‘ನಿನ್ನ ಬಿಟ್ಟಿರಲಾರೆನು, ಕಾಲ್​ ಮಾಡು’; 13 ವರ್ಷದ ವಿದ್ಯಾರ್ಥಿನಿಗೆ ಲವ್​ ಲೆಟರ್​ ಬರೆದ 47ರ ಶಿಕ್ಷಕ! - Vistara News

ವೈರಲ್ ನ್ಯೂಸ್

‘ನಿನ್ನ ಬಿಟ್ಟಿರಲಾರೆನು, ಕಾಲ್​ ಮಾಡು’; 13 ವರ್ಷದ ವಿದ್ಯಾರ್ಥಿನಿಗೆ ಲವ್​ ಲೆಟರ್​ ಬರೆದ 47ರ ಶಿಕ್ಷಕ!

ಶಿಕ್ಷಕ ತನ್ನ ಪ್ರೇಮಪತ್ರದಲ್ಲಿ ಬಾಲಕಿಯನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದಾನೆ. ಆತನ ಬಳಿ ಪಾಲಕರು ಪ್ರಶ್ನಿಸಿದ್ದಕ್ಕೆ, ‘ಹುಡುಗಿಯನ್ನು ನಾಪತ್ತೆ ಮಾಡಿಬಿಡುತ್ತೇನೆ’ ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

VISTARANEWS.COM


on

Teacher Writes Love Letter To Student in Uttar Pradesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿನಿಗೆ ಬರೆದಿರುವ ಪ್ರೇಮ ಪತ್ರ ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಶಿಕ್ಷಕ-ವಿದ್ಯಾರ್ಥಿನಿಯ ಪ್ರೇಮಕಥೆಗಳು ಹೊಸದಲ್ಲ. ಯುವ ವಯಸ್ಸಿನ ಕಾಲೇಜು ಶಿಕ್ಷಕರು, ತಮ್ಮ ವಿದ್ಯಾರ್ಥಿನಿಯರನ್ನು ಪ್ರೀತಿಸುವುದು, ಮದುವೆಯಾಗುವುದು ಸಾಮಾನ್ಯ. ಇಂಥ ಸಾಕಷ್ಟು ಕೇಸ್​​ಗಳನ್ನು ನಾವು ನೋಡಿದ್ದೇವೆ. ಆದರೆ ಈಗ ನಾವಿಲ್ಲಿ ಹೇಳ್ತಿರೋದು ವಿಭಿನ್ನ ಸ್ಟೋರಿ. ಇಲ್ಲಿ ಪ್ರೇಮ ಪತ್ರ ಬರೆದ ಶಿಕ್ಷಕನಿಗೆ 47 ವರ್ಷ ವಯಸ್ಸಾದರೆ, ಅವನು ಬರೆದಿದ್ದು ತನ್ನ 13 ವರ್ಷ ವಯಸ್ಸಿನ ವಿದ್ಯಾರ್ಥಿನಿಗೆ.

ಉತ್ತರ ಪ್ರದೇಶದ ಕನೌಜ್​ ಜಿಲ್ಲೆಯ ಸರ್ಕಾರಿ ಶಾಲೆ ಶಿಕ್ಷಕ 8ನೇ ತರಗತಿ ವಿದ್ಯಾರ್ಥಿನಿಗೆ ಲವ್ ಲೆಟರ್ ಬರೆದಿದ್ದಾನೆ. ಆ ಪತ್ರ ಹಿಡಿದು ಕೊಂಡು ಅಪ್ಪ-ಅಮ್ಮನ ಬಳಿ ಹೋದ ಹುಡುಗಿ, ಅದರಲ್ಲೇನಿದೆ ಎಂದು ಓದಿ ಹೇಳಿದ್ದಾಳೆ. ಆಕೆಯ ಪಾಲಕರೂ ಪತ್ರವನ್ನು ಚೆಕ್ ಮಾಡಿದ್ದಾರೆ. ಅಷ್ಟೇ ಅಲ್ಲ, ಸೀದಾ ಪೊಲೀಸರ ಬಳಿ ಹೋಗಿ ದೂರು ಕೊಟ್ಟು, ಪತ್ರವನ್ನೂ ಕೂಡ ಅವರಿಗೆ ನೀಡಿದ್ದಾರೆ. ಶಿಕ್ಷಕನ ವಿರುದ್ಧ ಪೊಲೀಸರು ದೌರ್ಜನ್ಯದ ಕೇಸ್​ ದಾಖಲಿಸಿದ್ದಾರೆ.

ಶಿಕ್ಷಕನ ಹೆಸರು ಹರಿಓಂ ಸಿಂಗ್​ ಎಂದಾಗಿದ್ದು, ತಾನು ವಿದ್ಯಾರ್ಥಿನಿಯನ್ನು ಮದುವೆಯಾಗುವ ಬಯಕೆಯನ್ನು ಪತ್ರದಲ್ಲಿ ಪ್ರಕಟಪಡಿಸಿದ್ದಾನೆ. ಪತ್ರದ ಪ್ರಾರಂಭದಲ್ಲಿ ಆ 13 ವರ್ಷದ ಬಾಲಕಿಯ ಹೆಸರನ್ನು ಉಲ್ಲೇಖಿಸಿದ ಶಿಕ್ಷಕ ‘ಈಗ ವಿಪರೀತ ಚಳಿಯ ನಿಮಿತ್ತ ಶಾಲೆಗೆ ರಜೆ ಕೊಟ್ಟಿದ್ದರಿಂದ ನಾನು ನಿನ್ನನ್ನು ತುಂಬ ಮಿಸ್​ ಮಾಡಿಕೊಳ್ತಿದ್ದೇನೆ. ನಿನ್ನನ್ನು ಬಿಟ್ಟಿರಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನಿನಗೆ ಯಾವಾಗೆಲ್ಲ ಸಾಧ್ಯವಾಗುತ್ತೋ, ಆಗೆಲ್ಲ ನನಗೆ ಕರೆ ಮಾಡು, ಮಾತನಾಡೋಣ’ ಎಂದೂ ಹೇಳಿದ್ದಾನೆ. ‘ರಜೆಯಿದ್ದರೂ ಒಮ್ಮೆ ಬಂದು ನನ್ನನ್ನು ಭೇಟಿಯಾಗು. ನಿನಗೆ ನಿಜಕ್ಕೂ ನನ್ನ ಮೇಲೆ ಪ್ರೀತಿಯಿದ್ದರೆ ನೀನು ಖಂಡಿತವಾಗಿಯೂ ಬರುತ್ತೀಯಾ. ನಾನಂತೂ ಸದಾ ನಿನ್ನನ್ನು ಪ್ರೀತಿಸುತ್ತೇನೆ’ ಎಂದು ಪತ್ರದಲ್ಲಿ ಬರೆದಿರುವ ಶಿಕ್ಷಕ ‘ಈ ಪತ್ರವನ್ನು ಯಾರಿಗೂ ತೋರಿಸಬೇಡ. ಓದಿ ಮುಗಿಸಿ, ಹರಿದುಬಿಡು’ ಎಂದು ಬರೆಯುವುದನ್ನು ಮರೆತಿಲ್ಲ!

ಬಾಲಕಿಯ ಪಾಲಕರು ಸಾದರ್​ ಕೋಟ್ವಾಲಿ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ. ‘ನಾವು ಪತ್ರ ಹಿಡಿದು ಶಿಕ್ಷಕ ಇದ್ದಲ್ಲಿಗೆ ಹೋದೆವು. ಕ್ಷಮೆ ಕೇಳುವಂತೆ ಹೇಳಿದಾಗ ಆತ ಉದ್ಧಟತನದಿಂದ ವರ್ತಿಸಿದ. ನಾನು ಖಂಡಿತ ಕ್ಷಮೆ ಕೇಳುವುದಿಲ್ಲ. ನೀವು ಹೀಗೆ ಬಂದು ತೊಂದರೆ ಕೊಟ್ಟರೆ, ಆ ಹುಡುಗಿಯನ್ನೇ ನಾಪತ್ತೆ ಮಾಡುತ್ತೇನೆ’ ಎಂದು ಬೆದರಿಕೆಯನ್ನೂ ಹಾಕಿದ ಎಂದು ಬಾಲಕಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಇನ್ನು ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪ ಸಾಬೀತಾದರೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Sexual Harrassment | ಹಾಸ್ಟೆಲ್‌ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಅಮಾನತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ದಿಗಂಬರ ಜೈನ ಮುನಿಗಳಿಗೆ ಈ ಪಾಪಿ ಮಾಡಿದ್ದೇನು ಗೊತ್ತಾ? ಶಾಕಿಂಗ್‌ ವಿಡಿಯೋ ವೈರಲ್‌

Viral Video: ಯೂಟ್ಯೂಬರ್‌ವೊಬ್ಬ ರಸ್ತೆ ಬದಿಯಲ್ಲಿ ದಿಗಂಬರ ಸನ್ಯಾಸಿಗಳಿಗೆ ಕಿರುಕುಳ ಕೊಡುತ್ತಿರುವುದನ್ನು ವಿಎಡಿಯೋದಲ್ಲಿ ಕಾಣಬಹುದಾಗಿದೆ. ರಸ್ತೆ ಬದಿಯಲ್ಲಿ ಕುಳಿತಿದ್ದ ಮನಿಗಳ ಎದುರು ನಿಂತು ಯೂಟ್ಯೂಬರ್‌ ಸೂರಜ್‌ ಸಿಂಗ್‌, ನಿರ್ವಸ್ತ್ರರಾಗಿ ರಸ್ತೆಯಲ್ಲಿ ಏಕೆ ಓಡಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡುತ್ತಾನೆ. ಅದಕ್ಕೆ ಅವರು ಉತ್ತರಿಸಿದಾಗ ಅದನ್ನು ಒಪ್ಪದ ಆತ ಅವರ ಜೊತೆ ವಿತಂಡ ವಾದಕ್ಕೆ ಮುಂದಾಗುತ್ತಾನೆ. ಆಗ ಅವರು ಸುಮ್ಮನಾಗುತ್ತಾರೆ. ಹೀಗೆ ಅವರನ್ನು ಇಲ್ಲಸಲ್ಲದ ಪ್ರಶ್ನೆಗಳನ್ನು ಕೇಳಿ ಕಿರುಕುಳ ಕೊಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Viral Video
Koo

ಡೆಹ್ರಾಡೂನ್‌: ಇಬ್ಬರು ದಿಗಂಬರ ಜೈನ ಮುನಿಗಳ ಮೇಲೆ ವ್ಯಕ್ತಿಯೊಬ್ಬ ಕಿರುಕುಳ ನೀಡಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾತಾಣದಲ್ಲಿ ವೈರಲ್‌(Viral Video) ಆಗಿದ್ದು, ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಇನ್ನು ಆರೋಪಿಯನ್ನು ಯೂಟ್ಯೂಬರ್‌(Youtuber) ಸೂರಜ್‌ ಸಿಂಗ್‌ ಎಂದು ಗುರುತಿಸಲಾಗಿದೆ.

ಘಟನೆ ವಿವರ:

ತೆಹ್ರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಯೂಟ್ಯೂಬರ್‌ವೊಬ್ಬ ರಸ್ತೆ ಬದಿಯಲ್ಲಿ ದಿಗಂಬರ ಸನ್ಯಾಸಿಗಳಿಗೆ ಕಿರುಕುಳ ಕೊಡುತ್ತಿರುವುದನ್ನು ವಿಎಡಿಯೋದಲ್ಲಿ ಕಾಣಬಹುದಾಗಿದೆ. ರಸ್ತೆ ಬದಿಯಲ್ಲಿ ಕುಳಿತಿದ್ದ ಮನಿಗಳ ಎದುರು ನಿಂತು ಯೂಟ್ಯೂಬರ್‌ ಸೂರಜ್‌ ಸಿಂಗ್‌, ನಿರ್ವಸ್ತ್ರರಾಗಿ ರಸ್ತೆಯಲ್ಲಿ ಏಕೆ ಓಡಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡುತ್ತಾನೆ. ಅದಕ್ಕೆ ಅವರು ಉತ್ತರಿಸಿದಾಗ ಅದನ್ನು ಒಪ್ಪದ ಆತ ಅವರ ಜೊತೆ ವಿತಂಡ ವಾದಕ್ಕೆ ಮುಂದಾಗುತ್ತಾನೆ. ಆಗ ಅವರು ಸುಮ್ಮನಾಗುತ್ತಾರೆ. ಹೀಗೆ ಅವರನ್ನು ಇಲ್ಲಸಲ್ಲದ ಪ್ರಶ್ನೆಗಳನ್ನು ಕೇಳಿ ಕಿರುಕುಳ ಕೊಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಎಚ್ಚತ್ತುಕೊಂಡ ಪೊಲೀಸರು ಸೂರಜ್‌ ಸಿಂಗ್‌ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆಯಿಂದ ಜೈನ ಮುನಿಗಳ ಆಸ್ಥೆಗೆ, ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದೆ. ಉತ್ತರಾಖಂಡ ಎಲ್ಲಾ ಧರ್ಮವನ್ನು ಸಮಾನವಾಗಿ ಗೌರವಿಸುತ್ತದೆ. ಯಾವುದೇ ಧರ್ಮದ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವುದನ್ನು ಉತ್ತರಾಖಂಡ ಎಂದಿಗೂ ಸಹಿಸುವುದಿಲ್ಲ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಶೀಘ್ರದಲ್ಲೇ ಸೂಕ್ತ ಕ್ರಮ ಜರುಗಿಸುವುದಾಗಿ ಅವರು ಹೇಳಿದ್ದಾರೆ.

ಇನ್ನು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಅನೇಕರು ಯುವಕನ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?

Continue Reading

ವೈರಲ್ ನ್ಯೂಸ್

Viral Video: ವಿಮಾನದ ರೆಕ್ಕೆ ಮೇಲೆ ನಡೆದುಕೊಂಡು ಹೊರ ಬಂದ ಪ್ರಯಾಣಿಕರು; ವೈರಲಾಯ್ತು ವಿಡಿಯೋ

Viral Video: ಬಾಂಬ್‌ ಬೆದರಿಕೆ ಬರುತ್ತಿದ್ದಂತೆ ಎಲ್ಲಾ ಪ್ರಯಾಣಿಕರನ್ನು ತುರ್ತು ನಿರ್ಗಮನ ದ್ವಾರದ ಮೂಲಕ ಹೊರ ತರಲಾಯಿತು. ಈ ವೇಳೆ ಇಂಡಿಗೋ ಸಿಬ್ಬಂದಿ ಮಹಿಳೆಯನ್ನು ಕೈಯಲ್ಲಿ ಹಿಡಿದುಕೊಂಡು ವಿಮಾನದ ರೆಕ್ಕೆ ಮೇಲೆ ನಿಧಾನವಾಗಿ ನಡೆದುಕೊಂಡು ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮತ್ತೊಂದೆಡೆ ಎಮರ್ಜೆನ್ಸಿ ಬಾಗಿನಿಂದ ಹೊರ ಬಂದ ಪೈಲಟ್‌ ಜಾರಿಕೊಂಡು ಬರುತ್ತಿರುವುದನ್ನು ವಿಡಯೊದಲ್ಲಿ ಕಾಣಬಹುದಾಗಿ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗುತ್ತಿದೆ

VISTARANEWS.COM


on

Viral Video
Koo

ನವದೆಹಲಿ: ಬೆಳ್ಳಂ ಬೆಳಗ್ಗೆ ದಿಲ್ಲಿಯಿಂದ ವಾರಣಾಸಿಗೆ ಪ್ರಯಾಣಿಸಬೇಕಾಗಿದ್ದ ಇಂಡಿಯೋ ವಿಮಾನ(Indigo Flight)ಕ್ಕೆ ಬಾಂಬ್‌ ಬೆದರಿಕೆ ಕರೆ(Bomb Threat) ಬಂದಿದ್ದು, ಕೆಲ ಹೊತ್ತು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ವರದಿಯಾಗಿದೆ. ಬೆದರಿಕೆ ಬರುತ್ತಿದ್ದಂತೆ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಹೊರಗೆ ಕರೆದೊಯ್ಯುವ ಕಾರ್ಯವೂ ನಡೆದಿತ್ತು. ಈ ವೇಳೆ ಮಹಿಳಾ ಪ್ರಯಾಣಿಕರೊಬ್ಬರು ಗಗನಸಖಿ ಜೊತೆಗೆ ವಿಮಾನ ರೆಕ್ಕೆಯ ಮೇಲೆ ನಡೆದುಕೊಂಡು ಬರುತ್ತಿರುವುದು ಮತ್ತು ಪೈಲಟ್‌ ತುರ್ತು ದ್ವಾರದ ಮೂಲಕ ಜಾರಿಗೊಂಡು ಹೊರ ಬರುತ್ತಿರುವ ದೃಶ್ಯ ಇದೀಗ ಎಲ್ಲೆ ವೈರಲ್‌(Viral Video) ಆಗುತ್ತಿದೆ.

ವೈರಲ್‌ ವಿಡಿಯೋದಲ್ಲೇನಿದೆ?

ಬಾಂಬ್‌ ಬೆದರಿಕೆ ಬರುತ್ತಿದ್ದಂತೆ ಎಲ್ಲಾ ಪ್ರಯಾಣಿಕರನ್ನು ತುರ್ತು ನಿರ್ಗಮನ ದ್ವಾರದ ಮೂಲಕ ಹೊರ ತರಲಾಯಿತು. ಈ ವೇಳೆ ಇಂಡಿಗೋ ಸಿಬ್ಬಂದಿ ಮಹಿಳೆಯನ್ನು ಕೈಯಲ್ಲಿ ಹಿಡಿದುಕೊಂಡು ವಿಮಾನದ ರೆಕ್ಕೆ ಮೇಲೆ ನಿಧಾನವಾಗಿ ನಡೆದುಕೊಂಡು ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮತ್ತೊಂದೆಡೆ ಎಮರ್ಜೆನ್ಸಿ ಬಾಗಿನಿಂದ ಹೊರ ಬಂದ ಪೈಲಟ್‌ ಜಾರಿಕೊಂಡು ಬರುತ್ತಿರುವುದನ್ನು ವಿಡಯೊದಲ್ಲಿ ಕಾಣಬಹುದಾಗಿ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗುತ್ತಿದೆ.

ಘಟನೆ ವಿವರ:

ದಿಲ್ಲಿಯಿಂದ ವಾರಣಾಸಿಗೆ ಪ್ರಯಾಣಿಸಬೇಕಾಗಿದ್ದ ಇಂಡಿಗೋ ಏರ್‌ಲೈನ್ಸ್‌ನ 6E2211 ವಿಮಾನಕ್ಕೆ ಮಂಗಳವಾರ ಬೆಳಗ್ಗೆಬಾಂಬ್‌ ಬೆದರಿಕೆ ಕರೆ ಬಂದಿತ್ತು. ಇನ್ನೇನು ಟೇಕ್‌ ಆಫ್‌ ಆಗಬೇಕಾಗಿದ್ದ ವಿಮಾನವನ್ನು ಪ್ರತ್ಯೇಕ ರನ್‌ ವೇ ಒಯ್ದು ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎಲ್ಲ ಪ್ರಯಾಣಿಕರನ್ನು ಎಮರ್ಜೆನ್ಸಿ ಎಕ್ಸಿಟ್‌ ಬಾಗಿಲಿನಿಂದ ಸುರಕ್ಷಿತವಾಗಿ ಹೊರಗೆ ಕರೆದೊಯ್ಯಲಾಗಿದೆ. ಇನ್ನು ಬೆಳಗ್ಗೆ 5:35ಕ್ಕೆ ಹೊರಡಬೇಕಾಗಿದ್ದ ವಿಮಾನ ಇದಾಗಿತ್ತು. ವಿಮಾನ ಹೊರಡಬೇಕೆನ್ನುವ ಹೊತ್ತಿನಲ್ಲಿ ವಿಮಾನದ ಶೌಚಾಲಯದೊಳಗೆ ಬಾಂಬ್‌ @5.30 ಎಂಬ ಸಂದೇಶ ಬರೆದಿದ್ದ ಪತ್ರವೊಂದು ಸಿಕ್ಕಿತ್ತು.

ಇದನ್ನೂ ಓದಿ: Human trafficking Case: ದೇಶಾದ್ಯಂತ NIA ರೇಡ್‌; ಮಾನವ ಕಳ್ಳಸಾಗಣೆ ಜಾಲ ಬಯಲು

ಸದ್ಯ ಏರ್ಪೋರ್ಟ್‌ ಭದ್ರತಾ ಸಿಬ್ಬಂದಿ ದೆಹಲಿ ಪೊಲೀಸರು ಮತ್ತು ಬಾಂಬ್‌ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದೆ. ಇನ್ನು ವಿಮಾನದಲ್ಲಿ 176 ಪ್ರಯಾಣಿಕರಿದ್ದರು ಎನ್ನಲಾಗಿದೆ. ಇನ್ನು ನಿನ್ನೆಯಷ್ಟೇ ಮುಂಬೈನ ಮುಂಬೈನಲ್ಲಿರುವ ತಾಜ್‌ ಹೋಟೆಲ್‌ ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಇಂಟರ್‌ನ್ಯಾಷನಲ್‌ ವಿಮಾನ ನಿಲ್ದಾಣವನ್ನು ಸ್ಫೋಟಿಸುವ ಕುರಿತು ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಬಂದಿತ್ತು. ಹಾಗಾಗಿ, ಮುಂಬೈ ತಾಜ್‌ ಹೋಟೆಲ್‌ ಹಾಗೂ ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

Continue Reading

ಕ್ರೀಡೆ

Team India Coach: ಟೀಮ್​ ಇಂಡಿಯಾದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಪ್ರಧಾನಿ ಮೋದಿ, ಅಮಿತ್ ಶಾ!

Team India Coach: ಮೂಲಗಳ ಪ್ರಕಾರ ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌(Team India Coach) ಹುದ್ದೆಗೆ ಈಗಾಗಲೇ 3,000 ಅರ್ಜಿಗಳು ಬಂದಿಗೆ ಎಂದು ಹೇಳಲಾಗಿದೆ. ಇದರಲ್ಲಿ ಬಹುಪಾಲು ನಕಲಿ ಅರ್ಜಿಗಳಾಗಿವೆ.

VISTARANEWS.COM


on

Team India Coach
Koo

ಮುಂಬಯಿ: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌(Team India Coach) ಹುದ್ದೆಗೆ(Team India Coach Applications) ಯಾರು ಸೂಕ್ತ ಎಂದು ಚಿಂತಿಸುತ್ತಿರುವ ಮಧ್ಯೆ ಬಿಸಿಸಿಐಗೆ ಅಚ್ಚರಿಯೊಂದು ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi), ಸಚಿನ್​ ತೆಂಡೂಲ್ಕರ್​(Sachin Tendulkar) , ಎಂ.ಎಸ್​ ಧೋನಿ(MS Dhoni), ಅಮಿತ್ ಶಾ(Amit Shah) ಸೇರಿ ಹಲವು ಪ್ರಮುಖರು ಅರ್ಜಿ ಸಲ್ಲಿದ್ದಾರೆ. ಅಸಲಿಗೆ ಇವರ್‍ಯಾರು‌ ಈ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ. ಬದಲಾಗಿ ನೆಟ್ಟಿಗರು ಇವರ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಅರ್ಜಿ ಸಲ್ಲಿಸಲು ಮೇ 27 ಅಂತಿಮ ಗಡುವಾಗಿತ್ತು. ಹೀಗಾಗಿ ಕೆಲ ನೆಟ್ಟಿಗರು ಮೋದಿ, ಸಚಿನ್​, ಅಮಿತ್ ಶಾ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿ ಬಿಸಿಸಿಐಗೆ ಚಕಮ್​ ಕೊಟ್ಟಿದ್ದಾರೆ. ಇದಕ್ಕೂ ಮುನ್ನ ಅನೇಕ ಕ್ರಿಕೆಟ್​ ಅಭಿಮಾನಿಗಳು(Cricket Fans Apply For India’s Head Coach) ಗೂಗಲ್​ ಅರ್ಜಿ ಪಡೆದುಕೊಂಡು ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತ ಟ್ವೀಟ್​ಗಳು ವೈರಲ್​ ಆಗಿತ್ತು. ಮೂಲಗಳ ಪ್ರಕಾರ ಈಗಾಗಲೇ 3,000 ಅರ್ಜಿಗಳು ಬಂದಿಗೆ ಎಂದು ಹೇಳಲಾಗಿದೆ.

ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. 

ಇದನ್ನೂ ಓದಿ Team India Coach Applications: ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಸಾವಿರಾರು ಅಭಿಮಾನಿಗಳು; ಫಜೀತಿಗೆ ಸಿಲುಕಿದ ಬಿಸಿಸಿಐ

2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಆರಂಭಿಕ ಹಂತದಲ್ಲಿ ಯೋಚಿಸಿತ್ತು. ಆದರೆ ಅನೇಕ ವಿದೇಶಿ ಆಟಗಾರರು ಕೋಚ್​ ಆಗಲಿ ಆಸಕ್ತಿ ಹೊಂದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಹೀಗಾಗಿ ಬಿಸಿಸಿಐ ದೇಶೀಯ ಆಟಗಾರರ ಮೊರೆ ಹೋದಂತಿದೆ.

ಮೂಲಗಳ ಪ್ರಕಾರ ಗೌತಮ್​ ಗಂಭೀರ್​ ಅವರು ಭಾರತ ತಂಡದ ಕೋಚ್ ಆಗುವ ಸಾಧ್ಯತೆ ಕಂಡುಬಂದಿದೆ. ಭಾನುವಾರ ಮುಕ್ತಾಯ ಕಂಡ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಕೆಕೆಆರ್​ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಗೌತಮ್​ ಗಂಭೀರ್​ ತಂಡದ ಮೆಂಟರ್​ ಆಗಿದ್ದರು. ಪಂದ್ಯದ ಮುಕ್ತಾಯದ ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಗಂಭೀರ್​ ಜತೆ ಅತ್ಯಂತ ಆತ್ಮೀಯವಾಗಿ ಸುರ್ದೀಘ ಚರ್ಚೆ ಕೂಡ ನಡೆಸಿದ್ದರು. ಇದನ್ನೆಲ್ಲ ನೋಡುವಾಗ ಗಂಭೀರ್​ ಕೋಚ್​ ಆಗುವುದು ಬಹುತೇಖ ಖಚಿತವಾದಂತಿದೆ.

Continue Reading

ವೈರಲ್ ನ್ಯೂಸ್

Viral Video: BMW ಕಾರು ಬಾನೆಟ್‌ ಮೇಲೆ ವ್ಯಕ್ತಿ…ಬ್ಯುಸಿ ರಸ್ತೆಯಲ್ಲಿ ಬಾಲಕನ ಪುಂಡಾಟ; ವಿಡಿಯೋ ವೈರಲ್‌

Viral Video:ಥಾಣೆಯ ಕಲ್ಯಾಣ್‌ ನಗರದ ಜನ ನಿಬಿಡ ಶಿವಾಜಿ ಚೌಕ್‌ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದ ರೀಲ್ಸ್‌ನಿಂದಾಗಿ ಪ್ರಭಾವಿತನಾಗಿ ನಿವೃತ ಸರ್ಕಾರಿ ಅಧಿಕಾರಿಯ ಅಪ್ರಾಪ್ತ ವಯಸ್ಸಿನ ಪುತ್ರ BMW ಕಾರಿನ ಬಾನೆಟ್‌ ಮೇಲೆ ವ್ಯಕ್ತಿಯೊಬ್ಬನನ್ನು ಮಲಗಿಸಿಕೊಂಡು ಡ್ರೈವಿಂಗ್‌ ಮಾಡಿದ್ದಾನೆ. ಇನ್ನು ಕಾರು ಬಾನೆಟ್‌ ಮೇಲಿದ್ದ ವ್ಯಕ್ತಿಯನ್ನು ಶುಭಮ್‌ ಮಿಥಿಲಾ ಎಂದು ಗುರುತಿಸಲಾಗಿದೆ. ಈ ಸೆಕೆಂಡ್‌ ಹ್ಯಾಂಡ್‌ ಕಾರನ್ನು 5ಲಕ್ಷ ರೂ ನೀಡಿ ಬಾಲಕನ ತಂದೆ ಖರೀದಿಸಿದ್ದ ಎನ್ನಲಾಗಿದೆ. ಇದೀಗ ಕಾರು ಮಾಲೀಕನ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

Viral Video
Koo

ನವದೆಹಲಿ: ಕೆಲವು ದಿನಗಳ ಹಿಂದೆಯಷ್ಟೇ ಪುಣೆ(Pune)ಯಲ್ಲಿ ಬಾಲಕನೋರ್ವ ಪೋರ್ಷೆ ಕಾರು ಚಲಾಯಿಸಿ ಇಬ್ಬರು ಐಟಿ ನೌಕರ(IT Employees)ರನ್ನು ಬಲಿ ತೆಗೆದುಕೊಂಡು ಘಟನೆ ಮಾಸು ಮುನ್ನವೇ ಮತ್ತೊಂದು ಅಂತಹದ್ದೇ ಒಂದು ಘಟನೆ ಥಾಣೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬನನ್ನು ಬಾನೆಟ್‌ ಮೇಲೆ ಮಲಗಿಸಿಕೊಂಡು 17ವರ್ಷದ ಬಾಲಕನೋರ್ವ ತಂದೆಯ BMW ಕಾರು ಚಲಾಯಿಸಿದ ಘಟನೆ ವರದಿಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಬಾಲಕ, ಬಾನೆಟ್‌ನಲ್ಲಿದ್ದ ವ್ಯಕ್ತಿ ಹಾಗೂ ಬಾಲಕನ ತಂದೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಘಟನೆ ವಿವರ:

ಥಾಣೆಯ ಕಲ್ಯಾಣ್‌ ನಗರದ ಜನ ನಿಬಿಡ ಶಿವಾಜಿ ಚೌಕ್‌ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದ ರೀಲ್ಸ್‌ನಿಂದಾಗಿ ಪ್ರಭಾವಿತನಾಗಿ ನಿವೃತ ಸರ್ಕಾರಿ ಅಧಿಕಾರಿಯ ಅಪ್ರಾಪ್ತ ವಯಸ್ಸಿನ ಪುತ್ರ BMW ಕಾರಿನ ಬಾನೆಟ್‌ ಮೇಲೆ ವ್ಯಕ್ತಿಯೊಬ್ಬನನ್ನು ಮಲಗಿಸಿಕೊಂಡು ಡ್ರೈವಿಂಗ್‌ ಮಾಡಿದ್ದಾನೆ. ಇನ್ನು ಕಾರು ಬಾನೆಟ್‌ ಮೇಲಿದ್ದ ವ್ಯಕ್ತಿಯನ್ನು ಶುಭಮ್‌ ಮಿಥಿಲಾ ಎಂದು ಗುರುತಿಸಲಾಗಿದೆ. ಈ ಸೆಕೆಂಡ್‌ ಹ್ಯಾಂಡ್‌ ಕಾರನ್ನು 5ಲಕ್ಷ ರೂ ನೀಡಿ ಬಾಲಕನ ತಂದೆ ಖರೀದಿಸಿದ್ದ ಎನ್ನಲಾಗಿದೆ. ಇದೀಗ ಕಾರು ಮಾಲೀಕನ ವಿರುದ್ಧ ಕೇಸ್‌ ದಾಖಲಾಗಿದೆ.

ಕಳೆದ ಭಾನುವಾರ ಪುಣೆಯಲ್ಲೂ ಇಂತಹದ್ದೇ ಒಂದು ಘಟನೆ ನಡೆದಿತ್ತು. ಬಾರ್‌ನಲ್ಲಿ ಮದ್ಯ ಸೇವಿಸಿ ಪಾನಮತ್ತರಾಗಿದ್ದ 17 ವರ್ಷದ ಬಾಲಕ ಚಾಲನೆ ಮಾಡುತ್ತಿದ್ದ ಪೋರ್ಶೆ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಮೃತಪಟ್ಟಿದ್ದರು. ಇದಾದ ಬಳಿಕ ಪೊಲೀಸರು ಬಾಲಾಪರಾಧಿ ನ್ಯಾಯಾಲಯದ ತೀರ್ಪಿನಂತೆ ಬಾಲಕನನ್ನು ಬಂಧಿಸಿ ಬಳಿಕ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ಬಳಿಕ ತಂದೆ ವಿಶಾಲ್​ ಅಗರ್ವಾಲ್​ರನ್ನು ಬಂಧಿಸಿದ್ದರು.

ಇದನ್ನೂ ಓದಿ:Human trafficking Case: ದೇಶಾದ್ಯಂತ NIA ರೇಡ್‌; ಮಾನವ ಕಳ್ಳಸಾಗಣೆ ಜಾಲ ಬಯಲು

ಎಲ್ಲೆಡೆ ಪೊಲೀಸರ ನಿರ್ಧಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಾಮೀನನ್ನು ರದ್ದುಗೊಳಿಸಿ ಮತ್ತೆ ಬಂಧಿಸಲಾಗಿತ್ತು. ಮೊದಲು ವಿಶಾಲ್ ಅಗರ್ವಾಲ್​ ನನ್ನ ಮಗ ಕಾರು ಓಡಿಸುತ್ತಿರಲಿಲ್ಲ ಕಾರಿಗೆ ಬೇರೆ ಡ್ರೈವರ್​ ಇದ್ದಾರೆ ಎಂದು ಹೇಳಿದ್ದರು. ಇನ್ನು ಬಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವ ಶಂಕೆ ವ್ಯಕ್ತವಾಗಿತ್ತು. ಇದಕ್ಕೆ ಪೂರಕ ಎಂಬಂತೆ ಘಟನೆಗೂ ಮುನ್ನ ಆತ ಸ್ನೇಹಿತರ ಜೊತೆಗೂಡಿ ಬಾರ್‌ನಲ್ಲಿ ಕುಡಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿತ್ತು. ಹೀಗಾಗಿ ಆತನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳಿಹಿಸಲಾಗಿತ್ತು. ಇದೆಲ್ಲಾ ನಡೆದ ಬಳಿಕ ಆತ ಮದ್ಯಪಾನ ಮಾಡಿರಲಿಲ್ಲ ಎನ್ನುವ ವರದಿ ಆಸ್ಪತ್ರೆಯಿಂದ ಹೊರಬಿದ್ದಿತ್ತು. ಇದೀಗ ವೈದ್ಯರು ದುಡ್ಡಿನ ಆಸೆಗೆ ಬಿದ್ದು ಬಾಲಕನ ರಕ್ತದ ಮಾದರಿಯನ್ನು ಬದಲಾಯಿಸಿದ್ದಾರೆ ಎನ್ನುವುದನ್ನು ಅರಿತ ಪೊಲೀಸರು ರಕ್ತದ ಮಾದರಿಯನ್ನು ತಿರುಚಿದ ಆರೋಪದ ಮೇಲೆ ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ.

Continue Reading
Advertisement
Elephant Arjuna’s Memorial
ಕರ್ನಾಟಕ2 mins ago

Elephant Arjuna: ದಸರಾ ಆನೆ ಅರ್ಜುನ ಸಮಾಧಿ ವಿರೂಪ; ಎಚ್.ಡಿ. ಕೋಟೆಯ ನವೀನ್ ವಿರುದ್ಧ ಎಫ್‌ಐಆರ್

WhatsApp Update
ತಂತ್ರಜ್ಞಾನ16 mins ago

WhatsApp Update : ವಾಯ್ಸ್ ನೋಟ್ ಅವಧಿ ಹೆಚ್ಚಿಸಲಿದೆ ವಾಟ್ಸ್ಆ್ಯಪ್; ವಿಸ್ತರಣೆ ಅವಧಿ ಎಷ್ಟು ಗೊತ್ತೇ?

Mango For Diabetes
ಆರೋಗ್ಯ21 mins ago

Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

T20 World Cup 2024
ಕ್ರೀಡೆ26 mins ago

T20 World Cup 2024: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಟಾಪ್​ 5 ಬೌಲರ್​ಗಳು ಯಾರು?

Love Case
ವಿಜಯಪುರ36 mins ago

Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

Bengaluru Traffic
ಬೆಂಗಳೂರು38 mins ago

Bengaluru Traffic: ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಹೊಸ ತಂತ್ರಜ್ಞಾನ; ಸಂಚಾರ ಇಲಾಖೆಯ ಪ್ಲಾನ್

car care tips
ಆಟೋಮೊಬೈಲ್56 mins ago

Car Care Tips : ಕಾಸು ಉಳಿಸಿ ಎಂಜಿನ್ ಬೆಳಗಿಸಿ, ಕಾರಿನ ಎಂಜಿನ್ ನೀವೇ ​ಕ್ಲೀನ್ ಮಾಡಲು ಇಲ್ಲಿವೆ ಟಿಪ್ಸ್​​​

Viral Video
ವೈರಲ್ ನ್ಯೂಸ್1 hour ago

Viral Video: ದಿಗಂಬರ ಜೈನ ಮುನಿಗಳಿಗೆ ಈ ಪಾಪಿ ಮಾಡಿದ್ದೇನು ಗೊತ್ತಾ? ಶಾಕಿಂಗ್‌ ವಿಡಿಯೋ ವೈರಲ್‌

Prajwal Revanna Case
ಕರ್ನಾಟಕ1 hour ago

Prajwal Revanna Case: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

assault case
ದಕ್ಷಿಣ ಕನ್ನಡ1 hour ago

Assault Case : ರೊಚ್ಚಿಗೆದ್ದ ಸ್ಥಳೀಯರು; ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

tumkur murder
ತುಮಕೂರು6 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ24 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

ಟ್ರೆಂಡಿಂಗ್‌