನೆ ನಡೆದಿರುವ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಪರ-ವಿರೋಧ ಚರ್ಚೆಯಾಗುತ್ತಿದೆ. ಟ್ರೋಲ್‌ಗಳನ್ನು ಮಾಡಲಾಗುತ್ತಿದೆ. ಅದರಲ್ಲೂ, ಕೆಲ ಮಾಧ್ಯಮಗಳು ಬೀಚ್‌ಗಳಿಗೆ ತೆರಳಿ ಜನರ ಅಭಿಪ್ರಾಯಗಳು ಕೇಳಿವೆ. “ನಾವು ಸಮುದ್ರದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೇವೆ ಎಂಬುದನ್ನು ಹೇಗೆ ಪತ್ತೆ ಹಚ್ಚುತ್ತಾರೆ? ಮೀನುಗಳನ್ನು ಕೇಳಿ, ಅವರು ನಮಗೆ ದಂಡ ವಿಧಿಸುತ್ತಾರೆಯೇ” ಎಂಬುದಾಗಿ ಪ್ರವಾಸಿಗರೊಬ್ಬರು ಖಾರವಾಗಿ ಪ್ರಶ್ನಿಸಿದ್ದಾರೆ.

ಒಂದಷ್ಟು ಜನರು ಈ ಚಿಂತನೆಯೇ ನಾನ್‌ಸೆನ್ಸ್‌ ಎಂದಿದ್ದಾರೆ. “ಸಮುದ್ರದ ನೀರನ್ನು ಸ್ವಚ್ಛವಾಗಿಡಬೇಕು, ಯಾರೂ ಮೂತ್ರ ವಿಸರ್ಜನೆ ಮಾಡಬಾರದು ಎಂಬುದು ಸರಿ. ಆದರೆ, ಅದನ್ನು ತಿಳಿಯುವ ವಿಧಾನ ಏನಿದೆ? ಅದನ್ನು ಹೇಗೆ ಪತ್ತೆಹಚ್ಚುತ್ತಾರೆ? ಸಾರ್ವಜನಿಕರ ಹಣವನ್ನು ಹೀಗೆ ಖರ್ಚು ಮಾಡುವ, ನಾನ್‌ಸೆನ್ಸ್‌ ಯೋಜನೆಗಳನ್ನು ರೂಪಿಸುವ ಬದಲು, ಸಮುದ್ರದಲ್ಲಿ ಮೂತ್ರ ವಿಸರ್ಜನೆ ಮಾಡದಿರುವ, ನೀರಿನ ಸ್ವಚ್ಛತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ್ದರೆ ಒಳ್ಳೆಯದಿತ್ತು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Team India Fan: ಟಿ20 ವಿಶ್ವಕಪ್​ ವಿಜೇತ ಭಾರತ ತಂಡದ ಆಟಗಾರರ ಹೆಸರನ್ನು ಬೆನ್ನ ಮೇಲೆ ಟ್ಯಾಟು ಹಾಕಿಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

Continue Reading

ವೈರಲ್ ನ್ಯೂಸ್

Viral Video: ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

ಆಸ್ತಿಯನ್ನು ವಶಪಡಿಕೊಳ್ಳಲು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ವಯಸ್ಸಿನ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸಿರುವ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿ ಜನಾಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

By

Viral Video
Koo

ನವದೆಹಲಿ: ಅಪ್ರಾಪ್ತ ವಯಸ್ಸಿನ ಬಾಲಕಿಗೆ (minor girl) ದುಷ್ಕರ್ಮಿಯೊಬ್ಬ ಅಮಾನುಷವಾಗಿ ಥಳಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸುವ ವ್ಯಕ್ತಿಯೊಬ್ಬ ಹುಡುಗಿ ಮೇಲೆ ಹಲ್ಲೆ ಮಾಡಿರುವುದನ್ನು ಈ ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ.

ಲಕ್ನೋದ ಬಿ-376 ವಿಶಾಲ್ ಖಂಡ್‌ನ ಗೋಮತಿ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ವಿಡಿಯೋವನ್ನು ಆದಿತ್ಯ ಕಮಲ್ ಪಾಂಡೆ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸುತ್ತಾನೆ. ಫೋನ್‌ನಲ್ಲಿ ಯಾರೊಂದಿಗಾದರೂ ಮಾತನಾಡುವಂತೆ ಮಾಡುತ್ತಾನೆ. ಈ ಅಪ್ರಾಪ್ತ ಬಾಲಕಿ ಯಾಕೆ ಹಾಗೆ ಹೇಳುತ್ತೀರಿ ಎಂದು ಪ್ರಶ್ನಿಸಿದಾಗ ಆತ ಬಾಲಕಿಗೆ ಕಪಾಳಮೋಕ್ಷ ಮಾಡಿದ್ದಾನೆ. ಬಾಲಕಿಯ ಫೋನ್‌ಗಳನ್ನು ಒಡೆಯಲಾಗಿದೆ, ಬಟ್ಟೆ ಹರಿದು ಹಾಕಲಾಗಿದೆ. ಆಕೆಗೆ ಸಾಕಷ್ಟು ಹಿಂಸೆ ನೀಡಲಾಗಿದೆ. ವ್ಯಕ್ತಿಯು ರಿವಾಲ್ವರ್ ಕೂಡ ಹೊಂದಿದ್ದ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: MS Dhoni Birthday: ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಪತ್ನಿ; ವಿಡಿಯೊ ವೈರಲ್​

ಆರೋಪಿಯನ್ನು ಬಂಧಿಸಿರುವ ಕುರಿತು ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋದಲ್ಲಿರುವ ಬಾಲಕಿಯನ್ನು ದೀಪಶಿಖಾ ತಿವಾರಿ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿ ಅವರ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದಾರೆ ಎನ್ನಲಾಗಿದೆ.

ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ

ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎಂದು ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳ ಶಾಲೆಗಳಲ್ಲಿ ಜಾರಿಗೆ ತಂದಿರುವ ಮಧ್ಯಾಹ್ನ ಬಿಸಿಯೂಟದ ಯೋಜನೆಗಳಲ್ಲೂ ಅಧಿಕಾರಿಗಳು ಕಳ್ಳಾಟ ಆಡುತ್ತಿದ್ದಾರೆ. ಕೆಲವೆಡೆ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬಿಸಿಯೂಟ ನೀಡುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ ಛತ್ತೀಸ್‌ಗಢದ ಶಾಲೆಯೊಂದರಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ಅನ್ವಯ ಬರೀ ಅನ್ನ ಹಾಗೂ ಅರಿಶಿಣ ಮಿಶ್ರಣ ಮಾಡಿ ಅದನ್ನೇ ನೀಡಲಾಗಿದೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯ ಬಿಜಾಕುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಇಷ್ಟೊಂದು ಕಳಪೆ ಆಹಾರವನ್ನು ನೀಡಲಾಗುತ್ತಿದೆ. ಮಕ್ಕಳು ಅರಿಶಿಣ ಮಿಕ್ಸ್‌ ಆಗಿರುವ ಅನ್ನವನ್ನು ಸೇವಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 43 ವಿದ್ಯಾರ್ಥಿಗಳು ಓದುತ್ತಿದ್ದು, ಬಹುತೇಕರು ಬಡವರ ಮಕ್ಕಳಾಗಿದ್ದಾರೆ. ಆದರೆ, ಇವರಿಗೆ ಕಳೆದ ಒಂದು ವಾರದಿಂದ ಬಿಸಿಯೂಟದಲ್ಲಿ ತರಕಾರಿ ನೀಡದೆ, ಬರೀ ಅರಿಶಿಣ ಮಿಶ್ರಣ ಆಗಿರುವ ಅನ್ನ ನೀಡಲಾಗುತ್ತಿದೆ. ಇದನ್ನು ಶಾಲೆಯ ಅಧಿಕಾರಿಗಳೇ ದೃಢಪಡಿಸಿದ್ದಾರೆ.

ಒಂದು ವಾರದಿಂದ ತರಕಾರಿ ಪೂರೈಸುವವರು ಶಾಲೆಗೆ ತರಕಾರಿ ಪೂರೈಸುತ್ತಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ತರಕಾರಿ ವ್ಯವಸ್ಥೆ ಆಗಿಲ್ಲ. ಹಾಗಾಗಿ, ಮಕ್ಕಳಿಗೆ ಅನ್ನ-ಸಾರು ಇಲ್ಲವೇ ಅರಿಶಿಣ ಮಿಶ್ರಿತ ಅನ್ನ ನೀಡುತ್ತಿದ್ದೇವೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ.

ಇವರ ಆರೋಪಗಳಿಗೆ ತರಕಾರಿ ಪೂರೈಸುವವರು ಪ್ರತಿಕ್ರಿಯಿಸಿದ್ದು, ಶಾಲೆಗೆ ತರಕಾರಿ ಪೂರೈಸಿದ್ದಕ್ಕೆ ಹಲವು ತಿಂಗಳಿಂದ ಹಣ ನೀಡಿಲ್ಲ. ಇದರಿಂದಾಗಿ ನಾವು ತರಕಾರಿ ಪೂರೈಸುತ್ತಿಲ್ಲ ಎಂದು ಹೇಳಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ದುಬೈ ಮಾಲ್‌ನಲ್ಲಿ ಬೊಂಬೆಗಳೊಂದಿಗೆ ಬೊಂಬೆಯಾದ ಮಾಡೆಲ್‌! ಗ್ರಾಹಕರು ಕಕ್ಕಾಬಿಕ್ಕಿ

Viral Video: ದುಬೈ ಫೆಸ್ಟಿವಲ್ ಸಿಟಿ ಮಾಲ್‌ನಲ್ಲಿರುವ ಮಾಂಟೊ ಬ್ರೈಡ್ ಸ್ಟೋರ್‌ನಲ್ಲಿ ರೂಪದರ್ಶಿ ಬೊಂಬೆಗಳ ನಡುವೆ ನಿಂತು ಫೋಟೋ ತೆಗೆಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಮಂದಿಯ ಗಮನ ಸೆಳೆಯಿತು. ಇದು ಸಾಕಷ್ಟು ವೈರಲ್ ಆಗಿದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದಿದೆ.

VISTARANEWS.COM


on

By

Viral Video
Koo

ದುಬೈ: ಅಸಾಂಪ್ರದಾಯಿಕ ಮಾರ್ಕೆಟಿಂಗ್ ತಂತ್ರವನ್ನು ಮಾಡಿರುವ ದುಬೈ ಮಾಲ್ (dubai mall) ಕುರಿತು ವೈರಲ್ ಆದ ವಿಡಿಯೋ (Viral Video) ಸಾಮಾಜಿಕ ಜಾಲತಾಣ (social media) ಬಳಕೆದಾರರಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ದುಬೈ ಮಾಲ್‌ನಲ್ಲಿ ಬಟ್ಟೆ ಮಳಿಗೆಯಲ್ಲಿ ರೂಪದರ್ಶಿಯೊಬ್ಬರು (model) ಮನುಷ್ಯಾಕೃತಿ ಬೊಂಬೆಗಳ ನಡುವೆ ನಿಂತು ವಿವಿಧ ಭಂಗಿಯನ್ನು ಪ್ರದರ್ಶಿಸಿದ್ದು ಇದಕ್ಕೆ ಕಾರಣ.

ದುಬೈ ಫೆಸ್ಟಿವಲ್ ಸಿಟಿ ಮಾಲ್‌ನಲ್ಲಿರುವ ಮಾಂಟೊ ಬ್ರೈಡ್ ಸ್ಟೋರ್‌ನಲ್ಲಿ ರೂಪದರ್ಶಿ ಬೊಂಬೆಗಳ ನಡುವೆ ನಿಂತು ಫೋಟೋ ತೆಗೆಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಮಂದಿಯ ಗಮನ ಸೆಳೆಯಿತು. ಇದು ಸಾಕಷ್ಟು ವೈರಲ್ ಆಗಿದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದಿದೆ.

ಮಾಡೆಲ್ ಏಂಜಲೀನಾ ಅವರು ಇನ್ ಸ್ಟಾ ಗ್ರಾಮ್ ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಸಾಮಾನ್ಯವಾಗಿ ಮನುಷ್ಯಾಕೃತಿ ಬೊಂಬೆಗಳಿಗಾಗಿ ಕಾಯ್ದಿರಿಸಿದ ಜಾಗದಲ್ಲಿ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಬ್ರ್ಯಾಂಡ್‌ನ ಬಾಡಿಕಾನ್ ಶಾರ್ಟ್ ಡ್ರೆಸ್ ಮತ್ತು ಸ್ಟಿಲೆಟ್ಟೊ ಹೀಲ್ಸ್‌ನೊಂದಿಗೆ ಅವರು ತಮ್ಮ ಕೂದಲನ್ನು ಪೋನಿಟೇಲ್‌ನಲ್ಲಿ ಕಟ್ಟಿಕೊಂಡಿದ್ದರು. ಏಂಜಲೀನಾ ಅವರು ವಿವಿಧ ರೀತಿಯ ಭಂಗಿಗಳನ್ನು ಪ್ರದರ್ಶಿಸುತ್ತಿದ್ದರು. ಇದು ದಾರಿಹೋಕರ ಗಮನವನ್ನು ಸೆಳೆಯಿತು.

“ಪೋವ್: ದುಬೈನಲ್ಲಿ ಮಾರ್ಕೆಟಿಂಗ್” ಎನ್ನುವ ಶೀರ್ಷಿಕೆಯಡಿ ಸಾಮಾಜಿಕ ಜಾಲತಾಣದಲ್ಲಿ ಇದು ವೈರಲ್ ಆಯಿತು. ದುಬೈ ಮಾಲ್‌ನಲ್ಲಿ ಬಟ್ಟೆ ಬ್ರ್ಯಾಂಡ್ ಅವರ ಅಸಾಂಪ್ರದಾಯಿಕ ಮಾರ್ಕೆಟಿಂಗ್ ತಂತ್ರವು ಪಟ್ಟಣದಲ್ಲಿ ಚರ್ಚೆಗೆ ಕಾರಣವಾಗಿದ್ದು ಮಾತ್ರವಲ್ಲ ಸಾಮಾಜಿಕ ಜಾಲತಾಣದಲ್ಲೂ ಚರ್ಚೆಯನ್ನು ಹುಟ್ಟು ಹಾಕಿತು. ತ್ವರಿತವಾಗಿ ವೈರಲ್ ಆದ ಈ ವಿಡಿಯೋ ಬಳಕೆದಾರರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದಿದೆ.

ಒಬ್ಬ ಬಳಕೆದಾರನು ಆ ಅಂಗಡಿಯಿಂದ ಏನನ್ನೂ ಖರೀದಿಸಲು ಬಯಸುವುದಿಲ್ಲ ಎಂದು ನೇರವಾಗಿ ಹೇಳಿದ್ದರೆ ಇನ್ನೊಬ್ಬರು ಗುಲಾಮಗಿರಿಯು ಅತ್ಯುತ್ತಮವಾಗಿದೆ! ಬಹಳ ಗಂಟೆಗಳ ಕಾಲ ನೆರಳಿನಲ್ಲೇ ನಿಂತಿರುವುದು ಹುಚ್ಚುತನ ಎಂದಿದ್ದಾರೆ.


ಮತ್ತೊಬ್ಬರು, ನಾವು ಮಾನವರು ಭವಿಷ್ಯದಲ್ಲಿ ಹಣ ಪಡೆಯಲು ಇಂತಹ ಕೆಲಸಗಳನ್ನು ಮಾಡಬೇಕಾಗಬಹುದು ಎಂದು ಹೇಳಿದ್ದಾರೆ. ಇನ್ನೊಬ್ಬರು ರೋಬೋಟ್‌ಗಳು ಮನುಷ್ಯರ ಉದ್ಯೋಗಗಳನ್ನು ಕಸಿದುಕೊಳ್ಳುತ್ತಿವೆ ಮತ್ತು ಈಗ ಮನುಷ್ಯಾಕೃತಿಗಳ ಸ್ಥಾನವನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಿಎಂ ಆವಾಸ್‌ ಯೋಜನೆಯ 40 ಸಾವಿರ ರೂ. ಪಡೆದು 11 ಸ್ತ್ರೀಯರು ಗೆಳೆಯರೊಂದಿಗೆ ಪರಾರಿ; ಕಂಗಾಲಾದ ಪತಿಯರು!

ಟೀಕೆಗಳ ಹೊರತಾಗಿಯೂ, ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಮಾದರಿಯ ಪ್ರಯತ್ನಗಳನ್ನು ಸಮರ್ಥಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿ ಉದ್ಯೋಗ ಒಂದು ಕೆಲಸ! ಅವಳು ಮಾಡೆಲ್ ಆಗಿದ್ದಾಳೆ. ಕೆಂಡಾಲ್ ಜೆನ್ನರ್ ಮಾಡುವಂತೆ ಅವಳು ಜನರಿಗೆ ಬಟ್ಟೆಗಳನ್ನು ಮಾಡೆಲಿಂಗ್ ಮಾಡುತ್ತಿದ್ದಾಳೆ. ಸಮಸ್ಯೆ ಏನು? ಅಂಗಡಿಯು ಬಹುಶಃ ಗ್ರಾಹಕರನ್ನು ಸೆಳೆಯುತ್ತಿಲ್ಲ ಆದ್ದರಿಂದ ಬಹುಶಃ ನೌಕರರು ಹೆಚ್ಚಿನ ಗ್ರಾಹಕರನ್ನು ಸೆಳೆಯಲು ಪ್ರಯತ್ನಿಸಿದೆ ಎಂದು ಹೇಳಿದ್ದಾರೆ.

Continue Reading
Advertisement
School Principal
ದೇಶ4 hours ago

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

WCPL 2024
ಪ್ರಮುಖ ಸುದ್ದಿ5 hours ago

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

KRS Inflow
ದೇಶ5 hours ago

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

Abhishek Sharma
ಕ್ರೀಡೆ5 hours ago

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

Dengue Scare
ಕರ್ನಾಟಕ5 hours ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

World Biryani Day:
ಪ್ರಮುಖ ಸುದ್ದಿ6 hours ago

World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

Accident
Latest6 hours ago

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

Puri Jagannath Rath Yatra
ಪ್ರಮುಖ ಸುದ್ದಿ6 hours ago

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

NIA Arrest
ದೇಶ7 hours ago

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

Elephant attack car in Kodagu‌ four people escape
ಕೊಡಗು7 hours ago

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ8 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ11 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ12 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ22 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌